ಒಟ್ಟು 262 ಕಡೆಗಳಲ್ಲಿ , 62 ದಾಸರು , 245 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀರುಕ್ಮಿಣೀರಮಣ ತಾನುಡಿಸಿದಂತೆ ನಾಂ ಧಾರುಣಿಪ ಜನಮೇಜಯಂಗೆ ಮುನಿ ಪೇಳಿಸಿದ ಹದಿನೆಂಟುಪದ್ಯಗಳೊಳಾಲಿಸುವುದು ದನುಜದಿವಿಜರೀ ಭುವಿಯೊಳವತಿರಿಸಿದರುಸುಯೋ ಧನಪಾಂಡುತನಯರಂ ಸೈರಿಸದೆಭೇದಮಂ ಕಟ್ಟಿಸಿಯರಗಿನಮನೆಯೊಳವರನಿಡಲು | ವನಜಲೋಚನನ ಕೃಪೆಯಿಮದದಂದಾಟಿಕಾ ನನದಲಿ ಹಿಡಿಂಬಬಕರಂ ಮುರಿದುದೃಪದರಾ ಪುತ್ರರಪಡೆದರಾದಿಪರ್ವದಲ್ಲಿ 1 ರಾಜಸೂಯಾಭಿಧಾನದ ಯಾಗಕಾರಣದೊ ಳಾಜರಾಸಂಧಾದಿಗಳ ಕೊಲಿಸಿನೃಪಧರ್ಮ ಜೂಜಿನಲಿಸೋಲಿಸಲು ಪಂಚಪಾಂಡವರಂ ಸ ರೋಜಾಕ್ಷಿ ದ್ರೌಪದಿಯ ಭಂಗಪಡಿಸಲ್ಕೆಪಂ- ಸಭಾಪರ್ವದಲಿ 2 ಅಡವಿಯೊಳು ವಾಸವಾಗಿರಲು ಪಾಂಡುಸುತರ್ಗೆ ಪೊಡವಿ ಸುರರರುಹಿಸಲ್ ಸತ್ಕಥೆಗಳಾಲಿಸುತ ಘೋಷಯೊಳಹಿತನ ಬಿಡಿಸಿದಂ ಗಂಧರ್ವಪತಿಯಿಂದ ಪಾರ್ಥನೀ ರಡಿಸಿ ನಾಲ್ವರುಮೂರ್ಛೆಪೊಂದಲ್ಕೆಯಕ್ಷಂಗೆ ಅರಣ್ಯಪರ್ವದೊಳಗೆ 3 ಬಂದುಮಾತ್ಸ್ಯಾಲಯದಲಜ್ಞಾತವಾಸದೊಳ ಗಂದುಪಾಂಡವರಿರಲ್ ಕೀಚಕಾಧಮನು ಸೈ- ಭೀಮಗಂಧರ್ವ ವ್ಯಾಜದಿಂದ ಕೊಂದವಾರ್ತೆಯ ಕುರುಪಕೇಳಿ ಸೇನೆಸಹಿತ ಪಾರ್ಥಗೆ ವಿರಾಟಪರ್ವದಲ್ಲಿ 4 ದೇವಕೃಷ್ಣಸಂಧಿಗೆ ತರಲ್ ಕುರುಪದು ರ್ಭಾವದೊಳಗಿರಲದಂ ತಿಳಿದುವಿದುರನ ಮನೆಯೊ ಕೌರವಸಭೆಗೆಪೋಗಿ ಈವುದೈದೂರುಗಳ ಪಾಂಡವರಿಗೆನೆ ಭೇದ ಭಾವದಿ ಸುಯೋಧನಂಸೂಜ್ಯಾಗ್ರಭೂಮಿಯಂ ತಾ ನೀವುದಿಲ್ಲವೆನೆ ಯುದ್ಧನಿಶ್ಚಯಗೈದನುದ್ಯೋಗಪರ್ವದಲಿ 5 ಕುರುಪತಿಯು ಗಂಗಾಸುತಗೆ ಪಟ್ಟಗಟ್ಟಿದಂ ಎರೆಡುಬಲಮಂ ಸೇರಿಯಿರಲರ್ಜುನಂ ತನ್ನ ವರಕೊಲ್ವದೆಂತೆನಲ್ ಹರಿವಿಶ್ವರೂಪಮಂ ತೋರಿತತ್ವವತಿಳಿಸಲು ತರುವಾಯ ಹತ್ತುದಿನಕಾದುತಿರಲಾಗಭೀ ಷ್ಮರಿಗೆಷಂಡನನೆವದಿ ಶಸ್ತ್ರಸಂನ್ಯಾಸ ವಾ ಭೀಷ್ಮಪರ್ವದಿಕಥೆಯಿದು 6 ಗುರುಗಳಿಗೆ ಪಟ್ಟಾಭಿಷೇಕವಾಯಿತುದ್ರೋಣ ದೊರೆಯಹಿಡಿತಹೆನೆಂದು ತಪ್ಪೆಸಂಶಪ್ತಕರ ನರನೊಡನೆ ಕಾದಿದರು ಪಾರ್ಥಸುತಪೊಕ್ಕುಪದ್ಮವ್ಯೂಹ- -ದೊಳುಮಡಿಯಲು ನರಪ್ರತಿಜ್ಞೆಯಗೈದು ಸೈಂಧವನ ವಧಿಸಿದನ ಸುರ ಘಟೋತ್ಕಚ ರಾತ್ರಿಯುದ್ಧದೋಳ್ ಸಂದನಾ ದಿನದಲಿದ್ರೋಣಪರ್ವದೊಳಗೆ 7 ಕುರುಸೈನ್ಯಬತ್ತಿರುವ ಶರಧಿಯೋಲಾಯ್ತು ದಿನ ಕರಸುತಗೆ ಪಟ್ಟವಂಗಟ್ಟಿ ದುರ್ಯೋಧನಂ ಹರನುತ್ರಿಪುರವ ಗೆದ್ದಕಥೆಯವಿಸ್ತರಿಸಿ ಸಾರಥಿಯ ಮಾಡಲು ಶಲ್ಯನ ನರನವಿಕ್ರಮಪೊಗಳಿ ಕರ್ಣನಬಲವನುಧಿ ಕ್ಕರಿಸೆಮಾದ್ರೇಶ್ವರಂ ಕರ್ಣನತಿ ಖಾತಿಯಿಂ ದೆರಡುದಿನ ಕಾದಿಯರ್ಜುನನಿಂದ ಮಡಿದ ಸೂತಜ ಕರ್ಣಪರ್ವದಲಿ 8 ಸೂತಜನಮರಣದಲಿ ಶಲ್ಯಗಾಯಿತು ಪಟ್ಟ ಶಕುನಿಯಂಸಹದೇವಸಂಹರಿಸಲು ಪಾತಕಿ ಸುಯೋದನಂ ಕೊಳನಪೊಕ್ಕಿರಲು ಯಮ ಜಾತಾದಿಗಳು ಪೋಗಿ ನುಡಿಸಲ್ಕೆಜಲ ಪೊರಟು ಕುರುಪನು ಶಲ್ಯಪರ್ವದೊಳಗೆ 9 ಗುರುಜಂಗೆ ಬೆಸಸಿದಂ ಕುರುರಾಯ ಪಾಂಡವರ ಶಿರವತಹುದೆನುತಲಶ್ವತ್ಥಾಮಪಾಳಯದಿ ಜೀವಬಿಡಲು ನರಭೀಮಸೇನರಾವಾರ್ತೆಯಂ ಕೇಳುತಲೆ ತರುಬಿ ಹಿಡಿದೆಳೆ ತಂದು ದ್ರೌಣಿಯಂ ಶಿಕ್ಷಿಸಲ್ ಸುಪ್ತಪರ್ವದಲಿ 10 ರಣದಿ ಮಡಿದಿರುವ ನೃಪರರಸಿಯರ್ ಅಂಧಭೂ ಪನು ಸತಿಯುಸಹಿತಲೈತರುತಿರಲ್ ಕಳನೊಳಗೆ ತಮ್ಮಪತಿಗಳನಪ್ಪಲು ಪೆಣಗಳೊಟ್ಟೈಸಿ ಸಂಸ್ಕಾರಕ್ರಿಯೆಗಳವಿದು ರನುಗೈದನನ್ನೆಗಂ ಧೃತರಾಷ್ಟ್ರನರಸಿ ಕೃ ಸ್ತ್ರೀಪರ್ವದಲಿ 11 ತನಗೆ ಕರ್ಣಸಹೋದರನೆಂಬ ವಾರ್ತೆಯಮ ಜನು ಕೇಳಿ ಶೋಕದಿವಿರಕ್ತಿಯಿಂದಿರೆ ಸಕಲ ಘನಬಂಧುವಧೆ ಮಹಾದೋಷವೆಂತೆಂದು ಭೀ ಷ್ಮನ ಕೇಳಲರುಹಿದಂ ರಾಜನೀತಿಯ ಧರ್ಮ ವನು ಕಷ್ಟಕಾಳಧರ್ಮವ ಮೋಕ್ಷಧರ್ಮವೆಂಬಿದುಶಾಂತಿಪರ್ವದಲಿ 12 ಅತಿಶಯ ದಾನಧರ್ಮದ ಲಕ್ಷಣಗಳಂ ನಿ ಯತಮಾದ ವರ್ಣಾಶ್ರಮಾಚಾರಕ್ರಮದಸಂ ತತಿಗಳಂ ಶಿವವಿಷ್ಣುಗಳಮಹಿಮೆ ಬ್ರಹ್ಮಸಾಕ್ಷಾತ್ಕಾರಸದ್ಬೋಧೆಯ ಕಥೆಗಳರುಹಿಸಿ ನದೀಸುತಧರ್ಮಜನ ಮನೋ ಪತಿ ಕೃಷ್ಣನಂ ಧ್ಯಾನಿಸುತ ಮುಕ್ತನಾದನಿದು- -ಮಾನುಶಾಸನ ಪರ್ವದಿ 13 ಗುರುಸುತನ ಬ್ರಹ್ಮಾಸ್ತ್ರಮಂಚಕ್ರದಿಂದಸಂ ಹರಿಸಿ ಕೃಷ್ಣಂಕಾಯ್ದನುತ್ತರೆಯಗರ್ಭಮಂ ನೇಮದಿಂದ ಪರಿಪರಿಸುವಸ್ತುಗಳನೆಲ್ಲ ತಂದುಯೈ ವರು ಮಹಾಸಂತಸದಿಹರಿ ಸಹಾಯದಿ ಮಾಡಿ ಸಂಪೂಜಿಸಿದರಶ್ವಮೇಧಕಪರ್ವದಿ 14 ಅಂಧಭೂಪತಿ ಕೌರವಸ್ತ್ರೀಯರುಂ ಕುಂತಿ ಗಾಂಧಾರಿ ಸಹಿತಬರೆ ತೆರಳಿದಂತಪಗೈಯ್ಯೆ ಮುವ್ವರುಪವಾಸದೊಳಿರೆ ಬಂದುದಾಕಾಳ್ಗಿಚ್ಚಿನೋಲ್ ಮಹಾಜ್ವಾಲೆಯೋಳ್ ಪೊಂದಿದರ್ ವಿದುರಧರಾತ್ಮಜನಕೂಡಿದಂ ಬಂದುಯಮಜನುಪುರದಿ ಶ್ರಾದ್ಧಗಳಮಾಡ್ದನಾಶ್ರಮ- -ವಾಸಪರ್ವದೊಳಗೆ 15 ವರುಷಗಳು ಷಟತ್ರೀಂತಿಯು ರಾಜ್ಯವಾಳುತಿರೆ ಬರುಬರುತಲುತ್ಪಾತಗಳುಪುಟ್ಟಿದವು ಯಾದ ಮಡಿದರೆಂಬವಾರ್ತೆಯನು ಕೇಳಿ ನರನು ನಡೆತಂದು ಶೋಕದೊಳುಳಿದವರನುತಾ ಕರದೊಯಿದು ವಜ್ರಾಖ್ಯನಂ ಯಿಂದ್ರಪ್ರಸ್ಥದೋಳ್ ಮುಸಲಪರ್ವದಕಥೆಯಿದು 16 ನರನಮೊಮ್ಮಗೆ ಪಟ್ಟವಂಗಟ್ಟಿಯೈವರುಂ ತೆರಳಿದರ್ಪಾಂಡವರ್ ಸತಿಸಹಿತಬರುತ ಹಿಮ ನಕುಲನುಂ ಸುರಪಸುತನು ವರಭೀಮಸೇನನುಂ ಬಿದ್ದರಾನೃಪತಿಯೋ ರ್ವರನುಕಾಣದೆಯೊಬ್ಬನೇಪೋಗುತಿರೆ ಕಷ್ಟ ಪ್ರಸ್ಥಾನಪರ್ವದೊಳಗೆ 17 ಮ್ಮಂದಿರೆಲ್ಲೆನಲವಂ ಸುರನದಿಯತೋರಲ್ಕೆ ತನ್ನವರೆಲ್ಲರ ನೋಡುತ ಪೊಂದಿದಂ ಯಮನೊಡನೆ ಪವನನೋಳ್ ಭೀಮನರ ನಿಂದನಂ ಯಮಳರಶ್ವಿನಿಯರೊಳ್ಕಲಿಮುಖ್ಯ ಸಂದೋಹದೋಳ್ ಸುಯೋಧನ ಪ್ರಮುಖರೊಂದಿದರ್ ಸ್ವರ್ಗಾರೋಹಣಪರ್ವದಿ 18 ಈಮಹಭಾರತ ಶತಸಹಸ್ರಗ್ರಂಥವನು ಹಾ ಮುನಿ ಪರಾಶರಾತ್ಮಜಪೇಳ್ದನದುವೆ ಗುರು ಸಂಕ್ಷೇಪಭಾರತವನು ಪ್ರೇಮದಿಂದಾಲಿಸುವ ಸಜ್ಜನರಿಗನುದಿನಂ ಕಾಮಿತಾರ್ಥವನಿಹಪರಂಗಳೊಳ್ಸುಖವಗುರು ರಾಮವಿಠ್ಠಲಕೊಡುವಭಾಗ್ಯವಲ್ಲೀನಗರ- -ನಿಲಯನರಹರಿಕರುಣದಿ 19
--------------
ಗುರುರಾಮವಿಠಲ
ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ
ಶ್ರೀಶಪದ ಕಮಲಕ್ಕೆ ಮಧುಪ | ನಿನ್ನದಾಸನೆಂದೆನಿಸುವುದು ಧನಪ | ಸಖ ಮ-ಹೇಶನ ಸುತ ಪೇಳ್ವೆ ಭಿನ್ನಪ | ನೀ ಪ್ರ-ಕಾಶಿಪುದು ಮನವಿ ವಿಘ್ನಪ 1 ಪತಿ ಕರುಣಿ ಶುಭಗಾತ್ರ | ಗ್ರಂಥಲೇಸೆನಿಸಿ ಲಿಖಿಸಿದೆ ಪವಿತ್ರ | ಮೂರ್ತಿಪಾಶಾಂಕುಶ ಪಾಣಿ ಸುಚರಿತ್ರ 2 ಸ್ವಾಂತ | ದಲ್ಲಿಅಭಯ ನೀ ತಿಳಿಸು ನಿಶ್ಚಿಂತ 3 ವಿಘ್ನಪನೆ ದುರ್ವಿಷಯದಲ್ಲಿ | ಬಹಳಮಗ್ನವಿಹ ಮನವ ಹರಿಯಲ್ಲಿ | ನಿರತಲಗ್ನ ಮಾಡಿಸು ತ್ವರ್ಯದಲ್ಲಿ | ಇನ್ನೂ ವಿಘ್ನಗಳಿಗಂಜಿಕೆಯು ಎಲ್ಲಿ ? | 4 ಧನಪ ವಿಶ್ವಕ್ಸೇನ ಯಮಳ | ಆ ಅ-ಶ್ವಿನೀಗಳ್ಗೆ ಸಮ ಕರಿಗೊರಳ | ಪುತ್ರನನುಜನೇ ಶೇಷ ಶತಗರುಗಳ | ರಲ್ಲಿಗುಣೋತ್ತಮನೆ ಕಾಯೊ ನಮ್ಮಗಳ | 5 ಬವರ | ದಲ್ಲಿಗೌರಿಪತಿ ವರದಿ ಉದ್ಧಟರ | ಆದಕ್ರೂರಿ ಜನ ಸಂಹಾರಿ ಶೂರ | 6 ಸೂತ್ರ ಅಪರೂಪ | ಖಳರದರ್ಪ ಭಂಜನನೆ ಶುಭರೂಪ | 7 ಶ್ರೀಶನತಿ ನಿರ್ಮಲವು ಎನಿಪ | ನಾಭಿದೇಶಗತನಾಗಿಹನೆ ಗಣಪ | ರಕ್ತವಾಸೆರಡು ಶೋಭಿತನೆ ಸುರಪ | ಮಿತ್ರಮೂಷಕಾ ವರವಹನ ರೂಪ | 8 ಶಂಕರಾತ್ಮಜ ದೈತ್ಯ ಜನಕೆ | ಅತಿ ಭ-ಯಂಕರ ಗತಿಯ ನೀಡಲ್ಕೇ | ನೀನುಸಂಕಟ ಚತುರ್ಥಿಗ ಎನೆಲ್ಕೆ | ಹಾಗೆಮಂಕು ಜನಾವೃತವು ಮೋಹಕ್ಕೆ 9 ಸಿದ್ಧಿ ವಿಧ್ಯಾಧರರು ಎಂಬ | ಗಣಾರಾಧ್ಯ ಪದಕಮಲ ನಿನದೆಂಬ | ಜನಕೆಸಿದ್ಧಿದಾಯಕ ವೇಗ ಎಂಬ | ಮಹಿಮಬುದ್ಧಿ ವಿದ್ಯೆಗಳ ಕೊಡು ತುಂಬ 10 ಭಕ್ತವರ ಭವ್ಯಾತ್ಮ ಪರಮ | ಶಾಸ್ತ್ರಸಕ್ತವಾಗಲಿ ಮನವು ಅಧಮ | ವಿಷಯಸಕ್ತಿರಹಿತನ ಮಾಡಿ ಪರಮ | ಶುದ್ಧಭಕ್ತನೆಂದೆನಿಸು ನಿಸ್ಸೀಮ | 11 ಶಕ್ರ ಪೂಜಿಸುತ ಗುರು ನಿನ್ನ ವೈರಿಶುಕ್ರ ಶಿಷ್ಯರ ಕೊಂದ ನಿನ್ನ | ಆ ಉ-ರುಕ್ರಮ ರಾಮ ಪೂಜಿಸೆನ್ನ | ತೋರ್ದವಕ್ರ ತುಂಡನೆ ಕರುಣವನ್ನ 12 ಕೌರವನು ಭಜಿಸದಲೆ ನಿನ್ನ | ಆಸಮೀರನ ಗದೆಯಲಿಂದಿನ್ನ | ಹತನುತಾರಕಾಂತಕನನುಜ ಯೆನ್ನೆ | ಧರ್ಮಪ್ರೇರಕನೆ ಸಂತೈಸು ಎನ್ನ 13 ಮೂಕರನ ವಾಗ್ಮಿಗಳ ಗೈವ | ಗುರು ಕೃ-ಪಾಕರನೆ ಕಾಮಗಳ ಕೊಡುವ | ಪರಮಲೇಖಕನೆ ಮನ್ಮನದಲಿರುವ | ಬಹುವ್ಯಾಕುಲವ ಪರಿಹರಿಸು ದೇವ | 14 ಸತ್ತೆ ವೃತ್ತಿಯು ಮತ್ತೆ ಪ್ರಮಿತಿ | ಜಗಕೆಇತ್ತು ತಾ ಸೃಷ್ಟ್ಯಷ್ಟಕತ್ರ್ರೀ | ಎನಿಪಚಿತ್ತಜ ಪಿತನ ದಿವ್ಯ ಸ್ಮøತಿ | ಇತ್ತುನಿತ್ಯ ನೀ ಪಾಲಿಪುದು ಸದ್ಗತಿ 15 ಪಂಚವಕ್ತ್ರನ ತನಯ ಕೇಳೊ | ಎನಗೆಪಂಚಭೇದದ ಜ್ಞಾನ ಪೇಳೊ | ಹರಿಯುವಾಂಛಿತ ಪ್ರದನ ದಿಟ ಆಳೊ | ಭವದಿವಂಚಿಸದೆ ಕಾಯೊ ಕೃಪಾಳೊ | 16 ಏನು ಬೇಡುವುದಿಲ್ಲ ನಿನ್ನ | ದುಷ್ಟಯೋನಿಗಳು ಬರಲಂಜೆ ಘನ್ನ | ಲಕುಮಿಪ್ರಾಣಪತಿ ತತ್ವರಿಂದಿನ್ನ | ಕಾರ್ಯತಾನೆಂಬ ಮತಿಯ ಕೊಡು ಮುನ್ನ 17 ಭಕ್ತ ಜನ ಕಲ್ಪ ತರುವೆನಿಪ | ಉಮೆಯಪುತ್ರ ಮಮ ಮಮತೆಯನು ಹರಿಪ | ದಾಯಹತ್ತಿಹುದು ನಿನ್ನಲ್ಲಿ ಗಣಪ | ಕಳೆಯೊಎತ್ತಿ ಕೈ ಮುಗಿವೆ ಭವರೂಪ 18 ಜಯ ಜಯವು ಎಂಬೆ ವಿಘ್ನೇಶ | ತಾಪತ್ರಯಗಳಿನು ನೀನೇ ವಿನಾಶ | ಗೈದುಭಯ ಶೋಕರಹಿತ ವಿದ್ಯೇಶ | ಜನ್ಮಾಮಯ ಮೃತಿ ಹರಿಸೊ ನಭಕೀಶ | 19 ನಮಿಸುವೆನೊ ಹೇರೊಡಲ ನಿನ್ನ | ಕರುಣಿಕಮಲಾಕ್ಷ ಹರಿನಾಮವನ್ನ | ನಿರುತವಿಮಲ ಮನದಿ ನುಡಿವಂತೆ ಎನ್ನ | ಮಾಡಿಕಮಲೇಶ ಪದ ತೋರೊ ಘನ್ನ20 ಎರಡು ನವ ಮೂರು ಪದಗಳನ್ನ | ಗೌರಿತರಳನಲಿ ಇರುವಂಥ ಪ್ರಾಣ | ಪತಿಯುಗುರು ಗೋವಿಂದ ವಿಠ್ಠಲನಾ | ಪದದಿಇರಿಸುವರ ಹರಿ ಪೊರೆವ ಅವರನ 21
--------------
ಗುರುಗೋವಿಂದವಿಠಲರು
ಶ್ರೀಶಾ ಹೃಷಿಕೇಶ ಕೇಶವ ವಸುಧಾಧೀಶ ಪ ಭವ ಸನ್ನುತ ಶೇಷಾಚಲ ಸನ್ನಿವಾಸ ಶಾಶ್ವತಾ ಪರಿಪಾಹಿ ಹರೇ ಅ.ಪ. ದುರಿತ ವಿಭಂಜನ ವಾಮನ ವರ ಸಂಕರ್ಷಣ ಧರಣೀ- ಧರ ಶ್ರೀಧರ ದೋಷದೂರ ಪರತರ ಪರಮೇಶ ಅಮಿತ ಸಮ ನರನಾರಾಯಣ ಸುರಗಣ ಪರಿಪಾಲ ಗಾನಲೋಲ ವರದ ಸುಖಾಸ್ಪದ ವಿಜಯದ 1 ಮಾಧವ ಮುರಹರ ಶರಣಾಗತ ಜನರಕ್ಷಕ ಭವ ಮೋಚಕ ನಿರುಪಮ ಗುಣಭರಿತ ಅರುಣಾಂಭೋರುಹಲೋಚನ ಸುರಗಂಗೋದಿತ ಚರಣ ಕರಿರಾಜವರದಾಚ್ಯುತ ಸ್ವರತಾ ಸ್ವತಂತ್ರ ಸುಚರಿತ 2 ಮಂದರ ಗಿರಿಧಾರಕ ಜಯ ಕಾಂಚನನಯನಾಂತಕ ಜಯ ಮನುಜ ಮೃಗೇಂದ್ರ ಜಯ ವೈರೋಚನಿ ದರ್ಪಹರ ಜಯ ಭೂಮಿ ಭುಜದಲ್ಲಣ ಜಯರಾಮ ಕೃಷ್ಣ ನಿಪುಣ ಕಲ್ಕಿ ಹಾ ಶ್ರೀಕಾಂತ ಜಯಜಯ 3
--------------
