ಒಟ್ಟು 1472 ಕಡೆಗಳಲ್ಲಿ , 96 ದಾಸರು , 1337 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದರೆ ನಾ ನಿನ್ನ ಕಾಂಬೆಶ್ರೀನಿವಾಸನೆ ಭಕ್ತ ದೀನಜನ ಬಂಧೊ ಪ ಪರಮೇಷ್ಠಿ ಸುತನು ಕೊಟ್ಟ ಹರಿಮಂತ್ರ ತುಷ್ಟನಾಗುತ ನರಹರಿಯದೃಷ್ಟಿಯಿಂದ ಕಂಡವನಾ ಭೆಟ್ಟಿ ಸಾಧಿಸಲ್ಯಾ 1 ಹುಡುಗತನದಲಿ ತಂದೆ ತೊಡೆಯಾಸಿಗೆ ಬರೆ ತಾಯಿ-ನುಡಿದ ಮಾತನು ಕೇಳಿ ಅಡವಿಯೊಳಗೆಮೃಡ ಶಿಷ್ಟನುಪದೇಶವನು ನಂಬಿ ವೈಕುಂಠವನುಪಡೆದಿರುವ ಬಾಲಕನ ನಡತೆ ನಂಬಿರಲ್ಯಾ 2 ಐದು ಮಂದಿ ತನ್ನ ಕಾದುಕೊಳ್ಳದೆ ಇರಲುದುರುಳನೊಬ್ಬನು ರಾಜಬೀದಿಯೊಳಗೆಕೂದಲು ಹಿಡಿದೆಳೆದು ತರಲು ಶ್ರೀಧರನೆ ಎಂದೊದರಿಮೋದಿಸಿದ ಕಾಮಿನಿಯ ಹಾದಿ ಸೇರಿರಲ್ಯಾ 3 ಸತಿ ಸಹಾಯ ವೃಂದದಿ ಸಹಾಯ ಭೂತನಾಗಿಪ್ರೀತಿಯಲಿ ಲಂಕಾನಾಥನಾಗಿಹ ಮುನಿಪೋತ ರಾಕ್ಷಸನ ಸಖ ನೀತಿ ಸಾಧಿಸಲ್ಯಾ4 ಹೇ ಸುರಾರ್ಚಿತ ಮನುಜ ಕೇಸರಿಯ ಸುರಗೀತಾವಾಸುದೇವ ದ್ವಾರಕೀಶ ಕೃಪಾ ದಾಶರಥೆಶ್ರೀವೆಂಕಟೇಶ ಬದರಿನಿವಾಸ ದಾಸರ ಕಾಯೋಆದರದಿ ಇಂದಿರೇಶ ಕರುಣಾಬ್ಧಿ 5
--------------
ಇಂದಿರೇಶರು
ಏನುಕೌತುಕವೊ ಮ'ಪತಿರಾಯರದು ಘನಮ'ಮೆ ತಿಳಿಯದುಮೋಹಶಾಸ್ತ್ರಗಳ ರಚಿಸಲು ಬೇಕೆಂದು ಹರಿಯಾಜ್ಞೆಯನರಿದುಈ ಮ'ಯೊಳವತರಿಸಿ ಬಂದನೆಂದು ರುದ್ರಾಂಶನೆ ಅಹುದುಪದ್ಯ ಪದ್ಯಗಳಲಿ ಅತಿಗೂಢ ಅರ್ಥ 'ಹುದು ಮೂಢರಿಗೆ ತಿಳಿಯದದು 5ಮ ಎನ್ನಲು ಮನ ಪ್ರಸನ್ನವಾಗುವದು ಮ'ಮೆಯ ತಿಳಿಯುವದು' ಎನ್ನಲು 'ಡಿಸುವದು 'ತದಹಾದಿ ಸುಜನರ ಕೈವಾರಿಪ ಎನ್ನಲು ಪರಿಪರಿಯ ಕಷ್ಟದೂರಾ ಪರಮಾದರಕೆದ್ವಾರಾತಿ ಎನ್ನಲು ತಿಳಿಯಾಗುವದೈ ಬುದ್ಧಿ ಸರ್ವಾಂಗಶುದ್ಧಿ 6ಮ'ಪತಿರಾಯರು ತಪವಗೈದಸ್ಥಾನಾ ಅಲ್ಲಿಯ ವೃಂದಾವನಾಮೂರುಕ್ಷೇತ್ರ ಶಾಲಿಗ್ರಾಮದ ಸವನಾ ಮ'ಮೆಯು ಪರಿಪೂರ್ಣಾತೀರ್ಥ ಭಾ'ಯೊಳು ಸುರನದಿ ಅವತರಣಾ ಮ'ಪತಿ ಸುತಕೃಷ್ಣಾಕರುಣಾನಿಧಿ ಭೂಪತಿ'ಠ್ಠಲ ಪ್ರಿಯನಾ ಸಂತತ 'ಡಿಚರಣಾ7
--------------
ಭೂಪತಿ ವಿಠಲರು
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು
ಏನೆಂದರು ಸರಿ ಬೀಳ್ವದು ನಮ್ಮ ಶ್ರೀನಿವಾಸನ ಮಹಿಮಾನುಸಂಧಾನದಿಂ ಪ. ಶಯ್ಯದಿಂದೇಳುತ ಶಾರೀರದಾಲಸ್ಯದಿಂ- ದಯ್ಯ ಅಪ್ಪ ಅಮ್ಮನೆಂಬುವರಾ- ಜೀಯನ ಗುಣನಾಮಕನುವಾಗಿ ತಿಳಿದರೆ ಕಯ್ಯ ಪಿಡಿದು ಕಾವ ಕರುಣಾಳು ರಾಜಗೆ 1 ಅಪತತ್ವದಲಿ ನಿಂತು ಅಪ್ಯಾಯನ ಮಾಳ್ಪ ತಪ್ಪನೆಂಬುದಕಿದು ಕಾರಣವು ಮುಪ್ಪುರಹರನಯ್ಯನು ಪೆತ್ತ ದೊರೆಯನು ಒಪ್ಪಲಾರದೆ ಅಮ್ಮ ಅಯ್ಯನೆಂಬುವ ನಾಮ 2 ಕುರಿಯೊ ಮರಿಯೊ ಎಂಬ ದಾತಗೆ ಭಿನ್ನ ಹ- ವರವುದು ಹರಿಗೆ ಮೂಜನವೆಲ್ಲವು ಕುರಿಯಂತೆ ವಶ್ಯವಾಗಿರುವುದು ಭವಬಂಧ ಹರಿದ ಜ್ಞಾನದ ಮುಳ್ಳಮುರಿಯೆಂಬ ಭಾವದಿಂ 3 ಮೂರಾರು ಪುರಾಣ ಮೂಲ ರಾಮಾಯಣ ಭಾರತ ಪಂಚರಾತ್ರಾದಿಗಳು ಸೇರಿ ಪೇಳುವುದೆಲ್ಲ ಸಿರಿಯರಸನ ನಾಮ ವಾರಿಧಿಯೊಳಗಿನ ತೆರೆಗಳಂದದಿ ತೋರ್ಪ 4 ನಾದ ಬಿಂದು ವರ್ಣದಾತನುದಾತ್ತ ಸ್ವ ರಾದಿ ಸಕಲ ಶಬ್ದ ವಾಚ್ಯ- ನಾದ ಶ್ರೀದೇವಿಯರಸ ವೆಂಕಟರಾಜನರಿವಂಥ ಹಾದಿಯ ತಿಳಿದರಗಾಧ ಮಹಿಮಾ ನಿನ್ನ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏನೆಂಬೆನು ಪವಮಾನ ದೇವನಲಿ ಶ್ರೀನಿವಾಸ ಕರುಣಾ ತಾನಾಗೀತನಕಡೆಯಲಿ ಬಹ ಲಕ್ಷ್ಮೀಮಾನ, ದೀನ ಶರಣಾ ಪ. ದುರುಳ ದಶಾಸ್ಯನ ಸೆರೆಯೊಳಗಿಕ್ಕಿದ ಸುರವರನಣುಗನನೂ ನೆರೆಯದೆ ಮಾರುತಿ ಇರುವ ನಿಮಿತ್ತದಿ ಕರಿಸಿದ ರವಿಜನನು ತಿರುಗಿ ದ್ವಾಪರದಿ ಬರಲಾರ ರವಿಜನ ನರನಿಂದೊರಸಿದನು ಎರಡು ಯುಗದೊಳೀ ತೆರದಲಿ ಭಾರತಿ ವರನನು ಸೇರಿದನು 1 ಶ್ರೀಕರ ಜೀವರಿಗೇಕೀ ಭಾವವ ಪೋಕ ಮೃಗಗಳಂದೂ ಕಾಕರಟನದಂತೊರೆವದನರಿತು ದಿ- ವೌಕಸಗಣಬಂದು ಶ್ರೀಕಮಲಾಸನ ವಂದ್ಯನೆ ಸಲಹೆನೆ ಸಾಕುವ ತಾನೆಂದೂ ಈ ಕಲ್ಯಾಣ ಗುಣಾಢ್ಯನ ಭೂಮಿಗೆ ತಾ ಕಳುಹಿದನಂದು 2 ಅದರಿಂ ತರುವಾಯದಲಿ ಸುಖಾಂಭುದಿ ಒದಗಿದ ತ್ವರೆಯಿಂದ ಪದುಮನಾಭ ಮೂರುತಿಯ ಕೆಲದಿ ನಿಂ- ದದುಭುತ ಭರದಿಂದಾ ವಿಧಿಭವ ಲೋಕಾದ್ಯಧಿಕೃತ ಪುಣ್ಯಾ ಸ್ಪದ ತೋರುವೆನೆಂದಾ ವಿಧಿ ಪದ ಯೋಗ್ಯನ ಚದುರತನಕೆ ಮೆಚ್ಚಿ ಪೂರ್ಣಾನಂದ 3 ವರ ವೈಕುಂಠವ ರಜತ ಪೀಠ ಸ- ತ್ಪುರದೊಳಗಿರಿಸಿಹನು ವಿರಜೆಯ ಮುನಿಕಡತ ಸರಸಿಗೆ ಕರೆಸಿದ ಮುರದಾನವಹರನು ಚರಣಾಂಬುಜಕಿಂಕರವರ ಚಂದ್ರೇ- ಶ್ವರನಲಿ ಕರುಣವನು ಇರಿಸಿ ಭಜಿಪ ಸುರತರುವೆನಿಸಿದ ಶ್ರೀ- ವರನ ಮಹಾತ್ಮೆಯನು 4 ಜ್ಞಾನಾನಂದಾಂಬುಧಿ ಶೇಷಾದ್ರಿಯ ಶ್ರೀನಿವಾಸನಿವನು ತಾನಾಗಿಲ್ಲಿಗೆ ಬಂದಿಹ ಭಕ್ತಾ- ಧೀನ ದಯಾಕರನು ಮಾನಸಗತ ಮಾಲಿನ್ಯವ ಕಳೆದನು ಮಾನವ ಬಿಡಿಸುವನು ನಾನಾಭೀಷ್ಟವ ನಿರವಧಿ ಕೊಡುತಿಹ ಮೌನಿ ಜನಾರ್ಚಿತನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನೇನು ಬೇಕಯ್ಯ ಶ್ರೀ ಹರಿಯೆ ನಿನಗೇ ನೀನೆ ಗತಿಯೆಂದು ಸರ್ವಸ್ವವೊಪ್ಪಿಸುವೇ ಪ ತರಳನಾಗಿಹ ಧೃವನು ಘೋರ ತಪವಂಗೈಯ ಹರುಷದಿಂ ಬಾಲಕಗೆ ವರ ಪದವಿಯಿತ್ತೇ ಕರುಣಾಳು ಶ್ರೀ ಹರಿಯೇ ನಿಂನ ಮೆಚ್ಚಿಸಲಿಕ್ಕೆ ಉರುತರದ ತಪವು ಬೇಕೇನೊ ನಾನರಿಯೇ 1 ದೊರೆಯು ರುಕುಮುಂಗದನು ಯೇಕಾದಶೀವ್ರತವ ಸರಸದಿಂದಾಚರಿಸೆ ನಿಜಭಕ್ತಗೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ವ್ರತವು ಬೇಕೇನೊ ನಾನರಿಯೇ 2 ತರಳ ಪ್ರಲ್ಹಾದ ತಾ ಹರಿನಾಮ ಕೀರ್ತಿಸಲು ದುರುಳ ತಾತನ ಕೊಂದು ಕಂದನನು ಪೊರೆದೆ ಕರುಣಾಳು ಶ್ರೀ ಹರಿಯೆ ನಿಂನÀ ಮೆಚ್ಚಿಸಲಿಕ್ಕೆ ಉರುತರದ ಕೀರ್ತನೆಯು ಬೇಕೋ ನಾ ನಾನರಿಯೇ 3 ಭರದಿ ದುಶ್ಯಾಸನನು ಮಾನವಂ ಕಳಯುತಿರೆ ಸರಳೆಗೇ ನೀನೊಲಿದು ಅಕ್ಷಯವನಿತ್ತೇ ಕರುಣಾಳು ಶ್ರೀಹರಿಯೆ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸ್ತೋತ್ರಗಳು ಬೇಕೋ ನಾನರಿಯೇ4 ಧರಣಿಸುತೆ ಜಾನ್ಹಕಿಯೆ ಹುಡುಕಲ್ಕಿ ವಿಕ್ರಮದಿ ಶರಧಿಯನು ದಾಟಿದಗೆ ಭರದಿಂದಲೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ದಾಸ್ಯತ್ವ ಬೇಕೋ ನಾನರಿಯೇ 5 ನಿರುತದಾಸರು ನಿನ್ನ ಸೇವೆಯನು ಮಾಡಲ್ಕೆ ಕರುಣದಿಂ ದಾಸರಿಗೆ ಪ್ರತ್ಯಕ್ಷನಾದೇ ಕರುಣಾಳು ಶ್ರೀ ಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸೇವೆ ಬೇಕೇನೊ ನಾನರಿಯೇ 6 ವರ ದುರ್ವಾಪುರದಲ್ಲಿನಿತ್ತು ಮೆರೆಯುವಿಯೆಂದು ಸಿರಿ ಚನ್ನಕೇಶವನೆ ಪರಮಾತ್ಮನಂದೂ ಕರುಣಾಳು ಶ್ರೀ ಹರಿಯೆ ನಿನ್ನ ನಂಬುತಲಿಂದು ಮರೆಹೊಕ್ಕೆ ಕಾಯೋ ಶ್ರೀ ಈಶ ಸರ್ವೇಶಾ 7
--------------
ಕರ್ಕಿ ಕೇಶವದಾಸ
ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ 1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ 2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಏಳು ನಿದ್ದೆಯು ಸಾಕು ರಂಗನಾಥ ಪ ತಾಳು ತಾಳೆನಲೇಕೆ ಮಾಂಗಿರಿ ನಿವಾಸ ಅ.ಪ ಜಗವ ಪೋಷಿಪಚಿಂತೆ | ಮಿಗಿಲಾದ ದೇವಂಗೆ ಸೊಗಸಾದ ನಿದ್ದೆಯಾಪರಿವುಂಟೇ ನಗಜಗವ ಪೊತ್ತವನ ಬಳಗವು ಏನೆಂಬೇ ನಗೆಬೇಡ ಕಣ್ತೆರೆಯೊ ಮಾಂiÀiಕಾರ 1 ನಿದ್ದೆಗೆಡಿಸಲು ಪಾಪ ಇದ್ದರೆ ನನಗಿರಲಯ್ಯ ಸದ್ದಿಲ್ಲದಿಹುದೇ ಭಕ್ತರು ಹಾಡಿ ಕುಣಿಯೇ ಒದ್ದಮುನಿಗಾ ಪಾಪವಿದ್ದಿತೇ ಕರುಣಾಳು ಎದ್ದು ಬಾ ಬಾರೈಯ ಮಾರನಯ್ಯ 2 ಬಲ್ಲೆ ಬಲ್ಲೆನು ನಿನ್ನ ಚೆಲ್ಲಾಟಗಳನೆಲ್ಲ ಬೆಲ್ಲವನು ಕಂಡಿರುವೆ ಮುತ್ತದಿಹುದೇ ಸಿರಿ ಮಾಂಗಿರಿಯ ರಂಗ [ಒಲ್ಲೆನದೆ ಈಯಯ್ಯ ಎನಗು ಬೆಲ್ಲದಸವಿಯ]3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಏಳು ಶ್ರೀನಿವಾಸ ಏಳು ಲಕ್ಷ್ಮೀರಮಣ ಏಳು ಬೆಟ್ಟದೊಡೆಯ ಏಳು ಭಕ್ತರ ಪ್ರೀಯ ಏಳಯ್ಯ ಬೆಳಗಾಯಿತು ಹರಿಯೇ ಪ. ಆದಿಶೇಷನ ಮೇಲೆ ಅಪ್ರಮೇಯನು ನೀನು ಆದರದಿ ಮಹಲಕ್ಷ್ಮಿಯೊಡನಿರಲೂ ಸುರರು ಸನಕ ಸನಂದನರು ಆದರಿಸೆ ಬಾ ಬೇಗ ಬಾಗಿಲನು ತೆಗೆದು ಆದಿಮೂರುತಿ ನಿನ್ನ ಮುಖ ದರ್ಶನವ ಮಾಡಿ ಮೋದ ಪಡುತಲೆ ಭಕ್ತ ಕೋಟಿ ಸ್ತುತಿ ಮಾಡಲು ಮಾಧವನೆ ಹಾಸು ಮಂಚವನಿಳಿದು ಬಾ ಕತ್ತಲೆ ಹರಿಪಾ ದಿವಾಕರನ ತೆರದಿ ಹರಿಯೇ ಏಳಯ್ಯ ಬೆಳಗಾಯಿತು 1 ಕಾಸಿದ್ಹಾಲನೆ ತಂದು ಕಾವಡಿಯಲಿ ತುಂಬಿ ಲೇಸಾಗಿ ನಿನ್ನ ಭಕ್ತರು ನಿಂತಿದಾರೆ ವಾಸುದೇವನೆ ನಿನಗೆ ಮಲ್ಲಿಗೆ ಕುಸುಮ ಭಾಸುರಾಂಗನೆ ತಂದು ಅರ್ಪಿಸಲು ಭಕ್ತರು ಏಸು ಹೊತ್ತಿನಿಂದ ತುಳಸೀ ದಳ ತಂದು ವಾಸುಕೀಶಯನಗೆಂದು ಭೂಸುರರು ನಿಂದಾರೆ ವೇದ ಘೋಷದಿಂದ ಈಸು ನುಡಿಗಳು ನಿನ್ನ ಕರ್ಣಕೇಳಲಿಲ್ಲವೆ ಏಸು ಮೆಚ್ಚಿಸಿಹಳೋ ಲಕ್ಷ್ಮೀ ನಿನ್ನ ಸರಸದೊಳು ವಾಸುಕೀಶಯನ ಹಾಸಿಗೆಯಿಂದೇಳೋ ದೊರೆಯೆ ಏಳಯ್ಯ ಬೆಳಗಾಯಿತು2 ಕರುಣಾಸಾಗರ ನಿನಗೆ ಕರುಣೆ ಬರುವಾತೆರ ಪರಿಪರಿಯ ಸ್ತೋತ್ರದೊಳು ನಾರಿಯೇರು ಕರೆವರೋ ಕರಗತ ಕಾಮಧೇನು ನೀನೆಂದು ಕರದೊಳಾರತಿಯ ಪಿಡಿದೂ ತರತರದ ಉಡಿಗೆ ತೊಡಿಗೆ ನಿನಗೀಯಲು ಸರಸರನೆ ದೇಶದೇಶದಿ ಬಂದು ನಿಂತಿದ್ದಾರೆ ಶರಧಿ ಗಂಭೀರನೆ ವರ ಶ್ರೀ ಶ್ರೀನಿವಾಸನೆ ಕರುಣೆ ತೋರುತ್ತ ನಿನ್ನ ಭಕ್ತರ ಮೇಲೆ ವರ ನಾರಿಯರ ನಾಟ್ಯ ವೈಭವದಿ ವರದುಂದುಭಿ ವಾದ್ಯದಲಿ ವರ ತಾಳ ಮೇಳದಿಂ ವರ ಶೇಷಾದ್ರಿವಾಸ ವೆಂಕಟೇಶನೆ ಏಳಯ್ಯ ಬೆಳಗಾಯಿತು 3
--------------
ಸರಸ್ವತಿ ಬಾಯಿ
ಏಳುತಲೆದ್ದು ಮನವೆ ನೀ ವಲೀ ನಿಜಖೂನ ಕುಲಕೋಟಿ ಉದ್ಧರಿಸುವ ನೆಲೆನಿಭ ಸ್ಥಾನ ಬೆಳಗಾಗಲಿಕ್ಕೇರಿತು ನೀ ಒಳಿತಾಗಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 1 ಒಳಮುಖನಾಗರಿಯೋ ನೀ ಸುಲಲಿತ ಜ್ಞಾನ ಅಲೇಶ ಮಾಡದೆ ನೀ ಬ್ಯಾಗ ಬಲಿ ನಿಜಧ್ಯಾನ ಥಳಥಳಗುಡುತಲ್ಯದ ಒಳಿತಾಗಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 2 ತೊಳಿಬೇಕೆಲೊ ಮನದ ಹೀನ ಮಲಿನಗುಣ ಕರ್ಮ ತಮಂಧತನ ಕಳೆಕಾಂತಿಯುಳ್ಳ ಕರುಣಾರ್ಣವ ಸ್ವಾಮಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 3 ಸಲೆ ಮೊರೆಹೊಕ್ಕು ನೀ ಸದಾಬಲಿ ಭಕ್ತಿ ಪೂರ್ಣ ಅನುದಿನ ಸದ್ವಸ್ತು ಶರಣ ಸಕಳ ಸುರವುತಲ್ಯದೆ ಬಲ್ಲ ಸ್ವಾಮಿ ಕರುಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 4 ಇಳೆಯೊಳಿದೆ ಸಕಲಪುಣ್ಯಶಿರೋನಿಧಾನ ಘಳಿಸುವದೊಂದೆ ಸುಫಳಿತ ಸುದಿವ್ಯ ಘನ ತಿಳಿಯೊ ಸುಮನವೆ ಮಹಿಪತಿಸ್ವಾಮಿ ಪೂರ್ಣ ಒಲುವಾಂಗೆ ಮಾಡು ಗುರುಮೂರ್ತಿಗೆ ಸುನಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು