ಒಟ್ಟು 426 ಕಡೆಗಳಲ್ಲಿ , 80 ದಾಸರು , 395 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣ ಗುರು ರಾಮ ವಿಠಲ | ನೀನೆ ಪೊರೆ ಇವಳಾ ಪ ಮೌನಿ ಸದ್ವಂದ್ಯಗೆ | ಶ್ರೀನಿವಾಸದೇವ ಅ.ಪ. ಅರುಹಳೆನ್ನಳವಲ್ಲ | ಗುರುಕರುಣ ಸತ್ಪಾತ್ರೆವರಸುತ್ಯೆಜಸನಿತ್ತ | ಪಾನಕವ ಕೊಂಡುಸಿರಿ ರಮಣ ಮಂದಿರವ | ಸೇರಿ ನಾರಿಳ ಫಲವುಕರಗತವು ಆಗಲದು | ವರಮೂರ್ತಿಎನಿಸೆ 1 ಸುಪ್ತೀಶನಾಜ್ಞೆಯಲಿ | ಇತ್ತಿಹೆನೊ ಅಂಕಿತವಕತೃಸಿರಿ ರಾಮನೆ | ವ್ಯಕ್ತ ತೆರನಾದಾಮಕ್ತಗೊಡೆಯನೆ ದೇವ | ಭಕ್ತವತ್ಸಲಹರಿಯೆಆರ್ತರುದ್ಧರತಾ ಹರಿ | ಅರ್ಥಿಯಲಿಸಲಹೊ 2 ಹರಿದಾಸ್ಯದೊರಕಲ್ಕೆ | ಪೂರ್ವಸುಕೃತವೇ ಮಾರ್ಗತರಳೆ ಅದ ಪಡೆದಿಹಳು | ಕಾರುಣ್ಯ ಮಾರ್ತೆಮರುತಮತದಲ್ಲಿರುವ | ಕಾರುಣದಿ ಪೊರೆ ಇವಳಸರ್ವಜ್ಞಸರ್ವೇಶ | ಸುರ ಸಾರ್ವ ಭೌಮ3 ಭ್ರೂತ ಪಂಚಕದೇಹ | ಸುಸ್ಥಿರವು ಅಲ್ಲೆಂಬಖ್ಯಾತ ಮತಿಯನೆ ಕೊಟ್ಟು | ಸಲಹ ಬೇಕಿವಳಾಮಾತುಮೂತಿಗೆ ನಿನ್ನ | ನಾಮ ಸಂಸೃತಿಯಿತ್ತುಈ ತರಳೆನುದ್ದರಿಸು | ಮಾತಳಾಂತಕನೆ4 ಹಲವು ಮಾತೇಕೆ ಹರಿ | ಕಲಿಯುಗದಿ ತವನಾಮಬಲುಮಂದಿ ಜಪಿಸುತ್ತ | ಭವವ ದಾಂಟಿಹರೊಒಲಿಮೆಯಿಂದವಳನ್ನು | ಸಲಹಲ್ಕೆ ಪ್ರಾರ್ಥಿಸಿಹೆಎಲರುಣಿ ಶಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪ್ರಾಣದೇವನ ನಮಿಪೆ ನಮೋ ಪ್ರಾಣಕಧೀಶನೆ ಶರಣು ನಮೋ ಕಾಣಿಸು ಹರಿಯಂಘ್ರಿಯನು ನಮೋ ಪ್ರಾಣ ಪಂಚÀರೂಪಾತ್ಮ ನಮೋ ಪ. ಅಂಜನೆ ಆತ್ಮಜ ಕುವರ ನಮೋ ಸಂಜೀವನ ಗಿರಿ ತಂದೆ ನಮೋ ನಂಜುಂಡನ ಪ್ರಿಯ ಜನಕ ನಮೋ ಕಂಜಾಕ್ಷನ ದಾಸಾರ್ಯ ನಮೊ1 ಆಪ್ತವರ್ಗ ನಿರ್ಧೂತ ನಮೋ ಶಕ್ತ ಜರಾದಿ ಹಂತ ನಮೋ ತಪ್ತಕಾಂಚನ ಸುದೀಪ್ತ ನಮೊ 2 ಏಕವಿಂಶತಿ ಮತಧ್ವಂಸ ನಮೋ ಶ್ರೀಕಳತ್ರಪ್ರಿಯ ಪಾತ್ರ ನಮೋ ಏಕ ಚತುರ ನವಗ್ರಂಥ ನಮೋ ಜೋಕೆಯಿಂದ ನಿರ್ಮಿಸಿದೆ ನಮೋ 3 ಮುಕ್ತ ಜೀವರ ಸ್ತುತ್ಯ ನಮೋ ಯುಕ್ತಿವಂತ ಜಗದ್ವ್ಯಾಪ್ತ ನಮೋ ಶಕ್ತಿವಂತ ಶುದ್ಧಾತ್ಮ ನಮೋ ಭಕ್ತಭರಿತ ಹರಿಪ್ರೀತ ನಮೋ 4 ನಮೋ ನಮೋ ಶ್ರೀಗೋಪಾಲ ಕೃಷ್ಣವಿಠ್ಠಲನಿಗೆ ಪ್ರಿಯಬಾಲ ನಮೋ ನಮೋ ಶ್ರೀ ಭಾರತಿಲೋಲ ನಮಿಸುವೆ ಚಳ್ಳಕೆರೆಯ ಪಾಲ 5
--------------
ಅಂಬಾಬಾಯಿ
ಪ್ರಿಯ ಹಯಾಸ್ಯವಿಠಲ | ದಯದಿ ಪೊರೆ ಇವನಾ ಪ ನಯವಿನಯದಿಂ ಬೇಡ್ವ | ದಾಸತ್ವ ದೀಕ್ಷಾ ಅ.ಪ. ದಾಸರಾಯರ ಕರುಣ | ಪಾತ್ರ ನಿರುವನು ಈತಸೂಸಿದತಿಭಕುತಿಯಿಂ | ಸೇವೆಯನು ಗೈವಾ |ಏಸೊ ಜನ್ಮದ ಪುಣ್ಯ | ರಾಶಿ ಬಂದೊದಗುತಲಿಆಶಿಸುತ್ತಿರುವನೂ | ದಾಸದೀಕ್ಷೆಯನು 1 ಅಂಕಿತವ ನಿತ್ತಿಹೆನೊ | ಪಂಕಜಸನ ವಂದ್ಯಶಂಕೆಯಿಲ್ಲದೆ ಸ್ವಪ್ನ | ಸೂಚ್ಯದಂತೇವೆಂಕಟೇಶನೆ ಇವನಾ | ಮಂಕುಮತಿಯನೆ ಕಳೆದುಬಿಂಕದಿಂ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 2 ಶ್ರದ್ಧೆಯಿಂದಲಿ ಇವನು | ಮಧ್ವಮತ ದೀಕ್ಷೆಯಲಿಬದ್ಧವಾಗಲಿ ಹರಿಯೆ | ಸಿದ್ದ ಮುನಿವಂದ್ಯಾಶುದ್ದ ತತ್ವಗಳೆಲ್ಲ | ಬುದ್ದಿಗೇ ನಿಲುಕಿಸುತಶುದ್ದೋದ ನೀನು ತವ | ಪ್ರಧ್ವಂಸಗೊಳಿಸೊ 3 ಹರಿಯರಲಿ ಸದ್ಭಕ್ತಿ | ಕರುಣಿಸುತ ತೋಕನಿಗೆ ಪರಿಪರಿಯಲಿಂ ಕೀರ್ತಿ | ಸಂಪನ್ನನೆನಿಸೋಮರುತಂತರಾತ್ಮ ಹರಿ | ದುರಿತಾಳಿ ಪರಿಹರಿಸಿಕರುಣದಿಂ ಕೈಪಿಡಿದು | ಉದ್ದರಿಸೊ ಹರಿಯೇ 4 ಕೈವಲ್ಯದರಸಾಗಿ | ಭಾವಮೈದುನಗೊಲಿದುಬೋವ ಬಂಡಿಗೆ ಆದೆ | ಶ್ರೀವರನೆ ಹರಿಯೇಗೋವತ್ಸದನಿ ಕೇಳಿ | ಆವು ಧಾವಿಸುವಂತೆನೀವೊಲಿದು ಪೊರೆಯೊ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪ್ರೀತಿಪಾತ್ರ ಬುಧೇಂದ್ರ ಪ ಸತ್ಯಪ್ರಿಯರ ಕುವರಾ ನಿಜ ಭೃತ್ಯರ ಪಾಲಿಪ ಚತುರಾ ಭಯವ ಕಳೆವುತ್ತ ಪೊರೆದೆ 1 ವಿಷವನುಂಡರಗಿಸಿಕೊಂಡ ಧೀರಾ ವೃಷಕೇತು ಪಿತ ಭಕ್ತ ಶೌಂಡಾ ಉಸಿರೆತ್ತಗೊಡದೆ ಸಾಧಿಸಿದೆ ಮಧ್ವಶಾಸ್ತ್ರ 2 ಚರಣಕ್ಕೆ ಶರಣೆಂಬೆನಯ್ಯ ಎನ್ನ ಕರುಣದಿ ಪಾಲಿಸು ಜೀಯಾ ಪಾದ ಭೃತ್ಯರ ಚರಣ ಕಿಂಕರನ ಕಿಂಕರನೆನಿಸುವದೆನ್ನ 3
--------------
ಹನುಮೇಶವಿಠಲ
ಫಲವಿದು ಬಾಳ್ದ್ದುದಕೆ ಪÀ ಸಿರಿ ನಿಲಯನ ಗುಣಗಳ ತಿಳಿದು ಭಜಿಸುವುದೆ ಅ.ಪ. ಸ್ವೋಚಿತ ಕರ್ಮಗಳಾಚರಿಸುತ ಬಹು ನೀಚರಲ್ಲಿಗೆ ಪೋಗಿ ಯೊಚಿಸದೆ ಖೇಚರವಾಹ ಚರಾಚರ ಬಂಧಕ ಮೋಚಕನಹುದೆಂದ್ಯೋಚಿಸುತಿಪ್ಪುದೆ 1 ನಿಚ್ಚ ಸುಭಕುತಿಯಲಚ್ಯುತನಂಘ್ರಿಗ ತುಚ್ಚ ವಿಷಯಗಳ ಇಚ್ಛಿಸದೆ ಯ ದೃಚ್ಛಾಲಾಭದಿಂ ಪ್ರೋಚ್ಚನಾಗುವುದೆ 2 ಮನೋವಾಕ್ಕಾಯದನುಭವಿಸುವ ದಿನ ದಿನದಿ ವಿಷಯ ಸಾಧನಗಳಿಗೂ ಅನಿಶಾಂತರ್ಗತ ವನರುಹದಳ ಲೋ ಚನಗರ್ಪಿಸಿ ದಾಸನು ನಾನೆಂಬುದೇ 3 ವಾಸವ ಮುಖ ವಿಬುಧಾಸುರ ನಿಚಯಕೆ ಈ ಸಮಸ್ತ ಜಗಕೀಶ ಕೇಶವಾ ನೀಶ ಜೀವರೆಂಬ ಸುಜ್ಞಾನವೆ 4 ಪಂಚ ಭೇದಯುತ ಪ್ರಪಂಚವು ಸತ್ಯ ವಿ ಭವ ಮುಖ ಬಲಿ ವಂಚಕಗೆ ಸಂಚಲ ಪ್ರತಿಮೆ ಅಚಂಚಲ ಪ್ರಕೃತಿಯು ಸಂಚಿಂತಿಸಿ ಮುದ ಲಾಂಭಿತನಹುದೆ 5 ಪಂಚ ಋತುಗಳಲಿ ಪಂಚಾಗ್ನಿಗಳಲಿ ಪಂಚ ಪಂಚರೂಪವ ತಿಳಿದು ಪಂಚ ಸುಸಂಸ್ಕಾರಾಂಚಿತನಾಗಿ ದ್ವಿ ಪಂಚ ಕರಣದಲಿ ಪಂಚಕನರಿವುದೆ 6 ಹೃದಯದಿ ರೂಪವು ವದನದಿ ನಾಮವು ಉದರದಿ ನೈವೇದ್ಯವು ಶಿರದಿ ಪದ ಜಲ ನಿರ್ಮಾಲ್ಯವನೆ ಧರಿಸಿ ಕೋ ಸದನ ಹೆಗ್ಗದವ ಕಾಯುವುದೆ 7 ಪಾತ್ರರ ಸಂಗಡ ಯಾತ್ರೆ ಚರಿಸುತ ವಿ ಧಾತೃ ಪಿತನ ಗುಣ ಸ್ತೋತ್ರಗಳಾ ಶ್ರೋತ್ರದಿ ಸವಿದು ವಿಚಿತ್ರಾನಂದದಿ ಗಾತ್ರವ ಮರೆದು ಪರತ್ರವ ಪಡೆವುದೆ 8 ಹಂಸ ಮೊದಲು ಹದಿನೆಂಟು ರೂಪಗಳ ಸಂಸ್ಥಾನವ ತಿಳಿದನುದಿನದಿ ಸಂಸೇವಿಸುವ ಮಹಾಪುರುಷರ ಪದ ಪಾಂಸುವ ಧರಿಸಿ ಅಸಂಶಯನಪ್ಪುದೆ 9 ವರ ಗಾಯಿತ್ರೀ ನಾಮಕ ಹರಿಗೀ ರೆರಡಂಘ್ರಿಗಳ ವಿವರವ ತಿಳಿದು ತರುವಾಯದಿ ಷಡ್ವಿಧ ರೂಪವ ಸಾ ಅನುದಿನ ಧ್ಯಾನಿಸುತಿಪ್ಪುದೆ 10 ಬಿಗಿದ ಕಂಠದಿಂ ದೃಗ್ಭಾಷ್ಪಗಳಿಂ ನಗೆ ಮೊಗದಿಂ ರೋಮಗಳೊಗೆದು ಮಿಗೆ ಸಂತೋಷದಿಂ ನೆಗೆದಾಡುತ ನಾ ಲ್ಮೊಗನಯ್ಯನ ಗುಣ ಪೊಗಳಿ ಹಿಗ್ಗುವುದೆ 11 ಗೃಹಕರ್ಮವ ಬ್ಯಾಸರದಲೆ ಪರಮೋ ತ್ಸಹದಲಿ ಮಾಡುತ ಮೂಜಗದ ಮಹಿತನ ಸೇವೆ ಇದೆ ಎನುತಲಿ ಮೋದದಿ ಅಹರಹರ್ಮನದಿ ಸಮರ್ಪಿಸುತಿಪ್ಪುದೆ12 ಕ್ಲೇಶಾನಂದಗಳೀಶಾಧೀನ ಸ ಮಾಸಮ ಬ್ರಹ್ಮ ಸದಾಶಿವರೂ ಈಶಿತವ್ಯರು ಪರೇಶನಲ್ಲದೆ ಶ್ವಾಸ ಬಿಡುವ ಶಕ್ತಿ ಲೇಸಿಲ್ಲೆಂಬುದೆ 13 ಏಕೋತ್ತರ ಪಂಚಾಶದ್ವರ್ಣಗ ಳೇಕಾತ್ಮನ ನಾಮಂಗಳಿವು ಸಾಕಲ್ಯದಿಯಿವರರಿಯರೆಂಬುದೆ 14 ಒಂದು ರೂಪದೊಳನಂತ ರೂಪವು ಪೊಂದಿಪ್ಪವು ಗುಣಗಳಾ ಸಹಿತ ಇಂದು ಮುಂದೆಂದಿಗು ಗೋ ವಿಂದಗೆ ಸರಿಮಿಗಿಲಿಲ್ಲೆಂತೆಂಬುದೆ 15 ಮೇದಿನಿ ಪರಮಾಣಂಬು ಕಣಂಗಳ ನೈದಬಹುದು ಪರಿಗಣನೆಯನು ಮಾಧವನಾನಂದಾದಿ ಗುಣಂಗಳ ನಾದಿ ಕಾಲದಲಿ ಅಗಣಿತವೆಂಬುದೆ 16 ಹರಿಕಥೆ ಪರಮಾದರದಲಿ ಕೇಳುತ ಮರೆದು ತನುವ ಸುಖ ಸುರಿವುತಲೀ ಉರುಗಾಯನ ಸಂದರುಶನ ಹಾರೈ ಸಿರುಳು ಹಗಲು ಜರಿ ಜರಿದು ಬಾಳ್ವುದೆ 17 ಆ ಪರಮಾತ್ಮಗೆ ರೂಪದ್ವಯವು ಪ ರಾಪರ ತತ್ತ್ವ ಗಳಿದರೊಳಗೆ ಸ್ತ್ರಿ ಪುಂ ಭೇದದಿ ಈ ಪದ್ಮಜಾಂಡವ ವ್ಯಾಪಿಸಿಹನೆಂದೀಪರಿ ತಿಳಿವುದೆ 18 ವಿಷಯೇಂದ್ರಿಯಗಳಲಿ ತದಭಿಮಾನಿ ಸುಮ ನಸರೊಳು ನಿಂದು ನಿಯಾಮಿಸುತಾ ವಾಸುದೇವ ತಾ ವಿಷಯಂಗಳ ಭೋಗಿಸುವನೆಂದರಿವುದೆ 19 ಮೂಜಗದೊಳಗಿಹ ಭೂ ಜಲ ಖೇಚರ ಈ ಜೀವರೊಳೊ ಮಹೌಜಸನ ಪೂಜಿಸುತನುದಿನ ರಾಜಿಸುತಿಪ್ಪುದೆ 20 ಗುಣಕಾಲಾಹ್ವಯ ಆಗಮಾರ್ಣವ ಕುಂ ಭಿಣಿ ಪರಮಾಣ್ವಾಂಬುಧಿಗಳಲಿ ವನಗಿರಿ ನದಿ ಮೊದಲಾದದರೊಳಗಿಂ ಧನಗತ ಪಾವಕನಂತಿಹನೆಂಬುದೆ 21 ಅನಳಾಂಗಾರನೊಳಿದ್ದೋಪಾದಿಯ ಲನಿರುದ್ಧನು ಚೇತನರೊಳಗೆ ಕ್ಷಣ ಬಿಟ್ಟಗಲದೆ ಏಕೋ ನಾರಾ ಯಣ ಶ್ರುತಿ ಪ್ರತಿಪಾದ್ಯನು ಇಹನೆಂಬುದೆ 22 ಪಕ್ಷಗಳಕ್ಷಿಗಳಗಲದಲಿಪ್ಪಂ ತ್ಯಕ್ಷರ ಪುರುಷನಪೇಕ್ಷೆಯಲಿ ಕುಕ್ಷಿಯೊಳಬ್ಜಜ ತ್ರ್ಯಕ್ಷಾದ್ಯಮರರ ಈಕ್ಷಿಸಿ ಕರುಣದಿ ರಕ್ಷಿಪನೆಂಬುದೆ 23 ಕಾರಣ ಕಾರ್ಯಾಂತರ್ಗತ ಅಂಶವ ತಾರಾವೇಶಾಹಿತ ಸಹಜಾ ಪ್ರೇರಕ ಪ್ರೇರ್ಯಾಂಹ್ವಯ ಸರ್ವತ್ರ ವಿ ಕಾರವಿಲ್ಲದಲೆ ತೋರುವನೆಂಬುದೆ 24 ಸ್ತುತಿಸುತ ಲಕ್ಷ್ಮೀ ಪತಿಗುಣವ ಕೃತಿಪತಿ ಸೃಷ್ಟಿ ಸ್ಥಿತಿಲಯ ಕಾರಣ ಇತರ ಸರ್ವ ದೇವತೆಗಳಿಗಿನಿತಿಲ್ಲೆಂಬುದೆ25 ಪವನ ಮತಾನುಗರವ ನಾನಹುದೆಂ ದವನಿಯೊಳಗೆ ಸತ್ಕವಿ ಜನರ ಭವನಂಗಳಲಿ ಸಂಚರಿಸುತ ಸುಕಥಾ ಶ್ರವಣವ ಮಾಡುತ ಪ್ರವರನಾಗುವುದೆ26 ಪನ್ನಗಾಚಲ ಸನ್ನಿವಾಸ ಪಾ ವನ್ನಚರಿತ ಸದ್ಗುಣಭರಿತಾ ಜನ್ಯಜನಕ ಲಾವಣ್ಯೇಕನಿಧಿ ಜ ಗನ್ನಾಥವಿಠಲಾನಾನ್ಯಪನೆಂಬುದೆ 27
--------------
ಜಗನ್ನಾಥದಾಸರು
ಬಟ್ಟೆಯ ನೆವದಿಂದ ಬಂದು ತಟ್ಟ ಕವನೆ ಕಂಡು ಕಣ್ಣ ತೆರೆದ ಕೃಷ್ಣವೇಣಿ ನಿಮ್ಮ ಕಂಡೆ ದುಷ್ಟ ಮಾನವರ ಬಾಧೆಗೆ ಅಂಜಿ ಇತ್ತ ಬಂದೆ ಕಷ್ಟ ದುರಿತಗಳ ಕಳೆಯೆ ತಾಯೆ ಪ. ಭೋರಿಡುವ ಮಳೆಗೆ ಹಲ್ಲುಗಿಟಗರಿದು ಶೀತತಲೆ- ಗೇರಿ ಕಂಪಿಸಿ ನಡುಗುತ್ತ ಜಾರಿ ಕೆಸರೊಳು ಬಿದ್ದು ಮತ್ತೇಳುತಲಿ ದಾರಿಯನು ಕೇಳಿಕೊಳ್ಳುತ ಕ್ರೂರವಾಗಿದ್ದ ಜಾಲಿಯ ಮುಳ್ಳನೆ ತುಳಿದು ಹರಿ ನಾರಾಯಣ ಎನ್ನುತ ಹಾರೈಸಿ ನಿಮ್ಮ ದರುಶನಕ್ಕೆ ನಾ ಬಂದೆ ಘೋರ ದುರಿತವನು ಕಳೆಯೆ ತಾಯೆ 1 ನಿತ್ಯ ಕಲ್ಯಾಣಿ ನಿರ್ಜರಸ್ತೋತ್ರೆ ಶುಭಗಾತ್ರೆ ಪ್ರತ್ಯಕ್ಷ ವಿಷ್ಣುಜಾತೆ ಮಾತೆ ವಿಸ್ತರಿಸಲಾರೆ ಶ್ರೀ ವಿಷ್ಣು ಸಂಪ್ರೀತೆ ಸತ್ಪಾತ್ರ ಸಂಪೂಜಿತೆ ಪ್ರೀತೆ ಸತ್ತು ಹುಟ್ಟುವ ಜನ್ಮ ಕೋಟಲೆಯ ಖಂಡ್ರಿಸೆ ಪತಿತ ಪಾವನ ಚರಿತೆ ವ್ಯರ್ಥವಾಯಿತು ಜನ್ಮ ಸಾರ್ಥಕವ ಮಾಡಮ್ಮ ಮುಕ್ತಿಸಾಧನದಾತೆ ಮಾತೆ 2 ಸುರಗಂಗೆ ಕೃಷ್ಣಮಲಾಪಹಾರಿ ಮೂವರು ಕೂಡಿ ಬೆರೆದಿದ್ದ ಸಂಗಮದಲ್ಲಿ ಅರಿಸಿಣ ಅಕ್ಷತೆ ಗಂಧ ಕುಂಕುಮ ತಾಂಬೂಲಗಳ ಹರುಷದಿಂದರ್ಪಿಸುತಲಿ ಥರಥರದಿ ನೆರೆದ ಮುತ್ತೈದೆಯರೆಲ್ಲರು ಮರದ ಬಾಗಿನವ ಕೊಡುತಲಿ ಹರುಷದಿಂದಿಪ್ಪುದನು ಕಂಡೆ ಹೆಳವನಕಟ್ಟೆ ಅರಸು ರಂಗನ ಕೃಪೆಯಲ್ಲಿ ತಾಯೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಬಡವರೆಲ್ಲ ಬದುಕಿ ಸುಖದಲಿ ಬಹುಕಾಲ ಪ ಬಡವರೆಲ್ಲ ಸುಖದಲಿ ಜಗ ಕಡುಕರುಣಕೆ ಪಾತ್ರರಾಗಿ ದೃಢದಿ ಬಾಳಿ ಸಡಗರದಲಿ ಅ.ಪ ಕುಕ್ಷಿಗಾಗಿ ಗೈದು ಬಂದುದು ಲಕ್ಷವೆಂದು ತಿಳಿದು ನಮ್ಮ ಲಕ್ಷ್ಮಣಾಗ್ರಜನಾಜ್ಞೆಯೆಂದು 1 ಮಾನರಕ್ಷಣೆಗೆ ವಸ್ತ್ರವುಟ್ಟು ನಾನು ಎಂಬ ಮಮತೆ ಬಿಟ್ಟು ಜ್ಞಾನರತ್ನವ ಸಂಗ್ರಹಿಸುತ 2 ಜಗದ ಜನಗಳಂತೆ ನಡೆಯದೆ 3 ಯೋಗಿಗಳನು ನೋಡಿ ಹಿಗ್ಗಿ ಭೋಗಿಗಳನು ನೋಡಿ ತಗ್ಗಿ ತ್ಯಾಗ ಬುದ್ಧಿಯುಳ್ಳವರಾಗಿ ಭಾಗವತರಾಚರಣ ಪಿಡಿದು 4 ಪರರ ಸ್ವತ್ತಿಗಾಸೆಪಡದೆ ಎರೆಡು ಸುಖವು ಕರಗತವೈ 5
--------------
ಗುರುರಾಮವಿಠಲ
ಬಂದನು ಕೃಷ್ಣ ಗೋವಿಂದ ಮುಕುಂದ ಭವ ಬಂಧನ ಪರಿಹಾರ ಶೌರಿ ಪ ಸಾರಸಪತ್ರನೇತ್ರ ಅನಘ ಘನನೀರದÀ ನಿಭಗಾತ್ರ ಶಕಟಾಂತಕ ಧೀರ ಕರುಣಾ ಪಾತ್ರ ಮುರಹರ ಜಂಭಾರಿಸನ್ನುತ ಗೋತ್ರಾ ಧಾರಿ ಮುನಿಜನ ಮಂದಾರ ಗೋಪಾಲ ಘನ ಸಾರ ಶೋಭಿತ ಯದುವೀರ ನಾರಾಯಣ 1 ಪಂಡಿತ ಕುಸುಮಪಾಣೆ ಜನಕ ಶ್ರೀ ಅಂಡಜಗಮನ ಗಾನಲೋಲನೆ ತಂಡ ರಕ್ಷಕ ಪುರಾಣಪುರುಷ ಕೋ ದಂಡ ಪಾಣಿ ಧುರೀಣ ಕುಂಡಲಿಶಯನ ಭೂಮಂಡಲಾಧಿಪ ಬಲೋ- ದ್ದಂಡ ಪರಾಕ್ರಮ ಚಂಡಮಹಿಮ ರಾಮ 2 ವೇದವೇದ್ಯ ಸುನಾಮಾ ತ್ರಿಜಗನ್ನುತ ಯಾದವ ಸಾರ್ವಭೌಮ ಪರಮಾತ್ಮ ಆದಿತೇಯಾಬ್ಧಿ ಸೋಮ ರಮೇಶಾಂಬುಜೋದರ ಸುಗುಣಧಾಮ ಮಾಧವ ನರಮೃಗ ಪ್ರಹ್ಲಾದ ವರದ ಸನÀಕಾದಿ ವಂದಿತ ಚರಣ 3
--------------
ಹೆನ್ನೆರಂಗದಾಸರು
ಬಂದನೇನೆ ಸುಂದರ ಶ್ರೀರಾಮ ಚಂದಿರ ಪ ಸಿರಿವತ್ಸಧಾರನು ಶ್ರೀತಜನೋದ್ಧಾರನು ಮಾರ ಸುಂದರನು ಮಾ ಮನೋಹರನು 1 ಕೋಮಲ ಗಾತ್ರನು ಕಮಲಕಳತ್ರನು ಕಮಲಾಪ್ತ ತೇಜನು ವಿಮಲ ಸತ್ಪಾತ್ರನು 2 ಸಾಸಿರನಾಮನು ಭಾಸುರವದನನು ಈಶ ವಂದಿತನು ಶೇಷವಿಠ್ಠಲನು 3
--------------
ಬಾಗೇಪಲ್ಲಿ ಶೇಷದಾಸರು
ಬರಡು ಕಣ್ಗಳಿದ್ದರೇನು ಮನದ ಕಣ್ಣ ತೆರೆಯದ ಪ. ತರಳಗೊಲಿದ ವರದರಾಜದೊರೆಯ ನಿಜವನರಿಯದ ಅ.ಪ. ನಾರದಾದಿ ಮೌನಿವರರು ಸಾರಿಬಂದು ಸೇವಿಸಿ ಸಾರಸಾಕ್ಷನ ಮನವನೊಲಿಸಿ ಸಾರಭೂತರೆನಿಸಿದರು ಮನದ ಕಣ್ಣ ತೆರೆಯದಿಂತು 1 ತರಳಗೊಲಿದು ಕಂಬದಿಂದ ಬಂದು ಹಿರಣ್ಯನುರವ ಬಗೆದು ಕರುಳಮಾಲೆ ಧರಿಸಿ ಮೆರೆವ ನರಹರಿಯ ಕಾಣದ 2 ಈ ಕಳಂಕವೆಲ್ಲ ತೊಳೆದು ಶ್ರೀಕಟಾಕ್ಷಕೆ ಪಾತ್ರನಾಗಲು 3 ಶರಧಿಶಯನ ಪರಮಪಾವನೆ ಶರಣರಕ್ಷಕನೀತನ ವರದ ಶೇಷಶೈಲಧಾಮನ ವರದಿ ಪಡೆವೆ ಮನದಕಣ್ಗಳಂ 4
--------------
ನಂಜನಗೂಡು ತಿರುಮಲಾಂಬಾ
ಬರಿದೆ ಬಯಸಲು ಬರುವುದೇನೆಲೆ ಮರುಳು ಯೋಚನೆ ಬಿಡೆಲೆ ಮನಸೆ ಪ ಹರಿಯ ಬಳಿಯಲಿ ಪಡೆದಷ್ಟಲ್ಲದೆ ದೊರಕದೆಂದಿಗೆ ಬೇರೆ ತಾನು ಅ.ಪ ಶಾಂತಿತಾಳತಿಭ್ರಾಂತಿ ನೀಗಿ ಸಂತಜನ ಕೃಪಾಪಾತ್ರನಾಗಿ ಕರು ಣಾಂತರಂಗ ಸಿರಿಕಾಂತನಂಘ್ರಿಯ ಅಂತರಂಗದಿ ಭಜಿಸದೆ 1 ಶಮೆಯಗೂಡಿಹ್ಯ ಭ್ರಮೆಯನಳಿದು ಸುಮನದೋಳಿರ್ದು ಕ್ರಮದಿ ಅನುದಿನ ವಿಮಲ ಹರಿಕಥೆ ಶ್ರವಣದಿಂ ರಮಾರಮಣನಂಘ್ರಿಗೆ ನಮಿಸದೆ 2 ದಮೆಯ ಪಡೆದು ದಾಸನಾಗಿ ವಿಮಲನಾಮದ ಬಲವಗಳಿಸಿ ಅಮಿತಮಹಿಮ ಶ್ರೀರಾಮನಂಘ್ರಿ ಕಮಲವೊಲಿಸಿ ಭವತುಳಿಯದೆ 3
--------------
ರಾಮದಾಸರು
ಬರಿದೆ ಮೋಹದೊಳು ಬೆರೆದೆ ನಮ್ಮ ಗುರುವಾದಿರಾಜಾರ್ಯ ಚರಣಗಳ ಮರೆದೆ ಪ. ಸರ್ವಜ್ಞಗುರುಮತವ ನಿರ್ವಹಿಸಿ ಮಾಯಿಗಳ ಗಣಪತಿಶಕ್ತಿ ಪೂರ್ವದೇವತೆಗಳನು ಸರ್ವ ಪರರೆಂದೊರೆವ ದುರ್ವಾದಿಗಳ ಭಂಗಿಸಿ ಹಯವದನ- ಪರ ದೈವವೆನಿಸಿ ಮೆರೆವಂಥ ಪಾರ್ವತೀವರವಂದ್ಯಪದ ಪಾತ್ರನೆನಿಸದೆ 1 ಅಂತರ್ಬಹಿಃಶತ್ರು ಸಂತತಿಯ ಗೆಲುವ ತೋರಿಸುವ ಚಂತಿತಾಭೀಷ್ಟಗಳ ಪರಮಾಂತರಂಗದಿ ಕೊಡುವ ಕಂತುಕೃತ ಬಾಧೆಯನ್ನು ನಿಲದಂತೆ ಸಂತೈಸಿಸುವರನ್ನು ಕಾವ ಕ- ಲ್ಪಾಂತದಲಿ ಪವಮಾನನಾಗುವನ ಮರೆದೆ 2 ಮೂರಾರು ಎಂಬತ್ತು ಭಾರಿ ಕಲ್ಪಗಳಲ್ಲಿ ಶ್ರೀ ರಮಾರಮಣಪದ ವಾರಿಜಗಳನು ಭಜಿಸಿ ತೋರಿ ವೈಷ್ಣವ ತತ್ವ ಸಾರವನು ಸಮಧರಿಸಿ ಮಾರುತನ ಮತವೆ ಮಧುವೈರಿಪ್ರಿಯಕರವೆನಿಸಿ ಧೀರ ಕವಿ ಶುಭಕರವಜ್ಞಾನ ಸುಖ ಸಾರ ವೆಂಕಟಪತಿಯ ಮನದಿ ಧರಿಸಿರುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಹುಕಾಲಕೆ ಕಂಡೆ ಚೋದ್ಯವ ಇದು ಅಹುದಾದರಹುದೆನ್ನಿ ಇಲ್ಲವೆ ಛಿ ಎನ್ನಿ ಪ ಚಂಬು ಚರಿಗೆಯಂತೆ ತೆಗೆಯಿತು ತಾನೆತಾನಾಗಿ 1 ನಿತ್ಯ ಸಕಲತ್ತು ತಾನಾಗುತ ಜಾತಿಯ ನಡತೆಯನಡೆಸುವುದನು 2 ಸರ್ವತ್ರಸಮಗಾಣುತ ಮನೆಯೆಲ್ಲ ನೀರಾದುದು 3 ಕೊಳಗು ತಾನು ಒಲಿಸಿಕೊಂಡು ಮೇಳದಿ ಏಕೋ ಪಾತ್ರಗಳಿಂದ ಮೆರದುದ 4 ಜತನವು ಎಂದೆನ್ನಿಸಿಕೊಳ್ಳುತ ಲಕ್ಷ್ಮೀಪತಿಯಭೀಷೇಕಕ್ಕು ತಾನೆ ತಾನಾದುದ 5
--------------
ಕವಿ ಪರಮದೇವದಾಸರು
ಬಾಗಿ ಬೇಡುವೆ ಪಿಡಿಯೊ ಬೇಗ ಕೈಯಾ ಭಾಗವತ ಜನಪ್ರೀಯ ಭಾಗಣ್ಣದಾಸಾರ್ಯ ಪ ದ್ವಿಜ ಕುಲಾಬ್ಧಿಗೆ ಪೂರ್ಣ | ದ್ವಿಜರಾಜನೆಂದೆನಿಪ ವಿಜಯವಿಠಲದಾಸರೊಲುಮೆ ಪಾತ್ರ || ನಿಜಮನದಿ ನಿತ್ಯದಲಿ | ಭುಜಗಶಯನನಪಾದ ಭಜಿಪ ಭಾಗ್ಯದಿನಲಿವ | ಸುಜನರೊಳಿಡು ಎಂದು 1 ನೀನೇವೆ ಗತಿಯೆಂದ | ದೀನರಿಗೆ ನಾನೆಂಬ ಹೀನಮತಿ ಕಳೆದು ಪವಮಾನ ಪಿತನ | ಧ್ಯಾನಗೈಯ್ಯುವ ದಿವ್ಯ ಜ್ಞಾನ ಮಾರ್ಗವ ತೋರಿ | ಸಾನುರಾಗದಿ ಪೊರೆವ | ದಾನಿ ದಯಾವಾರಿಧಿಯೆ 2 ಮಂದಜನ ಸಂದೋಹ | ಮಂದಾರ ತರುವಿಜಿತ || ಕಂದರ್ಪ ಕಾರುಣ್ಯಸಿಂಧು ಬಂಧೋ || ಕಂದನಂದರಿದೆನ್ನ | ಕುಂದು ಎಣಿಸದೆ ಹೃದಯ ಮಂದಿರದಿ ಶ್ರೀ ಶಾಮಸುಂದರನ ತೋರೆಂದು 3
--------------
ಶಾಮಸುಂದರ ವಿಠಲ