ಒಟ್ಟು 283 ಕಡೆಗಳಲ್ಲಿ , 61 ದಾಸರು , 235 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸಿರೊ ನಮ್ಮ ನರನ ಸಾರಥಿಯ ಪರಿಹರಿಸುವನು ತಾಪತ್ರಯ ವ್ಯಥೆಯ ಪ. ರಣಮಂಡಲದಲ್ಲಿ ಗುಣಗುವ ಕುಂತಿಯ ತನುಜನ ನೋಡುತ ವಿನಯದಿಂದ ಘನತತ್ವವನು ಪೇಳಿ ಅಣುಮಹದ್ಗತ ವಿಶ್ವ- ತನುವ ತೋರಿದ ಸತ್ಯ ವಿನಯ ಶ್ರೀ ಕೃಷ್ಣನ 1 ಸುರನದೀ ತನುಜನ ಶರದಿಂದ ರಕ್ತವ ಸುರಿವಂದ ತೋರಿ ಶ್ರೀಕರ ಚಕ್ರವ ಧರಿಸಿ ಓಡುತ ತನ್ನ ಚರಣ ಸೇವಕನೆಂಬ ಹರುಷ ತಾಳಿ ಬೇಗ ತಿರುಗಿ ಬಂದವನ 2 ವಿಜಯ ಸಾರಥಿಯಂದು ಭಜಿಸುವ ದಾಸರ ವಿಜಯ ಪೊಂದಿಸುವನಂಡಜ ರಾಜಗಮನ ಅಜ ಭವವರದ ಕಂಬುಜನಾಭ ಕಮಲೇಶ ಭುಜಗ ಧರಾಧೀಶ ಭಜನೀಯಪಾದನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸಿವುದು ರಘುನಂದನನ ಪ ನಿರುತದಿ ಬೆಳಗಿನೊಳೆದ್ದು ಭಕುತಿಯಲಿ ಅ.ಪ. ಜನಪತಿ ದಶರಥನುದರದಿ ಜನಿಸಿದವನಿತೆ ಅಹಲ್ಯೆಯ ತಾನುದ್ಧರಿಸಿದಘನ ಶಂಕರ ಧನುವ ಭಂಗಿಸಿದಜನಕ ಸುತೆಯ ವರಿಸಿದ ಶ್ರೀರಾಮನ 1 ತಾಯಿ ಕೈಕೇಯಿಯ ಮಾತು ನಡೆಸಿದನೋಯದೆ ವನವನು ಸತಿಸಹ ಸೇರಿದಮಾಯಾಮೃಗದಾಶೆಗೆ ಸತಿಯನಗಲಿದರಾಯ ಲಕ್ಷ್ಮಣನಣ್ಣ ಶ್ರೀರಾಮನ 2 ದಂಡಕದೊಳು ಸತಿಯನು ಶೋಧಿಸಿದಚಂಡ ಹನುಮಗೆ ತಾ ದೊರೆಯಾದಪುಂಡ ಜಲಧಿಯ ದಾಟಿಸಿದಹೆಂಡತಿ ಇರವನು ತಿಳಿದ ಶ್ರೀರಾಮನ 3 ಜಲಧಿಗೆ ಸೇತುವೆ ನಿಂತು ಬಿಗಿಸಿದಖಲ ರಾವಣನ ರಣದೊಳು ಕೆಡಹಿದಒಲಿದು ವಿಭೀಷಣನನು ತಾ ಪೊರೆದನೆಲದೊಳು ಸುಖ ಬೀರಿದ ಶ್ರೀರಾಮನ 4 ಧರುಮವ ನೆಲಸಲು ದುಷ್ಟರ ತರಿದಾ ಧರೆಯೊಳು ಶಿಷ್ಟರ ಪೊರೆಯಲು ಬಯಸಿದಸಿರಿಪತಿ ಗದುಗಿನ ವೀರನಾರಾಯಣನರನಾಗವತರಿಸಿದ ಶ್ರೀ ರಾಮ 5
--------------
ವೀರನಾರಾಯಣ
ಸ್ಮರಿಸೊ ಮನವೆ ಸಿರಿಲೋಲ ಶ್ರೀ ಕೃಷ್ಣನ ಸ್ಮರಿಸಲೊದಗುವ ಸ್ವಾಮಿ ಶ್ರೀ ವಿಷ್ಣುವಿನ ಧ್ರುವ ಸ್ಮರಿಸಿ ಕರಿರಾಜ ಸೆರೆಯಿಂದ ಬಿಡಲಿಲ್ಲವೆ ದುರಿತವನು ಗೆದ್ದರುಷಬಡಲಿಲ್ಲವೆ 1 ಪರಿ ಹರಿ ಮಹಿಮೆ ತಿಳಿಯಲಿಲ್ಲವೆ2 ಸ್ಮರಿಸಿ ದ್ರೌಪದಿ ಅಪತ್ತುಗಳಿಲಿಲ್ಲವೆ ಮೊರೆಯಗೇಳಿ ಕೃಷ್ಣ ಸುಳಿಯಲಿಲ್ಲವೆ 3 ಸ್ಮರಿಸಿ ಪಾಂಡವ ಸತ್ವವು ನಡೆಲಿಲ್ಲವೆ ಅರಗಿನ ಮನೆಯೊಳು ಉಳಿಲಿಲ್ಲವೆ 4 ಸ್ಮರಿಸು ಮಹಿಪತಿ ಮನವ ನಿಜಗೊಲಿಲ್ಲವೆ ಗುರು ಚರಣ ಸ್ಮರಿಸಿ ನೆಲೆಗೊಳಲಿಲ್ಲವೆ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿದಾಟ ನಿಲಿಸು ಮನದಘದೂರ ಸುಖಸಾರ ಎರಗುವೆನು ತವಪದಕೆ ಸ್ಮರಿಸಿ ನಿಮ್ಮುಪಕಾರ ಪ ಸಂತಸವ ಕೊಡು ಎನ್ನ ಅಂತರಂಗದಿ ನಿಂತು ಕಂತುಪಿತ ಚಿಂತಿಪರ ಚಿಂತಾಮಣಿ ಪ್ರಭುವೆ 1 ಅಲ್ಪಮನಸಿನ ಕುಕಲ್ಪನೆಯ ಪರಿಹರಿಸು ಅಲ್ಪರಿವ ದೀನರಿಗೆ ಕಲ್ಪತರು ನೀನು 2 ನಾಮಾಡಿದಪರಾಧ ಪ್ರೇಮದಿಂ ಕ್ಷಮಿಸು ಶ್ರೀ ರಾಮ ಮಮಪ್ರಾಣೇಶ ಪ್ರೇಮಾಬ್ಧಿನಿಲಯ 3
--------------
ರಾಮದಾಸರು
ಹರಿನಾಮ ಜಪಕಿನ್ನು ಸರಿಯಾದುದಿಲ್ಲ ಸರಸಿಜಾಸನಿದರ ಸಾರವನು ಬಲ್ಲ ಪ. ಬಡವಾಗ್ನಿ ಸುತ್ತಿದರು ಕೊಡುವದನುಪಮ ತಂಪ ನಡುನೀರೊಳಗೆ ಮುಳುಗಲುಡುಪವಹದು ಕಡುಭಯದ ಕಾಡಲ್ಲಿ ಮಿಡುಕುತಿಹ ಸಮಯದಲಿ ಒಡೆಯನನು ನೆನೆದವನ ಕಡೆಹಾಯಿಸುವ ನಮ್ಮ 1 ಘೋರ ರಿಪು ರಾಜಾಗ್ನಿ ಘೋರಾಹಿ ಪಕ್ಷಿ ಮೃಗ ಮಾರಿ ಮೊದಲಾದಭಯಕಾರಿಗಳನು ದೂರ ಓಡಿಸಿ ದಡವ ಸೇರೆ ಸಲಹುವ ನಮ್ಮ ಕಾರುಣ್ಯ ನಿಧಿಯನ್ನು ಸಾರಿಸಾರಿಗೆ ನೆನೆವ 2 ಆವ ಕಾಲಕು ಸುಖವನೀವ ಶೇಷ ಗಿರೀಶ ಶ್ರೀವರನ ಸರ್ವತ್ರ ಸ್ಮರಿಸಿರೆಂದು ದೇವಋಷಿಯೆಂದುದನು ದಿಟವೆನುತ ನಂಬುವರ ಕಾವನನುಭವ ಸಿದ್ಧ ಕಮಲಾಕ್ಷ ಗತಿಯೆಂಬ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಯೆಂದು ಮನವೆ ನೀ ಸ್ಮರಿಸೋ ದೃಢದಿಂದ ಸ್ಮರಿಸಿದಾಕ್ಷಣ ಬಂದು ಒದಗುವ ಗೋವಿಂದ ಕರುಣದಿಂದಲಿ ನೋಡಿ ಹಿಂಗಿಸುವ ಭವಬಂಧ ಪರಮದಯಾನಿಧಿಯು ಶ್ರೀಹರಿ ಮುಕುಂದ 1 ಸ್ಮರಿಸಿದಾಕ್ಷಣ ಪುಣ್ಯಗತಿಗೈದಜಾಮಳ ಮರೆಯದೆ ಸ್ಮರಿಸಿದ ಧ್ರುವ ಯೈದಿದಢಳ ಹರಿಯೆಂದು ಪ್ರಹ್ಲಾದ ಪುಣ್ಯಗೈದ ಸಬಳ ಸ್ಮರಿಸಿದವರ ಕಾವ ಶ್ರೀಹರಿ ಗೋಪಾಲ 2 ಗಜ ಭಯ ಸ್ಮರಿಸಿದಾಕ್ಷಣ ಮೊರೆ ಇಟ್ಟು ದ್ರೌಪದಿಗಾಯಿದಭಿಮಾನ ಸ್ಮರಿಸಿದ ಪಾಂಡವರ ರಕ್ಷಿಸಿದ ಪ್ರಾಣ ಪರಮಭಕ್ತರ ಜೀವ ಶ್ರೀಹರಿ ನಾರಾಯಣ 3 ಹರಿನಾಮದಿಂದಾಯಿತು ಅಹಲ್ಯೋದ್ಧಾರಣ ಸ್ಮರಣೆ ಸಕಲವೆಲ್ಲ ತರಿಸಿತು ಪೂರ್ಣ ಸುರಮುನಿಜನರಿಗೆ ಇದೇ ನಿಜಭೂಷಣ ಪರಮ ವೈಷ್ಣವರಿಗೆ ಇದೇ ಜೀವ ಪ್ರಾಣ 4 ಹರಿಯೆಂದು ನೆನಿಯೋ ನೀ ಗುರು ಕೃಪೆಯಿಂದ ಸ್ಮರಿಸೊ ಮನವೆ ದೃಢಭಾವ ಭಕ್ತಿಯಿಂದ ನಿತ್ಯ ನಿಜಾನಂದ ತೋರುವ ಶ್ರೀಹರಿನಾಮ ಸುಖ ಸದಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರಿಯಂದು ಸ್ಮರಿಸಿ ಉರಗೇಂದ್ರ ವರಮಂಚ ಮಿಗಿಲೇರಿಸಿ ಚರಣದೊಳದೃಷ್ಟಿಯಿರಿಸಿ ಪ. ಅಕ್ಷಯಗುಣ ಪೌರುಷ ಅನವರತ ರಕ್ಷಿಸುವುದೆನ್ನಾಶ್ರಿತ ರಾಕ್ಷಸಾಂಬುಧಿವಿಶೋಷ ಭಕ್ತಜನ ರಕ್ಷಾವಿನೋದ ಭೂಪ 1 ಏನೆಂಬೆನದ್ಭುತವನು ಬಹು ಸೂಕ್ಷ್ಮ ದಾನಯಜ್ಞಾದಿಗಳನು ಧ್ಯಾನಿಸುತ ತ್ವತ್ಪದವನೀ ಚರಿಸಲನ್ಯೂನವಹ ವಿಸ್ಮಯವನು 2 ವರ ಶ್ರುತಿಸ್ಮøತಿಗಳರಿತು ವಿಧಿಯೋಳಾಚರಿಸಿದರು ಫಲವ ಕುರಿತು ಸಿರಿವರನೆ ನಿನ್ನ ಮರೆತು ಇರಲದಿಹ ಪರಕಲ್ಲವಾದಸರಿತು 3 ಬಾಗಿ ಪೊರೆವ ದೊರೆಯೆ ಕಂಭದಲಿ ತೋರ್ದ ಸಿರಿಯೆ 4 ಮೂರ್ತಿ ಅವಗುಣಗಳೇನೊಂದನೆಣಿಸದರ್ಥಿ ಶ್ರೀನಿಧಿಯೆ ಮಾಡು ಪೂರ್ತಿ ಶೇಷಾದ್ರಿ ಮಾನಿಮರುದೀಡ್ಯ ಕೀರ್ತಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹಲವು ಹಂಬಲಿಸಿದಲ್ಲೇನೂ ಇಲ್ಲ ಜಲಜನಾಭನ ಕರುಣÉೂೀದಯವು ತಪ್ಪಿದ ವೇಳ್ಯಾ ಪ ಬರಿಗಂಟು ಅಪೇಕ್ಷೆ ಬಯಸುವುದೆಲ್ಲಾ ಪೂರ್ವಾಕೃತ ಇದ್ದದ್ದು ಬಿಟ್ಟದ್ದೆ ಇಲ್ಲ ಬಿರುದು ಬಾವಲಿ ದೇಹಾಭಂಗ ಬಡುವಾದೊಂದೆ ಪರಿ ವ್ಯಥೆಯಿಂದ ಫಲವೇನೊ ಇಲ್ಲ ಮುಂದಾ 1 ಬಿತ್ತಿದ ಬೀಜ ಎಷ್ಟು ಬೆಳೆಯ----ಲಿನೂ ಸುತ್ತಾ ದೇಶವು ತಿರುಗಿ ಸೂಸಿದರೇನೂ ಪತ್ರ ಬರೆದ ಬ್ರಹ್ಮ ಫಣಿಯ ಲಿಖಿತವಲ್ಲದೆ ಪ್ರತ್ಯೇಕ ನಿನಗೊಂದು ಬಾಹೋದು ಇನ್ನುಂಟೆ 2 ಅನುಭವ ಇದ್ದವಲ್ಲಾ ------ಇಲ್ಲಾ ಮನದಿ ತಿಳಿದು ಇನ್ನು ಮರಿಯದು ಎಲ್ಲಾ ಘನ್ನ 'ಹೊನ್ನೆ ವಿಠ್ಠಲ ನಾ ಕರುಣಾವಿಲ್ಲ ----- ಮನಸಿನೊಳಗೆ ಸ್ಮರಿಸಿ ಮುಕುತನಾಗೋದು ಬಿಟ್ಟು 3
