ಒಟ್ಟು 9105 ಕಡೆಗಳಲ್ಲಿ , 131 ದಾಸರು , 5069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ ನಮ್ಮಜ್ಜ ನರಕುರಿಯ ಹಿಂಡುಗಳ ಪ ಅಷ್ಟಮದ ಮತ್ಸರಗಳೆಂತೆಂಬ ಟಗರುಗಳುದೃಷ್ಟಿ ಜೀವಾತ್ಮನೆಂತೆಂಬ ಆಡುಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳುಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ 1 ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳುಕಾದಿದ್ದು ನಮ್ಮಜ್ಜನ ಹಿಂಡೊಳಗೆಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲುಆದರಿಸಿ ಅಂಬಲಿಯನೆರೆವ ನಮ್ಮಜ್ಜ 2 ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲುಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕುತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ 3 ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ 4 ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ 5
--------------
ಕನಕದಾಸ
ನಾಳಿಗಿಲ್ಲವೆಂದು ವ್ಯರ್ಥ ಬಳಲ ಬೇಡಿರೋ |ಕಾಲ ಬೆಳಗು ನೆಚ್ಚಿ ಕೇಡು | ತಿಳಿದು ನೋಡಿರೋ ಪ ಅಂದಿಗಿದ್ದವರಿಗೆ ಸಾವು | ಇಂದಿಗಿದ್ದವರಿಗೆ ಸಾವು |ಇಂದಿರೇಶನ ಭಕುತರೆಂದೆಂದಿಗೆ ಸಾಯರೋ 1 ಆರಿಗಾರು ಕೊಡುವರಲ್ಲ | ಮೋರೆ ನೋಡಿ ನಗುವರಲ್ಲ |ಹರಿಗೆ ನಂಬಿದವರೇ ಪರಮ ಧೀರ ಧೂರ್ತರೋ 2 ಹೆತ್ತ ತಾಯಿ ಗರ್ಭದಲ್ಲಿ | ಹತ್ತು ತಿಂಗಳನ್ನಪಾನ- |ವಿತ್ತ ರುಕ್ಮಭೂಷಗೇತಕ್ಕೆ ಮರೆತಿರೋ 3
--------------
ರುಕ್ಮಾಂಗದರು
ನಿಖಿಲಾತ್ಮ ನಿಖಿಲಾತ್ಮ ಅಖಿಲಬ್ರಹ್ಮಾಂಡಪತಿ ಸಲಹು ಸರ್ವೋತ್ತಮ ಪ ಮಂದರಧರ ಎನ್ನ ಮಂದಮತ್ಯಳಿದಾ ನಂದ ಮತಿಯಿತ್ತು ಚೆಂದದಿಂ ರಕ್ಷಿಸು 1 ನಿತ್ಯನಿರುಪಮ ಸತ್ತು ಚಿತ್ತ ನಿಮ್ಮ ಭಕ್ತಿ ಭಜನೆ ಎನ್ನ ಚಿತ್ತಕ್ಕೆ ದಯಮಾಡು 2 ಬಗೆದು ಎನ್ನಂತರಂಗzಗಲದೆ ನಿಂತು ನಿಜ ಸುಗುಣವಿತ್ತು ಪೊರೆ ಸುಗುಣಾಂಬುಧಿ 3 ಕಾಮಿತಜನಕಲ್ಪ ಕಾಮಧೇನು ಎನ್ನ ಕಾಮ ಪೂರೈಸಿ ನಿನ್ನ ನಾಮವಿತ್ತು ಕಾಯೊ 4 ಭಕ್ತಿದಾಯಕ ನಿನ್ನ ಭಕ್ತಿಯಿಂ ಭಜಿಸುವೆ ಸತ್ಯ ಶ್ರೀರಾಮ ನಿತ್ಯಮುಕ್ತಿಯಿತ್ತು ಪೊರೆ 5
--------------
ರಾಮದಾಸರು
ನಿಖಿಳ ಯಾದವರೊಳಗೆಮಾನಾಭಿಮಾನವೆಳ್ಳನಿತಿಲ್ಲ ಕೃಷ್ಣ ಪ ದೇವಕೀದೇವಿಯುದರದಿ ಜನಿಸಿ ಬಾಲ್ಯದಲಿಓವಿ ಮೊಲೆ ಕುಡಿಸಿದಳ ಅಸುವ ಸೆಳೆದುಮಾವ ಕಂಸನ ಕೊಂದು ಮನುಜ ವೇಷದಲಿ ಗಾಂ-ಡೀವಿಯ ಮನೆಯ ಬಂಡಿ ಬೋವನಾದೆ1 ಸುರನದಿಯ ಸುತನು ಪಾಂಡವರಿಗಾಪ್ತನು ನಿನಗೆಪರಮಭಕ್ತನು ಸ್ವಯಿಚ್ಛಾ ಮರಣಿಯುಧುರದೊಳಗೆ ಪೂರ್ವ ವೈರದ ಶಿಖಂಡಿಯ ತೋರಿಶರಮಂಚದೊಳುಪಾಯದಲಿ ಮಲಗಿಸಿದೆ 2 ಸೋದರತ್ತೆಯ ಸೊಸೆಯ ಮಗ ನಿನಗೆ ಭಾವಿಸಲುಸೋದರಳಿಯನು ಮೂರು ಲೋಕವರಿಯೆಸಾಧಿಸಿಯೆ ಅಸಮ ಚಕ್ರವ್ಯೂಹವನು ರಚಿಸಿಸೋದರನ ಷಡುರಥರ ಕೈಲಿ ಕೊಲ್ಲಿಸಿದೆ 3 ಕುರುಪತಿಯ ಮೈದುನನ ಕೊಲ್ಲ ಬಗೆದವನ ಸಂ-ಗರದೊಳೇರಿಸಿ ನುಡಿದ ನುಡಿಯ ಕೇಳಿ ಮೈ-ಗರೆಯೆ, ರವಿ ಮಂಡಲಕೆ ಚಕ್ರದಿ ಮರೆಯ ಮಾಡಿನರನ ಕೈಯಿಂದ ಸೈಂಧವನ ಕೊಲ್ಲಿಸಿದೆ 4 ಶಪಥದಲಿ ರಣದೊಳರಸನ ಹಿಡಿವೆನೆಂಬವಗೆತಪಸಿಗಳ ತಂದು ತತ್ತ್ವವ ಬೋಧಿಸಿಕಪಟವರಿಯದ ನೃಪನ ಕೈಯೊಳನೃತವ ನುಡಿಸಿಉಪಮೆಯಲಿ ಶಸ್ತ್ರ ಪಂಡಿತನ ಕೊಲ್ಲಿಸಿದೆ 5 ಯಮಳರನು ಪಡೆದ ತಾಯಿಗೆ ಸಹೋದರನ ಭೂರಮಣರೊಳಗಗ್ಗಳೆಯನತಿ ಧೈರ್ಯನುಸಮರದಲಿ ರವಿಸುತನ ರಥಕೆ ಸೂತನ ಮಾಡಿಯಮಸುತನ ಕೈಲಿ ಮಾವನ ಕೊಲ್ಲಿಸಿದೆ 6 ಜನವರಿಯದಂತೆ ಜೀವನದೊಳಡಗಿರ್ದವಗೆಮನಕೆ ಖತಿಗೊಳಿಸಿ ಬರ ಸೆಳೆದು ನಗುತಅನುವರದೊಳಾಯತದ ತೊಡೆಯ ಸನ್ನೆಯ ತೋರಿಅನಿಲಜನ ಕೈಲಿ ಕೌರವನ ಕೊಲ್ಲಿಸಿದೆ7 ಉರಿಯೊಳಗೆ ಜನಿಸಿದಂಗನೆಯ ನಿಜಸುತರು ಮಂ-ದಿರದೊಳೈವರು ನಿದ್ರೆಗೈಯುತಿರಲುನರವೃಕೋದರ ಧರ್ಮನಂದನರನಗಲಸಿಯೆಗುರು ಸುತನ ಕೈಲಿ ಬಾಲಕರ ಕೊಲ್ಲಿಸಿದೆ 8 ಈ ವಿಧದೊಳವರ ಸುರಲೋಕದಲಿ ನೆಲೆಗೊಳಿಸಿಭಾವ ಮೈದುನರೈವರನು ರಕ್ಷಿಸಿಭೂವಲಯದೊಳು ಕೀರ್ತಿಯನು ಪಡೆದೆಸೆವ ನಮ್ಮದೇವ ನೆಲೆಯಾದಿಕೇಶವ ವೆಂಕಟೇಶ 9
--------------
ಕನಕದಾಸ
ನಿಗಮ ಗೋಚರಾನಂತ ಮಹಿಮ ಶ್ರೀದೇವ ಸಗುಣ ನಿರ್ಗುಣನಾಗಿ ತೋರುವ ಸುಗಮಲಿಹ್ಯ ಸುಖದಾಯಕ ಧ್ರುವ ಅಗಣಿತ ಗುಣಗಮ್ಯನುಪಮ ಶ್ರೀನಾಥ ನಿಗಮ ತಂದು ನೀ ಪ್ರಕಟದೋರಿದೆ ನಗವು ಬೆನ್ನಿಲಿ ತಾಳಿದೆ ಮಣಿ ಮಾಧವ ಶ್ರೀ ಕಾಂತ ಜಗವನುಳಹಿದೆ ನೆಗಹಿದಾಡಿಲೆ ಭಗತಗೊಲಿದು ನೀ ಕಾಯಿದೆ 1 ಹರಿ ಸರ್ವೋತ್ತಮ ಪರಮಪುರಷ ಶ್ರೀ ವೇಷ ಧರಿ ಮೂರಡಿ ಮಾಡಿದೆ ನೀ ಪರಶುಧರನಾಗ್ಯಾಡಿದೆ ಪರಿಪರ್ಯಾಡುವಾ ನಂದಸ್ವರೂಪ ಶ್ರೀಧರ ಶರಣ ರಕ್ಷಕನಾಗಿ ನೇಮದಿ ತುರುಗಳನ ನೀ ಕಾಯಿದೆ 2 ಸಾಮಜ ಪ್ರಿಯ ಶ್ರೀನಿಧೆ ಹಯವನು ತೋರುವೆ ಸರಸಿಜೋಧ್ಬವನುತ ಸಿರಿಲೋಲ ಎನ್ನಯ ಅನುದಿನ ಸೂರ್ಯಕೋಟಿ ಪ್ರಕಾಶನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಗಮ ತಂದುಸುವುಸಿ ಜಗದೊಳಗೆ ಧ್ರುವ ನಗ ಬೆನ್ನೆಲಿ ತಾಳಿದ ನೀನಾರೋ ಜಗವ ಕದ್ದೊಯಿದಸುರನ ನೀ ಕೊಂಡು ಬಗೆದು ತರಳಗೊಲಿದವ ನೀನಾರೊ 1 ಧರಣಿ ನೀ ಮೂರಡಿಯನೆ ಮಾಡಿ ಹಿರಿಯಳ ಶಿರ ಹರಿಗಡಿದವನಾರೊ ಪರ ದೇವತೆಗಳ ಸೆರೆಯ ಬಿಡಿಸಿ ತುರುಗಳಗಾಯ್ದ ಗೋವಳ ನೀನಾರೊ 2 ನಾರಿಯರ ವ್ರತಗಳನೆ ಹಳಿದು ಏರಿ ಹಯವನು ಸುಳಿವವನಾರೊ ತರಳ ಮಹಿಪತಿ ಮನೋಹರವ ಮಾಡಿ ಗುರುತುತೋರಿದ ಗುರು ಮಹಿಮ ನೀ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಗಮನುಳುಹಿಸಿ ನಗನೆಗದಿಹಗೆ ಜಗದೋದ್ದಾರ ಸುಭಗತ ಪ್ರಿಯಗೆ ಸುಗಮ ಧರಿ ಮೂರಡಿಯ ಮಾಡಿ ಸುಗೊಡಲ ಪಿಡಿದಿಹಗೆ ಬಗೆದು ಜಲಿಧಿಲಿ ಸೇತು ಗಟ್ಟಿದ ಖಗವಾಹನ ಯದುಕುಲ ಲಲಾಮಗೆ ಜಗಮೋಹಿಸುವ ಬೌದ್ಯಕಲ್ಕಿಗೆ ಶರಣು ಸುಶರಣು 1 ಸಿರಿಯನಾಳುವ ದೊರಿಯೆ ನಿನ್ನ ಮರೆಯ ಹೊಕ್ಕಿಹ ಚರಣಕಮಲ ಸರಿಯ ಬಂದ್ಹಾಂಗೆನ್ನ ಹೊರವದು ನಿನ್ನ ದಯ ಘನವು ಬಿರುದು ನಿನ್ನದು ಸಾರುತಿಹುದು ಕರಿಯ ವರದಾನಂದ ಮೂರುತಿ ಸುರಿಸಿ ಕರುಣಾಮೃತವುಗರೆವುದು ತರಳ ಮಹಿಪತಿಗೆ 2 ಮೂರ್ತಿ ಸದ್ಗುರು ನೆನೆವರನುದಿನ ಸಾರ್ಥ ಸದ್ಗುರು ಜನವನದೊಳನುಕೂಲ ಸದ್ಗುರು ತಾನು ತಾಂ ಎನಗೆ ಸಾರ ನೀಡುತ ತನುಮನದೊಳನುವಾಗಿ ಸಲಹುವ ದೀನಮಹಿಪತಿ ಸ್ವಾಮಿ ಭಾನುಕೋಟಿ ತೇಜನಿಗೆ 3 ಶರಣಜನಾರಾಭರಣವಾಗಿಹ ಮೂರ್ತಿ ಸದ್ಗುರು ತರಣೋಪಾಯದ ಸಾರಸುಖವಿರುವ ನಿಜದಾತ ಪರಮಪಾವನ ಗೈಸುತಿಹ ವರ ಶಿರೋಮಣಿ ಭಕ್ತವತ್ಸಲ ಚರಣ ಸ್ಮರಣಿಲೆ ಪೊರೆವದನುದಿನ ತರಳ ಮಹಿಪತಿಗೆ 4 ನೋಡದೆನ್ನವಗುಣದ ದೋಷವ ಮಾಡುವದು ಸದ್ಗುರು ದಯ ಘನ ನೀಡುವುದು ನಿಜ ಸಾರಸುಖವನು ಕರುಣದೊಲವಿಂದ ಬೇಡುವÀದು ನಿನ್ನಲ್ಲಿ ಪೂರಣ ಪ್ರೌಢ ಘನಗುರುಸಾರ್ವಭೌಮನೆ ಮೂಢ ಮಹಿಪತಿ ರಕ್ಷಿಸನುದಿನ ಸರ್ವಕಾಲದಲಿ 5 ಸ್ವಾಮಿ ಸದ್ಗುರು ಸಾರ್ವಭೌಮನೆ ಕಾಮ ಪೂರಿತ ಕಂಜನಾಭನೆ ಸಾಮ ಗಾಯನ ಪ್ರಿಯ ಸಲವ್ಹೆನ್ನಯ ಶ್ರೀ ನಿಧಿಯೆ ಮಾಮನೋಹರ ಮನ್ನಿಸೆನ್ನ ನೀ ನೇಮದಿಂದಲಿ ಹೊರೆವದನುದಿನ ಕಾಮಧೇನಾಗಿಹ ಕರುಣದಿ ದೀನಮಹಿಪತಿಗೆ 6 ಕುಂದ ನೋಡದೆ ಬಂದು ಸಲಹೆನ್ನಯ್ಯ ಪೂರ್ಣನೆ ಇಂದಿರಾವಲ್ಲಭನೆ ತಂದಿ ತಾಯಿ ನೀ ಎನಗೆ ಬಂಧು ಬಳಗೆಂದೆಂದು ನಿನ್ನನೆ ಹೊಂದಿ ಕೊಂಡಾಡುವ ಮೂಢ ನಾ ಬಂದ ಜನ್ಮವು ಚಂದಮಾಡು ನೀ ಕಂದ ಮಹಿಪತಿಗೆ 7 ದೀನಬಂದು ದಯಾಬ್ಧಿ ಸದ್ಗುರು ಭಾನುಕೋಟಿ ತೇಜಪೂರ್ಣನೆ ನ್ಯೂನ ನೋಡದೆ ಪಾಲಿಸೆನ್ನ ನೀ ಘನಕರುಣದಲಿ ನೀನೆ ತಾಯಿತಂದೆಗೆ ನೀನೆ ಬಂಧುಬಳಗ ಪೂರಣ ನೀನೆ ನೀನಾಗ್ಹೊರೆವದನುದಿನ ದೀನಮಹಿಪತಿಗೆ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಚ್ಚಳಾಗಲಿ ಬೇಕು ತಿಳಿದು ನಿಚ್ಚಳಾಗಲಿ ಬೇಕು ಪ ನಿಚ್ಚಮಾಡುವ ದೋಷರಾಶಿಗಳಳಿದು ನಿಚ್ಚಳಾಗಲಿ ಬೇಕು ಅ.ಪ ಪಾಪವೆಂಬುದು ಹೊರಗಿಹುದೆ ತನ್ನ ಅಪವರ್ಗಕೆ ಮಾರ್ಗವಹುದೆ ಬಲು ತಾಪಸಿಗಾದರು ಅದು ಸಾಧನವಹುದೆ 1 ಪುಣ್ಯವೆಂಬದು ಬೇರೆಯಿಲ್ಲಾ ನಾನಾ ರಣ್ಯ ಚರಿಸಿದರು ದೊರಕುವದಲ್ಲಾ ಮನ್ಯು ಬಿಡದೆ ಮತ್ತೊಂದಲ್ಲಾ ನಿರುತ ಅನ್ಯರಾಶಿ ಬದಲು ಗತಿಗವಸಲ್ಲಾ 2 ವೈಕುಂಠವೆಂಬೋದು ಅಲ್ಲೆ ಬರಿದೆ ಲೌಕೀಕ ತೊರದರೆ ಇಪ್ಪದು ಇಲ್ಲೆ ಈ ಕಲಿಯೊಳಗೆ ಈ ಸೊಲ್ಲೆವೊಲಿಸ ಬೇಕೆನೆ ಮಾರಿ ಓಡುವುದು ನಾ ಬಲ್ಲೆ 3 ಹರಿಸ್ಮರಣೆಗೆ ಪೋಪ ದೋಷ ಬಲು ಪರಿ ಧರ್ಮವ ಮಾಡಲು ಲೇಶ ಸರಿಯಾವು ತರುವಾಯ ಮೋಸದಿಂದ ತಿರುಗಿ ತಿರುಗಿ ಪುಟ್ಟಿ ಬಡವನು ಕ್ಲೇಶಾ4 ಒಬ್ಬರ ಸರಿಗಟ್ಟದಿರೊ ನಿನ ಕರ್ಮ ಸುಖವೆಂದು ಸಾರೊ ಉಬ್ಬಲ ದಾಡಿಪರಾರೊ ಎಲೆ ಲ್ಹಬ್ಬಿದ ವಿಜಯವಿಠ್ಠಲನೆಂದು ಸಾರೋ 5
--------------
ವಿಜಯದಾಸ
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ನಿಜ ವಸ್ತುನೆ ಮುಂದುಗಾಣಿ ಥಳ ಥಳ ಗುಡುವುತ ಹೊಳೆವುತಲ್ಯದೆ ಬಲಿಯೊ ಸದ್ಗುರು ಸುಪ್ರಾರ್ಥನೆ ಧ್ರುವ ಜನ್ಮದ ಸಂದೇಹಗಳೀತೆ ಒಂದಾದರ ಮಾತಿಗಿಳಿಯಿತೆ ನಿಜಘನ ನೆಲೆಗೊಳ್ಳಿತೆ ಹೊಂದಿತೆ ಅರಿಯದಿಹುದು ಒಳಿತೆ1 ನಿನ್ನೊಳು ನೀ ನಿಜ ತಿಳಿಯದೆ ಖೂನ ಇನ್ನೊಬ್ಬರಿಗ್ಹೇಳುವುದೇನ ಕನ್ನಡಿಯೊಳು ಕಾಂಬುವ ಕಾಂಚನ ಸನ್ನಿದಾಗುವದೆ ಪೂರ್ಣ ಭಿನ್ನಭೇದವು ಹೋಗದೆ ಅನುಮಾನ ಚೆನ್ನಾಗ್ಯಾಗುವದೆ ಜ್ಞಾನ ಧನ್ಯಗೈಸುವ ಸದ್ಗುರು ಕರುಣ ಮನ್ನಿಸಿ ಪಡಕೊ ನಿಧಾನ 2 ಮುಗ್ದದಿ ಗುರುಪಾದ ಈಗ ಏನೆಂದು ತಾ ತಿಳಿಯುವದು ಆಗ ಸ್ವಾನುಭವದ ಸ್ವಸುಖಭೋಗ ಅಣುರೇಣುದೊಳಗ ತಾ ಬ್ಯಾಗ ದೀನ ಮಹಿಪತಿಗದೆ ಒಳಹೊರಗೆ ಫನ ಭಾಸುತಲ್ಯದೆ ಆವಾಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಜ ವೈಷ್ಣವಾ ಅವನೇ ನಿಜ ವೈಷ್ಣವಾ ಪ ಇತರರ ದುಃಖವು ತನಗೆಂದರಿವಾಸತತದಿ ಸೇವೆಗೆ ತತಪರನಿರುವಾ 1 ತೊರೆದು ಹೆಮ್ಮೆಯಾ ಸರುವರು ನಮಿಸುವ ಪರರನು ಜರಿಯಾ ನಿರುಮಲನಿರುವಾ 2 ಧನ್ಯನವನು ತಾಯನ್ಯ ಸತಿಯರನುತನ್ನ ತಾಯಿಯೊಲು ಮನ್ನಿಸುತಿರುವಾ 3 ಸಟಿಯನು ನುಡಿಯಾ ಪರಧನವೆಡಿಯಾಕಟ್ಟಿಲಿ ಸಿಕ್ಕದೆ ಸಮಮನನೆನವ 4 ನಡೆನುಡಿಗಳಲಿ ಮಡಿಯಿಂದಿರುವಾದೃಢ ಮನದಿಂ ಬಹು ಶಾಂತಿಯಲಿರುವಾ 5 ಪ್ರತಿಪ್ರಾಣಿಯಲಿ ಹರಿಯನು ನೋಡುವಾಅತಿಶಯ ದಯವನು ತೋರುತಲಿರುವಾ 6 ಕಾಮಕ್ರೋಧಗಳ ಗಡ ಜೈಸಿರುವರಾಮನಾಮವ ನೇಮದಿ ಭಜಿಸುವ 7 ಗದುಗಿನ ವೀರನಾರಾಯಣನಹೃದಯದಿ ಸತತ ಮುದದಲಿ ಪಿಡಿವ 8
--------------
ವೀರನಾರಾಯಣ
ನಿಜದಿ ಸುಖಪದ ಕೊಡುವೆಯೋ ಭಜಕರಿಗೆ ಶುಭದಾಯಿಯೋ ಪ ತ್ರಿಜನ ಪೂಜೆಯಗೊಂಬೆಯೋ ಅಂ- ಗಜಜನಕ ಗೋಕಾಯ್ದೆಯೋ ಅ.ಪ ಸುತನಕೊಂದೇ ಸತಿಯ ತೊರೆದೇ ಅತಿಯ ದುಃಖವ ನಟಿಸಿದೇ ಸತತ ಸರ್ವವ್ಯಾಪಿಯೆಂಬರು ಹಿತನೆ ಕಾಣಿಸೆಯೆಲ್ಲಿಹೇ 1 ನಾರಿಯರ ಸೆರೆ ನೀಗಿಸೀ ಹದಿ ನಾರು ಸಾವಿರ ಸೇರ್ದೆಯೋ ಚೋರನೆನ್ನಿಸಿ ಸೀರೆಕದ್ದು ಮಾರಕನೆ ತಾಮಮೃತನೇ 2 ಕೂರ್ಮ ವರಾಹನೇ ನರ ಕೇಸರೀ ವಾಮನನು ನೀ ಹಸ್ತಪರಶು ಶ್ರೀ ರಾಮಕೃಷ್ಣನೆ ವಿಶ್ವ ಬುದ್ಧನೆ ಕಲ್ಕಿಯೇ 3 ಘೋರ ದೈತ್ಯ ವಿದಾರಿಯೋ ಹರಿ ಸಾರಿ ಹಲವವತಾರದಿಂ ತೋರಿದವ ನೀನಾದರೂ ಜಾ ಮಾಧವ ನಂಬಿದೇ 4
--------------
ಶಾಮಶರ್ಮರು
ನಿಜವತಂದೆ ಗುರುಕೃಪೆಯಿಂದ ಸುಖಿಯಾಗಿರೊ ಮನವೆ 1 ದೊರ್ಕದು ಎಂದಿಗೆ ಮೂರ್ಖರಿಗಿದು ತಾ ತರ್ಕರಹಿತ ಪರವಸ್ತು ಗರ್ಕನೆ ತಿರುಗಿ ಸರ್ಕನೆ ನೋಡಿ ಅರಿಕ್ಯುಳ್ಳವಗರ್ಜಿತ ನಿಜಧನವು 2 ಸಾಧಿಸಿ ಜನ್ಮಾಂತರದ ಪುಣ್ಯವು ಒದಗಿ ಬಂತಿದಿರಾಗಿ ಭೇದಿಸಿ ಬೆರಿ ಚೆನ್ನಾಗಿ ಮನವೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಂತು ಫುಗಡಿ ಹಾಕ ಭ್ರಾಂತತನವ್ಯಾಕ ಸಂತ ಜನನಿಯರು ನೋಡಿ ತಲೆಯ ದೂಗಬೇಕ ಪ ಆಶೆಯಲಿ ತಾನು ಕುಳಿತು ಹಾಕುದೇನು | ಘಾಸಿಯಾಗುವ ಆರುಮಂದಿಯಾ ಕೂಡಿದರೇ ನೀನು 1 ಗರುವ ತನ ಬಿಟ್ಟು ತಿರುಗಣೆಯಾ ನುಟ್ಟು | ಆರಹು ಶರಗಿನಿಂದ ಬಿಗಿದು ಹಾಕ ಮಲಕ ಗಂಟು 2 ಲಜ್ಜೆ ವಳಿದು ನೋಡೇ ಹರಿಯಸ್ತುತಿ ಮಾಡಿ | ಘಜ್ಜಿಗೆ ಬಂಡಮ್ಯಾಲ ಯಚ್ಚರ ಮೈಯ್ಯ ಮರೆಯಿಬ್ಯಾಡೇ 3 ಎರಡು ಸವೆ ನಿನೆಹಾ ಜ್ಞಾನ ಸಖೀ ಕೈಯ್ಯಾ | ಜರಿಯದಂತೆ ಹಿಡಿದು ತಿರುಗು ನಡವಿಧ ಪರಿಯಾ 4 ಫುಗಡಿ ಇದೇ ಆಡೀ ಪ್ರೇಮಭಾವ ಕೂಡೀ | ಮುಗುತಿ ಕೊಡುವ ತಂದೆ ಮಹಿಪತಿ ಸ್ವಾಮಿ ದಯಮಾಡಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿಂತು ಲಾಲಿಸಲಿ ರಾಧಾ ಕಂತುಪಿತನ ಪದನಾದ ಪ ಬಲದ ಕಾಲೆಡದೊಳಿಟ್ಟು ಇಳೆಗೆ ಎಡದ ಪದ ಕೊಟ್ಟು ಒಲಿದು ಮುರಲಿ ಮುಖವಿಟ್ಟು ಉಲಿಯೆ ಮಧುರ ರವ ಪುಟ್ಟಿ ಬಲಬಾಲರೆಲ್ಲ ನಲಿಯುತಲಿಗೋ ಪೂರ್ವ ಮಳೆಗರೆವುತಲಿ ನಾನೆಂತು ಬಣ್ಣಿಸಲಿ ಹರಿಯ ಲೀಲೆಗಳ ಉಲಿಯುವ ಶ್ರುತಿನಾದ ಬಲದ ಸಿಂಹದ ನಾದ ಸಲೆ ವಟುವಿನ ನಾದ ಬಲವಾದ ಪರಶುವಿನತಿನಾದವು ಯಶೋಜಿತ ನಾದವು ಬಲು ವಾಜಿನಾದಗಳ್ ಕೊಳಲಲಿ ಕೇಳುತ ನಿಂದು 1 ಪಾಲು ಮೊಸರುಗಳನುಂಡು ಲೀಲೆಯಾಡುತಿರೆ ಕಂಡು ಬಾಲೆಯರತಿ ಖತಿಗೊಂಡು ಗೋಳಿಡುತಲೆ ಹಿಂಡಿಂಡು ಎಮ್ಮಾಲಯದೊಳು ಬೆಣ್ಣೆ ಮೆಲುತಲಿ ಸಣ್ಣ ಬಾಲೆರಿಟ್ಟ ಪಾಲ್ ಕುಡಿವುತಲಿ ಕೆಳಮೇಲಾಗಿ ಧದಿಯನು ಸುರಿವುತಲಿ ಜಲದೊಳು ಧುಮುಕಿದ ಕಲಕದ ಚಲವಿಡಿದ ಬಲುಬೇರ ಕೋರೆಯಿಂದಗಿದು ತಿಂದಾ ಒಲಿದು ಕಂಬವ ನೋಡಿದಾ ಬಲಿಗೆ ಬಾಯಿ ತೆರೆದಾ ಮೊಲೆ ಕೊಟ್ಟ ಜನನಿಯ ಶಿರಕಡಿದಾ ಕುಲಹೀನೆಂಜಲ ತಿಂದಾ ಖಳಪೂತನಿಯಳಿದಾ ತಿಳಿಗೆಟ್ಟು ಮೈಬಟ್ಟೆ ಕಳೆದೊಗೆದಾ ಬಲು ಮಿಂದೇರಿ ವಾಜಿ ಭಟರ ಬೆನ್ನಟ್ಟಿದಾ ನಿಂತು 2 ಸುರಿವುತಿರಲು ಮಳೆ ಭಾರಿ ಚರಿವಾವ್ಗಳು ಹೌಹಾರಿ ಮರೆಯ ಕಾಣದೆಲೆ ಹೋರಿ ಕರವುತಿರಲು ಮುರವೈರಿ ಕಿರಿಬೆರಳಲಿ ಕೊಡೆವಿಡಿವುತಲಿ ಸಣ್ಣ ಕರಗಳಾವುಗಳ್ ಸಲಹುತಲಿ ಮುದ ಗೋವುಗಳ ನೋಡುತಲಿ ನಾನೆಂತು ಬಣ್ಣಿಸಲಿ ಶಿರಿವರನಾನಂದ ಭರದಿ ವೇದವ ತಂದ ನೆರೆಶೈಲನೆಗಹಿದ ಧರಾಲಲನೀಯ ನಾಸದಿ ಪಿಡಿದ ಸುರನದಿ ದ್ವಿಜರಿಗೆ ದಾನವ ಮಾಡಿದಾ ಹರಿಗೆ ಯಜಪದ ನೀಡ್ದಾ ಗುರುಪುತ್ರರನೆ ಪಡಿದಾ ಹರಿಯೇರಿ ಮೆರೆವುದು ನಿಂತು 3
--------------
ನರಸಿಂಹವಿಠಲರು