ಒಟ್ಟು 7503 ಕಡೆಗಳಲ್ಲಿ , 128 ದಾಸರು , 4808 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮಹಿಮೆ ತಿಳಿಯುವುದೊಂದಗಾಧ ದೇವ ಉನ್ನತೋನ್ನತಚರಿತ ನುತಸಹಜಭಾವ ಪ ಯೋಗಿ ನೀನಾದಯ್ಯ ಜೋಗಿಯೆಂದೆನಿಸಿದಿ ಆಗಾಧ ದೇಹ ತಾಳ್ದಿ ಬಾಗಿಲವ ಕಾಯ್ದಿ ಮಿಗಿಲಾದ ರೂಪಾದಿ ಜಗವ ಪಾಲಿಸಿದಿ 1 ಕರುಣದಿಂದಾಳಿದಿ ವರವಿತ್ತು ಕಳುಹಿದಿ ಧರೆಗೆ ಭಾರೆನಿಸಿದಿ ತಿರುಗಿ ನೀ ಮುನಿದಿ ಘಟ ನೀಡ್ದಿ ಪರಮಭಟನೆನಿಸಿದಿ ಶರಗಳನು ಪೋಣಿಸಿದಿ ಧುರದೊಳಗೆ ಕೊಂದಿ 2 ತಮ್ಮನ ಪಕ್ಷ್ಹಿಡಿದಿ ತಮ್ಮನಣ್ಣನಕೊಂದಿ ತಮ್ಮಗಧಿಕಾರ ಗೈದಿ ಸಮ್ಮತದಿ ಕಾಯ್ದಿ ತಮ್ಮನಿಗೆ ಭಾವನಾದಿ ತಮ್ಮನಿಗೆ ಬೋವನಾದಿ ತಮ್ಮನಿಂ ಕೊಲ್ಲಿಸಿದಿ ಸಮ್ಮತವ ಗೈದಿ 3 ಮಾವಗಳಿಯನಾದಿ ಮಾವಗೆ ವೈರ್ಯಾದಿ ಮಾವನ ಕುಲವಳಿದಿ ತಾಯನ್ನ ಕಾಯ್ದಿ ಗೋವು ಪಾಲಕನಾದಿ ಗೋವಿಗೆ ಮಗನಾದಿ ಗೋವುಗಳನಾಳಿದಿ ಗೋವುಕುಲ ಪೊರೆದಿ 4 ಮೀನಾದಿ ಕೂರ್ಮಾದಿ ದಾನ ಬೇಡುವನಾದಿ ಕಾನನ ಮೃಗನಾಗಿ ಧ್ಯಾನಿಪರಕಾಯ್ದಿ ದೀನಪಾಲನೆ ನಿನ್ನ ಜಾಣಮಹಿಮಂಗಳನ್ನು ಹೀನರರಿವರೆ ಮಮಪ್ರಾಣ ಶ್ರೀರಾಮ 5
--------------
ರಾಮದಾಸರು
ನಿನ್ನ ಮಹಿಮೆಗಿಂಥವರು ಹೊಣೆಯೆ ? ಪ ಚಿನ್ಮಯನೆ ಸಕಲಭುವನಾಧಾರವೆಂಬುದನುಬಣ್ಣಿಸಲು ಎನ್ನಳವೆ ಪನ್ನಗೇಂದ್ರನು ಹೊಣೆಯೆ ? ಅ ವಿಧಿ ಕೌಸ್ತುಭ ರತ್ನವರ ಪೀತ ವಸನ ಕ್ಷೀರಾಬ್ಧಿ ಹೊಣೆಯೊಶರಣರಿಚ್ಛೆಯಲಿ ನೀನಿದ್ದುದಕೆ ದ್ರೌಪದಿಯುಕರಿರಾಜ ಶಂಭು ಅಂಬರೀಷ ಹೊಣೆಯೊಕರುಣಿಯು ಉದಾರಿ ನೀನೆಂಬುದಕೆ ಧ್ರುವರಾಯಮರುತಸುತ ಸಾಂಧೀಪ ಹೊಣೆಯೊ ಕೃಷ್ಣ 1 ಸುಲಭ ಭಕುತರ ಕಾಯ್ವನೆಂಬುದಕ್ಕೆಲೊ ದೇವಫಲುಗುಣನು ವಿದುರ ಅಕ್ರೂರ ಹೊಣೆಯೊಛಲದಂಕನೆಂಬುದಕೆ ಬಾಣನು ಹಿರಣ್ಯಕನುಜಲಧಿ ದಶಮುಖ ಕಾರ್ತವೀರ್ಯ ಹೊಣೆಯೊಒಲಿಸಿ ನಿನ್ನನು ತುತಿಸಿ ಮುಕುತಿಯನು ಪಡೆದುದಕೆಸಲೆ ಶ್ರುತಿಯು ಗಿರಿಜೆ ಅಜಮಿಳನು ಹೊಣೆಯೊನಳಿನಾಕ್ಷ ಸತ್ತ್ವಗುಣ ನಿನಗೆ ಉಂಟೆಂಬುದಕೆಸಲಿಲಜೋದ್ಭವ ಭೃಗುಮುನೀಂದ್ರ ಹೊಣೆಯೊ 2 ವಾತ ಸತ್ತ್ವಗುಣ ಹೊಣೆಯೊಶ್ರೀಕಾಂತ ನೀನಿತ್ತ ವರವು ಸ್ಥಿರವೆಂಬುದಕೆನಾಕೇಶಜಿತನ ಪಿತನನುಜ ಹೊಣೆಯೊಲೋಕದೊಳು ಕಾಗಿನೆಲೆಯಾದಿಕೇಶವ ಭಕ್ತಸಾಕಾರನೆಂಬುದಕೆ ಸಕಲ ಭುವನವೆ ಹೊಣೆಯೊ 3
--------------
ಕನಕದಾಸ
ನಿನ್ನ ಮೂರುತಿಯ ತೋರಸೋ | ರಂಗಯ್ಯಾ ಪ ನಿನ್ನ ಮೂರುತಿಯ ತೋರಿಸೆನ್ನ ಕಂಗಳಿಗೆ ದಯ | ವನ್ನು ಬೀರಿ ಭವಭಯ ಬನ್ನವನು ಬಿಡಸೋ ರಂಗಯ್ಯಾ ಅ.ಪ. ಅರುಣನಖಾಂಗುಲಿ ಹೊಳೆವಾ | ಕೋಮಲ ಪಾದಾ| ಎರಡು ಜಂಘೆ ಜಾನುರವಾ |ಕಟಿ ಜಗದು | ದರನಾಭಿ ಸಿರಿವತ್ಸವಾ | ಕಂಬುಗ್ರೀವದ | ಕರಚತುಷ್ಟಯ ಮೆರೆವಾ | ಕರುನಗೆದಂತಾ | ಧರಮಿರುಪಕದಪುಶೃತಿ | ಅರಗಂಗಳನಾಸಾ | ಪೆರೆ ನೋಸಳಲಳಕದಾ ರಂಗಯ್ಯಾ 1 ಕೌಸ್ತುಭ ಕೇಯೂ | ರನ್ನು ತೋಳಬಂದಿ ಸ್ಪುರದಾ | ಕಡಗ ಮುದ್ರಾಂ | ಅಂದುಗೆ ಗೆಜ್ಜೆ | ನೀಲ ಪರಿ ಮಂದ ಮತಿಯೆನ್ನದೆ ಕರುಣಿಸಿ ರಂಗಯ್ಯಾ2 ನಿನ್ನ ಕಳೆಗಳ ತೋರಿಸಿ | ಹಮ್ಮಮತೆಯಾ | ಮನ್ನೀನವಗುಣ ಬಿಡಸೆ | ಸಂತರ ಕೈಯಾ | ಅನುದಿನ ಒಪ್ಪಿಸಿ | ಸನ್ನುತ ಮಹಿಪತಿ | ಚಿನ್ನನೊಡೆಯನೇ ಬಹ | ಜನ್ಮ ಜನ್ಮಾಂತರದಲಿ ತನ್ನವನೆಂದೆನಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ವಲಿಸುವ ಭಾಗ್ಯ ನಿನ್ನ ಭಕ್ತರಿಗೆ ನೀ ಕೊಟ್ಟು ಸನ್ನುತ ಚರಿತರಿಗೀವೆಯಲ್ಲದೆ ನಿನ್ನ ಮಹಿಮೆಯ ತೋರುವ ಅನ್ಯರಿಗೆ ಈ ಭಾಗ್ಯವುಂಟೆ ನಿನ್ನ ವಲಿಸಲು ಸಂಪನ್ನ ಶ್ರೀ ಶ್ರೀನಿವಾಸ 1 ಸೂರ್ಯ ತೇಜಕೆ ಪ್ರತಿ ಕೋಟಿಸೂರ್ಯ ತೇಜ ಧರಿಸಿ ಆರ್ಯ ರಾಮರಾಯರಾ ಕರಗತದಿ ಮೆರೆದೊ ಜಗತ್ಸಿರಿಯೆ ಆ ಆರ್ಯರಾ ಮಡದಿ ಸೀತಾಬಾಯಿ ಎಂಬುವರಾ ಆ ಈರ್ವರಾ ಸೇವೆಯಲಿ ಮೆರೆದ ಸುರತರುವೆ ಶ್ರೀ ಶ್ರೀನಿವಾಸ 2 ನಿನ್ನ ಸೇವಾಕಾರ್ಯ ಆವಾವುದೆಂದ್ಯೋಚಿಸದೆ ನಿನ್ನ ಸೇವಾಕಾರ್ಯದಲಿ ನಿರುತ ತಪವನೆಗೈಯೆ ಮಾನವ ವೇಷಧಾರಿಣಿಯರಾಗಿ ಪುಟ್ಟಿಹರೂ ಜಗದಿ ಬಕುಳಾವತಿಯ ತೆರದಿ ನಿನ ಸೇವ ನಿರತದಿ ಶ್ರೀ ಶ್ರೀನಿವಾಸ 3 ಸಾರ ಗುರುಮುಖದಿಂದ ತಿಳಿದು ನಿ ಲಕುಮಿ ಆವಾಹಿಸಿದ ಬಿಲ್ವರÀಸವ ನಿನಗರ್ಪಿಸಿ ಅಕಳಂಕ ಮಹಿಮರು ಸೇವಿಸಿ ಸೌಳ ವರುಷ ತಪವಗೈದಿಹರೊ ಗುರುವಾಜ್ಞೆಯಲಿ ನಿನ್ನ ಸೇವಿಸೆ ಶ್ರೀ ಶ್ರೀನಿವಾಸ 4 ನಿನ್ನ ಸೇವಕರಾದ ಆ ಮಾನುನಿಯರನುದ್ಧರಿಶೆ ನಿನ್ನ ಇಂಥ ಆಟಗಳ ಗೋಪಿಗೆ ಕೃಷ್ಣ ತೋರಿದಂದದಲಿ ಸನ್ನುತಾಂಗನೆ ತೋರಿ ಭಕ್ತರಭೀಷ್ಟವನು ಉನ್ನತದಿ ಸಲಿಸೆ ಜಗದಿ ಘನ್ನ ಸಂಪನ್ನ ಲೀಲೆನೋಡಲು ಶ್ರೀ ಶ್ರೀನಿವಾಸ 5 ಗಂಗಾಜನಕನೆ ನಿನ್ನುಂಗುಟದಿಂ ಬಂದ ಗಂಗೆಯ ಕೇಸರಿತೀರ್ಥದಾ ಸೊಬಗೇನೆಂದು ಬಣ್ಣಿಪೆನೊ ಶ್ರೀ ರಂಗನಾಥಾ ಸರ್ವರಿಗೆ ದಾತಾ ರಂಗನಾಥನೇ ನಿನ್ನ ಪಂಚಾಮೃತದ ಅಭಿಷೇಕ ಕಂಗಳಿಗ್ಹಬ್ಬವೊ ಜಗದ ಜಂಗುಳಿ ಭಕ್ತರಿಗೆನುತೆ ಶ್ರೀ ಶ್ರೀನಿವಾಸಾ 6 ತನ್ನ ತೊಡೆಯೊಳಗಿಟ್ಟು ಉನ್ನತದ ಆಭರಣ ಗೋಪಿ ಇಡುವ ತೆರದಿ ಇನ್ನು ನಿನಗಲಂಕಾರ ಮಾಡುವದೇನ ಬಣ್ಣಿಪೆನೋ ಸನ್ನುತ ಚರಿತರವರೈಸೇ ನಿನ್ನ ನೇವೇದ್ಯ ಘನ್ನ ಮಂಗಳಾರುತಿ ಬೆಳಗಿ ನಿನ್ನ ಸ್ತುತಿ ಮಾಡುತ್ತ ನಿನ್ನ ತೀರ್ಥವನ್ಹಂಚುವರೊ ಭಕ್ತರಿಗೆಲ್ಲ ಶ್ರೀ ಶ್ರೀನಿವಾಸ 7 ಏನು ಸುಕೃತವ ಮಾಡಿ ಈ ಮಾನುನೀಯರು ಪುಟ್ಟಿಹರೊ ಗಾನಲೋಲನೆ ನಿನ್ನ ಲೀಲೆ ಜಗಕೆ ಬೇರೆ ತೋರೆ ಮನಸಾರೆ ಸಾನುರಾಗದಿ ಬಂದು ನಿನ್ನ ಭಕ್ತರಾ ಮಂದಿರಕೆ ದೀನನಾಥನೆ ನಿನ್ನ ಸಹಿತದಲಿ ಮಾನುನಿಯು ದಾನವಾಂತಕ ನಿನ್ನ ಮಹಿಮೆ ತೋರುವರೊ ಏನೆಂದು ಬಣ್ಣಿಸಲಿ ಎನ್ನಳವೇ ಶ್ರೀ ಶ್ರೀನಿವಾಸ 8 ಒಬ್ಬೊಬ್ಬ ಭಕ್ತರಲಿ ಒಂದೊಂದು ಮಹಿಮೆಯನು ಅಬ್ಬರದಿ ತೋರುವರೊ ನಿನ್ನ ಮಹಿಮೆಯ ದೇವ ಮತ್ತೊಬ್ಬರಾ ಮನೆಯಲ್ಲಿ ಪ್ರಸಾದದಾ ಮಹಿಮೆಯನು ಮತ್ತೊಬ್ಬರಾ ಮನೆಯಲಿ ತೀರ್ಥದಾ ಮಹಿಮೆ ತೋರಿ ಅಬ್ಬರದಿ ಮೆರೆಸುವರೋ ಶ್ರೀ ಶ್ರೀನಿವಾಸ 9 ಗಾನ ಪ್ರಿಯನೆ ನಿನ್ನ ಕಲ್ಯಾಣದುತ್ಸವವು ಏನೇನು ಮಾಡುವ ಕಾರ್ಯ ನಿನ್ನದೇ ಎಂದು ಆನಂದದಿಂದ ಮಾಡುವರೊ ಹರಿಯೆ ದೋರೆಯೆ ದೀನನಾಥ ಎನ್ನ ಹೃದಯದಲಿ ನೀನಿಂತು ನುಡಿದಂತೆ ನುಡಿದಿರುವೆ ಅನಾಥ ಬಂಧು ಶ್ರೀ ಶ್ರೀನಿವಾಸಾ ಶ್ರೀಶಾ 10
--------------
ಸರಸ್ವತಿ ಬಾಯಿ
ನಿನ್ನ ವಶದಲಿ ಇದ್ದು ಇದ್ದು ಮುನ್ನೆ ದುರ್ವೃತ್ತಿಗೆ ಪೋಗುವುದೆನ್ನ ಮನಾ ಪ ಚಿತ್ರವಾದ ಕರಿಯ ಶೃಂಗರಿಸಿ ಮೇಲೆ ಛತ್ರಿಗೆ ನೆರಳಲ್ಲಿ ಕುಳ್ಳಿರೆನೆ ಆನೆ ಕೆಳಗೆ ಇಳಿದು ಬೂದಿಯೊಳಗಿಪ್ಪ ಕತ್ತೆ ಏರುವನೆಂದು ಇಚ್ಛೆ ಮಾಡುತಲಿದೆ 1 ಕಾಲಕಾಲಕೆ ಸುಧಿಯ ಸವಿದು ಮಾಣಿಕದ ಉಯ್ಯಾಲೆ ಮೇಲಾಡುತ್ತ ಬಾಳು ಎನೆ ತಾಳವೃಕ್ಷವನೇರಿ ತಲೆಕೆಳಗಾಗಿ ತಾ ಬೀಳುವೆನೆಂದು ಅಪೇಕ್ಷೆ ಮಾಡುತಲಿದೆ 2 ವೇಣಿ ಮಾಧವರಾಯಾ ನಿನ್ನ ಚರಣಾಂಬುಜ ಕಾಣುವ ಪ್ರಕಾಶ ಉದಾಸಸಿ ಕ್ಷೋಣಿಯೊಳಗೆ ಮಹಾ ಕತ್ತಲೆ ಬಯಸುವೆ ಹೀನನಂತೆಯಾದೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ನಿನ್ನ ಸಂಭ್ರಮದೊಳಗೆ ನೀನೆ ಇರುತಿರುವಿ ಎನ್ನಯ್ಯ ಮರೆದೇನು ಮುನ್ನಾದ ಬವಣೆ ಪ ಅನ್ನವನು ಕಾಣದೆ ಅನ್ನದಿಕ್ಕಿಲ್ಲದೆ ಉನ್ನತೋನ್ನತವಾದ ಚಿನ್ನದರಮನೆಯಲ್ಲಿ ಬಿನ್ನವಿಲ್ಲದೆ ಸಿರಿಯರನ್ನಬಡಿಪ ಮದವೋ 1 ಮಡದಿಯನು ಕಳಕೊಂಡು ಎಡೆಬಿಡದೆ ಅಡವ್ಯಡವಿ ಹುಡುಹುಡುಕಿ ಬೇಸತ್ತು ಕಡುಬಾಯ ಬಿಡುವಗೆ ಮೃಡಮಹಾದೇವತೇರು ಸಡಗರದಿ ನಿನ್ನಡಿಯ ದೃಢದಿ ಪೂಜಿಪರೆಂಬ ಕಡುಗರವದಿರವೇ 2 ನೀರೊಳ್ಜೀವಿಸಿ ಬಲು ನಾರುತಲಿರುವವಗೆ ಹಾರ ಹೀರಾವಳಿ ಗಂಧ ಕಸ್ತುರಿಯ ಮದವೋ ಸಾರಿ ಮನು ಮುನಿಗಳು ಸೇರಿ ನಿಮ್ಮಯ ಚರಣ ವಾರಿಜ ಭಜಿಪ ಮದ ಮೀರಿಹ್ಯದೋ ನಿನಗೆ 3 ತಿರುಕನು ತಾನಾಗಿ ಧರೆಯ ದಾನವ ಬೇಡಿ ಧರೆವರನ ಬಾಗಿಲವ ನಿರುತ ಕಾಯ್ದವಗೆ ಸುರರು ಗಂಧರ್ವ ತುಂಬುರರು ಸಂಗೀತದಿಂ ಹರುಷಗೊಳಿಪುದಕೆ ನೀ ನೇತ್ರ ಮುಚ್ಚಿರುವ್ಯೋ 4 ಭಾರಬೆನ್ನಲಿ ಪೊತ್ತು ಘೋರ ಬಡುತಿರುವವಗೆ ಈರೇಳುಲೋಕದ ದೊರೆಯೆಂಬಹಂಕಾರವೋ ಮಾರಪಿತ ಗತಿಯೆಂದು ಸೇರಿ ಭಜಿಸುವ ದಾಸರರಿಕೆ ಪೂರೈಸದಿದು ತರವೆ ಶ್ರೀರಾಮ 5
--------------
ರಾಮದಾಸರು
ನಿನ್ನ ಸೇರಿದೆ ಮಹಾಲಿಂಗ ಎನ- ಗಿನ್ಯಾರು ಗತಿ ಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗ ಪ. ನಿನ್ನಂತೆ ಕೊಡುವ ಉದಾರ ತ್ರಿಭು- ವನ್ನದೊಳಿಲ್ಲದಕ್ಯಾವ ವಿಚಾರ ಮುನ್ನ ಮಾರ್ಕಾಂಡೇಯ ಮುನಿಯ ಭಯ ವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1 ಸರ್ವಾಪರಾಧವ ಕ್ಷಮಿಸು ಮಹಾ- ಗರ್ವಿತರಾಶ್ರಯಕ್ಕೊಲ್ಲದು ಮನಸು ಶರ್ವರೀಶಭೂಷ ನಿನ್ನ ಹೊರ- ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2 ಅಂತರಂಗದ ದಯದಿಂದ ಯುದ್ಧ- ಮಂ ತೊಡಗಿದೆ ಪಾರ್ಥನೊಳತಿಚಂದ ಪಂಥದ ನೆಲೆಯನ್ನು ತಿಳಿದು ಸರ್ವ- ದೊಡ್ಡದು ನಿನ್ನ ಬಿರುದು 3 ಸಿದ್ಧಿಸು ಸರ್ವಸಂಕಲ್ಪ ಅಡ್ಡ- ಬಿದ್ದು ಬೇಡುವೆ ನಿನಗ್ಯಾವದನಲ್ಪ ಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು4 ಅಂಜಿಕೆ ಬಿಡಿಸಯ್ಯ ಹರನೆ ಪಾ- ವಂಜಾಖ್ಯವರಸುಕ್ಷೇತ್ರಮಂದಿರನೆ ಸಂಜೀವನ ತ್ರಿಯಂಬಕನೆ ನವ- ಸಲಹೊ ಪಂಚಮುಖನೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನ ಸ್ವಹಿತ ಮಾಡೋ ಪ್ರಾಣಿ | ನಿನ್ನ ಸ್ವಹಿತ ಮಾಡೋ ಪ ಶರಣರ ಕೂಡಿ ಸ್ಥಿರ ಮನಮಾಡಿ | ಹರಿಯ ಕೊಂಡಾಡಿ ಪರಗತಿ ಬೇಡಿ | ಮರೆದು ಈಡ್ಯಾಡೀ 1 ಹಳೆಯ ದುಃಸಂಗಾ ಕಳೆದಂತರಂಗಾ | ದೊಳು ಧ್ಯಾನದಂಗಾ ಬಲಿಯಲು ರಂಗಾ | ಹೊಳೆವ ಕೃಪಾಂಗಾ 2 ಸಂದೇಹಲಿಂದು ಧರೆಯೊಳು ಬಂದು | ಮರೆವದು ಕಂಡು ಗುರುಮಹಿಪತೆಂದು ಗುರುತಕ ಹೊಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ಹಿತವಾ ಪಡಿಯೋ ಹರಿಯ ಭಜಿಸಿ ಪ ಸನಕ ಸನಂದನ ಮುನಿಜನರಾಡುವ | ಘನ ಸುಖ ಮಾರ್ಗದಿನಡಿಯೋ ಹರಿಯ ಭಜಿಸಿ1 ಕುಂಟಿಣಿ ಗಣಿಕಾ ಜ ಮೇಳ ರುದ್ಧರಿಸಿದಾ | ಕಂಠದಿ ನಾಮವ ಜಡಿಯೋ ಹರಿಯ ಭಜಿಸಿ2 ಗುರುವರ ಮಹಿಪತಿ ನಂದನು ಸಾರಿದಾ | ಶರಣರ ಸಂಗವ ವಿಡಿಯೋ ಹರಿಯ ಭಜಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನನೀ ತಿಳಿದು ನೋಡು | ಯನ್ನ ಮನವೇ ಪ ನಿನ್ನ ನೀ ತಿಳಿದು ನೋಡು | ಎನ್ನ ಹಿತವು ದಾವುದೆಂದು | ಮುನ್ನಿನವ ಗುಣ ಜರಿದು | ಇನ್ನಾರೆ ನೀ ಮನವೇ 1 ಒಳ್ಳೆವರಾ ಕಂಡು ಬಾಗಿ | ಬಡಿವಾರ ನೀಗಿ | ಸೊಲ್ಲವ ನಾಲಿಸು ಅವರಾ | ನಿಲ್ಲದೇ ನೀ ಮನವೇ 2 ತಂದೆ ಮಹಿಪತಿ ದಯಾ | ದಿಂದ ಪಡೆಯೋ ವಿಜಯಾ | ಮಂದ ನಾಗದಿರು ಬಂದಾ | ಛಂದ ವಿಂದು ಮನವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನನು ನಂಬಿದೆ ಶಾರದೆ ನೀನು ಪ್ರಸನ್ನಳಾಗಬಾರದೆ ಪನಿನ್ನನು ಬಿಟ್ಟg ಎನ್ನಯ ದುಃಖಗಳನ್ನು ಕಳೆಯುವರಿನ್ನಾರಿರುವರು ಅ.ಪಹೇಳಿಕೊಳ್ಳುವೆ ತಾಯೇ ದುಃಖವಕೇಳು ಮಹಾಮಾಯೆಹಾಳು 'ಷಯಗಳ ಜಾಲದಿ ಸಿಕ್ಕಿಹಗೋಳನು ನಾನೀಗ ತಾಳಲಾರೆನು ಹಾಯ್ 1ಆಟದ ವಸ್ತುಗಳ ಕೊಟ್ಟು ಚೆಲ್ಲಾಟವಾಡುವೆಯಾಸಾಟಿ ಇಲ್ಲದೀಆಟವ ಸಾಕು ಸಾಕುಕಾಟವಕಳೆನೀಂ ಭೇಟಿಯ ಕೊಟ್ಟು 2ಹರಿಹರಿಯೆನ್ನದೆ ಈ ನಾಲಿಗೆಯನರಗಳು ಸೊಕ್ಕಿಹವುನಿರುತವು ಹರಿನಾಮ ಭರವೆಡೆಬಿಡದಂತೆಹರಸಿ ಕಾಯೆ ಚಿಚ್ಛರೀರದ ತಾಯೆ3
--------------
ಹೊಸಕೆರೆ ಚಿದಂಬರಯ್ಯನವರು
ನಿನ್ನನೆ ತಿಳಿದು ನೀ ನೋಡು ಕಂಡ್ಯಾನೀ ನನ್ನ ತಿಳಿಯೆ ನೀ ಶಿವನು ಕಂಡ್ಯಾ ಪ ಆದಿ ಮಧ್ಯಂತರ ಅನಾದಿ ಕಂಡ್ಯಾನಾದ ಬಿಂದು ಕಳಾತೀತ ಕಂಡ್ಯಾಭೇದಾಭೇದಕೆ ಅಭೇದ ಕಂಡ್ಯಾ ನೀವಾದ ಸುವಾದ ವರ್ಜಿತನು ಕಂಡ್ಯ 1 ಮೂರು ಗುಣಕೆ ನೀ ಮೂಲ ಕಂಡ್ಯನೀನಾರು ಅರಿಗಳಿಗತ್ತತ್ತ ಕಂಡ್ಯತೋರುವುದಕೆ ನೀ ತೋರ್ಕೆ ಕಂಡ್ಯನೀ ಮಾರನಟ್ಟುಳಿಗೆ ಮಹೇಶ ಕಂಡ್ಯ 2 ಮಂಗಳ ತರಕೆ ಮಂಗಳನು ಕಂಡ್ಯ ನೀಮಂಗಳ ಮೂರುತಿ ಮಹಾತ್ಮ ಕಂಡ್ಯಮಂಗಳ ವಸ್ತುಮಾಪತಿಯು ಕಂಡ್ಯ ನೀಮಂಗಳನಿಗೆ ಮಾಯೆ ಮಾತು ಕಂಡ್ಯ 3 ಸಿಂಧು ಕಂಡ್ಯ4 ಪಾದ ಸೇರು ಕಂಡ್ಯಗುರು ಕಟಾಕ್ಷವ ನೀನು ಪಡೆಯೋ ಕಂಡ್ಯಗುರುವೆಂದು ಎಲ್ಲವನರಿಯೋ ಕಂಡ್ಯಗುರು ಚಿದಾನಂದ ನೀನೆನ್ನು ಕಂಡ್ಯಾ 5
--------------
ಚಿದಾನಂದ ಅವಧೂತರು
ನಿನ್ನನೇ ನಂಬಿದೆನಯ್ಯಾ ಪ ನಿನ್ನನೇ ನಂಬಿದೆನಯ್ಯಾ | ಎನ್ನ ಬಿಡದಿರು ಕೈಯ್ಯಾ | ಬೀರೆಲೋದಯಾ 1 ತರಳ ತಾಯಿಯಲ್ಲದೆ | ನೆರೆಹೊರೆಯ ಬಲ್ಲದೇ | ಮರಳು ಮಂದನೆನ್ನದೆ | ಅರಹು ಕೂಡಿಸೋ ತಂದೆ 2 ಹೋದೆಣಿಕೆಯ ಬಿಟ್ಟು | ಪಾದಸ್ಮರಣೆ ಕೊಟ್ಟು | ಸಾಧುಸಂಗದಲಿಟ್ಟು | ಬೋಧಾಮೃತವನಿಟ್ಟು 3 ಜ್ಞಾನ ಭಕುತಿ ಇಲ್ಲಾ ಮೌನ ಸಾಧನವಿಲ್ಲಾ | ಏನೇನು ಸಾಧನವಿಲ್ಲಾ | ನೀನು ಪೇಕ್ಷಿಸುದಲ್ಲಾ4 ಗುರು ಮಹಿಪತಿ ಸ್ವಾಮೀ | ಶರಣರ ರಕ್ಷಕ ನೇಮಿ | ಸುರಮುನಿಜನ ಪ್ರೇಮಿ | ಹೊರಿಯೋ ಸಾಸಿರ ನಾಮಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನನೇ ನಂಬಿಹೆನೋ ಶ್ರೀನಿವಾಸಾಪನ್ನಗ ನಗಧೀಶ ಉದಯಾದ್ರಿ ವಾಸಾ ಪ ನಿತ್ಯ ನೂತನ ಮಹಿಮ ಎತ್ತ ನೋಡಿದರತ್ತ ಮುಕ್ತ ಜನ ಸೇವ್ಯಾ |ಕೀರ್ತಿ ಭವ್ಯ ವಿಶಾಲ ವರ್ತಿಪುದು ಸದಾಕಾಲಆರ್ತವರಿಗಪವರ್ಗ ಮೋಕ್ಷಮಾರ್ಗಾ 1 ಸೇವ್ಯ ಸೇವಕ ಭಾವ ದಿವ್ಯ ಸುಜ್ಞಾನವನುಪ್ರೀತಿಯಿಂದೆನಗಿತ್ತು ಕಾಯಬೇಕೋ |ಪ್ರೇರ್ಯ ಪ್ರೇರಕ ನೀನೇ ಕಾರ್ಯ ಕಾರಣ ಕರ್ತೃಭಾರ್ಯರಿಂದೊಡಗೂಡಿ ವೀರ್ಯಪ್ರದನಾಗೋ 2 ಸೃಷ್ಠಿ ಸ್ಥತಿ ಸಂಹಾರ ಅಷ್ಟಕರ್ತೃಸ್ವಾಮಿನಷ್ಟ ಗೈಸಜ್ಞಾನ | ಇಷ್ಟ ಮೂರ್ತೇದಿಟ್ಟ ಗುರು ಗೋವಿಂದ | ವಿಠಲನೆ ಮದ್ ಹೃದಯಅಷ್ಟ ಕಮಲದಿ ತೋರೋ | ಶಿಷ್ಟಜನಪಾಲಾ 3
--------------
ಗುರುಗೋವಿಂದವಿಠಲರು
ನಿನ್ನಬಿಟ್ಟನ್ಯಬಲ ಮುನ್ನಿಲ್ಲಸ್ವಾಮಿ ಎನ್ನಯ್ಯ ವಿಶ್ವೇಶ ಪನ್ನಂಗಶಾಯಿ ಪ ಇನಚಂದ್ರ ಮಂಗಳಬುಧಗುರು ಭಾರ್ಗವ ಶನಿರಾಹುಕೇತು ನವಮಹರ್ದಶನು ನೀನೆ ಘನನಿಮ್ಮ ಮಹಿಮೆಯಿಂ ವಿಧವಿಧದಿ ಸೃಷ್ಟಿಗೈ ದೊನರುಹ ಭುವನಂಗಳಾಳುವವ ನೀನೆ 1 ನಕ್ಷತ್ರಯೋಗಾದಿಕರಣಂಗಳು ನೀನೆ ಪಕ್ಷಮಾಸ ಸರ್ವಕಾಲ ವಾರ ತಿಥಿ ನೀನೆ ಸುಕ್ಷೇತ್ರಯಾತ್ರ ಮಹಪುಣ್ಯತೀರ್ಥವು ನೀನೆ ಸಾಕ್ಷಾತ ನಿಖಿಲ ಶುಭಮುಹೂರ್ತಗಳು ನೀನೆ 2 ಪರಮವೇದ ಪುಣ್ಯಪುರಾಣಕಥೆ ನೀನೆ ವರ ನಿಖಿಲ ಶಾಸ್ತ್ರರ್ಥ ಮೂಲವಿಧಿ ನೀನೆ ಚರಣದಾಸರ ಪ್ರಾಣಪದಕ ಶ್ರೀರಾಮಯ್ಯ ಸ್ಥಿರಮೋಕ್ಷ ಪಾಲಿಪ ಶ್ರೀಗುರುವು ನೀನೆ 3
--------------
ರಾಮದಾಸರು