ಒಟ್ಟು 5909 ಕಡೆಗಳಲ್ಲಿ , 130 ದಾಸರು , 3764 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೊಂಬೆಯಾಟವನಾಡಿಸಿದೆ ಮಹಾಭಾರತದ ಪ ಅಂಬುಜಭವಾದಿ ಅಮರರು ನೋಡುತಿರಲು ಅ ಕುರುಭೂಮಿಯೆಂಬ ಪುರವೀಧಿಯನು ರಚಿಸಿಮರೆಯ ಮಾಯದ ಐದು ತೆರೆಯ ಹಾಕಿಧರಣೀಶರೆಂಬ ನರಪ್ರತಿಮೆಗಳನಳವಡಿಸಿನರನ ರಥವಾಜಿಯ ಸೂತ್ರವನು ಪಿಡಿದು 1 ಓದುವನು ನಾರದನು ವಾದ್ಯಕಾರನೆ ಶಂಭುಬಾದರಾಯಣದೇವ ಕಥಾಪ್ರಸಂಗಿಮೇದಿನಿಯ ಹೊರೆಗಳೆವ ಮೃತ್ಯುವಿನ ಹಾಸ್ಯರಸವೇದನಿಕರಗಳು ಕೈವಾರಿಸುತಿರಲು 2 ಹದಿನೆಂಟು ಅಕ್ಷೋಹಿಣಿ ಮಾರ್ಬಲವ ನೆರೆಸಿಹದಿನೆಂಟು ದಿನ ಕದನಕೇಳಿಕೆ ನಡೆಸಿಅದರೊಳೈವರನುಳುಹಿ ಅವನಿಭಾರವನಿಳುಹಿಮುದದಿ ಬ್ರಹ್ಮಕಪಾಲವನು ತೃಪ್ತಿಗೊಳಿಸಿ 3 ಲೋಕದೊಳಗೈದನೆಯ ವೇದವಿದೆಂದೆನಿಸಿಪಾಕಶಾಸನ ಸಭೆಯನು ಮೆಚ್ಚಿಸಿಈ ಕಥೆಯ ಕೇಳಿದ ಜನಮೇಜಯನ ಪತಿಕರಿಸಿತಾ ಕಪಟನಾಟಕದ ಸೂತ್ರಧರನೆನಿಸಿ 4 ಇಂತೆಸೆವ ಲೀಲಾವಿನೋದ ರಚನೆಗಳಿಂದ ಲೋ-ಕಾಂತರಂಗಳ ಸಂಚರಿಸುತಸಂತಸದಿ ಭರತ ಸಂಸಾರವನು ಪೊರೆವ ವೇ-ದಾಂತನುತ ಕಾಗಿನೆಲೆಯಾದಿಕೇಶವರಾಯ 5
--------------
ಕನಕದಾಸ
ಬೊಮ್ಮ ಪದವಿ ಕೊಂಡೆ ಪ ಕೂರ್ಮರೂಪನಾಗಿ | ಬೊಮ್ಮಾಂಡ ಧರ ಪರಬೊಮ್ಮನ ಪರಿಮಿತ | ಪೇರ್ಮೆ ನಿನ್ನೊಳೆಂತೂಅಮ್ಮಮ್ಮ ನಿನಸಮ | ಸುಮ್ಮನಸರೊಳಿಲ್ಲ ಅ.ಪ. ಪಾದ್ಯ ಮೂರ್ತಿ ಪಾದ ಭಜಕ ವಿನೋದ ದಿಂದಲಿ | ಭೋದಿಸುವೆ ಶೇ |ಷಾದಿಗಳಿಗೆ ಅ | ಗಾಧ ಮಹಿಮನೆ 1 ಗಾನಲೋಲನ | ಗಾನ ಮಾಡ್ಡ ಮ |ಹಾನುಭಾವ ಸು | ಶ್ವಾಸ ರೂಪದಿಮೌನಿ ಸುರರಿಗೆ | ಗಾನ ಅನು ಸಂ |ಧಾನ ಗೋಪ್ಯದಿ | ಪ್ರಾಣ ಸಲಹೋ 2 ವ್ಯಾಪ್ತ ಜಗಹರಿ | ವ್ಯಾಪ್ತಿ ಎಲ್ಲೆಡೆಪ್ರಾಪ್ತ ನಿನ ಸಮ | ಆಪ್ತರಿಲ್ಲವೊಗೋಪ್ತ ಗುರು ಗೋವಿಂದ ವಿಠಲನವ್ಯಾಪ್ತಿ ತಿಳಿಸು ಸು | ದೀಪ್ತ ಮಾರುತಿ 3
--------------
ಗುರುಗೋವಿಂದವಿಠಲರು
ಬೊಮ್ಮ ಗಟ್ಟಿಯಲಿದ್ದ ನಮ್ಮ ಪ್ರಾಣೇಶನು ಹ- ನುಮನೆಂಬುವ ಹರಿಭಜಕನೀತ 1 ರಮ್ಮೆರಮಣನಾದ ರಾಮಸೇವಕನಂಘ್ರಿ ಒಮ್ಮೆ ನೋಡಲು ದೋಷದೂರವಾಗ 2 ಕರ ಜೋಡಿಸಿ ಮುಗಿದು ಕೊಂ- ಡಾಡುತೀತ ನಗುವ ಮಹಿಮೆಯನು 3 ಆಡಿದ್ವಚನ ಸತ್ಯಮಾಡುವ ಭಕುತರು ಬೇಡಿದ್ವರಗಳ ಚೆಲ್ಲಾಡುವನು 4 ಹರುಷದಿಂದಲಿ ತಾ ಕಿಂಪುರುಷಖಂಡದಿ ತಪಾ- ಚರಿಸುತಿದ್ದನು ಮಹಾಪುರುಷನೀತ 5 ಅರಸರಂತಕನಾದ ಪರಶುರಾಮನ ಗೆದ್ದ ಅರಸನಂಘ್ರಿಗಳನು ಸ್ಮರಿಸಿಕೊಂಡು 6 ಸುಗ್ರೀವನಲ್ಲಿ ಪರಮನುಗ್ರ(ಹ) ಮಾಡುತಲಿ ದ- ಶಗ್ರೀವನಲ್ಲಿ ಬಂದನಾಗ್ರ(ಹ)ದಿಂದ 7 ನಖ ಶಿರದಿಂದುದ್ದವ ಮಾಡಿ ಉರಿವೀಲಂಕೆಗೆ ತಾನಂಕುರವನಿಟ್ಟ(?) 8 ಮರನಕಿತ್ತಕ್ಷಕುಮಾರನ ಮುರಿದು ತಾರ ಮರನ ಕರೆದು(?) ತಂದಮರನಾದನು 9 ವರದಿ ಬೆಳದ ಕುಂಭಕರಣನ ಕೊಂದು ಕಟ್ಟಿ ಸ್ಥಿರಪಟ್ಟವನು ವಿಭೀಷಣರಿಗಿಟ್ಟ 10 ಮಾತೆಕೊಟ್ಟಂಥ ರತ್ನರಾಕಟೆಯನ್ನು ತಂದು ಭೂತಳದೊಡೆಯಗಿಟ್ಟ ಪ್ರೀತಿಯಿಂದ 11 ಜೊತೆಮುತ್ತಿನ ಹಾರ ಕೊಡಲು ಜಾನಕಿ ರಘು- ನಾಥಗ್ವೊಲಿದು ಅಜಪದವಿನಿಟ್ಟ 12 ಸೀತಾಚೋರನ ಪ್ರಾಣಘಾತಕನು 13 ಅಂಜನಾತ್ಮಜ ದೊಡ್ಡ ಸಂಜೀವನವ ತಂದು ಕೊಂದಕಪಿಗಳ ಪ್ರಾಣ ಪಡೆದನೀತ 14 ಕಂಜಾಕ್ಷಿಯಳ ಕರೆತಂದು ಕೂಡಿಸಿ ರಾಮ- ಗಂಜದೆ ಎಡೆಯ ಕದ್ದೊಯ್ದೆಂಜಲುಂಡ 15 ರೋಮ ರೋಮಕೆ ಕೋಟಿ ಲಿಂಗ ಧರಿಸಿದ ಸು- ಜ್ಞಾನಿಗಳೊಡೆಯ ಮುಖ್ಯಪ್ರಾಣದೇವ 16 ರಾಮ ಲಕ್ಷ್ಮಣ ಸೀತಾದೇವೇರಿಂದ್ವೊಡಗೂಡಿ ಈ ಮಹಾಸ್ಥಳದಿ ನಿಂತ ಮಹಾತ್ಮನು 17 ಭೀತಿ ಇಲ್ಲದಲೆ ಭೀಮೇಶ ಕೃಷ್ಣ(ನ) ನಿಜ ದೂತನೆನಿಸಿದ ಪ್ರಖ್ಯಾತನೀತ 18
--------------
ಹರಪನಹಳ್ಳಿಭೀಮವ್ವ
ಬೊಮ್ಮ ಮೃಡ ಮುಖ್ಯ ಸುರರಿಗೆಡೆಯನೆನಿಪ ಮುದ್ದು ಉಡುಪಿಯ ಕೃಷ್ಣನ ಪ. ಪೊಡವಿಯೊಳಗೆ ತನ್ನ ಅಡಿಗಳ ಧೇನಿಪ-ರಡಿಗಡಿಗವರ ವಾಂಛಿತ ವÀಸ್ತುವಕಡೆದು ಕೊಡುವೆನೆಂದು ಕಡೆಗೋಲ ನೇಣನೆಪಿಡಿದಿಹ ಸಿರಿಯರಾ ದೃಢಕೆ ಮೆಚ್ಚಿದನ 1 ಹರಿಸರ್ವೋತ್ತಮನೆಂಬೊ ಪರಮಸಿದ್ಧಾಂತಕ್ಕೆ ಮ-ಚ್ಚರಿಸುವ ಕುಮತದ ಕುಜನರಭರದಿ ಬಂಧಿಸಿ ಬನ್ನಂಬಡಿದು ಶಿಕ್ಷಿಪೆನೆಂದುವರಪಾಶದಂಡಧಾರಿಯಾಗಿ ತೋರಿಪ್ಪನ 2 ಭಕ್ತವತ್ಸಲನೆಂಬೊ ಸುಲಭೋಕ್ತಿಯನು ಬಂದನಿಕರಕ್ಕೆ ಪೇಳಲು ದ್ವಾರಕಾಪುರಿಯಸುಖತೀರ್ಥಮುನಿಗೆ ಸುಖಕರನಾಗಿ ಬಂದಅಕುಟಿಲ ಕೃಷ್ಣ ಹಯವದನರಾಯನ 3
--------------
ವಾದಿರಾಜ
ಬೋಧ ಘನ ಗಂಭೀರ ಗುಣಸುಜನ | ಪಾದ ಯೋಗ ಸಾಂಖ್ಯಗಳಾದ ಸೀಮೆಯಲಿ ನಲಿದಾಡಿ ತುರ್ಯದಲಿ ಮನೆಮಾಡಿ | ಸಹಜಾವಸ್ಥೆ ಗೂಡಿ | ಆ ಮಹಾ ಪದದಿಂದ ಪರಿಹರಿಸಿ ಭವಬಂಧ | ಕಾಮಿತಾರ್ಥವ ನೀವ ದೀನರುದ್ಧರಿಸುವ | ಶ್ರೀ ಮಹಿಪತಿ ಸ್ವಾಮಿ ನಂದನೋಡಿಯನು ನೇಮಿ ಹರಿಕಥಾನಂದ ಪ್ರೇಮಿ |
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೋಧ ನಡತೆಯಲಿ ಕತ್ತೆಯಾದೆ ಪ ನೀರಲಿ ನೆರಳನೆ ನೋಡುವೆ ಹಣೆಗೆ ಗಂಧವ ತೀಡುವೆಹಾರ ತುರಾಯ್ಗಳ ಸೂಡುವೆ ಮೋರೆಯನೆತ್ತೆತ್ತ ಮಾಡುವೆ1 ಜಾರೆಯರೊಡನೆ ಬೆರೆವೆ ಕಿಸಿ ಕಿಸಿ ಹಲ್ಲನೆ ಕಿರಿವೆಬಾರದ ಪದವ ಒದರುವೆ ಹಮ್ಮಿನಿಂದೆಲ್ಲೆಲ್ಲಿ ಮೆರೆವೆ2 ಬಿಡುವೆನು ಗುರುಪಾದವೆಂಬೆ ಬೇಡಿತಿಯ ಕೂಡುವೆನೆಂಬೆಸುಡುವೆನು ಕಪನಿಯನೆಂಬೆ ಲಿಂಗವ ಕಟ್ಟಿರಿ ಎಂಬೆ 3 ವಿಧ ವಿಧ ವೇಷವ ಧರಿಸಿ ಬಹು ಜಾತಿಯಲಿ ಕೈ ಬೆರಳಿರಿಚಿದಾನಂದ ನೀ ಮೆರೆಸಿ ಬಾಳುವೆ ದೊಡ್ಡವನೆನಿಸಿ 4
--------------
ಚಿದಾನಂದ ಅವಧೂತರು
ಬೋಧ ಬಂದನು ಮಾ | ಪ್ರಪಂಚ ಗೆಲುವವ ನಾರೆಲಮಾ ನಮ್ಮ | ಪತಿ - ಭಕ್ತರು ಕಾಣಿಲಮಾ ಪ ಎನಗಾರು ಇದಿರಿಲ್ಲ ಸ್ವರಾಜ್ಯದೊಳಗಿಂದು | ನೀನಾರೋ ಪರದೇಶಿ ಹೇಳಲಮಾ | ನಾನೆಂಬ ಹಮ್ಮಿನ ಬಿರುದನ ಬಿಡಿಸುವ | ನಾನೆಂಬ ಹಮ್ಮಿನ ಬಿರುದವ ಬಿಡುಸುವ | ಜ್ಞಾನ ಶಸ್ತ್ರಧಾರಿ ಬೋದನುಮಾ 1 ಸರಸಿದ ಭವರುದ್ರ ಇಂದ್ರರ ಬಗೆಯದ | ನೆರೆ ಕಾಮ ಗೆಲುವವ ರಾರೆಲಮಾ | ಭಾಗವತ ಶುಕ ಹನುಮಂತನು ಮೆರೆವ ಭೀಷ್ಟ ದೇವ ನಲ್ಲೇನುಮಾ 2 ವೈಕುಂಠದೊಳು ಸನಕಾದಿಕರೊಳು ಹೊಕ್ಕ | ಆ ಕೋಪ ಕಾನುವ ನಾರೆಲಮಾ | ಸಾಕಿ ಬೆಳೆಸಿದ ಶಾಂತಿಯ ನೆಲೆಯಿಂದ | ಪ್ರಖ್ಯಾತ ಕದರಿಯು ಕೇಳಲಮಾ 3 ಧರಿಯಿತ್ತ ರಾಮಗ ಸ್ಥಳ ವಿಲ್ಲೆಂದರು ಬ್ರಾ | ಹ್ಮರು ಲೋಭಗೆದ್ದ ವನಾರೆಲಮಾ | ಮರುಳ ಕೇಳು ಧನ ತೃಣ ಸಮ ಬಗೆದರು | ಕರ್ಣ ರಲ್ಲೇನು ಮಾ 4 ಬೆಟ್ಟದಿ ಉಡಿಹಾಕಿ ಕೊಳ್ಳಲು ಹೋದನ | ಶಿಷ್ಯ ಮೋಹನ ಗೆಲುವ ನಾರೆಲ ಮಾ | ಮುಟ್ಟಿ ಬೇಡಲುಳಿವ ಮಹನ ತಂದಿಟ್ಟನು | ಸೃಷ್ಟಿ ಮನುಜ ಚಿಲ್ಹಾಳಲ್ಲೇನು ಮಾ 5 ಭ್ರಗು ಮುನಿದಕ್ಷನು ಕಾರ್ತೃ-ವೀರ್ಯಾದಿಯ | ಬಗೆಯದ್ದ ಮದ-ವಳಿ ದಾರೆಲ ಮಾ | ಜಗ ಹೊಡೆತನವಿದ್ದು ಬಾಗಿ ನಡೆದ ನಮ್ಮ | ಸುಗುಣ ಜನಕರಾಯ ನಲ್ಲೇನು ಮಾ 6 ಹುಚ್ಚಾದ ವಶಿಷ್ಟನೊಳು ವಿಶ್ವಾಮಿತ್ರನು | ಮತ್ಸರಿಲ್ಲದವ ನಾರೆಲ ಮಾ | ಎಚ್ಚರಿಸಿದ ಸುಯೋಧನಗ ವಿಜಯತನ | ಸಚ್ಚರಿತ ಧರ್ಮ ನಿಲ್ಲೇನು ಮಾ 7 ಬಗೆ ಬಗೆ ವಿಷಯ ದುಪಾಯಗಳೆನಗುಂಟು | ನಿಗದಿಯ ನಡೆನುಡಿ ಕೇಳೆಲ ಮಾ | ಭಗವದ್ಭಾವ ಸರ್ವ ಭೂತದಿ ನೋಡಲು | ವಿಗುಣವೆ ಸದ್ಗುಣ ಭಾಸುದ ಮಾ 8 ನಿನ್ನ ಬಲವ ಕಂಡೆ ಶರಣವ ಹೊಕ್ಕೆನು | ಬೋಧ ಕೇಳೆಲ ಮಾ | ಸನ್ನುತ ಮಹಿಪತಿ ಸುತ ಪ್ರಭು ನೆಲೆದೋರಿ ಮನ್ನಿಸಿ ಹೊರೆವನು ಬಾರೆಲಮಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೋಧದ ಘನಮಳೆಯುಸುರಿದು ಮುಕುತಿಬೆಳೆಯು ಬಂದುದು ಪ ಮಾಯೆಯ ಬಲು ಬಿಸಿಲುತಾಪ ಕಾಯದೊಳಗೆ ಹೆಚ್ಚುತಿರಲು ಹೇಯವೆನಿಸಿ ಜನನಮರಣ ಮುಮುಕ್ಷುತ್ವ ಮೋಡಗವಿದು 1 ಸುವಿಚಾರದ ಮಿಂಚು ಹೊಳೆದು ಶ್ರುತಿಶಿರಗಳ ಗುಡುಗು ಹೊಡೆದು ಶ್ರವಣದ ಸುಳಿಗಾಳಿ ಬೀಸಿ ಭವತಾಪವ ಹರಿಸುತಿರಲು 2 ವೈರಾಗ್ಯದ ರಂಟೆ ಹೊಡೆದು ಶಮೆದಮೆಗಳ ಹರತೆಯಾಗಿ ಪರಮಾರ್ಥದ ಬೀಜ ಬಿದ್ದ ನರಜನ್ಮದ ಹೊಲದ ಮೇಲೆ 3 ದೃಷ್ಟಿಯೊಳಗಿನಾನಂದ ಸೃಷ್ಟಿಯಾಗಿ ತೋರಿ ಚಂದ ಶ್ರೇಷ್ಠನಾದ ಶಂಕರಗುರುವರನ ಸಹಜಕರುಣೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಬ್ಯಾಡವೊ ಕುವಾದಿ ಬ್ಯಾಡವೊ ಪ ಬ್ಯಾಡವೊ ಕೇಳು ಕುವಾದಿ ನೀ ನಾಡುವದುಚಿತವಲ್ಲ ಧಾದಿ | ಆಹಾ | ಮೂಢ ನಿನಿಗದಾವ ಖೋಡಿ ಬೋಧಿಸಿದನೊ ನಾಡಿಗೊಡಿಯ ರಂಗಗೀಡು ನೇನೆಂಬದುಅ.ಪ ಎಲ್ಲ ಜೀವರು ದೇವವೊಂದೆ ಭೇದ ವಿಲ್ಲೆಂದಾಡುವುದು ಧಂದೆ ಯಮ ಕೊಲ್ಲದೆ ಬಿಡ ನಿನ್ನ ಮುಂದೆ ನಿನ್ನ ಹಲ್ಲು ಮುರಿವನೊಂದೊಂದೆ || ಆಹಾ || ಉಳ್ಳಿಗಡ್ಡಿಯ ಉದ್ದಿ ಬೆಳ್ಳಗೆ ತೊಳೆದರೆ ಅಲ್ಲಕ್ಕೆ ಸರಿಯೇನೊ ಬಲ್ಲವರೊಪ್ಪಾರು 1 ಇದ್ದು ನೀ ಇಲ್ಲೆಂತೆಂಬಿ ಕಾಲಿ ಲೊದ್ದರೆ ಬಲು ನೊಂದು ಕೊಂಬಿ ಇ ಲ್ಲಿದ್ದವರೆಲ್ಲ ಬ್ರಹ್ಮ ನಾನೆಂಬಿ ಆ ಪರ ಬುದ್ಧಿಯಿಂದ ಶುದ್ಧ ಎಂತೆಂಬಿ || ಆಹಾ || ಬಿದ್ದುಹೋಯಿತು ನಿನ್ನ ಸಿದ್ದಾಂತವೆಲ್ಲವು ಸದ್ದು ಎನ್ನ ಕೂಡ ಗೆದ್ದು ಹೋಗಲಾರಿ ಬ್ಯಾಡವೊ 2 ಒಬ್ಬ ಬ್ರಹ್ಮ ಎಲ್ಲಾ ಮಾಯವೊ ಇ ನ್ನೊಬ್ಬನೆ ಎಲ್ಲಿಹ ಸುಖವೊ ಕುಹಕ ಶಾಸ್ತ್ರವೆಲ್ಲ ಮೃಷವೋ ಉಬ್ಬಿ ಆಡುವುದು ನಿರಯವು || ಆಹಾ || ಈ ಬಗೆಯಾಯಿತು ನಿನಗೊಬ್ಬಗೆ ಈ ಮಾತು ಬ್ಯಾಡವೊ 3 ಒಂದೆ ಆದರೆ ನಿನಗೆಲ್ಲ ನಿನ ತಂದೆಯಿಂದ ನೀ ಪುಟ್ಟಿದ್ದೆಲ್ಲ ನಿನ್ನ ತಂದೆ ನೀನು ಒಂದೆ ಎಲ್ಲಿ ಇನ್ನು ಛಂದಾಗಿ ನೀ ತಿಳಿಯೊ ಸೊಲ್ಲ || ಆಹಾ || ಸತಿ ನಿನಗೇನಾದಳೊ ಮನುಜ ಮಂದ ಮತಿಯೆ ತಾಯಿಗಂಡ ನೀನಾದೆಲ್ಲೋ 4 ಅನ್ನಕ್ಕೆ ಪರಬ್ರಹ್ಮನೆಂಬಿ ಈಗ ಅನ್ನ ಚಲ್ಲಲು ದೋಷವೆಂಬಿ ನಿತ್ಯ ಚನ್ನಾಗಿ ಪರಿಪೂರ್ತಿಗೊಂಬಿ ಈ ಅನ್ನ ನಾನು ವೊಂದೆ ಎಂಬೀ || ಆಹಾ || ನಿನ್ನ ದೇಹಕ್ಕೆ ರೋಗವು ಬಂದರೆ ನೀನು ಅನ್ನವ ಬಿಟ್ಟಿನ್ನು ಚನ್ನಾಗಿ ಮಲುಗುವಿ 5 ಭೇದವಿಲ್ಲೆಂತೆಂದರೆ ನೀನು ಮಾದಿಗರೆಲ್ಲ ಒಂದೇನೊ ಸರಿ ಹೋದವರೆಂಜಲ ತಿನ್ನೋ ಕಹಿ ಸ್ವಾದವು ನಿನಗಿಲ್ಲವಿನ್ನು ||ಆಹಾ|| ಓದನಾದರು ವೊಂದೆ ಮೇದ್ಯವಾದರು ವಂದೇ ಭೇದವಿಲ್ಲದೆ ತಿಂದು ಹೋದಿಯೋ ನರಕಕ್ಕೆ 6 ಎಲ್ಲವೂ ಬ್ರಹ್ಮಸ್ವರೂಪಾ ಬ್ಯಾರೆ ಇಲ್ಲೆಂದು ನಿನಗೆ ರೂಪಾ ಭೇದವಿಲ್ಲೆಂತೆಂಬುವದು ನಿಶ್ಚಯವು ವಾಕು ಸಲ್ಲದೆ ಇನ್ನು ಪೋದಾವು ||ಆಹಾ || ಬಲ್ಲಿದ ಪುರುಷನು ಮೆಲ್ಲನೆ ನಿನ್ನ ಸತಿ ಯಲ್ಲಿ ಮಲಗಿದರೆ ನೆಲ್ಲಿ ನೀ ಸೈರಿಸಿ7 ನಾಶವಿಲ್ಲೆಂಬುದೆ ಸತ್ಯ ದೋಷ ಮಿಥ್ಯ ಜಗ ಭೃತ್ಯ ಬಿಡದೆ ನಿತ್ಯ ||ಆಹಾ|| ದ್ವಾಸುಪರ್ಣವೆಂಬೊ ಈ ಶ್ರುತಿಗರ್ಥವು ಲೇಸಾಗಿ ತಿಳಿಯದೆ ಘಾಶಿಪಡುವಿ ವ್ಯರ್ಥ 8 ಈಶನು ನೀನಾದರೇನು ಸರ್ವ ದೇಶ ಪೋಷಿಸದೆ ಇಪ್ಪೋರೆ ನಿನ್ನ ಸಾ ಹಸ ವ್ಯರ್ಥ ಮಾಡೋರೆ ಹರಿ ದಾಸರು ಕಂಡು ಸಹಿಸೋರೆ ||ಆಹಾ || ಸತಿ ಸುತರು ಕ್ಲೇಶ ಪಡುವುದು ಬಿಡಿಸಲಾರಿಯೊ ಲೇಶ 9 ಗುರುದೈವವಿಲ್ಲವೊ ನಿನಗೆ ಒಬ್ಬ ಸರಿಯಿಲ್ಲ ಈ ಧರೆಯೊಳಗೆ ಯಾರು ಹಿರಿಯ ಕಿರಿಯರಿಲ್ಲ ನಿನಗೆ ನೀನು ಖರ ಶಬ್ದಕಿಂತ ಹೊರಗೆ ||ಆಹಾ || ಎರಡಿಲ್ಲಾಯೆಂಬೊದೆ ಇರುಳಿಲ್ಲ ಹಗಲಿಲ್ಲಾ ನರಕ ಸ್ವರ್ಗ ವಂದೇ ಅರಿಯಾದೆ ಮುಳುಗುವಿ 10 ವಂದನೆ ನಿಂದ್ಯಗಳೊಂದೇ ನಿನಗೆ ಗಂಧ ದುರ್ಗಂಧವು ವಂದೇ ಕೆಟ್ಟ ಹಂದಿಯೆಲ್ಲ ನೀನು ವಂದೇ ನಿನ್ನ ಕೊಂದರೆ ದೋಷವಿಲ್ಲವೆಂಬೆ ||ಆಹಾ|| ಎಂದಿಗೂ ಈ ಮಾತು ನಿಂದಾವೆ ನಿನಗಿನ್ನು ಮುಂದಕ್ಕೆ ಬರಲಾರಿ ಮಂದಮತಿಯೆ ಖೋಡಿ11 ಜಗದೊಳಗೆ ನೀ ನಿಂತು ಇದು ಜಗವಲ್ಲವೆಂಬೋದಕ್ಕಿಂತು ನೋಡಿ ನಗುವರೋ ಅಶುದ್ಧ ಜಂತು ಜಿಂಹ್ವೆ ಬಿಗಿದು ಕೋಯಿಸುವ ಯಮನಿಂತು ||ಆಹಾ || ಹಗಲು ಇರುಳು ವಂದೆ ನಗುತ ನಗುತಾ ಕಂಡು ತೊಗಲು ದೇಹವು ನಿನ್ನದಗೆ ಮಾಡುವುದು ವ್ಯರ್ಥ 12 ಸ್ವಾಮಿ ನಿನಗೆ ಬ್ಯಾರಿಲ್ಲಾ ನಿತ್ಯ ನೇಮ ಕರ್ಮವು ಬ್ಯಾರೆ ಸಲ್ಲ ಒಂದು ಕಾಮಿನಿ ನಿನಗೆ ಬೇಕಲ್ಲ ಪೂರ್ಣ ಕಾಮನು ನೀನೆಂಬೆಯಲ್ಲಾ ||ಆಹಾ|| ಗ್ರಾಮ ಭೂಮಿಗಳ್ಯಾಕೊ ತಾಮಸ ನಿನಗಿನ್ನು ತಾಮಸರಿಗೆಲ್ಲ ಸ್ವಾಮಿಯಾಗಿರು ಹೋಗೋ 13 ಕಾಣದೆ ಬಗಳುವೆ ಮಾಯಿ ನಾಯಿ ನಿನಗೆ ತಂದೆ ತಾಯಿ ಇನ್ನು ಕಾಣುತ ಬೊಗಳೋದು ನಾಯಿ ಈ ನಾಯಿ ಕಚ್ಚಿ ನೀ ಸಾಯಿ ||ಆಹಾ || ಬಾಯ ಮುರಿವಾ ನಿನ್ನ ನ್ಯಾಯದಿಂದಲಿ ವಾಯು ಕಾಯ ಖಂಡ್ರಿಸುವನೊ 14 ಇಷ್ಟು ಹೇಳಿದರೆ ನೀ ಕೇಳಿ ನೀ ವ್ಯರ್ಥ ನಿಷ್ಠುರಾಡಿ ನೀ ಬಾಳೀ ನಿನ್ನ ಕಟ್ಟಿಗೆ ಮುರಿದಂತೆ ಶೀಳಿ ಬಾಯ ಕುಟ್ಟಿ ತುಂಬುವ ಯಮಧೂಳಿ ||ಆಹಾ|| ಸೃಷ್ಟಿಗೊಡಿಯ ನಮ್ಮ ವಿಜಯವಿಠ್ಠಲನ ಮುಟ್ಟಿ ಭಜಿಸದಲೆ ಭ್ರಷ್ಟ ಮನುಜ ನೀ ಅಷ್ಟವೆಂದೆಂಬೋದು ಬ್ಯಾಡವೊ 15
--------------
ವಿಜಯದಾಸ
ಬ್ಯಾಡೋ ಒಬ್ಬರ ಮನೆಗೆ ನೀ ಪೋಗ ಬ್ಯಾಡೋ ಒಬ್ಬರ ಮನೆಗೆ ಪ ಗಾಡಿಕಾರನೆ ಕೃಷ್ಣ ಚಾಡಿ ಮಾತನು ಕೇಳಿ ಗಾಡನೆ ಕಿವಿಮುಚ್ಚಿ ಓಡಿಸಿದೆ ಗೋಪಿಯರ ಅ.ಪ ಕಟ್ಟಿದ್ದ ತುರುಕರುಗಳ ಬಿಚ್ಚಿ ಪೋಗುವದಿದು ನಿಶ್ಚಯವೆಂದು ಪೇಳ್ವರೊ ಸ್ವಚ್ಛ ಕರುಗಳ ಕಣ್ಣುಮುಚ್ಚಿ ಪಾಲೆಲ್ಲ ಕುಡಿದ ಅಚ್ಯುತನಿಗೆ ಬುದ್ಧಿ ಮತ್ತೆ ನೀ ಪೇಳೆಂಬರು 1 ಮಕ್ಕಳೆಲ್ಲರು ಕಯ್ಯೊಳು ಬಟ್ಲಲಿ ಅವ- ಲಕ್ಕಿಯ ತಿನ್ನುತಿರಲು ಘಕ್ಕನೆ ಬಡಿಯೆ ದಿಕ್ಕು ದಿಕ್ಕಿಗೆ ಚಲ್ಲೆ ಬಿಕ್ಕಿ ಬಿಕ್ಕಿ ಅಳುತಾರೆ ಗೋಪಕ್ಕ ನೀನೋಡೆಂಬರು 2 ವಾಸುದೇವಗೆ ಹರಕೆಯ ಮಾಡಿ ನವ- ನೀತ ಮೀಸಲು ಮಾಡಿರೆ ಮೀಸಲಳಿದು ಕೋತಿ ಮಾರ್ಜಾಲಗಳಿಗುಣಿಸಿ ನೀತಿ ಪೇಳುವ ಶ್ರೀನಾಥ ನೋಡೆಂಬರು 3 ಗೊಲ್ಲ ಬಾಲಕಿಯರೆಲ್ಲ ಪಾಲ್ಮೊಸರು ಮಾರೆ ಮೆಲ್ಲನೆ ಪೋಗುತಿರಲು ಗುಲ್ಲು ಮಾಡದೆ ಕವಣೆ ಕಲ್ಲಿಂದ ಕುಂಭ ಒಡೆಯೆ ಚಲ್ಲಿ ಪಾಲ್ಮೊಸರು ಸೂರೆ ನಲ್ಲೆ ನೀ ನೋಡೆಂಬರು4 ಮತ್ತೆ ಕೇಳಮ್ಮ ಯಶೋದೆ ನಾವೆಲ್ಲ ಆಣಿ ಮುತ್ತು ಪೋಣಿಸುತಿರಲು ಸುತ್ತ ಮುತ್ತಲು ನೋಡಿ ಮುತ್ತು ಸೂರೆ ಮಾಡಿದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ನೋಡೆಂಬರು5
--------------
ನಿಡಗುರುಕಿ ಜೀವೂಬಾಯಿ
ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1 ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2 ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3 ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4 ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5
--------------
ಕನಕದಾಸ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮಣ್ಯ ತೀರ್ಥ ಗುರು ರಾಜಾ | ನಿನ್ನನಮ್ಮಿದೆನೊ ಭಾಸ್ಕರ ಸುತೇಜಾ | ಭಾವಿಬೊಮ್ಮ ಮತವರುಹಿ ಮಹೋಜಾ | ಸಲಹೊಪ್ರಮ್ಮೇಯಂಗಳ ನಿಧಿಯ ಸಹೋಜಾ ಪ ಓದ್ದಾಡುತಿಹೆನೊ ಈ ಭವದೀ | ಸುಖಗದ್ದುಗೆಯನೇರ್ವಂಥ ಹಾದೀ | ತೋರಿಉದ್ಧರಿಸೊ ಬಲು ಕೃಪಾಜಲಧೀ | ಗುರುವೆಶುದ್ಧ ಬುದ್ಧಿಯ ನೀಯೊ ಮುದದೀ 1 ಯಾತ್ರೆಗಳ ಮಾಡ್ದೆನೆಂಬ | ಬಿಂಕದ್ವಾರ್ತೆಯೊಂದಲ್ಲದಲೆ ಇಂಬ | ಕಾಣೆಕ್ಷೇತ್ರ ಮೂರ್ತಿಯ ಕಾಂಬನೆಂಬ | ಆಶೆಪೂರ್ತಿ ಮಾಡೆನ್ನ ಗುರು ಬಿಂಬ 2 ಧನವನಿತೆ ವಿಷಯದಲ್ಲೀ | ಬಹಳ ಮನ ಮಾಡಿ ನೊಂದೆನಲ್ಲೀ | ಹರಿಯಮನ ಮುಟ್ಟೊ ಭಜಿಸು ಎಂಬಲ್ಲೀ | ಇನ್ನುಘನ ಜ್ಞಾನ ಭಕುತಿ ಇಲ್ಲಲ್ಲೀ 3 ಜೀವಗೆಲ್ಲಿಯ ಸ್ವತಂತ್ರಾ | ಹರಿಗುರುತಾವಲ್ಲಿ ಮಾಡುತಿಹ ತಂತ್ರ | ದಿಟವಿದುಜೀವನೇ ಮಾಳ್ಪುನೆಂಬುದೆ ಕುತಂತ್ರ | ತಿಳಿಸೊಭಾವ ಜಾನಯ್ಯನ ಸ್ವತಂತ್ರ 4 ಸಾರ ವ್ರಾತ | ತಿಳಿಸೊಜ್ಞಾನ ನಿಧಿ ಪುರುಷೋತ್ಮ ತಂತ್ರ 5 ಕಾರಕ ಕ್ರಿಯ ದ್ರವ್ಯವೆನಿಪ | ಭ್ರಮವುಮೂರರಿಂದಲಿ ದೂರ ಮಾಳ್ಪ | ಮಾರ್ಗತೋರಿಸಲಹುವುದು ಯತಿ ಭೂಪ | ತವಪದವಾರಿ ಜತೆ ಈ ನೀಚ ಬೀಳ್ಪ 6 ತ್ರ್ಯಕ್ಷಾಂಶ ಭೂತರಾದ | ಸನ್ಯಾಸಿಅಕ್ಷೋಭ್ಯ ಕರಜರಾದ | ಅಜೇಯಇಕ್ಷುಚಾಪನ್ನ ಗೆಲಿದ | ಜಯಾರ್ಯಭಿಕ್ಷುವಿನ ಮಾರ್ಗರಾದ7 ಮೋದ | ಪಡೆವದಾಯ ತೋರಿದಿ ನಿರ್ವಿವಾದ | ಇನ್ನುಗಾಯನದಿ ಮಹಿಮೆ ಅಗಾಧ | ಪೇಳ್ವಆಯತವ ನೀಯೋ ಸುಭೋಧ 8 ಬೃಹತೀ ಸಹಸ್ರ ಮಂತ್ರ | ಜಪಿಪಮಹಯೋಗದಾತ ಮಹಾಂತ | ಬೇಡ್ವೆಬೃಹತಿನಾಮಕನು ಎಂಬಂಥ | ಹರಿಯಮಹ ಮಹಿಮೆ ಕಂಡು ಹಿಗ್ವಂಥ 9 ಸೃಷ್ಟ್ಯಾದಿ ಅಷ್ಟಕಗಳ | ಗೈವಕೃಷ್ಣನ್ನ ಮಹಿಮೆಗಳ | ಕೇಳಿಹೃಷ್ಟರಾಗುವ ಜನಗಳ | ಸಂಗಕೊಟ್ಟುದ್ಧರಿಸೊ ನಮ್ಮಗಳ 10 ಸದನ 11
--------------
ಗುರುಗೋವಿಂದವಿಠಲರು
ಬ್ರಹ್ಮಾದಿವಂದ್ಯ ಪರಬ್ರಹ್ಮಾನೆ ಕಾಯೊ ಅಹಂಬ್ರಹ್ಮಭಾವವ ಬಿಡಿಸೋ ಪ ಬ್ರಹ್ಮಾನ ಜನಕನೆ ಬ್ರಹ್ಮಾಂಡದೊಡೆಯ ಬ್ರಹ್ಮಾಂಡಾಂತರ್ಯಾಮಿ ಸಲಹೋ ಅ.ಪ ಸತ್ಯವ್ರತನೆ ನೀ ಸತ್ಯಪರನು ಜಗ ಸತ್ಯ ಸೃಜಿಸಿ ಪೊರೆವೇ ನಿತ್ಯ ನಿರ್ಲಿಪ್ತನಹುದೋ 1 ಏಕರೂಪನೆ ಅನೇಕ ರೂಪದಿ ಎಲ್ಲಾ ಲೋಕಗಳೆಲ್ಲಾ ಪಾಲಿಪೆ ಲೋಕಗಳನೆಲ್ಲ ಮಾಳ್ವೆ 2 ನಿನ್ನಾಶ್ರೈಸಿದ ಭಿನ್ನಪ್ರಕೃತಿ ತ್ರಿಭಿನ್ನಗೈಸಿ ಅಂದು ಜಗದಾ ಬನ್ನ ಪಣ್ಣನ್ನ ನಿರ್ಮಿಸಿದೆಯೋ 3 ಪಣ್ಣಿಗೆ ನಾಲ್ಕು ರಸವೋ ಘನ್ನಷಡೂರ್ಮಿಗಳನ್ನೆ ನಿರ್ಮಿಸಿ ಪೊರೆವೇ 4 ಕೊಟ್ಟೆ ಸಪ್ತಧಾತು ಅಷ್ಟವಿಟಪಿಗಳನಿಟ್ಟೆ ನವಾಕ್ಷಪೊಟರೆ ದಟ್ಟದಶಚ್ಛದ ಕೊಟ್ಟು ಜಗವೃಕ್ಷ ಸೃಷ್ಟಿಯ ಮಾಡಿ ಮೆರೆದೇ 5 ಅಟ್ಟಹಾಸದಿ ಫಲಮುಟ್ಟದೆ ಇಹ ಖಗಶ್ರೇಷ್ಟನೆ ನೀ ತುಷ್ಟನೋ ಕೊಟ್ಟ ಫಲವನುಂಡಷ್ಟೂ ಸುಖಿಪ ಜೀವರೆಷ್ಟೋ ಜಗವರಿಯೇ 6 ವ್ಯಷ್ಟೀಸಮಷ್ಟಿಯ ಸೃಷ್ಟೀಯೊಳು ನೀನೆ ಶ್ರೇಷ್ಠನೇ ವ್ಯಾಪಿಸಿರುವೇ ದೃಷ್ಟಿಗೋಚರವಲ್ಲ ಅಷ್ಟಕರ್ತೃ ಪರಮೇಷ್ಟೀಜನಕ ಸಲಹೋ 7 ಅಪ್ರಾಪ್ಯಮನೋವಚ ತ್ವತ್ ಪ್ರಾಪ್ತಿಎಂತಯ್ಯ ತ್ವತ್ಪ್ರಸಾದವಿಲ್ಲದೇ ಎನ್ನ ಬಂಧಪ್ರಕೃತಿಯನೆ ಹರಿಸೋ 8 ಸೃಷ್ಟಿಯೊಳಗೆ ಸ್ವನಿಷ್ಠೆಯಿಂದಲೀ ಜಗದೃಷ್ಟೀಗೋಚರನಾಗುವೆ 9 ಮುಮುಕ್ಷುಗಳಿಗೆ ಸಾಕ್ಷಿ ಮನದಕ್ಷಿಯೊಳು ಪೊಳೆವೇ 10 ಭಕ್ತಿವಿರಹಿತ ದುರ್ಯುಕ್ತಕಾರ್ಯದಿ ಮನ ಸಕ್ತವಾಗಿಹುದು ತ್ವಧ್ಭಕ್ತಿಯ ಕೊಡು ನಿತ್ಯ11 ಹತ್ತಿಬಹುದೂ ಬೆನ್ಹತ್ತಿಕರ್ಮವು ಮತ್ತೆ ಸುತ್ತೀಸುತ್ತುತ ಜನ್ಮವಾ ಎನಗೆ ಉತ್ತಮಗತಿ ತೋರದೇ12 ಘೋರದುರಿತ ಪರಿಹಾರ ಮಾಡಿ ಪೊರೆ ಮಾರಾರಿಪಿತವಂದ್ಯ ಚಾರು ಚರಣಸ್ಮರಣಾರಾಧನೆ (ಅದು) ಸಾಕೋ 13 ಸಾರಿದೆನೋ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸ ವಿಠಲಾ ಪಾರುಗಾಣಿಸಿ ಪೊರೆಯೋ 14
--------------
ಉರಗಾದ್ರಿವಾಸವಿಠಲದಾಸರು
ಬ್ರಾಹ್ಮಣನುಣಲಿಕೆ ರಾಗಿ ಹಿಟ್ಟು ತನ್ನ ಬಂಧು ಜನಕ್ಕೆ ಒಬ್ಬಟ್ಟು ಪ ಪಾಮರ ಜನರಲಿ ವಾಡಿಕೆಯಿದು | ಶ್ರೀ ರಾಮನೊಲಿವನೆ ಎಂದಿಗಾದರು ಅ.ಪ ಮಾತು ಮಾತಿಗೆ ಸಾಲಮಾಡಿ | ಬಹ ಳಾತುರದಲಿ ಓಡಾಡಿ ಜಾತುಕನಂದದಿ ಜನಗಳ ಮೆಚ್ಚಿಸಿ ಪಾತಕವಾದರು ಲಾಭವಧಿಕ 1 ದೊಡ್ಡದಾಗಿ ಮನೆಕಟ್ಟಿದರೆ -ಸಾಲ ಹೆಡ್ಡಗಾದರು ಹುಟ್ಟುವುದು ದುಡ್ಡುದೇವರಿಗಿಂತ ದೊಡ್ಡದೇವರು ಯಾವುದು? ಬಡ್ಡಿ ಹಚ್ಚು ಬರುವನೆ ಮಹರಾಯನು2 ಹೊಟ್ಟೆಗೆ ತಿಂಬುವದ್ಯಾರು ಬಲ್ಲರು? ವುಟ್ಟ ಬಟ್ಟೆಯಲ್ಲರು ನೋಡುವರು ಸಿಟ್ಟು ಬಂದರೆ ಬೆಂಕಿಯಂತವ ನಾನು ಹೊಟ್ಟೆ ಚಿಕ್ಕದು ಕಣ್ಣು ದೊಡ್ಡದು 3 ಪರಲೋಕವು ಉಂಟೆಂದು ಪೇಳು ವರರಿಯದವರು ತಾವು ಮುಂದು ನರಕವುಸ್ವರ್ಗವು ಯಾರು ನೋಡಿರುವರು ಪುರಾಣ ಶಾಸ್ತ್ರಗಳು ಯಾತಕೆ ಬಿಡಿ4 ಅತಿಥಿಗಳಿಗೆ ನೀರುಮಜ್ಜಿಗೆ | ಮೊಸರು ಸತಿಸುತರಿಗೂ ಮತ್ತು ತನಗೆ ಯಿತರರಿಗೆಲ್ಲಾ ಎಣ್ಣೆಕರೆದ ಭಕ್ಷ್ಯ ಘೃತಭಕ್ಷ ತನಗೆ ಮಾತ್ರ 5 ಎಣ್ಣೆಯು ಬಲುರುಚಿ ನಮಗೆ | ತುಪ್ಪ ವಿನ್ನೇತಕೆ ಹೆಚ್ಚು ಬೆಲೆಗೆ ಕಣ್ಣಲಿ ಕಂಡದು ಮಾತ್ರ ಸತ್ಯ | ನಾ ವನ್ಯರ ನುಡಿ ನಂಬುವುದಿಲ್ಲವು 6 ವೊರಿಗೆಲ್ಲ ನಾ ಮೇಟಿ | ಯನ್ನ ನಾರು ಪೋಲುವರು ಸಾಟಿ ನೂರೆಲೆ ಬೀಳ್ವುದು ನಮ್ಮ ಮನೇಲೀ ಘೋರ ಕ್ಷಾಮದಲಿ ನಾನೆ ಪೊರೆವೆ 7 ಪರರಂತೆ ನಾನಿರಬೇಕು | ಶ್ರೀ ಹರಿ ಇಷ್ಟು ಕೊಟ್ಟರೆ ಸಾಕು ಗುರುಹಿರಿಯರು ನುಡಿಯೇತಕವರು ಮುದು- ಕರು ಏನು ಬಲ್ಲರು ಲೌಕೀಕವ 8 ಗುರುರಾಮವಿಠಲೆಲ್ಲಿ ಭ್ರಾಂತು -ಈ ಕರೆಕರೆ ನಮಗೇಕೆ ಬಂತು ಸೇರಿತು ಬಡವರಾವು 9
--------------
ಗುರುರಾಮವಿಠಲ