ಒಟ್ಟು 1251 ಕಡೆಗಳಲ್ಲಿ , 103 ದಾಸರು , 984 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಪಟನಾಟಕನೀತ ಕೃಪಾಸಿಂಧು ಸಾಕ್ಷಾತ ಧ್ರುವ ಸಗುಣ ಸುಪಥ ದೋರಿ ನಿರ್ಗುಣನಾಗಿಹ ಶ್ರೀಹರಿ ಅಗಣಿತ ಗುಣದೋರುವ ಅನೇಕಾಪರಿ ಜಗದೊಳು ಮುರಾರಿ 1 ಹಿಡಿದೇನೆಂದರೆ ಸಿಲುಕ ಗೂಡಿನೊಳಗೆ ಮಾಡಿಹ್ಯ ಮಲಕ ನೋಡೇನೆಂದರೆ ಭಕ್ತಿಗೆ ನಿಲುಕ ಒಡಿಯ ಗೋಪಾಲಕ 2 ಕುಲಗಳ್ಳಗೆ ಕೊಡುವ ಮ್ಯಾಲೆ ಹುಯಲು ತಾ ಮಾಡುವ ಬಲುಖಳ ದೈವ 3 ಭಾಷೆ ಕೊಟ್ಟರೆ ತಪ್ಪ ಋಷಿ ಮುನಿಗಳ ಪಾಲಿಪ ಭಾಸುತ ಭಕ್ತರ ಹೃದಯದೊಳಗಿಪ್ಪ ಭಾಸ್ಕರ ಸ್ವರೂಪ 4 ಗುಹ್ಯ ಆಗೋಚರ ಸೋಹ್ಯ ತಿಳಿಯಲು ಸಾಕ್ಷಾತ್ಕಾರ ಇಹಪರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಮಲ | ಭಜಿಸಿ ಬದುಕಿರೋನಿಜ ಸುಜ್ಞಾನ ಹರಿಭಕ್ತಿ | ನಿಜಕೆ ತರುವರೋ ಪ ಸಂತ ಶ್ರೀನಿವಾಸನಹಂ | ಮತಿಯ ವಿಚಾರಾಚಿಂತಿಸದೆ ಒಲಿದಂಥ | ಶಾಂತ ಚಿತ್ತರಾ ||ಕಂತುಹರ ಸುತನಂಶ | ಜಾತರಿಹರಾಅಂತೆ ತೋರಿ ದಾಸ ದೀಕ್ಷೆ | ಪಂಥ ವಿತ್ತರಾ 1 ಮಂಗಳದುತ್ಸವಕಾಗಿ | ಸಂಘ ಬರ್ಲಾಗಿಮಂಗಳ ಭಕ್ಷವು ಮಂಡಿಗಿ | ಮಾಳ್ಪರಿಲ್ಲಾಗಿಭಂಗ ಭೀತಿ ಅಧಿಪಗೊದಗಿ | ಚಿಂತಿಸಲಾಗಿಅಂಗ ವೇಷ ಬದಲಾಗಿ | ಬಂದ ತಾನಾಗಿ2 ಗ್ರಂಥ ಸುಧಾಭಿಧ ಬಲ್ಲ | ಸಂತ ಸುಬ್ಬಣ್ಣಸಂತ ವಿಜಯದಾಸಗಿಂಥ | ಗ್ರಂಥವೆಲ್ಲಣ್ಣಅಂತೆ ದಾಸಗಪರೋಕ್ಷ | ಕಂತೆ ಕಾಣಣ್ಣಚಿಂತಿಸುತ್ತ ಪ್ರವಚನ | ಭ್ರಾಂತ ನಿದ್ದನ 3 ಬಂದು ವಿಜಯದಾಸರಾಗ | ತೊಂದರೆ ಯೋಗ ಛಂದದಿಂದ ನೀಗಿ ಭಕ್ಷ | ಮಾಡಿದ ರಾಗ |ಬಂದು ಸುಧಾ ಕೇಳುತಿರಲು | ಆಚಾರ್ಯರಾಗ ಸಂದೇಹವ ಪಡುತಲಿ | ಮೌನವಿರಲಾಗ 4 ಪಾಚಕನ ತೆರ ಬಂದ | ಭೃಗುವಿನಂಶನುನೀಚ ನೀರಿನವನ ಶಿರದಿ | ಚಾಚಿ ಕೈಯ್ಯನ್ನುಬಾಚಿ ಬಿಡಿಸೆಂದ ಅವರ | ಸಂಶಯವನ್ನುವಾಚೀಸೀದ ಅನುವಾದ | ನೀರಿನವನೂ5 ಪೇಚಿಗೆ ಸುಬ್ಬಣ್ಣ ಸಿಕ್ಕಿ | ಮನದಿ ತಪಿಸೀ |ಯಾಚಿಸೀದ ಕ್ಷಮೆಯನ್ನು | ಬಹಳ ಪ್ರಾರ್ಥಿಸಿ ||ಸೂಚಿಸಲು ಶೈವನಿದ್ದ | ಬೇಲೂರು ವಾಸಿಪ್ರಾಚೀನದ ಸ್ಮøತಿ ಬಂತು | ನಂಜುಂಡ ನೆನಿಸಿ 6 ಪಾಣಿ ಇಟ್ಟು ಶಿರದಲ್ಲಿ | ಆಶೀರ್ವದಿಸಿವೇಣುಗೋಪ ದಾಸರಲ್ಲಿ ಅಂಕಿತ ಕೊಡಿಸಿ ||ಸಾಣೆ ಇಟ್ಟಂತಾಯಿತವನ | ಜ್ಞಾನದ ಅಸಿಮಾಣದಲೆ ವಿಜಯ ಕವಚ | ಮಾಡಿದ ಸೂಸಿ 7 ದಾಸಕೂಟ ಜನರೆಲ್ಲ | ಬಿಡದೆ ಪಾಡುವವ್ಯಾಸವಿಠಲ ರಚಿತೆನ್ನ | ವಿಜಯ ಕವಚವಲೇಸು ನೆರೆ ನಂಬಿದೆನ್ನ | ವಿಠಲ ಸ್ತೋತ್ರವಮೀಸಲಾಗಿ ಪಾಡುವರು | ಸ್ತೋತ್ರವೆಲ್ಲವ 8 ವರ್ಷ ಸೌಮ್ಯ ಕಾರ್ತೀಕದಿ | ಸೇವಿಸುತ್ತಿರೆದರ್ಶನಿತ್ತು ಸ್ವಪ್ನದಲ್ಲಿ | ಧೈರ್ಯಕೊಟ್ಟಾರೆಹರ್ಷವಿತ್ತು ದಾಸಕಾರ್ಯ | ಸಾಗಿಸುತ್ತಾರೆದರ್ಶದಿನ ಪುಷ್ಯ ನೃಹರಿ | ಯಾತ್ರೆಯಿತ್ತಾರೆ 9 ವಿತ್ತ ನಿತ್ಯ | ಇಲ್ಲದಿನ ವೊಲ್ಲೆ ||ಮೂರ್ತಿ ಬಿಂಬ ತೋರಿ ಎಂದು | ಕೇಳುವ ಸೊಲ್ಲೆಸಾರ್ಥಕವ ಮಾಡಿರೆಂದು | ಪ್ರಾರ್ಥಿಸೆ ಬಲ್ಲೆ 10 ಸುಜನ ಸಂಗ | ವಿತ್ತು ಸುಶೀಲಕಾವ ದಾಸ ಜನರನ್ನು | ಹೃದಯ ವಿಶಾಲಗೋವ ಪರಿಪಾಲ ಗುರು | ಗೋವಿಂದ ವಿಠಲನತೀವರದಿ ಭಜಿಸಿ ಕಳೆದ | ಮಾಯಾಪಟಲ11
--------------
ಗುರುಗೋವಿಂದವಿಠಲರು
ಕಮಲನಾಭ ಹರುಷದಿಂದ ಖಗವಾಹನನ್ಹೆಗಲನೇರಿ ಬಗೆಬಗೆ ಶೃಂಗಾರವಾಗಿ ಬಂದ ರಂಗನು 1 ಅಂಬರ ಜರನಿರಿಗಳಲಿ ಕುಂದಣದುಡಿದಾರವ ಕಟ್ಟಿ ಚÉಂದುಳ್ಳ ಭುಜಕೀರ್ತಿ ಕರ್ಣಕುಂಡಲನಿಟ್ಟು2 ಶಂಖ ಚಕ್ರ ಕರಗಳಲ್ಲಿ ಕಂಕಣ ಭೂಷಣಗಳಿಂದ ಕಿಂಕಿಣಿ ನೂಪುರಗಳಿಂದ ಅಲಂಕಾರವಾಗಿ 3 ಕಸ್ತೂರಿ ಕೇಸರಿಯು ಗಂಧ ಬುಕ್ಕಿ ್ಹಟ್ಟು ಪರಿಮಳದ ಚೆಂದ ಕರ್ಪೂರ ತಾಂಬೂಲ ಬಾಯಲೊಪ್ಪುವ ರಂಗ 4 ನಿತ್ಯ ಸೂರ್ಯ ಪ್ರಕಾಶ ಮಲ್ಲಿಗೆ- ಮಾಲೆ ಮುಡಿದು ಹೊರಟ ಜಗದಮೋಹನ ರಂಗ5 ಸಾಲು ಸಾಲು ಮನೆಗಳಲಿ ಮೇಲು ಮೇಲುಪ್ಪರಿಗೆನೇರಿ ಬಾಲಕೃಷ್ಣ ಬರುವ ಭರವ ನೋಡುತ್ತಿದ್ದರು 6 ವಾರಿಗೆ ಸತಿಯೇರ ತನ್ನ ವಾರೆನೋಟದಿ ನೋಡುತ ಮಾರನಯ್ಯನು ಬಂದನು ತಾ ಬಜಾರ ಮಧ್ಯದಿ 7 ಚೆಲ್ವೆಯರೆಲ್ಲರು ಅರಳುಮಲ್ಲಿಗೆ ಕರದಲ್ಲಿ ಪಿಡಿದು ಫುಲ್ಲಾಕ್ಷನ ಮ್ಯಾಲೆ ನಗುತ ಚೆಲ್ಲುತಿದ್ದರು 8 ಯಾದವರೇಶನೆ ನಿನಗೆ ಭೇದವ್ಯಾಕೆನ್ನ ಮ್ಯಾಲೆ ನೀ ದಯಮಾಡೆನ್ನ ಮನೆಗೆನುತ ರಾಧೆ ಕರೆದಳು 9 ವಜ್ರದ ಗೊಂಬೆಯಂದದಿ ವೈಯಾರಿ ಮೆಲ್ಲನೆ ಬಂದು ಪದ್ಮನಾಭ ಬಾ ನಮ್ಮನೆಗೆನುತ ಭದ್ರೆ ಕರೆದಳು 10 ಅಂತರಂಗದಲ್ಲಿ ಕೋಟಿ ಪಂಥವ್ಯಾತಕೆನ್ನಮ್ಯಾಲೆ ಸಂತೋಷದಿ ಬಾರೆನುತ ಜಾಂಬವಂತಿ ಕರೆದಳು 11 ಸತ್ಯಭಾಮೆ ರುಕ್ಮಿಣಿದೇವಿ ಮಿತ್ರೆನೀಲಾ ಜಾಂಬವಂತಿ ಲಕ್ಷಣಾ ಕಾಳಿಂದಿ ಭದ್ರೆ ಕರೆಯುತಿದ್ದರು 12 ಇಷ್ಟುಮಂದಿ ಸತಿಯರೊಳಗೆ ನಿಷ್ಠುರವಾಗುವೆನೆಂದು ಎತ್ತ ಕಡೆಗೆ ಪೋಗಲೆಂದು ಶ್ರೀಕೃಷ್ಣ ನುಡಿದನು 13 ಹರಿಯ ಮಾತುಗಳನೆ ಕೇಳಿ ಸರುವರು ಸುಮ್ಮನೆ ನಿಲ್ಲೆ ಕರದಿ ವೀಣೆಯ ಪಿಡಿದು ಬಂದನು ಭರದಿ ನಾರದ 14 ಭಂಗ ಬಂದಿತೇನೊ ನಿನಗೆ ಇಂದೆನ್ನ ಹಿಂದೆ ಬಾರೆನುತ ನಾರಂದ ಕರೆದನು 15 ಕೇಳಿ ನಾರದರ ಮಾತು ತಾಳಲಾರದೆ ರುಕ್ಷ್ಮಿಣಿಯು ದಾನ ಒಯ್ದು ದಕ್ಕಿಸಿಕೊಂಡಿರೆಂದು ನುಡಿದಳು 16 ಅಕ್ಕನ ಮಾತಿನ ಬಾಣ ನೆಟ್ಟಿತು ಎನ್ನೆದೆಗೆ ಬಂದು ಕೃಷ್ಣ ನೀ ಕೇಳೊ ಕೇಳೆಂದು ನುಡಿದಳು ಭಾಮೆ 17 ಬಿಟ್ಟು ಬಾಣವ ಮಾಡಿ ಯುದ್ಧ ದಿಟ್ಟಳೆನಿಸುವುದೆ ಸಿದ್ಧ ಪೃಥಿವಿಯೊಳಗೆ ಬಾಣನಂದಿ ಎಂದು ಪ್ರಸಿದ್ಧಿ 18 ದಾರಿಗೆ ತೆಗೆಸಿದೆ ನೀನು ಮೋರೆಗಡ್ಡ ಮಂಡಿ ಪನ್ನಿ ಹೀನ ಕಾರ್ಯವ ಮಾಡಲು ನೀ ಅರಿಯೇನೆ ರುಕ್ಮಿಣಿ 19 ಗುಣನಿಧಿ ಗೋಪಾಲ ಹರಿಗೆ ಮಡದಿ ಎನಿಸುವುದೆ ಸರಿಯೆ ಮಣಿಯ ಕಳವು ಇಟ್ಟದ್ದು ನಿಮ್ಮ ಗುಣವ ನಾನರಿಯೆ 20 ಮಾಯಕಾರ್ತಿ ಮಾತುಗಳ ಅನ್ಯಾಯವೊ ನ್ಯಾಯವೊ ನಾನು ಬಾಯಬಿಟ್ಟರೇನುಳಿದೀತೆ ನಿನ ಮಾರ್ಯಾದೆ ರುಕ್ಮಿಣಿ 21 ಸಾಕು ಸತ್ಯಭಾಮೆ ನಿನಗೆ ಯಾಕೆ ಕೋಪ ಬಂದಿತೆಂದು ನಾಲ್ಕು ತೋಳಿಂದಪ್ಪಿಕೊಂಡನು ಶ್ರೀಕಾಂತ ನಗುತ 22 ಎಲ್ಲ ಸತಿಯರನು ತಾನಿದ್ದಲ್ಲಿಗೇ ಕರೆಸಿದ ಕೃಷ್ಣ ವಲ್ಲಭೆ ರುಕ್ಮಿಣಿಯ ಚರಣಕ್ಕೆ ಎರಗಿಸಿದನಾಗ 23 ರುಕ್ಮಿಣಿದೇವೇರ ತೊಡೆಯ ವಿಚಿತ್ರದ್ಹಲಿಗೆ ಮಂಚಮಾಡಿ ನಕ್ಷತ್ರದೊಳು ಚಂದ್ರನಂತೆ ಹೊಳೆಯುತ್ತಿದ್ದನು 24 ಆರ್ಯಳು ಎನ್ನ ಪಟ್ಟದ ಭಾರ್ಯಳು ರುಕ್ಮಿಣಿಯ ಮಾತು ಮೀರಬ್ಯಾಡಿರೆಂದೆನುತ ಸಾರಿ ಹೇಳಿದ 25 ಹಚ್ಚಿದ್ಹಗಲು ಬತ್ತಿಯಂತೆ ಹದಿನಾರು ಸಾವಿರ ಮಂದಿ ಭೀಮೇಶ ಕೃಷ್ಣನ ಚರಣಕ್ಕೆರಗಿ ನಗುತ ಕುಳಿತಿರಲು 26
--------------
ಹರಪನಹಳ್ಳಿಭೀಮವ್ವ
ಕರವ ಜೋಡಿಸಿ ಎಲ್ಲರಿಗೊಂದಿಸಿ ಪ. ಎಲ್ಲರಿಗೊಂದಿಸಿ ಫುಲ್ಲನಾ¨sನÀ ಮುಖ್ಯವಲ್ಲಭೆಯರುನಾವು ಗೆಲ್ಲಬೇಕೆಂದುಅ.ಪ. ಮಡದಿ ಇಂದಿರಾದೇವಿ ಕಡೆಗಣ್ಣನೋಟದಿ ಪಡೆದಾಳು ಲೋಕಬ್ರಹ್ಮರುದ್ರಾದಿ ಪಾದಂಗಳಿಗೆ ನೀವೆ ಮಹಾಲಕ್ಷ್ಮಿಪಾದಂಗಳೆಗೆ ನೀವೆ ಮಹಾಲಕ್ಷ್ಮಿ ದೇವಿಯಶುಭಾಂಗಿಯ ಮೊದಲೆ ಬಲಗೊಂಬೆ 1 ಪರಮೇಷ್ಠಿ ಪರಮೇಷ್ಠಿ ಪಾದ ಪದ್ಮವನೆ ಮೊದಲೆ ಬಲಗೊಂಬೆ2 ವಾಣಿ ಅಜನ ಪಟ್ಟದರಾಣಿ ಪನ್ನಂಗ ವೇಣಿಜಾಣಿ ಕೊಡು ಎಮಗೆ ಮತಿಗಳಜಾಣಿ ಕೊಡು ಎಮಗೆ ಮತಿಗಳ ನಿನ್ನಪಾದರೇಣುವ ಮೊದಲೆ ಬಲಗೊಂಬೆ 3 ಪಾದ ವನಜವ ಮೊದಲೆ ಬಲಗೊಂಬೆ4 ಭಾರತಿ ನಿನ್ನ ಪಾದವಾರಿಜ ಚರಣವ ಬಾರಿ ಬಾರಿಗೆ ಸ್ಮರಿಸುವೆಬಾರಿ ಬಾರಿಗೆ ಸ್ಮರಿಸುವೆ ನಮಗಿನ್ನುತೋರೆ ಬೇಗ ಮತಿಗಳು5 ಇಂದ್ರನ ಗೆದ್ದು ಸುಧೆಯ ತಂದ ಮಾತೆಯ ಬಂಧನ ಕಡೆದ ಬಲು ಧೀರಬಂಧನ ಕಡೆದ ಬಲುಧೀರನಾದ ಖಗೇಂದ್ರನ ಮೊದಲೆ ಬಲಗೊಂಬೆ6 ಸಾಸಿರ ಮುಖದಿಂದ ಶ್ರೀಶನ ಸ್ತುತಿಸಿದವಾಸುದೇವಗೆ ಹಾಸಿಗೆವಾಸುದೇವಗೆ ಹಾಸಿಗೆ ಯಾದಶೇಷಗೆ ಮೊದಲೆ ಬಲಗೊಂಬೆ7 ಅಪಾರ ಮಹಿಮನೆ ತ್ರಿಪುರಸಂಹಾರಕಚಂದ್ರ ಶೇಖರನೆ ಸರ್ವೇಶ ಚಂದ್ರ ಶೇಖರನೆ ಸರ್ವೇಶ ನಿನ್ನಪಾದದ್ವಂದ್ವವ ಮೊದಲೆ ಬಲಗೊಂಬೆ 8 ವಾರುಣಿ ಅಪರ್ಣಾದೇವಿಯರು ಕರುಣಿಸಿನಮಗೆ ಕಾಲಕಾಲಕರುಣಿಸಿನಮಗೆ ಕಾಲಕಾಲಕೆರಾಮೇಶನ ತರುಣಿಯರೆ ಗೆದ್ದು ಬರಬೇಕ9
--------------
ಗಲಗಲಿಅವ್ವನವರು
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರುಣದಿ ಕೊಡು ವರವಾ ಗುರು ಮಹಾದೇವ ಪ ನಿರುತ ಸ್ಮರಿಸುವ ಶರಣ ಸಂಜೀವಾ ಅನುದಿನ | ಹರಿಕುಮಾರನ ಗರ್ವವನದಾವಾನಲ ಮಹಾನುಭಾವ ಅ.ಪ ಸ್ಪಟಿಕ ಸನ್ನಿಭ ಧವಳ ಶುಭಗಾತ್ರ ಕಟಕ ವಂಚಕ ಯಕ್ಷಪತಿ ಮಿತ್ರ ನಿಗಮ ಹಯ ಧೂರ್ಜಟಿಯ ಸುಚರಿತ್ರ ಹೇ ನಿಟಲ ನೇತ್ರ 1 ಅದ್ರಿವೈರಿಯತನಯನೊಡನೆ ಯುದ್ಧಗೈದಾತ ಭದ್ರದಾಯಕ ರುದ್ರದೇವ ಪ್ರಸಿದ್ಧ ಮುನಿ ನಮಿತ ಶ್ರೋದ್ರು ನೀಧರ ದದ್ದಲಾಪುರ ಸದ್ಮಸುಖದಾತ ಹೇ ಸದ್ಯೋಜಾತ 2 ಶಾಮಸುಂದರ ಸ್ವಾಮಿ ಪ್ರಿಯ ಸಖ ಸೋಮಶೇಖರನೆ ಪ್ರೇಮದಿಂದಲಿ ರಕ್ಷಿಸೆನ್ನನು ಭೂಮಿಶ್ಯಂದನನೆ ಕಾಮಿತ ಪ್ರದ ವಾಮದೇವನೆ ಹೇಮಾತಿಧವನೆ ನಿಸ್ಸೀಮ ಮಹಿಮನೆ 3
--------------
ಶಾಮಸುಂದರ ವಿಠಲ
ಕರುಣವ ತೋರೋ ಕರುಣಗುಣಾಂಬುಧಿ ಕರುಣವ ತೋರೋ ರಂಗಯ್ಯ ಪ ಕರುಣದಿ ಬಾರೋ ಬಾರೋ ಕರುಣ ತೋರಿ ಎನ್ನ ಕರುಣದಪ್ಪಿ ಪೊರಿ ಕರುಣವ ತೋರೋ ಅ.ಪ ಪರತರಮಹಿಮ ಹರಸುರಬ್ರಹ್ಮರ ಮೊರೆಯ ಕೇಳಿದ ಕರುಣವ ತೋರೋ ರಂಗಯ್ಯ ಧರೆಗೆ ಇಳಿದು ಶೇಷಗಿರಿಯಲಿ ನಿಂತು ನರಸುರರಿಗೆ ವರವಿತ್ತ ಕರುಣವ ತೋರೋ ರಂಗಯ್ಯ ಪುರದಿ ಬಂದು ನಿಂತ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಚರಣವಿಟ್ಟು ನಾರಿಕುಲವನು ದ್ಧರಿಸಿದಿ ಕರುಣವ ತೋರೋ 1 ಅಂಬುಜನಯನ ಕಂಬದಿ ಬಂದು ಭಕ್ತ ಗಿಂಬುಕೊಟ್ಟು ಕಾಯ್ದ ಕರುಣವ ತೋರೋ ರಂಗಯ್ಯ ನಂಬಿಕೊಟ್ಟ ಕಮಲಾಂಬಕಿಯೆಂಜಲ ಸಂಭ್ರಮದಿಂ ಮೆದ್ದ ಕರುಣವ ತೋರೋ ರಂಗಯ್ಯ ನಂಬಿದ ಅಸುರಗೆ ಬೆಂಬಲಗೊಟ್ಟು ಸ್ಥಿರ ಕುಂಭಿನಿಪಟ್ಟವಿತ್ತ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಅಂಬರೀಷನ ಮೊರೆ ಕೇಳಿ ಶೀಘ್ರದಿಂದ ಕರುಣವ ತೋರೋ 2 ನಿರುತ ನಂಬಿ ನಿನ್ನ ಮರೆಹೊಕ್ಕ ಬಾಲಗೆ ಸ್ಥಿರಪದವಿಯನಿತ್ತ ಕರುಣವ ತೋರೋ ರಂಗಯ್ಯ ಗರುಡನೇರಿ ಬಂದು ಕರಿಯ ವಿಪತ್ತನು ಪರಿಹರಿಸಿದ ಮಹಕರುಣವ ತೋರೋ ರಂಗಯ್ಯ ಹರಿಹರಿ ಎಂದೊದರಿದ ತರಣಿಭಕ್ತಿಗೆ ಮೆಚ್ಚಿ ನಿರುತ ಮೈಗಾವಲಾದ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಪರಮ ನಿರ್ಜರರಿಗೆ ಅಮೃತವುಣಿಸಿದ ಕರುಣವ ತೋರೋ3 ದುರುಳಕೋಟಿಯಾಚರಿಸಿದ ದುರುಳಗೆ ಪರಮ ಕೈವಲ್ಯವಿತ್ತ ಕರುಣವ ತೋರೋ ರಂಗಯ್ಯ ಕಿರಿಕುಲದವನ ಕರದಿಂ ಪರಮಾ ದರದಿ ಉಂಡ ಮಹಕರುಣವ ತೋರೋ ರಂಗಯ್ಯ ನೀರು ಕೊಟ್ಟ ನಿಜಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಚರಣದಾಸ ವರ ಕನಕನಿಗೊಲಿದ ಕರುಣವ ತೋರೋ 4 ಹಿಡಿ ಅವಲಕ್ಕಿಯ ಕೊಡಲು ಒಪ್ಪಿ ನೀ ಕಡು ಸಂಪದವಿತ್ತ ಕರುಣವ ತೋರೋ ರಂಗಯ್ಯ ಮಡಿದ ಬಾಲಕನಂ ಕಡುದಯದೆಬ್ಬಿಸಿ ಪಿಡಿದು ಕಾಪಾಡಿದ ಕರುಣವ ತೋರೋ ರಂಗಯ್ಯ ದೃಢಕರ ಬೆಂಬಲ ಬಿಡದೆಯಿರುವ ನಿನ್ನ ಕಡುದಿವ್ಯ ಮೂರ್ತಿಯ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ರಂಗ ಒಡೆಯ ಶ್ರೀರಾಮ ಎ ನ್ನೊಡಲಗಲದೆ ನಿಂತು ಕರುಣವ ತೋರೋ 5
--------------
ರಾಮದಾಸರು
ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಕರುಣಿಸೈ ಶ್ರೀ ರಾಮ ಕೌಸಲ್ಯ ಪ್ರೇಮ ಶರಣ ಜನಕನು ಪೊರೆವ ಕಾರುಣ್ಯಧಾಮ ಪ. ದಶರಥಾತ್ಮಜ ಯಜ್ಞ ಕಾಯ್ದು ಸೀತೆಯ ವರಿಸಿ ಕುಶಲದಿಂದಲಿ ಬಂದು ನಗರದಲ್ಲಿರಲೂ ಸತಿ ಅನುಜಸಹ ವನದಿ ನಸುನಗುತ ಚರಿಸಿ ರಕ್ಕಸರ ಸದೆಬಡಿದೆ 1 ಸತಿಯೆ ಕಳೆದಿರೆ ಹನುಮ ಹಿತವಾರ್ತೆ ಬಿನೈಸೆ ಹತಗೈದು ರಾವಣಾದಿಗಳನೆಲ್ಲ ಹಿತದ ರಾಜ್ಯದ ವಿಭೀಷಣ ರವಿಜರಿಗೆ ಇತ್ತು ವ್ರತ ಬಿಡಿಸಿ ಭರತನಿಗೆ ಧರಣಿಯಾಳಿದನೇ 2 ಪಟ್ಟಾಭಿರಾಮ ಮಂಗಳ ನಾಮ ಕೃಪೆಯಿಂದ ಇಷ್ಟಾರ್ಥವೀಯೊ ಸನ್ಮಂಗಳವನೂ ದಿಟ್ಟ ಶ್ರೀ ಹನುಮ ವಂದಿತ ಚರಣ ನಮಿಸುವೆನು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೇ 3
--------------
ಅಂಬಾಬಾಯಿ
ಕರುಣಿಸೋ ಕೃಷ್ಣ ಕರುಣಿಸೊ | ಕರುಣಿಸಿದರೆ ನಾ ನಿನ್ನನೆಂದಿಗು ಮರೆಯ ಪ ಭೂತಳದೊಳು ನಾನು ಈ ತನುವುತೆತ್ತು | ಪಾತಕದಲಿ ಯಮಯಾತನೆ ಪಟ್ಟೆ 1 ಇಂದೆನ್ನ ಹೃದಯವೆಂಬೊ ಮಂದಿರದೊಳು | ಇಂದಿರೆ ರಮಣ 2 ಹಿಂದಿನ ಅವಗುಣ ಒಂದೂ ಎಣಿಸದೆ | ಮುಂದೆ ದೋಷಕ್ಕೆ ಮನವೆರಗಿಸದೆ 3 ಪಾಪ ಪುರುಷನೆಂಬೊ ಪಾಪಿಯ ಕೈಗೆ | ಪೋಪಗೊಡದೆ ಎನ್ನ ಕಾಪಾಡೊ ರನ್ನ 4 ಅಂತ್ಯಕಾಲದಲಿ ಅಂತಕರು ಬಂದು | ನಿಂತಾಗಲಿ ನಿನ್ನ ಚಿಂತೆ ಒದಗಲಿ 5 ಕನಸಿನೊಳಗೆ ನಿನ್ನ ನೆನಸಿಕೊಂಬಂತೆ | ಮನಸು ಸುಸ್ಥಿರವಾಗಲಿ ಅನುಗಾಲವಿರಲಿ 6 ಇದ್ದಾಗ ದಾಸರದಾಸನೆನಿಸೊ ಬೇಗ | ಸಿರಿ ವಿಜಯವಿಠ್ಠಲ ಕರುಣಿಸೊ 7
--------------
ವಿಜಯದಾಸ
ಕರೆತಾರೆ ಕರೆತಾರೆ ಕರೆತಾರೆ ಸಖಿಜರ ಜರತಾರಿ ನೀರೆ ಅವರ ಸುರತ ರಂಗಯ್ಯನ ಗುರುತದ ಮಡದಿಯರ ಕರೆ ತಾರೆ ಪ. ಸೃಷ್ಟಿಗಧಿಕವಾದ ಪಟ್ಟಾವಳಿಯ ಸೀರೆಘಟ್ಟಿ ಕಂಕಣವ ನಡುವಿಟ್ಟುಘಟ್ಟಿ ಕಂಕಣವ ನಡುವಿಟ್ಟು ತಂದೆವ ಧಿಟ್ಟ ದ್ರೌಪತಿಗೆ ಉಡುಗೊರೆ 1 ಖಡ್ಡಿ ಪೈಠಣ ಸೀರೆ ದೊಡ್ಡ ಮುತ್ತಿನ ದಂಡೆಕಡ್ಡಿ ಬಳೆ ದೋರೆ ನಡುವಿಟ್ಟುಕಡ್ಡಿ ಬಳೆ ದೋರೆ ನಡುವಿಟ್ಟು ತಂದೆವಗುಣಾಢ್ಯ ಸುಭದ್ರಾಗುಡುಗೊರೆ2 ಅತ್ತಿ ಹೂವಿನ ಸೀರೆ ಕುತನಿ ಕುಪ್ಪುಸ ಸುತ್ತು ಮುತ್ತಿನ ನೆನೆದಂಡೆ ಸುತ್ತು ಮುತ್ತಿನ ನೆನೆದಂಡೆ ತಂದೆವ ಮಿತ್ರಿ ವೃಂದಾಗೆ ಉಡುಗೊರೆ 3 ಮೋತಿ ಚೂರಿನ ಸೀರೆ ಜಾತಿ ಮುತ್ತಿನ ದಂಡೆ ನೂತನವಾದ ಚವರಿಯ ನೂತನವಾದ ಚವರಿ ರಾಗಟೆಗೊಂಡೆಯ ಕಂಠಿ ಕಾಳಿಂದಿಗೆ ಉಡುಗೊರೆ4 ಸಾರಸನ ಸೀರೆ ತೋರ ಮುತ್ತಿನ ದಂಡೆಹಾರ ಪದಕಗಳ ನಡುವಿಟ್ಟುಹಾರ ಪದಕಗಳ ನಡುವಿಟ್ಟು ತಂದೆವನಾರಿ ಲಕ್ಷಣಾಗೆ ಉಡುಗೊರೆ5 ಅಂಬುಜಾಕ್ಷಿಗೆ ತಕ್ಕ ಗೊಂಬಿ ಪೈಠಣಿಸೀರೆ ಜಂಬುದ್ವೀಪದ ನೆನಿದಂಡೆ ಜಂಬುದ್ವೀಪದ ನೆನಿದಂಡೆ ತಂದೆವಜಾಂಬವಂತಿಗೆ ಉಡುಗೊರೆ6 ಸಾವಿರಕಬೆಲಿಯಾದ ಸೇಲ್ಯಾವಲಿ ಜವಳಿವೀರ ರಾಮೇಶನ ಮನಮೆಚ್ಚಿವೀರ ರಾಮೇಶನ ಮನಮೆಚ್ಚಿ(ದ) ಹದಿನಾರು ಸಾವಿರ ನಾರಿಯರಿಗೆ ಉಡುಗೊರೆ7
--------------
ಗಲಗಲಿಅವ್ವನವರು
ಕಲಭಯಾನೆ ಕಂಜಲೋಚನೆ ಕದವತೆಗೆಯೆಲೆ ಭಾಮಿನಿ ನಾಂ ಬಳಲಿ ಬಂದೆನು ಭಾಮಿನೀ ಪ. ಬಳಲಿ ಬಂದರೆ ಒಳ್ಳಿತಾಯಿತು ತಳರ್ವುದಿಲ್ಲಿಂ ನಿಲ್ಲದೆ ನಾಂ ಕದವ ತೆಗೆಯೆನು ಸಾರೆಲೆ ಅ.ಪ. ಭಾಪುಭಾಪೆಲೆ ಕೋಪಗೈವುದು ಚಾಪಲ್ಯಾಂಬಕಿ ಯೆನ್ನೊಳು ಓವನಲ್ಲೇ ಕೋಪಸಲ್ವುದೆ ಈ ಪರಿಯೊಳ್ ಪೇಳ್ವುದು ನೀ ನೀಪರಿಯೊಳ್ ಪೇಳ್ವುದು 1 ಪರಿ ಕಪಟನಾಟ್ಯವ ಮಾಳ್ಪರೇ ಓಪೆÀನೆಂದು ಕೂಗುತಿರುವ ಭೂಪನಾವನು ಸಾರೆಲೋ ನಾನೋಪೆ ಯಾರಿಗೆ ಸಾರೆಲೊ 2 ನೀರೆ ಮುಕ್ತಾಹಾರೆ ಸ್ಮರವೈಯ್ಯಾರೆಯಿಂತು ಪೇಳ್ವರೇ ಕೇಳ್ ನೀರನಾನೆಲೆ ಶ್ರೀಕರೆ 3 ನೀಂ ಜಾರನಂದದಿ ಕಾಣುವೆ ನೀನಾರು ಪೇಳು ನೋಡುವೆ 4 ದೇವಿಕೇಳು ವಸುದೇವ ದೇವಕಿಕುಮಾರ ನಾನೆಲೆ ಭಾಮಿನೀ ಸುಕುಮಾರನಾನೆಲೆ ಭಾಮಿನೀ ಭಾವಜಾತನ ಬಾಣಕೀಯದೆ ಕಾವುದೆನ್ನನು ಕಾಮಿನೀ ದಯೆತೋರು ಮನೋಮೋಹಿನೀ5 ದೇವಕೀಸುತನಾದರೊಳ್ಳಿತು ನಾವು ಬಲ್ಲೆವು ಸಾರುನೀಂ ಮಾವನನ್ನೆ ಮಥಿಸಿ ಬಂದ ಮಹಾಮಹಿಮನೆ ಸಾರು ನೀಂ, ಆಹ ಭಾವಿಸೀ ಭಯಪಡುವೆನೇಂ 6 ಭೀಷ್ಮಕಾತ್ಮಜೆ ಭೇಷಜಾಂಬಕಿ ಹಾಸ್ಯ ಮಾಡದೆ ಬೇಗನೆ ನಾಂ ಬೇಡಿಕೊಂಬೆನು ನಿನ್ನನು 7 ದೋಷವೆಣಿಸದೆ ಪೋಷಿಸೆನ್ನ ಮದೀಶ ಹಾಸ್ಯವ ಮಾಡಿದೆ ಶೇಷಶೈಲನಿ ವಾಸ ಎನ್ನನು ಪೋಷಿಸೆಂದಳು ವಿನಯದಿ ಕೈಪಿಡಿದ ದೇವನ ಮೋದದಿ 8 ಜಯಜಗನ್ನಾಥ ಭಕ್ತಾಭಯಪ್ರದ ಶ್ರೀಕರ ಜಯದೇವ ದಯಾಸಾಗರ ಶೇಷಗಿರೀಶ ಶ್ರೀಧರ 9
--------------
ನಂಜನಗೂಡು ತಿರುಮಲಾಂಬಾ
ಕಾಮದೇವ ನೀನೆಂದು ನಂಬಿದೆ ಆವಾವುದೆನಗಾಗಬೇಕೊ ಕಾಣೆ ಪ ಈವುದೆಲ್ಲವಿತ್ತು ಪದವಿ ಪಾಲಿಸಯ್ಯ ಅ.ಪ ಶರಣೆನ್ನುವರ ದುರಿತಹರನೆ ಹರಿಯೆ ಹಸ್ತ ನೀಡಿ ಕಾಪಾಡುವೈ ಪರಮ ಕೃಪಾಳುವು ನೀನಲ್ಲವೆ ನರರ ಜಾಜಿಪಟ್ಟಣವಾಸ ಶ್ರೀನಿವಾಸ 1
--------------
ಶಾಮಶರ್ಮರು
ಕಾಯ ಕರವ ಪಿಡಿಯೊ ಗೋಪಾಲ ಪ ಜಾಳು ಜೀವನದ ಗೋಳಿಗೆ ಸಿಲುಕಿದೆ ಕೇಳುವರುಂಟೆ ದಯಾಳು ನೀನಲ್ಲದೆ ಅ.ಪ ತನುಬಲ ಧನಬಲ ಜನಬಲವೆಲ್ಲವು ಅನುಸರಿಸುವುವೇ ಕೊನೆತನಕ ಧನವು ತಪ್ಪಿದರೆ ಜನರು ತ್ಯಜಿಸುವರು ಜನಕ ನೀನಲ್ಲದೆ ಪೊರೆವರ ಕಾಣೆನೊ 1 ಸಟೆಯನಾಡುವುದು ದಿಟವ ತೊರೆಯುವುದು ಕಟುತರ ವಚನಕೆ ನಗುತಿಹುದು ಕಪಟ ಜೀವನವು ತುಟಿಯ ಮೀರಿದ ದಂತಗಳಂತಿರುವುದು 2 ನಿಮಿಷದ ಸೌಖ್ಯಕೆ ವರುಷದ ಕ್ಲೇಶವು ಪುರುಷ ಜೀವನವಿದು ಧರೆಯೊಳಗೆ ಪುರುಷೋತ್ತಮನೆ ಪ್ರಸನ್ನ ಹೃದಯನಾಗಿ ಕಲುಷರಹಿತವಾದ ಹರುಷವÀ ನೀಡೆಲೋ 3
--------------
ವಿದ್ಯಾಪ್ರಸನ್ನತೀರ್ಥರು
ಕಾಯಬೇಕೆನ್ನ ಲಕುಮಿ | ಕಮಲಾಯತಾಕ್ಷಿ ಕಾಯಬೇಕೆನ್ನ ಲಕುಮಿ ಪ. ಕಾಯಬೇಕೆನ್ನ ನೋಯುವೆ ಭವದಲಿ ಕಾಯಜಪಿತನನು ಕಾಯದಿ ತೋರಿ ಅ.ಪ. ಕ್ಷೀರವಾರಿಧಿ ತನಯೆ | ಶ್ರೀ ಹರಿಯ ಜಾಯೆ ಪಾರುಗಾಣಿಸೆ ಜನನಿಯೆ ತೋರೆ ನಿನ್ನ ಪತಿಯ ಪಾದವ ಮನದೊಳು ಸೇರಿಸೆ ಸುಜನರ ಸಂಗದೊಳೀಗ1 ಮುಕ್ತಿದಾಯಕಿ ಸಿರಿಯೆ | ನೀ ಎನ್ನ ಕಾಯೆ ಮುಕ್ತಿಮಾರ್ಗವ ನೀನೀಯೆ ಶಕ್ತಿರೂಪೆ ನಿನ್ನ ಭಕ್ತಿಲಿ ಭಜಿಸುವೆ ಮುಕ್ತರೊಡೆಯನೊಳು ಭಕ್ತಿಯ ನೀಡೆ 2 ಅಷ್ಟಭುಜದ ಶಕ್ತಿಯೆ | ಶ್ರೀ ಭೂಮಿ ದುರ್ಗೆ ಅಷ್ಟ ಐಶ್ವರ್ಯದಾಯಿನಿಯೆ ಶ್ರೇಷ್ಠ ಶ್ರೀಗೋಪಾಲಕೃಷ್ಣವಿಠ್ಠಲನೊಳು ಪಟ್ಟವಾಳ್ವೆ ಜಗಸೃಷ್ಟಿ ಪ್ರಳಯದಿ 3
--------------
ಅಂಬಾಬಾಯಿ