ಒಟ್ಟು 289 ಕಡೆಗಳಲ್ಲಿ , 58 ದಾಸರು , 248 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಕಂದಗುರು ಸ್ಕಂದಗುರು ಸುರ- ವೃಂದ ಮುನಿಜನರು ವಂದಿಪರುಪ. ಮಂದರಧರ ಗೋವಿಂದನ ಶರಣರ ಸಂದೋಹಕಾವ ವೃಂದಾರಕತರುಅ.ಪ. ತಾಮಸರು ದ್ವೇಷ ಬೇಡುವರು ಕಾಮಿತ ಕೇಳ್ವರು ರಾಜಸರು ಸ್ವಾಮಿ ಶ್ರೀಹರಿಯ ಭಕ್ತಿಜ್ಞಾನವ ಪ್ರೇಮದಿ ಕೇಳ್ವರು ಸಾತ್ವಿಕರು1 ವಿಘ್ನಹರನು ನಿನ್ನಗ್ರಜನು ವಿಬು- ಧಾಗ್ರಣಿಯೆನಿಸುವೆಯೊ ನೀನು ಉಗ್ರ ತ್ರಿಯಂಬಕತಾತನು ಖ್ಯಾತನು ದುರ್ಗಾದೇವಿಯೆ ಜನನಿ ನಿರುಪಮಳು2 ತಾರಕಾಂತಕ ನಿಶ್ಯೋಕ ಲಕ್ಷ್ಮೀ- ನಾರಾಯಣನಿಗೆ ಸಖ ಭೂರಿನಿಗಮಾರ್ಥಸಾರ ಕೋವಿದನೆ ಧೀರನೆ ವೀರ ಮಹಾರಣಶೂರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸಿ ಬೇಡುವೆ ಗುರುವರರ ಪಾದ- ಸರಸಿಜ ಸ್ಮರಿಪರಘುಪರಿಹರಿಸುವರಪ ಇಂದಿರೇಶನ ಮಹಿಮೆ ಬಲ್ಲ ಭಕ್ತ ಸಂದಣಿಯೊಳು ಇವರಿಗೆ ಸಮರಿಲ್ಲ ತಂದೆ ವೆಂಕಟೇಶ ವಿಠ್ಠಲನೆಂದು ಸಂಭ್ರಮ ಪಡುವ ಶಿಷ್ಯರಿಗೆಣೆಯಿಲ್ಲ 1 ಸಿರಿವೆಂಕಟೇಶನ್ನ ಸ್ಮರಿಸಿ ಬಹು ಪರಿಯಿಂದ ಪಾಡಿ ಕೊಂಡಾಡಿ ಸ್ತುತಿಸಿ ಗಿರಿಯ ವೆಂಕಟನನ್ನು ಭಜಿಸಿ ನಮ್ಮ ಉರಗಾದ್ರಿವಾಸ ವಿಠ್ಠಲದಾಸರೆನಿಸಿ2 ಸದ್ವೈಷ್ಣವರ ಸುರಧೇನು ಸರ್ವ ರುದ್ಧಾರವಾಗಲು ಜನಿಸಿದರಿನ್ನು ಬುದ್ಧಿ ಶಿಷ್ಯರಿಗೊರೆದರಿನ್ನು ತಂದೆ ಮುದ್ದು ಮೋಹನ್ನ ವಿಠ್ಠಲದಾಸರನ್ನು 3 ಸುಂದರ ಮೂರ್ತಿಯ ತಂದು ದುರ್ಗ ಮಂದಿರದಲಿ ಸ್ಥಾಪಿಸಿದರೊ ಅಂದು ಛಂದದಿ ಸೇವಿಸಿರೆಂದು ಶಿಷ್ಯ ಮಂಡಲಿಗಳಿಗೆ ಬೋಧಿಸಿದರೆಂತೆಂದು 4 ಕಳವಳ ಪಡುತಿಹೆನಲ್ಲ ಕಾಲ ಕಳೆದು ಹೋಗುತಲಿದೆ ಅರಿವು ಬರಲಿಲ್ಲ ಪರಮ ಭಕ್ತರ ಪರಿಯನೆಲ್ಲ ತಿಳಿವಕಮಲನಾಭ ವಿಠ್ಠಲನಲ್ಲದಿಲ್ಲ 5
--------------
ನಿಡಗುರುಕಿ ಜೀವೂಬಾಯಿ
ಹಚ್ಚಡವಗೆಯ ಬೇಕಮ್ಮಾ | ಬಹುಕೊಳೆ ಮುಚ್ಚಿ ಕೊಂಡಿಹುದು ನೋಡಮ್ಮಾ ಪ. ಸ್ವಚ್ಛವ ಮಾಡುತ ಅಚ್ಯುತನಂಘ್ರಿಗೆ ಬೆಚ್ಚಗೆ ಹೊದಿಸಲು ಇಚ್ಛೆಯ ಮಾಡುತ ಅ.ಪ. ಏಳು ಪದರವಿಹುದೊ | ಬಹು ಕಾಲದಿಂ ಬಾಳುತ ಬಂದಿಹುದೂ ಕಾಲಕಾಲಕೆ ಬದಲಾವಣೆ ಪೊಂದುತ ಬೀಳುತೇಳುತ ಬೆನ್ನು ಬಿಡದಿರುತಿಹುದೊ 1 ಹೊರಗಡೆ ನವ ದುರ್ಗಂಧಾ | ಒಳಗಡೆ ಇನ್ನು ಅರುಹಲಾರದ ಕಲ್ಮಷಾ ಸುರರೆಲ್ಲ ಇದಕಿನ್ನು ಸರಿ ಇಲ್ಲವೆಂಬೋರು ಮರುತಾಂತರ್ಯಾಮಿಗೆ ಸರಿತೋರುವಂದದಿ 2 ಎಪ್ಪತ್ತೆರಡು ಸಾಸಿರಾ | ನೂಲುಗಳಿಂದ ವಪ್ಪಾಗಿ ಹೊಲಿದ ಪಾರ ಕಪ್ಪು ಕೆಂಪು ಬಿಳಿ ವಪ್ಪೆ ಬಣ್ಣಗಳಿಂದ ಸರ್ಪಶಯನ ಸತತ ಸಲಹಿ ಕೊಡುವಂಥ 3 ನಿರ್ಮಲೋದಕವ್ಯಾವುದೇ | ಇದನೊಗೆಯಲು ಸಮ್ಮತ ಶಿಲೆಯಾವುದೇ ಬೊಮ್ಮನೈಯ್ಯನ ಸುಜ್ಞಾನ ಸುಕೊಳದೊಳು ವಮ್ಮನಸಿನೊಳದ್ದಿ ವದ್ದೆ ಮಾಡುತಲಿನ್ನು 4 ವ್ಯಕ್ತಿ ವೈರಾಗ್ಯ ಶಿಲೇ | ಶ್ರೀ ಹರಿಗುರು ಭಕ್ತಿ ಎರಡು ಕೈಗಳೇ ಎತ್ತಿ ವಗೆದು ಎಲ್ಲಾ ಕಶ್ಮಲ ಕಳೆಯುತ ಮತ್ತೆ ಜಾಲಾಡಿ ಹಿಂಡಿಕೆ ಮಾಡಿ ಶುಭ್ರದಿ 5 ಎತ್ತಿ ತಂದು ಕೊಡುವುತಾ | ಮತ್ತೆ ಕೊಳೆ ಹತ್ತದಂದದಿ ನೋಡುತಾ ಉತ್ತಮವಾದ ಮೈದಾನದೊಳಗೆ ಹರಹಿ ನೆತ್ತಿ ಜ್ಯೋತಿಯ ಘನ ದೀಪ್ತಿಯಲ್ಲೊಣಗಿಸು 6 ಶುದ್ಧ ಸಾತ್ವಿಕವರ್ಣದೀ | ಹೊಳೆವಂಥ ಈ ಶುದ್ಧ ಹೊದ್ದಿಕೆ ಸ್ಥಾನದೀ ಮುದ್ದುಕೃಷ್ಣನು ತನ್ನ ಪರಿವಾರ ಸಹಿತದಿ ಪೊದ್ದಿಕೊಂಡಿಪ್ಪ ಬಲು ಭದ್ರವ ಮಾಡುತ 7 ಹಿಂದೆ ಮುಂದಿನ ಭಯವೆಲ್ಲಾ | ತಪ್ಪುವುದಿನ್ನು ಸಂದೇಹಪಡಲು ಸಲ್ಲಾ ತಂದೆ ಮುದ್ದುಮೋಹನ್ನ ಗುರುಗಳು ಪೇಳಿದ ಒಂದೆ ವಾಕ್ಯವ ಆನಂದದಿ ನಂಬುತ 8 ನೂತನ ಹಚ್ಚಡವೂ | ನೂಲುಗಾರ ಜಾತಿಯರರಿಯರಿವೂ ಪ್ರೀತಿಯೋಳ್ ಗೋಪಾಲಕೃಷ್ಣವಿಠ್ಠಲ ಕೊಟ್ಟ ಖ್ಯಾತಿಯೊಳ್ ಬಾಳಿ ಶ್ರೀನಾಥನ್ನ ಪೊಂದುವೋ 9
--------------
ಅಂಬಾಬಾಯಿ
ಹದ್ದೇಹಿ ಭಟರಿಂದ ಯಮನಾಜ್ಞೆಯಂತೆ ಪ ಶರಣಜನನಿಂದಕಗೆ ಪರಮಕುಂಭೀಪಾಕ ಪರಮಭೀಕರಜ್ವಾಲೆ ಕರುಣಶೂನ್ಯರಿಗೆ ಪರನಾರಿಗಳುಕುವಗೆ ಮೂತ್ರ ರಕ್ತಾಮೇಧ್ಯ ಉರುಬಾಧೆ ಕರ್ಮದುರ್ಗಾ ಪರಮ ನೀಚರಿಗೆ 1 ಮಾತಾಪಿತದೂಷಕಗೆ ಪ್ರೇತಕ್ರಿಮಿಕುಂತ ಭಯ ಪಾತಕಗೆ ರಾಕ್ಷಸರ ಭೂತಕ್ರಮಿದೀರ್ಘ ಘಾತಕಗೆ ಉಗ್ರತರ ವ್ಯಾಘ್ರಮುಖ ಭಟ ಶಿಕ್ಷೆ ರೋತು ಮಲತ ಮಜ್ಜ ನೀತಿಬಾಹಿರಗೆ 2 ಕಂಚಿನ್ವಾಯಸ ನರಕ ಕೇಳಾ ಕಪಟರಿಗೆ ಪಂಚಮಹಾಪಾತಕರಿಗುಳಿವಿನ ಉರುನರಕ ಕೂಪ 3 ಕಾದ ಉಕ್ಕಿನ ಪ್ರತಿಮೆ ಕಾಮಾಂಧ ಮೂಢರಿಗೆ ಕಾದು ಉರಿವರಗಿನೂಟ ಕಡುಲೋಭಿಗಳಿಗೆ ಕಾದ ಸೀಸದ ಮಡುವು ಮನೆಮುರುಕ ತುಂಟರಿಗೆ ಕಾದೆಣ್ಣೆಕೊಪ್ಪರಿಗೆ ಕುಟಿಲ ಕುಹಕರಿಗೆ 4 ಪರದ್ರವ್ಯಪಹಾರಿಗೆ ಭೇದಿ ಭೈರವಕೂಪ ನೆರೆನಂಬಿ ಕೊಲ್ಲವಗೆ ಮಸೆದಲಗುಕೊಡಲಿ ಪರರೊಗತನರಿದಗೆ ನರಕ ಚಂದ್ರಾರ್ಕಪರಿ ಗುರು ಹಿರಿಯರ್ಹಳಿದರಿಗೆ ಉರಿಸರಳ ಮಂಚ 5 ಕಾಲಯಮಪಾಶವು ತುಳಸಿದಳ ತುಳಿದವರಿಗೆ ಕಾಲಭೈರವ ಮೃತ್ಯು ಮಾಯಮೋಹಿಗಳಿಗೆ ಕಾಲಕರ ಶೂಲ ಕೊಂಡಿ ಚಾಂಡಾಲಗೆ ಸೂಳೆಯರ ಸೇವಕಗೆ ಕಾಲಯಮದಂಡ 6 ಸಂತ ಸಜ್ಜದಾನಸಂಗರಿಯದಧಮರಿಗೆ ಇಂತು ಎಂಬತ್ತು ಕೋಟಿ ನರಕಯಾತನವು ಅಂತಕಾರಿ ನಿನ್ನಾಜ್ಞೆಯಂತೆ ನಡೆಯುತಿವೆ ಎನ್ನ ಅಂತರದಿ ನಿಂತಿದನು ಗೆಲಿಸು ಶ್ರೀರಾಮ7
--------------
ರಾಮದಾಸರು
ಹರಣ ಪ ಜಗದಿ ಧರ್ಮಾ ಧರ್ಮವೆಂಬ ಅನುವರವು ಹುಟ್ಟುವ ಕಾರಣ ಅಗಣಿತಾಘಘನ ನಿವಾರಣ ಅರಿನಿಕರ ಸಂಹಾರಣ 1 ಸುಗುಣ ದುರ್ಗುಣಗಳ ಸಮೂಹಕೆ ಸುಲಭವಾಗಿಹುದೀ ಕಥಾ ಸುಜನ ಮೇಲುಪಂಕ್ತಿಯೆನಿಸುತಿಹುದು 2 ತಾಮಸರ ನಿರ್ನಾಮ ವೈದಿಸಿ ತಾಮನವಲಿದ ಸುಜನಕೆ ಸ್ವಾಮಿ ಶ್ರೀಗುರುರಾಮ ವಿಠಲನ ಪ್ರೇಮ ಸಂಪಾದಿಸುವುದಕೆ 3
--------------
ಗುರುರಾಮವಿಠಲ
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿಯೇ ಕಾವುದು ಕಾವದು ನೀ ಪ ಕಾವುದು ಕಾವದು ಸಾದರದಿಂದಲಿ ದೇವನೆ ಯನ್ನ ಸದಾ | ಪಾದ ಯುಗ್ಮ ಪದಾ ಅ.ಪ ಸ್ವರ್ಗದ ಸಾಸಿರ ಮಡಿಸುಖ ಭಕ್ತಿಯ ಮಾರ್ಗವ ನರಿಯದೇ | ದುರ್ಗುಣದಲಿ ತನು ಧನ ಸಿರಿಮದದಿಂ ಆರ್ಗೆಯ ಮನ್ನಿಸದೇ ಮಾರ್ಗಣವೆಸನುದರವ ಪೊರೆವುತ ಷಡ್ವರ್ಗರ ಬಲಿವಿಡಿದೇ| ಅರ್ಗಳಿಗೆಯು ನೆನಿಯದೆ ಬಹ ಜನ್ಮದಿ ದುರ್ಗತಿ ಭೋಗಿಸಿದೇ 1 ನಾ ಪೂರ್ವದಿ ಮಾಡಿದ ಬಹು ದುಷ್ಕøತ ಆ ಫಲದಿಂದ ಲೀಗ | ಮಹಾಪಯ ನಿಧಿಯೊಳಗೆ | ಧಡಿಗೆ | ಶ್ರೀಪತಿನಾವಿಕನಾಗಿ ನೀ ದಾಟಿಸಲೀಪಸುಗಳೆಂದನಗೆ | 2 ಕಂದನ ಗುಣದೋಷಂಗಳ ಆರಿಸೆ ತಂದೆಗಿದು ಚಿತವೆ | ನೀ ಬಂದು ಜಗದ್ಧರುವೆ | ಪತಿತರ ವೃಂದ ಉದ್ದರಿಸುವೆ | ಮಂದರ ಗಿರಿಧರ ತಂದೆ ಮಹಿಪತಿ ನಂದನವರ ಪ್ರಭುವೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ಶ್ರೀಗುರು ನಮ್ಮ ಹರಿಯೇ ಸದ್ಗುರು ನಮ್ಮ ಹರಿಯೇ ಮದ್ಗುರು ಪರಾತ್ಪರ ಪೂರ್ಣನು ಧ್ರುವ ಹರಿಯೇ ಗುರುವೆಂದೆನಿಸಿ ಗುರವೆ ಹರಿ ಎಂದೆನಿಸಿ ಕರಸಿಕೊಂಡವನೊಬ್ಬನೆ ಪರಬ್ರಹ್ಮನು ನರಮನುಜಾಗಾಗುವದು ದುರ್ಗತಿಯ 1 ಒಂದು ವಸ್ತುವೆ ತಾನನೇಕ ನಾಮವ ಧರಿಸಿ ಸಂದಿಸಿ ಹ್ಯಾ ನಂದ ರೂಪದೊಳಗೆ ಮಂದಮತಿಗಳ ವಿವರ ಮರ್ಮವನು ಅರಿಯದೆ ದ್ವಂದ್ವ ಭೇದದಿ ಗಾಢಸುತ್ತಿಹರು 2 ಹರಿಯೇ ಶ್ರೀಗುರುವಾಗಿ ಗುರುವೆ ಶ್ರೀಹರಿಯಾಗಿ ತೋರಿದನೇಕೋಮಯವಾಗಿ ಎನಗೆ ತರಳ ಮಹಿಪತಿ ಸಬಾಹ್ಯಾಂತ್ರ ಪರಿಪೂರ್ಣದಲಿ ಗುರುತವಾದನು ಹರಿಯೇ ಸಾಕ್ಷತನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹುಡುಕಿ ನೋಡೆಲೋ ನಿನ್ಯಾರೆಂದು ಧೃಢಚಿತ್ತಕÉ ತಂದು ಪ ಮಲಮೂತ್ರದ ಬೀಡು ಹೊಲೆಯ ಸಂಸಾರದೊಳೀಡು ಗುರುಚರಣಕೆ ಕೂಡು 1 ಏಸು ದುರ್ಗಂಧದೊಳು ನೀ ಬೆಳಿದೆ ಸೂತಕದಿಂದಿಳಿದೆ ಆಶಾಪಾಶದಲಿ ದಿನವನು ಕಳೆದೆ ಮಾಯೆಯೊಳು ಸಳಿದೆ 2 ಅಂತರಾತ್ಮನ ನೆಲೆಯ ಹುಡುಕು ಇದಕ್ಯಾತಕೆ ತುಡುಕು ಶಾಂತ ಶ್ರೀ ವಿಮಲಾನಂದನ ಹುಡುಕು ಅಜ್ಞಾನವ ಬಿಡುಕು 3
--------------
ಭಟಕಳ ಅಪ್ಪಯ್ಯ
ಹೊಂದಿ ಸುಖಿಸು ಹರಿಯ ಪಾದಾ ಧ್ರುವ ನಾನಾ ಪುಣ್ಯ ನಿದಾನದಿ ಧರೆಯೊಳು | ಮಾನವ ಜನುಮಕ ನೀನೀಗ ಬಂದು | ಪರಿ ತಾ ನಿಜವರಿಯದೆ | ಜ್ಞಾನ ಶೂನ್ಯನಾಗೇ-ನಿಹುದಣ್ಣಾ 1 ಹಿಡಿವರೇ ಭ್ರಾಂತಿಯ ಜಡಿವರೆ ಮತಿಯ | ನುಡಿವರೇ ಪುಸಿಯನು ಬಿಡುವರೆ ಸತ್ಯವ | ಇಡುವರೆ ದುರ್ಗಣ ಸಿಡುವರೆ ಬೋಧಕ | ಕೆಡುವರೆ ಮರವಿಲಿ ಬಿಡುವರೆ ವ್ಯರ್ಥಾ 2 ಮೂರು ದಿನದ ಸಂಸಾರದೊಳಗ | ಕಂ | ಸಾರಿಯ ಭಕ್ತಿಯ ಸೇರಿ | ಸಾರ ಸ್ವಹಿತ ಸಹ | ಕಾರಿ ಮಹಿಪತಿ ಸಾರಿದ ಬೋಧಾ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೋಗಿ ಬರತೇವ ಸಾಗರನ ಮಗಳೆ ಹೋಗಿ ಬರತೇವ ಪ. ರುಕ್ಮಿಣಿದೇವಿ ನಿನ್ನ ದುರ್ಗೆರೂಪವ ಕಂಡು ಅಬ್ಬರಿಸುತಾರೆ ಜನರೆಲ್ಲ ಅಬ್ಬರಿಸುತಾರೆ ಜನರೆಲ್ಲ ಮುಯ್ಯಕ್ಕೆನಿರ್ಭಯದಿಂದ ಬರಬೇಕು ಸಖಿಯೆ 1 ಹಿಂಡು ಹಿಂಡು ಕರೆಸಿ ಕುಣಿಸುತ ಖ್ಯಾತಿಲೆ ಮುಯ್ಯ ತಿರುಗಿಸೆ ಸಖಿಯೆ2 ಹಿಂಡು ಕರೆಸವ್ವ ಸಖಿಯೆ 3 ರಂಭೆ ಸತ್ಯಭಾವೆ ಸಂಭ್ರಮದಿ ಬರುವಾಗ ಒಂಭತ್ತು ವಾದ್ಯ ನಿನಗೆಲ್ಲೆಒಂಭತ್ತು ವಾದ್ಯ ನಿನಗೆಲ್ಲೆ ಮುಯ್ಯಕ್ಕೆಡೊಂಬರ ಡೊಳ್ಳು ಹೊಯಿಸವ್ವ ಸಖಿಯೆ 4 ಹಿಂಡು ಬರಲೆವ್ವ ಸಖಿಯೆ 5 ಆವ್ವ ರುಕ್ಮಿಣಿ ನಿನಗೆ ದಿವ್ಯವಾಹನ ವೆಲ್ಲಿಸಿಂಹ ಶಾರ್ದೂಲ ಕರೆಸವ್ವಸಿಂಹ ಶಾರ್ದೂಲ ಕರೆಸಿ ಏರಿಕೊಂಡುಬಾವಾನ ಹಾಂಗೆ ಬಾರವ್ವ ಸಖಿಯೆ 6 ಕೋಗಿ¯ ಸ್ವರದಂತೆ ರಾಗದಿ ರಾಮೇಶನ ಪಾಡಿ ಕೊಂಡಾಡಿ ಅರಿತಿಲ್ಲಪಾಡಿ ಕೊಂಡಾಡಿ ಅರಿತಿಲ್ಲ ಒಡಗೂಡಿ ಕಾಗೆ ಕೂಗಾಡಿ ಬರಲೆವ್ವ ಸಖಿಯೆ7
--------------
ಗಲಗಲಿಅವ್ವನವರು
ಹ್ಯಾಗೆ ಕಾಂಬೆನು ಹಂಸಯೋಗಗಮ್ಯನೆ ನಿನ್ನ ವಾಗೀಶಪಿತ ದಯವಾಗೋ ಮೋಹನ ಪ. ಮನವು ನಿನ್ನಯ ಸೇವೆಗನುವಾಗಿ ನಿಲದು ಸ- ಜ್ಜನ ಸಂಗ ಸಲ್ಲಾಪವನು ಮಾಡಗೊಡದು ಘನಮೋಹಕೊಳಗಾದ ತನುವ ಪಿಡಿವುದು ಶ್ರೀ- ವನಿತೆಯರಸ ನಿನ್ನ ನೆನವೆಂತು ಬಹುದೊ 1 ಹಂಚಿ ದುರ್ವಿಷಯಕ್ಕೆ ವಂಚನೆಗೊಳಿಸಿ ಪ್ರಪಂಚದೋಳಿರಿಸಿ ಪಂಚಬಾಣನ ಶುಕಚುಂಚುವೇದದಿ ತ್ವಂಚ ಹಂಚಗೊಳಿಸಿ ಮೋಹ ಮಿಂಚಿಕೊಂಡಿಹುದೊ 2 ದೀರ್ಘಾದಿ ಸಹಿತಾದಿ ವರ್ಗಗಳನು ಗೆಲುವ ಮಾರ್ಗ ಕಾಣದೆ ದುಸ್ಸಂಸರ್ಗದಿ ಸಿಲುಕಿ ಭರ್ಗ ವಂದ್ಯನೆ ಗುಣಸರ್ಗದ ಬಲೆಯಿಂದ ನಿರ್ಗಮಗೊಂಡಪವರ್ಗವೆಂತಹುದೊ 3 ದಿನದಿನದೊಳಗಾಹತನುವ ನೋಡಲು ಮುಂದಿ ನನುಭವವನು ಕಾಂಬದನು ನಾನೇನರಿಯೆ ಜನರ ರಕ್ಷಾದಿಕರ್ತನೆ ನೀನೆ ಬಲ್ಲಿ ಮುಂ- ದಿನ ಕಾರ್ಯವಹದೆಂತೊ ವನಜಲೋಚನನೆ 4 ಸತಿ ಸುತಾದಿಗಳೆಲ್ಲ ಹಿತರೆಂದು ಗ್ರಹಿಸುವ ಮತಿಹೀನ ಜನಕೆ ದುರ್ಗತಿಯು ತಪ್ಪುವದೆ ಅತುಳ ಮಹಿಮ ಭಕ್ತಹಿತನಾದ ವೆಂಕಟ ಪತಿ ನೀನೆ ಎನಗೆ ಸದ್ಗತಿ ತೋರೊ ಹರಿಯೆ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಬಪ್ಪನಾಡಿನ ದೇವಿಯನ್ನು ಕುರಿತು)ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆ ಪ.ದಯಮಾಡೆ ಕೇವಲ ಭಯವಿಹ್ವಲನಲ್ಲಿದಯಸಾಗರೆ ಸೌಭಾಗ್ಯಸಂಪದವನ್ನು ಅ.ಪ.ವೇದಾಂತವೇದ್ಯೆ ನಿಖಿಳಜಗದಾದಿವಿನೋದೆಭೂಧರಾತ್ಮಜೆ ಸರ್ವಾಧಾರಶಕ್ತಿ ಕಲಾಧರೆಮಧುರಬಿಂಬಾಧರೆ ನಿನ್ನಯಪಾದವನು ಮರೆಹೊಕ್ಕೆ ಮನಸಿನ ಭೇದವನುಪರಿಹರಿಸಿ ಸರ್ವಾಪ-ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆಗಂಭೀರೆ ಮೇರು ನಿತಂಬೆಸಿಂಹಮಧ್ಯೆಲಂಬೋದರಪರಿರಂಭಕರಾಂಬುಜೆಕುಂಭಿಕುಂಭಪಯೋಜೆ ಶೋಭಿಪ ಕಂಬುಕಂಠಿಮುಖೇಂದುಪದ್ಮ ದ-ಳಾಂಬಕಿ ಎನಗಿಂಬುದೋರೆರೋಲಂಬಕುಂತಳೆಶುಂಭಮರ್ದಿನಿ2ಸಿಂಧೂರನಯನೆ ನಿಖಿಲಾಮರವಂದಿತಚರಣೆಸುಂದರಾಂಗಿ ಸುಮಗಂಧಿವಿಬುಧಮುನಿವೃಂದಸೇವಿತೆನಿತ್ಯಾನಂದಪ್ರಕಾಶಿನಿಅಂಧಕಾಸುರವೈರಿಹೃದಯಾನಂದಪಾರಾವಾರಪೂರ್ಣಮಿ-ಚಂದ್ರೆ ಸದ್ಗುಣಸಾಂದ್ರೆಸುರಥನರೇಂದ್ರವರದೆ ಮೃಗೇಂದ್ರವಾಹಿನಿ 3ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆನಿಜದಿ ನಿನ್ನಯ ಪಾದಂಬುಜವ ನಂಬಿದೆ ತ್ರಿಜಗವಂದಿತೆಮಹಾಗಜಗೌರಿ ಶಂಕರಿತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ-ವ್ರಜವಿದಾರಿ ಮುನೀಂದ್ರ ಮನನೀರಜದಿವಾಕರೆ ಮಾನಿತೋದ್ಧರೆ 4ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರಸರ್ಪಶಯನ ಲಕ್ಷ್ಮೀನಾರಾಯಣಪ್ರೀತಿಯಪ್ಪಂತೆ ದಯೆ ಗೈಯೆಜಗದಾದಿಮಾಯೆಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ-ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಬಪ್ಪನಾಡಿನ ಪಂಚದುರ್ಗೆ)ಮಂಗಲಂ ಶ್ರೀಪಂಚದುರ್ಗೆಗೆ ಜಯಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆ ಪ.ಶಂಖಚಕ್ರಶೂಲಾಂಕುಶಪಾಣಿಗೆಶಂಕರನಂಕಾಲಂಕಾರಿಗೆಕುಂಕುಮಬೊಟ್ಟಕಸ್ತೂರಿ ಲಲಾಟೆಗೆಪಂಕಜಗಂಧಿ ಶ್ರೀಪಾರ್ವತಿಗೆ 1ಕೋಕಿಲಗಾನೆಗೆ ಕೋಕಪಯೋಜೆಗೆಶ್ರೀಕಂಠನರ್ಧಾಂಗಿ ಶ್ರೀಗೌರಿಗೆಏಕದಂತನ ಜನನಿಗೆ ಜಗದಂಬೆಗೆಲೋಕನಾಯಕಿ ಶ್ರೀಮಹಾಕಾಳಿಗೆ 2ಕಂಜದಳಾಕ್ಷಿಗೆ ಕಲಧೌತಗಾತ್ರೆಗೆಕುಂಜರಗಮನೆಕಂಧರಜಾತೆಗೆಮಂಜೀರನೂಪುರರಣಿತಪದಾಬ್ಜೆಗೆನಂಜುಂಡನ ಮನಮಂಜುಳೆಗೆ 3ಅಂಗಜರೂಪೆಗೆ ಮಂಗಲದಾತೆಗೆಭೃಂಗಕುಂತಳೆ ಸರ್ವಮಂಗಲೆಗೆಬಂಗಾರಮಕುಟೋತ್ತಮಾಂಗದಿ ಧರಿಸಿದಸಂಗೀತಲೋಲೆಗೆ ಶರ್ವಾಣಿಗೆ 4ರೂಢಿಗಧಿಕ ಬಪ್ಪನಾಡಿಗೊಡತಿಯಾಗಿಮೂಡಿತೋರಿದ ಶ್ರೀಮುಕಾಂಬಿಕೆಗೆಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆಬೇಡಿದಿಷ್ಟವನೀವ ಸರ್ವೇಶೆಗೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಶ್ರೀಹರಿಯ ಷಣ್ಮಹಿಷಿಯರ ಸ್ತುತಿ)ಹರಿಮಾನಿನಿಯರಾರು ಮಂದಿಸುಪ್ರವೀಣೆ ಲಕ್ಷಣೆ ಕಾಳಿಂದಿಜಾಣೆ ಸಖಿವಿಂದೆ ಜಾಂಬವತಿಯರಿಗೆನಾ ನಮಿಸುವೆ ಮನದೊಳಗೆ 1ತಮ್ಮ ಪತಿಯರಿಂದೊಡಗೂಡಿಮನ್ಮಾನಸಮಂ ಮನೆಮಾಡಿನಿರ್ಮಲ ಬುದ್ಧಿಯ ಪ್ರೇರೇಪಿಸಲಿಸುಮ್ಮಾನಪಾಲಿಸಲಿ2ಭಕ್ತಿ ವಿರಕ್ತಿ ಜ್ಞಾನ ಮ-ಚ್ಚಿತ್ತದೊಳಿರಲಿ ಧ್ಯಾನಕರ್ತಲಕ್ಷ್ಮೀನಾರಾಯಣನ ನಾಮ-ಕೀರ್ತನೆಗೈವುದೆ ನೇಮ 3ದುರ್ಗಾದೇವಿಯ ಸ್ತುತಿ
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