ಒಟ್ಟು 3133 ಕಡೆಗಳಲ್ಲಿ , 117 ದಾಸರು , 2340 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದ್ರಸೇನ ನಾಥ ಹೋ, ತ್ರೈಲೋಕ್ಯ ವಿಖ್ಯಾತ ಹೋ |ಸವ್ಯಸಾಚಿ ಪ್ರೀತ ಹೋಮಧ್ಯಗೇಹಜಾತ ಹೋ ಪತರಣಿಬಿಂಬಕೆ ಜಿಗಿದೆ ಗದೆಯನು ವಗೆದೆಅಸುರಗ ಕರವನು ಮುಗಿದೆ |ಹರಿಗೆ ವಾರ್ತೆಯ ತಂದೆ ಜರಿಜನ ಕೊಂದೆನೀಂ ಬದರಿಯೊಳ್ನಿಂದೆ ಖಳಕುಲ |ತರಿದೆ,ವಜ್ರಶರೀರ, ಧರಣಿಯಭಾರವಿಳುಹಿದುದಾರಮತಿ, ಕಪಿ |ವರನೊಳತಿ ಕೃಪೆ ಮಾಡಿದೆ ದಾನವ |ಬೇಡಿದೆ ಸುಮತಿಯ ನೀಡಿದೆ 1ದಂಡ ಮೇಖಲ ಧಾರ ಕುಜನಕುಠಾರ|ಬ್ರಹ್ಮ ಶರೀರ ಜೈಸಿದೆಮಂಡೋದರಿ ವಲ್ಲಭನ ಚರಿಸಿದೆಯೋವನ|ತಂದೆ ಮಾಧವನ ಉಡುಪಿಲಿಚಂಡವಿಕ್ರಮರಾಮ ಸೇವಕ ಭೀಮ |ಸದಾಚಾರಧಾಮಯತಿ ಮೇ |ಷಾಂಡನ ಮೊರೆ ಕೇಳ್ದೆ ಕೀಚಕನನು ಸೀಳ್ದೆ ದ್ವಿಜಕುಲವಾಳ್ದೆ 2ಲಕುಮಿಗುಂಗುರವ ಕೊಟ್ಟಿ ರಣಕತಿ ಗಟ್ಟಿಶಾಟಿಯನುಟ್ಟಿ ಶರಧಿಯ ತ |ವಕದಿ ಕ್ಷಣದೊಳು ಹಾರಿದೆ ಉಗ್ರವ ತೋರಿದೆಜ್ಞಾನವ ಬೀರಿದೆ ಲಂಕೆಯ |ಸಕಲ ಸೌಖ್ಯವ ಕೆಡಿಸಿ ಪುಷ್ಪವ ಮುಡಿಸಿಐಕ್ಯವ ಬಿಡಿಸಿ, ವಟುವಪು |ಮುಕುತಿಪತಿಪ್ರಾಣೇಶ ವಿಠಲನದಾಸ ಸಲಹೋ ನಿರ್ದೋಷ3
--------------
ಪ್ರಾಣೇಶದಾಸರು
ಇನ್ನು ಪುಟ್ಟಿಸದಿರಯ್ಯ ಪುಟ್ಟಿಸಿದಕೆ ಪಾಲಿಸಯ್ಯಎನ್ನ ದಯದಿ ಪಾಲಿಸಯ್ಯ ಪನಿನ್ನ ಚರಣಾಂಬುಜವ ನಂಬಿದೆನೊ ಶ್ರೀ ಹರಿಯೆಬನ್ನು ಬಿದ್ದೆನು ಭವಬಂಧನವ ಬಿಡಿಸಯ್ಯ ಅ.ಪಅಮರೇಂದ್ರವಂದಿತನೆ ಅನಂತಮಹಿಮನೆಕಮಲಸಖಾನಂತಕರನೆ ||ಕಮಲಾಯತಾಂಬಕನೆ ಕಾಮಿತದಾಯಕನೆವಿಮಲಗುಣ ವಿಭೀಷಣಗೆ ಒಲಿದ ದಯದಿಂದಲೆನ್ನ1ಅಜಮಿಳ ಅಂಬರೀಷ ಅಕ್ರೂರ ವಿದುರಗೆಗಜರಾಜ ಗಿರಿಜೇಶಗೆ ||ನಿಜಭಕ್ತ ಪ್ರಹ್ಲಾದಅಜ ಧ್ರುವ ಅರ್ಜುನಗೆದ್ವಿಜ ಸುತ ರುಕ್ಮಾಂಗದರಿಗೊಲಿದ ದಯದಿಂದಲೆನ್ನ2ಅವರಂತೆ ನಾನಲ್ಲಅವರ ದಾಸರ ದಾಸಸವರಿ ಬಿಸುಟೆನ್ನ ದೋಷ ||ಪವಿತ್ರನ್ನ ಮಾಡಯ್ಯ ಪುಂಡಲೀಕ ವರದನೆಅವಸರಕೆ ದ್ರೌಪದಿಗೆ ಒಲಿದ ದಯದಿಂದಲೆನ್ನ 3ಎಂದೆಂದು ನಿನ್ನ ಪಾದವೆನಗೆ ನೆಲೆಯಾಯಿತುಎಂದೆಂದು ನಿನ್ನ ನಾಮಭಜನೆ ||ಎಂದೆಂದು ನೀಯೆನ್ನ ಬಿಡದೆ ಪಾಲಿಸೊ ಸ್ವಾಮಿಅಂದು ಅಂಜನೆಕಂದನಿಗೆ ಒಲಿದ ದಯದಿಂದಲೆನ್ನ 4ಅಂತರಂಗದುಬ್ಬಸವ ಅಯ್ಯೋ ನಿನಗುಸಿರುವೆನುಚಿಂತೆಗಳ ಪರಿಹರಿಸೊ ||ಸಂತತ ಪಾಲಿಸೊಪುರಂದರ ವಿಠಲನೆಚಿಂತಿಪ ಗೌತಮನ ಸತಿಗೆ ಒಲಿದ ದಯದಿಂದಲೆನ್ನ 5
--------------
ಪುರಂದರದಾಸರು
ಇವಗೇಕೆ ಪರಿಮಳ ಇವಗೇಕೆ ಶೃಂಗಾರ |ನವನೀತ ಚೋರ ನಾರುವ ಗೊಲ್ಲಗೆಪಹೊಲಸು ಮೈಯವಗೇಕೆ ಹೊಸ ಕಸ್ತೂರಿಯ ಲೇಪ |ತಲೆದೋರದವಗೇಕೆ ದಟ್ಟ ಪುನುಗು |ಬಲು ಕೇಶದವಗೇಕೆ ಬಾವನ್ನದ ಲೇಪ |ಸಲೆಘೋರರೂಪಿಗೇಕೆ ನೊಸಲ ಸಾದು 1ತುಲಸಿಮಾಲೆಯ ಧರಿಸಿದವಗೇಕೆ ಜವ್ವಾಜಿ |ಕೊಲೆಗಡುಕಗೀಕೆ ಕುಂಕುಮತಿಲಕ ||ಅಲೆದಾಡುವವಗೇಕೆ ಅಂಗರಾಗದ ಸುಖ|ಕಳವು ಮಾಡುವವಗೇಕನಂಗ ಸೊಬಗು 2ಪರಸತಿಯ ಬಯಸುವಗೆ ಪನ್ನಗಶಯನವೇಕೆಹರಿದಾಡುವನಿಗೇಕೆ ಅಡಪ - ಡವಿಕೆ ||ಸಿರಿದೇವಿ ಶೃಂಗಾರಗೈದು ವರಿಸಿದ ಬಳಿಕ |ಧರೆಗಧಿPನಾದನೀಪುರಂದರ ವಿಠಲ3
--------------
ಪುರಂದರದಾಸರು
ಇಷ್ಟುಪಾಪವನು ಮಾಡಿದುದೆ ಸಾಕೊ |ಸೃಷ್ಟಿಗೀಶನೆ ಎನ್ನನುದ್ಧರಿಸಬೇಕೊ ಪಒಡಲಕಿಚ್ಚಿಗೆ ಪರರ ಕಡು ನೋಯಿಸಿದೆ ಕೃಷ್ಣ |ಕೊಡದೆ ಅನ್ಯರ ಋಣವನಪಹರಿಸಿದೆ |ಮಡದಿಯ ನುಡಿಕೇಳಿಒಡಹುಟ್ಟಿದವರೊಡನೆ |ಹಡೆದ ತಾಯಿಯ ಕೂಡಹಗೆಮಾಡಿದೆ1ಸ್ನಾನಸಂಧ್ಯಾನಜಪ ಮಾಡದಲೆ ಮೈಗೆಟ್ಟೆ |ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ ||ಏನ ಹೇಳಲಿ ಪರರ ಮಾನಿನಿಗೆ ಮನಸಿಟ್ಟೆ |ಶ್ವಾನ- ಸೂಕರನಂತೆ ಹೊರೆದೆ ಹೊಟ್ಟೆ2ವ್ರತ ನೇಮ ಉಪವಾಸ ಒಂದು ದಿನ ಮಾಡಲಿಲ್ಲ |ಅತಿಥಿಗಳಿಗನ್ನವನು ನೀಡಲಿಲ್ಲ |ಶೃತಿ ಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ |ವೃಥವಾಗಿ ಬಹುಕಾಲ ಕಳೆದನಲ್ಲ 3ಶುದ್ಧ ವೈಷ್ಣವ ಕುಲದಿ ಉದ್ಭವಿಸಿದೆನೋ ನಾನು |ಮಧ್ವ ಮತಸಿದ್ದಾಂತ ಪದ್ಧತಿಗಳ ||ಬುದ್ಧಿಪೂರ್ವಕ ತಿಳಿದು ಪದ್ಮನಾಭನು ದಿನದಿ |ಕದ್ದುಂಡು ಕಾಯವನು ವೃದ್ಧಿಮಾಡಿದನಯ್ಯ 4ತಂದೆ - ತಾಯ್ಗಳ ಸೇವೆ ಒಂದು ದಿನ ಮಾಡಲಿಲ್ಲ |ಮಂದಭಾಗ್ಯದಬವಣೆತಪ್ಪಲಿಲ್ಲ ||ಹಿಂದೆ ಮಾಡಿದ ದೋಷ ಬಂದುಳಿಯದರುಹಿದೆನು |ತಂದೆ ಪುರಂದರವಿಠಲ ಮುಂದೆನ್ನ ಕಾಯೊ 5
--------------
ಪುರಂದರದಾಸರು
ಈ ವಸುಧೆಯೊಳೆಲ್ಲರಿಗಿಂತ ಕೃಷ್ಣನು ಆವುದರಿಂದಧಿಕಾ ಪವಾರಿಧಿಮನೆಯಲ್ಲೆ ಈಗಿನರಸರಿಗೆ |ನೀರೊಳಗೇಸೊಂದು ಊರಿಲ್ಲವೇ ||ಶಾಙ್ರ್ಗ ಧನುವಾದರೇನು ದುರ್ಲಭವಲ್ಲ |ಧಾರಿಣಿಯೊಳು ಮನೆ ಮನೆಯಲ್ಲಿ ಕಾರ್ಮುಖವು 1ಲೇಸೇನು ಕೌಸ್ತುಭವೊಂದೆಯೇ ಮಣಿಗಳು |ಏಸೊಂದಿಲ್ಲದೆ ಭಾಗ್ಯವಂತರಲ್ಲಿ ||ಶೇಷನ ಹಾಸಿಗೆ ಹಾವಾಡಿಸಿ ಹೊಟ್ಟೆ |ಪೋಷಿಸಿಕೊಳ್ಳರೆ ಗಾರುಡಿಗರೆಲ್ಲ 2ಪೀತಾಂಬರಂತು ಎಲ್ಲರಿಗಿಹದು ದೊಡ್ಡ |ಮಾತಲ್ಲ ವನಮಾಲೆವೈಜಯಂತಿ||ಖ್ಯಾತಿಗೆ ಶಂಖಚಕ್ರವು ಹೇಳಿಕೊಳ್ಳಲು |ಜಾತಿಕಾರಗಿಲ್ಲೇ ಬಡಿವಾರವೇತಕೆ3ಶ್ರೀವತ್ಸ ಶ್ರೀವತ್ಸವೆಂಬರು ಮಂದೆಲ್ಲ |ಆವ ಹುಣ್ಣಿನ ಕಲೆಯಾಗಿಹದೋ ||ಆವಾನಿ ಹಯರಥ ಮುದಿಹದ್ದುಯೇರುವ |ಕೋವಿದರೆಲ್ಲೇನು ನೋಡಿ ವಂದಿಸುವರೋ 4ವೈಕುಂಠ ಮೊದಲಾದ ಮೂರೇ ಊರವನಿಗೆ |ಲೋಕದೊಳರಸರಿಗೇಸೋ ವೂರು ||ಶ್ರೀಕಾಂತ ಪ್ರಾಣೇಶ ವಿಠಲನ ಸಂಗ |ಬೇಕೆಂದು ಬಯಸುವರೆಲ್ಲರೂ ತಿಳಿಯದೆ 5
--------------
ಪ್ರಾಣೇಶದಾಸರು
ಈ ಸಮಯಕಲ್ಲದಿನ್ನೆಲ್ಲಿ ಕಾಯೊದೋಷರಹಿತ ವಸುದೇವ ನೀ ಕಾಯೊ ಕೃಷ್ಣ ಪನಿನ್ನಂಘ್ರಿಯನು ಭಜಿಸಿದವರ ಬಾಳ್ವೆಯ ಕಾಯೊ |ಎನ್ನಸತಿಸುತರು ನಿನ್ನವರೆ ಕಾಯೊ ||ನೀನಲ್ಲದನ್ಯರನು ಕಾಣೆ ಕವಳಿಯ ಕಾಯೊ |ಮುನ್ನ ಸ್ಥಿರವಾಗಿ ನೀನೆಂಬೆ ಕಾಯೊ 1ಪರವೆಣ್ಣುಗಳಿಗೆ ಎನ್ನ ಮನಸು ಕಾತರಿ ಕಾಯೊ |ದುರಿತದುಷ್ಕರ್ಮ ಮುಂಚಿಲ್ಲ ಕಾಯೊ ||ಕರೆಕರೆಯ ಸಂಸಾರಕಷ್ಟು ಕಡಲಿಯ ಕಾಯೊ |ದುರಿತಭವಶರಧಿಗೆ ತಾರೆ ಕಾಯೊ2ತ್ರಿವಿಧಪಾಪಂಗಳಿಗೆ ಪದವು ಉದ್ದಿನ ಕಾಯೊ|ಭವಸಾಗರದೊಳೀಸೆಂಬೆ ಕಾಯೊ ||ದಿವಿಜೇಂದ್ರ ಕೃಷ್ಣ ಕೈಪಿಡಿದು ಒಲಿದು ಕಾಯೊ |ನವ ಮುಕ್ತಿಪುರಂದರವಿಠಲ ನೀ ಬಿಡದೆ ಕಾಯೊ3
--------------
ಪುರಂದರದಾಸರು
ಈಗಾಗೋ ಇನ್ನಾವಾಗೋ ಮತ್ತೀಗಾತ್ರ ಅಸ್ಥಿರವಣ್ಣಹೇಗಾದರು ಹೊಗಳಾಡಲಿ ಬೇಕುನಾಗಾರಿಗಮನನ್ನ ಪ.ಮನಹರಿದತ್ತಲೆ ಹರಿಹರಿದಾಡಿದಿನ ಹೋದವು ವೃಥಾ ನೋಡಿ ದುರ್ಧನದಾಸೆಲಿ ಬಾಡಿ ದುರ್ಜನರಾರಾಧನೆ ಮಾಡಿ ಈತನು ಚಪಲತೆ ಹೋಗಾಡದೆ ಶ್ರೀಹರಿಗುಣಕುಣಿದು ಕೊಂಡಾಡಿ1ತುಂಬಿದಸಿರಿಬಿಡಿಸಿ ಸೆರೆ ಒಯಿವರು ವಿಲಂಬಿಲ್ಲದೆ ಜವನವರು ಕೃಪೆಯೆಂಬುದ ಅರಿಯರು ಅವರುಹಲವ್ಹಂಬಲಿಸಿದರೊದೆವರು ಸುಡುನಂಬಲಿಬಾರದು ಸಂತೆಯವರಅಂಬುಜನಾಭನ ಸಾರು 2ಸಕಳಾಗಮ ವೇದೋಕ್ತಿ ವಿಚಾರಕೆಮುಖವೆನಿಸುವುದಾಚಾರ ಆಸುಖವೇ ಧರ್ಮದಸಾರಈಅಖಿಳಕೆ ಪ್ರಭು ಯದುವೀರಭಕ್ತವತ್ಸಲ ಪ್ರಸನ್ವೆಂಕಟರಾಯನಸಖ್ಯವಿಡಿದರೆ ಭವದೂರ 3
--------------
ಪ್ರಸನ್ನವೆಂಕಟದಾಸರು
ಉದರವೈರಾಗ್ಯವಿದು - ನಮ್ಮ - |ಪದುಮನಾಭನಲ್ಲಿ ಲೇಶಭಕುತಿ ಇಲ್ಲ ಪ.ಉದಯಕಾಲದಲೆದ್ದು ಗಡಗಡ ನಡುಗುತ |ನದಿಯಲಿ ಮಿಂದೆನೆಂದು ಹಿಗ್ಗುತಲಿ ||ಮದ ಮತ್ಸರ ಕ್ರೋಧ ಒಳಗೆ ತುಂಬಿಟ್ಟುಕೊಂಡು |ಬದಿಯಲಿದ್ದವರಿಗಾಶ್ಚರ್ಯದೋರುವುದು 1ಕರದಲಿ ಜಪಮಣಿ ಬಾಯಲಿ ಮಂತ್ರವು |ಅರಿವೆಯ ಮುಸುಕನು ಮೋರೆಗೆ ಹಾರೆ ||ಪರಸತಿಯರರೂಪ ಮನದಲಿ ಗುಣಿಸುತ |ಪರಮವೈರಾಗ್ಯಶಾಲಿಯೆನಿಸುವುದು 2ಕಂಚುಗಾರನಾ ಬಿಡಾರದಿಂದಲಿ |ಕಂಚು ಹಿತ್ತಾಳೆಯ ಪ್ರತಿಮೆಯ ನೆರಹಿ ||ಮಿಂಚಬೇಕೆಂದು ಬಹುಜ್ಯೋತಿಗಳನೆಹಚ್ಚಿವಂಚಕತನದಲಿ ಪೂಜೆಯ ಮಾಳ್ಪುದು 3ಬೂಟಕತನದಲಿ ಬಹಳ ಭಕುತಿ ಮಾಡಿ |ಸಾಟಿಯಿಲ್ಲವು - ಎನಗೆಂದೆನಿಸಿ ||ನಾಟಕ ಸ್ತ್ರೀಯಂತೆ ಬಯಲಡಂಬವ ತೋರಿ |ಊಟಕೆ ಸಾಧನೆ ಮಾಡಿಕೊಂಬುದಿದು 4ನಾನು ಎಂಬುದ ಬಿಟ್ಟು ಜ್ಞಾನಿಗಳೊಡನಾಡಿ |ಏನಾದುದುಹರಿ ಪ್ರೇರಣೆಯೆಂದು |ಶ್ರೀ ನಿಧಿ ಪುರಂದರವಿಠಲರಾಯನನು |ಕಾಣದೆ ಮಾಡಿದ ಕಾರ್ಯಗಳೆಲ್ಲ 5
--------------
ಪುರಂದರದಾಸರು
ಉದರವೈರಾಗ್ಯವಿದು - ನಮ್ಮ - |ಪದುಮನಾಭನಲ್ಲಿ ಲೇಶಭಕುತಿ ಇಲ್ಲ ಪ.ಉದಯಕಾಲದಲೆದ್ದು ಗಡಗಡ ನಡುಗುತ |ನದಿಯಲಿ ಮಿಂದೆನೆಂದು ಹಿಗ್ಗುತಲಿ ||ಮದ ಮತ್ಸರ ಕ್ರೋಧ ಒಳಗೆ ತುಂಬಿಟ್ಟುಕೊಂಡು |ಬದಿಯಲಿದ್ದವರಿಗಾಶ್ಚರ್ಯದೋರುವುದು 1ಕರದಲಿ ಜಪಮಣಿ ಬಾಯಲಿ ಮಂತ್ರವು |ಅರಿವೆಯ ಮುಸುಕನು ಮೋರೆಗೆ ಹಾರೆ ||ಪರಸತಿಯರರೂಪ ಮನದಲಿ ಗುಣಿಸುತ |ಪರಮವೈರಾಗ್ಯಶಾಲಿಯೆನಿಸುವುದು 2ಕಂಚುಗಾರನಾ ಬಿಡಾರದಿಂದಲಿ |ಕಂಚು ಹಿತ್ತಾಳೆಯ ಪ್ರತಿಮೆಯ ನೆರಹಿ ||ಮಿಂಚಬೇಕೆಂದು ಬಹುಜ್ಯೋತಿಗಳನೆಹಚ್ಚಿವಂಚಕತನದಲಿ ಪೂಜೆಯ ಮಾಳ್ಪುದು 3ಬೂಟಕತನದಲಿ ಬಹಳ ಭಕುತಿ ಮಾಡಿ |ಸಾಟಿಯಿಲ್ಲವು - ಎನಗೆಂದೆನಿಸಿ ||ನಾಟಕ ಸ್ತ್ರೀಯಂತೆ ಬಯಲಡಂಬವ ತೋರಿ |ಊಟಕೆ ಸಾಧನೆ ಮಾಡಿಕೊಂಬುದಿದು 4ನಾನು ಎಂಬುದ ಬಿಟ್ಟು ಜ್ಞಾನಿಗಳೊಡನಾಡಿ |ಏನಾದುದುಹರಿ ಪ್ರೇರಣೆಯೆಂದು |ಶ್ರೀ ನಿಧಿ ಪುರಂದರವಿಠಲರಾಯನನು |ಕಾಣದೆ ಮಾಡಿದ ಕಾರ್ಯಗಳೆಲ್ಲ 5
--------------
ಪುರಂದರದಾಸರು
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂತು ನಿನ್ನ ಪೂಜೆ ಮಾಡಿ ಮೆಚ್ಚಿಸುವೆನೊ ಪಚಿಂತಾಯತನೆ ನಿನ್ನ ನಾಮ ಎನಗೊಂದು ಕೋಟಿ ಅ.ಪಪವಿತ್ರೋದಕದಿಪಾದತೊಳೆವೆನೆಂತೆಂದರೆ |ಪಾವನೆಯಾದ ಗಂಗೆ ಪಾದೋದ್ಭವೆ ||ನವಕುಸುಮವ ಸಮರ್ಪಿಸುವೆನೆಂದರೆ ಉದುಭವಿಸಿಹನುಅಜನಿನ್ನ ಪೊಕ್ಕುಳ ಹೂವಿನಲಿ1ದೀಪವನು ಬೆಳಗುವೆನೆ ನಿನ್ನಕಂಗಳುಸಪ್ತದ್ವೀಪಂಗಳೆಲ್ಲವನು ಬೆಳೆಗುತಿಹವೋ ||ಆಪೋಶನವನಾದರೀವೆನೆಂತೆಂಬೆನೆಆಪೋಶನವಾಯ್ತು ಏಳು ಅಂಬುಧಿಯು 2ಕಾಣಿಕೆಯಿತ್ತಾದರೂ ಕೈ ಮುಗಿವೆನೆಂದರೆರಾಣಿವಾಸವು ಸಿರಿದೇವಿ ನಿನಗೆ ||ಮಾಣದೆಮನದೊಳು ನಿನ್ನ ನಾಮಸ್ಮರಣೆಧ್ಯಾನವನು ದಯೆ ಮಾಡೋ ಪುರಂದರವಿಠಲ 3
--------------
ಪುರಂದರದಾಸರು
ಎಂತು ವರ್ಣಿಸಲಹುದು ಸಿರಿವರನಸಿರಿನಾರಸಿಂಹನಪಅಂತರಂಗದಿ ಹರಿಯ ಸ್ಮರಣೆಯಸಂತತವು ಬಿಡದಂತೆ ಮಾಡುವಕಂತುಪಿತ ಭಕ್ತರನು ಪೊರೆಯಲುನಿಂತಿರುವ ಸಿರಿಕಾಂತನೆನುತಲಿ ಅಪನಿಷ್ಠೆಯಿಂದಲಿ ಬೆಟ್ಟವೇರುತ್ತಹರಿಭಕುತರೆಲ್ಲರುಕಷ್ಟಗಳ ಪರಿಹರಿಸು ಎಂದೆನುತಮನಮುಟ್ಟಿ ಭಜಿಪರುಸೃಷ್ಟಿಕರ್ತನೆ ರಕ್ಷಿಸೆಂದೆನುತಇಷ್ಟದಾಯಕ ನಿನ್ನ ಮಹಿಮೆಯಎಷ್ಟು ಪೊಗಳುವರಯ್ಯ ಕೇಶವಭಕ್ತರನು ಉದ್ಧರಿಸಲೋಸುಗಬೆಟ್ಟದಲಿ ಉದ್ಭವಿಸಿದಾತನ 1ವಾಸುದೇವನ ಮಹಿಮೆ ಪೊಗಳುತ್ತ ನ-ರಸಿಂಹ ಲಕ್ಷೀ ನಾರಸಿಂಹ ನ-ರಸಿಂಹ ನರಸಿಂಹ ಎಂದೆನುತ ಹರಿ-ದಾಸರೆಲ್ಲರು ಸಾರಸಾಕ್ಷನೆ ನಿನ್ನ ಪೊಗಳುತ್ತದ್ವಾರ ದ್ವಾರದಿ ಪೂಜೆUಷÉೂಳ್ಳುತಮಾರಪಿತ ಮಹಲಕ್ಷೀ ಸಹಿತದಿದೋರ ರಥÀದೆಡೆಯಲ್ಲಿ ನಿಲ್ಲುತತೇರ ನೇರುವ ಶ್ರೀ ರಮೇಶನ 2ಸಾರಪದಕಗಳಿಂದ ಶೋಭಿಸುತ ಝಳಝಳಿಪವಜ್ರದ ತೋರ ಮುತ್ತಿನ ಮಾಲೆಹೊಳೆಯುತ್ತ ಥಳಥÀಳಿಪ ನೊಸಲಲಿಸಾರಕಸ್ತೂರಿ ತಿಲಕ ರಂಜಿಸುತಮಾರಬಿಲ್ಲೆಂತೆಸೆವ ಪುಬ್ಬಿನಚಾರುತರ ಶೃಂಗಾರ ನಯನದವಾರೆ ನೋಟÀದಿ ನೋಡಿ ಭಕುತರ ಅ-ಪಾರದುಃಖಗಳನ್ನ ನೀಗುವರ3ಕೋಟಿಸೂರ್ಯಪ್ರಕಾಶಮಯವಾದನವರತ್ನ ಖಚಿತ ಕಿರೀಟಕುಂಡಲಧರಿಸಿ ಅನುವಾದಎಡಬಲದ ಭುಜದಲಿಮಾಟದ ಭುಜಕೀರ್ತಿ ಸುಲಲಿತದನೋಟಕಾಶ್ಚರ್ಯವನೆ ತೋರುತಶ್ರೀ ಕಳತ್ರನು ರಥದಿ ಮೆರೆಯುತ ದಿ-ವಾಕರನ ಪ್ರಭೆಯಂತೆ ಪೊಳೆಯುವರಮಾ ಮನೋಹರ ರಮೆಯ ರಮಣನ 4ಛತ್ರಿ ಚಾಮರಗಳನೆ ಪಿಡಿದಿಹರು ಎಡಬಲದಿಸ್ತುತಿಸುತ ಎತ್ತಿ ಸ್ವರಗಳ ಗಾನಪಾಡುವರುಚಿತ್ತೈಸುಹರಿಬಾ ಬಾರಿತ್ತಬಾಬಾರೆಂದು ಕರೆಯುವರುಸುತ್ತ ತುಂಬರು ನಾರದರಪರಿನೃತ್ಯಗಾನಗಳಿಂದ ಸ್ತುತಿಪರುಕರ್ತೃ ಕಮಲನಾಭ ವಿಠ್ಠಲರ-ಥೋತ್ಸವದಿ ನಲಿನಲಿವ ದೇವನ 5
--------------
ನಿಡಗುರುಕಿ ಜೀವೂಬಾಯಿ
ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಎತ್ತೋದೆಯಮ್ಮ ನಂಗನ್ನೆತ್ತಿಕೊ ಅಮ್ಮ ಬಲುಹೊತ್ತು ಹತ್ತು ಬಂದೇನೆ ಇತ್ತೆಅಮ್ಮಿತಿಂದೇನೆಪ.ತುತಿಬಾಯಿ ವಂಗ್ಯಾವೆ ಬಿತಿ ಆವು ವಾಕಿಕ್ಕಿ ಬತ್ತಾವೆಅತಿ ಆವು ಉಪ್ಪುಕಾಯಿ ಅಮ್ಮ ಮಮ್ಮೊಲ್ಲೆಉತ್ತತ್ತಿ ಹನ್ನು ಬೆನ್ನೆ ತಿಂದೇನೆ 1ಕಲ್ಲ ಕಿತ್ನ ಎಂತಾಡೆ ಬಂಗಾಡ ಬುಲ್ಲಿ ಬೆಲ್ಲ ತಿಂತಾಡೆಗಲ್ಲ ಕತ್ತಿಉಮ್ಮುಕೊತ್ತು ಹಲ್ಲು ನತ್ತುತಾಡೆಕೊಲ್ಲಬಾಲದೆ ದೂತ್ತ ಗೊಲ್ಲತೇಲನ 2ಎಕ್ಕೋ ಬಾ ಎಂಬ್ಯಾಡೆ ಬಿಸಿ ನೀಲು ಬುಕಶ್ಶಿ ಮಾಬ್ಯಾಡೆಸಕ್ಕರಿ ಚಿನ್ನಿಪಾಲು ಬತ್ತಲ ತುಂಬ ಕೊಡುಬಕ್ಕು ಮರಿಗಳ ಕೂಡ ಉಂಡೇನೆ 3ನತ್ತೆತ್ರ ತಂದುಕೊಡೆ ಚಂದಮಾಮನಿತ್ತಿತ್ತ ಕಡತಾಡೆಪುತ್ತಮಿಲ್ಲಿ ತುಂಬ ವಲ್ಲೆ ಮುತ್ತು ಕೊತ್ತರೆ ಶನ್ನಬುತ್ತಿ ತುಂಬ ಹನ್ನು ತಂದು ತಿಂದೇನೆ 4ಲಾಲಿಮಾಡಿಸಬ್ಯಾಡೆ ಕಿತ್ತನ್ನ ಮ್ಯಾಲೆ ದೋಗುಲ ಪಾಡೆಬಾಲ ಬವು ಕಂಡ್ಯನಗಂಜಿಕಿ ಬತ್ತದೆದೂಲ ಎನ್ನ ಬಿತ್ತು ನೀ ವೋಗಬ್ಯಾಡೆ 5ಉಗ್ಗು ಕೂಸು ಬಾಯಂಗೆ ಬಚ್ಚನಿಗೆ ಮಗ್ಗಮ್ಮಿ ಕೂಯಂಗೆಕೊಗ್ಗ ಮೀಸಿ ಜೋಗಿಗೆ ಕೋಬ್ಯಾಡೆ ಬಾಗಿಲಹೊಗ್ಗೆ ಹೋಗದಿಲ್ಲ ಜತ್ತಿಗನಾಣೆ 6ಕೂಚಿಗಮ್ಮಿ ಕೋಬ್ಯಾಡೆ ನಂಗಂಗಚ್ಚತಾನೆ ಅಮ್ಮ ನೋಡೆಪೆಚನ್ನ ವೆಂಕತ ಕಿತ್ತಪ್ಪ ಕನ್ನಡೀಲಿನಚುನಗಿ ನಗುತಾನೆ ಕಡತಾಡೆ 7
--------------
ಪ್ರಸನ್ನವೆಂಕಟದಾಸರು