ಒಟ್ಟು 2931 ಕಡೆಗಳಲ್ಲಿ , 105 ದಾಸರು , 1810 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ಶೋಭಿಪ ನೋಡೀ - ಶ್ರೀವ್ಯಾಸ ವಿಠಲಸಂಪುಟವ ಮನೆ ಮಾಡೀ - ವಿಶ್ವಜ್ಞ ತೀರ್ಥರಶಾಂತ ಸೇವೆಯ ಗೂಡೀ - ಮೆರೆಯುತಿಹ ನೋಡೀ ಪ ಕಂತು ಸಿರಿ | ಕಾಂತ ವಿಠಲ ಶಾಂತಮೂರುತಿಸಂತ ಯತಿವರರಂತರಂಗದಿ | ಚಿಂತಿಸುತಲೇಕಾಂತ ಪೂಜೆಗೆ ಅ.ಪ. ಉತ್ತಮ ಮತಿ ಸುದತೇರು - ಛತ್ರಿ ಚಾಮರಗಳಎತ್ತಿ ಬೀಸುತಲಿಹರೋ ||ದ್ರುತ - ಕೃತಿವಾಸನ ಸಖನ ಪರಮ - ಸು | ಹೃತ್ತಮೋತ್ತಮ ಚಿತ್ಸುಖಪ್ರದಚಿತ್ತವಿಸು ಚಿತ್ತಾಖ್ಯ ಪೀಠಿಕೆ | ಸತ್ಯಕಾಮ ಶರಣ್ಯ ಮೂರುತಿ 1 ಕಾಯ ಭವಪಿತ ತೋಯಜಾಕ್ಷನೆ | ದಾಯ ನಿನ್ನದು ಎನ್ನ ಗತಿಗೇಪ್ರೇರ್ಯ ಪ್ರೇರಕ ಶ್ರೀಗುರು | ಗೋವಿಂದ ವಿಠಲನೆ ಕಾಯೋ ಬೇಗ 2
--------------
ಗುರುಗೋವಿಂದವಿಠಲರು
ಎಂತುನುತಿಪೆ ನಾನು-ಈ ಜಗ | ದಂತರ್ಯಾಮಿಯನು ಪ ಸಂತತ ವಾಙÁ್ಮನ ಅ.ಪ. ಸಾಸಿರ ಮುಖದವನ-ಅವಯವ-ಸಾಸಿರವುಳ್ಳವನ ಸಾಸಿರ ಪೆಸರವನ-ರೂಪಿ ಸಾಸಿರವಾಗಿಹನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನು1 ಜಗವನು ನಿರ್ಮಿಸುವ-ಬೊಮ್ಮನು-ಮಗನೆಂದೆನಿಸಿರುವ ಬಗೆಯುವದೀಜಗವ-ಜಠರದಿ-ನುಸುಳಿಸಿಕೊಂಡಿರುವ ಮಗುಳಿದ ನಳಿಯುವ ನಗಚಾಪರಮೊಮ್ಮಗನೆಂಬುವರೀ | ಯಗಣಿತ ಮಹಿಮನ 2 ನಿಗಮವ ಪೆತ್ತವನ-ಬೊಮ್ಮಗೆ-ನಿಗಮವನಿತ್ತವನ ನಿಗಮೋದ್ಧಾರಕನ-ನಿತ್ಯದಿ-ನಿಗಮಗೋಚರನ ಬಗೆಬಗೆಯೋಗಿಗಳ ಧ್ಯಾನಕೆನುಗಳಿದ ಶ್ರೀಪದ ಯುಗಳಾಂಬುಜನನು 3 ಮಾಯಾಧೀಶ್ವರನ-ದೇವನಿ-ಕಾಯಾರಾಧಿತನ ಕಾಯಜ ಸುಂದರನಾ-ಜೀವನಿ-ಕಾಯಕೆ ಮಂದಿರನಾ ಮಾಯಾಕಾರನಿವ ನಾಯವ ನರಿಯದೆ ದಾಯಗೆಟ್ಟರ ನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ- ತರಣಿಯೊಳಿರುತಿಹನ ಶರನಿಧಿ ಮಂದಿರನಾ-ಶ್ರೀ ಪುಲಿಗಿರಿಯೊಳು ನಿಂದಿಹನ ನಿರುತವು ತನ್ನಯ ಚರಣವ ನಂಬಿದ ಶರಣರ ಪೊರೆಯುವ-ವರದ ವಿಠಲನಾ 5
--------------
ಸರಗೂರು ವೆಂಕಟವರದಾರ್ಯರು
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥಾ ಪಾವನ ಪಾದವೋ ಶ್ರೀರಾಮನ ದೆಂಥಾ ಚೆಲುವ ಪಾದವೋ ಪ ಸಂತತವು ಸಜ್ಜನರ ಪಾಲಿಸೆ ನಿಂತು ಧನುವನು ಧರಿಸಿ ಮೆರೆವ ಅ.ಪ ಮುನಿಪತಿ ನುಡಿ ಮನ್ನಿಸಿ ತಪೋವನಕ್ಕನುಜನೊಡನೆ ಗಮಿಸೀ ಮುನಿಯಾಜ್ಞೆಯಿಂ ಘೋರ ತಾಟಕಿಯನೆ ವಧಿಸಿ ವಿನಯದಿ ಯಜ್ಞರಕ್ಷಣೆ ಮಾಡಿ ಮುದವಿತ್ತ 1 ಘನಶಾಪವನು ಕಳೆಯೆ ಮುನಿಯಾಜ್ಞೆಯಿಂ ಘನಶಿಲೆಯ ಮೇಲಡಿಯಿಟ್ಟು ಘನತರ ಮಾನಿನಿಯನು ನಿರ್ಮಿಸಿ ಮೆರೆದ 2 ಗುಹನು ಗಂಗೆಯ ತಟದಿ ದೋಣಿಯ ತಂದು ಗಹನ ಶಂಕೆಯೊಳಂದು ಸಹಜಭಕ್ತಿಯಲಿ ನಿರ್ಮಲಗಂಗೆಯುದಕದಿಂ ದಹಹ ಪಾದರಜವನು ತೊಳೆಯಲೊಪ್ಪಿದ 3 ಹರಧನುವನು ಭಂಗಿಸಿ ಮಿಥಿಲೆಯಲಿ ವರ ವಿಕ್ರಮವ ಮೆರೆಸಿ ತರುಣಿ ಜಾನಕಿಯಂದು ಶಿರದಿ ನಿನ್ನಡಿಗಳಿ ಗೆರಗಲು ಘನ ಶಂಕೆಯಿಂ ಮಾಲೆಯರ್ಪಿಸಿದ 4 ಸಾಧುಗಳ ಪೊರೆಯೆ ಚರಣ ಪಾದುಕೆಗಳ ಶರಣ ಭರತಗಿತ್ತು ಬರಿಗಾಲಲಿ ನಡೆದ ರಘುರಾಮವಿಠಲನ5
--------------
ರಘುರಾಮವಿಠಲದಾಸರು
ಎಂಥಾ ಸ್ಥಿತಿಯೆ ಶ್ರೀರಾಮಗೆ ಪ ಚಿಂತಿತ ಫಲದಗೆ ಚಿಂತಾಪ್ರಾಪ್ತಿಯೆ ಅ.ಪ. ಲೋಕೈಕನಾಥಗೆ ಈ ಕಪಿನಾಥನು ಸು- ಗ್ರೀವನು ನಾಥನೆಂದೆನಿಸುವ ಪರಿಯೆ 1 ಸಕಲ ಲೋಕ ಶರಣ್ಯಗೆ ಕಕುಲತೆಯಿಂದನ್ಯರಲಿ ದೈನ್ಯವೆ 2 ಯಾವನನುಗ್ರಹ ಬೇಡುವರು ಈ ವಿಭುವಿಗೆ ಸುಗ್ರೀವನ ದಯವೆ 3 ಎಲ್ಲರ ದುಃಖವ ಪರಿಹರಿಸುವನಿಗೆ ಇಲ್ಲಿ ಸುಗ್ರೀವನೊಳ್ ದೈನ್ಯದ ಮೊರೆಯೆ 4 ಕರಿಗಿರೀಶನ ಕಾರ್ಯಕೆ ಕಪಿವರ ಪರಿ ಮಾಡಿಸುವುದೆ 5
--------------
ವರಾವಾಣಿರಾಮರಾಯದಾಸರು
ಎಂಥಾದಯವಂತನೋ ಸಂತಾರನಾಥನೋ ಪ ಕಂತೂ ಜನಕಾನ ಪ್ರಿಯ್ಯಾನೋ ಆ - ನಂತಾ ನಂತಾ ಮಹಿಮನೋ ಅ.ಪ ರಮ್ಯಾ ಗುಣಾ ಪೂರ್ಣನೋ - ಆ - ಗಮ್ಯಾ ಸಚ್ಚರಿತಾನೋ ನಮ್ಯಾನತರಾ ಪೊರೆವಾನೋ - ಈತ ನಮ್ಯಲ್ಲಾರ ಸಲಹೋನೋ 1 ಪ್ರಾಣಾವೇಶಾಯುತನೋ - ಜಗ - ತ್ರಾಣಾ ತಾನಾಗಿಹನೋ ಕ್ಷ್ಯೋಣೀಯೋಳ್ವಿಖÁ್ಯತಾನೋ - ಎನ್ನ ಪ್ರಾಣಾUಳಿಗೆ ನಾಥನೋ 2 ಕರುಣಾಶಾಲಿ ಎನಿಪಾನೋ - ತನ್ನ ಚರಣಾ ಸೇವಾ ನೀಡುವನೋ ಶರಣಾಬ್ಜ - ತರಣೀ ಸÀಮನೋ - ಅಂತಃ ಕರಣಾದಲ್ಲಿರುವಾನೋ 3 ಜನನೀ ಜನಕಾರೆನಿಪನೋ - ಸಕಲ ಜನರೀಗೆ ಸಮ್ಮತನೋ ಜನುಮಾ ಜನುಮದಲೀತನೋ - ನಿಶ್ಚಯ ಎನಗೆ ತಾತನೋ 4 ಭೂತಾಳದೊಳು ವಿಖ್ಯಾತನೋ ನಿಜ - ದಾತಾ ಜನರಿಗೆ ಪ್ರೀತನೋ ನೀತಾ ಗುರು ಜಗನ್ನಾಥಾ ವಿಠಲ - ಪ್ರೀತಿಯ ತಾಪೊಂದಿಹನೋ 5
--------------
ಗುರುಜಗನ್ನಾಥದಾಸರು
ಎಂದಿಗೆ ದೊರಕುವನೋ ಪ. ಎಂದಿಗೆ ದೊರಕುವ ಸುಂದರ ಪುರುಷನು ಒಂದು ಗಳಿಗೆ ಯುಗ ಒಂದಾಗಿ ಕಳೆದೆನು ಅ.ಪ. ಸರಿರಾತ್ರಿ ವೇಳ್ಯದಲಿ ಮೆಲ್ಲನೆ ಒಂದು ಸರಸವಾಡುತಲಿ ಪರಿಪರಿ ವಿಧದಲಿ ಸ್ಮರನ ಕಲೆಯ ತೋರಿ ವಿರಹಗೊಳಿಸಿ ನಾಳೆ ಬರುವೆನೆನ್ನುತ ಪೋದ 1 ಕೌಸ್ತುಭ ರತ್ನಾ- ಲಂಕೃತ ಶುಭಗ್ರೀವನ ಶಂಕರಾರ್ಚಿತನು ಮೀನಾಂಕಜನಕ ನಿಷ್ಕ- ಲಂಕ ಮಹಿಮನು ಶ್ರೀವೆಂಕಟರಮಣನು 2 ಅಂಗಜಕೋಟಿರೂಪ ಪರಮ ಸದಯಾ- ಪಾಂಗನಿರತ ನಿರ್ಲೇಪ ಮಂಗಲ ಚರಿತ ಭುಜಂಗಶಯನ ನರ- ಸಿಂಗ ವರದ ಮಾತಂಗ ಶ್ರೀರಂಗನು3 ಚಂದಿರಶತವದನ ಶೋಭಿಪ ನವ ಕುಂದ ಕುಟ್ಮಲರದನ ಸಿಂಧುಶಯನ ಮುಚುಕುಂದಾಪ್ತ ಸಚ್ಚಿದಾ- ನಂದ ಗೋವಿಂದ ಮುಕುಂದ ನಂದನಕಂದ4 ಅಕ್ಷರಾರ್ಚಿತ ದೇವನು ಶರಣ ಜನ ಪಕ್ಷ ಪರಾತ್ಪರನು ಪಕ್ಷೀಂದ್ರ ತುರಗ ಪದ್ಮಾಕ್ಷ ತ್ರಿಲೋಕ ವಿ- ಲಕ್ಷಣಮೂರ್ತಿ ಶ್ರೀಲಕ್ಷ್ಮೀನಾರಾಯಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂದಿಗೆ ದೊರಕುವನೋಪ. ಎಂದಿಗೆ ದೊರಕುವ ಸುಂದರ ಪುರುಷನು ಒಂದು ಗಳಿಗೆ ಯುಗ ಒಂದಾಗಿ ಕಳೆದೆನುಅ.ಪ. ಸರಿರಾತ್ರಿ ವೇಳ್ಯದಲಿ ಮೆಲ್ಲನೆ ಒಂದು ಸರಸವಾಡುತಲಿ ಪರಿಪರಿ ವಿಧದಲಿ ಸ್ಮರನ ಕಲೆಯ ತೋರಿ ವಿರಹಗೊಳಿಸಿ ನಾಳೆ ಬರುವೆನೆನ್ನುತ ಪೋದ 1 ಕೌಸ್ತುಭ ರತ್ನಾ- ಲಂಕೃತ ಶುಭಗ್ರೀವನ ಶಂಕರಾರ್ಚಿತನು ಮೀನಾಂಕಜನಕ ನಿಷ್ಕ- ಲಂಕ ಮಹಿಮನು ಶ್ರೀವೆಂಕಟರಮಣನು2 ಅಂಗಜಕೋಟಿರೂಪ ಪರಮ ಸದಯಾ- ಪಾಂಗನಿರತ ನಿರ್ಲೇಪ ಮಂಗಲ ಚರಿತ ಭುಜಂಗಶಯನ ನರ- ಸಿಂಗ ವರದ ಮಾತಂಗ ಶ್ರೀರಂಗನು3 ಚಂದಿರಶತವದನ ಶೋಭಿಪ ನವ ಕುಂದ ಕುಟ್ಮಲರದನ ಸಿಂಧುಶಯನ ಮುಚುಕುಂದಾಪ್ತ ಸಚ್ಚಿದಾ- ನಂದ ಗೋವಿಂದ ಮುಕುಂದ ನಂದನಕಂದ4 ಅಕ್ಷರಾರ್ಚಿತ ದೇವನು ಶರಣ ಜನ ಪಕ್ಷ ಪರಾತ್ಪರನು ಪಕ್ಷೀಂದ್ರ ತುರಗ ಪದ್ಮಾಕ್ಷ ತ್ರಿಲೋಕ ವಿ-ಲಕ್ಷಣಮೂರ್ತಿ ಶ್ರೀಲಕ್ಷ್ಮೀನಾರಾಯಣ5
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದಿಗೆ ನೀ ಕರುಣಿಸುವಿ ಸುಂದರಾಂಗ ಎನ್ನೊಳು ಕುಂದಿ ಪೋದೆನಲ್ಲೊ ಬೇಗ ಬಂದು ಕಾಯೊ ಕರುಣಾಳು ಪ. ಧರ್ಮ ಕರ್ಮಗಳು ಮಾಳ್ಪ ಮರ್ಮವರಿಯದಿದ್ದರು ಭರ್ಮದಾಶೆಗಾಗಿ ಹೀನ ಕರ್ಮದೊಳಗೆ ಬಿದ್ದರು ದುರ್ಮದಾಂಧರನು ಗೆಲುವ ನಿರ್ಮಲ ಚಿದಾತ್ಮ ನಿನ್ನ ಹಮ್ರ್ಯದ ಮುಂದೊದರಿ ಸರ್ವಶರ್ಮಪೊಂದಿಚ್ಛಿಸುವೆನು 1 ಜೀಯ ನಿನ್ನ ಪೊಗಳಿ ಪಾಡುವಾಯವಿರಲು ಸಾಕಯ್ಯ ರಾಯರೊಲವು ತನ್ನಂತೆ ನಿರಾಯಾಸದಿಂದಹುದೈಯ್ಯ ವಾಯುವೀಯ ಜನರ ಕೂಡಿ ಮಾಯ ಗೆಲಲು ಮಾನವೀಯ ಕಾಯವನ್ನು ನೋಯದಂತೆ ಕಾಯೊ ಸಕಲದಾಯಕಾರಿ 2 ನಿತ್ಯಾನಂದ ನಿನ್ನ ಪಾಡಿ ಹೊತ್ತ ಕಳೆವ ಕಾರ್ಯಕ್ಕೆ ಒತ್ತಿ ಬರುವ ವಿಘ್ನಬಾಧೆ ಹತ್ತದಂತೆ ಓಡಿಸು ಸತ್ಯರಮಣ ಶರಣ ಪುರುಷೋತ್ತಮ ಶ್ರೀ ವೆಂಕಟೇಶ ಚಿತ್ತದಲ್ಲಿ ನಿನ್ನ ದಿವ್ಯ ಮೂರ್ತಿದೋರೊ ಮರಿಯದಿರು 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದಿಗೆ ನೀ ಯೆನ್ನ ಮುಂದಕೆ ಬರುವೆಯೊ ಸುಂದರ ಮೂರುತಿಯೆ ನಂದದಿ ಭಕುತರ ವೃಂದಗಳೆಲ್ಲವ ಸಂದೇಹವಿಲ್ಲದೆ ಮುಂದಕೆ ಕರದೊಯ್ವೆ ಪ ಪಂಕಜಾಕ್ಷನೆ ನೀನು ಕಿಂಕರ ಜನರಾ- ತಂಕಗಳೆಲ್ಲವ ಶಂಕಿಸದೆ ವೆಂಕಟನಾಮಕ ಸಂಕಟಪರಿºರವಿವ- ಳಾಂಕರನÀರವ ನಿಶ್ಶಂಕೆಯಿಂದಲಿಯಿತ್ತು 1 ಆರುವೈರಿಗಳೆನ್ನ ಗಾರುಮಾಡುವರಯ್ಯಾ ಆರು ಕಾವರು ಇಲ್ಲಾ ಮಾರಜನಕನೆ ಪಾರುಗಾಣಿಸದೆ ನೀ ದೂರಗೈಸಲು ಯನ್ನ- ನಾರು ರಕ್ಷಿಪರೊ ದೋಷವಿದೂರನೆ ಪೇಳೋ 2 ಯರಬೆರಡೆನಾಗಿತ್ತು ಪೊರಿಯೋ ದೇವರ ದೇವ ಕರುಣಾಬ್ಧಿ ನೀನೆಂದು ವರವೋದು ಶ್ರುತಿಯು ಶರಣಾಗತನನ್ನು ಪೊರೆಯದೆ ಬಿಡುವಂದು ಸರಿಯೇನೋ ಕರುಣಾಳು ಸಿರಿವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಎಂದಿಗೆ ಶ್ರೀಹರಿಯಾ ಮಾತಿಲಿ ಕಾಲವು ಕಳೆದಲ್ಲಿ ಘನವೇನಿಲ್ಲಯ್ಯ ಪ ಸ್ಥಳಕುಲ ಮೋದಿಸಿ ತಾಂಡವಮೂರ್ತಿಯ ಕುಲನೆನಿಸಿ ಮಾರ್ಗದಲಿ ಕುಲನೆಲೆ ತಿಳಿದು ಕಾಣುತಹೋಗುವ ನೆನೆಗಳ್ಳರ ಕೂಡೆ ಚಲೊ ಚಲೊ ಬೋಧಿಗೆ ಒಳಗಾಗಿ ಮಧುರಸ ಚಂಚಲ ನತಿ------ದು ಭಲ ಭಲ ಎನಿಸಿಕೊ ಬೇಗನೆ ಪರಮ ಭಕ್ತರ ಒಳಗೆಂದೂ 1 ಸರಸರ ಮಾರ್ಗದ ಸರಳಿಯ ತಿಳಿದಾ ಶರಣರ ನೆಲೆಗಾಣೊ ನೆರೆಹೊರೆಲಿರುವರ ಕರಕರಿಗಳುಯೆಂಬ ಕಲ್ಮಿಷ-----ಕಾಣೊ ಹರಿಗುರು ಕರುಣಾದಿ ಅಂತರಂಗದಿ ಅರಿತಿರುವರ ಕೂಡೋ ಪರಿ ಪರಿಯಲಿ ಆ ಭಂಡಾರದ ಗುರುಭಾರವು ನೀನೋಡೊ 2 ಮನಘನ ಕಾಂತಿಯ ಮಹಿಮೆಯ ತಿಳಿದಾ ಮರ್ಮಜ್ಞರ ಬೆರಿಯೊ ದಿನ ದಿನ ಸಂಭ್ರಮವನು ಅಘಸರಿಸಿ ದೃಢಭವವು ಪಿಡಿಯೊ ತನುವನು------ದ್ರಿಸಿ ತಾರಕ ಜಪಿಸಿ ಧನ್ಯನಾಗೊ ಇನ್ನೂ ದೀನಜನ ರಕ್ಷಕ ಧೀರ 'ಹೆನ್ನೆ ವಿಠ್ಠಲನ’ ಧಿಟ್ಟದಿ ಸ್ಮರಿಸಿನ್ನು 3
--------------
ಹೆನ್ನೆರಂಗದಾಸರು
ಎಂದಿಗ್ಹ್ಯೋದೀತಯ್ಯಾ ಹರಿ ಹರೀ ಎಂದು ಮುಳುಗೀತಯ್ಯಾ ಪ ಎಂದಿಗ್ಹೋದೀತು ಸುಖ ಅಂದಗೆಡಿಪ ಮಹ ಮಂದಮತಿಯು ಎನ್ನಿಂದ ಬಿಟ್ಟು ದೂರ ಅ.ಪ ಕತ್ತಲ ಕಾಳಿದು ಎನ್ನನು ಸುತ್ತಿಕೊಂಡು ಸೆಳೆದು ಸತ್ಯಮರೆಸಿ ಸ್ಥಿರಚಿತ್ತ ಕೆಡಿಸಿ ಪಿಡಿ ದೆತ್ತಿ ಹಾಕುತಿದೆ ಮತ್ತೆ ಭವಬಂಧದಿ 1 ಮುಂದರಿಗೊಡದಿದು ನಿರುತದ ಅಂದವ ತಿಳಿಗೊಡದು ಬಂಧಿಸಿ ಬಲುಘೋರಾಂಧಕಾರ ಮುಚ್ಚಿ ಸಂದಿನೊಳ್ನೂಕೆನ್ನ ಕೊಂದು ತಿನ್ನುತಿದೆ 2 ತೆರೆದು ನೋಡಲೀಯದು ಕಣ್ಣಿಗೆ ಪರದೆಯ ಹಾಕುವುದು ನರಹರಿಶರಣರ ಕರುಣಮಂ ತಪ್ಪಿಸಿ ಪರಮ ಶ್ರೀರಾಮ ನಿಮ್ಮ ಚರಣ ದೂರೆನಿಪುದು 3
--------------
ರಾಮದಾಸರು
ಎಂದು ಕಾಣ್ವೆನೊ ಇಂದಿರೇಶನ ದಿವ್ಯಚರಣ ಎಂದು ಕಾಣ್ವೆನು ಪ ಎಂದು ಕಂಡಾನಂದಿಸುವೆನು ಮಂದರೋದ್ಧರ ಸಿಂಧುಶಾಯಿಯ ಸುಂದರ ಪಾದಾರವಿದಂಗಳನು ನಿಂದು ಮನದಣಿ ನೇತ್ರದಿಂದ ಅ.ಪ ದನುಜಾರಿಯ ಘನಮಹಿಮೆ ಜನಕಜೆಯ ಪ್ರಾಣಪ್ರಿಯನ ಮಿನುಗುವ ದಿನಮಣಿಕೋಟಿತೇಜೋಮಯನ ಘನಕೋಮಲ ನಿಜರೂಪ ಕಣ್ಣಿಲಿಂ ನೋಡ್ಹಿಗ್ಗುವ ದಿನ 1 ಕರಿಯ ಕಾಯ್ದನ ಕರುಣದಿಂದ ತರುಣಿಗ್ವಂದನ ಶರಣೆನುತ ಮರೆಬಿದ್ದವಗೆ ಸ್ಥಿರಪಟ್ಟವ ಕರುಣಿಸಿದನ ಕಾಲ 2 ಪಕ್ಷಿಗಮನನ ಲಕ್ಷ್ಮೀನಾಥ ಸಹಸ್ರಾಕ್ಷಶಯನನ ಲಕ್ಷವಿಟ್ಟು ಭಕ್ತರನ್ನು ರಕ್ಷಿಸಿ ಭಕ್ತವತ್ಸಲನೆಂಬ ನೋಡುವ ಪದವಿ 3
--------------
ರಾಮದಾಸರು
ಎಂದು ಕಾಂಬುವೆ ನಿನ್ನ ಚರಣ ನಾರಾಯಣತಂದು ತೋರಯ್ಯ ನಾ ಬಂದೆನು ಶರಣ ಪ ನಿತ್ಯ ಒತ್ತುವ ಚರಣತೋರ ಗಂಗೆಗೆ ಜನ್ಮ ಕೊಟ್ಟಂಥ ಚರಣಮೂರು ಲೋಕವ ಹಿಡಿದ ಚರಣನಾರಿ ಅಹಲ್ಯೆಯ ಪೊರೆದ ಚರಣ 1 ಪ್ರ್ರಳಯ ಕಾಲದಿ ನೆಕ್ಕುತಿಹ ಚಿಕ್ಕ ಚರಣಇಳೆಗೆ ಸುಯೋಧನನಿಳಿಸಿದ ಚರಣಎಳೆಯ ಧ್ರುವ ತಾ ಕಂಡ ಚರಣತುಳಸಿ ವನದಲಿ ಕುಣಿದ ಚರಣಸುಳಿದು ಭಕ್ತರ ಪೊರೆವ ಚರಣ 2 ಅಖಿಲಾಂಡದ ಸೃಷ್ಟಿ ಸ್ಥಿತಿ ಲಯ ಕಾರಣಭಕುತರು ಕರೆಯಲೋಡುವ ದಿವ್ಯ ಚರಣಶಕಟ ದೈತ್ಯನ ಒದೆದ ಚರಣಯುಕುತಿ ಶಕುತಿಗೆ ಬರದ ಚರಣಯುಕುತಿ ಪಥವನು ತೋರ್ಪ ಚರಣಪ್ರಖರ ಗದುಗಿನ ವೀರನಾರಾಯಣ 3
--------------
ವೀರನಾರಾಯಣ
ಎಂದು ಕಾಂಬೆನು ನಾನುಗೋ- ವಿಂದ ನಿನ್ನಯ ಪಾವನ್ನ ಪಾದವನ್ನು ನಾ ಪೊಂದಿಸೇವಿಸಿ ಆನಂದಪಡುವುದಕಿನ್ನು ಕರುಣಿಸೈ ಮುನ್ನ ಪ ಪೊಂದಿ ಮಹದಾನಂದ ಪಡೆಯಲು ಕಂದಿಕುಂದಿತು ತನುಮನೇಂದ್ರಿಯ ಇಂದೆ ತೋರಿಸೊ ಪಾದಕಮಲವ ಅ.ಪ ಬಾಲತನದಲಿ ನಾನು ಶ್ರೀಲೋಲ ನಿನ್ನಿಂದ ಪಾಲಿತನಾದೆನೊ ಬೆಲೆಯುಳ್ಳ ಆಯುವನೆಲ್ಲ ಕಳೆದು ಬಿಟ್ಟೆನು ನಾನು ಕೆಲಕಾಲದಲಿ ನಾ ಕಲುಶಕ್ರಿಯೆಗಳನ್ನು ಫಲವಿಲ್ಲದೆಸಗಿದೆನು ಎಲ್ಲರೊಳು ನೀ ನೆಲಸಿ ಜೀವರ ಎಲ್ಲಕರ್ಮವ ಮಾಡಿಸಿ ಫಲವೆಲ್ಲ ಅವರಿಗೆ ಇತ್ತು ನೀ ನಿರ್ಲಿಪ್ತನೆಂದು ತಿಳಿಯದಲೆ ಖುಲ್ಲಮಾನವರೊಡನೆ ಬೆರೆತು ಪುಲ್ಲಲೋಚನ ನಿನ್ನ ಮರೆದು ಇಲ್ಲ ಎನಗೆ ಎಣೆಯೆನುತ ನಾ ಬಲುಹೆಮ್ಮೆಯಿಂದಲಿ ದಿನಗಳ ಕಳೆದೇ ಇಲ್ಲನಿನಗೆಸರಿಯಿಲ್ಲ ನೀ ನಿಲ್ಲದಾಸ್ಥಳವಿಲ್ಲ ಜಗದಾ ಎಲ್ಲ ಕಾಲಗಳಲ್ಲಿ ಇಹ ಶ್ರೀನಲ್ಲ ನೀನೆಲ್ಲ ಬಲ್ಲೆಯೊ 1 ಬರಿದೇ ಕಾಲವ ಕಳೆದೇ ಶ್ರೀಹರಿಯೆ ನಿನ್ನಯ ಸ್ಮರಣೆಯನ್ನು ಮಾಡದೇ ಪರಿಪರಿಯ ತನುಮನ ಕ್ಲೇಶಗಳಿಗೊಳಗಾದೆ ನಾಮಸ್ಮರಣೆಯೊಂದಲ್ಲದೇ ಇನ್ನೆಲ್ಲಾ ಬರಿದೇ ಪರಮಕರುಣಾಶರಧಿ ಎಂಬುವ ಕರಿಧ್ರುವಬಲಿಮುಖ್ಯರೆಲ್ಲರ ಪೊರೆದ ಕೀರುತಿ ಕೇಳಿ ನಂಬಿದೆ ಶರಣಜನಮಂದಾರನೆಂದು ಅರಿಯೆ ನಾನವರಂತೆ ಸಾಧನ ಅರಿತು ಮಾಡುವ ಪರಿಯು ತಿಳಿಯದು ಬಿರುದು ಭಕ್ತಾಧೀನನೆಂದು ಹರಿಯೆ ನಿನ್ನಯ ಮರೆಯಹೊಕ್ಕೆನು ದುರಿತಶರಧಿಯೊಳಾಡುತಿರುವನ ಉ- ತ್ತರಿಸಲೊಂದೇ ನಾವೆಯಂತಿಹ ಚರಣಸ್ಮರಣೆಯಕೊಟ್ಟು ರಕ್ಷಿಸು ಪುರುಷಸೂಕ್ತಸುಮೆಯ ಜೀಯಾ2 ಶೇಷಗಿರಿಯವಾಸ ಶ್ರೀ ಶ್ರೀನಿವಾಸ ದೋಷರಹಿತ ಸರ್ವೇಶ ಮನೋ- ಕಾಶದಲಿ ಅನವರತ ನಿಲ್ಲೊ ಶ್ರೀಶಾ ಬಿಡಿಸೆನ್ನ ಭವಬಂಧ ಗ್ರಂಥಿಯ ಪಾಶಾ ಹರಿಸುವುದು ಕ್ಲೇಶಾ ಶ್ರೀಶ ನಿಗಗತಿಶಯವೆ ಎನ್ನಯ ವಿಷಯದಭಿಲಾಷೆಗಳ ಬಿಡಿಸೀ ದೋಷರಹಿತನ ಮಾಡಿಸೀ ಎನ್ನ ಪೋಷಿಸೋ ನಿನ್ನಸ್ಮರಣೆಯಿತ್ತು ದ್ವಾಸುಪ- ರ್ಣ ಶ್ರುತಿಗಳಿಂದಲಿ ಈಶ ದಾಸರ ಭಾವ ತಿಳಿಯದೆ ಮೋಸಹೋದೆನೊ ಬೋಧೆ ಇಲ್ಲದೆ ವಾಸುದೇವನೆ ರಕ್ಷಿಸೆನ್ನನು ಏಸುಕಾಲಕು ನೀನೆ ಗತಿ ಎಂದು ಆಸೆ ಮಾಡುವೆ ನಿನ್ನ ಕರುಣಕೆ ಬೇಸರದಲೆ ಮೊರೆಯ ಲಾಲಿಸಿ ಶ್ರೀಶ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು