ಒಟ್ಟು 4540 ಕಡೆಗಳಲ್ಲಿ , 127 ದಾಸರು , 2949 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರೇಣ್ಯ ಪ ಶಂಕರಾಭರಣಾದ್ರಿ ವೆಂಕಟ | ಪಂಕಜಾಸನ ವಂದಿತಾಂಘ್ರಿಯೆಶಂಕೆ ಇಲ್ಲದೆ ಭಜಿಪ ಭಕುತರ | ಪಂಕಕಳೆ ಅಕಳಂಕ ಮೂರುತಿ ಅ.ಪ. ನೀರಜ ಮಂದರ ಧೃತ | ಸಿಂಧುಗತ ಹಿರಣ್ಯಾಕ್ಷ ಸಂಹೃತಕಂದನನು ಪಿತನಿಂದ ಸಲಹಿದ | ಇಂದ್ರಗವರಚುಪೇಂದ್ರ ಹರಿಯೇ ||ತಂದೆ ವಚನಕೆ ತಾಯ ಕಡಿದನೆ | ತಂದೆ ನುಡಿಗಡವಿಯನೆ ಸೇರ್ದನೆತಂದೆ ತಾಯ್ಗಳ ಬಂಧಹರ ಮುದ | ದಿಂದ ಮೋಹಕ ತುರಗವೇರ್ದ 1 ಸಿರಿ ಕಾಲ ಕರ್ಮ ಪಾದ ಪಲ್ಲವ | ಓಲೈಪ ಭಾಗ್ಯವ ಪಾಲಿಸೂವುದು 2 ಭವ ಕೂಪಾರ ದಾಟಿಪಧೀರ ಗುರು ಗೋವಿಂದ ವಿಠಲನ | ಅಪಾರ ಕರುಣವ ತುತಿಸಲಾಪನೆ 3
--------------
ಗುರುಗೋವಿಂದವಿಠಲರು
ವರ್ಣಿಸಲರಿಯೆ ನಿನ್ನ | ವರ್ಣಿಸಲರಿಯೆ ಗು | ಣಾರ್ಣವ ಹರಿಯೆ ಸೂ | ವರ್ಣ ಗಿರೀಶ ಸು | ಗಮನ ರಂಗಾ ಪ ಕುಂಡಲ ಮಿನುಗುವ ಹಸ್ತ ಕಂಕಣ ಬೆರಳುಂಗರ | ಕೌಸ್ತುಭ ಕಂಬು ಸೂದರು | ಶನ ಭುಜಕೀರ್ತಿ ಭೂ | ಷಣವಾದ ಶಿರ ಉರುವ ಒಪ್ಪಲು ಕಿಂ | ಕಿಣಿ ಕನಕಾಂಬರವ ಪೂಸಿದ ಗಂಧ | ಪುನುಗು ಜವ್ವಾದಿಯಿಂದೆಸೆವ ಸುರತರುವೆ 1 ಕಾಂಚಿದಾಮ ಥಳಿ | ಥಳಿಸುವ ಪದಕ ನ್ಯಾ | ತುಂಬಲು ಸೂಸುತಿರೆ ದಂತಾ | ಮಾತಾರಗಿಳಿಯಂತೆ ಶೋಭಿಸಿ | ಕಪೋಲ ಸುತ್ತಲು ಬೆಳಗುವ ಕಂಗಳ ನಾಸಕಾಂತಿ | ಸಿರಿ ತಿರುವೆಂಗಳಾ2 ಕಟಿ ಕರ ಎರಡೇಳು ಲೋಕ ಜಠರದೊಳಡಗಿರೆ | ಕರಿ ಪಲ್ಲಿನಂತೆ ಸುಂದರ ಜಂಘೆ ಗುಲ್ಫ ವಿ | ಪಾದ ನಖ ಪರಿ ಪರಿ ರೇಖೆಗಳ ಕಾಲಿಂದಿಗೆ | ನಿತ್ಯ ಮಂಗಳಾ 3 ನಿರಯ ತ್ತಮ ಜನ ಮನೋರಥ | ಗಮ ಸಿದ್ಧಾಂತನೆ ವಿ | ಕ್ರಮದಾನವ ಹರ | ಕೋಟಿ ಪ್ರಕಾಶಾ | ವೆಂಕಟೇಶಾ | ಅಪ್ರಾಕೃತ | ಪ್ರಮೆಯಭರಿತನಾದ | ಕುರುವಂಶ ವಿನಾಶಾ 4 ಭೂಗೋಳದೊಳಗಿದರಾಗಮ ತಿಳಿ | ದುರಗ ಗಿರಿ ಯಾತ್ರಿಗೆ | ಭೋಗದಾಶೆಯ ಬಿಟ್ಟು | ವೇಗದಿಂದಲಿ ನಿಜ | ಭವ ಸಾಗಿ ಬರಲು ಚನ್ನಾಗಿ ಜ್ಞಾನವ ನೀವುತ್ತ ಸಾಕುವಂಥ | ಶ್ರೀ ಗುರು ವಿಜಯವಿಠ್ಠಲ ಭಕ್ತರ ದಾತಾ5
--------------
ವಿಜಯದಾಸ
ವರ್ಣಿಸಲಳವೆ ಕರುಣಾಳು ಗುರುವರ ನಿಮ್ಮ ವರ್ಣವರ್ಣದ ಚರಿತೆ ಗುಣಗಣಗಳ ಪ. ವರ್ಣಪ್ರತಿಪಾದ್ಯ ದೇವತೆಗಳಿಗೆ ಅಳವಲ್ಲ ಇನ್ನಿದನು ಪಾಮರರು ಅರಿಯುವರೆ ಜಗದಿ ಅ.ಪ. ಪ್ರತಿಪ್ರತಿ ಕಲ್ಪದಲಿ ಅತಿಶಯದ ತಪಚರಿಸಿ ಪತಿತಪಾವನ ಹರಿಯ ಮನ ಮೆಚ್ಚಿಸಿ ಕ್ಷಿತಿಯೊಳಗೆ ಅವತರಿಸಿ ದೇವಾಂಶರೆಂದೆನಿಸಿ ಪತಿತರನು ಪಾವನವಗೊಳಿಪ ಘನಮಹಿಮ 1 ಭಕ್ತರು ಕರೆದಲ್ಲಿ ಆಸಕ್ತಿಯಿಂ ಬಂದು ಯುಕ್ತಯುಕ್ತಗಳಿಂದ ತತ್ವಗಳನರುಹಿ ಮುಕ್ತಿಗೊಡೆಯನ ಮಾರ್ಗ ಮುಕ್ತಾರ್ಥ ಜನಕರುಹಿ ಮುಕ್ತಿಪಥ ಸವಿತೋರ್ವ ಶಕ್ತಿ ಮಹಿಮೆಗಳ 2 ಪಾದ ಪದ್ಮಸುತ ತಂದೆ ಮುದ್ದು ಮೋಹನದಾಸರಾಯರೆಂದೆನಿಸಿ ಮಧ್ವಮತಸಾರಗಳ ಹೀರಿ ಮಕರಂದವನು ಸಿದ್ಧಿಗೊಳಿಸಿ ಸುಜನಕೀವ ಶ್ರೀ ಗುರುವೆ3 ಕರಿಗಿರಿ ನರಹರಿಯ ಚರಣಕಮಲ ಧ್ಯಾನ ಅರಘಳಿಗೆ ಬಿಡದೆ ಮನಮಂದಿರದಿ ಸ್ಮರಿಪ ಕರುಣಜಲನಿಧಿಯೆ ನಿಮ್ಮ ಮೊರೆಹೊಕ್ಕವರ ಕಾಯ್ವ ಪರಮಪ್ರಿಯರೆಂತೆಂಬ ಬಿರುದುಳ್ಳ ಗುರುವೇ 4 ಕಮಲಾಂತ ಪ್ರೀತ ಶ್ರೀ ಕಮಲನಾಭನ ಪಾದ ಕಮಲ ಮನದಲಿ ಸ್ಮರಿಪ ಕಮನೀಯ ಗಾತ್ರ ಕಮಲಾಕ್ಷ ಗೋಪಾಲಕೃಷ್ಣವಿಠ್ಠಲನ ಪದ ಕಮಲ ಮನದಲಿ ತೋರಿ ಕೃಪೆಯಗೈಯ್ಯುವುದು 5
--------------
ಅಂಬಾಬಾಯಿ
ವರ್ಣಿಸಲಳವೆ ಸುಗುಣಸಾಂದ್ರನ ಪ ಕರ್ಣಜನಕಕೋಟಿ ತೇಜಶ್ರೀಶ ಭಜಕ ಜಯ ಮುನೀಂದ್ರನ ಅ.ಪ ಸೂತ್ರ ನೇತ್ರದಿಂದಬದ್ಧಮಾಡಿ ಪಿಡಿದು ಕಡೆದುಶುದ್ಧ ಯುಕುತಿ ಸುಧೆಯ ತೆಗೆದನ ಶಿಷ್ಯ ಜನಕೆಶ್ರದ್ಧೆಯಿಂದಲದನು ಎರೆದನ ಕ್ರೋಧದಿಂದಕೃದ್ಧವಾದಿಗಳನು ಗೆಲಿದನ-ಜಯ ಮುನೀಂದ್ರನ 1 ಮಾನನೀಯ ಶೀಲರಾದಮಾನವರನು ಕರೆದು ಹರಿಯಧ್ಯಾನದಲ್ಲಿ ನಿಲಿಸಿ ಒಲಿಸಿಹಾನಿಯಿಲ್ಲದ ಮುಕುತಿ ಪಡೆದಜ್ಞಾನಮತವ ಜನಕೆ ಸಾರ್ದನ, ಶಿಷ್ಯಜನಕೆಸಾನುರಾಗದಿ ತತ್ವಪೇಳ್ದನಜಯ ಮುನೀಂದ್ರನ2 ಸರಸದಿಂದ ಮೂರ್ಯೋಳುವಿರಸ ದುಷ್ಟ ಭಾಷ್ಯಗಳನುಮುರಿದಕ್ಷೋಭ್ಯ ತೀರ್ಥಯತಿಪಕರಸಂಜಾತ ರಮ್ಯಚರಿತಶರಣ ಜನರ ಪೊರೆವ ಯತಿಪನ, ಶಿಷ್ಯಜನರಮರುಳ ಮೋಹತಿಮಿರ ದಿನಪನ, ನಮ್ಮ ಪರಮಗುರು ಶ್ರೀಕೃಷ್ಣ ಪಾದಭಜಕನಜಯ ಮುನೀಂದ್ರನ3
--------------
ವ್ಯಾಸರಾಯರು
ವಲ್ಲೀದೇವಿಯ ವಲ್ಲಭನೆ ಬಲ್ಲಿದ ಭಕ್ತರ ಸುಲ್ಲಭನೆ ಪ. ಸಲ್ಲಲಿತ ಪಾದಪಲ್ಲವ ಭಜಿಸುವ- ರೆಲ್ಲರ ಮನಸಿನೊಳುಲ್ಲಸನೆಅ.ಪ. ವೃಂದಾರಕಮುನಿವಂದಿತನೆ ಕಂದರ್ಪಾಮಿತಸುಂದರನೆ ಸ್ಕಂದನೆ ಸಚ್ಚಿದಾನಂದನೆ ಪಾರ್ವತೀ- ನಂದನ ಸದ್ಗುಣಮಂದಿರನೆ 1 ತಾರಕದೈತ್ಯ ಸಂಹಾರಕನೆ ಸೇರಿದ ಭಕ್ತೋದ್ಧಾರಕನೆ ಮಾರಾರಿಯ ಸುಕುಮಾರನೆ ಧೀರನೆ ಚಾರು ಮಯೂರ ತುರಂಗಮನೆ2 ಲಕ್ಷುಮಿನಾರಾಯಣ ಪ್ರಿಯನೆ ರಕ್ಕಸರಿಂಗತಿದುಃಖದನೆ ಕುಕ್ಕುಟವಜ್ರಾಭಯಶಕ್ತಿಹಸ್ತನೆ ಪ್ರಖ್ಯಾತ ಪಾವಂಜಾಖ್ಯ ಪುರವರನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಸುಧೀಂದ್ರ ತೀರ್ಥರು ಶ್ರೀ ವಸುಧೀಂದ್ರ ರಾಯಾ | ಪಾವನಕಾಯಾ ಕೋವಿದ ಜನ ಪ್ರೀಯಾ ಪ ಭೂವಲಯದೊಳತಿ | ತೀವಿದ ಅಘವನ ದಾವಕ ನತಜನ ದೇವತರು ಎನಿಪ ಅ ಜಿತಕ್ರೋಧ ಜಯಶೀಲಾ | ದುವ್ರ್ಯಸನ ಪ ವಜ್ರ ಹರಿಲೋಲಾ ಮಾರ್ಗಣ | ಮಥನ ಮೌನೀಶ ವಾಂ ಛಿತಫಲವಿತ್ತು ಸಂ | ತತ ಪಾಲಿಸುವುದೆಮ್ಮ ಪತಿತ ಪಾವನ ವಿತತ ಕರುಣಾ ಮೃತರತಾನತ ಹಿತಕರಾಗಮ ತತಿ ಪಯೋಜಾರ್ಕ ಅತಿಮುದಾ1 ಭೂದೇವಾನುತ ಮಹಿಮಾ |ಶಾತವಾನು ಭೀಮ ವೇದಪೂಜಿತರಾಮಾ ಪಾದ | ಸಾದರದಲಿ ನಿತ್ಯಾ ರಾಧಿಸುತಿಹ ಸುವಿ | ನೋದಚರಿತ ಗುರು ಮೋದತೀರ್ಥ ಮತಾಬ್ಧಿ ಸೋಮ ಕು ವಾದಿ ಮತ ಮತ್ತೇಭಕುಂಭಧ ರಾಧರಾತಟವಾನುಗರೊಳೆ ನ್ನಾದರಿಸುವುದಖಿಳಗುಣಾಂಬುಧೇ 2 ಸರಸಭಾಷೋಹ್ಲಾಸಾ | ವರ್ಚಿತ ದೋಷಾ ಹರಿನಿಭಸಂಕಾಶಾ ಶರೀರಾ ಸಜ್ಜನಗೇಯಾ | ಗುರುವಾದೀಂದ್ರಕರ ಸರಸೀರುಹ ಸಂಜಾತ | ನಿರುಪಮ ನಿರ್ಭೀತಾ ಸುರುಚಿರಹಿಮ ಕಿರಣ ತೇಜ ಸ್ಫುರುಣ ಶ್ರೀ ಜಗನ್ನಾಥವಿಠಲನ ಚರಣ ಪಂಕೇರುಹ ಯುಗಳ ಮಧು ಕರದುರಿತಘನ ಮಾರುತಾ 3
--------------
ಜಗನ್ನಾಥದಾಸರು
ವಾಣಿಯೆ ಪುಸ್ತಕಪಾಣಿಯೆ ಮಂಗಳ ವಾಣಿಯೆ ಬ್ರಹ್ಮನ ರಾಣಿಯೆ ವಂದಿಪೆ ಪ. ವೇದವಿದಿತೇ ತವ ಪಾದವ ಸ್ಮರಿಸುವ ಸಾಧನೆಯೆಲ್ಲವ ಮೋದದಿ ಪಾಲಿಸು 1 ಎನ್ನ ನಾಲಿಗೆಯಲ್ಲಿ ಚೆನ್ನಾಗಿ ನೆಲೆಗೊಂಡು ಅನೃತ ಬಾರದೋಲ್ ಘನ್ನೆ ನೀನಾಡಿಸು 2 ಪರಮಪಾವನ ಶೇಷಗಿರಿ ವಾಸನ ನಿಜ ಶರಣರ ಕಥೆ ಪೇಳ್ವ ಪರಿಜ್ಞಾನವಿತ್ತು ನೀಂ3
--------------
ನಂಜನಗೂಡು ತಿರುಮಲಾಂಬಾ
ವಾಣಿಯೆ ಬ್ರಹ್ಮನ ರಾಣಿಯೆ ನಿನ್ನ ಪಾದ ಕಾಣದೆ ನಿಲ್ಲಲಾರೆ ಕಾಮಿನಿಯೆ ಪ ನಿನ್ನನು ಬಯಸಿದೆನೆ ನಿಲ್ಲಲಾರೆ ಕಾಮಿನಿಯೆ 1 ಭುಜಗ ವೇಣಿ ನಿಲ್ಲಲಾರೆ ಕಾಮಿನಿಯೆ 2 ವಾಸವಮುಖ ಸುರೇಶರು ನಿನ್ನನು ಅಶಿಸುತಿರುವರೆ ಭಾಸುರಾಂಗಿ ನಿಲ್ಲಲಾರೆ ಕಾಮಿನಿಯೆ 3
--------------
ಬಾಗೇಪಲ್ಲಿ ಶೇಷದಾಸರು
ವಾಣೀ ನೀ ತೋರೆ ವಾರಿಜನಾಭನ, ಮಹಾಲಾಭನ್ನ ನಿತ್ಯ ಸುಲಭನ ಭಾನು ಸನ್ನಿಭನ ಪ ಕ್ಷೋಣೀಯೊಳಗಣ ಪ್ರಾಣಶ್ರೇಷ್ಠ - ಜಗ ತ್ರಾಣನ ತೋರಿಸೆ ಭಾನು ಸನ್ನಿಭಳೆ ಅ. ಪ. ಚೈತನ್ಯರಾಣಿ ಪುಸ್ತಕಪಾಣಿ-ಸುನೀಲವೇಣಿ ಅತ್ಯಂತ ಮಹಿಮೆ ಗುಣಗುಣಶ್ರೇಣಿ ತ್ರಿಲೋಕ ಜನನಿ ಸತ್ಯವ ತೋರುತ ನಿತ್ಯೋಪಾದಿಲಿ ಸತ್ಯ ಸಂಕಲ್ಪಳೆ ನಿತ್ಯದಿ ಪೂಜಿಪೆ ತ್ವತ್ಪಾದಾಂಬುಜವಿತ್ತು ನೀ ಸಲಹೆ1 ನಾಲಿಗೆಯಲ್ಲಿ ಬಂದು ನಿಂದು ದಯದಿಂದ ಇಂದು ಶ್ರೀಲೋಲ ಹರಿಯೆ ದೈವವೆಂದು ಕೊಂಡಾಡೆ ಮುಂದು ಕಾಲ ಹಿಂಗಿಸಿ ವಿ- ಶಾಲ ಮತಿಯ ಕೊಟ್ಟು ಆಳುಗಳೊಡನೆ ಸು- ಶೀಲ ಜ್ಞಾನವಿತ್ತು ಆಲಸ್ಯಮಾಡದೆ ಶೀಲ ಮುಕ್ತಿಗನುಕೂಲವಾಗುವುದಕ್ಕೆ2 ಜನ್ಮ ಬಂದಿದೆ ಕಡೆಗೆ ಮಾಡು ದಯದಿಂದ ನೋಡು ಘನ ಕೀರ್ತಿವಂತೆ ಅಭಯವ ನೀಡು, ನಿನಗಲ್ಲ ಈಡು ಕನಸಿಲಿ ಮನಸಿಲಿ ಮನಸಿಜನೈಯನ ನೆನೆಸುವ ಸೌಭಾಗ್ಯವನುದಿನ ಕೊಟ್ಟು ಘನಪ್ರೇರಣೆಯಿಂದ ವಿಜಯವಿಠ್ಠಲನಂಘ್ರಿ ವನಜವ ತೋರಿ ಸನ್ಮೋದವನೀಯೆ3
--------------
ವಿಜಯದಾಸ
ವಾದಿಗಳೆದೆಶೂಲಾ | ಗುರುವೆ | ವಾದಿರಾಜ ಶೀಲಾ ಪ ಬೋಧಿಸಿ ದಶಮತಿ | ಬೋಧರ ಶಾಸ್ತ್ರವಐದಿಸು ಸದ್ಗತಿ | ಯಾದವೇಶನ ಪ್ರೀತಿ ಅ.ಪ. ಸೋದೆ ಪುರದಲಿರುವಾ | ವೃಂದಾವನಮೋದದಿ ದರ್ಶಿಸುವಾ ||ಸಾಧುಗಳಘನೀಗಿ | ವೇದವಿನುತ ಹರಿಪಾದವ ತೋರಿಸಿ | ಮೋದವ ಕೊಡಿಸುವ 1 ಧವಳಾಭಿದ ಗಂಗಾ | ಅಲ್ಯುದುಭವಿಸಿರ್ಪುದು ತುಂಗಾ ||ಸವನ ಮೂರಲಿ ಸ್ನಾನ ಕವಿದಿಹ ಅಜ್ಞಾನಸ್ರವಿಸಿ ಶ್ರೀಹರಿ ಜ್ಞಾನ | ಪ್ರವಹವ ಸೃಜಿಸುಪುದು 2 ಪಂಚ ವೃಂದಾವನದೀ | ಇಹ ಹರಿಪಂಚ ಸುರೂಪದಲೀ ||ಅಂಚೆಗಮನ ಹರಿ | ಮಂಚಯೋಗ್ಯ ಮುಖಪಂಚವಿಂಶತಿ ಸುರ | ವಾಂಛಿತ ಪಡೆವರು 3 ವಾಗೀಶ ಕರಜಾತಾ | ಸೇವಿತನಾರಾಯಣ ಭೂತ ||ಭೋಗಿ ಪುರೀಶನ | ರೋಗವ ಹರಿಸಿದೆಆಗಮಜ್ಞ ಗುರು | ನಾಗಶಯನ ಪ್ರಿಯ 4 ಬದರಿಯೊಳಿದ್ದವನಾ | ತರಿಸಿದಿವಿಧಿನುತ ತ್ರಿವಿಕ್ರಮನಾ ||ಮುದದಿ ನಿಲ್ಲಿಸುತ | ವಿಧವಿಧ ವೈಭವವಿಧಿಸೆ ನಿನ್ನಯ ಜನ | ಒದಗಿ ಚರಿಸುವರು 5 ಮೋದ ||ಸುಜನ ಸುರದ್ರುಮ | ಭಜಿಸೆ ಹರಿಸಿ ಭ್ರಮಅಜ ಜನಕನ ತೋರ್ವೆ || ಋಜು ಲಾತವ್ಯರೆ 4 ಪ್ರಾಕೃತ ಪದಪದ್ಯಾ | ರಚಿಸುತಅ - ಪ್ರಾಕೃತ ನಿರವದ್ಯಾ ||ಅ - ವ್ಯಾಕೃತ ಗುರು ಗೋವಿಂದ ವಿಠ್ಠಲಸ್ವೀಕೃತ ನಿಜ ಭಕ್ತ | ಪ್ರಾಕೃತ ಕಳೆವಂಥ 5
--------------
ಗುರುಗೋವಿಂದವಿಠಲರು
ವಾದಿರಾಜ ಅಸ್ಮದ್ಗುರು ವಾದಿರಾಜ ಪ ವಾದಿರಾಜ ತವ ಪಾದಕಮಲಕಭಿ ವಾದನ ಮಾಳ್ಪೆ ಸಮೋದವಿತ್ತು ಕಾಯೊ 1 ಸಾರಿದರಿಗೆ ಕಲ್ಪ ಭೂರುಹ ದಂತೆ ಮ ನೋರಥ ಸಲಿಸುವ ಸೂರಿಗಳರಸೇ 2 ಭೇದ ಪಂಚಕವನು ಸಾಧಿಸಿ ಕುಮತಕು ವಾದಿಗರ್ವಾದ್ರಿ ವಿಭೇದನ ಗೈದೆ 3 ದೇಶಿಕವರ್ಯ ವಾಗೀಶ ಕುವರನೆ ಕ್ಲೇಶ ಹರಿಸು ಅಘನಾಶ ಗೈದು 4 ಸಿರಿ ಜಗನ್ನಾಥವಿಠಲನ ಸುಗುಣಗಳನುದಿನ ಪೊಗಳಿ ಹಿಗ್ಗುವೊ 5
--------------
ಜಗನ್ನಾಥದಾಸರು
ವಾದಿರಾಜ ಗುರುವೇ ಪಾದಾರಾಧಕ ಸುರತರುವೆ ಪ ಮೋದವ ಕೊಡುವದು ನೀ ದಯದಿಂದಲಿ ಸ್ವಾದಿನಿಲಯ ತವ ಪಾದಕೆ ನಮಿಸುವೆಅ.ಪ ಮೇದಿನಿಯೊಳು ಚರಿಸೀ ಜನರೊಳಗಾಧ ಮಹಿಮರೆನಿಸಿ ಮೋದಮುನಿಯ ಸುಮತೋದಧಿಚಂದಿರ ಗಜ ಮೃಗಾಧಿಪರೆನಿಸಿದ 1 ಯುಕ್ತಿ ಮಲ್ಲಿಕಾಧೀ ಬಹುಸರಸೋಕ್ತಿ ಸಹಿತವಾಗಿ ಭಕ್ತಿ ಪುಟ್ಟಿಸುವ ರುಕ್ಮಿಣೇಶ ವಿಜಯಾಖ್ಯ ಗ್ರಂಥದಿ ಚಮ ತ್ಕøತಿ ತೋರಿದ 2 ಭಾಗವತರ ಪ್ರೀಯಾ ನಮಿಸುವೆ ವಾಗೀಶರ ತನಯಾ ಯೋಗಿವರ್ಯ ಕವಿಗೇಯ ದಯಾಕರ ಭೋಗಪುರೀಶನ ರೋಗವ ಕಳೆದಿ 3 ರಾಜರನ್ನು ಪೊರೆದಿ ಯತಿಕುಲರಾಜರೆನಿಸಿ ಮೆರೆದಿ ರಾಜೀವ ಯುಗಲ ಪೂಜಿಸಿ ಜಗದಿವಿ ರಾಜಿಸಿದಂಥ 4 ಪಾತಕ ಪರಿಹರಿಸಿ ನರಮೃಗ ನಾಥನ ಪರಮ ಪ್ರೀತಿಯ ಪಡೆದಿ 5
--------------
ಕಾರ್ಪರ ನರಹರಿದಾಸರು
ವಾದಿರಾಜ ಪ್ರತಿವಾದಿ ಗಜೇಂದ್ರ ಧ ರಾಧರಾಟ ವಿಬೋಧದಿ ಚಂದ್ರ ಪ ಸಮಯವಿದೆಂದು ಉತ್ಕøಮಣವ ತೊರೆದೆ 1 ಬಂದು ಕರೆಯಲು ಪುರಂದರನಾಳ್ಗಳ ಹಿಂದಟ್ಟಿದೆ ಕರ್ಮಂದಿಗಳರಸ 2 ಆರ್ಥಿಗಳಿಗೆ ಪರಮಾರ್ಥ ಕೊಡುವ ಸ ತ್ತೀರ್ಥ ಪ್ರಬಂಧವ ಕೀರ್ತನೆ ಗೈದೆ 3 ಅದ್ವೈತ ಸಮಿಧಿ ಮಧ್ವ ಸುಸಿದ್ಧಾಂ ತಿಧ್ಮಜಿಂಹದಿ ಪ್ರಧ್ವಂಶಿಸಿದೆ 4 ಪಾವನೀಯ ಸುಮತಾವಲಂಬಿಗಳ ತಾವಕರೆಂದೀವುದು ವರವ 5 ಎಲರುಣಿ ಭಯಕಂಜಿಲಿ ನಿಮ್ಮಾಸನ ಕೆಳಗಿರೆ ಕಂಡದನುಳುಹಿದೆ ಕರುಣಿ 6 ಹಯಮುಖ ಪಾದದ್ವಯ ಭಕ್ತಾಗ್ರನೀ ದಯದಿ ವಿಪ್ರನಿಗೆ ನಯನಗಳಿತ್ತೆ 7 ಭಾಗೀರಥಿಯಂತ್ಯೋಗಿ ವರಗುರು ವಾಗೀಶರ ಕರಾಬ್ಜ ಸಂಭವನೆ 8 ನಮಿಪೆ ತ್ವತ್ಪದಕಮಲಗಳಿಗೆಮ ಧ್ವಮತ ಸರೋರುಹ ದ್ಯುಮಣಿಯೆ ನಿರುತ 9 ಗರಮಿಶ್ರಿತ ನರಹರಿ ನೈವೇದ್ಯವ ನರಿತು ಪೇಳೆ ಉಂಡರಗಿಸಿಕೊಂಡೆ 10 ಪೂತಾತ್ಮ ಜಗನ್ನಾಥವಿಠಲನ ಖ್ಯಾತಿಯ ತುತಿಸುವನಾಥ ಜನಾಪ್ತ 11
--------------
ಜಗನ್ನಾಥದಾಸರು
ವಾದಿರಾಜಗುರು ನಿಮ್ಮಡಿಗೆರಗುವೆ ಸಾದರದಿಂದಲಿ ಮಂದನ ಕೈಪಿಡಿಯೋ ಪ ಸಾಧುಜನಾಶ್ರಯ ಮೇದಿನೀಸುರತರು ಪಾದವಪಿಡಿದಿಹೆ ಬೋಧಿಸು ವಿಜ್ಞಾನ ಅ.ಪ. ಕಾದಿಡೆ ಸುಜನಕೆ ಮಧ್ವಾಗಮನಿಧಿ ಸಾದರದುದಿಸಿದಿ ಬುಧಜನಕುಲಮೌಳಿ ಬೂದಿಯ ಮಾಡುತ ದುರ್ಮತಜಾಲವ ಮಾಧವ ಮಧ್ವರ ಸೇವೆಯ ಸಲ್ಲಿಸಿದೇ 1 ಕವಿತಾವನಿತೆಯ ಕುಣಿಸುತ ಶಾಸ್ತ್ರವ ನವವಿಧ ರಸದಿಂ ಪೇಳಿದೆ ಶಿಷ್ಯರಿಗೆ ಭುವಿಯಲಿ ಮೆರೆದೆಯೋ ಮಧ್ವಾನುಜ ತೆರ ಪವನ ಮತಾಬ್ಧಿಯ ಸೋಮನೆ ಶರಣೆಂಬೆ2 ರಿಕ್ತಬ್ರಹ್ಮನ ಭಕ್ತರ ನೊಲ್ಲನು ಯುಕ್ತಿಗಳೆಂಬುವ ಮಲ್ಲಿಗೆ ಪಟ್ಟಲಿ ಶಕ್ತಯತೀಂದ್ರನೆ ಅಡಗಿಸಿ ಸರ್ವೋ- ದ್ರಿಕ್ತನ ಗುಣಗಣ ಸಾಧಿಸಿ ನೀ ಮರೆದೇ3 ತೀರ್ಥಕ್ಷೇತ್ರವ ಪಾವನಗೈಯ್ಯಲು ಸುತ್ತುತನೀಡಿದೆ ತೀರ್ಥಪ್ರಬಂಧವನೂ ಪಾರ್ಥಿವ ಮೊರೆಯಿಡೆ ಅಕ್ಷತೆನೀಡುತ ಶತ್ರುಗಳಳಿಸುತ ಪೊರೆದೆಯೊ ಕರುಣಾಳು4 ಅರವತ್ನಾಲ್ಕು ಕಲಾಜ್ಞನೆ ಗುಣನಿಧಿ ಸುರಗಣಗಚ್ಚಿರಿಯೇ ಸರಿ ತವ ಮಹಿಮ ಹರಿಸಿದೆ ಮೃತ್ಯುವ ರಾಜನ ಅಳಿಯಗೆ ಸಿರಿಪತಿ ವ್ಯಾಸರ ಕಂಡೆಯೊ ಪ್ರತ್ಯಕ್ಷ5 ಗುಂಡಕ್ರಿಯೆ ವೈಕುಂಠ ವರ್ಣನೆ ಕಂಡಕಂಡಪದ ಪುಂಜವ ಪಾಡುತಲೀ ಕೂಡದು ಭಾಷಾ ಸಡಗರ ವೆಂಬುದ ಪಂಡಿತನಿಕರಕೆ ತೋರಿದೆ ಯತಿತಿಲಕಾ6 ಜಂಗಮಗರುವನ ಭಂಗಿಸೆ ತವಕದಿ ಇಂಗಿಸಿ ಸಲಹಿದೆ ವಿಪ್ರರ ಕಷ್ಟಗಳ ಗಂಗಾಪಿತ ತ್ರಿವಿಕ್ರಮ ದೇವನ ಮಂಗಳ ಸುರಿಸಲು ಸ್ವಾದಿಲಿ ಸ್ಥಾಪಿಸಿದೆ7 ಗೋಧರ ಹಯಮುಖ ಸಾಕ್ಷಾತ್ತಿ ಎಂಬುವ ಛಂದದಿ ನೀಡಿದ ಓದನವೆಂತೆನೆ ಸಾಧ್ಯವೆ ಶೇಷನು ಪೊಗಳಲು ನಿಮ್ಮನು ಮಂದಿರನವನಿವ ನೆನ್ನುತ ಕೈ ಪಿಡಿಯೋ8 ಇಂದ್ರನ ದೂತರ ತಡೆಯುತ ದಿನತ್ರಯ ಚಂದದಿ ಕುಳಿತೆಯಾ ಬೃಂದಾವನದೊಳಗೆ ಇಂದಿಗು ನೋಳ್ಪರು ಬುಧಜನ ನಿಮ್ಮನು ವೃಂದಾರಕಗಣ ವಂದಿತ ಚರಣಯುಗ9 ಸುಂದರ ಹಯಮುಖ ರಾಮನು ಕೃಷ್ಣನು ವೇದವ್ಯಾಸರು ಹನುಮಾದಿ ತ್ರಯರು ಮಧ್ಯದಿ ಕುಳಿತಿಹ ನಿನ್ನ ಸುನಾಲ್ಕೆಡೆ ನಿಂದಿಹರೆಂಬುದು ಸಿದ್ಧವು ಮಹಮಹಿಮಾ 10 ಬೃಂದಾವನ ಪಂಚದಿ ಹರಿ ತಾನಿಹ ಚಂದದಿ ಸೇವೆಯ ಕೊಳ್ಳುತ ನಿನ್ನಿಂದ ಸುಂದರ ದಶಗಳ ಪಂಚನುರೂಪವ ವಂದಿಸಿ ನೋಡುತ ನೆನೆಯುವೆ ಏನೆಂಬೆ11 ಗಂಗಾಪಿತ ತ್ರಿವಿಕ್ರಮದೇವನ ಹಿಂಗದೆ ನೆನೆಯುವೆ ಲಕ್ಷಾಭರಣವನು ರಂಗಗೆ ನೀಡಿದೆ ನಮ್ಮಯ ಭವವನು ಇಂಗಿಸೆ ಕಷ್ಟವೇ ಗುರುವರ ದಯಮಾಡೋ12 ಜಯಮುನಿ ಹೃದಯದಿ ವಾಯುವಿನಂತರ ಜಯದಿಂ ನಲಿಯುವ ಶ್ರೀಕೃಷ್ಣವಿಠಲನ ದಯದಿಂ ತೊರಿಸು ಭಾವೀಜಯಾಸುತ ಹಯಮುಖ ಕಿಂಕರ ನಮಿಸುವೆ ಭೂಯಿಷ್ಠಾ13
--------------
ಕೃಷ್ಣವಿಠಲದಾಸರು
ವಾದಿರಾಜರ ಸ್ತೋತ್ರ ಇದಿರ್ಯಾರೋ ಗುರುವೆ ಸಮರ್ಯಾರೋ ಶ್ರೀ ಹಯವದನ ಪದ ಪ್ರಿಯ ವಾದಿರಾಜ ಪ ಸಿರಿನಿಲಯನ ಗುಣಗಳ ಸ್ಮರಿಸುತಗುರು ಮಧ್ವ ಮುನಿಪನ ಮಹಿಮೆಯ ಪೊಗಳುತನೆರೆದಿದ್ದ ಮಾಯ್ಮದ ಕರಿಗಳ ಶಿರವನುಭರದಿ ಛೇದಿಪ ಬಲಿ ವಿಬುಧ ಕೇಸರಿಯೆ 1 ಸಾರ ಸಜ್ಜನರಿಗೆ ತಿಳಿಯದೇಪರಿಪರಿ ಕುಸಮಯ ತಮ ಕವಿಯಲು ನೀಸರಸ ಭಾರತಿ ಮೊದಲಾದ ಗ್ರಂಥಗಳನುವಿರಚಿಸಿ ತಮ ಹರಿಸಿದ ದಿನಕರನೇ 2 ಸೋದೆಯ ಪುರದಲ್ಲಿರುವ ಹಯವದನನಮೋದದಿ ಭಜಿಸುತ ಈ ಧರೆಯೊಳ್ ಪೂರ್ಣಬೋಧ ತೀರ್ಥರ ಪಾದಸೇವಕರಿಗೆಆದರ ಮಾಳ್ಪ ಯತಿಕುಲ ಶಿರೋಮಣಿಯೇ 3 ಮುದ್ದು ಲಕ್ಷ್ಮೀಶ ವೆಂಕಟ ವಿಠ್ಠಲನಹೊದ್ದಿದ ಭಕ್ತರ ಸಂತಾಪ ಕಳೆಯುತ ಮಧ್ವಮುನಿಯ ಮತ ದುಗ್ಧವಾರಿಧಿಯೊಳುಉದ್ಭವಿಸಿದ ಪೂರ್ಣ ಶುದ್ಧ ಚಂದ್ರಮನೇ 4
--------------
ವೆಂಕಟೇಶವಿಟ್ಠಲ