ಒಟ್ಟು 773 ಕಡೆಗಳಲ್ಲಿ , 67 ದಾಸರು , 468 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನದಿಗಳು ಗಂಗಾದೇವಿ ನಮೋ ನಮೋ ಗಂಗಾದೇವಿ ತರಂಗಿಣಿ ನೀ ಮುದ್ದು ಮಂಗಳಾಂಗನ ಮುಖ ತೋರಿಸೆ ಗಂಗಾದೇವಿ ಪ ವಾಮನನಖದಿಂದ ಒಡೆದÀು ಬ್ರಹ್ಮಾಂಡ ಬಹಿರಾವರಣದಿಂದಿಳಿದೆಯೆ ಬಹಿರಾವರಣದಿ ಇಳಿದು ನಿರಂಜನ ಆಲಯದೊಳು ಬಂದೆ ಭರದಿಂದ1 ಹರಿಪಾದೋದಕವಾಗಿ ಹರಿದು ಬಂದೆಯೆ ನೀನು ಹರನ ಜಟೆಯಲ್ವಾಸವ ಮಾಡಿ ಹರನ ಜಟೆಯಲ್ವಾಸವ ಮಾಡಿ ನೀ ಮೇರುಗಿರಿಯಲ್ಲಿ ನಾಲ್ಕು ಸೀಳಾದೆಯೆ 2 ಜಕ್ಷು ಭದ್ರಾ ಸೀತಾ ಎಂಬ ಮೂವರ ಬಿಟ್ಟು ಭರತಖಂಡಕೆ ಬಂದೆ ಬಹುದೂರ ಭಾಗಮ್ಮ ಪ್ರತ್ಯಕ್ಷ ಅಳಕನಂದನ ತಾಯಿ 3 ಸಾಗರನರಸಿ ಪ್ರಯಾಗದಿ ಮರದ ಬಾಗಿಣವನು ಕೊಂಬೆ ವೇಣಿಯ ದಾನ ಕೊಂಬೆ ವೇಣಿಯ ದಾನ ಮುತ್ತೈದೇ- ರಾಗಿರೆಂದ್ಹರಸಿ ಪೂಜೆಯಗೊಂಬೆ 4 ಸಗರನ ಮಕ್ಕಳ ಅಗಿವೆ ಕಡಿವೆನೆಂದು ಭಗೀರಥನ್ಹಿಂದೆ ಬಂದೆಯೆ ನೀನು ಭಗೀರಥನ್ಹಿಂದೆ ಬಂದೆಯೆ ಹಿಮಾಲಯ ದಾಟಿ ಜಾಹ್ನವಿ 5 ಗಮನ ಮಾಡುವ ಗಂಗಾ ಸಮನಾಗಿ ಹರಿದೆ ಸಂಗಮಳಾಗಿ ಸಮನಾಗಿ ಹರಿದೆ ಸಂಗಮಳಾಗಿ ತ್ರಿವೇಣಿ ಯುಗಳ ಪಾದಗಳಾರು ತೋರಿಸೆ 6 ಭೀಷ್ಮನ ಜನನಿ ಭೀಮೇಶ ಕೃಷ್ಣನ ಪುತ್ರನ(ತ್ರಿ ನೀ?) ದೋಷವ ಕಳೆದÀು ಸಂತೋಷದಿ ದೋಷವ ಕಳೆದÀು ಸಂತೋಷದಿ ಸಾಯುಜ್ಯ ಬ್ಯಾಸರದಲೆ ಕೊಟ್ಟು ಸಲಹಮ್ಮ 7
--------------
ಹರಪನಹಳ್ಳಿಭೀಮವ್ವ
ನಂಬಿದೆ ನಾನಿನ್ನ ಚರಣವನಂಬಿಗ ಅಂಬೆಗಳ ಸುತನೆ ಕೋ ಬ್ಯಾಗಂಬಿಗ ಪ ಇಂಬಾಗಿ ದಡ ಸೇರಿಸೆನ್ನನೇನಂಬಿಗ ತುಂಬಿ ನದಿ ಸೂಸುತಲಿದೆ ನೋಡಂಬಿಗ ಅ.ಪ. ಕರ್ಮವೆಂಬ ಪ್ರವಾಹವ ನೀ ನೋಡಂಬಿಗ ಚರ್ಮದಿಂದೇಳು ಹೊದ್ದಿಕಿ ಅಂಬಿಗ ಮರ್ಮ ಒಂಭತ್ತು ರಂಧ್ರ ಉಂಟಂಬಿಗ ಶರ್ಮವಿದಕೆ ಕಾಯದ್ಹರಿಗೋಲಂಬಿಗ 1 ಆಳ ಬಹಳ ಗೊತ್ತಾಗದಂಬಿಗ ಶೆಳವು ಘನ ಉಳ್ಳುಹುದು ನೋಡಂಬಿಗ ಸುಳಿಗಾಳಿಗೆ ಸಿಗಿಸದಿರೊ ಅಂಬಿಗ ಬಳಸಿ ಕೊಂಡೊಯ್ಯೋದು ಒಳ್ಳೇದೆ ಅಂಬಿಗ 2 ಸಂಚಿತಾಪ್ತಿ ಇವರೊಳುಂಟಂಬಿಗ ಭಾರ ಜಡಿಯೋದು ನೀ ನೋಡಂಬಿಗ ವಂಚಕ ಮಾತು ರಾಗವು ಹೆಚ್ಚಂಬಿಗ ಚಂಚಲಗೊಂಡು ಭ್ರಮಿಸೋದು ಕಾಣಂಬಿಗ 3 ಆಶಾಜಲ ಮೇಲೆ ಮೇಲೆ ಬರುವುದಂಬಿಗ ಮೋಸ ಮಾಡುವುದೇನೊ ಕೊನೆಗೆ ಅಂಬಿಗ ಪೊಸ ಪೊಸ ಕಾಮತೆರೆ ತುಂಬಾಯಿತಂಬಿಗ ಲೇಶವಾದರು ಬತ್ತದು ನೋಡಂಬಿಗ4 ಅಷ್ಟ ಆನೇ ಒಳಗಿಟ್ಟುಕೊಂಡಿಹುದಂಬಿಗ ಹುಟ್ಟು ಹಾಕೋದು ಬಿಟ್ಟು ಜಲ್ಲೆ ಕೊಳ್ಳಂಬಿಗ ಬೆಟ್ಟ ಆರಕ್ಕೆ ಸಿಕ್ಕಿಸದೆ ನೋಡಂಬಿಗ ನೆಟ್ಟ ನಡುವಿನ ಪಥದಿ ಒಯ್ಯೋ ಅಂಬಿಗ 5 ಸುತ್ತ ಕಾರ್ಮುಗಿಲು ಬಂತಲ್ಲೊ ಅಂಬಿಗ ಹತ್ತು ಹನಿಗಳು ಬಿತ್ತು ನೋಡಂಬಿಗ ಎತ್ತಿ ನಡೆಸೋದು ಶಕ್ತಿ ನಿನ್ನದು ಕಾಣಂಬಿಗ ಹತ್ತಿಸೊ ಭಕ್ತಿದಡಕಿನ್ನಂಬಿಗ 6 ಮರಕಟಿ ಸೇರಿಹದಿದರೊಳಗಂಬಿಗ ಕರೆಕರೆಗೆ ಗುರಿ ಮಾಡೊದಿದೆ ಅಂಬಿಗ ಸರಿಯಾಗಿ ನಡೆಸೊ ಇನ್ನಾದರಂಬಿಗ ವರದವಿಜಯ ರಾಮಚಂದ್ರವಿಠಲ ನೀನಂಬಿಗ 7
--------------
ವಿಜಯ ರಾಮಚಂದ್ರವಿಠಲ
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮೋ ನಮೋ ನಂದಕುಮಾರ ನಿನ- ಗೆದುರ್ಯಾರೊ ಯದುಕುಲ ವೀರ ಭಜಿ- ಸುವ ಭಕ್ತ ಜನರುದ್ಧಾರ ಮಾಡೊ ಪರಮ ದಯಾಳು ನೀ ಸರ್ವ ಸ್ವತಂತ್ರ ನಿನ್ನ ಧ್ವಜ ವಜ್ರಾಂಕುಶ ರೇಖಾ ವೆಂಕಟಾದ್ರೀಶ ನಮೋ ನಮೋ ಪ ಶ್ರೀಶ ಜಗದ್ಭರಿತ ನೀನು ಒಂದು- ಕಾಸಿಗ್ವಿಷಯಗಳಲ್ಲ ನಾನು ನಿನ್ನ ದ(ರ್ಶ)ನ ಹಾರೈಸುವೆನು ಪರಮ ನುಗ್ರ(ಹ)ದಿ ಪಾಲಿಸೋ ನೀನು ಹರೇ ದೋಷರಹಿತ ಎನ್ನ ದೋಷನಾಶನ ಮಾಡಿ ಶೇಷಶಯನ ಶ್ರೀನಿವಾಸ ನೀ ದಯಮಾಡೊ1 ಬಾಯಿ ಬೀಗವನ್ಹಾಕಿ ಚರಿಯೆ ಗಂ- ಡಾರತಿ(?) ಶಿರದ ಮೇಲ್ಹೊರೆಯೆ ನಿನ್ನ ನಾಮವ ಕೊಂಡಾಡಲರಿಯೆ ಪಾದ- ಚಾರ್ಯಾಗಿ ಬರುವುದೀಪರಿಯೆ ತಿಳಿದು ಮಾನ್ಯದೊಕ್ಕಲು ಎಂದು ಬಹುಮಾನದಿಂದಿಟ್ಟು ಮಾಧವ ಕರುಣದಿ 2 ಬಾಡಿಗಿದ್ದರಾಯನ್ಹಿಡಿಯ (?) ನಿನ್ನ ಅನುಮತಿಲ್ಲದೆ ದಾರಿ ನಡೆಯ ಬ್ಯಾಡ ಬಿಡು ಲೋಭಿತನವ ಎ- ನ್ನೊಡೆಯ ಬಿಡದೆ ಕಾಡುತ ಕಾಸು ಕವಡೆ ಕಡ್ಡಿ ಕಣಜಕ್ಕೆ ಈ ಪರಿ ಗಳಿಕೆ ದೇಶದ ಮೇಲೆ ಕಾಣೆನು 3 ಮುಡಿಪು ಬೇಡುವುದ್ಹೇಳೊ ಎಷ್ಟು ನಿನ್ನ ಬಡಿತ ತಡೆಯಲಾರೆ ಪೆಟ್ಟು ಮಡಿ ಮೈಲಿಗೆಂದರೆ ಅತಿಸಿಟ್ಟು ನಾ ಬಿಚ್ಚಾಡುವೆನೊ ಬೀಡ ಬಿಟ್ಟು ಪ ್ರ- ಸಾದ ತೀರ್ಥ ಬೇಕಾದರೆ ಕ್ರಯಕಟ್ಟಿ ಗಂ- ಟ್ಯಾರಿಗೆ ಮಾಡುವಿ ಹೇಳೆನಗೊಂದಿಷ್ಟು 4 ಸತಿಗೆ ಮಾಡುವೆ ಲಕ್ಷ್ಮೀಪತಿಯೆ ನಿನ ಸುತ ಸತ್ಯಲೋಕದಧಿಪತಿಯೆ ಅತಿ ಹಿತ ಭಕ್ತರಿಗೆ ಭಿಕ್ಷೆಗತಿಯೇ ನೀಡಲು ಧನವೊಲ್ಲದೆ ಬೇಡುವರೊ ಸದ್ಗತಿಯ ನಿನ- ಗತಿಯಾಸೆ ಘನತ್ಯಲ್ಲ ಗತಿಪ್ರದಾಯಕ ಕೇಳೊ ಪೃಥುವೀಶ ನಿನ್ನದಲ್ಲವೆ ಸಕಲೈಶ್ವರ್ಯ 5 ಕನಕಗಿರಿದೊರೆಯೆಂಬೊದೆಲ್ಲೊ ಬಂದ ಜನಕೆ ಅನ್ನವ ನೀಡಲೊಲ್ಲ್ಯೊ ಜಗ- ಜನಕ ನಿನ್ನನು ಕಾಣಲಿಲ್ಲೋ ನಾನಿ- ರ್ಧನಿಕನೆಂಬುವುದು ನೀ ಬಲ್ಲ್ಯೊ ಎನ- ಗನುಕೂಲ ಧೈರ್ಯವ ಕೊಟ್ಟು ನಿನ್ನ ದರುಶನ ಸನಕಾದಿಗಳೊಡೆಯ ನಿನ್ನ ಮನಕೆ ಬಂದರೆ ನೀಡೊ6 ಶಂಕರ ಸುರರಿಂದ್ವಂದಿತನೊ ನಾ ಕಿಂಕರ ನರರಿಂದ ನಿಂದಿತನೊ ನೀ ಮಂಕುಜನರ ಪಾಪ ಪರಿಹಾರಕನೊ ಹರೇ ಶಂಖ ಚಕ್ರಾಂಕಿತ ಭೀಮೇಶಕೃಷ್ಣನ ನಾಮ ಶಂಕೆಯಿಲ್ಲದೆ ಕೊಟ್ಟು ವೆಂಕಟ ದಯಮಾಡೊ 7
--------------
ಹರಪನಹಳ್ಳಿಭೀಮವ್ವ
ನಲ್ಲೆಯರು ನಮೋ ಎಂಬೆವು ಸುರರಎಲ್ಲರ ಬಲಗೊಂಬೆವು ಪ. ಚಲ್ವೆ ಕಂಗಳೆಯರಿಗೆ ಹೊಲ್ಲವು ಎನುತಿರೆಹೊಲ್ಲ ತನವೆಲ್ಲ ಹೊರಗ್ಹಾಕಿ ಬಾಹೊಅ.ಪ. ಅಗಣಿತ ಮಹಿಮ ಹೌದೆಂದುಅಗಣಿತ ಮಹಿಮಎನುತಿರೆಮಗನ ಮುಂದಾಗಿ ಬಲಗೊಂಬೆ1 ಸಾಗರಶಯನಗೆ ಆಗುವ ಹಾಸಿಗೆ ಬ್ಯಾಗನೆ ವರವ ಕೊಡುವೋನುಬ್ಯಾಗನೆ ವರವ ಕೊಡುವ ನಾಗೇಂದ್ರನಮೋ ಎಂಬÉ ನಮ್ಮ ಗೆಲಿಸೆಂದು 2 ನಂದಿವಾಹನ ಶಿವನ ಮುಂದಾಗಿ ಬಲಗೊಂಬೆ ಇಂದಿಗೆ ಪಂಥಗೆಲಿಸೆಂದುಇಂದಿಗೆ ಪಂಥಗೆಲಿಸೆಂದು ಬ್ರಹ್ಮನ ಕಂದನ ಮೊದಲೆ ಬಲಗೊಂಬೆ 3 ಸೌಪರ್ಣವಾರುಣಿ ಅಪರ್ಣ ದೇವಿಯರು ಸೌಕರ್ಯದಿಂದ ನಮ್ಮ ಪಂಥಸೌಕರ್ಯದಿಂದ ನಮ್ಮ ಪಂಥಗೆಲಿಸೆಂದುಕರವ ಮುಗಿವೆವು ಕ್ಷಣಕ್ಕೊಮ್ಮೆ 4 ಇಂದು ರಾಮೇಶನನುಗಾಲ ನೆನೆಯುತ ಮುಂದಕ್ಕೆ ಹೆಜ್ಜೆನಿಡುವೋಣ5
--------------
ಗಲಗಲಿಅವ್ವನವರು
ನವನೀತ ಚೋರ ಎಲ್ಲರ ಭುಲ್ಲೈಸಿದಿ ನಂದಕುಮಾರ ಧ್ರುವ ಪರಿಪರಿ ಅಡಿಸಿದಿ ನೀ ಪರನಾರಿಜಾರ ಮರುಳು ಮಾಡಿದಿ ನಮ್ಮ ಗೊಲ್ಲತೇರ ಕರಗೂಡುತಲಿ ತಿಂದ್ಯೋ ನೀ ಪಾಲ್ಮೊಸರ ಆರಿಗೆ ಹೇಳಬೇಕು ನಿನ್ನ ದೂರ 1 ಮಾಡದ ಮಾಡಿದಿ ನೀ ಮನಬಂದ್ಹಾಂಗೆ ಪಡೆದು ಲೋಕದಲುಸುರಗುಡದ್ಹಾಂಗೆ ಹಿಡಿದೇನಂದರ ನೀ ಕೈಗೂಡಿ ಬ್ಯಾಗೆ ತುಡುಗತನ ಮಾಡಿದಿ ನಿನಗಕ್ಕು ಹಾಂಗೆ 2 ಬಿಡಲರಿ ಯೆವು ನಿನ್ನ ತಿಳಿಕೊ ವಿಚಾರ ಮಾಡಲಿಕ್ಕಾಗದು ಇದಕೆ ತಾ ಪರಿಹಾರ ಹಿಡಿದೇವು ನಿನ್ನಾಟ ಕಂಡು ಕಣ್ಣಾರ ಮೂಢ ಮಹಿಪತಿಗಾಯಿತು ತಾ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾಗಲೋಕದ ಕಾಳಿ ಈಗಳೆ ಹಿಡಿಸುತನಾಗವೇಣಿಯರೆಲ್ಲ ಸಾಗಿ ಹೆಜ್ಜೆ ನಿಕ್ಕುತ ಈಗ ನೋಡುಣು ಬಾರೆ ಬ್ಯಾಗಸೆ ದ್ವಾರಕಾಸಾಗರ ಶಯನನಿನ್ನು ಪ. ಅಂಬುಜಾಕ್ಷನು ತಾನು ಅತಿ ಬೇಗ ಹೊಯ್ಸಿದ ಜಂಬುದ್ವೀಪದ ಜಯಭೇರಿಜಂಬುದ್ವೀಪದ ಜಯಭೇರಿ ಹೊಯಿಸಲು ಕುಂಭಿಣಿ ಜನರೆಲ್ಲ ಕೂಡಿತು ಎಲೆ ಸಖಿ 1 ಏಳು ಲೋಕದ ಕಾಳಿಭಾಳೆ ರೌಸದಿ ಹಿಡಿಯೆಕಾಳಿ ಮರ್ದನನ ಮನೆಮುಂದೆಕಾಳಿ ಮರ್ದನನ ಮನೆಮುಂದೆ ಹಿಡಿಸಲುಏಳು ಲೋಕದ ಜನ ಮೇಳವ ನಮಗೆ ಎಲೆ ಸಖಿ2 ಕೋಟಿ ಕೋಟಿ ಹಿಲಾಲು ಥಾಟಾಗಿ ತೋರುವ ಹಾಟಗಾಂಬರನ ಮನೆಮುಂದೆ ಹಾಟಗಾಂಬರನ ಮನೆಮುಂದೆ ಬೆರಗಾಗಿಪಾಟಿಸಿ ನೋಡೋ ಪ್ರಜರೆಷ್ಟ ಎಲೆ ಸಖಿ 3 ಹತ್ತು ಕೋಟಿ ಹಿಲಾಲು ಜತ್ತಾಗಿ ತೋರುತಚಿತ್ತಜನೈಯನ ಮನೆಮುಂದೆಚಿತ್ತಜನೈಯನ ಮನೆಮುಂದೆ ಬೆರಗಾಗಿಅರ್ಥಿಲೆ ನೋಡೋ ಪ್ರಜರೆಷ್ಟ ಎಲೆ ಸಖಿ4 ನೂರು ನೂರು ಸಾವಿರ ತೋರುವ ಬಾಣ ಬಿರುಸುವಾರಿಜಾಕ್ಷನ ಮನೆಮುಂದೆ ವಾರಿಜಾಕ್ಷನ ಮನೆಮುಂದೆ ಈ ಸೊಬಗುಆರುವರ್ಣಿಸಲು ವಶವಲ್ಲ ಎಲೆಸಖಿ5 ಸಿಡಿಲು ಫರ್ಜಿಸಿದಂತೆ ಬಿಡುವ ಬಾಣಗಳೆಷ್ಟಧಡ ಧಡ ಹಾರುವ ಬಿರುಸೆಷ್ಟಧಡ ಧಡ ಹಾರುವ ಬಿರುಸೆಷ್ಟು ಮುಯ್ಯದ ಬೆಡಗವರ್ಣಿಸಲು ವಶವಲ್ಲ ಎಲೆಸಖಿ6 ಗರುಡನ ಆಭರಣವ ಮೃಡನು ವರ್ಣಿಸಲಾರ ಜಡಿದ ರತ್ನಗಳು ಝಳಪಿಸುತಜಡಿದ ರತ್ನಗಳು ಝಳಪಿಸುವÀ ವಾಹನವೇರಿಒಡೆಯ ರಾಮೇಶ ಕುಳಿತಾನೆ ಎಲೆಸಖಿ 7
--------------
ಗಲಗಲಿಅವ್ವನವರು
ನಾನಾ ಯೋನಿಗಳೊಳು ಹೀನಜನ್ಮದಿ ಬಂದು ನಾನು ತಿರುಗಲಾರೆನೊ ಗೋಪಾಲ ಪ. ಶ್ರೀನಿವಾಸ ನಿನ್ನ ಸೇರಿದ ಬಳಿಕ ಉದಾಸೀನ ಮಾಳ್ಪರೇನೋ ಗೋಪಾಲ ಅ.ಪ. ಇಂದ್ರಿಯದೊಳಿದ್ದೆನೊ ಗೋಪಾಲ ಪಿಂಡವಾದೆನೊ ಗೋಪಾಲ ಮಾಸ ನಾಲ್ಕಯಿದಾಗಲ ವಯವಂಗಳಿಂದ ಬೆಳೆವುತಿದ್ದೆನೊ ಗೋಪಾಲ 1 ನರಳಿ ಕೋಟಲೆಗೊಂಡೆನೊ ಗೋಪಾಲ ಹಿರಿದು ಚಿಂತಿಸಿದೆನೊ ಗೋಪಾಲ ಕಷ್ಟಬಡುತಿದ್ದೆನೊ ಗೋಪಾಲ ಸಂದ ಧರೆಗೆ ಪತನವಾದೆನೊ ಗೋಪಾಲ2 ಘಾಸಿಯೊಳೊರಲುವೆನೊ ಗೋಪಾಲ ಘಾಸಿಸಿ ದುಃಖಿಪೆನೊ ಗೋಪಾಲ ಬ್ಯಾಸತ್ತು ಒರಲುವೆನೊ ಗೋಪಾಲ ಶ್ವಾಸ ಎತ್ತಿದೆನೊ ಗೋಪಾಲ 3 ಬಾಲತನದಿ ಬಹುವಿಧದಾಟವ ತೋರಿ ಮೇಲನರಿಯದಿದ್ದೆನೊ ಗೋಪಾಲ ಮಾರ್ಜಾಲ ಘಾತಕನಾಗಿದ್ದೆನೊ ಗೋಪಾಲ ಕೂಳಿಗೀಡಾಗಿದ್ದೆನೊ ಗೋಪಾಲ ಪಾಳೆಯಕೀಡಾದೆನೊ ಗೋಪಾಲ 4 ಆಗಿ ಬಾಳುತಲಿದ್ದೆನೊ ಗೋಪಾಲ ನೀಗಿ ಬಾಳುತಿದ್ದೆನೊ ಗೋಪಾಲ ಬಾಧೆಗೆ ಬೆಂಡಾದೆನೊ ಗೋಪಾಲ ಆಗಲು ಪುತ್ರ ಬಾಂಧವರಿಗೋಸ್ಕರ ಭವ- ಸಾಗರ ಎತ್ತಿದೆನೊ ಗೋಪಾಲ 5 ಬಾಲ್ಯಯೌವನವಳಿದು ಜರೆ ಒದಗಿ ನಾನು ಮೇಲೇನರಿಯದಿದ್ದೆನೊ ಗೋಪಾಲ ಬೀಳುತೇಳುತಲಿದ್ದೆನೊ ಗೋಪಾಲ ಹೋದಂತಿದ್ದೆನೊ ಗೋಪಾಲ ಗೂಳಿಯಂದದಲಿದ್ದೆನೊ ಗೋಪಾಲ 6 ಬಾಳುತಲಿದ್ದೆನೊ ಗೋಪಾಲ ಗಿಷ್ಟನೆನಿಸಿಕೊಂಡೆನೋ ಮುಟ್ಟರೆನಿಸಿಕೊಂಡೆನೊ ಗೋಪಾಲ ಕೊಟ್ಟು ತಿನಿಸಿದೆನೊ ಗೋಪಾಲ7 ವೇದನೆಗೊಳುತಿದ್ದೆನೊ ಗೋಪಾಲ ಕೊಂಡದಿ ಬಿದ್ದೆನೊ ಗೋಪಾಲ ಗುಹ್ಯ ಯಾತನೆಗೊಳಗಾದೆ ಗೋಪಾಲ ಬಾಧೆಯೊಳು ಒರಲುವೆನೊ ಗೋಪಾಲ 8 ನಿನ್ನ ನೆನೆಯದಿದ್ದೆನೊ ಗೋಪಾಲ ದುಷ್ಟಬುದ್ಧಿಯೊಳಿದ್ದೆನೊ ಗೋಪಾಲ ಶ್ರೇಷ್ಠಜನ್ಮದಿ ಬಂದೆನೊ ಗೋಪಾಲ ಸೃಷ್ಟಿಯೊಳು ತುರುಗೇರಿ ಗುರು ಅಚಲಾನಂದವಿಠಲ ಸಲಹೆಂದೆನೋ ಗೋಪಾಲ 9
--------------
ಅಚಲಾನಂದದಾಸ
ನಾರದ ದೇವಋಷಿಗಳ ನೋಡಿದೆ ಹರಿಪಾದ ಸೇವಕರ ಕೊಂಡಾಡಿದೆ ದೇವಋಷಿ ಹರಿಪಾದ ಸೇವಕರು ನಮ್ಮಾ ್ವಸು- ದೇವಸುತನಂಕದಲ್ಲುದಿಸಿದುತ್ತಮರಿವರು ಪ ವಾಣಿಪತಿಪಿತನ ಚರಣಾಂಬುಜ ಸೇವೆ ಮಾಡೋ ಜನರಲ್ಲೆ ಕರುಣ ಜಾಣ ನಾರಂದ ಜಗದೀಶನ ಗುಣಮಹಿಮೆ ವೀಣಾಪಾಣಿಗಳಿಂದ ಸ್ತುತಿಸಿ ಕೊಂಡಾಡುವರು 1 ಪ್ರೀತಿಯಿಂದ್ಹರಿಯ ನೋಡಿ ಸುರಪಾರಿ- ಜಾತವನು ತಂದು ನೀಡಿ ಮಾತುಳಾಂತಕನ ಮಡದಿ(ಯ)ರಿಗೆ ಕಲಹವನ್ಹೂಡಿ ಭೂತಳಕೆ ಸುರತರುವ ತರಿಸಿದರ್ಹರಿಕರಗಳಿಂದ2 ದಾಸಿಯಲ್ಲುದಿಸಿ ವಿಷಯಗಳು- ದಾಶ(ಸೀ?)ನವ ಮಾಡಿ ಬ್ಯಾಗ ಅಸುರಾಂತಕನ ಅತಿಭಕ್ತಿಯಿಂದಲಿ ಭಜಿಸಿ ಭೀ- ಮೇಶಕೃಷ್ಣನ ಗುಣವ ಪಾಡಿ ಕೊಂಡಾಡುವರು3
--------------
ಹರಪನಹಳ್ಳಿಭೀಮವ್ವ
ನಾರಸಿಂಹ ನಾರಸಿಂಹ ನಾರಸಿಂಹ ಪ ನಿತ್ಯದಲಿ ಬರುವ ಅಪಮೃತ್ಯುವಿನ ಬಾಧೆಯ ಕೃತ್ತಿ ಒತ್ತಿ ಪರಿಹರಿಸಿ ಭೃತ್ಯನಾದ ಜೀವನ್ನ ತೃಪ್ತಿಪಡಿಸುವ ದೇವ ಭಕ್ತವತ್ಸಲ ನಾರಸಿಂಹ 1 ಅಂದು ಸ್ವಪ್ನದಿ ಬಂದೆ ದ್ವಂದ್ವ ಪಾದಕ್ಕೆರಗಿ ನಿಂದು ನಾ ನಿನ್ನ ಬೇಡೆ ಸಂಧಿಸಿ ಕ್ರೂರ ದೃಷ್ಟಿಯಿಂದ ನೋಡಿ ಮಂದೀಗೆ ಕುಂದು ಮಾಡಬ್ಯಾಡೆಂದೆ 2 ಅಂದಿನಾರಭ್ಯ ಬಲು ಬಂಧನಕೆ ಸಿಲ್ಕಿ ನಾ ಪರಿ ಪೇಳಲಾರೆ ಹಿಂದಿನ ಅಘವೆಣಿಸದೆ ಬಂದು ನಾರಿ ಸಹಿತ ತಂದೆ ಈ ಸುತನ ಕಾಯೋ 3 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆ ಎಂದು ಎನ್ನಗಲದೆ ಬಂದು ನೆಲಸೆನ್ನಲ್ಲಿ ಅಜ್ಞಾನ ಕೊಡದಿರು ವಂದಿಸುವೆನು ನಾರಸಿಂಹ 4 ಮುಂದಾದರು ಹೃನ್ಮಂದಿರದಿ ನೆಲೆಗೊಂಡು ಸಂದರ್ಶನವನೀಯೊ ದೇವ ಕಂದರ್ಪಹರ ವಿಜಯ ರಾಮಚಂದ್ರವಿಠಲರೇಯ ವಂದೆ ಭಕ್ತಿಯ ಪಾಲಿಸು 5
--------------
ವಿಜಯ ರಾಮಚಂದ್ರವಿಠಲ
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಿಜ ವಸ್ತುನೆ ಮುಂದುಗಾಣಿ ಥಳ ಥಳ ಗುಡುವುತ ಹೊಳೆವುತಲ್ಯದೆ ಬಲಿಯೊ ಸದ್ಗುರು ಸುಪ್ರಾರ್ಥನೆ ಧ್ರುವ ಜನ್ಮದ ಸಂದೇಹಗಳೀತೆ ಒಂದಾದರ ಮಾತಿಗಿಳಿಯಿತೆ ನಿಜಘನ ನೆಲೆಗೊಳ್ಳಿತೆ ಹೊಂದಿತೆ ಅರಿಯದಿಹುದು ಒಳಿತೆ1 ನಿನ್ನೊಳು ನೀ ನಿಜ ತಿಳಿಯದೆ ಖೂನ ಇನ್ನೊಬ್ಬರಿಗ್ಹೇಳುವುದೇನ ಕನ್ನಡಿಯೊಳು ಕಾಂಬುವ ಕಾಂಚನ ಸನ್ನಿದಾಗುವದೆ ಪೂರ್ಣ ಭಿನ್ನಭೇದವು ಹೋಗದೆ ಅನುಮಾನ ಚೆನ್ನಾಗ್ಯಾಗುವದೆ ಜ್ಞಾನ ಧನ್ಯಗೈಸುವ ಸದ್ಗುರು ಕರುಣ ಮನ್ನಿಸಿ ಪಡಕೊ ನಿಧಾನ 2 ಮುಗ್ದದಿ ಗುರುಪಾದ ಈಗ ಏನೆಂದು ತಾ ತಿಳಿಯುವದು ಆಗ ಸ್ವಾನುಭವದ ಸ್ವಸುಖಭೋಗ ಅಣುರೇಣುದೊಳಗ ತಾ ಬ್ಯಾಗ ದೀನ ಮಹಿಪತಿಗದೆ ಒಳಹೊರಗೆ ಫನ ಭಾಸುತಲ್ಯದೆ ಆವಾಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಂತು ಫುಗಡಿ ಹಾಕ ಭ್ರಾಂತತನವ್ಯಾಕ ಸಂತ ಜನನಿಯರು ನೋಡಿ ತಲೆಯ ದೂಗಬೇಕ ಪ ಆಶೆಯಲಿ ತಾನು ಕುಳಿತು ಹಾಕುದೇನು | ಘಾಸಿಯಾಗುವ ಆರುಮಂದಿಯಾ ಕೂಡಿದರೇ ನೀನು 1 ಗರುವ ತನ ಬಿಟ್ಟು ತಿರುಗಣೆಯಾ ನುಟ್ಟು | ಆರಹು ಶರಗಿನಿಂದ ಬಿಗಿದು ಹಾಕ ಮಲಕ ಗಂಟು 2 ಲಜ್ಜೆ ವಳಿದು ನೋಡೇ ಹರಿಯಸ್ತುತಿ ಮಾಡಿ | ಘಜ್ಜಿಗೆ ಬಂಡಮ್ಯಾಲ ಯಚ್ಚರ ಮೈಯ್ಯ ಮರೆಯಿಬ್ಯಾಡೇ 3 ಎರಡು ಸವೆ ನಿನೆಹಾ ಜ್ಞಾನ ಸಖೀ ಕೈಯ್ಯಾ | ಜರಿಯದಂತೆ ಹಿಡಿದು ತಿರುಗು ನಡವಿಧ ಪರಿಯಾ 4 ಫುಗಡಿ ಇದೇ ಆಡೀ ಪ್ರೇಮಭಾವ ಕೂಡೀ | ಮುಗುತಿ ಕೊಡುವ ತಂದೆ ಮಹಿಪತಿ ಸ್ವಾಮಿ ದಯಮಾಡಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು