ಒಟ್ಟು 11932 ಕಡೆಗಳಲ್ಲಿ , 136 ದಾಸರು , 6615 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನುಮನಧವನೆಲ್ಲ ನಿನಗರ್ಪಿಸಿದೆನಿನ್ನು ಎನಗಾವುದಾಧೀನವಿನಿತಿಲ್ಲ ದೇವ ಪ ಜನಕ ನಾನು ಕ್ಷಣಕೆ ಕ್ಷಣಕೆ ಉಣವುದೆಲ್ಲವು ನಿನ್ನ ಪ್ರಸಾದ ಕನಸುಮನಸಿನೊಳಗೆ ನಾನು ಮಣಿವುದೆಲ್ಲವು ನಿನ್ನ ಚರಣ ಅ.ಪ ಮಡದಿಯಿಂ ಮಮತದಿ ಸಡಗರದಾಡ್ಯಾಡಿ ಕಡು ಆನಂದಿಪುದೆಲ್ಲ ಒಡೆಯ ನಿನ್ನಾಟ ಎಡೆಬಿಡದೆ ಅಡಿಗಡಿಗೆ ಕಡುಸಿರಿವಡೆದು ನಾ ಪೊಡವಿಯೋಳ್ಜೀವಿಪುದು ಕಡು ನಿಮ್ಮ ಪ್ರೇಮ ನುಡಿವುದೆಲ್ಲ ನಿನ್ನ ಮಂತ್ರವು ಕೊಡುವುದೆಲ್ಲವು ನಿನ್ನ ಅಧಿಕಾರ ನಡೆವುದೆಲ್ಲವು ನಾ ನಿನ್ನ ಯಾತ್ರೆಯು ಇಡುವತೊಡುವುದು ನಿನ್ನ ಬಿರುದು 1 ಗಳಿಸುವುದೆಲ್ಲ ನಾ ಚಲಿಸದ ತವಪಾದ ನಳಿನದಾಸರಸಂಗೀ ಇಳೆಯೊಳು ಪ್ರಭುವೇ ಬಳಸುವುದೆಲ್ಲ ನಾ ಅಳಕದ ತವಚರಿತ ಕಲಿಯುವುದೆಲ್ಲ ನಿಮ್ಮ ವಿಲಸಿತನಾಮಧ್ಯಾನ ಮಲಗುವುದೇ ನಿಮ್ಮ ಧ್ಯಾನ ಆನಂದ ನಲಿವುದಖಿಲ ನಿಮ್ಮ ಭಜನೆಯು ಅಳಿವುದೆಲ್ಲನುಭವದ ಗುಣಗಳು ತಿಳಿವುದೆಲ್ಲವು ನಿಮ್ಮ ಮಹಿಮೆ 2 ಅಮಿತ ತವಪ್ರೇಮವು ಗಮಿಸುವುದೆಲ್ಲ ನಾ ಸುಮನರ ಸಭೆಯು ಕ್ರಮದಿ ನಾ ಬೇಡುವುದು ವಿಮಲ ಸುಜ್ಞಾನವು ದಮೆ ದಯ ಭಕ್ತಿ ತವ ನಿರ್ಮಲಂಘ್ರಿಯ ಅರಿವು ನೇಮದಿಂ ನಾ ಬರುವುದೆಲ್ಲ ಸ್ವಾಮಿ ನಿಮ್ಮಯ ಮಹಿಮೆ ಖ್ಯಾತಿಯು ಕ್ಷೇಮನಿಧಿ ಶ್ರೀರಾಮ ನಿಮ್ಮೊಳು ಕಾಮಿಸುವುದೇ ನಾ ಮುಕ್ತಿಪದವು 3
--------------
ರಾಮದಾಸರು
ತನುಲಂಪಟಗೆ ಎಲ್ಲಿಹುದು ತನ್ನೊಳು ಖೂನ ಧ್ರುವ ದೆಸೆಗೆಟ್ಟವಗೆ ಎಲ್ಲಿಹುದು ಯುಕ್ತಿಯು ಮುಸುಕಿದ ಮಾಯದವಗೆಲ್ಲಿಹುದು ಮುಕ್ತಿಯು ಹುಸಿಯಾಡುವವಗೆಲ್ಲಿಹುದು ಋಷಿಭಕ್ತಿಯು 1 ತರಳಗುಂಟೆ ಭಯವು ಘಟಸರ್ಪದ ಎರಳೆಗುಂಟೆ ಖೂನ ಮೃಗಜಲವೆಂಬುವದ ಸೋರೆಗುಂಟೆ ಮಾತು ಚಾರ್ತುಯದ 2 ಕನಸು ಕಾಂಬವಗೆ ಎಲ್ಲಿಹುದು ತಾನಿಹ ಸ್ಥಾನ ಮನದಿಚ್ಛೆಯಿದ್ದವಗೆ ಎಲ್ಲಿ ಧ್ಯಾನ ದೀನಮಹಿಪತಿ ಸ್ವಾಮಿ ಕಾಣದವಗೆಲ್ಲಿ ಘನ ಅನುಭವಿಸಿಕೊಳದೆ ಜನ್ಮಕೆ ಬಂದಿದೇನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತನುವ ತೊಳೆದ ಮಾತ್ರದಿಂದ ಜನರು ಶುದ್ಧರೆನಿಪರೆ ಪ ಮನದ ಶುದ್ಧಿ ಆದ ಹೊರತು ವನಜನಾಭನೊಲಿವನೇ ಅ.ಪ ದಿನಪನುದಯ ಕಾಲದಿಂದ ದಿನಪನಸ್ತದನ್ನೆಗಾ ಧನವಗಳಿಸುವಾಸೆಯಿಂದ ಮನಸಿನಲ್ಲಿ ಯೋಚಿಸಿ ಮನಸಿಜಾತನಾಟಕೆ ಪರವನಿತೆಯರ ಬೆರೆಯುತುರುಳಿ ಕನಸಿನಲ್ಲಿ ಹರಿಯ ಕಂಡೆ ಎನುತ ಪೇಳ್ವ ಮಾನವಾ 1 ಪರರು ನೋಡಿ ಮೆಚ್ಚಲೆಂದು ಬೆರಳಿನಿಂದ ಮಣಿಯನೆಣಿಸಿ ಶಿರವನೊಮ್ಮೆತೂಗಿ ತೂಗಿ ತೆರೆದು ಮುಚ್ಚಿ ಕಂಗಳ ಹಿರಿಯ ಭಕ್ತನಂತೆ ನಟಿಸಿ ಪರರ ಮೋಸಗೊಳಿಸಿ ದಣಿಸಿ ಬರಿಯಡಾಂಭಿಕ ಮಾಂಗಿರೀಶ್ವರನ ಶರಣನೆನಲು ಸಾಧ್ಯವೇ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುವಿದು ನಿತ್ಯವಲ್ಲ ಮನವು ನಿಶ್ಚಲ ಅಲ್ಲ ಪ ಕನಸಿನಂತೆ ಜೀವಿತವೆಲ್ಲ ಇನಿತು ಶಾಂತಿಯ ತಾಣ ಅಲ್ಲ ಅ.ಪ ಜಲಚರಂಗಳು ವನಚರಂಗಳು ಅಲೆವ ಪಕ್ಷಿಕೀಟಕ್ರಿಮಿಗಳು ಕಲುಷ ವಿಮಲವೆಂಬುದನರಿಯವು ಮಾನವ ಜನ್ಮಕೆ 1 ಜನುಮಗಳೊಳು ಹಿರಿಯದೆನಿಪ ಮನುಜ ಜನ್ಮವನಾಂತ ಮೇಲೆ ವಿನಯ ನಯ ವಿಧೇಯತೆಯಿಂದ ವನಜನಾಭನ ನೆನೆಯದಿರ್ದೊಡೆ 2 ಭಜಿಪ ಭಕ್ತರ ಕೂಗಿಗೊಲಿದು ಗಜವ ಪಾಲಿಸಿದಂತೆ ಬಂದು ನಿಜಪದಂಗಳ ತೋರ್ಪ ಮಾಂಗಿರಿ ವಿಜಯರಂಗನ ಸನ್ನುತಿ ಗೈಯದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆನೆಂದರೆ ಮನ ತನುಮಧ್ಯೆಯರ ತನುವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ1 ಚರಣದ ಪೂಜೆಯೊಳಿರುವೆನೆಂದರೆ ಕರವರೆಡು ಕೋಮಲೆಯರನರಸುವುವು ಹರಿಕಥಾಶ್ರವಣದೊಳಿರೆ ಈ ಕಿವಿಗಳು ಹರಿಣಾಕ್ಷಿಯರ ಕಂಠಸ್ವರಕೆ ಮೋಹಿಪವಯ್ಯ 2 ದುರಿತದೂರನ ನಾಮ ಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸೋಕ್ತಿ ಪಡೆದು ಚರಣಶ್ರೀತುಳಸಿಯನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಿಶರೀರವಿ ದುನ್ನುತಸ್ತನವುಳ್ಳ ಕನ್ನೆಯರೊಳ್ ತನ್ನ ಸುರತಸುಖವನೆ ಚಿಂತಿಸುವದು ಎನ್ನಾಧೀನದೊಳಿಲ್ಲ ನೀನೆ ಬಲ್ಲೆ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ಹರಿ ನಿನ್ನದೇ ಸರಿ ದುರಿತಸುಕೃತಕೆನ್ನ ಗುರಿಮಾಡದೆ ಕಾಯೋ ವರದವಿಠಲ ಕೃಷ್ಣ 5
--------------
ವೆಂಕಟವರದಾರ್ಯರು
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆಂನೆಂzರÀಮನ ತನುಮಧ್ಯೆಯರತನು ವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ 1 ಚರಣದ ಪೂಜೆಯೊಳಿರುವೆನೆಂದರೆ ಕರವೆರಡು ಕೋಮಲೆಯರ ನರಸುವುವು ಹರಿಕಥಾಶ್ರವನದೊಳಿರದೆ ಈ ಕಿವಿಗಳು ಹರಿಣಾಕ್ಷಿಯರ ಕಂಠ ಸ್ವರಕೆಮೋಹಿಪವಯ್ಯ 2 ದುರಿತದೂರನ ನಾಮಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸ್ತೋಕ್ತಿಪಡೆದು ಚರಣ ಶ್ರೀ ತುಳಸಿಯ ನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಶರೀರ ವಿದುನ್ನತಸ್ತನವುಳ್ಳ ಕನ್ನೆಯರೋಳ್ ತನ್ನ ಸುರತಸುಖವನ್ನ ಚಿಂತಿಸುವದು ಯನ್ನಾಧೀನದೊಳಿಲ್ಲ ನೀನೇ ಬಲ್ಲಿ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ದುರಿತ ಕೃತಕೆನ್ನ ಗುರಿಮಾಡದೆ ಕಾಯೋ ವರದ ವಿಠಲ ಕೃಷ್ಣ 5
--------------
ಸರಗೂರು ವೆಂಕಟವರದಾರ್ಯರು
ತನುವೆಂಬ ಭವನದಲಿ ಮನವೆಂಬ ಮಂಟಪದಿ ವನರುಹಾಸನ ವಿಹುದು ನಿನಗಾಗಿ ಕೃಷ್ಣಾ ಪ ಅನವರತ ಸ್ವಾಗತವ ಇನಿದಾಗಿ ಪೇಳುತಲಿ ಸನುಮತದೊಳೀರೈದು ಮುನಿವರರು ನಿಂದಿಹರು ಅ.ಪ ಎನಗೆ ತನಗೆಂದಿಬ್ಬರನುವಾಗಿ ಕಾದಿಹರು ಘನ ಮೌನಿಯಂತೊಬ್ಬ ಮಣಿಯುತಿಹನು ವನಜ ಸಂಭವ ಜನಕ ಮುನಿಯೊಡನೆ ನೀ ಬಂದು ಕನಕಮಂಟಪವೇರು ಅವರಿಬ್ಬರೋಡುವರು 1 ಕರಿಯ ಮೈಯವನೊಬ್ಬ ದುರದುರನೆ ನೊಡುವನು ಪರಿವಾರದವರನ್ನು ತೋರುತಿಹನೊಬ್ಬ ಕರದಿ ಸನ್ನೆಯ ಮಾಡುತಿಬ್ಬರೂ ಬರುತಿಹರು ತರಿದವರ ಮಂಟಪವನೇರೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನ್ನ ಕಷ್ಟದಿ ತನಗೆ ದೊರಕುವುದು ಹಾಗ ಉನ್ನಂತ ಭಾಗ್ಯಗಳು ಹರಿಯ ವಿನಿಯೋಗ ಪ ಕಟ್ಟಿಗೆಯ ಹೊರೆ ತಂದು ಪಟ್ಟಣದೊಳಿಳುಹಿದರು ಉಟ್ಟ ಬಹಿರ್ವಾಸವನು ಬಿಗಿದಿಟ್ಟರು ಮೊಟ್ಟೆಯನು ಕೊಂಡೊಯ್ದು ಇಟ್ಟದನು ಮಾರಿದರು ಹೊಟ್ಟೆ ತುಂಬಿಸಿ ಕಡೆಗೆ ಕಟ್ಟುವನು ಹಾಗ 1 ಪದಪದ್ಯಗಳ ಹೇಳಿ ಕುಣಿದಾಡಲು ಹದಿನಾರನೆಯ ವಿಧಿಯ ಸದನದೊಳು ಸವಿದುಣಲು ಕದನ ಕರ್ಕಶನಾಗಿ ಕಡಿದು ಬರೆ ಹಾಗ 2 ಸೂಜಿ ನೂಲನು ಕೊಂಡು ಬಾಜಾರದೊಳು ಕುಳಿತು ಸೋಜಿಗದ ಹೊಲಿಗೆಯನು ಮಾಡಿಕೊಡಲು ಕಾಜು ಬಳೆಗಳ ಹೊತ್ತು ದಣಿದು ಮಾರಿದರವಗೆ ರೋಜು ಉಳಿವುದು ಅಸ್ತಮಯಕೆ ಒಂದ್ಹಾಗ 3 ಭಾಗ್ಯವುಳ್ಳವನನ್ನು ಬಾಧಿಸಲು ಅವ ತನಗೆ ಕಾಗೆ ಕರಿದೆನಿಸಿ ತಾ ಕಸ್ತೂರಿ ಹೋಲುವುದೆ ಮೊಗೆಮೊಗೆ ಮಲ್ಲಿಗೆಯು ಪರಿಮಳಿಪುದೆ 4 ಹರಿಯ ಸೇವೆ ಮಾಡೆ ಇಹಪರದ ಸೌಖ್ಯಗಳು ಹರನ ಸೇವೆಯ ಮಾಡೆ ಪರಮ ಪದವು ಸಿರಿಯರಸ ವರಾಹತಿಮ್ಮಪ್ಪ ನಿನ್ನಡಿಯ ಕರುಣರಸ ಹೊರತಾಗಿ ಸಿರಿಯು ಸೇರುವಳೆ 5
--------------
ವರಹತಿಮ್ಮಪ್ಪ
ತನ್ನ ತಾ ತಿಳಿದು | ಧನ್ಯನಾಗೊ ಬಗೆ ಇದು | ಖಿನ್ನವಳಿದು ಪೂರ್ಣ ಬ್ರಹ್ಮವನ್ನು ಕಾಂಬುದು ಪ ತತ್ತ್ವ ಶಾಸ್ತ್ರವನ್ನು ಓದಿ | ಭಕ್ತಿಯಿಂದ ಮನನ ಮಾಡಿ | ಯುಕ್ತಿ ಭಾವವೆಲ್ಲ ಕಳೆದು ಮುಕ್ತನಾಗುತಾ || ನಿತ್ಯವಾದ ವಸ್ತು ತಾನೆ | ಮತ್ತೆ ಬೇರೆ ಇಲ್ಲವೆಂದು | ಸತ್ಯ ಶರಣರಡಿಯ ಪಿಡಿದು ಚಿತ್ತದಲ್ಲಿ ನಲಿವುದು 1 ಆಶೆ ಮೂರರಲ್ಲಿ ಇನ್ನು | ಬೇಸರಾಗಿ ವಿಷಯದ | ವಾಸನೆಗಳ ಜರಿದು ಪಾಶ ಕ್ಲೇಶವಳಿಯುತ || ನಾಸಿಕಾಗ್ರದಲ್ಲಿ ಮನವ | ಸೂಸದಂತೆ ನಿಲಿಸಿ ಜಗ- | ದೀಶನಾಟವನ್ನು ನೋಡಿ ನಾದ ಘೋಷ ಕೇಳ್ವುದು 2 ಹಿಂದೆ ಒಂದು ನೆನೆಸದಿನ್ನು | ಮುಂದೆ ಉಳಿದ ಕರ್ಮವನ್ನು | ಬಂದುದೆಲ್ಲ ಉಂಡು ಗೆದ್ದು ಹರುಷದಿಂದಲಿ || ತಂದೆ ಭವತಾರಕನ | ಹೊಂದಿ ಸದಾನಂದದಿಂದ | ಮುಂದೆ ಭವಕೆ ಬೀಳದಂತೆ ಛಂದದಿಂದ ನಲಿವುದು 3
--------------
ಭಾವತರಕರು
ತನ್ನ ತಾ ತಿಳಿಯುವದೆ ಜ್ಞಾನ ಮನಮುಟ್ಟು ಪೂರ್ಣ ಚೆನ್ನಾಗಿ ಸದ್ಗುರುವಿನ ಕೇಳಿರೊ ಖೂನ ಧ್ರುವ ತನು ಮನವಿಟ್ಟು ತಿಳಿವದೀ ಗುರುಗುಟ್ಟು ಧನ ದ್ರವ್ಯಾರ್ಜಿತವನಿಟ್ಟು ಕೇಳಿ ಕಿವಿಗೊಟ್ಟು ಅನುಬವದ್ಹೆಚ್ಚಿ ಮೆಟ್ಟು ಸಾಧಿಸಿ ವೈರಾಗ್ಯ ಕೊಟ್ಟು ಖೂನಮಾಡಿಕೊ ಬೇಕಿಟ್ಟು ಅನುಮಾನ ಬಿಟ್ಟು 1 ಗಿಳಿಯಾಡಿದಂತೆ ನುಡಿಯಾತಕ ಬಾಹುದು ನೋಡಿ ಹೇಳ್ಯಾಡಕೊಂಬುದೀಡ್ಯಾಡಿ ಮಾತಿನ ರೂಢಿ ಬೆಳಗಿನೊಳು ಬೆರದಾಡಿ ಘನಕ ಘನ ಕೂಡಿ 2 ನುಡಿ ನಡಿ ಒಂದಾದರೆ ವಸ್ತು ತಾನಿಹುದು ದೂರ ಬಿಡಲರಿಯದು ಹಾಂಗಾದರ ಎಂದಿಗಾರು ಒಡಗೂಡಿ ನೋಡಿದರೆ ತನ್ನೊಳು ತಾಂ ನಿಜ ಖರೆ ಸಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತನ್ನ ತಿಳಿದು ತಾ ನಿರ್ಲಿಪ್ತನಾದವಗೆ ಇನ್ನೇನಿನ್ನೇನುತನ್ನ ತನ್ನೊಳು ಕಂಡು ತಾನಾದ ಮಹಾತ್ಮಗೆ ಇನ್ನೇನಿನ್ನೇನು ಪ ನಾನು ನೀನೆಂಬ ಹಮ್ಮುಳಿದುಳಿದಾತಗೆ ಇನ್ನೇನಿನ್ನೇನುನಾನು ನೀನೇ ನಿಶ್ಚಯವೆಂದು ನಿಶ್ಚಲನಾದವಗೆ ಇನ್ನೇನಿನ್ನೇನು1 ಸರ್ವವನರಿತು ಸರ್ವವೆ ತಾನಾದವಗೆ ಇನ್ನೇನಿನ್ನೇನುಸರ್ವ ಸರ್ವವು ಆದ ಸರ್ವಾತ್ಮಗೆ ಇನ್ನೇನಿನ್ನೇನು 2 ಮನದ ಮಾಟಗಳಿಗೆ ಮರುಳಾದವಗೆ ಇನ್ನೇನಿನ್ನೇನುಮನವು ತಾನಾದವಗೆ ಮನಕೆ ನಿಲುಕದವಗೆ ಇನ್ನೇನಿನ್ನೇನು 3 ಸುಖ ದುಃಖಗಳಿಗೆ ತಾ ಸಾಕ್ಷಿಯಾದವಗೆ ಇನ್ನೇನಿನ್ನೇನುಸುಖ ದುಃಖ ತೋರದೆ ಸಮಮನನಾದವಗೆ ಇನ್ನೇನಿನ್ನೇನು 4 ಅಗಣಿತ ಮಹಿಮಗೆ ಇನ್ನೇನಿನ್ನೇನು 5 ಎರಡನುಳಿದು ಮತ್ತೆರಡನು ಮರೆತವಗೆ ಇನ್ನೇನಿನ್ನೇನುಎರಡರೊಳು ತಾನೆಡಬಿಡದಿಪ್ಪಗೆ ಇನ್ನೇನಿನ್ನೇನು6 ಮುಟ್ಟು ಚಟ್ಟುಗಳ ಮುಗಿಸಿದಾತಗೆ ಇನ್ನೇನಿನ್ನೇನುಮುಟ್ಟು ಚಟ್ಟಲಿ ಅಡಗಿರುವಾತಗೆ ಇನ್ನೇನಿನ್ನೇನು7 ಸಕಲ ವಿಧವ ನೋಡಿ ಸಂತುಷ್ಟನಾದವಗೆ ಇನ್ನೇನಿನ್ನೇನುಸಕಲದಿ ಬೆರೆತು ಸಂಶಯವಳಿದಿಪ್ಪವಗೆ ಇನ್ನೇನಿನ್ನೇನು 8 ಚಿದಾನಂದ ಗುರುವಿನ ಚಿತ್ತದಿ ಪಿಡಿದಾತಗೆ ಇನ್ನೇನಿನ್ನೇನುಚಿದಾನಂದ ಗುರುವಿನ ಚಿತ್ಸುಖಭರಿತಗೆ ಇನ್ನೇನಿನ್ನೇನು 9
--------------
ಚಿದಾನಂದ ಅವಧೂತರು
ತನ್ನ ತಿಳಿದು ತಾನಾದಂಥ ಗುರುವಿನ ಪಾದವ ಹೊಂದುತನ್ನನರಿಯದ ಗುರುವ ಹೊಂದಬೇಡೆಂದೆಂದು ಪ ನಿನ್ನನು ದೇವನೆಂದೆನ್ನುವಗೆ ಈಗ ಶರಣು ಮಾಡೋಅನ್ಯ ದೇವರನೆಂದೆನ್ನುವನ ಹಾದಿ ಹೋಗಬೇಡೋ 1 ಕೋಟಿರವಿ ತೇಜವ ಕಣ್ಣಲಿ ನೋಡುಬೂಟಿಕ ಕಾಯಕಗಳ ದೂರಮಾಡು 2 ಸೋಹಂ ಮಂತ್ರವ ಹೇಳದವನ ಸೆರಗ ಬಿಟ್ಟು ನೀನುಊಹಿಸುವ ಬೇರೆ ಗುರುವನು ಉತ್ತಮ ಅವನು3 ವಾಸನೆ ಕಳೆದಾತಂಗೆ ಒಪ್ಪಿಸಯ್ಯ ತನುವಆಸೆ ಹಚ್ಚುವವನತ್ತ ಬಿಡಲಿ ಬೇಡ ಮನವ 4 ಚಿದಾನಂದ ಗುರುವ ಹೊಂದು ಚಿನ್ಮಾತ್ರನಹೆ ಮದಮುಖ ಗುರುವ ಹೊಂದದಿರು ತಿಳಿ ಮುಂದೆ ನೀನು ಕೆಡುವೆ 5
--------------
ಚಿದಾನಂದ ಅವಧೂತರು
ತನ್ನ ತಿಳಿಯದವನೇಕೆ ಇನ್ನವನನು ಸುಡಬೇಕು ಪ ವೇದಾರ್ಥಿಯು ತಾನಾಗಿ ವಾದಿಸುತಿಹನೀ ಗೂಗೆಓದಿದ ಓದದು ವ್ಯರ್ಥ ಒಳ್ಳಿತಾಗಿ ಗಳಿಸಿದನರ್ಥ 1 ಆಚಾರದಿ ಒದ್ದಾಡಿ ಅಡವಿಯ ಹಿಡಿದನು ಖೋಡಿಕುಚಾಳಿಯೆ ವ್ಯವಹಾರ ಕುಮಂತ್ರಕೆ ಬಲು ಧೀರ 2 ಮಾನ್ಯರ ಕೋಪದಿ ಝಡಿವಾ ಅವಮಾನ್ಯರ ಕೊಂಡಾಡಿ ನುಡಿವಾಜ್ಞಾನದ ಹಾದಿಯ ಕಾಣ ಗೋಣಿಯ ಹೊರುವ ಕೋಣ3 ಮುಕ್ತಿಯ ತಿಳಿಯಲು ಬಾರ ಮುಂದಿನ ಭವಿತವ ನೋಡಭಕ್ತಿಯೆಂಬುದಿಲ್ಲ ಈ ಕತ್ತೆಗೇನು ಸಲ್ಲ 4 ಕಲ್ಲನೆ ದೇವರು ಎಂಬ ಕಡಮೆಯಲಿಲ್ಲವು ಎಂಬಒಳ್ಳಿತಲ್ಲವು ಅವನಿರವು ಒಲಿದವನೇ ಚಿದಾನಂದ ಗುರುವು 5
--------------
ಚಿದಾನಂದ ಅವಧೂತರು
ತನ್ನ ಪ್ರಾಪ್ತಿಯ ಫಲವ ತಾನರಿಯದೆ ಪ ಇನ್ನು ನುಡಿವುದು ಮೂರ್ಖತನವಲ್ಲದೆ ಅ ಸರಸಿಜೋದ್ಭವನು ಫಣೆಯೊಳು ಬರೆದು ನಿರ್ಮಿಸಿದತೆರನೊಂದು ಬೇರುಂಟೆ ತಾನರಿಯದೆಕೆರಕೊಂಡು ಕಂಡವರ ಕೂಡೆ ತಾನಾಡಿದರೆನೆರೆ ದುಃಖವಿದು ಬಿಟ್ಟು ಕಡೆಗೆ ತೊಲಗುವುದೆ 1 ವಿಧಿ ಬೆನ್ನ ಬಿಡಲರಿವುದೆಅಡಿಗಡಿಗೆ ಶೋಕದಲಿ ಅವರಿವರಿಗುಸುರಿದರೆಬಡತನವು ತಾ ಬಿಟ್ಟು ಕಡೆಗೆ ಕದಲುವುದೆ2 ದೆಸೆಗೆಟ್ಟು ನಾಡದೈವಂಗಳಿಗೆ ಎರಗಿದರೆನೊಸಲ ಬರೆಹವ ತೊಡೆದು ತಿದ್ದಲಳವೆವಸುಧೇಶ ಕಾಗಿನೆಲೆಯಾದಿಕೇಶವಸನಂಘ್ರಿಬಿಸಜವನು ಕಂಡು ನೀ ಸುಖಿಯಾಗು ಮನುಜ3
--------------
ಕನಕದಾಸ
ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