ಒಟ್ಟು 1599 ಕಡೆಗಳಲ್ಲಿ , 104 ದಾಸರು , 1208 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5
--------------
ವೆಂಕಟದಾಸರು
ಏನು ದುಷ್ಕøತ ಫಲವೋ ಸ್ವಾಮಿ ಶ್ರೀನಿವಾಸನೆ ಪೇಳೋ ಪ. ಏನು ಕಾರಣ ಭವಕಾನನದೊಳು ಬಲು ಹಾನಿಯಾಗಿ ಅವಮಾನ ತೋರುವದಿದು ಅ.ಪ. ಹಂಬಲವೂ ಹಿರಿದಾಯ್ತು ಎನ್ನ ನಂಬಿಕೆಯೂ ಕಿರಿದಾಯ್ತು ಸಂಭ್ರಮವಲ್ಲ ಕುಟುಂಬಿಗೆರೆನ್ನಯ ಹಂಬಲಿಸರು ನಾನೆಂಬುವದೇನಿದು 1 ಹಣವಿಲ್ಲಾ ಕೈಯೊಳಗೆ ಸ- ದ್ಗುಣವಿಲ್ಲಾ ಮನದೊಳಗೆ ಜನಿತಾರಭ್ಯದಿ ತನುಸುಖವಿಲ್ಲೈ ಘನದಾಯಾಸವ ಅನುಭವಿಸುವದಾಯ್ತು 2 ಪೋದರೆಲ್ಲ್ಯಾದರು ಅಪ- ವಾದವ ಪೇಳ್ವರು ಜನರು ಆದರವಿಲ್ಲೈ ಶ್ರೀಧರ ತವ ಚರ- ಣಾಧಾರವೆ ಇನ್ನಾದರೂ ಕೃಪೆಯಿಡು 3 ಗೋಚರವಿಲ್ಲೆಲೊ ರಂಗ ಎನ್ನ ಪ್ರಾಚೀನದ ಪರಿಭಂಗ ನಾಚಿಕೆ ತೋರದ ಯಾಚಕತನವ- ನ್ನಾಚರಿಸುವ ಕಾಲೋಚಿತ ಬಂದುದು 4 ಸೇರಿದೆನೆಲೊ ರಂಗ ಕೃಪೆ ದೋರೆನ್ನೊಳ್ ನರಸಿಂಗ ಭಾರವೆ ನಿನ್ನ ಮೈದೋರಿ ರಕ್ಷಿಸುವುದು ನಾರದನುತ ಲಕ್ಷ್ಮೀನಾರಾಯಣ ಗುರು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನು ದುಷ್ಕøತ ಫಲವೋ ಸ್ವಾಮಿ ಶ್ರೀನಿವಾಸನೆ ಪೇಳೋ ಪ. ಏನು ಕಾರಣ ಭವಕಾನನದೊಳು ಬಲು ಹಾನಿಯಾಗಿ ಅವಮಾನ ತೋರುವದಿದು ಅ.ಪ. ಹಂಬಲವೂ ಹಿರಿದಾಯ್ತು ಎನ್ನ ನಂಬಿಕೆಯೂ ಕಿರಿದಾಯ್ತು ಸಂಭ್ರಮವಲ್ಲ ಕುಟುಂಬಿಗೆರೆನ್ನಯ ಹಂಬಲಿಸರು ನಾನೆಂಬುವದೇನಿದು 1 ಹಣವಿಲ್ಲಾ ಕೈಯೊಳಗೆ ಸ- ದ್ಗುಣವಿಲ್ಲಾ ಮನದೊಳಗೆ ಜನಿತಾರಭ್ಯದಿ ತನುಸುಖವಿಲ್ಲೈ ಘನದಾಯಾಸವ ಅನುಭವಿಸುವದಾಯ್ತು 2 ಪೋದರೆಲ್ಲ್ಯಾದರು ಅಪ- ವಾದವ ಪೇಳ್ವರು ಜನರು ಆದರವಿಲ್ಲೈ ಶ್ರೀಧರ ತವ ಚರ- ಣಾಧಾರವೆ ಇನ್ನಾದರೂ ಕೃಪೆಯಿಡು 3 ಗೋಚರವಿಲ್ಲೆಲೊ ರಂಗ ಎನ್ನ ಪ್ರಾಚೀನದ ಪರಿಭಂಗ ನಾಚಿಕೆ ತೋರದ ಯಾಚಕತನವ- ನ್ನಾಚರಿಸುವ ಕಾಲೋಚಿತ ಬಂದುದು4 ಸೇರಿದೆನೆಲೊ ರಂಗ ಕೃಪೆ ದೋರೆನ್ನೊಳ್ ನರಸಿಂಗ ಭಾರವೆ ನಿನ್ನ ಮೈದೋರಿ ರಕ್ಷಿಸುವುದು ನಾರದನುತ ಲಕ್ಷ್ಮೀನಾರಾಯಣ ಗುರು5
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ಪುಣ್ಯವ ಮಾಡಿ ನಾನಿಂದು ನಿನ್ನ ಕಂಡೆ ದೀನ ವತ್ಸಲ ಸ್ವಾಮಿ ಕೃಷ್ಣ ಪ ಜ್ಞಾನಗಮ್ಯನೆ ನಿನ್ನ ಕಾಣಲು ಮನದಲ್ಲಿ ನಿತ್ಯ ಧ್ಯಾನವ ಮಾಡುವರಯ್ಯ ಅ.ಪ. ಶ್ರುತಿ ಶಾಸ್ತ್ರಗಳನೋದಿ ಮಥನವ ಮಾಡುವ ಮತಿಸಾಧನದಿಂದ ನಿನ್ನರಸುವರೊ ಪತಿತಪಾವನ ನಿನ್ನ ಕರುಣವೊಂದಿಲ್ಲದಿರೆ ಇತರ ಸಾಧನವೆಲ್ಲ ಗತಿದೋರದೋ ಸ್ವಾಮಿ 1 ನಿನ್ನ ಭಕ್ತರು ಮಾಳ್ಪ ಸಾಧನಂಗಳಿಗೆಲ್ಲ ನಿನ್ನ ಕಾರುಣ್ಯವೇ ಕಾರಣವಲ್ಲವೆ ನಿನ್ನ ನುತಿಸ ಬಂದ ನರರ ಕ್ಷೇಮದ ಭಾರ ನಿನ್ನದೆಂದು ತಿಳಿದು ನೀನಾಗಿ ಪೊರೆಯುವೆ 2 ಏನೊಂದು ಸಾಧನವರಿಯದ ಎನಗೀಗ ನೀನಾಗಿ ದಯಮಾಡಿ ಮೈದೋರಿದೆ ಏನು ಧನ್ಯನೊ ನಾನು ಆನಂದಕೆಣೆಗಾಣೆ ದಾನವಾಂತಕ ಸ್ವಾಮಿ ಕರಿಗಿರೀಶನೆ ಕೃಷ್ಣ 3
--------------
ವರಾವಾಣಿರಾಮರಾಯದಾಸರು
ಏನು ಭಾಗ್ಯವೋ ತಾಯೆ ಲಕುಮಿ ನಿನ್ನದೂ ಸಾನು ರಾಗದಿ ಹರಿಯ ಸೇವಿಸುತಲಿರುವಿ ಪ. ಕಂಕಣವು ನೀನಾಗಿ ಹರಿಗೆ ಭುಜಕೀರ್ತಿ ನೀನಾಗಿ ಶಂಕುಚಕ್ರ ಗದಾ ಪದ್ಮ ನೀನಾಗಿ ಶಂಕೆ ಇಲ್ಲದೆ ಕಿಂಕರಳು ನೀನಾಗಿ ಹರಿಸೇವೆಗೆ ಪಂಕಜಾನಾಭನ್ನ ಸೇವಿಸುತಲಿರುವಿ 1 ಅಕ್ಷರಳು ನೀನಾಗಿ ಹರಿಯ ವಕ್ಷಸ್ಥಳವನೇ ಸೇರಿ ಈ ಜುತ ಹರಿಯ ಪರಮ ಸಂತೋಷದಿಂದ ಲಕ್ಷ ಕೋಟಿ ಕೋಟಿ ಬ್ರಹ್ಮಾಂಡರೂಪದಲ್ಲಿರುವ ಪಕ್ಷಿವಾಹನನ ನೋಡಿ ವೆರಗಾಗುತಲಿರುವಿ 2 ರಾಮನಾ ಸತಿಯಾಗಿ ಪ್ರೇಮದಿಂದಲಿ ಈಗ ಕಾಮನಯ್ಯನ ಕಾರುಣ್ಯದಿಂದ ರಮಾವಲ್ಲಭವಿಠಲನ ತೊಡೆಯ ಮೇಲೆ ಕುಳಿತು ಸ್ವಾಮಿಗೆ ಸತಿಯಾಗಿ ಸೇವಿಸುತಲಿರುವಿ 3
--------------
ಸರಸಾಬಾಯಿ
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏನು ಹೇಳಲಿ ಕೂಸಿನ ಚರ್ಯಮಾನಿನಿ ಉಳಿದದ್ದ ಆಶ್ಚರ್ಯ ಪ ಪುಟ್ಟಿದೇಳನೆಯ ದಿನವೆ ಬಾಲಗ್ರಹ ಬಂದುಎಷ್ಟು ಕಾಡಿದಳು ನಮ್ಮಪ್ಪನಸೃಷ್ಟಿಪಾಲಕ ಸಿರಿವಿಷ್ಣು ದಯದಿಂದಕಷ್ಟ ಕಳೆದು ನಮ್ಮ ಕೂಸು ಉಳಿದಿತೇ 1 ಒಂದು ಮಾಸದ ಕೂಸು ಅಂದು ಬಂಡಿಯ ಕೆಳಗೆಹೊಂದಿಸಿ ಮಲಗಿಸಿದ್ದೆನೇ ನಾನುಅಂದು ಹಸಿದು ಮುಖದಿಂದ ಬೆರಳನೆ ಚೀಪಿಬಂಧ ಕಳೆದು ಹೀಂಗೆ ಬದುಕಿತೇ 2 ದುಷ್ಟತನವು ಬಹಳ ಎಂದು ಒರಳಿಗೆಕಟ್ಟಿಹಾಕಿದೆ ಇವನ ಒಂದಿನಾಬೆಟ್ಟದಂತೆರಡು ಮರಗಳು ಬೀಳಲು ಮಧ್ಯ ಪುಟ್ಟ ನಮ್ಮಪ್ಪ ಹ್ಯಾಂಗೆ ಬದುಕಿತೆ 3 ಅಂಗಳದೊಳಗೆ ಆಡುತ ಕುಳಿತಿದ್ದ ಕೂಸಿನಾ-ಮಂಗಳಾ ಘಾಳಿ ಬಂದೊಯಿತೆಅಂಗನೇರೆಲ್ಲರೂ ಅಳುತ ಕೂತೇವಲ್ಲೆ ನರ-ಸಿಂಗನಾ ಕರುಣದಿಂದುಳಿದಿತೆ 4 ನೀರು ಕುಡಿದು ಯಮುನೆ ಮೇಲೆ ಆಡಲು ಕೂಸುಘೋರ ಪಕ್ಷಿಯು ಬಂದು ನುಂಗಿತೆಪೋರರೆಲ್ಲರು ನೋಡಿ ಗಾಬರಿಯಾಗಲು ಮತ್ತೆಕಾರಿತವನ ಬಕ ಸೋಜಿಗವೆ 5 ಕತ್ತೆಗಳನು ಕೊಂದು ತಾಳಫಲವು ಗೋಪ-ಪುತ್ರರಿಗೆ ಉಣ್ಣ ಕೊಟ್ಟಿಹನಂತೆಚಿತ್ರಚರಿತನ ನಂದಬಾಲನ ಚರಿತೆ ಏಕಾವೃತದಿಂದಲಿ ಪೇಳಲಳವೇನೆ 6 ಕರುಗಳ ಕಾಯುತಿರಲು ವತ್ಸವೇಷದಿದುರುಳನೊಬ್ಬನು ಬಂದಿಹನಂತೆಅರಿಯದಾ ಕೂಸಿನಾ ಕಾಲ್ಪಿಡಿದುಬೆರಳ ಮರದ ಮೇಲಕ್ಕೆ ತೂರಿದನಂತೆ 7 ಏಳೇ ವರ್ಷದವ ಕೇಳೆ ಗೋವರ್ಧನಏಳು ದಿವಸ ಎತ್ತಿದನಂತೆಬಾಳುವ ಗೋಪಿಯರ ಪಾಲನೆ ಮಾಡಿದನೀಲವರ್ಣನ ಎಷ್ಟು ವರ್ಣಿಸಲೆ 8 ಬಾಲನಾದರು ನಿನ್ನ ಹಾಳು ದೈತ್ಯನ ಕೊಂದು ಬ-ಹಳ ಕುತ್ತುಗಳಿವೆ ಕೇಳಿದೇನೆಬಾಲಕರಿಬ್ಬರು ಲೋಲರಿಬ್ಬರು ನಮ್ಮ ಬಾಲಕರೇನೇ ಸ್ವರ್ಗಪಾಲನು ಇಳೆಯೊಳು ಉದಯಿಸಿದನೇ 9 ಮಂದಗಮನೆ ಎನ್ನ ಕಂದನಾಟಗಳನ್ನುಮಂದಿಯ ದೃಷ್ಟಿಯ ಭಯದಿಂದ ನಾನುಒಂದೂ ಹೇಳದೆ ಹೀಗಾನಂದ ಬಡುವೆನು ನಾನುಚಂದ್ರವದನೆ ರೋಹಿಣಿ ಕೇಳೆ 10 ಗೋಪಿ ಸುಖಿಸುತಿಹಳು 11
--------------
ಇಂದಿರೇಶರು
ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಪ ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ 1 ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ 2 ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು 3
--------------
ಕನಕದಾಸ
ಏನೆಂದುಸರಲಿ ನಾ ನೆರೆ ಸಂತರಾ | ಸ್ವಾನುಭವಗಳನುವಾಗೀ ಮಾನಿಸಿರೋಳುಸಲೆ ಮಾನಿಸ ಸ್ಥಿತಿಯಲಿ ತಾನಿಹ ಉನ್ಮನಿಯಾಗಿ ಪ ಕಾಮವು ಹರಿಪದ ತಾಮರಸವ ನಿ | ಷ್ಕಾಮದ ಭಕುತಿಗಳಲ್ಲಿ | ಆ ಮಹಾ ಕೋಪವು ಈ ಮನಸಿನ ಗುಣ | ನೇಮಿಸಿ ಶೀಕ್ಷಿಸುವಲ್ಲಿ | ಆ ಮೋಹ ಲೋಭವು ಯಾಮವಳಿಯದಾ | ನಾಮ ಕೀರ್ತನೆಯಲ್ಲಿ | ತಾ ಮರೆಯದ ಅತಿ ವ್ಯಾಮೋಹ ತನ್ನಯ | ಪ್ರೇಮದ ಕಿಂಕರರಲ್ಲಿ 1 ಮದವತಿ ಇಂದ್ರಾದಿ ಪದಗಳ ಸಿದ್ದಿಗೆ | ಳಿದಿರಡೆ ಕಣ್ಣೆತ್ತೆ ಲೆಕ್ಕಿಸರು | ವದಗಿಹ ಮತ್ಸರ ಕುದಿವಹಂಕಾರದ | ಮೊದಲಿಗೆ ತಲೆಯತ್ತಿಸಗುಡರು | ಇದರೊಳು ಸುಖದು:ಖ ಉದಿಸಲು ಹರಿಯಾ | ಜ್ಞದೆಗತಿಗಡ ಸಮಗಂಡಿಹರು | ಉದಕದಲಿ ಕಮಲದ ಎಲೆಯಂದದಿ | ಚದುರತೆಯಿಂದಲಿ ವರ್ತಿಪರು 2 ಜಲದೊಳು ಕಬ್ಬಿಣಸಲೆ ಮುದ್ದಿಯ ನೆರೆ | ನಿಲಿಸದೆ ನಿಲ್ಲದೆ ಮುಣಗುವದು | ಪರಿ | ನಳನಳಿಸುತ ತೇಲುತಲಿಹುದು | ಕಳೆವರ ವೃತ್ತಿಯ ಕಳೆ ಸುವೃತ್ತಿಯ ಮಾಡಿ | ಬೆಳಗಿನ ಘನದೊಳು ಮನ ಬೆರೆದು | ನಲವರು ಮಹಿಪತಿ ವಲುಮೆಯ ಪಡೆಯದ | ಹುಲು ಮನುಜರಿಗಿದು ಭೇದಿಸದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದ್ಹೇಳಲಿ ಸ್ವಾನಂದ ಮಹಿಮೆಯು ಏನೆಂದ್ಹೇಳಲಿ ಮಾ ಧ್ರುವ ವೇದಲ್ಲ ವಾದಲ್ಲ ಭೇದಮಾಡುವದಲ್ಲ ಸಾಧಕರಿಗೆ ತಾ ಸಿಲುಕುದುಮಾ ಓದಲ್ಲ ಶೋಧಲ್ಲ ಗಾದಿಯ ಮಾತಲ್ಲ ಭೇದಿಸಿದರೆ ತಾನು ತಿಳಿವದು ಮಾ 1 ಧ್ಯಾನಲ್ಲ ಮೋನಲ್ಲ ಸ್ನಾನ ಸಂಧ್ಯಾನಲ್ಲ ಙÁ್ಞನಹೀನರಿಗಿದು ತಿಳಿಯದು ಮಾ ನಾನಲ್ಲ ನೀನಲ್ಲ ನಾನುಡಿದ ಮಾತಲ್ಲ ಅನುಭವ ಸಿದ್ಧನು ಬಲ್ಲನು ಮಾ 2 ಸೇವಲ್ಲ ಸೂತ್ರಲ್ಲ ಬಾಹ್ಯನೋಟಿಕೆ ಅಲ್ಲ ಮಹಿಪತಿ ನಿನ್ನೊಳು ತಿಳಿವದು ಮಾ ಕೌತುಕವನು ಕಂಡು ಮಹಾ ಗುರುಕೃಪೆಯಿಂದ ಸಾಯೋಜ್ಯ ಸದ್ಗತಿ ಪಡೆವದು ಮಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆನ್ನುತ್ಹಳಿಯಲಿ ನಿನ್ನ | ನಾನಾವಿಧದಿ ಬೆಳಗುವ ಮಹಮಹಿಮನ ಪ ಸಾಗರ ನಿಲಯನೆಂದೆನಲೇ ನೀಗದ್ವೊಯ್ಕುಂಠ ಮೇಲು ಮಂದಿರನ ರಾಗದಿಂ ದ್ವಾರಕೆ ಪುರಮನೆಯವನೆನಲೇ ಯೋಗದಿಂದಣುರೇಣುತೃಣದಿ ವ್ಯಾಪಕನ 1 ಪನ್ನಂಗ ಹಾಸಿಗೆ ಮಾಡಿಹ್ಯನೆನಲೇ ಉನ್ನತ್ಹಾಸಿಗೆಯ ಮೇಲೆ ಮಲಗಿಕೊಳ್ವವನ ಭಿನ್ನವಿಲ್ಲದೆ ದರ್ಭೆಶಾಯಿಯೆಂದೆನಲೇನು ಚಿನ್ನಮಂಚದ ಮೇಲೆ ಲೋಲ್ಯಾಡುವವನ 2 ಹೊಟ್ಟಿಗ್ಹುಲ್ಲ ತಿಂದವನೆನಲೇ ಶಿಷ್ಟ ದಿವಿಜರಿಟ್ಟ ಮೃಷ್ಟಾನ್ನುಣ್ವವನ ಕೊಟ್ಟ ಹಣ್ಣಿನ ತೋಟ ಹಸಿದು ತಿಂದವನೆನೆ ಸೃಷ್ಟಿ ಈರೇಳಕ್ಕೆ ಅನ್ನ ಕೊಡುವವನ 3 ಅಸುಬಿಟ್ಟ ದಿಕ್ಕಿಲ್ಲದನೆನಲೇ ಅಸಮಲಬಲವುಳ್ಳಂಥ ಯಾದವಾರ್ಯನ ಕುಸುಮನಾಭಂಗೆ ಸಂಸಾರಿಯೆಂದೆನಲೇನು ಎಸೆವ ಪರವಸ್ತು ನಿರ್ಬಯಲು ನಿರ್ಮಯನ 4 ಅಳವಲ್ಲ ಎನಗೆ ನಿನ್ನ ವೊಲಿರೆ ದಿವ್ಯ ಮಹಿಮೆ ತಿಳಿಯುವ ತ್ರಾಣ ಒಲಿದು ಚರಣದಾಸರಾಳಾಗಾಳುವೆನೆಂದು ಇಳೆಯೊಳು ಸಾರುವೆ ನಳಿನಾಕ್ಷ ಶ್ರೀರಾಮ 5
--------------
ರಾಮದಾಸರು
ಏನೋ ಮನವೇ ನೀಹೀಂಗಾದಿ ಧ್ರುವ ಏನೋ ಮನವೇ ನೀ ಹೀಂಗಾದಿ | ಸ್ವಾನಂದ ಸುಖ ತಿಳಿಯದೆ ಬಳದಿ | ಮಾನುಭವರ ವಿಡಿನಿಜ ಹಾದಿ | ಭವ ವ್ಯಾಧಿ 1 ಮಂದ ಮತಿತನ ಬಿಡು ಗುಣದಾ | ಹೊಂದೋ ಸದ್ಗುರುವಿನ ಪಾದಾ | ಛಂದದಿ ಪಡಿಯೋ ನಿಜ ಬೋಧಾ | ಸಂದೇಹ ಬಿಡಿಸೆಚ್ಚರಿಸುವದಾ2 ಹೊಗೆ ಅಗ್ನಿಯ ಮುಸುಕಿಹ ಪರಿಯಾ | ಮಾಯಾ | ಬಿಗಿದಾವರಿಸಿಹುದು ನೋಯಾ | ಬ್ಯಾಗನೆ ತಿಳಿ ಗೆಲುವ ಉಪಾಯಾ 3 ಮುಂದ ಹಾಕಿದ ಹೆಜ್ಜೆಯನು | ಹಿಂದಕ ತಿರುಗಿಸದಿರು ನೀನು | ನಿಂದಿಸಲೊಂದಿಸಲಾರೇನು | ಮುಂದಗಿಡದೆ ಬೆರಿ ವಸ್ತವನು 4 ನಿನ್ನ ಸುದ್ದಿಯು ತಾ ನಿನಗಿಲ್ಲಾ | ಇನ್ನಾರೆ ತಿಳಿತನು ಸ್ಥಿರವಲ್ಲಾ | ಮುನ್ನಿನ ಪರಿಕೆಡುವುದು ಸಲ್ಲಾ | ಮನ್ನಿಸು ಮಹಿಪತಿ ಜನ ಸೊಲ್ಲಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏಳಯ್ಯ ಗುರುವೆ ಬೆಳಗಾಯಿತು ಏಳಯ್ಯ ಗುರುರಾಯ ಏಳಯ್ಯ ಶುಭಕಾಯ ಏಳು ಮಹರಾಯ ಏಳು ಎನ ಜೀಯಾ ಪ ಶೀಲ ನಿನ್ನ ಭಕ್ತರು ಸಾಲು ಸಾಲಾಗಿ ನಿಂತಿಹರೋ ಅ.ಪ ಉದಯಾದ್ರಿ ಶೃಂಗದಲಿ ಉದಿಸಿದನು ಭಾಸ್ಕರನು ಸದಮಲ ಬುಧರೆಲ್ಲ ಮುದದಿಂದಲೀ ಎದ್ದು ನದಿಯ ಸ್ನಾನವ ಮಾಡಿ ಉದಕ ಪುಷ್ಪಗಳಿಂದ ಪಾದ - ಸಂದರುಶನಕೆ ಬಂದಿಹರೋ 1 ನಿತ್ಯ ಭಜಿಸುವ ಜನರೆಲ್ಲ ಹೊತ್ತು ಮೀರಿತು ಎಂದು ಚಿತ್ತ ಶುದ್ಧಿಯಲಿಂದ ಉತ್ತುಮಾರ್ಹಣೆಗಳಾ ತಮ್ಮ ನೆತ್ತಿಯಿಂದಾ ಪೊತ್ತು ಜತ್ತಾಯುತಾಗಿ ನಿಂತಿಹರೋ ಉತ್ತಮಾ ನಿನ ನಿದ್ರೆ ಹೊತ್ತು ಮೀರ್ಯಾಯಿತೊ ಪಾದ ಒತ್ತಿ ಬೋಧಿಸುತಿಹರೋ ಚಿತ್ತಕ್ಕೆ ತಂದು ತ್ವರಿತದಿ ಏಳೋ 2 ವಿಮತಾದ್ರಿ ಕುಲಿಶನೇ ವಿಮಲ ಗಾತ್ರನೇ ಏಳೋ ದಾತ ದಿವಿಜದೃಮನೆ ವಾರಿಧಿ ಎಳೋ ತಾಮರಸಾಂಬಕನೆ ಏಳೋ ಆಮಯ ಧ್ವಂಸಕÀ ನೀನೇಳೋ ಗೋಮತೀ ಕುಮುದ ಸೋಮ ಸಾಂದ್ರನೆ ಏಳೋ - ಶ್ರೀ ಪಾದ ಭೃಂಗನೇ ಏಳೋ ಯಾಮ ಮೀರಿತು ವಿಶ್ವನಿಯಾಮಕ ದೂತನೇ ಸಾಮಗಾಯನ ಲೋಲ ರಮಾ ವಲ್ಲಭಪ್ರೀಯ ಗುರುರಾಜವರ್ಯ 3 ಮೌನಿ ಕುಲರನ್ನ ಮಾನ ನಿಧಿಯೇ ಎನ್ನ ಬಿನ್ನಪವ ಕೇಳಯ್ಯ ಜೀಯಾ ನಿನ್ನ ಭೋಧಿಪಕನ್ಯ ಜನರುಂಟೆ ನಿನ್ನಿಂದ ನೀ ಚನ್ನಾಗಿ ಏಳೋ ಮುನೆÀ್ನ ಮಹ ಕಾರ್ಯಂಗಳೂ ಘನ್ನವಾಗಿರುತಿಹವು ನಿನ್ಹೊರತು ಇನ್ನಾರು ಮಾಳ್ಪರು ಎನ್ನ ನುಡಿ ಈಗ ಚನ್ನಾಗಿ ಮನದಿ ತಂದು ಮನ್ನಿಸೀ ಪೊರೆಯೊ ಧ್ವರಿಯೇ 4 ಸೋತು ಮಲಗಿದೆಯಾ ಪಾತಕಾಂಬುಧಿ ಪೋತನೇ ಮಾತರಿಶ್ವನ ತಾತ ಪಾದ ಭವ ಯುಗ್ಮದಲಿ ಸಂ - ಜಾತವಾಗಿಹ ಸುಧಾ - ಪೀತ ಕಾರಣ ಮದಾ ಸಂ - ಭೂತದಿಂದ ಮಲಗಿದೆಯಾ ಭೂತನಾಥನ ಗುರು ಜಗ - ನ್ನಾಥ ವಿಠಲನ ದೂತ ನಾನೆಂಬ ಗರುವಿಂದ ಮಲಗಿದೆಯಾ 5
--------------
ಗುರುಜಗನ್ನಾಥದಾಸರು
ಏಳು ಲೋಕದಲಿ ಹೇಳುವರು ಅವರಕೀರ್ತಿಕೇಳಿ ಕೇಳಿ ಬಲ್ಲೆವಮ್ಮ ದೂತೆ ಬಹಳ ಬಹಳ ಭಾಗ್ಯವೇನೆ ದೂತೆ ಹೇಳಲ್ವಶವಲ್ಲವೇನೆ ದೂತೆ ಪ. ಕೃಷ್ಣನಂಘ್ರಿ ಕಮಲದಲೆ ನಿಷ್ಠನಾಗಿ ಧರ್ಮರಾಯ ಅಷ್ಟು ರಾಜ್ಯನಾಳುವನೇನ ದೂತೆ 1 ದಿಟ್ಟ ಧರ್ಮರಾಯ ದ್ರವ್ಯ ಶ್ರೇಷ್ಟ ದ್ವಿಜರಿಗೆ ಕೋಟಿಕೊಟ್ಟು ಕೊಟ್ಟು ಕಳಿಸೋನೇನೆ ದೂತೆ 2 ಮಾಧವನ ಭಕ್ತರಿಗೆ ಆದರದಿ ದ್ರವ್ಯ ಸಹಿತಗೋದಾನಗಳು ಕೊಡುವೊನೇನೆ ದೂತೆ 3 ನೀಲವರ್ಣನ ಭಕ್ತರಿಗೆ ಸಾಲಿಗ್ರಾಮ ಕೋಟಿ ಲಕ್ಷಮ್ಯಾಲೆ ದ್ರವ್ಯ ಕೊಡುವೋನೇನೆ ದೂತೆ 4 ಶ್ಯಾಮವರ್ಣನ ಭಕ್ತರಿಗೆ ಪ್ರೇಮದಿಂದ ದ್ರವ್ಯ ಸಹಿತ ಭೂಮಿದಾನ ಕೊಡುವೊನೇನೆ ದೂತೆ5 ಪನ್ನಂಗಶಯನನ ಭಕ್ತರ ಮನ್ನಿಸಿ ದ್ರವ್ಯಗಳಿಂದ ಕನ್ಯಾದಾನ ಮಾಡೋನೇನೆ ದೂತೆ 6 ಉತ್ತಮ ದ್ವಿಜರಿಗೆ ರಾಯ ಮುತ್ತು ಮಾಣಿಕರತ್ನ ಸಹಿತಛತ್ರ ಚಾಮರ ಕೊಡುವೋನೇನೆ ದೂತೆ 7 ಆನೆ ಕುದುರೆ ಅಂದಣವು ನಾನಾ ಭೂಷಣಗಳು ವಸ್ತ್ರಜ್ಞಾನಿಗಳಿಗೆ ಕೊಡುವೊನೇನೆ ದೂತೆ 8 ಸಂಪತ್ತು ದ್ವಿಜರಿಗೆ ಕೊಟ್ಟು ದಂಪತ್ತು ಪೂಜೆಗಳ ಮಾಡಿಗುಂಪು ಗುಂಪು ಕಳುಹೋನೇನೆ ದೂತೆ 9 ಮಿತಿ ಇಲ್ಲದೆ ಅನ್ನ ಮಧ್ವಮತದ ಜನಕೆ ಕೊಟ್ಟುಲಕ್ಷ್ಮೀಪತಿಗೆ ಅರ್ಪಿಸುವನೇನೆ ದೂತೆ 10 ಯದುಪತಿಯ ಭಕ್ತರಿಗೆ ಉದಕ ಪಾತ್ರೆ ಕೊಟ್ಟುರಾಯ ಅಧಿಕ ಕೀರ್ತಿ ಪಡೆಯುವನೇನೆ ದೂತೆ11 ತುಷ್ಟರಾಗಿ ಆಶೀರ್ವಾದ ಕೊಟ್ಟುರಾಯಗೆ ದ್ವಿಜರು ಕೃಷ್ಣಗರ್ಪಿಸೆಂಬೋರೇನೆ ದೂತೆ 12 ರತಿ ಇಟ್ಟು ರಾಮೇಶನಲ್ಲೆ ವ್ರತವ ಕೋಟಿ ಮಾಡಿರಾಯಕೃತ ಕೃತ್ಯನಾಗುವನೇನ ದೂತೆ13
--------------
ಗಲಗಲಿಅವ್ವನವರು
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