ಒಟ್ಟು 2782 ಕಡೆಗಳಲ್ಲಿ , 117 ದಾಸರು , 2136 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಮ ತನ್ನ ಪುರದಿ ಸಾರಿದನು ನಮ್ಮಕಮಲನಾಭನ ದಾಸರ ಮುಟ್ಟದಿರಿ ಎಂದು ಪ.ಭುಜದಲೊಪ್ಪುವ ಶಂಖ ಚಕ್ರ ಮುದ್ರಾಂಕಿತನಿಜ ದ್ವಾದಶನಾಮ ಧರಿಸಿಪ್ಪರ ||ತ್ರಿಜಗವಂದಿತಳಾದ ತುಳಸೀ ಮಾಲಿಕೆಯುಳ್ಳಸುಜನರ ಕೆಣಕದೆ ಸುಮ್ಮನೆ ಬನ್ನಿರೊ ಎಂದು 1ತಾಳದಂಡಿಗೆ ಗೀತವಾದ್ಯ ಸಮ್ಮೇಳದಿಊಳಿಗವನು ಮಾಳ್ಪ ಹರಿದಾಸರ ||ಕೇಳಿದೊಡನೆ ಕರವೆತ್ತಿ ಮುಗಿದು ಯಮನಾಳುಗಳೆಂದು ಹೇಳದೆ ಬನ್ನಿರೊ ಎಂದು 2ಹೆಮ್ಮೆಯ ಸಿಡಿಯೇರಿ ಬೇವಿನುಡುಗೆಯುಟ್ಟುಚಿಮ್ಮುತ ಚೀರುತ ಬೊಬ್ಬೆಯಿಟ್ಟುಕರ್ಮಕೆ ಗುರಿಯಾಗಿ ಪ್ರಾಣಹಿಂಸೆಯ ಮಾಳ್ಪಬ್ರಹ್ಮೇತಿಕಾರನೆಳತನ್ನಿರೋ ಎಂದು 3ಮಾತಾಪಿತರ ದುರ್ಮತಿಯಿಂದ ಬೈವರಪಾತಕಿಗಳ ಪರದ್ರೋಹಿಗಳನೀತಿಯಿಲ್ಲದೆ ವಿಮೋಹಿಸಿದವರ ಬಾಯೊಳುಒತ್ತಿ ಸೀಸವ ಕಾಸಿ ಹೊಯ್ದು ಕೊಲ್ಲಿರಿ ಎಂದು 4ನರರ ಹಾಡಿ ಪಾಡಿ ನರರ ಕೊಂಡಾಡುವನರಕಿಗಳ ಕೀಳುನಾಯ್ಗಳ ಮನ್ನಿಸುವದುರುಳ ಜಾÕನಿಜನರನೆಳೆತಂದು ಬಾಯೊಳುಅರಗನೆ ಕಾಯಿಸಿ ಹೊಯ್ದು ಕೊಲ್ಲಿರಿ ಎಂದು 5ಕೇಶವಹರಿ ಎಂಬ ದಾಸರ ಹೃದಯದಿವಾಸವಾಗಿಹಸಿರಿ ತಿರುಮಲೇಶದಾಸರ ದಾಸರ ದಾಸನೆನಿಪಹರಿದಾಸರನ್ನು ಕೆಣಕದೆ ಬನ್ನಿರೋ ಎಂದು 6ಅನ್ಯಮಂತ್ರವ ಬಿಟ್ಟು ದೈವಮಂತ್ರವ ಭಜಿಸಿಪನ್ನಗಶಯನನೆ ಗತಿಯೆನ್ನುತತನ್ನ ಭಕ್ತರ ಕಾಯ್ವ ಪುರಂದರವಿಠಲನಉನ್ನತದಲಿ ನಮಸ್ಕರಿಸಿ ಬನ್ನಿರೊ ಎಂದು 7
--------------
ಪುರಂದರದಾಸರು
ಯಾಕೆ ನಿನ್ನ ಮನಕೆ ಬಾರೆ ಸಾಕೊ ನಿನ್ನ ಧ್ವರಿಯತನ ಪಕಾಕುಜನರ ಕಾಯ್ದು ಎನ್ನ ಸಾಕದಿರುವದೇನು ನ್ಯಾಯ ಅ.ಪಘನ್ನನೆನಿಸಿ ಪೊರೆದು ಎನ್ನಬನ್ನಬಡಿಸೋದು ನ್ಯಾಯವೇ1ನಾಚಿಕಿಲ್ಲದೆಂಜಲ್ಹಣ್ಣು ಯಾಚಿಸಿ ತಿಂದ್ಯಲ್ಲೊ 2ಮುಷ್ಟಿಯವಲಕ್ಕಿ ತಿಂದು ಅಷ್ಟೈಶ್ವರ್ಯ ಕೊಟ್ಟಿಯಲ್ಲೊ 3ಶÀಕ್ರಾದಿ ಸುರವಂದ್ಯ ತ್ರಿವಿಕ್ರಮನೆನಿಸಿ ತ್ರೀ -ವಕೆÀ್ರಗಂಧಕೆ ಒಲಿದು ಕುಬ್ಜೆಯ ಆಕ್ರತದಲಿ ಬೆರೆತಿಯಲ್ಲೊ 4ಉನ್ನತಾದ ಸುಖವಿತ್ತು ಚಿನ್ನನಾಗಿ ನಡೆದಿಯಲ್ಲೊ 5ಬಿಟ್ಟತನಯನೆಂದು ಕರುಣಾ ದೃಷ್ಟಿಯಿಂದ ಪೊರೆಯವಲ್ಯಾ 6ದಾತಗುರುಜಗನ್ನಾಥ ವಿಠಲ ನೀನುಪಾತಕಿಜನರ ಪೊರೆದ ರೀತಿ ಏನುನ್ಯಾಯವೋ7
--------------
ಗುರುಜಗನ್ನಾಥದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾಕೊ ದಯಬಾರದುಹರಿನಿನಗ್ಯಾಕೊ ದಯಬಾರದುಪ.ಶ್ರೀಕರ ಲೋಕೇಶ ಏಕಾನೇಕ ಸ್ವರೂಪ ಅ.ಪ.ಕಾಮಿತಾರ್ಥದಾಯಕರ ಸ್ವಾಮಿ ಲೋಕನಾಯಕಭೀಮವಿಕ್ರಮ ಶ್ರೀರಾಮ ನಿರಾಮಯ 1ಸುಂದರಿನಾಥ ಸುರೇಂದ್ರವಂದಿತಕಂದನ ಕಂದಾರವಿಂದದಳನಯನ 2ಅಕ್ಷರಬ್ರಹ್ಮ ಸಂರಕ್ಷಿಸು ನಮ್ಮಪಕ್ಷೀಂದ್ರವಾಹನ ಲಕ್ಷ್ಮೀನಾರಾಯಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾತರ ಬಲ್ಲತನವೊ ಕೃಷ್ಣಯ್ಯ ನಿನಗ್ಯಾತರ ಬಲ್ಲತನವೊ ಪ.ಯಾತರ ಬಲ್ಲತನನಾಥರ ನಮ್ಮ ಸನಾಥರ ಮಾಡಿ ಸಂಪ್ರೀತಿಯ ಬಡಿಸದಿನ್ಯಾತರ 1ಬಿರುದಂತೆ ಭಕುತರ ಪೊರೆವುದು ಗಡ ನಿನ್ನಸ್ಮರಣೆಗೆ ಮರೆವಿತ್ತು ದುರಿತಕೊಪ್ಪಿಸುವುದಿನ್ಯಾತರ 2ಬಲ್ಲತನದ ಗುರುತೆಲ್ಲ ದೇಶದೊಳು ನನ್ನಲ್ಲಿ ಅಜ್ಞಾನದ ಬಳ್ಳಿಯ ತೊಡಕಿಸೂದ್ಯಾತರ 3ನಿಜರವಮಾನದ ಕುಜಕೆ ಪರಶುರಾಮತ್ರಿಜಗವಂದಿತ ನಿನ್ನ ಭಜಕರೊಳಿಡಲೊಲ್ಲದ್ಯಾತರ 4ದುರಿತಗಿರಿತ ಅರಿಗಿರಿಗಂಜೆ ನಾಮವಜ್ಜರವಿರೆ ಪ್ರಸನ್ವೆಂಕಟರಸ ಮನ್ನಿಸಲೊಲ್ಲದ್ಯಾತರ 5
--------------
ಪ್ರಸನ್ನವೆಂಕಟದಾಸರು
ಯಿದ್ದ ಪಾಂಡವರ ಬಳಿಯ ಶುದ್ಧಮಾನವಮುದ್ದುಮೋಹದ ಮುದ್ದು ಗೆಳೆಯಾ ಪಕರುಗಳ ಬಿಟ್ಟ ಕುರುಗಳ ಕರಮಾ | ಕರದಲಿಆಕಳ ಮೊಲೆಗಳ ಪಿಡಿದೂ | ಸುರಿದುಚ್ಚಪ್ಪರಿದು ಕಂಡಕಟಾವಾಯುಲ್ಲಿ ನೊರೆವಾಲ 1ತುಡುಡಿಯಂಬ ಕಡವಧನಿಗೆ | ಅಡಗಿ ಅಡಗಿಯೊಳತೊಳನಾಡಿಸುತ | ಮಡದಿಯರೆಲ್ಲರು ಮೋಹಸಿ ಕರೆದರೆ |ತುಡುಕಿ ಬೆಂಣ್ಣೆಯ ಮೆದ್ದಕಾಣೆ 2ಒಂದಾಂಲೊಂದೊಂದುಕಡವು| ವೊಂದಿತು ಗೋಪಿಯರಮುಂದಕೆ | ತಂದೆಪುರಂದರವಿಠಲ ರಾಯನ ವಂದಿಸುತ3
--------------
ಪುರಂದರದಾಸರು
ಯೋಗಧರತಾತಕಘ ಲೋಕಪತಿ ದೇವಸಿರಿ|ಯೋಗ ನಿನ ಪದಕೆ ಶರಣೆಂಬುವೆನೊ ಕಾಯೋ ಪಯೋಗಾಂಡದೊಳ ಹೊರಗೆ ವ್ಯಾಪ್ತನೆ ಗುಣರಹಿತನೆ |ಯೋಗಾಂಬರ ಧರ ಘ-ಮುಖ ಜನಕ ||ಯೋಗಗಾತ್ರಷ ದೂರ ವರ್ಗದ್ವಯ ಅವತಾರ |ಯೋಗ ಪಾಣೀ ಸುತ ಪ್ರಿಯ ಸುಮತಿ ಕೊಡು ಜೀಯ 1ಯೋಗರಾಯಗೆ ಅದೇಪದವಿಕರುಣಿಸಿ ಕೊಟ್ಟೆ |ಯೋಗೇಶಣಾಸ್ತ್ರ ಪಿತದಂತಿವರದ||ಯೋಗದಲಿ ಮನಸು ನಿಶ್ಚೈಸೊ ಹಾ ಕರ್ತೃತ್ವ |ಯೋಗಫಲ ಸ್ವೀಕರಿಸುತಿಹ ಕಂಜನಾಭ 2ಯೋಗನಾಗೆಯೋ ದುರ್ಮತಿಗಳಿಗೆಂದಿಗೂ ನೀನು |ಯೋಗಿಜನ ವಂದ್ಯ ಹಾ ನಾರೀಪತಿ ನಿನ್ನ ||ಯೋಗ ಸೇವಕರೊಳಿಡೋ ಪ್ರಾಣೇಶ ವಿಠ್ಠಲನೇ |ಯೋಗ ಹ್ರಾಸ ವಿವರ್ಜ ಘಟಜ ಕರಪೂಜ್ಯ 3
--------------
ಪ್ರಾಣೇಶದಾಸರು
ರಕ್ತಾಕ್ಷಿ ಸಂವತ್ಸರ ಸ್ತೋತ್ರ156ಶರಣು ಶರಣು ರಕ್ತಾಕ್ಷಿ ವರ್ಷದ ಸ್ವಾಮಿ ಶ್ರೀ ನರಸಿಂಹನೇಶರಣು ದುರ್ಗಾರಮಣ ಜಗಜ್ಜನ್ಮಾದಿ ಕಾರಣ ಪಾಹಿಮಾಂ ಪಸರಸಿಜಾಸನ ಶಿವ ಶಕ್ರಾದಿ ಸುರಸುವಂದಿತ ಪಾದನೇಶ್ರೀ ರಮಾಯುತನಾಗಿ ನೀ ಸಂವತ್ಸರದ ನಾಯಕರೊಳುಇರುತ ಪ್ರಜೆಗಳ ಯೋಗ ಕ್ಷೇಮವ ವಹಿಸಿಪೊರೆವಿ ದಯಾನಿದೇ 1ರಾಜ ಸೋಮನು ಮಂತ್ರಿ ಭೃಗು ಸೇನಾಧಿಪತಿ ಬೃಹಸ್ಪತಿಪ್ರಜ್ವಲಿಪರ ವಿಸಸ್ಯನಾಯಕಶನಿಯು ಧಾನ್ಯ ಅಧಿಪನುರಾಜರಾಜೇಶ್ವರನೆ ನಿನ್ನ ಆಜÉÕಯಿಂದ ಚರಿಪರು 2ಶರಣು ಭಕ್ತರ ಕಾಯ್ವ ಕರುಣಾವಾರಿವಿಧಿನೀ ಸರ್ವದಾತರಿದು ಪಾಪವ ಪುಣ್ಯ ಒದಗಿಸಿ ಭಕ್ತಿ ಜ್ಞÕನ ಆಯುಷ್ಯಆರೋಗ್ಯವಿತ್ತು ಕಾಯೋಅಜಪಿತಪ್ರಸನ್ನ ಶ್ರೀನಿವಾಸನೇ3
--------------
ಪ್ರಸನ್ನ ಶ್ರೀನಿವಾಸದಾಸರು
ರಂಗ ರಥವನೇರಿದನಕ್ಕ- ಮೋಹ- |ನಾಂಗ ನಮ್ಮ ಸೇರದೆ ಪೋಗುವನಕ್ಕ ಪಮಾತುಳಮಥರೆಯೊಳಿಹನಂತೆ - ಅಲ್ಲಿ |ಮಾತಾಪಿತರಿಗೆ ಬಂಧನವಂತೆ, ಇವರು |ನೂತನ ಬಿಲ್ಲಿನ ಅರ್ಥಿಗಳಂತೆ ||ಪೀತಾಂಬರಧರನ ಪೂಜೆ ನೋಡುವೆನೆಂಬ |ಆತುರದಿಂದಿರೆ ಅಕ್ರೂರನೊಡನೆ ಈಗ 1ಬಲರಾಮ ಬಂಧುವಿನೊಡಗೂಡಿ ನಂದ-|ನಡಿಗೆ ಯಶೋದೆಗೆ ವಂದನೆ ಮಾಡಿ-ತಾವು |ಬಿಡಲಾರೆವೆಂದು ಭಾಷೆಯ ನೀಡಿ ||ತಡೆಯೆನೆನುತ ತಾಯಿಗೆ ಭರವಸೆಯಿತ್ತು |ಕಡಲಶಯನನು ಕಾತರದಿಂದಲಿ ಈಗ 2ಮಧುರಾ ಪಟ್ಟಣದ ಮಾನಿನಿಯರು ಅತಿ |ಚದುರೆ ಚೆಂಚಲೆ ಚಾಪಲತೆಯರು-ನಮ್ಮ |ಮದನನಯ್ಯನ ಮೋಹಿಸುತಿಹರು ||ಕಧಿಜನಾಭ ನಮ್ಮ ಪುರಂದರವಿಠಲ |ಪದುಮನಾಭನ ಪಯಣವ ನಿಲ್ಲಿಸಕ್ಕ 3
--------------
ಪುರಂದರದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರಾಜರ ನೋಡಿರೈ ಇನತತಿತೇಜರ ಪಾಡಿರೈ ಪಪೂಜಕÀರಾ ಸುರಸನ್ನುತರ ಅ.ಪವರಪಾಷ್ರ್ಣಿದ್ವಯ ಪರದಲಿ ಶೋಭಿಪಜಾನುಗಳೋ ಶಶಿಬಿಂಬಗಳೋ 1ಕಟಿತಟವೋಕೇಸರಿನಡುವೋತುಂಬಿದ ಕರುಣನ ಗುಂಭಸುನಾಭೀ -ತಾವರೆಯೋ ಗಂಗಾಸುಳಿಯೋ 2ಸುಂದರಕುಕ್ಷಿಸುಚಂದನ ಚರ್ಚಿತದಂಡಗಳೋಕರಿಶುಂಡಗಳೋ3ಯತಿಕುಲವರ್ಯನ ಸ್ಮಿತಯುತವಕ್ತ್ರಕ್ಷಿತಿಸುರ ವಂದ್ಯನ ಅತಿ ಸುಂದರ -ನಯನಗಳೋ ನೈದಲಿಯುಗಳೋ 4ಘಣೆಯೋ ಅಕ್ಷತಮಣಿಯೋ 5ಮಂದಿರವೆನಿಸುವ ವೃಂದಾವನಶುಭವೃಂದಾರಕಘನವೃಂದದಿ ರಾಜಿಪದಾತಾಜಗದೊಳು ಖ್ಯಾತಾನೀತಾ ಭಾವಿ ವಿಧಾತಾ 6ಶಿಷ್ಟರ ಸುಮನೋಭೀಷ್ಟದ ಗುರುಜಗ -ನ್ನಾಥವಿಠಲ ದೂತಾ 7
--------------
ಗುರುಜಗನ್ನಾಥದಾಸರು
ರಾಮ ರಾಮ ಸೀತಾರಾಮ ರಘುರಾಮ ಪ.ರಾಮ ರಾಮ ರಘುನಂದನ ತೋಷನಆಮಿಷ ಪಾದಾಂಬುಜ ಪಾವನನಾಮ ವಿಮಲ ಕಮಲಾಯತ ಲೋಚನಭೂಮಿಜಾರಮಣ ಸದಾ ಶುಭಮಹಿಮನೆ 1ದಂಡ ಕುಖರಹರ ವಂದಿತ ಸುಜಟಾಮಂಡಿತಮೌಳಿಮುನೀಂದ್ರ ಕರಾರ್ಚಿತಚಂಡಕುಲೇಶಖಳನಿಶಾಚರದಂಡನವರಕೋದಂಡವಿದಾರಿ2ವಾರಿದಶಾಮ ದಯಾಂಬುಧಿ ಭಕ್ತ ಸಮೀರಜಸೇವ್ಯವಿಭೀಷಣವರದ ಸುಸ್ಮೇರವದನ ಸಾಮ್ರಾಜ್ಯ ಪಾರಾಯಣಭೂರಿಪ್ರಸನ್ವೆಂಕಟ ಕೃಷ್ಣ ನಮೊ3
--------------
ಪ್ರಸನ್ನವೆಂಕಟದಾಸರು
ರಾಮನ ನೋಡಿರೈ ರಘುಕುಲಸೋಮನ ಪಾಡಿರೈ ಪ.ಜೀಮೂತಶ್ಯಾಮಲಕಾಯ ಜನಕಜಾಮಾತಸೀತಾಕಾಂತಅ.ಪ.ಕೋಟಿದಿವಾಕರನಿಭ ಮಕುಟದ ಮಸ್ತಕದ ಮುದ್ದಿನ ಮುಖದನೀಟಹ ಪಣೆಯಲಿಮೃಗಮದಪುಂಡ್ರತಿಲಕದ ನೀಲಾಳಕದಮಾಟಕ ಮದನನ ಬಿಲ್ಲ ಹಳಿವ ಹುಬ್ಬುಗಳ ಇತ್ತಂಡಗಳನೋಟದಿ ದಯಾರಸ ಸೂಸುವ ಕಮಲದಳಗಳ ಸಮನಯನಗಳ 1ಎಸೆವ ಸುನಾಸಿಕ ಜ್ವಲಿತಕುಂಡಲಸ್ಮಿತವದನ ಶಶಿಸಮರದನಹೊಸ ತುಲಸಿಯ ಮಂಜರಿ ವನಮಾಲಾಧರನ ಸತ್ಕಂಧರನಮಿಸುನಿಯವೈಜಯಂತಿತ್ರಿಸರವು ದಿವ್ಯಪದಕಗಳ ಝಳ ಝಳಪುಗಳಲಸತ್ ಶ್ರೀವತ್ಸ ವಕ್ಷದಿ ಕುಂಕುಮ ಚಂದನದ ಗುಣಗಣಘನದ 2ಮರಕತಸ್ತಂಭಗಳಿಗೆ ಪೋಲ್ವೆಡೆಬಾಹುಗಳ ಅಂಗದಯುಗಳಕರವಲಯಾಂಗುಲಿಮುದ್ರಿಕೆ ಧೃತಕೋದಂಡ ದಂಡಕದಂಡಸಿರಿಜಠರತ್ರಿವಳಿಗಂಭೀರನಾಭ ನಿರ್ಜರನಾಭವರಪಿಂಗಳ ಕೌಶೇಯಾಂಬರಕಟಿಸೂತ್ರಶ್ರೀ ಬ್ರಹ್ಮಸೂತ್ರ3ಬಟ್ಟದೊಡೆಜಾನುಘಟ್ಟಿದಂತೋಪಮ ಜಂಘ ಸಂವೃತ ಜಂಘಾಕುಟಿಲ ನೀ ರಾಕ್ಷಸದಲ್ಲಣ ಪೆಂಡೆಯದ ಚೆಲುವಾ ಜನಜನಿಗೊಲಿವಕಠಿಣತರ ಪದತಳದೆಡೆ ಧ್ವಜಾಂಕುಶಾಂಬುಜ ಹೃತ್ಕಲುಷಾನಿಟಿಲನಯನ ವಿಧಿಸುರ ಋಷಿವಂದಿತಚರಣನೂಪುರಾಭರಣ4ಸುಖಮುನಿ ಮುಖ್ಯಮುನಿ ಪೂಜಿತ ವಿಗ್ರಹ ವಾರಾಪಾರವಿಹಾರನಿಖಿಲ ಗುಣಾರ್ಣವ ನಿತ್ಯದಯಾರ್ಣವ ರಾಜ ರಾಜಾಧಿರಾಜಸಕಲ ಸಂಯಮಿಕುಲಮೌಳಿರತುನ ಸತ್ಯಪೂರ್ಣ
--------------
ಪ್ರಸನ್ನವೆಂಕಟದಾಸರು
ರಾಮಸ್ಮರಣೆಯಿಂದ ಸಕಲ ಪಾಪಹರ ರಾಮ ರಾಮ ಎನ್ನಿರೊವ್ಯೊಮಕೇಶನ ದಿವ್ಯತಾರಕ ಮಂತ್ರವು ಪ.ಶತಕೋಟಿ ರಾಮಾಯಣದ ಬೀಜಾಕ್ಷರ ರಾಮ ರಾಮ ಎನ್ನಿರೊಕ್ಷಿತಿಜೆಯ ಪ್ರಾಣದ್ವಲ್ಲಭ ಶ್ರೀದಶರಥರಾಮ ರಾಮ ಎನ್ನಿರೊ 1ಪಾಮರರೆಲ್ಲರು ಪಂಡಿತರಾದರು ರಾಮ ರಾಮ ಎನ್ನಿರೊಆ ಮೋಕ್ಷ ಕರತಳವಾಹುದು ಕೊಂಡಾಡೆ ರಾಮ ರಾಮ ಎನ್ನಿರೊ 2ಮಖಕೋಟಿಗಧಿಕ ಮಹಾಪುಣ್ಯದಾಯಕ ರಾಮ ರಾಮ ಎನ್ನಿರೊಮುಕ್ತಾಮುಕ್ತಾರ್ಚಿತ ಕರುಣವಾರಿನಿಧಿ ರಾಮ ರಾಮ ಎನ್ನಿರೊ 3ಭಕ್ತವತ್ಸಲ ಭಾಗ್ಯಭೂಷಿತಭವಹರರಾಮ ರಾಮ ಎನ್ನಿರೊನಿಖಿಲ ಭುವನಪತಿ ಬ್ರಹ್ಮಾದಿಸುರವಂದ್ಯ ರಾಮ ರಾಮ ಎನ್ನಿರೊ 4ಅಂಜನೆಜಾತಪೂಜಿತ ಪಾದವಾರಿಜ ರಾಮ ರಾಮ ಎನ್ನಿರೊಕಂಜನೇತ್ರಕಂಜಸಖಅನಂತಪ್ರಭ ರಾಮ ರಾಮ ಎನ್ನಿರೊ5ದಶಶಿರಮರ್ದನ ವಿಭೀಷಣ ವರಪ್ರದ ರಾಮ ರಾಮ ಎನ್ನಿರೊಸುಶರಧಿ ಬಂಧನ ಸುಗ್ರೀವ ಸಂಸೇವ್ಯ ರಾಮ ರಾಮ ಎನ್ನಿರೊ 6ಲಕ್ಷ್ಮಣ ಭರತ ಶತ್ರುಘ್ನಾರಾಧಿತ ರಾಮ ರಾಮ ಎನ್ನಿರೊಋಕ್ಷವರಪ್ರದ ರಘುಕುಲಾಂಬುಧಿಚಂದ್ರ ರಾಮ ರಾಮ ಎನ್ನಿರೊ 7ಜ್ಞಾನಾನಂದ ಬಲಾತ್ಮ ಪರಬ್ರಹ್ಮ ರಾಮ ರಾಮ ಎನ್ನಿರೊಮೌನಿನಿಕರಧ್ಯೇಯಪುಣ್ಯಪುರುಷಗೇಹ ರಾಮ ರಾಮ ಎನ್ನಿರೊ8ಪ್ರಸನ್ನಮೂರುತಿ ಪ್ರಸನ್ನಾನನ ಪರಮಾತ್ಮ ರಾಮ ರಾಮ ಎನ್ನಿರೊಪ್ರಸನ್ನನಿಲಯ ನಿತ್ಯಪ್ರಸನ್ನವೆಂಕಟ ರಾಮ ರಾಮ ರಾಮ ಎನ್ನಿರೊ 9
--------------
ಪ್ರಸನ್ನವೆಂಕಟದಾಸರು
ರಾಯರ ನೋಡಿರೈ ಶುಭತಮ ಕಾಯರ ಪಾಡಿರೈ ಪತೋಯಜ-ಪತಿನಾರಾಯಣ ಪದಯುಗxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಭೃಂಗಾ - ಭüಕ್ತಕೃಪಾಂಗಾ ಅ.ಪಮಂದಸ್ಮಿತಯುತ ದ್ವಂದ್ವ ಓಷ್ಠ,ಶ್ರುತಿಕಂಧರಯುತ ಪೂರಂದರ - ಕರಿಕರಸುಂದರ ಹೃದಯದಿ ನಾಮಾ ಹಚ್ಚಿಹÀ ಪ್ರೇಮಾ 1ಸ್ವಸ್ತಿಕಾಸನ- ಸ್ಥಿತ-ಮೋದಕೃತವಿನೋದವಸ್ತ್ರದಿ ಶೋಭಿಪಗಾತ್ರಶುಭಚರಿತ್ರಸ್ವಸ್ಥ ಮನದಿ ಪ್ರಶಸ್ತ ಹರಿಯಪಾದಸ್ವಿಸ್ತಿಕ-ಯುಗಳ- ಧ್ಯಾನ ಮಾಡುವಙ್ಞÕನಸ್ವಸ್ತಿದನೆನಿಸಿದ ಭೂಪಾ ಭವ್ಯ ಪ್ರತಾಪ 2ಕುಟಲವಿಮತರ ಪಟಲಾಂಧಕಾರಕೆಪಟುತರದಿನಮಣಿ ರೂಪಾ ನಿಜ ಜನ-ಸುರಪಾಸ್ಪುಟಿತ-ಹಾಟಕ- ಚಂದ್ರಾ ಸದ್ಗುಣಸಾಂದ್ರಚಟುಲಜನರ ಪರಿಪಾಲಾ ಕರುಣವಿಶಾಲಾಕಿಟಿರದ-ಭವ- ನದಿ - ತಟ-ಕೃತ - ಮಂದಿರಧಿಟ ಗುರುಜಗನ್ನಾಥಾ ವಿಠಲ ದೂತಾ 3
--------------
ಗುರುಜಗನ್ನಾಥದಾಸರು