ಒಟ್ಟು 5111 ಕಡೆಗಳಲ್ಲಿ , 126 ದಾಸರು , 3233 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರಿಗೆ ಯಾರು | ಯಾರಿಗು ಯಾರು ಯಾರಿಲ್ಲಾ | ಯಾರಿಲ್ಲ ಪ ನಾರಾಯಣನೊಬ್ಬ | ಸಾರುವ ಸಮಯಕೆ ಬೇರೊಬ್ಬರಿಲ್ಲ ಕಂಡ್ಯಾ ಜೀವವೇ ಅ.ಪ. ತಂದೆ ತಾಯಿ ಸುತ | ಬಂಧು ಬಳಗ ಜನಮಂದಿಯೊಬ್ಬರು ಬರರೊ ||ಸಂದೋಹದಿಂದ ಜೀವ | ನೊಂದು ಪೋಗುವ ವೇಳೆಬಂಧು ಬಳಗ ರೋದನಾ | ಬಲು ರೋದನ 1 ಅಂದಾದರವನ್ಹಿಂದೆ | ಪೋಗೋರೊಬ್ಬರ ಕಾಣೆಸಂದೋಹ ಸುಟ್ಟು ಬರುವರೋ ||ಬಂದು ಮಶಣದಿಂದ | ಮಿಂದು ಮೆಲ್ಲದೆ ಇರುವಮಂದಿಯೊಬ್ಬರ ಕಾಣೆನೋ | ಎಲ್ಲು ಕಾಣೆನೊ 2 ಕಾಲ ಕಳೆಯುತ ಬರೆ | ಮೇಲಾದ ದುಃಖ ಮರೆಕಾಲಾ ನಾಮಕ ಲೀಲೆಯೋ ||ವ್ಯಾಳಾ ವ್ಯಾಳಕೆ ಮೆದ್ದು | ಜೋಲು ಮುಖವ ಬಿಟ್ಟುಲೀಲಾ ವಿನೋದ ಮಾಡರೇ | ಅದ ಬಿಡುವರೇ 3 ಪಥ ಸೇರೋ | ಅದ ಸೇರೋ 4 ಬಂದದ್ದು ಹೋದದ್ದು | ಮುಂದೆ ಬರುವುದನುದ್ವಂದ್ವಕರ್ಮಗಳೆಲ್ಲವಾ ||ಸುಂದರ ಗುರು ಗೋ | ವಿಂದ ವಿಠಲ ಪಾದದ್ವಂದ್ವ ಕರ್ಪಿಸೊ ಬಿಡದೇ | ಮರೆಯದೇ 5
--------------
ಗುರುಗೋವಿಂದವಿಠಲರು
ಯಾರಿರಬಹುದೀತ ಗೆಳತೀ ಯಾರಿರಬಹುದೀತ ಪ ಯಾರೆಂದರಿಯದೆ ಪೋಗದೆ ಕೊರತೆ ಯಾರಿರಬಹುದೀತ ಅ.ಪ ಸಾವಿರ ಸಂಖ್ಯೆಯ ಗೋವಳರಿದ್ದರೂ ಯಾವನಿಗೀ ವಿಧ ಠೀವಿಯಿರುವುದೇ ಹಾವಭಾವಗಳ ನೋಡಲು ಈತನ ಗೋವಳ ವೇಷವದಾವ ಕಾರಣವೋ 1 ನಮಗೇತಕೆ ಈತನ ಗೋಜೆಂದರು ಕಮನೀಯನ ನೋಡುತ ನೋಡುತ ಬಲು ಮಮತೆಯು ಮನದಲಿ ಏರುತಲಿರುವುದು ಕಮಲನಯನೆ ನಾ ನಮಿಸುವೆ ಪೇಳೆ 2 ಸರಳನೋ ದುರುಳನೋ ಅರಿಯುವುದೆಂತೇ ಕರೆಯದೆ ಹೋದರೆ ಜರಿಯಲುಬಹುದೇ ಮುರಳಿಯ ನಾದದ ಕರೆ ಬಂದರೆ ನಾ ಬರವೆನೆಂದರು ಹೇ ಸರಸ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಯಾರು ಇಕ್ಕುವರೆಂದು ಹಾರೈಸುವೈ ಆತ್ಮ ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು ಕಲಹ ಮಾಳ್ಪಳು ತನ್ನ ಕುಲವನಿತೆಯು ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1 ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು ಕೂಗುವುದು ಹುಲಿ ಕರಡಿ ಇದಿರಿನೊಳಗೆ ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು ನಾಗಶಯನನ ಗುಡಿಯ ಸೇರೆಲವೊ ಆತ್ಮ 2 ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3 ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು ಬೀಳುವುದು ಮೇಲೆ ಹದಿನಾರು ಭಿತ್ತಿಗಳು ಏಳು ಇಲ್ಲಿರಬೇಡ ಕಾಳಸರ್ಪನು ಬಂದು ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4 ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ ಆರು ಪಥದಲಿ ನೀನು ಮೀರಿ ನಡೆದೆ ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ ಆರ ವ್ಯಾಪಾರವನು ಕೇಳಿದೈ ಆತ್ಮ 5 ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು ಬತ್ತುವುದು ಕೈಕಾಲು ಬಳಲಿಕೆಯೊಳು ಮತ್ತೇಳು ಮಂದಿ ತಾವತ್ತತ್ತ ಸಾರುವರು ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6 ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು ಗಂಟ ಕಟ್ಟಿಯೆ ಮನದಿ ಮರುಗುತಿರಲು ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ ನಂಟರನು ನಾ ಕಾಣೆ ಆಲಿಸೈ ಆತ್ಮ 7 ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ ದಾಯವಿಲ್ಲದ ಊರು ಕರಕಷ್ಟವು ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ- ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8 ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ ನೀಡುವನು ಧರ್ಮವನು ಧೈರ್ಯನಾಗಿ ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9
--------------
ವರಹತಿಮ್ಮಪ್ಪ
ಯಾರು ಇದ್ದರೇನು ನಿನ್ನ ಪಥಕೆ ಬಾರರೋ ಶ್ರೀಹರಿ ಮುರಾರಿ ಎಂದು ಗತಿಯ ನೋಡಿ ಕೊಂಡಿರೋ ಪ ಹೊನ್ನು ಹಣವು ಚಿನ್ನ ಚಿಗುರು ಬಣ್ಣ ಬಂಗಾರವಿರಲು ಎನ್ನವರು ತನ್ನವರು ಎಂದು ಬರುವರೋ ಅನ್ನಕಿಲ್ಲದಿರಲು ಕೆಟ್ಟು ಅಲ್ಲಿ ಪರಿಕಾಲದಲ್ಲಿ ನಿನ್ನ ಕುಶಲವಾರ್ತೆಗಳನು ಮುನ್ನ ಕೇಳರೋ 1 ಇಂದು ಹಬ್ಬ ಹುಣ್ಣಿಮೆಂದು ಬಂಧು ಬಳಗವೆಲ್ಲನೆರೆದು ತಿಂದು ನಿನ್ನ ಹಿಂದೆ ಮುಂದೆ ತಿರುಗು ತಿಪ್ಪರೋ ಬಂಟ ಬಹಳ ಭಾಗ್ಯವೆಲ್ಲ ಕುಂದಿ ಹೋದ ಕಾಲದಲ್ಲಿ ಮುಂದೆ ಸುಳಿಯರೋ 2 ತುಂಬಿ ಇರಲು ಎಡದೆ ಬಿಡದೆ ನೆಂಟರಿಷ್ಟರೆಂದು ತಿಂಬರೋ ವಡವೆ ವಸ್ತು ನಷ್ಟವಾಗಿ ಬಡತನವು ಬಂದ ಬಳಿಕ ಬಿಡುವ ಕೈಯ ನಿನ್ನ ನೊಂದ ನುಡಿಯ ನುಡಿಸರೋ 3 ಮಡದಿ ಮಕ್ಕಳೆಲ್ಲ ನಿನ್ನ ಒಡನೆ ಹುಟ್ಟಿದವರು ಸಹಿತ ಕಡು ಮಮತೆಯಿಂದಲವರು ನೋಡಿ ನಡೆವರೋ ಉಡಲು ತೊಡಲು ಒಡಲಿಗಿಷ್ಟು ಕಡಿಮೆಯಾಗಿ ಎಂದು ಹೊಡೆದು ಕೊಂಬರೋ 4 ಮೃತ್ಯುನಿನ್ನ ಹತ್ತಿರಿದ್ದು ಹೊತ್ತು ವೇಳೆ ನೋಡುತಿಹುದು ವ್ಯರ್ಥವಾಗಿ ಇವರ ನಂಬಿ ಕತ್ತೆ ಕೆಡದಿರೋ ಸತ್ತು ಹುಟ್ಟಿ ಸಾಯ ಬೇಡಿ ಚಿತ್ತದಲ್ಲಿ ಭೀಮನಕೋಣೆ ಗೊತ್ತಿಲಿದ್ದ ಲಕ್ಷ್ಮೀಪತಿಯ ಒತ್ತಿ ಭಜಿಸಿರೋ 5
--------------
ಕವಿ ಪರಮದೇವದಾಸರು
ಯಾರು ಬಂದರೊನಮ್ಮ ದ್ವಾರಕೆಯೊಳಗಿಂದುಭೋರೆಂಬೊ ಕಾಳಿ ಹಿಡಿಸುತ ರಮಣಿ ಪ. ಮುತ್ತಿನ ತುರಾಯಿಯವರು ಹತ್ತಿವಾಜಿಮ್ಯಾಲೆ ಚಿತ್ತ ಚಲಿಸದಲೆ ಬರತಾರೆಚಿತ್ತ ಚಲಿಸದಲೆ ಬರತಾರೆರುಕ್ಮಿಣಿ ಅಚ್ಯುತನ ನೋಡೊ ಭರದಿಂದ ರಮಣಿ1 ರಥಿಕಾ ರಥಿಕರು ತಮ್ಮ ರಥವ ಮುಂದಕ್ಕೆ ಹಾಕಿ ಅತಿ ವೇಗದಿಂದ ಬರುತಾರೆ ರಮಣಿಅತಿ ವೇಗದಿಂದ ಬರುತಾರೆ ದೇವಕಿಯಸುತ ನಂಘ್ರ್ರಿನೋಡೊ ಭರದಿಂದ ರಮಣಿ2 ನಲ್ಲೆಯರು ಮುತ್ತಿನ ಪಲ್ಲಕ್ಕಿ ಮಂದಕೆ ಹಾಕಿನಿಲ್ಲದಲೆ ಬೇಗ ಬರತಾರೆನಿಲ್ಲದಲೆ ಬೇಗ ಬರತಾರೆ ಲಕ್ಷ್ಮ್ಮಿವಲ್ಲಭನ ನೋಡೊ ಭರದಿಂದ 3 ತೇರಿನ ಬೀದಿಲೆ ಭೋರೆಂಬೊ ರಭಸಿಗೆಊರಜನವೆಲ್ಲ ಬೆರಗಾಗಿಊರಜನವೆಲ್ಲ ಬೆರಗಾಗಿಉಪ್ಪರಗಿ ಏರಿ ನೋಡುವವರು ಕಡೆಯಿಲ್ಲ4 ಬೀಡುಬಿಟ್ಟಿದ್ದ ಬೈಲು ಗಾಡಿ ಏರಿದವರು ಓಡಿಸಿ ಬೇಗ ಬರತಾರೆಓಡಿಸಿ ಬೇಗ ಬರತಾರೆಹರಿಪಾದ ನೋಡಬೇಕೆಂಬ ಭರದಿಂದ5 ಮದ್ದು ಬಾಣಬಿರಸು ರಥಿಣಿರಭಸಿಗೆ ಎದ್ದು ಜನೆರೆಲ್ಲ ಬೆರಗಾಗಿಎದ್ದು ಜನೆರೆಲ್ಲ ಬೆರಗಾಗಿ ಮುಯ್ಯದ ಸುದ್ದಿ ಕೇಳುವರು ಹರುಷದಿ 6 ಮಿತ್ರಿ ತಿಲೋತ್ತಮಾ ಮತ್ತೆಮೇನಕೆಯರುಥೈ ಥೈ ಎಂದು ಕುಣಿಯುತಥೈ ಥೈ ಎಂದು ಕುಣಿಯುತ ಬರುವಾಗಹತ್ತು ದಿಕ್ಕುಗಳು ಬೆಳಗೋವೆ7 ರಂಭೆ ಊರ್ವಸಿಯರು ಸಂಭ್ರಮದಿ ಕುಣಿಯಲುತುಂಬಿತು ನಾದ ಧರೆಯೊಳುತುಂಬಿತು ನಾದ ಧರೆಯೊಳುರುಕ್ಮಿಣಿ ಬಂದವರಾರೆಂದು ಬೆರಗಾಗಿ ರಮಣಿ8 ವಜ್ರ ಹಚ್ಚಿದ ಮನೆಗಳುಜತ್ತು ದೀವಿಗೆಯ ಸೊಬಗಿನ ಜತ್ತು ದೀವಿಗೆಯ ಸೊಬಗಿನ ಮನೆಯೊಳುಮಿತ್ರೆಯರು ನೋಡಿ ಬೆರಗಾಗಿ 9 ಕುಂದಣ ರಚಿಸಿದ ಅಂದಣವನೇರಿಕೊಂಡುಸಂದಣಿಸಿ ಬೇಗ ಬರುತಾರೆಸಂದಣಿಸಿ ಬೇಗ ಬರುತಾರೆ ನಮ್ಮ ಮುಕುಂದನ ಮನೆ ಎದುರಿಗೆ 10 ಧೀರ ಧೀರರು ತಮ್ಮ ತೇರು ವಾಜಿಯ ಇಳಿದುವೀರ ರಾಮೇಶನ ಮನೆ ಮುಂದೆವೀರ ರಾಮೇಶನ ಮನೆ ಮುಂದೆ ಹೇಳಲಿನಾರಿ ಒಬ್ಬಳನ ಕಳುಹೆಂದ ರಮಣಿ 11
--------------
ಗಲಗಲಿಅವ್ವನವರು
ಯಾರು ಮೀರಲರಿದು ಬ್ರಹ್ಮ ಬರೆದಲಿಖಿತವ ಪುರಾರಿ ಮಿತ್ರನೊಬ್ಬ ಬಲ್ಲನಿದರ ಕೆಲಸವ ಪ ಎಲ್ಲಿ ದಂಡು ಎಲ್ಲಿ ಗೂಳ್ಯವೆಲ್ಲಿಗಮನವಲ್ಲಿ ವಾಸ ವೆಲ್ಲಿ ಊಟವೆಲ್ಲಿ ಶಯನವು ಎಲ್ಲಿ ನಿದ್ದೆ ಎಲ್ಲಿ ಸುಲಿಗೆ ಎಲ್ಲಿ ಕಡಿತ ವೆಲ್ಲಿ ಮರಣ ವೆಲ್ಲಿ ರುದ್ರಭೂಮಿ ಮೆತ್ತೆಲ್ಲಿ ಜನನವು 1 ಊರದೆಲ್ಲಿ ಮನೆಗಳೆಲ್ಲಿ ನಾರಿ ನೆಂಟರಿಷ್ಟರೆಲ್ಲಿ ಸೇರಿಸಿಟ್ಟ ವಸ್ತು ವಡವೆ ಒಂದು ಕಾಣವು ಭೂರಿ ಪಶುಗಳೆಲ್ಲಿ ಭಯವು ಏರಿ ನೋಳ್ವಗುಡ್ಡ ಸಂ ಚಾರವೆಲ್ಲಿ ಹಸಿವು ತೃಷೆಯು ಹರುಷ ದುಃಖವು 2 ಹಿಂದುಯಿಲ್ಲ ಮುಂದುಯಿಲ್ಲ ಸಿಂಧುತನಕ ತಪರರಿಂದ ಕೆಟ್ಟ ದಿಂದ ಸಲಹುತಿರುವ ಮರುತ ನಂದನ ಕೋಣೆವಾಸ ಲಕ್ಷ್ಮೀರಮಣ ಬಲ್ಲನೋ 3
--------------
ಕವಿ ಪರಮದೇವದಾಸರು
ಯಾರೊಡನುಸುರವೆನೋ ಕಡಲಶಾಯಿ ಬಿಡದೆ ನಿನ್ನನು ಅಡಿಗಡಿಗೆ ಕೊಂಡಾಡುವ ಹುಡಗನ ಮೇಲಿಷ್ಟು ಕರುಣವಿಲ್ಲದರಿಂದ ಪ ಪೊಡವಿಯೊಳಗೆ ಜನಿಸಿರುವರೊಳಗೆ ನಾನೆ ಕಡೆ ಈಗ ಬಸುರಿನೋಳ್ ಪಡೆದ ಮಗನು ತನ್ನ ಮಡದಿ ಮಕ್ಕಳನು ಎನ್ನೊಡನಿತ್ತು ನಾಕಕೆ ನಡೆದನೆನಗೆ ನಡುಮರಣವ ಹೊರಸಿ 1 ಕೆಟ್ಟ ಬದುಕ ಕಾಣಲಾರೆ ಮಾಳ್ಪರೆ ಎನ್ನ ರಟ್ಟೆ ಬಲವು ತಗ್ಗಿ ಹೋಯ್ತು ಮೊಮ್ಮಕ್ಕಳ ಅಟ್ಟುಳಿ ಬರಿಸನ್ನವಸ್ತ್ರಾಭರಣಕೆಂದು ಕುಟ್ಟಿ ಕೊಂಬರು ಎನಗಿದಿರಾಗಿ ಶಿವನೇ 2 ನಾನು ಎಂಬುವರಿಲ್ಲ ಗೃಹಕೃತ್ಯದೊಳಗೆನ್ನ ಮಾನಿನಿಯೊರ್ವಳುಂಟಿದರೊಳು ಸೊಸೆಯಷ್ಟು ಏಕೆಂದ ರೇನು ಸಂಸಾರವಿದನು ಪವಮಾನ ಸುತನ ಕೋಣೆ ಲಕ್ಷ್ಮೀಶ ನಡೆಸು 3
--------------
ಕವಿ ಪರಮದೇವದಾಸರು
ಯಾವ ದಾರಿಯೆನಗೇ ಮುರಾರಿಯಿ- ನ್ನಾವ ಗತಿಯು ತನಗೇ | ದೇವರ ದೇವನೆ ನೀ ವಂಚಿಸಿದರೆ | ಕಾವರೊಬ್ಬರನು ಕಾಣೆ ನಾ ದಿಟವಿದು ಪ ವಾಸುಕಿಶಯನನೆ 1 ಮೋಕ್ಷವಿತ್ತೆನ್ನನು | ರಕ್ಷಿಸದಿರ್ದಡೆ 2 ಕಂದನ ಸಲಹೆನ್ನ | ತಂದೆ ಸದಾನಂದ 3
--------------
ಸದಾನಂದರು
ಯಾವ ಪರಿಯಲಿ ಒಲಿಸಿ ಪಡೆವೆ ಹರಿಯೊಲವನು ಭೂವಿವರವನು ಪೊತ್ತ ಮಹಶೇಷಗರಿದು ಪ ಸುರನದಿ ಜಲದೊಳಭಿಷೇಕವ ಮಾಡುವರೆ ಚರಣದಲಿ ಜನಿಸಿಹಳು ದೇವಗಂಗೆ ಮೆರೆವ ದಿವ್ಯಾಸನವನೀಯೆ ವಿಶ್ವಾಧಾರ ಧರಿಸಿ ಕೊಡಲಿಕೆ ವಸ್ತ್ರ ಪೀತಾಂಬರ 1 ಹೇಮರಚಿತಾಭರಣದಿಂದ ಮೆಚ್ಚಿಸಲವಗೆ ಕಾಮಿನಿಯೆ ಶ್ರೀಮಹಾಲಕ್ಷ್ಮಿದೇವಿ ಪ್ರೇಮದಿಂ ಶಾಲ್ಯಾನ್ನದಿಂದ ತೃಪ್ತಿ ನಿತ್ಯ ತೃಪ್ತ 2 ಕ್ಷೀರದಿಂ ಮೆಚ್ಚಿಸಲಿಕವಗೆ ಪಾಲ್ಗಡಲೆಮನೆ ಮಾರುತಾತ್ಮಜ ಕೋಣೆ ಲಕ್ಷ್ಮೀಶ ನಂಘ್ರಿಗೆ ನಮಸ್ಕಾರದಿಂ ಮೆಚ್ಚಿಸಲಿಕವ ಜಗದ್ವಂದ್ಯಾ 3
--------------
ಕವಿ ಪರಮದೇವದಾಸರು
ಯಾವ ಹೆಸರಿನಿಂದೆ ಕರೆದರೇನುಪಾವನಾತ್ಮನೆ ಬರನೆಸ್ವಾ ಸರ್ವೋತ್ತಮನುಪ ಸಾವಿರ ಹೆಸರುಳ್ಳ ಅವನಿಗೆ ಹೆಸರಿಂದೇನುದೇವನೊಬ್ಬನೆ ಜಗಕೆ ಎಂಬ ನುಡಿ ಸುಳ್ಳೇನುಭಾವಭಕುತಿಗಳಿಂದ ಕರೆದೊಡನೆ ಬರುವನುಠಾವು ಕಾಲಗಳಿಲ್ಲಿ ಆತನಿಗೆ ಬಹಳೇನು 1 ಅಲ್ಲಾ ಎಂದರೆ ಬರುವ ಶಿವನೇ ಎಂದರೂ ಬರುವಾಗೊಲ್ಲ ಕೃಷ್ಣನೆ ಬಾರ ಎಂದರಾತನೆ ಬರುವಅಲ್ಲಿ ಇವ ಇಲ್ಲಿ ಅವ ಎಂದು ಬಡಿದಾಡಿದರೆಖುಲ್ಲರೆಂದರೇನು ಬಲ್ಲವರು ಮರುಳಾ 2 ವಿಧವಿಧ ನುಡಿಗಳಲಿ ಬೇರೆ ಶಬುದಗಳಿರಲುಅದು ಪರಾರ್ಥವೆ ಬೇರೆ ತಾನಾಗುವದೇನುಹದಿನಾರು ಪಥಗಳನೆ ಹಿಡಿದೊಂದು ಹೋದೊಡನೆ ಅದರಿಂದಲಾ ಊರು ಸೇರಿಸುವುದಿಲ್ಲವೇನು 3 ಹೃದಯದಲಿ ನಿಜವಾದ ಭಕುತಿಯನು ಬೇಡುವನುಇದನರಿತು ಪ್ರತಿದಿನದಿ ಭಜಿಸುವರು ಮುನಿಜನರುಗದುಗಿನಲಿ ವಾಸಿಸುವ ಶ್ರೀ ವೀರನಾರಾಯಣನುಮುದದಿಂದ ಸಲಹುವನು ಸಂದೇಹವೇನು 4
--------------
ವೀರನಾರಾಯಣ
ಯಾವದು ಸುಖವೇ ಮತ್ಯಾನಂದವೇ ಪ ಈ ಉಡುಪಿಯ ಯಾತ್ರೆ ಮಾಡಿದ ಮನುಜಗೆ ಅ.ಪ. ಮನದಲಪೇಕ್ಷಿಸೆ ಅವನಿಗೆ ಹದಿನಾಲ್ಕು ಕನಕನ ಚಿತ್ತನಾಗಿ ಗೋಕುಲದಿಂದ ಸ ಜ್ಜನ ಮಾರ್ಗದಲಿ ಗುಣವಂತನೆನಿಸಿಕೊಂಬ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ ಅಂದೆ ಸುರರೊಳು ಗಣನೆ ಎನ್ನೆ ಒಂದಕ್ಕೆ ನೂರಾರು ಯಾಗ ಮಾಡಿದ ಫಲ ತಂದು ಕೊಡುವ ಅಜನಾದಿಕಲ್ಪ ಪರಿಯಂತ2 ಅರ್ಧ ಮಾರ್ಗದಿ ಬರಲು ಬಂದು ನಿಲ್ಲಲು ಅವರ ಸಾಗರದಿ ಕೋಟಿ ಸ್ನಾನ ಮಾಡಲು ಊಧ್ವರೇತಸ್ಥನಾಗಿರ್ದ ಫಲವಕ್ಕೆ ಪರಿಯಂತ 3 ಸನ್ನುತ ಸಾಧನವನು ಮಾಡಲು ಸನ್ನುತರ ತೆಗೆದು ಜ್ಞಾನ ಭಕುತಿ ಸಂ ಪನ್ನವಿರಕುತಿಗೆ ಯತಿಗಾದಿ ಮುಖನಾದ4 ಕರವ ಜೋಡಿಸಿ ನಿಂದು ದೃಷ್ಟಿಯಿಂದಲಿ ನೋಡಿದವನೆ ಮುಕ್ತಾ ಮುಟ್ಟಿ ಭಜಿಸುವರ ಸತ್ಪುಣ್ಯ ವಿಜಯವಿಠ್ಠಲನಾತನೆ ಬಲ್ಲ ಅರುಹಲಳವಲ್ಲ 5
--------------
ವಿಜಯದಾಸ
ಯುಕ್ತಿ ಯುಕ್ತದಮಾತ ಕೇಳಬೇಕುಶಕ್ತಿಯನು ಮಾಡದಿರು ಮುಕ್ತಿಗನುವಾಗು ಪಚಿತ್ತಶುದ್ಧಿಯಲಿದ್ದು ಭಾವ ವಿಷಯದಿಕೂಡೆಮತ್ತೆ ಬಂಧಿಸಿ ಬಲಿದು ಮುಳುಗುತಿಹುದುಕಿತ್ತದನು ನಿಜದಲ್ಲಿ ನಿಲಿಸಿಯನುಸಂಧಾನವತ್ಯಧಿಕವಾದಡೆಯು ಮಿತನುಡಿ ಹಿತವೂ 1ಕಾರ್ಯಕಾರಣರೂಪನಾಗಿ ಜಗದೀಶ್ವರನುಧೈರ್ಯಗಳು ಬರುವಂತೆ ಪ್ರೇರಿಸುತ್ತಾಆರ್ಯರೊಳಗೆಣಿಕೆಯನು ಮಾಡಿಸುತಲಜ್ಞಾನಸೂರ್ಯನಾಗಿಯೆ ತಾನು ತೋರುತಿರ್ದಡೆಯೂ 2ಕರಣೇಂದ್ರಿಯಂಗಳಿವು ಜಡವಾಗಿ ವಿಷಯಗಳಬೆರೆಸಲರಿಯವು ತಾವು ಇಚ್ಛೆುಂದಾತಿರುಪತಿಯ ವೆಂಕಟನು ಸೂತ್ರಧಾರಕನಾಗಿಗುರುವಾಸುದೇವ ರೂಪದಿ ಸಲಹುತಿರಲು 3ತನುವನುಕೂಲಕೆ ಬಂದುದ ನೆನೆದುಸುರಿದ ಜೀವನಭಿಮಾನವ ಸಡಿಲಿಸುತಲಿ ವಿನಯದಿ ಗುರುವನು ಸೇರ್ವರೆ ನಿನಗೆರವಿಲ್ಲೆನ್ನುತಅನುಸರಿಸಿದ ಕಾರ್ಯವಾಸಿಗೋಸುಗ ಬಿಡದೆ 4
--------------
ತಿಮ್ಮಪ್ಪದಾಸರು
ಯೆಂದಿಗೆ ಬರುತೀಯೆ ಸುಂದರ ಭಾರತಿ ಮಂದರೋದ್ಧರನ ತೋರಿಸೆಂದೆ ನಾ ಬಂದೆ ಪ. ಅಂಧಕಾರಣ್ಯದೊಳು ನಿಂದು ತತ್ತರಿಸುವೆನು ತಾಯೆ ಕುಂದುಗಳೆಣಿಸಾದಿರು ಆನಂದ ತೋರು ಅ.ಪ. ಹರಿಗೆ ಕಿರಿಯ ಸೊಸಿ ವಾತನಸತಿಯು ನೀನು ಪ್ರಖ್ಯಾತಿವಂತಳೇ ಏಕಾಂತ ಭಕ್ತಳೇ ತ್ರಿವಿಧ ಜೀವರೊಳಗೆ ನಿಂತು ತ್ರೀವಿಧ ಪ್ರೇರಣೆ ಮಾಡುವಿ ದೇನಿ ನಿನ್ನಾ ಮಹಿಮೆಗೆ ನಮೋ ಎಂಬೆ ಪುತ್ಥಳಿಯಾ ಬೊಂಬೆ 1 ಮಂದರೋದ್ಧರನ ಪಾದಸೇವಕಳೇ ನಿನಗೀಡೆ ನಲಿದಾಡೆ ಒಂದನಾದರೂ ಮಾತನಾಡೆ ವರಗಳ ನೀಡೆ ದಯಮಾಡಿ ನೋಡೆ ತವಪಾದವ ಕೊಡೆ ಕರವ ಜೋಡಿಸಿ ಬೇಡುವೆನಿಂದು ನಾ ಬಂದು 2 ಗರುಡ, ಶೇಷ ರುದ್ರಾದಿಗಳೊಡೆಯಳೇ ನೀನು ನಿನ್ನಡಿಗಳಿಗೆರಗುವೆ ನಾನು ತಡಮಾಡ ಬ್ಯಾಡಮ್ಮಾ ನಡೆದು ಬಾರಮ್ಮ ಭವ ಮಡುವಿನೊಳಗಿರುವೆನು ತೋರಿಸೋ ದಯಪಾಲಿಸೋ 3
--------------
ಕಳಸದ ಸುಂದರಮ್ಮ
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ಯೇನಾದರೇನು ಜ್ಞಾನವಿಲ್ಲದೆ ಮೋಕ್ಷವಿಲ್ಲಾ ಪ ವೇದವನೋದಿದರೇನು | ಶಾಸ್ತ್ರವ ನೋಡಿದರೇನು | ಕಾದಿ ಕಾದಾಡಿದರೇನು || 1 ಕಾಶಿಗೆ ತಾ ಹೋದರೇನು | ಕಾನನವ ಸೇರಿದರೇನು | ಕಾಶಿ ಪೀತಾಂಬರ ಉಟ್ಟರೇನು 2 ಜಪ ತಪವ ಮಾಡಲೇನು | ಜಾಣತನದೊಳ್ ಮೆರೆದರೇನು | ವಿಜಯವಿಠ್ಠಲನ್ನ ಸಾರಿದರೇನು 3
--------------
ವಿಜಯದಾಸ