ಒಟ್ಟು 629 ಕಡೆಗಳಲ್ಲಿ , 80 ದಾಸರು , 526 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಲಿಸಯ್ಯಾ ನಿಲಿಸೆನ್ನ ಮನವ ಶ್ರೀ ಹರಿಯೇ ನಿನ್ನಾ | ಹೊಳೆವ ಚರಣದಲ್ಲಿ ನೆಲೆಗೊಂಬುವಂದದಿ ಪ ಯರಳಿಯು ಘಂಟಾನಾದಕೆ ಬಲೆ ಹೋಗುವಂತೆ | ಮರುಳಾಗಿ ತರಣಿಯರಾಳಾಪದಿ | ಭರದಿಂ ದೀವಿಗೆ ಕಂಡು ಪತಂಗ ಮಡಿವಂತೆ | ಹರಿದು ರೂಪ ವಿಷಯದಲಿ ಮುಗ್ಗುತಿಹುದೋ1 ಕರಿ ಅಂಗ ಸಂಗದೀ ಕುಣಿಯಾ ಬೀಳುವಂತೆ | ಸ್ಪರುಶ ವಿಕ್ಷಯದಲಿ ಮೈಮರೆದು | ಯರಗಿ ಮಾಂಸಕ ಗೋಣ ನೀವ ಮಚ್ಛದಂತೆ | ನಿರುತ ಜಿವ್ಹಾಸ್ವಾದಕ ತೊಳಲುತಲಿಹುದೈಯ್ಯಾ2 ಪರಿಮಳಕಾಗಿ ಬ್ರಮರ ಸೆರೆ ಬಿದ್ದಂತೆ | ಹರುಷ ಪಡುತ ಭೋಗ ದ್ರವ್ಯದಲಿ | ತರುವರಿ ತನಲಿಂತು ಮಾಡಿ ವಿಷಯದಿ ಬಂದು | ದುರಿತ ಮೊನೆಗೆಯನ್ನ ಗುರಿ ಮಾಡಿತಿಹುದೈಯ್ಯಾ3 ಐದು ಮೋರೆಯಲಂತು ಹರಿಗುಡದೆವೆ ಮತ್ತ | ಐದು ಪರಿಯ ಕಾವಲಿಯ ನಿರಿಸೋ | ಮಾಧವ ನಿಮ್ಮ ಸತ್ಕಥೆಗಳ ಶ್ರವಣಕ | ಪಾದ ಧ್ಯಾನದಿ ಹಿಂಗದಂದದಿ ನಯನದಿ 4 ನಿನ್ನ ದಾಸರ ಸಂಗ ವನುದಿನ ದೇಹಕ | ನಿನ್ನ ನಾಮಾಮೃತ ಜಿವ್ಹೆಯಲಿ | ನಿನ್ನ ನಿರ್ಮಾಲ್ಯ ತುಳಸಿಯಾ ಫ್ರಾಣಿಸುವ ತಾ | ಯನ್ನನುದ್ದರಿಸು ಮಹಿಪತಿ ಸುತ ಪ್ರಭುವೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀನೆ ನಿಜಗುರುವಾಗುಎನಗೆ ಮಾಧವ ಪ ಮರವೆಯೆಂಬ ಪರದೆ ಹರಿದು ಅರಿವುಯೆಂಬಾಲಯದೊಳಿರಿಸಿ ದುರಿತಪರ್ವತ ತರಿದು ಪೊರೆಯುವ ಚರಣದಾಸರ ಭಾಗ್ಯನಿಧಿಯೆ 1 ಹೀನಸಂಸಾರೆಂಬುವ ಮಹ ಕಾನನದಿ ಬಳಲಿಸದೆ ಅನುದಿನ ಧ್ಯಾನಮೃತ ಪಾನಗೈಸುವ ಧ್ಯಾನಿಪರ ಮಹಪ್ರಾಣದರಸೇ 2 ಆವಕಾಲದಿ ಬಿಡದೆ ನಿಮಿಷ ಜೀವ ಭಕುತರ ಭಾವದ್ವಾಸಿಸಿ ಜಾವ ಜಾವಕೆ ಬುದ್ಧಿ ಕಲಿಸುವ ದೇವದೇವರ ದಿವ್ಯದೇವರೆ 3 ಸಕಲಕೋಟಿಮಂತ್ರಗಳಿಗೆ ನಿಖಿಲ ನೀನೆ ಆಧಾರನಾಗಿ ಅಖಿಲರೂಪದಿ ಜಗವ ಬೆಳಗುವ ಭಕುತಿದಾಯಕ ಸುಖದ ಶರಧಿಯೆ 4 ಸಾರಿ ಭಜಕರ ಭಾರವಹಿಸಿ ಘೋರಭವಸಾಗರವ ಗೆಲಿಸಿ ಧೀರ ಶ್ರೀಗುರುರಾಮ ಪ್ರಭುವೇ 5
--------------
ರಾಮದಾಸರು
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ನೀನೇ ನಿನ್ನ ಮರೆದಿಹುದೇನು ಮನವೇ | ಸುಜ್ಞಾನದಿಂದ ನಿಜವನೀ ನರಿಯಲಿಲ್ಲವೇ ಪ ಶ್ವಾನ ಸೂಕರಾದಿ ಅತಿ ಹೀನ ಯೋನಿಯಲಿ ಸುಖದೊಳು | ನಾನಾ ಪರಿಯಲಿ ಬಾಹುದೇನು ಅನುವೇ 1 ಹರಿವ ಮೃಗಜಲಕ ಬೆಂಬತ್ತಿ ಪೋಪಾ ಹರಿಣನಂತೆ | ಹರಿದು ವಿಷಯ ಕೂಡಾ ಕೆಡುದೇನು ಗುಣವೇ 2 ನಿನ್ನ ಬಯಕೆಯಂತಾದಡೆ ಮನ್ನಿಸುವ ಅಲ್ಲದಡೆ | ಘನ್ನ ಚಿಂತೆಯೊಳು ಬೀಳುತಿಹುದೇನು ಸುಖವೇ 4 ನೆನೆದು ತರಿಸು ಮಹಿಪತಿ ಚರಣಾ ಚಿನ್ನ ಕೃಷ್ಣ ನಾ | ತನುವಿನೊಳಗಾಡುತಿಹ ನಿಜ ಮನವೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆರೆದು ಗೋಪಿಯರೆಲ್ಲರು - ಕೃಷ್ಣಯ್ಯನಕರವ ಪಿಡಿದುಕೊಂಡುಭರದಿಂದ ಬಂದು ಯಶೋದೆಗೆ ಚಾಡಿಯಅರುಹಿದರತಿ ವೇಗದಿ ಪ ಬಲು ಕಳ್ಳ ನಿನ್ನ ಮಗ - ಯಶೋದೆ ಕೇಳೆಹಾಲು ಕರೆಯುತಿರಲುತೊಲೆಗೆ ನಿಚ್ಚಣಿಕೆಯನೆ ಹಾಕದೆ ಸುರಿದನುನೆಲುವಿನ ಪಾಲ್ಮೊಸರ 1 ಅಮ್ಮಯ್ಯ ಇಲ್ಲ ಕಾಣೆ - ಇವಳು ಎನ್ನಸುಮ್ಮನೆ ದೂರುವಳೆಹಮ್ಮಿಂದ ನಾನವಳ ಅಟ್ಟಕ್ಕೆ ನೆಗೆಯಲುಬೊಮ್ಮ ಜಟ್ಟಿಗನೇನಮ್ಮ2 ಮತ್ತೆ ಮುತ್ತಿನಂಥ - ನಿನ್ನೀ ಮಗಹತ್ತಿ ಗವಾಕ್ಷದಿಂದಎತ್ತಿಟ್ಟ ಬೆಣ್ಣೆಯನೆಲ್ಲದ ಮೆದ್ದನುಹೆತ್ತ ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆ ಮೆಲ್ಲಲು - ಎನ್ನ ಹೊಟ್ಟೆಮಡುವು ಭಾವಿಯೇನೆಹುಡುಗರಿಗರಿಯದೆ ಎತ್ತಿಟ್ಟ ಬೆಣ್ಣೆಯಹೊಡೆದರವರ ಮಕ್ಕಳು 4 ಮರೆತು ಮಂಚದ ಮೇಲೆ - ನಾ ಮಲಗಿರಲುಹರಿವ ಹಾವನೆ ತಂದುಅರಿಯದಂತೆ ಬಂದು ಮುಸುಕಿನೊಳಗಿಟ್ಟುಸರಸರ ಪೋದನಮ್ಮ 5 ಹರಿದಾಡುವ ಹಾವನು - ನಾ ಹಿಡಿಯಲುತರಳ ನಾ ತಡೆಗಾರನೆಹರಕೆಯ ಹೊತ್ತುದನೊಪ್ಪಿಸದಿರಲುಗುರುತು ತೋರಲು ಬಂತೇನೊ6 ಕಕ್ಕಸ ಕುಚಗಳಮುಸುಕಿನೊಳಗೆ ಹಿಡಿದ 7 ಕೇಳು ಕೇಳೆಲೆ ಅವ್ವ - ಇವಳು ಬೇ-ತಾಳನಂತಿರುವಳುಬಾಲಕ ನಾನವಳುದ್ದಕೆ ನೆಗೆವೆನೆಜೋಲುವ ತೊಗಲಿಗಾಗಿ 8 ಮಕ್ಕಳು ಪಡೆದವರು - ಇಲ್ಲದ ಕಳವಿಕ್ಕಬಹುದೆ ಕೃಷ್ಣಗೆಸಿಕ್ಕ ತಪ್ಪು ಸಮೇತ ಎಳೆತಂದರೆತಕ್ಕ ಬುದ್ಧಿಯ ಹೇಳುವೆ 9 ಅಣುಘನರೂಪ ಕಾಣೆ - ನಿನ್ನೀ ಮಗಚಿನುಮಯ ರೂಪ ಕಾಣೆಘನ ಮಹಿಮನು - ಇಂಗಳಗೊಂದಿಯಚೆನ್ನಕೇಶವರಾಯ ಕಾಣೆ 10
--------------
ಕನಕದಾಸ
ನೋಡಿದೆ ಹರನಾ ನೋಡಿದೆ ಪ. ಹರನ ಕೊಂಡಾಡಿದೆ ಪಾದಪಾವನ್ನ ರೂಢಿಯೊಳಗೆ ಇಂಥಾ ಈಡಿಲ್ಲ ಶಿವನಾ ಜೋಡಿಶಿರವ ಬಾಗುವೆನಾ ಶಿರವಾ ಅ.ಪ. ಶುಕ ದೂರ್ವಾಸ ರೂಪದ ರುದ್ರಾ ನೀನು ಅವತಾರ ತಾಳಿದ್ಯೊ ವೀರಭದಾ ಮಥನವಾ ಮಾಡಲು ಸಮುದ್ರಾ ನೀನು ವಿಷಪಾನ ಮಾಡಿದ್ಯೊ ಆದ್ರ್ರಾ || ಆಹಾ|| ನೀಲಕಂಠನಾಮವು ಬಂದವು ನಿನ್ನ ನೋಡುವರ ಮನಕೆ ಆನಂದವ ಕೊಡುವುದು ಜಗಕೆ 1 ಕರದಲಿ ಡಮರು ತ್ರಿಶೂಲಗಳಿಂದಾ ನೀನು ಶೋಭಿಪಿಯೋ ಬಲುಛಂದಾ ಗಳದಲ್ಲಿ ದ್ರಾಕ್ಷಾಮಾಲೆಗಳಿಂದಾ ನಾಗಭೂಷಣಾಯಿಂದಾ || ಆಹಾ|| ಶಿರದಾ ಜಡಿಯೋಳು ಗಂಗಿಯ ಧರಿಸಿದ ಧೀರನು ಹರಿಯಾ ರೂಪಕೆ ಮರುಳಾದ ಶಂಕರನ 2 ಕೈಲಾಸಪುರಧೀಶ ವಾಸಾ ನೀನು ಸರ್ವರಮನಕೆ ಉಲ್ಲಾಸ ನೀನು ಸತಿಗೆ ತಾರಕ ಮಂಗಳ ಉಪದೇಶಾ ಸ್ಮಶಾನವನು ಕಾಯ್ದ ಹರಿದಾಸಾ || ಆಹಾ|| ನಂದಿವಾಹನನಾಗಿ ಆನಂದಾದಿ ಮೆರೆಯುವ ಸಿಂಧುಶಯನನ ಕಾಳಿಮರ್ಧನಕೃಷ್ಣನ ತಂದು ತೋರಿಸುವನ 3
--------------
ಕಳಸದ ಸುಂದರಮ್ಮ
ನೋಡಿದೇ ಶ್ರೀ ವಿಠಲನ ನೋಡಿದೆ ಪ ಕುಂಡಲ ಧರನ ಅ.ಪ. ದಾಸರಂದದಿ ಕಾವಿ ವಸನ | ಹೊದ್ದುಭಾಸೀಸುತಿಹ ಸಿರಿವರನ | ವಸನಮೀಸಲನವನು ತೆಗೆಯಲದನ | ಕಂಡೆಲೇಸಾದ ಶಾಲು ಹೊದ್ದವನ | ಆಹಕಾಶಮೀರದ ಶಾಲು | ಭಾಸುರ ಜರೆ ಖಚಿತಭೂಷಿತ ಹರಿ ಕುಳಿತು | ತೋಷಿಪ ಭಕುತರನ 1 ಸುತ್ತಿಹ ಪಾವಡೆ ಶಿರಕೇ | ಬಲುಸುತ್ತು ಸುತ್ತಿರುವುದು ಅದಕೆ | ಹರಿಮಸ್ತಕ ಛಂದ ಕಾಂಬುದಕೆ | ನೋಡಿಭಕ್ತ ಸಂದಣಿಯ ತೋಷಕ್ಕೆ | ಆಹಸುತ್ತಿಹುದನು ಬಿಚ್ಚೆ | ತುತ್ತಿಸುತಿರಲಾಗಕೃತ್ತಿವಾಸನ ತಾತ | ನೆತ್ತಿ ನೈಜವ ಕಂಡೆ 2 ಪೂಜಾರಿ ತೆಗೆಯಲು ಜರಿಯ | ಶಾಲುಮಾಜಾದೆ ವಿಠಲನ ಪರಿಯ | ಕಂಡೆನೈಜದ ಶ್ರೀವರನ ದ್ವಯ | ಹಸ್ತಯೋಚಿಸಿ ಕಟಿಲಿಹ ಪರಿಯ | ಆಹಸೋಜಿಗತನರೂಪ | ನೈಜದಿ ತೋರುತಪೂಜಾದಿ ಸ್ವೀಕಾರ | ವ್ಯಾಜಾವ ಕಂಡೆನು 3 ನಿರ್ಮಲಾಕೃತಿ ಪೊದ್ದ ಹಾರ | ತುಳಸಿಕಮ್ಮಲ ರ್ಸೂಸುವಧಾರಾ | ಕಾರಒಮ್ಮೇಲಿ ತೆಗೆದರಪಾರ | ದಯಸುಮ್ಮನ ಸರಿಗೀವ ಪೋರ | ಆಹಆಮ್ಮಹ ದೈವನ | ಇಮ್ಮಡಿ ಪ್ರಭೆ ಕಂಡನಿರ್ಮಾಲ್ಯ ತೆಗೆಯುವ | ಕರ್ಮಾಚರಿಸೂವಲ್ಲಿ 4 ಪಾದ | ಸ್ವೀಕರಿಸುವ ಭಕ್ತತೋಕನ ಬಿಂಬೋದ | ಶ್ರೀಕರ ದಳ ತುಳಸಿ 5 ನಾಕ್ಹತ್ತು ಭುವನಗಳ್ಜೋತಿ | ಮತ್ತನೇಕಾನೇಕಾಕಾರ ಜ್ಯೋತಿ | ಗಳೊಪ್ರಕಾಶ ಪ್ರದ ಪರಂಜ್ಯೋತಿ | ಮುಕ್ತಿಪ್ರಕಾರ ದೊಳಗಿವನೆ ಜ್ಯೋತಿ | ಆಹಏಕಮೇವ ಹರಿಗೆ | ಕಾಕಡಾರುತಿ ಮಾಳ್ಪಲೋಕರ ಪೂಜೆಯ | ಸ್ವೀಕರಿಪುದ ಕಂಡೆ 6 ಪಂಚ ಮೋಕ್ಷ ಪ್ರದ ಹರಿಗೆ | ಆಯ್ತುಪಂಚ ವಿಧಭಿಷೇಕ ಆವಗೆ | ಶೇಷಮಂಚಿಕೆ ಕ್ಷೀರಾಬ್ದಿಶಯಗೆ | ಮಧುಸಂಚನ ಮಧ್ವಿದ್ಯ ಹರಿಗೆ | ಆಹಪಂಚಾಮೃತಭಿಷೇಕ | ಸಂಚಿಂತಿಸುವನೀಗೆಸಂಚಿತ ಕರ್ಮವ | ಕೊಂಚವ ಮಾಡುವ 7 ಮಂಗಳ ಮಹಿಮಗ ಸ್ನಾನಾ | ಅವಗಂಗಾ ಪಿತನೆಂಬುದೆ ಮಾನ | ಹಾಗೂಅಂಗಜನಯ್ಯಗೆ ಸ್ನಾನಾ | ಆಯ್ತುಹಿಂಗದೆ ಲೋಕ ವಿಧಾನಾ | ಆಹಸಂಗೀತಲೋಲ ಸ | ತ್ಸಂಗವು ತುತಿಸಲುಸ್ವಾಂಗಾಯನಾಮ ಶು | ಭಾಂಗನು ಮೆರೆದನು 8 ಕಾಯ ವರೆಸಿ | ಬಹುಶಾಸ್ತ್ರೋಕ್ತಿ ಉಡಿಗೆಯ ಉಡಿಸಿ | ಮತ್ತೆರತ್ನಧ್ಯಾಭರಣವ ತೊಡಿಸಿ | ಚೆಲ್ವಕಸ್ತೂರಿ ತಿಲಕವನಿರಿಸಿ | ಆಹವಿಸ್ತøತೀಪರಿಯಲಿ | ಸತ್ಯ ಷೋಡಶ ಪೂಜೆಚತ್ತುರ ಮೊಗನಿಂದ | ಕೃತ್ಯಾನು ಸಂಧಾನ 9 ವೇದ ಘೋಷ ಪೂಜಾ ಮಂತ್ರ | ಬಹುನಾದ ವಿಠಲ ನಾಮ ಮಂತ್ರ | ತುಂಬಿಮೋದ ಪೂರೈಸಿತು ತಂತ್ರ | ಘಂಟೆನಾದದಿಂದಾರುತಿ ಕೃತ | ಆಹಆದರದಿಂದ ಪ್ರ | ಸಾದವು ಸ್ವೀಕೃತಮೋದದಿ ವಿಠಲನ | ಪಾದಾಲಿಂಗಾಂತ್ಯವ 10 ಉತ್ಕøಷ್ಟ ಸುಕೃತದ ಭೋಗ | ಹರಿಇತ್ತನು ಅನುಗ್ರಹ ಯೋಗ | ಸ್ವಂತಹಸ್ತದಿ ಪೂಜಾದಿ ಯೋಗ | ಮಾಳ್ಪಕೃತ್ಯ ಸಂಧಿಸಿದನು ಈಗ | ಆಹಚಿತ್ತಜ ಪಿತ ವಿಠಲ | ಭಕ್ತವತ್ಸಲ ದೇವನಿತ್ತಕಾರುಣ್ಯವ | ತುತ್ತಿಸಲೆನಗಳವೇ 11 ಪಿತೃ ಸೇವಕ ಪುಂಡಲೀಕ | ತನ್ನಕೃತ್ಯದೊಳಿರೆ ನಿರ್ವಲ್ಕೀಕ | ಹರಿವ್ಯಕ್ತ ತನ್ಭಕ್ತ ಪರೀಕ್ಷಕ | ನಾಗೆಭಕ್ತನು ಮನ ಸ್ಥೈರ್ಯಾಲೋಕ | ಆಹಇತ್ತ ಇಟ್ಟಿಗೆ ಪೀಠ | ಮೆಟ್ಟಿ ನಿಂತಿಹ ದೇವಕೃತ್ತಿ ವಾಸಾದ್ಯರಿಂ | ಸ್ತುತ್ಯ ಶ್ರೀ ವಿಠಲನ 12 ದಾಸೀಗೆ ಕಂಕಣವಿತ್ತು | ಹರಿದಾಸರ ರೂಪೀಲಿ ನಕ್ತ | ಕಳೆದಾಶು ದಾಸರ ಶಿಕ್ಷಕರ್ತ | ಮತ್ತೆದಾಸರ ನಿರ್ದೋಷ ವಾರ್ತ | ಆಹದಾಸನೋರ್ವಾ ವೇಶ | ಭೂಷಣ ಕೇಳುತ್ತವಾಸುಕಿ ಶಯನೊಲಿದ | ದಾಸ ಪುರಂದರಗೆ 13 ಮುಯ್ಯಕೆ ಮುಯ್ಯ ತೀರಿತು | ಜಗದಯ್ಯ ವಿಠಲನ್ನ ಕುರಿತು | ಪೇಳಿಕಯ್ಯನೆ ಮುಗಿದರು ತ್ವರಿತು | ದಾಸಮೈಯ್ಯ ಬಿಗಿದ ಕಂಬ ಒಳಿತು | ಆಹತ್ರಯ್ಯ ಲೋಕದಿ ದಾಸ | ಅಯ್ಯನ ಪೆಸರಾಯ್ತುತ್ರಯ್ಯ ಗೋಚರ ಹರಿ | ಪ್ರೀಯ್ಯನಿಗೊಲಿದಂಥಾ 14 ಅಂಡ ಬ್ರಹ್ಮಾಂಡಗಳೊಡೆಯ | ಭಕ್ತಪುಂಡಲೀಕನಿಗೊಲಿದ ಭಿಡೆಯ | ರಹಿತಚಂಡ ಕಿರಣಾನಂತ ಪ್ರಭೆಯ | ಹರಿಮಂಡಿತಿಂದು ಭಾಗ ತಡಿಯ | ಆಹಹಿಂಡು ದೈವರ ಗಂಡ | ಪುಂಡರೀಕ್ಷಾಕನೆಪಿಂಡಾಂಡದೊಳಗಿಹ | ಗಂಡನೆಂದೆನಿಸಿಹಗೆ 15 ಪುರಂದರ ವಿಜಯ ಭಾಗಣ್ಣ | ಮತ್ತೆವರ ಜಗನ್ನಾಥವರ್ಯ | ಬಹುಪರಿಠವಿಸಿತ್ತೆ ಮೃಷ್ಠಾನ್ನ | ದಾಸವರರ ಸೇವಕ ಸೇವಕನ್ನ | ಆಹಪುರಂದರದಾಸರ ದಿನ | ದರುಶನ ವಿತ್ತಿಹೆಅರಿದಾಯ್ತೆನ್ನಯ ಕುಲ | ಪರಮ ಧನ್ಯವೆಂದು 16 ಇಂದು ಭಾಗದಿ ವಾಸ ಜಯ | ಸಿರಿಇಂದಿರೆ ಲೋಲನೆ ಜಯ | ದಾಸಮಂದಗಭೀಷ್ಟದ ಜಯ | ಎನ್ನತಂದೆ ತಾಯಿ ಬಂದು ಜಯ | ಆಹ ಸುಂದರ ಗುರು ಗೋವಿಂದ ವಿಠಲ ಹೃ-ನ್ಮಂದಿರದೊಳು ತೋರಿ | ಬಂಧನ ಬಿಡಿಸುವ 17
--------------
ಗುರುಗೋವಿಂದವಿಠಲರು
ನೋಡಿರೈ ಜನಾ ರಂಜನೆಯಲ್ಲಿ | ನೋಡಿರೈ ಜನಾ | ಮಾಡದೆ ಹಿರಿಗುರು ಭಕ್ತಿಯ ಶೀಲದಿ | ರೂಢಿಯ ಡಂಭಕ ಹರಿದಾಡುವದು ಪ ಸಾಧು ಸಂತರ ಮನೆಯಲ್ಲಿ | ಆದರವಿಲ್ಲಾ ಮನದಲ್ಲಿ | ಮೇದಿನಿಯಲಿ ನುಡಿಸಿದ್ಧಿಯ ಹೇಳಲು | ಸಾಧಿಸಿ ಹೋಗುತ ಬಾಗುತಲಿಹುದು 1 ಚಂದನವಿಡಿದು ತೆಯ್ವಲ್ಲಿ | ಒಂದು ಬಾರದು ನೊಣವಲ್ಲಿ | ಕುಂದದೆ ಎಂಜಲ ತೊಳೆವಾಸ್ಥಳದಲ್ಲಿ | ಸಂದಿಸಿ ಮುಕುರುವ ಸಂದಲಿ ಯಂದದಿ 2 ಪರಗತಿ ಸಾಧನ ವರಿಯರು | ಬರಿದೆ ಭ್ರಾಂತಿಗೆ ಬೆರೆವರು | ಗುರುಮಹಿಪತಿಸುತ ಪ್ರಭು ಕಲ್ಪತರು | ಸೇರದೆ ಬೊಬ್ಬುಲಿ ಮರಕೆಳಗಾಡುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತಿ ಪೋದನೆಂದು ಶೋಕಿಸುವುದ್ಯಾಕೆ ಶ್ರೀ - ಪತಿಯು ಇರಲಾಗಿ ಮರುಳೆ ಪ ಪ್ರತಿ ಪ್ರತಿ ಜನ್ಮದಿ ಜತೆ ಮಾಡಿದ ಪಂಚ - ಕಾಯ ಸತ್ಯ ಸ್ಥಿರವಲ್ಲವೇ ಮರುಳೆ ಅ.ಪ ನೋತ ಪುಣ್ಯಾಪುಣ್ಯದ ಫಲ ವ್ರಾತ ಸುಖ ಸುಖವಿತ್ತು ಬರಿದಾಗುವುದು ನಿತ್ಯವಾಗಿ ಸುಖವೆ ಇರಲೆಂದು ಬೇಡಿದರೆ ವ್ಯರ್ಥಧಾವತೆ ಅಲ್ಲದೆ ಸಾರ್ಥಕೆಲ್ಲಿ ಮರುಳೆ 1 ಸೃಷ್ಟಿಯಲಿ ಎಲ್ಲರೂ ನಷ್ಟವಾಗುವರಲ್ಲದೆ ಶ್ರೇಷ್ಠರಾಗಿ ಬಾಳುವರೊಬ್ಬರಿಲ್ಲ ಎಷ್ಟು ಶೋಕಿಸಿದರು ಪೋದ ಕಾಷ್ಠ ಬರಲರಿಯದು ಎ- ಳ್ಳಷ್ಟು ಲಾಭ ಇದರಿಂದ ಇಲ್ಲ ಮರುಳೆ2 ಮುಟ್ಟಿ ಕಟ್ಟಿದ ತಾಳಿಯ ಸಂಬಂಧ ಕೊಟ್ಟ ಹರಿ ತಾ ತಟ್ಟನೆ ಒಯ್ದ ಮೇಲೆ ದುಷ್ಟವೆನ್ನದಲೆ ಇಷ್ಟವೆಂದೆಣಿಸಲು ಸೃಷ್ಟಿಪತಿಯು ತುಷ್ಟನಾಗುವ ಮರುಳೆ 3 ಸರಿಯಲ್ಲಾ ಬರಿದೆ ಚಿಂತಿಸುವುದು ನಿನಗೆ ಕರೆಕರೆಯು ಹೆಚ್ಚುವುದು ಮುಂದೆ ಬಹಳ ಹರಿಕಥೆಯ ಕೇಳು ಹರಿದಾಸರೊಳ್ ಬೀಳು ಹರಿಗೆ ಪೇಳು ನಿನ್ನಯ ಗೋಳು 4 ಇನ್ನಾದರೂ ನೀನು ಹರಿಯ ಸಂಕಲ್ಪವಿದೆಂದು ನಿನ್ನ ಮನದೊಳು ತಿಳಿದುಕೊಂಡು ಘನ್ನ ಮಹಿಮಾ ವಿಜಯ ರಾಮಚಂದ್ರವಿಠಲನ್ನ ಸನ್ನುತಿಸಲು ಮುನ್ನೆ ಹತಿಯಾಗುವುದು ಮರುಳೆ 5
--------------
ವಿಜಯ ರಾಮಚಂದ್ರವಿಠಲ
ಪತಿವ್ರತೆ ಹ್ಯಾಂಗಿರಬೇಕು ನಿಜವಾಗಿ ಪ ರತಿಪತಿಪಿತನನ್ನು ಪತಿಯಲ್ಲಿ ನೆನೆಯುತ್ತ ಅ.ಪ. ಹೊತ್ತಾರೆ ಏಳಬೇಕು ಪತಿಗೆ ವಂದಿಸಬೇಕು ನಿತ್ಯತುಳಸಿಗೆರಗಿಕೃತ್ಯಮಾಡಲಿಬೇಕು ಅತ್ತೆಮೆಚ್ಚಿಸಬೇಕು ತೊತ್ತಿನಂತಿರಬೇಕು ರತಿಯ ನೀಡುತ ಪತಿಗೆ ಹಿತದಿಂದ ಬಾಳಬೇಕು 1 ಮಿತಮಾತು ಇರಬೇಕು ಸುತರ ಪಾಲಿಸಬೇಕು ಮತಿಮತದಿ ನಡಿಬೇಕು ಅತಿಥಿ ಪೂಜಿಸಬೇಕು ವ್ರತನೇಮ ವಿರಬೇಕು ಗತಿ ಹರಿಯೆ ತಿಳಿಬೇಕು ಮಾತ್ಸರ್ಯಬಿಡಬೇಕು ತೃಪ್ತಿಯಿರಲಿಬೇಕು 2 ನೆರೆಹೊರೆ ಗಂಜಬೇಕು ತಿರುಗೋದು ಬಿಡಬೇಕು ತಿರಿ ತಿಂಡಿ ಬಿಡಬೇಕು ಹರಟೆಗಳ ಬಿಡಬೇಕು ಹರಿಕಥೆ ಕೇಳಬೇಕು ಹರಿದಿನ ಮಾಡಬೇಕು ಹರಿಯ ಪಾಡಲಿಬೇಕು 3 ನೆಟ್ಟಕುಂಕುಮ ಬೇಕು ಕೆಟ್ಟವರ ಬಿಡಬೇಕು ಕಟ್ಟಿ ಆಶೆಯ ಬಿಟ್ಟು ತೃಪ್ತಿಯಿಂದಿರಬೇಕು ಕಷ್ಟಬಂದರು ಬಹು ಗುಟ್ಟಿನಿಂದಿರಬೇಕು ನೆಂಟರೊಡನೆ ಕಠಿಣ ನಿಷ್ಟೂರ ಬಿಡಬೇಕು 4 ಚುಚ್ಚಬಾರದು ಚಾಡಿ ಬಿಚ್ಚಬಾರದು ಗಾಡಿ ಹಚ್ಚಬಾರದು ವಿಷಯ ಕೊಚ್ಚಬಾರದು ಜಂಭ ಹುಚ್ಚಳಂತಿರದ್ಹಾಂಗೆ ಸ್ವಚ್ಚನಡತೆಯು ಬೇಕು 5 ಪಾಪವ ತೊರಿಬೇಕು ಲೇಪನವ ಬಿಡಬೇಕು ಕೋಪವ ಬಿಡಬೇಕು ಕಪಟತ್ವ ಬಿಡಬೇಕು ರೂಪ ಮದವ ಬಿಟ್ಟು ಚಪಲತ್ವ ತೊರಿಬೇಕು ವಿಪರಿತ ಮಡಿಬಿಟ್ಟು ಶ್ರೀ ಪತಿಯ ನೆನಿಬೇಕು 6 ಅಂಗ ಶುದ್ಧಿಯು ಬೇಕು ಶೃಂಗಾರ ರಸಬೇಕು ನಗೆಮೊಗವಿರಬೆಕು ಸವಿಮಾತು ಗುಣಬೇಕು ಭಂಗಾರ ವಿಡಬೇಕು ರಂಗಗೆನ್ನಲಿ ಬೇಕು ಮಂಗಳಾಂಗ ನಮ್ಮ “ಶ್ರಿ ಕೃಷ್ಣವಿಠಲ” ನ್ನ ಹಿಂಗದೆ ನೆನೆಬೇಕು ಅಂಗಿನೀಗಲಿ ಬೇಕು 7
--------------
ಕೃಷ್ಣವಿಠಲದಾಸರು
ಪಥವ ಬಿಡು ಬಿಡು ದೇವ ಪಥದಿ ಮಲಗುವರೆಗತಿ ಚಿದಾನಂದನಿರೆ ಗತಿಗೆಡುವೆನೆ ಭಯಕೆ ಪ ಭವ ಹರಿದುನಿಲ್ಲದಲೆ ನಾನೀಗಲೈ ತರಲಿಕೆಇಲ್ಲಿ ಸರ್ವವೆ ಆಗಿ ನೀ ಬಂದು ಮಲಗಿರುವೆಸುಳ್ಳನಿತು ಸೇರದಿದು ನಿನ್ನವಗೆ ಬಿಡು ಪಥವ1 ಮನುಜ ಸಂಗವನಳಿದು ಮಹದರಣ್ಯವ ಹೊಕ್ಕುಅನಂತರದ ಪುಣ್ಯದಾಶ್ರಮವ ನೋಡಿಸನುಮತದಿ ಪೂಜೆಯನು ಮಾಳ್ಪೆನಾನೆಂದು ಬರೆಘನಸರ್ಪವಾಗಿ ನೀನಡ್ಡ ಬಿದ್ದಿಹೆ ದೇವ 2 ಸಕಲ ಸಂಗವನುಳಿದು ಸ್ವಾನುಭಾವಗಳಿಂದಅಖಿಲ ಮೃಗಗಳ ಕೂಡಿ ನಿಶ್ಚಲತೆಯಿಂದಭಕುತಿಯಲಿ ನಿನ್ನನು ಭಜಿಪೆನೆಂದೈದುತಿರೆಭಕುತನಿಗೆ ಸರ್ಪನಂತಿಹುದಿದೇನೈ ಸ್ವಾಮಿ3 ಏಕಾಂತ ಗೃಹಗಳಲಿ ಏಕಾಂತ ಸ್ಥಳಗಳಲಿಏಕಾಂತವಾಗಿ ನಿನ್ನನೆ ಪೂಜಿಸಿಏಕಾಂತ ಸರ್ವಸಾಧನವೆನುತಲೈದುತಿರೆಏಕಾಂತ ಮಾತೇಕೆ ಪಥವ ಬಿಡು ಎಲೆ ದೇವ 4 ಶುಕಗೆ ಪಂಜರದಂತೆ ಸಾಕ್ಷಿಯೆನಗಿರುತಿರಲುಅಖಿಲ ಚಿಂತೆಯ ಗಿಡುಗ ಬರಲಹುದೆಮುಕುತಿದಾಯಕ ಚಿದಾನಂದ ಗುರು ಕೇಳೆನಗೆಯುಕುತಿಯುಂಟೇ ಬೇರೆ ಬಿಡುಬಿಡಿರೆ ಬಿಡು ಪಥವ5
--------------
ಚಿದಾನಂದ ಅವಧೂತರು
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪರತತ್ವ ವಿಠಲನೇ | ಪೊರೆಯ ಬೇಕಿವಳಾ ಪ ದುರಿತ ರಾಶಿಯ ತರಿದು | ಕರಪಿಡಿಯ ಬೇಕೋ ಅ.ಪ. ಕಾಲ ಕಾಲ ರೂಪಾತ್ಮಾ 1 ಗುರು ಕರುಣವಿಲ್ಲದಲೆ | ಹರಿಯೊಲಿಯನೆಂದೆಂಬಪರಮರಾಹಸ್ಯವನು | ಅರುಹಿ ಪ್ರೀತಿಯಲೀಕರುಣಿಸೋ ತವನಾಮ | ಸ್ಮರಣೆ ಸುಖ ಸಖ್ಯವನುಮರುತಾಂತರಾತ್ಮ ಹರಿ | ದುರಿತವನದಾವಾ 2 ಹರಿದಾಸ್ಯವತಿ ಕಷ್ಟ | ವಿರುವುದೆಂದರಿತಾಗ್ಯುಪರಿ ಪ್ರಶ್ನೆ ಭಕ್ತಿಯಲಿ | ಮೊರೆಯನಿಡುತಿರುವಾ |ತರಳೆ ಗಂಕಿತ ವಿತ್ತೆ | ವರ ಸ್ವಪ್ನ ಸೂಚ್ಯದಲಿಹರಿಯೆ ನಿನ್ನಾದೇಶ | ವಿರುವುದೆಂದರಿತು 3 ಪರಿ ಪರಿಯಗೈಯ್ಯುವಲಿಹರಿಯೆ ತವ ಸಂಸ್ಮರಣೆ | ಮರೆಯದಂತಿರಿಸೋ 4 ಜೀವೇಶ ಸನ್ನುತನೆ | ಜೀವರಂತರ್ಯಾಮಿಗೋವತ್ಸದನಿ ಗಾವು | ಧಾನಿಸೂವಂತೇ |ಕೈವಲ್ಯ ಪ್ರದ ಗುರೂ | ಗೋವಿಂದ ವಿಠ್ಠಲನೆಭಾವುಕಳ ಮಾಡಿವಳ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಪರಮ ಕಾರುಣ್ಯ ಗುರು ಕರುಣಿಸೆನಗ್ಹರಿ ಪದವ ಶರಣೆಂದು ನಮಿಪೆ ನಿಮಗೆ ಪ. ಹರಿಯ ದಾಸತ್ವದಲಿ ವರದೀಕ್ಷೆಯನೆ ಕೊಟ್ಟು ಕರುಣಿಸಿ ಕೃಪೆಗೈದಿರಿ ಗುರುವೆ ಅ.ಪ. ಅಂಕಿತವ ಮೊದಲಿತ್ತು ಹೃದಯಾಂಕದಲಿ ನಿಲಸಿ ಮಂಕುಬುದ್ಧಿಯ ತೊಲಗಿಸಿ ಶಂಖ ಚಕ್ರಾಂಕಿತನ ಪದಕಮಲವನು ಮನ ಪಂಕಜದೊಳಗೆ ತೋರಿ ಶಂಕರಾರ್ಚಿತನ ಕೃಪೆ ಎನ್ನೊಳಾಗಲಿ ಎಂದು ಶಂಕಿಸದೆ ವರವಿತ್ತಿರಿ ಗುರುವೆ 1 ಶ್ರೀನಿವಾಸನು ನಿಮ್ಮೊಳ್ ಸಾನುರಾಗದಿ ನೆಲಸಿ ತಾನಿತ್ತ ದಾಸತ್ವವ ಏನೆಂಬೆ ಈಗಭಿಮಾನವ ತೊರೆ ಎನುತ ತಾ ನುಡಿಸುತಿಹನು ನಿಮ್ಮೊಳ್ ಮಾನಾಭಿಮಾನ ಹರಿ ಗುರುವಶವಾಗಿರಲು ನಾನಳುಕಲಿದಕೇತಕೆ ಗುರುವೆ 2 ಸ್ವಪ್ನದಲಿ ದಾಸತ್ವ ಸಿದ್ಧಿಸಲಿ ಎಂದೆನುವ ಅಪ್ರತಿಮ ನುಡಿ ಕೇಳಿದೆ ಕ್ಷಿಪ್ರದಿಂದಲಿ ಕರುಣಿಸಿದಿರೆನಗಾಗಿದನಿನ್ನು ತಪ್ತವಾಯಿತು ಭವದ ದುರಿತ ಆಪ್ತಗುರು ನಿಮ್ಮಂಥ ಮಹಿಮರನು ನಾ ಕಾಣೆ ಗುಪ್ತದಲಿ ಜಗದಿ ಮೆರೆವ ಗುರುವೆ 3 ಇತ್ತಿರೆನಗೊಂದೊಂದೆ ದಾಸತ್ವ ಸಾಮಗ್ರಿ ಅತ್ಯಧಿಕ ಕರುಣೆಯಿಂದ ನಿತ್ಯವಾಗಿರಲಿ ಹರಿದಾಸತ್ವ ಇಹ ಪರದಿ ಸತ್ಯವಂತರ ಕೃಪೆಯಲಿ ನಿತ್ಯದಲಿ ನೀತ ಗುರು ನಿಮ್ಮಿಂದ ನಿಜ ರೂಪ ವ್ಯಕ್ತವಾಗಲಿ ಜ್ಞಾನದೀ ಗುರುವೆ 4 ಸಿರಿ ತಂದೆ ಮುದ್ದುಮೋಹನದಾಸರಾಯ ಗುರುವೆ ನಿಮ್ಮ ಕರುಣದಿ ಪರಿ ಪರಿ ಭವಪಾಶ ದುರಿತಗಳು ದೂರಾದವು ಪರಮ ಸಾತ್ವಿಕರೆ ಸಿರಿವರನ ಪದ ಭಜಿಪಂಥ ವರದೇವತಾಂಶರೆನಿಪ ಗುರುವೆ 5 ಮಂದರಿಗೆ ಬಹು ಮಲಿನರಂದದಲಿ ತೋರುತ ಕಂದರ್ಪಪಿತನ ಸ್ಮರಿಪ ಒಂದೊಂದು ವ್ಯಾಪಾರ ಅರಿಯಲಳವಲ್ಲಿನ್ನು ಮಂದಮತಿಯಾದ ಎನಗೆ ಬಂದು ಭೂಲೋಕದಲಿ ಸಜ್ಜನರನುದ್ಧರಿಪ ತಂದೆ ನಿಮ್ಮರಿವರ್ಯಾರೊ ಗುರುವೆ 6 ಅರಿಯೆ ಅನ್ಯರನಿನ್ನು ಶ್ರೀ ಗುರುವೆ ಕರುಣಿಸಿರಿ ವರಜ್ಞಾನ ಸುಧೆಯನಿತ್ತು ವರಶೇಷಶಯನನ ನಿರುತ ಸೇವಿಸುವಂಥ ಪರಮಭಾಗ್ಯವ ಕರುಣಿಸಿ ಸಿರಿವರ ಗೋಪಾಲಕೃಷ್ಣವಿಠ್ಠಲನ ರೂಪ ತ್ವರಿತದಿಂ ತೋರಿ ಪೊರೆಯೊ ಗುರುವೆ 7
--------------
ಅಂಬಾಬಾಯಿ
ಪವನಾ ಸಂಭೂತಾ ಒಲಿದೂತವಕಾದಿ ಕಾಯಬೇಕೂ |ಇವನಾರೋ ಎಂದೂ ದಾಸಿನಾ | ಮಾಡದಲೆ ಎನ್ನಾ ಪ ಹರಿವೇಷಧರನೆ ನರ |ಹರಿಭಕುತರ ಪೊರೆಯುವದಕ್ಕೇ ||ಹರಿಯಂತೆ ಒದಗುವೆಯೋ ನೀನೂ | ಹರಿದಾಸ ನಾನೂ 1 ಕಪಿಪಾ ಕಪಿಯಾಜ್ಞದಂತೇ |ಕಪಿಲನ್ನ ಪತ್ನಿಯನ್ನೂ ||ಕಪಿಗಳು ಹುಡುಕಿ ಮಿಡುಕಲು | ಕಾಯ್ದೆ ಆವಾಗಲೂ 2 ಅಜಸುತನ ಶಾಪದಿಂದ |ಅಜಗರನಾದ ವನಪಾದ ||ರಜದೀ ಪೂನೀತನ ಮಾಡಿದನೇ | ಅಜಪದವಿಗೆ ಬಹನೇ3 ಕಲಿಯುಗದಿ ಕವಿಗಳೆಲ್ಲಾ |ಕಲಿಯಾ ಬಾಧೆಗೆ ಬಳಲಿ |ಕಲಿವೈರಿ ಮುನಿಯೆಂದೆನಿಸಿದೇ | ಕಲಿಮಲವಾ ಕಳೆದೆ 4 ಗುರು ಪ್ರಾಣೇಶ ವಿಠಲಾ |ಗುರುವರನೆಂಬೊ ಜ್ಞಾನಾ ||ಗುರು ಮಧ್ವರಾಯಾ ಕರುಣಿಸೋ | ಗುರುಮತಿಯನು ಬಿಡಿಸೋ 5
--------------
ಗುರುಪ್ರಾಣೇಶವಿಠಲರು