ಒಟ್ಟು 9833 ಕಡೆಗಳಲ್ಲಿ , 131 ದಾಸರು , 5664 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವದೇವತೆಗಳ ಸ್ತುತಿ ಅಂಬುಧಿಶಯನ ಪೀತಾಂಬರಧರ ಕಮಳಾಂಬಕ ಸಿರಿರಮಣ ನಂಬಿದ ಭಕ್ತರ ಬೆಂಬಿಡದಿಹನೆಂಬುದಕೆ ಸಹಜಗುಣ ಪ ಒರಲುತ್ತಾ ಸಭೆಗೆ ಬರಲು ಒತ್ತಿ ಮುದ್ದಿಸುತಿರಲು ಪೊರೆದೆಯೋ ಧ್ರುವನ1 ಹರಿನಾಮವನು ಬರೆಯೆ ವಿರಚಿಸೆ ಕೇಳದಿರೆ ದುರುಳಬಾಧಿಸೆ ಮಗನ ಮೂರ್ತಿ ವರವಿತ್ತು ಪೊರೆದೆಯೋ ಪ್ರಹ್ಲಾದನ 2 ಶಾಪವನೀಯ ಲಗಸ್ತ್ಯನಿಂದ್ರದ್ಯುಮ್ನ ಭೂಪತಿ ಗಜವಾಗಲು ಕೋಪದಿ ನೆಗಲ್ವಿಡಿಯೊ ಗುಪಿತದಿ ಮೊರೆಯಿಡಲು ಸೀಳ್ದು ಪೊರೆದೆಯೋ ಗಜವ 3 ಮರ್ಮವನರಿತು ಬರಲು ಅನ್ನವನೀಯೆನಲು ಪೊರೆದೆಯೋ ಪಾಂಡುವರ 4 ಹರಿವಾಸವರವ ಮಾಡಲು ನರಿಯೆ ಬಂದು ವರವಿತ್ತು ಪೊರೆದೆಯೋ ವೇಣುಗೋಪಾಲ 5
--------------
ಕವಿ ಪರಮದೇವದಾಸರು
ದೇವದೇವತೆಗಳ ಸ್ತುತಿ ವೀರನ ನೋಡಿರೈ ನರಮೃಗಾಕಾರನ ಪಾಡಿರೈ ಪ ಕಾರ್ಪರ ಋಷಿ ತಪಕೊಲಿದು ಅಶ್ವತ್ಥದಿ ಮೆರೆವಾ ಭಕುತರ ಪೊರೆವಾ ಅ.ಪ ದುರಿತ ತಿಮಿರಕೆ ಸವಿತ ವ್ರಾತ ಸೇವಿತ ತ್ವರಿತ ಮಧ್ಬಂಧು ಪೊರೆಯೊನೀನೆಂದು ಪ್ರಾರ್ಥಿಸುವರಿಗಭೀಷ್ಟಿಯಗರಿಯಲು ದೇವ ತರುಸ್ವಭಾವ 1 ಉಗ್ರನಾದರು ಭಕುತಾಗ್ರಣಿಗಳಿಗೆ ಅನುಗ್ರ ಒಲಿವನು ಶೀಘ್ರ ವಾಗ್ಧೇವಿಯರ ಸನಾಜ್ಞದಿ ನಮಿಸಿ ಪ್ರಹ್ಲಾದ ಸ್ತುತಿಸಲು ಒಲಿದ ಉಗ್ರವದನ ಶಾಲಿಗ್ರಾಮಗಳ ರೂಪದಲಿ ವೃ- ಭಾರ್ಗವಿ ಪ್ರಕಟನಾಗಿಹನ 2 ತೋರಿಸುವದಕೆ ಅಸುರನ ಮಥಿಸಿ ನೆಲಸಿಕರುಣದಿ ದಿವಿಜರೊಡೆಯನ3 ಪೋಪುದು ವೃಜಿನ ತಿಳಿವದು ಮುನ್ನ ಭಾನು ಕರ್ಕಾಟಸ್ಥಾನದಿ ಬರುವ ಕಾಲದಲಿ ತೀರ್ಥಗಳಲ್ಲಿ ಹೃದಯದಿ ಪೊಳಿವ 4 ತರುವರ ಸಂಸ್ಥಾ ಚರಿತ ತ್ರಿಗುಣಾತೀತ ಪದಯುಗಲ ಬಿಡದನುಗಾಲ ಸಾರಿ ಭಜಿಪರಿಗಪಾರ ಸೌಖ್ಯಗಳ ಗರಿವ ವಿಘ್ನವ ತರಿವ5
--------------
ಕಾರ್ಪರ ನರಹರಿದಾಸರು
ದೇವದೇವನೆ ಓವುದೆಮ್ಮನು ಶ್ರೀವಧೂವರನೇ ಸಾವಧಾನದಿ ಭಾವಿಸೈ ವಸುದೇವ ಕುವರನೇ ಪ. ನೀಲಮೇಘಶ್ಯಾಮ ರಮಾಲೋಲ ಪಾಲಿಸೈ ಬಾಲಗೋಕುಲಬಾಲ ಶ್ರೀ ವನಮಾಲ ಪಾಲಿಸೈ 1 ಭೋಗಿಶಯನ ಯೋಗಗಮ್ಯ ಸಾಗರಸ್ಥಿತ ಬಾಗಿ ನಮಿಪೆವು ರಾಗದಿಂ ಪೊರೆ ವಾಗಗೋಚರ 2 ಘಳಿಲನೈತಹುದಿಳೆಯ ರಮಣ ತಳುವ ಬೇಡುವೈ ಎಳೆಯರಾವು ಚಲವನರಿಯೆವು ಒಲವನೆರೆವೆವೈ3 ದೇಶದೇಳ್ಗೆಯೊಳಾಸೆಯಿಂದಿಹ ದಾಸರೆಂದು ನೀಂ ಲೇಸ ಪಾಲಿಸು ಆಶೆ ಸಲ್ಲಿಸು ಶೇಷಗಿರೀಶನೇ4
--------------
ನಂಜನಗೂಡು ತಿರುಮಲಾಂಬಾ
ದೇವನಲ್ಲವೇನೋ ಸದ್ಗುರು ಮಹಾದೇವನಲ್ಲವೇನೋ | ಆದಿಯೋಳ್ ಸಿದ್ಧರು ಹೋದ ದಾರಿಯ | ತೋರಿ ಭೇದವ ಬಿಡಿಸಿದ ಮೂರುತಿ ಪ ನರಜನ್ಮದೊಳಗೆ ಬಂದು ನೀನು | ಪ್ರಪಂಚದ ಕಡಲು ಮಧ್ಯದಿ ನಿಂದು | ಅರಿತು ಮರೆತು ಒಮ್ಮೆ ಗುರುವೆಂದು ನೆನೆದರೆ | ಗುರುತಿಟ್ಟು ಅವರಿಗೆ ಪರತರ ತೋರುವ 1 ಆಶಾಪಾಶವ ಬಿಡಿಸಿ ಮಾಡಿದ | ದೋಷ ಭವಂಗಳ ಕರ್ಮವ ಕೆಡಿಸಿ | ನ್ಯಾಸ ಧ್ಯಾಸದಿ ಜಪ ಮಾಡೆ ಗುರು |ಬೋಧ ಪ್ರಕಾಶವ ತೋರಿದ ಈಶನು 2 ಭಕ್ತಿ ಜ್ಞಾನವ ಹಿಡಿದು ನಂಬಿದಗೆ | ಮುಕ್ತಿಯ ನಿಶ್ಚಯದಿ ಪಾಲಿಸುವ | ಕರ್ತೃ ಸದ್ಗುರು ಭವತಾರಕ ಧರೆಯಲಿ | ಪ್ರತ್ಯಕ್ಷವಾದಂಥ ಪರಬ್ರಹ್ಮರೂಪನು 3
--------------
ಭಾವತರಕರು
ದೇವನೀತ ಅವಧೂತ ಜೀವ ಜೀವ ಭಾವಭೋಕ್ತ ಕಾವ ದೈವ ಪ್ರಾಣನಾಥ ದೇವಾಧಿದೇವನೆ ಈತ 1 ಶ್ರೀದೇವ ದೇವ ನಿರ್ವಿಕಲ್ಪ ನಿರಾಕಾರ ನಿರ್ವಿಶೇಹ ನಿರಂತರ ಸರ್ವಸಾಕ್ಷಿ ಸರ್ವಾಧಾರ ಸರ್ವಾತೀತ ಸರ್ವೇಶ್ವರ 2 ಸಾಧುಜನರ ಹೃದಯ ಸದೋದಿತಾನಂದೋದಯ ಆದಿ ಅನಾದಿ ನಿಶ್ಚಯ ಇದೆ ಇದೆ ವಸ್ತುಮಯ 3 ಪತಿತಪಾವನ ಪೂರ್ಣ ಅತಿಶಯಾನಂದಗುಣ ಭಕ್ತಜನರುದ್ಧರÀಣ ಸತತ ಸುಖನಿಧಾನ 4 ಙÁ್ಞನಗಮ್ಯ ಗುಣಾತೀತ ಅನಾಥಬಂಧು ಗುರುನಾಥ ದಾತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇವಾದಿ ದೇವ ನಮೋ ಶ್ರೀ ಸತ್ಯದೇವ ಪ ದೇವಾದಿ ದೇವ ಹರಿ ಗೋವಿಂದ ಮುಕುಂದ ಭಾವಜನಕ ಸದ್ಭಾವುಕ ಜನಪ್ರಿಯ ಅ.ಪ. ಶ್ರೀಶಾ ಶಶಿಕೋಟಿ ಸಂಕಾಶ ಸುಶೋಭಿತ ದರಹಾಸ ಸುಜನ ಪರಿಪೋಷ ಸನ್ನುತ ಸರ್ವೇಶ ಈಶಾ ಈ ಸಮಸ್ತ ಜಗದೀಶನೆಂದು ನಿನ್ನ ನಾ ಸ್ತುತಿಸುವೆ ಮನದಾಸೆಯ ಸಲ್ಲಿಸೊ ವಾಸವಾದಿ ಸುರಮಹಿಮ ಪ ರೇಶ ಪೂರ್ಣಗುಣ ದಾಸಜನಾವನ ಕ್ಲೇಶವ ಕಳೆದಿನ್ನು ನೀ ಸರ್ವದ ಎನ್ನ ಪೋಷಿಸು ಕರಿಗಿರಿ ವಾಸ ಶ್ರೀ ನರಹರಿ 1
--------------
ವರಾವಾಣಿರಾಮರಾಯದಾಸರು
ದೇವಾದಿ ದೇವಗೆಭಕ್ತ ಸಂಜೀವಗೆಶ್ರೀ ವಿಘ್ನೇಶ್ವರಗೆ ಜಯವೆಂದುಜಯವೆಂದು ಪಾರ್ವತೀಪುತ್ರಗೆಪಾವನಗಾತ್ರಗೆಫಣಿಯಜ್ಞ ಸೂತ್ರಗೆಹೂವಿನಾರತಿಯ ಬೆಳಗಿರೆ 1 ಸಿಂಧುರಗಮನೆಯರುಕುಂದಾಭರದನೆಯರುಇಂದುಶೇಖರಗೆ ಜಯವೆಂದುಜಯವೆಂದು ಇಂದ್ರಾದಿವಂದ್ಯಗೆನಿರ್ಜಿತಚಂದ್ರಗೆ ಸದ್ಗುಣಸಾಂದ್ರಗೆಕುಂದಣದಾರತಿಯ ಬೆಳಗಿರೆ 2 ವಾರಣದವನೆಗೆಧೀರಹೇರಂಬಗೆರಾವಣಾಸುರನ ಜಯಿಸಿದಜಯಿಸಿದಶರಣ ಮಂದಾರಗೆಶರಧಿ ಗಂಭೀರಗೆಕೌಸ್ತುಭಹಾರಗೆಮೇರುವೆಯಾರತಿಯ ಬೆಳಗಿರೆ 3 ಸುರರು ಹೂಮಳೆಗರೆಯೆತರುಣಿಯರ್ಪಾಡಲುಸುರದುಂದುಭಿ ಮೊಳಗೆ ಜಯವೆಂದುಜಯವೆಂದುಸಿಂಧುರವರ್ನಗೆಶೂರ್ಪಸುಕರ್ನಗೆಸರ್ವತ್ರಪೂರ್ಣಗೆಕುರುಜಿನಾರತಿಯ ಬೆಳಗಿರೆ 4 ಪಂಕಜಾಂಬಿಕೆಯರುಭೋಂಕನೆ ಪಾಡಲುಶಂಕರನ ಪುತ್ರ ಜಯವೆಂದುಪಾವನವೇಷಗೆವರದ ಗಣೇಶಗೆಕುಂಕುಮದಾರತಿಯ ಬೆಳಗಿರೆ 5 ರಮ್ಯವಾದಲತಿಗೆಯರಸವ ಪಾದಕೆ ತೊಡೆದುಕಮ್ಮೆಣ್ಣೆಯನು ಕಂಠಕನುಲೇಪಿಸಿಸುಮ್ಮಾನದಿಂದ ಪಟವಾಸ ಚೂರ್ಣವತಳಿದುನಿಮ್ಮ ಪೂಜಿಸುವೆನು ಗೌರಿದೇವಿ 6 ವರಧೂಪದೀಪ ಪರಿಪರಿಯ ನೈವೇದ್ಯ ಭಾ-ಸುರ ಸುತಾಂಬೂಲ ಸೀಗುರಿದರ್ಪಣನಿರುಪಮ ಛತ್ರ ಚಮರಾದಿ ಸೇವೆಯನು ಸ್ವೀ-ಕರಿಸಿ ಪಾಲಿಸೆ ಎನ್ನ ಗೌರಿ ದೇವಿ ಜಯ 7 ಇಂತು ಪರಿಪರಿಯ ರಾಜೋಪಚಾರಗಳಿಂದಸಂತತವು ನಿಮ್ಮ ಪಾದವ ಪೂಜಿಸಿನಿಂತು ಕರವನೆ ಮುಗಿದು ಧ್ಯಾನಿಸುತ ನಲಿನಲಿದುಸಂತಸದಿ ನಿಮ್ಮ ಸ್ತುತಿಸುವೆನು ಗೌರಿ ಜಯ 8 ಮತ್ತೇಭಗಮನೆಗೆ ಮಾಹೇಂದ್ರಸನ್ನುತೆಗೆಅತ್ಯಂತ ಪರಮ ಪಾವನ ಚರಿತೆಗೆನಿತ್ಯ ಸೇವೆಯನು ಮಾಡುವರ ರಕ್ಷಿಸುವಂಥಪ್ರತ್ಯಕ್ಷಮೂರ್ತಿ ಶ್ರೀಗೌರಿ ನಿಮಗೆ ಜಯ9 ಕಲಕೀರವಾಣಿಗೆ ಕಾಳಾಹಿವೇಣಿಗೆಕಲಧೌತಕಮಲ ಶೋಭಿತಪಾಣಿಗೆನಳಿನದಳನೇತ್ರೆಗೆ ನಾರಾಯಣೆಗೆ ನಮ್ಮ-ನೊಲಿದು ರಕ್ಷಿಸುವಂಥಾ ಶ್ರೀಗೌರಿಗೆ ಜಯ 10 ಕುಂಭಸಂಭವನುತೆಗೆ ಜಂಭಾರಿಪೂಜಿತೆಗೆರಂಭಾಸುನರ್ತನಪ್ರಿಯೆಗೆ ಶಿವೆಗೆರಂಭೋರುಯುಗಳೆಗೆ ಬಿಂಬಾಧರೆಗೆ ನಮ್ಮಬೆಂಬಿಡದೆ ರಕ್ಷಿಸುವ ಗಿರಿಜಾತೆಗೆ ಜಯ 11 ಮುತ್ತೈದೆತನಗಳನು ನಿತ್ಯಸಂಪದಗಳನುಉತ್ತಮಾಂಬರ ಛತ್ರಚಾರಮವನುಅತ್ಯಂತ ಪ್ರೀತಿಯಿಂದಿತ್ತು ರಕ್ಷಿಸಿ ಭಕ್ತವತ್ಸಲೆ ಶ್ರೀ ಗೌರಿದೇವಿ ತಾಯೆ12 ಎಂದೆಂದು ಈ ಮನೆಗೆ ಕುಂದದೈಶ್ವರ್ಯವನುಚಂದವಾಗಿಹ ಪುತ್ರ ಪೌತ್ರರನ್ನುಸಾಂದ್ರಕೃಪೆಯಿಂದಿತ್ತು ಸಲಹೆ ಕೆಳದಿಯ ಪುರದಿನಿಂದ ಶ್ರೀ ಪಾರ್ವತಾದೇವಿ ತಾಯೆ ಜಯ 13
