ಒಟ್ಟು 459 ಕಡೆಗಳಲ್ಲಿ , 61 ದಾಸರು , 419 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಿಗಮ ಗೋಚರ ಸಿರಿರಮಣಾ ಪ ವಾಚಾಮಗೋಚರ ಕಂಜ ಲೋಚನ ಗುಣ ಪೂರ್ಣಾ ಅ.ಪ ಪರಮ ಪವಿತ್ರ ಸಕಲಗುಣಭರಿತ ಜಗತ್ಪ್ರಭುವೇ ನರಸುರ ಗರುಡೊರಗ ಕಿನ್ನರರೊಳು ನೀನಿರುವೆ 1 ಪಾವನ ಸುಜನಾ ವನಜಗ ಜೀವನ ಮಮಸ್ವಾಮಿ ಸಾವಧಾನದೊಳೆನ್ನ ಮೊರೆ ಕೇಳ್ ಸರ್ವಾಂತರ್ಯಾಮಿ 2 ಗುರುರಾಮ ವಿಠಲ ನಿಜ ಭಕ್ತರಿಗೆ ಕಾಮಧೇನು 3
--------------
ಗುರುರಾಮವಿಠಲ
ನಿಗಮ ಆಗಮಗೋಚರ ಜಗನ್ಮೋಹ ಜಗದೀಶ ಪಾಲಿಸು ಎನ್ನ ಪ ಖಗವರಗಮನ ಜಗದ ಜೀವನ ಪೊಗಳುವೆ ನಗಧರ ಅನಘನೆ ನಿನ್ನ ನಗೆ ಮೊಗದೋರೆನಗಗಲದೆ ಅನುದಿನ ನಗಜನಮಿತ ಮಿಗಿಲಗಣಿತ ಮಹಿಮ ಅ.ಪ ಕದನಕಂಠೀರವ ಉದಧಿಸದನ ಮಹ ಅಧಮಕುಲದ ಮದಸಂಹರ ಹದಿನಾರುಸಾವಿರ ಸುದತಿಯರ ಮನ ವಿಧ ವಿಧ ಸುಲಿದ ಸುಂದರ ಸದಮಲರಾಧೇಯ ಮದನಕದನದಿಂ ಕದಲದ ಆನಂದ ಮಂದಿರ ಕುದುರೆ ತಿರುವಿ ಪಾದಪದುಮದಾಸನ ಘೋರ ಕದನಗೆಲಿಸಿದ ಗಂಭೀರ ಯುದುಕುಲಪಾವನ ಮದನನಯ್ಯ ರಮಾ ಪದುಮಾವತಿಯ ಪಂಚಜೀವನಸದನ ಪದುಮವದನ ಸದಸದುಗುಣಗಳ ಸದ್ಹøದಯ ಉದಯ ಮುದ ವುದಯಾಗೆನ್ನೊದನದಿ1 ನಲಿದು ನಲಿದು ಪೊಂಗೊಳಲುನೂದುವ ಬಲುಚೆಲುವ ಚಿದ್ರೂಪನಾಟಕ ಒಲದು ಭಜಕಜನರ್ಹೊಲಬು ತಿಳಿವ ಚಿ ತ್ಕಳಾಭರಿತ ವಿಶ್ವವ್ಯಾಪಕ ಜಲಜಮಿತ್ರ ಕೋಟಿಕಳೆಕಿರಣಗಳಿಂ ಖಳಕುಲಭೀತ ಸುಫಲಪ್ರದ ಪರತರ ಇಳೆಮಂಡಲತ್ರಯ ಪಾಲಕ ಕಲಿಮಲಹರ ನಿರ್ಮಲನಿಜಚರಿತ ಮಲಿನ ಕಳೆದು ನಿರ್ಮಲನೆನಿಸೆನ್ನ ಒಲಿದುಪಾಲಿಸು ಸ್ಥಿರ ಚಲಿಸಿದಚಲಮನ ಸುಲಭಭಕುತ ಬಲ ವಿಲಿಸಿತಕರುಣಿ 2 ಸಿಡಿಲುಕೋಟಿಸಮ ಫಡಫಡಸ್ತಂಭವ ಒಡೆದು ಮೂಡಿದ ತ್ರಿವಿಕ್ರಮ ಕಡುರೋಷದಿ ಕೆಂಗಿಡಿಗಳನುಗುಳುವ ಕಡುಗಲಿಗಳಗಲಿ ನಿಸ್ಸೀಮ ಘುಡುಘುಡಿಸುತ ಆರ್ಭಟಿಸುತ ದುರುಳನ ಒಡಲಬಗಿದ ಕಡುಪರಾಕ್ರಮ ಗಡಗಡ ನಡುಗುವ ದೃಢತರ ಬಾಲನ ಪಿಡಿದು ಪೊರೆದ ಭಕ್ತ ಸುಖಧಾಮ ಉಡುಮಂಡಲ ವರಗಡರಿದ ಶಾಪವ ತಡೆಯದೆ ಹಡೆಹಾಯ್ಸ್ಹಿಡಿದೆಲೋಕವರ ಜಡಜಭವ ತೊಡರನು ಗಡ ಕಡಿದೆನ್ನಯ ನುಡಿಯೊಳೊಡೆದು ಮೂಡು ಒಡೆಯ ಶ್ರೀರಾಮ ಪ್ರಭು 3
--------------
ರಾಮದಾಸರು
ನಿನಗಿದು ಹಿತವೇ | ಇದು ಹಿತವೇ ಪ ಕಂಸಾರಿ ಚರಣವ ನಂಬದೇ ಕ್ಷಣಿಕದ | ಸಂಸಾರದಲಿ ಬೆರಿಯಬೇಡಾ 1 ಕನ್ನಡಿಯೊಳಗಿನಾ ಹೊನ್ನಿನಾ ಗಂಟ ನೋಡಿ | ಕಣ್ಣಗೆಟ್ಟಿರುವರೇ ಮೂಢಾ 2 ಬಿಸಿಲಿನ ನೀರಿನಿಂದೆ ತೃಷೆಯಾರಿಸುವದುಂಟೆ | ಹಸಗೆಡದಿರು ವಿಷಯ ಕೂಡಾ | 3 ಕನಸಿನ ಸಂಪದವನೆನೆಸಿ ತಾ ಹಿಗ್ಗುವರೆ | ಮನವೇ ನೀ ಮಥನಿಸಿ ನೋಡು 4 ದಾವನು ಗುರು ಮಹಿಪತಿ ಪ್ರಭು ಭಜಿಸನು | ಅವಗಿಲ್ಲ ಸುಖಸುರವಾಟಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನಗ್ಯಾಕೋ ಜನರಂಜನೆ | ವಣಾ ಭಂಜನೆ ಪ ಎಲ್ಲವಿದ್ಯವ ಸಾಧಿಸಿ ಮೆರೆಯಬೇಕೆಂಬ | ಬಲ್ಲವಿಕೆ ಹೆಮ್ಮೆಗೆ ಬೀಳುರೆ | ಯಳ್ಳಿಗೆ ಬೆಲ್ಲವ ಹುಯಲು ಹೋದಂತವಯ | ಸುಳ್ಳಿನ ಭ್ರಾಂತಿ ಕಳುವರೇ 1 ಹೆಣಗುತಿ ದೀಕ್ಷಿತನೆಂಬ ಮನ್ನಣಿಗ್ಯಾಗಿ | ದಣಿವರೆ ಕರ್ಮದಿ ದಣ್ಣನೆ | ಮುಣುಗುವವನ ತೆಲಿಮ್ಯಾಲ ಕಲ್ಲನ್ನಿಟ್ಟರೆ | ಗಣಿಸದೇ ದಾಟಲು ಬಲ್ಲನೆ 2 ಶರಣ ಕೊಳಬೇಕೆಂದು ಬೂದಿ ರುದ್ರಾಕ್ಷಿಯ | ಧರಿಸಿ ಕಾವಿಯ ಸೋಗು ಮಾಡುವರೆ | ಹರುಷದಿ ಖಜ್ಜಿಗೆ ಬಿಸಿನೀರು ಹೊಯ್ದಂತೆ | ಮರುಳೆ ಜನ್ಮ ಸಾಧನ ಕೂಡುರೇ 3 ಕಾಲನುಕೂಲವಿದ್ದ ಕೈಯಲಿ ಪರಗತಿ | ಕೀಲವರಿತು ಜ್ಞಾನ ಪಡೆವುದ | ಕೊಳ್ಳೆ ಹೋದ ಬಳಿಕ ಕೂಗುವ ಪರಿಯಲಿ | ಚಾಲವರಿದರಾಗ ಬಾರದು 4 ಒಂದೇ ನಿಷ್ಠೆ ಒಂದೇ ಮಾರ್ಗದಿ ಮನ | ದಂದುಗ ಬಿಟ್ಟು ಶರಣ ಹೊಕ್ಕರೆ | ತಂದೆ ಮಹಿಪತಿ ಸುತ ಪ್ರಭು ಬೀರುವ | ಮಂದನಾಗದೇ ತಿಳಿ ಇನ್ನಾದರೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ನಾನೇನೆಂದೆ ನಿರ್ಮಲ ರೂಪನೆ | ಪನ್ನಗ ಭೂಷಣ ಪರಮ ಸದಾಶಿವ ಪ ಸುರರು ಮೊರೆಯಿಡೆ ವಿಷವ ಧರಿಸಿ ಜಗ | ಉರಿಯಹದೆನುತ ಕಂಠದಿರಿಸಿದನು || ದುರಳ ದೈತ್ಯನ ಕೊಲ್ಲಲಾಗಿ ಅರ್ಧಾಂಗವ | ಹರಿಗೆ ನೀಡಿದ ದೇವ ಶರಣೆಂದೆನಲ್ಲದೇ || ಉರಗಣ್ಣಿನವನೆಂದೇನೇ | ಪರಹೆಣ್ಣವ | ಶಿರದೊಳಿಟ್ಟವನೆಂದೆನೇ | ಜಗದೊಳು || ಅರೆ ಮೈಯ್ಯವನೆಂದೆನೇ | ನಿಜಪದ | ಶರಣರಿಷ್ಟಾರ್ಥವ ನೀವನೇ ಬಾಯಂದೆ 1 ಸದ್ಗತಿ ನೀಡಿದ ಬ್ಯಾಡಗ ಮರ ದೊಪ್ಪ | ಲುದುರಿಸವಗ ನಿಜವ ದೋರಿದ || ಮುದದಿಂದ ಪಾಶುಪತವಾನಿತ್ತ | ಸದಮಲಾ ನಂದನೇ ಶರಣೆಂದೇ ಕಾಲಿಲಿಂ || ದ್ವೋದಿಸಿ ಕೋಂಡವನೆಂದೆನೇ | ಬಾಯಿಂದುಗು | ಳಿದರೆ ತಾಳ್ದದವನೆಂದೆನೇ | ನರಕಾಳ || ಗದಿ ಸೋತವನೆಂದೆನೇ | ವರಮುನಿ | ತ್ರದಶಾಧಿಪತಿ ಮುಖ್ಯ ಸೇವಿತ ಬಾಯಂದೆ 2 ಸರಸಿಜ ಭವನ ತಲೆಯ ನೊಂದು ಶಳದುಸಾ | ವಿರಭುಜ ನೀಡಿದ ಬಲಿಸುತಗ || ಸಿರಿಯೊಳನ ಕುಟುಂಬಕ್ಕೆ ಕೈವಲ್ಯವ | ಕರುಣಿಸಿದರಸನೆ ಬಾಯಂದೆ ಕಪಾಲ || ಕರದಿ ಪಡಿದವನೆಂದೆನೇ | ನರಮಾಂಸಕ | ಹರಿದು ಪೋದವನೆಂದೆನೇ | ಬಾಗಿಲಕಾವಾ || ಸುರನ ಬಂಟನೆಂದೆನೇ | ಸಲಹುವಾ | ಗುರು ಮಹಿಪತಿ ಪ್ರಭು ನಮೋ ನಮೋ ನಿನಗೆಂದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ಭಕ್ತರು ಬಹಳ ಬಲವಂತರಹುದೈ ಜನ್ಮಜನ್ಮಕೂ ಚರಣಶರಣನ್ನ ಮಾಡೈ ಪ ಹಾರಿದನು ಹನುಮಂತ ಕಡಲ ಕಾಲುವೆಯಂತೆ ಸಾರಿ ಸೇತುವೆಯ ಕಟ್ಟಿ ನೀ ದಾಟಿದೇ ಮಾರುತಿಯು ಬಲ್ಲಿದನು ಎಂದು ನಾಂಪೇಳಲೇ ಸಾರಸಾಕ್ಷನೆ ಸಾಕ್ಷಿ ಯೇತಕೈ ಬೇರೆ 1 ಭೀಷ್ಮನನು ಬೆದರಿಸಲು ತೋರಚಾಪವ ತೊಟ್ಟ ಸೂಕ್ಷ್ಮದಿಂಹಾರಿಸಿದ ಸಂಗರದಲವನು ತೀಕ್ಷ್ಣಸಾಹಸಿಯಾತನೆಂದು ನೀಂತಿಳಿಯತೈ ಶ್ರೇಷ್ಠ ಮಾರುತಿಕೈಯ ಪರಶುವಂ ಕೇಳು 2 ಶಬರ ಶಂಕರನೊಡನೆ ಕಾದಿ ಕಡೆಯಲಿ ಗೆಲ್ದು ಪ್ರಬಲನೆನ್ನಿಸಿ ಪಾಶುಪತವನ್ನೆ ಪಡೆದಾ ಪ್ರಭುವೆ ನಿನ್ನು ಪದೇಶ ಪಡೆದ ಪಾರ್ಥನ ಕೇಳು ಸುಬಲರೈ ಜಾಜೀಶ ದಾಸರೀ ಜಗದಿ 3
--------------
ಶಾಮಶರ್ಮರು
ನಿನ್ನ ಹೊರತು ಅನ್ಯರನರಿಯೆನೂ ಶ್ರೀ ವಾಸುದೇವಾ ನಿನ್ನ ಹೊರತು ಅನ್ಯನರಿಯೆನೂ ನಿನ್ನ ಹೊರತು ಅನ್ಯರರಿಯೆ ಪನ್ನಗೇಂದ್ರವಾಸ ಹರಿಯೆ ಸನ್ನುತಾತ್ಮ ನಿಜವನಿತ್ತು ಪ್ರಸನ್ನ ಗುರುವರೇಂದ್ರ ದೇವಾ ಪ ಉರಗನ್ಹೆಡೆಯ ನೆರಳ ಸ್ಥಿರವೆಂದು ಕಪ್ಪೆಯು ನಿಂತ ತೆರದಿ ವಿಷಯದೊಳಗೆ ಬೆರದು ಬೆಂದೆನು ನಾ ದುರಿತ ದುಷ್ಟಗಣದಿ ಹರಿದೂ ಮೃತ್ಯುವನೆ ಮರೆದು ಅರಿವು ಮಾಯವಾಗಿರುವ ಎನ್ನಾ ಸ್ತರದ ಆತ್ಮಪ್ರಭೆಯ ಮರೆತು ಇರುವ ಎನ್ನ ಮೇಲೆ ನಿನ್ನ ಕರುಣವಿಟ್ಟು ಕಾಯ್ದ ದೇವಾ 1 ತತ್ವವಿಂಶತಿ ನಾಲ್ಕು ಕೂಡಿದಾ ಈ ದೇಹದಲಿ ಏ ಕತ್ವವಾಗಿ ಇದನೆ ನಂಬುತಾ ಮುನ್ನರಿಯದಲೆ ವಿ ಚಿತ್ರವಾಸ್ತುವನ್ನು ಮರೆತು ಸತ್ತು ಹುಟ್ಟಿತೊಳಲಿ ಬಳಲಿ ನಿತ್ಯ ನಿಜದೊಳಿಟ್ಟ ದೇವಾ 2 ಆದಿ ಮಧ್ಯ ಅಂತರಾಂತದಿ ತುಂಬಿರುವ ವಸ್ತು ನಾದ ಬಿಂದು ಸ್ವಪ್ರಕಾಶದಿ ಹೃದಯದಲಿ ತೋರ್ಪ ಭೇದಾತೀತ ನಿರ್ವಿಕಾರದಿ ಸುಬೋಧದಿ ಆದರದಿ ಶಾಂತಿ ನಿಜದಾದಿ ಸುಖವನಿತ್ತ ಗುರು ಪಾದಪದ್ಮ ನೆನೆದು ಪೂರ್ಣನಾದ ನಾರಾಯಣ ಪ್ರಭು 3
--------------
ಶಾಂತಿಬಾಯಿ
ನಿನ್ನವ ನಾನೆಂದು ಸಿರಿನಲ್ಲಾ ರಕ್ಷಿಸೋ | ಎನ್ನವಗುಣಗಳ ಎಣಿಸದೆ ದಯದಿಂದ ಪ ನಿನ್ನ ಮೂರುತಿಯ ಬೆಳಗವದೋರಿಸಿ | ನಿನ್ನ ಪಾದಾಂಬುಜ ಪರಿಮಳ ಸುಳಿಸಿ | ನಿನ್ನ ನಾಮಾಮೃತ ಸವಿಸವಿ ಉಣಿಸಿ1 ನಿನ್ನ ಪೂಜಿಸಿಕೊಂಡು ಕರಗಳಿಂದ | ಚೆನ್ನಾಗಿ ಪ್ರದಕ್ಷಿಣೆಯಾ ಪಾದಗಳಿಂದ | ಕಾಯ ನಮನದಿಂದ - ಎನ್ನ ಮನವಿಟ್ಟು ನಿನ್ನ ನೆನುವಿನಿಂದಾ2 ಅನುದಿನ ಕೊಟ್ಟು ನಿನ್ನ ದಾಸರ ಸಂಗ | ಕೊನೆದೇಳದಿರಲೆನ್ನಾ ವಿಶ್ರಾಮದಂಗ | ನೀನಾಗಿರು ತುಂಬಿಯೆನ್ನಾ ಬಾಹ್ಯಾಂತರಂಗ | ಘನಗುರು ಮಹಿಪತಿ ಪ್ರಭುಶ್ರೀರಂಗ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವನೆನಿಸಿದಾ ಮಾನವನಿಂಗೆ ಇನ್ನು ಭವಭಯ ಉಂಟೇ ಭಕುತ ವತ್ಸಲ ಕೃಷ್ಣಾ ಪ ಶ್ರವಣ ದರಹು ಇಲ್ಲಾ ನವವಿಧ ಭಜನಿಲ್ಲಾ ಕವಿತದನುಡಿಯ ಚಾತುಯ್ರ್ಯವಿಲ್ಲಾ ತವಚರಣವನಂಬಿ ಅವನಿಯೋಳಗನಿಶಿ ದಿವಸದಿ ಅಚ್ಯುತಾನಂತ ಗೋವಿಂದ ಯನುತಲಿ 1 ಘನ್ನ ವಿರಕ್ತಿಯಿಲ್ಲಾ ಮನ್ನಣೆಯ ತಪವಿಲ್ಲಾ ಉನ್ನತ ದ ವ್ಯತಶೀಲ ಕರ್ಮವಿಲ್ಲಾ ಅನ್ಯದೈವ ಕೆರಗದೆ ನಿನ್ನ ನಾಮ ನಿನ್ನ ಮುದ್ರೆ ನಿನ್ನವರಪರಿಚಾರ ತನದಲ್ಲಿ ರಮಿಸುತಾ 2 ಮರೆದೊಮ್ಮೆನೆನೆದರೆ ಸರಿವದಘರಾಶಿ ಅರಿದೊಮ್ಮೆನೆನೆಯಲು ಗತಿಸಂಪದಾ ದೊರೆವುದೆನುತಶೃತಿ ನಿರುತ ಸಾರುತಲಿದೆ ಗುರುಮಹಿಪತಿ ಪ್ರಭು ಎನ್ನನುದ್ದರಿಸುದೈಯ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿಲಿಸಯ್ಯಾ ನಿಲಿಸೆನ್ನ ಮನವ ಶ್ರೀ ಹರಿಯೇ ನಿನ್ನಾ | ಹೊಳೆವ ಚರಣದಲ್ಲಿ ನೆಲೆಗೊಂಬುವಂದದಿ ಪ ಯರಳಿಯು ಘಂಟಾನಾದಕೆ ಬಲೆ ಹೋಗುವಂತೆ | ಮರುಳಾಗಿ ತರಣಿಯರಾಳಾಪದಿ | ಭರದಿಂ ದೀವಿಗೆ ಕಂಡು ಪತಂಗ ಮಡಿವಂತೆ | ಹರಿದು ರೂಪ ವಿಷಯದಲಿ ಮುಗ್ಗುತಿಹುದೋ1 ಕರಿ ಅಂಗ ಸಂಗದೀ ಕುಣಿಯಾ ಬೀಳುವಂತೆ | ಸ್ಪರುಶ ವಿಕ್ಷಯದಲಿ ಮೈಮರೆದು | ಯರಗಿ ಮಾಂಸಕ ಗೋಣ ನೀವ ಮಚ್ಛದಂತೆ | ನಿರುತ ಜಿವ್ಹಾಸ್ವಾದಕ ತೊಳಲುತಲಿಹುದೈಯ್ಯಾ2 ಪರಿಮಳಕಾಗಿ ಬ್ರಮರ ಸೆರೆ ಬಿದ್ದಂತೆ | ಹರುಷ ಪಡುತ ಭೋಗ ದ್ರವ್ಯದಲಿ | ತರುವರಿ ತನಲಿಂತು ಮಾಡಿ ವಿಷಯದಿ ಬಂದು | ದುರಿತ ಮೊನೆಗೆಯನ್ನ ಗುರಿ ಮಾಡಿತಿಹುದೈಯ್ಯಾ3 ಐದು ಮೋರೆಯಲಂತು ಹರಿಗುಡದೆವೆ ಮತ್ತ | ಐದು ಪರಿಯ ಕಾವಲಿಯ ನಿರಿಸೋ | ಮಾಧವ ನಿಮ್ಮ ಸತ್ಕಥೆಗಳ ಶ್ರವಣಕ | ಪಾದ ಧ್ಯಾನದಿ ಹಿಂಗದಂದದಿ ನಯನದಿ 4 ನಿನ್ನ ದಾಸರ ಸಂಗ ವನುದಿನ ದೇಹಕ | ನಿನ್ನ ನಾಮಾಮೃತ ಜಿವ್ಹೆಯಲಿ | ನಿನ್ನ ನಿರ್ಮಾಲ್ಯ ತುಳಸಿಯಾ ಫ್ರಾಣಿಸುವ ತಾ | ಯನ್ನನುದ್ದರಿಸು ಮಹಿಪತಿ ಸುತ ಪ್ರಭುವೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀ ಮುನಿದು ಇಳೆಯೊಳಗೇ| ಸುರಮುನಿ ಜನಪಾಲನ ಮನದಲಿ ಬಂದದಿ ನೆರೆಯದೇ ಸಾರುವದೀಗ ಪ ನಿನ್ನಯ ಒಪ್ಪುವ ಮಾರ್ಗವ ನೋಡುತ| ಮುಚ್ಚನು ಕುಡಿಗಂಗಳ ಯವಿಯಾ| ಪನ್ನಗವೇಣೀ ನಿನ್ನವಿಯೋಗ ದುಗುಡದೀ| ಕುಳಿತನುಡಗಿ ಅವಯವ ಸೋಹ್ಯಾ 1 ನಿನ್ನ ಕಾಣುವೆ ನೆಂಬಂಥ ವಾಣಿಯಲೆದ್ದು ಲಜ್ಜಿಸಿ ಹಿಂದಕ ಕಾಲೆಳೆದಾ| ಘನ್ನ ವಿರಹ ತಾಪದ ದೆಶೆಯಿಂದಲಿ ಕಿಡಿ ಕಿಡಿ ಜ್ವಾಲಾಂಗನು ಆದಾ 2 ಕಪಟದಿ ಬಂದು ನೋಡುವೆ ನಿನ್ನೆನುತಲಿ ಯಾಚಕ ರೂಪತಾಳಿದನು| ವಿಪುಳಾಂಗ ತಾಳಲಾದರದೇ ನಿನ್ನ ಕುವರಿಯ ತೊರೆಂದೆ ಚಂದನು ಶರಧಿಯನು3 ದಿನದೊಳಗರಗಳಗಿ ಗಮಿಸದು ಯನುತಲಿ ವನದೋಳು ಪೋಗಿ ಹೊತ್ತುಗಳೆವಾ|ಮನಿ ಮನಿ ಪೊಕ್ಕು ಗೋಕುಲದಲಿ ನಿನ್ನನು ಅರಸುತಿಹನು ಪಾವನ ದೇವಾ4 ಕ್ಷತ್ರೀಯರು ನಿಷ್ಠುರರೆಂದು ನಿನ್ನಮ್ಯಾಲಿನ ಕೋಪದಿ ಕಂಡ ವೃತವಳದಾ| ಅತಿತವನೋಡದೇ ತಾನಾಗಿ ಬಂದನು ಹಯವೇ ನೋಡೆ ಜೀವನ ಜಗದಾ 5 ಕುವಲಯ ಲೋಚನೆ ಕೂಡಿದ ನಿಮ್ಮಿರ್ವರ ಹಾಸ್ಯದ ಮುಖವನು| ಜವದೀ ಅವನಿಲಿ ಕಂಡೆನು ಧನ್ಯಧನ್ಯಾದೆನು ಮಹಿಪತಿ ಸುತ ಪ್ರಭುವಿನ ದಯದೀ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀಡೆಲೋ ಶ್ರೀರಂಗಾ ನಿನ್ನ ದಾಸರ ಸಂಗಾ ಪ ಕೂಡಿಸಿ ತವ ಚರಿತಾಮರ ಗಂಗಾ | ಮಾಡುವದು ಭವಭಂಗಾ1 ಮೂಡಲುದಯದಲಿ ಜ್ಞಾನಪತಂಗಾ | ಓಡುದು ತಮ ಅಂತರಂಗಾ 2 ಸುಗಮದಿ ಗುರುಮಹಿಪತಿ ಪ್ರಭು | ಕಂಗಳಿಗೆ ದೋರುವುದು ಸುಖದಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀನೆ ಕರುಣಿ ದೀನಪಾಲ ದಾನವಾಂತಕನಾಥಬಂಧು ಪ ಕಾಸಾರಕಿಳಿದು ಕರಿಯ ಕಾಯ್ದಿ ಹೇಸದೆ ತರುಣಿ ಮೊರೆಯ ಕೇಳ್ದಿ ಬೇಸರಿಲ್ಲದೆ ದಾಸಜನರ ಆಸೆ ಪೂರೈಸಿ ಪೊರೆದಿ ಪ್ರಭು 1 ಬಾಲಗೈದ ತಪಕೆ ಒಲಿದಿ ಮೇಲುಪದವಿ ಕರುಣಿಸಿದಿ ಕಾಲಗೆ ಕಾಲನಾಗಿ ಮೆರೆವ ಖೂಳರಕ್ಕಸನುದರ ಸೀಳ್ದಿ 2 ನಿಗಮ ತಂದಿ ಭಾರಬೆನ್ನಲಿ ಪೊತ್ತು ನಿಂದಿ ಹಾರೈಸಿ ಕರೆವ ಭಕುತ ಜನಕಾ ಧಾರ ಮಮಪ್ರಾಣೇಶ ಶ್ರೀರಾಮ 3
--------------
ರಾಮದಾಸರು
ನೀನೆ ದಯಾಶರಧಿ ತ್ರಿಜಗದಿ ಧ್ಯಾನದಾಯಕ ಮಮಪ್ರಾಣ ಜಾನಕೀ ಜೀವ ಪ ದೀನರ ಪಾಲಿಪ ಜಾಣ ಮಹಿಮ ಪ್ರಭು ಕ್ಷೋಣಿಯೋಳ್ನಿನ್ನ ಸಮಾನ ದೇವರ ಕಾಣೆ 1 ಒಲಿದು ಕಂಬದಿ ಬಂದಿ ಬಲಿಯ ಬಾಗಿಲ ಕಾಯ್ದಿ ಲಲನಾಮಣಿಗೆ ಒಲಿದು ಕುಲವನುದ್ಧರಿಸಿದಿ 2 ಕರಿಯು ಕರೆಯಲು ಬಂದಿ ತರುಣಿ ಬೆಂಬಲ ನಿಂದಿ ಚರಣದಾಸರ ಪ್ರಿಯ ಕರುಣಿ ಶ್ರೀರಾಮ 3
--------------
ರಾಮದಾಸರು