ಒಟ್ಟು 224 ಕಡೆಗಳಲ್ಲಿ , 55 ದಾಸರು , 204 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೇಯೆಂದು ಮರೆ ಹೊಕ್ಕೆನೋ ರಂಗ |ದೀನ ಜನರ ಪಾಲಿಪ ದಯಾಸಾಗರ ಪಉತ್ತಮ ದ್ವಿಜರು ಮನೆಗೆ ಬರಲು |ಪ್ರತ್ಯುತ್ಥಾನವ ಕೊಡದಲೆ ಉ ||ನ್ಮತ್ತತನದಿ ಬಹು ಪಾಪವ ಗಳಿಸಿದೆ |ಚಿತ್ತಜಜನಕನೆ ದೋಷನಗ ಕುಲಿಶ 1ಪಾತ್ರರ ಸಂಗಡ ಕ್ಷೇತ್ರಗಳ |ಯಾತ್ರೆ ಚರಿಸದೆ ನಿರರ್ಥಕದಿ ||ಗಾತ್ರವ ಬೆಳಸಿದೆ ರುಕ್ಮಿಣೀವರನೆ ವಿ- |ಧಾತೃ ಕರಾರ್ಚಿತ ಕುಂದನೆಣಿಸದಿರು 2ಸ್ನಾನ ಸಂಧ್ಯಾವಂದನೆ ಬಿಟ್ಟು |ಜ್ಞಾನಿಗಳಾದವರನು ಹಳಿವೆನು ||ಧ್ಯಾನಿಪೆ ಸರ್ವದಾ ಪರರ ಕೇಡನು |ಏನೆಂಧೇಳಲಿ ಯನ್ನಯ ಅವಗುಣ 3ಮರೆತಾದರೂ ಹರಿಯೆಂದೊಮ್ಮೆ |ಸ್ಮರಿಸಿದವರ ದುರ್ಗುಣಗಳನು ||ಪೊರೆವನೆಂಬ ನಿನ ಬಿರುದುಕೇಳಿಪದ |ಸರಸಿಜಕೆರಗಿದೆ ಕರುಣಿಸೋ ಮಾಧವ 4ಪುಸಿಯಲ್ಲವೋ ಇದು ಅಜಾಮಿಳ |ಪೆಸರಾಗಿಹ ಪಾಪಿಷ್ಠರೊಳು ||ವಶ ಮೀರಿ ಸುತನ ಕರೆಯಲಾಕ್ಷಣ |ಪೋಷಿಸಿದೆ ತ್ವರದಿ ಶ್ರೀ ಪ್ರಾಣೇಶ ವಿಠ್ಠಲಾ 5
--------------
ಪ್ರಾಣೇಶದಾಸರು
ಪರಿಪರಿಯ ಪೂಜೆಗಳ ಕರಿವರದಗರ್ಪಿಸಲು |ಪರಿಪೂರ್ಣ ತಾನವನಕರವಪಿಡಿದು ||ಸರಿಸಿಜಾಕ್ಷನು ತ್ವರದಿ ಸಾರೂಪ್ಯವನ್ನಿತ್ತು |ಮರುತನಂತರ್ಗತನು ಹರುಷದಲಿ ಪೊರೆವ 2ತೊಂಡರಾ ಮನೆಗಳಲಿ [ತೊಂಡು ಗೆಲಸವ ಗೈವ] |ಪಾಂಡವರ ಮನೆಯಲ್ಲಿ ಕುದುರೆಗಳ ತೊಳೆದ ||ಅಂಡಜಾಸನ ನಮ್ಮಪುರಂದರವಿಠಲನು |ತೊಂಡರಿಗೆ ತೊಂಡನಾದಹಿಂಡುದೈವದ ಗಂಡ 3
--------------
ಪುರಂದರದಾಸರು
ಪಾಲಿಸು ಪರಮಪಾವನ ಪದ್ಮಾವತೀರಮಣಪಾಲಿಸು ಪಯವಾರಿಧಿವಾಸ ಪದ್ಮಗದಾಧರ ಕೌಸ್ತುಭಭೂಷ ಪ.ನೀಲನಿಭಾಂಗನಿಖಿಲಸುರ ಮುನಿಜನಜಾಲಪಾಲಪಾಹಿಪಾರ್ಥಸಾರಥಿ ಅ.ಪ.ಮದನಜನಕ ಮಹಿಮಾಂಬುಧಿ ನಿನ್ನಪದಕಮಲವ ನಾ ಸ್ಮರಿಸದೆ ಎನ್ನಮದಮುಖತನವನು ಒದರುವದೆನ್ನಪದುಮನಾಭ ರಕ್ಷಿಸು ನೀ ಮುನ್ನಸದಯಾಂಬುಧಿ ನೀನಲ್ಲವೆ ನಿನ್ನೊಳು ಕ್ರೋಧಉದುಭವಿಸುವುದು ನಿಜವೇ ಭಕ್ತವಾತ್ಸಲ್ಯಇದಕೆ ನೀ ಊನ ತರುವೆ ಸಾಕು ಈ ಮರವೆಒದಗಿಸು ಸರ್ವಮನಸಿನೊಳ್ ಪುದು-ಗಿದಿಷ್ಟಾರ್ಥಗಳ ನೀ ದಯವಿಡುತ ಇಹಪರಗತಿಗಾ-ಸ್ಪದವಾದ ಸಂಪದವ ನೀ ಕೊಡು ತ್ವರಿತ ತ್ರೈಲೋಕ್ಯದಾತಮಧುಸೂದನ ಮಂದರಗಿರಿಧರ ನೀ-ರದ ನಿಭ ನಿರ್ಮಲ ನಿಜರೂಪಗುಣಸದನಾಚ್ಯುತ ರವಿಕುಲದೀಪ ನಿರ-ವಧಿ ಆನಂದ ರಸಾಲಾಪಬುಧಜನೋಪಲಾಲಿತ ಲೀಲಾಯತಉದಧಿಶಾಯಿ ಮಾನದ ಮಧುಸೂದನ 1ನಾಮಸ್ಮರಣೆಯೆ ನರಕೋದ್ಧಾರನೇಮವಿಲ್ಲೆಂಬುದು ನಿನ್ನ ವಿಚಾರಸಾಮಾರ್ಥದ ಗುಣಕೆಲ್ಲನುಸಾರಪಾಮರಮನಕಿದು ಈ ಗುಣಭಾರಶ್ರೀಮನೋಹರನೆ ಲಾಲಿಸೊ ಚಾತುರ್ಥಿಕ ಜ್ವರದಿಭ್ರಾಮಕನಾದೆ ಪಾಲಿಸೊ ದಾರಿದ್ರ್ಯವೆಂಬಸೀಮೆಯಿಂದಲಿ ದಾಟಿಸೊ ಸುಕೀರ್ತಿಯ ಮೆರೆಸೊಸಾಮಗಾನಲೋಲಸುಜನಸ್ತೋಮಭಾಗ್ಯನಿಧಿಯೆ ಎನ್ನ ಮನದ ಅಜ್ಞಾನವೆಂಬತಾಮಸಪರಿಹರಿಸಿ ಜ್ಞಾನೋದಯದ ಸದಾನಂದಈ ಮಹಾಭಾಗ್ಯಗಳೆಲ್ಲ ನೀನಿತ್ತಿರೆನೀ ಮಾಡುವುದೆಲ್ಲವು ಸಹಜಗುಣಧಾಮಾಶ್ರಿತ ನಿರ್ಜರಭೂಜಸುಜನಸ್ತೋಮಾರ್ಕಾಮಿತ ವಿಭ್ರಾಜಶ್ರೀಮಚ್ಛೇಷಾಚಲ ಮಂದಿರ ಸು-ತ್ರಾಮಾರ್ಚಿತ ಸದ್ರಾಮ ಶ್ರೀರಾಮ 2ಉಡುವ ಸೀರೆಯ ಸೆಳೆಯಲು ದ್ರುಪಜೆಯಕೊಡಲಿಲ್ಲವೆ ಬಹುವಸನ ಸಂತತಿಯಹಿಡಿಯವಲಕ್ಕಿಗೆ ದ್ವಾರಕ ಪತಿಯಕಡು ಸರಾಗವಾಯ್ತಿಂದಿನ ಪರಿಯಬಿಡುತ ಬೆಟ್ಟದ ಮಧ್ಯದಿ ನಿಂತರೆ ನಿನ್ನಬಿಡುವರ್ಯಾರಯ್ಯ ಶೀಘ್ರದಿ ಮನಸಿನಿಷ್ಟಕೊಡು ದಯವಿಟ್ಟು ಮುದದಿ ಕರುಣಾವುದಧಿಕಡುಲೋಭಿತನ ಬಿಡು ಮಹರಾಯಅಡಿಗಳಿಗೆರಗುವೆನು ಜಗದಯ್ಯ ಪೂರ್ವಾರ್ಜಿತಕರ್ಮವಡಂಬಡಿಸಿ ರಕ್ಷಿಸು ದಮ್ಮಯ್ಯ ಪಂಢರಿರಾಯಒಡೆಯ ಶ್ರೀ ಲಕ್ಷ್ಮೀನಾರಾಯಣನಡುನೀರೊಳು ಕೈಬಿಡುವೆಯ ನೀತೊಡಕೊಂಡ ಬಿರುದೇನಯ್ಯ ಈಕಡು ಕೃಪಣತನ ಸಾಕಯ್ಯಪೊಡವಿಯೊಳಗೆ ಪಡುತಿರುಪತಿಯೆಂಬದೃಢಕಾರ್ಕಳದೊಡೆಯ ಶ್ರೀನಿವಾಸನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾಲಿಸೆ ಶ್ರೀ ಗೌರೀ ಎನ್ನನು ಪಪಾಲಿಸೆ ನಿನ್ನಯ ಪಾಲಿಗೆ ಬಂದೆನು |ಬೀಳುವೆ ಸರ್ವದ ಕಾಲಿಗೆ ಕರುಣದೀ ಅ.ಪ.ಶರಣೆಂದವರನು ಪೊರೆವಳು ಎಂಬುವ |ಬಿರಿದು ನಿನ್ನದು ಎಂದರಿದೆನು ತ್ವರದಿಂ1ಸನ್ಮತಪುರುಷನ ಯಿನ್ನೆಲ್ಲಿ ಕಾಣೆನೋ |ಮನ್ಮಥನೆಂಬುವ ಬನ್ನಬಿಡಿಪ ಬಲು2ಕಾಣೆನು ಶಾಂತಿಯ ಏನೆಂಧೇಳಲಿ |ಪ್ರಾಣೇಶ ವಿಠಲನು ತಾನೆಯೇ ಬಲ್ಲನು 3
--------------
ಪ್ರಾಣೇಶದಾಸರು
ಪ್ರಸನ್ನ ಶ್ರೀ ಕೃಷ್ಣಾಮೃತಸಾರ27ಬಾರೋ ಎನ್ನ ಮನಕೆ ಗೋಪಾಲಕೃಷ್ಣಬಾರೋ ಎನ್ನ ಮನಕ್ಕೆ ಪಬಾರೋ ಎನ್ನ ಮನಕೆ ಭಾಮೆ ರುಕ್ಮಿಣೀ ಸಹಸರಸೀರುಹಾಸನ ಶಿವಾದ್ಯಮರ ವಂದ್ಯ ಅ.ಪ.ಮೋದಚಿನ್ಮಯ ಜಗಚೇಷ್ಟಕ ಬಲರೂಪಯದುಪತೇ ಕೃಷ್ಣ ನೀನು ದೇವಕೀ ಸುತನೆನಿಸಿಮೇದಿನಿಯಲಿ ಅವತಾರ ಮಾಡಿದಅಜಸಾಧು ಸದ್ಭಕ್ತರ ಸದ್ಧರ್ಮ ರಕ್ಷಿಸಲು 1ಪೂತನಿ ಶಕಟತೃಣಾವರ್ತವತ್ಸಬಕಅಘಧೇನು ಕೇಶಿ ಚಾಣೂರ ಮುಷ್ಟಿಕದೈತ್ಯಕುವಲಯಪೀಡಾ ಕಂಸಾದಿ ದುಷ್ಟರನ್ನಸದೆದು ಭೂಬಾರವ ಇಳಿಸಿದಿಶೌರಿ2ಸುಂದರ ವದನದಲ್ಲಿ ಜಗವೆಲ್ಲಾ ತೋರಿಸಿದಿಉದ್ಧರಿಸಿ ಮಣಿಗ್ರೀವ ನಳಕೂಪರನ್ನಮುಖಾದಿಂದ್ರಶ್ಚಾಗ್ನಿ ದಾವಾಗ್ನಿಯನು ನುಂಗಿನಂದನ್ನ ವರ್ಣಾಲಯದಿಂದ ಬಿಡಿಸಿ ತಂದಿ 3ನಾಗಪತ್ನಿಯರಿಗೂ ಕಾಳಿಂಗನಿಗೂ ಒಲಿದುನಗವನ್ನ ಎತ್ತಿ ಗೋ ಗೋಪಾ ಜನರ ಕಾಯ್ದಿಉಕ್ಕುವ ಪ್ರೇಮದಿಂ ಸೇವಿಸಿದ ಗೋಪಿಯರಭಕುತೀಗೆ ಮೆಚ್ಚಿ ಯೋಗ್ಯ ಸಾಧನ ಫಲವಿತ್ತಿ 4ಸುದರ್ಶನಾಭಿದ ವಿದ್ಯಾಧರನ್ನ ಶಾಪದಿಂದಪಾದಸ್ಪರ್ಶವನಿತ್ತು ಮೋಚನೆ ಮಾಡಿಉದ್ಧರಾಕ್ರೂರ ಸ್ತ್ರೀ ವಾಯುಕ ಮಾಲಾಕಾರಮೊದಲಾದವರ್ಗೂವಿಪ್ರಸ್ತ್ರೀಯರಿಗೂ ಒಲಿದಿ5ಬಲಭದ್ರ ಸುಭದ್ರ ಸಹ ಕೃಷ್ಣ ಜಗನ್ನಾಥಮಾಲೋಲ ನಿನ್ನಯ ಬಾಲಲೀಲೆಗಳುಬಲು ಶುಭತಮ ಪಾಲ್‍ಬೆಣ್ಣೆಯ ಪ್ರಿಯ ಈಶಪಾಲಾಬ್ಧಿಶಾಯಿ ಅಚ್ಚುತಾನಂದ ಗೋವಿಂದ 6ಈರಾರುಯೋಜನ ದ್ವಾರಕಾ ದುರ್ಗವುಸುರದ್ರುಮ ಲತೋದ್ಯಾನ ವಿಚಿತ್ರೋಪ ವನಗಳ್ಪುರುಟ ಶೃಂಗೋನ್ನತ ಸ್ಫಟಿಕ ಅಟ್ಟಾಳಗೋಪುರಗಳು ನವರತ್ನ ಸ್ವರ್ಣಗೃಹಗಳ್ 7ಆಶ್ಚರ್ಯ ಕಡಲ್‍ಮಧ್ಯ ದ್ವಾರಕಾ ನಿರ್ಮಿಸಿಅಚ್ಛನ್ನ ಭಕ್ತ ಸೇವಕರೊಡೆ ಇದ್ದಿಮುಚುಕುಂದನಿಗೆ ಒಲಿದು ಕಾಲನ್ನ ಕೊಲ್ಲಿಸಿದಿರಚಿಸಿದಿ ಮದುವೆಯ ಅಣ್ಣ ಬಲರಾಮಗೆ 8ಸಿಂಧುಜಾ ಇಂದಿರಾಜನಕಜಾಸೀತೆಯೇಪ್ರಾದುರ್ಭವಿಸಿಹಳು ರುಕ್ಮಿಣೀ ಭೈಷ್ಮಿಸಿಂಧುಜನಕಾ ತೆರದಿ ಅಲ್ಲದೇ ಭೀಷ್ಮಕಪುತ್ರ ದುಷ್ಟಗೆ ಸೋತು ಚೈದ್ಯನಿಗೆ ಕೊಡಲಿದ್ದ 9ಅನಾದಿನಿತ್ಯನಿನ್ನಸತಿರಮಾ ರುಕ್ಮಿಣಿಜ್ಞಾನ ತೇಜಃ - ಪುಂಜ ಭಕ್ತಿಪ್ರವಾಹ ಓಲೆನಿನಗೆ ಕಳುಹಿಸಿದಳು ದ್ವಿಜವರ ಶ್ರೇಷ್ಠಬ್ರಾಹ್ಮಣ ಅಚ್ಛಿನ್ನ ಭಕ್ತನ ಕೈಯಲ್ಲಿ 10ಉನ್ನಾಮ ಉದ್ದಾಮ ಅಚ್ಚುತ ನೀನಿತ್ಯಆನಂದ ಚಿತ್ತನು ಯದುಪತಿ ಕೃಷ್ಣನೀನೇ ತನ್ನಪತಿಸಿರಿತಾನು ಎಂದುಅನಘಲಕ್ಷ್ಮೀಭೈಷ್ಮಿ ಪತ್ರದಿ ಹೇಳಿಹಳು11ಸುಧಾಕಲಶ ವಿಪ ಕಿತ್ತಿ ತಂದ ತೆರದಿಚೈದ್ಯಮಾಗಧಸಾಲ್ವಾದಿ ಕಡೆಯಿಂದಎತ್ತಿತಂದಿಯೋ ಸ್ವಯಂವರದಿಂದ ಶ್ರೀಭೈಷ್ಮಿಯವಂದಿಸಿ ಶರಣಾದೆ ಕೃಷ್ಣ ರುಕ್ಮಿಣಿಗೆ 12ಜಯ ಕೃಷ್ಣ ನೀ ರುಕ್ಮಿಣೀ ಸಮೇತದಿ ಬಾರೆಜಯಭೇರಿ ತಾಡಿಸಿ ದ್ವಾರಕಾವಾಸಿಗಳುಗಾಯಕರು ನರ್ತಕರು ವಿಪ್ರಮುತ್ತೈದೆಯರುಜಯ ಜಯತು ಎನ್ನುತಾನಂದ ತೋರಿಸಿದರು 13ಯದುಪುರಿಯಲಿ ಮನೆ ಮನೆಯಲಿ ಮಹೋತ್ಸವಮುದದಿ ಅಲಂಕೃತವಾಗಿ ಸ್ತ್ರೀ ಪುರುಷರುಜ್ಯೋತಿ ಉಜ್ವಲ ದೀಪಾವಳಿ ಪೂರ್ಣಕುಂಭಗಳುಛಂದಗೊಂಚಲ ಪುಷ್ಪರತ್ನ ತೋರಣಗಳ್14ಸಂಜಯ ಕುರು ಕೇಕಯಾದಿ ರಾಜರುಗಳುರಾಜಕನ್ಯೆಯರು ಗಜಗಳ್ ಓಡ್ಯಾಟಮೂರ್ಜಗದೊಡೆಯ ನೀ ರುಕ್ಮಿಣಿಯ ಕರೆತಂದಸುಚರಿತ್ರೆ ಪೊಗಳಿದರು ನರನಾರಿರೆಲ್ಲರು 15ಚತುರ್ಮುಖ ವಾಯು ಶಿವ ವೈನತೇಯನುಶೇಷಶತಮುಖಸ್ಮರಅಹಂಕಾರಿಕ ಪ್ರಾಣಮೊದಲಾದಅಮರರುಮುನೀಂದ್ರರು ವೇದಮಂತ್ರ ಘೋಷಿಸೆ ಮದುವೆ ವೈಭವ ಏನೆಂಬೆ 16ಪೂರ್ಣಜ್ಞÕನಾತ್ಮನೆ ಪೂರ್ಣ ಐಶ್ವರ್ಯಾತ್ಮಪೂರ್ಣಪ್ರಭಾನಂದತೇಜಶಕ್ತ್ಯಾತ್ಮಆನಮಿಪೆ ಅಚ್ಚುತಾನಂತ ಗೋವಿಂದಕೃಷ್ಣ ರುಕ್ಮಿಣಿನಾಥ ಜಗದೇಕ ವಂದ್ಯ 17ಆದರದಿಸುರರಾಜವಿಪ್ರರ ವೃಂದಯಾದವರುಗಳು ಶ್ರೀ ರುಕ್ಮಿಣಿಕೃಷ್ಣನಿತ್ಯಸತಿಪತಿ ಮದುವೆ ನೋಡಿ ಹಿಗ್ಗಿದರುಶ್ರೀದ ನೀ ಕೊಡುವಿಯೊ ಸೌಭಾಗ್ಯ ಇದು ಪಠಿಸೆ 18ಯೋಗೇಶ್ವರ ದೇವ ದೇವ ಶ್ರೀಯಃಪತೇಅಗಣಿತಗುಣಪೂರ್ಣಅಪ್ರಮೇಯಾತ್ಮನ್ಶ್ರೀಕೃಷ್ಣ ವಿಷ್ಣೋ ಶ್ರೀರಮಾರುಕ್ಮಿಣಿಬಾಗಿ ಶರಣಾದೆ ನಿಮ್ಮಲ್ಲಿ ಮಾಂಪಾಹಿ 19ರುಕ್ಮಿಣಿ ಪತ್ರಧರ ದ್ವಿಜವರ ಶ್ರೇಷ್ಠರುಧರ್ಮ ಭೀಮಾರ್ಜುನ ಸಹದೇವ ನಕುಲಅಮಲ ಭಕ್ತಾಗ್ರಣಿ ವಿದುರನು ಇಂಥಸುಮಹಾ ಭಕ್ತವಿನುತವಂದ್ಯನೇ ನಮೋ ನಮೋ20ಜಯತು ದೇವಕೀತನಯ ಸತ್ಯಾ ರುಕ್ಮಿಣೀಕಾಂತಜಯತು ಜಗಜ್ಜನಾದಿಕರ್ತ ನಮೋ ನಮೋಜಯತು ವಿಧಿತಾತ ಶ್ರೀ ಪ್ರಸನ್ನ ಶ್ರೀನಿವಾಸಜಯತು ಜಯತು ದಶಪ್ರಮತಿ ಹೃತ್‍ಪದ್ಮಸ್ಥ 21-ಇತಿ ಕೃಷ್ಣಾಮೃತಸಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ರುಕ್ಮಿಣೀಶ ಕಲ್ಯಾಣ24ಪ್ರಥಮ ಅಧ್ಯಾಯಪ್ರಾದುರ್ಭಾವಸಾರಪೂರ್ಣ ಸುಗುಣಾರ್ಣವನೇಅನಘಮಾಯಾರಮಣಆ ನಮಿಪೆ ಶ್ರೀ ಕೃಷ್ಣ ರುಕ್ಮಿಣೀನಾಥಜ್ಞಾನ ಸುಖಬಲ ಚೇಷ್ಟಾರೂಪ ದೇವಕೀತನಯಸೌಂದರ್ಯಸಾರ ಜಗತ್ ಜನ್ಮಾದಿಕರ್ತ ಪಆಲದೆಲೆ ಮೇಲ್ ಮಲಗಿ ಅದ್ವಿತೀಯನೇ ನೀನುಲೀಲೆಯಿಂ ನಿನ್ನೋಳ್ ನಿನ್‍ಅನಂತ ರೂಪಗಳನಿಲ್ಲಿರಿಸಿ ಉದರದೊಳ್ ಜಗವನ್ನೆಲ್ಲವ ಧರಿಸಿನೀ ಲಯಾಬ್ಧಿ ಸುಖವ ರಮೆಗಿತ್ತಿಸ್ವರತ1ಗುಣಕಾಲ ದೇಶ ಅಪರಿಚ್ಛಿನ್ನ ನಿನ್ನನ್ನುಗುಣತ್ರಯಮಾನಿಮಾಅನಘಸಂಸ್ತುತಿಸಿಆನಂದಮಯನೀನು ಆನಂದ ಲೀಲೆಯಿಂಸ್ವರ್ಣಾಂಡ ಪಡೆದು ಅದರೊಳ್ ಪೊಕ್ಕಿ 2ಪದುಮನಾಭನೇ ನಿನ್ನ ನಾಭಿ ಕಮಲೋದ್ಭೂತವಿಧಿಯಪ್ರತಿದಿನದಲ್ಲಿ ಅವತಾರ ಮಾಡಿಸಾಧು ಸಾತ್ವಿಕರಿಗೆಅಭಯಸದ್ಗತಿ ಇತ್ತುಅಧಮ ಅಸುರರ ಸದೆದು ಭೂಭಾರ ಕಳೆದಿ 3ಮೂಲಾವತಾರಂತರ್ಯಾಮಿ ವ್ಯಾಪ್ತಾಂಗಗಳುಎಲ್ಲವೂ ಪೂರ್ಣವು ನಿತ್ಯವು ಅಭಿನ್ನಳಾಳುಕನೇ ನಿನ್ನಮಲ ರೂಪವಿಶೇಷವಲೀಲೆಯಿಂದಲಿ ಪ್ರಕಟಮಾಡುವಿ ಆಗಾಗ 4ವೇದ ಉದ್ಧಾರನೇ ಮತ್ಸ್ಯರೂಪನೇ ನಮೋಮಧುಕೈಟಭಹಾರಿ ಹಯಗ್ರೀವ ಶರಣುಮಂಡಲಾದ್ರಿಯ ಪೊತ್ತಕೂರ್ಮಧನ್ವಂತರಿಸುಧೆಸುರರಿಗುಣಸಿದ ಸ್ತ್ರೀರೂಪಪಾಹಿ5ಸುರಪಕ್ಷಅಜಅಜಿತ ಸಿಂಧುಜಾಪತಿ ಧರೋ-ದ್ಧಾರವರಾಹನಮೋ ಪುರುಟಾಕ್ಷಹಾರಿಶರಣು ತ್ರಯತ್ರಿಂಶದಕ್ಷರ ಮನುಗ ಶ್ರೀದವರಚಕ್ರಧರಾಅಭಯಭೂಧರಶಾಮ6ಪ್ರೋದ್ಯಾರ್ಕ ನಿಭ ವರ್ತುಲ ನೇತ್ರತ್ರಯವುಹಸ್ತದ್ವಯ ಅಜಾನುದರಾರಿಧರ ಕೋಟಿಆದಿತ್ಯಾಮಿತತೇಜಮಾಲಕ್ಷ್ಮೀಯುತ ವೀರಉತ್ಕøಷ್ಟಬಲ ವಿಷ್ಣೋ ನರಸಿಂಹ ಶರಣು 7ದ್ವಾತ್ರಿಂಶದಕ್ಷರ ಸುಮಂತ್ರ ಪ್ರತಿಪಾದ್ಯನೇಹಿರಣ್ಯಕಶಿಪುವ ಸೀಳ್ದಿ ಪ್ರಹ್ಲಾದಪಾಲಮೂರಡಿಯ ಕೇಳ್ದ ವಾಮನಬಲಿಬಂಧಕಶರಣು ಶ್ರೀತ್ರಿವಿಕ್ರಮನೇ ಧೂರ್ಜನಕಪಾಹಿ8ದುಷ್ಟ ನೃಪರನ್ನಳಿದು ಭೂಭಾರ ಇಳಿಸಿದಿಕೋಟಿ ಸೂರ್ಯಮಿತೋಜ್ವಲ ಪರಶುರಾಮಸಾಟಿ ಇಲ್ಲದ ಹನುಮತ್ಸೇವ್ಯಸೀತಾರಮಣಪಟ್ಟಾಭಿರಾಮನಮೋ ರಾವಣ ಧ್ವಂಸೀ 9ಭಜಿಸುವೆ ನರಸೇವ್ಯ ನಾರಾಯಣ ವ್ಯಾಸಸ್ವಜನತೇಷ್ಟಪ್ರದನೇ ಪಾಹಿಮಾಂ ಶ್ರೀಶಕುಜನಮೋಹಕ ನಮೋ ಸುರ ಸುಬೋಧಕಬುದ್ಧದುರ್ಜನ ಸಂಹಾರಿ ನಮೋ ಶಿಷ್ಟೇಷ್ಟ ಕಲ್ಕಿ 10ಕ್ರೂರ ದೈತ್ಯರ ಭಾರಿಭಾರಧರಿಯಿಂದಿಳಿಸಿದೆವಾರಿಜಾಸನ ಶಿವಾದ್ಯಮರರ ಮೊರೆಕೇಳಿಕ್ಷೀರಸಾಗರಶಯ್ಯ ಪುರುಷಸೂಕ್ತದಿ ಸ್ತುತ್ಯಪರಮಪೂರುಷ ಶ್ರೀಶ ಪ್ರಾದುರ್ಭವಿಸಿದೆಯೋ11ವಸುದೇವ ದೇವಕೀಸುತನೆಂದು ತೋರಿದವಾಸುದೇವನೇ ನಿನ್ನ ಸುಚರಿತ್ರೆ ಕೇಳೆಶ್ರೀಶ ನಿನ್ನಯ ದಯದಿಕಲುಷಪರಿಹಾರವುಸುಶುಭ ಪಾವನಕರವು ಸರ್ವಭಕ್ತರಿಗೂ 12ಕಲಿಕಲಿಪರಿವಾರ ದೈತ್ಯ ದುರ್ಜನರುಖಳರು ಇಳೆಯಲ್ಲಿ ನಾನಾ ರೂಪದಲಿ ಜನಿಸಿಶೀಲ ಹರಿಭಕ್ತರ ಕಂಡು ಸಹಿಸದೇ ಬಹುಬಲಕಾರ್ಯ ವಂಚನೆಯಿಂದ ಪೀಡಿಸಿದರು 13ಎಂಟನೇ ಮಗು ತನ್ನ ಮೃತ್ಯುವಾಗುವುದೆಂದುದುಷ್ಟ ಕಂಸನು ತಂಗಿ ಸಪತಿ ದೇವಕಿಯಇಟ್ಟ ಸೆರೆಮನೆಯಲ್ಲಿ ಆರು ಮಕ್ಕಳ ಕೊಂದಎಂಟ ನಿರೀಕ್ಷಿಸಿದ ಭಯ ದ್ವೇಷದಿಂದ 14ಏಳನೇ ಗರ್ಭವು ವ್ಯಾಳದೇವನ ಅಂಶಸ್ವಲ್ಪ ಕಾಲದಲೇ ಆ ಕ್ಷೇತ್ರದಿಂ ಹೊರಟುಚೆಲ್ವ ಗೋಕುಲದಲ್ಲಿ ರೋಹಿಣಿ ಉದರದಿಂ-ದಲ್ಲಿ ಪುಟ್ಟಿದನು ನಿನ್ನ ನಿಯಮನದಿಂದ 15ಸಾರಾತ್ಮಾ ನಿನ್ನಲ್ಲಿ ಪ್ರೇಮಾತಿಶಯದಿಂದಸುರರುಸೇವಿಸುವುದಕೆ ನಿನ್ನಿಚ್ಛೆ ದಯದಿಧರೆಯಲ್ಲಿ ನೃಪಮುನಿಗೋಪ ಗೋಪಿಯರಾಗಿಪರಿಪರಿವಿಧದಲ್ಲಿ ಕೃತ ಕೃತ್ಯರಾದರು16ದೇವಿ ಮಾಯಾದುರ್ಗೆ ನಿನ್ನಯ ಪ್ರಶಾಸನದಿಅವತಾರಕ್ಕನುಸರಿಸಿ ಬಂದು ತೆರಳಿದಳುದೇವ ನಿನ್ನ ಕಲಾ ಸಂಯುಕ್ತ ಶೇಷನುಭವಿಸಿದನು ನಿನ್ನಣ್ಣ ಬಲರಾಮನೆಂದು 17ನಿರ್ದೋಷನೀ ಸರ್ವ ಜಗನ್ನಿವಾಸನು ದೇವ-ಕೀ ದೇವಿಯೋಳ್ ನಿವಸಿಸಿ ಪೊಳೆಯುವಾಗವಿಧಿಭವಾದಿಗಳೆಲ್ಲ ಬಂದು ಸಂಸ್ತುತಿಸಿದರುಸತ್ಯಜ್ಞÕನಾನಂತಗುಣಪೂರ್ಣನಿನ್ನ18ಯಾವನು ಸರ್ವದಾ ಸರ್ವ ಬಹಿರಂತಸ್ಥಯಾವನು ಸರ್ವ ಹೃತ್ ಯೋಮದೊಳು ಇರುವಯಾವನಲ್ಲಿ ಸರ್ವವೂ ಸಮಾಹಿತವೋಅವನೇವೇ ನೀಹರಿವಿಷ್ಣು ಕೃಷ್ಣ ಅವತಾರ19ಪ್ರಾಕೃತಶರೀರ ವಿಕಾರಗಳು ನಿನಗಿಲ್ಲಪ್ರಾಕೃತಕಲಾವಿಲ್ಲ ಭಿನ್ನಾಂಶನಲ್ಲಏಕಪ್ರಕಾರಅಕ್ಷರಪೂರ್ಣಅಜನಿನ್ನಅಜ್ಞಾನದಲಿ ನರರು ಜನಿಸಿದಿ ಎಂಬುವರು 20ಅನುಪಮಾದ್ಭುತ ಬಾಲಕನು ಅಂಬುಜೇಕ್ಷಣರತ್ನಕಿರೀಟಕುಂಡಲಪೊಳೆವಕೌಸ್ತುಭಮಣಿಉರದಿ ಶ್ರೀವತ್ಸ ಚತುರ್ಭುಜವು ಪಾಂಚಜನ್ಯಕೌಮೋದಕೀ ಸುದರ್ಶನ ಸರೋಜ 21ಉದ್ದಾಮ ಕಾಂಚಂಗದ ಕಂಕಣಾದಿಗಳಪೀತಾಂಬರ ಪಾದನೂಪುರ ಪೂರ್ಣೇಂದುಮುದ್ದು ಮುಖ ಮುಗುಳುನಗೆ ಸುಳಿಗೊರಳು ಶುಭನೋಟಮೋದಚಿನ್ಮಯ ಹೀಗೆ ಪ್ರಾದುರ್ಭವಿಸಿದಿಯೋ22ಈರೂಪವಾಸುದೇವನೋಡಿ ಸ್ತುತಿಸಿದನು ನಿನ್ನಅರಿಯೇ ನಾ ವರ್ಣಿಸಲು ನಿನ್ನ ಗುಣರೂಪಶರಣು ಆತ್ಮನೇ ಪರನೇ ಉದ್ದಾಮ ಹರಿಕೃಷ್ಣಶರಣು ಸರ್ವಾಶ್ರಯನೇ ಶ್ರೀಶ ಮಾಂಪಾಹಿ 23ನಿನ್ನ ಮಹಾ ಪುರುಷ ಲಕ್ಷಣವ ದೇವಕಿಯುಕಾಣುತ್ತಾ ನರಲೋಕ ವಿಡಂಬನಕ್ಕಾಗಿತನ್ನ ಗರ್ಭಗನಾದಿ ಎಂದರಿತು ಭಕ್ತಿಯಿಂಸನ್ನತಿಯ ಮಾಡಿದಳು ಆ ಪೂರ್ವಪೃಷ್ಣಿ 24ದೇವಕಿಯ ಸ್ತುತಿಕೇಳಿಯುಕ್ತ ಮಾತುಗಳಾಡಿದೇವ ನಿನ್ನೀಚ್ಛಾ ಶಕ್ತಿಯಿಂದಲೇವೇಪವಡಿಸೆ ನರಶಿಶುಪೋಲ್ ಪಿತ ನಿನ್ನ ಎತ್ತಿಕೊಂಡುತೀವ್ರ ಹೊರಟನು ವೈಜಕೆ ನೀ ಪೇಳಿದಂತೆ 25ಶೇಷದೇವನು ಹೆಡೆಯ ಕೊಡೆಯಂತೆ ಪಿಡಿಯಲುಆಶ್ಚರ್ಯವಲ್ಲ ನದಿಮಾರ್ಗಬಿಟ್ಟಿದ್ದುಯಶೋದೆ ಸುಪ್ತಿಯಲಿರೆ ಮಗ್ಗುಲಲಿ ಮಲಗಿಸಿವಸುದೇವ ಎತ್ತಿಪೋದನು ಅವಳ ಮಗಳ 26ಯಶೋದೆಯ ಹೆಣ್ಣುಮಗು ಶಿಶುರೂಪ ದುರ್ಗೆಯವಸುದೇವ ತಂದು ದೇವಕಿ ಬದಿ ಇಡಲುಪ್ರಸವ ಸುದ್ದಿಯಕೇಳಿಕಂಸ ಆರ್ಭಟದಿಂದಶಿಶುವು ಹೆಣ್ಣಾದರೂ ಎತ್ತಿ ಶಿಲೆಯ ಹೊಡೆದ 27ಅಂಬರದಿ ದಿವ್ಯ ರತ್ನಾಭರಣ ಭೂಷಿತೆಕಂಬುಚಕ್ರಾದಿಧರೆ ಅಷ್ಟ ಮಹಾಭುಜೆಯುಅಂಬಾ ಮಹಾದುರ್ಗಾ ಭಗವತೀ ಮಯಾದೇವಿಅಂಭ್ರಣೀ ನಿಂತಳು ದೇವಗಾಯಕರು ಸುತ್ತಿಸೇ 28ಕಂಸನ್ನ ಎಚ್ಚರಿಸಿ ಭಗವತಿ ತೆರಳಲುಕಂಸನುಪರಮವಿಸ್ಮಿತನಾಗಿ ಬೇಗವಸುದೇವ ದೇವಕಿಯ ನಿಗೂಢ ಬಂಧನ ಬಿಡಿಸಿಅಸುರ ಮಂತ್ರಿಗಳೊಡೆ ಆಲೋಚಿಸಿದನು 29ನಂದ ಯಶೋದೆಯು ತಮ್ಮ ಶಿಶು ನೀನೆಂದುನಂದ ಆನಂದದಿವಿಪ್ರವೈದಿಕರ ಕರೆದುಅಂದದಿ ಪಿತೃ ದೇವತಾರ್ಚನೆಗಳ ಮಾಡಿಸಿಚೆಂದದಿ ಅಲಂಕೃತ ಧೇನುಗಳ ಕೊಟ್ಟ 30ಜಯತು ಜಯತು ದೇವಕೀತನಯ ಸತ್ಯಾ ರುಕ್ಮಿಣೀಕಾಂತಜಯತುಪೂರ್ಣಪ್ರಜÕಹೃತ್ ಪದ್ಮ ಸಂಸ್ಥಜಯತು ಜಗಜ್ಜನ್ಮಾದಿಕರ್ತ ಜಗನ್ನಾಥಜಯತು ವಿಧಿತಾತ ಪ್ರಸನ್ನ ಶ್ರೀನಿವಾಸ 31-ಇತಿ ಪ್ರಥಮಾಧ್ಯಾಯ ಸಂಪೂರ್ಣಂ -ದ್ವಿತೀಯ ಅಧ್ಯಾಯಬಾಲಲೀಲಾಸಾರಪೂರ್ಣ ಸುಗುಣಾರ್ಣವನೇಅನಘಮಾಯಾರಮಣಆನಮಿಪೆ ಶ್ರೀ ಕೃಷ್ಣ ರುಕ್ಮಿಣೀನಾಥಜ್ಞಾನ ಸುಖಬಲ ಚೇಷ್ಟಾರೂಪ ದೇವಕೀತನಯಸೌಂದರ್ಯಸಾರ ಜಗತ್ ಜನ್ಮಾದಿಕರ್ತ ಪಸಣ್ಣ ಶಿಶುರೂಪ ನೀ ಪೂತನೀ ಶಕಟತೃಣಾವರ್ತರ ಕೊಂದಿ ನಮೋ ಅಮಿತಶೌರಿನಿನ್ನ ಸುಂದರ ಮುಖದಿ ಪ್ರಪಂಚ ಗಗನಾದಿಗಳಕಾಣಿಸಿದಿ ಮಾತೆಗೆ ನಮೋವಿಶ್ವವಿಷ್ಣೋ1ಗರ್ಗಾದಿ ವಿಬುಧರು ಯೋಗ್ಯ ಸಜ್ಜನರೆಲ್ಲಅಗಣಿತಮಹಿಮ ಶ್ರೀ ವಿಷ್ಣು ನೀ ಎಂದುಭಕುತಿಯಿಂದಲಿ ನಿನ್ನ ಬಾಲಲೀಲೆ ನೋಡೆಕಾಕುದುರ್ಮತಿಗಳು ದ್ವೇಷ ಬೆಳೆಸಿದರು2ಕಂಸ ಜರಾಸಂಧ ಕಾಲಯವನ ಕಲಿಯಅಸುರ ಭೃತ್ಯರು ಬಂದು ನಿನ್ನ ನಿನ್ನವರನ್ನಹಿಂಸಿಸಬೇಕೆಂದು ಆಗಾಗ ಯತ್ನಿಸಲುದ್ವಂಸ ಮಾಡಿದಿ ಅವರನ್ನ ಸಜ್ಜನ ಪೊರೆದಿ 3ವತ್ಸಬಕಅಘಧೇನುಕ ಪ್ರಲಂಬಾರಿಷ್ಟಕೇಶಿ ಕಮಲಯ ಪೀಡಾ ಮುಷ್ಟಿಕ ಚಾಣೂರಕಂಸಾದಿ ಅಸುರರ ಸದೆದು ಮುದ್ದೆಯ ಮಾಡಿವಸುಮತಿಯ ಸಾಧುಗಳ ಭಯ ನಿವಾರಿಸಿದಿ 4ಬಲವಂತ ರಾಮ ಸಹ ಅಮಿತ ಪೌರುಷ ನೀನುಬಲಿಷ್ಠ ಅಸುರರ ಅಳಿದು ಭೂಭಾರ ಇಳಿಸಿಶೀಲ ಭಕ್ತರಿಹಪರಸುಖ ಒದಗಿಸಿದಿಬಲರಾಮ ಕೃಷ್ಣ ನಮೋ ಫಣಿಪ ವಿಷ್ಣೋ 5ಯಮಳಾರ್ಜುನೋದ್ಧಾರ ದಾವಾಗ್ನಿಯಿಂದ ನೀಸಂರಕ್ಷಿಸಿದಿ ವೃಜಗೋಪ ಜನರನಿನ್ನ ಮಹಿಮೆ ಏನೆಂಬೆ ವರುಣನಾಲಯದಿಂದಸಮ್ಮುದದಿ ನಂದನ್ನ ಕರತಂದಿ ಅಜಿತ 6ನಾಗಪತ್ನೀಯರು ಬಂದು ನಮಸ್ತುಭ್ಯಂಭಗವತೇ ಪೂರುಷಾಯ ಮಹಾತ್ಮನೇ ಎಂದುಅಗುಣ ಅವಿಕಾರ ನಿನ್ನನ್ನು ಭಕ್ತಿಯಿಂ ಸ್ತುತಿಸೆನಾಗನೂ ಸಹ ಸ್ತುತಿಸೆ ಅನುಗ್ರಹ ಮಾಡಿದಿಯೋ 7ಶ್ರೀಧರನೇ ನಿನ್ನಯ ವೇಣುನಾದದ ಸುಧೆಯಮಾಧುರ್ಯ ರಸವನ್ನು ವರ್ಣಿಸಲಶಕ್ಯಶ್ರೀದೇವಿ ಕೊಳಲÉೂಳು ಪ್ರವೇಶಿಸಿ ನಿನ್ನ ಅರ-ವಿಂದ ಮುಖದ ಆನಂದ ಸವಿದು ಸುಖಿಸುವಳು 8ಪಾಲು ಬೆಣ್ಣೆ ಪ್ರಿಯ ಕಳ್ಳ ಮುದ್ದು ಕೃಷ್ಣಗೊಲ್ಲತಿಯರ ಸಹ ಸಲ್ಲಾಪಿಸುವ ಎಂಬಸೊಲ್ಲಿನ ತತ್ವವ ಬಲ್ಲವರೇ ಬಲ್ಲರುಫಲಿ ನಮೋ ಪಾಲ್ಬೆಣ್ಣೆ ಗೋಪಿಜನ ಪ್ರಿಯ 9ಅತ್ಯಲ್ಪ ಅಸುರ ಆವೇಶ ಸುರರಿಗೆ ಎಂದುಮುಖ್ಯ ವಾಯು ಅಖನರ್ಮ ಸಮಗಿಲ್ಲಹೊಯ್ಯಿಸೆ ಮಳೆಶಕ್ರನೀ ಲೀಲೆಯಂ ಗೌರಿ ಎತ್ತಿಕಾಯ್ದಿ ಗೋಜನಗಳ ಅನ್ನದ ಅನ್ನಾದ 10ಭಕ್ತಿ ಉಕ್ಕಿ ನಿನ್ನಲ್ಲಿ ಕೂಡಿ ಕ್ರೀಡಿಸುವಸದ್ಧರ್ಮವರ್ತಿಗಳ ಸ್ವಸ್ವಯೋಗ್ಯತೆಯಿಂರಾಧಾದಿ ಗೋಪಿಗಳ ಅನಂದ ಉಕ್ಕಿಸಿಸ್ವರತಇಂದಿರಾಪತಿ ಗೋವಿಂದ ಗೋ ಕಾಯ್ದ 11ಅಧಿಕಾರಿ ತ್ರಿವಿಧರಲಿ ತಾರತಮ್ಯ ಉಂಟುಅದರಂತೆ ಭಕ್ತಿಯಲಿ ಅವರೋಚ್ಯ ಉಂಟುಭಕ್ತಿ ಸಾಧನದಂತೆ ಯೋಗ್ಯ ಸುಖ ಓದಗಿಸಿದಿಮಂದಗಮನೆಯರಿಗೆ ರಾಸಕ್ರೀಡೆಯಲಿ 12ನಂದವ್ರಜಗೋಕುಲ ಮಥುರೆ ಬೃಂದಾವನಚಂದ್ರ ಯಮುನೆವನಲತೆ ಪುಷ್ಪ ವೃಕ್ಷಸಿಂಧುದ್ವಾರಕೆ ವಂಶಯಷ್ಠಿ ಗೋ ಸರ್ವರಿಗೂವಂದಿಸುವೆ ಕೃಷ್ಣ ಸಂಬಂಧಿಗಳು ಎಂದು 13ವಿದ್ಯಾಧರ ಸುದರ್ಶನನು ಶಾಪದಿ ಅಹಿಯುನಂದನ್ನ ಕಾಯ್ದಿ ಆ ಅಹಿಯ ಬಾಯಿಂದಪಾದಸ್ಪರ್ಶವ ಕೊಟ್ಟು ಶಾಪ ವಿಮೋಚನೆ ಮಾಡಿಸ್ತುತಿಸಿ ಕೊಂಡಿಯೋ ಮಹಾಪೂರುಷ ಸತ್ಪತಿಯೇ 14ಅಕ್ರೂರ ಕುಬ್ಜ ಉದ್ಧವಗೆ ಅನುಗ್ರಹಿಸಿದುರುಳವ್ರಜನ ಶಿರವ ಕತ್ತರಿಸಿ ಬಿಸುಟುವಿಪ್ರನಾರಿಯರ ಅನ್ನ ಉಂಡು ಒಲಿದಂತೆಕ್ಷಿಪ್ರವಾಯಕ ಗೊಲಿದಿ ಮಾಲಾಕಾರನಿಗೂ15ಬಲಿಷ್ಠ ಮಲ್ಲಾದಿಗಳ ಕುಟ್ಟಿ ಹೊಡೆದು ಕೊಂದುಖಳದುಷ್ಟ ಕಂಸನ್ನ ದ್ವಂಸ ಮಾಡಿದಿಯೋಒಳ್ಳೇ ಮಾತಿಂದ ಮಾತಾಪಿತರ ಆಶ್ವಾಸಿದಿಬಲರಾಮ ಕೃಷ್ಣ ನಮೋಪಾಹಿಸಜ್ಜನರ16ಉಗ್ರಸೇನಗೆ ರಾಜ್ಯವನು ಒಪ್ಪಿಸಿ ನೀನುಗುರುವಿನ ಮೃತ ಪುತ್ರನ್ನ ಕರೆತಂದಿಜರಾಸುತನ ಸಹ ಯುದ್ಧ ಮಾಡಿ ಬೇಗನೇ ನೀನುನಿರ್ಮಾಣಿಸಿದಿ ದ್ವಾರಕೆಯ ಕಡಲ ಮಧ್ಯ 17ಈರಾರುಯೋಜನವು ದ್ವಾರಕಾ ದುರ್ಗವುಸ್ಫುರಧೃಮ ಲತೋದ್ಯಾನ ವಿಚಿತ್ರೋಪ ವನಗಳ್ಪುರಟ ಶೃಂಗೋನ್ನತ ಸ್ಫಟಿಕಾ ಅಟ್ಟಾಳಗಳ್ ಗೋ -ಪುರಗಳು ನವರತ್ನ ಸ್ವರ್ಣಮಯ ಗೃಹಗಳು 18ಮುಚುಕುಂದ ಶಯನಿಸಿದ ಗುಹೆಯೋಳ್ ನೀ ಪೋಗೆನೀಚ ದುರ್ಮತಿ ಕಾಲಯವನ ಹಿಂಬಾಲಿಸಿಮುಚುಕುಂದನ್ನ ನೋಡಿ ನೀನೇವೇ ಎಂದು ಹೊಡಿಯೇಭಸ್ಮವಾದನು ಅಲ್ಲೇ ರಾಜ ಕಣ್ತೆರೆದು 19ನೃಪನು ನಿನ್ನ ಸ್ತುತಿಸಿ ಅನುಗ್ರಹ ಪಡೆದುಸುಪವಿತ್ರ ನರನಾರಾಯಣ ಕ್ಷೇತ್ರಯೈದೇಉಪಾಯದಿಂದಲಿ ಮಾಗಧನ ಸಮ್ಮೋಹಿಸಿನೀ ಬಲರಾಮ ಸಹ ಸ್ವಪುರ ಸೇರಿದಿಯೋ 20ವನಜಸಂಭವಪ್ರೇರಿಸಲು ರೇವತರಾಜಅನರ್ತ ದೇಶಾಧಿಪತಿಯು ಶ್ರೀಮಂತತನ್ನ ಸುತೆ ರೇವತಿಯು ನಮ್ಮ ಬಲರಾಮನಿಗೆಧನ್ಯ ಮನದಲಿ ಕೊಟ್ಟು ಮದುವೆ ಮಾಡಿದನು 21ಸುಧಾ ಕಲಶವ ಗರುಡ ಕಿತ್ತಿ ತಂದಂತೆಚೈದ್ಯಮಾಗಧಶಾಲ್ವಾದಿ ಕಡೆಯಿಂದಎತ್ತಿ ತಂದಿ ಸ್ವಯಂವರದಿಂ ಭೈಷ್ಮಿಯವಂದಿಸಿ ಶರಣಾದೆ ಕೃಷ್ಣ ರುಕ್ಮಿಣಿಗೆ 22ಜಯತು ಜಯತು ದೇವಕೀತನಯ ಸತ್ಯಾ ರುಕ್ಮಿಣೀಕಾಂತಜಯತುಪೂರ್ಣಪ್ರಜÕಹೃತ್ ಪದ್ಮ ಸಂಸ್ಥಜಯತು ಜಗಜ್ಜನ್ಮಾದಿಕರ್ತ ಜಗನ್ನಾಥಜಯತು ವಿಧಿತಾತ ಪ್ರಸನ್ನ ಶ್ರೀನಿವಾಸ 23-ಇತಿದ್ವಿತೀಯಅಧ್ಯಾಯ ಸಂಪೂರ್ಣಂ-ತೃತೀಯ ಅಧ್ಯಾಯಕಲ್ಯಾಣ ಸುಧಾಸಾರಪೂರ್ಣ ಸುಗುಣಾರ್ಣವನೇಅನಘಮಾಯಾರಮಣಆ ನಮಿಪೆ ಶ್ರೀ ಕೃಷ್ಣ ರುಕ್ಮಿಣೀನಾಥಜ್ಞಾನ ಸುಖಬಲ ಚೇಷ್ಟಾರೂಪ ದೇವಕೀತನಯಸೌಂದರ್ಯಸಾರ ಜಗತ್ ಜನ್ಮಾದಿಕರ್ತ ಪವಿಧರ್ಭ ದೇಶಾಧಿಪತಿ ಭೀಷ್ಮಕರಾಜನುಸದ್ಧರ್ಮನಿಷ್ಟ ಕುಂಡಿನಿಪುರವಾಸಿಐದು ಮಂದಿ ಗಂಡು ಮಕ್ಕಳು ಅವನಿಗೆಮೊದಲನೆಯವನಿಗೆ ರುಗ್ಮಿ ಎಂದು ಹೆಸರು 1ರುಗ್ನಿ ಬಹು ದುಷ್ಟನು ಕೃಷ್ಣ ದ್ವೇಷಿ ಖಳರುಮಾಗಧಾದಿಗಳಲ್ಲಿ ಬಹು ಸ್ನೇಹರುಗ್ಮಿಗೆ ರುಕ್ಮರಥ, ರುಕ್ಮಬಾಹು ಮತ್ತುರುಕ್ಮಕೇಶಿ, ರುಕ್ಮಮಾಲಿ ಅನುಜರು2ಈ ಪುಣ್ಯವಂತ ರಾಜನಿಗೊಂದು ಮಗಳುಂಟುಈ ಪುತ್ರಿ ರುಕ್ಮಿಣಿ ಸ್ಫುರದ್ವಾರಾನನೆಯುಹೇ ಪುರುಷೋತ್ತಮನೇ ನಿನ್ನ ನಿಜಸತಿ ಲಕ್ಷ್ಮೀಅಪ್ರಮೇಯನೇ ನಿನ್ನ ಬಿಟ್ಟಗಲದವಳು 3ಉರುಗುಣಾರ್ಣವ ನಿನ್ನ ಅವತಾರಕನುಸರಿಸಿಶ್ರೀ ರಮಾದೇವಿಯೇ ಪ್ರಾದುರ್ಭವಿಸಿದಳುನರರ ನೋಟಕೆ ರಾಜಪುತ್ರಿಯಂತೆ ಇಹಳುಪುರಟಗರ್ಭನ ತಾಯಿ ಸರ್ವಜಗನ್ಮಾತೆ 4ಈ ಷÉೂೀಡಶ ಕಲಾಯುಕ್ ನಮ್ಮ ತನುವೋಲ್ ಅಲ್ಲಕ್ಲೇಶಸಂತಾಪಾದಿ ವಿಕಾರಗಳು ಇಲ್ಲದೋಷ ದೊರೆ ದುಃಖ ಅಸ್ಪøಷ್ಟೆ ಎಂದೆಂದೂಕೃಷ್ಣ ವಿಷ್ಣೋ ನಿನ್ನಾಧೀನೆ ಎಂದೆಂದೂ 5ಉತ್ತಮ ಮಹಾಪೂರುಷ ಶ್ರೀಕರನೇ ನಿನ್ನಉತ್ತಮ ಕ್ರಿಯಾರೂಪ ಗುಣವಿಶೇಷಗಳನ್ನಸಂತತ ಅಲೋಚಿಸಿ, ಹೊಸ ಹೊಸ ಅತಿಶಯವಸತತ ಕಾಣುತ ತಾ ಸನ್ನುತಿಸಿ ಸುಖಿಸುವಳು 6ವಿಮಲಆನಂದಮಯನಿನ್ನ ಸಹಲಕ್ಷ್ಮೀಬ್ರಹ್ಮರುದ್ರಾದಿ ಸುರರಿಂದ ಸನ್ನುತಳುಅಮಿತೋಚ್ಛ ಭಕ್ತಿಯಿಂ ಸದಾ ನಿನ್ನಸೇವಿಪಳುರಮಾ ಸಿಂಧುಜಾ ಜಾನಕೀಯೇವೇ ಭೈಷ್ಮಿ 7ಸಿರಿದೇವಿ ತಿಳಿದಷ್ಟುಹರಿನಿನ್ನ ತಿಳಿದವರುನರರಲ್ಲಿ ಸುರರಲ್ಲಿ ಯಾರೂನೂ ಇಲ್ಲನರಲೋಕದಲ್ಲಿ ನರರಂತೆ ನಟಿಸುವ ಸಿರಿಯುಅರಿಯಬೇಕೇ ಇತರರಿಂದ ಹೊಸದಾಗಿ 8ಅರಮನೆಗೆ ಬರುವವರು ನಾರದಾದಿಗಳಿಂದಹರಿಮುಕುಂದನೆ ನಿನ್ನರೂಪಗುಣಮಹಿಮೆಹರುಷದಿಂದಲಿ ಚೆನ್ನಾಗಿಕೇಳಿಮನದಲ್ಲಿವರಿಸಿದಳು ಸದಾ ನಿನ್ನ ಪ್ರೇಮದಿ ಭೈಷ್ಮಿ 9ಕೃಷ್ಣನಿಗೆಸಮ ಸದೃಶ ಪುರುಷ ಯಾರೂ ಇಲ್ಲರುಕ್ಮಿಣಿಗೆ ಸಮ ಸದೃಶ ಸ್ತ್ರೀ ಯಾರೂ ಇಲ್ಲಗುರುರೂಪ ಔದಾರ್ಯ ಬುದ್ದಿ ಲಕ್ಷಣಾಶ್ರಯಳುನಿನ್ನ ನಿಜಪತ್ನಿ ರುಕ್ಮಿಣಿ ಎಂದು ನೀ ಅರಿವಿ 10ಮದುವೆ ಮಾಡಲು ರುಕ್ಮಿಣಿಗೆ ಯೋಚಿಸಿನೃಪಬಂಧುಗಳು ಕೃಷ್ಣಗೆ ಕೊಡಲು ಇಚ್ಛೈಸೆಧೂರ್ತರುಗ್ಮಿ ಕೃಷ್ಣ ದ್ವೇಷಿ ತಡೆ ಮಾಡಿದನುಚೈದ್ಯ ಶಿಶುಪಾಲನಿಗೆ ಕೊಡಲು ನೆನೆದು 11ಸುತಗೆ ಕೃಷ್ಣನು ಮಾತ್ರ ವರನೆಂದು ತಿಳಿದರೂಪುತ್ರ ಸ್ನೇಹದಿ ರುಕ್ಮಿಗೆ ಒಡಂಬಟ್ಟ ರಾಜಚೈದ್ಯನಿಗೆ ಕೊಡಲು ಏರ್ಪಾಡು ಮಾಡಲುಆಪ್ತ ದ್ವಿಜವರ್ಯನ ಕರೆದಳು ಭೈಷ್ಮೀ 12ವಿಪ್ರನ ದ್ವಾರ ಸಂದೇಶ ಕಳುಹಿಸಿದಳುಪತ್ರ ಬರೆದಳು ನಿನಗೆ ಸತ್ತತ್ವ ನಿಮಿಡಆ ಬ್ರಾಹ್ಮಣ ಶ್ರೇಷ್ಟ ದ್ವಾರಕಾ ಪುರಿಯೈದುಪರಮಪೂರುಷ ನಿನ್ನ ನೋಡಿದನÀು ಮುದದಿ13ಕಾಂಚನಾಸನದಲ್ಲಿ ಕುಳಿತಿದ್ದ ನೀನುದ್ವಿಜವರ ಶ್ರೇಷ್ಠ ಬರುವುದು ಕಂಡಾಕ್ಷಣದಿತ್ಯಜಿಸಿಆಸನಪೋಗಿ ಎದುರ್ಗೊಂಡು ಕರೆತಂದುಪೂಜಿಸಿದೆಯೋ ಸ್ವಾಮಿ ಬ್ರಹ್ಮಾಂಡದೊಡೆಯ 14ಅಖಂಡೈಕ ಸಾರಾತ್ಮಾ ಸರ್ವರೂಪಾಟಿಭಿನ್ನಅಕಳಂಕ ಉರು ಸರ್ವ ಸಚ್ಛÀಕ್ತಿಪೂರ್ಣಏಕಾತ್ಮ ನೀ ಪೂಜ್ಯ ಪೂಜಕ ನೀಚೋಚ್ಛಗಳಕಾಕುಜನಮೋಹಕ್ಕೆ ಅಲ್ಲಲ್ಲಿ ತೋರ್ವಿ15ಸಜ್ಜನರ ಗತಿಪ್ರದನು ಅವ್ಯಯನು ನೀನುಭೋಜನಾದಿ ಬಹು ಉಪಚಾರ ಮಾಡಿದ್ವಿಜವರ್ಯನ ಹೊಗಳಿ ಸಾಧುಸನ್ಮತಿನೀತಿನಿಜ ಸುಖಪ್ರದಮಾರ್ಗಬೋಧಕ ಮಾತಾಡಿದಿ16ಭೂತ ಸಹೃತ್ತಮ ಸದಾ ಸಂತುಷ್ಟ ಮನಸ್ಸುಳ್ಳಸಾಧು ಆ ಬ್ರಾಹ್ಮಣನು ನಿನಗೆ ಸನ್ನಮಿಸಿಬಂದ ವಿಷಯವ ಪೇಳಿ ಪತ್ರವ ಸಮರ್ಪಿಸಿದವಂದೇ ಆ ಅಕುಟಿಲಗೆ ಭೈಷ್ಮೀ ಕೃಷ್ಣರಿಗೆ 17ಪತ್ರಸಾರಭುವನಸುಂದರ ನಿನ್ನ ಕಲ್ಯಾಣ ಗುಣಗಳಶ್ರವಣ ಮನನವಪರಮಆದರದಿ ಮಾಳ್ಪಜೀವರುಗಳ ಕಾಯಜಾದಿ ತಾಪಂಗಳುದ್ರಾವಿತವು ಆಗುವೆವು ಎಂದು ಕೇಳಿಹೆನು 18ಗುಣಕ್ರಿಯಾರೂಪಸುಶ್ರವಣ ಮನನವ ಮಾಡಿಧ್ಯಾನಿಪರಿಗೆ ನಿನ್ನರೂಪದರ್ಶನವುನಿನ್ನ ಅರಿತ ಭಕ್ತರಿಗೆ ಅವತಾರಾದಿ ದರ್ಶನವುಕಾಣುವವರಿಗೆ ಅಖಿಲಾರ್ಥ ಲಭಿಸುವವು 19ಇವು ಇಂತಹ ನಿನ್ನ ಉನ್ನತ ಮಹಿಮೆಗಳಶ್ರವಣ ಮಾಡಿ ಅಂತರಂಗದಿ ತನ್ನ ಮನಸ್ಧಾವಿಸುತ್ತೇ ನಿನ್ನಲ್ಲೇಅಚ್ಯುತಮುಕುಂದದೇವಿ ರುಕ್ಮಿಣಿ ಹೀಗೆ ಬರೆದಿಹಳು ವಿಭುವೇ 20ಸುಖರೂಪ ಲಕ್ಷ್ಮೀಶವಿಧಿಪಿತಜಗಜನ್ಮಾದಿಕರ್ತಶುಕ್ರ ನಿಷ್ಕಲಅಪ್ರಾಕೃತಅವ್ಯಕ್ತಅಖಂಡೈಕ ಸಾರಾತ್ಮ ಅನಂತೋರು ಸೌಂದರ್ಯನಿಗಮಗ್ಯ ಗಾಯತ್ರಿ ಅಮಾತ್ರ ತ್ರಿಮಾತ್ರ 21ಬೃಹತೀಸಹಸ್ರ ಸ್ವರವ್ಯಂಜನಾಕ್ಷರ ವಾಚ್ಯಅಹರ್ನೇತ್ರು ಭೂಮನ್ನಿತ್ಯನೀ ಸ್ವತಂತ್ರಮಹೈಶ್ವರ್ಯ ಪೂರ್ಣೇಂದ್ರ ಅಶೇಷ ಗುಣಾಧಾರಮಹಾಶಕ್ತಿ ದಿವಃಪರ ಪರಮೇಶ್ವರ - ಸ್ವ 22ನಿನ್ನ ಈ ಕುಲಶೀಲ ವಿದ್ಯಾದಿ ಗುಣರೂಪಅನುಪಮೈಶ್ವರ್ಯದಿ ನಿನಗೆ ನೀನೇತುಲ್ಯನಿನ್ನ ಗುಣಗಳು ಸರ್ವಾಕರ್ಷಕವಾಗಿರುವವುತನ್ನಾತ್ಮ ನಿವೇದನ ಮಾಡಿಯೇ ಎಂದಳು 23ಉನ್ನಾಮ ಉದ್ಧಾಮ ಅಚ್ಯುತನು ನೀನಿತ್ಯಆನಂದಚಿತ್ ತನು ಯದುಪತೇ ಕೃಷ್ಣನೀನೇವೇ ತನ್ನಪತಿಸಿರಿತಾನು ಎಂದುಅನಘಲಕ್ಷ್ಮೀ ಭೈಷ್ಮಿ ಸೂಚಿಸಿಹಳು24ರಾಜಪುತ್ರ ಎಂಬ ವಿಡಂಬನಾ ರೀತಿಯಲಿದುರ್ಜನರ ಭಯ ತನಗೆ ಇರುವಂತೆ ಬರೆದುಸೂಚಿಸಿದಳು ತನ್ನ ಅಂಬಿಕಾ ಗುಡಿಯಿಂದಅಚ್ಯುತನೇ ನೀ ಕರಕೊಂಡು ಹೋಗೆಂದು 25ರುಕ್ಮಿಣಿಯಲಿ ನಿನ್ನ ಪ್ರೇಮ ಪ್ರಕಟಿಸುತಬೇಗಸಾರಥಿದಾರುಕನ್ನ ನೀ ಕರೆದುಮೇಘಪುಷ್ಪ, ಶೈಭ್ಯ, ಬಲಾಹಕ ಸುಗ್ರೀವನಾಲ್ಕಶ್ವ ರಥದಲ್ಲಿ ದ್ವಿಜವರ ಸಹ ಕುಳಿತಿ 26ಖಗವೇಗದಿ ರಥದಿ ಏಕ ರಾತ್ರಿಯಲ್ಲೇಪೋಗಿ ಸೇರಿದಿ ಆ ಕುಂಡಿನಾಪುರವಸೊಗಸಾದ ಅಲಂಕಾರ ಪಚ್ಚೆ ತೋರಣಗಳುಪೂಗಿ ಮಾವು ಮೊದಲಾದ ಗೊಂಚಲುಗಳು 27ಎಲ್ಲಿ ನೋಡಿದರಲ್ಲಿ ಕಾಂಚನಾಭರಣದಿಪೊಳೆವ ಪೀತಾಂಬರ ಪಟ್ಟೆ ಉಟ್ಟಿದ್ದಲೋಲಾಯಿತಾಕ್ಷಿಯರು ವಿಪ್ರಜನ ಗುಂಪುಕೋಲಾಹಲವಾಗಿ ಕಂಡಿ ಕುಂಡಿನವ 28ಕಾರಣವು ತಿಳಿದಿದ್ದೆ ಭೀಷ್ಮಕರಾಜನುಪುತ್ರಸ್ನೇಹದಿ ಚೈದ್ಯಶಿಶುಪಾಲನಿಗೆಪುತ್ರಿಯ ಕೊಡಲಿಕ್ಕೆ ಕಾರ್ಯೋನ್ಮುಖನಾಗಿಪಿತೃ ದೇವಾರ್ಚನೆ ವಿಪ್ರಪೂಜೆಯಗೈದ 29ಚೇದಿಪತಿ ದಮಘೋಷ ಪುತ್ರ ಶಿಶುಪಾಲಗೆಮದುವೆಪೂರ್ವದ ಕಾರ್ಯ ತಾನೂ ಮಾಡಿಸಿದಮದುವೆ ಸಂಭ್ರಮಕ್ಕಾಗಿ ಸೈನ್ಯ ಸಹ ಬಂದರುವೈದರ್ಭ ಪೂಜಿಸಿದ ಉಪಚಾರದಿಂದ 30ಮಾಧವನೇ ನಿನ್ನಲ್ಲಿ ಭಯ ದ್ವೇಷ ಕಾರಣದಿಚೈದ್ಯ ಪಕ್ಷೀಯರು ಜರಾಸಂಧ ಸಾಲ್ವದಂತ ವಕ್ರಾದಿಗಳು ಸಹಸ್ರಾರು ಮಂದೀರುಬಂದುತುಂಬಿಎಚ್ಚರಿಕೆಯಲಿ ಇದ್ದರು31ಆ ಪರಿಸ್ಥಿತಿಯಲ್ಲಿ ಕುಂಡಿನಾಪುರಕೆ ನೀಒಬ್ಬನೇ ಪೋದದ್ದುಕೇಳಿಬಲರಾಮಕ್ಷಿಪ್ರದಿ ರಥಾದಿ ಯಾದವಸೈನ್ಯ ಸಹಿತತಾ ಬಂದ ಅಚ್ಯುತನೇ ನಿನ್ನ ಬದಿಗೆ 32ಸರೋರುಹಾಸನನಿಗೂ ಕೋಟಿಗುಣ ಉತ್ತಮಳುಸಿರಿದೇವಿ ರುಕ್ಮಿಣಿ ಭೀಷ್ಮ ಕನ್ಯಾಹರಿಯೇ ನಿನ್ನಾಗಮನ ಆಕಾಂಕ್ಷಿಯಾಗಿ ತಾನಿರೀಕ್ಷಿಸಿದಳು ನಿನ್ನ ಹಾಗೂ ಆ ದ್ವಿಜವರನ್ನ 33ಮೇದಿನಿಸ್ತ್ರೀಯರಿಗೆ ಎಡಗಣ್ಣು ತೊಡೆ ಭುಜಅದುರುವುದುಶುಭಸೂಚಕವೆಂದು ಪೇಳುವರುಸದಾನಿತ್ಯಸುಶುಭ ಮಂಗಳರೂಪಿ ದೇವಿಗೆಅದರಿದವು ಎಂಬುವುದು ಲೌಕಿಕ ದೃಷ್ಟಿ 34ಮುಖದಲ್ಲಿ ಸಂತೋಷ ಪ್ರಕಟಿಸುತ ವಿಪ್ರನುರುಕ್ಮಿಣಿ ಬಳಿ ಬಂದು ಸಮಸ್ತವೂ ಪೇಳೆಶ್ರೀ ಕೃಷ್ಣ ನಿನ್ನನ್ನು ಸಂಸ್ಮರಿಸುತ ಭೈಷ್ಮಿಲೋಕ ರೀತಿಯಲಿ ಆದ್ವಿಜಶ್ರೇಷ್ಠನ್ನ ಪೂಜಿಸಿದಳು35ಕೃಷ್ಣ ಬಲರಾಮರಿಗೆ ಬಿಡಾರವ ಕೊಟ್ಟುಭೀಷ್ಮಕನು ಪೂಜಿಸಿದ ಪುರದ ಸಜ್ಜನರುಕೃಷ್ಣನಿಗೆ ರುಕ್ಮಿಣಿಯೇ ರುಕ್ಮಿಣಿಗೆ ಕೃಷ್ಣನೇಘೋಷಿಸಿದ ರೀತಿ ಸಂತೋಷದಿಂದ 36ಸಂಪ್ರದಾಯವನುಸರಿಸಿ ಭೀಷ್ಮಕನುತನ್ನ ಪುತ್ರಿಯ ಕಾಲುನಡೆಯಲ್ಲಿ ಕರೆಕೊಂಡುಅಂಬಿಕಾಪೂಜೆಯ ಮಾಡಲು ಪೋಗಲುಸಂಭ್ರಮವ ಬಂದಿದ್ದ ರಾಜರು ನೋಡಿದರು 37ಮುಕುಂದ ನಿನ್ನಯ ಪಾದಪಂಕಜವ ಧ್ಯಾನಿಸುತರುಕ್ಮಿಣಿ ಅಂಬಿಕಾಆಲಯವ ಸೇರಿಬಾಗಿನಾದಿಗಳ ಕೊಟ್ಟು ನಿನ್ನ ಸಂಸ್ಮರಿಸುತ್ತರಾಕೇಂದುಮುಖಿ ನಿನ್ನಾಕಾಂಕ್ಷೆಯಿಂ ತಿರುಗಿದಳು38ರಥಗಜತುರಗಪದಾದಿಸೈನ್ಯಗಳುಪ್ರತಿರಹಿತರು ತಾವೆಂಬ ಡಾಂಭಿಕರಾಜರುಅತಿಗೂಢಚಾರ ರಾಜಭೃತ್ಯರು ಅಲ್ಲಲ್ಲಿಇತ್ತ ಅತ್ತ ಎಲ್ಲೂ ಪುರಜನ ಗುಂಪು 39ಮಂದಗಜಗಮನೆಯು ಸ್ವಚ್ಛ ಹಂಸದವೋಲುಚಂದಪಾದವ ಮೆಲ್ಲ ಮೆಲ್ಲನೆ ಇಡುತಸ್ವಯಂವರದಿ ಸಯಂದನದಿ ನೀ ಇರೆ ವಾರೆನೋಟ ನೋಡಿಬಂದಳು ಉದಯಾರ್ಕ ಪದುಮಮುಖ ಮುದದಿ 40ಮಂದಜಭವಾಂಡದಲ್ಲಿ ಎಲ್ಲೆಲ್ಲೂ ಇಲ್ಲದರೂಪಸೌಂದರ್ಯವತಿಯ ಮೋಹದಲ್ಲಿ ನೋಡಿಮಂಧಧೀ ರಾಜರು ಕಾಯದಿ ಮೈಮರೆಯೇಮಂದಜಕರದಿಂದ ನೀ ಎತ್ತಿಕೊಂಡಿ ಭೈಷ್ಮಿಯ41ಗರುಡಧ್ವಜದಿಂದ ಶೋಭಿಸುವ ರಥದಲ್ಲಿಸಿರಿರುಕ್ಮಿಣಿ ಸಹ ಕುಳಿತು ನೀನುಹೊರಟಿ ಸಸೈನ್ಯ ಬಲರಾಮ ಸಹ ಅದುರುಳರ ಕಣ್ಣು ಮುಂದೆಯೇ ಶ್ರೀಧರಾಚ್ಯುತನೇ 42ಹಾಹಾಕಾರದಲಿ ಕೂಗಿ ಆರ್ಭಟಮಾಡಿಮಹಾಸೈನ್ಯ ಸಹ ಜರಾಸಂಧಾದಿ ರಾಜರುಬಹುವಿಧ ಧನುರ್‍ಸ್ತ್ರಯುತ ಹಿಂಬಾಲಿಸಿಕುಹಕರು ಅತಿಘೋರ ಯುದ್ದ ಮಾಡಿದರು 43ಲೀಲೆಯಿಂದಲಿ ನೀನು ಬಲರಾಮ ಯಾದವರುಖಳಜರಾಸಂಧಾದಿಗಳ ಸೈನ್ಯದವರತಲೆ ಕಾಲು ಕತ್ತರಿಸಿ ಛಿನ್ನ ಭಿನ್ನ ಮಾಡೇಪೇಳದೆ ಓಡಿದನು ಜರಾಸುತನು ಸೋತ 44ಧಾಮಘೋಷನಲಿ ಪೋಗಿ ಅವನ್ನ ಆಶ್ವಾಸಿಸಿತಾಮರಳಿ ಪೋದನು ತನ್ನ ಪಟ್ಟಣಕ್ಕೆತಮ್ಮ ತಮ್ಮ ಪುರಿಗಳಿಗೆ ಇತರ ರಾಜರೂ ಪೋಗೇವರ್ಮದಿ ಯುದ್ಧವ ಮುಂದುವರೆಸಿದ ರುಗ್ಮಿ 45ಶಪಥ ಮಾತುಗಳಾಡಿ ಯುದ್ಧ ಮಾಡಿದ ರುಗ್ಮಿಚಾಪಶರಸಾರಥಿಅಶ್ವಗಳ ಕಳಕೊಂಡುಕೋಪೋಚ್ಛದಿ ಖಡ್ಗದಿ ಎತ್ತಿಕೊಂಡು ಬರಲುಶ್ರೀಪ ನೀ ಆ ಖಳನ್ನ ಕಟ್ಟಿಹಾಕಿದೆಯೋ 46ಜಲಜಾಕ್ಷಿ ಭೈಷ್ಮೀ ಪ್ರಾರ್ಥಿಸಲು ನೀ ರುಗ್ಮಿಯಕೊಲ್ಲದೇ ವಿರೂಪ ಮಾತ್ರವ ಮಾಡೇ ಆಗಬಲರಾಮ ವಾದಿಸಿ ಬಿಡುಗಡೆ ಆಗಿ ಆಖಳಓಡಿ ಪೋದನು ಭೋಜಘಟಕ್ಕೆ47ಜಯ ಕೃಷ್ಣ ಶ್ರೀರುಕ್ಮಿಣಿ ಸಮೇತದಿ ಬಾರೆಜಯಭೇರಿ ತಾಡಿಸಿ ದ್ವಾರಕಾವಾಸಿಗಳುಗಾಯಕರು ನರ್ತಕರುವಿಪ್ರಮುತ್ತೈದೆಯರುಜಯ ಜಯ ಎನ್ನುತ್ತ ಆನಂದದಿ ಮುಳುಗಿದರು 48ಯದುಪುರಿಯಲ್ಲಿ ಮನೆಮನೆಯಲ್ಲಿ ಮಹೋತ್ಸವವುಮುದದಿ ಅಲಂಕೃತರಾಗಿ ಸ್ತ್ರೀ ಪುರುಷರುಜ್ಯೋತಿ ಉಜ್ಜಲ ದೀಪಾವಳಿ ಪೂರ್ಣ ಕುಂಭಗಳುಚೆಂದ ಗೊಂಚಲು ಪುಷ್ಪ ರತ್ನ ತೋರಣಗಳು 49ಸಂಜಯ ಕುರುಕೇಕಯಾದಿ ರಾಜರುಗಳುರಾಜಕನ್ಯೇಯರ ಗಜಗಳ ಒಡ್ಯಾಟಮೂರ್ಜಗದೊಡೆಯ ನೀ ರುಕ್ಮಿಣಿಯ ಕರೆತಂದಸುಚರಿತ್ರೆಯ ಪೊಗಳಿದರು ನರನಾರಿಯರೆಲ್ಲಾ 50ಚತುರ್ಮುಖ ಸುವೀರೆ ವೈನತೇಯನುಶೇಷಶತಮುಖಸ್ಮರಅಹಂಕಾರಿಕ ಪ್ರಾಣಮೊದಲಾದ ಸುರರ ಮುನೀಂದ್ರರ ವೇದಮಂತ್ರಗಳಮದುವೆ ಮಹೋತ್ಸವದ ವೈಭವಏನೆಂಬೆ ಜಯ ಜಯ ಜಯತು 51ಪೂರ್ಣ ಜ್ಞÕನಾತ್ಮನೇ ಪೂರ್ಣ ಐಶ್ವರ್ಯಾತ್ಮಪೂರ್ಣ ಪ್ರಭಾನಂದ ತೇಜಸ್ ಶಕ್ತ್ಯಾತ್ಮಆ ನಮಿಪೆ ಅಚ್ಯುತಾನಂದ ಗೋವಿಂದ ವಿಭೋಕೃಷ್ಣ ರುಕ್ಮಿಣೀನಾಥ ಜಗದೇಕವಂದ್ಯ 52ಆದರದಿ ಸುರವೃಂದ ರಾಜರೂ ವಿಪ್ರರೂಯಾದವರುಗಳು ಶ್ರೀ ಕೃಷ್ಣ ರುಕ್ಮಿಣೀನಿತ್ಯಸತಿಪತಿ ಮದುವೆ ನೋಡಿ ಮಹಾನಂದಹೊಂದಿದರು ಸೌಭಾಗ್ಯಪ್ರದ ಇದು ಪಠಿಸೆ 53ಯೋಗೇಶ್ವರ ದೇವ ದೇವ ಶ್ರೀಯಃಪತಿಅನಘಅಗಣಿತಗುಣಪೂರ್ಣಅಪ್ರಮೇಯಾತ್ಮನ್ಶ್ರೀಕೃಷ್ಣ ವಿಷ್ಣೋ ಶ್ರೀ ರಮಾರುಕ್ಮಿಣೀಬಾಗಿ ಶರಣಾದೆ ನಿಮ್ಮಲ್ಲಿ ಮಾಂಪಾಹಿ 54ಜಯತು ಜಯತು ದೇವಕೀತನಯ ಸತ್ಯಾ ರುಕ್ಮಿಣೀಕಾಂತಜಯತುಪೂರ್ಣಪ್ರಜÕಹೃತ್ ಪದ್ಮ ಸಂಸ್ಥಜಯತು ಜಗಜ್ಜನ್ಮಾದಿಕರ್ತ ಜಗನ್ನಾಥಜಯತು ವಿಧಿತಾತ ಪ್ರಸನ್ನ ಶ್ರೀನಿವಾಸ 55-ಇತಿ ಶ್ರೀ ರುಕ್ಮಿಣೀಶ ಕಲ್ಯಾಣ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಬಣ್ಣಿಸಲಳವೇ ನಿನ್ನ ಪಬಣ್ಣಿಸಲಳವಲ್ಲ ಭಕುತವತ್ಸಲ ದೇವಪನ್ನಗ ಶಯನ ಪಾಲ್ಗಡಲೊಡೆಯನೆ ರಂಗಅ.ಪಅಸಮ ಪರಾಕ್ರಮಿ ತಮನೆಂಬ ದೈತ್ಯನುಶಶಿಧರನ ವರದಿ ಶಕ್ರಾದ್ಯರಿಗಳುಕದೆಬಿಸಜಸಂಭವನ ಠಕ್ಕಿಸಿ ನಿಗಮವ ಕದ್ದುವಿಷಧಿಯೊಳಡಗಿರಲ್ ಒದಗಿ ಬಂದಮರರುವಸುಧೀಶ ಕಾಯಬೇಕೆಂದೆನಲವನ ಮ -ರ್ದಿಸಿ ವೇದಾವಳಿಯ ತಂದು ಮೆರೆದ ದಶದಿಸೆಯೊಳು ಬೊಮ್ಮಗಂದು ವೇದವ ಕರುಣಿಸದೆ ಕಂಜಾಕ್ಷ ಕೇಶವ ದಯಾಸಿಂಧು 1ಇಂದ್ರಾದಿ ಸಕಲ ದೇವತೆಗಳೆಲ್ಲರು ದೈತ್ಯವೃಂದವೊಂದಾಗಿ ಮತ್ಸರವ ಮರೆದು ಕೂಡಿಬಂದು ನೆರೆದುಮುರಹರ ನಿನ್ನ ಮತದಿಂದಮಂದರಾದ್ರಿಯ ಕಡೆಗೋಲ ಗೈಯ್ದತುಳ ಫಣೀಂದ್ರನ ತನು ನೇಣಿನಂದದಿ ಬಂಧಿಸಿ ||ಸಿಂಧು ಮಥಿಸುತಿರಲು ಘನಾಚಲವಂದು ಮುಳುಗಿ ಪೋಗಲು ಬೆನ್ನಾಂತು ಮುಕುಂದ ನೆಗಹಿದೆಸುರರು ಜಯ ಜಯವೆನಲು2ಖಳಶಿರೋಮಣಿ ಕನಕಾಕ್ಷನೆಂಬಸುರ ನಿನ್ನೊಳು ಸೆಣಸುವೆನೆಂಬ ಗರುವದಿಂದಲಿ ಬಹುಬಲದಿಂದುದ್ಧಟನಾಗಿ ದಿವಿಜರನಂಜಿಸಿಇಳೆಯ ಕದ್ದು ರಸಾತಳದೊಳಗಿರೆ ನಿನ್ನಪೊಳೆವ ಕೋರೆಗಳಿಂದ ತಿವಿದು ರಕ್ಕಸನ ಅ ||ಪ್ಪಳಿಸಿ ಕೊಂದವನ ದಿಂಡು ಗೆಡಹಿ ಮಹೀಲಲನೆಯೊಡನೆ ಕೈಕೊಂಡು ಪಾಲಿಸಿದೆ ಪೂಮಳೆಗರೆದರುಅಮರರು ನೆಲೆಗೊಂಡು3ಹಗಲಿರುಳಳಿವಿಲ್ಲದಸುರ ಕಶಿಪು ತನ್ನಮಗನ ಹರಿಯ ತೋರೆಂದಧಿಕ ಬಾಧಿಸುತಿರೆಬಗಿದು ಕಂಬವನೊಡೆದಧಿಕ ರೋಷಾಗ್ನಿ ಕಾರ್ಬೊಗೆ ಸೂಸಿ ಗಗನಮಂಡಲ ಧಗ - ಧಗಧಗಧಗಿಪ ಪ್ರಜ್ವಾಲೆಯನುಗುಳಿ ಹಿರಣ್ಯಕನ ಕುರುಗುರಿಂದೊಡಲ ಸೀಳಿ ಕರುಳಮಾಲೆತೆಗೆದು ಕಂಠದಲಿ ತಾಳಿ ಒಪ್ಪಿದೆನರಮೃಗರೂಪೀ ತ್ರಾಹಿಯೆನಲು ಶಶಿಮೌಳಿ 4ಕುಲಿಶಧರನ ಗೆದ್ದು ಕುವಲಯದೊಳು ಭುಜಬಲವಿಕ್ರಮದಲಿ ಸೌಭಾಗ್ಯದುನ್ನತಿಯಿಂದಬಲಿ ವಾಜಿಮೇಧ ಗೆಯ್ಯಲು ವಟುವೇಷದಿಂದಿಳಿದು ತ್ರಿಪಾದ ಭೂಮಿಯ ದಾನವ ಬೇಡಿಬಲುಹಮ್ಮ ಮುರಿಯಬೇಕೆಂದವನ ಶಿರಮೆಟ್ಟಿ ||ನೆಲನ ಈರಡಿಮಾಡಿದೆ ಚರಣವಿಟ್ಟುಜಲಜಜಾಂಡವನೊಡೆದೆ ಅಂಗುಷ್ಟದಿಸುಲಲಿತಸುಮನಸ ನದಿಯ ನೀ ಪಡೆದೆ5ಪೊಡವಿಪತಿಗಳೊಳಗಧಿಕ ಕಾರ್ತವೀರ್ಯಕಡುಧೀರ ದೇವ ದೈತ್ಯರಿಗಂಜದವನ ಬೆಂಬಿಡದೆ ಸಂಗ್ರಾಮದೊಳಧಿಕ ಸಮರ್ಥನಹೊಡೆದು ತೋಳ್ಗಳ ಕುಟ್ಟಿ ಕೆಡಹಿ ಆಗಸದೊಳುಮೃಢಮುಖ್ಯ ದೇವಸಂತತಿ ನೋಡೆ ಕ್ಷತ್ರಿಯರಪಡೆಯನೆಲ್ಲವ ಸವರಿ ಮಾತೆಯ ಶಿರಕಡಿದು ತತ್ಪತಿಗೆ ತೋರಿ ಪಿಡಿದೆ ಗಂಡುಗೊಡಲಿಯ ಕರದಿಬಲ್ಲಿದ ದನುಜಾರಿ6ದಶರಥರಾಯ ಕೌಸಲ್ಯಾನಂದನನಾಗಿಋಷಿ ವಿಶ್ವಾಮಿತ್ರನಧ್ವರವ ರಕ್ಷಿಸಿಘನವಿಷಕಂಠಧನುವ ಖಂಡಿಸಿ ಜಾನಕಿಯ ತಂದುತ್ರಿಶಿರದೂಷಣ ಖರರಳಿದು ವಾಲಿಯನಂದುನಿತಿ ಶಾಸ್ತ್ರದಿಂದ ಸಂಹರಿಸಿ ಸಾಗರವ ಬಂಧಿಸಿ ರಾವಣನ ಶಿರವ ಕತ್ತರಿಸಿ ರಂಜಿಸುವ ಲಂಕಾಪುರವ ವಿಭೀಷಣಗೆಎಸೆವ ಪಟ್ಟವ ಕಟ್ಟಿದೆಲೆ ದೇವಗರುವ 7ದೇವಕಿ ವಸುದೇವರಲ್ಲಿ ಜನಿಸಿ ಲೋಕಪಾವನಗೆಯ್ದು ಪನ್ನಗನ ಪೆಡೆಯ ಮೆಟ್ಟಿಗೋವಳನಾಗಿ ಗೋವರ್ಧನ ಗಿರಿಯೆತ್ತಿಮಾವ ಮಲ್ಲರ ಕೊಂದು ಪಾರಿಜಾತವ ತಂದುಆ ವಿಪ್ರನಲಿ ಓದಿ ಪೋದಪತ್ಯವನಿತ್ತ ||ತಾವರೆದಳಸುನೇತ್ರ ತ್ರಿಭುವನ ಸಂಜೀವಪರಮ ಪವಿತ್ರ ಶ್ರೀ ರುಕ್ಮಿಣಿದೇವಿ ಮನೋಹರ ಶುಭನೀಲಗಾತ್ರ 8ಸರಸಿಜಾಸನಭವ ಇಂದ್ರಾದಿಗಳುಕದೆದುರುಳ ದಾನವರಿರಲಂದು ಖೇಚರದೊಳುನಿರುಪಮ ನೀನೆ ಒಂದೊಂದು ರೂಪಗಳಿಂದಹರಗೆ ಸಹಾಯವಾಗಿ ದನುಜಸ್ತ್ರೀಯರ ವ್ರತಪರಿಹಾರ ಮಾಡಿ ಆಯಾಸವಿಲ್ಲದಲೆ ಮುಪ್ಪುರವ ಅಳಿದ ನಿಸ್ಸೀಮ ಅಖಿಳಶ್ರುತಿಯರಸೆ ಕಾಣದ ಮಹಿಮ ಹೇಸಾಮಜವರದ ಸುಪರ್ಣವಾಹನ ಸಾರ್ವಭೌಮ 9ಮಣಿಮಯ ಯುಕ್ತ ಆಭರಣದಿಂದೆಸೆವ ಲಕ್ಷಣವುಳ್ಳ ದಿವ್ಯ ವಾಜಿಯನೇರಿಧುರದೊಳುಕುಣಿವ ಮೀಸೆಯ ಘೋರವದನ ಖಡ್ಗ ಚರ್ಮವನು ಕೊಂಡು ದ್ರುಹಿಣಾದಿಗಳು ಪೊಗಳಲುಕಲಿದನುಜರೆಲ್ಲರನೊಂದೆ ದಿನದೊಳು ಸವರಿದ ||ರಣಭಯಂಕರ ಪ್ರಜಂಡ ಮೂಜಗದೊಳುಎಣೆಗಾಣಿನೆಲೊಉದ್ದಂಡ ಕಲ್ಕಿ ದಿನಮಣಿ ಕೋಟಿತೇಜ ದುಷ್ಕøತ ಕುಲ ಖಂಡ10ಚಿತ್ತಜನಯ್ಯನೆ ಚಿನ್ಮಯ ಗಾತ್ರನೆಉತ್ತಮದರ ಚಕ್ರ ಗದೆ ಜಲಜಾಂಕನೆಸುತ್ತಲು ಅರಸಲು ನಿನಗೆಲ್ಲಿ ಸರಿಕಾಣೆಹೊತ್ತು ಹೊತ್ತಿಗಾದಿತ್ಯರಬಿನ್ನಪಕೇಳಿಹತ್ತವತಾರದಿ ಅಸುರರ ಮಡುಹಿದೆನಿತ್ಯ ತ್ರಿಸ್ಥಾನವಾಸ ವಾಗಿಹ ಸರ್ವಭಕ್ತರ ಮನೋವಿಲಾಸ ಸಲಹೋ ಪುರುಷೋತ್ತಮಪುರಂದರ ವಿಠಲ ತಿರುಮಲೇಶ11
--------------
ಪುರಂದರದಾಸರು
ಬಂದೆವಯ್ಯ ಶ್ರೀಕೃಷ್ಣಮೂರ್ತಿ ನಿನ್ನ ಸುಂದರಚರಣಾರವಿಂದ ನೋಡುವುದಕ್ಕೆ ಬಂದೆ ಪಮಂದರೋದ್ಧರ ಅರವಿಂದ ನೇತ್ರಗೆ ನಮ್ಮೊ-ಳಿಂದು ಕೃಪೆಯ ತೋರಿ ಸಲಹೋ ಸಚ್ಚಿದಾನಂದ ಅ.ಪಭಾವಸಂವತ್ಸರ ಪೌಷ ಬಹುಳಮವಾಸೆಮಹಾ ದೃಢದಿ ಸಮುದ್ರವ ಸ್ನಾನಗೈದುಆ ವಡಭಾಂಡೇಶ್ವರದಿಂದ ಬಲರಾಮದೇವರ ಕಂಡು ನಾವೆರಗಿ ಕೈಮುಗಿದೀಗ ಬಂದೆ 1ಮಧ್ವಸರೋವರವೆಂಬ ತೀರ್ಥದಿ ಮಿಂದುಶ್ರದ್ಧೆ ಭಕ್ತಿಯೊಳ್ ನಿನ್ನ ಕಂಡು ಬಲಬಂದುಬದ್ಧಾಂಜಲಿಯ ನೀಡಿ ಸ್ಮರಿಸಿ ವಂದನೆಗೈದುಉದ್ಧರಿಸೆಂದು ವರವ ಬೇಡುವದನೀಗ ಬಂದೆ 2ಅಷ್ಟಾವಧಾನ ಸೇವೆಯೊಳು ನಿನ್ನನುಯತಿಶ್ರೇಷ್ಠರು ಪೂಜಿಸಿ ವರವ ನೀಡಿ ಕೊಟ್ಟಮಂತ್ರಾಕ್ಷತೆ ತೀರ್ಥ ಪ್ರಸಾದವ ಪಡೆದುನಮ್ಮಯ ಭವಕಷ್ಟ ನೀಗುವುದಕ್ಕೆ ಬಂದೆ 3
--------------
ಗೋವಿಂದದಾಸ
ಮಂಜುಳ ವೇಣುಗಾನವ ಮಾಡಿ ಮೋಹಿಪ ಜಗವಕಂಜಜನಯ್ಯ ಮುರಾರಿ ಕಾಮಿನಿಯರಿಗುಪಕಾರಿ ಪ.ಯಮುನೆಯ ಪುಲಿನದಿ ಯದುಕುಲ ಚಂದ್ರ ಹೊಂದೆರಮಣೀರ್ವಕ್ಷ ಮಧ್ಯದಿ ರಾಜಿಸುತ ಕುಲಾಂಬುಧಿ 1ಪೂರ್ಣ ಪೀಯೂಷಕರನು ಪೂರ್ವಾಚಲಕೆ ಸಾರ್ದನುಪೂರ್ಣಾನಂದ ಮುಕುಂದ ಪವನ ಸಂಚಾರದಿಂದ 2ಕುಂದನೀಲೋತ್ಪಲ ಜಾಜಿಕಮಲಮಲ್ಲಿಗೆ ಜುಜಿ( ?)ಮಂದಾರಪುನ್ನಾಗಭುಜಮೂಲದಿ ಗೋಪಾಲರಾಜ3ಕುಸುಮಾಕರಕುಂಜದಿ ಕುಶಲಕ್ರೀಡಿತನಾದಿಸುಸಪ್ತ ಸ್ವರದಿಂದ ಸುಖದಾನಂದ ಮುಕುಂದ 4ಕತ್ತಲೆವಿರಿ ಸಂಪಿಗೆಕಮಲಮೊಲ್ಲೆ ಮಲ್ಲಿಗೆಸುತ್ತಿದ ಎಳೆಪಲ್ಲವ ಮಾರನಂತಹ ಚೆಲುವ 5ಮುತ್ತಿನ ಚೊಲ್ಲೆಯಲ್ಲಿಯ ಮುಂಗುರುಳಲ್ಲಿ ವಲಯಕಸ್ತೂರಿ ತಿಲಕ ಒಪ್ಪೆ ಕವಿದಡರ್ವದ್ವೀರೇಫೆ 6ಕಡೆಗಣ್ಣಿನ ನೋಟದಿ ಕುಡಿಹುಬ್ಬಿನ ಮಾಟದಿಮಡದೇರ್ಗೆ ಮಾರಶರ ಮೂಡಿಸುತತಿ ಸುಂದರ 7ಮುಗುಳುನಗೆಮೊಗದ ಮಣಿಕುಂಡಲ ಕರ್ಣದಯುಗ ಕರ್ಣಾಕರ್ಣಿಕರಾಯತ ನಟ ನರಾಕಾರ 8ವನಮಾಲೆವೈಜಯಂತಿಶ್ರೀವತ್ಸಕೌಸ್ತುಭಕಾಂತಿಮಿನುಗುವಾಮೋದ ಗಂಧಮುಡಿ ತೋರೋ ಶ್ರೀ ಗೋವಿಂದ 9ಹಾರಕೇಯೂರ ಕಂಕಣ ಹೊಳೆವ ಮಧ್ಯಒಡ್ಯಾಣಚಾರುಪೀತಾಂಬರೋತ್ತರಿ ಚೀರದಿಂದೆಸೆವಹರಿ10ವಾಮಬಾಹುವಿಲೊಪ್ಪುವ ವೇಣುವಿನ ಘನರವಬ್ರಹ್ಮ ಗಂಧರ್ವರ ಗಾನ ಬಗೆಗೆ ಮೀರುವ ದೇವ 11ಸುಲಲಿತಂದುಗೆ ಗೆಜ್ಜೆ ಸಂದ್ರೇಖೆ ಶೋಭಿತಹೆಜ್ಜೆಕೆಲದ ಗೋಪಾಂಗನೇರ ಕಾಮಧೇನು ಸಾರೋತ್ತರ 12ಧರೆಗೆರಗಿದ ಜಡೆ ಸಲೆ ಕಾಳಿಂದಿ ಮೇಲಾಡೆ ಸಕಳ ಪಕ್ಷಿಮೃಗವು ಸಂಚರಿಸದೆ ನಿಂದವು 13ಜಡಂಗಳು ಚೇತರಿಸೆ ಜನದ ಚೇಷ್ಟೆ ಥಂಬಿಸೆಕಡುರಸತುಂಬಿತುಳುಕಲಜಭವಾಂಡೊಲಿಯಲು14ವೃಕ್ಷಗಳ ಶೃಂಗಾರಿಯ ವತ್ಸಗಳಾವದೊರೆಯಈಕ್ಷಿಸಿ ತೃಣ ಮೆಲ್ಲದೆಯಿದ್ದವು ಗೀತಕೇಳುತ 15ನೀರಸ ತರುಫಲಾಗೆ ನಿತ್ಯಪ್ರಜÕತೆಗೆನೀರದಗೆ ಸ್ವರಗೈಯೆ ನಿಗಮನಯ್ಯ ಮರೆಯ 16ಮಂಗಳಮೇಘಘರ್ಜನೆ ಮಾಡಿದವು ಮೆಲ್ಲಮೆಲ್ಲನೆರಂಗನ ಮೇಲಮೃತ ಧಾರೆಯವಿತ್ತವರ್ಥಿಯಿಂದ 17ನಂದವ್ರಜದ ವನವು ನಂದನ ಚೈತ್ಯಾಧಿಕವುನಂದಸೂನುವಿನ ಗೀತ ನಾದ ವೇದಾನಂತಾನಂತ 18ಕಮಲಜ ಭವೇಂದ್ರಾದಿಕರು ಭ್ರಾಂತಿಯನೈದಿದರುಅಮರಜನ ನಾರೇರು ಅಂಗಜವಶವಾದರು 19ಗೋಷ್ಠದ ಗೊಲ್ಲ ಗೋಪೇರ ಗೋವರ್ಧನ ಗೋಪಾಲರದೃಷ್ಟಕೆ ಸುರಮುನಿ ಗಂಧರ್ವರು ಪೊಗಳಿದರಾಗ 20ಸುರಭ್ಯಾಗಾರದಿ ಕೃಷ್ಣ ಸಂಚರಿಸಲು ಸರ್ವೇಷ್ಠಪೂರಣವಪ್ಪಿತುಧರೆಪರಮಮಂಗಳ ಸಾರಿ21ಸುರರುಸುಖ ಸಂಭೃತ ಶರಧಿಯೊಳೋಲಾಡುತಸಿರಿಮಂಗಳವ ಹೇಳಿ ಸುರಿದರರಳ ಮಳೆ22ಪ್ರಸನ್ನತರ ಚರಿತ ಪ್ರಸನ್ನಾವ್ಯಾಕೃತಗಾತ್ರಪ್ರಸನ್ನಪೂರ್ಣ ಪ್ರಜೆÕೀಷ್ಠ ಪ್ರಸನ್ನವೆಂಕಟಕೃಷ್ಣ 23
--------------
ಪ್ರಸನ್ನವೆಂಕಟದಾಸರು
ಮರೆಯದಿರು ಮರೆಯದಿರು ಗುರುರಾಯನ |ಲೋಕ ಪರಿಪಾಲಿಸುವಗುರುಸಾರ್ವಭೌಮನ್ನಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮೇಶ್ವರನು ತಾನೆಪರಮಪ್ರೇಮದಿಂದಗುರುರೂಪವನುಧರಿಸಿ ಧರೆಗೆ ಬಂದು, ತ್ವರದಿಂದ ಮಾನವರ ಮರವೆಯನುಪರಿಹರಿಸಿ | ಸ್ಥಿರ ಮುಕ್ತಿ ಸುಖವಿತ್ತು ಪೊರೆವ ಗುರುವರನ1ಕರುಣದಿಂ ಜನರ ರಕ್ಷಿಸುವ ಸದ್ಗುರುವರನ | ಶರಣು ಪೊಕ್ಕರೆಕೃಪಾ ಸುಧೆಗರೆವನ | ನಿರುತದಲಿ ಭಕುತರಿಗೆ |ನಿರತಿಶಯಸೌಖ್ಯವನು ಸರಿದಂತೆ ವರವಿತ್ತು | ಮೆರೆವ ದೇಶಿಕನ2ಕುವರ ಬಾರೆಂದಭಯಕರವಶಿರದಲ್ಲಿರಿಸಿ |ನೆರೆಸುಬೋಧೆಯಗೈದು ನರಭಾವ ಕಳೆದು |ಮರಣ ಭಯ ಹರಸಿ | ಬಹು ಹರುಷದಿಂದಿರುಎಂದ ಚಿರ ಸಿಂಧುಗಿಯವಾಸ |ಗುರುಶಂಕರನಪಾದ3
--------------
ಜಕ್ಕಪ್ಪಯ್ಯನವರು
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ವೀರ ಹನುಮ ಬಹುಪರಾಕ್ರಮ - ಸುಜ್ಞಾನವಿತ್ತುಪಾಲಿಸಯ್ಯ ಜೀವರುತ್ತಮ ಪರಾಮದೂತನೆನಿಸಿಕೊಂಡಿನೀ - ರಾಕ್ಷಸರವನವನೆಲ್ಲ ಜಯಿಸಿ ಬಂದೇ ನಿ ||ಜಾನಕಿಗೆ ಉಂಗುರವಿತ್ತುಜಗತಿಗೆಲ್ಲ ಹರುಷವಿತ್ತುಜಾತಿಮಣಿಯ ರಾಮಗಿತ್ತುಲೋಕದಿ ಪ್ರಖ್ಯಾತನಾದೆ 1ಗೋಪಿಸುತನಪಾದಪೂಜಿಸಿ - ಗದೆಯ ಧರಿಸಿ |ಕೌರವರ ಬಲವ ಸವರಿಸಿ ||ದ್ರೌಪದಿಯ ಮೊರೆಯಕೇಳಿಕರುಣದಿಂದ - ತ್ವರದಿ ಬಂದುಪಾಪಿ ಕೀಚಕನನು ಕೊಂದುಭೀಮಸೇನನೆನಿಸಿಕೊಂಡೆ 2ಮಧ್ಯಗೇಹನಲಿ ಜನಿಸಿ ನೀ - ಬಾಲ್ಯದಲ್ಲಿಮಸ್ಕರಿಯ - ರೂಪಗೊಂಡೆ ನೀ ||ಸತ್ಯವತಿಯ ಸುತನ ಭಜಿಸಿ |ಸಮ್ಮುಖದಲಿ ಭಾಷ್ಯ ಮಾಡಿಸಜ್ಜನರನು ಪಾಲಿಸಿದ - ಪುರಂದರವಿಠಲನ ದಾಸ 3
--------------
ಪುರಂದರದಾಸರು
ಶರಣು ಪೊಕ್ಕೆನೋ ನಿನ್ನ ಕರುಣಾಸಾಗರಾ ಪಶರಣು ಪೊಕ್ಕಚರಣಯುಗಕೆ ಕರುಣಿಸೆನ್ನ ಶರಣನೆಂದುxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಗುರವೇ ತ್ವರದಿ ಪೊರೆಯೊ ಸ್ವಾದಿ -ಧ್ವರಿಯೆಕರವಪಿಡಿದು ನಿರುತÀಅ.ಪಎನ್ನಬಿನ್ನಪಕೇಳೋ ಅಪನ್ನಪಾಲಕಾಘನ್ನ ಜ್ಞಾನವಿತ್ತು ಮುನ್ನ ಮನ್ನಿಸೋ ಯತಿರನ್ನನೇ 1ದಾತನಿನ್ನಪೋತನಾನು ಮಾತು ಕೇಳನಾಥ ಪೇಳ್ವೆಖ್ಯಾತ ಮಹಿಮನೆ 2ಪರಮ! ಕರುಣಿಸೋ ನಿನ್ನ- ಶಿರದಿ ನಮಿಸುವೆಸರಸ ಗುರುಜಗನ್ನಾಥ ವಿಠಲ ದೂತ 3
--------------
ಗುರುಜಗನ್ನಾಥದಾಸರು
ಶ್ರೀ ಪ್ರಾಣೇಶದಾಸರ ಸಂಪ್ರದಾಯದ ಹಾಡುಗಳು240ಶ್ರೀದೇವರ ವಿವಾಹ ಮಹೋತ್ಸವದ ಪದಗಳುಏನು ನೋಡಿತ್ತ ನೀ ವರಕೆ ಮಗಳಾ |ಹೀನವಳಿತೆನ್ನದಲೆ ತ್ವರದಿ ಜಲನಿಧಿಯೂ ಪಕಪ್ಪು ರೂಪವು ಇವನ ನೆಲಿ ಒಬ್ಬರರಿಯರೂ |ಸರ್ಪಶಯನನು ತಿರಿದುಕೊಂಡು ತಿಂಬಾ ||ಮುಪ್ಪಿನವ ಇವ ಹುಟ್ಟಿದುದನಾರು ಬಲ್ಲವರು |ತಪ್ಪಿ ಕೊಟ್ಟನೆ ಎಲ್ಲರನುಜರಿದುಹೀಂಗೇ 1ಕದ್ದು ಪೊಟ್ಟೆಯ ಪೊರೆವ ಎಂಜಲೆನ್ನದೆ ತಿಂಬ |ಹದ್ದನೇರುವ ಅಡವಿಯೊಳು ಚರಿಸುವಾ ||ಬುದ್ಧಿಹೀನರ ತೆರದಿ ಹಡದವಳ ಶಿರ ಕಡಿದ |ಸದ್ಯ ವಸನವ ಕಳದು ಬತ್ತಲಿರುವವಗೇ 2ಹೇಸಿಕಿಲ್ಲದೆ ಕರಳ ಮಾಲಿಕಿಯ ಹಾಕಿಹನು |ದೋಷಕಂಜನು ಜಾರತನವ ಮಾಳ್ಪಾ ||ದಾಸನಂದದಿ ಬಲಿಯ ಮನಿಯ ಬಾಗಿಲ ಕಾಯ್ದ |ಆ ಸವ್ಯಸಾಚಿ ತೇರಿಗೆ ಸೂತನಾದವಗೆ 3ಹೆಣ್ಣುಗಳ ಅಂಬರವ ಕೊಂಡು ಮರನೇರುವನು |ತನ್ನ ಮಕ್ಕಳ ತಾನೆ ಹತಗೈಸುವಾ ||ಮಣ್ಣನೂ ಬೆಂಕಿಯನು ತಿಂಬ ವಾವಿಯನರಿಯ |ತನ್ನ ಪುತ್ರರಿಗೆ ತನ್ನಯ ಮಕ್ಕಳಿತ್ತವಗೆ 4ಪ್ರಾಣೇಶ ವಿಠಲನಲ್ಲಿಹವಿಂಥ ಸುಗುಣಗಳು |ತಾನೊಂದು ಪೂರ್ತಿ ತಿಳಿಯನು ಸಮುದ್ರಾ ||ಶ್ರೀ ನಾರಿಯನು ಕೊಟ್ಟ ಅವನ ಬುದ್ಧಿಯೊ ಅಥವ |ಏನು ವ್ರತ ಸೇವಿಸಿದ್ದಳೊಕಮಲಮಂದಿರಿಯು 5
--------------
ಪ್ರಾಣೇಶದಾಸರು
ಶ್ರೀ ಮದಾನಂದ ತೀರ್ಥ ಹನುಮ | ಭೀಮನಿನ್ನ ಸಮಾನ ಪುರುಷರುಈ ಮೂಜಗದೊಳಿಲ್ಲವೆಂದು ಶ್ರೀ ರಾಮಸಹಭೋಜನವನೀಯನೆ? ಪಹರಿವಿರಿಂಚಿ ಸಹಾಯದಿಂದ | ಹರನುತ್ರಿಪುರವನಳಿಯಲಾಗ |ಬರಿದೆ ಕೊಂಡಾಡಿದರು ಸರ್ವರು |ಅರಿಯದೆಯೆ ನಿನ್ನ ಸಾಹಸ ||ಶರಧಿಲಂಘಿಸಿ ದಾನವರನು ತರೆದುಸೀತೆಗೆ ಉಂಗುರವಿತ್ತು |ಪುರವನುರುಹಿ ಹರಿಯಡಿಗೆ ಆಕುರುಹತಂದು ಮುಟ್ಟಿಸಿದೆಯೊ 1ಸಾಸಿರದ ತನ್ನ ಪೆಡೆಯ ನಡುವೆ | ಈಸುಸಚರಾಚರವನೆಲ್ಲ |ಸಾಸಿವೆಯಂದದಲಿ ಇಟ್ಟಾ | ಶೇಷನ-ಮೂಲರೂಪದ ||ಆ ಶಕುತಿಯನು ತೋರಿಸಲುದಶಾಸ್ಯನೆಳೆಯುವ ಸೌಮಿತ್ರಿಯನುದಾಶರಥಿಯ ಬಳಿಗೆ ತಂದು | ನೀ ಸಲಹಿದೆ ಜಗವರಿಯಲು 2ತನ್ನ ಜನನಿಯೊಬ್ಬಳಿಗೆಸುಪರ್ಣಬಳಲಿ ಸುಧೆಯ ತರಲುಇನ್ನು ಪೊಗಳುತಿಹುದು ಲೋಕ | ನಿನ್ನಂತೆ ದೂರದಲಿಹ ||ಉನ್ನತದ ಶತಯೋಜನಗಲದ | ಅನ್ಯರು ತರಲಾರದ ಸಂಜೀ |ವನ್ನ ಗಿರಿಯ ತಂದು ಕಪಿಗಳನ್ನು ಕಾಯ್ದೆ ತವಕದಿಂದ 3ಸಕಲ ಪ್ಲವಗನಿಕರ ರಾಮನ | ತ್ರಿಕರಣಸೇವೆಯನು ಮಾಡಿ |ಮುಕುತಿ ಬೇಡಲಿತ್ತು ನಿನಗೇನು | ಬೇಕೆಂದುಕೇಳಲು ನೀನು ನಾ ||ಲುಕು ಪುರುಷಾರ್ಥಗಳಜರಿದು| ಭಕುತಿಯಕೊಡು ಎನಲು ನವಕನಕದ ಮಾಲೆ ಕೊರಳಿಗಿಟ್ಟು ಜಾ | ನಕಿರಮಣನುನಿನ್ನ ಪೊಗಳಿದ 4ಶರಧಿಯ ಮಥನದೊಳುದಿಸಿದ |ಗರಳಜಗತ್ತನು ಅಂಜಿಸೆಸಿರಿಯರಸನ ಪೆರ್ಮೆಯಿಂದ | ಸುರಿದುಅದನು ಜೀರ್ಣಿಸಿಕೊಂಡ ||ಮಾರುತನವತಾರ ವೃಕೋ | ದರನೆ ನೀನು ಎಂದರಿಯದೆಮರುಳ ಕೌರವರಿಕ್ಕಿದ ವಿಷವ | ಭರದಿಉಂಡು ತೇಗಿದುದರಿದೆ ? 5ಅವನಿಭಾರಕೆ ಮುಖ್ಯರಾದ | ಕವುರವ ಕೀಚಕಾದಿಗಳನುಬವರಮುಖದಿ ನಗುತ ಗೆಲಿದು |ಹವಿಯ ಕೃಷ್ಣಾನಿಗರುಪಿಸಿದಿವಿಜರೆದುರುಗೊಳಲುಅವರ|ನವರತಾರತಮ್ಯದಿ ಮನ್ನಿಸಿ |ಪವನಲೋಕದೊಳು ಮೆರೆದೆ ದ್ರವುಪದಿಯ ಸಹಿತನಾಗಿ 6ಸುರಾಸುರರ ಸಂಗ್ರಾಮದಲಿ |ಅರಿವಿಪ್ರಚಿತ್ತಿಯ ನೀನು ಕೊಲ್ಲಲು |ವಿರಿಂಚಿ-ಹರರ ವರದಿಂದವನೆ |ಜರಾಸಂಧನಾಗಿ ಇಳೆಯೊಳು |ಅರಸುಗಳನು ಕಾಡಲವನ ಸರನೆ ಸೀಳಿ ಪಶುವಿನಂತೆಹರಿಗೆ ಅರ್ಪಿಸಲವನು ಸಕಲಾ | ಧ್ವರಕ್ಕಿಂತಲು ತೃಪ್ತನಾದ 7ನಡುಮನೆಯೆಂಬ ಸಾಧುದ್ವಿಜನ | ಮಡದಿಯಬಸಿರಿನಲಿ ಉದಿಸಿಕಡು ಕುಮತದ ಮಾಯಿಗಳನು | ಅಡಿಗಡಿಗೇ ಸಚ್ಛಾಸ್ತ್ರದಿ ||ತಡೆದು ಆನಂದ ಶುಭಗುಣಗಳ | ಕಡಲುಹರಿಸರ್ವೋತ್ತಮನೆಂದುಒಡಂಬಡಿಸಿ ಸ್ವಮತವನ್ನು | ಪೊಡವಿಯೊಳಗೆಸ್ಥಾಪಿಸಿದೆಯೊ ನೀ 8ಮರುತ ನಿನ್ನವತಾರ ತ್ರಯವ | ನರಿತುಭಜಿಪಗೆ ಶ್ವೇತದ್ವೀಪ |ದರುಶನವನೆ ಮಾಡಿಸಿ ಶ್ರೀ |ಪುರಂದರವಿಠಲೇಶನ |ಕರುಣಕಟಾಕ್ಷದಿಂದ ವೈಕುಂಠ ಪುರದಿ ಅನಂತಾಸನದಲಿ |ಪರಮಾನಂದವ ಪಡೆಸಿ ಹೊರೆವೆ |ಪರಿಪರಿಯ ಭೋಗಗಳನಿತ್ತು 9
--------------
ಪುರಂದರದಾಸರು