ಒಟ್ಟು 9384 ಕಡೆಗಳಲ್ಲಿ , 131 ದಾಸರು , 5285 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವತಾಸ್ತುತಿ ಸರ್ವೋತ್ತಮನ ಸ್ತುತಿಗೆ ಸರಿಬೆಸದಕ್ಷರದೆಣಿಕ್ಯಾಕ ಧ್ರುವ ಯತಿ ಫಲ ಗಣ ಪ್ರಾಸವ್ಯಾಕೆ ಸ್ತುತಿಸ್ತವನ ಕೊಂಡಾಡಲಿಕ್ಕೆ ಹಿತದೋರದು ಮಿತಿ ಮಾಡಲಿಕ್ಕೆ ಅತಿ ಶೋಧಿಸಲಿಕ್ಕೆ 1 ಮುತ್ತಿಗೆ ಬುದ್ಯುಶದೆಂದು ಉತ್ತಮರಪೆಕ್ಷರೆಂದೆಂದು ನೆತ್ತಿಲಿಟ್ಟು ಕೊಂಬರು ಬಂದು ಅತಿ ಪ್ರೀತಿಲೆ ನಿಂದು 2 ಸಾರಸ ಸ್ವಾನಂದದ ಸರಳು ಮತಿ ಹೀನರು ಬಲ್ಲರೇನದರೊಳು ಮಾತಿನ ಮರಳು 3 ಬಾಯಲಿ ಧೂಳಿ ಪರಿ ಸ್ತುತಿಯಲಿ 4 ಮಹಿಪತಿ ಸ್ತುತಿನುಡಿದು ಅಪ್ಪವ್ವನುತಾ ಎನ್ನ ಕಡಿಯ ತಪ್ಪನೆ ತುಸು ಹಿಡಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವದೇವತೆಗಳ ಸ್ತುತಿ ಅಂಬುಧಿಶಯನ ಪೀತಾಂಬರಧರ ಕಮಳಾಂಬಕ ಸಿರಿರಮಣ ನಂಬಿದ ಭಕ್ತರ ಬೆಂಬಿಡದಿಹನೆಂಬುದಕೆ ಸಹಜಗುಣ ಪ ಒರಲುತ್ತಾ ಸಭೆಗೆ ಬರಲು ಒತ್ತಿ ಮುದ್ದಿಸುತಿರಲು ಪೊರೆದೆಯೋ ಧ್ರುವನ1 ಹರಿನಾಮವನು ಬರೆಯೆ ವಿರಚಿಸೆ ಕೇಳದಿರೆ ದುರುಳಬಾಧಿಸೆ ಮಗನ ಮೂರ್ತಿ ವರವಿತ್ತು ಪೊರೆದೆಯೋ ಪ್ರಹ್ಲಾದನ 2 ಶಾಪವನೀಯ ಲಗಸ್ತ್ಯನಿಂದ್ರದ್ಯುಮ್ನ ಭೂಪತಿ ಗಜವಾಗಲು ಕೋಪದಿ ನೆಗಲ್ವಿಡಿಯೊ ಗುಪಿತದಿ ಮೊರೆಯಿಡಲು ಸೀಳ್ದು ಪೊರೆದೆಯೋ ಗಜವ 3 ಮರ್ಮವನರಿತು ಬರಲು ಅನ್ನವನೀಯೆನಲು ಪೊರೆದೆಯೋ ಪಾಂಡುವರ 4 ಹರಿವಾಸವರವ ಮಾಡಲು ನರಿಯೆ ಬಂದು ವರವಿತ್ತು ಪೊರೆದೆಯೋ ವೇಣುಗೋಪಾಲ 5
--------------
ಕವಿ ಪರಮದೇವದಾಸರು
ದೇವದೇವತೆಗಳ ಸ್ತುತಿ ವೀರನ ನೋಡಿರೈ ನರಮೃಗಾಕಾರನ ಪಾಡಿರೈ ಪ ಕಾರ್ಪರ ಋಷಿ ತಪಕೊಲಿದು ಅಶ್ವತ್ಥದಿ ಮೆರೆವಾ ಭಕುತರ ಪೊರೆವಾ ಅ.ಪ ದುರಿತ ತಿಮಿರಕೆ ಸವಿತ ವ್ರಾತ ಸೇವಿತ ತ್ವರಿತ ಮಧ್ಬಂಧು ಪೊರೆಯೊನೀನೆಂದು ಪ್ರಾರ್ಥಿಸುವರಿಗಭೀಷ್ಟಿಯಗರಿಯಲು ದೇವ ತರುಸ್ವಭಾವ 1 ಉಗ್ರನಾದರು ಭಕುತಾಗ್ರಣಿಗಳಿಗೆ ಅನುಗ್ರ ಒಲಿವನು ಶೀಘ್ರ ವಾಗ್ಧೇವಿಯರ ಸನಾಜ್ಞದಿ ನಮಿಸಿ ಪ್ರಹ್ಲಾದ ಸ್ತುತಿಸಲು ಒಲಿದ ಉಗ್ರವದನ ಶಾಲಿಗ್ರಾಮಗಳ ರೂಪದಲಿ ವೃ- ಭಾರ್ಗವಿ ಪ್ರಕಟನಾಗಿಹನ 2 ತೋರಿಸುವದಕೆ ಅಸುರನ ಮಥಿಸಿ ನೆಲಸಿಕರುಣದಿ ದಿವಿಜರೊಡೆಯನ3 ಪೋಪುದು ವೃಜಿನ ತಿಳಿವದು ಮುನ್ನ ಭಾನು ಕರ್ಕಾಟಸ್ಥಾನದಿ ಬರುವ ಕಾಲದಲಿ ತೀರ್ಥಗಳಲ್ಲಿ ಹೃದಯದಿ ಪೊಳಿವ 4 ತರುವರ ಸಂಸ್ಥಾ ಚರಿತ ತ್ರಿಗುಣಾತೀತ ಪದಯುಗಲ ಬಿಡದನುಗಾಲ ಸಾರಿ ಭಜಿಪರಿಗಪಾರ ಸೌಖ್ಯಗಳ ಗರಿವ ವಿಘ್ನವ ತರಿವ5
--------------
ಕಾರ್ಪರ ನರಹರಿದಾಸರು
ದೇವನಲ್ಲವೇನೋ ಸದ್ಗುರು ಮಹಾದೇವನಲ್ಲವೇನೋ | ಆದಿಯೋಳ್ ಸಿದ್ಧರು ಹೋದ ದಾರಿಯ | ತೋರಿ ಭೇದವ ಬಿಡಿಸಿದ ಮೂರುತಿ ಪ ನರಜನ್ಮದೊಳಗೆ ಬಂದು ನೀನು | ಪ್ರಪಂಚದ ಕಡಲು ಮಧ್ಯದಿ ನಿಂದು | ಅರಿತು ಮರೆತು ಒಮ್ಮೆ ಗುರುವೆಂದು ನೆನೆದರೆ | ಗುರುತಿಟ್ಟು ಅವರಿಗೆ ಪರತರ ತೋರುವ 1 ಆಶಾಪಾಶವ ಬಿಡಿಸಿ ಮಾಡಿದ | ದೋಷ ಭವಂಗಳ ಕರ್ಮವ ಕೆಡಿಸಿ | ನ್ಯಾಸ ಧ್ಯಾಸದಿ ಜಪ ಮಾಡೆ ಗುರು |ಬೋಧ ಪ್ರಕಾಶವ ತೋರಿದ ಈಶನು 2 ಭಕ್ತಿ ಜ್ಞಾನವ ಹಿಡಿದು ನಂಬಿದಗೆ | ಮುಕ್ತಿಯ ನಿಶ್ಚಯದಿ ಪಾಲಿಸುವ | ಕರ್ತೃ ಸದ್ಗುರು ಭವತಾರಕ ಧರೆಯಲಿ | ಪ್ರತ್ಯಕ್ಷವಾದಂಥ ಪರಬ್ರಹ್ಮರೂಪನು 3
--------------
ಭಾವತರಕರು
ದೇವನಹುದೊ ದೇವಾಧಿದೇವ ಕಾವಕರುಣ ಶ್ರೀ ವಾಸುದೇವ ಭಾವಿಕರಿಗೆ ಜೀವಕೆ ಜೀವ ಧ್ರುವ ಸಾಮಜಪ್ರಿಯ ಸುರಲೋಕಪಾಲ ಕಾಮಪೂರಿತ ನೀ ಸಿರಿಸಖಲೋಲ ಸಾಮಗಾಯನಪ್ರಿಯ ಸದೋದಿತ ಸ್ವಾಮಿನಹುದೊ ನೀನೆವೆ ಗೋಪಾಲ 1 ಅಕ್ಷಯ ಪದ ಅವಿನಾಶ ಪೂರ್ಣ ಪಕ್ಷಿವಾಹನ ಉರಗಶಯನ ಪಕ್ಷಪಾಂಡವಹುದೊ ಪರಿಪೂರ್ಣ ಲಕ್ಷುಮಿಗೆ ನೀ ಜೀವನಪ್ರಾಣ 2 ದಾತನಹುದೊ ದೀನದಯಾಳ ಶಕ್ತಸಮರ್ಥ ನೀನೆ ಕೃಪಾಲ ಭಕ್ತವತ್ಸಲನಹುದೊ ಮಹಿಪತಿ ಸ್ವಾಮಿ ಪತಿತಪಾವನ ನೀನವೆ ಅಚಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವನಾ ದರುಶನಾ ಜೀವನಾ ಪಾವನಾ ಗುರುವಿನಾ ಪ್ರವಚನಾ ಸಾವಿನಾ ನಾಶನಾ ಪ ಸ್ವಾತ್ಮದ ಜ್ಞಾನೋದಯ ಜಗದಿ ಪೂರ್ಣ ನಿರ್ಭಯ ಬ್ರಹ್ಮಪದದ ತನುಮಯ ತಾನೇ ಶುದ್ಧ ಚಿನುಮಯ 1 ಜ್ಞಾನದ ಪೂರ್ಣಾನುಭವ ನಿರ್ವಿಕಲ್ಪ ಸ್ಥಿತಿಯೆ ಶಿವಾ ದುರುಳ ಭವ ಗುರುವಿತ್ತಾತ್ಮಾನುಭವ 2 ಜೀವನ್ಮುಕುತಿ ಆನಂದ ತಿಳಿಯೆ ನೀನೆ ಮುಕುಂದ ಅರಿತು ನೋಡು ಇದನೆಂದ ಗುರುಶಂಕರನಾ ಕಂದಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ದೇವರ ದಿವ್ಯಗುಣಗಳ ಪೊಗಳುವದು ಜೀವರಿಗಿದುವೆ ಪ್ರಯೋಜನವು ಪ ಭಾವದಿ ತೋರುವ ವಿಷಯಗಳೆಲ್ಲವು ಭಕ್ತಿಯೊಳರಿತು ಸಮರ್ಪಿಸುತಂ ಅ.ಪ ನಡೆವದು ನುಡಿವದು ಕೊಡುವದು ಬಿಡುವದು ಒಡೆಯ ಹರಿಯ ಪ್ರೇರಣೆಯೆಂದು ದೃಢಮನದಲಿ ತಿಳಿದಾವಾಗಲು ತಾ ಮೃಢ ಸಖನಡಿ ಧ್ಯಾನಕೆ ತಂದು 1 ಅರಿಯದೆ ಪಾಮರರೊರಲುವ ಬೋಧೆಯ ತರತರದಿ ತಿರಸ್ಕರಿಸುತಲೀ ಭವ ಭಯಗಳನೀಡಾಡುತಲಿ 2 ಜನನ ಮರಣ ದೂರ ಪರಾತ್ಪರ ಪಾ- ವನ ಚರಿತ್ರ ಭಾಸುರ ಗಾತ್ರಾ ವನಜನಯನ ಗುರುರಾಮವಿಠಲ ಎಂ- ದನುದಿನ ಭಜಿಸುವನೆ ಪವಿತ್ರ 3
--------------
ಗುರುರಾಮವಿಠಲ
ದೇವರಾಗಬಾರದೇನೆಲೇ ದೆವ್ವಿನಂಥ....... ದೇವರಾಗಬಾರದೇನೆಲೇ ಪ ದೇವರಾಗಬಾರದೇಕೋದೇವನ ಪಾದವನಂಬಿ ಕಾವುಮೀರಿ ಹೋದಮೇಲೆ ಬಾಯಬಿಟ್ಟರೆ ಬರುವುದೇನೆಲೆ ಅ.ಪ ತಂದ ಬುತ್ತಿ ಚೆನ್ನಾಗುಣ್ಣೆಲೆ ನೀನದನು ಒಲ್ಲೆ ನೆಂದರೆ ಬಿಟ್ಟ್ಹೋಗ್ವುದೇನೆಲೆ ಹೇ ಪಾಪಿ ನೀನು ಬಂದಹಾದಿ ನೋಡಿಕೊಳ್ಳೆಲೆ ಮುಂದಿದರಿಯೆಲೆ ಬಿಂದುಮಾತ್ರಸುಖಕೆ ಮೋಹಿಸಿ ಪರ್ವತಾಕಾರ ಪಾಪಹೊತ್ತು ಬಂಧಕ್ಕೀಡಾಗುವುದಿದೇನೆಲೆ 1 ನಾಶನಾಗಿ ಹೋಗುತಾದೆಲೇ ಈ ಜಗವು ಒಂದಿನ ಆಸೆಯೆಂಬ ಕುಳಿ ಧುಮುಕ ಬೇಡೆಲೆ ಮಹನೀತಿವಿಡಿದು ನಾಶವಾಗದಪದವಿ ಗಳಿಸೆಲೇ ಸೋಸಿನೋಡೆಲೆ ಮೋಸಮರವೆಯಿಂ ನಾಶವಾಗದೆ ಹೇಸಿಸಂಸಾರ ನಾಮ ಭಜಿಸಿ 2 ಉಟ್ಟ ಸೀರೆಬಿಟ್ಟು ಹೋಗಿದ್ದ್ಯಂತೆ ಹೇ ಹುಚ್ಚು....... ಎಷ್ಟೋಸಾರಿ ಹುಟ್ಟ್ಹುಟ್ಟಿದರಂತೆ ಈ ಕಾಯಧರಿಸಿ ಬಿಟ್ಟುಹೋಗೇದಸ್ತಿ ಪರ್ವತ್ಹೋಲ್ವಂತೆ ಕೆಟ್ಟು ಬಿದ್ದೈತೆ ದುಷ್ಟಭ್ರಷ್ಟತೆಗಳನ್ನು ಬಿಟ್ಟು ಶಿಷ್ಟಸಂಗಕೆ ಮನವಗೊಟ್ಟು ಸೃಷ್ಟಿ ಗೀರೇಳು ಸೂತ್ರನಾದ ದಿಟ್ಟ ಶ್ರೀರಾಮನಡಿಗೆ ಪೊಂದಿ 3
--------------
ರಾಮದಾಸರು
ದೇವಾ ನಿನ್ನ ಚರಣವನ್ನು ಮರೆಯಲಾರೆನು ಮರೆಯದಂತೆ ಕರುಣದಿ ಎನ್ನಾ ಸ್ಮರಣೆಯೊಳಿಡು ನೀನು ಪ ಪಂಕಜಾಂಬಕಿ ಲಕ್ಞ್ಮೀರಮಣಾ ರಂಗರಕ್ಷಕಾ ಶಂಕಾನಾಶ ಸರ್ವಾಧಾರ ಶಂಕರಸಖಾ ಶಂಖ ಚಕ್ರಗಳ ಕರದೊಳ್ ಪಿಡಿದ ಪಂಕಜನೇತ್ರನೇ 1 ತನ್ನವರಿಂತೆಂದೆನಿಸಿ ಕೊಂಡು ಅನ್ಯರ ಭಜಿಪುದು ಬನ್ನ ಬಡುವುದು ಮುನ್ನ ಎನ್ನನು ಪೊರೆವರ್ಯಾರೊ ಪನ್ನಗಶಯನನೇ 2 ಅಂತು ಇಂತೆನಲೊಲ್ಲೆ ದೇವಾ ಅನಂತ ಮಹಿಮೆಯಾ ಸಂತಸಾಧು ಸಾಧ್ಯನಾಗಿಹ ಅಂತರಾತ್ಮನಾ ಚಿಂತೆ ಭ್ರಾಂತಿಗಳ ತೊರೆದು ಗುರುವರ ಶಾಂತಿ ಪಾಲಿಪನೇ 3
--------------
ಶಾಂತಿಬಾಯಿ
ದೇವಾ ನಿನ್ನ ಪಾದವನ್ನು ಯಾವಾಗಲೂ ಸ್ಮರಿಸುವೆನೂ ಭಾವ ಭಕ್ತಿ ಪ್ರೇಮವಿತ್ತು ಕಾವುವೆನ್ನ ಹರಿಯೇ ನೀನು ಪ ದೀನನಾಥನೆಂಬ ಬಿರುದಾ ಮಾನಭಕ್ತರಿಂದ ಪೊರೆದಾ ಹೀನ ದೀನನಾದ ಎನ್ನಾ ಜ್ಞಾನವಿತ್ತು ರಕ್ಷಿಪುದು 1 ಇಂದಿರೇಶ ನಾರಾಯಣಾ ಬೃದದಿಂದಾ ಭಜಿಪೆ ನಿನ್ನಾ ಮಂದಮತಿಯ ಕಳೆದು ನಿಜಾನಂದದೊಳಗಿರಿಸೊ ಯನ್ನಾ 2 ಬೇಡಿಕೊಂಬೆನೀಗ ನಿನ್ನಾ ನೋಡುವುದು ಕೃಪೆಯೊಳೆನ್ನಾ] ಬಿಡಬ್ಯಾಡಾ ಬ್ಯಾರೆನಗೆ ಇಡೊ ಇಡೊ ನಿನ್ನೊಳೆನ್ನಾ 3 ಚಿಂತೆಗಳನ್ನೆಲ್ಲಾ ತೊರಿಸೊ ಸಂತ ಸಂಗದೊಳಿರಿಸೊ ಕಂತುಪಿತನೆ ಗುರುವೆ ಎನ್ನಾ ಶಾಂತಿ ಪದವ ಪಾಲಿಸೊ 4
--------------
ಶಾಂತಿಬಾಯಿ
ದೇವಾ ನೀ ಪಾಲಿಪುದೂ ಓ ಹರಿಯೆ ಹರಿಯೆ ಪ ಮದನ ಜನಕ ರಂಗಾ ಪಾವನಾಂಗನೆ ನಿಜಸೇವೆಯೊಳಿರಿಸೆಂದೂ 1 ದಾರುಧಿ ಭೀಕರನ್ಯಾರೊ ವೈಷ್ಣವೋತ್ತಮ ಬಾರೊ ಸಾಧುಶಿಖರನಾರೊ ಸತ್ವರೂಪನು ತೋರೊ 2 ಧರಣೀನಾಗನಗರಿ ಕರುಣವಾರುಧಿಯಾದಾ ಗುರುವೆ ತುಳಶೀರಾಮ ಪರಮಾತ್ಮನೆ ನೀ ಬಾರೊ 3
--------------
ಚನ್ನಪಟ್ಟಣದ ಅಹೋಬಲದಾಸರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇವಾದಿ ದೇವಗೆಭಕ್ತ ಸಂಜೀವಗೆಶ್ರೀ ವಿಘ್ನೇಶ್ವರಗೆ ಜಯವೆಂದುಜಯವೆಂದು ಪಾರ್ವತೀಪುತ್ರಗೆಪಾವನಗಾತ್ರಗೆಫಣಿಯಜ್ಞ ಸೂತ್ರಗೆಹೂವಿನಾರತಿಯ ಬೆಳಗಿರೆ 1 ಸಿಂಧುರಗಮನೆಯರುಕುಂದಾಭರದನೆಯರುಇಂದುಶೇಖರಗೆ ಜಯವೆಂದುಜಯವೆಂದು ಇಂದ್ರಾದಿವಂದ್ಯಗೆನಿರ್ಜಿತಚಂದ್ರಗೆ ಸದ್ಗುಣಸಾಂದ್ರಗೆಕುಂದಣದಾರತಿಯ ಬೆಳಗಿರೆ 2 ವಾರಣದವನೆಗೆಧೀರಹೇರಂಬಗೆರಾವಣಾಸುರನ ಜಯಿಸಿದಜಯಿಸಿದಶರಣ ಮಂದಾರಗೆಶರಧಿ ಗಂಭೀರಗೆಕೌಸ್ತುಭಹಾರಗೆಮೇರುವೆಯಾರತಿಯ ಬೆಳಗಿರೆ 3 ಸುರರು ಹೂಮಳೆಗರೆಯೆತರುಣಿಯರ್ಪಾಡಲುಸುರದುಂದುಭಿ ಮೊಳಗೆ ಜಯವೆಂದುಜಯವೆಂದುಸಿಂಧುರವರ್ನಗೆಶೂರ್ಪಸುಕರ್ನಗೆಸರ್ವತ್ರಪೂರ್ಣಗೆಕುರುಜಿನಾರತಿಯ ಬೆಳಗಿರೆ 4 ಪಂಕಜಾಂಬಿಕೆಯರುಭೋಂಕನೆ ಪಾಡಲುಶಂಕರನ ಪುತ್ರ ಜಯವೆಂದುಪಾವನವೇಷಗೆವರದ ಗಣೇಶಗೆಕುಂಕುಮದಾರತಿಯ ಬೆಳಗಿರೆ 5 ರಮ್ಯವಾದಲತಿಗೆಯರಸವ ಪಾದಕೆ ತೊಡೆದುಕಮ್ಮೆಣ್ಣೆಯನು ಕಂಠಕನುಲೇಪಿಸಿಸುಮ್ಮಾನದಿಂದ ಪಟವಾಸ ಚೂರ್ಣವತಳಿದುನಿಮ್ಮ ಪೂಜಿಸುವೆನು ಗೌರಿದೇವಿ 6 ವರಧೂಪದೀಪ ಪರಿಪರಿಯ ನೈವೇದ್ಯ ಭಾ-ಸುರ ಸುತಾಂಬೂಲ ಸೀಗುರಿದರ್ಪಣನಿರುಪಮ ಛತ್ರ ಚಮರಾದಿ ಸೇವೆಯನು ಸ್ವೀ-ಕರಿಸಿ ಪಾಲಿಸೆ ಎನ್ನ ಗೌರಿ ದೇವಿ ಜಯ 7 ಇಂತು ಪರಿಪರಿಯ ರಾಜೋಪಚಾರಗಳಿಂದಸಂತತವು ನಿಮ್ಮ ಪಾದವ ಪೂಜಿಸಿನಿಂತು ಕರವನೆ ಮುಗಿದು ಧ್ಯಾನಿಸುತ ನಲಿನಲಿದುಸಂತಸದಿ ನಿಮ್ಮ ಸ್ತುತಿಸುವೆನು ಗೌರಿ ಜಯ 8 ಮತ್ತೇಭಗಮನೆಗೆ ಮಾಹೇಂದ್ರಸನ್ನುತೆಗೆಅತ್ಯಂತ ಪರಮ ಪಾವನ ಚರಿತೆಗೆನಿತ್ಯ ಸೇವೆಯನು ಮಾಡುವರ ರಕ್ಷಿಸುವಂಥಪ್ರತ್ಯಕ್ಷಮೂರ್ತಿ ಶ್ರೀಗೌರಿ ನಿಮಗೆ ಜಯ9 ಕಲಕೀರವಾಣಿಗೆ ಕಾಳಾಹಿವೇಣಿಗೆಕಲಧೌತಕಮಲ ಶೋಭಿತಪಾಣಿಗೆನಳಿನದಳನೇತ್ರೆಗೆ ನಾರಾಯಣೆಗೆ ನಮ್ಮ-ನೊಲಿದು ರಕ್ಷಿಸುವಂಥಾ ಶ್ರೀಗೌರಿಗೆ ಜಯ 10 ಕುಂಭಸಂಭವನುತೆಗೆ ಜಂಭಾರಿಪೂಜಿತೆಗೆರಂಭಾಸುನರ್ತನಪ್ರಿಯೆಗೆ ಶಿವೆಗೆರಂಭೋರುಯುಗಳೆಗೆ ಬಿಂಬಾಧರೆಗೆ ನಮ್ಮಬೆಂಬಿಡದೆ ರಕ್ಷಿಸುವ ಗಿರಿಜಾತೆಗೆ ಜಯ 11 ಮುತ್ತೈದೆತನಗಳನು ನಿತ್ಯಸಂಪದಗಳನುಉತ್ತಮಾಂಬರ ಛತ್ರಚಾರಮವನುಅತ್ಯಂತ ಪ್ರೀತಿಯಿಂದಿತ್ತು ರಕ್ಷಿಸಿ ಭಕ್ತವತ್ಸಲೆ ಶ್ರೀ ಗೌರಿದೇವಿ ತಾಯೆ12 ಎಂದೆಂದು ಈ ಮನೆಗೆ ಕುಂದದೈಶ್ವರ್ಯವನುಚಂದವಾಗಿಹ ಪುತ್ರ ಪೌತ್ರರನ್ನುಸಾಂದ್ರಕೃಪೆಯಿಂದಿತ್ತು ಸಲಹೆ ಕೆಳದಿಯ ಪುರದಿನಿಂದ ಶ್ರೀ ಪಾರ್ವತಾದೇವಿ ತಾಯೆ ಜಯ 13
--------------
ಕೆಳದಿ ವೆಂಕಣ್ಣ ಕವಿ
ದೇವಾಧಿದೇವ ನೀನಹುದು ಸಾಕ್ಷಾತ ಭಾವಿಸುವರಾತ್ಮ ಭಜಕರ ಪ್ರಾಣದಾತ ಧ್ರುವ ಸುಜನ ಮನೋಹರ ಮೂಜಗ ಆಧಾರ ಭಜಕ ಭಯಹರ 1 ಕರುಣಸಾಗರ ಪರಮ ಉದಾರ ದುರಿತ ಸಂಹಾರ 2 ಬಾಹ್ಯಂತ್ರಲಿವ್ಹ ಇಹಪರ ಕಾವ ಮಹಿಪತಿಯ ರಕ್ಷಿಸುವ ಶ್ರೀ ದೇವ ದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವಾಧಿದೇವ ನೀನಹುದೊ ಶ್ರೀಹರಿ ಕಾವಕರುಣ ನೀನೆ ಮುರಾರಿ ಧ್ರುವ ಕಮಲಭವಾರ್ಜಿತ ಕಾರುಣ್ಯ ಶೀಲ ವಿಮಲ ವಿರಾಜಿತ ಮದನಗೋಪಾಲ 1 ಕನಕಾಂಬರಧರ ಕಸ್ತೂರಿತಿಲಕ ಸನಕಾದಿವಂದ್ಯ ಶರಣ ರಕ್ಷಕ 2 ಅಗಣಿತ ಮಹಿಮ ಅವರುಜ ನೇತ್ರ ನೀನಹುದೊ ನಿಸ್ಸೀಮ 3 ಮುನಿಜನ ಪಾಲಕ ಮಾಮನೋಹರ ಘನಸುಖದಾಯಕ ಸು ಜನ ಸಹಕಾರ 4 ಭಾನುಕೋಟಿತೇಜ ನೀನೆ ಸುಹೃದಯ ದೀನದಯಾಳು ನೀನಹುದೊ ಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು