ಒಟ್ಟು 3173 ಕಡೆಗಳಲ್ಲಿ , 122 ದಾಸರು , 2278 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾ ಬಾ ಬಾ ಹರಿಯೇ ಮೂರ್ಲೋಕದ ದೊರೆಯೇ ಪ.ಸರ್ವೋತ್ತಮ ಸರ್ವಾಂತರ್ಯಾಮಕಸರ್ವಾಧಾರ ಪ್ರವೀರ ಶೂರವರ 1ನಿತ್ಯಮುಕ್ತ ಪರಿಪೂರ್ಣಗುಣಾರ್ಣವಸತ್ಯನಿಯಾಮಕ ಸತ್ಯವಾದರೆ ತ್ವರೆ 2ರೂಪತ್ರಯ ಭವತಾಪಶಮನ ಸ-ದ್ವ್ಯಾಪಕ ಸ್ಥಾಪಕ ಶ್ರೀ ಪುರುಷೋತ್ತಮ 3ಭಜಕರ ಭಾಗ್ಯನಿಧಿಯು ನೀನೆಂಬುದುನಿಜವಾಗಿರೆ ಶ್ರೀ ರುಜುಗಣೇಶಪತಿ 4ಶ್ರೀಲಕ್ಷ್ಮೀನಾರಾಯಣ ನಿರ್ಗುಣಮೂಲೇಶ ಮುಕುಂದ ಮುನೀಂದ್ರವಂದಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಾತೆಗೆ ಬಾರದ ವಸ್ತು ಬಹಳಿದ್ದರೇನುಹೋತಿನ ಕೊರಳೊಳಗೆ ಮಾಲೆಯಿದ್ದರೇನು ? ಪ.ತಾನು ಉಣ್ಣದ ದ್ರವ್ಯ ತಾಳೆಯುದ್ದ ಇದ್ದರೇನು?ದಾನವಿಲ್ಲದ ಮನೆಯು ದೊಡ್ಡದಾದರೇನು ?ಹೀನ ಕುಲದವಂಗೆ ಹಿರಿತದ ಬಂದರೇನುಶ್ವಾನನ ಮೊಲೆಯೊಳು ಹಾಲಿದ್ದರೇನು 1ವಾದಿಸುವ ಮಗನು ಒಯ್ಯಾರದಲಿದ್ದರೇನುಕಾದುವಸತಿ ಕೆಲದೊಳಿದ್ದರೇನು ?ಕ್ರೋಧವನು ಅಳಿಯದ ಸೋದರನು ಇದ್ದರೇನುಮಾದಿಗರ ಮನೆಯಲಿ ಮದುವೆ ಆದರೇನು 2ಹೋಗದೂರಿನ ಹಾದಿಕೇಳಿ ಮಾಡುವುದೇನುಮೂಗನ ಕಾಡ ಏಕಾಂತವಿನ್ನೇನು ?ಯೋಗಿ ಶ್ರೀ ಪುರಂದರವಿಠಲನ ನೆನೆಯದವಯೋಗಿಯಾದರೆ ಏನು ಜೋಗಿಯಾದರೆ ಏನು ? 3
--------------
ಪುರಂದರದಾಸರು
ಬಾರೊ ಬಾರೊ ಕೃಷ್ಣಬಾರೊ ಬಾರಯ್ಯಚಾರುನವರತ್ನದ ಹಸೆಯ ಏರು ಬಾರಯ್ಯಪ.ನಾರುವ ಮೈಯವನೆ ನೀರು ಬಿಟ್ಟು ಬಾರಯ್ಯಭಾರಹೊರೆಸೋದಿಲ್ಲ ಹಸೆಯ ಏರು ಬಾರಯ್ಯಕ್ವಾರಿ ಮಸೆದು ಕೋಪಿಸಬ್ಯಾಡದಾರಿಗಾಲ ಪರಿಯಬ್ಯಾಡಭಾರಕೊಡಲಿ ಧರಿಸಿ ನೀನು ಭೋರಾಡ ಬ್ಯಾಡ1ಮಡದಿಯ ಹಂಬಲದಿ ಅಡವಿ ಹಿಡಿಯ ಬ್ಯಾಡಯ್ಯತುಡುಗತನದಿ ಹಾಲು ಮೊಸರು ಕುಡಿಯ ಬ್ಯಾಡಯ್ಯಒಡವೆ ವಸ್ತ್ರ ಕಾಣೆ ನಿನಗೆ ಹಿಡಿದೇಜಿಎಲ್ಲವೂ ಕೃಷ್ಣಬಡಿವಾರಸಾಕೊನಿನ್ನ ಸಡಗರ ರಂಗಯ್ಯ 2ಅರ್ಥಿಲೆ ಪುರುಷ ರಾಮೇಶ ಮತ್ತೆ ಬಾರಯ್ಯಜಾರವೃತ್ತಿಗಳ ಜರೆದು ಹಸೆಯ ಹತ್ತ ಬಾರಯ್ಯಮಿತ್ರಿ ರುಕ್ಮಿಣಿ ಸತ್ಯಭಾವೆಯರುಮತ್ತೆ ಉಳಿದ ನಾರಿಯರು ಅತ್ಯಂತ ಶೋಭಿಸುತಲೆಮುತ್ತಿನ ಹಸೆಯ ಏರು ಬಾರಯ್ಯ ಕೃಷ್ಣ ಬಾರೊ ಬಾರೊ 3
--------------
ಗಲಗಲಿಅವ್ವನವರು
ಬಾರೋ ನಮ್ಮ ಮನೆಗೆ ಬೇಗನೆ ಗೋಪಾಲಕೃಷ್ಣಬಾರೋ ಶ್ಯಾಮ ಸುಂದರಾಂಗನೆ ಪಬಾರೊ ಭಾಮೆ ರುಕ್ಮಿಣೀಶ ಬಾರೊಯೋಗಿಹೃದಯವಾಸಬಾರೊ ದ್ವಾರಕಾಪುರೀಶ ಬಾರೊ ಭಕ್ತಜನರ ಪೋಷ ಅ.ಪಅಂದಿಗೆ ಕಾಲ್ಗೆಜ್ಜೆ ಸರಪಣಿ ಪಾಡಗರುಳಿಯುಕೆಂದಾವರೆಯು ಪೋಲ್ವಪಾದದಿನಂದಗೋಪತನಯಗೋಪವೃಂದದೊಳಗೆ ಕುಣಿದು ನಲಿದುಇಂದಿರೇಶ ಶ್ರೀಶನೆ ಬಂದೊಂದುಹೆಜ್ಜೆನಿಡುತ ಮುದದಿ 1ಉಟ್ಟದಟ್ಟಿಯು ಪಟ್ಟೆಚಲ್ಲಣ ಹವಳಕಟ್ಟುಗಟ್ಟಿ ಸರಪಣಿ ಕಿರುಗಂಟೆಯುಕಟ್ಟಿದ ಉಡುದಾರಗೆಜ್ಜೆಶ್ರೇಷ್ಠತನದಿ ಮೆರೆಯುತಿರಲುಪುಟ್ಟಬಾಲರೊಡನೆ ಪುಟ್ಟಪುಟ್ಟ ಹೆಜ್ಜೆನಿಡುತ ನಲಿದು 2ದುಂಡು ಕರಕೆ ಗುಂಡು ಬಿಂದಲಿ ಮುಂಗೈಮುರಿಗೆಉಂಗುರಗಳು ಶೋಭಿಸುತಲಿಬಂದಿ ಬಾಪುರಿಗಳು ತೋಳಬಂದಿ ನಾಗಮುರಿಗಿ ಕರದಿಚಂದ್ರನನ್ನು ಪಿಡಿದು ನಲಿದಸುಂದರಾಂಗ ಚೆಲುವ ಕೃಷ್ಣ 3ಪದಕ ಮುತ್ತಿನ ಸರಗಳ್ಹೊಳೆಯುತವೈಜಯಂತಿಮಾಲೆಸರಿಗೆ ಏಕಾವಳಿಗಳೊಲಿಯುತಪದುಮನಾಭ ನಿನಗೆ ದಿವ್ಯಮುದದಿಕೌಸ್ತುಭಮಾಲೆ ಹೊಳೆಯೆಯದುಕುಲೇಶ ಉಡುಪಿವಾಸಉದದಿ ಶ್ರೀಶಉದ್ಧವಸಖನೆ4ಸೋಮಸೂರ್ಯರ ಕಾಂತಿ ಸೋಲಿಪ ಮುಂಗುರುಳು ಮುಖವುಕಾಮಜನಕ ಕಮಲಲೋಚನಹೇಮಮಣಿ ಕಿರೀಟಕುಂಡಲಪ್ರೇಮತೋರ್ವ ಫಣಿಯ ತಿಲಕಶ್ರೀ ಮಹೀಶ ಶ್ರೀಶನೆ ಶ್ರೀ-ಕಮಲನಾಭ ವಿಠ್ಠಲ ಒಲಿವ 5
--------------
ನಿಡಗುರುಕಿ ಜೀವೂಬಾಯಿ
ಬಾರೋ ಬ್ರಹ್ಮಾದಿವಂದ್ಯಾಬಾರೋ ವಸುದೇವ ಕಂದ ಪಧಿಗಿಧಿಗಿ ನೀ ಕುಣಿದಾಡುತ ಬಾರೋದೀನ ರಕ್ಷಕನೇಜಗದೀಶಾ ಕುಣಿದಾಡುತ ಬಾರೋಚನ್ನಕೇಶವನೇ 1ಗೊಲ್ಲರ ಮನೆಗೆ ಪೊಗಲು ಬೇಡಗೋವಿಂದಾ ಕೇಳೋಹಾಲು ಬೆಣ್ಣೆ ಮೊಸರಿಕ್ಕುವೆನೀನುಣ್ಣ ಬಾರೋ 2ದೊಡ್ಡ ದೊಡ್ಡ ಮುತ್ತಿನ ಹಾರವ ಹಾಕಿನೋಡುವೆ ಬಾರೋದೊಡ್ಡ ಪುರದ ದ್ವಾರಕಿವಾಸಪುರಂದರವಿಠಲ3
--------------
ಪುರಂದರದಾಸರು
ಬಾರೋ ಮನೆಗೆ ಮಾಧವಾ | ದೇವರ ದೇವ |ಬಾರೋ ಮನೆಗೆ ಮಾಧವಾ ಪಬಾರೋ ಮನೆಗೆ ದಯಾ | ತೋರೋ ಎನಗೆ ಜೀಯಾ |ವಾರಿಜನಯನಾ ಓ | ಕ್ಷೀರಾಭ್ದಿ ಶಯನನೇ ||ಬಾರೋ|| 1ವೇದ ಗೋಚರ ನಿನ್ನಾ |ಪಾದನಂಬಿದ ಎನ್ನಾ |ಆದರಿಸೈ ಕರುಣೋದಯ ಮೂರುತೀ ||ಬಾರೋ|| 2ಸಿಂಧುವಸನದೀಶಾ | ಸುಂದರಾಂಗ ವಿಲಾಸ |ಇಂದಿರೆಯರಸ ಗೋ | ವಿಂದದಾ¸Àನ ನಂದಾ ||ಬಾರೋ|| 3
--------------
ಗೋವಿಂದದಾಸ
ಬಾರೋ ವೆಂಕಟಗಿರಿನಾಥ| ದಯ-ದೋರೈ ಭಕುತರ ಪ್ರೀತ ಪ.ಮಾರಪಿತ ಗುಣಹಾರ ಮಂದರ-ಧಾರ ದೈತ್ಯಸಂಹಾರ ಸುಜನೋದ್ಧಾರ ಮಮಹೃದಯಾರವಿಂದಕೆಬಾರೋ ಕೃಪೆದೋರೋ ವೆಂಕಟ ಅ.ಪ.ವೃಷಭಾಸುರನೊಳು ಕಾದಿ ಸಾ-ಹಸವ ಮೆರೆಸಿದ ವಿನೋದಿವಶಗೈದು ದೈತ್ಯನ ಶಿರವ ಕತ್ತ-ರಿಸುತಲಿ ನೀನಿತ್ತೆ ವರವವಸುಧೆಯೊಳಗಿಹ ಸುಜನರನು ಮ-ನ್ನಿಸುತಲಿಷ್ಟವನಿತ್ತು ಕರುಣಾ-ರಸದಿ ಸಲಹುವ ಬಿಸಜನಾಭ ಶ್ರೀ-ವೃಷಭಾಚಲವೊಡೆಯ ವೆಂಕಟ 1ಅಂಜನೆಯೆಂಬಳ ತಪಕೆ ಭಕ್ತ-ಸಂಜೀವನೆಂಬ ಶಪಥಕೆರಂಜಿಪ ಪದವಿತ್ತೆ ಮುದದಿ ಖಿಲ-ಭಂಜನಮೂರ್ತಿ ಕರುಣದಿ|ಮಂಜುಳಾಂಗ ಶ್ರೀರಂಗ ಸುರವರಕಂಜಭವವಿನುತಾದಿ ಮಾಯಾ-ರಂಜಿತಾಂಘ್ರಿ ಸರೋರುಹದ್ವಯಅಂಜನಾಚಲವೊಡೆಯ ವೆಂಕಟ 2ಶೇಷನ ಮೊರೆಯ ತಾಕೇಳಿಬಲುತೋಷವ ಮನಸಿನೊಳ್ತಾಳಿದೋಷರಹಿತನೆಂದೆನಿಸಿ ಕರು-ಣಾಶರಧಿಯ ತಾನೆ ಧರಿಸಿಶ್ರೀಶಹರಿಸರ್ವೇಶ ನತಜನ-ಪೋಷ ದುರ್ಜನನಾಶ ರವಿಶತ-ಭಾಸ ಕೌಸ್ತುಭಭೂಷವರಶ್ರೀ-ಶೇಷಾಚಲವಾಸ ವೆಂಕಟ 3ಮಾಧವವಿಪ್ರ ವಿರಹದಿ ಭ್ರಷ್ಟಹೊಲತಿಗಳನು ಸೇರ್ದ ಮುದದಿಸಾದರದಲಿ ನಿನ್ನ ಬಳಿಗೆ ಬರೆನೀ ದಯಾನಿಧಿ ಕಂಡು ಅವಗೆಶೋಧಿಸುತ ಪಾಪಗಳೆಲ್ಲವಛೇದಿ ಬಿಸುಡುತನಿಂದುವೆಂಕಟ-ಭೂಧರದ ನೆಲೆಯಾದ ನಾದವಿ-ಭೇದಬಿಂದು ಕಲಾದಿಮೂರುತಿ 4ಧನಪತಿಯೊಳು ತಾನು ಸಾಲಕೊಂಡಘನಕೀರ್ತಿಯಿಂದ ಶ್ರೀಲೋಲವನಿತೆ ಪದ್ಮಾವತಿಪ್ರೀತ ಭಕ್ತ-ಜನಸುರಧೇನು ಶ್ರೀನಾಥವನಧಿಶಯನ ಮುರಾರಿಹರಿಚಿ-ಧ್ವನಿನಿಭಾಂಗ ಸುಶೀಲ ಕೋಮಲವನಜನಾಭನೀಯೆನ್ನ ಕೃಪೆಯೊಳ-ಗನುದಿನದಿ ಕಾಯೊ ಕೃಪಾಕರ 5ಛಪ್ಪನ್ನೈವತ್ತಾರು ದೇಶದಿಂದಕಪ್ಪವಗೊಂಬ ಸರ್ವೇಶಅಪ್ಪ ಹೋಳಿಗೆಯನ್ನುಮಾರಿಹಣ-ಒಪ್ಪಿಸಿಕೊಂಬ ಉದಾರಿಸರ್ಪಶಯನ ಕಂದರ್ಪಪಿತ ಭಜಿ-ಸಿರ್ಪವರ ಸಲಹಿರ್ಪ ಕುಜನರದರ್ಪಹರಿಸುತ ಕಪ್ಪಕಾಣಿಕೆಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6ಚಾರುಚರಣತೀರ್ಥವೀಂಟಿ ನಿನ್ನೊ-ಳ್ಸಾರಿ ಬರುವ ಪುಣ್ಯಕೋಟಿಸೇರಿದೆ ಕೊಡು ಮನೋರಥವ ಲಕ್ಷ್ಮೀ-ನಾರಾಯಣನೆನ್ನೊಳ್ದಯವತೋರುನಿರತಸಮೀರಭವ ವರ-ದಾರವಿಂದದಳಾಕ್ಷ ತಿರುಪತಿವೀರ ವೆಂಕಟರಮಣ ಮದ್ಬಹು-ಭಾರನಿನ್ನದು ಪಾಲಿಸೆನ್ನನು7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಿದಿಗೆಯ ದಿವಸ(ಹನುಮಂತನನ್ನು ಕುರಿತು)ಸಮನಸನಾಗಿ ತೋರುವನಲ್ಲೆ ನೀರೆ ಪ.ಧನ್ಯನಾಗಿರುವ ದೊರೆಯ ಧರಿಸುತ್ತಚೆನ್ನಿಗನಾಗಿ ತೋರುವನಲ್ಲೆ ಈತ 1ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2ಸೋಮಾರ್ಕಶಿಖಿಯಂತಿರುವುದು ತ್ರಿನಾಮರಾಮಣೀಯಕ ಮನೋಹರ ಪೂರ್ಣಕಾಮ 3ವೀರವೈಷ್ಣವ ಮುದ್ದು ಮೋಹನಕಾಯಭೂರಿಭೂಷಣಭುಜಬಲ ಹರಿಪ್ರಿಯ 4ರೂಪನೋಡಲು ಕಾಮರೂಪನಂತಿರುವಚಾಪಲ ಪ್ರೌಢ ಚಿದ್ರೂಪನಂತಿರುವ 5ಬಾಲವ ನೆಗಹಿ ಕಾಲೂರಿ ಶೋಭಿಸುವನೀಲದುಂಗುರದ ಹಸ್ತವ ನೀಡಿ ಮೆರೆವ 6ಗೆಜ್ಜೆ ಕಾಲುಂಗರ ಪದಕಕಟ್ಟಾಣಿಸಜ್ಜನನಾಗಿ ತೋರುವನು ನಿಧಾನಿ 7ಊರ್ವಶಿ :ತರುಣಿ ಕೇಳೀತನೆ ದೊರೆಮುಖ್ಯಪ್ರಾಣವರನಿಗಮಾಗಮ ಶಾಸ್ತ್ರಪ್ರವೀಣ1ಮಾಯವಾದಿಗಳ ಮಾರ್ಗವ ಖಂಡಿಸಿದವಾಯುಕುಮಾರ ವಂದಿತ ಜನವರದರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆಚಟುಳ ಹನುಮನ ಉತ್ಕಟರೂಪ ಕಾಣೆ 1ವಾಮನನಾದ ಕಾರಣವೇನೆ ಪೇಳೆನಾ ಮನಸೋತೆ ಎಂತುಂಟೊ ಹರಿಲೀಲೆ 2ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳುಸಾಗಿತು ಸೇವೆಯೆಂಬುದು ಮನಸಿನೊಳು 1ವಾದವ ಮಾಡಿ ವಿನೋದದಿ ಹರಿಯಪಾದಸೇವೆಗೆ ಮನನಾದ ಕೇಳಿದೆಯೊ 2ವೀರ ವೇಷವನಿದ ಕಂಡು ಶ್ರೀಹರಿಯದೂರವಾದನೋ ಎಂದು ಮನದೊಳು ನಿಜವು 3ತೋರಲು ಬೇಗದಿ ದೊರೆ ಹನುಮಂತಭೂರಿಭೂಷಣ ಸುಂದರ ರೂಪವಾಂತ 4ಇಂದಿನ ಸೇವೆಯೆನ್ನಿಂದತಿ ದಯದಿಮಂದರಧರಿಸಿಕೊಳ್ವುದು ಎಂದು ಭರದಿ 5ಒಯ್ಯನೆ ಪೇಳುತ್ತ ವಯ್ಯಾರದಿಂದಕೈಯನು ನೀಡಿ ಸಾನಂದದಿ ಬಂದ 6ಕಂತುಪಿತನು ಹನುಮಂತ ಮಾನಸಕೆಸಂತಸ ತಾಳಿ ಆನಂತನು ದಿಟಕೆ 7ಏರುತ ಹನುಮನಭೂರಿವೈಭವದಿಸ್ವಾರಿಯು ಪೊರಟ ಸಾಕಾರವ ಮುದದಿ 8ತೋರಿಸಿ ಭಕ್ತರಘೋರದುರಿತವಸೂರೆಗೊಳ್ಳುವನು ವಿಚಾರಿಸಿ ನಿಜವ 9ಹದನವಿದೀಗೆಲೆ ಬಿದಿಗೆಯ ದಿನದಿಮದನಜನಕನು ಮೈದೋರುವ ಮುದದಿ 10ಪ್ರತಿದಿನದಂತೆ ಶ್ರೀಪತಿ ದಯದಿಂದಅತಿಶಯ ಮಂಟಪದೊಳು ನಲವಿಂದ 11ಎಂತು ನಾ ವರ್ಣಿಪೆ ಕಂತುಜನಕನಅಂತ್ಯರಹಿತ ಗುಣಾನಂಮಹಿಮನ 12ಏಕಾಂತದಿ ಲೋಕೈಕನಾಯಕನುಶ್ರೀಕರವಾಗಿ ನಿಂದನು ನಿತ್ಯಸುಖನು 13* * *ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾ ಪ.ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆತವಕದಿ ಬರುವತ್ತಿತ್ತವರನ್ನು ನೋಡದೆ 1ಅಂದಣವೇರಿ ಮತ್ತೊಂದ ತಾ ನೋಡದೆಒಂದೇ ಮನದಿ ಬೇಗ ಮುಂದೆ ಬರುವನಮ್ಮಾ 2ಬಾಲಬ್ರಹ್ಮಚಾರಿ ಶಿಲೆಯಂತಿರುವನುಅಲೋಚಿಸಲಿವ ಮೂಲಪುರುಷನಮ್ಮಾ 3ಪುಟ್ಟನಾದರು ಜಗಜಟ್ಟಿಯಂತಿರುವನುದಿಟ್ಟನಿವನವನ ಮುಟ್ಟಿ ನೋಡಮ್ಮ 4ಊರ್ವಶಿ :ನಾರೀ ಇವನೀಗಹೊಂತಕಾರಿಲೋಕಕ್ಕಾಧಾರಿಪ.ಕೊಬ್ಬಿದ ದೈತ್ಯರಿಗೀತನೆಕಾಲಹಬ್ಬುವದಾತ್ಮಕ್ಕೀತನೆ ಮೂಲಉಬ್ಬುವ ಹರಿಯೆಂದರೆ ಮೈಯೆಲ್ಲಒಬ್ಬನಿಗಾದರೂ ಬಗ್ಗುವನಲ್ಲ 1ಎಲ್ಲಿರುವನುಹರಿಅಲ್ಲಿಹನೀತಬಲ್ಲಿದನಾರಾಯಣಗಿವ ದೂತಖುಲ್ಲರ ಮನಕತಿ ಝಲ್ಲೆನುವಾತಸುಲ್ಲಭನೆಯಿವ ಮುಂದಿನ ಧಾತ 2ಭೇದವಿಲ್ಲೆಂಬುದವರಿಗೆಯಿವ ತುಂಟಮೇದಿನಿಬಾಧಕರಿಗೆ ಯಿವ ಕಂಟಆದಿ ಮೂರುತಿ ಕೇಶವನಿಗೆಬಂಟಮಾಧವಭಕ್ತರಿಗೀತನೆ ನೆಂಟ 3ದುರಿತಾರಣ್ಯದಹನ ನಿರ್ಲೇಪವರವೆಂಕಟಪತಿಯಿದಿರೊಳಗಿಪ್ಪಪರಮಾತ್ಮನ ಪರತತ್ತ್ವ ಸ್ವರೂಪಮರೆಮಾತೇನಿವ ದೊರೆ ಹನುಮಪ್ಪ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಿಂದುಮಾಧವರಮಾಧವಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಬಿಂದುಮಾಧವಸುಬಂಧು ದೀನಭವ|ಬಂಧತರಣ ಗೋವಿಂದ ಶ್ರೀ ಕೃಷ್ಣ1ಮಂದರಾದ್ರಿಧರಕುಂದರದನಮಹಾ |ಸುಂದರಸಿರಿಹೃನ್ಮಂದಿರ ವಾಸಾ2ಕದ್ದಿಕಾರ ಸುರವೃಂದ ಸುಪೂಜಿತ |ಇದ್ದಿ ದೇವ ಕಚವೃಂದ ಸಮೇತಾ3ನಂದ ನಂದನ ಸುಸಿಂಧುರ ವರದ ಮು-ಕುಂದಗೋಪಿಕಾ ವೃಂದ ವಿಹಾರಾ4ಮಲ್ಲಿಖೇಡ ಸ್ಥಳ ಹೊಳೆ ಕಾಗಿಣಿ ಥಡಿಬಳಿಗೆ ರಾಯರು ಕುಳಿತಲ್ಲಿರುವ5ಪಂಕಜಾಕ್ಷ ಮೀನಕೇತು ಜನಕ ಗರು-ಡಾಂಕಶಶಿಧ್ವಜ ಶಂಕರಪ್ರಿಯ ಹರಿ6
--------------
ಜಕ್ಕಪ್ಪಯ್ಯನವರು
