ಒಟ್ಟು 3265 ಕಡೆಗಳಲ್ಲಿ , 123 ದಾಸರು , 2408 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ ವಿಧವುರವೆಯಷ್ಟು ತೋರದಲ್ಲ ಪ ದೇವ ದೇವೇಶ ನೀನೆಂದು ನಂಬಿರಲು ಕೃ-ಪಾವಲೋಕನದಿ ಸಲಹೊ ದೇವಅ ಫಣಿರಾಜನಾಸನದಿ ಕುಳಿತಿಹಗೆ ಅರಿವೆಯಾಸನವ ನಾನೆಂತ್ಹಾಸಲಿಘನವಾದ ಗಂಗೆಯನು ಪಡೆದವಗೆ ಕಲಶ ನೀರನದೆಂತು ಮೈಗೆರೆಯಲಿತನುವಿನ ಪರಿಮಳವು ಘಮಘಮಿಪನಿಗೆ ಸುಚಂದನವದೆಂತು ನಾ ಪೂಸಲಿಅನವರತ ನಾಭಿಯೊಳು ಶತಪತ್ರವಿಹಗೆ ಮಿಕ್ಕಿನ ಪೂವ ಮುಡಿಸಲೆಂತೈ ದೇವ 1 ಸುರುಚಿರೋಜ್ವಲ ಪೀತವಾಸನಿಗೆ ಉಡುಗೊರೆಯಅರಿವೆಯೇನನು ಪೊದಿಸಲಿವರ ಕೌಸ್ತುಭವು ಕೊರಳೊಳಗೆ ಇಪ್ಪವಗೆ ಆ-ಭರಣವಾವುದ ತೊಡಿಸಲಿತರಣಿ ಶತಕೋಟಿತೇಜನ ಮುಂದೆ ಹ್ಯಾಗೆ ನಾ-ಪೆರತೊಂದು ದೀಪವಿಡಲಿನೆರಹಿದ ಫಣಿಪತಿಯ ಸ್ತೋತ್ರದೂರನ ನಾನುಸ್ಮರಿಪೆನೆಂತಯ್ಯ ದೇವ ದೇವ 2 ವನಜಜಾಂಡ ಕೋಟಿಯುದರಂಗೆ ಆವುದನುಉಣಿಸಿ ತೃಪ್ತಿಯ ಮಾಡಲಿಅನಿಮಿಷರಿಗಮೃತವನ್ನೆರೆದವನ ತೃಷೆಯ ನೀ-ರಿನೊಳೆಂತು ಸಂತವಿಡಲಿವಿನತೆಯಾತ್ಮಜ ಪಕ್ಷದನಿಲನಿರೆ ಬೇರೆ ಬೀ-ಸಣಿಗೆಯನ್ನೇಂ ಬೀಸಲಿಅಣುರೇಣು ಪರಿಪೂರ್ಣ ಮೂರುತಿಗೆ ನಾ ಪ್ರದ-ಕ್ಷಿಣೆಯೆಂತು ಸುತ್ತಿಬರಲಿ ದೇವ 3 ಮಿಗೆ ಫಣಿಯ ಫಣದಾತಪತ್ರವಿರುವಂಗೆ ನೆರ-ಳಿಗೆ ಕೊಡೆಯನೇಂ ಪಿಡಿಯಲಿಪಗಲಿರುಳು ಸಾಮಗಾನ ಪ್ರಿಯನ ಮುಂದೆ ಗೀ-ತಗಳ ನಾನೇಂ ಪಾಡಲಿಜಗವರಿಯೆ ಲಕ್ಷ್ಮೀದೇವಿಪತಿಗೆ ಎಷ್ಟು ಹೊ-ನ್ನುಗಳ ದಕ್ಷಿಣೆಯ ಕೊಡಲಿನಿಗಮತತಿ ಕಾಣದಿಹ ಮಹಿಮನಿಗೆ ನಮಿಸುವಬಗೆಯ ನಾನರಿವೆನೆಂತೈ ದೇವ 4 ಒಲಿಸುವುದನರಿಯೆ ಮೆಚ್ಚಿಸುವ ಬಗೆಯರಿಯೆ ಹೊ-ಗಳುವ ಹೊಲಬ ನಾನರಿಯೆನುತಿಳಿದುದಿಲ್ಲವು ಷೋಡಶೋಪಚಾರದ ಪೂಜೆ-ಗಳಲೊಂದು ಪರಿಯಾದರೂನೆಲೆಯ ಕಾಣೆನು ನಿಗಮಶಾಸ್ತ್ರ ನವವಿಧ ಭಕ್ತಿ-ಯೊಳಗೊಂದು ಬಗೆಯಾದರೂಅಳಿಲಸೇವೆಯನೊಪ್ಪಿಸಿಕೊಂಡು ಶರಣನ ಸಲಹೊನೆಲೆಯಾದಿ ಕೇಶವನೆ ಸ್ವಾಮಿ - ಪ್ರೇಮಿ5
--------------
ಕನಕದಾಸ
ಆವಭೇಧವಿಲ್ಲದವನೆ ನಿಜಜ್ಞಾನಿಯು ತನು ಭಾವವರಿತು ನಡೆಯುವನೆ ನಿಜ ಭಾಗವತನು ಪ ಮಾನ ಅಪಮಾನ ಸಮಕಾಣುವನೆ ಸಜ್ಜನನು ತಾನು ತನ್ನದೆಂಬ ಮಾಯವಳಿದವನೆ ಸಾಧು ಏನು ಕೊಟ್ಟರು ಒಲ್ಲೆನೆಂಬುವನೆ ಸನ್ಯಾಸಿ ದೀನರನು ಕಂಡು ಮನಮರುಗುವನೆ ಭಕ್ತ 1 ನಿಜಧರ್ಮವರಿಯದ ಪಾಮರನೆ ಶೂದ್ರನು ನಿಜವಾಕ್ಯಗಳ ಕೇಳಿ ಅಳಿವವನೆ ಭವಿಯು ಸುಜನರಿಗೆ ತಲೆಬಾಗಿ ನಡೆವವನೆ ಸಿದ್ಧಾಂತಿ ಕುಜನರ ಮಾತಿಗೊಳಪಡುವವನೆ ನರಕಿ 2 ಪಿಡಿದ ವ್ರತನೇಮಗಳ ಬಿಡದವನೆ ಕಡುಗಲಿ ಜಡದೇಹ್ಯಮೋಹವನು ತೊಡೆದವನೆ ಸತ್ಯ ಬಂಟ ಜಗದೊಳಗೆ ಒಡೆಯ ಶ್ರೀರಾಮನಡಿ ದೃಢಯುತನೆ ಮುಕ್ತ 3
--------------
ರಾಮದಾಸರು
ಆವಾಹನಆವಾಹನೋಪಚಾರವು ನಿನಗೆ ವಿಭುವೆಆವರಣರಹಿತ ಪರಿಪೂರ್ಣ ಚಿತ್ಸುಖವೆ ಪಹೃದಯಕಮಲದಿ ನೆನೆದು ಪೂಜಿಸುವೆನೆಂದು ಮತ್ತೊದಗಿ ಬಿಂಬದೊಳಿಳುಹಿಯರ್ಚಿಸುವೆನೆಂದುಇದಿರಾಗಿ ನಿಲ್ಲು ಸ್ಥಾಪಿತನಾಗು ಹತ್ತಿರಿರುಹದುಳುನಾಗೆಂದೆನೀ ತಪ್ಪನೆಣಿಸದೆ ಸಲಹು 1ಅಣುಮಹತ್ಪರಿಪೂರ್ಣ ವಾಸುದೇವನೆ ನಿನ್ನಗಣಿಸಿ ನೆಲೆಗಾಣವೀ ಶ್ರುತಿಗಳೆಂಬುದನುಮನದೊಳೆಣಿಸುತಲಿಹೆನು ಸರ್ವರೊಳು ಸಮಬುದ್ಧಿಯನು ಪಾಲಿಸೆಂದು ಬೇಡುವೆನು ಜಗದೀಶಾ 2ಪರಿಪೂರ್ಣನೆಂಬ ಭಾವದಿ ಮನವು ನಿಲದಾಗಿ ಗುರಿಗೈದು ನಿನ್ನ ಮಂಗಳ ಮೂರುತಿಯನುಪರಿಪರಿಯಲುಪಚರಿಸಿ ಸ್ಥಿರಗೈವೆನೀ ಮನವತಿರುಪತಿಯೆ ಸ್ಥಿರವಾಸ ಶ್ರೀ ವೆಂಕಟೇಶಾ 3ಓಂ ಯಮುನಾವೇಗಸಂಹಾರಿಣೇ ನಮಃ
--------------
ತಿಮ್ಮಪ್ಪದಾಸರು
ಆಶಾ ಪಾಶದಲಿ ಬಿದ್ದು ಘಾಸಿಯಾಯಿತು ಜೀವ ವಾಸುದೇವನೆ ನಿಮ್ಮ ಆಶೆಗೆನ್ನ ಮನವಿಲ್ಲ ಪ ಮಡದಿಯಾಗಲು ಮತ್ತೆ ಮನೆಯಾ ಮಾಡುವದಾಶಾ ಒಡಗೂಡಲದು ಮಕ್ಕಳಾಗುವಾಶಾ ಬಿಡದೆ ಕುಟುಂಬ ಪೋಷಣೆಯಾಗುವಾದಾಶಾ ಕಡಲ ಶಯನಾ ನಿಮ್ಮ ಆಶೆಗೆನ್ನ ಮನವಿಲ್ಲ 1 ಅನ್ನವಾಗಲು ವಸ್ತ್ರ ಅಲಂಕಾರದಾಶಾ ಇನ್ನು ಮಕ್ಕಳ ಮುಂಜಿ ಮದುವಿಯಾಶಾ ತನ್ನ ನೆಂಟರಸರಿಯಾ ಮಾಡುವದಾಶಾ ಪನ್ನಗಾಶನವಾಹನಾಶೆಗೇ ಮನವಿಲ್ಲ 2 ನಡೆವಕಾಲಕೆ ದೊಡ್ಡ ಕುದುರೆ ಏರುವದಾಶಾ ಅಡರಲು ರಥದಿಂದ ಆಂದಣಾಶಾ ಕಡಿಗೆ ತೀರದ ಹೊನ್ನು ಹಣದ ಸಂಗ್ರಹದಾಶಾ ಪೊಡವಿಧರನೇ ನಿಮ್ಮ ಆಶೆಗೆ ಮನವಿಲ್ಲ 3 ಒಂದೊದಗಲು ಮತ್ತೆ ಒಂದು ಬಯಸುದಾಶಾ ಎಂದಿಗೇ ಸರಿಯದು ವಿಷಯದಾಶಾ ಕುಂದಿದ ತನುವಿನ ಬಲವಾಗುವದಾಶಾ ಇಂದಿರೇಶನ ಆಶೆಗೆನ್ನ ಮನವಿಲ್ಲ 4 ಆಶೆಯೆಂಬಾ ನದಿಯ ಸುಳಿಯ ಬಿಡಿಸಿ ನಿಜ ದಾಸರಾ ಸಂಗ ಮನವ ತಿದ್ದೀ ಲೇಸಾಗಿ ಮಹಿಪತಿ ಸುತ ಪ್ರಭು ಭಕುತಿಯಾ ಆಶೆ ಹೆಚ್ಚಿಸಿ ಎನ್ನ ದಯದಿ ಪಾಲಿಸೋ ದೇವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಸೆಯೆನಗಿಲ್ಲ ಸರ್ವೇಶ ನಿನಬಿಟ್ಟು ವಾಸುಕೀಶಯನ ಜಗದೀಶ ನಿನ್ಹೊರತೆನಗೆ ಪ ನಿಗಮದಾಸೆಗೆ ಹೋಗಿ ನೀರೊಳಗೆ ಮುಳುಗಿ ನೀ ಸುಧೆಯ ಆಸೆಗೆ ಹೋಗಿ ಸುರರ ಕೈ ಸಿಕ್ಕು ನೆಲದ ಆಸೆಗೆ ಮಣ್ಣು ಬಗೆದÀು ಶ್ರಮವನೆ ಬಟ್ಟು ಕೊರಳ ಹಾರದ ಆಸೆ(ಗೆ) ಕರುಳ ಬಗೆವೊದೆ ಕಷ್ಟ1 ಭೂಮಿಯಲಿ ಭಾಳಾಸೆ ಭುವನ ವ್ಯಾಪಿಸಿಕೊಂಡು ಕಾಮಧೇನಿ (ನುವಿ?)ನ ಆಸೆ ಕಾರ್ತವೀರ್ಯಾರ್ಜುನನ ಕೊಂದು ಸಿರಿಯ ಸೌಂದರ್ಯದಾಸೆ ಶಿವನೆಬಲ್ಲನು ನೆಗಹಿ ಉದರದಾಸೆಗೆ ಅಸುರೆಜಗಿದು ವಿಷಮೊಲೆನುಂಡಿ 2 ತ್ರಿಪುರ ಸತಿಯರ ಆಸೆಗ್ವಸನವಿಲ್ಲದೆ ತಿರುಗಿ ಅಶ್ವದಲಿ ಆಸೆ ಅತಿ ಕಲಿಭಂಜನನೆನಿಸಿ ಈಸುಪರಿ ಆಸೆ ಭೀಮೇಶ ಕೃಷ್ಣಗೆ ಇರಲು ನಾಶರಹಿತನೆ ನಿನ್ನ ನಾಮವಿದ್ದರೆ ಸಾಕು 3
--------------
ಹರಪನಹಳ್ಳಿಭೀಮವ್ವ
ಆಳ್ವಾರಾಚಾರ್ಯಸ್ತುತಿಗಳು 1. ಶ್ರೀ ಆಂಜನೇಯ ಸ್ತುತಿಗಳು 155 ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋ ನಮೋ ಪ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋ ನಮೋ ಅ.ಪ ನಮೋಸ್ತು ಶ್ರೀಮಾನ್ ನಮೋಸ್ತು ಧೀಮಾನ್ ನಮೋಸ್ತು ಮರುತಾತ್ಮಜ ಹನುಮಾನ್ ನಮೋಸ್ತು ಬಲವಾನ್ ನಮೋಸ್ತು ವೀರ್ಯವಾನ್ ನಮೋಸ್ತು ಪಂಚಾನನ ರೂಪಾ 1 ನಮೋ ಸಮೀರಾಂಜನಾಕುಮಾರಾ ನಮೋ ದಿವಾಕರ ಭಯಂಕರಾ ವಿಧಿ ವರಪ್ರಸಾದಿತ ನಮೋ ನಮೋ 2 ನಮೋ ನಮೋ ವಾನರೇಂದ್ರ ಸಚಿವಾ ನಮೋ ಜಿತೇಂದ್ರಿಯ ಗದಾಧರಾ ಸನ್ನುತ ನಮೋಸ್ತು ಸಕಲಕಲಾಧರ 3 ವಸುಂಧರಾಪ್ರಿಯ ತನೂಭವಾನ್ಯೇ ವಸುಗಣೋತ್ಸುಕಾ ಶುಭದಾಯಕಾ ಹಸನ್ಮುಖಾ ಶ್ರೀರಘೋತ್ತಮ ಪ್ರಿಯಾ ಯ [ಸಖ] ಖಗೇಂದ್ರಸಮ ಕಪಿನಾಯಕಾ 4 ಜನಕಸುತಾ ಸುದರ್ಶನ ಹರ್ಷಿತ ವನಭಂಗಕರಾಕರಣಧೀರಾ ಲಂಕಾನಗರ ಭಯಂಕರಾ 5 ಸೀತಾರಾಮಾನಂದ ವರ್ಧಕಾ ಲಕ್ಷ್ಮಣ ಪ್ರತಾಪವಾನ್ ದೂತಕಾರ್ಯ ವಿಜಯೋತ್ಸುಕ ವಾನರ ಪತಿಸಂಪೂಜ್ಯ ಪ್ರದೀಪ್ತವಾನ್ 6 ರಾಮಾಲಿಂಗಿತ ದಿವ್ಯಶರೀರಾ ರಾವಣದರ್ಪ ವಿನಾಶಕರಾ ಭೀಮಪರಾಕ್ರಮ ಸಂಜೀವನಧರ ದಾನವತಿಮಿರ ವಿಭಾಕರ 7 ಗಂಭೀರಶರಧಿ ವಿಲಂಘನಧೀರಾ ಮೈನಾಕಾರ್ಚಿತ ಪರಮೋದಾರಾ ವಿಭೀಷಣ ಪ್ರಿಯ ಸಖಾಭಿವಂದಿತ ರಘುಪತಿಸೇವಾ ಧುರಂಧರಾ 8 ತಾರಕ ಮಂತ್ರೋಪಾಸಕ ಹನುಮಾನ್ ಶೂರಭವಿಷ್ಯ ಚತುರ್ಮುಖಾ ಧೀರೋದಾತ್ತ ಕೃಪಾಕರ ಮಾಂಗಿರಿರಂಗ ನೀಕೇತನ ಬಹಿರ್ಮುಖ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಇ. ಶ್ರೀ ಹರಿಯ ಸ್ತುತಿ ತಿರುಪತಿ ಶ್ರೀನಿವಾಸ ದೇವರು ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋಗುಡ್ಡದಿ ಸೇರುತ ಬಡ್ಡಿ ಸಹಿತ ಪರದುಡ್ಡು ಸೆಳೆವರೇನೋ ಪ ಕೊಟ್ಟಾದನ್ನುಣ್ಣುತ ದೇಹವ ಪುಷ್ಟಿಸಿ ಕಾದಿರುಶಕಟ್ಟಿದ ಹಣವನು ಕಷ್ಟದಿ ಕೊಡದಿರೆ ಕುಟ್ಟಿ ಸೆಳೆದು ತರುವಿ ಚಾಳಿ ಕೆಟ್ಟದು ಕಲಿತಿರುವಿ 1 ಶಿಷ್ಟರು ಗುಡಿಯೊಳು ಬಂದರೆ ಅವರನು ಅಟ್ಟಿಸಿ ಹೊರಡಿಸುವಿಮೊಟ್ಟೆಯಲಿ ಹಣ ಕಟ್ಟಿದವರು ಬರೆ ದೃಷ್ಟಿಸಿ ಮನ್ನಿಸುವಿಚಾಳಿ ಕೆಟ್ಟದು ಕಲಿತಿರುವಿ 2 ಕಾಳಗ ನಡೆಸಿರುವಿಶ್ರೀಲೋಲನೆ ಮುಖತೋರಿಸು ಎಂದರೆ ಆಲಯಕ್ಹೋಗೆನುವಿಚಾಳಿ ಕೆಟ್ಟದು ಕಲಿತಿರುವಿ 3 ಹುಚ್ಚುನ ತೆರದೆಲೆ ಮಾತುಗಳಾಡುವಿ ನಿಶ್ಚಯ ಒಂದಿಲ್ಲಾತುಚ್ಛಿಸಿ ಎಲ್ಲವ ನಿನ್ನಲಿ ಬಂದರೆ ಮತ್ಸರ ನಡೆಸಿರುವಿಚಾಳಿ ಕೆಟ್ಟದು ಕಲಿತಿರುವಿ 4 ಶುಭ ದಾಸನಾಗಿದ್ದಿಈ ಸಮಯದೀತನು ಪೋಷಿಸಲು ವಿಷಯಾಸೆಯನಾಗಿದ್ದಿಧನರಾಸಿಯೊಳಗೆ ಬುದ್ಧಿ ಇಂದಿರೇಶನೆ ಕಲಿಸಿದ್ದಿ 5
--------------
ಇಂದಿರೇಶರು
ಇಕ್ಕೊ ಇಲ್ಲೆಹಾನೆ ಅಖಂಡ ಗುರುತಾನೆ ಬೇಕಯೆಂದವರಿಗೆ ಪೂರ್ಣ ಸಿಕ್ಕುತಾನೆ ಧ್ರುವ ಅರವ್ಹಿನ ಮುಂಧಾನೆ ಮರವ್ಹಿನ ಹಿಂಧಾನೆ ಕುರಹು ತಿಳಿದರೆ ತಾನೆ ಸ್ಥಿರವಾಗ್ಯಾನೆ 1 ಗುರುತ ಕಂಡವಘಾನೆ ಗುರುಸ್ವರೂಪಧ್ಯಾನೆ ಗುರುಕೃಪ್ಯಾದವಘಾನೆ ಗುರುತಾನೆ 2 ಅಣುರೇಣುದೊಳಘಾನೆ ಜನವನ ತುಂಬ್ಯಾನೆ ಅನುಭವಕ ತಾನೆ ಖೂನಾಘ್ಯಾನೆ 3 ಮನದ ಕೊನಿಲಿಹಾನೆ ಘನವೆ ಘನವಾಘ್ಯಾನೆ ದೀನ ಮಹಿಪತಿ ಸ್ವಾಮಿ ತಾನೆ ತಾನೆ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂತಕಿ ವಚ್ಚಿನ್ನಾಡು ಸೀತಾರಾಮುಡಿಂಟಿಕಿ ವಚ್ಚಿನಾಡು ಪಅಂಟಿ ಭಜಿಂಚಿತೆ ಅಭಯ'ುಚ್ಚೇವಾಡುವೆಂಟಿ ತನ ಸೀತನುಗೂಡುಕೊನಿ ರಾಮುಡಿಂಟಿಕಿ ಅ.ಪಋಣಮುಲ ದೀರ್ಚವಲೆನನುಕೊನಿಮನಸುಬೆಟ್ಟಿ ವಚ್ಚನುಕನಕಾಂಬರಧರ ಕೌಸಲ್ಯಾತನಯುಡುಅಣುರೇಣು ತೃಣಕಾಷ್ಠ ಪರಿಪೂರ್ಣುಡು ರಾಮುಡಿಂಟಿಕಿ 1ಇದಿ ಮಂಚಿ ಸಮಯಮನಿ ಶ್ರೀರಾಮುನಿ'ಧ'ಧಮುಗ ವೇಡಿತಿಪದಮನಾಭ ಶ್ರೀರಾಮುಡು ನಿರತಮುಮದಿಲೋ ಕೋರಿನ ಕೋರಿಕಲಿಚ್ಚೆಟಂದುಕಿಂಟಿಕಿ 2ಗುರು ವಾಸುದೇವಾರ್ಯುಲ ರೂಪಮು ತಾಳಿತರುಣ ನಾಗಪುರಮುಲೋತಿರುಪತೀಶ ಶ್ರೀ ವೆಂಕಟರಮಣುಡುಕರುಣಿಂಚಿ ನಾರಾಯಣದಾಸುನಿ ಬ್ರೋಚುಟಕಿಂಟಿಕಿ 3
--------------
ನಾರಾಯಣದಾಸರು
ಇಂಥಾ ಗುರುಗಳ ಕಾಣೆನೋ ಈ ಜಗದೊಳು ನಾ ಪ ಇಂಥಾ ಗುರುಗಳನೆಂದು ಕಾಣೆನಾ ನಂತ ಚೇತನರಂತರ ಬಹಿರದಿ ನಿಂತು ಕರ್ಮವವರಂತೆ ಮಾಳ್ಪಾ - ನಂತ ಮಹಿಮಾನಂತನಾಂಶಜರಿಂಥಾಅ.ಪ ತುಂಗಾತೀರದಿ ನಿವಾಸಾ ಮಂತ್ರಾಲಯಕೀಶ ತುಂಗ ವಿಕÀ್ರಮ ಜಗದೀಶಾ ಶ್ರೀಹರಿ ದಾಸಾ ಮಂಗಲ್ಮಾತಕ ವೃಂದಾವನ ದೇಶಾ ಸಾರಿದ ವ್ರತೀಶಾ ಮಂಗಲ ಮಹಿಮ ರಂಗನ ಕರುಣಾಪಾಂಗ ಪಡೆದ ಕೃ - ಪಾಂಗ ಯತಿಕುಲೋತ್ತುಂಗ ಮಾಯಿ ಮಾ - ತಂಗ ಸಂಘಕೆ ಸಿಂಗ ದುಷ್ಟ ಭು - ವಿಹಂಗ ಸ್ವಮತೋ - ಭೃಂಗ ಮನ್ಮನೋ - ರಂಗ ಬಿಂಬನ ಇಂಗಿತಙ್ಞರ ಸಂಗ ನೀಡಿ ಕಂಗಳಿಗೆ ತಾವು ಕಂಗೊಳಿಪರಿಂಥಾ 1 ಮೇದಿನಿ ತಳದಲಿ ಜನಿಸೀ ಸುಖತಿರ್ಥರ ಭಜಿಸೀ ಭೇಧಮತವನೆ ಸಾಧಿಸೀ ವಾದದಿ ಜೈಸಿ ಮಾಧವನೆ ಸರ್ವೋತ್ತಮನೆನಿಸಿ ಸ್ವಮತವ ಸ್ಥಾಪಿಸಿ ಭೋಧಿಸಿ ತತ್ತ್ವವ ಭೇಧಿಸಿ ಪರಮತ ಛೇಧಿಸಿ ಕುಮತಿಯ ಶೋಧಿಸಿ ತತ್ತ್ವದ ಹಾದಿಯ ಹಿಡಿಸಿ - ಮೋದಕೊಡುವ ಪಂಚ ಭೇದವ ತಿಳಿಸೀ ಸಾದರ ತನ್ನಯ ಪಾದಸೇವೆಯ ಮೋದವ ನೀಡುವ ಮೇದಿನೀ ದಿವಿಜಾರಾಧಿತ ಪದಯುಗ ಶೋಧಿಸಿ ಜನಮನೋ ಖೇದಗೊಳಿಪ ಭ - ವೋಧಧಿ ದಾಟಿಸಿ ಶ್ರೀದÀನ ತೆರದಲಿ ಮೇದಿನಿಯಾಳುವರಿಂಥಾ 2 ಧಿಟ್ಟ ಗುರು ಜಗನ್ನಾಥ ವಿಠಲದೂತಾ ಸೃಷ್ಟಯೊಳಗತಿ ವಿಖ್ಯಾತಾನೆನಿಸಿದ ಯತಿನಾಥಾ ಕುಷ್ಟಾದಿ ರೋಗದ ಘಾತಾ ಮಾಡುವೊದಾತಾ ಇಷ್ಟಾರ್ಥವಾ ತಾ ಸೃಷ್ಠಿಗೆ ಬೀರುವ ಶಿಷ್ಟಜನರನುತ್ನøಷ್ಟದಿ ಪಾಲಿಪ ಎಷ್ಟು ಪೇಳುವುದೋ ಉತ್ಕøಷ್ಟನ ಗುಣಗಳ ಭ್ರಷ್ಟರರಿಯರೆಲೆ ಶಿಷ್ಟರು ಬಲ್ಲರು ಇಷ್ಟೇ ಅಲ್ಲವೀತನ ವಿಶಿಷ್ಟ ಮಹಿಮೆಗ - ಳೆಷ್ಟು ಪೇಳಲವಶಿಷ್ಟವೆನಿಪವೋ ದೃಷ್ಟಿಹೀನರಿಗೆ ದೃಷ್ಟಿ ನೀಡುವ ದೃಷ್ಟಿ ಮಾತ್ರದಿ ತುಷ್ಟಿಬಡಿಸುವೊರಿಂಥಾ 3
--------------
ಗುರುಜಗನ್ನಾಥದಾಸರು
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ
ಇದನಾ ಬೇಡಿದವನಲ್ಲಾ ಬುಧರಂತರ್ಯಾಮಿ ಲಕುಮಿನಲ್ಲ ಪ ಪಾಪ ಕಾರ್ಯದ ಪಾಪ ವ್ಯಾಪಿಸಿ ದೇಹದಿ ಲೋಪಗೈಸೋದು ಸತ್ಕರ್ಮ ದೀಪ ನೀನಾಗಿರೆ ಉಪದೇಶಿಸೀ ಭವ ಕೂಪದಿಂದೆತ್ತೆಂದು ಬೇಡಿದೆನಲ್ಲದೆ 1 ವಿಷಯದೊಳ್ ಸಂಚರಿಪ ದೋಷಕಾರಿ ಮನ ಆಶೆಯೊಳು ಪೊಕ್ಕು ನಾಶಗೈಪೋದೆನ್ನ ವಿಶೇಷ ಸಾಧನಗಳ ನೀ ಪೋಷಿಸು ಎಂದು ಬೇಡಿದೆನಲ್ಲದೇ 2 ಸುಧೆ ತಂದ ವಿಜಯ ರಾಮಚಂದ್ರವಿಠಲ ನಿನ ಗೆದುರ್ಯಾರೊ ಪೇಳುವರು ಮುದದಿಂದ ಕೃಷ್ಣಾರ್ಯರೊಳು ಬೇಡಿದೆನಲ್ಲದೇ 3
--------------
ವಿಜಯ ರಾಮಚಂದ್ರವಿಠಲ
ಇಂದಿರಾದೇವಿ ಕಾಯೆ ಕರುಣಾಂಬುಧಿಯೆ ಪ ಮಾಯೆ ನಾರಾಯಣನ್ನ ಜಾಯೆ ಸತತ ಜ್ಞಾನ | ವೀಯೆ ಭಕ್ತರ ಪ್ರೀಯೇಅಪ ಕನ್ನಾಮಣಿಯೆ ಕಾಮಿನಿ ಮಂಗಳವಾಣಿ | ಸನ್ನುತೆ ಲೋಕ ಜನನಿ | ನಿನ್ನ ಚರಣಯುಗ್ಮ | ವನ್ನೆ ನಂಬಿದೆ ಸುಪ್ರಸನ್ನೆ ಸರ್ವಜೀವರ | ಭಿನ್ನೆ ಭಾಗ್ಯಸಂಪನ್ನೆ || ಮನ್ನಿಸಿ ಮುದದಿಂದ | ಬಿನ್ನಪ ಲಾಲಿಸು | ಚನ್ನೆ ಚಕ್ರ ಪಾಂಚಜನ್ಯ ಧರಾದೇವಿ 1 ಅತಿದಯವಂತೆ ನೀನೆಂದು ಬೇಗದಿ ಬಂದು | ನುತಿಸಿದೆ ದೀನನಾಗಿಂದೂ | ಪತಿತರೊಳಿಡದಲೆ | ಗತಿಗೆ ಸಮ್ಮೊಗಮಾಡು | ತ್ಪತ್ತಿ ಸ್ಥಿತಿ ಲಯಕರ್ತೆ ಅತುಳ ಶೋಭನಮೂರ್ತೆ | ಪತಿಯಲಿ ಜನಿಸಿದೆ| ಪತಿಗೆ ಸತಿಯಾದೆ | ಪತಿಯ ಸಂಗಡ ಜ | ನಿತಳಾದ ಚರಿತೆ2 ಕುಂಕುವರತ ರಾಜಿತೆ ಧವಳಗೀತೆ | ಪಂಕಜಸದನೆ ಖ್ಯಾತೆ | ಲೆಂಕಾ ವತ್ಸಲೆ ಸರ್ವಾಲಂಕಾರ ಮಾಯೆ ರವಿ | ಸಂಕಾಸೆ ಬಹುಕಾಲ | ಸಂಕಟವ ವಿನಾಶೆ | ಕ | ಳಂಕವಾಗದಂತೆ3
--------------
ವಿಜಯದಾಸ
ಇದಿರುದೋರಿ ಮರೆಯಾದ ಬಗೆುದೇನಯ್ಯಾಸದಯ ವೆಂಕಟದಾಸಾರ್ಯ ವೇಷದಾಳಿ ಗುರುವರ್ಯ ಪತೊಳಲುತಿರೆ ಭವಕೂಪದೊಳು ಮುಳುಗಿ ಮೂಢ ಜನರುಕಳಿವರೆಂತೀಯಾತನೆಯನಳಲುವರೆಂದುತಳೆದು ಕೃಪಾರಸವನ್ನು ತಿಳು' ಭಕುತಿ ವೈರಾಗ್ಯವನುಸುಲಭದಿಂ ಜ್ಞಾನವನರುಪಲೊಲಿದು ಧರೆಯೊಳವತರಿಸಿ 1 ಆ'ರ್ಭಾವಾತಿರೋಭಾವವಾವಗವೂ ಭಕ್ತರ್ಗಾಗಿ ಸ್ವಾಭಾ'ಕವೆಂದು ಪಾರಾಣ ಭಾವವನರಿತೂಸಾವಧಾನಗೈದರೂ ಮನೋ'ಕಾರ ತೊಲಗದೂಕೇವಲಾನಂದ ನಿತ್ಯನಿರಾವಲಂಬ ಸತ್ಯಾತ್ಮಕನೆ 2ಪಲವುಭವದಿಮಾಡ್ದ ಸುಕೃತ ಫಲಿಸಿತೆಂದಿದ್ದೆನೀವರೆಗುತೊಲಗಿ ತಾಪುಣ್ಯವೆಂಬಂತೆ ಚಲಿಸಿ ಚಿತ್ತವೂ ತೊಳಲುತಿದೆ ನಿನ್ನ ಸುಖಮಂಗಳರೂಪು ವಚನಗಳ ನೆನೆದುನೆಲೆಗೊಳಿಪಂದದಿ ಮತಿಯ ತಿಳುಹುವವರಾರೆಮಗಕಟ 3ಹಾನಿ ಧರ್ಮಕ್ಕೊದಗಲು ನಾನುದಿಪೆನೆಂದಭಯವನೀನೊಲಿದಿತ್ತುದಕಾಗಿ ನಾನಾ ರೂಪದೀಜ್ಞಾನ ಮಾರ್ಗವನರು' ಮಾನವರನುದ್ಧರಿಸಿದೆದೀನ ವತ್ಸಲನೆ ುೀಗಲೇನುಕಾರಣ 'ೀ ಸಮಯದಿ 4ಕರದು ಮೂಢರಜ್ಞತೆಯನು ಪರಿದು ಜ್ಞಾನಾನಂದ ಸುಧೆಯಎರದು ಹೊರದೆಯಲೈ ಚಿಕ್ಕನಾಗಪುರದಿವರದ ವಾಸುದೇವಾರ್ಯ ಸದ್ಗುರುವೆ ವೆಂಕಟದಾಸತನುವಧರಿಸಿರೆ ನಂಬಿದ್ದರೆಮ್ಮನತಿ ಪುಣ್ಯವಂತರೆಂಬಂತೆ 5
--------------
ತಿಮ್ಮಪ್ಪದಾಸರು