ಒಟ್ಟು 454 ಕಡೆಗಳಲ್ಲಿ , 77 ದಾಸರು , 415 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀ ತಂದೆ ನಾಕಂದನಯ್ಯ ರಂಗಯ್ಯ ಪ ಪಾತಕಿಯು ನಾನೆಂದೆ ಘಾತಕನು ನಾನೆಂದೆ ನೀತಿಗಳ ಕಲಿಸೆಂದೆನೈ ತಂದೆ ನಿನ್ನ ಹಿಂದೆ ಅ.ಪ ತಂದೆ ನೀ ಕರೆತಂದೆ ಎಂದು ನಂಬುತೆ ಬಂದೆ ತಂದೆ ನೀ ಕೈಬಿಟ್ಟು ಹಿಂದೆ ನಿಂದೆ ನಿಂದೆಯಲಿ ನಾನೊಂದೆ ಬಂದೆ ಭವದಲ್ಲಿ ಮಂದರೋದ್ಧಾರ ಗೋಪಾಲ ತಾಪವತಂದೆ 1 ಹಿಂದೆ ಜನ್ಮಂಗಳಲಿ ಬೆಂದು ಬಳಲಿದೆನಯ್ಯ ಇಂದು ನರಜನ್ಮದಲಿ ಬಂದೆನಯ್ಯ ಬಂಧು ಬಳಗವಕಾಣೆ ಕಂದು ಕುಂದಿದೆನಯ್ಯ ಇಂದೀವರಾಕ್ಷ ಸಾನಂದ ಭೈರವೀಪ್ರಿಯಾ2 ಮುಂದಿನಾ ಪಥವಾವುದೆಂದರಿಯೆ ಮದನಾಂಗ ಮಂದಮತಿಯನು ನೀಗಿಸೆಂದೆನುವೆ ರಂಗ ಬಂದ ಸುಖದು:ಖಗಳನೊಂದೆಣಿಸು ನೀಲಾಂಗ ಕರವ ಪಿಡಿ ಮೋಹನಾಂಗ 3 ಎಂದು ತವಪಾದಾರವಿಂದವನು ಸೇರಿಸುವೆ ಅಂದು ಜನ್ಮವು ಸಫಲವೆಂದು ನಂಬಿರುವೆ ಮುಂದೆ ಜನ್ಮಗಳಿಲ್ಲ ಎಂದು ನಾನಂಬಿರುವೆ ಸಂದೇಹವೇತಕೆ ನಿನ್ನ ಸೂತ್ರದೋಲ್ ಮೆರೆದೆ 4 ಮಂದಾಕಿನೀಜನಕ ನಂದಗೋಪನ ಕಂದ ಇಂದೀವರಾಕ್ಷ ಮುಚುಕುಂದವರದಾ ಎಂದೆಂದು ವಂದನೆಯ ಮಾಳ್ಪುದೆನಗಾನಂದ ಇಂದದನು ಕರುಣಿಸೈ ಮಾಂಗಿರಿಯ ಗೋವಿಂದ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ನೊಂದೆನಯ್ಯ ನಂದನಂದನ ಪ. ಹಿಂದು ಮುಂದನರಿಯದಿಂದು ತಂದೆ ನೀನೆ ರಕ್ಷಸೆಂದೇ ಅನನ್ಯಭಾವದೇ ಅ.ಪ. ನೋಡಲಿಲ್ಲ ನಿನ್ನಪದವ ಪಾಡಲಿಲ್ಲ ನಿನ್ನ ಗುಣವ ಮಾಡಲಿಲ್ಲ ನಿನ್ನ ಸೇವೆ ಮೂಢನಂದದಿ ದೂಡಿಸುಜನರ ಸಂಗವನ್ನು ಬೇಡಿ ಕೃಪಣರ ಕರುಣೆಯನ್ನು ಕಾಡುಹರಟೆಯಿಂದ ಕಳೆದೆನಕಟ ಕಾಲಮಂ1 ಉರಿವಕೊಳ್ಳಿಯನ್ನೆ ತುಳಿದೆ ಸುರಿದೆನೀರನುರಿಗೆ ಬರಿದೆ ಹಿರಿಯರುಕ್ತಿಯ ಮೀರಿನಡೆದೆ ಮೆರೆದೆ ಗರ್ವದೆ ಶರಣರನ್ನು ಜರಿದು ನುಡಿದೆ ಪರರ ಹಿಂಸೆಗೈದೆ ಮದದೆ ಪರಮಪಾಪಿಯಾದೆ ನಿನ್ನ ಸ್ಮರಣೆ ಮಾಡದೆ 2 ಅರಿತು ಅರಿಯದಾಚರಿಸಿದಂಥಾ ದುರಿತಗಳನು ಕುರಿತು ಕುರಿತು ಪರಿಪರಿಯೊಳೊರಲುತಿಹೆನು ಪರಮಪುರುಷನೇ ವರದನೆಂಬ ಬಿರುದು ನೆನೆದು ಶರಣುಬೇಡುವ ಕಂದನೆಂದು ಕರವಪಿಡಿದು ಪೊರೆಯೊ ಶೇಷಗಿರಿಯ ವರದನೆ3
--------------
ನಂಜನಗೂಡು ತಿರುಮಲಾಂಬಾ
ನೋಡಿ ದಣಯೆನೊ ರಂಗ ನಾ ಹಾಡಿ ದಣಿಯೆನೊ ನಾ ಜೋಡು ಕುಂಡಲಧರ ನೀನಾಡಿದಾಟಗಳೆಲ್ಲ ಪ. ದೇವಕಿ ನಿನ್ನ ಬಾಲಲೀಲೆ ತೋರೆನಲಾದೇವ ಮೊಸರ ಭಾಂಡವನೊಡೆದ ಭಾವಜನ್ನಯ್ಯ ಕಡೆಗೋಲು ನೇಣಿನ ಸಹ ರುಕ್ಮಿಣೀದೇವಕಿಗ್ಹರುಷವನಿತ್ತು 1 ಅಂದು ಯಶೋದೆ ನಿನ್ನ ಅಂದದ ಮದುವೆಯ ತಂದು ತೋರೆನೆ ವೇಂಕಟನಾಗಿ ಕಂದನೆನಿಸಿ ಬಕುಳೆಗೆ ಮದುವೆಯ ಅಂದದಿ ತೋರಿದೆ ತಂದೆಯಾದವ ಕೃಷ್ಣ 2 ತೊಡೆಯಲೆತ್ತಿ ನಿನ್ನ ಸಡಗರದಿಂದಲಿ ಇಡುವಳೊ ಸಕಲಾಭರಣಗಳ ಮೃಢಸಖ ಶ್ರೀ ಶ್ರೀನಿವಾಸನೆ ಎನ್ನನು ಕಡೆಹಾಯಿಸೆಂದು ಬಿಡದೆ ಧ್ಯಾನಿಪಳೊ 3
--------------
ಸರಸ್ವತಿ ಬಾಯಿ
ನೋಡಿರೆ ನೋಡಿರೆ ನಂದನ ಕಂದನ| ಆಡುವ ಆಟದ ಘನ ಮಹಿಮೆಯನು| ರೂಢಿಲಿ ಶಿಶುವೆಂದವರ ನುಡಿ ಮಾಡುವ ಬಲುಕುಂದಾ ಪ ದುರುಳತನವ ಬಲು ಮಾಡಲೈಶೋಧೆಯು| ತರಳನ ಚರಣವ ನೆರೆ ಕಟ್ಟಿದರೆ| ಒರಳವ ನೆಳೆದೊಯ್ದಾ ಭರದಲಿ ಮರಗಳ ನಡ ಮುರಿದಾ 1 ಸಿಕ್ಕಿದ ಗೋವಳನೆನುತಲಿ ಬಾಲೇರು| ಅಕ್ಕರದಲಿ ಹಿಡಿದೆಳೆತರಲವರಾ| ಮಕ್ಕಳ ರೂಪವನು ಆಗುತೆ ಠಕ್ಕಿಸಿ ಹೋಗುವನು2 ತಂದೆ ಮಹಿಪತಿ ನಂದನ ಪ್ರಭುವಿನಾ| ನಂದನ ಲೀಲೆಯ ಹೇಳಲೆನ್ನಳವೇ| ಒಂದಲ್ಲ ಎರಡಲ್ಲ ನೆಲೆಯನು ಇಂದುಧರನೇ ಬಲ್ಲ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೇ ನಂದ ಕಂದನಾ ನೋಡಲು ಕಣ್ಣಿನ ಪಾರಣಿ ಮಾಡುವಾ ಪ ಸೂರಿಯಾ ನಿಳಿಯಲು ಅಪರದ ಜಾವಕ ಸಾರಿಸಿ ಗೋಧನ ತಿರುಗಿಸುತಾ ವಾರಿಗ ರೆಲ್ಲರು ವಂದಾಗಿ ಹರುಷದಿ ಧೀರನು ದಾರನು ಆಡೂತ ಬರುವಾ 1 ಚಂಡು ಬಗರಿ ಚಿಣಿ ಕೋಲು ಚಪ್ಪಳಿಕೈಯ್ಯಾ ಹಿಂಡ ನೆರೆದು ಹಂಬಲಿ ಹಾಕುತಾ ಮಂಡಳದೊಳಗುಳ್ಳ ಆಟವ ನಾಡುತ ಪಂಡರಿ ಕಾಕ್ಷನು ಲೀಲೆಯ ನಲುವಾ 2 ಗೋಧೂಳಿ ತುಂಬಿದ ಗುಂಗುರ ಗೂದಲು ಉದಿಸಿದ ಹಣೆಯಲಿ ಕಿರಿ ಬೆವರು ಬೆರಿಸಿ ಪರಿಪರಿ ಸ್ವರದಲ್ಲಿ ಕೊಳಲವ ನೂದುತ ಕುಣಿಯುತ ನಗೆವುತ ಬರುವಾ3 ಕುಂಡಲ ಹೊಳೆಯುತ ಕಣ್ಣಿನ ಚಲುವಿನ ಕಸ್ತೂರಿ ರೇಖೆಯಲಿ ನೌಲಗರಿಯ ವಾರಿ ದುರುಬವ ಕಟ್ಟಿಸಿ ಪುತ್ಥಳಿ ಬರುವಾ4 ಪೇಂದ್ಯ ಉದ್ದದ ಬಲರಾಯ ಸುಧಾಮರ ವೃಂದದಿ ಮಹಿಪತಿ ಸುತ ಪ್ರೀಯನು ಇಂದು ವದನೆಯರು ಆರುತಿ ಕೊಳುತಲಿ ವಂದದಿ ಮಧ್ಯ ನಾಯಕನಾಗಿ ಬರುವಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡು ಎನ್ನೊಳು ಮಾಡು ದಯವನು ಬೇಡಿಕೊಂಬುವೆ ಮುರಹರ ಪ ರೂಢಿಯೊಳು ಎನ್ನ ಖೋಡಿಮಾಡದೆ ಕಾ ಪಾಡು ಬೇಗ ಭಕ್ತಹಿತಕರ ಅ.ಪ ಪಂಕಜಾಕ್ಷನೆ ಕಿಂಕರನ ಈ ಮಂಕುಗುಣಗಳ ಬಿಡಿಸಯ್ಯ ಶಂಖಸುರಹರ ಶಂಕೆಯಾತಕೆ ಕಿಂಕರನು ನಾಂ ಪಿಡಿ ಕೈಯ 1 ಹಿಂದು ಇಲ್ಲೆನ್ನ ಮುಂದು ಇಲ್ಲಯ್ಯ ತಂದೆ ನಿನ್ಹೊರತ್ಯಾರ್ಯಾರು ಮಂದಮತಿಯನು ಛಿಂದಿಸಿ ಬೇಗ ಕಂದನನು ಪೊರೆ ದಯಾಕರ 2 ತಂದೆ ನೀನೆ ತಾಯಿ ನೀನೆ ಬಂಧು ನೀನೆ ಶ್ರೀಕರ ಬಂದ ದುರಿತದಿಂದ ಕಾಯೊ ಸಿಂಧು ನೀನೆ ದೇವರೊ 3 ಉರಗನ ಬಾಯಲಿರುವ ಮಂಡೂಕ ಸ್ಮರಿಸಿ ನೋಣಕ್ಹವಣಿಸುವ ತೆರದಿ ಶರಧಿಸಂಸಾರ ಸ್ಥಿರವೆಂದರಿಯದೆ ಮರವಿನಿಂ ಬಿದ್ದೆ ದುರಿತದಿ 4 ಕಾಯಜೆಂಬುವ ಮಾಯಕೋರನು ಪಾಯಕೆ ಒಳಪಟ್ಟೆನು ತೋಯಜಾಕ್ಷೇರ ಮಾಯಮೋಹದಿ ಕಾಯದಂದಿಸಿ ಕೆಟ್ಟೆನು 5 ಕುಂಭಿನಿಯೊಳೆನಗಿಂಬುಗೊಟ್ಟು ಬಲು ನಂಬಿದವರಾಸ್ತ್ಯಳಿದೆನೊ ಜಂಬಬಡಿಯುತ ಶುಂಭಗುಣಗಳಿ ಗಿಂಬುಗೊಟ್ಟು ದಿನಗಳೆದೆನೊ 6 ಪ್ರಾಣತಗ್ಗಿಸಿ ದೀನತನದಲಿ ದೈನ್ಯಬಡುವರಿಗ್ಹಾನಿಮಾಡಿದೆ ದಾನಕೊಡುವರ ದಾನಕಡ್ಡಾಗಿ ನಾನಾ ದುರ್ಬೋಧವುಸುರಿದೆ 7 ಜಾನಕೀಶನ ಧ್ಯಾನಯುತರಿಗೆ ಹೀನ ಹಾಸ್ಯವ ಗೈದೆನೊ ಏನು ತಿಳಿಯದೆ ಗಾಣಕೆ ಬಿದ್ದ ಮೀನಿನಂತೆ ನಾನಾದೆನೊ 8 ಶ್ವಾನನಂದದಿ ಖೂನವಿಲ್ಲದೆ ನಾನಾಪಾಪವ ಗೈದೆನೊ ಮಾನವಜನುಮೇನು ಶ್ರೇಷ್ಠಿದ ಜ್ಞಾನದೋಳ್ಹೊತ್ತುಗಳೆದೆನೊ9 ಮಂಗನಂದದಿ ಹಂಗದೊರೆದು ಅಂಗಲಾಚಿ ಪರರನ್ನು ಬೇಡಿದೆ ಅಂಗಜಪಿತ ಮಂಗಳಾಂಗ ಶ್ರೀ ರಂಗ ನಿಮ್ಮ ಮಹಿಮ್ಯರಿಯದೆ 10 ದಾಸ ಮಾಡಿದ ದೋಷ ಮನ್ನಿಸಿ ಪೋಷಿಸು ಶ್ರೀರಾಮನೆ ಶ್ರೀಶ ಶ್ರೀನಿವಾಸ ಎನ್ನಂತ ರಾಸೆ ಪೂರೈಸು ಬೇಗನೆ 11
--------------
ರಾಮದಾಸರು
ನೋಡು ನೋಡು ನೋಡಯ್ಯ ರಂಗ ಮಾಡು ದಯ ಕರುಣಾಂತರಂಗ ಪ ಖೋಡಿಸಂಸಾರದ ಪೀಡೆಯ ಕಡೆಹಾ ಕರ ಭವಭಂಗ ಅ.ಪ ಮಡದಿಮಕ್ಕಳುಯೆಂಬ ಕಡುತೊಡರಿನ ಬಳ್ಳಿ ತೊಡರಿಕೊಂಡೆನ್ನನು ಕಡುವಿಧ ನೋಯಿಸುವುದೊಡೆಯನೆ ಕಡಿ ಗಡ1 ಸಜ್ಜಾಗಿಲ್ಲೊಲ್ಲೆ ನಾನು ಪ್ರಪಂಚವಿದು ಹೆಜ್ಜೆ ಹೆಜ್ಜೆಗೆ ಕಷ್ಟ ಗರ್ಜಲ್ಲೊರ್ಜಿಸು ಸುಜನರಜ್ಜನೆ 2 ಪ್ರೇಮದಿಂ ಕಂದನ ಪಾಮರಮನಸಿನ ಕಾಮಿತವಳುಕಿಸಿ ಕ್ಷೇಮವ ಪಾಲಿಸು ಸ್ವಾಮಿ ಶ್ರೀ ರಾಮನೆ 3
--------------
ರಾಮದಾಸರು
ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ನೋಡೊ ಮನ ಕೊಂಡಾಡೊ ಮರೆಯದಲೆ ಮನ ಚಿಂತÀ ಲ್ರೇವ ಲೇಶನ ? ಪಾಡುತಿರೆ ಕೃಷ್ಣಾತೀರದ್ವಾಸನ ಮಾಡೊ ಮಹಾತ್ಮರೆಂದೆನಿಸೊ ದಾಸರ ಜೋಡು ಪಾದಂಗಳಿಗೆ ವಂದನೆ ಪ ಅಂಜನೆಯಲ್ಲುದಿಸಿ ಕೌಸಲ್ಯಾ- ಕಂದನಂಘ್ರಿಕಮಲ ಸೇವೆಗೆ ಅಂಗದ ಮೊದಲಾದ ಕಪಿಗಳ ಸಂಗ ಬಿಟ್ವಾರಿಧಿಯನ್ಹಾರುತ ಭಂಗ ಬಡಿಸುತ ರಾವಣನ ಪುರ ಮಂಗಳಾರತಿ ಮಾಡಿ ಜಾನಕಿ ಗುಂಗುರವನಿಟ್ಟೆರಗಿ ರಾಮರಿ ಗಂಗನೆಯ ವಾರ್ತೆಗಳನರುಹಿದೆ1 ಕುಂತಿಸುತನಾಗ್ಯುದಿಸಿ ಬ್ಯಾಗನೆ ಪಂಥಮಾಡುತ ಕೌರವರ ಕುಲ- ಕಂತಕನು ನಾನೆಂದು ರಣದೊಳು ನಿಂತು ಗದೆ ಹಾಕವರ ಸವರುತ ಅಂತರಂಗದಿ ಹರಿಯ ದಿವ್ಯಾ- ನಂತ ಗುಣಗಳ ತಿಳಿದು ದ್ರೌಪದೀ- ಕಾಂತನೆನಿಸಿ ತಾ ಕರುಣನಿಧಿಗೇ- ಕಾಂತ ಭಕ್ತನೆಂದಿನಿಸಿದಾತನು 2 ಮಧ್ಯಗೇಹಭಟ್ಟರಲ್ಲಿ ಮಗನಾ- ಗಿದ್ದ ಸುಜನರಭೀಷ್ಟದಾಯಕ ಗೆದ್ದು ಮಾಯಾವಾದಿಗಳನೆ ಪ್ರ ಸಿದ್ಧಿನೆನಿಸಿದೆ ಸರ್ವಲೋಕದಿ ಶುದ್ಧ ಜ್ಞಾನಾನಂದತೀರ್ಥರು ಮಧ್ವಮತದ ಬಿರುದನೆತ್ತಿದ ಪದ್ಮಪತಿ ಭೀಮೇಶಕೃಷ್ಣಗೆ ಪರಮಭಕ್ತನೆಂದೆನಿಸಿದಾತನು 3
--------------
ಹರಪನಹಳ್ಳಿಭೀಮವ್ವ
ಪತಿಯ ಮಂದಿರದಲಿ ಸುಖವಾಗಿ ಬಾಳಮ್ಮ ಮತಿವಂತೆ ಎನಿಸಿ ಸನ್ಮತಿ ಪಡೆದು ಪ ಚತುರಳೆ ನಿನ್ನ ಸಖಿಯರೆಲ್ಲರು ಅತಿಶಯದಿ ನಿನ್ನ ಪತಿಯ ಗುಣಗಾನ ಕಥನ ಮಾಡುತ ನಿನ್ನೆದುರಿನಲಿ ಸ್ತುತಿಸಿ ಹಿಗ್ಗಿ ಪೊಗಳುವರೆ ಪಾರ್ವತಿ ಅ.ಪ ವಸತಿ ಇಲ್ಲದೆ ಸ್ಮಶಾನದಲಿ ವಾಸಿಪನೆಂದು ಅಪಹಾಸ್ಯ ಮಾಡುವರೆ ವಸನ ಪೀತಾಂಬರವನುಡುವುದನರಿಯದೆ ಹಸಿಯ ಚರ್ಮವನುಡುತಿಹನೆಂಬರೆ ಅಸನಕಿಲ್ಲದೆಗರಳ ವಿಷವನುಂಬುವನೆಂದು ಗುಸುಗುಸು ನುಡಿಯುವರೆ ಅಸಮನೇತ್ರನು ಭಸುಮ ಲೇಪಿಸಿ ವೃಷಭರಾಜನ ಏರಿ ಬರುವನು ಶಶಿಮುಖಿಯೆ ನೀನರಿಯದಲೆ ಈ ಪಶುಪತಿಗೆ ಸತಿಯಾದೆ ಎಂಬರು 1 ಸರಿಸವತಿಯ ತನ್ನ ಸಿರಮೇಲಿರಿಸಿದಿ ಗಿರಿಜೆ ತರವಲ್ಲ ಕೇಳೆ ಪರಿಪರಿ ರತ್ನಾಭರಣಂಗಳರಿಯದೆ ಉರಗಗಳ ಭೂಷಿತನಾದ ನಮ್ಮ ಗÀರಳ ಕಂಠನಿಗೆ ನೀನರಿಯದೆ ಸತಿಯಾದೆ ಎಂದು ತರಳರೆಲ್ಲರು ಹಾಸ್ಯ ಮಾಡುವರೆ ಸರಸವಾಡುತ ನೋಡು ಕಂಠದಿ ಸಿರದ ಮಾಲೆಯ ಧರಿಸಿಕೊಂಡಿಹ ಪರಮ ಆಶ್ಚರ್ಯದಲಿ ನಾವೆಲ್ಲ ಅರುಹಲೀಗ ಬಂದಿಹೆವು ಎನುವರು 2 ಅಂದು ಮೋಹಿನಿ ರೂಪವ ಕಂಡು ಪರಶಿವನು ಇನ್ನೊಮ್ಮೆ ನೋಡಲು ಬೇಡೆ ಪರಮಾತ್ಮನಾ ಸುಂದರಾಕೃತಿಯ ನೋಡುತ ಪಿಡಿಯಲು ಪೋಗಿ ನಂದ ಕಂದನ ರೂಪ ನೋಡಿದನು ಹಿಂದೆ ಮೂಕಾಸುರನೆಂಬ ದೈತ್ಯನ ಕೊಲಿಸಿದ ಇಂದಿರೇಶನಿಗೆ ಸೇವಕನಾದ ಶಿವನು ಇಂದು ಶಿವನನು ನಿಂದಿಸಿದೆವೆಂದೆನಲು ಬೇಡ ಶ್ರೀ- ತಂದೆ ಕಮಲನಾಭ ವಿಠ್ಠಲನ ಚಂದದಲಿ ಭಜಿಸುವನು ಎನುವರು3
--------------
ನಿಡಗುರುಕಿ ಜೀವೂಬಾಯಿ
ಪದ್ಮಾಲಯೆ ಪೊರೆಯೆ ಸದಯೆ ಪ. ಪದ್ಮಸಂಭವೆ ಬೇಡುವೆ ಕೊಂಡಾಡುವೆ ನಿನ್ನ ಪಾಡುವೆ ಅ.ಪ. ಮನಸಿಜನಯ್ಯನ ಮೋಹದ ರಾಣಿಯೆ ಮುನಿಸಿಂತೇತಕೆ ಭೂಸುತೆ ಮುನಿಸನ್ನುತೆ ಕರುಣಾನ್ವಿತೆ 1 ಜೋಡಿಸಿ ಕರಮಂ ಪಾಡುತ ನಿನ್ನಂ ಬೇಡುವ ಕಂದನ ಪಾಲಿಸೆ ಮೊರೆಲಾಲಿಸೆ ದಯೆತೋರಿಸೆ 2 ಸುರನರವಂದಿತ ಚರಣಸರೋಜದಿ ಶರಣೆನ್ನುವ ಕಂದನಂ ವರಿಸೀ ದಿನದಿನಮೆಂದೆನು 3 ಮಾತೆಯೆ ಮುಳಿದೊಡೆ ಪೋತನ ಪೊರೆವಾ ದಾತರುಮಿರ್ಪರೆ ನೀನುಡಿ ಗತಿ ನಿನ್ನಡಿ ಅಣುಗರ ಕೈಪಿಡಿ4 ಪರಮಪಾವನ ಶೇಷಗಿರೀಶನ ಕರುಣಾರೂಪಿಣಿ ಭಾಮಿನೀ ಶುಭದಾಯಿನೀ ಜಯನಂದಿನೀ5
--------------
ನಂಜನಗೂಡು ತಿರುಮಲಾಂಬಾ
ಪರಮಪುರುಷ ಶ್ರೀ ರಾಮನ ಪದಯುಗ ಸಿರಿರಮಣ ನಿಜದಾಸನೆಂದೆನಿಸಿದ ವರ ಕದರುಂಡಲಿ ಹನುಮಂತ ಪ. ಒಂದೇ ಮನದಲಿ ತಂದೆ ನಿನ್ನಡಿಗಳ ಪೊಂದಿದೆ ಸಲಹೈ ಹನುಮಂತ ಕುಂದುಗಳೆಣಿಸದೆ ಕಂದನ ತೆರದಲಿ ಎಂದೆಂದಿಗು ಪೊರೆ ಹನುಮಂತ 1 ವಾರಿಧಿ ದಾಟುತ ಸೇರುತ ಅರಿಪುರ ಧಾರುಣಿಜೆಯ ಕಂಡೆ ಹನುಮಂತ ನಾರಿಚೋರನಪುರ ಸೇರಿಸಿ ಅನಲಗೆ ಸೇರಿದೆ ರಾಮನ ಹನುಮಂತ 2 ಕೃಷ್ಣನ ಸೇವಿಸಿ ದುಷ್ಟರ ಕೊಲ್ಲುತ ಮೆಟ್ಟಿದೆ ಖಳರನು ಹನುಮಂತ ದಿಟ್ಟತನದಿ ಸಾಮ್ರಾಜ್ಯವಾಳಿ ಜಗ- ಜಟ್ಟಿ ಎಂದೆನಿಸಿದೆ ಹನುಮಂತ 3 ಮಿತಿಯಿಲ್ಲದ ಅತಿಖತಿ ಮತಗಳನು ಹತಗೈಸುತ ನೀ ಹನುಮಂತ ಪ್ರತಿ ಗ್ರಂಥಗಳನ್ನು ಸ್ಥಾಪಿಸಿ ಸುರರಿಗೆ ಅತಿ ಹಿತ ತೋರಿದೆ ಹನುಮಂತ 4 ಇಷ್ಟ ಫಲಪ್ರದ ತುಷ್ಟಿಬಡಿಸೊ ನೀ ಕೊಟ್ಟೀಗಭಯವ ಹನುಮಂತ ದಿಟ್ಟ ನಿನ್ನಡಿಗಳ ಭಜಿಸುವೆ ಗೋಪಾಲ ಕೃಷ್ಣವಿಠ್ಠಲ ಪ್ರಿಯ ಹನುಮಂತ5
--------------
ಅಂಬಾಬಾಯಿ