ಒಟ್ಟು 3209 ಕಡೆಗಳಲ್ಲಿ , 121 ದಾಸರು , 2351 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವಳಂಜಿಸಿದವಳು ಪೇಳು ರಂಗಮ್ಮ ನಾನವಳಗಾರುಮಾಡುವೆ ನಡೆ ಕೃಷ್ಣಮ್ಮಪ.ದೂರುವಿರಾದರೆ ಮಗನ ದಾರಿಗೆ ಹೋಗದಿರಿ ಎಂದುಸಾರಿ ಕೈಯಕಡ್ಡಿಕೊಟ್ಟೆ ಜಾರೆಯರಿಗೆಸಾರಿ ಸಾರಿಗೆ ನಿನ್ನನು ರಟ್ಟು ಮಾಡುವ ಮಾತೇನುಆರಿಗೆ ಮಕ್ಕಳಿಲ್ಲೇನೊ ನಾನೇ ಹಡೆದವಳೇನೊ 1ಇದ್ದರಿರಲಿ ಕೂಸಿನ ಆಡುವಾಟಕೊಪ್ಪಿದರೆಎದ್ದು ಹೋದರೆ ಹೋಗಲಿ ಆವಪಳ್ಳಿಂದಕದ್ದು ತಿಂದನೆಂದಾವಾಗ ಕೂಗುವ ಕಾರಣವೇನೊಮುದ್ದೆ ಬೆಣ್ಣೆ ಕೈಯಲಿತ್ತರೊಲ್ಲದೆ ಚೆಲ್ಲುವೆ ಕಂದ 2ಏಸುಪುಣ್ಯರಾಶಿ ಕೂಡಿತೆಂದು ನಿನ್ನಾಟವ ನೋಡಿಬೀಸಿ ಬಿಗಿದಪ್ಪುವಂಥ ಭಾಗ್ಯವನುಂಡೆಕೂಸೆ ನಿನ್ನ ಕಂಡಸೂಯೆಬಡುವರಳಿಯಲಮ್ಮದಾಸರಿಗೆ ಲೇಸಾಗಲಿ ಪ್ರಸನ್ವೆಂಕಟ ಕೃಷ್ಣ 3
--------------
ಪ್ರಸನ್ನವೆಂಕಟದಾಸರು
ಆವಾವಾಗಲಿ ರಾಮನ ನೆನೆವನವ ಜಾಣ ಪ.ಸಚೇಲ ಸ್ನಾನ ಮೋನಗಳ್ಯಾಕೆಶುಚಿ ಇಲ್ಲೆಂಬನುಮಾನಗಳ್ಯಾಕೆಉಚಿತಾನುಚಿತ ಕಾಲವದ್ಯಾಕಘಪಚನ ಮಾಡುವ ಹರಿನಾಮಾಗ್ನಿ 1ಅಮಲ ಸ್ಥಾನವು ಬರಲಿನ್ಯಾಕೆಕ್ರಮದಕ್ಷರ ಮಾಲಿಕೆ ಬೇಕ್ಯಾಕೆರಮಣೀಯಾಸನ ಬಯಸುವದ್ಯಾಕತಿಕ್ರಮವಾಹುದು ಭವಕೋಟಿಯ ವಾರ್ತೆ 2ಆಲಸ್ಯದೆ ಅವನ ಮರೆಯಲಿನ್ಯಾಕೆಪಾಲಿಪ ಕರುಣಿಯ ಬಿಟ್ಟಿರಲ್ಯಾಕೆನಾಲಿಗೆಲವನಿರೆ ಕಾಲನ ದೂತರಹಾಳುಮಾಡುವ ಪ್ರಸನ್ವೆಂಕಟ ದಾತಾರ 3
--------------
ಪ್ರಸನ್ನವೆಂಕಟದಾಸರು
ಆಳಬೇಕೈ ಸುಮತಿ ಪತಿವ್ರತೆಯಜಾಳಿಸಬೇಕೈ ಕುಬುದ್ಧಿಯ ಬುಧರು ಪ.ನಾಗರಕ್ಷಕನಪಾದಹೊಂದಿ ವಿಷಯ ಸ್ವಾರ್ಥನೀಗಿಹ ಮಡದಿಯ ಕೂಡಬೇಕೈಭಾಗವತರನು ಮಲಿನಿಪ ಮೋಹಿಯಮೂಗು ಮುಂದಲೆ ಮೊಲೆ ಕೊಯಿದಟ್ಟಬೇಕೈ 1ಶೀಲವಿಡಿದು ನವನಾರೇರ ಸಖ್ಯದಲಿಆಲಯನಡೆಸುವಳಿರಲಿಬೇಕಯ್ಯಆಲಿಕುಣಿಸಿ ನವ ಪುರುಷರ ಕಂಡು ತಾಮ್ಯಾಲೆ ಬೀಳುವಳಜಿಹ್ವೆಸೀಳಬೇಕೈ2ಷಂಡಗಂಡಗೆ ಹಿತ ಹೇಳಿ ಅಂಗವದಂಡಿಸಿ ಕೊಳುವಳ ನಂಬಬೇಕೈಕಂಡ ಬೀದಿಲಿ ಸಾಧು ಕೊಂಡೆಯಾಡುವಳಮಂಡೆಬೋಳಿಸಿ ಕತ್ತೆನೇರಿಸಬೇಕೈ3ಮನೆಗೆಲಸದಲಿಟ್ಟು ಮಹಾತ್ಮರ ಸೇವೆಗೆಂದೂದಣಿಯದ ರಂಭೆಯ ಒಲಿಸಬೇಕುಅಣಕಿಸಿ ಒಲಿದರ ನೀಚಾನುಕೂಲೆಯಾದತನಗಲ್ಲದವಳ ಹೊಳೆ ನೂಕಬೇಕೈ 4ಶಶಿರವಿರಾಶಿ ಮೈ ಹೊಳವಿಲಿ ಮೆರೆವಕುಶಲಗೆ ಮನವಿಟ್ಟ ಜಾಣೆ ಬೇಕೈಪ್ರಸನ್ನವೆಂಕಟಪತಿಯಾಕಾರ ನೋಡಿ ತಾಅಶರೀರನೆಂಬಳ್ಗೆ ವಿಷವಿಕ್ಕಿರೈ 5
--------------
ಪ್ರಸನ್ನವೆಂಕಟದಾಸರು
ಇಂಥ ಬುದ್ಧಿಯಲ್ಲಿ ಸೇರಿತೊ ಕೃಷ್ಣ ಗೋಕುಲದೊಳುಎಂಥವರೂ ನಿನ್ನ ದೂರು ಹೇಳುತಿಪ್ಪರೊ ಹೀಗಾದರೆ ನಿಲ್ಲರೋ ಪಗಂಡನುಳ್ಳ ನಾರಿಯರಾ ಮಂದಿಯೆಲ್ಲ ನೋಡ ಬಲು ಉ-ದ್ದಂಡತನದಲ್ಲಿ ಸೀರೆ ಸೆರಗ ಪಿಡಿವರೇ ಇಂಥ ದುಡುಕು ಮಾಡುವರೇ ||ಚಂಡಾಡುವಾಗೆನ್ನವಸನ ಮರೆತೆ ಕೊಂಡು ಪೋಗಲವಳು |ಕಂಡು ಕೊಸರಿಕೊಂಡರಿಂಥ ಸುದ್ದಿ ಹುಟ್ಟಿಸಿ ಪೇಳುವಳಮ್ಮ ಹೊಂದಿಸಿ 1ಹಿರಿಯರುಳ್ಳಾ ಸೊಸೆಯ ಕೂಡ ಒಗೆತನವ ಕೆಡಿಸುವಂತೆ |ಸರಸವಾಡುವದು ನಿನಗೆ ಸಲ್ಲುವದೇನೋ ಯನಗೆ ಭೂಷಣವೇನೋ ||ನಿರುತ ಅವಳ ತಾಯಿ ನಂದಗೋಪಗಣ್ಣಾಯೆಂದು ಕರೆಯ- |ಲರಿತೆನತ್ತೆ ದುಗಳು ನಾದಿನಿಯೆಂದು ಮನಸಿಗೆ ಚರ್ಚೆ ಮಾಡಿದೆನೀ ಬಗೆ2ಕುಲದೇವತೆಯ ಮೀಸಲು ತುಪ್ಪ ನೆಲವಿನ ಮೇಲಿಟ್ಟಿರಲು ಮದ್ದು |ಕಲಶವ ಒಡೆದು ಬಾಹುವದೆಲ್ಲ ಚಿನ್ನಾಟವೇನೋ, ಅವರು ಮುದ್ದಿಸುವರೇನೋ ||ತಿಳಿಯದೆ ನೆಳಲಿದುಯೆಂದು ಕಳ್ಳನ ಒಳಗಿರಿಸಿಹಳೇಕೆಂದು ವಡದೆ |ನೆಲಖರಿಧೋಗುವಘೃತನೋಡಲೆ ತಿಂದೆನಮ್ಮಯ್ಯ ತಪ್ಪಿರೆ ಕಟ್ಹ್ಯಾಕು ಕಯ್ಯ 3ಚಿನ್ನನಂತೆಯಾಗಿಯವರ ಮಗ್ಗುಲೊಳು ಮಲಗಿಯೆಂಥ |ಸಣ್ಣ ಕೃತ್ಯ ಮಾಡಿ ಬಾಹುವೆಂತಲ್ಲೋ ಕಂದ ಕೇಳುವರಿಗೇನುಛಂದ||ನಿನ್ನ ಸಲಿಗೆ ಬಹಳ ಕಂಡು ಇಲ್ಲದ್ದೊಂದೆ ಹುಟ್ಟಿಸುವರು |ಯನ್ನ ದಿಸವಕ್ಕೀ ಜಾರತ್ವ ಕಲಿತಿದ್ದೇನೇನೇ ನಿನಗೇನೂ ತಿಳಿಯದೇನೇ 4ಕದ್ದು ಮೊಲೆಯುಂಡು ಕರು ಬಿಟ್ಟು ಹರಕೊಂಡಿತು ನೋಡಿರಿ ಎಂಬೆಯಂತೆ |ದುಗ್ಧವೆಮಾರಿಬಾಳಿವೆ ಮಾಡುವರೆಂತು ತಾಳುವರೋ ಹೀಗಾದರೆ ನಿಲ್ಲರೋ ||ಇದ್ದಾ ಮನೆಯವರಿಗೆ ನಂಬವು ಅಂಥಾಲಾಳ ಮೊಲೆಯ ನಾನುಂಡರೆ ಮೋರೆಗೆ |ಒದ್ದರೆ ರೋದನ ಮಾಡುತ ನಿನ್ನ ಬಳಿಗೊಂದಿನ ಬಾರೆನೇ ಹುಡುಗರಿಗಂಬುವ ಮಾತೇನೇ 5ಇಡಲುದಕವ ಬೆರಸಿ ಮಜ್ಜನಕೆ ಛಲದಿಂದಲಿ ಚಲ್ಲಿ ಬಾಹುವರೇ |ಬಡಿವೆನೊ ನಾ ತಾಳದೆ, ಮುದ್ದಾದರೆ ಮತ್ತೊಮ್ಮೆಯುಣಬೇಕು ಆಡುತ ಮನೆಯೊಳಗಿರಬೇಕು ||ಹುಡುಗರ ಸಂಗಡ ಅಣ್ಣನೂ ನಾನೂ ಇದ್ದೆವೆ, ಅಲ್ಲಾಕೆಯ ಮೊಮ್ಮಗನು |ಗಡಿಗೆಯ ಉರುಳಿಸೆ ನಾ ಕಂಡವರಿಗೆ ಹೇಳಿದೆನೆ ಇಷ್ಟಾ ಯನ್ನನು ಕಾಡುವದದೃಷ್ಟಾ 6ಎದೆಗಳ ಮುಟ್ಟುವದೇಕೋ ಎರಕೊಂಬುವರಲ್ಲಿಗೆ ಪೋಗಿಯಿನ್ನನ್ನಾ |ಹದದಿಂದಲೆ ಯಿರು ಶಿಕ್ಷೆಯ ಮಾಳ್ಪೆ ಎಚ್ಚರಿಕೆಯಿರಲಿ ಕಾಲ್ಪಡಿದರೆ ಬಿಡೆನೋ ಮರಳಿ ||ಮುದದಿಂದಲಿ ಚಂಡೊಗೆಯಲು ಅವಳಾ ಬಚ್ಚಲಿಯೊಳು ಬಿತ್ತು ತಕ್ಕೊಂಡೇ |ಹದ ತಪ್ಪಿದರೀ ಹೆಂಗಸರೆಲ್ಲಾ ಪ್ರಾಣೇಶ ವಿಠಲನಾಣೇ ಸುಳ್ಳಲ್ಲವು ಕಾಣೇ 7
--------------
ಪ್ರಾಣೇಶದಾಸರು
ಇಂಥಾ ದೂರುವುದೊಳಿತಲ್ಲವರೆಮ್ಮ ರಂಗಯ್ಯನು, ಹಾವಳಿ |ಅಂಥಾದು ಏನು ಮಾಡಿದನಮ್ಮ ಎಂದೆಂದಿಗು ನಮ್ಮ ||ಸಂತತಿಯೊಳು ಗುಣವಂತರೇ ಕೃಷ್ಣ ನಿ-ರಂತರ ಬಡವರನೆಂತು ದಣಿಸುವ ಪಕಣ್ಣೇ ಬಿಡುವನು ಬೆದರಿಸೆ ಮಾತರಿಯ ವನದೊಳಗಡಗಿಹ |ಮಣ್ಣು ತಿಂಬುವ ಬಾಯ್ದೆರೆವನಾರ್ಯ ಹಿತಕರ್ಮಗಳರಿಯ ||ಅನ್ನ ತಿನ್ನಲರಿಯ ಬೆಣ್ಣೆ ಮೆಲುವ ಬಲು |ಹೆಣ್ಣು ನೆರೆದು ಮತ್ತನ್ಯರೊಳು ಕಲಹೆ 1ಎಲ್ಲ್ಯಾಡೊದು ದುರ್ಗಂಧವು ಕಠಿಣಾಂಗ ನೆಲಗೆದರುವ ಶ್ರಿಂಗ |ರಿಲ್ಲದೆ ರಹದೆರೆವರ್ಭಕ ರಂಗ ಪಾಪವರಿಯ, ಮಂಗ- ||ರೊಲ್ಲಭ ಅಹಿಫಣೆಯಲ್ಲಿ ಕುಣಿದು ವಸ- |ನಿಲ್ಲದೆ ತಿರುಗುವಗೆಲ್ಲಿದೊ ವಾಚಿ2ಮೀನ ಕೂರ್ಮದಂತ್ಯುದಕದೊಳಗೆ ಆಡುವ ಕೆಸರೊಳಗೆ |ಶ್ರೀನಾರಸಿಂಹ ಸಣ್ಣವರೊಳಗೆ ಆಡುವ ತನ್ನೊಳಗೆ ||ತಾನೇ ಅಗ್ನಿಯ ನುಂಗಿ ನಭಕೇಶಗೆಮಾನವಕೊಟ್ಟಾನೆ ಪ್ರಾಣೇಶ ವಿಠಲನ 3
--------------
ಪ್ರಾಣೇಶದಾಸರು
ಇಂದುನಾಳ್ಯೊ ಈಗಾವಾಗೊ ಈಕಾಯಸ್ಥಿರವಲ್ಲಇಂದಿರೇಶ ನಿನ್ನ ನೆನೆವ ಮತಿಯ ನೀಡೊ ಮನ್ನಿಸಿ ನೋಡೊ ಪ.ಕುಚ್ಛಿತ ಕರ್ಮವಾಚರಿಸಿ ಕಶ್ಮಲ ಜನ್ಮನುಭವಿಸಿದುಶ್ಚಿತ್ತದಿ ಬಾಳ್ದೆನಯ್ಯ ದೂರಾದೆ ನಿಮಗೆ ದಮ್ಮ್ಮಯ್ಯಅಚ್ಚುತ ನಿನ್ನಿಚ್ಛೆಯಿಂದೆ ಆದಿವರ್ಣದವನಾದೆಸ್ವಚ್ಛಿತ ಭಕ್ತಿಯನಿಲಯ ಸುಜನಬಂಧು ಸುಗುಣಸಿಂಧು 1ಹೊಟ್ಟೆಯ ಹೋರಟೆಗಾಗಿ ಹೊತ್ತಾರೆದ್ದು ತಿರುಗಿ ತಿರುಗಿಕೆಟ್ಟ ವೃತ್ತಿಯನ್ನು ಹಿಡಿದೆ ಕೀಳುಮನುಜರೊಳಾಡಿದೆಬಿಟ್ಟೆ ನಿಮ್ಮ ಪೂಜೆಯನ್ನು ಬಿದ್ದೆ ಭವಾಂಬುಧಿಯನ್ನುವಿಠ್ಠಲ ಎನ್ನುದ್ಧರಿಸೊ ವಿದ್ವದ್ಹøದ್ಯ ವೇದವೇದ್ಯ 2ವೇದಶಾಸ್ತ್ರಾಭ್ಯಾಸವಿಲ್ಲ ವೇದಜÕರರ್ಚಿಸಲಿಲ್ಲಬೋಧವನು ಕೇಳಲಿಲ್ಲ ಬುದ್ಧಿ ಎನ್ನೊಳು ಚೂರಿಲ್ಲಸಾಧನವ ತಿಳಿಯಲಿಲ್ಲ ಸಾಧುಮಾರ್ಗವ ಕಾಣಲಿಲ್ಲಭೇದಜÕರೊಳ್ ಕೂಡಿಸೆನ್ನ ಭೀಮಪಾಲಾಭಿನವಲೀಲ 3ಕಾಂತೇರ ಕುಚೇಷ್ಟೆಗಳಿಗೆ ಕೀಳುಚ್ಚಾರದ ಮಕ್ಕಳಿಗೆಭ್ರಾಂತನಾಗಿ ಸ್ನೇಹ ತೋರ್ದ ಬಲೆಯೊಳ್ ಸಿಲುಕಿದೆಸಂತರಂಘ್ರಿ ಸಖ್ಯವನೊಲ್ಲೆ ಸತ್ಕಥೆಯನಾಲಿಸಲೊಲ್ಲೆಅಂತು ಮದವನಿಳಿಸಿ ಕಾಯೊಅಂಗಜಪಿತನೆ ಅಘರಹಿತನೆ4ಬಳಲಿಸಿದೆ ತನುವನು ಬಯಸಿ ಖಳರಾರ್ಥವನ್ನುನಳಿನಾಕ್ಷ ನಿನ್ನ ಬೇಡದೆ ನಾಸ್ತಿಕರಿಗೆ ಕೈಯನೊಡ್ಡಿದೆಹೊಳೆವ ಸುರಭಿಯ ಬಿಟ್ಟು ಹುಲಿಪಾಲಿಗಾಯಾಸಬಟ್ಟೆಕಳೆದೆನನಘ್ರ್ಯಾಯುಷ್ಯವ ಕುಚೇಲಮಿತ್ರ ಕರುಣನೇತ್ರ 5ವಿಷ್ಣು ತತ್ವವರಿಯದೆ ಧೀರ ವೈಷ್ಣವನೆನಿಸದೆಭ್ರಷ್ಟಮನವ ತೊಳೆಯದೆ ಬಹಿಛ್ಛಿನ್ನದಲ್ಲೆ ಮೆರೆದೆಶಿಷ್ಯ ಗುರುಗಳ ಜರಿದೆ ಶಠರನು ಅನುಸರಿಸಿದೆದುಷ್ಟವೃತ್ತಿಯನು ಬಿಡಿಸೊ ದುರ್ಗುಣಧಾಮನ ದುರಿತಶಮನ 6ಇಂದ್ರಿಯಗ್ರಾಮ ನಿನ್ನದು ಇಷ್ಟ ಬಳಗವು ನಿನ್ನದುಸೌಂದರ್ಯ ಸುಖ ನಿನ್ನದು ಸ್ವರೂಪ ಸ್ವಾತಂತ್ರ್ಯ್ರನಿನ್ನದುಮಂದಮತಿಯಿಂದ ಅಹಂಮತಿಯಲ್ಲಿ ನೊಂದೆ ಬಹುಕುಂದನೋಡದೆನ್ನ ಸಲಹೊ ಕುಂಜರವರದ ಕುಶಲಪದದ7ನಿನ್ನ ಕಥಾಮೃತವು ಕಿವಿಗೆ ನಿನ್ನ [ಕೀರ್ತನೆ ನಾಲಗೆಗೆ]ನಿನ್ನ ಲಾವಣ್ಯವು ಕಣ್ಣಿಗೆ ನಿನ್ನ ಸೇವೆ ಸರ್ವ ಇಂದ್ರಿಯಕ್ಕೆಎನಗೆ ಬೇಗ ಕರುಣಿಸಿ ಎಲ್ಲ ದುರಿಚ್ಛೆಗಳ ನೂಕುಇನ್ನು ದಾಸದಾಸ್ಯವು ಬೇಕೊ ಋಷಿಕುಲೇಶ ಹೃಷಿಕೇಶ 8ಅಚ್ಯುತಾನಂತಗೋವಿಂದ ಆದಿಪುರುಷ ಮುಕುಂದಸಚ್ಚಿದಾನಂದಸರ್ವೇಶ ಸುಚರಿತ್ರ ಕರಿವರದನೆಚ್ಚಿದೆ ತವ ಪಾದಾಂಬುಜ ನಮೊ ಬೊಮ್ಮಾದ್ಯರ ದೇವನಿಚ್ಚಪ್ರಸನ್ವೆಂಕಟ [ನಿನ್ನ ನೆನೆವ ಮ್ಮತಿಯನೀಡೊಮನ್ನಿಸಿ ನೋಡೊ] 9
--------------
ಪ್ರಸನ್ನವೆಂಕಟದಾಸರು
ಇಂದೆ ಕಂಡೆವು ಗುರುರಾಯನ ನಮ್ಮತÀಂದೆ ಸತ್ಯಾಭಿನವತೀರ್ಥನ ಫಲಿಸಬಂದೊದಗಿತು ನಮ್ಮಸುಕೃತಆನಂದರಸಾಬ್ಧಿ ಉಕ್ಕೇರಿತು ಪ.ಇದೀಗೆ ಕಲ್ಪದ್ರುಮ ಕಾಣಿರೈ ಅಹುದಿದೀಗೆ ಚಿಂತಾಮಣಿ ನೋಡಿರೈ ಮತ್ತಿದಿದೀಗೆಸುರಭಿಬಂದಿತೆನ್ನಿರೈ ತಮ್ಮಮುದದಿಂದ ಯತಿರೂಪವಾಯಿತೈ 1ಬಡವರ ದೊರೆ ನಮ್ಮ ಗುರುರಾಯ ಈಪೊಡವಿಲಿ ಯಾಚಕರಾಶ್ರಯ ಆಪ್ತಹಡೆದ ತಾಯಿತಂದೇರ ಮರೆಸಿದ ಎಮ್ಮೊಡೆಯ ಭಕ್ತಿ ಭಾಸವ ಬೆಳೆಸಿದ 2ಭಕ್ತಿ ಪಥವ ನೋಡಿ ನಡೆವನು ಯತಿಮುಕುಟಮಣಿಗೆ ಸರಿಗಾಣೆನು ಜ್ಞಾನಸುಖದ ಬಳ್ಳಿಯ ಬೆಳೆ ಬೆಳೆಸಿದ ಸಲೆಮುಕ್ತಿ ಮಂದಿರ ವಾತ್ರ್ಯರುಹಿಸಿದಒಂದೊಂದು ಗುಣಗಳ ಮಹಿಮೆಯು ಮತ್ತೆಂದಿಗೆ ಹೊಗಳಲಿ ತೀರವುಹಿಂದಾದ ಪೂತರು ಅಹರು ಯತೀಂದ್ರನ ಸಾಮ್ಯಕೆ ಸರಿಯಾರು 4ಗುರುಭಕ್ತಿನೆಲೆಕಳೆಮರೆಯದೆ ಶ್ರೀಧರಜೆ ರಾಘವಪಾದ ಜರಿಯದೆ ದೇವವರವೇದವ್ಯಾಸನ ಸೇವೆಗೆ ಒಂದರಘಳಿಗ್ಯಲಸ ತಾನೆಂದಿಗೆ 5ಹೊನ್ನ ತೃಣದೊಲು ಸೂರ್ಯಾಡಿದ ವಿದ್ಯೋನ್ನತರ ತವರುಮನೆಯಾದಮನ್ನಿಪ ಸುಜನಚಕೋರವ ಹೊರವಪೂರ್ಣ ಚಂದಿರನಂತಲ್ಲೊಪ್ಪುವ 6ತಪ್ತಲಾಂಛನ ತೀರ್ಥವೀವಾಗಭೃತ್ಯರುಪಟಳಕೊಲಿದು ನಲಿವನಾಗಕಪಟವ ಲೇಶಮಾತ್ರರಿಯನು ಇಂಥಗುಪ್ತ ಮಹಿಮಗೆಣೆಗಾಣೆನು 7ಸಕಳ ಪುರಾಣೋಕ್ತ ದಾನವ ಬಿಡದಖಿಳ ಧರ್ಮವನೆಲ್ಲ ಮಾಡುವನಿಖಿಳತತ್ವವನೊರೆದು ಹೇಳುವ ಈಅಕಳಂಕನೆಂದೂ ನಮ್ಮನುಕಾವ8ಕಷ್ಟ ಮೌನದಿ ವಾರಣಾಸಿಯ ಬಹುಶಿಷ್ಟರ ಸಲಹುತ ಯಾತ್ರೆಯ ಮಾಡಿತುಷ್ಟಿಬಡಿಸಿದಲ್ಲಿವಾಸರಬೇಡಿದಿಷ್ಟಾರ್ಥವನೀವನು ದಾಸರ 9ಪ್ರತಿದಿನ ಗುರುಪಾದುಕೆಯನಿಟ್ಟು ಮೇಲೆನೂತನವಸನಹೊನ್ನಾರ್ಚನೆಗಿಟ್ಟು ಮುಂದೆನುತಿಸಿಹಿಗ್ಗುವ ನವಭಕುತಿಂದ ಈವ್ರತಕಾಗಲಿಲ್ಲ ಒಂದಿನಕುಂದು10ಶ್ರೀಭಾಗವತಶಾಸ್ತ್ರ ಟೀಕನುಹರಿಗಾಭರಣವ ಮಾಡಿಟ್ಟನುಈ ಭೂಮಿಲಿಹ ಶಿಷ್ಯ ಜನರನು ತತ್ವಶೋಭಿತರನು ಮಾಡಿ ಹೊರೆದನು 11ಬಲುಹಿಂದ ಯವನನ ಬಲದಲ್ಲಿ ಕೃಷ್ಣಒಳಪೊಕ್ಕು ಸದೆದ ಪರಿಯಲ್ಲಿಕಲಿನೃಪ ಮ್ಲೇಚ್ಛನ ಬಂಧನ ತಪೋಬಲದಿಂದ ಗುರುರಾಯ ಗೆಲಿದನು 12ಭಕ್ತಿವಿರತಿಜ್ಞಾನಪೂರ್ಣನು ಸೇವಕ ಜನರಿಗೆ ಪ್ರಾಣಪ್ರಿಯನುಪ್ರಕಟಿಸಿದನು ನಿಜಕೀರ್ತಿಯನಿತ್ಯಸಕಲ ಸದ್ಗುಣಗಳ ವಾರ್ತೆಯ 13ಈಪರಿಬಹು ಪಟ್ಟವಾಳುತ ದಿವ್ಯಶ್ರೀಪಾದವ್ರತ ಪೂರ್ಣ ತಾಳುತಸ್ಥಾಪಿಸಿದನು ಮಧ್ವಸಿದ್ಧಾಂತ ದುಷ್ಟಕಾಪುರುಷರ ಮೊತ್ತ ಗೆದ್ದಾತ 14ಹರಿಗುಣ ಜಿಜ್ಞಾಸೆಯಿಂದ ಶ್ರೀಹರಿಮೂರ್ತಿ ಧ್ಯಾನ ಚಿಂತನೆಯಿಂದ ಶ್ರೀಹರಿನಾಮ ಸ್ಮರಣಶ್ರವಣದಿಂದ ಶ್ರೀಹರಿಪ್ರೀತಿಬಡಿಸಿದ ನಲವಿಂದ15ನಿರುತ ಉದಯಸ್ನಾನ ಮೌನವ ಶ್ರೀಗುರುಮಧ್ವಶಾಸ್ತ್ರವ್ಯಾಖ್ಯಾನವ ಮಹಾಗೀರ್ವಾಣ ವಾಕ್ಯದಿಂದ ಪೇಳುವ ಆತ್ಮಗುರುಗಳ ಸ್ಮರಣೆಯ ಮಾಡುವ 16ಗುರುಸತ್ಯನಾಥರ ತಂದನು ನಿಜಗುರುಪದವೇ ಗತಿಯೆಂದನು ತನ್ನಸ್ಮರಣೇಲಿ ಇಹರ ಕಾವನು ಬೇಡಿದರೆ ಅಭೀಷ್ಟಾರ್ಥವನೀವನು 17ಗುರುಸತ್ಯನಾಥಾಬ್ಧಿ ಸಂಜಾತ ಸಜ್ಜನರಹೃತ್ಕುಮುದತಾಪಸಂಹರ್ತಸರಸ ಸುಧಾಂಶು ವಾಕ್ಯಾನ್ವಿತ ಸಿತಕರನಹುದಹುದಯ್ಯ ಧರೆಗೀತ 18ಆವ ಪ್ರಾಣಿಯು ಗುರುಮಹಿಮೆಯ ಸದ್ಭಾವದಿ ನೆನೆಯಲು ಸುಖಿಯಾದದೇವ ಪ್ರಸನ್ವೆಂಕಟಾದ್ರೀಶ ಅವಗಾವಗೆ ಪಾಲಿಪ ಮಧ್ವೇಶ 19
--------------
ಪ್ರಸನ್ನವೆಂಕಟದಾಸರು
ಇದೆಕೊದಧಿಮಥಿಸಿ ಹೊಸ ಬೆಣ್ಣೆ ಕೊಡುವೆನೊಪದುಮನಾಭನೆ ಗೊಲ್ಲ ಗೋರಸಕೆ ಗೋಳಿಡಬ್ಯಾಡೊ ಪ.ಮಲತ ಹಾಲು ಹುಳಿಮೊಸರು ತಂಗಳ ಬೆಣ್ಣೆನಳಿನಾಕ್ಷ ನಿನಗೇನು ರುಚಿಯೊ ಕಂದಕಳವಿನ ಮಾತ್ಯಾಕೆ ಹಸುಳೆ ಗೋವಳೆಯರಗೆಳತನವ್ಯಾತಕೊ ನಿನಗೆ ರಂಗಮ್ಮ 1ಮನೆ ಮನೆ ತಿರುಗಲು ತಿರುಕರ ಮಗನೇನೊಮನೆಯಲೇನು ಗೋರಸ ಕೊರತ್ಯಾಗಿದೈಅನುದಿನವಿಗಡೆÉೀರು ದೂರುತಲೈದಾರೆದಣಿದೆನಾರೋಪಣೆಯಕೇಳಿಕೃಷ್ಣಮ್ಮ2ಎನ್ನ ಮುದ್ದಿನಮೂರ್ತಿಎನ್ನ ಭಾಗ್ಯದ ನಿಧಿಯೆಎನ್ನ ಚಿತ್ತದ ಚಿಂತಾಮಣಿಯೆಚಿನ್ನರರಸನಾದ ಪ್ರಸನ್ವೆಂಕಟ ಕೃಷ್ಣನನ್ನಾಣೆ ಕಣ್ಣ ಮುಂದಿರೊ ನಮ್ಮಮ್ಮ 3
--------------
ಪ್ರಸನ್ನವೆಂಕಟದಾಸರು
ಇರಬೇಕು ಇರದಿರಬೇಕು ಶ್ರೀ - |ಹರಿದಾಸರು ಸಂಸಾರದೊಳು ಪ.ಕುಲಸತಿಯಾದರೆ ಕೂಡಿರಬೇಕು |ಸುಲಭದಿಂದ ಸ್ವರ್ಗ ಸೂರಾಡಬೇಕು ||ಕಲಹ ಗಂಟಿಸತಿ ಕರ್ಕಶೆಯಾದರೆ |ಹಲವು ಪರಿಯಿಂದಲಿ ಹೊರಗಾಗಬೇಕು 1ಮಕ್ಕಳು ತಾವು - ಮತಿವಂತರಾದರೆ |ಅಕ್ಕರೆಯಿಂದಲಿ ಕೂಡಿರಬೇಕು ||ಚಿಕ್ಕತನದಿ ಬುಧ್ಧಿ ತೇರುಂಡರಾದರೆ |ಗಕ್ಕನೆ ಅಲ್ಲಿಂದ ಹೊರಗಾಗಬೇಕು 2ದುಷ್ಟರ ಕಂಡರೆ ದೂರವಿರಬೇಕು |ಶಿಷ್ಟರ ಕಂಡರೆ ಕೈಮುಗಿಯಬೇಕು ||ದಿಟ್ಟ ಶ್ರೀ ಪುರಂದರವಿಠಲರಾಯನ |ಗಟ್ಟಿಯಾಗಿ ಆತನ ನೆರೆನಂಬಬೇಕು 3
--------------
ಪುರಂದರದಾಸರು
ಇಲ್ಲದಿಲ್ಲಾಗಿ | ಇಲ್ಲದ್ದೆಲ್ಲ ತಾನಾಗಿ |ತೋರುವದಾಶ್ಚರ್ಯ | ಆಶ್ಚರ್ಯ ||ಸಂಶಯಪಾರಮಾಡಯ್ಯ ||ಶಿಷ್ಯನ ಪ್ರಶ್ನವ ತಿಳಿದು | ಸದ್ಗುರು ಹರ್ಷದಿಪೇಳಿದನೊಲಿದು1xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಸತ್ಯ ಸ್ವರೂಪಾಶ್ರಯಿಸಿ ಅಸತ್ಯವು ಸತ್ಯಂತೆನಿಸಿ ||ಸತ್ಯಕಿರಣವಿಡಿದು ಮೃಗಜಲವಸತ್ಯವೆ ಆಗಿಹುದು ||ದಿಟ ರಜ್ಜುವು ಶಿಂಪಿರುತ || ಆಶ್ರಯಿ ದಿಟವೆನಿಸುವದಹಿ ರಜತಾ|| ಆಶ್ರಯದಾರೋಪೆಂದು | ತೋರುವದು ಸರೂಪದಧ್ಯಾತೆಂ(ನೆಂ)ದೂ || ಅಧ್ಯಾರೋಪಾಪವಾದಾ |ಶಂಕರ ತಾನಿವು ಪುಸಿಯಂದೊರೆದಾ5
--------------
ಜಕ್ಕಪ್ಪಯ್ಯನವರು
ಈಗಲೆ ಭಜಿಸಲೆಜಿಹ್ವೆ - ನೀ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಾಗುಮಾಡದೆಶ್ರೀ ಹರಿಪಾದಾಂಬುಜವಪ.ದೇಹದೇಹ ಸಂಬಂಧಿಗಳು - ಅವರು |ಮೋಹಬದ್ಧರಾಗಿ ಕುಳಿತಿಹರು ||ಆಹಾರ ಗುಹ್ಯೇಂದ್ರಿಯವೆಂಬ ಎರಡರ |ಬೇಹಾರದಲಿ ನೀನು ಮುಳುಗಿಸದಲೆ ಮನ 1ಮರಣ ತೊಡಗಿ ನಾಲಗೆಯುಡುಗಿ - ನಿನ್ನ - |ತರುಣಿ ಪುತ್ರ ಮಿತ್ರರಳುತಿರಲು ||ಕೊರಳೊಳು ಗುರುಗುರು ಗುರುಗುಟ್ಟುವಾಗನರ - |ಹರಿಯ ನಾಮವೆನ್ನಗೊಡದೆಲೊ ಪ್ರಾಣಿ 2ಅಸಿಪತ್ರವನದೊಳು ಹೊಗಿಸಿ - ನಿನ್ನ - |ಬಸೆವಸೆಖಂಡ ಹೊರವೊಡಿಸಿ |ಬಿಸಿಬಿಸಿ ನೆತ್ತರು ಬಸಿದು ಹೋಗುವಾಗ |ಕುಸುಮನಾಭನ ನಾಮ ನೆನೆಯಗೊಡದು ಮನ 3ತಪ್ತಲೋಹದ ಮೋಲೊರಗಿಸಿ - ನಿನ್ನ - |ಕತ್ತರಿಸಿದ ಖಂಡ ಬೇಯಿಸುವರು ||ನೆತ್ತಿಯ ಕೊರೆದು ನಾಲಗೆ ಹಿರಿದೊಗೆವಾಗ |ಚಿತ್ತಜನಯ್ಯನ ನೆನೆಯಗೊಡದು ಮನ 4ಕುಂಭಿಪಾಕದೊಳಗೆ ಕುದಿಸಿ - ನಿನ್ನ |ಅಂಬುಮೊನೆಗಳಿಂದಿರಿಯಿಸಿ ||ಅಂಬರಕೊಗೆಯ ಕಾಗೆಯು ಕಚ್ಚಿ ಕಡ್ಞಿಗ |ಅಂಬುಜಾಕ್ಷನ ನಾಮ ನೆನೆಯಗೊಡದು ಮನ 5ದುರುಳ ಯವದೂತರಾರ್ಭಟಿಸಿ - ನಿನ್ನ - |ಎರಕದ ಕಾಯ್ದ ಕಂಬಕೆ ತಕ್ಕೆಗೆಯ್ಸಿ ||ಪರಿಪರಿ ಭವದೊಳು ಬಳಲಿಸುತಿರುವಾಗ |ಪುರುಷೋತ್ತಮನ ನಾಮ ನೆನೆಯಗೊಡದು ಮನ 6ದುರಿತಕೋಟಿಗಳ ಹರಿಸುವ - ನಿನ್ನ - |ನರಕಬಾಧೆಗಳ ತಪ್ಪಿಸುವ ||ಪರಮ ಪುರುಷ ನಮ್ಮ ಪುರಂದರವಿಠಲನ |ನಿರುತದಿ ನೆನೆದು ನೀ ಸುಖಿಯೊಗೋ ಮನವೆ 7
--------------
ಪುರಂದರದಾಸರು
ಈಗಾಗೋ ಇನ್ನಾವಾಗೋ ಮತ್ತೀಗಾತ್ರ ಅಸ್ಥಿರವಣ್ಣಹೇಗಾದರು ಹೊಗಳಾಡಲಿ ಬೇಕುನಾಗಾರಿಗಮನನ್ನ ಪ.ಮನಹರಿದತ್ತಲೆ ಹರಿಹರಿದಾಡಿದಿನ ಹೋದವು ವೃಥಾ ನೋಡಿ ದುರ್ಧನದಾಸೆಲಿ ಬಾಡಿ ದುರ್ಜನರಾರಾಧನೆ ಮಾಡಿ ಈತನು ಚಪಲತೆ ಹೋಗಾಡದೆ ಶ್ರೀಹರಿಗುಣಕುಣಿದು ಕೊಂಡಾಡಿ1ತುಂಬಿದಸಿರಿಬಿಡಿಸಿ ಸೆರೆ ಒಯಿವರು ವಿಲಂಬಿಲ್ಲದೆ ಜವನವರು ಕೃಪೆಯೆಂಬುದ ಅರಿಯರು ಅವರುಹಲವ್ಹಂಬಲಿಸಿದರೊದೆವರು ಸುಡುನಂಬಲಿಬಾರದು ಸಂತೆಯವರಅಂಬುಜನಾಭನ ಸಾರು 2ಸಕಳಾಗಮ ವೇದೋಕ್ತಿ ವಿಚಾರಕೆಮುಖವೆನಿಸುವುದಾಚಾರ ಆಸುಖವೇ ಧರ್ಮದಸಾರಈಅಖಿಳಕೆ ಪ್ರಭು ಯದುವೀರಭಕ್ತವತ್ಸಲ ಪ್ರಸನ್ವೆಂಕಟರಾಯನಸಖ್ಯವಿಡಿದರೆ ಭವದೂರ 3
--------------
ಪ್ರಸನ್ನವೆಂಕಟದಾಸರು
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