ಒಟ್ಟು 3520 ಕಡೆಗಳಲ್ಲಿ , 121 ದಾಸರು , 2542 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ಪಭೂಷಣನ ಸುತನ ಭಕ್ತಿಯಿಂದ ಬಲಗೊಂಡು ಮತ್ತೆ ಅಜನಸತಿಯ ಪಾದಕ್ಕೆ ಎರಗುವೆ 1 ಎಲ್ಲ ದೇವತೆಗಳಿಗೆ ಎರಗಿ ಭಕ್ತಿಯಿಂದ ಲಕ್ಷ್ಮೀ- ವಲ್ಲಭನ ಕತೆಗಳ ವರ್ಣಿಸುವೆನು 2 ಸ್ವಾಮಿ ಶ್ರೀಕೃಷ್ಣನ ಪ್ರೇಮವನ್ನು ಪಡೆದ ಸು- ದಾಮನೆಂಬೊ ಭಕ್ತ ಬಡವ ಬ್ರಾಹ್ಮಣಿದ್ದನು 3 ಸ್ನಾನ ಹೋಮ ಜಪವಮಾಡಿ ನೇಮ ನಿಷ್ಠೆಲಿಂದ ಉಪ್ಪು ಕಾಲ ಕಳೆಯುತಿದ್ದನು 4 ಅಶನವಿಲ್ಲ ವಸನವಿಲ್ಲ ಹಸಿದ ಮಕ್ಕಳನ್ನು ನೋಡಿ ವ್ಯಸನದಿಂದ ಪತಿಯ ಪಾದಕ್ಕೆರಗಿ ನಿಂತಳು 5 ತಂದೆ ತಾಯಿಗಳ ಕಡೆಯ ಬಂಧು ಬಳಗ ಯಾರು ಹತ್ತಿ ದ್ಹೊಂದಿದವರುಯಿಲ್ಲೆ ನಿಮಗೆ ಎಂದು ನುಡಿದಳು 6 ಪತ್ನಿ ಮಾತು ಕೇಳಿ ಪರಮ ಭಕ್ತಿಯಿಂದ ನುಡಿದ ಧ- ರ್ಮಾರ್ಥ ಕಾಮ್ಯಗಳನೆ ಕೊಡುವೋ ಮೋಕ್ಷದಾಯಕ 7 ಆದಿಮೂರುತಿ ಕೃಷ್ಣ ಓದಿಕೊಂಡ ಗೆಳೆಯನೊಬ್ಬ ಮಾಧವನ ಬಿಟ್ಟು ಮತ್ತೊಬ್ಬರಿಲ್ಲವು8 ಆತನ ಕಂಡು ಬಂದರ್ಯಾತರ ದಾರಿದ್ರ್ಯ ನಮಗೆ ಪ್ರೀತಿಯಿಂದ ಹೋಗಿಬನ್ನಿರೆಂದು ನುಡಿದಳು 9 ವರಮಾಲಕ್ಷ್ಮಿ ಅರಸು ಕೃಷ್ಣನರಮನೆಗೆ ಪೋಗಲಿಕ್ಕೆ ನ- ದರ ಏನುವೊಯ್ಲೆ ನರಹರಿಗೆ ಎಂದನು 10 ಲಕ್ಕುಮೀಶನ್ನ ದರ್ಶನಕ್ಕೆ ಒಯ್ಯಲಿಕ್ಕೆ ಮೂರು ಮುಕ್ಕು ಅವಲಕ್ಕಿ ತಿರಿದು ತಂದುಕೊಟ್ಟಳು 11 ಅದನು ಗಂಟು ಕಟ್ಟಿ ತನ್ನ ಹೆಗಲಮ್ಯಾಲೆ ಇಟ್ಟುಕೊಂಡು ನ- ಗಧರನ್ನ ನಗರಕ್ಕಾಗ ಬರುತಲಿದ್ದನು 12 ಲಕ್ಷಣಾದ ಶಕುನವ ಆ ಕ್ಷಣದಿ ಕಂಡು ವಿಪ್ರ ಲಕ್ಷ್ಮೀಪತಿಯ ದಯವು ನಮಗೆ ಆಗೋದೆಂದನು 13 ಹಾದಿಲ್ಹರಿವೊ ಜಲವ ಕಂಡು ಸ್ನಾನವನ್ನು ಮಾಡಿಕೊಂಡು ವೇದ ಪುಸ್ತಕವ ಹಿಡಿದು ಓದಿಕೊಳುತಲಿ 14 ಮಲ್ಲೆ ಮಲ್ಲಿಗೆ ದವನ ಅಲ್ಲೆಯಿದ್ದ ಫಲಗಳು ಲಕ್ಷ್ಮೀ- ವಲ್ಲಭಗೆ ಅರ್ಪಿತವೆಂದು ನಡೆದನು 15 ಗೋಪುರವ ಕಂಡು ದ್ವಾರಕಾಪುರಕ್ಕೆ ಕೈಯಮುಗಿದು ಶ್ರೀಪತಿಯ ಬಾಗಿಲಲಿ ಬಂದು ನಿಂತನು 16 ದ್ವಾರದಲ್ಲಿ ನಿಂತವರು ದಾರುಯೆಂದ್ವಿಚಾರಿಸಲು ನಾರಾಯಣನ ಸಖನು ನಾನೆಂದ್ಹೇಳುತಿದ್ದನು 17 ನುಡಿದ ನುಡಿಯ ಕೇಳುತ ನಡೆದು ಬಂದು ಚಾರಕರು ಒಡೆಯ ನಿಮ್ಮ ಗೆಳೆಯನಂತೆ ಬಡವ ಬ್ರಾಹ್ಮಣ 18 ಹುಟ್ಟ ಮೊದಲೆ ಅನ್ನ ತನ್ನ ಹೊಟ್ಟೆಗುಂಡ ಮನುಜನಲ್ಲ ಗಟ್ಟಿಗಾಳಿ ಬರಲೀಗ್ಹಾರುವಂತೆ ತೋರುವ 19 ಅಸ್ಥಿ ಚರ್ಮ ಆತನಂಗಕ್ಹತ್ತಿಕೊಂಡ ಹೊಟ್ಟೆಬೆನ್ನು ಮತ್ತೆ ನಡೆಯಲಾರ ಮಾತನಾಡಲಾರನು 20 ಒಡೆದ ಗುಂಡುತಂಬಿಗೆ ಬಡಿದನದರ ಸುತ್ತ ಮ್ಯಾಣ ಹಿಡಿದ ಗಂಟ ಬಿಡದಲ್ಹೊತ್ತು ನಡೆದು ಬಂದನು 21 ಮರದ ಗುಂಡು ಸರದಗುದ್ದಿ ಕೊರಳೊಳಗೆ ಹಾಕಿಕೊಂಡು ಎರಳೆ ಚರ್ಮ ಸುತ್ತಿ ಎಡದ ಬಗಲಲ್ಲಿಟ್ಟನು22 ದೊಡ್ಡನಾಮ ಹಚ್ಚಿಕೊಂಡು ಮುದ್ರೆಮಯ್ಯಲೊತ್ತಿಕೊಂಡು ಶುದ್ಧ ಚಂದ್ರಮನ ಕಾಂತಿ ತೋರುತಿದ್ದನು 23 ಛಿದ್ರವಾದ ಬಟ್ಟೆನುಟ್ಟು ಚಿಗುರು ತುಳಸಿ ಕಿವಿಯಲ್ಲಿಟ್ಟು ಪದ್ಮನಾಭ ಪಾಲಿಸೆನುತ ಕೂಗುತಿದ್ದನು24 ನಾಮಾಂಕಿತÀವ ಕೇಳಲು ಸುದಾಮನೆಂದು ಹೇಳುವ ನಾನಾ ಪರಿಯಲ್ನಿಮ್ಮ ಸ್ತುತಿಯ ಮಾಡುತಿದ್ದನು 25 ಅಪ್ಪುಣಾದರಾತನ ಇತ್ತ ಕರೆದು ತಾವೆನೆನಲು ಭಕ್ತರೊಡೆಯ ಭಾಳ ಸಂಭ್ರಮದಿ ಎದ್ದನು 26 ಕರವ ಪಿಡಿದು ಕುಳ್ಳಿರಿಸಿ ದಿವ್ಯಾಸನದ ಮ್ಯಾಲೆ ತರಿಸಿ ಚಾಮರದ ಗಾಳಿ ಹಾಕುತಿದ್ದನು 27 ಪನ್ನೀರು ತಂದು ಪಾದತೊಳೆದು ದ್ರಾಕ್ಷಿ ಕಿತ್ತಳೆ- ಹಣ್ಣು ಎಳನೀರು ತಂದು ಮೆಲಲು ಕೊಟ್ಟನು 28 ಮದುವೆ ಆಯಿತೇನೊ ಸಖನೆ ಎಂದು ಕೇಳಿದ 29 ಸೋಳಸಾವಿರ ಸತಿಯರಾಳುವೊ ಶ್ರೀರಮಣ ಕೇಳೊ ರಾಣಿವೊಬ್ಬಳಿರುವೊಳಯ್ಯ ನಮಗೆಯೆಂದನು 30 ಇಷ್ಟುದಿವಸ ಇಲ್ಲಿಗೆ ಬಾರದಿದ್ದ ಕಾರಣೇನು ಚಿಕ್ಕಂದಿನ ಸ್ನೇಹವೆಲ್ಲ ಮರೆತ್ಯ ಎಂದನು 31 ಬರದಲಿದ್ದೆ ನಾನು ಪಾಮರನೂ ಆದಕಾರಣ ಕಳುಹಿಕೊಟ್ಟಳೆನ್ನ ಭಾರ್ಯಳೀಗ ಎಂದನು 32 ಅಣ್ಣ ನಮ್ಮತ್ತಿಗೆ ನಮಗೇನು ಕಳಿಸಿದಳು ನಿನ್ನ ಹೆಗಲ ಗಂಟು ಬಿಚ್ಚಿ ತೋರಿಸೆಂದನು 33 ವಿಪ್ರ ನಾಚಿ ನೆಲನ ನೋಡುತಿರಲು ಕೃಷ್ಣ ಸಲಿಗೆಲಿಂದ ಗಂಟನೆಳೆದು ಬಿಚ್ಚಿಸಿದನು 34 ಸುಜನ ಜನರು ಮಾಡುವಂಥ ಭಜನೆಯೊಂದೆ ಸಾಕುಯೆನೆಗೆ ಹೇಮ ರತ್ನಾಭರಣವ್ಯಾತಕೆಂದನು 35 ಕುಂದಣದ ಪಾತ್ರೆಯೊಳಗೆ ತಂದು ಸುರುವೆ ಪ್ರತಕವನ್ನು ಮಂದರೋದ್ಧರನು ಮುಷ್ಟಿ ತೆಗೆದುಕೊಂಡನು36 ಮುಷ್ಟ್ಟಿಗೊಂದು ಬಾರಿ ಶ್ರೀಕೃಷ್ಣ ತೆಗೆದು ಮೆಲ್ಲುತಿರಲು ಕಷ್ಟ ದಾರಿದ್ರ್ಯವೆಲ್ಲ ಹರಿದು ಹೋಯಿತು 37 ಎರಡನೇ ಮುಷ್ಟಿ ಪಾಲ್ಗಡಲಶಯನ ಮುಕ್ಕುತಿರಲು ಸಡ- ಸಡಗರ ವೈಕುಂಠಪದವಿ ಮುಕ್ತಿ ಆಯಿತು 38 ಮೂರನೇ ಮುಷ್ಟಿಗೆ ನಾರಿ ರುಕ್ಮಿಣಿ ಬಂದು ಕೃಷ್ಣಯೇನು ಕೊಡುವಿ ಕರವ ಪಿಡಿದಳು 39 ಭಾವನವರು ತಂದುಕೊಟ್ಟ ದೂರದ ಪದಾರ್ಥವನ್ನು ನೀವೆ ಸವಿಯ ನೋಡುವೋದು ದಾವ ನೀತಿಯು40 ಅಕ್ಕ ಕಳಿಸಿದ್ದು ಅವಲಕ್ಕಿ ನಮಗಿಲ್ಲದ್ಹಾಗೆ ಮುಕ್ಕಿ ಬಿಡುವರೇನೊ ಎಂದು ನÀಕ್ಕಳಾಗಲೆ41 ಇಷ್ಟು ಮಂದಿಯೊಳಗೆ ಎನ್ನ ಮುಷ್ಟಿ ಹಿಡಿದು ನಿಲ್ಲುವಂಥ ದಿಟ್ಟತನಗಳೆಲ್ಲ್ಲಿ ಕಲಿತೆ ಹೇಳೆಯೆಂದನು 42 ಚಿಕ್ಕ ಸತ್ಯಭಾಮೆ ನೋಡಿ ನಕ್ಕಾಳೆಂಬೊ ನಾಚಿಕಿಲ್ಲ ಮುಕ್ಕು ಅವಲಕ್ಕಿಗೆನ್ನ ಕÀರವ ಪಿಡಿವೋರೆ 43 ಸರ್ವರೊಳಗೆ ಅಧಿಕಳೆಂಬೊ ಗರುವಿನ ರುಕ್ಮಿಣಿಗೆ ಬುದ್ಧಿ ಕರೆದು ಹೇಳಬಾರೆ ಸತ್ಯಭಾಮೆಯೆಂದನು 44 ಎನ್ನ ಭಕ್ತರಲ್ಲಿ ಪ್ರೇಮ ನಿನಗೆ ಉಂಟಾದರೆ ಇನ್ನೂ ಒಂದು ಮುಕ್ಕು ನಿನಗೆ ಕೊಡುವೆನೆಂದನು45 ಅಕ್ಕಗಾಡೋ ಮಾತಕೇಳಿ ಚಿಕ್ಕ ಸತ್ಯಭಾಮೆ ತಾನು ಅಕ್ಕರದಿ ಬಂದು ಕೃಷ್ಣನೆದುರು ನಿಂತಳು 46 ರಂಗ ನಿನ್ನ ಪಟ್ಟದರ್ಧಾಂಗಿಯಾದ ರುಕ್ಮಿಣಿಗೆ ಮುಂಗೈ ಹಿಡಿವೋದಕ್ಕೆ ದಾರಭಯವೇನೆಂದಳು47 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಸರ್ವಾಂತರ್ಯಾಮಿ ನಿನಗೆ ಪ ದೇವತಿರ್ಯಗ್ ಮನುಷ್ಯಾದಿ ಜಂತುಗಳಲ್ಲಿ ದಿವಿಭುವಿ ಪಾತಾಳದೊಳ ಹೊರಗಿರುವಗೆ ಅ.ಪ ಪ್ರಾಣ ಪ್ರತಿಷ್ಟೆಗೋಳಕತ್ರಯ ಚಿಂತನೆ ನೀನೆ ಕರುಣದಿ ಮನ್ಮಾನಸದೊಳು ಪೊಳ- ದೇನೇನು ಮಾಡಿಸಲದು ನಿನಗರ್ಪಿತ 1 ಅಣುವಿನೊಳಣುವಾಗಿ ಮಹತ್ತಿನೊಳ್ಮಹತ್ತಾಗಿ ಎಣÉಸಲೆನ್ನಳವೆ ನಿನ್ನಯ ಮಹಾಮಹಿಮೆಯ ವಿನುತಿಸುವುದು ಕೊನೆಗಾಣದೆ ಶೃತಿ ತತಿ 2 ಶ್ವೇತದ್ವೀಪಾನಂತಾಸನ ವೈಕುಂಠ ಆ- ಪ್ರೀತಿಯಿಂದಲಿ ನಿನ್ನ ಭಜಿಸುತಿರುವ ಭಕ್ತ- ವ್ರಾತವ ಸಲಹುವ ಗುರುರಾಮವಿಠಲನೆ 3
--------------
ಗುರುರಾಮವಿಠಲ
ಸರ್ವಾಂತರ್ಯಾಮಿ ಸರ್ವೇಶ ಬಾರೊ ಸರ್ವಸ್ವತಂತ್ರನೆ ಸರ್ವಭಯನಾಶ ಪ ಸರ್ವತಂತ್ರನೆ ಸರ್ವವೇದದಿ ಸರ್ವತತ್ತ್ವದಿ ಸರ್ವಸಾಕ್ಷಿ ನೀ ಸರ್ವವ್ಯಾಪಕ ಸರ್ವದೇವರ ಸಾರ್ವಭೌಮ ಅ.ಪ ಜಡಬೊಂಬೆ ನಾಟಕರಚಿಸಿ ಎಡಬಿಡದೆ ಕುಣಿಸ್ಯಾಡುವಿ ಕಡುಮೋಹಗೊಳಿಸಿ ಕಡುಗೌಪ್ಯದದರೊಳು ನೆಲೆಸಿ ನೀನೆ ಅಗಣಿತ ಕಲ್ಪನೆವೆರಸಿ ಜಡಕೆ ಜಡವಾದ ತೊಡರಿನಾಟದ ಕೆಡಕು ತಪ್ಪಿಸಿ ಪಿಡಿದು ಎನ್ನನು ಒಡೆಯ ನಿನ್ನಡಿ ಭಕ್ತರಾವಾಸ ದಿಡು ಎಂದೆರಗುವೆ ಪಾಲಿಸಭಯ 1 ನಾನಾವಿಧದ ಸೃಷ್ಟಿಗಳ ಸೃಜಿಸಿ ಪೋಣಿಸಿ ಮಾಡಿಟ್ಟ ಭವವೆಂಬ ಮಾಲೆ ಏಳು ಮೋಹವ ತುಂಬಿದೆಲ ಪುಸಿ ಕಾಣದಂತೊಗೆದಿ ಮಹಾಮಾಯದ ಜಾಲ ನಾನು ನೀನೆಂಬ ಜಾಣರೆಲ್ಲ ಬಿದ್ದು ಏನುಕಾಣದೆ ತ್ರಾಣಗೆಟ್ಟರು ಹೀನಮತಿ ನಾನೇನು ಬಲ್ಲೆನು ನೀನೆ ಸಲಹೆನ್ನ ದೀನರಕ್ಷಕ 2 ಪಾವನ ಪರಮಪ್ರಕಾಶ ದೇವ ಭಾವಜನಯ್ಯ ನಿಜಭಾವಿಗಳರಸ ಕೇವಲಸುಗುಣಾಂತರ್ವಾಸ ನಿನ್ನ ಸೇವಕನೆನಿಸೆನ್ನ ಕಾಯೊ ನುತಪೋಷ ಜೀವಜೀವರಜೀವ ಚೈತ್ಯನದೇವ ದೇವರ ದೇವ ನಂಬಿದೆ ಜಾವ ಜಾವಕೆ ಒದಗುತಿಹ್ಯ ಮಹ ನೋವು ಗೆಲಿಸೆನ್ನಯ್ಯ ಶ್ರೀರಾಮ 3
--------------
ರಾಮದಾಸರು
