ಒಟ್ಟು 957 ಕಡೆಗಳಲ್ಲಿ , 97 ದಾಸರು , 743 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋರಬೇಡ ದುರ್ವಿಷಯಸುಖಗಳನು ಕೋತಿಮನವೆ ನೀನು ||ಪ|| ಯಾರಿದ್ದರೇನು ನಿನ್ನ ಯೋಗ್ಯತೆಯ ಮೀರಿನಡಯಲಸಾಧ್ಯ ಶತಕಲ್ಪಕು ಅ.ಪ ಕಷ್ಟ ಒದಗಲಿ ನಿಷ್ಠುರ ನುಡಿಯಲಿ ಕೆಟ್ಟವನಿವನೆನಲಿ ಇಷ್ಟ ಬಂಧುಗಳು ಶತ್ರುಗಳಾಗಲಿ ಇಲ್ಲದೆ ನಿಂದಿಸಲಿ ಹೊಟ್ಟೆತುಂಬ ಆಹಾರವಿಲ್ಲದಿರಲಿ ಹುಚ್ಚನೆಂದು ಬೈಯಲಿ ಸಂಕಲ್ಪವು 1 ಬನ್ನ ಅನ್ಯರಂತೆ ತಾನಿರಬೇಕೆಂದಾಯಾಸ ಹೊಂದಬೇಡ ತತ್ವನಂಬಬೇಡ | ಮೂಢಾ 2 ಪರಿಪರಿ ಸಂಕಟ ಬಂದರೂ ನೊಂದು ಪರರ ದೂಷಿಸಬೇಡ ಸ್ಥಿರವೀ ಶರೀರವೆಂದು ನಂಬಿ ಛೀ ಎನಿಸಿಕೊಳ್ಳಬೇಡ ತಿಳಿಯಲೊ ಮೂಢಾ 3
--------------
ಗುರುರಾಮವಿಠಲ
ಕೋಲ ಕೋಲೆನ್ನ ಕೋಲ ಕೃಷ್ಣಯ್ಯನ ನೆನೆದೇವ ಕೋಲ ಪ. ಶಿರವ ದೂಗಿದನೆ ಬ್ರಹ್ಮ ದೂಗಿದನೆಮಂದಗಮನೆಯರ ಭಾಗ್ಯ ಚಂದ್ರ ಸೂರ್ಯರಿಗಿಲ್ಲಇಂದ್ರಗೆ ಇಲ್ಲವೆಂದು 1 ಲೋಕನಾಯಕಗೆ ಏಕಾರತಿಯನೆತ್ತಿ ಗೋಕುಲಾಧೀಶ ಸಲುಹೆಂದುಗೋಕುಲಾಧೀಶ ಸಲುಹೆಂದು ಕೈಮುಗಿದುಏಕೋಭಾವದಲಿ ಕೆಲದೆಯರು2 ಭೂಮಂಡಲಪತಿ ಮುಂದೆ ಮಂಡಲ ಮಾಡಿಅನ್ನಭಾಂಡವ ತಂದು ಇಟ್ಟಾರುಅನ್ನಭಾಂಡವ ತಂದಿಟ್ಟು ಕೈಮುಗಿದಾರುಪುಂಡರಿಕಾಕ್ಷ ಕೈಕೊಳ್ಳೊ 3 ತುಪ್ಪ ಸಕ್ಕರಿಯಲಿ ಪಕ್ವಾದ ಭಕ್ಷ್ಯಮಿತ್ರೆಯರು ತಂದು ಇಡುವೋರುಮಿತ್ರೆಯರು ತಂದಿಟ್ಟು ಕೈಮುಗಿದಾರುಭಕ್ತವತ್ಸಲನೆ ಕೈಕೊಳ್ಳೊ4 ಯಾಲಕ್ಕಿ ಕಸಕಸಿ ಮೇಲಾದ ಪಾಯಸ ಬಾಲೆಯರು ತಂದು ಇಡುವೋರುಬಾಲೆಯರು ತಂದಿಟ್ಟು ಕೈಮುಗಿದಿಹರುಬಾಲಗೋಪಾಲ ಕೈಕೊಳ್ಳೊ5 ಕರ ಮುಗಿದಿಹರುಸುಲಭ ಮೂರುತಿಯೆ ಕೈಕೊಳ್ಳೊ6 ಭೇರಿ ಮೊದಲಾದ ಭೋರೆಂಬೊ ತುತ್ತೊರಿವಾರುಜ ಗಂಟೆ ಮೊದಲಾಗಿವಾರುಜ ಗಂಟೆ ಮೊದಲಾಗಿ ರಂಗನಸಾರುತಲಿವೆ ಸಭೆಯೊಳು 7 ಪಟ್ಟಿದರಸಿಯರು ಇಟ್ಟ ಪದಾರ್ಥವದೃಷ್ಟಿಲಿನೋಡಿ ಸುಖಿಸುತದೃಷ್ಟಿಲಿನೋಡಿ ಸುಖಿಸುತ ಅವರಿಗೆಕೊಟ್ಟಾನು ಬ್ಯಾಗ ಕೈವಲ್ಯ8 ನಿತ್ಯ ಪ್ರಕಾಶಗೆ ಮುತ್ತಿನಾರುತಿಯಸತ್ಯಭಾಮೆಯರು ಮೊದಲಾಗಿಸತ್ಯಭಾಮೆಯರು ಮೊದಲಾಗಿ ಬೆಳಗಿದರುಮತ್ತ ರಾಮೇಶ ಸಲುಹೆಂದು9
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲ ಕೋಲೆನ್ನ ಕೋಲ ಕೋಲ ಶ್ರೀ ಹರಿಯ ನೆನದೇವ ಕೋಲ ಪ. ನಾರಿಯರಿಬ್ಬರಿಗೆ ಹರಿಯು ಕರೆದು ಮಾತಾಡದ್ಹಾಂಗೆ ನೀರೊಳಗೆ ಹೋಗಿ ಅಡಗಿದ ಕೋಲನೀರೊಳಗೆ ಹೋಗಿ ಅಡಗಿದ ರುಕ್ಮಿಣಿಪೋರತನವೆಂದು ಬಿಡಬೇಕು ಕೋಲ 1 ಕೃಷ್ಣ ನಮ್ಮರಮನೆ ಬಿಟ್ಹೋಗ ಬಾರದೆಂದು ಬೆಟ್ಟವ ಮ್ಯಾಲೆ ಹೊರೆಸಿದ ಕೋಲ ಬೆಟ್ಟವ ಮ್ಯಾಲೆ ಹೊರೆಸಿದ ಸತ್ಯಭಾಮೆಗಟ್ಟಿ ಎದೆಯವಳು ಹೌದು ಹೌದು ಕೋಲ 2 ನೀರಜನಯ್ಯಗೆರಡುಕ್ವಾರಿ ಚಿನ್ಹವ ಮಾಡಿ ಮಾರಿಯ ಗುರುತು ಮರೆಸಿದಿ ಕೋಲ ಮಾರಿಯ ಗುರುತು ಮರೆಸಿದಿ ನೀಲಾದೇವಿಧೈರ್ಯ ವಿನ್ನೆಷ್ಟು ಧಮಕೆಷ್ಟು ಕೋಲ 3 ಹರದೆಯರಿಬ್ಬರು ಹರಿಯ ಕರೆದು ಮಾತಾಡದ್ಹಾಂಗೆ ಉರಿಮಾರಿಮಾಡಿ ನಿಲ್ಲಿಸಿದಿ ಕೋಲಉರಿಮಾರಿ ಮಾಡಿನಿಲ್ಲಿಸಿದಿಭದ್ರಾದೇವಿಸರಿಯವರು ನೋಡಿ ನಗುತಾರೆ ಕೋಲ 4 ಕರ ಕರಿಯೆಂದು ಬಿಡಬೇಕು ಕೋಲ 5 ಮಡದಿಯರಿಬ್ಬರು ಹರಿಯ ಕರೆದು ಮಾತಾಡದ್ಹಾಂಗೆ ಕೊಡಲಿಯ ಕೊಟ್ಟು ಬಡವನೆ ಕೋಲ ಕೊಡಲಿಯ ಕೊಟ್ಟು ಬಡವನೆ ಮಾಡಿದ ಕಿಡಿಗೇಡಿತನವ ಬಿಡು ಕಾಳಿ ಕೋಲ 6 ನಲ್ಲೆಯರಿಬ್ಬರು ಹರಿಯ ಎಲ್ಲೆಲ್ಲೂ ಬಿಡದ್ಹಾಂಗೆ ಬಿಲ್ಲನೆ ಕೊಟ್ಟು ನಿಲ್ಲಿಸಿದಿಬಿಲ್ಲನೆ ಕೊಟ್ಟು ನಿಲ್ಲಿಸಿದಿ ಲಕ್ಷಣಾಕಲ್ಲೆದೆಯವಳು ಹೌದ ಹೌದ ಕೋಲ 7 ಒಳ್ಳೆಗುಣಪೂರ್ಣಗೆ ಕಳ್ಳನಂತೆ ಹೆಸರಿಟ್ಟಿಸುಳ್ಳು ನೋಡಿದರೆ ವಿಪರೀತ ಕೋಲ ಸುಳ್ಳು ನೋಡಿದರೆ ವಿಪರೀತ ಜಾಂಬವಂತಿಕೊಳ್ಳಿಯ ಗುಮ್ಮಗುರುವೇನ ಕೋಲ 8 ಮುದ್ದು ಹದಿನಾರು ಸಾವಿರ ಬುದ್ದಿವಂತರ ಕೂಡಿಹದ್ದೆರ್ದಬೌದ್ಧ ಎನುತಲೆ ಕೋಲ ಹದ್ದೆರ್ದಬೌದ್ಧ ಎನುತಲೆ ಬೆನ್ನ ಹತ್ತಲು ಇದ್ದಜನರೆಲ್ಲ ನಗುತಾರೆ ಕೋಲ 9 ನೂರು ಮಂದಿ ಹರಿಯ ದಾರಿಯ ಕಟ್ಟಲು ಹಾರಿದ ಕೃಷ್ಣ ಕುದರಿಯ ಕೋಲ ಹಾರಿದ ಕೃಷ್ಣ ಕುದುರೆ ಏರಿಕೊಂಡುಮಾರಿ ತೋರದಲೆ ಬರಲಿಲ್ಲ ಕೋಲ10 ಚಲ್ವ ರಾಮೇಶ ಎಲ್ಲ ಲಲನೆಯರಿಗೆ ಅಂಜಿಕೊಂಡುಬಲಿಯ ಮನೆ ಮುಂದೆ ಕುಳಿತಾನೆ ಕೋಲ ಬಲಿಯ ಮನೆ ಮುಂದೆ ಕುಳಿತಾನೆ ರುಕ್ಮಿಣಿಕಲಹವ ಬಿಟ್ಟು ಕರೆತಾರೆ ಕೋಲ 11
--------------
ಗಲಗಲಿಅವ್ವನವರು
ಕೋಲನಾಡುತ ಬಂದ ಬಾಲೆಯರು ಕೈಮುಗಿದುನಿಂದು ಮೇಲುಗಿರಿ ವಾಸ ಗೆಲಿಸೆಂದು ಕೋಲ ಪ. ದರ ಕೋಲ1 ಹರಿಯೆ ಸರ್ವೋತ್ತಮ ಹರಿಯೆ ಪರದೈವಹರಿದಾಸರೆಂಬೊ ಬಿರುದಿನ ಕೋಲಹರಿದಾಸರೆಂಬೊ ಬಿರುದಿ£ ಹೆಗ್ಗಾಳೆ ಹೆಬ್ಬಾಗಿಲಲ್ಲೆ ಹೊಯಿಸುತ ಕೋಲ 2 ವಿಷ್ಣು ಸರ್ವೋತ್ತಮ ವಿಷ್ಣುಪರದೈವ ವಿಷ್ಣು ದಾಸರೆಂಬೊ ಬಿರುದಿನ ಕೋಲವಿಷ್ಣು ದಾಸರೆಂಬೊ ಬಿರುದಿನ ಢಕ್ಕಿಯಘಟ್ಯಾಗಿ ತಾವು ಹೊಯಿಸುತ ಕೋಲ 3 ಒಬ್ಬನೆ ವಿಷ್ಣು ಇನ್ನೊಬ್ಬನಿಲ್ಲವೆಂದು ಅಬ್ಬರದಿಂದನಾಗಸ್ವರ ಹೆಗ್ಗಾಳೆ ಕೋಲಅಬ್ಬರದಿಂದ ನಾಗಸ್ವರ ಹೆಗ್ಗಾಳೆಹೆಬ್ಬಾಗಿಲಲ್ಲೆ ಹೊಯಿಸುತ ಕೋಲ4 ಭಾಗವತ ಭಾಗವತ ವೆನ್ನಿ ರಾಮೇಶನಅತಿಭಕ್ತರ ನಡುವೆ ಪಥವೆನ್ನಿ ಕೋಲ 5
--------------
ಗಲಗಲಿಅವ್ವನವರು
ಗಂಗಾ ಭಾಗೀರಥೀ ಮಂಗಳಾಂಗಿ ಅಳಕನಂದನ ನೀ ಮಹಾ ಸುಂದರಾಂಗಿ ಸಿಂಧುರಾಜನ ರಾಣಿ ಸಿರಿಯು ಸಂಪತ್ತು ಕೊಡು ಕಂಗಳಿಂದಲಿ ನೋಡಿ ಕರುಣಿಸೆನ್ನ ಪ ಕಾಶಿ ಪಟ್ಟಣದಲಿ ವಾಸವಾಗಿ ಸರಸ್ವತಿಯನು ಕೂಡಿ ನೀ ಸರಸವಾಗಿ ಸೋಸಿಲಿಂದಲಿ ಸೂರ್ಯಪುತ್ರಿ ಯಮುನೆಯನು ಕೂಡಿ ಉ- ಲ್ಲಾಸದಿದ್ಹರಿದು ವಾರ್ಣಾಸಿಗ್ಹೋಗಿ 1 ಹಾಲಿನಂತೆ ಹರಿವೊ ಗಂಗೆ ನೀನು ನೀಲದಂತಿದ್ದ ಯಮುನೆಯನು ಕೂಡಿ ಲೀಲೆಯಿಂದಲಿ ಸರಸ್ವತಿಯನು ಕೂಡಿ ಓಲ್ಯಾಡುತ ಬಂದೆ ಒಯ್ಯಾರದಿಂದ 2 ಭಗೀರಥನ ಹಿಂದೆ ನೀ ಬಂದೆ ಓಡಿ ಸಗರನ ಸುತರ ಉದ್ಧಾರ ಮಾಡಿ ಜಗವ ಪಾವನ ಮಾಡೋ ಜಾಹ್ನವಿಯೆ ನೀ ಎನ್ನ ಮಗುವೆಂದು ಮುಂದಕೆ ಕರೆಯೆ ತಾಯಿ 3 ಬಿಂದುಮಾಧವ ವೇಣುಮಾಧವನ್ನ ಆ- ನಂದ ಭೈರವ ಕಾಳ ಭೈರವನ್ನ ಚಂದದಿಂದ್ವಿಶ್ವನಾಥನ್ನ ಗುಡಿಮುಂದೆ ಹೊಂದಿ ಹರಿದ್ಹನುಮಂತ ಘಾಟಿನ್ಹಿಂದೆ 4 ಪೊಡವಿ ಮ್ಯಾಲಿಂಥ ಸಡಗರದಿ ಹರಿದು ಕಡಲಶಯನನ್ನ ಕಾಲುಂಗುಷ್ಠದ ಮಗಳು ಕಡಲರಾಣಿಯೆ ಕಯ್ಯ ಪಿಡಿಯೆ ನೀನು 5 ಮರದ ಬಾಗಿಣ ಕುಂಕುಮರಿಷಿಣವು ಗಂಧ ಪರಿಪರಿಯಿಂದ ಪೂಜೆಯಗೊಂಬುವಿ ಸ್ಥಿರವಾದ ಮುತ್ತೈದೆತನ ಜನುಮ ಜನುಮಕ್ಕು ವರವ ಕೊಟ್ಟು ವೈಕುಂಠವನು ತೋರಿಸೆ 6 ಮಧ್ಯಾಹ್ನದಲಿ ಮಲಕರ್ಣಿಕೆಯ ಸ್ನಾನ ಶುದ್ಧವಾಗಿ ಪಂಚಗಂಗೆಯಲಿ ಭವ ಸ- ಮುದ್ರವನು ದಾಟಿಸೆ ಭಾಗೀರಥಿ 7 ಸುಕೃತ ಒದಗಿತೆಂದು ಗಂಗ ಭೆÀಟ್ಟಿಯಾಗೊ ಪುಣ್ಯ ಬಂದಿತಿಂದು ಚಕ್ರತೀರ್ಥದ ಸ್ನಾನ ಸಂಕಲ್ಪದ ಫಲವ ಕೊಟ್ಟು ರಕ್ಷಿಸು ತಾಯಿ ತರಂಗಿಣಿ 8 ಸಾಸಿರ ಮುಖದಿ ಶರಧಿಯನು ಕೂಡಿ ಹೋಗಿ ಬಾ ಊರಿಗೆ ಭಕ್ತಿಮುಕ್ತಿ ನೀಡಿ ನೀನು ಭೀಮೇಶ ಕೃಷ್ಣನಲಿ ಹುಟ್ಟಿದ್ದು ಪಾದವನು ತೋರೆನ್ನ ಪೊರೆಯಬೇಕೆ 9
--------------
ಹರಪನಹಳ್ಳಿಭೀಮವ್ವ
ಗಜಮುಖನೇ ನಿನ್ನ ಭಜಿಸುವೆ ನಾ ಮುನ್ನ ತ್ರಿಜಗ ವಂದಿತನೆ ಸುಜನರ ಪೊರೆವಾ ಪ. ಆಖುವಾಹನನೆ ಲೋಕÀ ಸುಪೂಜಿತ ನೀ ಕರುಣಿಸಿ ಕೊಡು ಏಕಚಿತ್ತ ಹರಿಯೊಳು 1 ಮಗುವೆಂದು ಭಾವಿಸಿ ನಗುತ ಬಂದೂ ಎನ್ನ ಅಘವ ಕಳೆದು ನಿನ್ನಾಗಮನ ವರವ ಕೊಡೆನ್ನಾ 2 ಎನ್ನಪರಾಧವ ಮನ್ನಿಸಿ ಗಣಪಾ ಚನ್ನಿಗ ಶ್ರೀ ಶ್ರೀನಿವಾಸನ್ನ ತೋರೋ ಬೇಗಾ3
--------------
ಸರಸ್ವತಿ ಬಾಯಿ
ಗಜೇಂದ್ರ ಮೋಕ್ಷ ವರಶಂಖಗದೆ ಪದ್ಮಕರದಿ ಚಕ್ರವ ಪಿಡಿದ ಗರುಡಗಮನ ನಮ್ಮ ಕರಿವರದಹರಿಯನ್ನ ನಿರುತ ನೆನೆನೆನೆದು ಬದಿಕಿರಯ್ಯಾ ಪ ಹರಿಧ್ಯಾನ ಹರಿಸೇವೆ ಹರಿಭಕ್ತಿ ಹರಿಚರಿತೆ ದುರಿತದುರ್ಗಕೆಕುಲಿಶ ವರಮುಕ್ತಿಸೋಪಾನ ಕಾಣಿರಯ್ಯಾ ಅ.ಪ. ಕ್ಷೀರಸಾಗರ ಮಧ್ಯೆ ಗಿರಿತ್ರಿಕೂಟ ದೊಳಗೆ ಇರುವುದೂ ಋತುಮಂತ ವರುಣನ ವರವನವು ಅಲ್ಲಿ ಪರಿಪರಿಯ ಲತೆಬಳ್ಳಿ ಸರಸಸ್ಥಾನಗಳಲ್ಲಿ ಮೆರೆವೋರು ಸುರಸಂಘ ನಾರಿಯರ ಸಹಿತಾ 1 ಪದ್ಮಗಾಶ್ರಯವಾದ ಪದ್ಮಕೊಳಾದೊಳಗೆ ಮದಿಸಿದಾ ಗಜವೊಂದು ಐದಿತು ಪರಿವಾರ ಸಹಿತ ವಿಧಿಯ ಬಲ್ಲವರಾರು ಮುದದಿರ್ದ ಆ ಗಜಕೆ ವಿಧಿ ವಕ್ರಗತಿಯಿಂದ ಪಾದವನೆ ಪಿಡಿಯಿತು ನಕ್ರವೊಂದು 2 ಒಂದು ಸಾವಿರ ವರುಷ ಕುಂದದೆಲೆ ಕರಿಮಕರಿ ನಿಂದು ಹೊರಾಡೆ ಸುರವೃಂದ ಬೆರಗಾಯಿತು ಬಂಧು ಬಳಗವು ಮತ್ತೆ ಅಂದ ಹೆಂಡಿರು ಎಲ್ಲ ಕುಂದು ಅಳಿಸದೆ ಇರಲು ಛಂದದಲಿ ಯೋಚಿಸಿತು ಗಜವೂ 3 ಏನಿದ್ದರೇನಯ್ಯ ಶ್ರೀನಿವಾಸನಕೃಪೆಯು ಇನ್ನಿಲದಾಮೇಲೆ ಕುನ್ನಿಗೆ ಸರಿಎಂದು ಹೀನ ಎನ್ನಯ ಜನ್ಮ ದೀನ ಭಾವದಿ ಹರಿಯ ಮಾನವನು ಬದಿಗಿಟ್ಟು ಧ್ಯಾನಿಸಿ ಸ್ತುತಿಸಿದಾ 4 ಸತ್ಯಶಾಶ್ವತಭೋಕ್ತ ಸೃಷ್ಟ್ಯಾದಿಕರ್ಮವಿಗೆ ನಿತ್ಯ ತೃಪ್ತನು ಆದ ಶಾಡ್ಗುಣ್ಯಪರಿಪೂರ್ಣನೆ ವಂದಿಸುವೆನೋ ಓತಪ್ರೋತದಿ ಜಗದಿ ವ್ಯಾಪ್ತ ಆಪ್ತನು ಆದ ಆರ್ತದಲಿ ಕರೆವೆನೋ 5 ಎಲ್ಲಕಡೆಯಲಿ ಇರ್ಪ ಎಲ್ಲರೂಪವ ತಾಳ್ವ ಎಲ್ಲ ಪ್ರೇರಣೆಮಾಳ್ವ ಎಲ್ಲರಿಂ ಭಿನ್ನನಿಗೆ ವಂದಿಸುವೆನೋ ಎಲ್ಲರಿಂ ಉತ್ತಮಗೆ ಎಲ್ಲರಾ ಬಿಂಬನಿಗೆ ಎಲ್ಲರ ವಾಚ್ಯನಿಗೆ ನಲ್ಲನೆಂತೆಂದು ನಾಕರೆವೆನೋ 6 ಎಲ್ಲರನು ಗೆದ್ದವಗೆ ಎಲ್ಲರಾನಲ್ಲನಿಗೆ ಎಲ್ಲ ದೋಷವಿಹೀನ ಒಳ್ಳೆ ಗುಣ ಪೂರ್ಣನ ಕರೆವೆನೋ 7 ನಿನ್ನ ತಿಳಿದವರಿಲ್ಲ ನಿನ್ನ ಮೀರಿದುದಿಲ್ಲ ಜನನ ಮರಣಗಳಿಲ್ಲ ನಿನಗಿಲ್ಲ ಸಮ ಅಧಿಕ ವಂದಿಸುವೆನೋ ನಿನ್ನನಾಮಕೆ ಗುಣಕೆ ನಿನ್ನ ಅವಯವಕೆ ನಿನ್ನ ಕ್ರಿಯ ರೂಪಗಳಿಗೆ ಇನ್ನಿಲ್ಲವೊ ಭೇದಸಾರಿ ನಾಕರೆವೆನೋ 8 ವೇದಗಮ್ಯನುನೀನೆ ವೇದದಾಯಕ ನೀನೆ ವೇದಾತೀತನು ನೀನೆ ಸಾಧು ಪ್ರಾಪ್ಯನುನೀನೆ ವಂದಿಸುವೆನೋ ಖೇದವರ್ಜಿತನೀನೆ ಅಂದ ಸಾರವು ನೀನೆ ಬಂಧನೀಡುವ ನೀನೆ ಅದ್ಭುತ ಅಚಿಂತ್ಯಶಕ್ತಿವಂತನ ಕರೆವೆನೋ 9 ಜ್ಞಾನಿಗೋಚರನೀನೆ ಗುಣಾತೀತನು ನೀನೆ ಗುಣಪ್ರವರ್ತಕನೀನೆ ಅನಾಥ ಸರ್ವಸಮ ವಂದಿಸುವೆನೋ ಜ್ಞಾನದಾಯಕನೀನೆ ಆನಂದಮಯನೀನೆ ನೀನೇ ಸರ್ವಾಧಾರ ನೀನೆ ಏಕನು ಎಂದು ಕೂಗಿ ನಾಕರೆವೆನೋ 10 ಸಾಕಾರ ನಿರಾಕಾರ ಆಕಾರ ಅಹೇಯ ಓಂಕಾರ ವಾಚ್ಯನೆ ಸಾಕಲ್ಯಸಿಗದವನೆ ಸ್ವೀಕಾರ ಮಾಡೋ ವಿಕಾರ ವರ್ಜಿತನೆ ಲೋಕೈಕವೀರಾನೆ ನೀ ಕೆವಲನು ಮುಕ್ತೇಶ ಸಲಹೋ 11 ಏನು ಕೊಡಲೊ ದೇವ ದೀನನು ನಾನಯ್ಯ ನಿನ್ನದೇ ಈ ಭಾಗ್ಯ ಮನ್ನಿಸುತ ದಯಮಾಡಿ ಸಲಹೋ ಘನ್ನಕರುಣಾಳುವೆ ಅನ್ಯರನು ನಾ ನೊಲ್ಲೆ ನಿನ್ನವನು ನಿನ್ನವನೋ ನಿನ್ನ ಚರಣಕೆ ಶರಣು ಶರಣೂ 12 ಕರಿ ತಾನು ಮೊರೆಯಿಡುತ ಕೂಗಲು ಸುರವೃಂದ ಯೋಚಿಸುತ ಹರಿಯಲ್ಲದನ್ಯತ್ರ ಅರಿಯೆವೀಗುಣವೆಂದು ಅರಿತು ಸುಮ್ಮನಿರಲೂ ಹರುಷದಿಂದಲಿ ಹರಿಯು ಗುರುಡನೇರುತ ಬರಲು ತರಿದು ನಕ್ರನ ಭರದಿ ಕರಿಯಪೊರೆಯೆ ಆದ 13 ಏನೆಂದು ವರ್ಣಿಸಲಿ ಶ್ರೀನಿವಾಸನ ಕರುಣ ದೀನ ಭಕ್ತರ ಮೇಲೆ ಸಾನುರಾಗದಿ ಕರಿಯ ಹಿಡಿದೆತ್ತಿದಾ ಇನ್ಯಾಕೆ ಭಯವಯ್ಯ ಘನ್ನ ಇಂದ್ರದ್ಯುಮ್ನನೆ ಏಳು ಮುನ್ನಿನಾ ದೋಷವಿದು ಇನ್ನು ನೀ ಧನ್ಯನಹುದೋ 14 ದೇವಲನ ಶಾಪದಲಿ ಆ ವರ ನಕ್ರನಾಗಿದ್ದ ಶ್ರೀವರನ ಭಕ್ತ ಹೂಹೂ ಗಂಧರ್ವನೆರಗಿ ಬಿದ್ದನು ಹರಿಗೇ ದೇವೇಶ ಹುಸಿನಗುತ ಈವೆ ವರವನು ಕೇಳಿ ಯಾವಾತ ಈ ಕಥೆಯ ಭಾವಶುದ್ಧದಿ ಭಜಿಸೆ ಉದಯದಲಿ ನಾ ಒಲಿವೆ ತವಕದಲಿ ಎಂದನೂ 15 ಹರಿಗೆ ಸಮರಾರಿಲ್ಲ ಹರಿಭಕ್ತ ಗೆಣೆಯಿಲ್ಲ ಸುರರು ಮೊರೆಯಿಟ್ಟರಾಗ ಹರಿವಾಯುಗುರುಗಳು ಕರುಣದಿಂದಲಿ ಇದನು ಮನ್ನಿಪುದು ಬುಧರೂ 16 ಮುದ್ದುಜಯತೀರ್ಥರ ಹೃದಯದಲಿನಲಿಯುವ ಮಧ್ವಾಂತಃಕರಣದಿ ಮುದ್ದಾಗಿ ಕುಣಿಯುವಂಥ ಮಾಧವ ಶ್ರೀಕೃಷ್ಣವಿಠಲರಾಯನು ಬೇಗ ಮೋದ ಸುರಿಸುವ ಈ ಪದವ ಪಠಿಸಲೂ 17
--------------
ಕೃಷ್ಣವಿಠಲದಾಸರು
ಗಣಪತಿ ಶಾರದೆಗೆರಗಿದೆ ಇಂದೇ | ಇಬ್ಬರ ಹೃದಯದಿ ಕರುಣದಿ ಬಂದೆ | ನುಡಿಸಿದರ್ವಚನವ ಒಂದೊಂದು ತಂದೆ | ಕೇಳಿರಿ ಜನರೆಲ್ಲಾ ಕಿವಿಗೊಟ್ಟು ಬಂದೆ 1 ನರನಾಗಿ ಬಂದು ನೀ ಮಾಡಿದಿ ಏನಾ | ತಿಳಿಯದೆ ಬೊಗಳುವಿಯಾತಕೆ ಶ್ವಾನಾ | ಎಳ್ಳಷ್ಟು ಇಲ್ಲದೆ ಹೋಯಿತು ಜ್ಞಾನಾ | ಇನ್ನಾದರೂ ಮಾಡೊ ಸದ್ಗುರುವಿನ ಧ್ಯಾನಾ2 ಮಾಡಲಿಲ್ಲಾ ಪುಟ್ಟಿ ನೀ ದಾನ ಧರ್ಮಾ | ಮಾಡಿದಿ ತಿಳಿಯದೆ ನೀ ಕೆಟ್ಟ ಕರ್ಮಾ | ಆಡಿದಿ ನೀ ಸಾಧುಸಂತರಿಗೊರ್ಮಾ | ನೋಡಿಕೊ ನಿನಗಿಲ್ಲದಾಯ್ತು ಶರ್ಮಾ 3 ಮಾಡಿದ ಬದುಕನು ಸುಮ್ಮನೆ ಕಳೆದೆ | ಮಾಡುವಾಗ ಬಹು ನಿಜವೆಂದು ತಿಳಿದೆ | ನೋಡದೆ ಪೂರ್ವದ ಸುಕೃತವನಳಿದೆ | ರೂಢಿಯೊಳಗೆ ಪಾಮರನಾಗಿ ಬೆಳೆದೆ 4 ಮಾಡುವ ಕರ್ಮಕೆ ಮನವೇ ಸಾಕ್ಷೀ | ಮಾಡುವಿ ಜಪ ನಿನಗ್ಯಾಕೀ ರುದ್ರಾಕ್ಷೀ | ಮಾಡಿದನೇ ಗುರು ಹೀಗೆಂದು ದೀಕ್ಷಾ | ಆಡಲ್ಯಾತಕೊ ನಾಳೆ ಆದೀತೋ ಶಿಕ್ಷಾ 5 ಹುಣಶಿ ಹಣ್ಣ ಹಚ್ಚಿ ಬೆಳಗಿದಿ ಗಿಂಡೀ | ಎಣಕೀ ಶರಣ ಮಾಡಿ ಅಲ್ಲೇನು ಕಂಡೀ | ಸಂತರ ನಿಂದಾ ಬಲು ಮಾಡಿ ಉಂಡೀ | ಅಂತರಂಗದಿ ಇರು ಛೇ ಹುಚ್ಚ ಮುಂಡೀ 6 ಹಗಲೂ ಇರುಳೂ ಎದ್ದುಂಬುವಿ ಕೂಳೂ | ಕೂಳಿಗೆ ಆದಿ ನೀ ಒಬ್ಬರ ಆಳೂ | ಬಲು ಮಂದಿ ಮನೆಯನು ಮಾಡಿದಿ ಹಾಳೂ |ಏನು ಪುಣ್ಯ ಬಂದದ ಅದನಾರ ಹೇಳು 7 ಹಗಲೂ ಇರುಳೂ ಎದ್ದು ಮಾಡಿದಿ ಬದಕಾ | ಮಾಡುತ ಮಾಡುತ ಆದೆಲ್ಲೊ ಮುದುಕಾ | ಸಾಯುವ ತನಕಾ ಬಿಡಲಿಲ್ಲೊ ಚುದಕಾ | ಸತ್ತಮೇಲೆ ನೀ ಆಗುವಿ ಶುನಕಾ 8 ಏನೇನಿಲ್ಲದೆ ಹೋಯಿತು ಬುದ್ಧೀ | ಶಾಸ್ತ್ರ ಪುರಾಣದಿ ಕೇಳಿಲ್ಲ ಸುದ್ದೀ | ಇರುಳ ಕಂಡ ಕುಣಿ ಹಗಲ್ಯಾಕೆ ಬಿದ್ದೀ | ಮರುಳಾದ್ಯಾ ಯಮ ನಾಳೆ ಕೊಂದಾನೊ ಗುದ್ದೀ 9 ಸಂಸಾರ ನಂಬಿದಿ ನಿಜದಲಿ ಹ್ಯಾಂಗ | ಸದ್ಗುರು ಪಾದವ ನಂಬೋ ನೀ ಹಾಂಗ || ಸಂಶಯಾ ಅದಕಂಜಿ ಬಿಟ್ಟರೆ ಈಗ |ಕಾಂಶಿಲಿ ಬಡಿದಾರು ತಿಳಿದೀತು ಆಗ 10 ಬೆಳಕಿನೊಳಗ ಒಂದು ನೋಡುವ ಕಣ್ಣು | ಕತ್ತಲಿಯೊಳ ಗೊಂದು ಕಾಂಬುವ ಕಣ್ಣು | ಕತ್ತಲಿ ಬೆಳಕನ್ನು ನೋಡುವ ಕಣ್ಣು | ಅದ ಬಿಟ್ಟು ಏನ ನೋಡುತಿ ಮಣ್ಣು 11 ಅನುದಿನ ಶಾಸ್ತ್ರ ಪುರಾಣಾ | ಅದರೊಳಗಿನ ಮಾತ ತಿಳಿಯದೆ ಕೋಣಾ || ಅರ್ಥವ ಹೇಳುವಿ ಮಂದಿಗೆ ಜಾಣಾ | ರುವ್ವಿಯ ಬೇಡಲು ಹೋಯಿತು ಪ್ರಾಣಾ12 ಕಂಡರೆ ನೋಡುವಿ ಹೆರವರ ಹೆಣ್ಣು | ಚೆಲುವೆಂದೂ ಇಟ್ಟೆಲ್ಲೊ ಆಕೆಗೆ ಕಣ್ಣೂ | ಆದರೆ ಹತ್ತ್ಯಾವೊ ಆಕೆಯ ಹುಣ್ಣು | ಕಡೆಯಲಿ ಬಿದ್ದಿತು ಬಾಯಲಿ ಮಣ್ಣು 13 ನಿತ್ಯ ತೆಗೆದುಕೊಳ್ಳುವಿ ದೇವರ ತೀರ್ಥಾ | ಮತ್ತಿನ್ನು ಬಿಡಲಿಲ್ಲ ಮನದ ಸ್ವಾರ್ಥಾ || ಕತ್ತೆಯ ಹಾಂಗ ನೀನೊದರುವಿ ವ್ಯರ್ಥಾ | ಎಂದೆಂದಿಗೂ ದೊರೆಯದು ಆ ಪರಮಾರ್ಥಾ 14 ತನುವು ನಾನೆಂಬುವಿ ತನುವಿದು ತೊಗಲು | ತನುವಿಗೆ ಅವ ನೋಡು ಒಂಬತ್ತು ಹುಗಲು | ಚಿಂತಿ ಮಾಡುವದ್ಯಾಕೊ ಹಗಲೂ ಇರುಳೂ | ನಿನ್ನಾಧೀನವು ಹೀಗೆಂದು ಇರಲು 15 ದೂರ ಹೋಗದಿನ್ನು ಆಗದು ಕಾಶೀ | ದೂರ ಮಾಡಿ ಕಳಿ ನೀನು ಮೂರಾಶಿ | ತೀರದು ಶಿವಯೋಗ ಪುಣ್ಯ ರಾಶಿ | ಸೇರುವಿ ಸಾಯುಜ್ಯದಲಿ ಮಿರಾಶಿ 16 ಮಾಯಾ ಮಾಯಾ ಮಾಯಾ | ದುಡ್ಡಿನಂತೆ ಮಾಡೊ ಮನಕೆ ನಿರ್ಮಾಯಾ 17 ಮೀಶಿಯ ಹುರಿ ಮಾಡಿ ಮೇಲಕೆ ನೋಡಿ | ಕಾಲಾಗ ಸಿಕ್ಕವು ಮೋಹದ ಬೇಡಿ || ಮಾಡಬಾರದಂಥ ಕೆಲ್ಸವ ಮಾಡಿ | ಸಿಕ್ಕಿದೆಲ್ಲೊ ಗಾಂಡೂ ಇನ್ನೆತ್ತ ಓಡೀ 18 ಪಾದ ದೊರೆವುದಿನ್ನೆಲ್ಲಿ 19 ಕಾಮನ ಸುಡುವುದು ನೋಡು ಹೀಂಗಲ್ಲಾ | ಕಾಮನ ಶಿವ ಸುಟ್ಟರವ ಸಾಯಲಿಲ್ಲ || ಕಾಮನು ಸುಡುವ ಮೂರು ಲೋಕವನೆಲ್ಲ | ಕಾಮರಹಿತ ಭವತಾರಕ ಬಲ್ಲ 20 ಕಟ್ಟಿದಿ ಮನೆಯನು ನೀ ಬಲು ಛಂದಾ | ಬಿಟ್ಟು ಹೋಗುತಿ ಇದದಾವಂದಾ || ತೊಟ್ಟಿಲೊಳಗೆ ಇದ್ದ ಹೇಳಿದ ಕಂದಾ | ಎಷ್ಟಂತ ಹೇಳಲಿ ನೀ ಮತಿಮಂದಾ 21 ಪಾತಕ ಬರುವದು ಬಿಡಬ್ಯಾಡ ವಾಜಿ | ನೀತಿಯಿಂದಲಿ ಮಾಡು ನೀ ಗುರು ಪೂಜಿ | ಯಾತನ ಬಡಿಸುವ ನಾಳಿನ ಪಾಜಿ 22 ಒದರುವಿ ಯಾತಕೆ ಬಾಯನು ಕಿಸ್ತು | ಬೆದರ ಬೇಡಾದುದಕೆನ್ನು ಅಸ್ತು || ಚತುರ ತನದಲಿ ಸಾಧಿಸು ನೀ ವಸ್ತು |ಆದರಿಂದಲಾಗುವದು ಆ ಮನ ಸ್ವಸ್ತು 23 ಪಾತಕ ಬರುವದು ತಿಳಿಯದೆ ಕೋಳಿ || ನೀತಿಯಿಂದಲಿ ತತ್ತ್ವ್ವ ಮಾತನು ಕೇಳಿ | ಘಾತಕ ಯಮ ನಾಳೆ ಬರುವನು ದಾಳಿ 24 ಭವ ಬಿಟ್ಟಿ | ಮಾಡದೆ ದಾನ ಧರ್ಮವ ಕೆಟ್ಟೀ || ಮಾಡಿದುದೆಲ್ಲಾ ನೀ ಜೋಕಿಲಿ ಇಟ್ಟಿ | ಮಾಡಲು ಬಾಧೆಯ ನೀ ಬಾಯ ಬಿಟ್ಟಿ 25 ನೆನೆದರೆ ದೃಢದಲಿ ರಾಮ ನಾಮ | ತನುವಿದು ಮುಂದೆ ಬಾರದು ನೇಮ || ಮನದೊಳು ಪುಟ್ಟಿತು ತಾನೆ ನಿಷ್ಕಾಮ | ಘನಸುಖ ತೋರಿತು ಅದು ಸಾರ್ವಭೌಮ 26 ಹುಟ್ಟಿ ಹುಟ್ಟಿ ನೀ ಯಾತಕೆ ಸತ್ತೀ | ಹುಟ್ಟುತ ಸಾವುತ ನಿತ್ಯದಿ ಅತ್ತೀ || ಹುಟ್ಟು ಸಾವನ್ನು ಕಳೆಯಲೊ ಕತ್ತೀ | ಕೆಟ್ಟಿಯೊ ಇನ್ನಾರ ಬೆಳಿ ಧರ್ಮಾ ಬಿತ್ತೀ 27 ಶಾಸ್ತ್ರ ಪುರಾಣವ ಓದುವಿ ಬರಿದೇ | ಉತ್ತಮ ಸ್ತ್ರೀಯರ ಕಂಡು ನೀ ಕರೆದೆ || ನಿನ್ನೊಳು ತಿಳಿದು ನೀ ನೋಡುದು ಮರೆದೇ | ಸಾಧು ಸಂತರುಗಳ ಸೇವೆಗೆ ಮರೆದೆ 28 ಪಡಿ ಜೋಳಕೊಬ್ಬರ ಅಡಿಗಳ ಹಿಡಿವೆ | ಕೊಡುವದಿಲ್ಲೆಂದರೆ ದವಡಿಯ ಕಡಿವೆ || ಕೊಟ್ಟರೆ ಮನದೊಳು ಸಂತೋಷ ಪಡುವೆ | ಕೆಟ್ಟ ಮಾರ್ಗದಿಂದ ಕಡೆ ತನಕಾ ನಡಿವೆ 29 ಭವ ಪರಿಹರಿಸುವದಿದು ಏನು ಅರಿದು || ಭವದೊಳು ಬಿಟ್ಟರು ನಾಮವ ಮರೆದು | ಭವಕಿನ್ನು ಕರಸ್ಯಾರೊ ಆತನ ಬರದು 30 ಮಾಡಿದೆ ಏನು ಬದುಕನು ಹೇಳು | ಮಾಡಿದುದೆಲ್ಲಾ ತಿಂದೆಲ್ಲಾ ಕೂಳು || ಕೂಳಿಗಾಗಿ ಆದಿ ಒಬ್ಬರ ಆಳು | ನೋಡಿ ಏನು ಸದ್ಗತಿಯ ಹೇಳು 31 ಮನದೊಳು ಗಳಿಸಿದಿ ಕೆಂಚೀ ಹೊನ್ನು | ಗಳಿಸಿದವರು ಏನು ಒಯ್ದಾರು ಇನ್ನು || ಬಿಟ್ಟು ಹೋದರು ಹ್ಯಾಂಗ ಬಲ್ಲೆಲ್ಲಾ ನೀನು | ನಿಷ್ಠೆಯಿಂದಲಿ ಒಮ್ಮೆ ಹರಗುರು ಎನ್ನು 32 ಮಾಡಲಿಲ್ಲ ಒಂದು ನರನಾಗಿ ಯೋಗಾ | ಮಾಡುವಿ ಸುಖವೆಂದು ಸ್ತ್ರೀಯರ ಭೋೀಗಾ | ಆಡಲ್ಯಾಕೆ ಆಯುಷ್ಯ ಹಾರಿತು ಬೇಗಾ | ನೋಡಿಕೊಳ್ಳೊ ಇನ್ನು ತಿಳಿದೀತು ಈಗಾ 33 ಪರಿ ಸಂಸಾರ ಯುಕ್ತಿ | ಮಾಡಲು ಒಲ್ಲ್ಯೋ ಶ್ರೀ ಗುರು ಭಕ್ತಿ || ಹೋಯಿತೊ ದೇಹದೋಳ್ ನಿನ್ನ ಶಕ್ತಿ | ಸಾಧಿಸಲರಿಯೊ ನೀ ಜೀವನ್ಮುಕ್ತಿ 34 ಅನುದಿನ ವೇದಾ | ಸಾಧಿಸಿ ತಿಳಿಯದೆ ಜೀವಶಿವ ಭೇದಾ || ಕಾದಾಡಿ ಕೊಂಬುವದು ಸುಮ್ಮನೆ ವಾದಾ |ಬ್ಯಾಡಿನ್ನು ಶೋಧಿಸು ನಿನ್ನೊಳು ಬೋಧಾ 35 ಭವ ಬೀಜವ ಕೊಂಬೆ 36 ಮಾಯಾ ಮರವನು ತ್ಯಜಿಸು || ಧ್ಯಾನ ಮುದ್ರೆಯೋಳ್ ಮನವನು ನಿಲಿಸು | ಜಗವಿದು ನಿಜವೇ ನೋಡೆಲು ಕನಸು 37 ರೂಪದೊಳಗಿಲ್ಲಾ ಗುಣವೊಂದು ತೃಣವು | ಗುಣದೊಳಗಿಲ್ಲವು ರೂಪದ ಅಣುವು || ರೂಪ ನಾಮಕ್ರಿಯಾ ಆದೀತು ಹೆಣವು | ಆ ಪರಬ್ರಹ್ಮನೆ ತಿಳಿಯಿನ್ನು ಪ್ರಣವು 38 ಪಾದ | ಅರಿತು ಪೂಜಿಸಿದವ ಪರಶಿವನಾದ || ಅನುಭವಿ ಬಲ್ಲನು ಆ ಸುಖ ಸ್ವಾದ | ತನ್ನೊಳು ಆಲಿಸುತಲಿ ನಿಂತ ನಾದ 39
--------------
ಭಾವತರಕರು
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಗಾಳದ ಪುಳುವಿನಾಶೆಯ ಮೀನ್ಗಳಂತೆ ಮುಂದುಗಾಣರುಹಾಳುಬಾವಿಯ ಪೋಲ್ವ ಭವದಿ ಬಳಲುವ ಜೀವರು ಪ. ಮೇಲೆ ಬಹ ಕಾರ್ಯಜಾಲ ಹಂಬಲಿಸುವಖೂಳ ಜಲಜದ ಕೋಳದೊಳು ಹಲುಬುವಳಿಯಂತೆಕಾಲಪಾಶಕ್ಕೆ ಸಿಕ್ಕಿ ಪುಸಿಯಾಗದೆ ಉಳಿಯಫಾಲದ ಬರಹವ ಮೀರಿ ನಡೆವ ಮನುಜನು ದಾವ 1 ತೈಲ ವಿಕ್ರಯದ ಶೆಟ್ಟಿ ಮೇಲೆ ಬಹ ಲಾಭಗಳಸಾಲ ಯೋಚಿಸಿ ತನ್ನ ಮೂಲಧನವ ನೀಗಿದ ಗಡಬಾಳುವ ಸುತನ ಬಯಸಿ ಮದುವೆಯ ಮಾಡಿದ ಚೆಲ್ವಬಾಲಕಿ ಬದುಕದೆ ಗರ್ಭದೊರಸೆ ಬಿದ್ದುಹೋಗಳೆ2 ಖೂಳಕೊಬ್ಬಿನಲ್ಲುಂಡು ಶಾಲ್ಯಾನ್ನ ದಕ್ಕದಿರೆನಾಳೆಬಹ ಸಂಕಟವನರಿಯದ ಮನುಜನಲ್ಲವೆತಾಳದಮರನÀ ನೆಳಲಿಗೆಂದು ಬಂದು ಕುಳಿತರೆಬೋಳುತಲೆಯಲಿ ಅದರ ಫಲ ಬಿದ್ದು ಸಾಯನೆÉ 3 ಸೂಳೆಯರ ಮೆಚ್ಚಿದವ ಅವರು ಕೊಟ್ಟ ಮದ್ದಿನಿಂದಬೀಳ್ವುದೀ ತನುವೆಂದು ಅಕಟಕಟ ಬಲ್ಲನೆಮಾಳಿಗೆಯ ತೊಲೆ ಮುರಿದು ಮರಣ ಬಂದೀತೆಂದುಲೋಲಾಕ್ಷಿಯರ ಸಂಗಡ ಮಲಗಿದವ ಬಲ್ಲನೆ 4 ಶೂಲಧರ ಖಳನಿಗೆ ವರವ ಕೊಟ್ಟು ಕಂಗೆಟ್ಟುಕೋಲುತಾಗಿದ ಹರಿಣನಂತೆ ಹರಿಯ ಸಾರ್ದಗಡಆಲಸ್ಯಭಯ ಭಕ್ತಿಭರಿತ ನರರೇನ ಬಲ್ಲರುಕೇಳೆಯಾನಋತೇ ಯೆಂಬ ಶ್ರುತಿಯ ಸಂಭ್ರಮವ 5 ಬೊಮ್ಮ ತಾಕಾಲೂರಿ ತಪಗೈದು ಜಗವ ಮಾಡಿದ ಗಡ 6 ಶ್ರೀಲೋಲ ಹಯವದನ ಸರ್ವಸ್ವತಂತ್ರ ತನ್ನತೋಳ ಬಲದಿಂದೊಬ್ಬನೇ ತೊಡಗಿದ ಕಾರ್ಯ ಈಡೇರಿಸುವಈಲೋಕವೆಲ್ಲವಳಿಯಲು ಆಲದೆಲೆಯ ಮೇಲೆಲೀಲೆಯಿಂ ಪವಡಿಸಿ ಸೃಜಿಸಿದಗೆ ಪರರ ಹಂಗೇ 7
--------------
ವಾದಿರಾಜ
ಗಿರಿರಾಜ ಚಿತ್ತವುದಾರ ಜೀಯಾ | ನಾ ನಿನ್ನ ಪಾದಕ್ಕೆರಗಿ ಯಾಚಿಸುತಲಿ ಮುಗಿವೆನು ಕೈಯಾ | ನೆರೆ ನಂಬಿದವರನುಎರವು ಮಾಡಲು ನಿನಗೊಳಿತೇನಯ್ಯಾ | ಪಿಡಿ ಬೇಗ ಕೈಯಾ ಪ ಕರುಣಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವಂಕಟ ಅ.ಪ. ಅಪಾರ ಮಹಿಮಾ ಆಪದ್ಬಂಧೂ | ಆಪನ್ನರ ಪಾಲಿಪ ವ್ಯಾಪಾರ ನಿನಗಲ್ಲದೆ ಮತ್ತೊಂದೂ | ನಾ ಕಾಣೆನೊ ಜಗದಿಭೂಪಾನೆ ಭೂಮಾ ಗುಣ ಗಣ ಸಿಂಧೂ | ಸ್ವಾಮಿಯೆ ಸಿರಿಗೆಂದೂ ||ಪಾಪದ ಪಂಕವು ಲೇಪವಾಗದಂ | ತೀ ಪರಿಪಾಲಿಸೊ ಶ್ರೀಪತಿ ಅಂಜನ 1 ತರು ಜಾತಿ ಮೃಗಪಕ್ಷಿಗಳಾಕಾರ | ಮೊದಲಾದ ರೂಪದಿಸುರರೂ ಕಿನ್ನರರೂ ತಮ್ಮ ಪರುವಾರ | ಒಡಗೂಡಿ ನಿನ್ನಾಶರಣರ ಚರಣಾರಾಧನೆಗೆ ವಿಸ್ತಾರ | ಈ ಬಗೆ ಶೃಂಗಾರಾ ||ದೊರೆತನ ಠೀವಿಗೆ ಧರಣಿ ಮಂಡಲದಿ | ಸರಿಗಾಣೆನೊ ಹೇ ತಿರುಪತಿ ವೆಂಕಟ 2 ಫಣಿ 3 ಕಲಿಯುಗದೊಳಗೀ ಪರ್ವತದಲ್ಲಿ | ಸರಿಗಾಣೆನೊ ಎಂದುನೆಲೆಸೀದೆ ನೀನೆ ಈ ಸ್ಥಳದಲ್ಲಿ | ವೈಕುಂಠಕಿಂತನೆಲೆಯಾ ವೆಗ್ಗಳವೆಂದು ನೀ ಬಲ್ಲಿ | ಅದ ಕಾರಣದಲ್ಲಿ ||ಜಲಜ ಭವಾದ್ಯರು ಒಲಿದೊಲಿಯುತ | ತಲೆದೂಗುವರೈ ಭಳಿರೆ ಕಾಂಚನ 4 ಸುವರ್ಣ ಮುಖರಿ ತೀರವಾಸ | ಆ ಬ್ರಹ್ಮೋತ್ಸವನವರಾತ್ರಿಯಲ್ಲಿ ನೋಡಲು ಶ್ರೀಶ | ಸಂ ಪದವಿಯನಿತ್ತುಕಾವನು ಕಲುಷದ ಭಯ ಬರಲೀಸ | ಶ್ರೀ ಶ್ರೀನಿವಾಸ ||ಶ್ರೀವರ ಭೂಧರ ವ್ಯಾಸವಿಠಲ* ಪ | ರಾವರೇಶ ಶ್ರೀ ದೇವನೆ ದೇವಾ 5
--------------
ವ್ಯಾಸವಿಠ್ಠಲರು
ಗುರು ರಾಘವೇಂದ್ರ ತವ ಚರಣ ದರುಶನಕೆ ಬರಲಿಲ್ಲವೆಂದು ಕೋಪವ ಮಾಡ್ವದ್ಯಾಕೊ ಪ ಧನವಿಲ್ಲ ಕೈಯೊಳಗೆ ತನುವಿನಲಿ ಬಲವಿಲ್ಲಾ ಅನುಕೂಲವಿಲ್ಲವೊ ಎನ್ನ ಮನೆಯೊಳಗೆ ಘನ ಸುಪ್ರಯಾಸ ನಿನ ದಾಸಗೊದಗಿದ ಮೇಲೆ ಎನ ಮೇಲೆ ದೋಷವೇನಿರುವದಿದರೊಳಗೆ 1 ಗೆಲುವಿಲ್ಲ ಮನದೊಳಗೆ ಫಲವಿಲ್ಲ ಸಂಸಾರ ಬಲೆಯೊಳಗೆ ಸಿಲುಕಿ ನಾ ಬೇಸತ್ತೆನೋ ಹಲುಬುವೆನೊ ದಾರಿದ್ರ್ಯ ಬವಣೆಯನು ತಪ್ಪಿಸಿ ಸುಲಭ ಸಾಧನೆ ಪೇಳಿ ಸಲಹೊ ಗುರುವರನೇ2 ಒಂದು ಬಗೆಯನು ತೋರೋ ಇಂದೇ ನಾ ಹೊರಡುವೆನೂ ಛಂದದಿಂದಲಿ ಪರಿವಾರ ಸಹಿತಾ ತಂದೆ ಹನುಮೇಶ ವಿಠಲನ ಕಂದನೆ ನಿನ್ನ ಬಂದು ನೋಡುವೆ ಮಾಡ್ವೆ ಸೇವೆ ತವ ದೂತಾ 3
--------------
ಹನುಮೇಶವಿಠಲ
ಗುರು ವಾದಿರಾಜ ಯತಿಯಾ ನೆನಸುವದು ನಿರುತ ಕರುಣಿಪ ಮತಿಯಾ ಪ ಆರ್ತನಾ ಸರಿದಾರು ನವನ ವರ್ತಮಾನವನೆ ಕೇಳಿ ಕರ್ತೃತ್ವ ಪರಿಹರಿಸಿ ಸಂಸೃತಿಯ ಗರ್ತದಿಂದೆತ್ತಿ ನೋಳ್ಪ 1 ದುರಿತ ರಾಶಿಗಳ ಶೀಳಿ ಹೊರದೆಗೆದು ಮರುತ ಶಾಸ್ತ್ರವನೆ ಪೇಳಿ ಪರಮಾರ್ಥ ಮಾರ್ಗವಾ ತೋರಿ ಸುಖಬಡಿಸಿ ಧರಿಯೊಳಗೆ ಮೆರೆದೆ ಧೀರ 2 ವಂದಿಸಿ ಸೌಂದರ್ಯಪುರಿಯ ವಾಸ ವರಪ್ರದ ನಂದ ಸತ್ಕೀರ್ತಿ ಭೂಪ ವಂದಿಸಿದವರಿಗೆ ಲೇಸಾಗಿ ಕೊಡುವ ಮು ಕುಂದನಂಘ್ರಿಯ ದಾಸ 3 ತೀರ್ಥಯಾತ್ರೆಯನೆ ಮಾಡಿ ಹರಿ ಭೇದಾರ್ಥದಿಂದಲೆ ಕೊಂಡಾಡಿ ಅರ್ಥಾಸೆಗಳ ಈಡಾಡಿ ಹಯಮೊಗನ ಅರ್ಥಿಯಿಂದಲಿ ಪೂಜಿಪ4 ತ್ರಿಜಗದೊಳಗಿನವರಿಗೆ ಎಣೆಗಾಣೆ ಕುಜನ ಮತ ಸೋಲಿಸುವಲ್ಲಿ ವಿಜಯವಿಠ್ಠಲನೆ ದೈವವೆಂದು ಧ್ವಜವೆತ್ತಿ ತಿರುಗಿದ ಮುನಿಪ 5
--------------
ವಿಜಯದಾಸ
ಗುರುಚರಣ ಪೂಜೆಯನು 'ರಚಿಸುವೆನೀಗಪರಮಾತ್ಮನೆಂದೆಂಬ ಸ್ಥಿರಮನದಿ ಬೇಗ ಪವರಮಂತ್ರರೂಪದಲಿ ಗುರು ತಾನು ದಯದಿಂದಭರದಿಂದ ಹೃದಯಮಂದಿರಕೆ ಬರಲಾಗಿಗುರುತರದಹಂಕಾರಶಯನದಿಂ ಮುರಿದೆದ್ದುಬರುವೆನಿದಿರಾಗಿ ಕರೆತರುವೆನೊಡಗೂಡಿ 1ಬ್ರಹ್ಮಕಮಲದಲೊಡೆದು ಜ್ಞಾನನಾಳದಿ ಕೂಡಿರಮ್ಯದಳವೆಂಟುಳ್ಳ ಕಮಲ ಮಧ್ಯದಲಿನಮ್ಮ ಗುರುಮೂರ್ತಿಯನು ಸಂಭ್ರಮದಿ ಕುಳ್ಳಿರಿಸಿವೊಮ್ಮನದಲಘ್ರ್ಯಾದಿಗಳನು ಭಕುತಿಯಲಿತ್ತು 2ಕರಗಳೆರಡುಳ್ಳ ಹರಿ ನಯನವೆರಡರ ಹರನುವರಮುಖ'ದೊಂದರಲಿ ವಾಗೀಶನೆನಿಸಿಪರಿಹರಿಸಿ ಗುಣಗಳನು ಪರಬ್ರಹ್ಮವಾಗಿರುವಗುರುವರನ ಮೂರ್ತಿಯನು ನೆರೆ ನೋಡಿ ಮನದೊಳಗೆ 3ಅ'ವೇಕವಂ ಪರಿದ ಗುರುಪದಕೆ ಪಾದ್ಯವನುಸು'ವೇಕವೆಂಬಘ್ರ್ಯವನು ಸ'ತ ಕೊಟ್ಟುಅ'ವೇಕದಿಂ ಬಂದ ಜೀವಭಾವವ ಬಿಡಿಸಿಕ'ವರನು ನೀನೆಂಬ ಶುದ್ಧಾಚಮನದಿಂದ 4ಪರಮಪಾವನರೂಪ ಸ್ನಾನದುಪಚಾರದಲಿಎರಡಿಲ್ಲವೆಂದೆಂಬ ಶುಭ್ರ ವಸ್ತ್ರದಲಿಬರೆದು ತಾ ಜೀವರೊಳು ಸೂತ್ರಾತ್ಮನಾದಡೆಯು ಬೆರೆಯದಿಹನೆಂತೆಂಬ ಸೂತ್ರೋಪಚಾರದಲಿ 5ಶರಣಾಗತರ ಕಾಯ್ವ ಗುಣಗಣಗಳಾಭರಣಪರಿಪರಿಯ ಕಾಮಗಳ ಹೊದ್ದದನುಲೇಪನೆರೆ ನಿವಾರಿತವಾದ ವಾಸನಾಕ್ಷಯ ಪುಷ್ಪಸರಗಳೀ ಪರಿಭಾವನೆಗಳೆಂಬ ಭಕ್ತಿಯಲಿ 6ಜಡ ದುಃಖ ಪುಸಿಗಳಿಗೆ ಬೇರೆಂಬ ಧೂಪದಲಿಎಡೆಬಿಡದ ಜ್ಯೋತಿಃಸ್ವರೂಪ ದೀಪದಲಿಬಿಡದ ಸುಖದನುಭವದ ದಿವ್ಯ ನೈವೇದ್ಯದಲಿಜಡಕೆ ಮಂಗಳ'ತ್ತ ಬಗೆಯ ತಾಂಬೂಲದಲಿ 7ನಿತ್ಯ ಪ್ರಕಾಶದಲಿ ಪೊಳೆವ ಮಂಗಳ ದೀಪಸತ್ಯದಾಧಾರದಲಿ ಸುಳಿವ ಕರಣಗಳಮತ್ತೆ ಸತ್ಯದೊಳಿರಿಸುತಿಹ ಮಂತ್ರಪುಷ್ಪದಲಿಸುತ್ತುವರಿದಿಹ ವಸ್ತುವೆಂದು ಬಲವಂದು 8ಘನ ಮ'ಮನಂಘ್ರಿಯಲಿ ತನು ಮನಾದಿಗಳನ್ನುನಿನಗೆ ಸಂದುದೆನುತ್ತಲಿತ್ತು ನ'ುಸುತ್ತಾಕನಕಮಯವಾದ ಶ್ರೀ ತಿರುಪತಿಯ ವೆಂಕಟನತನುರೂಪ ನೀಲಕಂಠಾರ್ಯರನು ಬಿಡದೆ 9ಓಂ ಸನಾತನಾಯ ನಮಃ
--------------
ತಿಮ್ಮಪ್ಪದಾಸರು
ಗುರುರಾಯ ನಂಘ್ರಿಯಾ ಹಿಡಿ ಹಿಡಿ ಹಿಡಿ ಪರಮ ಸದ್ಭಾವನೆ ಜಡಿ ಜಡಿ ಜಡಿ ಪ ಎರವಿನಾ ಮನೆಯೊಳು ಸ್ಥಿರವೆಂದು ಮೈಯ್ಯವ | ಮರೆವರೇ ಹರಿನಾಮಾ ನುಡಿ ನುಡಿ ನುಡಿ 1 ಕರವ ಮುಗಿದು ಬಾಗಿ ತರಣೋಪಾಯವ ನಿನ್ನ | ಅರಿತು ಸ್ವಹಿತದಲಿ ನಡಿ ನಡಿ ನಡಿ2 ತಂದೆ ಮಹಿಪತಿ ಕಂದಗೆಚ್ಚರಿಸಿದಾ | ಪಡಿ ಪಡಿ ಪಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು