ಒಟ್ಟು 2013 ಕಡೆಗಳಲ್ಲಿ , 111 ದಾಸರು , 1731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತನೀತನೆ ರಮಾನಿವಾಸನು ಕೇಳಿ ಜನರು ಈತನೀಗ ಚಿದ್ವಿಲಾಸನು ಪ ಈತನೀಗ ಸರ್ವಭೂತ ಜಾತಚೇತನರ್ಗೆ ಸೌಖ್ಯ ದಾತವೇದಶಾಸ್ತ್ರ ವಿಖ್ಯಾತ ಲೋಕೈಕನಾಥ ಅ.ಪ ಬ್ರಹ್ಮರೂಪನಿಂದ ಜಗವ ನಿರ್ಮಿಸುತ್ತತಾನೆ ಸರ್ವ ಕರ್ಮಫಲಗಳನ್ನೆಕೊಟ್ಟು ಶಮನಪಡಿಸುವ ಚರ್ಮವಸ್ತ್ರವುಟ್ಟು ರೌದ್ರ ಕರ್ಮಿಯಾಗಿ ಕಡೆಗೆ ಕಾಲ ಧರ್ಮವನ್ನು ತೋರಿ ಜಲದೊಳೊಮ್ಮೆ ಮಲಗಿತೇಲುತಿರುವ 1 ರಮೆಯನಾಳ್ವ ಭಾಗ್ಯವಂತ ಕ್ಷಮೆಯನಾಳ್ವ ರಾಜ್ಯ ಕರ್ತ ಕಮಲಭವನ ಪಡೆದ ಹಿರಿಯನಮರರೊಡೆಯ ಸುಮಶರನ ಪೆತ್ತ ಚೆಲುವನಮಲ ಗಂಗೆಯಿತ್ತು ನಲಿವ ನಮರ ವೈರಿಗಳನು ಕೊಲುವ ಕಮಲನಾಭ ವಾಸುದೇವ2 ಉರಗಶಯನ ಗರುಡಗಮನ ಪರಮಪದನುಳದು ಶೇಷ ಗಿರಿಯೊಳಿರ್ದು ಬಂದ ವ್ಯಾಘ್ರಗಿರಿಯ ಶಿಖರಕೆ ಭರದಿನಿತ್ಯಮುಕ್ತರೊಡನೆ ಕರದಿ ಶಂಕ ಚಕ್ರ ಪಿಡಿದು ಕರುಣದಿಂದ ಚರಣ ಸೇವಕರನು ಪೊರೆವ ವರದ ವಿಠಲ 3
--------------
ವೆಂಕಟವರದಾರ್ಯರು
ಈತನೆಂಥಮಹಿಮೆ ನೊಡಿರೆ ರಂಗಯ್ಯ ರಂಗ ಈತನೆಂಥ ಮಹಿಮ ನೋಡಿರೆ ಪ ಈತನೆಂಥ ಮಹಿಮ ಓರ್ವ ಮಾತೆಯುದರದಿ ಜನಿಸಿ ಮತ್ತೊಬ್ಬ ಮಾತೆಕೈಯಿಂದ ಬೆಳೆದು ಗೋಕುಲ ನಾಥ ನವನೀತಚೋರನೆನಿಸಿದ ಅ.ಪ ಕಾಳಕೂಟ ವಿಷವ ಕುಡಿಸಿದ ಆ ಮಾಯದೈತ್ಯಳ ಕಾಲನ ಆಲಯಕೆ ಕಳುಹಿದ ಮಡುವನ್ನು ಧುಮುಕಿ ಕಾಳಿ ಹೆಡೆಮೆಟ್ಟಿ ನಾಟ್ಯವಾಡಿದ ಗೋವುಗಳ ಕಾಯ್ದ ಬಾಲನೆಂದೆತ್ತೊಯ್ಯಲು ಬಂದ ಖೂಳ ಶಕಟನ ಸೀಳಿ ಒಗೆದು ಕಾಳಗದಿ ಧೇನುಕನ ತುಳಿದು ಬಾಲಲೀಲೆಯ ತೋರಿ ಮೆರೆದ 1 ಪರಿಪರಿಯ ಮಾಯದಿಂ ಕಾಡ್ವ ಭೂಭಾರಿಯಾಗಿ ಧರಣಿಜನರತಿಶಯದಿ ಬಳಲಿಸುವ ಪರಮಕಂಟಕ ದುರುಳ ಕಂಸನೆಂಬುವನ ಶಿರವ ತರಿದ ಮಾಧವ ಧರಣಿತಾಪವನ್ನೆ ಕಳೆದು ಸೆರೆಯ ಬಿಡಿಸಿದ ಜನನಿ ಜನಕರ ಮಹಿಮೆ ತೋರ್ದ 2 ಗೊಲ್ಲ ಬಾಲರ ಸಮೂಹವನು ನೆರೆಸಿ ಮನೆಯಲ್ಲಿ ಯಾರು ಇಲ್ಲದ ಸಮಯವನೆ ಸಾಧಿಸಿ ಮೆಲ್ಲಮೆಲ್ಲನೆ ಎಲ್ಲ ಬಾಲರ ಒಳಗೆ ತಾ ಹೊಗಿಸಿ ಪಾಲ್ಮೊಸರು ಸವಿಸಿ ಕಳ್ಳ ಕೃಷ್ಣೆಮ್ಮ ನಿಲ್ಲಗೊಡನೆಂದು ಗೊಲ್ಲಸ್ತ್ರೀಯರು ಗುಲ್ಲುಮಾಡಲು ನಿಲ್ಲದೋಡಿ ತಾ ಪುಲ್ಲನಾಭನು ಎಲ್ಲಿ ನೋಡಿದರಲ್ಲೆ ತೋರುವ 3 ಶಿಶುವು ಈತನೆಂದು ಮುದ್ದಿಸುವಾಗ ಕುಶಲದಿಂದಪ್ಪಿ ಅಧರ ಸವಿಯುವ ಎಂಥ ಶಿಶುವನೆ ಹಸುಮಗಾಗೆಳೆದೊಯ್ದು ರಮಿಸುವ ಮಿಸುಗಗೊಡನಿವ ಕಸಿದು ಭಾಂಡ ದೆಸೆದೆಸೆಗೆ ಎಳೆದು ವಸುಧೆಯೊಳು ತನ್ನ ಅಸಮ ಮಹಿಮೆಯ ಪಸರಿಸಿದ ಹರಿ4 ಮಣ್ಣು ತಿಂದು ತಾಯ ಬಳಿಗೈದಕಂದ ಏನಿದು ಮಣ್ಣು ತಿನ್ವರೆ ಉಗುಳೆಂದೆಶೋದೆ ಕಣ್ಣು ತಿರುವÀಲು ತನ್ನ ಬಾಯೊಳ್ಬ್ರಹಾಂಡ ತೋರಿದ ಭಿನ್ನವಿಲ್ಲದ ತನ್ನ ತಾನು ಅರಿಯದೆಶೋದಿನ್ನು ಈರೂಪವಡಗಿಸೆನ್ನಲು ಸಣ್ಣಮಗುವಾಗಿ ಚಿಣುಫಣುವಿಡಿದುನ್ನ - ತೋನ್ನತ ಆಟವಾಡಿದ 5 ಪರಿಪರಿಯಲಿ ಕಾಡ್ವ ಕೃಷ್ಣನ್ನ ವರದೇವಿ ತಡೆಯದೆ ಸರವೆನಡುವಿಗ್ಹಚ್ಚಿ ತರಳನ್ನ ಸರಸರನೆ ಬಿಗಿದು ಒರಳಿಗ್ಹಾಕಿ ಕಟ್ಟಿ ಮುರಹರನ ಮರೆಯಾಗಲಾಕ್ಷಣ ಊರುತಂಬೆಗಾಲು ಊರಬೀದಿಲಿ ಒರಳನೆಳೆಯುತ ಹೊರಗೆ ಹೋಗಿ ತರಗುಳಿರಕಿಲದೊರಳ ಸೇರಿಸಿ ಮುರಿದು ಶಾಪದಿಂ ಮುಕ್ತಮಾಡಿದ 6 ಪುಂಡತನದಿಂ ಸೊಕ್ಕಿಮರೆಯುವ ಆ ರುಗ್ಮನಿಡಿಕೈಯ ಬಂಡಿಗಾಲಿಗೆ ಕಟ್ಟಿ ಶ್ರೀಧರ ರುಗ್ಮಿಣಿಯನ್ನು ಕೊಂಡು ಗೋಕುಲ ಸೇರಿ ವೈಭವ ನಡೆಸಿ ಯಾದವ ರ್ಹಿಂಡಲಿಗೂಡಿಸಿ ಪುಂಡದೇವಿಯುದ್ದಂಡತನದಿ ಕೈ ಕೊಂಡ ಕಲ್ಯಾಣ ಗಂಡುಗಲಿಗಳ ಗಂಡನೆನಿಸಿದ ಹಿಂಡುದೇವರ ಸಾರ್ವಭೌಮ 7 ಚರಣದಾಸರ ಒಡೆಯ ತಾನಾದ ವರ್ಣಿಸಲಳವಲ್ಲ ಚರಣದಾಸರ ದಾಸನೆನಿಸಿದ ಪುಸಿಯಲ್ಲ ಕೇಳಿರಿ ನರನ ಕುದುರೆಯ ವಾಘೆಯನು