ಒಟ್ಟು 5829 ಕಡೆಗಳಲ್ಲಿ , 129 ದಾಸರು , 3952 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕುತಸಂಸಾರಿ ಹರಿ ಶಕಟಸಂಹಾರಿ ಸಕಲಾಂತರ್ಯಾತ್ಮಕ ಗಿರಿಧಾರಿ ಪ. ಅಂತರ್ಬಹಿವ್ರ್ಯಾಪ್ತಾನಂತಾವತಾರಿ ಸಂತಜನರ ಮನೋಭ್ರಾಂತಿನಿವಾರಿ 1 ನಿಖಿಲ ಬ್ರಹ್ಮಾದಿ ಸುರನಿಕರಕೈವಾರಿ ಕಂಸಾರಿ 2 ಘನಕೃಪಾಸಾಗರ ಪ್ರಣತಾರ್ತಿಹಾರಿ ಅನಘ ಲಕ್ಷ್ಮೀನಾರಾಯಣ ನಿರ್ವಿಕಾರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಕುತಾಭಿಮಾನಿ ಸಕಲದೇವರ ಧಣಿ ನಿಖಿಲವ್ಯಾಪಕ ವಿಮಲ ಮುಕುತಿದಾಯಕನೆ ನೀ ಪ ವೇದವೇದಕ್ಕೆ ಸಿಲ್ಕದಾದಿಮೂರುತಿ ನಿನ್ನ ಪಾದಧ್ಯಾನದ ಶಕ್ತಿ ಸಾಧನಕೊಡು ಹರಿಯೆ 1 ಕಮಲಪೀಠಾದಿಸುರರು ಭ್ರಮಿಸುವ ತವಪಾದ ಕಮಲಕೃಪೆಯಿತ್ತೆನಗೆ ವಿಮಲಪತಿಯೆ ನೀಡೊ 2 ಭವಮಾಲೆ ಗೆಲಿಸೆನ್ನ ದಯದಿಂದ ಸಲಹಯ್ಯ ಭವರೋಗವೈದ್ಯನೆ ದಯಾಕರ ಶ್ರೀರಾಮ 3
--------------
ರಾಮದಾಸರು
ಭಕುತಿ ಸುಲಭವಲ್ಲ ಶ್ರೀ ಹರಿ ಭಕುತಿ ಸುಲಭವಲ್ಲ ಪ ಮುಕುತಿಗೆ ಯುಕುತಿ ಬೇರೆಯಿಲ್ಲ ಶ್ರೀ ಹರಿ ಅ.ಪ ಉರುತರ ಕ್ಲೇಶಕೆ ಗುರಿಯಾಗುತಿರಲು ಹರಿ ಹರಿಯೆನ್ನುತ ಕಿರುಚುತ ಸತತವು ಕ್ಲೇಶ ಹರಿಯನು ಸುಲಭದಿ ಮರೆವುದು ಭಕುತಿಯ ತರವಾಗುವುದೇ 1 ಭುವಿಯಲಿ ಬಹು ವಿಧ ಸುವಿನೋದಗಳ ಸವಿಯನು ಪೊಂದಲು ವಿವಿಧ ಭಾಗ್ಯಗಳ ಸುವಿನಯದಲಿ ಮಾಧವನನು ಬೇಡಲು ಹವನ ಹೋಮಗಳು ಭಕುತಿಯಾಗುವುದೇ 2 ಶ್ರವಣ ಮನನ ವಿಧಿಧ್ಯಾಸಗಳಿಂ ಸಿರಿಪತಿ ಗುಣಗಣದಲಿ ದೃಢಮತಿಯನು ಮಾಡುತ ತನುಮನಗಳನÀರ್ಪಣೆಯನು ಮಾಡುತ ಮನಸಿಜ ಜನಕ ಪ್ರಸನ್ನನಾಗುವಂಥ 3
--------------
ವಿದ್ಯಾಪ್ರಸನ್ನತೀರ್ಥರು
ಭಕುತೋದ್ಧಾರ ಪರಿಭವದ್ವೈದ್ಯ ನಿಖಿಲಬ್ರಹ್ಮಾಂಡ ಸುಸೂತ್ರ ಸಿರಿಬಾಧ್ಯ ನಿಖಿಲವ್ಯಾಪಕ ನಿಖಿಲರಕ್ಷ ಭಕುತರಾತ್ಮಕ ಭಕುತಪಕ್ಷ ಪ್ರಕಟರಕ್ಕಸಕುಲ ನಿರ್ಮೂಲನೆ ಮುಕುಟಮಾನಸ ಮನದಿ ಭಜಿಪರ ಮುಕುತಿದಾಯಕ ಮಣಿವೆನೈ ಮಹ ಮುಕುತಿಸಂಪದ ಕರುಣಿಸಭವ ಪ ಕಲ್ಪನೆಯಿಂದೊಂದೆತ್ರಯವೆನಿಸಿ ಕಲ್ಪ ಕಲಿಸಿ ಕಲ್ಪನೆಯಿಂದ ನಾಲ್ಕುಘೋಷ ರಚಿಸಿ ಕಲ್ಪನಿಲ್ಲದೆ ಕಲ್ಪಕಲ್ಪದರರ್ಹೊಗಳಿಸಿ ಕಲ್ಪಿತದಿ ನೆಲಸಿ ಕಲ್ಪಿತದಿ ಸಂಕಲ್ಪ ತೋರಿಸಿ ಕಲ್ಪಿತದಿಂ ಸಂಕಲ್ಪ ಮುಳುಗಿಸಿ ಕಲ್ಪ ಕಲ್ಪಾಂತರದಿ ಉದಿಸಿ ಕಲ್ಪತಕೆ ನೀ ಬೇರೆಯೆನಿಸಿ ಕಲ್ಪನದೊಳು ಕಲ್ಪ ಕೂಡಿಸಿ ಕಲ್ಪನಕೆ ಮಹಪ್ರಳಯವೆನಿಸಿ ಕಲ್ಪನೆಯನು ಮತ್ತು ತಿರುಗಿಸಿ ಕಲ್ಪಿಸಿದಿ ಪುನ:ಸಫಲವೆನಿಸಿ ಕಲ್ಪನೆಯನು ಪೊಗಳಲಿನ್ನಾವ ಕಲ್ಪನಕೆ ತುಸು ಶಕ್ಯವಲ್ಲವು ಕಲ್ಪ ಕಲ್ಪಾಂತರದಿ ಎನ್ನನು ಕಲ್ಪಿಸದಿರು ಕಲ್ಪತರುವೆ 1 ಕಲ್ಪಿಸಿದೆ ಕೋಟಿ ತ್ರಿದಶತ್ರಯೆನಿಸಿ ಕಲ್ಪ ಕಲ್ಪಕೆ ಕಲ್ಪಿತೀಯುವ ಮಂತ್ರ ಕಲ್ಪಿಸಿ ಕಲ್ಪಿಸಿದಿಯೊ ಕಲ್ಪ ಕಲ್ಪದಿ ಐದು ಮೇಲೆನಿಸಿ ಕಲ್ಪಸಾರೆನಿಸಿ ಕಲ್ಪನೆ ಮಹತಾರಕೆನಿಸಿ ಕಲ್ಪನೆ ಘನಗಾಯತ್ರೆನಿಸಿ ಕಲ್ಪನೆಯಲಿ ಸ್ಥೂಲವೆನಿಸಿ ಕಲ್ಪನೆ ಬಹುಸೂಕ್ಷ್ಮವೆನಿಸಿ ಕಲ್ಪನೆಯ ಮಹಕಾರಣೆನಿಸಿ ಕಲ್ಪನದಿ ಈ ಕಲ್ಪವಿರಿಸಿ ಕಲ್ಪನಕೆ ನೀನೆ ಸೂತ್ರನೆನಿಸಿ ಕಲ್ಪನಕೆ ನೀನೆ ಚೈತನ್ಯನೆನಿಸಿ ಕಲ್ಪ ಕುಣಿಸುವಿ ಕಲ್ಪನಿಲ್ಲದ ಕಲ್ಪದ ನೆಲೆಬುಡ ನೀನೆನ್ನಯ ಕಲ್ಪನೆಯೊಳುದಯನಾಗಿ ಕಲ್ಪನೆಯ ಕಡೆಗಾಣಿಸಭವ 2 ಕಲ್ಪ ಕಲ್ಪಕೆ ಆಚೆ ನೀನೆನಿಸಿ ಕಲ್ಪ ನಿರ್ಮಿಸಿ ಕಲ್ಪ ಕಲ್ಪದಿ ನೀನೆ ಆವರಿಸಿ ಕಲ್ಪ ನಡೆಸಿ ಕಲ್ಪ ಕಲ್ಪದಮೂಲ ನೀನೆನಿಸಿ ಕಲ್ಪದಿಂ ನುಡಿಸಿ ಕಲ್ಪದಲಿ ಮಿಥ್ಯಕಲ್ಪ ಪುಟ್ಟಿಸಿ ಕಲ್ಪದಲಿ ನಿಜಕಲ್ಪ ಸೃಷ್ಟಿಸಿ ಕಲ್ಪದಿಂ ತ್ರಿಕಲ್ಪ ರಕ್ಷಿಸಿ ಕಲ್ಪದಿಂ ಕಲ್ಪಕ್ಕೆ ಶಿಕ್ಷಿಸಿ ಕಲ್ಪವೇ ಮಹ ಮಾಯವೆನಿಸಿ ಕಲ್ಪದಿಂದಲೇ ಅದನು ಗೆಲಿಸಿ ಕಲ್ಪದಿಂ ಕಲ್ಪವನು ಬೆಳಗಿಸಿ ಕಲ್ಪದಿಂ ಕಲ್ಪವನು ತೊಲಗಿಸಿ ಕಲ್ಪನರಿಯುವ ಕಲ್ಪಕೆ ಮಹ ಕಲ್ಪನಿದು ಬಹು ಸುಲಭವೆನಿಸಿ ಕಲ್ಪಿತದಿಂ ರಕ್ಷಿಸುವ ಮಮ ಕಲ್ಪನಿಲ್ಲದವರ ಶ್ರೀರಾಮ 3
--------------
ರಾಮದಾಸರು
ಭಕ್ತ ಮಂದಾರಿಣಿ ಭವಭಯನಿವಾರಿಣಿ ಭಕ್ತಿಮುಕ್ತಿ ಪ್ರದಾಯಿನಿ ತ್ರಿಭುವನೈಕ ಜನನಿ ಪ. ಭುವನತ್ರಯಮೋಹಿನಿ ಭಾನುಕೋಟಿಪ್ರಕಾಶಿನಿ ಭೂರಿಭೂಭುಜ ಸೌಭಾಗ್ಯದಾಯಿನಿ ಪಾಹಿಮಾಂ ಜನನಿ ಅ.ಪ. ಸಾಮಜಾಧಿಪಗಾಮಿನಿ ಕಾಮಿತಾರ್ಥಪ್ರದಾಯಿನಿ ರಾಮಣೀಯ ಸ್ವರೂಪಿಣಿ ಕಾಮಜನನಿ ಕಲುಷವಿಭಂಜಿನಿ 1 ಕನಕವಸನೆ ಕವಿಮನೊಲ್ಲಾಸಿನಿ ಸುಮನಸವರ ಪರಿತೋಷಿಣಿ ಕೋಮಲತರ ಕೋಕಿಲ ಮೃದುಭಾಷಿಣಿ 2 ಕಮಲ ಬಾಂಧವ ವಂಶ ಸಂಭವ ರಾಮಚಂದ್ರ ಸುಪ್ರೇಮಾಕಾಂಕ್ಷಿಣಿ 3 ವನಜ ಸಂಭವ ಸನ್ನುತೆ ಕನಕಭೂಷಣ ಭೂಷಿತೆ ಅನಿಲನಂದನ ಸೇವಿತೇ ಘನಕರುಣಾರಸಾನ್ವಿತೇ 4 ಅನಘ ಸದ್ಗುಣಭೂಷಿತೆ ಅನಿಮಿಷಾಧಿಪ ಪೂಜಿತೆ ಜನಕ ಭೂಪತಿ ಪೋಷಿತೇ ಘನಶೇಷಾದ್ರೀಶ ದಯಿತೆ5
--------------
ನಂಜನಗೂಡು ತಿರುಮಲಾಂಬಾ
ಭಕ್ತಜನ ಪಾಲಕ - ಭಕ್ತಿಸುಖದಾಯಕ ಮುಕ್ತೀಶ ದೀನಬಂಧು ಕೃಷ್ಣ ಪ ಯುಕ್ತಿಯಲಿ ನಿನ್ನಂಥ ದೇವರನು ನಾಕಾಣೆ ಸತ್ಯವತಿ ಸುತÀನೆ ಕಾಯೋ ಕೃಷ್ಣ ಅ.ಪ. ಆನಂದತೀರ್ಥ ಮುನಿಯ ಧ್ಯಾನಿಪರ ಸಂಗ | ಆನಂದದಲಿ ನಿಲಿಸೊ ಕೃಷ್ಣ || ದೀನಜನ ಮಂದಾರ ನೀನೆಂದು ನಂಬಿದೆನೊ | ಸಾನುರಾಗದಲಿ ಕಾಯೋ ಕೃಷ್ಣ 1 ಕೆಟ್ಟ ಜನರ ಸಂಗ ಇಷ್ಟು ದಿನವೂ ಮಾಡಿ | ಭ್ರಷ್ಟನಾಗಿ ಪೋದೆನೋ ಕೃಷ್ಣ || ಬೆಟ್ಟದೊಡೆಯನೆ ನಿನ್ನ ಮುಟ್ಟಿ ಭಜಿಸುವ ಭಾಗ್ಯ | ಇಷ್ಟಗಳ ಎನಗೆ ಕೊಡಿಸೋ ಕೃಷ್ಣ 2 ಅಜಜನಕ ಗಜವರದ ಭುಜಗಶಯನನೆ ನಿನ್ನ | ಭಜಿಪ ಭಾಗ್ಯವನೆ ಕೊಡಿಸೊ ಕೃಷ್ಣ || ನಿಜವಾಗಿ ನಿನ್ಹೊರುತು ಸಲಹುವರ ನಾ ಕಾಣೆ |ವಿಜಯವಿಠ್ಠಲರೇಯ ಕೃಷ್ಣ 3
--------------
ವಿಜಯದಾಸ
ಭಕ್ತಜನ ಸಂರಕ್ಷಣ ಪ ಭಕ್ತಜನ ಸಂರಕ್ಷ ಭವದುರಿತ ಸಂಹಾರಿ ಭಕ್ತರಾ ಸುರಧೇನು - ತರುವೆ ಚಿಂತಾಮಣಿಯೆ ಪೊತ್ತ ತಿಮ್ಮಪ್ಪ ಏಳೊಅ.ಪ. ಅಂಬರವು ತಾಂಬ್ರಮಯವಾಗೆ ಗರುಡಾಗ್ರಜನು ಇಂಬಿನಲಿ ತಲೆದೋರೆ ಕಿರಣಗಳು ಹರಹಿದುವು ತಾರಾ ನಿಕರವಂಬರದಿ ರೂಹುಮಾಸೆ ಕುಂಭಿಣಿಯ ಮುಸುಕಿರ್ದ ಕತ್ತಲೆ ಪರಿದು ಪೋಗೆ ಅಂಬುಜದಳಕ್ಕೆ ಮರಿದುಂಬಿಗಳು ಎರಗಿದವು ಸರಸಿಜಾಂಬುಕ ಮಂಚದಿಂದೇಳೊ 1 ಉದಯ ಪರ್ವತಕೆ ರಥನೂಕಿದನು ಮಾರ್ತಾಂಡ ಉರಗ ಪೆಡೆಯೆತ್ತಿದನು ಭಯದಿಂದ ಅಡಗಿದರು ದಶದಿಕ್ಕಿನೊಳಗೆ ತ್ರಿದಶರಬ್ಬರಿಸಿ ಆನಕ ದುಂದುಭೀ ಶಂಖ ಧಂ ಧಂ ಧಣಾ ಸರಿಗಮಪದನೀ ಯೆಂದೆನುತ ತುರೆಸಿದರು ಸದಮಲಾನಂದ ತಿಮ್ಮಾ 2 ನಾರಿಯರು ಬಂದು ಅಂಗಳ ಬಳಿದು ಗಂಧದಾ ಸಾರಣಿಯದೆಳೆದು ಮುತ್ತಿನ ರಂಗವಾಲೆ ವಿ- ಮಕರ ಕನ್ನಡಿ ದ್ವಾರದಲಿ ಬಿಗಿದರ್ಥಿಯಲಿ ಗೊಲ್ಲ ಕಟ್ಟಿಗೇ- ಕಾರ ಪರಿವಾರದವರೆಲ್ಲ ವೊಪ್ಪುತಿದಾರೆ ಕಂಸಾರಿ ಕೋನೇರಿವಾಸ 3 ನೃತ್ಯಗಾರರು ಬಂದು ತತ್ಥಿಗಿಣಿ ತಕ್ಥೈಯ ತಿತ್ತಿರಿ ಮೃದಂಗ ಜೊತೆ ತಪ್ಪದಂದದಿ ತಾಳ ಬತ್ತೀಸರಾಗದಲಿ ಎತ್ತಿ ಧ್ವನಿತೋರುತ್ತ ನೃತ್ಯ ಪಾಡುತ್ತ ಕುಣಿಯೆ ಮುತ್ತೈದೆಯರು ಬಂದು ಮುತ್ತಿನಾರತಿ ಪಿಡಿದು ಮಿತ್ರಭಾವದಿ ನಿಮ್ಮ ಅಡಿಗಳಿಗೆ ಹರಿವಾಣ ನೋಡುತ್ತಿದಾರೆ ಸರ್ವೇಶ4 ಕಾದೋದಂ ವಿಮಲ ಕಮ್ಮೆಣ್ಣಿ ಕಸ್ತೂರಿ ಸ್ವಾದು ಜವ್ವಾಜಿ ಚಂದನ ಗಂಧ ದ್ರವ್ಯಗಳ ಹೇಮ ಪಾದುಕಾ ಪಟ್ಟುವಸನ ಈ ಧರೆಯ ಮೇಲಿರ್ದ ಉಡಿಗೆ ತೊಡಿಗೆಯು ಕರ್ಪು ರಾದಿ ತಾಂಬೂಲ ನಿರ್ಮಲ ದಾದಿಯರು ಪಿಡಿದು ಮುಂದೆ ಆದಿಹರಿ ಪರಮಪುರುಷ 5 ದಂಡಿಗೆ ಶಂಖತಾಳ ತಂಬೂರಿ ಜಾಂಗಟೆಯ ಗೊಂಡು ನಿನ್ನಯ ಪರಮ ಪ್ರೀತ್ಯರ್ಥ ದಾಸರು ಬೊಮ್ಮಾಂಡ ಕಟಹÀ ಬಿಚ್ಚುವಂತೆ ತಂಡ ತಂಡದಿ ಗೆಜ್ಜೆಕಟ್ಟಿ ಅಭಿನಯ ತಿರುಹಿ ಕೊಂಡಾಡೆ ಶಬ್ದ ಪ್ರತಿ ಶಬ್ದವಾಗುತಿದೆ ಭೂ- ಬಲ್ಲವರಾರು ಕುಂಡಲಗಿರಿವಾಸ ತಿಮ್ಮಾ 6 ಗೋತ್ರಾರಿ ಹರಿಧರ್ಮ ಪುಣ್ಯಜನಪನು ವರುಣ ವೀತಿಹೋತ್ರನ ಸಖನು ಯಕ್ಷೇಶ ಕೈಲಾಸ- ಸೂರ್ಯ ಚಿತ್ತದಲಿ ಮುಖ್ಯರಾದ ವಿಶ್ವ - ಮಿತ್ರ ಸನಕಾದಿಗಳು ನಾರದರೆ ಮೊದಲಾಗಿ ಸ್ತೋತ್ರವನು ಮಾಡುತಲಿದ್ದಾರೆ ಲಕ್ಷ್ಮೀಕಳತ್ರ ಜಗದ್ಭರ್ತ ತಿಮ್ಮಾ 7 ನಿಚ್ಚ ಏಳುವ ಸಮಯ ಮೀರಿತೋ ಇಂದೀಗ ಎಚ್ಚರಿಕೆ ಪುಟ್ಟದೇ ಎಲೋ ದೇವ ಶ್ರೀದೇವಿ ಮೆಚ್ಚಿಸಿದ ಮಹಸರಸವೆ ಮುಚ್ಚಟೆಯಿದೇಂ ತಿಳಿಯಲಾಗದೆ ಸ್ವಾಮಿ ಸೊಲ್ಲು ಕರ್ಣಕೆ ಬೀಳದಾಯಿತೆ ಕಾಣೆ ಸಚ್ಚಿದಾನಂದಾತ್ಮಕ 8 ನಿದ್ರೆಗೆವೆ ಹಾಕದಿರೊ ನೀರೊಳಗೆ ನೀನಿರೊ ಉ- ಪದ್ರ ಭೂಮಿಗೆ ಕಳೆಯೊ ಕಶ್ಯಪನ ಸುತನಳಿಯೊ ಸ- ಮುದ್ರ ರಾಣಿಯ ಪಡೆಯೊ ರಾಯರಾಯರ ತÀಡೆಯೊ ಮುದ್ರೆ ಭೂಮಿಜೆಗೆ ಕಳುಹೊ ಅದ್ರಿಯುದ್ಧರಿಸೊ ಮುಪ್ಪುರವ ಸಂಹರಿಸೊ ಕಲಿ- ಕ್ಷುದ್ರ ಕಳೆ ನಿದ್ರೆ ಸಾಕೆಂದು ಶುಕ್ತಿ ಸಾರುತಿದೆ ವೆಂಕಟಕಾದ್ರವೇಯ ಹಾಸಿಗೆಯಿಂದೇಳು 9
--------------
ವಿಜಯದಾಸ
ಭಕ್ತನಾಗೋ ಹರಿಗೆ ಓ ಮನುಜ ಪ ನಾಲಗೆಯಲಿ ಶ್ರೀಲೋಲನ ನಿಜಗುಣ ಜಾಲವ ಕೊಂಡಾಡೋ ಓ ಮನುಜ 1 ಮಾನಸದಲಿ ಸದಾ ಜಾನಕಿ ರಮಣನ ಧ್ಯಾನವ ಮಾಡುತಿರೋ ಓ ಮನುಜ2 ಕರಯುಗಳಗಳಿಂ ವರಗೋಪಾಲನ ಚರಣ ಪೂಜೆಮಾಡೋ ಓ ಮನುಜ 3 ರವಿಕುಲ ತಿಲಕನ ಸುವಿಮಲ ಚರಿತೆಯ ಕಿವಿಯಲಿ ಕೇಳುತಿರೋ ಓ ಮನುಜ4 ಶ್ರೀಹರಿಯ ಜಗನ್ಮೋಹನ ಮೂರ್ತಿಯ ಊಹಿಸಿ ನೋಡುತಿರೋ ಓ ಮನುಜ 5 ಶಾಸ್ತ್ರ ಸಿದ್ಧವಹ ಕ್ಷೇತ್ರತೀರ್ಥಗಳ ಯಾತ್ರೆಯ ನೀಮಾಡೋ ಓ ಮನುಜ 6 ಶ್ರೀಶಗರ್ಚಿಸಿದ ಸುವಾಸಿತ ತುಲಸಿಯ ನಾಸಿಕದಲಿ ಮೂಸೊ ಓ ಮನುಜ7 ಸಾಧುಜನಗಳಿಗೆ ಮೋದವೀವ ಶ್ರೀ ಪಾದಗಳಿಗೆ ನಮಿಸೋ ಓ ಮನುಜ 8 ಭೋಗಿಶಯನಗನುರಾಗದಿಂದ ಶಿರ ಬಾಗಿ ಸತತ ನಡೆಯೋ ಓ ಮನುಜ 9 ಈಜಗದಲಿ ತಾ ಜಾಜಿ ಶ್ರೀಶನು ರಾಜಿಪುದನು ಕಾಣೋ ಓ ಮನುಜ 10
--------------
ಶಾಮಶರ್ಮರು
ಭಕ್ತರನ ನಂಬದಿರು ಭವದೂರನೆ ಮುಕ್ತಿಯನು ಬೇಡದಲೆ ನಿನ್ನೆ ಪೂಜಿಸುವರು ಪ ಪ್ರಸ್ತ ಮಾಡುವ ಸಾಧನಕ್ಕೆ ಪೋಗಿ ನಿಂದು ಬಲು ಹಸ್ತು ಬಂದವನು ತುತ್ತನ್ನ ಕೇಳೆ ಸ್ವಸ್ತವಾಗಿ ಕುಳಿತು ಭೋಜನ ಮಾಳ್ಪ ಆ ಗ್ರಹಸ್ತ ಪೊಟ್ಟಿ ತುಂಬದೆ ಬರಿದೆ ಏಳುವನೆ1 ಹಾದಿಕಾರನು ಬಂದು ವಸ್ತಿ ಮಾಡುವದಕ್ಕೆ ಆದರದಲಿ ಸ್ವಲ್ಪ ಸ್ಥಳವ ಕೇಳಿ ಪಾದ ಇಡುವನಿತರೊಳು ಕುಳಿತು ಆಮೇಲೆ ಸಂ ಪಾದಿಸುವ ತನ್ನ ತಕ್ಕಷ್ಟು ಧರಣಿಯನ್ನು2 ಆವದೊಲ್ಲೆವೆಂದು ಆಡುವರು ನಿತ್ಯದಲಿ ಕಾವ ಕರುಣಿ ನೀನೆಂದು ತಿಳಿದು ಸಿರಿ ವಿಜಯವಿಠ್ಠಲ ನಿನ್ನ ಇಂದು 3
--------------
ವಿಜಯದಾಸ
ಭಕ್ತವತ್ಸಲನೆಂಬ ಬಿರುದು ಬಿಡದಿರು ದೇವ ಬಹು ಪರಾಕೆಲೊ ಮುರಾರಿ ಪ. ಶಕ್ತ ನೀನೆಂದು ನಂಬಿರುವೆ ಕೃಪಾಸಿಂಧು ಮತ್ತಗಜ ಮೈಮರೆದು ಸುತ್ತಿ ಕೆಸರೊಳು ಬಿದ್ದು ಶಕ್ತಿ ಹೀನನಾಗಿ ಏಳದಂತಾಗಿದೆ ಮತ್ತಾರಿಗಳವಲ್ಲ ಮಂದರಾದ್ರಿಧರನೆ ಎತ್ತಿ ಕಡೆಹಾಯಿಸೊ ಎನ್ನೊಡೆಯ ಶ್ರೀ ಹರಿಯೆ 1 ನಿಂದ ನೆಲ ಮುನಿಯುತಿದೆ ನಿಪುಣತನವಡಗಿತು ಮಂದಮತಿ ವೆಗ್ಗಳಿಸಿ ನೆಲೆಗಾಣೆ ಮುಂದೆ ತಂದೆ ನೀನಲ್ಲದಿನ್ಯಾರು ರಕ್ಷಿಪರಯ್ಯ ಬಂಧನವ ಪರಿಹರಿಸೊ ಭಯನಿವಾರಣ ಹರಿಯೆ 2 ಕೊಂಡೆಯರ ಕೆಡಮೆಟ್ಟಿ ಕುಹಕಿಗಳ ಮಸ್ತಕವ ಚೆಂಡಾಡಿದ ಚಿನ್ಮಯರೂಪ ನೀನು ದಿಂಡರಿದು ದುರಳರನು ದುರಿತಗಳ ಪರಿಹರಿಸಿ ಪುಂಡರೀಕಾಕ್ಷ 3 ವ್ಯಾಕುಲದಿ ಕೃಷ್ಣಮೃಗವು ಎದೆಗುಂದಿರೆ ನೀ ಕರುಣಿ ಸಮಯದಲಿ ವೃಷ್ಟಿಯ ಕರೆದು ಜೋಕೆಯಲಿ ಪಥÀವೆನೇರಿಸಿದ್ಯೊ ಜಗದೀಶ 4 ನಿನ್ನನೆ ಪೂಜಿಪೆನು ನಿನ್ನನೆ ಪಾಡಿ ಪೊಗಳುವೆನು ನಿನ್ನನೆ ನಂಬಿದವಳಿಗಿಂತ ಉನ್ನತವಾದ ಕಂಟಕವು ಬಂದಿದೆ ಕಾಯೊ ಪನ್ನಗಶಯನ ಹೆಳವನಕಟ್ಟೆ ರಂಗಯ್ಯ 5
--------------
ಹೆಳವನಕಟ್ಟೆ ಗಿರಿಯಮ್ಮ
ಭಕ್ತಿ ಭಾವಗಳು ಸ್ವಲ್ಪಮಾತ್ರವಿಲ್ಲವಾಯಿತು ಪ ಗುರುಗಳಿವರು ಹಿರಿಯರಿವರು ಶರಣರೆಂದು ತಾರತಮ್ಯದಿ ರವನರಿತು ಅರಿಯದಂತೆ ಸಿರಿಯ ಮದದಲಿ ಶುನಕ ನಂಕೆನೋಡಿ ಮರಳುತಿಹರು ಏನನೆಂಬೆ ನೆಲವ ನೋಡದೆ 1 ನಿಟ್ಟಿಸದೆ ಸಾದುಗಳನು ಪ್ರಾಯ ಮದದ ಹಮ್ಮಿನಿಂದ ಭ್ರಷ್ಟ ಜನರು ಪುಣ್ಯ ಪಾಪಗಳನು ತಿಳಿಯದೆ ಅಷ್ಟದಿಕ್ಕು ತಮ್ಮದೆಂದು ಸರ್ವಗಿರಿಯನೇರಿ ತಾವೆ ಶ್ರೇಷ್ಠರೆಂದು ತಮ್ಮ ತಾವೆ ಕೊಂದು ಕೊಂಬರೋ 2 ನೂತನದಾಭರಣ ವಸ್ತ್ರ ಜಾತಿಯನ್ನು ಉಟ್ಟು ಕೊಟ್ಟು ಪ್ರೀತಿಯಿಂದ ತಮ್ಮ ತಾವೆ ನೋಡಿ ಹಿಗ್ಗುತಾ ಧಾತು ತಪ್ಪಿ ನಡೆವ ಜನರ ವಾತಸುತನ ಕೋಣೆಲಕ್ಷ್ಮೀ ನಾಥ ಬಲ್ಲ ನಮಗೆ ಅವರ ಮಾತಿನ್ನೇತಕೋ 3
--------------
ಕವಿ ಪರಮದೇವದಾಸರು
ಭಕ್ತಿಯನು ಪಾಲಿಸುತ ಭಕ್ತರನು ಪಾಲಿಸುವ ಮುಕ್ತಿದಾಯಕ ಹರಿಯ ಸೇವೆಯನು ಮಾಳ್ಪೇ ಪ ಪಂಚೇಂದ್ರಿಯವ ಗೆದ್ದು ಪಂಚಾಮೃತಗಳಿಂದ ಕಂಚಿಪುರ ವಾಸಿಯ ಕಾಯವನು ತೊಳೆದೂ 1 ಆರು ಅಂಗಳ ಜೈಸಿ ಆರು ಶಾಸ್ತ್ರಗಳಿಂದ ಧಾರೆ ಪುರವಾಸಿಗೇ ಗಂಧ ಲೇಪಿಸುತಾ 2 ಚಾರು ವೇದಗಳಿಂದ ನಿತ್ಯ ಪುಷ್ಪವೇರಿಸುತ 3 ಎಂಟ ಕೀಳರ ಗೆದ್ದು ತುಂಟರೈವರ ಕೊಂದು ಬಂಟನಾಗುತ ಹರಿಯ ಮಹಿಮೆಯನು ಭಜಿಸಿ 4 ಶಾಪ ತಾಪವ ಕಳೆದು ತ್ರಿಪುರಾರಿ ವದ್ಯನಿಗೆ ಧೂಪದೀಪಗಳಿಂದ ಆರತಿಯ ಬೆಳಗೀ 5 ಅನುಮಾನವನು ತ್ಯಜಿಸಿ ಶ್ರೀ ಚೆನ್ನಕೇಶವನಿಗೆ ತನುಮನ ಧನದಿಂದ ಆತ್ಮವರ್ಪಿಸುವೇ 6
--------------
ಕರ್ಕಿ ಕೇಶವದಾಸ
ಭಕ್ತಿಯು ಸುಲಭ ತಾನಲ್ಲ ನಿಜಭಕ್ತಿ ದೊರಕಲವಗಾಗುವುದು ಎಲ್ಲ ಪ ಎಲ್ಲ ಸಂಗವ ಬಿಡಬೇಕು ತಾನುಬಲ್ಲ ಗುರುವ ಸೇವೆ ಮಾಡಬೇಕುಎಲ್ಲಕೆ ತಾನಿರಬೇಕು ಭಕ್ತಿಬಲ್ಲವನಿಂದ ನಿತ್ಯದಿ ಹೆಚ್ಚಬೇಕು 1 ಹೇಳಿದಲ್ಲಿಗೆ ಹೋಗಬೇಕು ಮನಕೇಳದಿರಲು ಬುದ್ಧಿಯ ಹೇಳಬೇಕುಕಾಳರಾತ್ರೆಯೆನ್ನದಿರಬೇಕು ನಿತ್ಯಬಾಲಕನಂತೆ ತೋರುತಲಿರಬೇಕು 2 ಹಸಿವು ತೃಷೆಯ ಬಿಡಬೇಕು ತಾನುಎಸಗಿ ಗುರುಸೇವೆ ಮಾಡಬೇಕುಬಿಸಿಲು ಮಳೆ ಎನ್ನದಿರಬೇಕು ಧೈರ್ಯವೆಸಗಿ ಭಯಕೆ ಬೆಚ್ಚದಲಿರಬೇಕು 3 ಗುರುವಿನನಡೆ ನೋಡಬೇಕು ಆಗುರುವಿನ ನಡೆಯ ಕಂಡಂತಿರಬೇಕುಕರಣ ವಿಷಯ ಹೋಗಬೇಕು ನಿತ್ಯಭರಿತವಾನಂದವಾಗಿರಬೇಕು 4 ಕರವ ನೀಡುವನು ಏ-ನೆಂತು ಪೇಳಲಿ ತನ್ನೊಳೆರಕ ಮಾಡುವನು 5
--------------
ಚಿದಾನಂದ ಅವಧೂತರು
ಭಕ್ತಿಲೇಸು ಮುಕ್ತಿಗಿಂತಲಿ ಪ ಭಕ್ತಿಲೇಸು ಮುಕ್ತಿಗಿಂತಲಿ | ಭಕ್ತಜನರಾ ಪಾಲಿಸುವನಾ | ಭಕ್ತಿಗೊಲಿದು ಫಣಿಗಣ ಲೋಕದಿ | ಯುಕ್ತಬಲಿಯ ಬಾಗಿಲಲೊಳಿಹ ರಂಗಯ್ಯನಾ | ಸುರಪ್ರೀಯನಾ ಮುನಿಧ್ಯೇಯನಾ 1 ಸರಸಿಭವನ ಕಠಾರದಿಂದ ಲೋಗದನಾ | ಅರಸೆನಿಪನಾ ತನುಭವನಾ | ಧರಿಸಿದನಾ | ಅರಸಿಯ ಜನಕನ ಕುಲರಿಯನಿಪನಾ | ಕುವರನ ಸ್ಯಂದನ ವಾಜಿಯನು ಪೊರೆದನಾ | ಗೆಲಿಸಿದನಾ | ಮೆರಿಸಿದನಾ 2 ವನರುಹಸಖನ ಪೊಂದೇರ ನಡೆಸುತಿಹನಾ | ಅನುಜನಾ ಅರಿಗಳಾ ಹರಿಯ ನಂದನನಾ | ಘನವಾಲದಿಂದ ನೊಂದಿಹ ಪುರದರಸನಾ | ಅನುಜನಾ ಸ್ಥಿರಪದವಿತ್ತು ನುಳುಹಿದನಾ | ನಿಲಿಸಿದನಾ | ಕಾಯ್ವನಾ 3 ಸಿರಿಯ ಮದನಳಿದು ಗುರುಚರಣಕೆ ಹೊಂದಿ | ದೊರಕಿ ನಿತ್ಯದಲಿ ಸಂತುಷ್ಟವಿರುತಾ | ಗುರುವರ ಮಹಿಪತಿ ಸ್ವಾಮಿಯ ಷೋಡಶ | ಪರಿಯಲಿ ತುಳಸಿಯ ತಂದು ಪೂಜೆ ಮಾಡುವ | ಪಾದ ನೋಡುವಾ | ಪಾಡುವಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಗವಂತನ ಸಂಕೀರ್ತನೆ ಅನುದಿನ ನೆನೆಯಲೊ ಹನುಮನಿಗತಿ ಪ್ರಿಯ ಪರಮ ಪಾವನ ರಾಮನಾಮ ಪ ಇನಕುಲ ಭೂಷಣ ಮುನಿಜನ ತೋಷಣ ಜಾನಕಿರಮಣನ ನಾಮ ಅ.ಪ ಗೌತಮ ಸತಿಯೆ ಪುನೀತಳ ಮಾಡಿ ಪ್ರ- ಖ್ಯಾತಿ ಪೊಂದಿದ ದಿವ್ಯನಾಮ ಶೀತಲ ಕಿರಣ ಭೂಷಣನ ಧನುವ ಮುರಿದು ಸೀತೆಯ ಪೊಂದಿದ ನಾಮ 1 ಜನಕನ ವಚನವನುಳಿಸುವ ನೆವದಲಿ ವನವಾಸ ಮಾಡಿದನ ನಾಮ ವನದಲಿ ಖರದೂಷಣ ಮುಖ ದನುಜರ ಹನನ ಮಾಡಿದ ದಿವ್ಯನಾಮ2 ಶರಭಂಗಮುನಿಗೆ ಪರಮ ಪದವನಿತ್ತ ಪರಮ ಪವಿತ್ರನ ನಾಮ ನಾಸಿಕ ಕರ್ಣ ಮುರಿಸಿದವನ ಶುದ್ಧ ನಾಮ 3 ಭೂಮಿಜೆಯನು ಮೋಸದಿಂದ ಅಗಲಿಸಿದ ಮಾರೀಚನ ಕೊಂದ ನಾಮ ಸ್ವಾಮಿಯ ಪ್ರೇಮಕ್ಕೆ ಮಡಿದ ಜಟಾಯುಗೆ ಅಭಯ ಹಸ್ತವನಿತ್ತ ನಾಮ 4 ಆ ಮಹಾ ಹನುಮನ ಕಾಮಿತದಂತೆ ಮಹೇಂದ್ರ ಸುತನ ಕೊಂದ ನಾಮ ಕಮಲ ಸುಹೃದತನಯನಿಗೆ ಸಾಮ್ರಾಜ್ಯವನಿತ್ತ ನಾಮ 5 ಪರಿಪರಿವಾರದಿಂ ಶರಧಿಯೊಳ್ ಸೇತು ಬಂಧನವ ಮಾಡಿದ ರಾಮನಾಮ ದುರುಳ ರಾವಣ ಮುಖ ರಕ್ಕಸರನೆ ಕೊಂದು ಧರಣಿ ಸುತೆಯ ಕಂಡ ನಾಮ6 ಶರಣವ ಪೊಂದಿದ ಭಕುತ ವಿಭೀಷಣಗೆ ತರುಣಿ ಸೀತೆ ಲಕ್ಷ್ಮಣರಿಂದ ಕೂಡಿ ಪು ಷ್ಪಕವನೇರಿದ ಸಾಧು ನಾಮ 7 ಉರುತರ ತಪದಲಿ ನಿರತನಾದ ತಮ್ಮ ಭರತನ ಉಳಿಸಿದ ನಾಮ ದೊರೆತನವೊಂದಿ ಸಕಲ ಸುಜನರುಗಳಿಗೆ ಪರತರ ಸುಖವಿತ್ತ ನಾಮ 8 ತನ್ನ ಭಕುತರೊಳು ಉನ್ನತನೆನಿಸಿದ ಘನ್ನಮಾರುತಿಗೊಲಿದ ನಾಮ ಪ್ರ ಸನ್ನನಾಗಿ ಸಂತತ ಇವನಿಗೆ ತನ್ನ ಸಹ ಭೋಗ ಸುಖವಿತ್ತ ನಾಮ 9
--------------
ವಿದ್ಯಾಪ್ರಸನ್ನತೀರ್ಥರು