ಸಲಹು ನಂದಕುಮಾರ ಸಲಹು ಗೋಪೀತನಯ ಸಲಹು ವಸುದೇವನಿಗೆ ಪುತ್ರನೆನಿಸಿದನೆಸಲಹು ದೇವಕಿ ಜಠರದಲಿ ಬಂದನೆನಿಸಿದನೆಸಲಹು ಶ್ರೀ ರಾಮ ಶ್ರೀಕೃಷ್ಣ ಜಯ ಕೃಷ್ಣ ಸಲಹು ಸಲಹೂ ಪನಂದನೆನೆ ಸಕಲ ಸಂಪತ್ತ ಸೂಚಿಸುತಿಹುದುಚಂದದಿಂದಣಿಮಾದಿ ಸಿದ್ಧಿುರಲಾಗಿಬಂದವಿದ್ಯೆಯು ಮುಚ್ಚಲಾ ಶಕ್ತಿ ಕುತ್ಸಿತವುಹಿಂದುಗಳೆವದರಿಂದ ನಂದನಕುಮಾರ 1ಜ್ಞಾನಶಕ್ತಿಯು ತಾನು ಗುಪ್ತವಾಗಿರಲಾಗಿಧ್ಯಾನಿಸುವ ಭಕ್ತರಿಗೆ ವಿಸ್ತರಿಸಿ ಕೊಡಲುನೀನು ಗೋಪೀತನಯನೆಂಬ ನಾಮವ ತಾಳ್ದೆದೀನರಕ್ಷಾಮಣಿಯೆ ಜ್ಞಾನದಾಯಕನೆ 2ವಸುವೆನಲು ಪರಿಶುದ್ಧವಾದ ಕರಣದ ಪೆಸರುಎಸೆದು ನೀನಿರಲಲ್ಲಿ ದೇವನೆನಿಸುವದುಅಸಮ ತೇಜದಿ ಪುರುಷನೆನಿಸಿ ಸಲಹಲು ಜಗವವಸುದೇವಪುತ್ರನೆನಿಸಿತು ನಿನ್ನ ನಾಮ 3ದೇವಕಿಯು ನಿನ್ನ ಬಗೆ ಮಾಯೆ ಬ್ರಹ್ಮಾಂಡಗಳಭಾವಿಸಲು ನೀನದನು ಕುಕ್ಷಿಯೊಳಗಿರಿಸಿಸಾವಧಾನದಿ ಸಕಲದೊಳು ಸತ್ಯನಾಗಿರಲುದೇವಕಿಯ ಜಠರದಲಿ ಬಂದನೆನಿಸಿದನೆ 4ನಿತ್ಯದಲಿ ಯೋಗಿಗಳು ನಿನ್ನಲ್ಲಿ ರಮಿಸುತಿರೆಪ್ರತ್ಯಕ್ಪ್ರಕಾಶದಲಿ ಜಡಪದಾರ್ಥಗಳುಅತ್ಯಂತ ರಮಣೀಯವಾಗಿಯದರೊಳು ಜನರುನಿತ್ಯ ರಮಿಸಲು ರಾಮನೆನಿಪ ಶ್ರೀ ಹರಿಯೆ 5ಮೂರು ವರ್ಣದ ನಾಮ ಮುನಿವಂದ್ಯ ನಿನಗಿರಲುಸಾರುವುದು ಸದ್ರೂಪನೆಂದೆರಡು ವರ್ಣಮೂರನೆಯ ವರ್ಣವಾನಂದಮಯನೆನ್ನುತಿದೆಈ ರೀತಿಯಲಿ ನೀನು ಕೃಷ್ಣನೆನಿಸಿದನೆ 6ಪರಮಾತ್ಮ ನೀನಾಗಿ ಪರಿಪರಿಯ ರೂಪಿನಲಿಸುರಮುನೀಶ್ವರ ಭಾವ್ಯ ಚರಿತನೆಂದೆನಿಸಿತಿರುಪತಿಯ ವಾಸವನು ಸ್ಥಿರವಾಗಿ ನಿರ್ಧರಿಸಿುರುವ ವೆಂಕಟರಮಣ ಕರುಣರಸಪೂರ್ಣ 7ಓಂ ಯಶೋದಾವತ್ಸಲಾಯ ನಮಃ
--------------
ತಿಮ್ಮಪ್ಪದಾಸರು
ಸಲಹು ಶ್ರೀ ಗುರುರಾಯಾ | ಸಲಹು ಬುಧ ಜನಪ್ರೀಯಾ | ಸಲಹೆನ್ನ ಪರಮ ಗೇಹ್ಯಾ ಪ ಚಿಕ್ಕವನು ನಾ ಮೊದಲು | ಸೊಕ್ಕಿ ಭವಸುಳಿಯೊಳಗೆ | ಸಿಕ್ಕಿ ಬಹು ನೊಂದೆನೆಂದು | ಹೊಕ್ಕೆ ಮೊರೆ ನಿನ್ನ ಹಿಂದಿಕ್ಕಿಕೋ ದಯದಿಂದ | ಮಕ್ಕಳಂದದಲಿ ಚೆನ್ನಾಗೆನ್ನಾ 1 ಪಿಂತಿನಾ ಭವಣೆಗಳು | ಎಂತಾದರಾಗಲೀ | ಶಾಂತ ಮೂರುತಿಯೇ ಎನ್ನಾ | ಅಂತರಂಗದಲಿನ್ನು ನಿಂತು ನಿನ್ನಯ ರೂಪ | ಸಂತತವಾಗಿ ದೋರೋ ಬೀರೋ 2 ಅನ್ಯಪಥಕೆಳಿಸಿದಾ ಘನ್ನ ತಪ್ಪವ ಕ್ಷಮಿಸಿ | ನಿನ್ನ ಪದಯುಗಳ ದೋರಿ | ಸನ್ನುತವೆ ಮಹಿಪತಿ ಚಿನ್ನ ಕೃಷ್ಣನ ಸ್ವಾಮಿ | ಇನ್ನಾರೆ ದಯಮಾಡೋ ನೋಡೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಲಹು ಸಲಹು ಸಲಿಲಜನಯನಾ|ಎನ್ನಾ| ಇಳೆಯೊಳು ಮೊರೆಯ ಹೊಕ್ಕಿಹೆ ನಿನ್ನಾ ಪ ಕರುಣ ನೋಟಗಳಿಂದಲಿ ನೋಡಿ|ಸರ್ವ| ಭಾರ ಒಪ್ಪಿಸಿಕೊಂಡು ನಿಜ ನೀಡಿ| ದಾರಿದೋರುವ ಸುಮತಿಯ ನಿಲಿಸಿ|ಅತಿ| ತರಳನೆನುತ ಭಯವನೆ ಹರಿಸಿ 1 ಹರಿದುರಿತದ ಬಂಧನ ಬಲಿಯಾ|ತವ| ಚರಣದ ಭಕುತಿ ಕೊಡಲಿ ದೊರಿಯಾ| ಹರಿಗುಡದರಸನ ದಶಮುಖದಾ ಸಂಗ| ಲಿರಿಸು ದಾಸರ ಸಗಟವನೊದೆದಾ2 ತ್ರಿಪುಟಿಯ ಸಂಗ ಬಿಡಿಸು ಮನದಿ|ಎನ್ನ| ವಿಪುಳ ವಾಜಿಯೊಳಿರಿಸು ಧೃಡದಿ ಕೃಪೆಯಲಿ ಮಹಿಪತಿ ಸುತ ಪ್ರಾಣಾ|ಎನ್ನ| ಅಪರಾಧ ಕ್ಷಮಿಸಿ ಹೊರಿಯೊ ಪೂರ್ಣಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಲಹು ಸಲಹು ಸಲಿಲಜಾಂಬಕ ಸಲಹು ತ್ರಿಭುವನ ಜೀವನಾ| ವಿನುತ ಪದಪಾವನಾ| ನೆಲಿಗೆ ಪಡೆದಿಹೆ ಕಾವನಾ| ಸುಲಭನಾಗ್ಯತಿ ಸಲಿಸುತಿರುತಿಹ|ಒಲಿದು ಭಕ್ತರ ಭಾವನಾ 1 ಕರವ ದರಿತು ಶರಣವ ಬಂದೆನಾ| ಕೊರತೆ ನೋಡದೆ ಹಿಂದಿನಾ| ಅರಹು ಮತಿಯಲಿ ಮಂದನಾ| ಹರಿಯ ಸಾರ್ಥಕ ನರಜನುಮವನು | ಭರದಿ ಮಾಡು ನೀ ಇಂದಿನಾ 2 ಪತಿ ಸಖಗತಿಗೆಳೆಯ ಸುತ|ಪಿತನ ಪರಿಯಲಿ ಲಾಲಿಸಿ| ಶೃತಿ ವಿಹಿತ ತವ ಸ್ತುತಿಸ್ತವ ಪಾಡುತಿಹೆ ನೆರೆಯಲಿ ಬಾಳಸೀ| ಹಿತವನರಿಯದ ಮತಿ ವಿಹೀನೋ|ನ್ಮತರ ಸಂಗವ ಜಾಳಿಸೀ| ಪತಿತನು ದ್ಧರಿಸ್ಸತುಳ ಮಹಿಪತಿ | ಸುತ ಪ್ರಭುವೇ ದಯಪಾಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಲಹುದೈ ಸಲಹುದೈ ಸಲಹುದೈ ಎನ್ನಾ| ನೀ ಸಲಹುದೈ ಪ ಖಚರಜನುತ ರಜನೀಚರ ಕುಲಾರಿ| ಸುಚರಣಾರಾಧಿಪಾನುಚರ ಸಹಕಾರಿ 1 ಕುಮರ ಗೋಪಿಯ ಅಘತಮರವಿ ಶೌರಿ| ಭ್ರಮರ ಶ್ರೀ ಹರಿ 2 ಪರಮ ಸುಖದಾಯಕ ಗಿರಿವರಧಾರೀ| ಗುರು ಮಹಿಪತಿ ಜನ ಪೊರೆವ ಉದಾರಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಲ್ಲದೊ ಸಲ್ಲದೊ ಸರ್ವರು ಕೇಳಿ ನಮ್ಮ ಪುಲ್ಲನಾಭನ ಬಿಟ್ಟು ಖುಲ್ಲದೇವರ ಪೂಜೆ ಪ ಮಾರಿ ಮಸಣಿ ಜೆಟ್ಟೆ ಜೆಟ್ಟಿಂಗ ಭೇತಾಳ ವರ ಪೋತರಾಜಾ ಬೊಮ್ಮೆಯನು ಬೀರೆದೇವರು ಹಾದಿಬೀದಿಯ ಬಸವಣ್ಣ ಚಾರುದೈವ ಉಚ್ಚಾರವಲ್ಲದೆ ಹೊಲ್ಲಾ 1 ಯಲ್ಲಮ್ಮಾ ಯಕನಾತಿ ಅಡವಿಯ ಗಿಡದಮ್ಮ ಹಳ್ಳದ ತೀರದ ಹಾಳದೇವಿ ಅಮ್ಮ ಜಲದೇವಿ ಜಕ್ಕಮ್ಮನೆಂತೆನಲು ಸೊಲ್ಲು ಬರಿದೆ ವ್ಯರ್ಥವಲ್ಲದೆ ಫಲವಿಲ್ಲ 2 ಬನದಶಂಕರಿ ಕುಳ್ಳಹಟ್ಟಿಗೆ ಕರಿಮಾತೆ ವನಶಕ್ತಿ ಚವಡಮ್ಮ ಜವನಿಕೆ ಬಿನಗ್ಯ ಮಾಳಾದೇವಿ ಮಾಳಿಗೆ ಹಿರಿಯಕ್ಕ ಘನ ಪಿಶಾಚಿಗಳಿಂದ ಒಂದಿಷ್ಟು ಸುಖವಿಲ್ಲ 3 ಖಂಡೇರಾಯ ಮಲಕಚ್ಚಿನ ಗಡಿಗೆಮ್ಮ ಮುಂಡೆ ಮೂಕಾರುತಿ ಬೆಂಚೆಮ್ಮನು ಭಾಂಡಾರದ ದುರ್ಗಿ ಹಿರಿಯಣ್ಣ ಮೈಲಾರ ಹಿರಚು ಗುಂಪಿನ ಬಳಗ ಕಂಡರೇನಿಲ್ಲ 4 ಸುಣ್ಣದ ಕೆಸರು ಹಾಲು ಕೂಡಿ ಕುಡಿದಂತೆ ಅನ್ಯದೇವತೆಗಳ ಭಜನೆ ಹೊಲ್ಲ ಸಿರಿ ವಿಜಯವಿಠ್ಠಲನ ಯುಗಳಪಾದ ಸನ್ನುತಿಸಿದರೆ ಪರಮ ಪದವಿಯಮ್ಮ 5
--------------
ವಿಜಯದಾಸ
ಸಲ್ಲಾ ಸಲ್ಲಾ ಭಕುತಿಗೆ ಸಲ್ಲಾ ಸಲ್ಲಾ | ರತಿಯಿಲ್ಲದೆ ಡಾಂಭಿಕನು | ಬೆಲ್ಲದೊಳಗಿನ ಕಲ್ಲಿನಂದದಲಿಹನು | ಪರಿಪಾಕದಲ್ಯವ ದೂರಾಹನು | ಅವನೀಗ ಪ ಗುರುವಿನಂಘ್ರೀಯ ಕಂಡು | ಗುರುತಕ ಬಾರದೆ | ಧರಿಯೊಳು ವ್ಯಭಿಚಾರಿತೆರನಂದದಿ | ಗುರುಭಕ್ತನೆನುಸುವ ಗುರಶೇವೆಘೋದಲುವ | ಗುರುನಾಮ ಜಾಗಿಸುವನು ಯಲ್ಲರೊಳು | ಗುರುದಯ ದೋರಿಸು | ನಿಷ್ಠಿಗೆ | ಹುರುಳಿಲ್ಲ ಮಾನಿಸನು 1 ಎಲ್ಲಾ ಶಾಸ್ತ್ರವ ಕಲೆ ಬಲ್ಲವ ನಾನೆಂದು | ಸೊಲ್ಲು ಸೊಲ್ಲಿಗೆ ತನ್ನ ಹೊಗಳುತಲಿ | ಒಳ್ಳೆವರನು ಕಂಡು ಮನ್ನಿಸಿಕೊಳ್ಳದೆ | ನಿಲ್ಲದೇ ವಾದಿಸುವ ಅವರಾಚು ಸೊಲ್ಲಿಗೆ | ಸೊಲ್ಲಿಗೆ ಕುಂದಿಡುವ | ಆಚಾರ | ಕ್ಷುಲ್ಲಕತನದಿ ನೋಡುವಾ ಅವನಿಗೆ 2 ಘನ ಗುರು ಮಹಿಪತಿ ಸ್ವಾಮಿಯ ಸೂತ್ರದಿ | ಅನುವಾದಾ ಲಾಭಾ ಲಾಭಗಳೆನ್ನುತ | ಜನರಿಗೆ ಹೇಳುವಾತಾ ಹಾದಿತಪ್ಪುವಾ | ಧನ ಮದಾಂಧರ ಮನವಾ | ಹಿಡಿವುತ | ತನುಪರವಶ ಮಾಡುವಾ | ಸಿದ್ಧಾಂತ | ಅನುಭವ ನುಡಿಮರವಾ ಅವನೀಗ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂಸಾರ ಸಾಗರವನುತ್ತರಿಸುವಡೆಕಂಸಾರಿ ನಾಮವೊಂದೇ ಸಾಕು ಮರುಳೆ ಪ ಯತಿಯಾಗಬೇಡ ನೀ ವೈರಾಗ್ಯವನೆ ಪಿಡಿದುಸತತ ವ್ರತವ ಮಾಡುವೆನೆಂಬ ಹಮ್ಮು ಬೇಡಶ್ರುತಿಸ್ಮøತಿಯರಿತು ನಡೆವೆನೆಂಬ ಚೇಷ್ಟೆಯು ಬೇಡರತಿಪತಿಪಿತನ ನಾಮವೊಂದೆ ಸಾಕು ಮರುಳೆ 1 ತನುವ ದಂಡಿಸಿ ತುದಿಯ ಕೋಡುಗಲ್ಲಿನ ಮೇಲೆವನಿತೆಯನು ಬಿಟ್ಟು ತಪವಿರಲು ಬೇಡಅನುದಿನವು ನೀರೊಳಗೆ ಮುಳುಗಿ ನಡುಗಲು ಬೇಡವನಜನಾಭನ ನಾಮ ನೆನೆ ಕಂಡ್ಯ ಮರುಳೆ 2 ತೀರ್ಥಯಾತ್ರೆಯ ಮಾಡಿ ಬಹುವಿಧದಲಿ ಬಳಲಿ ಕೃ-ತಾರ್ಥನಾದೆನೆಂಬುವ ಹೆಮ್ಮೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಕೀರ್ತನೆಯ ಮಾಡಿ ಮುಕುತಿಯ ಹೊಂದು ಮರುಳೆ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಸಂಸಾರದೊಳು ಸುಖವಿಲ್ಲ ಪ ದುಂಡನೆ ಬಂದಿಹೆ ದುಂಡನೆ ಹೋಗುವೆ ಹೆಂಡಿರು ಮಕ್ಕಳ ನಡುವೆಯಲಿ ತಂಡ ತಂಡದಿ ಹುಟ್ಟಿ ಕೊಂಡವರು ನಚ್ಚಿ ಕೊಂಡಿವರನು ಪರಗತಿಯ ಕೆಡಿಸದಿರು 1 ಹುಟ್ಟುತ ತರಲಿಲ್ಲ ಹೋಗುತ ವೈಯೊಲ್ಲ ನಟ್ಟ ನಡುವೆ ಬಂದ ಸಿರಿಯಿದು ಕಟ್ಟ ಕಡೆಗೆ ನೀನು ಮಡಿಯಲಿ ಕರುವೆಯ ಬಟ್ಟೆಯ ಶವ ಕಿತ್ತಲಿದು ಬಳ್ಳಿತೆಂಬರು 2 ಎನ್ನಮನೆಯು ಎನ್ನತೋಟ ತುಡಿಗೆಯಿದು ದೆನುತ ಹಿಗ್ಗದಿರು ಇದರೊಳಗೊಂದು ಚಿನ್ನ ಬಾರದು ಕಾಲನವರೆಳೆದೊಯ್ವಾಗ 3 ಘಟ್ಟದ ಕೆಳಗುಷ್ಟು ಬೆಟ್ಟದ ಮರಗಾಯಿ ಹುಟ್ಟಿದ ಬಯಲ ಸೀಮೆಯ ಮೆಣಸು ಬಟ್ಟಾದ ಲವಣ ಶಾಕದ ವೋಲು ಸಂಸಾರ 4 ಜಾಣನಾದರೆ ಪರಗತಿಯ ನೀ ನೊಲುವೊಡೆ ತ್ರಾಣ ವಿರಲಿಕೆ ತೊಡಕಬಿಟ್ಟು ಕಾಣುಸಂಸಾರವ ವಿಷವೆಂದು ತ್ಯಜಿಸಿ ಗೀರ್ವಾಣವಂದಿತ ಲಕ್ಷ್ಮೀರ ಮಣನ ಮೊರೆಹೋಗು 5
--------------
ಕವಿ ಪರಮದೇವದಾಸರು
ಸಾಕು ಜನ್ಮದ ಸುಖವು ಸಾಕಿನ್ನು ಹರಿಯೇ ಪ ಅನೇಕ ಜನ್ಮದ ಸುಖ ಬೇಡ ಹರಿಯೇ ಅ.ಪ ಹದಿನೆಂಟು ಸಾಸಿರ ವಿಧವಿಧ ಜನ್ಮವ ಮೊದಲು ಕಳೆಯುತಲೀಗ ನರನಾಗಿ ಜನಿಸೀ ಕ್ರೋಧ ಲೋಭಗಳಿಂದ ಮದ ಮಾತ್ಸರ್ಯಗಳಿಂದ ಅಧಿಕ ಮೋಹಿತನಾದೆ ಪದುಮಾಕ್ಷ ಪರಂಧಾಮಾ 1 ನರಜನ್ಮ ಹಿರಿದೆಂದು ಅರಿತವÀರು ಪೇಳ್ವರು ಹರಿ ನಿನ್ನ ನುತಿಸಿ ಪಾಡುವ ಭಕ್ತ ಜನಕೆ ಪರಮಪಾತಕ ಗೈದು ನರಕಕೆ ಪೋಪೆನ್ನ ಮರಳಿ ಕಳುಹಲಿಬೇಡ ಧರಣಿಗೆ ದೇವ ದೇವ 2 ನರಕದೆ ಸುಖವುಂಟು ಧರೆಯಲ್ಲಿ ಸುಖವಿಲ್ಲ ಕರುಣಾಕರ ದೇವ ಸಿರಿಕಾಂತನೇ ಧರೆಯೊಳು ನಾನಿಹೆ ಅರೆಘಳಿಗೇ ನಿನ್ನ ಪರಮನಾಮಾವಳಿಯ ಸ್ಮರಣೆಯ ಕೊಡುಸಾಕು 3 ಗಂಗೆಯ ಜನಕನೆ ಮಂಗಳ ಮೂರುತಿ ಮಾಂಗಿರಿವರವಾಸ ಶ್ರೀಶ್ರೀನಿವಾಸ ಅಂಗಜಾತನ ತಾತ ಶೃಂಗಾರ ಪೂರಿತ ಭಂಗ ಮಾಡಿಸಬೇಡ ರಂಗೇಶ ಭವಬೇಡ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಾಕು ಸಾಕಿನ್ನು ಸಂಸಾರ ಸುಖವು ಪ ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆಅ ಉದಿಸಿದುವು ಪಂಚಭೂತಗಳಿಂದ ಓಷಧಿಗಳುಉದಿಸಿದುದು ಓಷಧಿಗಳಿಂದನ್ನವುಉದಿಸಿದುವು ಅನ್ನದಿಂ ಶುಕ್ಲ ಶೋಣಿತವೆರಡುಉದಿಸಿದುವು ಸ್ತ್ರೀ ಪುರುಷರಲ್ಲಿ ಹರಿಯೆ 1 ಮಾಸ ಪರಿಯಂತ ಹರಿಯೆ2 ಮಾಸ ನಖ ರೋಮ ನವರಂಧ್ರಮಾಸ ಏಳರಲಿ ಧಾತು ಹಸಿವು ತೃಷೆಯು 3 ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳಗುಂಗಿನಲಿ ನಾನಿಂತು ಭವಭವದೊಳುಅಂಗನೆಯರುದರದಲಿ ಮತ್ತೆಮತ್ತೆ ಬಂದುಭಂಗಪಡೆನೆಂದು ಧ್ಯಾನಿಸುತ ದಿನಗಳೆದೆ 4 ಮಾಸ ಪರಿಯಂತರದಿತನು ಸಿಲುಕಿ ನರಕದಲಿ ಆಯಾಸಗೊಂಡುಘನ ಮರುತ ಯೋಗದಿಂ ನರಳುತಿಲ್ಲಿಗೆ ಬಂದುಜನಿಸುವಲ್ಲಿ ಮೃತಭಾವದಿಂದ ನೊಂದೆನೈ ಹರಿಯೆ 5 ಧರೆಯ ಮೇಲುದಿಸಿ ಬಹು ವಿಷ್ಣು ಮಾಯಕೆ ಸಿಲುಕಿಪರವಶದೊಳಿರಲು ನೀರಡಿಕೆಯಾಗಿಹೊರಳಿ ಗೋಳಿಡುತ ಕಣ್ದೆರೆದು ಹರಿಯನು ಮರೆವದುರಿತ ರೂಪದ ತನುವ ಧರಿಸಲಾರೆ6 ಶಿಶುತನದೊಳಗೆ ಸೊಳ್ಳೆ ನೊಣ ಮುಸುಕಿ ಅತ್ತಾಗಹಸಿದನಿವನೆಂದು ಹಾಲನೆ ಎರೆವರುಹಸಿವು ತೃಷೆಯಿಂದಳಲು ಹಾಡಿ ತೂಗುವರಾಗಪಶು ತೆರದಿ ಶಿಶುತನದೊಳಿರಲಾರೆ ಹರಿಯೆ 7 ನಡೆಯಲರಿಯದ ದುಃಖ ಮನಸಿನಲಿ ಬಯಸಿದುದನುಡಿಯಲರಿಯದ ದುಃಖ ವಿಷಯದಿಂದಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲುನುಡಿವ ಬಾಲ್ಯದೊಳಿರಲಾರೆ ಹರಿಯೆ 8 ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತುಗೋಳಿಡುತ ವಿದ್ಯೆ ಕರ್ಮಗಳ ಕಲಿತುಮೇಲೆ ಯೌವನದ ಉಬ್ಬಿನೊಳು ಮದುವೆಯಾಗಿಬಾಲೆಯರ ಬಯಸಿ ಮರುಳಾದೆ ಹರಿಯೆ9 ಜ್ವರದ ಮೇಲತಿಸಾರ ಬಂದವೊಲು ಯೌವನದಿತರುಣಿಯೊಡನಾಟ ಕೂಟದ ವಿಷಯದಿತರುಣಿ ಸುತರ್ಗನ್ನ ವಸ್ತ್ರಾಭರಣವೆನುತಪರರ ಸೇವೆಯಲಿ ಘಾಡ ನೊಂದೆ ಹರಿಯೆ10 ನೆತ್ತರು ತೊಗಲು ಮೂಳೆ ಮಜ್ಜೆ ಮಾಂಸದ ಹುತ್ತುಜೊತೆಗಿಂದ್ರಿಯಗಳ ರೋಗ ರುಜಿನದಲಿಮತ್ತೆ ಕಾಲನ ಬಾಯ ತುತ್ತಾಗುವ ಕರ್ಮದಕತ್ತಲೆಯೊಳೀ ದೇಹ ಕರಡಾಯಿತು 11 ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರುಕಟ್ಟಿ ಕಾದಿಹರು, ಮುಪ್ಪಡಿಸಿದಾಗತಟ್ಟನೆ ಬಲು ಕೆಟ್ಟ ನುಡಿಗಳಲಿ ಬೈಯುತ್ತಕಟ್ಟಕಡೆಗೆ ಕಣ್ಣೆತ್ತಿ ನೋಡರೈ ಹರಿಯೆ12 ತುಂಬಿ ಮೃತವಾಗಲುಕುಟ್ಟಿಕೊಂಡಳಲುತ್ತ ಹೋಯೆಂದು ಬಂಧುಗಳುಮುಟ್ಟರು ಹೆಣನೆಂದು ದೂರವಿಹರು 13 ಸತ್ತ ಹೆಣಕಳಲೇಕೆ ಎಂದು ನೆಂಟರು ಸುಯ್ದುಹೊತ್ತು ಹೋಯಿತೆನ್ನುತ ಕಸಕೆ ಕಡೆಯಾಗಿಹೊತ್ತು ಕೊಂಡಗ್ನಿಯಲಿ ತನುವನಿದ ಬಿಸಡುವರುಮತ್ತೆ ಬುವಿಯಲಿ ಜನಿಸಲಾರೆ ಹರಿಯೆ 14 ಯೋನಿ ಮುಖದಲಿ ಬಂದುಬನ್ನವನು ಪಡಲಾರೆ ಭವಭವದೊಳುಜನನ ಮರಣಾದಿ ಸರ್ವ ಕ್ಲೇಶಗಳ ಪರಿಹರಿಸಿಸನ್ಮತಿಯೊಳಿರಿಸೆನ್ನ ಆದಿಕೇಶವರಾಯ 15
--------------
ಕನಕದಾಸ
ಸಾಕು ಸಾಕು ಇನ್ನು ಕಷ್ಟ ಅನೇಕಾ ಬೇಕು ಬೇಕು ನಿನ್ನ ಕರುಣ ಪ ಹಿಂದಿನಿಂದ ಎನ್ನ ಹೊಂದಿಬಂದ ದೋಷದಿಂದ ನಾನು ಬಹು ಬಳಲುತಲಿ ----------------------- ಎಂದು ಎಂದು ನಿಮ್ಮಂದ ದ್ವಯಪಾದ ಹೊಂದುವೆ ನಾನೆಂದೆನುತಲಿ----- ಬೆಂದುನೊಂದು ಈ ಚಂದದಿ ಈ ಪರಿಯಿಂದ ನಿನ್ನನಾ ಹೊಗಳುತಲಿ--- ಬೆಂದು ನೊಂದೆ ನಿನ್ನ ಮಂದಿರ ಸೇವಕನೆಂದು ಬಹಳ ಗೋವಿಂದ ಕೃಪಾಳು 1 ಘೋರ ರಾಕ್ಷಸ----ರಿದ ಅವರ ಸಂಹಾರವ ಮಾಡಿದ ಬಲವಂತ ------------------ ವೀರಶೂರ ಗಂಭೀರ ಕೃಪಾಕರ ವಾರಿಜೋದ್ಭವನ ಪಡೆದಂಥಾ ಸಾರಿಸಾರಿ ನಿಮ್ಮ ಸ್ಮರಿಸುವವರಿಗೆ ಸರ್ವ ಸಂಭ್ರಮವು ಮಾಡುವಂಥಾ ಕೀರುತಿ-----ರನು ಯನುತಲಿ ------ನಿಮ್ಮ ಸರ್ವೋತ್ತಮನಂಥಾ 2 ಗಾಧೆ ಬೋಧೆ ಗೊಳಗಾದೆ ಈ ಪರಿ ವೇದಾಂತ---ದೊಂದರಿಯೆ ಸಾಧು ಸಾಧಕರ ಬೋಧೆಗಳೆಂಬುವ ಸದಾ ಕರ್ಣದಿ ಕೇಳರಿಯೆ----ದರೆ ಮಾಧವ ಮಧುಸೂದನ ಧೊರಿಯೆ ವೇದ ಆದಿ ಅಗಾಧ ಗೋಚರನೆ ಪತಿ 'ಹೆನ್ನ ವಿಠ್ಠಲ’ ಹರಿಯೆ 3
--------------
ಹೆನ್ನೆರಂಗದಾಸರು