ಒಟ್ಟು 12747 ಕಡೆಗಳಲ್ಲಿ , 128 ದಾಸರು , 5642 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುಂಡು ಮುಖವುಳ್ಳ ಹುಡುಗನ ಕಂಡಿರಾಚಂಡನಾಡುತ ಬಂದ ಚದುರೆಯರ ಓಣಿಯಲಿ ಪ ಕರದೊಳಗೆ ಕೊಳಲಿಹುದು ಚರಣದೊಳು ರುಳಿಗೆಜ್ಜೆಕೊರಳೊಳಗೆ ಸರಪದಕ ಗುರುಳು ಮುಖದಿಜರದೊಲ್ಲಿ ಹೊದ್ದಿಹನು ಸ್ಮರನ ಮೋಹಿಪ ರೂಪಸಿರಿಯ ಕಂಡರೆ ಅವನ ಪರರು ಬಿಡರಮ್ಮ 1 ವಾರಿಜಾಕ್ಷೆರೆ ಬಹಳ ಜಾರಚೋರೆನ್ನ ಮಗವಾರೆನೋಟದಿ ಮನಸು ಹಾರಿಸುವನುಸಾರಿದರೆ ಮನೆಗಳಿಗೆ ದ್ವಾರಯಿಕ್ಕುತೆ ಬನ್ನಿದೂರು ಪೇಳಲು ಕೇಳಿ ಸಾರಿದೆನು ಮೊದಲೆ 2 ಕಂದನಾಗುವ ಕ್ಷಣದಿ ಒಂದೆ ಪ್ರಾಯದ ಪುರುಷಸುಂದರಾಂಗಿಯಳಾಗಿ ಬರುವನಂದಬಾಲನ ಮಹಿಮೆ ಬಂದು ನಂಬಲಿ ಬೇಡಿಇಂದಿರೇಶನು ಬಹಳ ಮಂದಿ ಮೋಹಿಸುವ 3
--------------
ಇಂದಿರೇಶರು
ದುಂಡುಗಟ್ಟಿ ನಿಂತರಮ್ಮದುಂಡುಗಟ್ಟುತ ಎಲ್ಲರೂದುಂಡುಗಟ್ಟುತ ಪೆಂಡೆಯಗೆಜ್ಜೆಗಳು ಘಿಲ್ಲು ಘಿಲಕು ಎನ್ನುತ ಪ. ಕೋಗಿಲಂತೆ ಸ್ವರವನೆತ್ತಿಬಾಗಿ ಬಳಕುತ್ತ ಎಲ್ಲರೂಬಾಗಿ ಬಳುಕುತ್ತ ನಾಗವೇಣಿಯರುಚಂದ್ರನ್ಹಾಂಗೆ ಒಪ್ಪುತ ಚಂದ್ರನ್ಹಾಂಗೆ ಒಪ್ಪುತ1 ಕಮಲ ಮುದದಿ ಎತ್ತಿಮುಗಿಯುತರಂಗಗೆ ಎತ್ತಿ ಮುಗಿಯುತ 2 ಲಕುಮೇಶನಲ್ಲೆ ಸ್ನೇಹ ಉಕ್ಕಿ ಚೆಲ್ಲುತ ಶರದಿ ಉಕ್ಕಿಚಲ್ಲುತ ಅಕ್ಕನೇತ್ರವೆಂಬೊ ಕುಮುದ ಚಕ್ಕನೆ ಅರಳುತ ಚಕ್ಕನರಳುತ 3 ರಂಗನಂಫ್ರಿಗೆರಗುವಂತೆ ಭೃಂಗವಾಗುತ ಎರಗಿಭೃಂಗವಾಗುತ ತಮ್ಮಅಂಗ ಮರೆದು ಮುದದಿಉತ್ತುಂಗರಾಗುತ ಉತ್ತುಂಗರಾಗುತ4 ಹರವಿದ ಕ್ಯಾದಿಗೆಯು ನÀವಿಲು ಗರಿಯಂತೊಪ್ಪುತ ನವಿಲುಗರಿಯಂತೊಪ್ಪುತ ಶ್ರೀ ರಾಮೇಶನೆಂಬೊ ಮುಗಿಲಿಗೆ ಪರಿವೆ ನಲಿಯುತ ಪರಿವೆನಲಿಯುತ5
--------------
ಗಲಗಲಿಅವ್ವನವರು
ದುಮು ದುಮು ಬಸವಂತನ ಹಬ್ಬಾ ಪ ರಾಮಕೃಷ್ಣ ಗೋವಿಂದ ಮುರಾರಿ | ಶಾಮ ಸುಂದರ ಸುರಜ ಸಹಕಾರಿ | ಕಾಮಿತ ಫಲಗಳ ನೀವ ಉದಾರಿ | ಶ್ರೀ ಮಾಧವನೇ ಕಾಯೋ ಚರಣವ ದೋರಿ 1 ಬನ್ನ ಬಡುತಲಿ ಬಲು ಭವದಲಿ ಬಂದೆ | ಮುನ್ನಿನ ತಪ್ಪವನೆಣಿಸದೆ ತಂದೆ | ಚೆನ್ನಾಗಿ ರಕ್ಷಿಸು ನಮೋ ನಮೋ ಎಂದೆ 2 ಈ ರೀತಿಯಿಂದಲಿ ಹರಿಯ ಕೊಂಡಾಡಿ | ಆ ರಾಧಿಪ ನವವಿಧದಲ್ಲಿ ಕೂಡಿ | ನಾರಕ ಭಯಗಳುವನು ಮೂಲದೀಡ್ಯಾಡೀ | ಸೂರ್ಯಾಡು ಸ್ವ ಸುಖ ಎಲೊ ಹುಚ್ಚು ಖೋಡಿ 3 ಮುನ್ನಿನ ಪುಣ್ಯದಿ ನರದೇಹ ತಾಳಿ | ಮಾನವನಾಗಿ ಹರಿಕಥೆ ಕೇಳಿ | ಚೆನ್ನಾಗಿ ವಿಷಯದಲನುದಿನ ಬಾಳೀ | ವೈರಿ ನೀನಾದೆ ಗೈಯ್ಯಾಳಿ 4 ಮೃಗಜಲ ಹೋಲುವ ವಿಷಯಾ ನಂದಾ | ಬಗೆದೆಲೋ ಶಾಶ್ವತವೆಂದು ನಿನ್ನಿಂದಾ | ಭಕುತಿಯ ಮಾರ್ಗವ ಬಿಟ್ಟೆಲೋ ಛಂದಾ | ಜಗ ದೊಳಗಾದೆಲೋ ನೀ ಮತಿ ಮಂದಾ 5 ಹೆಂಡರು ಮಕ್ಕಳು ಮಮತೆಯ ಸ್ಥೂಲಾ | ಖಂಡದಿ ಬಿದ್ದಿದೆ ಕಾಲಿಗೆ ಕೋಳಾ | ಅಂಡಲೆವುತ ಹೊಟ್ಟೆಹೊರೆದೆಲೋ ಮೂಳಾ 6 ಸುಖವಿಲ್ಲ ಇದರೊಳಗಿಂದು | ಪಾದ ಹೊಂದು 7 ತ್ವರಿತದಿ ಭಾವಭಕ್ತಿಗೆ ಗಮನವಿಟ್ಟು | ತರಳನಾಗಿ ಹೋಗದಿರೆಲೋ ಕೆಟ್ಟು 8 ಚಿನುಮಯ ಗೆಚ್ಚರಗಳೆದೆಲೋ ಭ್ರಾಂತಾ | ಕುಣಿಸ್ಯಾಡುತಿ ಹನು ಅಚ್ಯುತಾನಂತಾ 9 ಒಬ್ಬರು ಶಾಸ್ತ್ರದ ಮದದಲಿ ಬಿಗಿದು ಉಬ್ಬುಬ್ಬಿ ಕುಣಿದರು ಹೇಳಲೇನಿಂದು 10 ಅಷ್ಟಮದದಿಂದ ಕಣ್ಣು ಮುಚ್ಚಿ | ಕುಟ್ಟುವಾಗ ನೆಲ್ಲಿಕಾಲನು ಘಟ್ಟಿಸಿ 11 ಸಂತರ ಕಥೆ ಕಿವಿಯಲಿ ಕೇಳಲಿಲ್ಲಾ | ಭ್ರಾಂತನೆ ನಾಳೆ ಮುರಿವನು ಹಲ್ಲಾ 12 ನೆರೆದಹಿಸುತ ದುರ್ಮದ ಬೂದಿ ಚೆಲ್ಲಿ | ನರಜನ್ಮ ಸಾರ್ಥಕ ಮಾಡೆಲೊಹುಳ್ಳಿ 13 ಕಂದನು ಸಾರಿದಾ ಹೋಳಿಯಾ ವಂದಾ | ಭವ ಬಂದಾ 14
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುರಿತ ಉಪಶಮನೆ | ಅಮಮ ಮಂದಗಮನೆ || ಅಗಣಿತ ಸುಮನೆ ಪ ಆ ಮಹಾ ಮಾರ್ತಾಂಡ ಪುತ್ರೆ ಮಂಗಳಗಾತ್ರೆ | ಕಾಮಿತ ಸುಫಲದಾಯೆ ಕಾಲನಿಭ ಕಾಯೆ | ಆ ಮಂಜುಗಿರಿ ಬಳಿಯ ಅಲ್ಲಿ ಪುಟ್ಟಿದ ಸಿರಿಯೆ | ಸೋಮಕುಲಪಾವನೇ ಶರಣ ಸಂಜೀವನೆ 1 ಗಂಗಾ ಸಂಗಮ ಘನತರಂಗಿಣೀ ಮಹಾಮಹಿಮೆ | ಅಂಗವಟೆ ಅತಿ ಚಲುವೆ ನಲಿದಾಡಿ ನಲಿವೆ | ಮುಂಗುರಳು ಸುಮಲತೆ ಮೂಲೋಕ ವಿಖ್ಯಾತೆ | ಕಂಗಳಲಿ ನೋಳ್ಪಂಗೆ ಹೃತ್ಕಮಲ ಭೃಂಗೆ 2 ವಾರಿನಿಧಿ ಪ್ರಥುಕುಗಾಮಿನಿ | ಹಾರ ಮುಖೆ ಸುಪ್ರಮುಖೆ | ವೀರಶಕ್ತಿ ವಿಜಯವಿಠ್ಠಲನ |ಕಾರುಣ್ಯಪಾತ್ರೆ ಸಂಗೀತಲೋಲೆ 3
