ಒಟ್ಟು 3125 ಕಡೆಗಳಲ್ಲಿ , 116 ದಾಸರು , 2227 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
--------------
ಗಲಗಲಿಅವ್ವನವರು
ದೇವ -ದೇವತಾ ಸ್ತುತಿಬ್ರಹ್ಮದೇವರು352ವಂದಿಸುವೆ ಜಗದ್ಗುರುವೆಮಂದಜಾಸನಬ್ರಹ್ಮನಂದಿವಾಹನಶೇಷಗರುಡರ ತಂದೆ ಸುಗುಣೋದ್ದಾಮ ಪ.ಚತುರವದನ ಶ್ರೀಹರಿಯ ಪ್ರಥಮ ಪುತ್ರ ವಿಧಾತ್ರಸತತ ಭಕ್ತಿಯೋಗೀಶಿರೋರತುನ ವಾಣೀಕಳತ್ರನೂರುಕಲ್ಪ ತಪವಗೈದ ಸಾರಋಜುಗಣೇಶಪಾರಮಾರ್ಥಜ್ಞಾನನಿಧಿ ಗಂಭೀರ ಸತ್ತ್ವವಿಲಾಸ 2ಶ್ರೀ ಲಕ್ಷ್ಮೀನಾರಾಯಣನ ದಾಸಜನವರೇಣ್ಯವಾಸವಾದಿ ನಿರ್ಜರೌಘಪೋಷಕಾಗ್ರಗಣ್ಯ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ದೇವರನಾಮ - ಶ್ರೀ ಸೇತುಮಾಧವ ಸ್ತೋತ್ರ62-1ಸೇತುಮಾಧವ ವಿಭುವೇ | ನಿನ್ನಯ ದಿವ್ಯವೃತತಿಜ ಪದಯುಗಳ |ಸತತ ನಂಬಿದೆ ಎನ್ನ ಹಿತದಿ ಪಾಲಿಸಿ ಸದಾಕೃತ ಕೃತ್ಯ ಧನ್ಯನ ಮಾಡಿ ಸಲಹೋ ಸ್ವಾಮಿ ಪಪುಟ್ಟಿದಾರಭ್ಯ ನಿನ್ನ | ನಾಮವ ಒಂದು |ತೃಟಿಯು ಭಜಿಸಲಿಲ್ಲವೋ |ವಿಠ್ಠಲರಾಯ ಪರಮೇಷ್ಟಿಯ ಪಿತ ಎನ್ನಕಷ್ಟಗಳಳಿದು ಸಲಹೋ ಸರ್ವೋತ್ಕøಷ್ಟ ||ಕೃಷ್ಣ ಕೃಷ್ಣಾವರದ ಅಜಮಿಳಭ್ರಷ್ಟತನವ ಎಣಿಸದೇ ಬಹುನಿಷ್ಟವಿಪ್ರಸುಧಾಮಗೊಲಿದತ್ರಿಧಾಮ ನಮೋ ಮಧ್ವೇಷ್ಟಪಾಹಿ1ಸೇತು ಸರ್ವಾಶ್ರಯನೇ | ನೀನೊಬ್ಬನೇ |ಮುಕ್ತಾ ಮುಕ್ತಾಶ್ರಯನು |ತ್ರಾತನೀನೇವೆ ಯೆಂದರಿತವರ ಭೀತಿಹರಪಾತ ಸರ್ವೋತ್ತಮ ಜಗದೇಕ ಈಶದ್ಯುಧರಾ ಪಾತಾಳ ಸರ್ವಾಧಾರನಾಗಿಹಪ್ರಭುವೇ ನಿನ್ನಯ ಅತಿ ಅಗಾಧಸುಮಹಿಮೆ ಅನಂತವು |ಮೋದಮಯ ದಶಶತಸಹಸ್ರಾನಂತರೂಪನೇ ||2ಹೀನಮಂದನು ನಾನೆಂದು | ದೂರನೀ ||ಎನ್ನ ಮಾಡದೇ ಸಲಹೋ |ಎನ್ನ ಹಿರಿಯರು ನಿನ್ನಚ್ಛನ್ನ ಭಕ್ತರೋಘನದಯಾಂಬುಧೇ ಗಂಗಾಜನಕ ಪಾವನ ನಾಮಾ |ಮನೋವಾಕ್ಕಾಯದಿ ನಿಂತು ಎನ್ನೊಳುನೀನೆ ಮಾಡಿ ಮಾಡಿಸುವುದೆಲ್ಲನಿನಗೆ ಸುಪ್ರೀತಿಯಾಗಲೋ ಮುಕ್ -ಕಣ್ಣ ವಿಧಿಪ ಶ್ರೀ ಪ್ರಸನ್ನ ಶ್ರೀನಿವಾಸ ಶ್ರೀಶ || 3
--------------
ಪ್ರಸನ್ನ ಶ್ರೀನಿವಾಸದಾಸರು
ದೇವಿ ಅಂಬುಜವಲ್ಲಿ ರಮಣನೆ ಭೂವರಾಹ ದಯಾನಿಧೆಪವಮಾನನ ದಿವ್ಯ ಕರದಲಿ ಸೇವೆ ಸಂತತಗೊಳ್ಳುವಿಅವನಿಯೊಳು ಶ್ರೀಮುಷ್ಣಕ್ಷೇತ್ರದಿ ನೀ ವಿಹಾರವ ಮಾಡುವಿಅತ್ಯಗಾಧ ಸುಶೀಲಜಾಹ್ನವಿಸುತ್ತು ಷೋಡಶತೀರ್ಥದಿಮತ್ತು ವರ್ಣಿಪೆ ತೀರ್ಥ ತಟದಲಿ ಉತ್ತಮಾಗ್ನೇಯಭಾಗದಿಕರಗಳೆರಡು ಕಟಿಯಲಿಟ್ಟು ಕೋರೆಹಲ್ಲನೆ ತೋರುತಘನ್ನಶ್ವೇತವರಾಹಮೂರುತಿ ಎನ್ನ ಪೂರ್ವದ ಪುಣ್ಯದಿಸುಂದರಾನನ ಕಂಜಮಧುಪನಇಂದುನೋಡಿದ ಕಾರಣಮಲ್ಲಮರ್ದನವೈಕುಂಠದಿಂದ ಮೆಲ್ಲಮೆಲ್ಲನೆ ಬಂದೆಯಸೂಕರಾಸ್ಯನೆ ನಿನ್ನ ಪಾದಕನೇಕ ವಂದನೆ ಮಾಡುವೆ
--------------
ಗೋಪಾಲದಾಸರು
ದೋಷ ಎಣಿಸದೆ ಕಾಯೊ ಜೀಯಾ ಪಕಂಡ ಕಂಡವರ ಭಜಿಸೀ -ಬೇಡಿತೋಂಡವತ್ಸಲ ಕರುಣೆ ಸಲಿಸೀಪಾದಪುಂಡರೀಕ್ಯನ್ನೊಳಗೆ ಇರಿಸಿಕಾಯೋ 1ಮಾqಬಾರದ ಕೃತ್ಯವಾ - ನಾ ಬಲುಮಾಡಿದೆಗೃಹಕೃತ್ಯವಾಬೇಡದಕಿ ಭೃತ್ಯತ್ವವಾ - ಈ ದೋಷನೋಡದಲೆ ಭಕ್ತತ್ವವಾ ನೀಡೊ 2ದೀನ ಜನಪಾಲ ನಿನ್ನಾ-ರೂಪಧ್ಯಾನ ಮಾಡಿದೆ ಬಿಡದೆ ಘನ್ನಾ-ಗತಿಎನು ಪೇಳಯ್ಯಾ ಎನಗೆ ಮುನ್ನಾ ಸ್ವಾಮಿ 3ಗುರುರಾಘವೇಂದ್ರರಾಯ - ಎನ್ನಶರಣು ಪೊಕ್ಕೆನೊ ನಿನಗೆ ನಾನಯ್ಯಾ ಕರುಣೀ 4ಮಾತ ಪಿತ ಭ್ರಾತ್ರÀ ಬಂಧೂ - ಎನಗೆದಾತನಿನ್ನ ದೂತನೆಂದೂ- ಬಂದ-ನಾಥನನು ನೀ ಕಾಯುವುದು ಪ್ರಭುವೇ 5ಕರುಣಸಾಗರನೆ ಈಗ - ತವರೂಪಶರಣು ಪೊಕ್ಕವನ ವೇಗಾ-ಭವ-ಅರಣ ದಾಟಿಸುವಂಥ ಯೋಗಾ ಪೇಳಿ 6ಹೋಗುತಿದೆ ಹೊತ್ತು ಪದುಮಾಕ್ಷ -ಹ್ಯಾಗೆಆಗುವದೊ ನಿನ್ನಅಪರೋಕ್ಷಜಾಗುಮಾಡದೆಸಲಿಸ್ಯನ್ನಪೇಕ್ಷಾ ಸ್ವಾಮಿ7ಪಾರದೋಷಗಳನ್ನೆ ತಾಳೋಘೋರಅಙ್ಞÕನ ಕೀಳೋ- ಪರಲೋಕಸೇರಿಸೆನ್ನನು ಕೃಪಾಳೋ ಸ್ವಾಮಿ 8ಎಷ್ಟು ಪೇಳಲಿ ಎನ್ನ ತಾತಾ - ಕೃಪಾ -ದೃಷ್ಟಿಯಲಿನೋಡುನಾನಿನ್ನ ಪೋತಾಧಿಟ್ಟ ನೀಗುರುಜಗನ್ನಾಥಾ- ವಿಠಲನನಿನ್ನೊಳಗೆ ತೋರೋದಾತಾಖ್ಯಾತಾ9
--------------
ಗುರುಜಗನ್ನಾಥದಾಸರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಧರ್ಮಕ್ಕೆ ಕೈಬಾರದೀಕಾಲ - ಪಾಪ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕರ್ಮಕ್ಕೆ ಮನ ಬಾಹುದೀ ಕಲಿಕಾಲ ಪ.ದಂಡದೋಷಕೆ ಉಂಟು ಪುಂಡುಪೋಕರಿಗುಂಟು |ಹೆಂಡಿರು - ಮಕ್ಕಳಿಗಿಲ್ಲವೀ ಕಲಿಗಾಲ ||ಭಂಡೆಯರಿಗುಂಟು ದಿಂಡೆಯರಿಗುಂಟು - ಬೇಡಿ - |ಕೊಂಡಿವರಿಗಿಲ್ಲವು ಈ ಕಲಿಕಾಲ 1ಒತ್ತೆಸೂಳೆಗುಂಟು ಮತ್ತೆ ಹಾದರಕುಂಟು |ಹೆತ್ತತಾಯಿಗಿಲ್ಲ ಈ ಕಲಿಕಾಲ ||ತೊತ್ತೆಯರಿಗೆ ಉಂಟು ಅರ್ತಿಕಾರ್ತಿಗಿಲ್ಲ |ಉತ್ತಮರಿಗೆ ಇಲ್ಲವೀ ಕಲಿಕಾಲ 2ಹುಸಿದಿಟವಾಯಿತು ರಸ - ಕಸವಾಯಿತು |ಮಸಿ ಮಾಣಿಕವಾಯಿತೀಕಾಲ ||ವಸುಧೆಯೊಳಗೆ ನಮ್ಮ ಪುರಂದರವಿಠಲನ |ಬೆಸಸಿ ಪೂಜಿಪರ್ಗಿಲ್ಲ ಈ ಕಲಿಕಾಲ 3
--------------
ಪುರಂದರದಾಸರು
ನಗೆಯು ಬರುತಿದೆ - ಎನಗೆನಗೆಯು ಬರುತಿದೆ ಪ.ಜಗದೊಳಿದ್ದ ಮನುಜರೆಲ್ಲಹಗರಣಮಾಡುವುದ ನೋಡಿಅಪಪರಸತಿಯರ ಒಲುಮೆಗೊಲಿದುಹರುಷದಿಂದಅವರ ಬೆರೆದುಹರಿವ ನೀರಿನೊಳಗೆ ಮುಳುಗಿಬೆರೆಳನೆಣಿಸುವರ ಕಂಡು 1ಪತಿಯ ಸೇವೆ ಬಿಟ್ಟು,ಪರಸತಿಯ ಕೂಡೆ ಸರಸವಾಡಿಸತತ ಮೈಯ ತೊಳೆದು ಹಲವುವ್ರತವ ಮಾಡುವರ ಕಂಡು 2ಹೀನಗುಣವ ಮನದೊಳಿಟ್ಟುತಾನು ವಿಷದ ಪುಂಜನಾಗಿಮಾನಿ ಪುರಂದರವಿಠಲನಧ್ಯಾನ ಮಾಡುವವರ ಕಂಡು 3
--------------
ಪುರಂದರದಾಸರು
ನನ್ನಯ್ಯ ನೀನೊಬ್ಬನೆ ಮಾರುತಿವರದ ಪ.ಉನ್ಮತ್ತತಂದೆ ಕೊಲ್ಲಲು ಒಯ್ಯಲು ತಾಯಿಚಿನ್ನನ್ನುಳಿಸಿಕೊಂಡಳೆ ಬನ್ನವನುಣ್ಣುತನಿನ್ನಿಚ್ಛೆಯೆನ್ನಲು ವಹ್ನಿವಿಷಾನ್ನವ ತಣ್ಣಸವೆನ್ನಿಪೆ ತನ್ನವರಿನ್ನ್ಯಾಕೊ ನರಹರಿಯೆ 1ಉತ್ತಾನಪಾದಿ ಮುನಿದು ಅಡವಿಯ ದಾರಿಹತ್ತಿ ನಿರಾಲಂಬದಿ ಉತ್ತಮ ಮಂತ್ರನಾರದಿತ್ತರೆ ಭಕ್ತಿಂದ ಅತ್ತಿತ್ತಾಗದ ಚಿತ್ತಕೆ ಒಲಿದೆಹೆತ್ತವರೊತ್ತಾದರೆವಾಸುದೇವ2ಅಗ್ರಜಾವಜÕ ಮಾಡಲು ವಿಭೀಷಣಶೀಘ್ರ ಪಾದಾಬ್ಜಕೆರಗಲು ವ್ಯಗ್ರಪ್ಲವಗಗ್ರರು ಉಗ್ರದಿ ನಿಗ್ರಹಿಸೆ ಆಗ್ರಹಿಸಿದೆ ಭಕ್ತಾಗ್ರಣಿ ಹನುಮ ಮತಾಗ್ರದಿ ಪ್ರಸನ್ವೆಂಕಟ 3
--------------
ಪ್ರಸನ್ನವೆಂಕಟದಾಸರು
ನಂಬದಿರು ಈ ದೇಹ ನಿತ್ಯವಲ್ಲ |ಅಂಬುಜಾಕ್ಷನ ಭಜಿಸಿ ಸುಖಿಯಾಗು ಮನವೇ ಪ.ಎಲು ರಕ್ತ ಮಾಂಸಗಳ ಮೇಲೆ ಚರ್ಮದ ಹೊದಿಕೆ |ಮಲಮೂತ್ರ ಒಳಗೆ ಕ್ರಿಮಿರಾಶಿಯಿಹವು ||ಹಲವು ವ್ಯಾಧಿಯ ಬೀಡು ಪಂಚಭೂತದ ನಾಡು |ಹುಲುದೇಹವನು ನೆಚ್ಚಿ ಕೆಡಬೇಡ ಮನವೆ 1ಸತಿಸುತರು ಹಿತರೆಂದು ಮತಿಮರೆತು ಮಮತೆಯಲಿ |ಅತಿಕಾಂಕ್ಷಿಯಿಂದ ದುರ್ವಿಷಯ ಬಲಿದು ||ಸತತ ಲಕ್ಷ್ಮೀಪತಿಯ ಶರಣೆನದೆ ಇಹಪರದ |ಗತಿಶೂನ್ಯನಾಗಿ ಕೆಡಬೇಡ ಮನವೆ 2ಪರರ ನಿಂದಿಸದೆ ಪರವಧಗಳನು ಬಯಸದೆ |ಗುರು - ವಿಪ್ರಸೇವೆಯನುಮಾಡು ಬಿಡದೆ ||ಹರಿಸ್ತುತಿಯ ನೀ ಕೇಳು ಹರಿಕೀರ್ತನೆಯ ಪಾಡು |ಪರಮಪುರಂದರವಿಠಲನೊಲಿದು ಪಾಲಿಸುವ3
--------------
ಪುರಂದರದಾಸರು
ನಂಬಿದೆ ನಾಗರಾಜ ಹರಿಯ ಪಾ-ದಾಂಭೋಜಭಕ್ತಿಭಾಜ ಪ.ಶಂಭುಶಕ್ರಾದ್ಯರು ಹಂಬಲಿಪರು ನಿನ್ನತುಂಬಿದ ಜೀವಕದಂಬಾಭಿಮಾನಿಯೆ ಅ.ಪ.ಸಾವಿರ ಜಿಹ್ವೆಯೊಳು ಹರಿಯ ಸ್ತುತಿಗೈವೆನಿರತಕೃಪಾಳುಶ್ರೀವಾಸುದೇವನ ಕರುಣ ನಿನ್ನಲ್ಲೆಷ್ಟುದೇವೇಶನಾದರು ಯಾವನು ಬಣ್ಣಿಪಶ್ರೀವಧೂವರನ ಕಮಲಪದ ರಾ-ಜೀವ ಸೌಂದರ್ಯವನು ತನ್ನಯಸಾವಿರಾಕ್ಷಿಗಳಿಂದ ಕಾಣುತಕೇವಲಾನಂದಾಬ್ಧಿ ಮಗ್ನನೆ 1ಶಿರವೊಂದರಲಿ ಬ್ರಹ್ಮಾಂಡ ಸಾಸವೆಯಂತೆಧರಿಸಿದೆ ಸುಪ್ರಚಂಡವರರಘುರಾಮನಾವರಜ ಲಕ್ಷ್ಮಣನಾದೆಹರಿಕೃಷ್ಣರಾಯನ ಪಿರಿಯನಾಗಿ ಅವ-ತರಿಸಿ ಭೂಭಾರವನುರೆ ಸಂ-ಹರಿಸಿ ವೇದ ಪುರಾಣ ತತ್ತ್ವವಶರಣಜನರಿಗೆ ಬೋಧಿಸುವ ಮಹಾಕರುಣಿ ಕಮಲಾಕಾಂತನ ಭಕ್ತನೆ 2ಲಕ್ಷ್ಮೀನಾರಾಯಣನ ನಿದ್ರಾಸ್ಪದರಕ್ಷಿಸು ಕೃಪೆಯಿಂದೆನ್ನಸಾಕ್ಷಾದಚಲರೂಪ ನಿನ್ನೊಳು ನೆಲಸಿದಪಕ್ಷಿವಾಹನ ಜಗದಧ್ಯಕ್ಷ ಶ್ರೀನಿವಾಸಮೋಕ್ಷ ಮಾರ್ಗಪ್ರದರ್ಶಿ ಸತತ ಮು-ಮುಕ್ಷು ಜನಮನಹರ್ಷ ನಿರ್ಜರ-ಪಕ್ಷ ಸುಫಲಪ್ರದ ಸದಾ ನಿರ-ಪೇಕ್ಷ ಗುರುವರ ರಾಕ್ಷಸಾಂತಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ-ರಂಭಸೂತ್ರಳೆ ಇಂಬುದೋರಿನ್ನು ಪ.ಅಂಬುಜಾಂಬಕಿ ಶುಂಭಮರ್ದಿನಿಕಂಬುಗ್ರೀವೆಹೇರಂಬಜನನಿಶೋ-ಣಾಂಬರಾವೃತೆ ಶಂಭುಪ್ರಿಯೆ ದಯಾ-ಲಂಬೆ ಸುರನಿಕುರುಂಬಸನ್ನುತೆ ಅ.ಪ.ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ-ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ-ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ-ಗಾರೆ ರಿಪುಸಂಹಾರೆ ತುಂಬುರುನಾರದಾದಿಮುನೀಂದ್ರ ನುತಚರ-ಣಾರವಿಂದೆ ಮಯೂರಗಾಮಿನಿಸೂರಿಜನ ಸುಮನೋರಥಪ್ರದೆ 1ಮೂಲರೂಪೆ ದಯಾಲವಾಲೆವಿಶಾಲಸುಗುಣಯುತೆ ಮುನಿಜನ-ಲೋಲತರುಣಮರಾಳೆ ಸಚ್ಚರಿತೆ ನವಮಣಿಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ-ಬಾಲೆ ನೀಲತಮಾಲವರ್ಣೆ ಕ-ರಾಳಸುರಗಿ ಕಪಾಲಧರೆ ಸುಜ-ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ 2ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ-ವಾಕರಾಭೆಪರಾಕುಶರಣಜನೈಕಹಿತದಾತೆ ಸುರನರ-ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ-ವಾಕುಕಾಯದಿಂದ ಗೈದಾನೇಕ ದುರಿತವ ದೂರಗೈದು ರ-ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ-ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ-ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ-ಲ್ಲಾಸೆ ಯೋಗೀಶಾಶಯಸ್ಥಿತೆವಾಸವಾರ್ಚಿತೆ ಶ್ರೀಸರಸ್ವತಿದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ 4ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ-ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ-ವಾಮಭಾಗಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯಶ್ರೀಮಹಾಲಕ್ಷ್ಮಿ ನಾರಾಯಣಿರಾಮನಾಮಾಸಕ್ತೆ ಕವಿಜನ-ಸ್ತೋಮಕೃತ ಪರಿಣಾಮೆ ಭೌಮೆ ಪುಲೋಮಜಾರ್ಚಿತೆಸೋಮಶೇಖರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿರೈ ಕರುಣಾಂಬುಧಿ ಕೋಮಲಕಂಬುಕಂಧರಹರಿಯಪ.ಯೋಗಿಮನಮುದ ರಾಗ ಮೂರುತಿಯ ದೊರೆಯಪಾಲಿತ ಕೌಂತೇಯಭಾಗವತತನಕಾಗಿ ತಾ ದಯವಗೈದ ಭರದಿಂದ ತೋರ್ವಯೋಗ ಮಾಯಾಧೀಶ ಸತ್ಸಕಲಾಗಮಾರ್ಚಿತಭೋಗಿಶಯನಸ-ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ 1ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟುಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದುನಿಂದುವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು 2ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನುದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನುಘಾಸಿಯಾಗದೆ ಧನಿಯ ಹಣವನುಸೂಸಿ ಕರುಣಾರಾಸ ರಾಜ್ಯದವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ 3ಕಷ್ಟವಿಲ್ಲದೆ ಇಷ್ಟ ದೊರಕುವದು ನೆನೆದುಸುಖದಿಂ ಬಾಳುವದುದೃಷ್ಟಿಯಿಂದಲಿನೋಡುನಮ್ಮ ದೊರೆಯ ಹರಿಯಪರಿಯ ನೀನರಿಯಾಸಿಟ್ಟುಮಾಡುವ ಸ್ವಾಮಿನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ 4ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮೋ ನಮೋ ಶಚಿ ವಲ್ಲಭತೇ |ರಮೆಯ ರಮಣನಲಿ ನೀಡು ಮತೆ ಪಹತ್ತು ಕಲ್ಪಗಳಲ್ಲಿ | ಉತ್ತಮ ಶ್ಲೋಕನ ||ತತ್ವ ವಿಚಾರ ಮಾಡ್ದೆ | ಚಿತ್ತಶುದ್ಧದಿ1ಮೂರೊಂದರ್ಧಾ ಕಲ್ಪ |ಚಾರುತಪಸ್ಸು ಮಾಡಿ ||ನಾರಾಯಣನ ಕಂಡ |ಸೂರಿಗಮ್ಯಾ 2ಪ್ರಾಣೇಶ ವಿಠ್ಠಲನ | ನೀನೊಲಿಸೀದೆ ಪೊಗೆ ||ಯಾನುಂಡು ಕೋಟಿವತ್ಸರನಾಕದಿ 3
--------------
ಪ್ರಾಣೇಶದಾಸರು
ನಳಿನಜಾಂಡತಲೆಯದೂಗೆ |ಇಳೆಯು ನಲಿದು ಮೋಹಿಸುತಿರಲು ||ಕೊಳಲ ಪಿಡಿದು ಬಾರಿಸಿದನು |ಚೆಲುವ ಕೃಷ್ಣರಾಯನು ಪಪೊಳೆವ ಪೊಂಬಟ್ಟೆಯ ದಟ್ಟಿ |ಅಳವಡಿಸಿ ನೆಗಹಿನಿಂದ ||ಹಲವು ರನ್ನದುಂಗುರವಿಟ್ಟ |ಚೆಲುವ ಬೆರಳ ನಟಿಸುತ |||ಲಲಿತವಾಮಭಾಗತೋಳ-|ಲೊಲಿದು ಓರೆನೋಟದಿಂದ ||ಬಲದಪಾದಎಡಕೆ ಚಾಚೆ |ನಳಿನಪದಗಳೊಪ್ಪುತಿರಲು 1ಸೆಳನಡುವಿನೊಳಗೆ ಕತ್ತರಿ |ಕಳೆಯ ಸಂಚಿ, ಗಜುಗು ಚೀಲ ||ಬಿಳಿಯ ಮಣಿಯು ಗುಳ್ಳೆಗಳಿರಲು |ಮಲಯಜಾನು ಲೇಪನ ||ಜಲಜನೇತ್ರ ಕೌಸ್ತುಬಾಧಿ-|ಗಳದಿ ಸ್ವರಗಳೊಪ್ಪುತಿರಲು ||ಲಲಿತವೇಣುಕಲ್ಪನೆಯಲಿ ಗೋ-|ವಳರೆಲ್ಲರು ಕುಣಿಯಲು 2ಮಾರವಿ ದೇಸಿ ಗುರ್ಜರಿ ಭೈರವಿ |ಗೌರಿನಾಟಿಸಾವೇರಿ ಆಹೇರಿ ||ಪೂರವಿ ಕಾಂಬೋದಿ ಪಾಡಿ ದೇಶಾಕ್ಷಿ ಶಂ-|ಶಕರಾಭರಣ ರಾಗದಿ ||ಪೂರವಿ ಕಲ್ಯಾಣಿ ವಸಂತ ತೋಡಿ |ವರಾಳಿ ಗುಂಡಕ್ರಿ ಸಾರಂಗ ಸಾಳಗ ||---------------------ಸೋರಟ ಭೂಪಾಳಿ ಶ್ರೀ ರಾಗದಿಂದಲಿ 3ಹರುಷದಿ ಬಾರಿಸುವ ರವಕೆ |ಪುರದ ಸ್ತ್ರೀ ಜನರು ಎಲ್ಲ ||ಮರೆದು ಮಕ್ಕಳ ಮನೆಯ ಕೆಲಸ |ಮರೆದು ಹರಿಯ ಬಳಸಲು ||ಕರಿಯು ಮೃಗವುಕೇಸರಿಶರಭ|ಹರಿಣ ನವಿಲುಉರಗಮೋಹಿಸಿ ||ನೆರೆದು ಮರೆದು ಜಾತಿವೈರವ |ಸ್ವರವ ಕೇಳುತಿರಲು 4ಕರಗೆ ಗಿರಿಯ ಕಲ್ಲು ತರುಗ-|ಳೆರಗಿ ಪಕ್ಷಿ ತತಿಗಳಿರಲು ||ಸುರರುಸುಮನ ಸುರಿಯುತಿರಲು |ಧರೆಯು ಮುದದಿ ಕುಣಿಯುತಿರಲು ||ಶರಧಿಉಕ್ಕಿಸರಿತುಸೊಕ್ಕಿ |ಪುರರಿಪುವಿಧಿಪೊಗಳುತಿರಲು ||ವಿರಚಿಸಿದ ಪುರಂದರವಿಠಲ |ಮುರಲಿಗಾನ ಮಾಡಿದ 5
--------------
ಪುರಂದರದಾಸರು