ಒಟ್ಟು 2688 ಕಡೆಗಳಲ್ಲಿ , 114 ದಾಸರು , 2023 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಜ್ಜನರ ಸಂಗ ನಮಗೆಂದಿಗಾಗುವುದೊ |ದುರ್ಜನರ ಸಂಗದಿಂದಲಿ ನೊಂದೆ ಹರಿಯೆ ಪವಾಕು-ವಾಕಿಗೆ ಡೊಂಕನೆಣಿಸುವರು-ಮತ್ತೆ |ಪೋಕರಾಡಿದ ಮಾತು ನಿಜವೆಂಬರು ||ವಾಕ್‍ಶೂಲಗಳಿಂದ ನೆಡುವರು ಪರರ ನೀ |ಪೋಕುಮಾನವರಿಂದ ನೊಂದೆ ಹರಿಯೆ 1ತಾವೆ ತಮ್ಮನ್ನು ಕೊಂಡಾಡಿಕೊಳ್ಳುವರು |ನ್ಯಾಯವಿಲ್ಲದೆ ನುಡಿವರು ಪರರ ||ಭಾವಿಸಲರಿಯರು ಗುರುಹಿರಿಯರನಿಂಥ |ಹೇಯ ಮನುಜರಿಂದ ನೊಂದೆ ಹರಿಯೆ 2ಒಡಜನರನು ಕೊಂದು ಅಡಗಿಸಿಕೊಂಬರು |ಬಿಡಲೊಲ್ಲರು ಹಿಡಿದನ್ಯಾಯವ ||ನುಡಿದು ಕೇಡನು ಒಡನೆ ತಪ್ಪಿಸಿಕೊಂಬಂಥಕಡು ಮೂರ್ಖರಿಂದ ನಾ ನೊಂದೆನು ಹರಿಯೆ 3ತೊತ್ತಿನೊಡನೆ ತನ್ನ ಸ್ನೇಹ ಸರಸ ಮಾತು |ತೆತ್ತಿಗರೊಡನೆ ಪಂಥವ ನುಡಿವರು ||ಸತ್ತಬಳಿಕ ಸೃಷ್ಟಿ ಸಟೆಯೆಂಬರು ಇಂಥ |ಮತ್ತಮನುಜರಿಂದ ನೊಂದೆ ಶ್ರೀಹರಿಯೆ4ಇಷ್ಟುದಿನವು ನಿನ್ನ ನೆನೆಯದ ಕಾರಣ |ಕಷ್ಟಪಡುವ ಕೈಮೇಲಾಗಿ ||ಸೃಷ್ಟಿಗೊಡೆಯ ಶ್ರೀ ಪುರಂದರವಿಠಲನೆ |ಮುಟ್ಟಿ ಭಜಿಸಬೇಕು ಧೃಷ್ಟಮನವು ನಿನ್ನ 5
--------------
ಪುರಂದರದಾಸರು
ಸಂತೋಷ ಕಂಡ್ರೀ ಸ್ವಾಮಿ ಸಂತೋಷ ಕಂಡ್ರೀ ಪಚಿಂತೆ ಚಿಂತೆ ಬಿಟ್ಟೀ ಶಾಂತದೂತನಾಗಿಕಂತುಪಿತನ ಚಿಂತಿಸುವಗೆ ಸಂತೋಷ ಕಂಡ್ರೀ1ಕೆಟ್ಟ ದುಷ್ಟ ಕಾರ್ಯ ಮಾಡೀ ಕಷ್ಟ ನಷ್ಟಗಳಿಗೆ ಸಿಕ್ಕಿಹೊಟ್ಟೆಹೊರೆವದುಷ್ಟಗೆಲ್ಲ ಸಂತೋಷ ಕಂಡ್ರಿ2ಆಶಾಪಾಶ ತ್ಯಜಿಸಿ ಹಲವು ಲೇಸು ಶ್ರೇಯ ಕಾಯಗೈದಈಶನಂಘ್ರಿ ದಾಸರಿಗೆ ಸಂತೋಷ ಕಂಡ್ರಿ3ತರುಣಿ ತರುಣರಿದ್ದರೇನು ಧರಣಿಗರನಾದರೇನುಹರಿಯ ಕರುಣವಿಲ್ಲದುಂಟೇ ಸಂತೋಷ ಕಂಡ್ರೀ4ಕಾಯದಲ್ಲಿ ಮೋಹ ತೊರೆದುಜೀಯಕೃಷ್ಣರಾಯನೆಂದುನ್ಯಾಯವಂತ ಜೀವರೀಗೆ ಸಂತೋಷ ಕಂಡ್ರೀ5ಯುಕ್ತಾಯುಕ್ತ ಯೋಚಿಸದೆ ಪಕ್ತ ಕಾಮಸಕ್ತನಾದರಕ್ತಮದದ ಶಕ್ತಗಿಹುದೆ ಸಂತೋಷ ಕಂಡ್ರಿ6ತಂದೆ ತಾಯಿ ನೀನೆಂದೆಂಬ ಬಂಧು ಬಳಗ ನೀನೆಂದೆಂಬಗೋವಿಂದನಾ ದಾಸರ್ಗೆಲ್ಲ ಸಂತೋಷ ಕಂಡ್ರೀ7<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಸತ್ಯಪ್ರಜÕರಾಯರಂಘ್ರಿಗಳ ಸಂತತಹೃತ್ಪದ್ಮದಲಿ ನೆನೆಯಿರಯ್ಯ ಪುನರಪಿಭವ.....ತ್ವತಿಯಂ ತೋರಿ ಸಾಪ್ರಾಯ ಪದ್ಧತಿಯ ವಿಪ್ರತಿಯಂ ತೋರುವಹೊರೆವಪ.ಸೂತ್ರಾರ್ಥಸ್ತೇಯ ದಾನವರಿಳೆಗೆ ಭಾರಾಗಿವೇತ್ತøಜನಗಳ ಮತಿಗೆಡಿಸಿ ಬಾಧಿಸುತಿರಲುಗೋತ್ರಧರನಾಜÕದಿಂ ಶ್ರೀ ಮಾರುತನು ತನ್ನಯ ತೃತೀಯಾವತಾರದಿಂದ್ವಾತ್ರಿಂಶತ್ ಲಕ್ಷಣಾನ್ವಿತನಾಗಿ ಋಜುಗಣದಗೋತ್ರದಲ್ಲೆಸೆದು ನಿಜಜನನಿಗ್ಹರುಷವನಿತ್ತುಧಾತ್ರಿಗೆ ಭೂಷಣದ ಮಣಿಯಂತೆ ಹೊಳೆ ಹೊಳೆವಸುತ್ರಾಮಾಶೇಷವರದ ಅಭಯದ 1ವಿಶ್ವವೆಲ್ಲ ಮಿಥ್ಯಪ್ರತಿಷ್ಠಿತವು ಅಲ್ಲವು ನಿರೀಶ್ವರ ಭುವನವೆಂಬ ಕುಮತಿಘಟಿಗಳ ಮಾತರಿಶ್ವಕಂಠೀರವನೀ ಯತಿ ರೂಪದಲಿ ಸದೆದುಸುಸ್ವಭಾವದಲ್ಲಿ ಒಪ್ಪುತ ಸುಶಶ್ವದೇಕ ಶ್ರೀ ಹರಿಯು ಜೀವ ಜಗದೊಡೆಯನಶ್ವರಾನಶ್ವರಾರ್ಥೇತರ ಮುಕುಂದೆನ್ನುತತಾ ಸ್ವಕೀಯರಿಗೆಲ್ಲಶ್ರುತಿಸ್ಮøತಿಸುವಾಕ್ಯದಿಂವಿಶ್ವಾಸವಂ ಬಲಿಸಿದ ಸುಬೋಧ 2ಮತ್ರ್ಯದ ಬುಧರು ಬುದ್ಧಿಭ್ರಂಶದಲಿ ಮಾಯಿಮತಗರ್ತದಲಿ ಬಿದ್ದಿರಲು ಕಂಡು ಕರುಣದಲಿ ಸುಖತೀರ್ಥ ಮಧ್ವಾನಂದ ದಶಪ್ರಮತಿಯೆಂಬ ವೇದಾರ್ಥ ನಾಮದಲಿ ಮೆರೆದುಧೂರ್ತದುರ್ಭಾಷ್ಯಾಂಧಕಾರವಂ ಬಿಡಿಸಿ ವಿದ್ಯಾರ್ಥಿಗಳಿಗೊಲಿದು ಸದ್ಭಾಷ್ಯಗಳ ರಚಿಸಿಪರಮಾರ್ಥ ವ್ಯಾಖ್ಯಾನಗಳ ಪೇಳಿ ಉದ್ಧರಿಸಿದ ಸಮರ್ಥ ಮಾರ್ತಾಂಡನಾದ ಸುಖದ 3ಮಬ್ಬು ಮುಸುಕಿದ ಪರೆಯ ತೆರೆದ ಸುಜನರ ಹೊರೆದಕೊಬ್ಬಿದ ಕುತರ್ಕಿಗಳ ತರಿದ ಇಂದುವ ಜರಿದÀಸಭ್ಯರಿಗೆ ತತ್ವಸುಧೆಯೆರೆದ ಮಂತ್ರವನೊರೆದನಬ್ಬಗುರುಪೂರ್ಣಬೋಧದುಬ್ಬಿ ತಮಸಿನೊಳು ಮಿಥ್ಯಾತ್ಮಕ ದುರಾತ್ಮರಿಳೆಗುಬ್ಬಸದ ದರ್ಶನಗಳೊರೆಸಿ ಸತ್ಯವ ಮೆರೆಸಿಅಬ್ಬರದ ತಪ್ತ ಮುದ್ರೆಯನಿತ್ತಘವ ಕಿತ್ತುನಿರ್ಭಯವ ಪದವನೀವಕಾವ4ಇಂಥ ಸಂಕರ್ಷಣನ ಪ್ರೀತಿಯ ಕುವರ ಅಮಲವಾತನಿಖಿಳಪ್ರಾಣನಾಥ ರಘುಪತಿಯಸೇವ್ಯತ್ರೇತೆಯಲಿ ಮೂಡಿ ಪ್ರಖ್ಯಾತಾಕ್ಷಯ ಪ್ರಮುಖಭೂತಳದ ಭಾರರೊದೆದಪೂತನಾರಿಯ ಪಕ್ಷಪಾತದಿಂ ಬಕ ಜರಾಜಾತ ಗಾಂಧಾರ್ಯರಂ ಘಾತಿಸಿದ ಶ್ರೀಸವಿತನಯನಾಜÕದಲಿ ಪಾತಕಿಗಳೊರಸಿದಾದ್ವೈತ ಮತ ಕಾಲನೆನಿಪ್ಪ 5ಹತ್ತುಪನಿಷದ್ಭಾಷ್ಯಸೂತ್ರಗೀತಾಭಾಷ್ಯಮತ್ತೆ ಅಣುಭಾಷ್ಯ ಋಗ್ಭಾಷ್ಯಭಾಗವತತಾತ್ಪರ್ಯ ವಿಷ್ಣುಸ್ತೋತ್ರದ್ವಯಂ ಕಲ್ಪದ್ವಯಂಹತ್ತು ಪ್ರಕರಣವು ಕೃತಿಯುತಂತ್ರಸಾರಕೃಷ್ಣಾಮೃತಾಬ್ಧಿಯ ಮಹಾಭಾರತಾನ್ವಯ ವಿವರ್ಣನವೆಂಬ ಸದ್ಗ್ರಂಥ ಮೂವತ್ತೇಳು ರಚಿಸಿ ಮೋಕ್ಷೋಪಾಯವರುಹಿದ ವಿಧಾತ್ರ ಪದಕರ್ತನೀತತಾತ6ಭಾಟ್ಟ ಪ್ರಭಾತ ಛೆರಾನಾಯತ ? ಪ್ರತ್ಯಕ್ಷ ಮತಿ............... ಚಾರ್ವಾಕ....................ಚೌದ್ಧನೆ............ಶಂಕರನೆ ಕಡೆಯಾಗಿಪ್ಪತ್ತೊಂದುನಷ್ಟ ಭಾಷ್ಯವನಂಘ್ರಿಯಲಿಮೆಟ್ಟಿ ಸದ್ಗುಣಶರಧಿಹರಿಯು ಭುವನಂಗಳನುಹುಟ್ಟಿಸೆತ್ತಿಳಿದಾಡಿ ಮುಕುತಿಯ ನಿಜರ್ಗಿತ್ತುಕಷ್ಟವ ಖಳರ್ಗೀವನೆಂದು ಡಂಗುರಿದದಿಟ್ಟಾಲವಬೋಧ ರಾಜತೇಜ 7ಶ್ರುತಿವೇದನಿಕರ ಚಕ್ರವ ಪಿಡಿದು ಬ್ರಹ್ಮತರ್ಕಾವಳಿಯ ಶಂಖದ ಭೀಕರ ಘೋಷದಿಂದ ಜಗತ್ಪ್ಪಾವನನ ಪುರಾಣಗದೆ ಇತಿಹಾಸ ಪಂಚರಾತ್ರಭಾವಶಾಙ್ರ್ಗವಿಡಿದುಜೀವೇಶ ಭೇದಶರಪಂಚಕದಿ ಬ್ರಹ್ಮಸೂತ್ರಾವಳಿಯಿಂಬಿನ ನಂದಕವ ಧರಿಸಿ ಬೆಂಬತ್ತಿದೇವರಿಪುದುರ್ಮತವ ಓಡಿಸಿದಮಧ್ವನಾರಾಯಣ ಪಾರಾಯಣ ಯತಿ ಸುಮತಿ 8ತರುಣರವಿತೇಜಸುಸ್ಮಿತ ಸುಂದರ ನಾನಾ ಸುವರ್ಣಕಾಪಿನ ಭ್ರಾತ ಪ್ರಬೋಧ ಮುದ್ರಾಭಯಕರಸರೋರುಹದಿಂದ ಮೆರೆವ ವಿಧಿಪನಶರಣಜನ ಮಂದಾರನಪರಮನವರತ್ನದ ಪದ್ಮದ ಮಾಲೆಯಿದು ಪುಣ್ಯಕರವು ವೈಷ್ಣವರ್ಗೆ ಅಘದೋಟ ಮುಕ್ತಿಯ ಕೂಟಗುರುಮೂರ್ತಿಯ ಕೀರ್ತಿ ಪ್ರಸನ್ನವೆಂಕಟಪತಿಯವರಪ್ರಧಾನಾಂಗ ಮೂರ್ತಿಯ ವಾರ್ತಿ9
--------------
ಪ್ರಸನ್ನವೆಂಕಟದಾಸರು
ಸತ್ಯಭಾಮಾವಿಲಾಸಶ್ಲೋಕಶ್ರೀ ಬ್ರಹ್ಮೇಶ ಸುರೇಂದ್ರ ಪೋಷಕಹರಿದ್ವಾರಾವತೀಲ್ಬಾಳ್ದನುಶ್ರೀ ಭೈಷ್ಮೀವರ ಸತ್ಯಭಾಮೆಯ ಬಹು ಸಾಸ್ರಾಂಗನೇರಾಳ್ದನುಈ ಭೂಭಾರಹರಾವತಾರ ಯದುಪಂ ನರ್ಲೀಲೆಯಂ ತಾಳ್ದನುಸೌಭಾಗ್ಯಾಂಬುಧಿ ಕೃಷ್ಣನಯ್ಯ ಜನಕಾನಂದಾಬ್ಧಿಲಿಟ್ಟಾಳ್ದನು 1ಸೌಪರ್ಣಾಂಸದಲಿಟ್ಟು ದೇವ ತರುವ ಸತ್ಯ ಸಹಾ ಒಪ್ಪುವಆಪನ್ನಾನ್ವಯ ಕಾಮಧೇನೆನಿಸುವ ಅಧ್ಯಾತ್ಮ ಶ್ರೀಮಾಧವಈ ಪದ್ಯಂಗಳ ಪೇಳಿಸಿದನು ದಯಾಬ್ಧಿ ಪಾರಿಜಾತಾಖ್ಯವಗೋಪಾಲೇಶನ ಪಾದಪದ್ಮ ನೆನೆವೆ ಆನಂದವಂ ಬೇಡುವೆ 2ಪದಶ್ರೀಕೃಷ್ಣ ದ್ವಾರಕಾನಗರದಿ ಪ್ರೇಮದಾನೀಕದಿ ರಾಜಿಸಲಾಗನಾಕದಲರು ಒಂದು ನಾರದ ತಂದಿರೆಶ್ರೀಕಾಂತನಿತ್ತ ರುಕ್ಮಿಣಿಗೆ 3ಒಂದು ಹೂವಿನ ಪರಿಮಳವುನಗರತುಂಬಿಇಂದುವದನೆಸತ್ಯಭಾಮೆಇಂದುಗೋವಿಂದ ರುಕ್ಮಿಣಿಗೆ ಕುಸುಮವಿತ್ತನೆಂದು ಕೇಳ್ದಳು ಸುಸ್ವಭಾವೆ 4ಶ್ಲೋಕಅರ್ಧಾಂಗಿಯಲಿ ಸ್ನೇಹವೆಗ್ಗಳಕಣಾ ಮುದ್ದಿಸಿ ಹೂವಿತ್ತನುಇದ್ದೇನಿನ್ನು ವೃಥಾ ಭುವಿಯಲಿ ಸಖಿ ನಿರ್ದೇಹವಂ ಸಾರ್ವೆನುಕದ್ದು ಬೆಣ್ಣೆಯ ಮೆದ್ದು ಪುಂಶ್ಚಲಿಯರೊಳಿದ್ದಾತನ ಬುದ್ಧಿಯತಿದ್ದಿ ನೋಡಿದೆ ಸೋತೆ ಎನ್ನ ನಳಿತೋಳ್ಹೊದಿಸಿ ನಾ ಶೌರಿಯ 5ಸಾಕಿನ್ನಾತನ ಚಿತ್ತಪಲ್ಲಟಸಟೆಆ ಕಾಮಿನಿಪ್ರಿಯನನೂಕದಿನ್ನಿರೆ ಎನ್ನ ಮಂಚಕೆ ಬರಲ್ಪೋಕ ಸ್ಮರನಯ್ಯನಯಾಕಿನ್ನಾಭರಣಾಂಬರೋತ್ತರಿ ಸಖೀ ಏಕಾಗ್ರನೇಕಾಂಗನನೀಕಂಡ್ಹೇಳವಮಾನ ತಾಳಳು ಸಖಿ ಜೋಕಿನ್ನು ನಿನ್ಬಹುಮಾನ6ಪದಕ್ರೋಧ ಕಳವಳಿಕೆ ಮುನಿಸಿನಿಂದಲಿ ಸತ್ಯವಾದಿ ಸತ್ರಾಜಿತ ಕನ್ಯೆಮೇದಿನಿಮೇಲೆ ಮಲಗಿದಳು ಧೊಪ್ಪನೆ ಮಂಚಕೈದದೆ ನಿತ್ಯಸುಖಿ ಧನ್ಯೆ 7ಬಿಸಿ ಬಿಸಿ ನಿಟ್ಟುಸಿರ್ಗರೆದು ಕೋಮಲ ಮುಖಶಶಿಯ ಕಸ್ತೂರಿ ಅಂಗಯ್ಯಲೊರೆಸಿಬಿಸಜಾಕ್ಷಿ ಕಂಬನಿದುಂಬೆ ಒರತೆಯಿಟ್ಟುಎಸೆವಕಜ್ಜಲಜಲ ಸೂಸಿ 8ಶ್ಲೋಕವಕ್ಷೋಜಾತದ ಹೊನ್ನ ಕುಪ್ಪಸವನು ಅಕ್ಷೋದದಿಂ ತೋಯಿಸಲ್ಸಾಕ್ಷಾನ್ಮಂಗಳ ಮುತ್ತಿನ್ಹಾರ ಕಡಿದಳ್ ಲಕ್ಷಾಭರಣ್ಬಿಟ್ಟಳುತಾ ಕ್ಷೋಣಿಯನು ಹೊಂದಿ ಬಿದ್ದು ಬೆಮರ್ದಳ್ಅಕ್ಷಯಸೌಗಂಧಿಯಳ್ಪಕ್ಷಿವಾಹನ ಮಾಡಿದ ಉಪಕಾರ ಲಕ್ಷಿಸಿ ಹಾಯೆಂದಳು 9ಹಾ ಹಾ ಕೈತವ ಮೀನ ಜೃಂಭಕಮಠಹಾ ಹೈಮದೃಘ್ಘಾತಕಹಾ ಹಾ ನಿಷ್ಕರುಣಾಂಗ ಶಿಕ್ಷಕ ಹರೆ ಹಾ ಹಾ ಬಲಿರ್ವಂಚಕಹಾ ಮಾತೃ ಮೃಗಾರ್ದ ಜಾರವ್ರತ ಹಾ ಹಾ ಹಾ ಕಲಿರ್ಮಾರಕಹಾ ಹಾ ಮದ್ಗøಹ ದೂರಕ ಪರಸಖ ಆಶಾಬ್ಧಿ ಸಂಶೋಷಕ10ಪದತಾಳಿನ್ನು ತಾಳೆಂದು ತವಕದಿ ಸವತಿಯಮೇಲೆ ಕೋಪಿಸಿ ಸತ್ಯಭಾಮೆಜಾಲಕ ಮಾಲೆಯ ಹರಿದು ಚಿಮ್ಮಿದಳತ್ತಮೇಲೆಣ್ಣೆಗಂಟ ಹರಹಿದಳು 11ಮೂರ್ಛೆಯೊಳ್ಮೈಮರೆದಂತೆ ತೇಲ್ಗಣ್ಣ ಹಾಕಿದುಶ್ಚಿಹ್ನ ಲೀಲೆಯ ತೋರೆನಿಶ್ಚಲ ಭಾವೆಯನರಿತೆತ್ತಿ ಒಯ್ದರುಒಚ್ಚೇರೆಗಂಗಳೆಯರು ಬೆದರಿ12ಶ್ಲೋಕಧೈರ್ಯಂಗೆಟ್ಟ ಮೃಗೇಂದ್ರ ನಾರಿಯಿವಳೊ ನ್ಯೆರಾಶ್ಯ ಬಳ್ಳ್ಯಿಹಳೊವೈಮಾನಿಕರ ದೇವತ್ಯಾಕೆ ಮುನಿದಳಯ್ಯಯ್ಯೊ ಸೌಜನ್ಯಳೊಮಯೂರಭ್ರಮುಡೇಳ್ ಮಹಾಪತಿವ್ರತೇಳ್ಮತ್ತೇಭ ಗಾಮಿನಿಯಳ್ಕೈವಲ್ಯಜÕರು ಬಲ್ಲರೀಕೆಯ ಬಗೆ ಕಾಯಯ್ಯ ಕೃಷ್ಣಯ್ಯನೆ 13ಎತ್ತೊಯ್ದು ಮೃದುತಲ್ಪಮಂಚಕವಳ ಮತ್ತಾಲವಟ್ಬೀಸಲುಫೂತ್ಕಾರಂ ಕಿವಿಯೊಳ್ಪೂರೈಸಿ ನುಡಿಸಲ್ಸತ್ಯಂಗನೆ ಸುಮ್ಮನೆಪ್ರತ್ಯುತ್ತರಗೊಡದಿರಲು ಬೆದರಿವರ್ಚಿತ್ತಜನೈಗ್ಹೇಳಿದರುಮುಕ್ತಕೇಶಿಯ ವಾರ್ತೆ ಕೇಳಿದು ಬಹು ಚಿತ್ರವಿಚಿತ್ರೆಂದನು 14ಪದದೂತೇರ ನುಡಿಗ್ಯದುನಾಥನು ಮನ್ನಿಸಿಆತುರದಲಿ ನಡೆತಂದುಪ್ರೀತಿಗಗ್ಗಳೆ ಸತ್ರಾಜಿತ ಸಂಜಾತಳೆನೀತವೆ ನೀ ಮುನಿದಿಹುದು 15ಎಂದು ಮಂಚದಲಿ ಕುಳಿತು ಪ್ರಾಣನಾಥೆ ಬಾಇಂದುವದನೆಮಾತನಾಡೆಕಂದ ಕಂದರ್ಪನಾಣೆ ಕಪಟವಿಲ್ಲೆನ್ನಲ್ಲಿಕಣ್ಣೆರೆದಿತ್ತಲೊಮ್ಮೆ ನೋಡೆ 16ಶ್ಲೋಕಕಸ್ತೂರಿ ತಿಲಕಿಲ್ಲ ನಿನ್ನ ಪಣೆಯೊಳ್ಮುತ್ತಿನ ಬೊಟ್ಟಿಲ್ಲವೆಮತ್ತೇನ್ಭೂಷಣವೇಣಿ ನಿನ್ನ ನೊಸಲೊಳ್ಮುತ್ತಿನಮಣಿಇಲ್ಲವೆರತ್ನಾಂಕಾಭರಣಿಲ್ಲ ನಿನ್ನ ಶ್ರುತಿಯೊಳ್ಮತ್ವಜ್ರದೋಲಿಲ್ಲವೆಹತ್ತೆಗಟ್ಟಿದ ನಿಷ್ಕಕಂಠ ಪದಕಿಲ್ಲ ಒತ್ತಾದ ಹಾರಿಲ್ಲವೆ 17ವ್ಯತ್ಯಸ್ತ ಸ್ತನಪಟ್ಟಿಕೆ ರುಚಿರ ಶ್ರೀ ಗಂಧಾನುಲೇಪಿಲ್ಲವೆಸ್ವಸ್ತಂಬ್ರ ಸ್ಮರಣಿಲ್ಲವೆ ಮಮಸಖಿ ಸ್ವಸ್ಥಾಗುಸುರ್ಭಾವೆ ನಂಬು ಸ್ತ್ರೈಣರ್ಬಗೆ ತೋರಿದೆ ಸ್ವಸುಖದಿ ತಾ ಸ್ತ್ರೈಣನಲ್ನಿಶ್ಚಯಹೇ ಸ್ತ್ರೀರತ್ನಶಿಖಾಮಣಿರಮಣಿ ಕೇಳ್ದುಶ್ಚಿತ್ತ ಮಾಣೆಂದನು 18ಪದಈಪರಿಭಾವೆಯ ಚರಣದೆಡೆ ಕುಳಿತುಶ್ರೀಪತಿ ಪ್ರಾರ್ಥನೆ ಮಾಡೆತಾ ಪತಿಯೊಡನೊಂದು ಮಾತನಾಡಳುಸತಿತಾಪದ್ವಿಗುಣಿಸಿತು ಕೇಳಿ 19ಮಾನಭಂಗವ ಮಾಡಿದ ಮೇಲೆಂತು ಬಹುಮಾನವನೊಲ್ಲದಿಹ ಸತಿಯತಾನೆತ್ತಿ ತೊಡೆ ಮೇಲೆ ಮಲಗಿಸಿಕೊಂಡು ದುಮ್ಮಾನವ ಬಿಡಿಸುವ ಹರಿಯು 20ಶ್ಲೋಕಮಾನವಮನ್ನಿಸಿದಾಕೆಯ ಸ್ಥಿತಿಯನು ಶ್ರೀನಾಥ ಕಂಡೆಂದನುಏನೆಮಾನಿನಿನಿನ್ನ ಕೋಪ ಬಿಡದೆ ನಾ ನೋಡಿದೆ ಕಲ್ಲೆದೆಮನುಷ್ಯರೊಳುದಾವಸ್ತ್ರೀಗೆ ಸಲಿಗೆ ತಾನಿತ್ತವಂಗೀ ಬಗೆತಾನೆ ತೋರಿದೆವಿಶ್ವಶಿಕ್ಷಿಕ ಗಡಾ ಏನಾಶ್ಚರ್ಯ ಗಡಾ 21ಎಚ್ಚೆತ್ತೆನ್ನೊಳು ಮಾತನಾಡೆ ಪ್ರವುಢೆ ಹುಚ್ಚಾಗದಿರೆಂದನುಸಚ್ಚಿನ್ಮೂರ್ತಿಯ ಮಾತಕೇಳಿ ಕುಳಿತಳ್ವಚ್ಚೆರೆಗಣ್ಮುರಿಯಲುಉಚ್ಚಾರಂ ಗದಗದ್ಗಿಸಿ ಸ್ಛುರಿತಾಧರೆಗಚ್ಚಗ ತಾನೆಂದನುಉಚ್ಚಾರದೊಳಗೊಂದು ನಿನ್ನ ಮನದ ಮಚ್ಚಾಟ ಬೇರೆಂದಳು 22ಪದನಾರಿ ಪತಿಯ ಬಿಟ್ಟು ದೂರದಿ ಕುಳಿತಳುವಾರೆ ನೋಟದ ಬೆಡಗಿನಲಿಜಾರಿದ ಸೆರಗೆದೆಗೇರಿಸಿ ಹೊದ್ದು ಮುರಾರಿಗೆ ವಾರೆ ಮುಖದಿರುಹಿ 23ಕಪಟನಾಟಕ ನಿನ್ನ ಮಾಯವಗಾಧವುಕಪಟಗಿತ್ತಿಗೆದಿವ್ಯಕುಸುಮಅಪಮಾನ ಸತ್ಯಳಿಗೆಮಾನಬಂಗಾರಿಗೆಚಪಲತೆ ತಿಳಿಯದು ನಿನ್ನ 24ಶ್ಲೋಕಕೇಳ್ನಾರೀಮಣಿ ನಾರದ ಕುಸುಮದ ಅರಳೊಂದು ಪಾದಾಬ್ಜಕೆನಲ್ವಿಂದರ್ಪಿಸಲಾಗ ಯೋಚಿಸಿದೆ ನಾ ಚೆಲ್ವ ಅಮರ್ಭೂರುಹಬಲ್ವಿಂದೀ ನಗರಕ್ಕೆ ನಿನ್ನ ಮನೆಯಂಗಳದೊಳು ಸ್ಥಾಪಿಸುವಉಲ್ಲಾಸಂ ಪಿಡಿದಿರ್ದೆ ನಾಕುಸುಮಜೇಷ್ಠಳ್ಗೀಯೆ ನೀ ಮುನಿವರೆ25ಹೂವೊಂದಾಕೆಗೆ ಕೊಟ್ಟೆ ಸಾಕು ತರುವ ನಿವಾರಿಸಿ ವಜ್ರಿಯಗರ್ವಿಂ ನಿನ್ನಿದಿರಲ್ಲಿ ಕೊಂಡು ಬಹೆ ನಾ ಭವ್ಯಾಂಗಿ ಕೇಳ್ಭಾಮಿನಿದಿವ್ಯಾಮೋದಮಯ ದ್ರುವiಂ ಸುರರಿಗಂ ಸೇವ್ಯಾದುದ ನಿನ್ನಯಭವ್ಯಂಗಳದೊಳಗಿಟ್ಟು ಮೆಚ್ಚಿಸುವೆ ನಾ ನವ್ಯಾದ್ಭುತಂನೋಡುನೀ26ಬಿನ್ನಣೆ ಮಾತಲ್ಲ ನಿನ್ನಾಣೆಭಾವಕಿಇನ್ನು ದುಮ್ಮಾನವೇಕೆನ್ನುತಾಚೆನ್ನಿಗರರಸನು ರಮಣಿಯ ನಳಿತೋಳಚೆನ್ನಾಗಿ ಸೆಳೆದಪ್ಪಿಕೊಳುತ 27ಎನ್ನ ಶಪಥÀವಿದು ನಿನ್ನೆತ್ತಿ ಖಗವೇರಿಕನ್ನೆ ಶಚಿಯ ಮನೋಹರನಮನೆಗೆ ಹೋಗಿ ವಿಜಯರವದಿ ತಂದುರನ್ನದತರುನಿನಗೀವೆ ನಾ 28ಶ್ಲೋಕಹೀಗೆಂದಾಕೆಯಮೆಚ್ಚಿಸಿದನುಆ ವಿಯೋಗಿಯಸಂಯೋಗಿಯಭೋಗಭಾಗಾಶೆಯ ನಿಯತಿ ಸುಖಿಯಾ ತ್ರೈಗೇಹ ಸಂಸ್ಥಾನಿಯಾಯೋಗೇಶೇಶ್ವರ ತನ್ನ ಪಾಶ್ರ್ವದಿ ದಿವಿಪ ನಾಗೇಶೈರ್ವಂದಿಯಾಶ್ರೀಗೋವಿಂದ ಮನುಷ್ಯರ ತೆರದಲಿ ಹೀಂಗಾಡಿದ ಲೀಲೆಯ 29ಬಾ ಸತ್ರಾಜಿತ ಗರ್ಭಸಿಂಧು ಸುಮಣಿ ಬಾ ಸೋಮಬಿಂಬಾನನೆಬಾ ಸೌಂದರ್ಯದವಾರಿಧಿಪರಮೆ ಬಾ ಬಾ ಸತ್ಯಭಾಮೆ ರಮೆಬಾ ಸಂಧ್ಯಾರುಣದಂಬಕಿ ಸುಕಬರೆ ಬಾ ಸ್ವಚ್ಛ ಬಿಂಬಾಧರೆಬಾ ಸದ್ರತ್ನದ ಭೂಷಣೆ ಪ್ರಸನ್ನವಾಗೆ ಸರ್ವತೋಷಾಂಗನೆ 30ಪದನಿನಗಾಗಿ ವೇದ ಕದ್ದವನ ಕೊಂದೆನಿನಗಾಗಿ ನನ್ನುದಧಿಯಲ್ಲಿ ನಿನ್ನ ತಂದೆನಿನ್ನ ಕದ್ದವನ ಕೊಂದೆ ನೀ ಬರಲೆತ್ತಿದೆನಿನ್ನ ಭಾಗ್ಯದ ಸಖಿ ಹಿಡಿದೆ 31ನಿನ್ನ ಭಾರವ ತೆಗೆದೆ ನಿನಗಾಗ್ಯಟವಿಯಲ್ಲಿದ್ದೆನಿನ್ನಮುನಿಸುತಿಳಿಯ ಬಂದೆನಿನ್ನನೆ ಮೆಚ್ಚಿ ಅನ್ಯ ಕನ್ಯೇರ ವ್ರತವನಳಿದೆನಿನ್ನ ಪುಣ್ಯದ ಬೆಳಸ ಬೆಳೆದೆ 32ಶ್ಲೋಕಶ್ರೀಶೌರಿಸರಸೋಕ್ತಿಯಿಂದ ಸತಿಯ ಲೇಸಾಗಿ ಸಂತೈಸುತಆಸ್ಯಾಬ್ಜಾಂಕಿತ ಸ್ವೇದವನ್ನು ಸುಮುಖವನೊತ್ತಿ ಆರೈದನುಕೇಶ ನೇವರಿಸುತ್ತ ತಾ ಚತುಷ್ಕಪರ್ದಾ ಸತ್ಯಭಾಮಿನಿಗೆಶ್ರೀಶ ಮಂಡಿಸಿ ವೇಣಿಯಲ್ಲಿ ಇಡುವ ಭೂಷಣಗಳನಿಟ್ಟನು 33ಕಸ್ತೂರಿ ತಿಲಕಿಟ್ಟ ನೇತ್ರಯುಗಕೆ ಮತ್ತಂಜನವಿಟ್ಟನುವೃತ್ತಾದ ಸುಕಪೋಲದೊಳ್ಮಕರಿಕಾ ಪತ್ರಂಗಳನಿಟ್ಟನುಮುಕ್ತಾಹಾರಪ್ರವಾಳನೀಲಮಣಿಗಳ್ವತ್ತಾದ ಸ್ವರ್ಣಮಾಲಿಕಾರತ್ನಾಂಕಾಭರಣಿಟ್ಟನು ಯದುಪತಿ ಸತ್ಯಂಗನಾಪ್ರಿಯನು 34ಪದಮುಡಿಗೆ ಮಲ್ಲಿಗೆಯ ಮುಡಿಸಿದ ಮದನನಯ್ಯಮಡದಿಯೆದೆಗೆ ಮಲಯಜವಕಡು ನರ್ಮೋಕ್ತಿಗಳಲ್ಲಿ ಪೂಸಿದ ಘನಶ್ಯಾಮಬಿಡು ನಿನ್ನ ಖತಿಯೆಂದ ದೇವ 35ಕೋಟಿ ಚಂದ್ರಾರ್ಕ ಲಾವಣ್ಯನರ್ಧಾಂಗಿಗೆಕೋಟಿ ಕೋಟ್ಯಾಭರಣಿತ್ತನೋಟ ಬೇಟದಿ ಮನೋರಥವ ಪೂರೈಸಿದನಾಟಕಸೂತ್ರನಿರ್ಲಿಪ್ತ 36ಶ್ಲೋಕಇತ್ಯಾದಿ ಬಹುಮನ್ನಿಸಿ ಗರುಡನ ಹತ್ತಿದ ಸ್ವಸ್ತ್ರೀ ಸಹನಿತ್ಯಾನಂದಮಯ ಸ್ವರೂಪ ಅಮರಾವತಿಗೆ ಪೋಪನ್ನಕಪೃಥ್ವೀಜಾತನು ಮತ್ತನಾಗಿ ಅಮರರ್ಮೊತ್ತವ ಬಾಧಿಸಲುಇತ್ತೀ ಕಾರ್ಯವ ಬಿಟ್ಟು ಮುಂಚೆ ನಡೆದ ಜೆÉೂೀತಿಷ್ಮತಿಸ್ಥಾನಕೆ 37ಹೋಗಿ ಆ ನರಕನ್ನ ಸೀಳಿ ಭೌಮಿಜಗಿತ್ತನು ಭಾಗ್ಯವಸೌಗಂಧಿಯರ ಷೋಡಶ ಸಹಸ್ರರ ಯೋಗಾರ್ಹರಂ ತಂದನುಶ್ರೀ ಗೋಪೀಜನ ಮೋಹನಾಘಹರಣ ಹೋಗ್ವಾಗ ಸ್ವರ್ಧಾಮಕೆಆಗಿತ್ತಾಕುಂಡಲಅದಿತಿಗೆ ಮ್ಯಾಗಿಂದ್ರನಿಂ ಸಂಪೂಜ್ಯನು 38ಪದಶಚಿಯರಸನು ಪೂಜಿಸಿದ ಮೇಲೆ ರಾಣಿಯಉಚಿತಕೆಮಂದರತರುವಮುಚುಕುಂದವರದನು ತರುತಿರೆ ಅಮರರನಿಚಯಸಹಿತ ಕಾದಿದಿಂದ್ರ 39ಗರುಡನ ಗರಿಯ ಗಾಳಿಯಲೆಲ್ಲರೋಡಿಸಿಧÀರೆಗೆ ತಂದನು ದ್ವಾರಾವತಿಗೆಅರಸಿಯಂಗಳದೊಳು ನಿಲಿಸಿದ ತರುಮೂಲಸರಿ ಲೆತ್ತವಾಡುವ ಎಂದಳಾಗೆ 40ಶ್ಲೋಕಪಾರಿಜಾತದ ಮೂಲ ಚೈತ್ಯದಲ್ಲಿನ ಶ್ರೀರಂಗ ರತ್ನಾಸನಸಾರಿ ಇಬ್ಬರು ಲೆತ್ತವಾಡುವಹರಿನಾರೇರ ಮುಂದೆನ್ನನುಭೂರಿಮಾನಿಯಮಾಡುಸ್ವಾಮಿ ಎನಲು ಕಾರುಣ್ಯ ವಾರಿನಿಧಿಧಾರಿಣಿಯಲ್ಲಿ ಸ್ತ್ರೈಣನೆಂಬರು ಸಖಿ ಈ ರೀತಿ ಮಾಣೆಂದನು 41ನೀ ಲೆತ್ತವನು ವೃಕ್ಷ ಮೂಲದಲಿ ಎನ್ನೊಳಾಡ ಒಲ್ಲೆಂದರೆಮೇಲೀಅಂಬರಭೂಷಣೇಕೆ ವಿಭುವೆ ಮೇಲೀ ಶರೀರೇತಕೆಶ್ರೀಲೋಲ ಶರಣೇಚ್ಛದ ಎನಿಸುವ ನಿನ್ನ ಬಿರುದೇತಕೆಬಾಲೇರ್ಮುಂದಪಹಾಸ್ಯವಾಯಿತೆನುತ ಲೋಲಾಕ್ಷಿ ತಾ ಮುನಿದಳು42ಪದಹಂಸದುಪ್ಪಳದ ಸುಪ್ಪತ್ತಿಗೆ ಮಂಚದಿ ರಾಜಹಂಸಗಮನೆ ಮುನಿದು ಮಲಗೆಮಾಂಶಳು ಕದವನಿಕ್ಕಿದಳು 43ನೀನೆಂದ ಮಾತ ನಡೆಸುವೆ ಮುನಿಯದಿರುಮಾನಿನಿರನ್ನೆ ಕದತೆರೆಯೆಶ್ರೀನಾಥ ಹೀಗೆ ಮನ್ನಿಸಿ ಕದತೆರೆಸಿದ ದಯಾನಿಧಿ ಪ್ರಸನ್ವೆಂಕಟೇಶ 44ಶ್ಲೋಕಲಕ್ಷ್ಮೀ ಭೂರಮಣ ಭವಾಬ್ದಿಮಥನಪಕ್ಷೀಂದ್ರಸದ್ವಾಹನಮೋಕ್ಷಾಧೀಶವಿರಿಂಚಿವಾಯುಫಣಿಭೂ ತ್ರ್ಯಕ್ಷೇಂದ್ರ ದೇವಾಯನವಕ್ಷೋಜಾವರ ಸುಂದರಾಗ್ರಣಿ ವರಲಕ್ಷ್ಮೀ ಮನೋನಾಯಕರಕ್ಷಿಸಿದನು ಸ್ವಸ್ತ್ರೀಯ ನೆರೆದನು ಸಾಕ್ಷಾತ್ ಪ್ರಸನ್ವೆಂಕಟ45ಅನಂತಾಬ್ಬ ಭವಾಂಡ ಹುಟ್ಟಿ [ಸಿ] ಸ[ಲಹು] ವತಾನೇ ಬಯಲ್ಮಾಡುವತಾ ನಿರ್ಲಿಪ್ತ ಸದಾಗಮೈಕ ಸುವಿಜಯಾನಂದ ಪೂರ್ಣಾತ್ಮನುಈ ನಾಟ್ಯವನು ತೋರಿದ ಸುಜನರಿಗಾನಂದ ವೃದ್ಧಿಕರತಾನಾಡಿದನು ಲೆತ್ತವ ಸತಿಗೂಡಜ್ಞಾನಿಪ್ರಸನ್ವೆಂಕಟ 46ಪದಮಂಗಳಾತ್ಮಕ ವಿಶ್ವನಾಟಕವಾಡಿದ ಸತ್ಯಂಗನೆಯೊಳು ಲೆತ್ತದಾಟಅಂಗನೆಷೋಡಶ ಸಹಸ್ರರ ಸೋಲಿಸುವರಂಗ ಪ್ರಸನ್ನವೆಂಕಟೇಶ 47ಶ್ರೀ ಸುರವೃಕ್ಷತಳದಿ ರತ್ನಾಭರಣಮಯನೀ ಸೋತೆ ಸತ್ಯಭಾಮಿನಿಯೆಂದರೆಹರಿನೀ ಸೋತ್ಯೊ ಪ್ರಸನ್ನವೆಂಕಟೇಶ 48ಲೇಶ ಹಾಸದಿ ಜಗತ್ಪ್ಪ್ರಪಂಚವ ತೋರುತ್ತವಾಸುದೇವಪ್ರಕೃತಿ ಗೂಡಿಈ ಶೋಭಿಸುವ ದ್ವಾರಕಾ ನಗರದಲಿದ್ದಪ್ರಸನ್ವೆಂಕಟೇಶನ ನೋಡಿ 49ಅನಂತದೇಶದಿ ಅನಂತ ಕಾಲದಿಅನಂತ ಸದ್ಗುಣಸಾಂದ್ರದೀನ ದಯಾನಿಧಿ ಪ್ರಸನ್ನÉಂಕಟ ಕೃಷ್ಣಮನುಷ್ಯಲೀಲೆಯ ತೋರಿದ 50ಈ ಸತ್ಯಭಾಮಾವಿಲಾಸದ ಪದ್ಯಪದಲೇಸಾಗಿ ನರನಾರಿಯರುತೋಷಭರಿತರಾಗಿ ಪಾಡಲು ಸುಖವೀವಶ್ರೀಶ ಪ್ರಸನ್ನವೆಂಕಟೇಶ 51
--------------
ಪ್ರಸನ್ನವೆಂಕಟದಾಸರು
ಸತ್ಯವೇ ಸ್ನಾನ ಜಪ ನೇಮ - ಹೋಮ - ಅ - |ಸತ್ಯದಲಿ ನಡೆದುಮಾಳ್ಪದುವ್ಯರ್ಥಕರ್ಮಪ.ಅಪ್ಪಳಿಸಿ ಪರರ ದ್ರವ್ಯಗಳನ್ನು ತಂದುಂಡು |ಒಪ್ಪದಲಿ ಉಪವಾಸ ವ್ರತವ ಮಾಡಿ ||ತಪ್ಪದಲೆ ತಾ ಸ್ವರ್ಗ ಸೂರೆಗೊಂಬುವನೆಂಬ |ಸರ್ಪಗಳು ಮಾಡದಪರಾಧವೇನಯ್ಯ ? 1ಬಿಡದೆ ಮದ - ಮತ್ಸರಾಹಂಕಾರದೊಳು ಮುಳುಗಿ |ಒಡನೆ ಬೆರಳುಗಳೆಣಿಸಿ ಮೌನದಿಂದ ||ತಡೆಯದಲೆ ಪರಲೋಕ ಸುಖವನೈದುವೆನೆಂಬ |ಬಡ ಬಕವು ಮಾಡಿದಪರಾಧವೇನಯ್ಯ 2ಪರಸತಿಯು ಪರಧನವು ಪರನಿಂದೆ ಪರಹಿಂಸೆ |ಪರಮ ಪಾತಕದ ಕಾರಣವ ತೊರೆದು ||ಧರೆಗಧಿಕಪುರಂದರ ವಿಠಲನ ನೆರೆಭಜಿಸಿ |ವರವನು ಪಡೆಯೆ ಸಾಲೋಕ್ಯವನ್ನೀವ 3
--------------
ಪುರಂದರದಾಸರು
ಸತ್ಸಂಗವಿಡಿದು ಸರ್ವೋತ್ತಮನೆ ಗತಿಯೆಂದುನೆಚ್ಚಿ ಅರ್ಚಿಸು ಗಡ ಮನುಜ ಪ.ವಿರಹ ಶಬ್ದಗಳ ಮೈಯ್ಯೊಲಿದೊಲಿದುಕೇಳಿಸತಿಯರ ಧ್ವನಿಗೆ ಮಗುಳೆ ಮೋಹಿಸುತಹರಿಣ ಘಂಟಾರವಕೆ ಬಲೆ ಬೀಳುವಂತಾಗದಿರುಹರಿಕಥೆಯಕೇಳಿಬಾಳು1ಅರಿಯದರ್ಭಕನು ಕೆಂಡವ ಮುಟ್ಟಿ ಅಳುವಂತೆಪರಸ್ತ್ರೀಯ ಸರಸಕೊಳಗಾಗಿನರಕದೊಳು ಬೀಳ್ವ ಪಾಮರನೆ ಹರಿಚರಣಾಬ್ಜಸ್ಪರುಶ ದೊರಕುವುದೆಂತೊ ನಿನಗೆ 2ದೀಪ ಕಾಶಕೆ ಪತಂಗವು ಕೆಡೆವ ಪರಿಯು ಸಲ್ಲಾಪವು ಪರಸತಿಯರೊಡನೆಶ್ರೀಪತಿಯ ಮೂರುತಿಯ ಕಂಡೆರಗು ಮೂಢಮತಿಪಾಪ ಬುದ್ಧಿಗಳನ್ನುಜರಿದು3ಶಸ್ತ್ರ್ತಧಾರೆಯ ಮಧುವ ಬಯಸುವಂತನ್ಯೋತ್ತಮ ಸ್ತ್ರೀಯರಧರಸುಧೆಬಯಸಿಚಿತ್ತವ್ಯಸ್ತವ ಮಾಣದೊಮ್ಮೆಗಾದರೆಹರಿಭಕ್ತಿರಸವೀಂಟಿ ಸುಖಿಯಾಗು 4ವನಜವನವಂ ಬಿಟ್ಟು ಅಳಿವೃಂದ ಚಂಪಕದನನೆಗೈದಿ ಪ್ರಾಣ ಬಿಡುವಂತೆವನಿತೆಯರ ವಾಸನೆಯೆ ನಿರಯದೌತಣವೆಂದುವನಜಾಕ್ಷ ನಿರ್ಮಾಲ್ಯ ಸೂಡು 5ಇಂತೆಂಬ ಪಂಚಭೌತಿಕದೇಹದಾಸೆಯೊಳುಸಂತತದಿಲಂಪಟನೀನಾಗಿಅಂತ್ಯದೊಳುಜರೆಕಾಡುವಾಗ ಕಫ ವಾತವೆಮುಂತಾದ ವ್ಯಥೆ ಬೆನ್ನ ಬಿಡವು 6ಭಸ್ಮಕ್ರಿಮಿಕೀಟವಾಗಿ ಪೋಪ ಕಾಯಕೆ ನಂಬಿವಿಸ್ಮರಣೆ ಬೇಡ ಹರಿಪದಕೆಕಶ್ಮಲಾನ್ವಿತವಾದ ಯೋನಿಗಳ ಬರವರಿತುವಿಸ್ಮರಣೆ ಬೇಡ ಹರಿಪದಕೆ 7ಬಲ್ಲಿದರ ಸಿರಿಯ ಸೈರಿಸಲಾರೆನೆಂದೆಂಬಕ್ಷುಲ್ಲಕರ ನುಡಿಯನಾಡದಿರುಎಲ್ಲಿ ಭಾಗವತರ ನಿಕೇತನಾಜೆÕಯ ಕೇಳೆಅಲ್ಲಿ ಮಧುಕರವೃತ್ತಿತಾಳು8ಹರಿದಾಸರ ವಿಲಾಸವೆ ಎನ್ನ ಸಿರಿಯೆಂದುಹರಿದಾಸರಡಿಗೆ ಮಗುಳೆರಗಿಹರಿದಾಡುವ ಮನಕೆ ಸೆರಯಿಕ್ಕಿ ಹರಿಯನೆ ನೆನೆದುಹರುಷ ಪುಳಕಿತನಾಗಿ ಬಾಳು 9ದಶಇಂದ್ರಿಯಂಗಳಿಗೆ ವಶವಾಗದಿರು ಏಕಾದಶಿ ವ್ರತಕೆ ವಿಮುಖವಾಗದಿರುದಶಶಿರಾರಿಯ ನಾಮದಶನವೆಭುಂಜಿಸುದಿಶೆಯರಿತೂ ಕಾಣನಾಗದಿರು 10ಪದ್ಮನಾಭನ ಪಾದಪದ್ಮವೆ ಗತಿಯೆಂದುಪದ್ಮಜನ ಪದಕೆ ಪೋಗುವನಪದ್ಧತಿಯವಿಡಿದುವರಪದ್ಮಪತಿ ವಾಸ ತ್ರೈಸದ್ಮನಿಗೆ ಉದ್ಯೋಗಮಾಡು11ಕಡು ಬಂಧುಬಳಗ ಸತಿಸುತರುಂಟು ವೃತ್ತಿಯೊಳುಕಡಿಮಿಲ್ಲವೆಂಬ ಪಾಶವನುಕಡಿದು ಕಡಲೊಡೆಯನೆ ಸಲಹೆಂದು ಗರ್ಜಿಸಲುಕಡೆಹಾಯಿಸಬಲ್ಲದಿದು ನಿನಗೆ 12ಆವಾಗೆ ಜಗಕೆ ಸರ್ವೋತ್ತಮನೆ ಹರಿಯೆಂದುಜೀವೋತ್ತಮನೆ ವಾಯುವೆಂದುಭಾವಶುದ್ಧಿಗಳಿಂದ ಬಯಲುಡಂಬಕಬಿಟ್ಟುಜೀವಿಸಲು ಸ್ವರೂಪ ಸುಖವಾಹುದು 13ವರಊಧ್ರ್ವಪುಂಡ್ರಹರಿಮುದ್ರೆಯನಲಂಕರಿಸುಶಿರಿ ತುಲಸಿ ಪದ್ಮಸರ ಧರಿಸುಸ್ಮರನ ಶರಕಂಜದರಿಯಾರುವರ್ಗವನೊದೆದುಹರಿದು ಬಹ ದುರಿತಗಳ ಸದೆದು 14ಏಸುಜನ್ಮದಿ ಬಂದು ನೊಂದೆ ಭವಾಟವಿಯೊಳುಮೋಸ ಹೋಗದಿರಿನ್ನು ತಿಳಿದುಬೇಸರದೆ ಉರಗಾದ್ರಿವರದ ಪ್ರಸನ್ವೆಂಕಟೇಶನಂಘ್ರಿಯ ಬಿಡದೆ ಭಜಿಸು 15
--------------
ಪ್ರಸನ್ನವೆಂಕಟದಾಸರು
ಸಂದಿತಯ್ಯ ಪ್ರಾಯವು |ಸಂದಿತಯ್ಯ ಪ್ರಾಯವು ಪಮೂರು ತಿಂಗಳುಸಂದುಹೋಯಿತು ತಿಳಿಯದೆ ||ಬಂದೆ ತಾಯಿಯ ಜಠರದಲಿ ಮ-|ತ್ತೊಂದು ಬುದ್ಧಿಯನರಿಯದೆ ||ಬೆಂದೆ ನವಮಾಸದಲಿ ಗರ್ಭದಿ |ಒಂದು ದಿವಸವು ತಡೆಯದೆ ||ಕುಂದದೀಪರಿಯೊಂದು ವರುಷವು |ಇಂದಿರೇಶನೆ ಕೇಳು ದುಃಖವ 1ಕತ್ತಲೆಯೊಳಿರಲಾರೆನೆನುತಲಿ |ಹೊತ್ತೆ ಹರಕೆಯ ನಿನ್ನನು ||ಮತ್ತೆ ಜನಿಸಲು ಭೂಮಿಯೊಳು ನಾ |ಅತ್ತುನಿನ್ನನು ಮರೆತೆನು ||ಮತ್ತೆ ಮಲ-ಮೂತ್ರದೊಳು ಬಾಲ್ಯದಿ |ಹೊತ್ತು ದಿನಗಳ ಕಳೆದೆನು ||ಮತ್ತೆ ನರಕದೊಳುರುಳುತುರುಳುತ |ಉತ್ತಮೋತ್ತಮ ನಿನ್ನ ನೆನೆಯದೆ 2ಚಿಕ್ಕತನವನು ಮಕ್ಕಳಾಟದಿ |ಅಕ್ಕರಿಂದಲಿ ಕಳೆದೆನು ||ಸೊಕ್ಕಿ ಹದಿನಾರಲಿ ನಾನತಿ |ಮಿಕ್ಕಿ ನಡೆದೆನು ನಿನ್ನನು ||ಸಿಕ್ಕಿ ಬಹು ಸಂಸಾರ ಮಾಯೆಯ |ಕಕ್ಕುಲಿತೆಯೊಳು ಬಿದ್ದೆನು ||ಹೊಕ್ಕುದಿಲ್ಲವು ನಿನ್ನ ಪಾದವ |ರಕ್ಕಸಾರಿಯೆ ಕೇಳು ದುಃಖವ 3ಸುಳಿದೆ ಮನೆಮನೆ ಕಳೆದೆ ಕಾಲವ |ಉಳಿದ ಯೋಚನೆ ಮಾಡದೆ ||ಬೆಳೆದೆ ತಾಳೆಯ ಮರದ ತೆರದಲಿ ||ಉಳಿವ ಬಗೆಯನು ನೋಡದೆ ||ಎಳೆಯ ಮನದೊಳೆ ಇಳೆಯ ಜನರೊಳು |ಬಳಕೆ ಮಾತುಗಳಾಡಿದೆ ||ಕಳೆದೆ ಈ ಪರಿಯಿಂದ ಕಾಲವ |ನಳಿನನಾಭನೆ ನಿನ್ನ ನೆನೆಯದೆ 4ಎಡೆಬಿಡದೆಅನುದಿನದಿ ಪಾಪದ |ಕಡಲೊಳಗೆ ನಾನಾಳ್ದೆನು ||ದರವ ಕಾಣೆದೆ ಮಧ್ಯದಲಿ ಎ-|ನ್ನೊಡಲೊಳಗೆ ನಾನೊಂದನು ||ದೃಢದಿ ನಿನ್ನಯ ಧ್ಯಾನವೆಂಬಾ |ಹಡಗವೇರಿಸು ಎನ್ನನು ||ಒಡೆಯ ಪುರಂದರವಿಠಲ ಎನ್ನನು |ಬಿಡದೆ ಕಾಯೈ ಬೇಗ ಶ್ರೀಹರಿ5
--------------
ಪುರಂದರದಾಸರು
ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟಡಿಯಹರಿಗುರು ಪ್ರೀತಿಯ ದೊರಕಿಸು ಪ್ರಾಣಿಕಿರಿಯರಲ್ಲ್ಲ್ಯಮನವರು ಪ್ರಾಣಿ ಪ.ಪರದಾರ ಪರಸಿರಿ ಪರನಿಂದೆ ನಿರುತದಿಚಿರರತಿ ಬೆರತ್ಯಲ್ಲೊಪರಉಪಕಾರ ದಾರಿಯರಿಯದೆ ಬರಿ ಒಣಗರುವಿನಲಿರುವ್ಯಲ್ಲೊನರಹರಿ ಚರಣವಾದರಿಸದೆ ಸ್ಮರಿಸದೆನರರನುಸರಿಪ್ಯಲ್ಲೊಶರೀರ ಸಿಂಗರಿಸಿ ಸತ್ಕಾರ್ಯಬಾಹಿರನಾಗಿನಿರಯಕೆ ಗುರಿಯಾದ್ಯಲ್ಲೊ ಪ್ರಾಣಿ 1ಸುಖಗಳ ಕಕುಲತೆಗಖಿಳ ಸಾಧಕನಾದೆಭಕುತಿಗಳಿಕೆ ತೊರೆದುಬಕವೃತ್ತಿಯ ಕಲಿತು ಮುಖವ ಮುಸುಕಿದೆ ವಿರಕ್ತಿಸರಕುದೋರೈಲೋಕದ ಮೋಹಕ ಜ್ಞಾನಾಧಿಕನಾದೆ ಅಕಳಂಕಸುಖತೀರ್ಥವಾಕುದೋರೈಸಕಲಕಲೆ ಕಲಿತು ಸ್ತ್ರೀಕದಂಬ ಸಖನಾದೆಮುಕುತಿ ಹೊಂದಿಕೆ ತೋರೈ ಪ್ರಾಣಿ 2ಅಶನದುವ್ರ್ಯಸನಕೆ ನಿಶಿದಿನ ವಶನಾದೆಶ್ರೀಶ ಭೃತ್ಯೆನಿಸಿಕೊಳ್ಳೊಹುಸಿಉಪದೇಶಧ್ಯಾತ್ಮ ವೇಷದೊಳು ಘಾಸಿಯಾದೆದಶವ ವರಿಸಿಕೊಳ್ಳೈವಿಷಯ ಬಯಸಿ ವೃಥ ಮಸಿವರ್ಣೆನಿಸದೆ ನೀನ್ಯಶಸ ಕೂಡಿಸಿಕೊಳ್ಳೈಹಸಿತೃಷೆಗಸಣೆಗೆ ಬೇಸರದೆ ಪ್ರಸನ್ವೆಂಕಟೇಶನ ಒಲಿಸಿಕೊಳ್ಳೈ ಪ್ರಾಣಿ 3
--------------
ಪ್ರಸನ್ನವೆಂಕಟದಾಸರು
ಸರ್ವ ಪರಬ್ರಹ್ಮ ಸರ್ವ ಪರಬ್ರಹ್ಮಸರ್ವ ಪರಬ್ರಹ್ಮ ತಾನೆ ಪರಬ್ರಹ್ಮಪಹುದುಗಲ್ಲ ಕಣುಕಲ್ಲ ಬೇಳೇ ಭಕ್ಷ್ಯವು ಅಲ್ಲಅದರೊಳಗಣ ಸಿಹಿ ಅದುವೆ ಪರಬ್ರಹ್ಮ1ತೊಳೆಯಲ್ಲ ಬೀಜಲ್ಲ ತೊಗಟಲ್ಲ ಹಣ್ಣಲ್ಲತಿಳಿಯೆ ರುಚಿಯು ಬೇರೆ ಅದುವೆ ಪರಬ್ರಹ್ಮ2ಹಾಲು ನವ ನೀತವಲ್ಲ ಮೊಸರು ಮಜ್ಜಿಗೆಯಲ್ಲಹಾಲೊಳಗಣಘೃತಅದುವೆ ಪರಬ್ರಹ್ಮ3ದೇಹವಲ್ಲ ತತ್ವವಲ್ಲ ಮನ ಬುದ್ಧೀಂದ್ರಿಯವಲ್ಲದೇಹದೊಳಗಣ ದೇಹಿ ಅದುವೆ ಪರಬ್ರಹ್ಮ4ಸರ್ವಮಾಯೆ ಮಾತುಮಿಥ್ಯಸರ್ವಬ್ರಹ್ಮವೇ ಸತ್ಯಸರ್ವ ಚಿದಾನಂದ ಸರ್ವ ಪರಬ್ರಹ್ಮ5
--------------
ಚಿದಾನಂದ ಅವಧೂತರು
ಸಲಹಯ್ಯಸ್ಮರಬೊಮ್ಮ್ಮರಯ್ಯವ್ಯಾಳಶಯ್ಯ ಪಿಡಿಕೈಯನೀಲಮೈಯ ನೀರಜಪ್ರಿಯ ಪ.ಭವಾರಣ್ಯದಿ ಬಲುತೊಳಲಿ ನಾಮಾನವನಾಗಿ ಮದಾಂಧಕನಾಗಿಹೇವಗೆಟ್ಟೆನಯ್ಯ ಹೇಯಬಿಟ್ಟೆನಯ್ಯತವ ಪಾದವ ತೋರೊಮಾಧವ1ಎನ್ನ ಭಕ್ತಿ ಗಹನ ವಿರಕ್ತಿ ನಿಧಾನ ತತ್ವನಿರ್ಣಯದ ಸತ್ವಹೀನ ಹೃದಯ ನಾ ಹಿತವನರಿಯೆ ನಾನೀನೆ ಕರುಣಿಸೊ ನಿಜರೊಳಿರಿಸೊ 2ನೆನೆವರ ನೆನಪಿನ ಚದುರದೀನತಮದಿನಕರರಾಮ ಶುಭಾನನ ಶರಣೆಂಬೆ ನಾ ಪ್ರಸನ್ನವೆಂಕಟೇಶ ಶ್ರೀ ಶ್ರೀನಿವಾಸ 3
--------------
ಪ್ರಸನ್ನವೆಂಕಟದಾಸರು
ಸಂಶಯವಾಯಿತೋ ನಮಗೆಸಂಶಯವಾಯಿತೊಕಂಸಾರಿನಿನಗೆ ಎರಗ ಬರಲುಹಂಸರೂಪ ಕಂಡು ಬೆದರಿ ಪ.ಮದನಜನಕ ನಿನಗೆ ನಾವುಮುದದಿ ಎರಗ ಬರಲುಬ್ಯಾಗಕುದುರೆರೂಪಕಂಡು ನಮಗೆಹೆದರಿಕೆ ಬಾಹೋದು ಕೃಷ್ಣ 1ಪ್ರದ್ಯುಮ್ನ ನಿನಗೆ ಎರಗಿ ನಾವುಸಿದ್ಧಿ ಪಡೆÀದೇವೆಂದು ಬರಲುಅರ್ಧನಾರಿ ರೂಪವ ಕಂಡುಗಡಗಡ ನಡುಗಿದೆವೊ ಕೃಷ್ಣ 2ಚಲ್ವ ರಾಮೇಶಗೆ ಎರಗಿಕಲಿಯಕಿಲ್ಬಿಷPಳೆದೆವೆಂದರೆÉಶಿಲೆಯ ಹೆಣ್ಣು ಮಾಡಿದ್ದು ಕಂಡುಬಲುಬಲು ಅಂಜಿದೆವೊ ಕೃಷ್ಣ 3
--------------
ಗಲಗಲಿಅವ್ವನವರು
ಸಂಸಾರ ದುಷ್ಟೆಂದು ತಿಳಿದ ಮಹಾತ್ಮರಸಂಸಾರ ಮಾಡುವುದು ಹ್ಯಾಗೆಸಂಸಾರದೊಳಗಿದ್ದು ಇಲ್ಲದ ವಿವರವಬರೆದೆನು ದೃಷ್ಟಾಂತವಾಗೆಪನಾರಿ ಪುತ್ರರೊಳಗೆ ತಾವು ಕಲೆತಿದ್ದುನಾಸ್ತಿಯಾಗಿಹರದು ಹ್ಯಾಗೆವಾರಿಯೊಳಗೆ ತಾವರೆಕರ್ಣ ತಾನಿರ್ದುನೀರಿಗೆ ಅಂಟದ ಹಾಗೆ1ಎಲ್ಲ ಪ್ರಪಂಚವ ಮಾಡುತ್ತ ನಿತ್ಯದಿಎರಡು ಆಗಿಹರದು ಹಾಗೆಹಲ್ಲೊಳಗೆ ನಾಲಗೆ ತಾನು ಇರುತಿರ್ದುಹಲ್ಲ ಬುಡಕೆ ಬೀಳದ್ಹಾಗೆ2ಶಿಷ್ಯ ಚಿದಾನಂದನಾಗಿ ಸಂಸಾರವಮುಟ್ಟಿಮುಟ್ಟದಿರು ಹ್ಯಾಗೆಹುಟ್ಟು ನಾನಾಕಾರಗಳನು ತೊಳಸಿಯೆಹುಟ್ಟು ರುಚಿಯ ಅರಿಯದ್ಹಾಗೆ3
--------------
ಚಿದಾನಂದ ಅವಧೂತರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು
ಸಾಕು ಸಾಕು ಸಂಸಾರ ಸಂಖ್ಯಾಗಿಲ್ಲ ಒಲ್ಲೆ ಒಗೆತನವ ಪ.ಆರುಮಂದಿ ಗಂಡರಾಳುವರು ಎನ್ನಆರುಮಂದಿಗೆ ಮೂರು ಸುತರೆನಗೆಆರು ಮೂರೇಳ್ಪರುಭಾವ - ಮೈದುನರೆಲ್ಲಆರರೆಂದರೆ ಬಿಡರು ಆರಿಗುಸುರಲಮ್ಮ 1ಹತ್ತುಮಂದಿ ಬೆನ್ನ ಮುತ್ತಿಕೊಂಡರೆಮತ್ತೆ ಬಿಟ್ಟೆನೆಂದೆ ಬಿಡಗೊಡರುಅತ್ತಿಗೆ ನಗೆಹಣ್ಣಿ ಹೊತ್ತು ಹೊತ್ತನೊಳೆಮ್ಮನೆತ್ತಿಯೊಳು ಹಸ್ತವಿಟ್ಟೆನ್ನ ಸಲುವರಮ್ಮ 2ಪಂತರೈವರು ಎನ್ನ ತೊಂತ ಹಂತಯೆಂದುಸಂಚಿತದ ಕರ್ಮವನುಣಿಸುವರುವಂಚನೆಯಳಿದ ಪ್ರಪಂಚವನು ಕಳೆದಿಹಮಿಂಚಿನ ಪರಿಯವಿರಿಂಚಿಬರೆದಿಹನಮ್ಮ3ಜೇಷ್ಠನಾಗಿಹ ಪುತ್ರ ಧರ್ಮನ ಅಗಲಿಸಿಭ್ರಷ್ಟ ಆತ್ತೆಯು ಮೈತ್ಯುವಾಗಿಹಳುಮೆಟ್ಟಿಲಿನ ಹೊರಗೆ ಕಣ್ಣಿಟ್ಟು ಸಾಧುಗಳನುದೃಷ್ಟಿಸಿ ನೋಳ್ಪನೆಂದರೆ ಕ್ಷಣ ಬಿಡರಮ್ಮ 4ಒಂಬತ್ತು ಬಾಗಿಲ ಊಳಿಗವನು ಮಾಳ್ಪಕುಂಬತದ ನರತ ಕಾವರ ದಾಳಿಢಂಭಕವನು ಬಿಟ್ಟು ಇಂಬಿನೊಳಟ್ಟು ವಿಶ್ವಂಭರ ಪುರಂದರವಿಠಲ ಧ್ಯಾನದಗುಟ್ಟು5
--------------
ಪುರಂದರದಾಸರು
ಸಾಕ್ಷಾತ್ ಶಿವ ಜಗದೊಳಗೆ ಭವದಿ ಬಂದಿರೆ ಬಳಿಗೆ |ನರನಲ್ಲಾ ನರನಲ್ಲಾ ಗುರುವರ ಪರನು || ನರನಲ್ಲ ನರನಲ್ಲಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಲ್ಲಹುದೆಂಬುದು ಭ್ರಾಂತೀ ||ಗುರುವಿಂದಲ್ಲದೆ ಆಗದು ಶಾಂತೀ || ನರನಲ್ಲ ನರನಲ್ಲ1ತಮ್ಮಂತಲೆ ನೋಡುವರು | ದೇಹದಹಮ್ಮಿಂದಲೆ ಕೆಡುತಿಹರೂ || ನರನಲ್ಲ ನರನಲ್ಲ2ಭ್ರಾಂತದ ಮಾತೂ ಗುಹ್ಯೇಕಾಂತದಿ |ಇಹುದೇನೋ | ನರನಲ್ಲ ನರನಲ್ಲ3ಗುರುಶಂಕರ ಪರಬ್ರಹ್ಮ ಒಂದೆ ಎಂದೊದರಿತೊಶ್ರುತಿನಿಯಮಾ || ನರನಲ್ಲ ನರನಲ್ಲ4
--------------
ಜಕ್ಕಪ್ಪಯ್ಯನವರು