ಒಟ್ಟು 8337 ಕಡೆಗಳಲ್ಲಿ , 130 ದಾಸರು , 4215 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುಷ್ಟಿ ಎಲ್ಲಿಯದು ಪ ದೃಷ್ಟಿ ಕಡಿಮೆಯು ಕಿವಿಯು ಕೇಳದು ಶ್ರೇಷ್ಠ ನಾನೆಂದು ಕುಣಿವುದಕೆಅ.ಪ ಪರಿವ್ರಾಜಕನಾಗಬೇಕೆಂ- ದುರುತರಾಶ್ರಮ ಧರ್ಮಶಾಸ್ತ್ರಗ- ಳೊರೆಯುತಿಹುದದರರ್ಥ ತಿಳಿಯದೆ 1 ಕಾಮ್ಯಕರ್ಮಳನು ತ್ಯಜಿಸಿ ಭ್ರಾಮ್ಯಜನಗಳ ನಡತೆ ಬಿಟ್ಟು ರಮ್ಯವೆಂದರಿಯುವುದು ಸೌಖ್ಯವು 2 ಎಮ್ಮೆಯೋಲ್ ತಿನ್ನುತಲಿ ಬಾಯಲಿ ಹೆಮ್ಮೆ ಮಾತುಗಳಾಡುತಿರುತಿಹ ಗ್ರಾಮ್ಯ ಜನಗಳ ಸಂಗವೆಂದಿಗು ಗತಿವಿದೂರನ ಮಾಡದೆ ಬಿಡದು 3 ಗಣ್ಯತಾನೆಂದುಕೊಳ್ಳದೆ ದಾ- ಅನ್ನಕೋಸುಗ ಪರರ ಪೊಗಳದೆ ಧನ್ಯರಡಿಗಳ ಠಾವಿನಲಿ ನಲಿ ಸುಖ 4 ಪಾಮರರು ಪ್ರತಿದಿನವು ದುಸ್ತರ ತಾಮಸ ನರಕದೊಳು ಮುಣುಗುತ್ತ ಸ್ವಾಮಿಯಾಗಿ ಮೆರೆವ ಶ್ರೀಗುರು- ರಾಮವಿಠಲನ ಮರೆತು ಕೆಡುವರು 5
--------------
ಗುರುರಾಮವಿಠಲ
ಪುಷ್ಪಸೇವೆಯ ಗೀತೆ ಪುಷ್ಪಸೇವೆಯ ನೋಡುವಾ ಬನ್ನಿರೆ ನ ಮ್ಮಪ್ರಮೇಯ ರಂಗನಾ ಪ. ಕ್ಷಿಪ್ರದಿಂದಲೆ ಬಂದು ಚಪ್ಪರದಲಿ ನಿಂದು ವಿಪ್ರರೆಲ್ಲರು ತಂದು ಪುಷ್ಪ ಸಮರ್ಪಿಸುವ ಅ.ಪ. ಮೇಷರಾಶಿಗೆ ರವಿಯು ಬರಲು ವಾಸುದೇವ ಹರಿಯು ಆಗ ಬೇಸಿಗೆ ತಾಪವ ಪರಿಹರಿಸುವೆನೆಂದು ವಾಸನೆಗಂಧವ ಮೈಯೊಳು ಪೂಸಿದ 1 ಕರ್ಪೂರದ ಕಸ್ತೂರಿ ಗಂಧವ ತಂದು [ಒಪ್ಪದಿಂ] ವಕ್ಷಸ್ಥಳದಿ ಧರಿಸಿ ವಕುಳ ಪುಷ್ಪಗಳಿಂದ ಮೌಳಿಯ [ಲಂಕ]ರಿಸಿದ ರು ಪನ್ನೀರವಲ್ಲಿಯ ಚೆನ್ನಾಗಿ ಪ್ರೋಕ್ಷಿಸಿದರು2 ಮರುಗ ಮಲ್ಲಿಗೆ ಜಾಜಿ ಮುಡಿವಾಳ ಇರವಂತಿಗೆ ಪಚ್ಚೆ ದವನ ಕೇದಿಗೆ ಪಾ ಕಮಲ ಸಂಪಿಗೆ ಪುಷ್ಪಮಾಲೆಯ ಧರಿಸಿ ಪನ್ನೀರ ತಳಿದರಾಗ 3 ಪುಷ್ಪದ ದುಬಟಿಯನು ತಂದು ನಮ್ಮ ಸರ್ಪಶಯನನಿಗ್ಹೊದ್ದಿಸೆ ಕ್ಷಿಪ್ರದಿಂದಲೇ ತೀರ್ಥಪ್ರಸಾದವನಿತ್ತು ಎ ನ್ನಪ್ಪ ರಂಗನು ಬಂದ ಒಯ್ಯಾರ ನಡೆಯಿಂದ 4 ಪರಿಪರಿ, ವಾದ್ಯಂಗಳು ಭೋರಿಡುತಿರೆ ವರಾಂಗನೆಯರು ಪಾಡೆ ಸುರರು ಭೂಸುರ ನರರೆಲ್ಲರ ಕೂಡಿ ದೊರೆಯುಮಂಟಪಕ್ಕಾಗ ಪರಮಪುರಷ ಬಂದ 5 ಅಲ್ಲಿ ಪೂಜೆಯ ಗ್ರಹಿಸಿ ರಂಗಯ್ಯ ತಾ ಎಲ್ಲರೊಡನೆ ಪೊರಟಿರೆ ವಲ್ಲಭನನು ವೀಣೆಸೊಲ್ಲಿನಿಂ ಪಾಡುತಿರೆ ಲಕ್ಷ್ಮೀ ಮೆಲ್ಲಮೆಲ್ಲನೆ ಬಂದ ಏಕಾಂತದಿ ರಂಗ 6 ಚಿತ್ರಪೌರ್ಣಮಿಯಲ್ಲಿ ಶ್ರೀರಂಗ ವಿ ಚಿತ್ರದಿಂದಲೆ ಪೊರಟು ಉತ್ತರಕಾವೇರಿ ತೀರದ ಮಂಟಪದಲಿ ನಿಂದು ಭಕ್ತವತ್ಸಲನು ಮಜ್ಜನವ ಮಾಡಿದನಾಗ 7 ಮಕರಿ ಕಾಲ್ಪಿಡಿಯಲಾಗ ಮತಂಗ ವು ಕರೆಯೆ ನಿಮ್ಮನು ಅತಿ ವೇಗದಿಂದ ಚಕ್ರದಿ ನಕ್ರನ ಕೊಂದು ಕರಿಯ ರಕ್ಷಿಸಿ ಬಂದ ಕರುಣದಿಂದಲೇ ರಂಗ 8 ಕಲಿಯುಗದೊಳಗಿರುವ ಕರ್ಮಿಗಳನ್ನು ಸಲಹುವೆನೆಂದೆನುತಾ ಕರುಣದಿಂ ದಲೆ ಅರ್ಚಾವತಾರವ ಮಾಡಿ [ಸಲೆ] ಬಿರುದು ಧರಿಸಿ ಬಂದ ವರದವೆಂಕಟರಂಗ 9
--------------
ಯದುಗಿರಿಯಮ್ಮ
ಪುಷ್ಯೋತ್ಸವ ಗೀತೆ ಮಕರಪುಷ್ಯದ ಶುದ್ಧ ಷಷ್ಟಿಯಲಿ ನಗರಶೋಧನೆ ಮಾಡಿ ಮಂತ್ರಿಯು 1 ಮೊದಲು ದಿವಸದಿ ಧ್ವಜವನೇರಿಸಿ ಭೇರಿಯಿಡೆ ಸುರರ ಕರೆದರು 2 ಯಾಗಶಾಲೆಯ ಪೊಕ್ಕು ರಂಗನು ಯಾಗಪೂರ್ತಿಯಾ ಮಾಡಿ ನಿಂದನು 3 ಯಾತ್ರದಾನವ ಬೇಡಿ ಹರುಷದಿ ಸೂತ್ರ ಧರಿಸಿದಾ ಧಾತ್ರಿಗೊಡೆಯನು 4 ಕಂದರ್ಪನಾಪಿತ ದರ್ಪಣಾಗ್ರದಿ ಹ ನ್ನೊಂದು ದಿನದಲಿ ನಿಂದ ಹರುಷದಿ 5 ಸೂರ್ಯಚಂದ್ರರು ಹಂಸಯಾಳಿ[ಸಹಿತ] ಏರಿ ಬಂದನು ಸಿಂಹ ಶರಭವ 6 ಸರ್ಪವಾಹನ ಕಲ್ಪವೃಕ್ಷವು [ಗರು ಡ] ಪಕ್ಷಿ ಹನುಮನ ಏರಿ ಬಂದನು 7 ಏಳು ದಿವಸದಿ ಚೂರ್ಣಾಭಿಷೇಕವ ಸೀಳೆಸಹಿತಲೆ ಗ್ರಹಿಸಿ ಮಿಂದನು 8 ಎಂಟು ದಿವಸದಿ ಏರಿ ತೇಜಿಯ ಬಿಟ್ಟನು ಪೇರಿ ತೇರಿನಿದಿರಲಿ 9 ಒಂಬತ್ತು ದಿನದಲಿ ಶೃಂಗರಿಸಿದಾರು ಸಂಭ್ರಮದಿಂದಲೆ ಬೊಂಬೆರಥವನು 10 ಪುನರ್ವಸುವಿನಲ್ಲಿ ಪುರುಷೋತ್ತಮನು ರಥ ವನೇರಲು ಪೊರಟುಬಂದನು11 ಸಿಂಧುಶಯನನ ಹಿಂದೆಬಂದರು 12 ಅಷ್ಟಪತಿಯನು ಅಷ್ಟು ಕೇಳುತಾ ಸೃಷ್ಟಿಗೀಶ್ವರ ರಥವನೇರಿದ 13 ಪತ್ನಿ ಸಹಿತಲೇ ಹತ್ತಿ ರಥವನು ಉತ್ತರಬೀದಿಯ ಸುತ್ತಿಬಂದನು 14 ಇಂದಿರಾಪತಿ ಇಳಿದು ರಥವನು ಚಂದ್ರಪುಷ್ಕರಿಣಿಯಲಿ ತೀರ್ಥವಿತ್ತನು 15 ಕರೆತಂದರು ಕರಿಯಮೇಲಿಟ್ಟು ಚ ದುರಂಗಗೆ ನಜರು ಕೊಟ್ಟರು 16 ಸಪ್ತಾವರಣವ ಶಬ್ದವಿಲ್ಲದೆ ಸುತ್ತಿಬಂದನು ಭಕ್ತವತ್ಸಲ 17 ಸುತ್ತಿ ಲಕ್ಷ್ಮೀಗೆ ಇತ್ತು ಸೇವೆಯ ಭಕ್ತ ಭಾಷ್ಯಕಾರರಿಗೆ ಒಲಿದು ನಿಂದನು 18 ತನ್ನ ಚರಿತೆಗಳನು ಕೇಳುತ ಪನ್ನಗಶಯನನು ಪರಮ ಹರುಷದಿ 19 ಬಂದ ಸುರರ ಆನಂದದಿಂದಲೇ ಮಂದಿರಕ್ಕೆ ತಾ ಕಳುಹಿ ರಂಗನು 20 ಬಿಚ್ಚಿ ಕಂಕಣ ನಿಂದ ಹರುಷದಿ ಅರ್ಥಿಯಿಂದಲೆ ಅಚ್ಚುತಾನಂತ 21 ಏರಿ ಆಳಂಪಲ್ಲಕ್ಕಿ ಹರುಷದಿ ಒ ಯ್ಯಾರದಿಂದ ಬಂದ ರಂಗನು 22 [ಮೋಕ್ಷ] ಕೊಡುವನು ಮುದ್ದುವೆಂಕಟರಂಗನು 23
--------------
ಯದುಗಿರಿಯಮ್ಮ
ಪುಸಿಬಲು ಆಶ್ಚರ್ಯವೆಲ್ಲ ಪ ಬಲ್ಲದ ಗಂಡುತಾನಲ್ಲ ಬೇಡಿ ಗೋಕುಲಕೆಲ್ಲ 1 ಅಷ್ಟ ವರುಷವಿನ್ನು ತುಂಬಿದುದಿಲ್ಲ ಇಷ್ಟರೊಳಗೆ ಹೆಣ್ಣು ಮಮತೆಗಳಿಲ್ಲ ಸೃಷ್ಟಿಗೆ ಬಲು ಚೋದ್ಯವಾಗಿದೆಯಲ್ಲ ದೃಷ್ಟಿಗೆ ನಮಗೇನು ದಿಟ ಕಾಣೊದಿಲ್ಲ 2 ಬಲರಾಮಗೋವಳರಲ್ಲಿ ಮಂಗಳಮಹಿಮ ಲಕ್ಷ್ಮೀಶನೇಬಲ್ಲ 3
--------------
ಕವಿ ಪರಮದೇವದಾಸರು
ಪೂಜಾ ಮಾಡೋಣ ಬಾರೆ ಶ್ರೀ ಲಕುಮಿಯ ಪೂಜಾ ಮಾಡೋಣ ಬಾರೆ ಪ. ವನಜನ ನೇತ್ರೆಯ ತ್ರಿಜಗನ್ಮಾತೆ ಪ್ರಖ್ಯಾತೆ ಅ.ಪ. ಅರ್ಥಿಯಿಂದಲಿ ಇಟ್ಟು ಚಿತ್ತದೊಲ್ಲಭನ ಸ್ತುತಿಸಿ ಬೇಡಿಕೊಂಡು ಮತ್ತೆ ನಿಮಗೆ ಕರವೆತ್ತಿ ಪ್ರಾರ್ಥಿಸುತಲಿ 1 ಗಂಧಪುಷ್ಪ ವಸ್ತ್ರಾಭರಣ ಆನಂದ ದೀಪಗಳಿಂದ ಇಂದು ನಾ ಪೂಜಿಪೆ ಮಂದಿರದೊಳು ಆನಂದಭರಿತಳಾಗಿ ಬಾ 2 ರುಕ್ಮೀಶವಿಠಲನ ಪಟ್ಟದ ರಾಣಿ ವಕ್ಷಸ್ಥಳದಲಿನಿಂತು ನಲಿಯುತ ಬಾ ಭಕ್ತಜನರ ಮನೋಭೀಷ್ಟವ ಸಲಿಸುತ ಬಾ 3
--------------
ಗುಂಡಮ್ಮ
ಪೂಜಾನುಷ್ಠಾನವ ಯೋಚಿಸಿ ಮನದೊಳುಪೂಜೆ ಷೋಡಶಗಳ ಮಾಜದೆ ಮಾಡಿರೋ ಪ ಉಷಃ ಕಾಲದಲೆದ್ದು | ಝಷಕೇತು ಪಿತ ನಾಮಉಸುರು ತಿಪ್ಪುದೇ ಪೂಜೆಯೋ 1 ಶೌಚ ಬಾಹ್ಯವು ಮೃತ್ತು ಶೌಚ ಮಾಡಿಕೊಂಡುಶುಚಿಷತ್ತು ನಿನ ನಾಮ ಉಚ್ಚರಿಪುದೆ ಪೂಜೆಯೋ2 ತುಲಸಿ ಮೃತ್ತಿಕೆ ಹಚ್ಚಿ | ತುಲಸಿ ವಂದನೆ ಮಾಡಿಅಲಸಾದೆ ಕೃಷ್ಣನ ವಲಿಸೂವುದೇ ಪೂಜೆಯೋ 3 ಗೋವನೆ ಬಳಸುತ್ತ ಗೋಪುಚ್ಛ ಪಿಡಿಯುತ್ತಗೋವ ವಂದಿಪುದೆಲ್ಲ ಗೋಪಾಲ ನಿನ ಪೂಜೆಯೋ4 ಸ್ನಾನ ಸಂಧ್ಯಾನ ಮೇಣೂಧ್ರ್ವ ಪುಂಡ್ರವ ಧರಿಸಿಭಾನುಗಘ್ರ್ಯವ ನೀಯೆ ಶ್ರೀನಿವಾಸ ಪೂಜೆಯೋ 5 ಪಾದ ತೀರ್ಥ ಸೇವನೆ ಪೂಜೆಯೋ 6 ಅಷ್ಟ ಮಹಾಮಂತ್ರ ಶಿಷ್ಪನಾಗುತ ಹೃದಯಅಷ್ಟ ಕಮಲದಲ್ಲಿ ಧ್ಯಾನ ಮಾಳ್ಪುದೆ ಪೂಜೆಯೋ 7 ಮಂಟಪೋತ್ತಮ ಪೂಜೆ ಸುಷ್ಠು ಕಲಶ ಪೂಜೆಶ್ರೇಷ್ಠ ಪಂಚಾಮೃತ ಪೀಠ ಶಂಖ ಪೂಜೆಯೋ 8 ಘಂಟನಾದಾ ಅಖಂಡ ಶ್ರೇಷ್ಠ ದೀವಿಗೆ ಪೂಜೆಪೀಠಾವರಣ ಹೃತ್ಪೀಠ ಚಿಂತನೆ ಪೂಜೆಯೋ 9 ಮೂರ್ತಿ ಗುರುಮೂತ್ರ್ವೆಕ್ಯವೆ ಪೂಜೆಯೋ || ಚಿಂತಿಸಿ ಸ್ವಾಂತಸ್ಥ ಬಿಂಬನೋಳೈಕ್ಯವಚಿಂತಿಸುತ್ತಾನೇಕ ಗೈವ ವೈಭವ ಪೂಜೆಯೋ 11 ಹೃತ್ಪುಂಡರೀಕಗೆ ಕಲ್ಪ ತರುವನೆ ಬೇಡುತ್ತಪ್ರೀತ್ಯಾದ ಮಾನಸ ಪದಾರ್ಥಗಳ ಪೂಜೆಯೋ 12 ಪೂರ್ಣ ಶೃತಿಯ ಭಾವ ಚೆನ್ನಾಗಿ ಗ್ರಹಿಸುತ್ತಪೂರ್ಣನ ಕಳೆಯೊಂದು ಪ್ರತಿಮಾದಲ್ಲಿರಿಸೋ 13 ನಿಷುಸೀದ ಶ್ರುತಿಯಂತೆ ವಸುದೇವ ಕೃಷ್ಣನೆಅಸಮ ಪೂಜಕ ಪೂಜ್ಯ ಅವನೇವೆ ತಿಳಿಯೊ 14 ಬಾಹ್ಯದರ್ಚನೆಗಳು ಶ್ರೀ ಹಸ್ತದಿಂದಲಿವ್ಯಾಹರಣೆಂಬೋದೆ ಹರಿ ಪೂಜೆಯೋ 15 ಆವಾಹನಭಿಷೇಕ ನೈವೇದ್ಯಾದಿ ಪೂಜೆದೇವಗಾರುತಿ ಶಂಖ ಭ್ರಮಣಾದಿ ಪೂಜೆಯೋ 16 ಸರ್ವವನರ್ಪಿಸಿ ಅಸ್ವಾತಂತ್ರ್ಯವ ಗ್ರಹಿಸಿಶರ್ವಾದಿ ವಂದ್ಯ ಬಿಂಬಗೆ ಸರ್ವ ಪೂಜೆಯೋ 17 ಸರ್ವಾಪರಾಧವ ಸರ್ವೇಶನಲಿ ಪೇಳಿವೈಶ್ವ ದೇವಾದಿಗಳ್ ಸತ್ಕರ್ಮಗಳೆ ಪೂಜೆಯೋ 18 ಯತಿಗಳರ್ಚನೆಯನ್ನು ಮತಿಯಿಂದ ಗೈಯುತ್ತಸುತ ವಿಪ್ರಾದಿಯ ಸಹ ಹುತಶೇಷ ಮೆಲ್ಲೋದೆ ಪೂಜೆಯೋ 19 ಪ್ರಾಣಾಗ್ನಿ ಹೋತ್ರಾನು ಸಂಧಾನದಲಿ ಮದ್ದುಪ್ರಾಣನ ಪ್ರಾಣ ವೈಶ್ವಾನರಗೀಯೋದೆ ಪೂಜೇ 20 ಅಂತರಂಗದ ಪೂಜೆಗೊಲಿದ ಸಂತತ ಹರಿಕಂತು ಪಿತನು ಗುರು ಗೋವಿಂದ ವಿಠಲಾ 21
--------------
ಗುರುಗೋವಿಂದವಿಠಲರು
ಪೂಜಿಪೆ ನಾ ಪರಮಪುರುಷನರಸಿ ಲಕ್ಷ್ಮಿಗೆ ಪ. ತೇಜಮಾದ ಭದ್ರಪೀಠದಿ ರಾಜೀವಾಕ್ಷಿ ಲಕುಮಿಯ ಅ.ಪ. ಧ್ಯಾನಮಾವಾಹನವ ಮಾಡಿ ಸ್ನಾನ ವಸವ ತೊಡಿಗೆ ತೊಡಿಸಿ ಪೂಜಿಸುವೆನು 1 ಕುಸುಮ ಮಾಲೆಯಿಂದ 2 ಕದಳೀ ಖರ್ಜೂರ ದ್ರಾಕ್ಷಿ ಮಧುರ ದಾಳಿಂಬ ನಾರಿಕೇಳ ಕರ ಚರಣ ತೊಳೆದು ಸದಮಲೆಗಾರುತಿ ಬೆಳಗುವೆನು 3 ಸ್ವಸ್ತಿ ಪೇಳುತ ವರಗಳ ಬೇಡಿ ಮುಕ್ತಿದಾತೆ ಮಾಂಗಲ್ಯ ಭಾಗ್ಯವನಿತ್ತು ಪಾಲಿಸೆಂದು ಕರವ ಮುಗಿದ 4 ಅಷ್ಟೈಶ್ವರ್ಯದಿಂದ ಮೆರೆವ ದಿಟ್ಟ ಮೂರುತಿ ಶ್ರೀ ಶ್ರೀನಿವಾಸನ ಕರುಣಿಸೆಂದು 5
--------------
ಸರಸ್ವತಿ ಬಾಯಿ
ಪೂಜಿಸುವೆನೆ ತುಳಸಿ ನಿನ್ನ ಬೇಗ ಸಲಹೆ ನೀ ಪ. ಜಾಜಿ ಮಲ್ಲಿಗೆ ಕುಸುಮದಿಂದ ಪೂಜೆಗೈಯ್ಯವೆ ಅ.ಪ. ಧ್ಯಾನ ಆವಾಹನೆಯಿಂದ ಶ್ರೀ ವರನ ಸಹ ನಾನಾ ಮಂಗಳ ದ್ರವ್ಯದಿ ನಾನು ಪೂಜಿಪೆ 1 ವೃಂದಾವನದಿ ಮೆರೆಯುವವಳೆ ಸುಂದರಾಂಗಿಯೆ ಇಂದು ಕರುಣಿಸೆ 2 ಗೋಪಾಲಕೃಷ್ಣವಿಠ್ಠಲನ ರೂಪ ತೋರೆ ನೀ ಪಾದ ತೋರಿ ಕಾಪಾಡೆ ದೇವಿ 3
--------------
ಅಂಬಾಬಾಯಿ
ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂಉರ್ವಿಯೊಳು ಜನಿಸಿದೆನೊ ಕೃಷ್ಣ ಪ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣಅ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆಕಷ್ಟ ಪಟ್ಟೆನು ಕೇಳೋ ಕೃಷ್ಣತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ-ಗೆಟ್ಟು ಶೋಕಿಪೆನೋ ಕೃಷ್ಣಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆಅಟ್ಟಿ ಬಡಿವುತಲಿಹರೊ ಕೃಷ್ಣದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆಮುಟ್ಟುವುದು ದೂರು ನಿನಗೆ ಕೃಷ್ಣ1 ಕಾಶಿಯಾ ವಾಸವನು ಬಯಸಿ ಬಹು ದಿನದಿಂದಘಾಸಿ ಪಟ್ಟೆನು ನಾನು ಕೃಷ್ಣಈ ಶರೀರವನಾಂತು ಹೀನಾಯಗೊಂಡೆನುನೀ ಸಲಹಬೇಕಯ್ಯ ಕೃಷ್ಣಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊಸಾಸಿರನಾಮದ ಮುದ್ದುಕೃಷ್ಣ 2 ಲೋಕದೊಳು ಎನ್ನಂಥ ಪಾಪಿಗಳು ಉಂಟೆಂದುನೀ ಕೇಳಿ ಬಲ್ಲೆಯಾ ಕೃಷ್ಣಸಾಕೇಳು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನು ಮಾಡಯ್ಯ ಕೃಷ್ಣರಾಕೇಂದು ಮುಖಿ ದ್ರೌಪದಿಯ ಮಾನವನು ಕಾಯ್ದುಆಕೆಗಕ್ಷಯವಿತ್ತೆ ಕೃಷ್ಣನಾ ಕಾಣುವಂದದಲಿ ಉಡುಪಿಯಾದಿಕೇಶವಏಕೆ ದರಶುನವೀಯೆ ಕೃಷ್ಣ 3
--------------
ಕನಕದಾಸ
ಪೆಣ್ಣೆಂದರಿದು ಮೆಚ್ಚಿ ಕೆಡಬೇಡ ನಿನ್ನ ತಿನ್ನುವ ಮರಿಗಿದು ತಿಳಿ ಮೂಢ ಪ ತಾಯಾಗಿ ಮೊದಲು ನಿನ್ನ್ಹಡೆದಿಹ್ಯದು ಪುನ: ಮಾಯಾಗಿ ಬೆನ್ನ್ಹತ್ತಿ ಸುಡುತಿಹ್ಯದು ಬಾಯೊಳು ಮೊಲೆಯಿಟ್ಟು ಬೆಳೆಸಿಹ್ಯದು ಮತ್ತು ಕೈಯೊಳು ಮೊಲೆಯಿಟ್ಟು ಕೊಲುತಿಹ್ಯದು 1 ಸುತನೆಂದು ಮುದ್ದಿಟ್ಟು ಒಲುತಿಹ್ಯದು ಮತ್ತು ಪತಿಯೆಂದು ನಿಜಮತಿ ಸುಲಿತಿಹ್ಯದು ರತಿಗೊಟ್ಟು ಅತಿಮೋಹದಾಡುವುದು ನಿನ್ನ ಗತಿಗೆಡಿಸಿ ಜವಗೀಡು ಮಾಡುವುದು 2 ಕಣ್ಣುಸನ್ನೆಯ ಮಾಡಿ ಕರಿತಿಹ್ಯದು ಬಹು ಬಣ್ಣ ಮಾತಾಡಿ ಸೋಲಿಪುದು ಕುನ್ನಿಯಂತೆ ನಿನ್ನ ಮಾಡುವುದು ಬಲು ಬನ್ನಬಡಿಸಿ ಬಾಯಿ ಬಿಡಿಸುವುದು 3 ಶ್ವಾನನಂದದಿ ಕೂಗಲ್ಹಚ್ಚುವುದು ಮಾನಾಭಿಮಾನ ತೊರೆಸುವುದು ನಿಜ ಜ್ಞಾನಕೆಡಿಸಿ ಪಾಪದ್ಹಾಕುವುದು 4 ತಂದ ಪುಣ್ಯವನೆಲ್ಲ ಸೆಳೆತಿಹ್ಯದು ಬಲು ಮಂದನೆನಿಸಿ ಕುಣಿಸ್ಯಾಡುವುದು ತಂದೆ ಶ್ರೀರಾಮಪ್ರೇಮ ಕೆಡಿಸುವುದು ನಿಜಾ ನಂದ ಮುಕ್ತಿಗೆ ಕಿಡಿ ಹಾಕುವುದು 5
--------------
ರಾಮದಾಸರು
ಪೇಳುವೆ ಮನವೆ ನಿನಗೊಂದು ಕುಳಿತು ಲಾಲಿಪುದು ಮುಕ್ತಿಗೆ ಹಾದಿ ಎಂದು ಪ ಹರಿಯ ಚರಣಾಬ್ಜ್ಬಕೆ ಎರಗು ಬಡ ವರನ ಕಂಡರೆ ಅಕಟಾ ಎಂದು ಮರಗು ಹರಿ ಭಕುತಿಗೆ ನೀನೆ ಕರಗು ಇಹ ಪರದಲ್ಲಿ ಉತ್ತಮ ಯೆಂದೆನಿಸಿ ತಿರುಗು 1 ಅಹಂಕಾರ ಮಮಕಾರ ಬಿಟ್ಟು ಅಂಬು ರುಹಲೋಚನನ ಸುಮತವನ್ನೆ ತೊಟ್ಟು ಕುಹಕ ಮತಿಗಳನ್ನು ಬಿಟ್ಟು ಗುರು ದ್ರೋಹಿಗಳಾದವರ ಹೃದಯವÀ ಮೆಟ್ಟು 2 ಅಲ್ಪ ಬುದ್ಧಿಗಳನ್ನು ಮಾಣು ಒಂದು ಸ್ವಲ್ಪವಾದರು ಜ್ಞಾನದ ಮಾರ್ಗ ಕಾಣು ಬಲ್ಪಂಥದಲಿ ಬಾಹದೇನು ಬಿಡು ಅಲ್ಪಗಳ ಸಂಗ ಎಂದು ಸಾರಿದೆನು 3 ಸ್ವಾಮಿಯ ಪಾದವ ನೋಡು ನಿನ್ನ ಕಾಮ ಕ್ರೋಧಗಳೆಲ್ಲ ಕಳೆದು ಈಡಾಡು ನಾಮ ಕೀರ್ತನೆಗಳನ್ನು ಪಾಡು ತ್ರಿ ಧಾಮದೊಳಗೆ ಒಂದು ಇಂಬನೆ ಬೇಡು 4 ಎಚ್ಚತ್ತು ತಿಳಿದುಕೋ ಸೊಲ್ಲಾ ನಾನು ಮುಚ್ಚುಮೊರಿಲ್ಲದೆ ಪೇಳಿದೆನಲ್ಲಾ ಅಚ್ಚುತ ವಿಜಯವಿಠ್ಠಲನಲ್ಲದಿಲ್ಲ 5
--------------
ವಿಜಯದಾಸ
ಪೊಡೆದಾ ದೈವವೇ | ಅವರೆ ಕುಸುಮ ವಿರಚೇ ಶಿವ ದೀಪದಿಂವೆಗ್ಗಳವೇನೊ ನಿನಗೆ | 1 ಶಿರವನೆ ತರಿಸಿ ತೊಲಗಿದ ಪದಾರ್ಥದಿಂದೇನಯ್ಯಾ | ಹಂಸ ಕು ಬೇರ ನಿನ್ನವರಾಗಿದೆ | ಬರಿದೆಯಲಾ ಯೆನ್ನ ಸುವರ್ಣ ಪುಷ್ಪವೆ | ಪರಿಪರಿಗಾಯನ ನಾರದಾದ್ಯರು ಪಾಡೆ ಪೊಗಳಬಲ್ಲನೆ ನಿನ್ನನಗಣಿತ ಸ್ತೋ ನಿನಗೆರಗಿ ಕೈಮುಗಿವೆನೊ ತರಳತನದಲ್ಲಿ ನಾನು2
--------------
ವಿಜಯದಾಸ
ಪೊರಿಯ ಬೇಕೆಲಾ |ಮರಿ ನೀನು ಛಲಾ ಪ ಏಸು ಜನ್ಮದಿ ನಿನ್ನ ದಾಸನೆನಿಸಿದೆ | ಉ |ದಾಸ ಮಾಡದೆ ಮಹಿದಾಸ ಎನ್ನನು ನೀ 1 ನಿನ್ನನೆ ಮರೆವುದು ಎನ್ನ ಸ್ವಧರ್ಮವು |ನಿನ್ನ ಘನ್ನತಿಗಿದು ಸನ್ನು ಮತವೆ ಹರಿ 2 ಸರುವಜ್ಞ ನೀನೆಂದೂ ಒರೆದವು ಶೃತಿಗಳು |ಮರೆವುದುಚಿತವೇನೊ ಗುರು ಪ್ರಾಣೇಶ ವಿಠಲಾ 3
--------------
ಗುರುಪ್ರಾಣೇಶವಿಠಲರು
ಪೊರೆದ್ಯಾಕೋ ಸೀತಾನಾಥ ತಂದೆ ಮಂದರಧರ ಎನ್ನೊಳ್ದಯ ಮಾಡಲೊಲ್ಲ್ಯಾಕೋ ಸೀತಾನಾಥ ಪ ಕರಿರಾಜ ನಿಮ್ಮಯ ಚರಣ ಸರೋಜಕ್ಕೆ ಸೀತಾನಾಥ ಹರಿ ಬರೆದೋಲೆ ನಿನ್ನನು ಕರೆಕಳುಹಿದನೇನೊ ಸೀತಾನಾಥ ತರುಣಿ ದ್ರೌಪದಿ ತನ್ನ ಅವಮಾನಕಾಲಕ್ಕೆ ಸೀತಾನಾಥ ಸಿರಿವರ ನಿನ್ನ್ವೊಯ್ಕುಂಠಕೆ ತಾರು ಕೊಟ್ಟಿರ್ದಳೇ ಸೀತಾನಾಥ 1 ಕಂಬದಿ ಬಾರೆಂದಂಬುಧಿಗೆ ಬಂದ್ಹೇಳ್ದನೇ ಸೀತಾನಾಥ ಡೊಂಬೆ ಮಾಡುವ ದೂರ್ವಾಸಮುನಿಯಂದು ಸೀತಾನಾಥ ನಿನ್ನ ಬೆಂಬಲಿಟ್ಟು ಅಂಬರೀಷ ವ್ರತಗೈದನೇ ಸೀತಾನಾಥ 2 ವರಧ್ರುವ ಧರೆಯೊಳು ಜನಿಸುವ ಕಾಲಕ್ಕೆ ಸೀತಾನಾಥ ದೇವ ಕರವ ಪಿಡಿದು ನಿಮ್ಮ ಜೊತೆಲಿ ಕರೆತಂದನೇ ಸೀತಾನಾಥ ಪರಮಪಾಪಿ ಅಜಮಿಳನಗೆ ಪದವಿಯು ಸೀತಾನಾಥ ದೇವ ಕರುಣಿಸಿದವನಿನಗೆ ನೆರವಾಗಿರ್ದನೇನೊ ಸೀತಾನಾಥ 3 ಛಲದ ರಾವಣನಳಿದು ವರವಿಭೀಷಣನಿಗೆ ಸೀತಾನಾಥ ಲಂಕ ಕರುಣಿಸಿ (ದಿವೈಕುಂ) ಠ ಬಾಗಿಲೊಳಿರ್ದನೇ ಸೀತಾನಾಥ ಸೀತಾನಾಥ ಅವ ಇಳೆಯೊಳು ನಿಮಗೆ ಪಕ್ಷದ ಗೆಳೆಯನೆ ಸೀತಾನಾಥ 4 ಹಿಂದಿನ ಹಿರಿಯರವರನು ದುರಿತದಿಂ ಸಲಹಿದಿ ಸೀತಾನಾಥ ಇದು ಚೆಂದವೆ ನಿನಗೆ ಕಂದನ ಬಿಡುವುದು ಸೀತಾನಾಥ ಕಂಟಕ ಬೇಗ ಬಯಲ್ಹರಿಸಯ್ಯ ಸೀತಾನಾಥ ರಂಗ ಸಿಂಧುಶಯನ ಮಮ ತಂದೆಯೇ ಶ್ರೀರಾಮ ಸೀತಾನಾಥ 5
--------------
ರಾಮದಾಸರು
ಪೊರೆಯದಿರುವರೇ _ ಶ್ರೀ ರಮಣಾ ಪ ದುರಿತಗಜಕೆ ನೀ ಪಂಚಾನನಾ ಅ.ಪ. ಸಿರಿಯ ಮದದಿ ನಾನರಿಯದೆ ಪೋದರೆ ಗರುಡಗಮನ ನೀ ಮರೆತುಬಿಡುವರೇ ಕರುಣಶರಧಿ ಸರಿ ಬಿರುದು ಪೊಳ್ಳಾಗದೇ ಚರಣಪಿಡಿವೆ ಪೊರೆ ಮರುತನೊಡೆಯ ಹರಿ1 ಪಾತಕಿ ಎಂಬುವ ನೀತಿಯನುಡಿದೊಡೆ ಪೂತರಮಾಡುವ ಖ್ಯಾತಿಯ ಬಿಡುವೆಯ ನಾಥನೆ ನಂಬಿದೆ ಕಾತರ ಪಡುತಿಹೆ ಪ್ರೀತಿಲಿ ಕಾಣಿಸು ಆರ್ತಿವಿದೂರ 2 ನಡಿಯುವ ಚರಣವು ಎಡುವುದು ಸಹಜವೆ ಮೃಡ ಭೃಗು ಭೀಷ್ಮರು ದುಡುಕಲಿಲ್ಲೆ ದೊರೆ ಮಿಡಕಿ ನಡುಗುತಿಹೆ ನಡೆವುದು ಜಗಬಿಡೆ ಕಡಲಶಯನ ಪಿಡಿ ಬಿಡದೆ ಕೊಡುತ ರತಿ 3 ಸಿರಿವಿಧಿ ಶಿವನುತ ಸ್ವರತ ಸ್ವತಂತ್ರನೆ ಶರಣರ ಪೊರೆಯುವ ವರಗುಣ ಭೂಷಣ ಅರಿಯೆನುಪಾಯವ ಶರಣುಶರಣೈಯ ಪರಮಪುರುಷ ಭಗಸರಸದಿ ನಲಿನಲಿ 4 ಸಾಕುವ ಬಿಂಬನೆ ನೂಕಿದೆ ಯಾತಕೆ ಹಾಕುತ ಮಂಕನು ಏಕಾಯತನ ನಾಕರೊಡೆಯ ಭವನೂಕುತ ಬೇಗನೆ ಸ್ವೀಕರಿಸೆನ್ನನು ಶ್ರೀ ಕೃಷ್ಣವಿಠಲಾ 5
--------------
ಕೃಷ್ಣವಿಠಲದಾಸರು