ಒಟ್ಟು 1548 ಕಡೆಗಳಲ್ಲಿ , 100 ದಾಸರು , 1077 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಬರೆದೆಯೊ ಬ್ರಹ್ಮನೆ ನನ್ನಣೆಯಲರಿಯದು ಸುಮ್ಮನೇ ಪ ನೋನವನು ಹೋಗಾಡಿ ಜನರೊಳು ಹೀನವಾಗುವ ಹಾಂಗೆ ಹಣೆಯೊಳು ಅ.ಪ ಹಿಂದೆ ಮಾಡಿದ ಕರ್ಮವು ಯಿದ ಕ್ಕೊಂದು ಪಾಯದ ಮರ್ಮವೂ ತಂದೆ ನೀನೆನಗಿಂದು ತೋರಲು ನಿಂದು ಭಜಿಸುವೆ ಮಂದರೋದ್ಧರ 1 ಪಾಪಗಳ ಹರನ್ಯಾರೆಲೊ ಭೂಪದಶ ಅವತರಾನೇ ಕೋಪಮಾಡದೆ ದಾಸಮಾಡಿದ | ಪಾಪಗಳ ಪರಹರಿಸೊ ಬೇಗದಿ 2 ಲೋಕನಾಯಕ ಭವಹಾರೀ ಕಾಕು ಬುದ್ಧಿಗಳನ್ನು ಬಿಡಿಸಲು ಏಕ ಮನದೊಳು ನೆನೆವೆ ನಿಮ್ಮನೂ 3 ಗುರುವು ತುಲಸೀರಾಮನೇ ಪರನು ಗುರುವೆ ತ್ರಾಹಿತ ಪ್ರೇಮನೆ ಧರೆಯೊಳಧಿಕ ಚೆನ್ನಪುರಿಯಾ ದೊರೆಯ ಲಕ್ಷ್ಮೀನಾರಾಯಣಾ 4
--------------
ಚನ್ನಪಟ್ಟಣದ ಅಹೋಬಲದಾಸರು
ಏನೆಂದೆ ಏನೆಂದೆ ಪ ನಾನೇನೆಂದೆನೆ ಗಾನಲೋಲಗವ ಮಾನದ ಮಾತಿಂಥ ಜೀನನ ಕಾಣೆನೆಂದೆ ಅ.ಪ ಕಾಲು ಇಲ್ಲದ ಹೆಳವನೆಂದೆ ತಲೆಯ ಕಾಣದ ಕುರೂಪಿಯೆಂದೆ ಚೆಲುವಿಕಿಲ್ಲದ ಕಾಡು ಹೀನಮೃಗವೆಂದೆ ಬಲಿಯ ಬಾಗಿಲ ಕಾಯ್ವ ಕೂಲಿಕಾರನೆಂದೆ1 ನಾಲಗೆ ಚಾಚಿ ರಕ್ತ ಕುಡಿದನೆಂದೆ ತಿಳಿದು ಜನನಿತಲೆ ಕಡಿದವನೆಂದೆ ಲಲನೆಯೊಡನೆ ವನವಾಸಕೆ ಪೋಗಿ ಬಳಲಿ ಬಳಲಿ ಬಾಯಾರಿದನೆಂದೆ 2 ಗೊಲ್ಲರ ಕುಲದಲಿ ಹುಟ್ಟಿದನೆಂದೆ ಗುಳ್ಳೆ ಗುಳ್ಳೆ ಬೆಣ್ಣೆ ಕದ್ದವನೆಂದೆ ಗೊಲ್ಲರ ಅಕಳ ಕಾಯುವ ಚರನೆಂದೆ ಫುಲ್ಲನಲನೆಯರ ವಸ್ತ್ರಗಳ್ಳನೆಂದೆ 3 ಬತ್ತಲೆ ಕುಣಿಕುಣಿದಾಡಿದನೆಂದೆ ಸತ್ಯಭ್ರಷ್ಟ ಮಹಕಲಿಯು ಈತನೆಂದೆ ಮತ್ತೆ ವೈಕುಂಠದಿ ಒದೆಸಿಕೊಂಡು ಇವ ವಿತ್ತದಾಸೆಗೆ ಮತ್ರ್ಯಲೋಕಕಿಳಿದವನೆಂದೆ 4 ಕುದುರೆ ನಡೆಸಿ ಒಬ್ಬನುಳಿಸಿದನೆಂದೆ ಕದನದ್ವೊಂಚಿಸಿ ಒಬ್ಬನಳಿದವನೆಂದೆ ಕುದುರೆ ಕಟ್ಟಿದ ವೀರ ತಾಮ್ರಧ್ವಜಗೆ ಸೋತು ಮುದುಕನಾಗಿ ಭಿಕ್ಷದಶ್ವ ತಂದವನೆಂದೆ 5 ಸೋದರಮಾವನ ಕೊಂದವನೆಂದೆ ಸೋದರಳಿಯರ ಜೀವ ಹೊಡೆಸಿದನೆಂದೆ ಭೇದದಿಂದ ಸಾಧು ಹನುಮನ ಸೋಲಿಸಿ ಸಾಧಿಸ್ವರೂಪಕ್ಕೆ ಪತಾಕೆನಿಸಿದನೆಂದೆ 6 ಜಾರ ಸಿರಿ ಸೊರೆಗೊಂಡವನೆಂದೆ ಮೀರಿದಂಥ ಮಹಮಾಯದ ಹೆಣ್ಣೆಂದೆ ಈರೇಳುಲೋಕದ ಕಪಟನಾಟಕನೆಂದೆ 7 ಮೊಚ್ಚೆಗಾರ ಕೈಯೊಳುಂಡವನೆಂದೆ ಉಚ್ಚಿಷ್ಟನಾಗಿ ಬಹಿಷ್ಕಾರ್ಹೊಂದಿದನೆಂದೆ ವೆಚ್ಚಮಾಡಿ ಮತ್ತು ಕುಲದಿ ಬಿದ್ದವನೆಂದೆ ನಿಶ್ಚಲ ಭಕ್ತರಿಗ್ಹುಚ್ಚ್ಹಿಡಿಸಿದನೆಂದೆ 8 ಪುಲ್ಲನಯನ ಸಿರಿರಾಮನ ಮುಂದೆ ಅಲ್ಲದ ಮಾತುಗಳ್ನಾನೇನೆಂದೆ ಬಲ್ಲಿದ ಹದಿನಾಲ್ಕು ಲೋಕ ಪೊತ್ತವನೆಂದೆ ಉಲ್ಲಾಸದಿ ನಿಮ್ಮ ಬಿರುದು ಸಾರುತ ಬಂದೆ 9
--------------
ರಾಮದಾಸರು
ಏಳಮ್ಮ ತಾಯೆ ಮುದದಿಂದೆಮ್ಮನು ಕಾಯೆ ಕೋಳಿ ಕೂಗುತಲಿದೆ ಕೇಳಮ್ಮಯ್ಯಾ ಪ ಕಾಲನಾಮಕ ಸೂರ್ಯದೇವನ ರಥದ ಕೆಂ- ಧೂಳಿಯೇಳುವಂತೆ ಅರುಣೋದಯವಾಯ್ತು ಅ.ಪ. ಮರುತಸುತನೆದ್ದು ಪರಾಕ್ಹೇಳುತಿಹನು ಗರುಡನು ಹೊರಬಾಗಿಲೊಳು ಕಾದಿರುವನು ಪರಿವಾರದವರೆಲ್ಲ ಕರಕಟ್ಟಿ ನಿಂದಿಹರು ಹಿರಿಯ ಸೊಸೆ ವಾಣಿ ವಾರಿ ಕಲಶ ಪೊತ್ತಿಹಳು1 ಸಾರಭಕ್ತರು ಎಲ್ಲ ಸಾಲಾಗಿ ನಿಂದಿಹರು ಭೂರಿ ಕುತೂಹಲದಿ ನಿನ್ನ ದರುಶನಕಾಗಿ ವಾರಿಜಭವ ಮುಖ್ಯ ಸರುವ ದೇವತೆಗಳು ಸಾರಿ ಬರುತಿರುವರು ನೀನೇಳಮ್ಮಯ್ಯಾ 2 ನೀ ಪೋಗಿ ಆತನ ಕರಪಿಡಿದೆಬ್ಬಿಸಾದೊಡೆ ಶ್ರೀಪತಿಯು ಶೇಷತಲ್ಪದಿಂದೇಳನು ಅಪಾರಮಹಿಮ ಶ್ರೀ ರಂಗೇಶವಿಠಲನ ವ್ಯಾಪಾರಂಗಳನರಿತವರಿನ್ನ್ಯಾರಮ್ಮ 3
--------------
ರಂಗೇಶವಿಠಲದಾಸರು
ಏಳು ಏಳೆನುತ ಭಾನು ಬರುತಿಹ |ಹೇಳುವರ್ಯಾರಿಲ್ಲ ನಿಮಗೆ ಜ್ಞಾನವ ಪ ಇರುಳೆಲ್ಲ ನೀವಿನ್ನು ವಿಷಯಕೆ ಮರುಳಾಗಿ |ಹರಟಿಯೊಳಗೆ ಸೊರಗುತಿಹರೀ ||ತರಳಾಕ್ಷಿಯರ ಅಂಗಸಂಗಕೆ ಬೆಂಡಾಗಿ |ಬರದ ಆಯುಷ್ಯ ಬರಿದೇ ಕಳೆವಿರೀ 1 ಮಾಡಲಿಲ್ಲವು ಧ್ಯಾನ ಯೋಗ ಜಪ ತಪ |ನೀಡಲಿಲ್ಲವು ದಾನ ಧರ್ಮವ ||ನೋಡಲಿಲ್ಲವು ಸಾಧುಸಂತರ ನಡತೆಯ |ಕೇಡ ಬಂದಿತು ಮುಂದೆ ನೋಡಲು 2 ತಂದೆ ಭವತಾರಕನೆ ಹಿಂದಾದುದಾಗಲಿ |ಮುಂದಾರ ನೀವಿನ್ನು ಒಂದು ನಿಮಿಷವು |ಗೊಂದಲ ಬಿಟ್ಟು ಅರಿತು ಕೊಂಡು | ಹೊಂದಿರಿ ಪೂರ್ಣ ಆನಂದವನೆಂದು 3
--------------
ಭಾವತರಕರು
ಏಳು ಚೆನ್ನಿಗರಾಯ ನನ್ನೀನಾಗರ ಏಳು ಪ. ಏಳೆನ್ನ ಕಣ್ಮಣಿಯೇ ಕಾಳಿಮರ್ಧನಕೃಷ್ಣ ಅ.ಪ. ಮಾರನೆಯ ದಿನದಲ್ಲಿ ನೀ ಹಾರುತ್ಯಾರುತ ಬಂದು ಸೀರೆ ಸೆರಗನು ಪಿಡಿದು ಬೆಲ್ಲವನು ಬೇಡಲು ಕೇಳಿಕೊಳ್ಳವುದೇಕೆ ಹಗಲುಗಳ್ಳನೆ ಹೋಗು ಒಳಿತು ಚೋರರಿಗೆಲ್ಲ ಕೇಳಿ ಕೊಳಲೆಂದೆ 1 ಚೋರ ನೀನೆಂದುದಕ್ಕೆ ಈ ಸೀರೆಯನು ಜರಿವರೇ ಚೋರನಲ್ಲವೇ ನೀನು ಮಧ್ವರ ಹೃದಯ ಕದ್ದ 2 ಜಾರ ನೀನೆಂದುದಕೆ ಕರೆಕರೆಗೊಳಿಸುವರೆ ಜಾರೆಯಾಸಹುದು ನೀನಲ್ಲ ಜಾರರಮಣ 3 ಕಂಡದನು ಆಡಿದರೆ ಕಡುಕೋಪವ್ಯಾತಕೆ ಹಿಂಡು ಗೋವಳಲೊಡೆಯ ಪುಂಡನೀನಹುದು 4 ಮಜ್ಜನವ ಮಾಡಿಸುವೆ ಸುಳಿಗುರುಳ ತಿದ್ದುವೆ ಸಜ್ಜಾದ ಚಂದನದ ಚಂದ್ರಮನ ಫಣಿಯಲಿಡುವೆ 5 ಗೊಲ್ಲಬಾಲರು ಈಗ ಕರೆಯಲು ಬರುವರು ಮೆಲ್ಲಗೆ ಎದ್ದು ನೀ ಬೆಲ್ಲವನು ಮೆಲ್ವ ಬಾಲಕೃಷ್ಣ 6 ಮಧ್ವೇಶ ನೀನೇಳು ಮುದ್ದು ಮೊಗದವನೆ ಏಳು ಹದ್ದುವಾಹನ ಏಳೂ ಹಾಲಕುಡಿಯೇಳು 7 ಹಾಲು ಬೆಲ್ಲವ ಸವೆದು ಸುಧೆಯನು ಸುರಿಸೇಳೋ ಪಾಲಗಡಲ ಶಯನ ಶಯನದಿಂದೇಳೋ 8 ಮುನಿಸು ಏಕೇಕೆ ರಮಣ ಮುಸುಕನು ತೆಗೆದೇಳು ತಿನಿಸು ತಿಂಡಿಯ ಕೊಡುವೆ ತನಿವಣ್ಣ ಕೊಡುವೆ 9 ಚಿನ್ನದಾ ಒಂಟೆಳೆಯ ರನ್ನಧಾಭರಣ ಭಿನ್ನ ಭಿನ್ನವಾದ ಆಭರಣಗಳಿಡುವೆ ಕೃಷ್ಣ 10 ಹೆಚ್ಚೇನು ಪೇಳಲಿ ಮಗಸಾಮ್ರಾಜ್ಯದ ದೊರೆತನವು ನಿನ್ನದೊ ಸ್ವಚ್ಚಾಗಿ ಹೇಳುವೆನು ಫಲಿಸೇಳು ಕೃಷ್ಣಾ 11 ಬಾಧಿಸದೆ ಜಾಗವನು ಬಿಟ್ಟೇಳೊ 12 ಏನು ಬಯಸಿದ ಕೊಡುವೆ ಮನಬಯಕೆ ಪೂರೈಸೊ ಮನದನ್ನನೇ ಎನ್ನ ಕಾಳಿಮರ್ಧನಕೃಷ್ಣ 13
--------------
ಕಳಸದ ಸುಂದರಮ್ಮ
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಒಡಲೆರಡಂತೆ ಅಸುವೊಂದಂತೆ ನುಡಿಯಿದು ನಿಜವೇ ಪೇಳೇ ಗೋಪಮ್ಮ ಪ ನಡೆ ನುಡಿ ಭಾವಗಳೊಂದೇಯಂತೆ ಹುಡುಗನೇನೇ ಕೃಷ್ಣ ಪೇಳೇ ಗೋಪಮ್ಮ ಅ.ಪ ಸೋದರಿಯರು ಇದ ಹೇಳುವರಮ್ಮ ನಾದ ನರ್ತನ ದೇಹಕಾಂತಿಗಳಲ್ಲಿ ಭೇದವಿಲ್ಲೆಂಬರು ನಿಜವೇನಮ್ಮಾ 1 ಬಾಲೆಯು ತಾನೆ ಗೋಪಾಲನೆನುವಳಂತೆ ಬಾಲಕೃಷ್ಣನು ರಾಧೆ ತಾನೆಂಬನಂತೆ ಬಾಲನಾರಿದರಲ್ಲಿ ಬಾಲೆಯಾರಿವರಲ್ಲಿ ಮೂಲತತ್ವವ ನೀನೆ ಹೇಳೇ ಗೋಪಮ್ಮ 2 ಯುಗ ಯುಗದಲ್ಲಿ ತಾನವತರಿಸುವ ಕೃಷ್ಣ ಜಗದೀಶ್ವರನೆ ತಾದಿಟವಮ್ಮ [ಮಿಗೆ] ಭಾಗ್ಯವೆ ನಿನ್ನದಾಗಿಹುದಮ್ಮ 3 ನಿರುಪಮ ಭಕ್ತಿಯಮೂರ್ತಿಯು ರಾಧೆ ಮುರಳೀಧರನಲಿ ಒಂದಾಗಿಹಳು ಅರಿತುದ ಪೇಳ್ವೆನು ಮಾಂಗಿರಿರಂಗನ ಶರಣರಿಗೀತತ್ವ ಕರಗತವಮ್ಮಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಒದಗಿ ಬಂದಿತು ಯೋಗ ಒದಗಿ ಬಂದಿತು ಯೋಗ ಪ ಪದುಮೆಯರಸನು ರಥದೊಳಿರುವ ದರುಶನ ಭಾಗ್ಯ ಅ.ಪ ಭುಜಗಶಯನನು ದಿವ್ಯ ರಜತ ರಥದಲಿ ಬರಲು ಸುಜನರೆಲ್ಲರು ಸೇರಿ ಭಜನೆ ಮಾಡುವ ಭಾಗ್ಯ 1 ಅಂಗನಾಮಣಿಯರೆ ರಂಗವಲ್ಲಿಯೆ ಎತ್ತಿ ಮಂಗಳಾಂಗನು ದೀರ್ಘ ಮಾಂಗಲ್ಯವನೆ ಕೊಡುವ 2 ಬಾಲಕರ ಸಡಗರ ಬಾಲೆಯರ ವೈಯ್ಯಾರ ಬಾಲ ವೃದ್ಧರು ಸ್ವಾಮಿಯೋಲಗದಿ ಸಹಕಾರ 3 ಜಯಘೋಷಗಳ ಮಾಡೆ ಭಯಗಳನು ಬಿಡಿರಿ ಮನ ಬಯಕೆಗಳ ಆನಂದಮಯನು ನೀಡುವ ನಗುತ 4 ತನ್ನಿ ಫಲಕುಸುಮಗಳ ಧನ್ಯರಾಗಿರಿ ಕಣ್ಣಾರ ನೋಡಿ ಪ್ರಸನ್ನ ಶ್ರೀ ನಿಲಯನನು 5
--------------
ವಿದ್ಯಾಪ್ರಸನ್ನತೀರ್ಥರು
ಒಂದು ದಿನದಲಿ ಇಂದಿರೇಶನು ಚಂದದಿಂದಲಿ ವನಕೆ ಬಂದನು ಸುಂದರಾಂಗನು ಗೋಪ ವೃಂದದಿ ನಿಂದು ಕೊಳಲನು ಸ್ವರವಗೈದನು 1 ಕೊಳಲ ಧ್ವನಿಯನು ಕೇಳುತಾಕ್ಷಣ ಖಗಮೃಗಂಗಳು ಮಯ್ಯ ಮರತವು ತರುಣಿ ಮಣಿಯರು ಮನೆಯ ಕೆಲಸಕೆ ಮರತು ಮಯ್ಯನು ತೆರಳಿ ಬಂದರು 2 ಕೊಳಲ ಧ್ವನಿಯನು ಕೇಳಿ ಗೋಪೇರು ನಳಿನನಾಭನ ಬಳಿಗೆ ಬಂದರು ನಳಿನಮುಖಿಯರ ನೋಡಿ ಕೃಷ್ಣನು ಮುಗುಳುನಗೆಯಲಿ ಮಾತನಾಡಿದನು 3 ನಾರಿಮಣಿಯರೆ ರಾತ್ರಿ ವೇಳೆಯು ಈಗ ಇಲ್ಲಿಗೆ ಬಂದಿರೇತಕೆ ಮಾರನಯ್ಯನ ಮಾತುಕೇಳುತ ಮಡದಿ ಮಣಿಯರು ನುಡಿದರಾಗಲೆ4 ಬಾಲಕೃಷ್ಣನೆ ನಿನ್ನ ಕೊಳಲಿನ ಈಗಲೆಮ್ಮಯ ಮನವು ಹರುಷಿಸೆ ಬೇಗ ನಿನ್ನನು ಬೇಡಿಕೊಂಬೆವೊ 5 ಇಂತು ಕೃಷ್ಣನು ಸರಸವಾಡುತ ನಿಂತನವರಿಗೆ ಹರುಷ ತೋರುತ ಚಿಂತೆಯೆಲ್ಲವ ಬಿಟ್ಟು ಗೋಪೇರು ಅಂತರಾತ್ಮನ ಭಜಿಸುತಿದ್ದರು 6 ಏನು ಪುಣ್ಯವೊ ನಮ್ಮದೆನುತಲಿ ದಾನವಾರಿಯ ಸ್ಮರಿಸುತಿದ್ದರು ನಾರೇರೆಲ್ಲರ ನೋಡಿ ಕೃಷ್ಣನು ಬೇಗದಿಂದಲಿ ಅಂತರ್ಧಾನನಾದನು 7 ಸ್ಮರನ ಪಿತನನು ಸ್ಮರಿಸಿಪಾಡುವ ತರುಣಿಯರಿಗೆ ಮೈ ಸ್ಮರಣೆ ಮರೆತಿರೆ ಭರದಿ ಕಂಗಳ ತೆರೆದು ನೋಡಲು ಮುರಳೀಧರನ ಕಾಣದಲೆ ಚಿಂತಿಸಿ 8 ಜಾಜಿ ಸಂಪಿಗೆ ಸೂಜಿ ಮಲ್ಲಿಗೆ ರಾಜೀವಾಕ್ಷನ ಕಾಣಲಿಲ್ಲವೆ ಬಿಳಿಯ ಮಲ್ಲಿಗೆ ಎಳೆಯ ತುಳಸಿಯೆ ನಳಿನನಾಭನ ಸುಳಿವು ಕಾಣಿರಾ 9 ಸರಸದಿಂದಲಿ ಹರಿವ ಯಮುನೆಯೆ ಪಾದ ಕಾಣೆಯಾ ಚಿಗರಿ ಮರಿಗಳೆ ನಿಮ್ಮ ಕಂಗಳು ನಳಿನನಾಭನ ಸುಳವು ಕಾಣವೆ 10 ಯಾರ ಕೇಳಲು ಹರಿಯ ಕಾಣರು ನಾರಿಮಣಿಯರೆ ನಾವೆ ಕರೆಯುವ ಮುದ್ದು ಕೃಷ್ಣನೆ ಪದ್ಮನಾಭನೆ ಶ್ರದ್ಧೆಯಿಂದಲಿ ನಿಮ್ಮ ಭಜಿಪೆವೊ 11 ಜಯತು ಜಯತು ಶ್ರೀ ಲಕ್ಷ್ಮೀ ರಮಣನೆ ಜಯತು ಜಯತು ಶ್ರೀ ಗರುಡಗಮನನೆ ಜಯತು ಜಯತು ಶ್ರೀ ಉರಗಶಯನನೆ ಜಯತು ಜಯತು ಶ್ರೀ ಪರಮ ಪುರುಷನೆ 12 ಜಯತು ಜಾಹ್ನವಿಜನಕÀ ಶ್ರೀಶನೆ ಜಯತು ಭಕ್ತರ ಭಯವಿನಾಶನೆ ಜಯತು ಪಾವನ ಪುಣ್ಯ ಚರಿತನೆ ಜಯತು ಜಯತು ಲಾವಣ್ಯರೂಪನೆ 13 ಎಳೆಯ ಚಿಗುರಿನಂತಿರುವ ಪಾದವು ರುಳಿಯ ಗೆಜ್ಜೆಯು ಕಾಲಪೆಂಡೆಯು ಎಳೆಯ ಪಾದದಿ ಹೊಳೆವ ಪೈಜನಿ ಘಲಿರು ಘಲಿರು ಎಂದೆನುತ ಮೆರೆವುದು 14 ಪುಟ್ಟ ನಡುವಿಗೆ ಪಟ್ಟೆ ಮಡಿಗಳು ಇಟ್ಟ ಚಲ್ಲಣ ಪುಟ್ಟ ಕೃಷ್ಣಗೆ ಉಡುಗೆಜ್ಜೆಯು ಗಂಟೆ ಸರಪಳಿ ಒಪ್ಪಿ ಮೆರೆಯುವ ಕಾಂಚಿಧಾಮವು 15 ಚತುರ ಹಸ್ತದಿ ಶಂಖುಚಕ್ರವು ಗದೆಯು ಪದುಮವು ಹೊಳೆಯುತಿರುವುದು ಕಡಗ ಕಂಕಣ ತೋಳ ಬಾಪುರಿ ವಜ್ರದೊಂಕಿಯು ಮೆರೆಯುತಿರುವುದು 16 ಕೌಸ್ತುಭ ವೈಜಯಂತಿಯು ಸುರಗಿ ಸಂಪಿಗೆ ಸರಗಳೊಲಿಯುತ ಎಳೆಯ ತುಳಸಿಯ ಸರಗಳೊಪ್ಪುತ ಜರದವಲ್ಲಿಯು ಜಾರಿ ಬೀಳಲು 17 ವÀಕ್ಷ ಸ್ಥಳದಿ ಶ್ರೀಲಕ್ಷ್ಮಿ ಒಪ್ಪಿರೆ ರತ್ನ ಪದಕಗಳೆಲ್ಲ ಶೋಭಿಸೆ ಮಕರ ಕುಂಡಲ ರತ್ನದ್ಹಾರಗಳಿಂದ ಒಪ್ಪಿರೆ 18 ಗುರುಳು ಕೂದಲು ಹೊಳೆವೊ ಫಣೆಯಲಿ ತಿಲುಕ ಕಸ್ತೂರಿ ಶೋಭಿಸುತ್ತಿರೆ ಎಳೆಯ ಚಂದ್ರನ ಪೋಲ್ವ ಮುಖದಲಿ ಮುಗುಳು ನಗೆಯು ಬಾಯ್ದಂತ ಪಂಕ್ತಿಯು 19 ಪದ್ಮನೇತ್ರಗಳಿಂದ ಒಪ್ಪುತ ಪದ್ಮ ಕರದಲಿ ಪಿಡಿದು ತಿರುವುತ ಪದ್ಮಲೋಚನೆಯನ್ನು ನೋಡುತ ಪದ್ಮನಾಭನು ಕೊಳಲನೂದುತ 20 ರತ್ನ ಮುತ್ತಿನ ಕಿರೀಟ ಶಿರದಲಿ ಮತ್ತೆ ನವಿಲಿನ ಗರಿಗಳೊಪ್ಪಿರೆ ಹಸ್ತಿ ವರದನು ಎತ್ತಿ ಸ್ವರವನು ಮತ್ತೆ ಕೊಳಲನು ಊದೊ ದೇವನೆ 21 ಸುಂದರಾಂಗನೆ ಮಂದಹಾಸನೆ ಮಂದರೋದ್ಧರ ಬಾರೋ ಬೇಗನೆ ಇಂದಿರೇಶನೆ ಇಭರಾಜವರದನೆ ರಂಗನಾಥನೆ ಬಾರೊ ಬೇಗನೆ22 ಮದನ ಮೋಹನ ಪಾರಮಹಿಮನೆ ಬಾರೊ ಬೇಗನೆ ಶ್ರೀರಮಾಪತೆ ಶ್ರೀ ನಿಕೇತನ ವಾರಿಜಾಕ್ಷನೆ ಬಾರೊ ಬೇಗನೆ 23 ಹೀಗೆ ಗೋಪೇರು ಮೊರೆಯನಿಡುತಿರೆ ಮಂಗಳಾಂಗನು ಬಂದನೆದುರಿಗೆ ಧ್ವಜ ವಜ್ರಾಂಕುಶ ಪದ್ಮ ಪಾದವು ಅಡಿಯನಿಡುತಿರೆ ಧರಣಿ ನಲಿವಳು 24 ಹರಿಯ ನೋಡುತ ಪರಮ ಹರುಷದಿ ತರುಣಿಮಣಿಯರು ಹರುಷ ಪಡುತಲಿ ಪರಮ ಮಂಗಳ ಚರಿತ ದೇವಗೆ ಸ್ವರವನೆತ್ತಿ ಮಂಗಳವ ನುಡಿದರು 25 ಶುಭ ಕಂಬು ಕಂಠಗೆ ಮಂಗಳಂ ಮಹಾ ಮಾರನಯ್ಯಗೆ ಮಂಗಳಂ ಮಹಾ ಮುದ್ದುಕೃಷ್ಣಗೆ ಮಂಗಳಂ ಜಯ ಮಂಗಳಾಂಗಗೆ 26 ಕಮಲ ಮುಖಿಯರು ನಮಿಸಿ ಕೃಷ್ಣಗೆ ಸರಸವಾಡುತ ಹರುಷ ಪಡುತಲಿ ಕಮಲನಾಭ ವಿಠ್ಠಲನ ಕೂಡುತ ಮನದಿ ಸುಖವನು ಪಡುತಲಿದ್ದರು 27
--------------
ನಿಡಗುರುಕಿ ಜೀವೂಬಾಯಿ
ಒಳ್ಳೆವಾಜಿಯ ಕಲಿತಿದ್ದಿತಾಳೊ ಬುದ್ಧಿಲ್ಲ ಕೇಳೊಒಳ್ಳೆ ವಾಜಿಯ ಕಲಿತಿ ತಾಳೊಸುಳ್ಳು ಕೆಲಸವ ಹೇಳಿ ಸುಳಿಯುವಿ ನೆರೆಮನೆಯಚಲುವನರಿಯುತ ಚಲುವೆರಿಬ್ಬರ ಕುಚೋದ್ಯದಲಿ ಪ. ಹೆಣ್ಣು ಕೊಟ್ಟವನಿಗೆ ಕಣ್ಣು ಕಾಣದು ಏನೊಇನ್ನೆಲ್ಲಿ ವರನ ಕಾಣದೆ ಇನ್ನೆಲ್ಲಿ ವರನ ಕಾಣದೆ ಇಂಥವಗೆಹೆಣ್ಣು ಕೊಟ್ಟವನು ಬಲು ಹೇಡಿ 1 ಕೊಟ್ಟರೇನಾಯಿತು ಅಟ್ಟುಣಲು ಬಲ್ಲಹುಟ್ಟು ಗತಿಯಂತು ಮೊದಲಿಲ್ಲಹುಟ್ಟು ಗತಿಯಂತು ಮೊದಲಿಲ್ಲ ದಾನವಕೊಟ್ಟ ಬಲೀಂದ್ರ ಇದು ಬಲ್ಲ 2 ಕುಲವಿಲ್ಲಗೋತ್ರವಿಲ್ಲ ನೆಲೆಯಿಲ್ಲ ಆಚಾರವಿಲ್ಲಬಲುದೈತ್ಯರೊಳು ಹಗೆಯಾದ ಬಲುದೈತ್ಯರೊಳು ಹಗೆಯಾದ ಇಂಥವಗೆ ಜಲನಿಧಿ ಮಗಳ ಕೊಡಬಹುದೆ 3 ಮೂರು ಗುಣಗಳ ಮೀರಿದವ ನೀಚನೆನಿಸುವ ಇವನು ನೀಚನೆನಿಸುವಇವನ ಗುಣಯಾರು ಅರಿಯರು ಧರೆ ಮ್ಯಾಲೆ4 ಹಾಲು ಕೆನೆಯ ಕದ್ದು ಬಾಲೆರೆಲ್ಲರಪೀಡಿಸಿಬಾಲನಾಗಿ ಒರಳ ಎಳೆಯುತಬಾಲನಾಗಿ ಒರಳ ಎಳೆಯುತಜನನಿಗೆ ಚಾಲವರೆದದ್ದು ಮರೆತೇನೊ5 ಬೆಣ್ಣಿ ಮೊಸರು ಕದ್ದು ಹೆಣ್ಣುಮಕ್ಕಳ ಕಾಡಿಸಿ ಮುನ್ನ ತೊತ್ತಿನ ಮನೆಯಲ್ಲಿಮುನ್ನ ತೊತ್ತಿನ ಮನೆಯಲ್ಲಿ ಉಂಡುನೀ ಹೆಣ್ಣಾಗಿದ್ಯಲ್ಲೊ ರಮಿಯರಸು6
--------------
ಗಲಗಲಿಅವ್ವನವರು
ಕಂಗಳಿದ್ಯಾತಕೋ ಚಿನುಮಯ ರಂಗನ ನೋಡದಾ ಸಂಗರಹಿತಾತ್ಮನ ನೋಡದಾ ಪ ಶರೀರವೇ ತಾನೆಂದು ನಂಬಿ ಮೆರೆದು ನಿಜಾನಂದವನ್ನು ದೃಷ್ಯಂಗಳನ್ನು ನೋಡುವಾ 1 ತಾನಿದ್ಯಾರು ತನಗೆ ತೋರ್ಪ ತನುವಿದೇನೆಂದರಿವುತಿರ್ಪ ಜ್ಞಾನದೃಷ್ಟಿಯಿಲ್ಲದಂಥ ಆನನಂಗಳನು ನೋಡುವ 2 ಹಂಸ ತಾನಾಗಿ ಚರಿಪ ಹಂಸನ ಪ್ರಕಾಶವನ್ನು ಶುಂಶುಮಾರದಿ ಬೆಳಗುತಿರ್ಪಭ್ರಂಶಿತಾಂ ತನ್ನ ನೋಡದಾ 3 ಸಂತಸಾಧು ಚರಣಕ್ಕೆರಗಿ ಚಿಂತೆಗಳನು ಹರಿದು ಭರದಿ ಶಾಂತಿ ಸುಖವನಿತ್ತ ಗುರು ಶಾಂತಮೂರುತಿ ನೋಡಲಾರದ 4
--------------
ಶಾಂತಿಬಾಯಿ
ಕಟ್ಟಿದಳು ಕಂಕಣವ ನಾರಿ ಲಕುಮಿವಿಷ್ಣು ಮೂರುತಿ ಕರಕೆ ವೈಕುಂಠರಾಣಿ ಪ.ಅವಿಯೋಗಿಯಾದ ಶ್ರೀ ಸತಿಯ ಸೇವೆಗೆ ಒಲಿದುಪವಮಾನನೊಡೆಯ ವರ ಬೇಡೆನ್ನಲುಭುವನೇಶ ನಿನ್ನ ಕೃಪೆ ಪೂರ್ಣಳಾನೆಂದೆನುತಹವಣೆಯಿಂ ಕೇಳ್ದಳೆರಡೊರವ ಲೋಕೋದ್ಧಾರಿ 1 ಶರಣಾಗತ ರಕ್ಷಕನು ಎಂಬ ಬಿರುದೊಂದುಶರಣಾಗತ ವತ್ಸಲನು ಎಂಬುದೊಂದುಧರಿಸು ಈ ಬಿರುದು ಹರಿ ವರವು ಅದೆ ಎನಗೆನಲುಕಿರುನಗೆಯ ನಗುತ ಒಲಿದನು ಸತಿಯ ನುಡಿಗೆ 2 ನಾರಿರನ್ನಳೆ ನಿನ್ನ ಕೋರಿಕೆಯ ತೆರನಂತೆಆರಾಧನೆಯ ಮಾಳ್ಪ ಶರಣರಿಗೆ ಒಲಿವೆತೋರಲೀ ಬಿರುದುಗಳು ನಿನ್ನ ಕರಗಳಲೆಂದುಶ್ರೀ ರಮೆಯ ಕರಕೆ ಕಂಕಣಗಳನೆ ತೊಡಿಸಿದನು 3 ನಾರಿ ಈ ಕಂಕಣವ ನಿನಗ್ಯಾಕೆ ಅರ್ಪಿಸಲುತೋರದೆನ್ನುತ ನಟನೆಗೈವನಿತರೊಳ್‍ಕ್ಷೀರಸಾಗರ ಮಥನ ಕಾಲದಲಿ ಜನಿಸುತಲಿಶ್ರೀ ರಮೇಶಗೆ ಒಲಿದು ಮಾಲೆ ಹಾಕಿದಳು 4 ಭಕ್ತಿ ಪ್ರೇಮಕೆ ಒಲಿದು ಭಕ್ತವತ್ಸಲ ಅಭಯಹಸ್ತವನು ಶಿರದಲ್ಲಿ ಇಡಲು ನಾರಿಚಿತ್ತದಲಿ ಆನಂದಪುಳಕಾಂಕುರಿತಳಾಗಿಚಿತ್ತದೊಲ್ಲಭನ ಮುಖಕಮಲ ವೀಕ್ಷಿಸುತ 5ಈಕ್ಷಿಸಲು ಶ್ರೀ ಹರಿಯ ಕರಕಮಲ ಲಕ್ಷಣವಲಕ್ಷ್ಮಿ ಬೆರಗಾಗಿ ಮುನ್ನಿನಕಿಂತ ಅಧಿಕಅಕ್ಷಯದ ಸಾಮುದ್ರಿ ಲಕ್ಷಣವ ಕಾಣುತಲಿಪಕ್ಷಿವಾಹನನ ಮೊಗ ಈಕ್ಷಿಸುತ ನಗುತ 6 ನೀನಿತ್ತ ವರದಾನ ಕಂಕಣದ ಬಂಧನವನಿನಗರ್ಪಿಸುತ ಧನ್ಯಳಾಗ್ವೆನೆಂದುಆನಂದದಲಿ ಮಾಡಿ ಕಂಕಣವ ಕಟ್ಟಿದಳು 7 ಜಗವನಾಡಿಸುವಂಥ ಸೂತ್ರವನೆ ಹದಿನಾರುಬಗೆ ಕಲೆಗಳೆಂಬ ಎಳೆ ಮಾಡಿ ಹಳದಿಮಿಗೆ ಕಾಂತಿ ಬಣ್ಣದಲಿ ಮಂಗಳಾಕಾರದಜಗಕೆ ವಿೂರಿಸಿದಂಥ ಕಂಕಣವ ಕಟ್ಟಿದಳು 8 ಕರಿ ಕೆಂಪು ಬಿಳುಪು ವರ್ಣವು ಪ್ರಳಯ ಕಾಲದಲಿಇರಲಾರದೆಂದು ತ್ಯಜಿಸುತ ಹಳದಿಯವರಕಾಂತಿ ಬಣ್ಣವನು ಪೂಸಿ ಮಂಗಳವದನೆಸರದಿಂ ಮೂರು ಗ್ರಂಥಿಯ ಬಿಗಿದಳಾಗ 9 ಪರಿ ಏನು ಪೇಳೆಂದು ಸರಸದಲಿ ಹರಿ ಕೇಳೆ ಹರಿಣಾಕ್ಷಿಯು ಪರಮ ಪುರುಷನೆ ನೀನು ಅರಿಯದಿನ್ನುಂಟೆ ಕೇಳ್ ಸರಸವಾಣಿಯಲಿ ಪೇಳ್ಪೆನು ದೇವ ದೇವ 10 ಒಂದು ಮುಕ್ತಿಯ ಗ್ರಂಥಿ ಒಂದು ಕರ್ಮದ ಗ್ರಂಥಿ ಒಂದು ಅಜ್ಞಾನ ನಿನ್ನ ಬಂಧಕರ ಗ್ರಂಥಿ ಇಂದಿರೇಶನೆ ಇದರ ಗುಟ್ಟು ಅರುಹುವÉ ಕೇಳು ಒಂದೊಂದು ವಿವರಗಳ ವಂದ್ಯ ಬ್ರಹ್ಮಾದಿ 11 ಕರ್ಮಗ್ರಂಥಿಯು ಬ್ರಾಹ್ಮಣರ ಯಜ್ಞದುಪವೀತ ಕರ್ಮ ಬಿಡುಗಡೆ ಇದು ಯತಿರತ್ನಗಳಿಗೆ ನಿಮ್ಮ ಬಂಧಕರ ಗ್ರಂಥಿ ಅಜ್ಞಾನಿ ಹೃದಯಕ್ಕೆ ನಿಮ್ಮ ಕೃಪೆಯಿಂದ ಬಿಡುಗಡೆ ಕೇಳು ಜೀವರಿಗೆ 12 ಮುಕ್ತರಿಗೆ ಸಂಸಾರ ಮತ್ತೆ ಬರದಂದದಲಿ ಕತ್ತರಿಸಿ ಲಿಂಗವನು ಕಾಯ್ದು ನಾನು ಚಿತ್ತಜಾಪಿತನೆ ನಿನ್ನಸ್ತಕೊಪ್ಪಿಸಿ ಬಿಗಿದು ಸುತ್ತಿ ಕಗ್ಗಂಟು ಹಾಕಿರುವೆ ನೀ ಗ್ರಂಥಿ 13 ಬಿಚ್ಚಲಾರೆಯೊ ನೀನು ಬಿಚ್ಚಲಾರೆನೊ ನಾನು ಬಿಚ್ಚಿಕೊಳಲಾರರೊ ಮುಕ್ತ ಜನರು ಅಚ್ಯುತನೆ ಇದೆ ನಿನಗೆ ಹೆಚ್ಚಿನಾ ಬಿರುದು ನಾ ಮೆಚ್ಚಿ ಕಟ್ಟಿರುವೆ ನೀ ಗ್ರಂಥಿ ಕಂಕಣವ 14 ಎರಡು ಗ್ರಂಥಿಯ ತೊಡಕು ಹರಿದು ಭಕ್ತರ ಕಾಯ್ದು ಪರಮ ಆನಂದ ಮುಕ್ತರಿಗೆ ಶರೆ ಮಾಡಿ ಮೆರೆಯೊ ಶರಣಾಗತರ ರಕ್ಷಕನೆ ಎಂದೆನುತ ಸಿರಿ ಮುತ್ತಿನಾರತಿಯನೆತ್ತಿದಳು 15 ಸಿರಿಹರಿಯ ಏಕಾಂತ ಸರಸ ವಚನಗಳಿದನು ಅರಿತವರು ಯಾರೆಂಬ ಅನುಮಾನ ಬೇಡಿ ಹರಿಶಯನನಾದವನು ಅರಿತು ಧೈರ್ಯದಿ ಜಗದಿ ಹರಹಿದುದ ಸಜ್ಜನರು ಅರಿತು ಆನಂದಿಸಲಿ 16 ಸಿರಿ ಒಲಿಯೆ ಶ್ರೀಹರಿಯು ತ್ವರಿತದಲಿ ಒಲಿಯುವನು ಮರುತ ಒಲಿಯಲು ಸಿರಿಯು ತಾ ಒಲಿವಳು ಗುರುವು ಒಲಿಯಲು ಮರುತ ಮರುಕ್ಷಣದಿ ಒಲಿಯುವನು ಅರಿವುದಿದರಿಂ ಗುರುವ ಒಲಿಮೆ ಅಧಿಕೆಂದು 17 ಪರಮ ಸುಜ್ಞಾನದಿಂದರಿತು ತತ್ವಾರ್ಥಗಳ ಶರಣ ನಾ ನಿನಗೆನಲು ವಾತ್ಸಲ್ಯದಿ ಸಿರಿಯರಸ ತನ್ನಭಯ ಹಸ್ತ ಶಿರದಲಿಟ್ಟು ಶರಣರನು ಪಾಲಿಸುವ ಮುಕ್ತಿ ಪದವಿಯನಿತ್ತು 18 ಹರಿಸಿರಿಯ ಲೀಲೆಗಳ ಗುರುಕರುಣ ಬಲದಿಂದ ಅರುಹಿದ ಮಹಿಮೆ ಧರೆಯಲ್ಲಿ ಮೆರೆದು ಪರಮ ಮಂಗಳ ಕೊಡಲಿ ನಿರುತ ಸದ್ಭಕ್ತರಿಗೆ ಕರುಣಾಳು ಗೋಪಾಲಕೃಷ್ಣವಿಠ್ಠಲನ ದಯದಿ 19
--------------
ಅಂಬಾಬಾಯಿ
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕಂಡುದನು ಪೇಳ್ವೆ ಬ್ರಹ್ಮಾಂಡ ನಾಯಕನೆ | ಕೊಂಡೆಯವಿದಲ್ಲ ಗ್ರಹಕುಂಡಲವ ಶೋಧಿಸುತ ಪ ಮಕರ ಸತಿ ಲಗ್ನದಲ್ಲಿರ್ಪ ಜಲ ತಾರಕೇಂದು ದಶೆ ಯಲಿ ನಿನಗೆ ಜಲದೊಳಾವಾಸವಾಯಿತು ಹರಿಯೆ 1 ಮನುಮಥನ ತಾತ ಕೇಳಿನಸುತನು ನಾಲ್ಕನೆಯ ಮನೆಯೊಳಿರುವನು ಲಗ್ನಕಧಿಪನೆನಿಸಿ ಮನದಿ ಯೋಚಿಸಲಿಕಾ ಶನಿದಶೆಯೊಳಾ ಕುಧರ ವನು ಪೊತ್ತು ದಣಿದೆನೀವ ನಿಧಿಯೊಳು ಹರಿಯೆ2 ಮಂಗಳನೆ ಸುಖಕಧಿಪ ಮಂಗಳನು ಸಿಂಗರದಿ ಸಿಂಗರಾಶಿಯೊಳು ತಾ ಕಂಗೊಳಿಸುತ ತುಂಗವಿಕ್ರಮನವನೆ ಸಂಘಟಿಸಿದನು ವನದಿ ಹಿಂಗದೆ ಬೇರು ಮೆಲುವಂಗವನು ಹರಿಯೆ 3 ವಾರಿಜಾಸನ ಪಿತನೆ ಕ್ರೂರಕ್ಷೇತ್ರದಿ ರಾಹು ಸಾರಿರ್ಪ ರಾಶಿ ವೃಶ್ಚಿಕವೆನಿಸಲು | ಕಾರುಣಿಕನವನ ದಶೆಯಾರಂಭದಲಿ ನಿನಗೆ ಘೋರ ರೂಪವ ತಾಳಲಾಯ್ತು ನರಹರಿಯೆ 4 ಮಂದರೋದ್ಧರ ಕೇಳು ಚಂದಿರನ ರಾಶಿಗಾ ನಂದದಧಿಪತಿ ಸೂರ್ಯನಂದನನು ತಾ ನಿಂದು ಮೇಷದೊಳತ್ರಿಕಂದನ ನಿರೀಕ್ಷಿಸಲು ಬಂದುದೈ ಭಿಕ್ಷೆಯದರಿಂದ ನಿನಗೆಲೆ ಹರಿಯೆ 5 ಅಂಬುಜಾನನ ಕೇಳು ಒಂಭತ್ತರಧಿಪ ಶಶಿ- ಸಂಭವನು ಪಾಪದಿಂ ತುಂಬಿರ್ಪನು | ಸಂಭವಿಸಲವನ ದಶೆಯಿಂದ ನೀ ಕ್ಷತ್ರಿಯ ಕ-ದಂಬ ಮರ್ದಿಸಿ ಧರ್ಮಮಂ ಬಿಟ್ಟೆ ಹರಿಯೆ 6 ದುರಿತ ಸ್ಥಾನಾಧಿಪತಿ ಗುರುವೇಳನೆಯ ಮನೆಯೊಳಿರುವನದರಿಂ | ಹಿರಿಯರುಪದೇಶದಿಂದಿರದೆ ಭಾರ್ಯೆಯನಗಲಿ ಚರಿಸಿದೆಯರಣ್ಯದೊಳಗಿರುತ ನೀ ಹರಿಯೆ 7 ಘೋರಪಾಪವಿನಾಶ ನಾರಿರಾಶಿಯ ನವಮ-ಕಾ ರವಿಯು ಸಾರಿ ನಿಂದಿರ್ಪನದರಿಂ | ಚೋರವ್ಯಾಪಾರ ಪರನಾರಿಯರ ಕೂಡೆ ವ್ಯಭಿ-ಚಾರ ನಿನಗಾಯಿತು ರಮಾರಮಣ ಹರಿಯೇ 8 ಕೈವಲ್ಯ ತಾರಕನಾಥನು | ಪೂತ ಬುದ್ಧಿಸ್ಥಾನ ವಾದನದರಿಂಲಿಂ ಭೂತಲದಿ ಸ್ಥಾಪಿಸಿದೆ ನೂತನ ಮತವ ಹರಿಯೇ 9 ಪಾರವರ್ಜಿತ ಕವಿಯು ಸಾರಿರ್ದ ದಶಮದೊಳ್-ಗಾರವ ನೆನೆಯುಂಟು ಧೀರನೆನಿಸಿ | ಭೂರಿಮ್ಲೇಂಛರನು ಸಂಹಾರ ಗೈಯುತ ತೇಜಿಯೇರಿ ಮೆರೆಯುತ್ತಿರುವ ನಾರಾಯಣ ಹರಿಯೆ 10
--------------
ಅನ್ಯದಾಸರು
ಕಡುಮುದ್ದು ಮೋಹನನಾದ ಈ ಸೊಬಗ ನ-ಮ್ಮುಡುಪಿನ ಕೃಷúರಾಯನ ನೋಡು ನೋಡುಪ. ಬೊಮ್ಮರುದ್ರಾದಿಗಳ ಕಣ್ಗೆಗೋಚರಿಸದನಿರ್ಮಲ ಚಿನ್ಮಯ ಬೊಮ್ಮವೆÉನಮ್ಮ ಚರ್ಮದೃಷ್ಟಿಗಳಿಗೆ ಗಮ್ಯವಾಯಿತ-ಮ್ಮಮ್ಮ ಇನ್ಯಾರ ಪುಣ್ಯವೊ ನೋಡು ನೋಡು 1 ಶುದ್ಧ ಸಿದ್ಧಾಂತವ ಜಗಕೆ ತೋರಿಸಿದಮಧ್ವಮುನಿಗೊಲಿದು ಬಂದಅಬ್ಧಿಜೆಯರಸನೀತನು ತನ್ನಹೊದ್ದಿದರಿಗರ್ಧ ಶರೀರವನೀವನೆ ನೋಡು ನೋಡು 2 ಪಾದ ಕಟಿ ವಕ್ತ್ರ ನೇತ್ರ ಮೌಳೀಯ ನಲ್ಲಗೊಲ್ಲಪಳ್ಳಿಯ ನೊಲ್ಲದೆ ಬಂದÀನೆ 3 - - - - - - - - - - ಅಲ್ಲಿ ಬೆಣ್ಣೆಗಳ್ಳನೆಂಬೊರಿವನೆಲ್ಲಇಲ್ಲದಿದ್ದರೆಲ್ಲಿಂದೆಲ್ಲಿಗಿಲ್ಲಿಯ ವಾಸ ನೋಡು ನೋಡು 4 ಶ್ರುತಿಗಗೋಚರನೆನಿಪ ಯತಿತತಿಮತಿಗೆ ಮೈಗೊಡದ ಬೊಮ್ಮಪತಿತ ಪಾತಕಿಗಳಿಗೆ ಕ್ಷಿತಿಯೊಳ-ಗತಿ ಸುಲಭವಾಯಿತಿನ್ನು ನೋಡು ನೋಡು 5 ಬಲ್ಲವರೆ ಬಲ್ಲರಿವನ ಈ ಮಹಿಮೆಯದುರ್ಲಭಕ್ಕೆ ದುರ್ಲಭನವಚೆಲ್ವ ಹಯವದನನಾದ ಭಕುತ ಯತಿ-ವಲ್ಲಭನಿಂದಿಲ್ಲಿ ಸುಲಭ ನೋಡು ನೋಡು 6
--------------
ವಾದಿರಾಜ