ಒಟ್ಟು 7584 ಕಡೆಗಳಲ್ಲಿ , 131 ದಾಸರು , 4531 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮ ಲಾಲಿಸು ಪುರಾಣವನು ನೀನುದ್ಧರಿಸಿ ಲೋಕಗಳಾಳ್ವ ಧರ್ಮಸಾರವನು ಪಸ್ಟೃಯ ಕ್ರಮವ ಸೂಚಿಸಲು ಮಾಯೆಯಷ್ಟಪ್ರಕೃತಿಯಾಗಲದು ಸರ್ಗ ಮೊದಲುಅಷ್ಟರಾಧಾರದ ಮೇಲೂ ಭೂತಪುಟ್ಟಿಸಿದ ಭೌತಿಕ ಪ್ರತಿಸರ್ಗವೆನಲು 1ವಿವರಿಸುತಿರೆ ವಂಶಗಳನು ಮತ್ತುವಿವಿಧ ಮನುಗಳಹ ವಿಸ್ತಾರವನ್ನುಅವರ ವಂಶಾವಳಿಗಳನು ಪೇಳಿಧ್ರುವವಾದ ಪುರುಷಾರ್ಥ ದಾರಿದೋರ್ಪುದನು 2ಇಹ ಪರಗಳ ಸುಖದಿರವ ಮೋಕ್ಷಬಹ ಯುಕ್ತಿ ಸಹ ಪೇಳ್ವ ಬಹು ಗ್ರಂಥದೊಲವಅಹುದೆಂದು ತಿರುಪತಿಯಾಳ್ವ ಬಹುಮಹಿಮ ವೆಂಕಟನಾಥ ಮನ್ನಿಸು ದೇವಾ 3 ಓಂ ಯೋಗಿನಾಂ ಪತಯೇ ನಮಃ
--------------
ತಿಮ್ಮಪ್ಪದಾಸರು
ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ
ಪರಮಪಾವನ್ನನಾಮ ಭಳಿರೆ ಸಂಗರ ಭೀಮ ಸರಸಗುಣಾಭಿರಾಮ ತರಣಿವಂಶ ಲಲಾಮ ತಾರಾನಂದನ ಪ್ರೇಮ ಪರಿಪೂರ್ಣಧಾಮ ಪಟ್ಟಾಭಿರಾಮ ಪ. ಚಿಕ್ಕಪ್ರಾಯದಲಿ ಬಲುರಕ್ಕಸಿಯನು ಸೀಳಿ ತಾಕಲದೆ ಕಾಲ್ಪೆಣ್ಗೈದು ರಾಜಮೌಳಿಯ ಬಿಲ್ಲ ಗಕ್ಕನೆ ಖಂಡ್ರಿಸಿ ಕೈವಿಡಿದು ಸೊಬಗನುಕ್ಕುವ ಜಾನಕಿಯ ಧಿಕ್ಕರಿಸುತ ಪೋಗಿ ದಿತಿಯ ಕೈಕೆಯ ಮಾತು ದಕ್ಕಲೆನುತ ಪೋಗಿ ದಂಡಕಾರಣ್ಯವ ಭೂರಿ ದಾನವಹಿಂಡ ಚಕ್ಕಂದದಲಿ ಕೊಂದ ಜಾಣ ನೀನಹುದೊ 1 ಭುವನೇಶ ಶಬರಿಯ ಪೂಜೆಯ ಕೈಕೊಂಡು ಪವನಾತ್ಮಜನ ಕಂಡು ಬರಹೇಳಿ ರವಿಯ ಸೂನನ ಕಾಣಿಸಿಕೊಂಡು ತವಕದಿಂ ವಾಲಿಯ ಹವಣರಿಯದಸುವ ಕೊಂದು ಪ್ಲವಗ ಬಲವನು ಕೂಡಿ ಬಲು ಸಮುದ್ರವ ಬಂಧ- ನವ ಮಾಡಿ ಕುಂಭಕರ್ಣ ರಾವಣನ ಸಂಹಾರ ಮಾಡಿ ಲಂಕಾರಾ ಜ್ಯ ವಿಭೀಷಣಗಿತ್ತು ಅವನಿಜೆಸಹ ಪುಷ್ಪಕವನೇರಿ ನಡೆದೆ 2 ಸುರರೆಲ್ಲ ಪೂಮಳೆಗರೆಯೆ ಸುಗ್ರೀವಾದಿ ವರರಾವಣರ ಸೇನೆ ಬೈಲಾಗಿ ನೀ ನಡೆಯೆ ಶೃಂ- ಗಾರವಾದ ಸಾಕೇತಪುರಕೆ ಭರದಿ ಬಂದು ನಿರುತ ಸೌಖ್ಯದಲಿ ನಿಂದು ಸಿರನೆಲೆವಿನಯದಿ ಚಿನ್ಮಯನಾ ಗಿರಿಯ ಶುಭಕರ್ಣವೊ(?) ಸೀತಾಲಕ್ಷ್ಮಣ ಭರತಶತ್ರುಘ್ನಯಿರೆ ಹನುಮನ ಸೇವೆ ದಿವ್ಯಸಿಂಹಾಸನವೇರಿ ಧರೆ ಆಳಿದ ಪರಿಣಾಮದಿ ಹಯವದನ ರಾಮ3
--------------
ವಾದಿರಾಜ
ಪರಮಪುರುಷ ನಿನಗೆ ಪ ಅನಾದ್ಯನಂತ ಕಾರಣ ಸರ್ವತ್ರ ತುಂಬಿರುವಗೆ ಅ.ಪ ಬಲಿಯ ದಾನವ ಬೇಡುವ ಕಾಲದಿ ನೆಲನಯೀರಡಿಯ ಗೈದು ತಳತಳಿಸುವ ದಿವ್ಯ ಪದದಿ ಚೆಲುವ ಗಂಗೆಯ ಪಡೆದವನಿಗೆ 1 ಅನೇಕ ಪಾದಗಳೆಂದು ನಿನ್ನ ಅನುತಿಹವು ಶ್ರುತಿ ತತಿಗಳು ಅವಧಿಕಾರಿಯಾದ ಮೂಢ ನಾನು ಅಲ್ಪಮತಿಯು ಸ್ವಾಮಿಯೇ 2 ಮೌನಿ ಸತಿಯಳ ಶಾಪ ಬಿಡಿಸಿದ ಪಾದಕ್ಕೆ ವನಜದಳವ ಪೋಲ್ವ ಚೆಲುವ ಪಾದಕ್ಕೆ ದನುಜರಿಪು ಗುರುರಾಮ ವಿಠಲ ಪಾದಕ್ಕೆ 3
--------------
ಗುರುರಾಮವಿಠಲ
ಪರಮಪುರುಷ ಶ್ರೀ ರಾಮನ ಪದಯುಗ ಸಿರಿರಮಣ ನಿಜದಾಸನೆಂದೆನಿಸಿದ ವರ ಕದರುಂಡಲಿ ಹನುಮಂತ ಪ. ಒಂದೇ ಮನದಲಿ ತಂದೆ ನಿನ್ನಡಿಗಳ ಪೊಂದಿದೆ ಸಲಹೈ ಹನುಮಂತ ಕುಂದುಗಳೆಣಿಸದೆ ಕಂದನ ತೆರದಲಿ ಎಂದೆಂದಿಗು ಪೊರೆ ಹನುಮಂತ 1 ವಾರಿಧಿ ದಾಟುತ ಸೇರುತ ಅರಿಪುರ ಧಾರುಣಿಜೆಯ ಕಂಡೆ ಹನುಮಂತ ನಾರಿಚೋರನಪುರ ಸೇರಿಸಿ ಅನಲಗೆ ಸೇರಿದೆ ರಾಮನ ಹನುಮಂತ 2 ಕೃಷ್ಣನ ಸೇವಿಸಿ ದುಷ್ಟರ ಕೊಲ್ಲುತ ಮೆಟ್ಟಿದೆ ಖಳರನು ಹನುಮಂತ ದಿಟ್ಟತನದಿ ಸಾಮ್ರಾಜ್ಯವಾಳಿ ಜಗ- ಜಟ್ಟಿ ಎಂದೆನಿಸಿದೆ ಹನುಮಂತ 3 ಮಿತಿಯಿಲ್ಲದ ಅತಿಖತಿ ಮತಗಳನು ಹತಗೈಸುತ ನೀ ಹನುಮಂತ ಪ್ರತಿ ಗ್ರಂಥಗಳನ್ನು ಸ್ಥಾಪಿಸಿ ಸುರರಿಗೆ ಅತಿ ಹಿತ ತೋರಿದೆ ಹನುಮಂತ 4 ಇಷ್ಟ ಫಲಪ್ರದ ತುಷ್ಟಿಬಡಿಸೊ ನೀ ಕೊಟ್ಟೀಗಭಯವ ಹನುಮಂತ ದಿಟ್ಟ ನಿನ್ನಡಿಗಳ ಭಜಿಸುವೆ ಗೋಪಾಲ ಕೃಷ್ಣವಿಠ್ಠಲ ಪ್ರಿಯ ಹನುಮಂತ5
--------------
ಅಂಬಾಬಾಯಿ
ಪರಮಪ್ರೀಯಾ ದಾಸರಾಯಾ | ಸತ್ಕವಿಜನಗೇಯಾ ಪ ಸುರತರು | ಕರಿಗಿರಿ ನಿಲಯನೆಉರುಗಾಯನ ಸಂದರುಶನ ಕೊಡಿಸಯ್ಯ ಅ.ಪ. ಆರ್ಮೂರೇಳು ನಾಲ್ಕೆಂಟು ಗ್ರಂಥ | ಅವುಗಳ ಸಾರಾರ್ಥಸಾರುತ್ತ ಭಕುತರಿಗೆ ಪುರುಷಾರ್ಥ | ಮಾರ್ಗವ ತೋರುತ್ತ ||ಚಾರು ಚರಿತ ಶ್ರೀರಮಾರಮಣನಗುಣವಾರಿಧಿಯೊಳು ಬಹು ಈಸಿದ ನಿಪುಣ 1 ಪಥ ಪುನರುದ್ಧರಿಸಿದ 2 ಪರತತ್ವ ಸಾರಾಂಬುಧಿ ಬೆಳಗುವನ ಪರಿಪರಿಕಲೆಯವನಶರಣರ ಹೃತ್ತಾಪವ ಹರಿಸುವನ | ನಿರತೈಕರೂಪನನಪರಮಾರ್ಥೇಂದು ವರೋದಯ ಕರುಣಿಸಿಧರಣಿಯ ಸುರರನು ಪೊರದೆಯೊ ಗುರುವೆ 3 ಅಂಕೀತವಿಲ್ಲದ ದೇಹಗಳೊಂದು | ನಿಷಿದ್ಧವೆಂದೂಪಂಕಜಾಕ್ಷನ ನಾಮಗಳೊಂದೊಂದು | ಬಳಸುತ ನೀನಂದೂ ಅಂಕನ ಗೈಧರಿ ಲೆಂಕತನವನಿತ್ತುಬಿಂಕದಿ ಜನ ಹೃತ್ಸಂಕಟ ಕಳೆದೀ 4 ಬಿಂಬೋಪದೇಶವೆ ತಾರಕವೆಂದೂ | ನಿಸ್ಸಂಶಯವೆಂದೂಹಂಬಾಲ ಹಚ್ಚುತ ಶರಣರಿಗೆಂದೆಂದೂ | ಕರುಣಾ ಸಿಂಧೂಬಿಂಬನು ಗುರುಗೋವಿಂದ ವಿಠಲ ಪಾದಾಂಬುಜದಲ್ಯನ ಹಂಬಲವಿರಿಸಿದೆ 5
--------------
ಗುರುಗೋವಿಂದವಿಠಲರು
ಪರಮಯೋಗಿಯ ನೋಡಿರೊ ನೀವೆಲ್ಲರು | ಪರಮಯೋಗಿಯ ನೋಡಿರೊ || ಪರಮಯೋಗಿಯ ನೋಡಿ ಪ್ರೀತಿವಂತರಾಗಿ | ನಿರಯವ ಕಳೆದು ಆನಂದ ಬೇಡುವರೆಲ್ಲ ಪ ವಾನರ ವೇಷವಾಗಿ ಪರ್ವತ ಸೇರಿದಾ | ಭಾನುನಂದನ ಮನೋಬಯಕಿಯ ಸಲ್ಲಿಸಿ || ಏನೆಂಬೆ ಬಲು ಒಂದು ರೂಪವಾಗಿ ತೋರಿ | ತಾನೆ ತನ್ನೊಳಗೆದ್ದು ದುರುಳರ ಮೋಹಿಸಿದಾ 1 ವಿಷವನುಂಡು ಮೂರು ಲೋಕದೊಳಗೆ ಮೆರೆದು | ಅಸುರ ಬಕನ ಸೀಳಿ ಧರಿಗೆ ಬಿಸುಟು | ಶಶಿಮುಖಿಯಳ ಪ್ರೀತಿಬಡಿಸಿ ಅರ್ಜುನಗೊಲಿದು | ಶಶಿಕುಲದಲಿ ಪುಟ್ಟಿ ದುರ್ಜನ ಸಂತಾಪಬಡಿಸಿ2 ಯತಿಯಾಗಿ ಜನಿಸಿ ಸುವಾಕ್ಯವ ಬಯಸಿ | ಮತಿಹೀನ ಜನರ ಶಾಸ್ತ್ರವ ಖಂಡಿಸಿ || ತುತಿಸಿದ ಭಕ್ತರ್ಗೆ ಗತಿಯ ಕೊಡುವ ಪ್ರಾಣ- ನಿತ್ಯ ಪರಮ 3
--------------
ವಿಜಯದಾಸ
ಪರಮಾತ್ಮನ ನೆನೆಯಲು ಬೇಕು ಪರತರಸುಖವನು ಪಡೆಯುವನಿದರಿಂ ದುರಿತಗಳೆಲ್ಲವ ನೀಗಲು ತಾ ಪ ಮೊದಲನೆ ಕಾರ್ಯವು ಜೀವರೆಲ್ಲರಿಗೆ ಇದು ಬಲು ಸುಲಭವು ಸಾಧನಗಳಲೀ ಪದುಮನಾಭನನು ನೆನೆಯದಿರುವವ ಅಧಮನು ಜಗದಿ ವ್ಯರ್ಥ ಜೀವಿಸುವ 1 ಎಲ್ಲ ವೇದಗಳು ಎಲ್ಲ ಶಾಸ್ತ್ರಗಳು ಎಲ್ಲ ಸಾಧನೆಗಳು ಆತನ ಪ್ರಾಪ್ತಿಗೆ ಬಲ್ಲವರಿಂದಲಿ ತಿಳಿದು ವಿಚಾರಿಸಿ ನಿಲ್ಲದೆ ಸಾಧನೆ ಕೈಕೊಳ್ಳುವುದು 2 ಕೇಳುವದೈ ಪರಮಾತ್ಮನ ತತ್ವವ ತಿಳಿವುದು ತನ್ನೊಳು ತಾನೇ ನಿರುತಾ ಪೇಳಲೇನು ಧ್ಯಾನಿಸುವುದಾತನ ಮೇಳವಿಸುವದೈ ಜೀವನ್ಮುಕುತಿ 3 ನಾರಾಯಣನೇ ಪರಮಗತಿಯು ಈ ನರಜನ್ಮಕೆ ಬಂದಿರೆ ಲಾಭವಿದೇ ಅರಿತು ಇದನು ತಾ ಸಾಧನೆ ಮಾಳ್ಪುದು ಗುರುಶಂಕರನಾ ಬೋಧಸಾರವಿದು 4
--------------
ಶಂಕರಭಟ್ಟ ಅಗ್ನಿಹೋತ್ರಿ
ಪರಮಾನಂದದಿ ಸರಸಿಜಾಕ್ಷಿಯರೆಲ್ಲ ಪರಮ ಪುರುಷನಿಗಾರತಿ ಎತ್ತುತ ಪ ಕರಿವರ ವರದನ ಸ್ಮರಿಸುತ ಸಂತತ ನವರತ್ನದಾರತಿ ಬೆಳಗಿದರುಅ.ಪ ಗೋಪಿಕಾಲೋಲನಿಗೆ ಗೋಪಾಲಕೃಷ್ಣಗೆ ಗೋವರ್ಧನೋದ್ಧಾರ ಗೋವಿಂದಗೆ ಗೋಪಸ್ತ್ರೀಯರ ಕೂಡ್ಯಾಡಿದ ಹರಿಗೆ ಗೋಪಿಬಾಲನಿಗೆ ಎತ್ತಿದರಾರತಿ1 ನವನೀತ ಚೋರಗೆ ಬೃಂದಾವನÀದಿ ವಿರಾಜಿಪಗೆ ಇಂದಿರೆ ಸಹಿತಗೆ ಕುಂದಣದಾರತಿ ಬೆಳಗಿದರು2 ಕಮಲದಳಾಕ್ಷಗೆ ಕಮಲಮುಖಿಯರೆಲ್ಲ ಕಮಲ ಮುತ್ತಿನ ಆರತಿ ಪಿಡಿದು ಕಮಲನಾಭ ವಿಠ್ಠಲನ ಪಾಡಿ ಹರುಷದಿ ಕಮಲಾಕ್ಷಿಯರು ಶೋಭನ ಪಾಡುತ್ತ 3
--------------
ನಿಡಗುರುಕಿ ಜೀವೂಬಾಯಿ
ಪರಮಾನಂದದೊಳಿರುವ ಪರಿಯನರಿ ಗರುವ ಬೇಡ ಹೇ ಮನಸಾ ಪ ಸಿರಿವರ ನಾರಾಯಣ ನಾಮಾಮೃತ ನರಘಳಿಗೆಯು ಮರೆಯದೆ ನೆನೆ ಮನಸಾಅ.ಪ ಇಂದಿರೆಯರಸನ ಸುಂದರ ಚರಣಗ ಳಂದದ ಶ್ರೀ ತುಳಸಿಯ ದಳದಿ ಚಂದದೊಳರ್ಚಿಸಿ ಕುಂದದ ಭಕುತಿಯೊಳಾ ನಂದದೊಳಿರು ಹೇ ಮನಸಾ 1 ಸಿರಿ ರಾಮನ ಮಂಗಳ ಮೂರ್ತಿಯ ಘನ ಕೊರಳೊಳು ಹಾರಗಳರ್ಪಿಸುತ ಪರಿಪರಿ ಪರಿಮಳ ಪುಷ್ಪಗಳಿಂದಲಿ ಕರುಣಾಕರನನರ್ಚಿಸು ಮನಸಾ2 ಸರ್ವಾಂತರ್ಗತ ಜಗದುದರನ ನೀ ನಿರ್ಮಲ ಪೀಠದಿ ಕುಳ್ಳಿರಿಸಿ ಸರ್ವಷಡ್ರಸೋಪೇತ ಸುಭೋಜನ ಸರ್ವಾತ್ಮನಿಗರ್ಪಿಸು ಮನಸಾ 3 ಸುಫಲ ಕ್ಷೀರ ತಾಂಬೂಲಗಳರ್ಪಿಸಿ ಸಫಲಗೊಳಿಸು ಜನ್ಮವ ಮನಸಾ ಅಪಾರಮಹಿಮನ ಗುಣಗಳ ಕೀರ್ತಿಸಿ ಕೃಪಾನಿಧಿಯ ನಮಿಸೆಲೊ ಮನಸಾ 4 ಅಗಣಿತ ಮಹಿಮನಿಗಾರ್ತಿಗಳರ್ಪಿಸಿ ಮಿಗೆ ಭಕ್ತಿಲಿ ನಮಿಸೆಲೊ ಮನಸಾ ಸುಗುಣಮಣಿಯು ರಘುರಾಮವಿಠಲ ನಿ ನ್ನಗಲದೆ ಹೃದಯದಲಿಹ ಮನಸಾ5
--------------
ರಘುರಾಮವಿಠಲದಾಸರು
ಪರಮೇಶ್ವರ ಪೂರ್ಣ ತುಂಬ್ಯಾನ ಪರಾಮರಿಸಿ ನಿಮ್ಮೊಳಗೆ ಪರದೆ ಇಲ್ಲದೆ ಪರವಸ್ತುದೋರುವ ಕರುಣಿಸಿ ನಿಮಿಷದೊಳಗೆ ಸದ್ಗುರು ಜಗದೊಳಗೆ ಎರಡಿಲ್ಲದೆ ಗುರುಚರಣಕ ಮನಬೆರೆದನುಭವಿಸುವದಾವಾಗೆ ತ್ರಾಹಿ ತ್ರಾಹಿ 1 ನಿಜಮಾಡುವದೆಲ್ಲ ಡಾಂಭಿಕ ಮಾಡದು ತಾ ನಿಜಸುಖ ಕೂಡಲು ಪುಣ್ಯೊದಗ್ಯಾಗಲು ಗುರುಕೃಪೆ ನೋಡುದು ಕೌತುಕ ಗೂಡಿನೊಳನೇದಾ ತ್ರಾಹಿ ತ್ರಾಹಿ 2 ರಾಜಿಸುತಿಹ್ಯ ಶ್ರೀಪಾದ ಅನುದಿನ ತಾ ಸೇವಿಸಬೇಕು ಸುಬೋಧ ಮಾಜದೆ ಗುರುಚರಣಕ್ಕೆ ತನುಮನಧನ ಭಜಿಸಬೇಕು ಸರ್ವದಾ ರಾಜಯೋಗಪ್ರಸಾದ ತ್ರಾಹಿ ತ್ರಾಹಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಲೋಕವಿಲ್ಲೆಂಬೊ ಪರಮ ಪಾಪಿಗಳಿಗೆ ನರಲೋಕವೇ ನರಕವಣ್ಣ ಪ ಪರಲೋಕವಿಹುದೆಂದು ಗುರುಕರುಣವನು ಪಡೆದ ಕುರುಬನದ ಅರಿತನಣ್ಣ ಅ.ಪ ಈಶ ಜಡ ಜೀವರೆಂಬುವ ಭಿನ್ನ ತತ್ವಗಳು ಈಶನೊಬ್ಬನೆ ಕರ್ತನಣ್ಣ ಸಾಸಿರದಿ ಆಸೆ ಭಂಗಗಳ ಪೊಂದುತಲಿರಲು ಮೀಸೆಯನೇತಕೆ ತಿರುವಬೇಕಣ್ಣ 1 ಹರಿಯು ಪರನಲ್ಲದಿದ್ದರೆ ಸರ್ವಭುವನಗಳು ಹರಿಯಧೀನದಲಿರುವುದೇಕೆ ಹರಿಯಧೀನಲಿಲ್ಲದಿದ್ದರೀ ಜಗದೊಳಗೆ ಕೊರತೆಯೇತಕೆ ಮಂದಿಗಳಿಗೆ 2 ದೇವದತ್ತನು ಧನಿಕ ಪ್ರೇತದತ್ತನು ಬಡವ ಯಾವ ಕಾರಣ ವಿಷಮಗತಿಗೆ ಸಾವು ನೋವುಗಳ ಪ್ರತಿಕ್ಷಣಗಳಲಿ ನೋಡಿ ದೊರೆ ಭಾವವಿರುವುದು ನ್ಯಾಯವೇ 3 ಈಶನಿಲ್ಲೆಂಬುವರು ಹೇಸಲಾರರು ಪಾಪ ರಾಶಿ ರಾಶಿಯ ಗಳಿಸಲು ಆಶೆಬಡುಕರ ಜಗವ ನಾಶಮಾಡಲು ರಾಜ ಶಾಸನಕೆ ಬುಡವೆಲ್ಲಿಯಣ್ಣ 4 ಇಂದು ಇದನು ಪಡೆಯುವೆ ಮುಂದೆ ಅಧಿಕ ಧನವನು ಗಳಿಸುವೆ ಸದೆ ಬಡಿಯುವೆನು ಪರರನೆಂಬ ನುಡಿ ತಮಗುಣದ ಬೆದೆಯಲಿರುವನು ನುಡಿವನು 5 ಎಲ್ಲಿಂದ ಬಂದೆ ಹೋಗುವುದೆಲ್ಲಿಗೆಂಬುದನು ಬಲ್ಲವಗೆ ಮುಕುತಿ ಇಲ್ಲೇ ಒಳ್ಳೆ ಮನವನು ಪಡೆದು ಬಲ್ಲವರ ಸೇವೆಯಿಂ ದೆಲ್ಲವನು ತಿಳಿಯಲಳವಣ್ಣ 6 ಕಾಯವಾಚಾಮನಸದಿ ತಪವಗೈಯುತ ಶುದ್ಧ ಭಾವವನು ಗಳಿಸಿರಣ್ಣ ದೇವಗುರು ಪ್ರಾಜ್ಞ ಪೂಜನ ಲಾಭವಿದು ವಿನಯ ಭಾವಕೆ ಪ್ರಸನ್ನರಿವರು 7
--------------
ವಿದ್ಯಾಪ್ರಸನ್ನತೀರ್ಥರು
ಪರಶುರಾಮಗೆ ಪರಮ ಪ್ರೀತ್ಯಾಗಲೀ ಪ ವರವೆನಿಪ ನರದೇಹದ್ಹವಿಷನರ್ಪಿಸುವೆ ಅ.ಪ. ಕಪಟ ವಿರಹಿತವೂ |ವಿಪುಲದಲಿ ಗೈದು ಸೂ | ಪಕ್ವವಾಗಿರುವಂಥ ಸುಪವಿತ್ರ ದೇಹವನೆ | ಅರ್ಪಿಸುವೆ ಹರಿಯೇ 1 ಕರ್ಮ | ಪ್ರಾಜ್ಞ ನಿನದೈಯ್ಯಾ 2 ಭಾರತೀಶ ಭವ ವಂದ್ಯ | ಪರುಶು ರಾಮಾಭಿನ್ನಪಂಕಜಾಕ್ಷ ಗುರು | ಗೋವಿಂದ ವಿಠಲ ಕೊಳ್ಳೋ3
--------------
ಗುರುಗೋವಿಂದವಿಠಲರು
ಪರಸಿರಿಗೆ ಕರಗುತಿಹುದು ಸರಿಯೇ ಯೋಚಿಸು ಪ ಹರಿಯು ಕರುಣದಿಂದ ಕೊಟ್ಟ ಸಿರಿಗೆ ತೃಪ್ತನಾಗದÀಂತೆ ಅ.ಪ ಉರಗನ ನೆರಳಲ್ಲಿ ಕಪ್ಪೆಯು ಚಿರಕಾಲ ಜೀವಿಸುವುದೇ ಧರೆತಲದಲಿ ನರರ ಸಿರಿಯು ಸ್ಥಿರವಲ್ಲವೆಂದರಿಯದಂತೆ 1 ಹಲವು ಜನುಮಗಳ ಕರ್ಮದ ಫಲವನರಿತು ಮೋಸವಿಲ್ಲದೆ ನಳಿನನಾಭ ನಾರಾಯಣನೊಲಿದು ಕೊಡುವನೆಂದರಿಯದೆ 2 ಎನ್ನದೆಂದು ನಿನ್ನದೆಂದು ಖಿನ್ನನಾಗುವುದು ಸರಿಯೆ ಸನ್ನುತ ಪ್ರಸನ್ನ ಹರಿಯು ತನ್ನ ಭಾಗ್ಯವನರಿತು ನೀಡಲು 3
--------------
ವಿದ್ಯಾಪ್ರಸನ್ನತೀರ್ಥರು
ಪರಾಕು ||ಕಂದ|| 1ಗುಂಜಾಭರಣದ ಚೆಲುವನೆಮಂಜೀರಾಭರಣದ ಪಾದಪದ್ಮನೆ ನಮ್ಮಯಸಂಜೀವನ ನೋಡು ನಮ್ಮನುಕಂಜಾಕ್ಷನೆ ಬಾಲಕೃಷ್ಣರಾಯ ಪರಾಕೈ 2ಉದಯಲಿ ಗೋವು ಗೋವಳರೊದಗಲು ವನಕೈದಿಯಾಡಿ ಬಂದೈಯೆನ್ನುತಪದಕೆರಗುವರೆಡ ಬಲದೊಳುಸುದತಿಯರೆಲೆ ಮುದ್ದು ಮೋಹನ ಕೃಷ್ಣ ಪರಾಕು 3ಓಂ ಬಾಣಾಸುರ ಕರಾಂತಕಾಯ ನಮಃ
--------------
ತಿಮ್ಮಪ್ಪದಾಸರು