ಬಿನ್ನಪಲಾಲಿಸಯ್ಯ ಭಕ್ತಪರಾಧ-ವನ್ನು ಕ್ಷಮಿಸಬೇಕಯ್ಯ ಪ.ಅನ್ಯಾಯ ಕಲಿಕಾಲಕ್ಕಿನ್ನೇನುಗತಿಸುಪ್ರ-ಸನ್ನ ನೀನಾಗು ಸುಬ್ರಹ್ಮಣ್ಯ ಪಾವನಚರಿತ ಅ.ಪ.ಮಕ್ಕಳ ಮಾತೆಯಂದದಿ ಕಾಯುವ ಮಹ-ದಕ್ಕರದಿಂದ ಮುದದಿಸೊಕ್ಕಿನಿಂ ನಡೆವರ್ಗೆ ತಕ್ಕ ಶಿಕ್ಷೆಯನಿತ್ತುರಕ್ಕಸಾರಿಯೆ ಹಿಂದಿಕ್ಕಬ್ಯಾಡೆಮ್ಮನುದಿಕ್ಕಿಲ್ಲದವರ ಧಿಕ್ಕಾರ ಗೈದರೆಮಿಕ್ಕವರೆಮ್ಮನು ಲೆಕ್ಕಿಪರಿಲ್ಲ ದೇ-ವರ್ಕಳಮಣಿ ನಿನಗಕ್ಕಜವಲ್ಲವುಕುಕ್ಕುಟಧರವರ ಮುಕ್ಕಣ್ಣತನಯ 1ಜಾತಿ ನೀತಿಯನು ಬಿಟ್ಟು ಡಾಂಭಿಕತನದರೀತಿಗೆ ಪ್ರೀತಿಪಟ್ಟುಸೋತು ಹಣವ ಕೊಟ್ಟು ಖ್ಯಾತರೆಂಬುವಗುಟ್ಟುಮಾತು ಮಾತಿಗೆ ತೋರಿ ಘಾತವ ಗೈವರ್ಮೀರಿಯಾತುಧಾನರಗುಣಯಾತಕ್ಕರಿಯದುಭೂತೇಶ್ವರಸಂಜಾತ ಸುರನರ-ವ್ರಾತಾರ್ಚಿತ ಪುರಹೂತಸಹಾಯಕನೂತನಸಗುಣವರೂಥಪುನೀತ2ಯಾವ ಕರ್ಮದ ಫಲವೋ ಇದಕಿ-ನ್ಯಾವ ಪ್ರಾಯಶ್ಚಿತ್ತವೋಯಾವ ವಿಧವೊ ಎಂಬ ಭಾವವರಿತ ಪುರುಷಈ ವಸುಧೆಯೊಳಿಲ್ಲ ಶ್ರೀವಾಸುದೇವ ಬಲ್ಲದೇವ ಲಕ್ಷ್ಮೀನಾರಾಯಣನಪಾದಸೇವಕನೀ ಮಹಾದೇವನ ಸುತ ಕರು-ಣಾವಲಂಬಿಗಳಕಾವನಮ್ಮಯ ಕುಲ-ದೇವ ವಲ್ಲೀಪತಿ ಪಾವಂಜಾಧಿಪ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಿನ್ನಹಕೆ ಬಾಯಿಲ್ಲ ಎನಗೆ ಅದರಿಂದ |ನಿನ್ನ ಮರೆದೆನೊ ಸ್ವಾಮಿ ಎನ್ನ ಕಾಯಯ್ಯ ಪಅನ್ನಮದ ಅರ್ಥಮದಅಖಿಳವೈಭವದ ಮದ |ಮುನ್ನ ಪ್ರಾಯದ ಮದವುರೂಪಮದವು ||ತನ್ನ ಸತ್ವದ ಮದ ಧರಿತ್ರಿ ವಶವಾದ ಮದ |ಇನ್ನು ಎನಗಿದಿರಿಲ್ಲವೆಂಬ ಮದದಿ 1ಶಶಿವದನೆಯರ ಮೋಹಜನನಿ- ಜನಕರ ಮೋಹ |ರಸಿಕ ಭ್ರಾಂತಿಯ ಮೋಹ ರಾಜಮನ್ನಣೆ ಮೋಹ ||ಪಶು ಮೋಹ ಶಿಶುಮೋಹ ಬಂಧುವರ್ಗದ ಮೋಹ |ಹಸನುಳ್ಳ ವಸ್ತ್ರ ಆಭರಣಗಳ ಮದದಿ 2ಇಷ್ಟ ದೊರಕಿದರೆ ಮತ್ತಿಷ್ಟು ಬೇಕೆಂಬಾಸೆ |ಅಷ್ಟು ದೊರಕಿದರೆ ಮತ್ತಷ್ಟರಾಸೆ ||ಕಷ್ಟ ಜೀವನದಾಸೆಕಾಣಾಚಿಕೊಂಬಾಸೆನಷ್ಟ ಜೀವನ ಬಿಡಿಸೆಪುರಂದರವಿಠಲ3
--------------
ಪುರಂದರದಾಸರು
ಬಿಲ್ವೊದೇಶ್ವರ ಶ್ರೀ ಮದುಮಾವಲ್ಲಭಸಂತತ ಪಾಲಯಮಾಂಪ.ನಾಕಪವಂದ್ಯ ಕೃಪಾಕರ ಪಾಪನೇಕ ನಿವಾರಕ ಮೂಕಹರಲೋಕೇಶೇಶ ನಿಶಾಕರ ಶೇಖರಶ್ರೀಕರಕಾಯ ಪಿನಾಕಧರ 1ಭುಜಗಾಭರಣ ಗಜಮದಹರಣಗಜಚರ್ಮಾಂಬರ ಸುಜನವರದ್ವಿಜರವಿ ವೃಷಧ್ವಜಾಸಮಲೋಚನರಜನೀಚರ ತ್ರಿಪುರಜಮಥನ 2ದುರ್ಧರ್ಷಾಂಧಕ ಮದರ್Àಕ ಶಂಭೊನಿರ್ದೋಷ ಶ್ವೇತಾದ್ರಿ ಪ್ರಭೊಸ್ವರ್ಧುನಿಸಹಿತ ಕಪರ್ದಿನ್ ಶಿವಶಿವಊಧ್ರ್ವ ಪಟಾರ್ಚಕವದನಭೋ3ಗರಕಂಧರ ವೃಷಚರ ಅದ್ಭುತ ನಿಕರಪರಿಚರ ಪಾಂಡುರಗಾತ್ರಶಿರಮಾಲಾನ್ವಿತ ಸ್ಫುರತ್ಕಪಾಲಿನ್ಹರಹರಭವಸುಖಕರ ಮೂರ್ತೆ4ಶಂಕರ ಸುಗುಣಾಲಂಕೃತ ಭಕ್ತಾತಂಕವಿದೂರಕ ಶಂಖ ರಥಾಂಗಾಂಕಿತ ಪ್ರಸನ್ವೆಂಕಟನಾಯಕಕಿಂಕರಜನಪ್ರಿಯ ತ್ವಂ ಕೃಪಯಾ5
--------------
ಪ್ರಸನ್ನವೆಂಕಟದಾಸರು
ಬೇಡಬೇಡೆಲಾ ಕೊಡಬೇಡೆಲಾ ಸೀರೆಬೇಡಿದರೆ ದೇವರಾಣೆಲಾ ಪಇನ್ನೆರಡು ಗಳಿಗೆಗೆ ನಿನ್ನ ಉಂಬುವ ಹೊತ್ತು |ಅನ್ನದಕಾಂಕ್ಷೆ ಹುಟ್ಟದೇನಲಾ ||ಮನ್ನಿಸಿ ಬೇಡಿದರೆ ಉನ್ನತಾಹಂಕಾರ- |ವನ್ನು ತೋರುವೆ ಇಟ್ಟುಕೊಳ್ಳೆಲಾ 1ವ್ಯಾಳೆವಾಗಲು ಯಮ್ಮನ್ನಾಳುವವರೇ ಬಹರು |ಹೇಳಿ ನಿನ್ನನೇ ಕೊಲ್ಲಿಸುವೆವೇವಲಾ ||ಖೂಳಪೂತನಿ ಕೊಂದ ಧಾಳಿ ಬಲ್ಲರವರು |ಬಾಲಕನೆನ್ನರು ನಿನ್ನಗೆಲಾ 2ಬತ್ತಲರಾಗಿ ಜಲ ವ್ಯರ್ಥ ಸೇರಿದಿರೆಂದು |ವತ್ತಿ ನಮ್ಮನು ಕೊಲ್ಲರವರೆಲಾ ||ಹತ್ತೆಂಟು ತಲೆಯಿಂದ ವಸ್ತ್ರರಹಿತ ಸ್ನಾನ |ನಿತ್ಯನಮ್ಮೊಳು ನಡತೆಲಾ 3ಕರಕರಿಗಾರದೆ ಮೈಮರೆದು ಊರಿಗೆ ಹೋಗಿ |ಭರದಿಂದೆಶೋದೆಗೆ ದೂರೆವೆಲಾ ||ತರುಣಿಯರೆಲ್ಲ ಹಿಂದೆ ಮೊರೆಯಿಡೆ ಲಾಲಿಸಿ |ಒರಳಿಗೆ ಕಟ್ಟಿಸಿದ್ದೆವೆಲಾ 4ಲಲನೆಯರೆಲ್ಲ ಕೂಡಿ ಜಲಬಿಟ್ಟು ಬಂದರೆ |ಕೊಳುವೆ ನಿನ್ನಯ ಪ್ರಾಣಾ | ತಿಳಿಯಲೊಗಳಿಸಿ ಸಂಸಾರವ ಸಲುಹುತಿಹರು ನಾವೇ |ಕಳವೇನೊ ಪ್ರಾಣೇಶ ವಿಠಲ 5
--------------
ಪ್ರಾಣೇಶದಾಸರು
ಬ್ರಹ್ಮಾಂಡದೊಳಗಿದ್ದ ಚರ್ಯೆಯ ತಂದು |ಪಿಂಡಾಂಡದೊಳಗೆಲ್ಲ ತೋರಬೇಕೆಂದು |ಪುಂಡಲೀಕನ ಭಕ್ತಿಗೆ ತಾನೆ ಬಂದು |ಪಾಂಡುರಂಗ ನಾಮ ರೂಪದಿ ನಿಂದೂ ಜೋ ಜೋ ||ಜೋ ಜೋ ಜೋ ಶ್ರೀ ಗಂಗಾಧರನೆ ಜೋ ಜೋ ಜೋಶ್ರೀ ವತ್ಸಧರನೇ ಜೋ ಜೋ ಜೋ ಶ್ರೀ ಶಶಿಧರನೇ |ಜೋ ಜೋ ಜೋ ಶ್ರೀ ದತ್ತಾತ್ರೇಯನೇ ಜೋ ಜೋ ಜೋ1<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತನ್ನ ವಾಯು ಸಾಧು ಸಂತರೊಳಾಡಿ |ತನ್ನ ಸ್ಫುರಣಿ ಮಾಯಗಳಿತವೆ ಕೂಡಿ |ತನ್ನ ಸ್ವಸುಖವೆ ಬೋಧರಿಯೆತ್ತಿ ನೋಡಿ |ತನ್ನಿಂದುತ್ಪತ್ತಿ ಸ್ಥಿತಿ ಲಯವು ತೋರಡಗಿ | ಜೋ ಜೋ2ನಿತ್ಯಶುದ್ಧಬುದ್ಧಸರ್ವಾಂತರಾತ್ಮಾ |ಸತ್ಯ ಶಾಶ್ವತ ಸಾಧು ದಯ ಸಾರ್ವಭೌಮಾ |ಪ್ರತ್ಯಾತ್ಮ ಪರಮಾತ್ಮ ಐಕ್ಯಮೇಕಾತ್ಮಾ |ನಿತ್ಯಅಪರೋಕ್ಷನಿರ್ಗುಣ ನಿಜ ಧಾಮಾ ಜೋ ಜೋ3ಕಾಶೀ ನಿವಾಸಿ ವಿಶ್ವೇಶ ವೃಷಾತ್ಮಾ |ನಾಸಿಕತ್ರ್ಯಂಬಕ ನೀನೆ ಮಹಾತ್ಮಾ |ವಾಸುದೇವನ ಪ್ರಾಣ ಪ್ರಿಯ ಪರಮಾತ್ಮಾ |ಕ್ಲೇಶಭಕ್ತರಿಗಾಗಿ ವಾಸಿಸುವಾತ್ಮಾ ಜೋ ಜೋ4
--------------
ಜಕ್ಕಪ್ಪಯ್ಯನವರು
ಬ್ರಹ್ಮಾದಿಕರನು ಪರಬ್ರಹ್ಮದಿಚ್ಛಿಲಿ ಪಡೆದಳಮ್ಮಪರಂಜ್ಯೋತಿ ಪರಬ್ರಹ್ಮಿಣೀಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಣಿ ಕಲ್ಯಾಣಿಫಣಿವೇಣಿ| ರುದ್ರಾಣಿಶರ್ವಾಣಿಸುವಾಣಿ ಗೀರ್ವಾಣಿ ವರದೆ | ಗಾಣಿತ್ರಿನಯನ ಅಜನ ರಾಣಿ ಶಂಕರ ಪ್ರಾಣಿ ಪುಸ್ತಕಪಾಣಿನಾರಾಯಣೀ1ಅಂಬೆ ಲೋಕಾಂಬೆ ಭ್ರಮರಾಂಬೆ ಮೂಕಾಂಬೆಹರಡಿಂಬೆ ಪ್ರತಿಬಿಂಬೆ ಕುಚಕುಂಭೆ ಸಾಂಬೆ |ರಂಭೆ ಹೇರಂಬೆ ಶರಣೆಂಬೆ ವರಗೊಂಬೆ ಭಕ್ತರಬೊಂಬೆ ಹೊಳೆವ ಗೊಂಬೆ2ಕಾಳೆ ಹಿಮ ಬಾಳೆ ಭೂ ಪಾಳೆ ಕುಸುಮಾಳೆವನಮಾಳೆಕಂದರಮೌಳೆ ಕುಟಿಲ ಕುರುಳೆ |ಕೇಳಿನಿನ್ನಯ ಲೀಲೆ ಕಾಲಿಗೆರಗುವರಘವ ಮೂಲಕೆತ್ತೆತ್ತಿಬಿಸುಟುವ ಕೃಪಾಳೆ3ಬೇಕೆಂಬೊ ಬಯಕಿತ್ತು ಸಾಕು ಸಾಕೆನಿಸುವರುಲೋಕದೊಳಗ್ಯಾರುಂಟು ನಿನ್ನ ಬಿಟ್ಟು |ಏಕೆ ವಿವೇಕೆ ಎನ್ನೀ ಕುಟಿಲಗುಣನೋಡ ಬೇಕೆಕ್ಷಮೆಮಾಡಿದರೆ ಮೈಯುಳಿಯುವದು4ಕಾಯಜನ ಮಾತೆ ಸಿತಕಾಯನರ್ಧಾಂಗಿ ಜಗಕಾರ್ಯನಿರ್ಮಿಸುವ ನರರುದಿಸಿ ಮೂರು || ಕಾಯಡಗಿ ಹೋದನಿಷ್ಕಾಯ ಪರಶಕ್ತ್ಯೆನ್ನ ಕಾಯ್ದುಕೊಳ್ಳೆಲೆತಾಯಿ ಸ್ತ್ರೀಯರನ್ನೆ5ಸಾರಿದರಹೊರೆವಸಂಸಾರದೊಳು ಮುಳುಗಿದರೆತಾರಿಸುವ ತವಕದಿಂತರುಳೆತರುಣೀ |ಸೇರಿಸುತ ತಿರುಗಿ ತನು ಬಾರದ್ಹಾದಿಗೆ ಒಯ್ದುತಾರಿಸುವ ಸ್ಥಿರದಿ ನೀ ತೋಯಜಾಕ್ಷಿ6ಕುಸುಮಸರ್ಪಾದಿಗಳು ಕುಸುಮಗಂಧಿಯ ಪದಕೆಕುಸುಮವೃಷ್ಟಿಗವು ದೇವಿಯ ಸುಕೃತಿಗಳೂ |ಕುಸುಮದೊಳು ಕರಕಂಜ ಕುಸುಮದೊಳುವರವಿಡಿದ ಕುಸುಮಶರರಿಪುಶಂಕರನ ಶಂಕರೀ7
--------------
ಜಕ್ಕಪ್ಪಯ್ಯನವರು