ಪಿಡುದು ರಥವ ನಡೆಸಿದ ಕರೆಯಲೋಡಿದ ಸರಸಿಯಲ್ಲಿಗೆ ಭರದಿ ಒದಗಿದ ಕುರುಪಸಭೆಯಲ್ಲಿ ಪರಮ ನಿಗಮಗಳ್ಗಿರುವನಗೋಚರ ಸ್ಮರಿಸಿದವರಿಗೆ ಭರದಿ ನೆರವಾದ 8 ತಾಳಿಬಂದ ನಾರಾಯಣಾವತಾರ ಪಾಲಿಸಲು ಜಗವಂ ಬಾಲಗೋಪಾಲ ಭಕ್ತರಾಧಾರ ಗೊಲ್ಲನೆನಿಸಿ ಲೀಲೆನಡೆಸಿದ ಶಾಮಸುಂದರ ಭವಜಾಲಪರಿಹರ ಕಾಳರಕ್ಕಸರೊಳು ಕಾದಿ ನಿರ್ಮೂಲಮಾಡಿ ಜಗಪಾಲಿಸಿದ ತ್ರಿ ಜಾನಕಿಲೋಲ ಶ್ರೀರಾಮ 9
--------------
ರಾಮದಾಸರು
ಈತನೇನೆ ನಿನ್ನ ಮಗನು ಪ ಸೀತಾಪತಿ ರಘುನಾಥನೆಂಬವನು ಅ ವ್ಯಾಸನ ಜನನಿಯ ವಾಸನೆ ತಾಳ್ದನುದೇಶದೊಳಗೆ ಬಲು ಪೆಸರುಳ್ಳವನುನಾಸದೊಳೊರ್ವನ ಪೊತ್ತು ಮುರಿದು ಮು-ನೀಶರ ಶಾಪವ ಪಿಡಿದು ಕೊಂದಾತನು 1 ಶರಧಿ ಶಯನ ಮಾಡಿದಾತನು 2 ಮೂಗ್ರಾಮ ಮುರಿದು ವಾಜಿಯನೇರಿದಾತನುಸಾಗ್ರದಿಂದಿಳೆಯ ಭಾಗ್ಯ ಹಿಂಗಿಸಿದಯೋಗ್ಯದಿಂದ ಬಳಪತಿತನವನಿಗೆಭಾಗ್ಯವಿತ್ತ ಕಾಗಿನೆಲೆಯಾದಿಕೇಶವ 3
--------------
ಕನಕದಾಸ
ಈಶಾ ಕೈಲಾಸವಾಸಾ | ಕಾಶೀನಗರಾಧೀಶಾ | ಶೇಷಭೂಷಣ | ಗಿರೀಶಾ | ವಿಶ್ವೇಶ ಚಿತ್ತವಾಸಾ ಪ ಶಿವಸಿದ್ಧ ಸಾಧ್ಯ ಸೇವ್ಯಾ | ಭವವನಾಶವ ದಿವ್ಯ | ಕವಿ ಪ್ರಿಯ ಜ್ಞಾನ ದ್ರವ್ಯಾ ಹಾ || ಶಿವ ಓಂ ನಮಃ ಶಿವ | ಸÀವಚರಣ ನೋಡುವ | ಪವಿತ್ರ ಚಿತ್ತವ ಕೊಡು | ಧವಳ ಗಂಗಾಧರನೇ 1 ವ್ರಾತ | ಪತಿತ ಪಾವನ ತಾತ | ಕೃತುವೈ ಪದ್ಮಜಾತ ಹಾ || ಕ್ಷಿತಿಯೊಳು ನೀಲಲೋಹಿತ | ನೀನೇ ಗುರುವೆಂದು | ತುತಿಪ ಗತಿಗೆ ರಘು | ಪತಿನಾಮ ಎನಗೀಯೋ 2 ತ್ರಯನೇತ್ರ ಚಿತ್ರಗಾತ್ರ | ನಯ ನಮಿಪರ ಮಿತ್ರ ಜಯ | ಜಯಾಮರ ಸ್ತೋತ್ರ | ದಯಮಾಡೋ ಪುಣ್ಯ ಪಾತ್ರಾ ಹಾ || ಸಿರಿ | ವಿಜಯವಿಠ್ಠಲನ | ಭಕುತಿಯ ಕೊಡು ಅತಿ | ಶಯದಿ ಪಿನಾಕೀಶಾ 3
--------------
ವಿಜಯದಾಸ
ಉಕ್ಕುವ ತುಪ್ಪಕೆ ಕೈಯಿಕ್ಕುವೆ ನಾನು ಪ ಚಕ್ರಧರ ಪರಮಾತ್ಮನೊಬ್ಬನಲ್ಲದಿಲ್ಲವೆಂದು ಅ.ಪ ಕರಿ ಮೊರೆಯಿಡಲು ಕಂಡುನೆರೆದ ಬೃಂದಾರಕರು ಅಂದು ಪೊರೆದರೆ ಬಂದುಕರದಲೊಪ್ಪುವ ಮುತ್ತಿಗೆ ಕನ್ನಡಿಯ ನೋಡಲೇಕೆಭರದಿ ಗಜೇಂದ್ರನ್ನ ಕಾಯ್ದ ಹರಿಯೆ ಪರದೈವವೆಂದು 1 ಮತಾಂತರದಲ್ಲಿ ಭಗವದ್ಗೀತೆಯನದ್ವೈತವೆಂದುವಾತಗುದ್ಧಿ ಕೈಗಳೆರಡು ನೋಯಿಸಲೇಕೆ‘ಏತತ್ಸರ್ವಾಣಿ ಭೂತಾನ್ಯೆಂ’ಬ ಶೃತ್ಯರ್ಥವ ತಿಳಿದುಜ್ಯೋತಿರ್ಮಯ ಕಿರೀಟಿ ಅಚ್ಯುತಾಂತರ್ಯಾಮಿಯೆಂದು 2 ತಾನೆ ಪರಬ್ರಹ್ಮನೆಂಬ ಮನುಷ್ಯಾಧಮನು ತಾನುಜ್ಞಾನಹೀನನಾಗೆ ಲೋಕದಾನವನೆಂದುಭಾನು ಕೋಟಿ ತೇಜೋತ್ತಮ ವರದ ಶ್ರೀಹರಿಯೆಂಬಜ್ಞಾನವೆ ಕೈವಲ್ಯದ ಸೋಪಾನವೆಂದು ಸಭೆಯಲ್ಲಿ 3 ತಪ್ಪಾದ ವಿಚಾರದಿಂದ ತತ್ತರವ ಪಡಲೇಕೆತಪ್ಪು ಶಾಸ್ತ್ರ ವೋದಿ ದೇಹ ದಂಡಿಸಲೇಕೆಕಲ್ಪ ಕಲ್ಪಾಂತರದಲ್ಲಿ ವಟಪತ್ರಶಯನನಾಗಿಮುಪ್ಪು ಮೊದಲಿಲ್ಲದ ಮುಕುಂದನಲ್ಲದಿಲ್ಲವೆಂದು 4 ಶಕ್ತಿ ಶೂನ್ಯನಿವನೆಂದು ಸಂಶಯವ ಪಡಲೇಕೆಕೃತ್ಯದಿಂದ ನೋಡೆ ಶ್ರೀಕೃಷ್ಣನೊಬ್ಬನೆಹತ್ತಾರು ಸಾಸಿರ ನೂರು ಗೋಪಸ್ತ್ರೀಯರನ್ನು ಆಳಿನಿತ್ಯ ಬ್ರಹ್ಮಚಾರಿಯೆನಿಪ ನಿಷ್ಕಳಂಕನೊಬ್ಬನೆಂದು 5
--------------
ವ್ಯಾಸರಾಯರು
ಉಗಾಭೋಗ ಬಡವನಾದವನ ಭವಮಡುವಿನೊಳಗೆನೂಕಿ ಮಿಡುಕಿಸೀನೋಡುವುದು ಥರವೇನೋ ಒಡಲಿಗೋಸುಗ ನಿನ್ನ ಬೇಡ ಬಂದವನಲ್ಲ ದೃಢಭಕ್ತಿ ಜ್ಞಾನಕೊಟ್ಟು ರಕ್ಷಿಸೋಧೊರಿಯೆ ಕಡಲಶಯನ ನಮ್ಮ ಮುದ್ದುಮೋಹನವಿಠಲ ಗಾಢರತಿಯ ಪಾಲಿಸು ಸುಲಭದಿಂದಾ
--------------
ಮುದ್ದುಮೋಹನವಿಠಲದಾಸರು
ಉಡುಪಿಯ ಶ್ರೀಕೃಷ್ಣ ನುಡಿಯ ಲಾಲಿಸು ಮಾಧವ ನುಡಿಯ ಲಾಲಿಸು ಪಾಲಕಡಲಶಯನ ದೇವ ಕಡಗೋಲ ಪಿಡಿದ ನಮ್ಮುಡುಪಿಯ ಶ್ರೀಕೃಷ್ಣ ಪ. ಮಾನವ ಮದವನ್ನು ಮಸರಂತೆ ಮಥಿಸಿದ ಭಾವನ ತೋರುವಿಯೊ ಹಾಗಲ್ಲದಿದ್ದರೆ ದೇವತಗಳಿಗಮೃತವನುಣಿಸಿದನೆಂಬ ಸೋವನು ಸೂಚಿಪೆಯೊ ಸೌಭಾಗ್ಯ ಸಿರಿಯೊ ಸೇವಕರ ಸೇವಾನುಗುಣಫಲ ನೀವ ತರತಮ ಭಾವವೊ ಭವ ನಾವ ನಡೆಸುವ ನಿಪುಣತೆಯೊ ದುರಿ ತಾವಳಿಯ ದೂರೋಡಿಸುವೆಯೊ1 ಕಲಿಯ ಬಲದಿ ಜ್ಞಾನಕಲೆಯಡಗಲು ದೇವ- ರ್ಕಳು ಬಂದು ಸ್ತುತಿಸಲಂದು ಸಕಲಸುರ ತಿಲಕ ವಾಯುವಿನ ಭೂವಲಯದೊಳವ- ಗೊಳುವರೆ ಪೇಳ್ವೆನೆಂದು ನೀ ಮನಕೆ ತಂದು ಹಲವು ಭವದಲಿ ಭಜಿಪೆ ಸಜ್ಜನ ಕುಲಕೆ ಮೋಕ್ಷಾಂತದ ಚತುರ್ವಿಧ ಫಲವ ನೀಡುವೆನೆಂದು ಪವನನಿ- ಗೊಲಿದು ಬಂದೀ ನಿಲಯದೊಳಗಿಹೆ 2 ಸರ್ವಜ್ಞ ಮುನಿಕೃತ ಸಕಲ ಪೂಜೆಗಳನ್ನು ನಿವ್ರ್ಯಾಜದಲಿ ಕೊಳ್ಳುತ ನಿರ್ವಾಹಗೊಳುತ ದುರ್ವಾದಿಪಟಲಾದ್ರಿ ಗರ್ವಾಪಹರ ಶತ ಪರ್ವ ಶಾಸ್ತ್ರವ ಕೇಳುತ ಸಂತೋಷಪಡುತಾ ಪೂರ್ವಸುಪರ್ವ ರಿಪುಗಳ ನಿರ್ವಿಯೊಳಗಡಿಯಿಡಗೊಡದ ಸುರ ಸಾರ್ವಭೌಮ ಶುಭೋನ್ನತಿ ಪ್ರದ 3 ಶ್ರೀನಿಕೇತನ ಸರ್ವ ಪುರುಷಾರ್ಥದಾಯಿಯೆ ನೀನೆಲ್ಲೆ ನೆಲೆಯದೋರಿ ಇರಲಿನ್ನು ಭಜಿಸದೆ ನಾನಾ ದೈವಗಳ ಸೇರಿ ಹಲ್ಲುಗಳ ತೋರಿ ಏನನುಸುರುವೆ ಕೃಷ್ಣ ಬುದ್ಧಿ ವಿ- ಹೀನತೆಯನದನೊ ಮಾನಿಸೆನ್ನ ಕಡಪಾನಿಧಿಯೆ ಪವ- ಪಾದ ಪಲ್ಲವ 4 ದ್ವಾರಾವತಿಯೊಳು ಸಂಸಾರಿ ಭಾವವನೆಲ್ಲ ತೋರಿದ ಕಾರಣದಿ ಅಲ್ಲಿಂದ ಭರದೀ ವಾರುಧಿ ಮಾರ್ಗದ ಸ್ವಾರಿಯ ನೆವನದಿ ಪಾರಿವ್ರಾಜರ ಸೇರಿದಿ ತದ್ಭಕ್ತಿಗೊಲಿದಿ ದೂರ ಭಯದಲಿ ವೆಂಕಟಾದ್ರಿಗೆ ಬಾರದಿಹ ಸಜ್ಜನರ ಮೇಲ್ಕರು- ಣಾರಸಾಮೃತ ಸೂಸುತ್ತಿಲ್ಲಿ ಸರೋರುಹಸ್ಮಿತ ಮುಖ ತೋರುವಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಉತ್ತಮರಸಂಗಯೆನಗಿತ್ತು ಸಲಹೋ ಪ ಚಿತ್ತಜಜನಕ ಸರ್ವೋತ್ತಮ ಮುಕುಂದಅ.ಪ. ತಿರುತಿರುಗಿ ಪುಟ್ಟಲಾರೆ ಪರರ ಬಾಧಿಸಲಾರೆಪರಿಪರಿಯ ಪಾಪಗಳ ಮಾಡಲಾರೆಮರಣ ಜನನಗಳೆರಡು ಪರಿಹರವÀÀ ಮಾಡಯ್ಯ 1 ಏನ ಪೇಳಲಿ ದೇವ ನಾ ಮಾಡಿದ ಕರ್ಮನಾನಾ ವಿಚಿತ್ರವೈ ಶ್ರೀನಿವಾಸಹೀನಜನರೊಳಗಾಟ ಶ್ವಾನಾದಿಗಳ ಕೂಟಜ್ಞಾನವಂತನ ಮಾಡೊ ಜಾನಕೀರಮಣ 2 ನಿನ್ನ ನಂಬಿದ ಮೇಲೆ ಇನ್ನು ಭಯವ್ಯಾತಕೆಪನ್ನಗಾಧಿಪಶಯನÀ ಮನ್ನಿಸಯ್ಯಮುನ್ನ ಭಕುತರನೆಲ್ಲ ಚೆನ್ನಾಗಿ ಪಾಲಿಸಿದಎನ್ನೊಡೆಯ ರಂಗವಿಠಲ ಎನ್ನದೊರೆಯೇ 3
--------------
ಶ್ರೀಪಾದರಾಜರು
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉದರ ಪೂರ್ತಿಯ ಕೊಡದಿರು ಉದಧಿಶಯನ ಪ ಮುದದಿ ನಿನ್ನನು ನೆನೆದು ಮಲಗುವೆನೊ ಸುಖದಿ ಅ.ಪ ಮುದದಿ ನಿನ್ನ ಚರಣವನು ಸ್ಮರಿಸುವುದು | ಪರಿಹಾರವು ಬಹು ಗರ್ವ ಹೆಚ್ಚುವುದು ಎನಗೆ | ಅರವಿಂದನಾಭ ಹರಿ ವರವಿದೆ ನಿನ್ನ ಕೇಳ್ವೆ | ಪರಿಹಾಸ್ಯ ನುಡಿಯಲ್ಲ ಪರಮ ಪಾವನಗೆ 1 ತನುಮನವು ನಿನ್ನ ವಿಷಯಕ್ಕೆರಗಲಿ | ಅನುಮಾನವಿದ್ದ ಪರಿಯೆಲ್ಲ ತೊಲಗಿ || ವನಜಸಂಭವನೈಯ್ಯ ವೈಕುಂಠಪತಿ ನಿನಗೆ | ಅನವರತ ದೊರೆ ಎಂಬೊ | ಘನತೆ ತಪ್ಪದೆ ಇರಲಿ2 ಗಜಮದದಿ ಕಂಗೆಟ್ಟ ಪರಿಯನ್ನ ಮಾಡದೇ | ಅಜಮಿಳಗೆ ಒಲಿದಂತೆ ಎನಗೆ ವೊಲಿದೂ || ಸುಜನ ರಕ್ಷಕನೆಂಬೊ ಬಿರುದು ಬೇಕಾದರೆ | ನಿಜವಾಗಿ ದಯಮಾಡೊ ವಿಜಯವಿಠ್ಠಲನೇ3
--------------
ವಿಜಯದಾಸ
ಉದ್ದರುಸುವದೆನ್ನ ಉದಧಿಶಯನ | ಪಾದ | ಪದ್ಮದ್ವಯಕೆಯಿಂದು ಪ ಅಂದು ನೀ ಪೇಳಿದಂದಲಿ ತೀರ್ಥಯಾತ್ರೆ | ನಿಂದರದೆ ಸಂಚರಿಸಿ ಪುಣ್ಯವೆಲ್ಲಾ | ತಂದು ನಿನಗರ್ಪಿಸಿದೆ ಕೈ ಕೊಂಡು | ತೋರು ತಡಮಾಡದಲೆ ದೇವಾ 1 ಯಾತರವ ನಾನು ನರಮನೆ ಗಾಯಕರ ದೂತರೆಂಜಲನುಂಡು ಬೆಳದ ನರನೋ || ನೋತ ಫಲವಾವದೊ ನೀನೆ ಬಲ್ಲೆಯಾ ಜೀಯಾ | ಮಾತು ಮಾತಿಗೆ ಹಿಗ್ಗಿ ನಗುವ ಚನ್ನಿಗರಾಯಾ2 ಇಷ್ಟೆನ್ನ ಮನದ ಭೀಷ್ಟೆ ಒಂದೆ ವುಂಟು | ಕೃಷ್ಣಾ ಸ್ನಾನ ಕೃಷ್ಣ ಸಂದರುಶನಾ | ಕೊಟ್ಟು ಕೇವಲವಾಗಿ ನಿನ್ನಂಘ್ರಿಯಲಿ ರತಿ | ಇಟ್ಟು ಭಜಿಸುವಂತೆ ಭಾಗ್ಯವನು ಕೊಡೊವೇಗಾ3 ಏನು ಕಡಿಮೆ ನೀನು ಒಲಿದರಾದಡೆ ರಾಮ | ಧೇನು ತರುಮಣಿ ಬಾರದೆ ನಿಲ್ಲವೇ || ಶ್ರೀನಿವಾಸನೆ ನಿನ್ನ | ಲೇಶ ಸುಖವು ತೋರದು ದೇವಾ 4 ವೆಂಕಟಗಿರವಾಸಾ ವೇದ ವಂದಿತ ಚರಣಾ | ಶಂಖ ಚಕ್ರಪಾಣಿ ಕರುಣಾಕರಾ | ಶಂಖಾಣ ನೃಪವರದ ವಿಜಯವಿಠ್ಠಲ ತಿಮ್ಮ ಅಂಕದ ಮೇಲಾಡುವ ಬಾಲನೆಂದು ಬಿಡದೆ 5
--------------
ವಿಜಯದಾಸ
ಉದ್ಧರಿಸಿ ಸಲಹಿವನ ಮಧ್ವಪತಿ ವಿಠಲಾ ಶುದ್ಧ ಬುದ್ಧಿಯನಿತ್ತು ಬಿಡಿಸುಮನ ಚಂಚಲಾ ಪ ಪದಿನಾರ ಶತಕದೊಳು ಮೊದಲು ಜನ್ಮವ ತಾಳಿ ಸದಮಲ ದಾಸರಾಯರ ಪುತ್ರನೆನಿಸಿ ಪದುಮನಾಭನ ಪಾಡಿ ಮುದದಿ ಭವನುತ್ತರಿಸಿ ಯದುಪತಿಯ ಪಾದಾರವಿಂದವ ಪಡೆದನು 1 ಕರ್ದಮ ಬಲದಿ ಉತ್ತುಮರ ಕುಲವಲ್ಲಿ ಸ್ತುತ್ಯಗುರು ಪೂರ್ಣಪ್ರಜ್ಞರ ಮತದಿ ಜನಿಸಿ ವತ್ತರದಿ ದಾಸರಾಯರು ಮಾರ್ಗ ಪೇಳಲು ಮತ್ತೆ ಹರಿಭಕ್ತಿಯಿಂದಲಿ ಜನ್ಮ ತಳೆದಾ2 ನಲನಾಮ ವತ್ಸರದ ಫಲಪುಷ್ಪದಮಾವಾಶ್ಯಾ ಜಲಧಿ ಶಯನನ ದಾಸರಾಯರ ದಿನದಿ ಸುಲಭ ನರಸಿಂಹ ವಿಠ್ಠಲ ಕರುಣಿ ಸಂತತವ ಕಲುಷರಹಿತೇನರಗೆ ಬಲದಿ ಒಲಿದಿತ್ತನು 3
--------------
ನರಸಿಂಹವಿಠಲರು
ಉದ್ಧಾರ ಮಾಡಯ್ಯ ಉಡುಪಿ ನಿಲಯ ಹೃದ್ವನಜದಲಿ ನೆಲಸಿ ಅನುಗಾಲ ನಿನ ತೋರಿ ಪ. ಬಂದೆ ಬಹುದೂರದಲಿ ನಿಂದೆ ತವಚರಣದಡಿ ತಂದೆ ಮುದ್ದುಮೋಹನ ಗುರುಕರುಣದಿಂದ ಕುಂದುಗಳನೆಣಿಸದೆಲೆ ಸಿಂಧುಶಯನನೆ ಹೃದಯ ಮಂದಿರದಿ ಮನೆ ಮಾಡು ಸುಂದರಾತ್ಮನೇ 1 ಜನ್ಮಜನ್ಮಾಂತರದ ಅಜ್ಞಾನಗಳ ಕಳೆದು ಕರ್ಮಸಾಸಿರ ಕಡಿದು ಕರುಣದಿಂದ ರಮೆಯರಸನೆ ನಿನ್ನ ಅನುಗಾಲ ಸ್ಮರಿಪಂಥ ಸನ್ಮಾರ್ಗವನೆ ತೋರೊ ಸರ್ವಲೋಕೇಶ 2 ಜಪತಪಗಳೊಂದರಿಯೆ ವ್ರತ ನೇಮಗಳ ಕಾಣೆ ಉಪವಾಸದುಪಟಳವು ಗತಿ ತೋರದೆನಗೆ ಗುಪಿತಮಾರ್ಗದಿ ನಿನ್ನ ನಾಮಾಮೃತವನುಣಿಸಿ ಅಪಹಾಸಗೊಳಿಸದಲೆ ಆದರಿಸೊ ಜೀಯ 3 ಬೇಡಲೇನನು ನಿನ್ನ ಕಾಡಲೇತಕೆ ನಾನು ದಾತ ನೀ ಸರ್ವಜ್ಞನಿರಲು ಮಾಡುವೆನು ಸಾಷ್ಟಾಂಗ ಬೇಡುವೆನು ಪದದಾಸ್ಯ ನೋಡು ಕರುಣಾದೃಷ್ಟಿಯಿಂದೆನ್ನ ಕಡೆಗೆ 4 ಅಂತರಂಗದಲಿಪ್ಪ ಸರ್ವಾಂತರಾತ್ಮಕನೆ ಚಿಂತನೆಗೆ ನೆಲೆತೋರು ಚಿನ್ಮಯಾತ್ಮಕನೆ ಕಂತುಪಿತ ಗೋಪಾಲಕೃಷ್ಣವಿಠ್ಠಲನೆ ಸಿರಿ ಕಾಂತ ಕಾಪಾಡು ಕಡು ಕರುಣಿ ಮಧ್ವೇಶ 5
--------------
ಅಂಬಾಬಾಯಿ
ಉಪಕಾರವ ನೋಡೋ ಮಾಡಿದ ಪ ಕೃಪೆ ಬೇಡುವುದತಿಶಯವೇ ಪೇಳೊ ಅ.ಪ ಪಾಲಕ ನೀ ಹದಿನಾಲ್ಕು ಜಗಂಗಳಿಗೆ ಮೂಲೆಯ ಗ್ರಾಮದಲಡಗಿ ಬೇಸರದಿ ಕಾಲಕಳೆಯುವುದ ನೋಡಿ ಮರುಕದಲಿ ಬಾಲ ಮೂರುತಿಯ ಜಗಕೆ ತೋರಿಸಿದ 1 ಅಡಕು ಮಣೆಗಳಲಿ ಪೂಜೆಯಗೊಳ್ಳುತ ಒಡಕು ತೊಗರಿ ಹುಳಿಯನ್ನವ ಮೆಲ್ಲುತ ಬಡತನದಲಿ ಜೀವನ ಕಳೆಯುತಿರೆ ಪೊಡವೀಶನ ಭೋಗಗಳನು ಉಣಿಸಿದ 2 ಮಣಿ ಮಂದಿರ ವಿಧ ವಿಧ ಅಂದದ ಮುತ್ತಿನ ಹಾರ ಪದಕಗಳು ತಂದೆ ಪ್ರಸನ್ನನೇ ಸಾಸಿರ ಸಾಸಿರ ಮಂದಿಗಳಿಗೆ ವೈಭವಗಳ ತೋರಿದ 3
--------------
ವಿದ್ಯಾಪ್ರಸನ್ನತೀರ್ಥರು
ಉಂಬುವ ಬನ್ನಿರೋ ನೀಟ ಅನುಭವದೂಟ ಧ್ರುವ ಎಡಿಯು ಬಡಿಸಿಪೂರ್ಣ ಗೂಡಿನೊಳಿಟ್ಟಿದೆ ಖೂನ ನೋಡಿ ನಿಮ್ಮೊಳು ನಿಧಾನ ಮಾಡಿ ಭೋಜನ 1 ತುತ್ತುಕೊಂಬುದು ಬ್ಯಾಗೆ ಸತ್ಸಂಗದಲಿ ನೀವೀಗ ಅತಿಶಯಾನಂದ ಭೋಗ ಉತ್ತಮ ಯೋಗ 2 ಕಲ್ಪನೆಂಬುದು ನೊಣ ಬೀಳಗೊಡದೆ ಜತನ ಬಳೆದುಕೊಂಡುಂಬುವ ಜಾಣ ಕಳೆದನುಮಾನ 3 ಸವಿಸವಿಮಾಡಿಕೊಂಡು ಸೇವಿಸುವದು ಮನಗಂಡು ಪಾವನಾಗಬೇಕು ಉಂಡು ಸವಿಸೂರೆಗೊಂಡು 4 ಉಂಡು ಮಹಿಪತಿ ನೋಡಿ ಕೊಂಡಾದಿಡಾನಂದಗೂಡಿ ಮಂಡಲದೊಳಿದೇ ಮಾಡಿ ಬಿಡದೆ ಸೂರ್ಯಾಡಿ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು