ಒಟ್ಟು 6014 ಕಡೆಗಳಲ್ಲಿ , 123 ದಾಸರು , 4195 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರುದೆ ಭ್ರಮೆಯಗೊಂಡ್ಯೊ ಮರುಳ ಮನುಜ ನೀನು ಧ್ರುವ ಎರವ್ಹಿನ ಮನೆಯೊಳು ಮರಹು ಮರೆಯಗೊಂಡು ಗರವು ಹಿಡಿದು ನಿನ್ನ ಕುರುಹು ತಿಳಿಯಲಿಲ್ಲ ಹರೆದು ಭ್ರಾಂತಿಗೆ ಬಿದ್ದು ಸೊರಗಿ ದಣಿದೆಲ್ಲ 1 ಏನು ಮರುಳಗೊಂಡ್ಯೊ ಹೀನಯೋನಿಯ ಮುಖಕೆ ಕಾನನದೊಳು ಪೊಕ್ಕು ಖೂನ ತಿಳಿಯದೆ ನಿನ್ನ ಜನುಮಜನುಮ ಬಂದ್ಯೊ ಜ್ಞಾನಶೂನ್ಯದಲಿ 2 ನಾನು ನನ್ನದು ಎಂದು ಏನು ಗಳಿಸಿಕೊಂಡ್ಯೊ ಸ್ವಾನುಭವದ ಸುಖ ಅನುಭವಿಸದೆ ಹೋಗಿ ಸ್ವಾನ ಸೂಕರಯೋನಿ ಮುಖಸೋಸಿದೆಲ್ಲ 3 ಹೊನ್ನು ಹೆಣ್ಣಿನ ಸವಿಯು ಬಣ್ಣಿಸಿ ನೀ ಬಯಸಿದಲ್ಲ ಮಣ್ಣೇ ಮಾಣಿಕವೆಂದು ದಣ್ಣನೆ ದಣುವರೆ ಕಣ್ಣಗೆಟ್ಟರೆ ಬ್ಯಾಡೊ ತನ್ನೊಳರಿಯದೆ 4 ಮುತ್ತಿನಂಥ ಜನುಮ ವ್ಯರ್ಥಗಳಿಯಬ್ಯಾಡ ಪಾದ ಬೆರ್ತು ಮಹಿಪತಿ ಪೂರ್ಣ ಸಾರ್ಥಕ ಮಾಡಿಕೊಳ್ಳೊ ಗುರುತುವರಿತು ನೀ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬರುವ ಸಂಭ್ರಮವನ್ನು ನೋಡಿ ಪರಮ ಕರುಣಾಕರೆಯ ಪಾಡಿ ಪ. ಹೆದ್ದಾರಿ ಮಧ್ಯದಿ ಸ್ವಾರಿ ಬರುತಾ ದಾರಿದ್ರ್ಯ ದೈನ್ಯವೋಡಿಸುತಾ ಸ್ವರ್ಣಧಾರೆಯನು ಸರ್ವತ್ರ ತರುತಾ ಸಾರಿಸಾರಿಗೆ ವರವ ಕೊಡುತ 1 ಶುಕ್ಲನಭಮಾಸಭೃಗುವಾಸರದಲಿ ಶುಭಲಗ್ನಸಂಜೆ ವೇಳ್ಯದಲಿ ವಿಭವದಲಿಪೂಜಿಸುವುದೆಂದು ವಲ್ಲಭೆಗೆಂದ ವಚನ ತಿಳಿದಿಂದು 2 ಲಕ್ಷ್ಮೀದೇವಿಯನು ತನ್ನ ದಾಸರನು ಮೀಸಲಳಿಯದ ಸೌಖ್ಯಗಳನು ಮೆರೆವುದನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಲವಂತರೋಳಗೆ ಬಲವಂತ ಹನುಮಾ | ನಳಿನಸಂಭವ ಕರ್ತನಾದ ಮಹಿಮಾ ಪ ಗಾವುದೈದತ್ತು ಸಾವಿರದಲಿಹ ಪರ್ವತವ | ಝಾವ ಮೂರಕೆ ತಂದ ನೋಡಿನೇಮಾ1 ಪೋಗಲಾಗಮ್ಯವಾಗಿದ್ದ ಸ್ಥಳವನೇ ಪೊಕ್ಕು | ಸೌಗಂಧಿಕಾ ಪುಷ್ಪ ತಂದ ಭೀಮಾ2 ವೇದಾಂತ ಸಾಗರದಿ ಖಳನಬಳಿಪ ಹಲವು | ದು- ರ್ವಾದಿ ಜಲಚರರ ಬಾಯಿಬಿಗಿದ ಮಹಿಮಾ 3 ಗುರು ಮಹೀಪತಿ ಸ್ವಾಮಿ ರಾಮಚಂದ್ರ ಪ್ರೀಯ | ದುರಿತೌಘದ್ಯುಮಣಿ ಎನಿಪ ನಾಮಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಲು ಚಂದ ಮಹದಾನಂದ ಶ್ರೀಹರಿ ಭಜನೆ ಪ ಬಲು ಚಂದ ಬಲು ಚಂದ ಮಹದಾನಂದ ಜಲಜನಾಭನ ನಾಮ ನಲಿನಲಿದ್ಹೊಗಳ್ವುದು ಅ.ಪ ಬಲಿಯ ಕಾಯ್ದನ ನಾಮ ಬಲು ಚಂದ ಲಲನೆಗೊಲಿದನ ಧ್ಯಾನ ಆನಂದ ಕಲುಷಹರಣ ಕರಿಪಾಲನೆಂದೊದರಲು ಗಳಿಲನೆ ಪರಿಹಾರ ಭವಬಂಧ 1 ಮಾವಮರ್ದನನಾಮ ಬಲು ಚಂದ ಗೋವಳರೊಡೆಯನ ಧ್ಯಾನ ಆನಂದ ಗೋವುಪಾಲನೆಂದು ಭಾವಿಸಿ ಕೂಗಲು ಸಾವು ಹುಟ್ಟು ಇಲ್ಲ ಎಂದೆಂದು 2 ಕಾಮಪಿತನ ನಾಮ ಬಲು ಚಂದ ಕಾಮಿತಾರ್ಥನ ಧ್ಯಾನ ಆನಂದ ಭೂಮಿಗಧಿಕ ನಮ್ಮ ಸ್ವಾಮಿ ಶ್ರೀರಾಮನ ಪಾದ ನೇಮದಿ ನುಡಿಯೆ ಮುಕ್ತಿಪದ ಆನಂದ 3
--------------
ರಾಮದಾಸರು
ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ
ಬಲುದೊಡ್ಡ ಧೊರಿ ದೊರಕಿದೆನಗೊಬ್ಬ ನೋಡಿ ಸಲಹುತಿಹ್ಯ ಸಕಲಾರ್ಥ ಸಾರಾಯ ನೀಡಿ ಧ್ರುವ ದೊರೆಗಳಾದವರಿಗೆಲ್ಲ ಈತನೆ ದೊರೆಯು ಚರಣಸೇವೆಯಲ್ಲಿಹಳು ಅಖಂಡ ಸಿರಿಯು ಸುರಮುನಿಜನರ ಪಾಲಿಸುತಿಹ್ಯ ಪರೋಪರಿಯು ಸರಿಸಿಜೋದ್ಭವನುತಗಿಲ್ಲ ಸರಿಯು 1 ಅನಂತಕೋಟಿ ಬ್ರಹ್ಮಾಂಡ ನಾಯಕನೆಂದು ಅನಂತಸಿದ್ಧಿ ವಾಲ್ಗೈಸುತಿಹವು ಅನಂತಗುಣ ಪರಿಪೂರ್ಣ ಶ್ರೀ ಹರಿಯೆಂದು ಅನಂತಶ್ರುತಿ ಸ್ಮøತಿ ಸಾರುತಿಹ್ಯವು 2 ಅನೆಮೊದಲಿರುವೆÉ ಕಡೆ ಅನುದಿನಾಹಾರವಿತ್ತು ಜನವನವಿಜನದಿ ರಕ್ಷಿಸುತಿಹನು ದೀನ ಮಹಿಪತಿಸ್ವಾಮಿ ಭಾನುಕೋಟಿತೇಜ ತಾನೆ ತಾನಾಗೆನಗೆ ಸಲಹುತಿಹ್ಯನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಲುದೊಡ್ಡವನೇನೆಪ ಅಕ್ಕಕÉೀಳುವರೇನೆ ಅ.ಪ ಕೃಷ್ಣಸರಸಿಜೋದ್ಭವಗಿತ್ತನೆ ಗಾರುಡಿವಿದ್ಯವೆ 1 ಕೃಷ್ಣಸುರರಿಗೆ ಹಂಚಿಚನೆ ಅಂಗನೆಯಾಗಿ ಹೀಂಗೆ ಮಾಡೋದು ವಂಚನೆಯಲ್ಲವೆ ಇದು ವಂಚನೆಯಲ್ಲವೆ 2 ಭೂಮಿಯನೆತ್ತಿದನೆ ಇದುಮೋಸದ ವಿದ್ಯವೆ 3 ಕೃಷ್ಣನು ನರಹರಿ ಆದನೆ ಇದು ಘೋರಕೃತ್ಯವೆ 4 ಕೃಷ್ಣ ಇಂದ್ರನ ಸಲಹಿದನೆ ಇದು ಯಾತರೆ ನ್ಯಾಯವೆ 5 ಕೃಷ್ಣ ಭೂಪರ ತರಿದನೆ ಅವನು ಘಾತುಕನಲ್ಲವೆ 6 ಕೃಷ್ಣ ಅಡವಿಯೊಳ್ ಚರಿಸಿದನೆ ಒಡೆಂiÀiರ ಲಕ್ಷಣವೆ 7 ಕೃಷ್ಣಗೋಪೆರ ಕೂಡಿದನೆ ಪಾಪವಲ್ಲವೆ 8 ಕೃಷ್ಣ ದೈತ್ಯರ ನಳಿಸಿದನೆ ಭಂಡನಲ್ಲವೇ 9 ಕೃಷ್ಣ ಧರ್ಮವನುಳುಹುವನೆ ಅಕ್ಕ ಕೋಪ ಬೇಡವೇ 10 ಕೃಷ್ಣವಿಠಲನೆ ಅವನು ಶ್ರೀ ಕೃಷ್ಣವಿಠಲನೆ ಅತನು ಶ್ರೀಕೃಷ್ಣವಿಠಲನು ಅವನಾದರೆ ಜೀಯನೆ ಅವನೆಮಗೆ ಅಕ್ಕ ಜೀಯನೆ ಅವನೆಮಗೆ11
--------------
ಕೃಷ್ಣವಿಠಲದಾಸರು
ಬಲುಸೂಕ್ಷ್ಮ ಗುರು ಗೂಢವಿದ್ಯ ನೆಲೆವಂತಗಿದು ನಿಜವಾಗುದು ಸಾಧ್ಯ ಧ್ರುವ ಕಣ್ಣಿನ ಕೊನೆ ಮುಟ್ಟಿನೋಡಿ ನಿಜಖೂನ ಉನ್ಮನವಾಗಿ ಬೆರೆದಾಡುವ ನಿಜಸ್ಥಾನ ಚೆನ್ನಾಗ್ಯಾದಾನಂದ ಘನ ಭಿನ್ನವಿಲ್ಲದೆ ಮಾಡಿ ನಿಜಗುರು ಧ್ಯಾನ 1 ಜಾಗ್ರ ನಿದ್ರೆಯ ಮಧ್ಯ ಅರವಿನೊಳು ನಿಜಗೂಡಿ ಶೀಘ್ರ ಸಿದ್ಧಾಂತನುಭವಿಸಿ ತಾಂ ನಿಜಮಾಡಿ ಅಗ್ರ ಗುರುಪಾದವನು ಕೂಡಿ ಶುಕ ಮುನಿಗಳಿಗಿದೆ ನೋಡಿ 2 ಶಿರದಲಿ ಕರವಿಟ್ಟು ನೋಡಿ ನಿಜವರ್ಮ ಹರಿಸಿ ಅನೇಕ ಜನ್ಮಾಂತರದ ದುಷ್ಕರ್ಮ ತರಳಮಹಿಪತಿಗಿದೆ ಸುಬ್ರಹ್ಮ ಗುರು ಭಾಸ್ಕರಸ್ವಾಮಿ ಶ್ರೀಪಾದ ಧರ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಲ್ಲನೆಂಬೊ ಮಮಕಾರ ಬಿಡು ಎಲ್ಲೆಲ್ಲಿ ಇರುವ ಶ್ರೀಹರಿಯ ನೋಡು ಒಲಿಸಿ ಒಲಿಸಲು ನಿಲುವುದು ಜಿತವಾಗಿ ಹಾಡು ಪ ನೋಡಿದ್ದನ್ನೆ ನೀ ನೋಡು | ನಿನ್ನೆ ನೋಡಿದೆನೆಂಬೊ ಖೋಡ್ಯಾಲಸ್ಯ ಬಿಡು ಹುಡುಕಿ ತತ್ವಂಗಳ ಸಮನಾಗಿ ಜೋಡು ನಡುವೆ ತತ್ಪತಿಯ ಒಡೆಯನ ಇಡು 1 ಕೇಳಿದ್ದನ್ನೇ ನೀ ಕೇಳು | ನಿನ್ನ ಆಳುವರ ಪಾದಕೆ ಬೀಳು ಹಳೆವ ವಾರ್ತಿಗೆ ಅಳುಕುವ ಮನ ಸೀಳು ಬಲು ಪರಿಯಲಿ ಕಾಮ ಕ್ರೋಧಂಗಳ ಹೂಳು 2 ಅಭಿವೃದ್ಧೀಗೆ ಬರುವುದು ಲೋಭ ನಿಭಾಯಿಸಲು ಅದು ಹೊರುವುದು ಲಾಭ ಸಭೆಯೊಳು ಪೇಳಬ್ಯಾಡ ಸ್ವಭಾವ ಇಭವರದನಾಗುವ ಅಭಾವ 3 ನರ ಜನ್ಮವೇ ಬರುವೊದು ಕಷ್ಟ ಹರಿ ಸರ್ವೋತ್ತಮೆಂಬೋದೆ ಇಷ್ಟ ಸ್ಥಿರವಲ್ಲ ತ್ವರಿತ ಮಾಡೆಲೊ ಭ್ರಷ್ಟ ಅರಿತವರ ಕೂಡೆ ನಿರತಾಡು ಶ್ರೇಷ್ಠ 4 ಅಂಕುರಾವು ಪುಟ್ಟಿಹದೀಗ ಬಿಂಕದಿಂ ಪರಿಪಾಲಿಸೊ ಬೇಗ ಶಂಕರನುತ ವಿಜಯ ರಾಮಚಂದ್ರವಿಠಲನ ಪದ- ಪಂಕಜಕೆ ಅಳಿಯಂತೆ ಸಾಗು 5
--------------
ವಿಜಯ ರಾಮಚಂದ್ರವಿಠಲ
ಬಲ್ಲಿದನಲ್ಲೇನು ಶ್ರೀಹರಿ ಬಲ್ಲಿದನಲ್ಲೇನು ಪ ಬಲ್ಲಿದನಲ್ಲೇನು ಖುಲ್ಲಮನವೆ ತಿಳಿ ಎಲ್ಲ ಲೋಕಗಳ ನಲ್ಲನಾಗಿಹ್ಯನೀತ ಅ.ಪ ಕಡುದಯದಿಂದಿನ್ನು ಪಿಡಿದು ಬಿಡದೆ ಪಾಂಡವರನ್ನು ಪೊಡವಿನೆಲ್ಲ ಒಂದೆ ಕೊಡೆಯಿಂದಾಳಿಸಿದ ಎಡರು ತಾರದಂತೆ ಒಡೆಯ ಮುಕ್ಕುಂದನೀತ 1 ಧೂರ್ತ ಹಿರಣ್ಯಕನ ಕರದಿಂ ಭಕ್ತ ಪ್ರಹ್ಲಾದನ್ನ ಸ್ವಸ್ಥದಿಂದ ದಯವಿತ್ತು ಕಾಯ್ದನಿಗೆ ದಾರು ಸರಿ ಅರ್ತುನೋಡಲೀತ 2 ಉರಿಹಸ್ತ ಪಡೆದವನ ಕ್ಷಣದಿಂ ಉರುವಿದ ಮಾರಮಣ ಭರದಿಂ ತ್ರಿಪುರರ ಹರಿದಿಯರ್ವ್ರತ ಕೆಡಿಸ್ಹರನ ಮೊರೆಯ ಕೇಳಿ ಸುರರ ಸಲಹಿದೀತ 3 ಮೀರಿದ ಅಸುರರನು ತರಿದು ಸಾರುವ ಬಿರುದನ್ನು ಅ ಪಾರ ಶೂರ ದನುಜಾರಿ ಭಕ್ತ ಸಹಕಾರಿ ಶೌರಿ ನಿಜ ಮೂರು ಜಗದಿ ಈತ 4 ಜಡಮತಿ ಮಾನವರ ನುಡಿಗಳು ದೃಢಲ್ಲೆಲೊ ಪೂರ ಪೊಡವಿಗಧೀಶ ನಮ್ಮ ಒಡೆಯ ಶ್ರೀರಾಮನಡಿ ದೃಢದಿ ನಂಬು ಭವತೊಡರ ಕಡಿವನೀತ 5
--------------
ರಾಮದಾಸರು
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಬಾ ಕೃಪಾಕರೆ| ಮೋದದಿ| ಬಾ ಕೃಪಾಕರೆ ಪ ತವ ಪಾದವ ನÀುತಿಸುವೆ| ಪೊರೆಯಲು ಮೋದದಿ| ಬಾ ಕೃಪಾಕರೆ ಅ ಪ ಕಮಲದಳಾಂಬಕಿ| ಕಮಲಾನನೆಯೆ| ಕಮಲಜಪಿತನÀ| ಸಹಭವೆಯೆ|| ಕಾಮಿತವೀಯುತ|ಪೊರೆಯಲು ಮೋದದಿ 1 ನಿತ್ಯಕಲ್ಯಾಣಿ|ಭೃತ್ಯರ ಜನನಿ|| ನಿತ್ಯವು ನುತಿಸುವೆ| ಪೊರೆಯಲು ಮೋದದಿ 2 ಭುವನ ಮೋಹಿನಿ| ತ್ರಿಭುವನಜನನಿ|| ಭವಭಯಹಾರಿಣಿ| ಪೊರೆಯಲು ಮೋದದಿ 3
--------------
ವೆಂಕಟ್‍ರಾವ್
ಬಾ ಗೋಪತಿ ಗೋಪನೆ ಮನ್ಮನಕೆ | ತಡಮಾಡುವುದ್ಯಾಕೆಭೋಗಿ ಮದಾಪಹ | ಆಗಮ ವೇದ್ಯನೆ | ನಮಿಸುವೆ ತವಪದಕೆ ಪ ಯೋಗಿ ವರೇಣ್ಯಾ ಅ.ಪ. ನೀರಜ ಸಂಭವಮುರಾರಿಗಳಿಂದಲಿ ಆರಾಧಿಪ ಪದ 1 ನವನೀತ ಚೋರ | ಪಾವನ ಚರಿತ | ಸ್ವರತ ಅನವರತಭುವನೈಕ ವಂದ್ಯ ವಿಶೋಕದಾತ | ಸಮಅಧಿಕ ರಹಿತಅವನಿಜೆ ವಲ್ಲಭ | ತ್ರಿವಿಧರಿ ಗೋಸುಗವಿವಿಧ ರೂಪಂಗಳ | ತಾಳುವ ಖ್ಯಾತ 2 ಹಂಸ ಡಿಬಿಕ ಶಕಟಾರಿ ಮುರವೈರಿ | ಮುಷ್ಠಿಕಮಲ್ಲಾರಿಕಂಸಾರಿ ವತ್ಸಾರಿ ಪರಮ ಉದಾರಿ | ಬಾಬಾರೆಲೊ ಶೌರಿಶಿಂಶುಮಾರ ಸುರ ಸಂಶಯ ಹರಿಸಲು |ಸ್ವಾಂಶದಿ ಜನಿಸುತ ಭಕ್ತರುದ್ಧರಿಸಲು 3 ಕರುಣ ವನದಿ ಶರಣಾಗತ ಪರಿಪಾಲ || ಶಿರಹರ ಶಿಶುಪಾಲತರಳ ದೃವಾದಿಯ ಪೊರೆವುದು ತವಶೀಲ | ಪಾಲಿಸು ಶ್ರೀಲೋಲಕರಣ ನಿಯಾಮಕ ವರ್ಣ ವೇದ್ಯತವಚರಣ ಬಯಸುವೆ ಹೃದಯ ಸದನಕೇ 4 ತೋಂಡ ಬೋವ ಮಾಯಾ ಪಟಲ 5
--------------
ಗುರುಗೋವಿಂದವಿಠಲರು
ಬಾ ಬಾ ಬಾ ಗುರು ದತ್ತಾತ್ರೇಯ ನೀ ಕರುಣಾಮಯಾ ನೀ ತೋರೈದಯಾ ಬಾ ಬಾ ಬಾ ಗುರುವತ್ತಾ ಪರಿ ಹರಿಸೆನ್ನಯ ಮಯಾ ಎರಗುವೆ ಚರಣಕ್ಕೆ ಜೀಯಾ ಕರುಣಿಸುನೀ ಗುರು ರಾಯಾ ಈ ಭವಾ ಈ ಭವಾಬ್ಧಿದಾಂಟಿಸು ಕೈವಲ್ಯ ತೋರಿಸು ದತ್ತಾತ್ರೇಯ ಬಾಳಿನ ಭ್ರಮಯನು ಬಿಡಿಸಿ ಪಾಲಿಸು ಹೃದಯ ನಿವಾಸಿ ನಿನ್ನ ಸ್ವರೂಪವ ತಿಳಿಸಿ ಬೋಧಿಸು ಕುರುಪುರವಾಸಿ ಶ್ರೀ ಗುರÉೂೀ ಶ್ರೀ ಗುರೋ ನಮಿಸುವೆನು ಪ್ರಭೋ ದಯಾಮಯ ದತ್ತಾತ್ರೇಯಾ ಚಿನು ಮಯರೂಪನು ನೀನು ಚಿರನದ್ವೈತನುನೀನು ನೀಡೈ ಚಿತ್ತಕೆ ಶಾಂತಿ ನೀಗಿಸು ಎನ್ನಯ ಭ್ರಾಂತಿ ಆನಂದ ಸಾಗರ ದತ್ತಾತ್ರಯ
--------------
ಶಂಕರಭಟ್ಟ ಅಗ್ನಿಹೋತ್ರಿ