--------------
ಕೆಳದಿ ವೆಂಕಣ್ಣ ಕವಿ
ದೇವಿ ನರ್ಮದೆ ಪಾಲಿಸಮ್ಮಾ ಪ ಕಾವನಯ್ಯನ ಚರಣ ತೋರಿಕಾವುದೆಮ್ಮ ಪಾವನಾತ್ಮಕೆ ಅ.ಪ. ಕಲುಷ ಹರಣವಮ್ಮ 1 ವರ ವಿಸ್ತಾರ ಪಾತ್ರವಮ್ಮ | ನರರಾಯಾಸ ಶಾಂತವಮ್ಮಅರುಣ ಉದಯದಿಂದ ನಿನ್ನ | ಸುರನರಾದಿ ಸೇವಿಸುವರು 2 ವರ ಸುಜಪದಮಾಲೆ ಕರದಿ |ದರವು ಪದುಮ ಗ್ರಂಥಪಾಣಿಗುರು ಗೋವಿಂದ ವಿಠಲ ಚರಣ |ನಿರತ ಧ್ಯಾನಾನಂದ ಮಗ್ನೆ3
--------------
ಗುರುಗೋವಿಂದವಿಠಲರು
ದೇವಿ ನೀ ಗಿರಿಜಾತೆಯು ನಿನ್ನಯ ಕಾಂತ ರಜತಾಖ್ಯಗಿರಿನಾಥನು ನೀನು ಭವಾನಿಯು ನಿನ್ನ ಕಾಂತನು ಭವದೇವನಾಗಿರುವ ಪ ನಿನ್ನ ಯೌವನಭಂಗದ ಭೀತಿಯ ಕಂಡು ವಿಘ್ನೇಶನನು ಪುಟ್ಟಿಸಿ ಪ್ರಣಾತ್ಮಗಳನೊಬ್ಬ ತನುಜಗೆ ಕಲ್ಪಿಸಿ ಕೃತಕೃತ್ಯನಾದ ನಿನ್ನರಸ ಕಾಣಮ್ಮ 1 ನಿನ್ನ ಕಾಂತನು ಪಾರ್ಥನಿಗೆ ಬಾಣವನೀಯಲು ನೀನು ಅಂಜಲಿಕಾಸ್ತ್ರವನು ಪ್ರೇಮದಿ ನಿನ್ನ ಕಾಂಚನ ಚಿತ್ತವರಿತು ಕೊಡಲು ನಿನ್ನೊಳ್ ಪಾರ್ಥಸೂತನ ದಯವೆಷ್ಟೆಂಬೆ 2 ರಾಜೇಶ ಹಯಮುಖನÀ ದಯದಿಂದ ನಿನ್ನ ಪತಿ ವಿಷವ ಜೀರ್ಣಿಸಿಕೊಂಡನು ರಜತಾದ್ರಿಯೊಳಗಿರುವ ಶಿತಿಕಂಠ ಶಂಕರನ ಮಹಿಮೆಯದ್ಭುತವಲ್ಲವೇ ಪೇಳು ಗಿರಿಜೆ 3
--------------
ವಿಶ್ವೇಂದ್ರತೀರ್ಥ
ದೇಶ ತಿರುಗಿಸಿ ಪರದೇಶಿ ಮಾಡಲು ಬೇಡೋ ಈಶ ನೀ ಘನ್ನಾ ಸಂಪನ್ನಾ ಪ ಜನಕನಂಶದಿ ಧ್ರುವನು ಸನುಮತವ ಮಂಡಿಸಲು ಘನರೋಷ ತಾಳಿ ಮಲಜನನಿ ಧೂರ್ತೆ ದೂಡಲು ವನವಾಸ ಲೇಸೆಂದು ತಿಳಿದು ನಿನ್ನ ನೆನೆಯೆ ತಾ ನಡೆದ ಘನಮಹಿಮ ಶ್ರೀಮನ್ನಾರಾಯಣ ಸ್ಥಿರಪಟ್ಟವ ನಾಡಿದ 1 ಖಳ ಕುರುಪಗೊಡೆತನವು ಭಲೆ ಧರ್ಮಗೆ ವನವಾಸವು ಬಲು ಮಾನವಂತೆ ದ್ರೌಪದಿಯು ಜಲಜನಾಭನೆ ನೀನೆ ಗತಿಯೆನಲು ಒಲಿದು ಬೆಂಬಲನಾಗಿ ಪಾಂಡವರ ಪೊರೆದೆ 2 ವರಮುನಿಯ ಶಾಪದಿಂದರಸನಿಂ ಪ್ರದ್ಯುಮ್ನ ಕರಿರಾಜನಾಗಿ ಮಡುವೊಳು ಕ್ರೀಡಿಸೆ ಭರದಿ ನೆಗಳಿಯು ಪೀಡಿಸೆ ಶ್ರೀ- ಹರಿಯೆಂದು ಮೊರೆಯಿಡÀಲು ಶ್ರೀ- ಕರದಿಯುದ್ಧರಿಸಿದೆ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ದೇಶದೊಳಗೀ ಕ್ಷೇತ್ರ ಬಲು ಉತ್ತಮಾ ದಾಸೋಹಂ ಎಂದೆನಲು ಗತಿಗೆ ಪಥವ ಕೊಡುವ ಪ ಹರಿಸರ್ವೋತ್ತಮನೆಂದು ನೆರಪಿದಂಥ ಮುನಿ ವರನ ಶಾಪದಲಿ ಪಾವಕನು ಬಂದು ಪರಮತಪ ಮಾಡಿದನು ವರವಿತ್ತ ಪುಷ್ಕರಣಿ ಎನಿಸುವುದು1 ದಿವಿಜರಿಗೆ ಸೋತು ದಾನವರು ಶುಕ್ರಗೆ ಹೇಳಿ ಶಿವನೊಲಿಸೆ ಅಮೃತವ ಮಾಳ್ಪೆನೆಂದು ಕವಿ ಇಲ್ಲೆ ತಪಮಾಡೆ ಅಂದು ಸುರಧೇನು ವಾ ಸವನ ಕೈಕೊಳಲು ಶ್ರೀರಾಮನಿಂದಲಿಗತಿ 2 ರಾಯ ಋಷಿಗಾಧೇಯು ಬ್ರಹ್ಮತ್ವಗೋಸುಗ ಗಾಯತ್ರಿ ಒಲಿಸಿದನು ಈ ಸಿಲೆಯಲೀ ಆಯು ಉಳ್ಳದರೊಳಗೆ ಇಲ್ಲಿ ಕುಳಿತು ಬಂದು ಗಾಯತ್ರಿ ಮಂತ್ರವನು ಜಪಿಸೆ ನರನು ಮುಕ್ತಾ 3 ಅಗಸ್ತೀಶ್ವರವಿಡಿದು ರಾಮಲಿಂಗ ಪರಿಯಂತ ಬಗೆಬಗೆ ತೀರ್ಥ ಎರಡೊಂದು ಪದ್ಮ ಮಿಗೆ ಷೋಡಶಕೋಟಿ ಅರವತ್ತು ಸಾವಿರ ಸೊಗಸಾಗಿವಿಪ್ಪವಿಲ್ಲಿ ಕಾವೇರಿ ಮಧ್ಯದಲ್ಲಿ 4 ರಾಮನಾಥನ ಪುರವೆಂಬೊ ಪೆಸರೆ ಉಂಟು ವ್ಯೋಮಕೇಶನು ನಾಲ್ಕು ಹೆಸರಿನಿಂದಾ
--------------
ವಿಜಯದಾಸ
ದೇಶಾಧಿಪತಿ ನರಹರಿಯೆ ನಿನ್ನಯ ಪಾದದಾಸರ ದಾಸನೆಂದೆನಿಸಬೇಕೆನ್ನ ಪ ರಜತಮೋಗುಣ ಪ್ರವರ್ತಕ ಮೂಲಾಂತರದಿಂಯಜಮಾನತನದಹಂಕಾರವನು ಒಲ್ಲೆಭುಜ ಚಕ್ರ ಧರಿಸಿ ಸಾತ್ತ್ವಿಕರ ಪಾದಾಂಬುಜರಜ ಭಜಕರ ಭಜಕನೆಂದೆನಿಸೆನ್ನ1 ಸಿರಿಗಂಧ ಕುಂಕುಮ ಸಾದು ಜವ್ವಾಜಿ ಕ-ಸ್ತೂರಿ ತಿಲಕವನಿಡುವುದ ನಾನೊಲ್ಲೆಸಿರಿ ಊಧ್ರ್ವಪುಂಡ್ರ ದ್ವಾದಶನಾಮವಿಡುವವರಪರಿಚಾರಕರ ಪರಿಚಾರಕನೆನಿಸೆನ್ನ 2 ಸ್ವಾದು ಕಲ್ಪಿತವಾದ ಭಕ್ಷ್ಯ ಭೋಜ್ಯಗಳನುಆದರದ ಅಮೃತಾನ್ನ ಉಣುವುದನೊಲ್ಲೆಬೋಧೆಯನು ಹೇಳುವ ಕೇಳುವ ಹರಿದಾಸರಪಾದತೀರ್ಥ ಪ್ರಸಾದವನುಣಿಸೆನ್ನ3 ಕಾಲ ಕರ್ಮದೊಳುಪೇಕ್ಷೆಯ ಮಾಡಿ ಹರಿಭಕುತಿಶೀಲರಹಿತ ಬ್ರಾಹ್ಮಣನಾಗಲೊಲ್ಲೆಕೀಲನರಿತು ಹರಿಭಕುತಿಯನು ಮಾಳ್ಪ ಪರಚಾಂ-ಡಾಲನ ಮನೆ ಬಾಗಿಲ ಕಾಯಿಸೆನ್ನ 4 ಕ್ರೂರಶಾಸ್ತ್ರವನೋದಿ ಕುರಿ ಕೋಣವನೆ ಕಡಿದುಘೋರ ನರಕದಿ ಬೀಳುವುದನು ನಾನೊಲ್ಲೆವಾರಿಜಾಕ್ಷ ನಿನ್ನ ಚರಣ ಸೇವಕರ ಮನೆಯದ್ವಾರಪಾಲಕನೆಂದೆನಿಸೆನ್ನ 5 ಪಟ್ಟೆಪಟ್ಟಾವಳಿ ದಿವ್ಯ ದುಕೂಲ ಮಿಂ-ಚಿಟ್ಟ ವಸ್ತ್ರ ಉಡುವುದನೊಲ್ಲೆನೆಟ್ಟನೆ ಕಾವಿ ಕಾಷಾಯಾಂಬರಗಳನುಉಟ್ಟವರ ಬಂಟನೆಂದೆನಿಸೆನ್ನ 6 ಅರ್ಥ ವಿಷಯಂಗಳ ಫಲಾಪೇಕ್ಷೆಯಿಂ ಪುಣ್ಯತೀರ್ಥಯಾತ್ರೆಯ ಮಾಡಲೊಲ್ಲೆದೈತ್ಯ ಮರ್ದನ ಬಾಡದಾದಿಕೇಶವ ನಿನ್ನಕೀರ್ತನಗೈವರ ಸ್ತುತಿಕನೆನಿಸೆನ್ನ 7
--------------
ಕನಕದಾಸ
ದೇಹವ್ಯಾಕೆ ಇಂಥ ದೇಹವ್ಯಾಕೆ ಪ ಹರಿಯ ಪಾದಕೆರಗದಂಥ ಶಿರವು ಏಕೆ ಪರಮ ಪುರುಷನ ಪಾಡದಂಥ ವದನವ್ಯಾಕೆ 1 ಹರಿಯಸ್ಮರಣೆ ಕೇಳದಂಥ ಕರ್ಣವ್ಯಾಕೆ ಹರಿಯಮೂರ್ತಿನೋಡದಂಥ ಕಂಗಳ್ಯಾಕೆ 2 ಹರಿಯ ನಿರ್ಮಾಲ್ಯವಾಘ್ರಾಣಿಸದಂಥ ನಾಸವ್ಯಾಕೆ ಹರಿಯ ನೈವೇದ್ಯ ಭುಂಜಿಸದಂಥಾ ಉದರವ್ಯಾಕೆ 3 ಶರಣಜನರ ಚರಣ ತೊಳೆಯದ ಕರವು ಏಕೆ4 ಜಿಹ್ವೆ ಏಕೆ ಜಾಣರೆಲ್ಲರು ತಿಳಿದು ನೋಡಿ ಬದುಕಿ ಜೋ 5
--------------
ಬಾಗೇಪಲ್ಲಿ ಶೇಷದಾಸರು
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