ಒಟ್ಟು 1160 ಕಡೆಗಳಲ್ಲಿ , 106 ದಾಸರು , 924 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸೆ ಕೋಮಲ ಗಾತ್ರೆ ಕಂಜಜಮಾತೆ ಪ ಸುರರು ನಲಿಯುತ ಶಿರವ ಬಾಗಿ ಕರವ ಮುಗಿಯಲು ಪರಮ ಹರುಷದಿ ವರವ ಕೊಡುತಿಹ ಹರಿಯ ಮಡದಿಯೆ ಅ.ಪ. ಕ್ಷೀರವಾರಿಧಿ ತನಯೆ ನಿನ್ನಯ ದೇಹ ಬೀರುತಿದೆ ವಿದ್ಯುಛ್ಛವಿಯೆ ಶ್ರೀ ಹರಿಜಾಯೆ ವರ ಸುದರ್ಶನ ಶಂಖಹಸ್ತದಿ ಮೆರೆಯುತಿರೆ ಭಕುತರನು ಸಲಹಲು ಕರವೀರಪುರ ನಿಲಯದಿ ನೆಲಸಿ ವರದಭಯ ಹಸ್ತವ ತೋರುತಿರ್ಪೆ 1 ಮನಸಿಜಕೋಟಿ ಸುರೂಪಿಣಿ ಮೃದುಮಧುರ ವಾಣಿ ಧನಕನಕಾದಿಗಳಭಿಮಾನಿ ಕೈವಲ್ಯದಾಯಿನಿ ವನಜಸಂಭವೆ ನಿನ್ನ ಒಂದರೆ- ಕ್ಷಣವು ಬಿಡದಲೆ ತನ್ನ ಉರದೊಳು ದನುಜಮರ್ಧನ ಧರಿಸಿಕೊಂಡು ತನುವು ಮನವನು ನಿನಗೆ ತೆತ್ತಿಹ 2 ರಂಗೇಶವಿಠಲನ ರಾಣಿ ಪಂಕಜಪಾಣಿ ಡಿಂಗರೀಕರ ಪೊರೆವ ಕರುಣಿ ಕಾಳಾಹಿವೇಣಿ ಮಂಗಳಾಂಗಿಯೆ ಖೂಳ ಕುಜನರ ಸಂಗಬಿಡಿಸುತ ತವ ಪದ ಸರೋ ಜಂಗಳಲಿ ನಾ ನಲಿದು ವಿಹರಿಪಭೃಂಗನಾಗುವ ಪರಿಯ ತೋರೆ 3
--------------
ರಂಗೇಶವಿಠಲದಾಸರು
ಕರುಣಿಸೊ ಶ್ರೀ ಗುರುರಾಜ ಬರದ್ಯಾಕೆ ಎನ್ನೊಳು ದಯ ಪ ದಯಮಾಡೊ ಶ್ರೀ ಗುರುರಾಜ ಹಯವದನನಿಗತಿ ಪ್ರಿಯ ಅ.ಪ ಒಲಿಸಾದೆ ವಿದ್ಯೆಗಳನ್ನು ಬಾಲತನದಿ ಬಹುಕಾಲ ಕಳೆದೆ ಕುಲೀಲೆಗಳಲ್ಲಿ ಛಲವ್ಯಾಕೆ ಎನ್ನೊಳು ಬಲ್ಲಿ 1 ಜ್ಞಾನರಹಿತ ಪ್ರಾಯದಿ ಮಾನಾಪೇಕ್ಷೆಯನೆ ಮಾಡಿ ಮೌನಿ ವೇಷವನೆ ಧರಿಸಿ ಹೀನಾಚರಣೆಯಲ್ಲಿರುವೆ 2 ಪತಿತಾಗ್ರಣಿಯು ನಾ ಬಲ್ಲಿ ಪತಿತಪಾವನ ನೀ ಬಲ್ಲೆ ಗತಿಪದ ಮತಿಯನಿತ್ತು ರತಿಪತಿಪಿತನ ತೋರಿ3 ಬಲ್ಲವರನು ರಕ್ಷಿಪುದು ಅಲ್ಲ ಬಿರುದು ಘನವಾದ್ದು ಅಲ್ಪನ ಪೊರೆಯಲು ನಿನಗೆ ಒಳ್ಳೆ ಕೀರುತಿ ಬರುವುದು 4 ಸರ್ವಜ್ಞ ನಿನಗೆ ನಾನೆಂತೋ ಉರ್ವೀಭಾರನು ನಾ ಪೇಳ್ವೆ ಪರ್ವ ಪಂಚಕಗಳ ಕಳೆ ಶ್ರೀ ನರಹರಿಯನೆ ಪೊಂದಿಸಿ 5
--------------
ಪ್ರದ್ಯುಮ್ನತೀರ್ಥರು
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆತಾರೆಲೆ ರಂಗನ ಪ ಕರೆದು ತಾರೆಲೆ ಕರುಣನಿಧಿಯನು ಕರೆದು ತಾ ಕಾಲಲ್ಲಿ ಗಂಗೆಯ ಸುರಿದ ಬಾಲ ಬ್ರಹ್ಮಚಾರಿಯ ಅ.ಪ ಮತ್ಸ್ಯಾವತಾರನನು ಮುದದಿ ಮಂದರಗಿರಿಯನೆತ್ತಿದ ಸುರರಿಗಮೃತವನಿತ್ತ ಕೂರ್ಮನ ಧರೆಯನುದ್ಧರಿಸಿದ ವರಾಹನ ತರುಣಿ ನೀನೀಗ ತಂದು ತೋರೆಲೆ 1 ಭಕ್ತ ನಿಧಿಯಾದ ನರಸಿಂಹನ ಧರೆಯ ನೀರಡಿ ಅಳೆದ ವಾಮನ ದೊರೆಯ ನಾನಿನ್ನೆಂದು ಕಾಂಬೆನೆ ಭರದಿ ಭಾರ್ಗವನಾದ ರಾಮನ ತರುಣಿ ತ್ವರಿತದಿ ತಂದು ತೋರೆಲೆ2 ದಧಿಘೃತ ಮೆದ್ದವನ ದುರುಳ ತ್ರಿಪುರರ ಗೆಲಿದ ಬೌದ್ಧನ ಸುದತಿ ನೀನೀಗ ತಂದು ತೋರೆಲೆ 3
--------------
ವ್ಯಾಸರಾಯರು
ಕಲಿರಾಯ ಬಂದಿಹನು ಕಾಣಿಕೆಯ ಪಿಡಿದು ಚೆಲುವಿನಿಂದನುಸರಿಸಿ ಕುಲವನುದ್ಧರಿಸಿ ಪ ಮೂರು ಯುಗದೊಳು ತಾನು ಸೇರಿಕೊಂಡನು ವನವ ಚೋರರಾಯರ ಸಂಗ ಬೇಡವೆನುತ ವೀರನಾಗಿಯೆ ಬಂದ ನಾಲ್ಕನೆಯ ಯುಗದೊಳಗೆ ಸಾರಿ ಬನ್ನಿರೊ ನಮ್ಮ ದೊರೆಯ ಮನ್ನಿಸಲು 1 ಮದಮುಖರ ಕಾಣುತಲೆ ಮುದದಿಂದ ಮನ್ನಿಸುತ ಕದನಕರ್ಕಶರನ್ನು ಕಾಮಿಸುವನು ಒದಗಿದನ್ಯಾಯಗಳನೊಲಿಸಿಕೊಂಬನು ತಾನು ಬೆದರಿಕೆಯು ಬೇಡ ನೀವಿದಿರುಗೊಳ ಬನ್ನಿ 2 ಸತ್ಯವೆಂಬುದನೆಲ್ಲ ಹತ್ತಿಸಿದ ಬೆಟ್ಟವನು ಮಿಥ್ಯ ನಿರ್ಮಳಕೆಲ್ಲ ಕುತ್ತಿಗೆಗೆ ಬಂತು ಒತ್ತಿಯಾಳುವ ಧರ್ಮ ಸತ್ತು ಹೋದನು ಹಿಂದೆ ಮೃತ್ಯು ಭಯ ನಮಗಿಲ್ಲ ಹತ್ತಿರಕೆ ಬನ್ನಿ 3 ತಪ್ಪಿ ಹೋಯಿತು ಶಾಸ್ತ್ರ ತಪ್ಪಾಯ್ತು ಪೌರಾಣ ಮುಪ್ಪು ಬಂದುದು ವೇದ ಕಪ್ಪಾದನಗ್ನಿ ತುಪ್ಪನ್ನ ಬೇಡವಗೆ ಇಪ್ಪ ಭಯಗಳು ಹೋಯ್ತು ಒಪ್ಪಿ ಕಾಣಿಸಿಕೊಂಡು ಸುಖಿಯಪ್ಪ ಬನ್ನಿ 4 ಸ್ನಾನವೆಂಬುದು ಯೆಲ್ಲ ಮಾನಿನಿಯ ಅಡಿಗೆಯೊಳು ಮೌನ ಜಪಗಳನೆಲ್ಲ ಕೃಷಿಕೊಂಡನು ಹಾನಿಯಾದರು ಯಜ್ಞಹೀನರಾದರು ಪಿತೃಗ ಳೇನ ಮಾಡುವರಿವರು ಅನುಮಾನ ಬೇಡೆನುತ 5 ದಯಯೆನಿಪವನು ಹೋಗಿ ಕೊಯ್ಸಿಕೊಂಡನು ಕೊರಳ ಭಯವಿಲ್ಲ ಹಿರಿಯರೂ ವ್ಯಯವ ಸೇರಿದರು ನಯನೀತಿ ಹೇಳುತಿಹ ಗುರುವಿನೊಳು ಕಣ್ಣಿಲ ್ಲ ಜಯವಾಯ್ತು ದೇಶದೊಳು ಹೊಯ್ಸಿ ಡಂಗುರುವ 6 ಶಿವನು ದುರ್ಗವ ಬಲಿದ ಜವನು ದಂಡವನಿಟ್ಟ ಬವಣೆಬಡುವನು ಕಮಲಭವನು ತನ್ನೊಳಗೆ ಹವಣನರಿಯದೆ ವಿಷ್ಣು ತವಕಿಸುವ ಮನದೊಳಗೆ ಕವಲು ಮನ ಬೇಡಿರಲು ಬಹುದು ಇವನೊಳಗೆ 7 ಪತಿಯ ಮರೆತಳು ಸತಿಯು ಸುತ ಮತಿಯ ತಪ್ಪಿದನು ಯತಿ ಸತತ ಮನದೊಳಗೆ ಖತಿಗೊಂಬನು ಚತುರವರ್ಣಾಶ್ರಮವ ಜೊತೆಯಾಗಿ ನಡೆಸುತಿಹ ಮತಿಯುತನು ದೃಢವೆಂದು ಕಾಯವನುಸರಿಸಿ8 ತಾಯಿ ತಂದೆಯ ಕೊಂದು ಜೀವ ಹಾನಿಯ ಮಾಡಿ ಬಾಯ ಹೊಯ್ದರು ಕೇಳ ಬಡವರನ್ನು ಮಾಯವಾದಿಯ ಮಾತು ಕೂಡಿಸುವ ಜೀವವನು ರಾಯರಾಯರ ಮುಂದೆ ನಡೆಸುತ್ತಲಿಹರು 9 ಆಡಿಗಾರರ ತಂದು ನಾಡ ಊಳಿಗಕಿಡುವ ನೋಡಿದನ್ಯಾಯ ಮಾತುಗಳ ಹಿಡಿತರುವನು ಕೂಡಿಸುವ ಜೀವವನು ಎಳೆನೀರು ಸಕ್ಕರೆಯು ಬೇಡಿದಿಷ್ಟಾರ್ಥದೊಳು ನೋಡಿ ನಡೆಸುವನು 10 ಕೆಟ್ಟನೀತಿಯ ಒಳಗೆಯಿಟ್ಟುಕೊಂಡರೆ ನಿಮ್ಮ ಗಟ್ಟಿಬಡಿಸುವ ದೊರೆಯು ದೃಷ್ಟಿಯಲಿ ನೋಡ ಕಷ್ಟವಿಲ್ಲದೆ ಸುಖದಿ ಹೊಟ್ಟೆಯನು ಹೊರಕೊಂಡು ಸೃಷ್ಟಿಯೊಳು ವರಪತಿಯ ಮುಟ್ಟಿ ಸೇವಿಪುದು 11 ಕಾಲದರಸಿನ ನೋಡಿ ಮೂಲ ಪಡಕೊಂಬುವರು ಆಲಸ್ಯವನು ಬಿಟ್ಟು ಸೇವಿಸುವುದು ಶಾಲು ಸಕಲಾಭರಣ ತೋಲಾಗಿ ಬರುತಿಹುದು ಜಾಲರೂಪವದಾಗಿ ಮನಕೆ ತೋರುವುದು 12 ತಾಯಿ ತಂಗಿಯರನ್ನು ಮೋಹಿಸಲು ದೊರೆರಾಯ ಬಾಯಹೊಯಿಯೆಂದೆನುತ ನೋಯನುಡಿ ಪೇಳ ಆಯವಾಗಿಹ ಪುರುಷ ಸಾಯಲಾಕ್ಷಣ ಬಂದು ಕಾಯವನು ಬಳಸುವನು ಮೋಹವನು ತೋರಿ13 ಹೀಗೆಂದು ಚರನೋರ್ವ ಕೂಗಿ ಕರೆಯಲು ಬಂದು ಅಗಲೇ ಎದ್ದು ಇದಿರಾಗಿ ಪರಿಜನವು ಬೇಗದೊಳಗನುಸರಿಸಿ ಭೋಗವನು ಕೈಕೊಂಡು ರಾಗದೊಳಗಿದ್ದರಾ ಭವಜಲದ ನಡುವೆ 14 ಹೇಡಿಗಳು ಬರಬೇಡಿ ಮೂಡ ಗುಡ್ಡೆಯ ಸೇರಿ ಕಾಡಫಲವನು ಮೆದ್ದು ಕೋಡಗಲ್ಲಿನೊಳು ಆಡುತಿಹ ವರಾಹತಿಮ್ಮಪ್ಪನ್ಹತ್ತಿರದಿ ಬೇಡಿಕೊಳ್ಳಿರೊ ಎನುತ ನೋಡಿ ನಗುತಿಹರು 15
--------------
ವರಹತಿಮ್ಮಪ್ಪ
ಕಾಂತೆಯರುತುಂಬಿದ ನಗರಿಯಲಿ ಎಂಥ ಸೊಗಸಮ್ಮ ಬಾಹೋದೆಂಥ ಸೊಗಸಮ್ಮ ಪ. ಗಂಧ ಕಸ್ತೂರಿ ಧರಿಸಿರಾಯರು ಪರಿಮಳ ತುಂಬಿದ ನಗರಿಯಲಿ ಎನುತ 1 ರಾಶಿ ಮಲ್ಲಿಗೆ ಸಂಪಿಗೆ ಮುಡಿದು ಸೂಸಿದ ನಗರಿಯಲಿ ಎನುತ 2 ಮಿತಿ ಇಲ್ಲದೆ ಹಗಲು ಬತ್ತಿ ಶತ ಕೋಟಿ ದೀವಟಿಗಿ ದೀಪ ಪ್ರತಿಯಿಲ್ಲ ತಾಯಿ 3 ಹಾದಿ ಬೀದಿ ದ್ವಾರ ಜಗಲಿ ಸಾದಿನಥಳಿ ಕೊಟ್ಟಾವಮ್ಮ ಮಾಧವ ಬರಲಿಕ್ಕೆ ಎನುತ 4 ವಿಸ್ತರಿಸಿದ ರಂಗವಲ್ಲಿ ಜತ್ತಾಗಿ ತೋರುವವು ಎನುತ 5 ಕೇರಿ ಕೇರಿ ನಾರಿಯರೆಲ್ಲ ಸೀರೆ ಕುಪ್ಪಸ ವಸ್ತಗಳಿಟ್ಟು ವೀರರ ನೋಡಲು ಎನುತ 6 ಎತ್ತೆತ್ತ ನೋಡಿದರೂ ಜನರು ಮುತ್ತುರತ್ನದ ವಸ್ತಗಳಿಟ್ಟು ಹತ್ತಿಗೋಪುರ ಅಟ್ಟಾಲಗಳ ಧಿಟ್ಟೆಯರು ನಿಂತಾರೆ ಎನುತ 7 ಝಲ್ಲೆ ಮುತ್ತಿನ ವಸ್ತಗಳಿಟ್ಟು ಅಲ್ಲೆಲ್ಲೆ ಉಪ್ಪರಿಗೆ ಏರಿ ಚಲ್ವರ ನೋಡಲು ಎನುತ 8 ಮಲ್ಲಿಗೆ ಸಂಪಿಗೆ ಫಲಗಳ ಹಿಡಿದು ಅಲ್ಲೇ ನಿಂತಾರೆ ಎನುತ 9 ಭೆಟ್ಟಿಯ ಸೌಭಾಗ್ಯ ನೋಡಿ ಎಷ್ಟು ಹರುಷ ಬಟ್ಟೇವೆಂದು ಧಿಟ್ಟೆಯರು ನಿಂತಾರೆ ಬೀದಿಲಿ10 ಶ್ರೀ ಲೋಲ ರಾಮೇಶನ ಭಕ್ತರು ವಾಲಗೈಸೋರಮ್ಮ ಎನುತ 11
--------------
ಗಲಗಲಿಅವ್ವನವರು
ಕಾಮನ ಪಿತ ಕೃಷ್ಣ ಕಾಮಿನಿಯಾದನು ಕಾಮನ ಪಿತ ಕೃಷ್ಣ ಕಾಮಿನಿ ಆಗುವೊ ಕಾರಣ ಕೇಳಿರಿ ಕಾಮಿಸಿ ಶ್ರೀಹರಿ ಆ ಮಹಾಸುರರಿಗೆ ಸುಧೆಯನ್ಹಂಚುಣಿಸಲು ಶ್ರೀ ಮಾಯಾಪತಿಯು ತಾ ಸ್ತ್ರೀಯಾದ ಚೆಲುವಿಕೆ ಪ ರುಳಿ ಲುಲ್ಲು ಗೆಜ್ಜೆ ಪೈಜಣ ಪಾಗಡವನಿಟ್ಟು ಚರಣದಿ ಕಾಲುಂಗರ ಪಿಲ್ಯ ಮೆಂಟಿಕೆ ಝಣ ಝಣ ನಾದ ಕಾಳಿಯ ಫಣ ತುಳಿದಂಥ ಖಳರ ಮರ್ದನ ದಿವ್ಯ ತರುಣಿ ತಾನಾದನು 1 ಸೆರಗು ನಿರಿಯು ಜರತಾರಿ ಪೀತಾಂಬರ ಬಿಡಿ ಮುತ್ತಿನುಡಿಗಂಟೆ ನಡುವಿನ್ವೊಡ್ಯಾಣ ಸಡಗರದಿಂದ್ವೊಪ್ಪೊ ತಾಳಿ ಪದಕವಿಟ್ಟು ಮೃಡನ ಪ್ರಿಯನು ಮುದ್ದು ಮಡದಿ ತಾನಾದನು 2 ಕಂಚುಕ ತೋಳಿನಲ್ವಂಕಿ ಬÁಜುಬಂದು ಮಿಂಚಿನಂದದಿ ನಲಿದಾಡುತ ಗೊಂಡ್ಯವು ಕಂಕಣ ತೋಡ್ಯ ವಜ್ರದ್ವಾರ್ಯ ಹರಡಿಯು ಪಂಚ ಬೆರಳಿನಲ್ಲುಂಗುರವನಿಟ್ಟು ಸೊಬಗಲಿ 3 ಚಿಂತಾಕು ಸರಿಗೆ ಚಿನ್ನದ ಗುಂಡು ಹವಳವು ಕೆಂಪು ಏಕಾವಳಿ ಮಲಕು ತಾಯಿತ ಮುತ್ತು ಮಿಂಚುವೋ ಪದಕ ಮುತ್ತಿನ ಕಟ್ಟಾಣಿಯು ಪಂಚರತ್ನದ ಹಾರ ಪರಮಾತ್ಮಗಲೆಯುತ4 ಉಂಗುರ ಕೂದಲು ಶೃಂಗಾರ ಕ್ಯಾದಿಗೆ ಚಂದ್ರ ಚೌರಿ ಜಡೆಬಂಗಾರ ರಾಗಟೆ ಮುಂದೆ ಮುತ್ತಿನದಂಡೆ ಮುಡಿಯಲ್ಲೆ ಒಪ್ಪಿದ ದುಂಡು ಮಲ್ಲಿಗೆ ದÉೂೀಷದೂರನಿಗಲೆವುತ 5 ವಾಲೆ ಬುಗುಡಿ ಬಾಳ್ಯ ಚಳತುಂಬು ಚಂದ್ರ ಮುರುವು ಚಿನ್ನದ ಕಡ್ಡಿ ಕಿವಿಯಲ್ಲಿ ಕುಂದಣ ಕುಸುರು ವಜ್ರಗಳು ಕೆಂಪ್ಹೊಳೆವಂಥ ದುಂಡು ಮುತ್ತಿನ ಮುಕುರ್ಯವ ಮೂಗಿನಲ್ಲಿಟ್ಟು 6 ಅಚ್ಚ ಮುತ್ತಿನ ದಂಡೆ ಕುಚ್ಚು ತೊಂಡಿಲುಗಳು ಹಚ್ಚೆಯ ಬೊಟ್ಟು ಕಸ್ತೂರಿ ಕುಂಕುಮನಿಟ್ಟು ಪಚ್ಚೆ ಮಾಣಿಕ್ಯದರಳೆಲೆ ಚಂದ್ರ ಸೂರ್ಯರು ನಿತ್ಯ ತೃಪ್ತನು ನೀಲವರ್ಣದಂತ್ಹೊಳೆಯುತ 7 ಆ ಮಹಾವೈಕುಂಠಪುರದರಸಾದ ಈ ಮಹಾ ರಜತ- ಪೀಠ ಪುರದಲಿ ಬಂದು ಪ್ರೇಮದಿ ನಿಂತು ನೋಡುತ ಬಂದ ಜನರಿಗೆ ಕಾಮಿತ ಫÀಲ ಮುಕ್ತಿ ಕೊಡುವ ಕಮಲಾಪತಿ 8 ಅಷ್ಟಯತಿಗಳಿಂದಲಿ ಪೂಜೆಯಗೊಂಬೊ ಲಕ್ಷ್ಮಿಯ ಪತಿಯು ಸ್ತ್ರೀರೂಪವ ಧರಿಸಿರೆ ದೃಷ್ಟಿಂದೆ ನೋಡದಿನ್ನಿರುವೋರೆ ಭೀಮೇಶ- ಕೃಷ್ಣ ನಿನ್ನ ಮನದಲ್ಲಿಟ್ಟು ಸ್ತುತಿಸುವೆನು 9
--------------
ಹರಪನಹಳ್ಳಿಭೀಮವ್ವ
ಕಾಮನುಜ ಸುರಸೋಮ ಶತ್ರುವಿನಾಯಕ ಪರಿಪಾಲಿಸೊ ಪ ಕಾಲ ಎನಗೊಂದು ಕ್ವಾರಿ ಕರಿಮುಖ ತೋರಿದಿ ನೀಅ.ಪ. ಪಾದ ಹೊಂದಿಸಿ 1 ಭಾಸದಿಂದಲಿ ವಿಷ ಧರಿಸಿ ಆ-ಭಾಸತನದಲಿ ದಾಸನೆನಿಸಿ ಕಾಸು ಕಾಸಿಗೆ ಮೋಸಹೋಗಿ ವಿಶೇಷ ಮಮಕರ ಪಾಶ ಕ್ಷಳಿಸಿದೆ 2 ಚಾರು ಇಂದು ಪೊರೆಯೋಕಂಬುಕಂಧರ ಶಾಮಸುಂದರ ತಾತನೆನಿಸುವ ತಂದೆವರದಗೋಪಾಲವಿಠಲನ ಪ್ರೇಮ ಪಾತ್ರನೆ 3
--------------
ತಂದೆವರದಗೋಪಾಲವಿಠಲರು
ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ
ಕಾಯ || ಕಾಯ ಪ ಅಣುರೂಪದಿಂದಿದ್ದು ಕ್ಷಣದೊಳಗದ್ಭುತ ರೂಪವ ಧರಿಸಿ ಬಲಿಯ ಬಂಧಿಸಿದೆ | ರಣ ಶಬ್ದವಿಲ್ಲದೆ ಸರ್ವ ಸಾಮ್ರಾಜ್ಯವ ನಗ್ರಜಗಿತ್ತಿಹ ಕಾರ್ಯವಾಶ್ಚರ್ಯ 1 ವಾದಿರಾಜರಿಗೆ ನೀ ಒಲಿದು ಶ್ರೀ ಸೋದೆಯೊಳ್ ನಿಂತಿದ್ದ ತೆರವತಿ ಚೋದ್ಯವಾಗಿಹುದು | ಕದನವಾಗಿಲ್ಲ ಭೂಭುಜರಲ್ಲಿ ಒಲಿದುದು ಹರಿಭಕ್ತರ್ಗತಿ ತೋರ್ಪ ಕಾರ್ಯ 2 ರಾಜ್ಯದೊಳಗತಿ ಮಾನ್ಯ ವಾದಿರಾಜರ ಭಾಗ್ಯ ದೇವಾಧಿದೇವ ಶ್ರೀ ತ್ರಿವಿಕ್ರಮರಾಯ 3
--------------
ವಿಶ್ವೇಂದ್ರತೀರ್ಥ
ಕಾಯೊ ಕಾಯೊ ಜಿತಕಾಯ ಗುರು ಬಾದ ರಾಯಣ ತತ್ವಜ್ಞರಾಯ ಪ ನಾ ಯಾರಿಗೆ ಬಿನ್ನೈಪೆ | ಹೇಯಸಂಸಾರದ ಎರಡೊಂದು ಮಠದಲಿ ಧರಿಸಿ ತೂರ್ಯಾಶ್ರಮ ಸಿರಿಯರಸನ ದಿವ್ಯ ಮೂರ್ತಿಗಳ ಕರದಿಂದ ಪೂಜಿಸಿ | ಮರುತ ದೇವನ ಮತ ಪರಮಾನಂದವೆಂದು ಧರೆಗೆ ಬೀರಿದ ಕರುಣಿ 1 ಜ್ಷಾನಿಗಳರಹುವ | ವಾಣಿಯಿಂದಲಿ ದೇ ಮೌನಿವರಿಯ ಎನ್ನ | ಹೀನಪಾತಕವೆಂಬ ಕಾನನ ದಹಿಸೆಂದು | ಸಾನುರಾಗದಿ ನೋಡಿ 2 ಭೂಸುರ ಪರಿಪಾಲ | ಶ್ರೀ ಶಾಮಸುಂದರನ ಲೇಸಾಗಿ ಒಲಿಸುತಲಿ ಕಿಟಜದಲಿ ಭಾಸುರ ಘನವೇಣಿ | ಭೇಶಪುರದಿ ನೆಲಸಿ ದಾಸರ ಮನದಭಿಲಾಷೆ ನೀಡುವ ದಾನಿ 3
--------------
ಶಾಮಸುಂದರ ವಿಠಲ
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾವ ದೇವರು ನೀನೆ ಎನ್ನ ಕೈ ಪಿಡಿಯೋ ದೇವ ಹರಿ ತವಪಾದ ಮರೆಹೊಕ್ಕೆ ಕಾಯೊ ಪ ತರಳ ಪ್ರಹ್ಲಾದನಂ ಸಂಕಟದಿ ರಕ್ಷಿಸಿದಿ ಮರೆ ಬಿದ್ದ ಅಸುರನಿಗೆ ಸ್ಥಿರಪಟ್ಟ ಕೊಟ್ಟಿ ಕಂಟಕ ಭರದಿ ನೆರವಾಗಿ ತರಿದಯ್ಯ ತರುಣಿಯ ಮೊರೆ ಕೇಳಿ ಅಕ್ಷಯವನಿತ್ತಿ 1 ಶಿಲೆಯರೂಪದಿ ಬಿದ್ದ ಸತಿಯನುದ್ಧರಿಸಿದಿ ಕುಲಗೆಟ್ಟ ಅಜಮಿಳನ ಅಂತ್ಯದಲಿ ಕಾಯ್ದಿ ಒಲಿದು ನಭೋರಾಜನಂ ಶಾಪದಿಂದುಳಿಸಿದಿ ಅಳಿಯದ ಪದವಿ ನೀಡಿ ಧ್ರುವರಾಜನ್ಪೊರೆದಿ 2 ಭಕ್ತವತ್ಸಲನೆಂಬ ಬಿರುದಗಳ ಪೊತ್ತಿರುವಿ ಭಕ್ತನಿಗೆ ಬರುವ ನಿಖಿಲಾಪತ್ತುಗಳನು ಕತ್ತರಿಸಿ ಹಿತವಾದಭಕ್ತಿಯನು ಕರುಣಿಸಿ ನಿತ್ಯನಿರ್ಮಲಸುಖವ ನೀಡು ಶ್ರೀರಾಮ 3
--------------
ರಾಮದಾಸರು
ಕಾವದು ಎನ್ನನುದಿನಾ ರಂಗಾ| ಕಾವದು ಕಾವದು ಎನ್ನನುದಿನಾ | ಭಾವಿಕ ಜನರ ನಿಧಾನಾ ಪ ಜಲದಲಿ ಕರಿಯಾ ಪಿಡಿದ ಮಕರಿಯಾ | ಸೀಳಿದ ಯಾದವರಾಯಾ | ಇಳೆಯೊಳು ಗಿರಿಯಾ ಧರಿಸಿದೆ ಗರಿಯಾ | ಕುಲ ಅರಿನಂದನ ಪ್ರೀಯಾ 1 ರಮಣನೆ ಸಿರಿಯಾ ಲಲನೆಗೆ ಸೀರಿಯಾ | ಸಮಯಕ ನಿತ್ತ ಅನೇಕ | ಕಮನೀಯ ಕಾಯಾ ದೇವ ನೀ ಕಾಯಾ | ಜನಕನೇ ವ್ಯಾಪ್ತ ತ್ರಿಲೋಕಾ 2 ಸರಸಿಜನಯನಾ ಸಾಸಿರ ನಯನಾ | ಸೋದರ ದೇವ ದೇವೇಶಾ | ವರಸದ್ವದನಾ ಈ ರೆರಡೊದ ನಾ | ವಂದಿತ ಚರಣಾ ಶ್ರೀಯೀಶಾ3 ಭಕುತರಬಂಧು ಕೈರವ ಬಂಧು ಶೇಖರಧೇಯ ಮುಕುಂದಾ | ಸಕಲಾಧಾರಾ ದಿನೊದ್ಧಾರಾ | ದೇವಕಿ ದೇವಿಯ ಕಂದಾ4 ಸುಜನರ ಪಕ್ಷಾ ಕುಜನ ವಿಪಕ್ಷಾ | ಶ್ರೀ ವತ್ಸಾಂಕಿತ ದೇವಾ | ಗಜವರ ವರದಾ ಯದುಕುಲ ವರದಾ | ನವಮರ್ಧನ ಜಗಜೀವಾ5 ಕಾಳಿಯ ಸರ್ಪಾ ಮದಹರ ಸರ್ಪಾ| ಶನವಾಹನ ಗೋವಿಂದಾ | ಶ್ರೀ ಲಲನೀಯಾ ಸದ್ಭಾವನೀಯಾ | ಪೂರಿತ ಪರಮಾನಂದಾ6 ಸಿಂಧು ಸಿಂಧು | ವಿಗಾಗಿಹೆ ಕುಂಭಜ ನೀನು | ಹರಣ ರಂಗಾ | ಧೀರನೇ ಭಜಕರ ಧೇನು7 ನವನೀತ ಚೋರಾ ನಿಗಮದ ಚೋರಾಂ | ತಕ ಗೋಕುಲ ವಿಹಾರಾ | ಭವ ಪರಿಹಾರಾ ಕೌಸ್ತುಭಧಾರಾ | ಮಹಿಪತಿಸುತ ಮನೋಹಾರಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು