ಒಟ್ಟು 2021 ಕಡೆಗಳಲ್ಲಿ , 115 ದಾಸರು , 1503 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲ ಭಯ ಎಲ್ಲ ಭಯ ಕ್ಷುಲ್ಲಕ ಜನಗಳಿಗೆಲ್ಲ ಭಯ ಪ ತಲ್ಲಣಿಸದೆ ಸಿರಿವಲ್ಲಭನಲಿ ಮನ ನಿಲ್ಲಿಸುವರಿಗೆಲ್ಲ ಜಯ ಅ.ಪ ಇರಲು ಭಯ ಧನವಿರಲು ಭಯ ಇಲ್ಲದಿದ್ದರೆ ತಿರಿದುಂಬೊ ಭಯ ನೆರೆ ಹೊರೆ ಜನಗಳ ಸಿರಿಯನು ನೋಡಲು ಉರಿಯುವ ಜನಗಳಿಗೆಲ್ಲಿ ಜಯ 1 ಎಲ್ಲ ಜಯ ಎಲ್ಲ ಜಯ ಬಲ್ಲ ಸುಜನಗಳಿಗೆಲ್ಲ ಜಯ ಪೊಳ್ಳು ಜೀವನದ ಜಳ್ಳು ಸೌಖ್ಯಗಳ ಒಲ್ಲೆನೆಂಬುವರಿಗೆಲ್ಲ ಜಯ 2 ಸರಳ ಜನರ ನೋಡುವುದೆ ಭಯ ದುರುಳ ಜನಕೆ ತಮ್ಮ ನೆರಳನು ಕಂಡರೆ ಅಧಿಕ ಭಯ 3 ಜ್ಞಾನ ಜಯ ದಿವ್ಯ ಜ್ಞಾನ ಜಯ ಜ್ಞಾನದಿಂದ ಹರಿಸ್ಥಾನ ಜಯ ಹಾನಿಯ ನೀಡುವ ನಾನಾ ಭೋಗವ ಮೌನದಿ ತ್ಯಜಿಪರಿಗೇನು ಭಯ 4 ಒಂದು ಜಯ ನೂರು ಭಯ ದ್ವಂದ್ವಗಳನು ಸಹಿಸದ ನರಗೆ ತಂದೆ ಪ್ರಸನ್ನ ಶ್ರೀಕೃಷ್ಣನ ಚರಣ ದ್ವಂದ್ವ ಸೇವಕರಿಗೆಂದೂ ಜಯ 5
--------------
ವಿದ್ಯಾಪ್ರಸನ್ನತೀರ್ಥರು
ಎಲ್ಲರ ಮನೆ ದೋಸೆ ತೂತು ಪ ಚಿಲ್ಲರೆಯಲ್ಲವಿದೀ ಮಾತು ಅ.ಪ ಗಾಜಿನ ಮನೆಯಲಿ ವಾಸಿಸುವ ಪರ ಗೇಹಕೆ ಕಲ್ಲುಗಳೆಸೆಯುಬಹುದೇ ಮೂರ್ಜಗನಿಂದಕ ತನ್ನಯ ನಾಶಕೆ ಬೀಜ ಬಿತ್ತಿ ಫಲ ಭೋಜನ ಮಾಡುವ 1 ನೀರ ಕ್ಷೀರ ನ್ಯಾಯವ ಕೇಳದ ಜನ ರ್ಯಾರಿರುವರು ಈ ಧರೆಯೊಳಗೆ ಬಾರಿಬಾರಿಗದ ಮನಕೆ ತಾರದೆಲೆ ದೂರಿನ ನುಡಿಯಲಿ ರುಚಿಯು ಉಚಿತವೆ 2 ಗೂಳಿಯು ಹಳ್ಳಕೆ ಬಿದ್ದ ಕಾಲದಲಿ ಆಳಗೊಂದು ಕಲ್ಲೆಸೆಯುವರು ಬಾಳಿಬಾಳಿಸುವ ನರನ ಪ್ರಸನ್ನನು ಕಾಲಕಾಲದಲಿ ಸಲಹದೇ ಇರುವನೆ 3
--------------
ವಿದ್ಯಾಪ್ರಸನ್ನತೀರ್ಥರು
ಎಲ್ಲವು ನಿನ್ನಾಧೀನ | ನಾ ಬಲ್ಲೆನೆಂಬುದಜ್ಞಾನ ಪ ವಿಧಿ ಪರಿಯಂತವು ನೀ- ನಿಲ್ಲದೆ ಕದಲದು ನಿಜವಿದು ನಿಜವಿದು ಅ.ಪ ಸುಖವನಪೇಕ್ಷಿಸುತಿಹರು | ದು- ಸಖ ನೀನೆನ್ನದೆ ದಾರಾ ಪುತ್ರಾ- ದ್ಯಖಿಳ ಸಂಪದವ ಬಯಸಿ ಕೆಡುವರು 1 ಹಣ ಸಂಪಾದಿಸುವದಕು | ಸ- ದ್ಗುಣ ವಂತನೆನಿಸುವದಕೂ ಹೆಣಕೆ ಸಮಾನನು ಇವನೆಂಬುವದಕೂ | ಹಿರಿಯ- ನೆನಿಸಿ ಪೂಜಿಸಿ ಕೊಂಬುವುದಕೂ 2 ನೀನೊಲಿದರೆ ವಿಷವಮೃತ | ಬರಿ- ಜ್ಞಾನಿಗಳರಿಯುವರೀ ನಾನಾ ಬಗೆ 3 ಜ್ಞಾನ ಭಕ್ತಿಯು ವಿರಾಗ | ವೆಂ- ಬೀನಿದಾನವೇ ಯೋಗ ಆನಂದ ಪಡುವುದೇ ಬಲು ತ್ಯಾಗ 4 ಕ್ಷೇಮದಿಂದಲಿರುವದಕೂ | ನಿ- ರ್ನಾಮವೈದಿ ಕೆಡುವುದಕೂ ಪಾಮರ ಜೀವರು ತಾವರಿಯರು ಗುರು ರಾಮ ವಿಠಲ ನೀನಾ ಮಮತೆ ಕೊಡದಿರೆ 5
--------------
ಗುರುರಾಮವಿಠಲ
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿಪ ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ 1 ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2 ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3 ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4 ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5 ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡುಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6 ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡುಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7 ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8 ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡುಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9 ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10 ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನುಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ 11
--------------
ಕನಕದಾಸ
ಎಲ್ಲಿ ನೋಡಿದರಲ್ಲಿ ಚನ್ನಕೇಶವನು ಪುಲ್ಲಲೋಚನನಾದ ಶ್ರೀ ಕೃಷ್ಣನು ಪ ಭೂತಳ ಪಾತಾಳ ಸಕಲ ಲೋಕಗಳಲ್ಲಿ ಭೂತ ಪ್ರೇತಾಳ ಕ್ರಿಮಿ ಜಂತುಗಳಲ್ಲಿ ಮಾತು ಚೇಷ್ಟಗಳಲ್ಲಿ ಕೆರೆ ಭಾವಿ ವನದಲ್ಲಿ ಕೋತಿ ಖಗವೃಂದ ಪಶುವರ್ಗಂಗಳಲ್ಲಿ 1 ವೇದ ಶಾಸ್ತ್ರಗಳಲ್ಲಿ ಸರ್ವ ಧರ್ಮಗಳಲ್ಲಿ ಬೋಧಕ ಮೊದಲಾದ ಗುರು ವರ್ಗದಲ್ಲಿ ಪಾದ ಪಾದಗಳಲ್ಲಿ ಸಾಧು ಸಜ್ಜನರಲ್ಲಿ ವಾದ್ಯ ಮೃದಂಗಾಗಿ ನಾದಂಗಳಲ್ಲಿ 2 ಕಣ್ಣುಗಳಿಗೆಸೆಯುವ ಸಕಲ ವಸ್ತುಗಳಲ್ಲಿ ಮಣ್ಣಿನಲಿ ಸರ್ವತ್ರ ಘನ ಸೃಷ್ಟಿಯಲ್ಲಿ ಬಣ್ಣಿಸಲ್ಕಾಗದ ಹರಿ ಕೀರ್ತನೆಗಳಲ್ಲಿ ಹೆಣ್ಣು ಹೊನ್ನು ಮಣ್ಣು ತ್ರಿವರ್ಗದಲ್ಲಿ 3 ಸಕಲ ಚರ ಪ್ರಾಣಿಯಲಿ ಅಚರ ಜೀವಗಳಲ್ಲಿ ಸಕಲ ಸ್ತ್ರೀ ಪುರುಷರಲಿ ಸುರದನುಜರಲ್ಲಿ ಸಕಲ ಧಾನ್ಯಗಳಲಿ ತಿಂಡಿ ತಿನಸುಗಳಲ್ಲಿ ಸುಖ ದುಃಖ ಬಹಿರಂಗ ಅಂತರಂಗದಲಿ 4 ದಿನದಲ್ಲಿ ನಿಶೆಯಲ್ಲಿ ಅನ್ನಪಾನಗಳಲ್ಲಿ ಅಣುರೇಣು ತೃಣಕಾಷ್ಟ ಸರ್ವ ದಿಕ್ಕಿನಲೀ ಕನಸಿನಲಿ ಮನಸಿನಲಿ ಪಂಚ ಭೂತಗಳಲ್ಲಿ ಜನನ ಮರಣಾತೀತ ಚನ್ನಕೇಶವನು 5
--------------
ಕರ್ಕಿ ಕೇಶವದಾಸ
ಎಲ್ಲಿ ಸುವರಗಳು ಇಲ್ಲದಿದ್ದರೆ ಇವ | ನಲ್ಲದೆ ಮತ್ತಾರಾ | ವಲ್ಲಿ ಕಾಣದೆ ಪೋದೆ ಪ ಸಾರುವ ಶರೀರ ಧರಿಸಿ ಬಾಳಿದ ಮಹಾ | ಭಾರವಾಗಿದ್ದ ಪಾಷಾಣವ ಪೊತ್ತವ | ಗೊರುವ ನೆಲನಂದು ಕಾಷ್ಟದಿಂದಲಿ ಬಂದ | ಹಾರುವನಾಗಿ ತಿರದುಂಡು ಕುಲಧರ್ಮ | ಮೀರಿ ನಡೆದವ ಉಪವಾಸದವÀನಿಂದ | ಊರ ಎಂಜಲಿಗೆ ಹೇಸದೆ ಓಡಾಡಿದವ | ನಾರಿಯರ ವ್ರತ ಕೆಡಿಸಿ ರಾವುತನಾಗಿ | ಕಾಯ | ಆರಿಂದ ಜನಿತನಿವ ನೋಡಲಾಗಿ | ಧಾರುಣಿಯೊಳಗಿದ್ದವ ಸರ್ವರನ್ನ | ಮೀರಿ ನಡೆತÀಲಿದ್ದವ ಇವಗೆ ಮೆಚ್ಚಿ | ಧಾರಿ ಎಂದ ನಿನ್ನ ಮಗಳೆ ಬೇಕೆಂದವ 1 ಬಿರಿಗಣ್ಣೆನವನಿವ ಆವಾವ ಕಾಲಕ್ಕೆ | ಶಿರವಾಗಿ ಕೊಂಡಿಪ್ಪ ಶೀಲ ಸ್ವಭಾವದಿ | ಕೊರಳ ತಿರುಹಲಾರ ಕರುಳ ಮಾಲೆಯುವ | ಪರರ ಬಾಗಿಲ ಕಾವರಾಜ್ಯವಿಲ್ಲದವ | ಸುರರ ಕೋತಿಯ ಮಾಡಿ ಕುಣೆಸಾಡಿದವನಿವ | ದಿಗಂಬರನಾಗಿ ಚರಿಸಿದೆನೆಂದು ಕೋಪದಿಂದ | ಕರವಾಳ ಹಸ್ತದವ || ಪರಾಕ್ರಮ ಉರಗನ್ನ ಮೇಲಿದ್ದವ ಇವನ ಖೂನ | ಅರಿಯನು ದಾವದಾವ | ಭೇದವನಿಕ್ಕಿ | ತಿರುಗಿಸುವನು ಲೋಕವ ವಂಚಕನಿಗೆ | ಪರಮ ಪ್ರೀತಿಯಿಂದ ಕೊಟ್ಟದನೆಣಿಸುವ 2 ತನ್ನ ಜಾತಿಗಳನ್ನು ನುಂಗುವನವನಿವ | ಬೆನ್ನ ಮೇಲಿನ ಒಂದೆ ಬುಗುಟಿ ಪಲ್ಲಿನ ತುದಿ | ಮಣ್ಣು ತೋರುವನಿವ ವಿಕಾರ ಮೊಗದವ | ಕಣ್ಣು ಚುಚ್ಚಿದ ಒಬ್ಬ ಹಾರವನ್ನು ನೋಡಿ | ಹೆಣ್ಣಿಗಭಯವಿತ್ತು ಕಾದಿ ಸೋತವನಿವ | ರಣ್ಯ ವಾಗನಿವ ರಣದೊಳೋಡಿದನಿವ | ಅನ್ಯಾಯ ಪೇಳಿದ ನಂಬಿದವರಿಗೆ | ಮುನ್ನೆ ಕುದುರಿಯೇರಿದಾ ಇವನು ತಾನೆ | ಅನಂತ ಮಾಯಮೋದಾ ಎಂಥವರಲ್ಲಿ | ಪಾದ ಇಟ್ಟು ಇದ್ದು | ಕಣ್ಣಿಗೆ ಪೊಳಿಯೆ ಖೇಡ ಬಡಿಸವಂಥ | ಬಣ್ಣಾಣಿಗಾರನು ಬಂದೆಲ್ಲಿ ದೊರಕಿದಾ 3 ಮೀಸಿ ಕಟ್ಟಿಸಿಕೊಂಡಿವನೀವ ಪ್ರಳಯಾದಿ | ದ್ವೇಷವನಿಕ್ಕಿದ ದೇವದಾನವರಿಗೆ | ಏಸು ದಿವಸವಾಗೆ ಅದೋ ದೃಷ್ಠಾಯವನಿವ | ಭಿಕ್ಷೆ ಪಾತ್ರಿಯವ | ಬಿಗಿಯನೆ ಮುರದು ಬಿಟ್ಟವನಿವ | ಕೊಂಡ ಲಜ್ಜೆಗೇಡಿ | ಘಾಸೆತನಕೆ ಶೂರನು ಒಮ್ಮ್ಯಾದರು || ಮಾಡುತಲಿಪ್ಪನು ಇವನು ಹೆಣ್ಣು | ವೇಷ ಧರಿಸಿಕೊಂಬನು ಕೇವಲ ಅವ | ಕಾಶ ಯಿಲ್ಲದ ಸ್ಥಾನದಲ್ಲಿ ವೊಂದಿಪ್ಪನು 4 ದೃಷ್ಟಿ ಮುಚ್ಚದಿಪ್ಪನವನಿವ ಆವಾಗ | ಬೆಟ್ಟವೆ ಗತಿ ಎಂದು ಸೇರಿಕೊಂಡವನಿವ | ದಿಟ್ಟ ಕಠೀಣ ಕಾಯದವನಿವ ಎದುರಿಗೆ | ಎಷ್ಟಗಲ ಬಾಯದೆರೆದಿಪ್ಪ ಪಾದದ | ಬಟ್ಟಿನಿಂದಲಿ ನೀರು ಸುರಿಸುವ ಬಗೆ ಉಂಟು | ಕುಟ್ಟಿ ಮಾತೆಯ ಶಿರ ಕೆಡಹಿದನಿವ ಜಡೆ | ಗಟ್ಟಿಪ್ಪ ಚೋರನಾಯಕ ಮೌನಪ್ರಾಂತಕ್ಕೆ | ದುಷ್ಟನೆನಸಿ ಮೆರೆವ ಹತ್ತದೆಂದು || ಅಟ್ಟಿಬಿಟ್ಟರೆ ಬರುವ ತನ್ನೆಲ್ಲಿಗೆ | ಕೆಟ್ಟವರನ ಕರೆವ ಉತ್ತಮರನ್ನು | ಪಟ್ಟದ ರಾಣಿಗೆ ಪೇಳದೆ ಜವಾ | 5 ಜಲದೊಳಗಾಡುವನಿವ ಹೊರೆ ಹೊತ್ತು | ಕಲೆಪರಟಿಯಾಗಿ ತಿರುಗುವನಿವ ಮೂಗಿಲ್ಲಿ | ಳಿದು ಬಂದವನಿವ ಗೊಗ್ಗರÀ ಧ್ವನಿಯವ | ತಲುವರಿ ಇವ ತಾನೆ ಶಿಷ್ಯಗೆ ವಿದ್ಯವÀ | ಕಲಿಸಿ ಶ್ಯಾಪವ ಕೊಟ್ಟನವನಿವ ವೈರತ್ವ | ಬಳಸದವನ ಮೇಲೆ ಕಲ್ಲು ಹಾಕಿಸಿದವ | ಬಲು ಭಂಡುಗೋವಳ ಅನ ಬರದದು ಬಿಟ್ಟು | ಕಲಿಯಾಗಿ ಓಡಾಡಿದ | ಹೆರರಿಗಾಗಿ ಸ್ತಳ ದ್ರವ್ಯವ ಮಾಡಿದಾ ದಾನವರಿಂದ | ಬಲವಾವನು ಬೇಡಿದಾ ಬೊಮ್ಮಾಂಡದ | ಒಳಗೆ ಹೊರಗೆ ಕಾಡಿದಾ | ಬಹು ಠಕ್ಕನು | ತಿಳಿದು ತಿಳಿದು ಈರ್ವರಿಗೆಯಲ್ಲಿ ನೋಡಿದಾ 6 ಸವಿ ನೋಡದದರ ರೂಪನಾದವನಿವ | ಅವಯವಂಗಳೆಲ್ಲ ಮುದುರಿಕೊಂಡಿಪ್ಪಾನಿವ | ಅವನಿಗೋಡಿ ಪೋದನಿವ ಮೃಗವಲ್ಲ ಮಾ | ನವನಲ್ಲ ವದ್ಭೂತನಾಗಿ ತೋರುವನಿವ | ಬವರಿಗಾದವನಿವ ತನ್ನ ಕಾಲಕೆ ತಪ್ಪ | ಭವನವಿಲ್ಲದೆ ದಿನ ಕಳೆದವ ಯಾಗದ | ನ್ನವನುಂಡು ನಾನಾ ಶಸ್ತ್ರವನ್ನು ನುಂಗಿದವನಿವ || ಯುವತಿ ಧರಿಸಿದ ಸಂಗಾ ಹಾ | ರುವ ಪಕ್ಕಿ ದಿವಸ ದಿವಸ ತುರುಗಾನಾಗಿಪ್ಪದು | ಅವಧೂತ ಮಾರ್ಗ ತುಂಗಾ | ಪರ್ವತವನು | ಲವಕಾಲಬಿಡದೆ ಬಾಯಲಿ ಕಚ್ಚಿದ ರಂಗಾ 7 ಮಾರಧ್ವಜನನವತಾರ ತಾಳಿದನಿವ | ನೀರೋಳಗಡಿಗಿಪ್ಪ ಎರಡು ಭಾಗಗಲ್ಲಿ | ಕೋರೆಗಳದ್ದಿ ಮಸÀದು ಮತ್ಸರಿಸುತಿಪ್ಪ | ಚೀರಿ ಕೂಗುವ ಮಹಾ ಬೊಮ್ಮಾಂಡವಡದಂತೆ | ಮೂರಡಿಯೊಳಗೆ ತ್ರಿಲೋಕವÀನಿಟ್ಟವ | ಬೇರು ಕಡುವನಂತೆ ಕೊಡಲಿಕಾರನಿವ | ಆರೋಗಣಿಗೆ ಶಬರಿಯ ಹಣ್ಣು ಮೆದ್ದವ | ಬುದ್ಧ ಉದ್ದಂಡಾ ಏಕನು ಇವ || ಕೊಂಡ ಬಹು ಕಡೆ | ಬೀರಿದನ್ನವ ಕೈಕೊಂಡಾ ಒಂದು ತುತ್ತು | ಆರಗೀಯದಲೆ ಉಂಡಾ ಇವನನ್ನು | ಹಾರೈಸಿದವರಿಗೆ ಏನು ಲಕ್ಷ ಹೆಚ್ಚಳ ಕಂಡಾ 8 ಉದಕ ಬಿಟ್ಟರೆ ಬದುಕಲಾರದವನಿವ | ಎದೆಗಟ್ಟಿಯವನಲ್ಲಿ ಮುಟ್ಟಿ ನೋಡಿದರೆ | ಪೊದೆ ಪೊದರಿನೊಳು ಸೇರಿ ಕೊಂಡವನಿವ | ಎದುರಿಗೆ ಒಬ್ಬರ ಬರಗೊಡದವ ತನ್ನ | ಪದದ ಕೆಳಗೆ ಕೊಟ್ಟವನ ಇಟ್ಟವನಿವ | ಮದಕಾವ ಮಾಡಿ ತನ್ನೊಳು ತಾನೆ ಸೋತವ | ಸುದತಿಯುಳಟ್ಟಿದ ಪಾರ್ಥಗಾಳಾದ | ಚದುರ ಕ್ರೂರರಿಗೆ ಕ್ರೂರಾ ನಿರಂತರ | ಉದಧಿ ಎಂಬೊದೆ ಮಂದಿರಾ ಇವಗೆ ನೋಡು | ಬದರಿ ಗಿಡವೆ ಆಸರಾ ಏನೆಂಬೆನೊ | ಕದರು ಮೋರಿಯೆ ಶೃಂಗಾರ ತನ್ನಯ ಗುಣ | ಮೊದಲಿದೆ ಕಡೆ ಎಂದು ಆರಾರಿಗೆ ತೋರಾ 9 ಚಪಲಾಕ್ಷದವನಿವ ಚಲುವನೆಂತೆಂಬೆನೆ | ವಿಪರೀತ ನಿದ್ರೆ ಮಾಡುವನಿವ ಕರೆದರೆ | ಕುಪಿತವಾಗುವ ಕಿಡಿ ಉಗುಳುವನಿವ | ಕಪಟದಲ್ಲಿ ಗಟ್ಟಿ ತಲೆ ಹೊಡಕ ರಾಮ | ಕಪಿಯ ಮೋಸದಿಂದ ಕೆಡಹಿದ ಮಾವನ್ನ | ನಿಪತನ ಗೈಸಿದ | ದೋಷಕ್ಕೆ ಶಂಕಿಸಾ | ತ್ರಿಪುರವ ಕೆಡಸಿದ ಹರಗೆ ಸಾಯುಕವಾಗಿ | ಅಪಕಾರಿ ಝಗಳಗಂಟ ಒದಿಸಿಕೊಂಡ || ವಿಪುಳದೋಳೇನು ಒಂಟಾ ಉಚ್ಚರಿಸುವೆ | ಕೃಪಣ ಜನರಿಗೆ ನೆಂಟಾಸನಕ್ಯಾದರ | ಶಪತದಲ್ಲಿಗೆ ಪೊರವಂಟಾ ಉತ್ತಮರಿಂದ | ಉಪದೇಶವಿಲ್ಲದ ಬಾಳುವ ಮಹಾತುಂಟಾ 10 ಇವರೀರ್ವರಿಗೆ ಈಡೆ ತಪ್ಪಿಸಲು ಪದ್ಮ | ಭವಗಳವಲ್ಲವು ನಿನ್ನ ಕುವರಿಗೆ | ಸವಿಗಾರ ಇವನಲ್ಲದೆ ಮತ್ತಾವಾವಾ | ವಿವರಿಪೆ ಎಂಥವರಕೆ ಅಂಥ ಕನ್ನಿಕೆ | ಹವಣವಾಗಿದೆ ಸತ್ಯ ಸಂಕಲ್ಪವೆ ಸಿದ್ಧಾ | ಶ್ರವಣಾದಿ ಇಂದ್ರಿಂಗಳಿಗಗೋಚರಾ | ಸ್ಥವಿರ ಯೌವನ ಬಾಲ ಒಂದಾದರಿವನೆಲ್ಲಾ | ನವನವ ಬಗೆ ಸುಕಾಯಾ || ಮೋಹನ್ನ ಯಾ | ದವರಾಯಾ ಶಿರಿ ವಿಜಯವಿಠ್ಠಲ ಕೃಷ್ಣ | ಶಿವಕುಲ್ಲ್ಯ ಪುರಿ ನಿಲಯಾ ಭಕ್ತರ ಪ್ರೀಯಾ | ಮಾಯಾ ಜಗದ್ಗುರು | ಪವನವತಾರ ಶ್ರೀ ಆನಂದ ಮುನಿಗೇಯಾ11
--------------
ವಿಜಯದಾಸ
ಎಲ್ಲಿ ಹೋಗುವೆ ಮನದಿ ನಿಲ್ಲೊಂದು ಘಳಿಗೆ ಸೊಲ್ಲ ಲಾಲಿಸು ಲಕ್ಷ್ಮೀವಲ್ಲಭನೆ ನೀನು ಪ ನಡುನೀರೊಳಾಡುವೆಯೊ ಅನಿಮಿಷನು ನೀನಾಗಿ ಕಡುಭಾರದಿಂದಿಳಿವ ಗಿರಿಯನೆತ್ತುವೆಯೊ ಅಡವಿಯೊಳು ಚರಿಸುವೆಯೊ ಬಗೆದು ಬೇರನು ತಿನ್ನ ಲೊಡೆಯುವೆಯೊ ಕಂಭವನು ಘನ ಮಹಿಮೆಯಿಂದ 1 ಬೇಡಿ ದೈತ್ಯನ ನೀನು ಮೂರಡಿಯ ಭೂಮಿಯನು ಕಡು ಚೆಲ್ವ ಪಾದದಿಂದದಳೆಯ ಪೋಗುವೆಯೊ ಕೊಡಲಿಯೊಳು ಭೂಭುಜರ ಸಂತತಿಯ ಕೋಪದಿಂ ಕಡಿಕೊಂಬೆ ನೀನೆಂದು ಜಗವೆಲ್ಲ ಹೊಗಳುತಿದೆ 2 ವಾರಿಧಿಯ ಕಟ್ಟುವೆಯೊ ಬೆಟ್ಟವನು ತಂದಿಕ್ಕಿ ನಾರಿಯರ ಸೇರುವೆಯೊ ಕಡು ಮಮತೆಯಿಂದ ಶ- ರೀರದೊಳು ನಾಚಿಕೆಯ ಹೊರಗಿಡುವೆಯೊ ನೀನು ವಾರುವನನೇರುವೆಯೊ ಈರೈದ ತೋರುವೆಯೊ3 ಬೆಟ್ಟದೊಳು ನಿಲ್ಲುವೆಯೊ ಕಟ್ಟುವೆಯೊ ರೊಕ್ಕವನು ಶೆಟ್ಟಗಾರನುಯೆಂದು ಪೆಸರಿಟ್ಟೆಯೊ ವರಾಹ ತಿಮ್ಮಪ್ಪನೆಂಬುದನು ದೃಷ್ಟಿಯಲಿ ನೋಡಿ ಕಿವಿಗೊಟ್ಟು ಮಾತಾಡು 4
--------------
ವರಹತಿಮ್ಮಪ್ಪ
ಎಲ್ಲಿದ್ದರು ಕಾಯ್ವ ಯದುಕುಲತಿಲಕ| ಭಕ್ತ ರೆಲ್ಲಿದ್ದರು ಕಾಯ್ವ ಯದುಕುಲತಿಲಕ ಪ ಅಡವಿಯೊಳಿರಲು ಅರಣ್ಯದೊಳಿರಲು ಮಡುವಿನೊಳಿರಲು ಮರದ ಮೇಲಿರಲು ಪೊಡವಿಗೀಶ್ವರ ತಾನು ದೃಢಭಕ್ತನಂ ಬಿಡದೆ ರಕ್ಷಿಸುವ ಯೆಂತೆಂಬೊ ಬಿರುದು 1 ತಂದೆಯ ಬಾಧೆಗೆ ಕಂದ ನಿಮ್ಮನು ಕರೆಯೆ ಬಂದು ಕಂಭದಲಿ ನೀ ಕಾಯ್ದೆ ಗೋವಿಂದಾ ಅಂದು ದ್ರೌಪದಿ ಹಾಯೆಂದು ಬದರಲು ಕೇಳಿ ಆ ನಂದದಿಂದಕ್ಷಯವನಿತ್ತ ರಂಗನು ನೀನು 2 ಭರದೆ ಭಗದತ್ತನು ಅಸ್ತ್ರ ಬಿಡಲು ಕೊರಳ ಚಾಚಿದನಾಗ ಕರುಣಾವಾರಿಧಿಯು ವರುಣಗದೆಯನಾಗ ಮರುಳತನದಿ ಬಿಡೆ ಮರಳಿ ಅವನ ಉರುಳಿಸಿತು ಶೃತಾಯುವು 3 ಸಿಂಧುರಾಜನ ಶಿರವ ಅವನ ತಂದೆ ಕೈಯಲಿ ಹಾಕಿ ಬಂದ ಭಾರವನೆಲ್ಲಾ ಕಾಯ್ದೆ ಗೋವಿಂದ ಕರ್ಣ ಅಪ್ರಮೇಯನು ಭೂಮಿ ಕ್ಷಿಪ್ರದಿಂ ಒತ್ತಿದಾ 4 ಅಂದು ಅರ್ಜುನ ತನ್ನ ಕಂದನೊಡನೆ ಕಾದೆ ಹಿಂದಿನ ವೈರದಿಂ ಶಿರವನ್ನು ಹರಿಯೆ ಬಂದು ಮುಕುಂದ ಸಂಧಿಸಿ ಶಿರವನ್ನು ಆ ಇಂದಿರೆ ರಮಣ5 ಉತ್ತರೆ ಗರ್ಭವು ಬತ್ತಿ ಬೀಳಲು ಆಗ ಉತ್ತಮ ಋಷಿಗಳೆಲ್ಲರ ನೋಡಿ ನಿತ್ಯಬ್ರಹ್ಮಚಾರಿಗಳು ಪಾದದೀ ಮೆಟ್ಟಿದರೆ ಬದುಕುವುದೆಂದನು ಕೃಷ್ಣ 6 ಸನತ್ಕುಮಾರರು ಶೌನಕರು ಮೊದಲಾಗಿ ಪರುಶುರಾಮ ಹನುಮಾದಿಗಳು ಬ್ರಹ್ಮಚರ್ಯವು ನಮಗಿಲ್ಲವೆನುತ ಬ್ರಹ್ಮಚರ್ಯಕ್ಕೆ ಆಧಾರ ನೀನೆನ್ನಲು ವಾಮಪಾದದಿ ತುಳಿದೆಬ್ಬಿಸಿದನು ಶಿಶುವ 7 ಸರಸಿರುಹನಯನಾ ಫಣಿರಾಜಶಯನ ಶರಣಾಗತದುರಿತಾಪಹರಣ ದೈತೇಯಸಂಹರಣ ಗೋವರ್ಧನೋದ್ಧರಣ ಪೀತಾಂಬರಾಭರಣ ಕೌಸ್ತುಭಾಭರಣ 8 ಅಶ್ವತಾಮನ ಅಸ್ತ್ರ ವಿಶ್ವವನು ಸುಡುತಿರೆ ವಿಶ್ವನಾಯಕ ಶಮನ ಮಾಡಿ ಕಾಯ್ದು ಅಸಮಸಾಹಸದಿ ಚಕ್ರವ ಪಿಡಿದು ಗರ್ಭದ ಶಿಶುವನ್ನು ಕಾಯ್ದ ಕುಶಲಿ ವೆಂಕಟಕೃಷ್ಣ 9
--------------
ಯದುಗಿರಿಯಮ್ಮ
ಎಲ್ಲಿರಲಾರನು ಚೆಲುವ ಗೋಪಾಲ ಮೆಲ್ಲುಲಿಗೊಲಿವನು ಇಲ್ಲಿರಲಾರನೆ ಪ ಕ್ಷುಲ್ಲಕರಿರುವೆಡೆ ನಿಲ್ಲಲಾರನು ದಿಟ ಎಲ್ಲ ಭಕ್ತರ ಮನೆಯಲಿ ನಲಿವನಿವ ಅ.ಪ ಸಕಲ ತೀರ್ಥಂಗಳ ಸಕಲಕ್ಷೇತ್ರಂಗಳ ಸಕಲೋತ್ಸವಗಳ ದರ್ಶನಯಾತ್ರೆ ಭಕುತಿಗೆ ಸಾಧನ ಮಂತ್ರವು ಮಾನವ ಭಕುತಿಯ ಭಜನೆಯೆ ಮುಕುತಿಯ ಮಾರ್ಗವು 1 ಮಲಗಿ ಪಾಡಲು ಅವ ಕುಳಿತು ಕೇಳುವನಂತೆ ಕುಳಿತು ಪಾಡಲು ಅವ ನಿಲ್ಲುವನಂತೆ ನಿಲುತ ಪಾಡಲು ಅವ ನಲಿಯುವನಂತೆ ನಲಿದರೆ ಒಲಿವ ಮಾಂಗಿರಿಪತಿಯಂತೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಷ್ಟು ದಿನದ ಪೂಜೆ ಹಿಡಿದೆಣ್ಣಾ ಸತಿಯೆಂಬ ಮಾರಿದಿ- ನ್ನೆಷ್ಟು ದಿನ ಪೂಜೆ ಮಾಡಬೇಕಣ್ಣಾ ಪ ಎಷ್ಟು ದಿನದ ಪೂಜೆ ಹಿಡಿದಿ ನ್ನೆಷ್ಟುದಿನ ಮುಂದೆ ಬಾಕಿ ಉಳಿದಿದೆ ಕಷ್ಟಕಂಜದೆ ಬಿಡದೆ ಅನುದಿನ ನಿಷ್ಠೆಯಿಂದ ಪೂಜೆ ಮಾಡುವಿ ಅ.ಪ ಒಬ್ಬರ ಮನೆ ಮುರಿದು ತರುವಿ ಅವಳಿಗೇನೆ ಹಬ್ಬಮಾಡಿ ಉಣಿಸುತಿರುವಿ ಮತ್ತು ಇನ್ನು ಒಬ್ಬರೈತರ ಬೊಬ್ಬೆ ಹೊಡೆಯುವಿ ದಬ್ಬಿ ಓಡಿಸುವಿ ಹಬ್ಬ ಹುಣ್ಣಿಮೆ ಬರಲು ವೈಭವದುಬ್ಬಿಉಬ್ಬಿವಸ್ತ್ರ ಒಡವೆ ಅಬ್ಬರದಿಂದುಡಿಸಿ ತೊಡಿಸಿ ಮಬ್ಬಿನಿಂದ ಹಿಗ್ಗುತಿರುವಿ 1 ಧನವ ತಂದು ಅವಳಿಗರ್ಪಿಸಿ ಮತ್ತು ನಿನ್ನಯ ಮನವ ಅವಳ ವಶಕೆ ಸಲ್ಲಿಸಿ ಎಂಟುಗೇಣಿನ ತನುವು ಅವಳಾಧೀನದಲ್ಲಿರಿಸಿ ಕುಣಿವಿ ಪಶುವೆನಿಸಿ ಪಾಲಿಸಿ ದಿನಗಳೆಯುವಿ ನೋಡಿಕೊಳ್ಳದೆ 2 ಬಂದಕಾರ್ಯ ಮರೆದುಬಿಟ್ಟ್ಯಲ್ಲ ಹೆಡತಲೆಮೃತ್ಯು ಹಿಂದೆ ನಿಂತು ನಲಿಯುತಾಳಲ್ಲ ಹೇ ಪಾಪಿ ನೀನು ಒಂದೂ ವಿಚಾರ ಮಾಡಿ ಅರೀಲಿಲ್ಲ ಮಂದನಾದೆಲ್ಲ ತಂದೆ ಶ್ರೀರಾಮನ್ನಂತಂಘ್ರಿಗೊಂದಿ ಭಜಿಸಿ ದಾಸನಾಗಿ ಅಂದಮಾದ ನಿತ್ಯಮುಕ್ತಿ ಪಡೆವ ಸುಸಂಧಿ ನಡುವೆ ಹೋಗುತಾದರ್ಲ3
--------------
ರಾಮದಾಸರು
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿನ್ನ ವಿ- ಶಿಷ್ಟ ಮಹಿಮೆಗಳನು ಭಕ್ತರಿಗೆ ಬಂದಾ ಕಷ್ಟ ಕಳೆಯುವೆಯೋ ನೀನು ಸುರಕಾಮಧೇನು ವಿಷ್ಣುವೇ ಪರದೈವವೆಂದು ದುಷ್ಟರಾಕ್ಷಸರನ್ನೆ ಕೊಂದು ಸೃಷ್ಟಿಪಾಲಿಪ ಶ್ರೀ ರಮೇಶನೇ ಇಷ್ಟ ಭಕುತರೊಳು ಶ್ರೇಷ್ಠನೆನಿಶಿದಿ ಪ ತಾಯಿಯೂ ಬಂದು ಸೇವೆಗೆ ರಘುಪತಿ ರಾಯನಲೆ ನಿಂದು ಬಯಸಲಿಲ್ಲಾ ಒಂದು ಶ್ರೀಹರಿಗೆ ಬಂದು ಕಾಯಬೇಕು ಸುಗ್ರೀವನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯ ಉ- ಪಾಯದಿಂದಲಿ ಕೊಲಿಸಿ ರವಿಜಗೆ ಸ- ಹಾಯ ಮಾಡಿದಿ ವಾಯುತನಯನೆ 1 ಕಡಲ ಬೇಗನೆ ಹಾರೀ ಶ್ರೀರಾಮನ ಮಡದಿಗುಂಗುರ ತೋರಿ ಅಲ್ಲಿದ್ದ ಅಸುರರ ಜಡಿದೆ ಬಲು ಹೊಂತಕಾರಿ ಮಾಡಿಯೊ ಸೂರಿ ಒಡೆಯಗ್ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರ ಹೊಡೆಸಿದಾಕ್ಷಣ ಲೋಕಮಾತೆಯ ಒಡಗೂಡಿಸಿದೆಯೋ ಶ್ರೀರಾಮಚಂದ್ರಗೆ 2 ಮೂರು ರೂಪವ ತಾಳ್ದಿ ಮಹಯೋಗ್ಯ ಜನರಿಗೆ ಸಾರ ತತ್ವವ ಪೇಳ್ದಿ ಶರಣ್ಹೊಕ್ಕ ಜನರಪಾರ ದುಃಖವ ಶೀಳ್ದಿ ಮೊರೆಯ ಕೇಳ್ದಿ ಧೀರ ಕದರುಂಡಲಗಿ ಹನುಮಯ್ಯ ಸೇರಿದೆನೊ ನಿನ್ನಂಘ್ರಿ ಕಮಲವ ಗಾರು ಮಾಡದೆ ಸಲಹೊ ಕರುಣವಾರಿಧಿ ನೀಯೆನ್ನನೀಗಲೆ 3
--------------
ಕದರುಂಡಲಗಿ ಹನುಮಯ್ಯ
ಎಷ್ಟು ಪೊಗಳಿದರೇನೀ ಭ್ರಷ್ಟಮಾನವರು ಪಾದ ಪ ಸ್ವಾಭಿಮಾನ ನೀಗಿ ದೇಹಾಭಿಮಾನ ತೊರೆಯದೆ ಪ್ರಭುನಿನ್ನ ನಿಜಲೀಲೆ ಸೊಬಗು ತಿಳಿಯುವುದೆ 1 ಭ್ರಷ್ಟ ಭ್ರಾಂತಿಗಳಳಿದು ದುಷ್ಟನಡೆ ನೀಗದೆ ಶಿಷ್ಟರೊಡೆಯ ನಿನ್ನ ನಿಜಗುಟ್ಟು ತಿಳಿಯುವುದೆ 2 ವಿಷಯವಾಸನೆ ನೀಗಿ ಹಸನುಮಾಡದೆ ಮನವ ಶ್ರೀಶ ಶ್ರೀರಾಮ ನಿನ್ನ ದಾಸತ್ವಬಹುದೆ3
--------------
ರಾಮದಾಸರು
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