ಒಟ್ಟು 9105 ಕಡೆಗಳಲ್ಲಿ , 131 ದಾಸರು , 5069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಪ ಭಾರತಿ ಭಾಸ್ವರಕಾಂತೆ ನಿನ್ನ ಸಾರುವೆ ಸತತ ನಿಶ್ಚಿಂತೆ ಆಹಾ ವಾರಿಜಸಮಪಾದ ತೋರಿಸು ಮಮ ಸುಹೃ - ನಿತ್ಯ ಗಾರುಮಾಡದೆ ಜನನಿ ಅ.ಪ ಹರಿಯ ಪಟ್ಟದ ನಿಜರಾಣಿ ಎನಗೆ ಹರಿಯ ತೋರಿಸೆ ಹೇ ಕಲ್ಯಾಣಿ ನಿನಗೆ ಕರುಣಿಯೆ ಕೋಕಿಲವಾಣಿ ಆಹಾ ಹರಿಹರಾದ್ಯನಿಮಿಷ ಕರಕಮಲಪೂಜಿತೆ ವರಭಾಗವತರಗ್ರೇಸಳೆಂದು ನಮಿಸುವೆ 1 ಮೂರೇಳು ತತ್ತ್ವಾಭಿಮಾನಿ ಎನಿಸಿ ಮೂರಾರು ಭಕುತಿಯಿಂದಲಿ ನೀ ಸತತ ಮೂರು ಜೀವರೊಳು ಪ್ರೇರಣಿಯಾಗಿ ಮೂರೊಂದು ಮೊಗನ ಕಲ್ಯಾಣಿ ಆಹಾ ಮೂರು ಬಗೆಯ ಜನಕೆ ಮೂರು ವಿಧದಿ ಗತಿ ಮೂರು ಕಾಲಕೆ ಇತ್ತು ಮೂರುಮಾಡುವಿ ದೇವಿ 2 ಮಾತರಿಶ್ವನ ಪಾದಕಮಲ ಯುಗಕೆ ನೀತಷಟ್ಟದಳೆ ನಿರ್ಮಲ ಮನಸು ಆತುರದಲಿ ಮಾಡು ವಿಮಲೆ ನಮಿಪೆ ಕಾತರಭವಶ್ರಮಶಮಲಾ ಆಹಾ ಜಾತರೂಪೋದರತಾತ ಶ್ರೀ ಗುರುಜಗ - ನ್ನಾಥವಿಠಲಗೆ ನೀ ದೂತನೆನಿಸು ಎನ್ನ 3
--------------
ಗುರುಜಗನ್ನಾಥದಾಸರು
ನಿತ್ಯ ಕಲ್ಯಾಣಿಗೆ | ಶರಣು ಶರಣು ಲೋಕ ಜನನಿಗೆ | ಶರಣು ಮುಂದಣ ವಾಣಿಗೆ ಪ ಶ್ರದ್ಧೆ ಭಾರತಿ ಭಾಗ್ಯ ಸಂಪನ್ನೆ | ಪದ್ಮ ಮಂದಿರ ನಂದನೆ | ಭದ್ರ ಫಲದಾಯಕಳೆ ಕರುಣಾಬ್ಧಿಯೇ ಭಕ್ತರಪ್ರಿಯೇ 1 ಖಗಪನ್ನಗ ನಗಮಗಳ ಪತಿಯಿಂದ ಮಿಗಿಲೆನಿಪೆ ಶತಗುಣದಲಿ | ಮೃಗನಾಭಿ ನೊಸಲಲ್ಲಿ ಶೋಭಿಸೆ | ಮೃಗಕುರುಹ ಸಿರಿಮೊಗದವಳೆ2 ವಿಪ್ರ ಕನ್ನಿಕೆ | ಚಂದ್ರದಿ ಸ್ಥಾನವಾಸಳೆ | ಸಿರಿ ವಿಜಯವಿಠ್ಠಲನ |ವಂದಿಸುವ ದ್ರೌಪದಿದೇವಿ 3
--------------
ವಿಜಯದಾಸ