ಲಕ್ಷ್ಮೀನಾರಯಣರಾಯರು
ಶ್ರೀಹರಿ ಸಂಕೀರ್ತನೆಗಳು ಅಪ್ರಮೇಯ ಎನ್ನ ಪಾಲಿಸೈ ಅಪ್ಪ ನಿನ್ನ ಪದವ ನಂಬಿರ್ಪೆ ಪಾಲಿಸೈ ಪ ಸರ್ಪಶಯನ ಕಂದರ್ಪಜನಕ ಕೃಪೆಯ ತೋರಿಸೀಗ ಎನ್ನ ತಪ್ಪುಗಳನು ಒಪ್ಪಿಸಿರುವೆ ಒಪ್ಪಿಕೊಂಡು ಮನ್ನಿಸೆನ್ನ ಅ.ಪ ಕರಿಯ ಬಾಧೆಯನ್ನು ಹರಿಸಿದೆ ತರುಣಿಗಂದು ಕರುಣದಿಂದ ವರವ ನೀಡಿದೆ ಕರೆಯೆ ಕಂಬದಿಂದ ಬಂದು ದುರುಳ ದೈತ್ಯನನ್ನು ಕೊಂದು ತರಳನನ್ನು ಪೊರೆದೆಯೆಂದು ಶರಣು ಹೊಕ್ಕೆ ದೀನಬಂಧು 1 ರಾಜೇಂದ್ರ ಪುರವರಾಧಿಪ ರಾಜ ರಾಜ ಮಾಜದೆನ್ನ ಮೊರೆಯ ಕೇಳುತ ಸುಜನಪಾಲ ನಿನ್ನ ಪದವ ಭಜನೆಗೈವೆ ವಿಮಲಮತಿಯ ಭುಜಗಶಯನ ಕರುಣಿಸೆಂದೆ ಭಜಕ ರಕ್ಷಕ ರಾಘವೇಂದ್ರ 2
--------------
ನಂಜನಗೂಡು ತಿರುಮಲಾಂಬಾ
ಶ್ರೀಹರಿಸ್ತುತಿಗಳು ಕಂಡು ನಾ ಧನ್ಯನಾದೆನೋ ಶ್ರೀ ಪುರುಷೋತ್ತಮ ಪುಂಡರೀಕಾಕ್ಷ ವಿಷ್ಣುಪಾದವ ಪ ಮಗಧನಾ ದೇಶದಲ್ಲಿ ಚಂಪಕಾರಣ್ಯದಲ್ಲಿ ಮಧುವನದ ಮಧ್ಯದಿನಿಂದ ಮದನನಯ್ಯನ ಪಾದವ 1 ಶ್ರೇಷ್ಠ ಗಯಾಸುರನ ಶಿರವ ಮೆಟ್ಟಿ ಅವನ ದರ್ಪವ ನಷ್ಟವನ್ನು ಮಾಡಿದ ಸೃಷ್ಟಿಗೀಶ್ವರನ ಪಾದವ 2 ಮಂಡೆಯನ್ನು ತುಳಿದ ಭೂಮಂಡಲಾಧಿಪನ ಪಾದವ 3 ಪಿಂಡವಿಟ್ಟವರ ಪಿತೃಗಳಿಗೆ ಆನಂದಲೋಕವೀವ ಪಾದವ 4 ಹರಿಗೆ ಅಭಿಷೇಕ ಮಾಡಿ ಭರದಿ ಭಜನೆ ಮಾಳ್ಪ ಪಾದವ 5 ಸಾಸಿರನಾಮದಿಂದ ಉಲ್ಲಾಸದಿ ಪೂಜಿಸಿ ಜನರು ಲೇಸಾಯಿತೆಂದು ಪೋಪ ಈಶನ ಪಾದವ 6 ಸಂಧ್ಯಕಾಲದಲ್ಲಿ ಹರಿಗೆ ಗಂಧಮಾಲೆಯನ್ನು ಧರಿಸೀ ಸು ಗಂಧವಾದ ತುಳಸಿ ಸುತ್ತಲು ಗೋವಿಂದನ ಶ್ರೀಪಾದವ 7 ಪಾದ ಪಾದ ಪಾದ ಪಾದ 8 ಪಾದ [ಸಜ್ಜನರಿಗೆ ] ಮುಕ್ತಿಯನ್ನು ಕೊಡುವ ಪಾದವ 9
--------------
ಯದುಗಿರಿಯಮ್ಮ
ಸಕಲ ಕಾಲದಿ ಮಾಡಿದ ಕರ್ಮವು | ಭಕುತಿಯಿಂದಲಿ ಬಂದರ್ಪಿತವೆನ್ನಿ ಉಡುಪಿಯಲಿ ಪ ಯಾತ್ರೆಗಳ ಮಾಡಲಿ ತೀರ್ಥಗಳ ಮೀಯಲಿ | ಸ್ತೋತ್ರಗಳ ಮಾಡಲಿ ಕೊಂಡಾಡಲಿ || ನೇತ್ರದಲಿ ನೋಡಿ ಕರಮುಗಿದು ನಮಸ್ಕರಿಸಲಿ | ಹೋತ್ರವನು ಮಾಡಿ ಹಿತವಾಗಿ ನುಡಿಯಲಿ 1 ದಾನವನು ಮಾಡಲಿ ದಾಕ್ಷಿಣ್ಯವಾಗಲಿ | ಮೌನವನು ಮಾಡಲಿ ಮಾತಾಡಲಿ || ಕಾನನವ ಸೇರಲಿ ಕಂಡಲ್ಲಿ ತಿರುಗಲಿ | ಏನೇನು ಚರಿತೆಗಳ ಮಾಡುತಿರಲಿ 2 ಪುಣ್ಯವಾದರು ಲೇಸೆ ಪಾಪವಾದರು ಹರಿ | ಮನ್ನಿಸಿ ತಾನೀಗ ತೆಗೆದುಕೊಂಡು || ತನ್ನ ಸಮೀಪದಿ ಇಟ್ಟುಕೊಂಡು ಅವನ |ಘನ್ನ ಮೂರುತಿ ವಿಜಯವಿಠ್ಠಲ ಪೊರೆವ 3
--------------
ವಿಜಯದಾಸ
ಸಕಲ ದಿವಿಜಾರಾಧ್ಯ ಚರಣ ಪ ಕಂದರ್ಪ ಕೋಟಿ ಮೋಹನ್ನ ಕಾಯಾ | ಕಂಸ ಚಾಣೂರ ಮರ್ದನಕಾಲಿಯ ವಿಷಕಲಿಲ ಸಲಿಲಯಾನಕಲಪ್ರಾಣ ಗೋಗೋಪ ಜೀವನಾ | ಈಯ್ಯಾ ಈಯ್ಯಾ || ಗೋಕುಲದಿ ಗೋಪಿಯರ ಮನೆಗಳಲಿ ಗೋರಸ ಚೌರ್ಯ ಸಂಪನ್ನಾ |ಮಧುರ ಮುರಲಿ ನಿನಾದದಿಂದ ಮೋಹಿಪ್ಪ ||ಮೌನಿಗಳ ಮಾನಸಗಳಲ್ಲಿ | ಸಸ ಸಾನಿಸಾನಿ ನಿಸನಿ |ನಿಸನಿ ಸಾಸನಿನಿ ಸರಿಗರಿ ಮಗಗರಿಸ ನಿಧನಿಧ ನಿಧಪಮ || ಧಿಕ್ಕತಾ ಧಿಕ್ಕತಾ ಧಿಮಿ ಧಿಮಿಕಿತಾ ಧಿಮಿಕಿತಾ ಗಿಕಿಟ ತೋಂ |ಗಿಕಿಟ ತೋಂ ಗಿದಿಗದಿಗ ಥೈಯಾ ಥೈಯಾ || ಪರಿ ನಂದನಂಗಳದಲ್ಲಿ ಕುಣಿಕುಣಿದಾಡುವ ಶ್ರೀವಿಠ್ಠಲನಪಾದಾಂಬುಜದ ಭಜನದಿಂದೆ ತರಿಸುವೆನೆಂದು ಪಾಡುವೆನುಗೀತ ಪ್ರಬಂಧ ಬರೆಹಗಾರ ರುಕ್ಮಾಂಗದನು ||
--------------
ರುಕ್ಮಾಂಗದರು
ಸಖಿಯೆ ಬರುವದೀಗಲೆ ಪ ಕರಿದಂತ ರಚಿತ ಚರಣ ವರಮೌಕ್ತಿಕ ವಿಲಾಸ ಪರಿಶೋಭಿತ ಪರಿಯಂಕಕೆ ಬರುವದೀಗಲೆ1 ಮಂದರಧರ ಸಮೀರ ವಂದಿತನಂದ ಕುವರÀ ಕಂದರ್ಪ ಪಿತನ ಸುಖ ಶಯನಕೆ ಬರುವದೀಗಲೆ 2 ಏಣಾಂಕ ಬಿಂಬವದÀನೆ ಸುಶ್ರೋಣಿ ಮಂದಗಮನೆ ಶ್ರೀ ನಾರಸಿಂಹನ ವರಮಂಚಕೆ ಬರುವದೀಗಲೆ3
--------------
ಕಾರ್ಪರ ನರಹರಿದಾಸರು
ಸತತ ಪಾಲಿಸೋ ಎನ್ನ | ಯತಿ ರಾಘವೇಂದ್ರ | ಪತಿತ ಪಾವನ ಪವನ | ಸುತಮತಾಂಬುಧಿ ಚಂದ್ರ ಪ ನಂಬಿದೆನು ನಿನ್ನ ಚರಣಾಂಬುಜವ ಮನ್ಮನದ ಹಂಬಲವ ಪೂರೈಸೊ ಬೆಂಬಿಡದಲೆ || ಕುಂಭಿಣೀಸುರ ನಿಕುರುಂಭ ವಂದಿತ ಜಿತ ಶಂಬರಾಂತಕ ಶಾತಕುಂಭ ಕಶ್ಯಪ ತನಯ 1 ಕ್ಷೋಣಿಯೊಳು ನೀ ಕುಂಭಕೋಣ ಕ್ಷೇತ್ರದಿ ಜನಿಸಿ ವೀಣ ವೆಂಕಟ ಅಭಿದಾನದಿಂದ ಸಾನುರಾಗದಿ ದ್ವಿಜನ ಪ್ರಾಣ ಉಳುಹಿದ ಮಹಿಮೆ | ಏನೆಂದು ಬಣ್ಣಿಸಲಿ ಜ್ಞಾನಿ ಕುಲತಿಲಕ2 ಮಂದಮತಿಗಳ ಸಂಗದಿಂದ ನಿನ್ನಯ ಚರಣ ಇಂದಿನ ತನಕ ನಾ ಪೊಂದಲಿಲ್ಲ ಕುಂದು ಎಣಿಸದೆ ಕಾಯೊ ಕಂದರ್ಪಪಿತ ಶಾಮ ಸುಂದರನ ದಾಸಕರ್ಮಂದಿ ಕುಲವರ್ಯ 3
--------------
ಶಾಮಸುಂದರ ವಿಠಲ
ಸರ್ಪಶಯನನೆಂಬೊ ದಿವ್ಯಕಲ್ಪತರು ಸೇರಿದ ದರ್ಪವೆಷ್ಷನಿಮ್ಮಿಬ್ಬರ ಧಿಮಾಕುಭಾಳೆ ನಾರಿ ಪ. ನಿರತ ದಾಸಿ ನಾನೆಂಬೋದು ಸರಸಿಜಾಕ್ಷತಾನೆ ಬಲ್ಲಅರಸು ಅರಸನ ಹುಡುಕುತಅರಸು ಅರಸರನ ಹುಡುಕುತಲೆ ಹೋಗುವದುಸರಸ ತೋರುವುದೆ ಐವರಿಗೆ ಕೇಳನಾರಿ1 ಒಬ್ಬ ರುಕ್ಮಿಣಿ ನಿನ್ನ ಮುಂದೆ ಗುಬ್ಬಿಕಾಗೆ ಹಿಂಡುಕಬ್ಬೆಕ್ಕು ಕೋಳಿ ನೆರೆದಾವಕಬ್ಬೆಕ್ಕು ಕೋಳಿ ನೆರೆದಾವ ಶ್ರೀಕೃಷ್ಣತಬ್ಬಿಬ್ಬುಕೊಂಡು ನಗುತಾನ ಕೇಳ ನಾರಿ 2 ಅತ್ತಿಗೆ ನಿನ್ನ ಮೈಗೆ ಹತ್ಯಾವ ರುದ್ರಾಕ್ಷಿನೆತ್ತಿಯ ಮ್ಯಾ¯ ಜಡದಾವ ನೆತ್ತಿಯ ಮ್ಯಾ¯ ಜಡದಾವ ಅತ್ತಿಗೆ ನಿನ್ನಹತ್ತಿಲಿದ್ದವರು ನಗುತಾರೆ ಕೇಳನಾರಿ3 ಜಾಣೆ ನಿನ್ನಂಥವಳ ಕಾಣೆ ನಾ ಜಗದೊಳುಕೋಣನ ಹೊಡೆವ ಕೌಶಲ್ಯಕೋಣನ ಹೊಡೆವೊÀ ಕೌಶಲ್ಯಕ್ಕೆ ಬೆರಗಾಗಿಸುರನಾರಿಯರು ಬಹಳೆ ನಗುತಾರೆ ಕೇಳ ನಾರಿ4 ನಿತ್ಯ ಪ್ರಕಾಶನ ಉತ್ತಮೋತ್ತಮ ಗುಣವಅತ್ಯಂತ ನೋಡಿ ಸುಖಿಸದೆಅತ್ಯಂತ ನೋಡಿ ಸುಖಿಸದೆ ಎಲೆಭಾವೆಕತ್ತಲೆಗೈದ ಬಗಿಹೇಳ ಕೇಳನಾರಿ5 ಕತ್ತಲೆಂಬುದು ನಿನ್ನ ಸುತ್ತುಮುತ್ತಲಾಗಿರೆಎತ್ತನೋಡಿದರು ಜನರಿಲ್ಲಎತ್ತನೋಡಿದರು ಜನರಿಲ್ಲ ಅವರೊಳು ಚಿತ್ತ ಸ್ವಾಸ್ಥ್ಯದ ಬಗಿ ಹೇಳ ಕೇಳನಾರಿ6 ಹರಿ ಬಲು ಪ್ರೀತಿಯಿಂದ ಉರದೊಳು ಸ್ಥಳಕೊಟ್ಟಇರಬಾರದೇನೆ ವಿನಯದಿಇರಬಾರದೇನೆ ವಿನಯದಿ ಜಗಳಾಡಿಉರಿಯ ಹೊಗುವರೆ ಉನ್ಮತ್ತೆ ಕೇಳನಾರಿ 7 ಮೂಡಲಗಿರಿಪತಿಗೆ ಜೋಡೆಂದು ನೀವಿಬ್ಬರುಮಾಡಿ ಸಹವಾಸ ಎಡಬಲಮಾಡಿ ಸಹವಾಸ ಎಡಬಲ ಹಿಡಿದಿರಿ ನೋಡಿದವರೆಲ್ಲ ನಗುವಂತೆ ಕೇಳನಾರಿ8 ಕರಿ ಮಣಿಯು ಹೋಲುವುದೆಹರಿಯ ಚಲ್ವಿಕೆಗೆ ಹವಣಿಸಿಹರಿಯ ಚಲ್ವಿಕೆಗೆ ಹವಣಿಸಿ ರಾಮೇಶಗೆಸರಿಯಾಗುವೆ ಏನೆ ಬಿಡು ಬಿಡು ಕೇಳ ನಾರಿ 9
--------------
ಗಲಗಲಿಅವ್ವನವರು
ಸರ್ಪಾದ್ರಿ ವಾಸ ವಿಠಲ | ಅರ್ಪಿಸುವೆನಿವಳಾ ಪ ಶೂರ್ಪಕರ್ಣನ ಪಿತಗೆ | ಸಖ ನೆನಿಪ ಹರಿಯೇ ಅ.ಪ. ನೊಂದು ಸಂಸಾರದಲಿ | ಬಂಧನವ ಕಳೆಯಲ್ಕೆನಂದ ನಂದನನನ್ನು | ವಂದಿಸುತ ಬಹಳಾಕಂದರ್ಪನುಪಟಳವೇ | ಛಂದದಿಂ ದೂರಿರಿಸಿನಂದಾದ್ರಿ ನಿಯಲ ತವ | ಪಾದಕಾಂಕ್ಷಿಪಳಾ 1 ಪಾದ | ಶತಪತ್ರಕೀವಾ 2 ಪತಿ ಪ್ರೀಯಾ 3 ಪತಿ ಕರ್ಮ | ತುಂಬಿಸೆಂದಿವಳಲ್ಲಿಪೊಂಬಸಿರ ವಂದ್ಯ ಮ | ದ್ಭಿಂಭ ಪ್ರಾರ್ಥಿಸುವೆ 4 ಭಾವದ್ರವ್ಯ ಕ್ರಿಯವು | ಈ ವಿಧಾದ್ವೈತತ್ರಯತೀವ್ರುಪಾಸನೆ ಪಲಿಸಿ | ಹೃದ್ಗುಹದಿ ನಿನ್ನಾಆವ ತವ ಭವ್ಯ ಸ | ದ್ರೂಪ ತೋರಿಸು ಎಂದುಓವಿ ಪ್ರಾರ್ಥಿಪೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸಿರಿ ಪ ನಲ್ಲನವರ ಸಂಗದಿ ಕೂಡು ಅ.ಪ ಉಪದೇಶ ಮಾಳ್ಪುದಕೆ ಹೋಗಬೇಡ ನೀ ಚಪಲಚಿತ್ತನು ತಿಳಿದಿರು ಮೂಢ- ತೋರ್ಪದಿರು ಕೋಣ 1 ಹಿಂದೆ ಹೋದರು ಬಹಳ ಮಂದಿ | ಸ್ಥಿರ- ವೆಂದು ತಿಳಿದು ನೀದುಃಖ ಹೊಂದಿ ಮುಂದಾಗುವುದುಕ್ಕೆಲ್ಲಾ ಕಂದರ್ಪ ಕಾರಣನಲ್ಲಾ 2 ಎಲ್ಲಾ ಜನರನು ಸುಲಿವರು ಮುನ್ನು ಕ್ಷುಲ್ಲಕರಿಗೆ ತತ್ವವ ಪೇಳೆ ಸುಳ್ಳೆಂದು ನಿಂದಿಸುವರು 3 ಪ್ರಶ್ನೆಗೆ ತಕ್ಕ ಉತ್ತರವಾಡು | ಸೂರ್ಯ- ರಶ್ಮಿಯೊಳಗಿರುವ ಲವಣಿಯ ನೋಡು ನಿ_ ನ್ನಸ್ವರೂಪವದರಂತೆ | ಯಾತಕೆ ಇನ್ನು ಅಗಾಧ ಭ್ರಾಂತಿ 4 ಅನಂತ ಪ್ರಾಣಿಗಳೊಳಗೆ ನಿವಾಸ | ನಮ್ಮ ವನಜಾಕ್ಷ ಗುರುರಾಮವಿಠಲೇಶ ಅನಿಮಿತ್ತ ಬಂಧುವನು ಬಿಡಿಬಿಡಿರೋ ದುರಾಶಾ5
--------------
ಗುರುರಾಮವಿಠಲ
ಸೀಸಪದ್ಯ ಸುಂದರಾಂಗನ ಪಾದಕೊಂದಿಸುತ ಭಕ್ತಿಯಲಿ ಮಂದರೋದ್ಧಾರ ಮುಚುಕುಂದ ವರದ ನೆಂದು ಸ್ತುತಿಸುವ ಭಕ್ತವೃಂದವನು ರಕ್ಷಿಸುವ ಕುಂದನೆಣಿಸದಲೆ ನಾರಸಿಂಹ ಹರಿಯು 1 ಇಂದಿರಾರಮಣಗೆ ಜಯ ಗೋವಿಂದ ಗೋಪಕುಮಾರ- ನೆಂದವರ ಬಂಧನವ ಬಿಡಿಸಿ ಕಾಯ್ವ ಕಂದರ್ಪಜನಕ ಕಮಲಾಕ್ಷ ಹರಿ ಗತಿ ಎನುತ ಬಂದವನ ಕೈ ಬಿಡನು ಇಂದಿರೇಶ 2 ದುಂದುಭಿ ವತ್ಸರದಿ ಸುಜನರೆಲ್ಲ ತಂದೆ ಕಮಲನಾಭ ವಿಠ್ಠಲನೆನುತ ಒಂದೆ ಮನದಲಿ ಭಜಿಸಿ ಸ್ತುತಿಪ ಜನರ ಚಂದದಲಿ ಕಾಯ್ವ ನಾರಸಿಂಹ ಹರಿಯು3
--------------
ನಿಡಗುರುಕಿ ಜೀವೂಬಾಯಿ
ಸುಖವನು ಸರ್ವದ ಬಯಸಲದೇನೆಂದು ನೀ ತಿಳಿದಿಹೆಯಣ್ಣಾ ಪ ಸುಖ ಬೇಕಾದರದರ ಗೂಢದ ನೆಲೆಯ ನೀ ಕಂಡ್ಹಿಡಿಯಣ್ಣಾ ಅ.ಪ. ಸಕ್ಕರೆ ತುಪ್ಪ ಹಾಲ್ಮೊಸರಿನೂಟವು ಸುಖವಹುದೇನಣ್ಣ ಬೊಕ್ಕಸ ಬರಿದಾಗದಲೆ ಸದಾ ರೊಕ್ಕ ತುಂಬಿಹುದೇನಣ್ಣ ಅಕ್ಕಪಕ್ಕದ ರೂಪವತಿಯರ ಕಣ್ಣೋಟದೊಳೇನಿದೆಯಣ್ಣ ಚಿಕ್ಕತನದ ಚಲ್ಲಾಟಗಳೋ ನಿರತನಾಗಿಹುದೇನಣ್ಣ 1 ಚರ ಸ್ಥಿರ ಸ್ವತ್ತುಗಳ ನೀ ಗಳಿಸಿ ಧನಿಕನೆನಿಸುವುದೇನಣ್ಣ ದೊರೆತನ ಬಯಸಿ ನೀ ದರ್ಪವ ತೋರುತ ಬಾಳುವುದೇನಣ್ಣ ಪರಿಪರಿ ಬಣ್ಣದ ಪಾವುಡ ಧರಿಸಿ ನೀ ಮೆರೆಯುವುದೇನಣ್ಣ ಕರಿ ತುರಗ ರಥ ಪಲ್ಲಕ್ಕಿಯಲಿ ಕುಳಿತು ಚರಿಸುವುದೇನಣ್ಣ 2 ಪರಿ ಸುಖಗಳೆಲ್ಲವು ತಪ್ಪಲು ನೀನಳುವಿಯೇತಕ್ಕಣ್ಣ ತಾಪತ್ರಯಂಗಳಂಕುರಿಸಲಿಕವೆಲ್ಲವು ಬೀಜಗಳೆ ಅಣ್ಣ ಪಾಪ ರಾಸಿ ಬೆಳೆಯಲಿವೆ ಮೂಲ ಕಾರಣವೆಂದರಿಯಣ್ಣ ಆಪತ್ತುಗಳು ಬಿಡದೆ ಬಂದಡರಿ ಬಹುತಾಪಗೊಳಿಪವಣ್ಣ3 ಈ ಸುಖಗಳೆಲ್ಲವು ಬಹುಕಾಲವಿರವು ಶಾಶ್ವತವಲ್ಲಣ್ಣ ಆಸೆಯ ತೋರಿಸಿ ನಿನ್ನನು ಬಹುಮೋಸಗೊಳಿಪವು ಕೇಳಣ್ಣ ಹೇಸಿಕೆಗಿಂತವು ಕಡೆಯಾಗಿಹವೆಂದು ದೃಢದಿ ನಂಬಿರಣ್ಣ ಸಾಸಿರ ನಾಮದ ರಮೇಶನ ಸ್ಮರಿಸಲು ಬೇಸರ ಬೇಡಣ್ಣ 4 ಕಟ್ಟಿಕೊಂಡ್ಹೋದ ಬುತ್ತಿಯು ತಾನೆಷ್ಟು ದಿನವಿದ್ದೀತಣ್ಣ ಎಷ್ಟು ಹೇಳಿದರೇನಿ ಫಲವು ನಿನ್ನಲಿ ನೀನೆ ತಿಳಿಯಣ್ಣ ಗುಟ್ಟಿನಲಿ ಮನಮುಟ್ಟಿ ಯೋಚಿಸಲದುವೆ ಬಯಲಾಗುವುದಣ್ಣ ದಿಟ್ಟ ರಂಗೇಶವಿಠಲನ ನಾಮವೊಂದೇ ನಿಜ ಸುಖವಣ್ಣ 5
--------------
ರಂಗೇಶವಿಠಲದಾಸರು