--------------
ವಿಜಯದಾಸ
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರಿತ ತ್ಯಜಿಸಿರೋ ಪರಮ ಸಾಧ ಐಕೂರು ನರಸಿಂಹಾರ್ಯರ ಪ ಕೃಷ್ಣತೀರದಿ ಮಿಂದು | ಕೃಷ್ಣÀವರನೊಳು ಜಿಷ್ಣು ಸೂತನ ನೋಳ್ಪ | ವಿಷ್ಣು ದಾಸರ 1 ತರುಳತನದಲಿ | ಸದ್ಗುರುವರೇಣ್ಯರ ಚರಣ ಸೇವಿಸಿ ಶಾಸ್ತ್ರವರಿತ ಧೀರರ 2 ಸತತ ನಂಬಿದ ಶಿಷ್ಯತತಿಗೆ ಹರಿಗುಣ ಹಿತದಿ ಸುರಿದ | ಅಪ್ರತಿಮ ಮಹಿಮರ 3 ಪವನ ಶಾಸ್ತ್ರವೇದ | ಕವನವೆನ್ನುತ ವಿವರಿಸುತ್ತಲಿ ತನ್ನವರ ಪೊರೆದರ 4 ಏನು ಬಂದರು ಮನದಿ ಶ್ರೀನಿವಾಸನ ಧ್ಯಾನ ಬಿಡದಿಹ | ಮಹಾನುಭಾವರ 5 ಭಕುತಿ ಜ್ಞಾನವ ತಮ್ಮ ಭಕುತ ವರ್ಗಕೆ ಪ್ರಕಟಗೊಳಿಸಿದ ಇಂಥ | ಮುಕುತಿ ಯೋಗ್ಯರ 6 ಭುವನ ಮೇಲಿಹ ಇವರು ದಿವಿ ಭವಾಂಶರು ರವಿ ನಿಭಾಂಗರು | ಜವನ ಭವಣೆ | ತರಿದರು 7 ಇವರು ಪೇಳುವ ವಚನ ಶ್ರವವಣಗೈಯಲು ಶೌರಿ ಭುವನ ಪಡೆವರು 8 ಕಂತುಪಿತ ಕಥಾ ಸುಧಾ | ಗ್ರಂಥ ಮರ್ಮವ ಆ ದ್ಯಂತ ಬಲ್ಲರು ಪರಮ ಶಾಂತಿ ಶೀಲರು 9 ಮೌನಧ್ಯಾನದ ಜ್ಞಾನ ಖೂನ ತೋರದೆ ಹೀನರಂದದಿ ಹೊರಗೆ ಕಾಣಿಸುವರು 10 ಬಾಲಕೃಷ್ಣನ ದಿವ್ಯಲೀಲೆ ಚರಿತೆಯ ಕಾಲ ಕಳೆಯರು 11 ನಿಂದ್ಯ ವಂದನೆ ಬಂದ ಕುಂದು ಶ್ಲಾಘನೆ ಇಂದಿರೇಶನೆ ತಾನೆ ತಂದ ನೆಂಬರು 12 ಪಾದ ಪೊಂದಿದ ಜನಕೆ | ಮೋದಗರೆವರು ವ್ಯಾಧಿ ಕಳೆದರು ವೇದ ಬೋಧಿಸಿದರು 13 ವಿವಿಧ ವೈಭವ ಮೇಣ್ | ಕುವರ ಭಾಗ್ಯವ ವಿವಿಧ ಭೋಗವ ಶಿಷ್ಯ ನಿವಹಕಿತ್ತರು 14 ನಿತ್ಯ ಪೇಳುತ ಭೃತ್ಯನಿಕರಕೆ ಸಧೃಡ ಚಿತ್ತವಿತ್ತರು 15 ಕಾಮವಾಸನೆ ಸುಟ್ಟು | ನೇಮ ಪೂರ್ವಕ ರಾಮನೊಲಿಮೆಯ | ವಿಶ್ವಪ್ರೇಮವೆಂಬರು 16 ಈ ಸುಮಹಿಮರ | ಸದುಪದೇಶ ಕೊಳ್ಳಲು ಕ್ಲೇಶಬಾರದು | ಯಮನು ಘಾಸೆÉಗೊಳಿಸನು 17 ನಿರಯ ಪಾತ್ರರು 18 ಇನಿತುಪಾಸನೆಗೈವ ಘುನ ಮಹಾತ್ಮರ ಗುಣಗಣಂಗಳ | ತುತಿಸಲೆನಗೆ ಸಾಧ್ಯವೆ 19 ಅರುಣನುದಿಯದಿ | ಇವರ ಚರಣ ಕಮಲವ ಸ್ಮರಣ ಮಾಡಲು | ಹರಿಯ ಕರುಣವಾಹದು 20 ಸಾಮಜವರ ವರದ ಶಾಮಸುಂದರನ ಪ್ರೇಮಪಾತ್ರ ನಿಷ್ಕಾಮ ಪೂರ್ಣರು 21
--------------
ಶಾಮಸುಂದರ ವಿಠಲ
ದುರಿತ ಬ್ರಹ್ಮಾಸ್ತ್ರಜಯಜಯ ಜಯತು ಪ್ರತಿಯಿಲ್ಲದಸ್ತ್ರಾ ಪ ಉಟ್ಟಿಹ ಕಾಶಿಯ ಉಡಿಗೆತೊಟ್ಟಿಹ ಎದೆ ಕಟ್ಟುಕಟ್ಟಿದ ಖಡ್ಗ ಕಠಾರಿರಕ್ತದ ತಿಲಕವಿಟ್ಟುಮುಷ್ಠಿಯಲಿ ಮುದ್ಗರ ಶೂಲಧನು ಶರವಳವಟ್ಟುಬಿಟ್ಟ ಕಂಗಳ ಕಿಡಿಯುಛಟಛಟ ಛಟವಿಟ್ಟು 1 ಏರಿಸಿ ಪಟ್ಟೆಯ ಹಲಗೆಎಡಬಲ ನೋಡದೆಹರಿಯ ಘನ ಶತ್ರುವಿನನಾಲಗೆ ಹಿಡಿದೆಳೆಯೆವೀರ ಮಂಡಿಯ ಹೂಡಿಅವುಡನೇ ಕಡಿಕಡಿದೇಹಾರಿಸಿದೆ ತಲೆಗಳನುಹಾ ಎನುತಲಿ ಬಿಡದೆ 2 ಮುಕುಟ ಕಾಂತಿಯಮಿಹಿರಕೋಟೆಯ ಕಳೆಯು ಹಳಿಯೆಲಕಲಕನೆ ಬೆಳಗುತಿಹಕುಂಡಲ ಸರಪಳಿಯೆಚಕಚಕನೆ ಮೂಗುತಿಯಮುತ್ತು ಹೊಳೆಹೊಳೆ ಹೊಳೆಯೇಸಬಲೆ ಎನಿಪ ಚಿದಾನಂದಬಗಳಾಂಬ ತಿಳಿಯೆ3
--------------
ಚಿದಾನಂದ ಅವಧೂತರು
ದುರಿತ ವಿನಾಶನಾ ದುರಿತ ಇಂದು ಪುರಂದರನ ಪೊಂದುತಲಿ ಅತಿ ಭಕುತಿಯಿಂದ ಸ್ಮರಿಸುವ ಜನರ ಉದ್ಧಾರ ಸಂದೇಹ ಸಲ್ಲದಿದಕೆ ಪ ದ್ವಾರಕಾಪುರದಲ್ಲಿ ಶ್ರೀರಮಣ ಸಭೆಯೊಳಗೆ ಚಾರು ಮಂಡಿತನಾಗಿ ಇರುತಿರಲು ಯದು ಪರಿ ವಾಲಗ ಗೋಪಿಕಾ ನಾರಿಯರ ಖ್ಯಾಲದಲ್ಲಿ ವಾರ ಕಾಂತೆಯರು ಮದವೇರಿ ನೃತ್ಯವ ಮಾಡೆ ಭೋರೆಂಬ ವಾದ್ಯವಿಳೆಯೊಳು ಮೊಳಗೆ ದೇವತತಿ ನಾರದನು ಧರೆಗಿಳಿದನು 1 ಬರುತಲೇ ವೈಕುಂಠಪುರದರಸಗೆರಗಿದನು ಕರಗಳನು ಮುಗಿದು ಕಿನ್ನರಿಯನ್ನು ತಾ ಧರಿಸಿ ಮೂವತ್ತೆರಡು ರಾಗಗಳಲಿದಿರುನಿಂದು ಎರಡು ಕಂಗಳಧಾರೆ ಸುರಿಯೆ ಪುಳುಕೋತ್ಸಹದಿ ಕೊರುಳುಟ್ಟಿ ತೊದಲುನುಡಿ ಮೈಸ್ಮರಣೆ ಹಾರೆ ಶ್ರೀ ಸುರರು ಶಿರವನೆ ತೂಗಲು2 ಅಚ್ಚುತನು ಪರಮ ಭಾಗವತನ್ನ ಭಕುತಿಗೆ ಮೆಚ್ಚಿದನು ಬೇಡುವುದು ವರವಧಿಕವೆಂದೆನಲು ಗೀರ್ವಾಣಮುನಿ ಎಚ್ಚರಿಕೆಯನು ಪೇಳುತ ಅಚ್ಚಗನ್ನಿಕೆ ರಮಣ ದೀನನನು ಮನ್ನಿಪುದು ನಿಚ್ಚಟೆನ್ನಯ ಕೂಡೆ ಬಿಡದೆ ಆಡೆನಲು ಕಲಿ- ಕೀರ್ತಿಗಳು ಬಿಚ್ಚಿ ತೋರಿಸುವೆನೆಂದ 3 ವರ ಪಡೆದು ನಾರದನು ಇರುತಿರಲು ತಾವಿತ್ತ ಬರಲು ಕಲಿ ದೊರೆತನವು ಕೆಲವು ಕಾಲಾಂತರಕೆ ಪುರಂದರವೆಂಬ ನಗರಿಯಲ್ಲಿ ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ ಕಿಷ್ಕಿಂಧಗಿರಿ-ತುಂಗ ಪಂಪದಲ್ಲಿ 4 ಅಂದು ಭಕುತಗೆ ಇತ್ತ ಭಾಷೆ ತಪ್ಪಲಿಬಾರ- ದೆಂದು ಇಂದಿರೆಪತಿಯು ದಯದಿಂದ ವಲಿದವರ ಕುಣಿಕುಣಿದು ನಂದವನೆ ತೋರಿಕೊಳು ಮಂದಭಾಗ್ಯರಿಗೆ ಈ ಪರಿಯ ಸೊಬಗುಂಟೆ ನಾ ಪರ ಬೊಮ್ಮ ಬಂದು ಸಿಲುಕಿದನೆಂಬುವುದೆ ಇದಕೆ ಪ್ರಾಮಾಣ್ಯವೆಂದು ತಿಳಿದು ಸುಜನರು 5 ವಾಸವನೆ ಮಾಡಿದರು ಪ್ರಹ್ಲಾದನವತಾರ ವ್ಯಾಸರಾಯರ ಬಳಿಯ ಮುದ್ರೆ ಗುರುಮಂತ್ರ ಉಪ ಪುರಂದರ ದಾಸರೆಂಬುವ ಪೆಸರಲಿ ದೇಶಗಳ ತಿರುಗಿ ಪುಣ್ಯಕ್ಷೇತ್ರಗಳ ಮೆಟ್ಟಿ ಲೇಸಾಗಿ ಅಲ್ಲಲ್ಲಿ ಮಹಿಮೆಗಳ ಪೇಳುತ ದು ವಸಿಸಿದರು ಧರ್ಮಬಿಡದೆ 6 ಉಪಾದಾನವ ಬೇಡಿ ವಿಪ್ರರಿಗೆ ಮೃಷ್ಟಾನ್ನ ಅಪರಿಮಿತವಾಗಿ ಉಣಿಸುತ್ತಿರಲು ಅವರಲ್ಲಿ ತಟಿನಿಗಳು ತಪಸು ಫಲವಾಯಿತೆಂದು ತಪನ ಕಾಲದಲೆದ್ದು ದಾಸರಾ ಸದನದಲಿ ಜಪಿಸಿ ತಮ ತಮ ತಕ್ಕ ತಾರತಮ್ಯಗಳಿಂದ ಸುಪಥವನು ಇಚ್ಛಿಸುವರು 7 ಅವರೆಂದ ವಚನಗಳೆÀಲ್ಲ ವೇದಾರ್ಥವಾಗಿ ಅವನಿಯೊಳು ತುಂಬಿದುವು ಬಂದರೇ ಗ್ರಹಿಸಿದರ ಭುವನ ನಿಧಿಯೊಳಗೆ ಮುಳುಗಿ ಪವನ ಮತವಿಡಿದು ಪರಿಪೂರ್ಣಮಾಚಾರದಲಿ ತವಕದಿಂದಲಿ ಹರಿಯ ಪಾದವನೆ ಪಡಕೊಂಡು ನವರೂಪಿನಲಿ ಇಪ್ಪರು 8 ಏನು ಇದು ಎಂತೆಂದು ದೂಷಿಸದಿರಿ ದಾಸರ ಸೂನು ಪೇಳಿದನು ಗುರು ವ್ಯಾಸಮುನಿ ರಾಯರಿಗೆ ಪುರಂದರ ದಾಸರೆಂಬಂಥ ಸೂನೃತದ ಸಿದ್ಧಾಂತದ ಧ್ಯಾನದಲಿ ತಿಳಿದು ಸುಜ್ಞಾನಿಗಳ ವದನಖದ ರೇಣಿನವನಾಗಿ ಬಿನ್ನೈಸಿದನು ಜ್ಞಾನಮಯ ಕಾಣುವಾ ಜನ ಲಾಲಿಸೆ 9
--------------
ವಿಜಯದಾಸ
ದುರಿತ ಜೀಮೂತವಾತ ಪೊರಿಯಯ್ಯ ನಿನಗೆ ನಿರುತ ಧರಣಿಯೊಳಗೆ ವಿಸ್ತರಿಸಿ ಬಲ್ಲವರಾರು ಗುರುವೆ ನಿಜ ನಮಿತರ ಸುರತರುವೆ ಪ ನಂಬಿದೆ ನಿನ್ನ ಪಾದವಂಬುಜವನು ಗಾಲ ಬೆಂಬಿಡದಲೆ ನಾನೆಂಬೋದು ಬಿಡಿಸಿಂದು ಬೆಂಬಲವಾಗು ಆರೆಂಬ ಖಳರ ನೀಗು ಇಂಬಾಗಿ ನೋಡು ದಿವ್ಯಾಂಬಕದಿಂದ ವೇಗ ಡಿಂಬಾರೋಪಿರೆ ಡಂಬಕತನವೆಂಬುದು ಕೊಡದಲೆ ಸಂಭ್ರಮದಲಿ ಹರಿದೊಂಬಲ ಬಯಸುವ ಹಂಬಲಿಗರ ಕೂಡ ಇಂತು ತೋರು ಬಲು ಗಂಭೀರ ಕರುಣಿ 1 ಎಣೆಗಾಣೆÉ ನಿಮಗೆ ಕುಂಭಿಣಿಯೊಳಗೆಲ್ಲ ಯತಿ ಮಣಿಭೂಷಣ ಚರಣಾರ್ಚನೆ ಮಾಳ್ಪ ಮಹಿಮ ಮನಸಿಜ ಶರಭೀಮ ಮನದಣೆ ಗುಣಿಸಿ ಈ ದಿನ ಮೊದಲು ಪಿಡಿದು ಜನುಮ ಜನುಮದ ಸಾ ಧನ ಫಲಿಸುತು ಯೋಚನೆಗೊಳಲ್ಯಾಕೆ ಅನುಮಾನ ಸಲ್ಲದು ಘನತರ ಕೀರ್ತಿ ನೂರಾರಕೆ ಕಾಯ 2 ವರಹಜೆ ಸರಿತೆಯಲ್ಲಿ ಸ್ಥಿರನಾಗಿ ನಿಂದು ಕ್ಷಣ ಸುರರಿಂದಾರಾಧನೆ ಸರಸರನೆ ಹಗಲು ಇರಳು ಕೈಗೊಳುತ ವಕ್ಕಾರಗಳು ಹರಸಿ ಸುಂ ದರ ವರಗಳನಿತ್ತು ಚಿರಕಾಲ ಬಿಡದಲೆ ಪರವಾದಿಯ ಬಲ ಉರುದಲ್ಲಣ ಪೂ ತುರೆ ಸುಧೇಂದ್ರರ ಕರಾರವಿಂದಜ ಅರಸರಸರ ಪ್ರಿಯ ವಿಜಯವಿಠ್ಠಲನ ಬಿರಿಯ ಹೊಯಿಸುವ ಧೀರಾ ಗುರು ರಾಘವೇಂದ್ರ3
--------------
ವಿಜಯದಾಸ
ದುರಿತಾರಿಯೊಳು ಮನವಿರಿಸಿ ಸೌಖ್ಯವತಾಳು ನರಕವು ಬರದೊ ಮಾನವಾ ಪ ಪರಿಪರಿ ಜನ್ಮದೆ ಕೊರಗಿ ಕಂಗೆಡಬೇಡ ಸ್ಥಿರವಲ್ಲವೀ ದೇಹವೂ ಭರವಸದಿಂದ ಅ.ಪ ಮಂದಮತಿಯನಾಂತು ನೊಂದು ಸಾಯಲಿಬೇಡ ಕುಂದುಕೊರತೆಗಳಿಲ್ಲವೋ ವಂದಿಸಲು ಹರಿಯ 1 ಎರಡು ಕಂಬದ ಮೇಲೆ ಮೆರೆವ ಗೋಪುರವಿದು ಬಿರುಗಾಳಿಯಿಂದಲೋ ಉರುತರ ಮಳೆಯೊಳೊ ಉರುಳಿ ಬೀಳುವುದೆಂಬುದು ಬರೆದಿಡೊ ಮೂಢಾ 2 ನೀರ ಬೊಬ್ಬುಳಿಯಂತೆ ಆರಿಹೋಗುವುದಿದು ಸೇರದು ಪದುಮಾಕ್ಷನಾ ಆರುದಿನ ಬಾಳಿಗಾರು ಸಮರೆನಬೇಡ ಆರಡಿ ಕಮಲವುತಾ ಸೇರುವವೊಲು 3 ಎನಗೆ ಮುಂದೊದಗುವ ಜನ್ಮಕೋಟಿಗಳೊಳು ಅನುಗಾಲ ದೇಶವಸ್ಥೆಗಳೊಳಗೂ ವನಜನಾಭನೆ ನಿನ್ನ ಘನಪಾದಕಮಲವ ನೆನೆವ ನೆಲೆಸುವಂದದೆ ಅನವರತ ಬೇಡೋ 4 ಜೀವಾತ್ಮ ಪೋಪಾಗ ದೇವದೇವನ ಮರೆವ ಭಾವಗಳೊಳುದಯಿಪವು ಸಾವಕಾಶವ ತೊರೆದು ಮಾಂಗಿರಿರಂಗನ ದಿವ್ಯನಾಮವ ನೆನೆದು ಭಾವುಕನಾಗು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದುರ್ಗಣ ಪರಿಹರಿಸಿ ದುರ್ಗದೊಳಿಡು ಎನ್ನಾ ಪ ಪಾಪಕ್ಕೆ ಎರಗುತಾ ತಾಪಸರನ್ನ ಜರಿದು ಬಲು ಸಂ ತಾಪದಿ ಬಳಲಿದೆನೊ ಕುಕ್ಕಿ 1 ಹಿಂಸೆಯ ಮಾಡುವಲ್ಲಿ ಹೇಸದೆ ಧ್ವಂಸಗೈಸು ವೇಗಾ 2 ಕಠಿಣ ಉತ್ತರ ನುಡಿದು ಮತ್ಸರ ಕುಟಿಲತನವಾ ಮರಿಯೆ ಸಟೆ ಮಾತುಗಳನಾಡಿ ನಿನ್ನಾ ನಿ ಚ್ಚಟದ ಮರಿದೆನೊ ಹರಿಯೆ 3 ಕಲಹವೆಂದರೆ ಕಾಲು ಕೆದರುವೆ ಕೆಲಸಾರದಲೇವೇ ಮಲಿತು ಎದುರು ನೆಲೆಗಾಣದೇ ಪೋದೆ4 ವ್ಯಾಧೆ ವೇದನೆಯಿಂದ ಬಲು ಕಷ್ಟ ವಾದದು ಈ ದೇಹಕ್ಕೆ ಮೋದ ವಿಜಯವಿಠ್ಠಲ ನಿನ್ನಿಂ ದಾದದ್ದು ತೊಲಗಿಸಿ 5
--------------
ವಿಜಯದಾಸ
ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ,ಸಜ್ಜನರ ಸಂಗದೊಳಗಿರಿಸೆನ್ನ ರಂಗ ಪ ಭಂಗ ರಂಗ 1 ನಂಬಿದ ಠಾವಿನಲಿ ಕೇಡನೆಣಿಪನ ಸಂಗಸಂಭ್ರಮದಿ ಜಗಳ ಕಾಯುವನ ಸಂಗಹಂಬಲಿಸಿ ಭವದ ಸುಖ ಮೆಚ್ಚಿದಾತನ ಸಂಗರಂಭೆಯರ ನೋಡಿ ಮೋಹಿಪನ ಸಂಗ2 ಕುಹಕ ಮಾಡುವಾತನ ಸಂಗಬಲು ಬೇಡೆ ಕೊಡದಿರುವ ಲೋಭಿ ಸಂಗಕುಲಹೀನರ ಕೂಡೆ ಸ್ನೇಹ ಬೆಳೆಪನ ಸಂಗಹಲವು ಮಾತಾಡಿ ಆಚರಿಸದನ ಸಂಗ3 ಗುರುಸತಿಗೆ ಪರಸತಿಗೆ ಎರಡು ಎಣಿಪನ ಸಂಗಗುರುನಿಂದೆ ಪರನಿಂದೆ ಮಾಡುವನ ಸಂಗಪರಹಿತಾರ್ಥದ ಧರ್ಮ ಪಡೆಯದಾತನ ಸಂಗಪರಮಪಾಮರ ಸಂಗ ಬಹುಭಂಗ ರಂಗ 4 ಭಂಗ 5
--------------
ಕನಕದಾಸ
ದುರ್ಜನರ ಸಂಗವನು ತ್ಯಜಿಸು ಮನವೆ, ಸಾಧು ಸಜ್ಜನರ ಸಂಗವನು ಭಜಿಸಿ ಸುಖಿಯಾಗೆಲವೊ ಪ ದುಷ್ಟ ವ್ಯಾಘ್ರನ ಕೈಯ ಮುಟ್ಟಿ ಹಿಡಿ ತರಬಹುದು ಅಟ್ಟಿಬಹ ಮದಕರಿಯ ಕಟ್ಟಬಹುದು ಕೃಷ್ಣಸರ್ಪನ ಹುತ್ತ ಕಲಕಿ ಜೀವಿಸಬಹುದು ದುಷ್ಟಾತ್ಮರಾದವರ ಬಿಟ್ಟು ಕಳೆ ಮನವೆ 1 ಚೇಳಬಾಲದ ಉರಿಯ ಜ್ವಾಲೆ ತಾಳಲುಬಹುದು ಕಾಲಮೇಘದ ಸಿಡಿಲು ಬೀಳಬಹುದು ಶೂಲಪಾಣಿಯ ಫಣೆಯ ಆಲಿ ಕೀಳಲುಬಹುದು ಕಾಳುಮೂಳರ ಸಂಗ ಮರೆದು ಕಳೆ ಮನವೆ 2 ಹರಿವ ಗರಗಸಿನಲ್ಲಿ ಶಿರವನೊಡ್ಡಲುಬಹುದು ಬೆರಸಿಬಹ ಕಾಡ್ಗಿಚ್ಚ ಧರಿಸಬಹುದು ಸರಿಸದಲಿ ನಿಂತು ಕೇಸರಿಯ ಕೆಣಕಲುಬಹುದು ಮರೆಸಿ ಕೊರಳನು ಕೊಯ್ವ ನರರ ಮರೆ ಮನವೆ 3 ಒಂದು ಜಾತಿಗೆ ವಿಷವು ಪುಚ್ಚದೊಳಗಿರುತಿಹುದು ಮ- ತ್ತೊಂದು ಜಾತಿಗೆ ದಂತದೊಳಗೆ ವಿಷವು ಒಂದು ಜಾತಿಗೆ ಮೈಯ ಅಂದವೆಲ್ಲವು ವಿಷವು ಹಿಂದೆಯಾಡುವ ನುಡಿಯು ಘೋರ ವಿಷ ಮನವೆ 4 ತೇರ ಕಂಡರೆ ತೊಲಗು ಮಾರೈದನಾಕ್ಷಣದಿ ವಾರುವಗೆ ಕಡೆ ಸಾರು ಈರೈದು ಮಾರುವನು ದಾರಿಯನು ಬಿಡು ಗಜಕೆ ಮೂರು ಸಾವಿರವನ್ನು ಊರ ಬಿಡು ದುರ್ಜನರ ಸೇರದಿರು ಮನವೆ 5 ಸತ್ಯವಂತರ ಕಂಡರರ್ಥಿಯಿಂದಲೆ ಎರಗು ನಿತ್ಯದೊಳು ಶ್ರೀಹರಿಯ ಕೀರ್ತನೆಯ ಮಾಡು ಉತ್ತಮೋತ್ತಮ ಪದವ ಹತ್ತಿಸುವವರ ಬೇಡು ಧೂರ್ತಮನುಜರ ಸಂಗ ಕಿತ್ತು ಕಳೆ ಮನವೆ 6 ಶುದ್ಧಮನವೆ ಎನ್ನ ಬುದ್ಧಿಯೊಳಗಡಗಿರ್ದು ಉದ್ಧರಿಸು ವರಾಹತಿಮ್ಮಪ್ಪನನು ನೆನೆದು ಮದ್ದನರೆ ಜನ್ಮದೊಳು ಮರಳಿಬಾರದ ಹಾಗೆ ಗದ್ದುಗೆಯ ಹಾಯ್ಕೆನ್ನ ಹೃದಯ ಮಧ್ಯದಲಿ 7
--------------
ವರಹತಿಮ್ಮಪ್ಪ
ದುರ್ಯೋಧನ ಮಹರಾಜನೆ | ಅ ನಾರ್ಯ ಜನರ ಕಲ್ಪಭೂಜನೆ ಪ ನಿರ್ಹೇತುಕ ದ್ವೇಷ ಮಾಡುವೆ | ಹಾ ಹಾ ಅ.ಪ ಹರಿಭಕ್ತಿಗೆ ಮಾನಭಂಗ ಮಾಡಲಾಪೆಯ ದುರುಳ ಘೋಷಯಾತ್ರೆಯ ಜ್ಞಾಪಿಸಿಕೊ ದುಷ್ಟ 1 ಜಲದೊಳು ಮುಳುಗಿ ಸ್ವಬಲವನೆಬ್ಬಿಸುವೆನೆಂ ದೆಲೆ ಭೀಮಗೇಕಿದಿರಾದÀಯ್ಯ ನೀನು 2 ಶ್ರೀಪ ಗುರುರಾಮ ವಿಠಲಗೆ ದೂರನೆ | ಹಾ ಹಾ 3
--------------
ಗುರುರಾಮವಿಠಲ
ದುರ್ಲಭ ಇದು ಕಲಿಯುಗದೊಳಗೆ ಕಾಣಾ ಎಲ್ಲರಿಗೆ ದೊರಕಬಲ್ಲದೆ ಶ್ರೀ ವಲ್ಲಭನ ಪಾದಸೇವೆ ಮಾಡೋ ನೀ ನಲಿದಾಡೋ ಎಲೆ ಮನುಜಾ ಪ ಗಂಧರ್ವರು ಸಿದ್ಧರು ವಿದ್ಯಾ ದರಸಾಧ್ಯ ಗುಹ್ಯಕ ಸುರಮುನಿಗಣ ಗರುಡಾದ್ಯರೆ ನೆರೆದು ಪುರಹರ ಮೂವನ ಬಲ್ಲಿದರೀ ಇಲ್ಲವೆನುತಲಿ ಬರಿದು ರೇಖೆಯ ಬರಿಸಿದರೊ ಡಂಗುರ ಹೊಯಿಸಿದರೊ ಎಲೆ ಮನುಜಾ 1 ಹರಿಯೆಂತೆಂದವ ಧರ್ಮಕೆ ಸಂದವ ಕರದಲಿ ದಂಡಿಗೆ ಪಿಡಿದವ ಪುಣ್ಯವ ಪಡೆದವ ಚರಣದ್ವಯದಲಿ ಗೆಜ್ಜೆಯ ಕಟ್ಟಿದವ ಅಟ್ಟಿದವ ಯಮ ಭಟರ ಹರಿಹರಿದಾಡುತ ಕುಣಿದವ ಉತ್ತಮ ಗುಣದವ ಹಿರಿದಾಗಿ ಗಾಯನ ಪಾಡಿದವ ಸುರರನ ಗೂಡಿದವ ಮಾಯವ ಬಿಡೋ ಎಲೆ ಮನುಜಾ2 ಭವಾಬ್ಧಿ ದಾಟಿದವ ಇಂಬಾಗಿ ಕಡ್ಡಿ ವಾದ್ಯವ ಹಾಕಿದವ ದುರುತವ ನೂಕಿದವ ಸಂಭ್ರಮ ತಾಳ ಕಟದವ ಊಟದವ ಸುರರೊಡನೆ ತುಂಬಿದ ದಾಸರ ಸಭೆಯೊಳಗಿದ್ದವ ನರಕವನೊದ್ದವ ಕಂಬನಿ ಪುಳಕೋತ್ಸವ ಸುರಿದವ ತತ್ವವನರಿದವ ನೀ ಸುಖದಲಿ ಬಾಳೊ ಎಲೆ ಮನುಜಾ 3 ಬೇಸರದಲೆ ಹೇಳಿ ಏಕಾದಶಿಯ ವಾಸರದಲಿ ಜಾಗರವನು ಗೈದ ಮಾನೀಸನು ಅಘನಾಶನು ಚರಣಕೆ ಏರಿಸಿದನಿವ ಬೆರೆದು ಎಲೆ ಮನುಜಾ4 ಗೋಪಾಳವನು ಬೇಡಿ ನಿತ್ಯಸುಖಿಯಾಗಿ ತಾಪತ್ರೆಯ ಮೊದಲಾದ ದುಷ್ಕರ್ಮ ಪಾಪರಹಿತನಾಗಿ ಸಿರಿ ಪದ್ಮವ ಪೊಂದಿದ ಭಜಕರು ಒಂದೇ ಗೇಣೊ ಎಲೆ ಮನುಜಾ 5
--------------
ವಿಜಯದಾಸ