--------------
ಹೆನ್ನೆರಂಗದಾಸರು
ಹುಚ್ಚನಾಗಬೇಕೋ ಜಗದಿ ಹುಚ್ಚನಾಗಬೇಕೋ ಪ ಅಚ್ಚುತಾನಂತನ ನಿಶ್ಚಲ ಧ್ಯಾನದಿ ಇಚ್ಛೆಯಿಟ್ಟು ಜಗದೆಚ್ಚರ ನೀಗಿ ಅ.ಪ ಮರವೆ ಹರಿಯಬೇಕೋ ಪರಲೋಕ ದರಿವಿನೊಳಿರಬೇಕೊ ಪರಿಪರಿಯಿಂದಲಿ ಸಿರಿಯರಸನ ಪಾದ ಸ್ಮರಿಸಿ ಇಹ್ಯದರಿವು ತೊರೆದಾನಂದದಿ 1 ಪರನೆಲೆ ತಿಳಬೇಕೋ ಕಾಯದ ನರನೊದೆಯ ಬೇಕೊ ದುರಿತಾಕಾರಿಗಳ ಕಿರಿಕಿರಿಯಿಲ್ಲದೆ ಹರಿಹರಿಯೆನ್ನುತ ಪರಮಾನಂದದಿ 2 ಕಾಮ ಕಳೆಯಬೇಕೋ ಕಾಯದ ಪ್ರೇಮ ತೊರೆಯಬೇಕೊ ನೇಮದಿಂದ ಮಮಸ್ವಾಮಿ ಶ್ರೀರಾಮನ ನಾಮ ಭಜಿಸಿ ನಿಸ್ಸೀಮನಾಗಾನಂದದಿ 3
--------------
ರಾಮದಾಸರು
ಹುಚ್ಚು ಹಿಡಿಯಿತು ಎನಗೆ | ಹುಚ್ಚು ಹಿಡಿಯಿತು ಪ ಸ್ವಚ್ಛ ಭಾಗವತವ ಕೇಳಿ | ಅಚ್ಯುತನ್ನ ಮಹಿಮೆ ಎಂಬಮೆಚ್ಯಮದ್ದು ಶಿರಕೆ ಏರಿ | ಹುಚ್ಚು ಹಿಡಿಯಿತು ಅ.ಪ. ಶ್ರವಣ ಸ್ತವನ ಸ್ಮರಣೆ ಸೇವೆ | ಅವನ ಅರ್ಚನೆ ವಂದನೆ ಸಖ್ಯಅವ ದಾಸ್ಯ ಆತ್ಮ ಅರ್ಪಣ | ನವವು ವಿಧದ ಭಕ್ತಿಗಳಿಪ 1 ಸಪ್ತ ದಿನದ ಕ್ಲುಪ್ತಿಯಿಂದ | ಸರ್ಪಶಯನ ಮಹಿಮೆ ಶ್ರವಣಶೃತಿ ಬಧಿರ ವಾಯ್ತು ಆತ್ಮ | ರಿಕ್ತ ವಿಷಯ ಶ್ರವಣಕೆಲ್ಲ 2 ಸ್ತವನ ಮಾಳ್ಪ ಶುಕರ ದೇಹ | ಭವಣೆ ಮರೆತು ಕೀರ್ತಿಸಿದರುಅವರ ಕಂಡು ಲೋಕವಾರ್ತೆ | ಸ್ತವನ ಗೈವರ ದೂಡುವಂಥ 3 ಹರಿಯ ಸ್ಮರಿಸಿ ಪ್ರಹಲ್ಲಾದ | ಹರಿಯ ಕಂಡು ಭವವ ಗೆದ್ದಸ್ಮರಿಸಿ ಸ್ಮರಿಸಿ ಅದನ ನಾನು | ನರರ ನಡುವೆ ಮೂಕನಾಗ್ದ 4 ನಿತ್ಯ ಮಾಳ್ಪ ಹರಿಯ ಸೇವೆಅರ್ತುಸಂತರ ಸೇವೆ ವ್ಯತಿ | ರಿಕ್ತಕೆಲ್ಲ ಪ್ರತಿಯ ಭಟಿಪ 5 ಅಂಬೆ ರಮಣನರ್ಚಿಸೀದ | ಕುಂಬಾರ ಭೀಮನ ಕೇಳಿ ನಾನುಅಂಬುಜಾಕ್ಷನರ್ಚನೆಗಲ್ಲದ | ತುಂಬಿದ್ವ್ಯೊಭವ ಚೆಲ್ಲುವಂಥ 6 ಕೃಷ್ಣ ವಂದನ ಅಕ್ರೂರ ಗೈದು | ಸುಷ್ಠು ಹರಿಯ ರೂಪ ಕಂಡಜಿಷ್ಣು ಸಖನ ನಮಿಸದವರ | ಭ್ರಷ್ರ್ರರೆಂದು ಬೈಯ್ಯುವಂಥ 7 ನಿತ್ಯ ನೆನೆಯದವರ | ಕ್ಷಣವು ಅವರ ಸಂಗಜರಿವ 8 ಪಾರ್ಥ ಸಖ್ಯತನದಿ ಪರಮ | ಅರ್ಥ ಪಡೆದುದನ್ನ ಕೇಳಿನಿತ್ಯ ಸಖನ ಮರೆತ ಜನರು | ವ್ಯರ್ಥರೆಂದು ಅರ್ಥಿಲಿ ನಗುವ9 ಭೃತ್ಯ ಬಲಿಯು ತನ್ನನಿತ್ತಸತ್ಯ ವಾರ್ತೆ ಕೇಳಿ ಕೇಳಿ | ಪ್ರವೃತ್ತಿ ಗೈದಿನ್ಯತ ನೆದಿ 10 ನಿಚ್ಚ ಗುರು ಗೋವಿಂದ ವಿಠಲ11
--------------
ಗುರುಗೋವಿಂದವಿಠಲರು
ಹೊಂದಬೇಕು ನಿಜನೋಡಿ ತಂದೆ ಗುರುನಾಥ ಬೋಧ ಧ್ರುವ ಪರಧನ ಪರಸತಿಯರ ಬಿಟ್ಟರೆ ಸಾಕು ಹೇಸಿ ತೋರುವುದು ತನ್ನೊಳು ಪ್ರತ್ಯಕ್ಷ ವಾರಣಾಸಿ ಸುರಿಮಳೆಗರೆವುದು ಹೆಜ್ಜೆಜ್ಜಿಗೆ ಪುಣ್ಯದ ರಾಶಿ ಅರಿತು ಏಕರಸವಾಗಿ ಸದ್ಗುರು ಸ್ಮರಿಸಿ 1 ಜನ್ಮಕೆ ಬಂದ ಮ್ಯಾಲೆ ಪುಣ್ಯಪಥ ಸಾಧಿಸಿ ಸನ್ಮತ ಸುಖಸಾರದೊಳು ಮನಭೇದಿಸಿ ಉನ್ಮನವಾಗಿ ಜೀವನ ಸದ್ಗತಿಗೈದಿಸಿ ಜನ್ಮಕೆ ಬೀಳುವ ಭವಬಂಧನ ಛೇದಿಸಿ 2 ಸಾಯಾಸದಿಂದ ಸಾಧಿಸಬೇಕು ಸಾಧುಸಂಗ ಗುಹ್ಯಗುರುತ ನೋಡಲಿಬೇಕು ಅಂತರಂಗ ಬಾಹ್ಯಾಂತ್ರದೋರುತಿದೆ ಸದ್ಗುರು ಪ್ರಾಣಲಿಂಗ ಭವ ಭಂಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊಂದಿ ಬದುಕಿರೈಯ್ಯಾ ದೇವನಾ | ತರು | ಣೇಂದು ಶೇಖರ ಉಮಾ ಧವನಾ || ವಂದಿಸಿದವರಘವೃಂದ ನಿವಾರಿಸಿ | ಕೈವಲ್ಯ ತಂದು ಕೊಡುವನಾ ಪ ಸ್ಮರಿಸಿದವರ ಬದಿಯಲಿರುವಾ | ತನ್ನ | ಶರಣರಿಷ್ಟಾರ್ಥವಗರವಾ || ಕರುಣದಿ ಪತಿತರುದ್ಧರಿಸಲು | ತಾರಕ | ಗುರುರೂಪ ತಾನಾಗಿ ಧರೆಲಿ ಮೆರೆವನಾ 1 ಗಗನಧುನಿ ಧರಿಸಿದನಾ | ಬೆಟ್ಟ | ಮಗಳಿಗೆ ಅರ್ಧಾಂಗಿ ನೀಡಿಹನಾ || ನಿಗಮಾಗ ಮಂಗಳಯುಗತಿಗೆ | ನಿಲುಕದು | ನಿಲುಕದುರಗ ಭೂಷಣ ಭಸ್ಮಾಂಗ ವಿಗಢ ನಾಟಕನಾ 2 ಘನಸಾರ ಗೌರಾಂಗ ಹರನಾ | ತಪ್ತ | ಕನಕ ವರ್ಣ ಜಟಾಧರನಾ || ಮುನಿಜನ ಶುಭತದವನ ಚೌರ್ಚಿತ | ಪದ || ಅನುದಿನ ಮಹಿಪತಿ ಜನ ಸಲಹುವನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹ್ಯಾಗೆ ಒಲಿಯುವನೊ ಎನ್ನೊಡೆಯ ರಂಗ ಹ್ಯಾಗೆ ಒಲಿಯುವನೊ ಪ ಹ್ಯಾಗೆ ಒಲಿಯುವ ಜಾಣೆ ಪೇಳಮ್ಮ ನಾಗಶಾಯಿ ನಿಗಮಾಗಮೊಂದಿತ ರಾಘವೇಶನು ಬೇಗ ಒಲಿಯದಿರೆ ನೀಗುವೆನು ಪ್ರಾಣ ಕೇಳೆ ಸಖಿಯೆಅ.ಪ ಧಣಿಯು ಇಲ್ಲದ ದುರ್ದೈವ ಬಾಳು ಹೆಣನ ಸಮವಿದು ಮನ್ನಿಸೆ ಕೆಳದಿ ಗಣನೆಯಿಲ್ಲದ ಜನಮವ್ಯಾಕಿದು ಸನಕಸನಂದರೆಣಿಕೆಯಿಲ್ಲದೆ ಮಣಿದು ಆತಗೆ ಧನ್ಯರಾದದ್ದು ನೆನೆಸಿ ಮನದೊಂದು ದಿನಸುವಾಗುವುದು ಚಿನಮಯಾತ್ಮನ ಕಾಣದಿರಲಾರೆ 1 ನೀರೆ ಬೇಗಿನ್ನು ಕರೆತಂದು ತೋರೆ ಸಾರಸಾಕ್ಷನ್ನ ಅಗಲಿರಲಾರೆ ವಾರಿಧಿಶಾಯಿನ್ನ ಹರಣದೊಡೆಯನ್ನ ಮಾರ ಸುಂದರಪಾರ ಮಹಿಮನ ಬಾರಿಬಾರಿಗೆ ಸ್ಮರಿಸಿ ಮನ ಬಲು ಘೋರ ಬಡುತದೆ ವಾರಿಜಾಕ್ಷಿ ಕರೆ ತಾರೆ ಶೀಘ್ರದಿ ನಾರಸಿಂಹನ 2 ಕಡಲೊಳಿರುವನೋ ದೃಢದಿ ಕರೆಯಲು ಒಡನೆ ಬರುವನೋ ಜಡಜಾಕ್ಷಿ ಕೇಳೆ ಜಡಜನಾಭನೋ ದೃಢಕರೊಡೆಯನೋ ಬಿಡದೆ ಆತಗೆ ಮಿಡುಕಿ ಮಿಡುಕಿ ಹಿಡಿಕಿಯಾಯಿತು ದೇಹ ಸೊರಗಿ ಒಡೆಯ ಶ್ರೀರಾಮನಡಿಗೆ ಹೊಂದಿ ನಾ ತೊಡರಿನೊಳಗಿಂದ ಕಡೆಗೆ ನಿಲ್ಲುವೆ 3
--------------
ರಾಮದಾಸರು
ಹ್ಯಾಂಗೆ ನೀ ದಾಸನಾದೆ ಪ್ರಾಣಿ ಪ ಭವ ಭಂಗವ ಪಡುವವನು ಅ ಆಸೆಯ ಬಿಡಲಿಲ್ಲ ಕಾಸು ಗಳಿಸುವೆಯಲ್ಲದೋಷಕ್ಕೆ ಗುರಿಯಾಗಿ ಹೇಸಿಕೆಯೊಳು ಬಿದ್ದು 1 ತನುವು ತನ್ನದು ಎಂದು ತನಯ ಮಾನಿನಿಯರೆತನಗೆ ಗತಿಯೆಂದು ನಂಬಿರುವ ಮೂಢನೆ 2 ಕಾಲನ ದೂತರು ಕರುಣಸಂಪನ್ನರೆಕಾಲ ವ್ಯರ್ಥದಿ ಕಳೆವ ಕೀಳು ಬುದ್ಧಿಯ ಪ್ರಾಣಿ3 ತಲೆ ಹುಳಿತ ನಾಯಂತೆ ಹಲವು ಬೀದಿಯ ತಿರುಗಿಗೆಲುವಿನಿಂದಲಿ ಮೂಲ ಮಲವನಳಿಯದೆ4 ಉದರಪೋಷಣೆಗಾಗಿ ಅಧಮರ ಯಾಚಿಸುತಮದಗರ್ವವೆಂಬುವುದ ಬದಿಯಲ್ಲಿ ಇಟುಗೊಂಡು 5 ಹಿರಿಯರ ನಿಂದಿಸಿ ಹರಿದಾಸನೆನಿಸಿದೆಗುರುಮಂತ್ರವರಿಯದ ಮರುಳು ಪಾಮರ ಪ್ರಾಣಿ6 ಕಾಲುಗೆಜ್ಜೆಯ ಕಟ್ಟಿ ಮೇಲೆ ಕರತಾಳ ತಟ್ಟಿಶ್ರೀಲೋಲನ ಗುಣ ಪೊಗಳಿ ನಟಿಸದಲೆ 7 ಕುಣಿಕುಣಿದು ಮನದಣಿದು ಮಣಿದು ಸಜ್ಜನ ಪದಕೆಅಣಿಮಾದಿ ಅಷ್ಟಸಿದ್ಧಿಯನು ಕೈಗೊಳ್ಳದಲೆ 8 ಭಾಗವತ ಕೇಳದೆ 9 ಕಟ್ಟಿ ಕೈ ಪರರಲಿ ಹೊಟ್ಟೆಗೋಸುಗವೆ ಕಂ-ಗೆಟ್ಟು ಯಾಚಿಸುವ ಭ್ರಷ್ಟಪ್ರಾಣಿಯೆ ನೀನು 10 ನೇಮದಿ ಉಪವಾಸ ಆ ಮಹಾ ಏಕಾದಶಿಕಾಮಜನಕನನು ಪ್ರೇಮದಿ ಸ್ಮರಿಸಿದೆ11 ಏಸುದಿನ ಬದುಕಿದರು ಸೂಸುವ ಪಾಪವಈಸಿ ದಾಟದೆ ಕಾಸುವೀಸಕೆ ಬಾಳಿದವ 12 ಮೂರ್ತಿ ಪಾದಂಗಳ ಮನದಲಿ ಹಿಂಗದೆ ಭಜಿಸದೆ 13 ಬತ್ತಿ ಹೋಯಿತು ನದಿ ಬಿತ್ತದೆ ಬೆಳೆಯದೆಅತ್ತರೆ ಬಹುದೇನೊ ಉತ್ತಮ ಫಲ ಸೂಸಿ14 ಆಡುವ ಮಕ್ಕಳ ಕೈಗೆ ನೀಡದೆ ಕಡಲೆಯಬೇಡಿದರೆ ಕೊಟ್ಟು ಕೂಡಿ ಆಡದವನು ನೀ 15 ಶೃಂಗಾರ ಬಯಸುತ ಬಂಗಾರದೊಡವೆಯಹಿಂಗದೆ ಶ್ರೀ ತುಲಸಿಯ ರಂಗಗರ್ಪಿಸದೆ 16 ಸುತ್ತ ಕತ್ತಲೆ ಚಿಂತೆ ಮತ್ತೆ ಭಯದ ಭ್ರಾಂತಿಚಿತ್ತಜನಯ್ಯನು ದೊರೆವ ಬಗೆ ಕಾಣದೆ 17 ಡಂಬವ ಮಾಡಿಕೊಂಡು ತುಂಬ ಪಾಪ ಒಳಗೆಹಂಬಲಿಸಿದರಿನ್ನು ಬೆಂಬಲಕಾರುಂಟು 18 ದುಂಡು ನಾಮವ ಬಳಿದು ಭಂಡತನದಲಿ ಜಗದಿದಂಡಿಗೆ ಬೆತ್ತ ಪಿಡಿದು ಹೆಂಡಿರ ಕಾಯ್ವನೆ 19 ಹಕ್ಕಿವಾಹನನ ಗುಣ ಲೆಕ್ಕಿಸಿ ಪೊಗಳದೆಬೆಕ್ಕಸ ಬೆರಗಾಗಿ ಅಕ್ಕಿಗೆ ತಿರುಗುವವ 20 ಪಾದ ರಾಗದಿ ಭಜಿಸದೆಕಾಗಿನೆಲೆಯಾದಿಕೇಶವರಾಯನೆನದೆ21
--------------
ಕನಕದಾಸ
126-1ದ್ವಿತೀಯಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪವೇಲೂರು ಚಿತ್ತೂರು ಚಂದ್ರಗಿರಿ ಮಾರ್ಗದಲಿಅಲ್ಲಲ್ಲಿ ಪ್ರಮುಖ ಭೂಪಾಲರ ಕೈಯಿಂದಬಲು ಭಕ್ತಿಯುತ ಪೂಜೆ ಮರ್ಯಾದೆಕೊಂಡುವ್ಯಾಳಗಿರಿ ವೇಂಕಟನ ತಿರುಪತಿ ಸೇರಿದರು 1ತಿರುಪತಿಯಲಿ ಹನುಮದಾದಿ ಲಕ್ಷ್ಮಣಸೇವ್ಯಶ್ರೀರಾಮಸೀತಾ ಸಮೇತನಿಗೆ ನಮಿಪೆಉರುಗೇಶಶಯ್ಯ ಶ್ರೀ ಗೋವಿಂದರಾಜನಿಗುಶಿರಬಾಗುವೆ ಶ್ರೀ ಲಕ್ಷ್ಮೀಗೂ ಸತತ 2ಒಂದು ಗಾವುದ ದೂರದೊಳಗೇವೆ ಇರುತಿಹುದುಪದ್ಮ ಸರೋವರವು ತತ್ತೀರದಲ್ಲಿವೇದವಿಗ್ರಹ ಘೃಣಿ ಆದಿತ್ಯ ಸೂರ್ಯನುನಿಂತಿಹನು ಸರ್ವೇಷ್ಟ ಶ್ರೀದವೃಷ್ಟಿದನು 3ಸಮೀಪದಲಿ ದೊಡ್ಡ ಆಲಯವಿಹುದಲ್ಲಿಬೊಮ್ಮದಿ ಸುಮನಸಾರ್ಚಿತ ಕೃಷ್ಣ ಅಣ್ಣರಾಮನ ಸಹಕುಳಿತು ವಂದಿಸುವ ಸಜ್ಜನರಕ್ಷೇಮಲಾಭವ ಸದಾ ಪಾಲಿಸುತಿಹನು 4ದಕ್ಷಪಾಶ್ರ್ವದ ಗುಡಿಯಲ್ಲಿ ಸುಂದರರಾಜಲಕ್ಷ್ಮೀಸಮೇತನು ಕಾರುಣ್ಯಶರಧಿಪಕ್ಷ್ಮಗಳು ಅಕ್ಷಿಗಳ ರಕ್ಷಿಸುವ ತೆರದಲ್ಲಿವಿಷ್ಣು ಭಕ್ತರ ಸದಾಕಾಯುತಿಹನು 5ಕೃಷ್ಣನಾಲಯ ವಾಮಪಾಶ್ರ್ವ ಮಂದಿರದಲ್ಲಿವನಜಆಸನದಲ್ಲಿ ಶ್ರೀ ಪದ್ಮಾವತಿಯುದೀನ ಕರುಣಾಕರಿಯುವರಅಭಯನೀಡುತ್ತಶ್ರೀನಿವಾಸನ ಬದಿಯಲ್ಲಿ ಕುಳಿತಿಹಳು 6ದ್ವಾದಶಾಕ್ಷರ ಕಮಲವಾಸಿನಿ ಮಂತ್ರಪ್ರತಿಪಾದ್ಯಳು ಪದ್ಮಾವತಿ ಕಮಲವಾಸಿನಿಯುಪದ್ಮಲೋಚನೆ ಸರ್ವಾಲಂಕಾರ ಸಂಪನ್ನೆಸದಾಯೆಮ್ಮ ಪಾಲಿಸುವಳಿಗೆ ನಮೋ ಎಂಬೆ 7ವೇಂಕಟಾಚಲದ ಅಡಿವಾರದಲಿ ಇರುತಿದೆಅಕಳಂಕ ಸುಪವಿತ್ರ ಕಪಿಲತೀರ್ಥಲಿಂಗ ಆಕಾರದಲಿ ಕಪಿಲೇಶ್ವರ ಇಹನುಬಾಗುವೆ ಶಿರ ಶಿವಗು ಉಮಾಮಹೇಶ್ವರಿಗೂ 8ಕಪಿಲೇಶ್ವರಾನುಗ್ರಹದಿಂದ ಗಿರಿ ಏರಿಗೋಪುರಾಲಯದಲ್ಲಿ ನೃಸಿಂಹನ ನಮಿಸಿಶ್ರೀಪವರಾಹವೇಂಕಟನ ಕಾಣಿಸುವಂತಆ ಭೇಟಿ ಹನುಮನಿಗೆ ಶರಣು ಶರಣೆಂಬೆ 9ಸ್ವಾಮಿವೇಂಕಟನ ಆಲಯದ ಗೋಪುರಕಂಡುಸ್ಮರಿಸಿದ ಮಾತ್ರದಲೆ ಪಾಪ ನೀಗಿಸುವಸ್ವಾಮಿ ತೀರ್ಥಕು ಭೂರಾಹಕರುಣಾಬ್ಧಿಗೂನಮಿಸುವೆ ಅಶ್ವತ್ಥನಾರಾಯಣಗು 10ಕಪಿಲೇಶ್ವರಾನುಗ್ರಹದಿ ಹನುಮಂತನಅ ಪವನಜನ ದಯದಿ ಭೂಧರಾ ವರಾಹನಪುಷ್ಪಭವ ಪೂಜಿತ ಶ್ರೀ ಶ್ರೀನಿವಾಸನಶ್ರೀ ಪದ್ಮ ಪದಯುಗದಿ ಶರಣು ಶರಣಾದೆ 11ಶ್ರೀವಕ್ಷ ವೇಂಕಟೇಶನ್ನ ಧ್ಯಾನಿಸಿ ನಮಿಪೆದೇವ ದೇವಶಿಖಾಮಣಿಕೃಪಾನಿಧಿ ಸುಹೃದನವರತ್ನ ಖಚಿತ ಆಭರಣ ಕಿರೀಟಿಯುಶಿವದವರಅಭಯಕರಕಟಿ ಚಕ್ರಿಶಂಖಿ12ಭಕ್ತವತ್ಸಲ ದಯಾನಿಧಿ ಶ್ರೀನಿವಾಸನ್ನಸತ್ಯಬೋಧತೀರ್ಥಾರ್ಯರು ವಂದಿಸಿ ಸುತ್ತಿಸಿಆ ದೇವಸ್ಥಾನದಲಿ ಮಾರ್ಯಾದೆಗಳ್ ಕೊಂಡುಪದುಮ ಸರೋವರಾಲಯಗಳ ಐದಿದರು 13ವೇಂಕಟಗಿರಿಯಿಂದ ಕರ್ನೂಲು ಗದ್ವಾಲಪೋಗಿ ಸತ್ತತ್ವ ಸಿದ್ಧಾಂತವ ಬೋಧಿಸಿಭಕುತರಿಗೆ ದರ್ಶನ ಉಪದೇಶ ಕೊಟ್ಟರುಮಾರ್ಗದಲಿ ಹನುಮಂತ ಕ್ಷೇತ್ರ ಇಹುದು 14ಕ್ಷೇತ್ರಗಂಡಿಗ್ರಾಮ ತತ್ರಸ್ಥ ಹನುಮನಿಗೆಶರಣೆಂಬೆ ಸ್ಮರಿಸಲು ಬುದ್ಧಿರ್ಬಲ ಯಶಸ್ಸುಧೈರ್ಯವು ನಿರ್ಭಯತ್ವವು ಆರೋಗ್ಯವುದೊರೆಯುವುದು ನಿಶ್ಚಯ ಆಜಾಡ್ಯ ವಾಕ್ಪಟುತ್ವ 15ಹೇಮಗರ್ಭನತಾತಶ್ರಿಪತಿ ಜಗನ್ನಾಥಅಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 16 ಪ|| ಇತಿ ದ್ವಿತಿಯ ಕೀರ್ತನೆ ||
--------------
ಪ್ರಸನ್ನ ಶ್ರೀನಿವಾಸದಾಸರು