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ನಿತ್ಯ ನಿರುಪಮ ನಿತ್ಯ ಎನ್ನ ಚಿತ್ತದಿ ನಿಲಿಸು ಪ ಮರವೆ ಮಾಯದೆ ಕೆಟ್ಟ ಪರದೆಯೋಳ್ಸದಾ ಬೆರೆದು ಶ್ವಾನಸೂಕರನಂತೆ ಚರಿಸಿದೆ ಧರೆಭೋಗ ನೆಚ್ಚಿ ನರಜನ್ಮ ವಿವರಿಸಿ ನೋಡದೆ ಮರುಳತನದಿ ನರಕಿಯಾದೆ 1 ಮೃತ್ಯುಗೀಡಾದೆ ತವಭೃತ್ಯನೆನಿಸದೆ ಸುತ್ತಿ ಸುತ್ತಿ ಇಹ್ಯಕೆ ಪರಕೆ ಕತ್ತೆಯಂತೆ ತಿರುಗಿ ತಿರುಗಿ ಮರ್ತು ನಿನ್ನ ಚರಣ ಮತ್ರ್ಯದಿ ನಿತ್ಯಸುಖವ ಪಡೆಯದ್ಹೋದೆ 2 ಆದದ್ಹಾಗಿಹೋಯಿತಭವ ವೇದಾಗಮ್ಯ ಪದುಮನಾಭ ಪಾದನಂಬಿದೆ ಪಾಲಿಸಿನ್ನು ಮೋದದೆನ್ನನೆತ್ತಿ ಶ್ರೀರಾಮ 3
--------------
ರಾಮದಾಸರು
ನಿತ್ಯ ಪ ಸಂಸಾರವೆ ಸುಖವೆಂದು ಹಾರಯಿಸಿ ಬಾಳುವಾ | ನರನ ಉದ್ಧಾರ ಮಾಡುವುದು ಅ.ಪ ಕಂಗಳಿಂದಲಿ ಪರರ ಮನೆಯ ಅಂಗನೆಯರ ನೋಡಿ ಅಂಗಸಂಗವ ಬಯಸಿ ಪಾಪಕ್ಕೆ ಹಿಂಗದೆ ಗುರಿಯಾದೆ 1 ಸಂಹ್ವತಿಯ ಮೆದ್ದು ಪುಣ್ಯದಾ ಗಹ್ವರವು ಮರಿಯದೆ 2 ನಾಸಿಕಕೊನೆಯಿಂದ ಅನರ್ಪಿತÀ ವಾಸನೆ ಕೈಕೊಂಡು ಲೇಸಾಗಿ ಮನವುಬ್ಬಿ ನಲಿವುತ ದೇಶದೊಳಗೆ ಮೆರೆದೆ 3 ಮುಪ್ಪಾಗುವತನಕ ಸುಖದಲ್ಲಿ ಅಪ್ಪಿದೆ ನಾರಿಯರ ಒಪ್ಪಿದ ಧರ್ಮಗಳ ಖಳರಿಗೆ ಒಪ್ಪಿಸಿದೆನೊ ಹರಿಯೇ 4 ಕೆಟ್ಟು ಪೋಗುವೆನೆಯ್ಯಾ ವಿಜಯವಿಠ್ಠಲ ನೀನೆ 5
--------------
ವಿಜಯದಾಸ
ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು ಮನ್ನಿಸಿ ರೂಢಿಯೊಳಗೆ ನಿನಗೀಡುಗಾಣೆನೊ ಕರ ಪಿಡಿವ ತಾರಾಕ್ಷರೂಢ ವೆಂಕಟರಾಯ ಪ ಯೋನಿ ಮೊಗದಿಂದ ವೃದ್ಧ ಹಾನಿ ದೇಹವ ತೆತ್ತು. ನಾನು ನಿನ್ನದು ಎಂದು ಹೀನ ಮತಿಯಿಂದಪಮಾನಕೊಳಗಾಗಿ ಏನು ಕಾಣದೆ ಪಾಪ ಕಾನನದೊಳು ಬಿದ್ದು ಙÁ್ಞನರಹಿತನಾದೆ ಕಾಣೆ ಲಾಭಕೆ ಮದ್ದು- ನೀಯಳ ಕಳಕೊಂಡ ಮಾನವನಂತೆ ನಿತ್ರಾಣಗೆಟ್ಟೆನೊ ಈ ಕ್ಷೋಣಿಯೊಳಗೆ ಪುಟ್ಟಿದಾಗ ವಿನೋದಿಯೆ ನೀನೆ ಗತಿ ಎಂದು 1 ನಿತ್ಯ ನಿನ್ನ ನಂಬಿದೆ ಬೆಚ್ಚಿಸಲಾರೆ ಬಲು ಅರ್ಚನೆ ಬಗೆಯಿಂದ ಮುಚ್ಚಿದಾವರ್ಕ ದೇಹ ಬಿಚ್ಚಿಯಿಟ್ಟು ದೇವಾ ಅಚ್ಚನಾಗ್ರಹದಿಂದ ಅಚ್ಯುತಾ ಶರಣೆಂದು ಅಚ್ಯುತಾ ಅಚ್ಯುತಾ ಚಚ್ಚರಾ ನಾಮಗಳುಚ್ಚರಿಸುವ ಧ್ಯಾನ ಬಿಚ್ಚದೆ ಒದಗಲಿ ಇಚ್ಛಾಕ ಮೂರುತಿ 2 ಧನ್ಯ ಸ್ವಾಮಿ ಕಾಸಾರಾಪುಣ್ಯ ಕಾನನವಾಸಾರಣ್ಯಗಳೆಲ್ಲಾದಿ ಅಲ್ಲ ನಿನ್ನ ಭಕ್ತರ ಕುಲಕೆ ಮಾನ್ಯರಹಿತನೆ ತಾ- ಮದನ ಲಾ- ವಣ್ಯ ಕ್ಷೀರವಾರಿಧಿ ಕನ್ಯ ಭೂ ಸತಿಪತಿ ಶೂನ್ಯ ನೀನೆಲೊ ದುರಿತಾ- ಸಿರಿ ವಿಜಯವಿಠ್ಠಲ ಹಿ- ರಣ್ಯೋದರ ಪಿತ ಸನ್ಯಾಯದಿಂದಲಿ 3
--------------
ವಿಜಯದಾಸ
ನಿತ್ಯ ಮಂದಾರ ತರುವಂತೆಕುಂದದಲ ಭೀಷ್ಟಗಳ ಗರೆವ | ಸುರ ತರುವಾ ಪ ವಾಗೀಶ ಕರಜಾತ | ನಿಗಮಾರ್ಥ ಕೋವಿದರಭೋಗಿಶಯನನ ಭಕುತ | ಭಾಗ್ಯ ದಾತೃಗಳ |ಯೋಗಿ ಕುಲವರ್ಯ ಹೃ | ದ್ರೋಗ ನೀಗುವರಜಾಗು ಮಾಡದೆ ಭಜಿಪ | ಭಕ್ತರನು ಪೊರೆವರನು 1 ಭವ ಭವಣೆ ಹರಿಸು ವರ |ನವ ನವ ಸ್ತೋತ್ರಗಳ | ಕವನ ರೂಪದಿ ಪೇಳಿಪವನಾಂತರಾತ್ಮಕನ | ಪರಿತೋಷ ಗೈದವರಾ 2 ಗರಳ ಅಂಘ್ರಿ ಕಮಲಂಗಳನುನೆರೆನಂಬಿ ಸುಖಿಸುವರ | ಸುರವ ಭಯ ವಿರಹಿತರ 3 ಉಕ್ತಿಯನು ಸ್ವಪ್ನದಲಿ | ಶಕ್ತಹಯಮುಖಪೇಳೆಯುಕ್ತಿಮಲ್ಲಿಕೆ ಮಾಲೆ | ಮೌಕ್ತಿಕವ ನಿತ್ತವರ |ಭಕ್ತಿಪಥ ತೋರಿ | ಕು | ಯುಕ್ತಿಗಳನೇ ಕಳೆದುಮುಕ್ತಿ ಮಾರ್ಗವ ತೋರ್ವ | ಭಕ್ತಿಯೋಗಿಗಳಾ 4 ಮಾಯಿ ಶೈವರು ಶಾಕ್ತ್ಯ | ಅನ್ಯಮತಗಳಗೆದ್ದುಜಯ ಪತ್ರ ಘಂಟೆಗಳ | ವಿಜಯ ಸಾರಥಿಗಿತ್ತು |ಭಯ ವಿನಾಶನು ನಮ್ಮ | ತೋಯಜಾಂಬಕ ಸಿರಿಹಯ ವದನನರ್ಚಿಸುವ | ವಾದಿರಾಜರನೂ 5 ಅದ್ವೈತ ತಮ ಸೂರ್ಯಮೇದಿನೀ ಸುರವಂದ್ಯ | ಶ್ರೀವಾದಿರಾಜರನೂ 6 ಭಾವಿ ಮಾರುತಿಯ | ದಿನ ದಿನದಿ ಪ್ರಾರ್ಥಿಪರಭಾವ ಕೊಲಿಯುತ ತೋರ್ವ | ಹಯ ಮುಖಾತ್ಮಕನು |ಭಾವ ಜನಯ್ಯ ಗುರು | ಗೋವಿಂದ ವಿಠ್ಠಲನಭವ್ಯ ರೂಪವ ಹೃದಯ | ದವಕಾಶದೊಳಗೇ 7
--------------
ಗುರುಗೋವಿಂದವಿಠಲರು
ನಿತ್ಯ ಶುಭಮಂಗಳಂ ಪ ಚಾರು ಮರಕಟರೂಪ ತಾಳಿದಾ ಮೂರ್ತಿಗೆ ಚೋರ ದಶಕಂಠನನು ದಣಿಸಿದವಗೆ ನೀರಜಾಮುಖಿಗೆ ಮುದ್ರೆಯಿತ್ತ ಕಪಿವರಗೆ ಶ್ರೀರಾಮ ಧ್ಯಾನದೊಳು ತತ್ಪರಾದವಗೆ 1 ನೀಚ ಠಕ್ಕನ ಹಿಡಿಂಬಕನೊರಸಿದಾ ಬಲಗೆ ಕೀಚಕರ ಕಿರ್ಮೀರ ಬಕಕಾಲಗೆ ನಾಚಿ ನೀರೊಳು ಪೊಕ್ಕು ಕುರುಪತೀಯಂತಕಗೆ ಆ ಚಕ್ರ ಸೇವೆಯಲಿ ನಿರತನಾದವಗೆ 2 ಜಗವನುದ್ಧರಿಪ ಬುದ್ಧಿಯ ತಾಳ್ದಯತಿವರಗೆ ಮಗುವಾಗಿ ಮಧ್ಯಗೇಹದಿ ಜಾತಗೆ ನಿಗಮ ಗೋಚರ ಶ್ರೀ ನರಸಿಂಹವಿಠಲನ ಭಕುತಿಯನು ಬೇಡಿ ಅಜಪದ ಪಿಡಿದ ಹರಿಗೇ 3
--------------
ನರಸಿಂಹವಿಠಲರು
ನಿತ್ಯ ಶುಭಮಂಗಳಂ ಪ. ಮಂಗಳಂ ಶ್ರೀ ಭೂಮಿದೇವಿಯ ರಮಣಗೆ ಮಂಗಳಂ ಸದ್ಗುಣಗಣಪೂರ್ಣಗೆ ಮಂಗಳಂ ನಿರ್ದೋಷ ನಿಗಮತತಿ ವೇದ್ಯನಿಗೆ ಮಂಗಳಂ ಶ್ರೀ ವೇಂಕಟಾಧೀಶಗೆ 1 ವಂದಾರು ಸುರವೃಂದ ರುಚಿರಮಣಿಮಯ ಮಕುಟ ಸಂದೋಹ ಸಂಘಟಿತಪದಪೀಠಗೆ ಇಂದಿರಾಕರಕಮಲರಂಜಿತ ಧ್ವಜವಜ್ರ ಸಂದಿಪ್ಪ ಪಾದಾದಿ ಶುಭರೇಖಗೆ 2 ದಿವ್ಯನಖಮಣಿರಾಗರಂಜಿತಾಂಗುಲಿ ರಮ್ಯ ಭವ್ಯ ಮಂಗಳದಾಯಿ ಭಯಹಾರಿಗೆ ನವ್ಯ ಜಲರುಹಭಾಸ ಮುನಿಜನಾರ್ಚಿತ ಪುಣ್ಯ ಸೇವ್ಯ ಗಂಗಾಜನಕ ಶ್ರೀಚರಣಗೆ 3 ವರಕನಕವನಯುತ ಉರುನಿತಂಬದ್ವಯಗೆ ಸರಸಕೇಳೀವಾಸಸಜ್ಜಘನಕೆ ಸ್ಥಿರರತ್ನ ಮೇಖಲಾ ಸುಕಲಾಪ ಭೃತ್ಕಟಿಗೆ ಹೃ- ತ್ಸರಸಿಜಾಸನಜನಿತ ಶುಭನಾಭಿಗೆ 4 ಭುವನ ಪೂರಿತ ವಳಿತ್ರಯರಾಜದುದರಗೆ ವಿವಿಧ ಕುಸುಮಾಕಲಿತ ಸುಮಮಾಲಿಗೆ ಕೌಸ್ತುಭ ಶ್ರೀವತ್ಸ ನವಹಾರಕೃತ ರಮಾಶ್ರಿತ ವಕ್ಷಕೆ 5 ದೈತ್ಯಜನತಿಮಿರಹರ ವರದೀಪ್ತಿ ಚಕ್ರಕೆ ಶತ್ರುಭೀಷಣ ಘನಧ್ವನಿ ಶಂಖಕೆ ಗೋತ್ರÀಪತಿ(ತಿಯ?) ಸಮಬಲ ಪ್ರೋದ್ಭಾಸಿ ಸದ್ಗದೆಗೆ ಶ್ರಿತಜನ ಭಯಹಾರಿ ವರಪದ್ಮಕ್ಕೆ 6 ಕಂದರ ವದನಕೆ ನಾಸಿಕ ಕಾಲ ಸನ್ಮುಖಕಮಲಕೆ ಅರುವಾರಿಜನೇತ್ರ ಶೋಭನ ಭ್ರೂಯುಗಳ ವರ ಫಾಲತಿಲಕ ಕುಂತಳರಾಯಗೆ 7 ಕಮನೀಯ ಕರ್ಣಯುಗ ರಕ್ತಕುಂಡಲ ಲಲಿತ ವಿಮಲದರ್ಪಣ ಭಾಸ ಗಂಡಯುಗಕೆ ಸುಮಮಾಲಿಕಾಸ್ಥಿತಿತ ವೃತ್ತಕೇಶ ಸಂತತಿಗೆ ರಮಣೀಯ ಗುಣರಚಿತ ವರ ಮಕುಟಕೆ 8 ಉದಯಗಿರಿನಿಕರ ವಿಸ್ಫುರಿತ ಶುಭಗಾತ್ರಕೆ ಮದನಮದಗಜಶೀಲ ಲಾವಣ್ಯಕೆ ಸದಭೀಷ್ಟÀದಯ ಪೂರ್ಣಪ್ರಜ್ಞಮುನಿಸೇವ್ಯ ಪದ ಹಯವದನ ವೆಂಕಟರಮಣಗೆ 9
--------------
ವಾದಿರಾಜ
ನಿತ್ಯ ಶುಭಮಂಗಳಂ | ಪ್ರಿಯಕರಾನಂದ ಶ್ರೀ ತುಲಸಿ ಮಾತೆ ಪ ದಿನಕರನು ಉದಯಿಸಲಾಕ್ಷಣದಿ ಭಕ್ತರು ನಿನ್ನ | ನೆನೆದು ಭಕುತಿಯಲಿ ಜೀವನ ನೀಡುತಾ | ಪಣೆಗೆ ಮೃತ್ತಿಗೆ ತೀಡಿ ಪ್ರಣೀತರಾಗುತ ಪ್ರದ ಕ್ಷಣೆ ಮಾಡಿದವರ ಫಲವೆಣೆಸಲಳವೇ 1 ಹರಿಯನಾಗ್ರದಿ ತ್ರಿಪುರಹರನು ಮಧ್ಯದಿ ಬ್ರಹ್ಮ | ನಿರುವ ಮೂಲದಿನಾಕಚರರು ಮುದದೀ | ನಿರುತ ಶಾಖಂಗಳಲಿ ಚರಿಸುತ್ತಲಿಹರೆಂದು | ಧರಣಿ ಸುರರರ್ಚಿಪರು ಹರುಷದಿಂದಾ2 ಕಾರ್ತಿಕಶುದ್ಧ ಸುಮುಹೂರ್ತ ದ್ವಾದಶಿಯಲ್ಲಿ | ಅರ್ತಿಯಿಂದಲಿ ಸುಜನರರ್ತುತ್ವರದೀ | ನರ್ತನದಿ ತವನಾಮ ಕೀರ್ತನೆಯ ಪಾಡುತಲಿ | ಬೆರ್ತುನಿಂದವರ್ಗೆ ನೀ ಸಾರ್ಥಿ ಎನಿಪೆ 3 ಕಾಂತೆ ನಿನ್ನ ನುದಿನವನಂತ ಜನ ವಂದಿಸುತ | ಅಂತರಂಗದಿ ನಲಿದು ನಿಂತರವರಾ | ಚಿಂತೆಪರಿಪರಿಪೆ ಅಳಕಾಂತೆ ದುರಿತಘನಿಚಯ | ಪಾವಕ ಸುಸಂತ ವಿನುತೆ 4 ಅದಿಗಿಂದಿಗೆ ನೀನು ವೃಂದಾವನದಿ ಮಹಿಮೆ | ನಿಂದು ತೋರಿದೆ ಯೋಗಿವೃಂದ ವಂದ್ಯೆ | ತಂದೆ ಶ್ರೀ ಗಿರಿಧರನ ಕಂದನನುದಿನ ಸಲಹು | ಮಂದರೋದ್ಧಾರ ಪ್ರೀಯ ಕುಂದವದನೆ 5 ಅಂಕಿತ-ಗಿರಿಧರಕಂದ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿತ್ಯ ಸು- ಮಂಗಳೆಗತಿಶಯದಿ ಪ ಮಂಗಳಾರತಿ ಎತ್ತಿ ತುಂಗಮಹಿಮ ಶ್ರೀ ರಂಗನ ರಾಣಿಗೆ ಅಂಗನೆ ತುಳಸಿಗೆ ಅ.ಪ. ಕಡಲೊಳು ಸುಧೆ ಹಿಡಿದು | ಬಂದನು ಕಡು ಕರುಣಿಯು ಒಲಿದು ಕುಡಿಗಣ್ಣಿನ ಜಲ ಸಡಿಲಲು ಕಲಶದಿ ಒಡನೆ ಜನಿಸಿದಂತ ಮಡದಿ ಶ್ರೀ ತುಲಸಿಗೆ 1 ಸುರರು ಪೂಮಳೆಗರೆಯೆ | ಹರುಷದಿ ಕರವ ಪಿಡಿಯೆ ವರವನು ಪಡೆದಳು ಶರಣರ ಪೊರೆಯಲು ಧರೆಯೊಳು ಬಂದಿಹ ಕರುಣಿ ಶ್ರೀ ತುಳಸಿಗೆ 2 ನಿತ್ಯ | ಸೇವಿಪ ಸಕಲ ಜನಕೆ ಸತ್ಯ ಭಕುತಿ ಮುಕುತಿಯಿತ್ತು ಸುಕೃತರ ಮಾಡುವ ಲಕುಮಿಕಾಂತನ ಪ್ರೇಮಸಕುತೆ ಶ್ರೀ ತುಳಸಿಗೆ 3
--------------
ಲಕ್ಷ್ಮೀನಾರಯಣರಾಯರು
ನಿತ್ಯ ಚಿದಾತ್ಮಕ ಸತ್ಯ ರುಕ್ಮಿಣಿಯರು ಜೊತ್ತಿಲಾಡುತ ತಮ್ಮ ಪತಿಯ ಉತ್ತಮಗುಣಗಣ ವರ್ಣಿಸುವದಕನುವೃತ್ತರಾಗುತ ವಾದಿಸಿದರು ಪ. ಅಕ್ಕ ಕೇಳರಿಗಳ ವಶರಾಗಿ ಸೆರೆಯೊಳು ಸಿಕ್ಕಿದವರ ಮಗನಿವನು ಚಿಕ್ಕತನದಿ ಗೋವ ವಕ್ಕಲಿಗರು ಬಾಯೊ- ಳಿಕ್ಕಿದನ್ನವನುಂಡದೇನು 1 ನಿರಪರಾಧಿಯನೀತ ತರಿದನೆಂಬಕೀರ್ತಿ ಬರದಂತೆ ಸೆರೆಯೊಳುದಿಸಿದ ಸುರರೆಲ್ಲ ಗೋಪರಾಗಿರುವುದರಿತು ಸೇವ- ಕರಿಗೊಲಿವುತ್ತಲಿ ಮೆರೆವ 2 ಪಾಂಡುಕುಮಾರನ ಭಂಡಿ ಹೊಡಲು ಪಾಲ ನುಂಡನು ವಿದುರನ ಗೃಹದಿ ಗಂಡರಾಳುವ ಗರತೇರ ನೆರೆದವನ ಹೆಂಡರಾಗಿರುವದಿನ್ನೆಂತು 3 ಭಕ್ತವತ್ಸಲನೆಂಬ ಬಿರುದ ತೋರುವದತಿ ಶಕ್ತಿ ಹರಿಗೆ ಶೋಭಾಕರವು ತೊತ್ತಿನ ಮಗನಿಂದಲಿತ್ತ ಕೌರವನೆಂಬ ತತ್ವ ತೋರಿದನಲ್ಲವೇನೆ 4 ಧರೆಯನಾಳದೆ ತನ್ನ ಪರಿವಾರ ಸಹಿತಾಗಿ ಶರಧಿಯೊಳಗೆ ವಾಸವಾಗಿ ದುರುಳ ಜರಾಸಂಧ ಬರುವ ಭೀತಿಯ ತಾಳಿ ಲ್ಲಿರುವ ಕಾರಣವೇನೆ ಜಾಣೆ 5 ಈರೆಂಟು ಮತ್ತೊಂದು ಭಾರಿ ಸಮರದಲ್ಲಿ ಬಾರುಹದ್ರಥನನ್ನು ಗೆಲಿದ ಧೀರನೀತನು ಭಕ್ತ ಮಾರುತಿಯಲಿ ಜಯ ತೋರಲಂತಿರುವನು ಕಾಣೆ 6 ಜಾರ ಚೋರರಿಗೆಲ್ಲ ಗುರು ನಿಮ್ಮ ಪತಿಯೆಂದು ವೂರನಾರಿಯರೆಲ್ಲ ನುಡಿವ ಕ್ರೂರ ಮಾತನು ಕೇಳಲಾರೆನಕ್ಕಯ್ಯ ಯಿ ನ್ಯಾರಿಗೆಂದುತ್ತರ ಕೊಡುವೆ 7 ಘತಿತ ಪಾವನ ಪದ್ಮಜಾತಜನಕ ಶ್ರೀ ಪತಿ ಸುಜನಾನಂದದಾಯಿ ವಿತತ ವಿಡಂಬನ ತೋರುವ ವೆಂಕಟ ಪತಿ ದೋಷಹರ ಶೇಷಶಾಯಿ 8 ಹಸೆಗೆ ಕರೆವ ಮತ್ತು ಆರತಿಯ ಹಾಡುಗಳು
--------------
ತುಪಾಕಿ ವೆಂಕಟರಮಣಾಚಾರ್ಯ
ನಿತ್ಯ ಸುಪ್ರೀತ ಸರ್ವೋತ್ತಮ ಹರಿಯೆ ಚಿತ್ತಜನಯ್ಯ ಚಿನ್ಮಯ ಎನ್ನ ದೊರೆಯೆ ಪ. ಅರಿಯೆ ನಾನಾ ವಾಹನಾದಿ ವಿಧಿಯನು ಮರಿಯೆನು ಮನದಲ್ಲಿ ಮಂದಭಾವವನು ವರದೇಶ ನಿನ್ನಯ ಚರಣಾರವಿಂದವ ನೆರೆನಂಬಿದವನೆಂಬ ಪರಿಯಿಂದ ದಯವಾಗು 1 ಇಂದಿರಾವರವಿಧಿವಂದ್ಯ ಸರ್ವೇಶಾ- ನಿತ್ಯ ಸುಂದರ ವೇಷಾ ಮಂದ ಬುದ್ಧಿಯೊಳೆಂತು ಒಲಿಸುವೆ ಶ್ರೀಶಾ ತಂದೆ ನೀ ಕರುಣದಿ ಸಲಿಸಭಿಲಾಷಾ 2 ಅಣುರೇಣು ತೃಣಕಾಷ್ಠ ಪರಿಪೂರ್ಣ ನಿನ್ನ ನೆನೆದು ವಂದಿಸುವೆ ಚಂದನ ಮೂರ್ತಿಯನ್ನ ಸನಕಾದಿ ವಂದ್ಯ ಶೇಷಾಚಲನಾಯಕ ಅನಿಮಿಷ ಪತಿಯೆನ್ನ ಮನೆಯಲ್ಲಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿತ್ಯದುದಯಾಸ್ತಮಾನದಲಿ ಸ ರ್ವೋತ್ತಮ ಹರಿನಾಮ ಬರೆದೋದಿ ಭಕ್ತಿಯಿಂದಾಲಿಪರ ಭವತಾಪ ಜರೆ ಮೃತ್ಯುನೀಗಿ ನಿತ್ಯಮುಕ್ತಿ ಕೈಸೇರುತಿಹ್ಯವು ಪ ನರಿಹರಿ ಹಯವದನ ಜನಾರ್ದನ ವಾಸುದೇವ ವಾರಿಜಾಕ್ಷ ಮುರಧ್ವಂಸಿ ಮುಪ್ಪುರಾಂತಕ ಮುಕ್ಕುಂದ ಹರಿ ಸರ್ವೇಶ ಉರಗಪರ್ಯಂಕ ನಿರಂಜನ ನಿರ್ಜರೇಶ ಶರಣಜನಮಂದಾರ ಸಿರಿಯರಸ ಪರಮಪ್ರಕಾಶ ಪರತರೇಶ ಪರಮಪುರುಷ ಪರಾತ್ಪರನೆಂದು 1 ಮಾಧವ ದೇವದೇವೇಶ ದನುಜರಸಂಹರ ಶ್ಯಾಮಸುಂದರ ಘನಮೇಘಶ್ಯಾಮ ಸಚ್ಚಿದಾನಂದ ಚಿನುಮಯಾತ್ಮ ತಚ್ಚೈತನ್ಯರೂಪ ವೇಣುಧರ ಗೋಪಾಲ ಗೋವ ರ್ಧನೋದ್ಧಾರ ಗಾನಾಂದಧೋಕ್ಷಜಪಿತ ಧ್ಯಾನಗಮ್ಯ ತ್ರಿಭುವನೇಶ ತ್ರಿವಿಕ್ರಮನೆಂದು 2 ನಿತ್ಯಗುಣಾರ್ಣವ ನಿಜಗುಣ ನಿಷ್ಕಲಂಕ ನಿತ್ಯಾತ್ಮ ನಿರುಪಮ ಪರಂಜ್ಯೋತಿ ನಿತ್ಯನಿರ್ಮಲ ಸತ್ಯಭಾಮಾಕಾಂತ ಚಿದ್ರೂಪ ಚಿತ್ಕಳಂಕ ಕಮಲಾಕ್ಷ ಲಕುಮೀಶ ಶೌರಿ ಸೂತ್ರಧಾರಿ ಭಕ್ತವತ್ಸಲ ಭಯನಿವಾರ ನರಸಿಂಹ ಮುಕ್ತಿದಾಯಕ ಮಧುಸೂದನ ರಮಾರಮಣ ಮೃತ್ಯುಂಜಯ ವಿಶ್ವೇಶ ವಿಶ್ವವ್ಯಾಪಕನೆಂದು 3 ಕಾಲಾರಿ ಚಕ್ರಿ ಚತುರ್ಭುಜ ಭವನಾಶ ನೀಲಾಂಗ ರಂಗ ರಾಘವ ಭುವನೇಶ ನೀಲಲೋಚನ ನಗಧರ ಜಗಮೋಹ ಮೇಲುನಿಲಯ ನಿಗಮಾತೀತ ಪದ್ಮನಾಭ ಕಾಲೀಮರ್ದನ ಕೌಸ್ತುಭಾಂಬರ ವಿಷ್ಣು ಪಾಲಸಾಗರಕನ್ನಿಕಾಪ್ರಿಯನಾಥ ಲೀಲಜಾಲ ಜಾಹ್ನವೀಜನಕ ಕೇಶವ ಶೂಲಪಾಣಿಸಖ ಶಾಂತಾಕಾರನೆಂದು4 ಪರಮಾನಂದ ಗೋವಿಂದ ಗಜರಕ್ಷ ಶರಧಿಮಥನ ಕೂರ್ಮಮತ್ಸ್ಯ ಕರುಣಾಂಗ ವಾಮನ ಧ್ರುವಪಾಲ ದುರಿತಾರಿ ಕೃಷ್ಣ ವೆಂಕಟ ವಿಠಲ ಶರಣಾಗತವರದ ನುತಪಾಲ ವರದಾತ ವೇದಾಂಗ ಸುಖಧಾಮ ವರ ಶ್ರೀರಾಮ ಪರಮ ಪುಣ್ಯನಾಮ ಧರೆಮೂರರೊಳತ್ಯಧಿಕಮೆಂದು 5
--------------
ರಾಮದಾಸರು