ಒಟ್ಟು 6534 ಕಡೆಗಳಲ್ಲಿ , 130 ದಾಸರು , 4232 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬಂದಿಹ ನೋಡಿರಿ ಸುಂದರ ಸುಕುಮಾರನಂದ ಸುನಂದನ ಯದು ಕಂದಾ ಪ ಮಾಧವ ಮಧುಸೂದನಾ ಮಂದಸ್ಮಿತಾನನ ಕುಂದರ ವದನ ಪೂರ್ಣ ಚಂದ್ರ ಶತಾನನ ಗುಣ ಪೂರ್ಣಾ ಅ.ಪ. ವೇಣುನಾದ ವಿಶಾರದಾ ಗಾನಾಪಹೃತಸ್ತ್ರೀ ಮಾನಾಪಹರಣ ಮಾನಸ ಮಂದಿರ ಸ್ತ್ರೀಲೋಲಾ 1 ಶಿಖಾಮಣಿ ಮಾನವ 2 ಜಾರ ಖ್ಯಾತಾತ್ಮ ನರವೀರ ಪ್ರೀತಾತ್ಮ 3 ಭೂಧರಾರ ಮಾಧರ ಸುಧಾಪಾನದಿ ಮತ್ತಸದಮಾಲಾ ಚಿತ್ತ ಮುದಾ ಪೂರಿತಗಾತ್ರ ಸರ್ವತ್ರ 4 ಮಾಧವ ರಾಧಾ ಪ್ರಿಯ ತಂದೆ ಶ್ರೀನೃಹರಿಯೆ ಇಂದೂ ವಂದಿಪೆ ನಿನ್ನ ಬಂಧನ ಬಿಡಿಸೆಯ್ಯ ಗೋವಿಂದ 5
--------------
ತಂದೆ ಶ್ರೀನರಹರಿ
ಬಂದು ಕೂಡೋ ನಂದ ಬಾಲನೆ ಪ ಇಂದು ಮುಖವನೋಡಿ ಸ್ತುತಿಪೆಬಂಧದೊಳು ವಂದಿಸುತ ಆನಂದವನು ಪೊಂದುವೆನಾ 1 ಬಾಲಕೃಷ್ಣ ನಿನ್ನವೆರಡು ತೋಳು ತಾರೋ ಅಪ್ಪಿಕೊಂಬುವೆಭಾಳಾ ದಿನ ತವಲೀಲೆ ಕೇಳದೆ ಮನ ತಾಳದಿಹುದು2 ಮುರಳಿ ಸ್ವರದಿ ಭೂಷಿತಾನನ ತ್ವರದಿ ತೋರೋಉಮ್ಮ ಕೊಡುವೆಕರುಣಾನಿಧಿ ಇರಲಾರೆನು ಮರುಳಾದೆನು ತವ ಪಾದಕೆ 3 ಇಂದಿರೇಶ ಇಷ್ಟು ಜನುಮ ಹಿಂದೆ ಕಳೆದೆ ನಿನ್ನ ನೋಡದೆಇಂದಿರೆಯ ಪೊಂದಿಹ ನಂದಾತ್ಮಜ ಬಂದು ಪೊರೆಯೋ 4
--------------
ಇಂದಿರೇಶರು
ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ
ಬಂದು ನಿಲ್ಲೋ | ಕಣ್ಣ ಮುಂದೆ ಪ ಬಂದು ನಿಲ್ಲೋ ನಿನ್ನ ಪಾದಕ್ಕೆ ವಂದಿಪೆ ಇಂದಿರೆಯರಸಾ ಗೋವಿಂದ ಮುಕುಂದಾ ನೀ ಅ.ಪ. ಅರಳಿದ ಕೆಂದಾ | ವರೆಯ ಧಿಕ್ಕರಿಸುವ ಚರಣಾರವಿಂದವ | ನಿರುತ ತೋರು ನೀನು 1 ಭ್ರಮರ ಕುಂಡಲ ಮಂಡಿತ || ಮೇಲಾದ ರಾಕೇಂದು | ಮುಖವ ತೋರಿಸುತಲೀ2 ಪದುಮನೇತ್ರನೆ ನಿನ್ನ | ಸದನವೆನುತಯೆನ್ನ || ಹೃದಯದೊಳಗೆ ನಿಂತು ನಾ | ಮುದದಿ ಭಜಿಸುವಂತೇ 3 ಕರಿಯ ಮೊರೆಯ ಕೇಳಿ | ಕರುಣದಿಂ ಬಂದಂತೆ || ಕರೆದಾಗ ನಿನ್ನ ದಿವ್ಯ | ಚರಣಾವ ತೋರಿಸುತಾ4 ಅಜಭವಾದಿಗಳಿಗೆ | ನಿಜಪದವನಿತ್ತಂತೆ || ಭಜಿಪ ಭಕ್ತರಿಗೊಲಿವ | ವಿಜಯವಿಠ್ಠಲರೇಯಾ5
--------------
ವಿಜಯದಾಸ
ಬಂದು ಪೊರೆಯೆಲೊ ಇಂದಿರೇಶಾ ಎನ್ನವಂದಿಸುವೆನೂ ಸಿಂಧುಶಯನ ಬೇಗ ಪ ಶಿಷ್ಟರ ಸಂಗತಿ ಕೊಟ್ಟು ಕಾಯೊ ಮತಿಭ್ರಷ್ಟನಾದೆನತಿ ಧಿಟ್ಟ ರಘುಪತಿ 1 ಮುಕ್ತಿದಾಯಕನಾ ಭಕ್ತಿಯೊಳ್ ಭಜಿಪರೆಶಕ್ತಿ ಸಾಲದು ಶ್ರೀ ಭಕ್ತವತ್ಸಲನೆ 2 ವಂದಿತ ಭಕ್ತರ ಚಂದದಿಂ ಪಾಲಿಪಸುಂದರ ಮೂರುತಿ ಸಂದೇಹ ಮಾಡದೆ 3 ಹಿಂಡು ಬಾಲರೊಡಗೊಂಡು ಗೋಕುಲದಿಪುಂಡು ಮಾಡಿದ ಪ್ರಚಂಡ ಕೃಷ್ಣ ಬೇಗ 4 ಅಂಗನೆಯರ ವ್ರತ ಭಂಗಗೈಸಿ ತನ್ನಸಂಗವಿತ್ತು ಕಾಯ್ದ ರಂಗನಾಥ ಸ್ವಾಮಿ 5
--------------
ಇಂದಿರೇಶರು
ಬಂದು ಹೃದಯಮಂದಿರದೊಳಗೆಕೂಡೋ ಕೇಶವಮಾಧವ ಪ ತಂದೆಯೆನಾಂ ವಂದಿಪೆನೋ ಕಂದನ ಕುಂದನೆಣಿಸದೆ ಅ.ಪ ಭ್ರಮರ ಕೀಟನ್ಯಾಯದಿ ಬೇಗದಿ ತಾನೆ ತಾ ತನ್ಮಯತೇ ದಿವ್ಯಮಂಗಳ ವಿಗ್ರಹನೇ 1 ನಾಲಗೆಯ ನಡೆಮುಡಿ ಹಾಸುವೆ ಪಾಲ ಸುಮೃದುಪದಾ ಶುಭದ ನೀನೊಲಿಯುತೆ ನಲಿದು 2 ಗಾತ್ರ ಮೂರ್ತಿ ಶ್ರೀಕರ ತಂಗದಿರಾ ಬೆಂಗದಿರಾ ಶಂಕಚಕ್ರ ಚತುರ್ಭುಜ 3 ಸಂಚಿತವೆಂತೋ ಸ್ವಾಮಿ ಹಂಚಿ ನಿನ್ನ ಸೇವೆಯ ಗೈಸುತ 4 ಮುನಿಜನಗಳ ಪೊರೆವುದು ಹೆಚ್ಚೇ ಚಿನುಮಯಾತ್ಮನೇ ಚೆನ್ನಿಗ ಅಣುಗನು ನಾನಜ್ಞಾನಿ ಕನಿಕರದೆನ್ನ ಕಾಯ್ದರೆ ಕೀರ್ತಿ 5 ಮಾಯಮುಚ್ಚಿ ಕಾಯನೆಚ್ಚಿ ನೋಯುತ್ತಿಹೆನೋ ನರಹರಿ ಜೀಯ ಜಾಜೀಶಹರಿ ರಾಮ ರಕ್ಷಿಸು ಶ್ರೇಯ ಕೊಟ್ಟು6
--------------
ಶಾಮಶರ್ಮರು
ಬದುಕಲು ಪ್ರಾರ್ಥಿಸಿರೊ ಬಹುದಿನ ಬದುಕಲು ಪ್ರಾರ್ಥಿಸಿರೊ ಪ ಬದುಕಿ ಬಾಳುವಂಥ ಹದವತಿ ಸುಲಭವು ಬುಧಜನ ತೋರುವರದನು ಸಂತೋಷದಿ ಅ.ಪ ನಾನಾ ಯೋನಿಗಳಲ್ಲಿ ಬಂದು ಈ ಮನುಷ್ಯ ಜನ್ಮವು ಏನು ಪುಣ್ಯವೊ 1 ಕಾಲವು ಕೆಟ್ಟಿತು ಬಾಳಲಾಗದೆಂದು ಬಾಲಭಾಷೆಗಳ ಪೇಳದೆ ದ್ಯೆರ್ಯದಿ2 ರಾಜಶಾಸನವು ಈ ಜಗಕಲ್ಲವೆ ಮೂರ್ಜಗದೊಡೆಯನ ಶಾಸನ ಮೀರದೆ 3 ಕ್ಷೇತ್ರ ತೀರ್ಥಗಳು ವ್ಯರ್ಥಗಳಾದರೂ ಕ್ಷೇತ್ರಜ್ಞನ ಕೃಪಾ ಮಾತ್ರವಿದ್ದರೆ ಸಾಕು 4 ಜ್ಞಾನಿಗೆ ಹರಿ ಪ್ರಿಯ ಜ್ಞಾನಿ ಹರಿಗೆ ಪ್ರಿಯ ಜ್ಞಾನವ ಪಡೆದು ಪ್ರಸನ್ನ ಮಾನಸರಾಗಿ5
--------------
ವಿದ್ಯಾಪ್ರಸನ್ನತೀರ್ಥರು
ಬದುಕಿಸೀ ಪಶುಗಳನೂ ಭಗವಂತ ನೀನು ಪ ಕದಲಿಸೀರೋಗವ-ಕರುಣಿಗಳರಸನೆ ಅ.ಪ. ಗೋವುಗಳೆಲ್ಲಾ ಹೊಟ್ಟೆ-ನೊವಿನಿಂ ಕಂಗೆಟ್ಟು ಮೇವನುಬಿಟ್ಟ ವಿದಾವರೊಗವೋ ಕಾಣೆ 1 ಹೊಟ್ಟೆ ಕಳೆದು ಕಂಗೆಟ್ಟುಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟುಬಿಡದಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣಾಲಿ ಕೆಂಣಾಲಿ ಕೆಂಪಾದವು ಮೂಲವೆ ತಿಳಿಯದು3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ-ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತು ಬದುಕಿಸಿದೆ ಮೃತ್ಯುದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ಸರಗೂರು ವೆಂಕಟವರದಾರ್ಯರು
ಬದುಕಿಸೀ ಪಶುಗಳನ್ನು ಭಗವಂತ ನೀನು ಪ ಬದುಕಿಸೀ ಪಶುಗಳ ಭವರೋಗ ವೈದ್ಯನೆ ಕದಲಿಸೀ ರೋಗವ ಕರುಣಿಗಳರಸನೆ ಅ.ಪ ಗೋವುಗಳೆಲ್ಲಾ ಹೊಟ್ಟೆ ನೋವಿಂ ಕಂಗೆಟ್ಟು ಮೇವನು ಬಿಟ್ಟವಿದಾವ ರೋಗವೋ ಕಾಣೆ 1 ಹೊಟ್ಟೆ ಕಳೆದು ಕೆಂಗೆಟ್ಟಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟ ಬಿಡದ ಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣ್ಣಾಲಿ ಕೆಂಪಾದವು ಮೂಲವೆ ತಿಳಿಯದು 3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತ ಬದುಕಿಸಿದೆ ಮೃತ್ಯು ದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿ ನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ವೆಂಕಟವರದಾರ್ಯರು
ಬದುಕು ಬದುಕು ನಂಜುಂಡಾ ಮ ಪರಿಯಂತ ಪ ಜನನಿಯ ಮಾತನು ಮೀರದೆ ಪರ ವನಿತೆಯರಿಗೆ ಮನಸೋಲದೆ ಬಿನುಗು ದೈವಂಗಳಿಗೆರಗದೆ ದು ರ್ಜನರ ಸಂಗಗಳ ನೀ ಮಾಡದೆ ನಂಜಾ 1 ತಪ್ಪುದಾರಿಯಲಿ ನೀ ಪೋಗದೆ ಆರು ಒಪ್ಪದ ಕರ್ಮವ ಮಾಡದೇ ತಪ್ಪು ಕಥೆಗಳನು ಕೇಳದೆ ಬಲು ಸಪ್ಪೆ ವಾಕ್ಯಂಗಳನಾಡದೆ ನಂಜಾ 2 ಹರಿಗೆರಗುತ ಹರಿಶರಣರ್ಗೆ ನಮಿಸುತ ಹರಿಯ ಕಥೆಗಳನ್ನು ಕೇಳುತಾ ಹರಿಯೆ ಸರ್ವೋತ್ತಮನೆಂದು ನೀನಿರುಕಂಡ್ಯ ಸಿರಿ ವೈಕುಂಠಕೇಶವ ರಕ್ಷಿಪ ನಂಜಾ 3
--------------
ಬೇಲೂರು ವೈಕುಂಠದಾಸರು
ಬಂದೆ ನಾ ನಿಂದೆ ಇಂದೇ | ವಂದಿಸಿದೆನೊ ವಂದೆ | ಮಾಧವ ತಂದೆ | ಆನಂದ ಇಂದಿರೇಶ ಬಂದೆ ಪ ಪುರುಹೂತ ಜಾತ ಸೂತ | ಸರಸಿಜ ತಾತಾ | ಪರಮ ಪುರುಷ ಖ್ಯಾತ | ಸರವಂದ್ಯ ದೈತ್ಯ ಘಾತಾ | ಹಾಹಾ ಚರಣವ ನಿರುತರ ನೆರೆನಂಬಿದೆ | ದು ಸ್ತರ ಭವಶರಧಿ ಉತ್ತರಿಸೊ ಉರಗಶಾಯಿ 1 ಮೂರ್ತಿ ವರದೇಶಾ ಶರಣರ ಪರಿತೋಷಾ | ತರತಮ್ಯ ಜ್ಞಾನ ಕೋಶ | ಹಹ | ಪುರಹರಗೀಕಾಶಿಪುರ ಕರುಣಿಸಿದ ಸುಂ | ದರಗಾತುರ ಗೋತುರ ಧರ ಧರಣೀಶಾ 2 ಅವಿಮುಕ್ತಿ ಕ್ಷೇತ್ರವಾಸಾ | ನವನವ ಗುಣಭೂಷಾ | ಅವಿಕಾರ ನಾನಾ ವೇಷಾ | ರವಿಜವನ ಪೊರೆವ ಮಿರುವ ಮಹಸತ್ಕಥಾ ಶ್ರವಣವೆ ಕೊಡು ಕೇಶವ ವಿಜಯವಿಠ್ಠಲಾ 3
--------------
ವಿಜಯದಾಸ
ಬಂದೆ ಬಂದೆ ಸ್ವಾಮಿಯೆ ಬಂದೆ ಬಂದೆ ಪ. ಬಂದೆ ಬಂದೆ ಗೋವಿಂದ ಗೋವಳ ಬಾಂಧವ ಭಕ್ತವತ್ಸಲಇಂದಿರೇಶ ಶ್ರೀ ವೆಂಕಟ ನಿನ್ನ ಸಂದರುಶದಕೆ ಸಾಗಿ ನಾನಿಲ್ಲಿ ಅ.ಪ. ನಡೆದು ನಡೆಸುತ ನುಡಿದು ನುಡಿಸುತಅಡಿಗಡಿಗೆ ಕಾಪಾಡುತಒಡನೆ ಆಡುತ ಬಿಡದೆ ಕ್ಷಣವನುಸಡಗರದಿ ಕರೆತರಲು ನಾನಿಲ್ಲಿ 1 ಆಪ್ತ ಅನಿಮಿತ್ತ ವ್ಯಾಪ್ತ ಸರ್ವತ್ರಗುಪ್ತ ಗುಣಗಣಪೂರ್ಣನೆಪ್ರಾಪ್ತ ನೀನೆನಗಾಗಬೇಕೆಂದುವ್ಯಾಪ್ತಿ ನಿನ್ನದು ಹುಡುಕುತಲಿ ನಾ2 ಒಂದು ರೂಪದಿ ನಿಂದು ಎನ್ನಲ್ಲಿಚೆಂದದಿಂ ಕರೆತಂದೆ ಇಲ್ಲಿಒಂದರಿಯೆ ನಿನ್ನ ವಂದಿಸುವ ಬಗೆಬಂದೊದಗೊ ನೀನೆನ್ನ ವದನಕೆ 3 ಬಂದೆ ಬಂದೆ ನೀ ಬಂದಂತೆ ಕರ-ತಂದುದಕೆ ಫಲ ನೀನೆ ಬಲ್ಲೆಸಂದರುಶನ ನಿನಗೆ ನೀ ಮಾಳ್ಪಂದವನು ನೋಳ್ಪಾತುರದಿ ನಾ 4 ಏನು ಕೊಡಲಿಲ್ಲ ಏನು ಬೇಡಲಿಲ್ಲಏನು ಪಡೆಯಲೊ ಕರುಣಿಯೆನೀನು ಕೊಟ್ಟ ಸ್ವಾತಂತ್ರ್ಯದ ಫಲನಿನಗೆ ಅರ್ಪಿಸಬೇಕೆನುತ ಇಲ್ಲಿ 5 ರಕ್ಷಶಿಕ್ಷಕ ಮೋಕ್ಷದಾಯಕಸೂಕ್ಷ್ಮ ಘನ ಮಹಾವ್ಯಾಪಕಕುಕ್ಷಿಯೊಳು ಜಗದ್ಭರಿತ ಪೂರಿತಅಕ್ಷಯಫಲದಾಯಕ 6 ನಮೋ ನಮೋ ನಾಗಾರಿವಾಹನನಮೋ ನಮೋ ಸುರಸುಪ್ರಸನ್ನನೆನಮೋ ನಮೋ ಗೋಪಾಲವಿಠಲನಮಿಪ ಭಕ್ತರ ಸಲಹುವನೆಂದು 7
--------------
ಗೋಪಾಲದಾಸರು
ಬಂದೆ ಭಗವತ್ಪಾದಯುಗಾರ ವಿಂದಕೆ ಮಿಳಿಂದನಾಗಿ ವಂದನೀಯರೆ ಯತಿಕುಲಾಬ್ಧಿ ಚಂದ್ರರ ಭುವನೇಂದ್ರತೀರ್ಥರೆ1 ಪರಮ ಪಾವನ ಭುವನೇಂದ್ರರ ಕರಸಂಜಾತ ವರದೇಂದ್ರರ ಕರಸರೋರುಹಭವರೆ ಮಹಾ ಕರುಣಾಂತಃಕರಣ ಧೀರರೆ2 ಸುಮತೀಂದ್ರಾದಿ ಯತೀಂದ್ರರ ವಿಮಲ ಹೃದಯಕಮಲಭಾಸ್ಕರ ಅಮಮ ನಿಮ್ಮ ಕಾಂಬ ಯೋಗ ಸುಕೃತ ಭೋಗಪೂಗ3 ಪೂರ್ಣಪ್ರಜ್ಞಾಚಾರ್ಯವರ್ಯ ಸನ್ನುತ ಮತಧೈರ್ಯ ಧುರ್ಯ ಧನ್ಯನಾದೆನು ನಾನಿಂದು ಸನ್ನಿಧಾನವನು ಕಂಡೆನು4 ಶ್ರೀಶ ಲಕ್ಷ್ಮೀನಾರಾಯಣ ವ್ಯಾಸ ರಘುಪತಿಯ ಚರಣೋ- ಪಾಸಕರೆ ಪಾವನರೆ ಕಾಶೀವiಠಾಧೀಶ್ವರರೆ 5
--------------
ತುಪಾಕಿ ವೆಂಕಟರಮಣಾಚಾರ್ಯ