ಒಟ್ಟು 810 ಕಡೆಗಳಲ್ಲಿ , 89 ದಾಸರು , 638 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾರಿ ತೋಚದಲ್ಲಾ ನನಗೆ ಏನು ಪ ನೀರಜಾಕ್ಷ ನಿನ್ನ ನೊಲಿಸುವ ಅ.ಪ ವಿಧಿ ಸಾಧಿಸುತ ವೇದವ್ಯಾಸ ನಿನ್ನ ಪ್ರೀತಿ ಸಾಧಿಸಲು ಮೂಢನಾನು 1 ದಂಡಕಾಲ ಕಳೆದುದಯ್ತು ಮಂಡೆಗೀಗ ಹತ್ತದವು ಫಂಡರೀಶ ಕೃಪೆಯಮಾಡೊ 2 ಹಾಡಿಪಾಡಿ ವಲಿಸಾಲು ರಾಗ ಈ ಭಾವ ತಾಳ ಕಾಣೆ ಕಾಡು ಕೋಣನಂತೆ ಇರ್ಪೆ ನೀಡಿ ಸಲಹೊ ಸರ್ವ ಶಕ್ತಿ 3 ದಾನಧರ್ಮತೀರ್ಥಯಾತ್ರೆ ನಾನು ಮಾಡೆ ಹುಟ್ಟು ಬಡವ ಶ್ವಾನನಂತೆ ತಿರಿದು ಉಂಬೆ ಸಾಧ್ಯವೇನು ನೀನೇ ನುಡಿಯೊ4 ನೆಂಟರಿಷ್ಟರೆಲ್ಲ ಎನ್ನ ಕೈಯ ಬಿಟ್ಟು ಹೋದರೈಯ ಒಂಟಿಯಾಗಿ ಅಲೆದು ಅಲವೆ ಭಂಟನೆನಿಸಿ ಕಾಯಬೇಕೊ 5 ದಾಸನಾಗಿ ಬಾಳೋದಕ್ಕೆ ಆಶೆಯಿನ್ನು ತೊಲಗಲಿಲ್ಲ ಮೊಸವೇನೆ ಬರಿಯ ವೇಷ ದೋಷದೂರ ಶ್ರೀಶವಲಿಯೊ 6 ಹಿಂದಿನವರ ಕಾಯ್ದಬಗೆಯು ಇಂದಿನವರಿಗೆ ಬರಿಯ ಕಥೆಯು ಮಂದನೆನ್ನ ಈಗ ಪಿಡಿದು ಮುಂದು ಮಾಡೊ ನಿನ್ನ ಖ್ಯಾತಿ7 ಶರಣ ಜನರ ಬಿಡನು ಎಂಬ ಖರೆಯಬಿರುದು ನಿನ್ನದೆಂದು ಹಿರಿಯರಿಂದ ಅರಿತುಬಂದೆ ಪರಮ ಕರುಣಿ ಕೈಯ ಪಿಡಿಯೊ8 ನಿನಗೆ ಯೆನ್ನ ಪೊರೆಯೆ ಕ್ಷಮಿಸಿ ದೋಷ ಪೊರೆಯೊ ಬೇಗ ನಮಿಪೆ ನಂಬಿ ನಿನ್ನನೀಗ 9
--------------
ಕೃಷ್ಣವಿಠಲದಾಸರು
ದಾಸನಾಗುವೆ ಭಜಿಪ ಭಕ್ತಿಯನು ನೀಡೆನ್ನ ನಾನೇನೂ ಮಾಡಲಾರೆ ರಂಗಯ್ಯ ನೀನೆನ್ನ ಸಲಹ ಬೇಕು ಪ ಗಾನಲೋಲನ ನಾಮ ಭಜನೆಯೊಂದುಳಿದು ನಾ ನನ್ಯರೀತಿಯ ಕಾಣೆ ಸಲಹಯ್ಯ ಹರಿಯೇ ಅ.ಪ. ತರಳಾ ಧ್ರವನಂತೆ ತಪನ ನಾನರಿಯನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಹರಿದಾಸರಂತೆ ದಾಸತ್ವ ನಾನರಿಯೆನು ಪರಮ ಸೇವಕರಂತೆ ಸೇವೆಯ ನರಿಯೇ 1 ಅಸುರನಂದನನಂತೆ ಕೀರ್ತನೆಯರಿಯೆನು ವಸುಧೀಶನಂತೆ ನಾ ವ್ರತಗಳನರಿಯೇ ವಸುಮತಿಯಂತೆ ನಾ ಯಾಚನೆಯರಿಯೆನು ಋಷಿ ವೃಂದದಂತೆ ನಾ ಭಕ್ತಿಯನರಿಯೇ 2 ಸಿರಿಯಂತೆ ನಿನ್ನನು ಸೇವಿಸಲರಿಯನು ಕರಿಯಂತೆ ಸ್ಮರಣೆಯ ಮೊದಲು ನಾನರಿಯೆ ಸುರಮುನಿಯಂತೆ ನಾ ಗಾಯನವರಿಯೆನು ಸಿರಿ ಚನ್ನಕೇಶವ ಭಜನೆಯನರಿವೇ 3
--------------
ಕರ್ಕಿ ಕೇಶವದಾಸ
ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ
ದೀನ ಪಾಲನೆ ಗಾನಲೋಲನೆ ಸುಜನ ಪ್ರಿಯನೇ ಪ ಈ ನರಜನ್ಮದ ಕಾನನದಲಿ ಬಲು ದೀನನಾಗಿ ಗುಣಗಾನ ಮಾಡುವೆನೊ ಅ.ಪ ದುಷ್ಟಭೋಗಗಳನುಭವಿಸುತ ಸದಾ ಭ್ರಷ್ಟನಾದೆ ನಾನು ಅಷ್ಟಿಷ್ಟಲ್ಲದೆ ಮರುಗುತಿರುವೆ ಪರ ಮೇಷ್ಟಿ ಜನಕ ಎನ್ನ ನಿಷ್ಠನ ಮಾಡೊ 1 ಜಪವ ಮಾಡಲಿಲ್ಲ ತಪವ ಮಾಡಲಿಲ್ಲ ಉಪವಾಸವ ಕಾಣೆ ತಪಿಸುತಿರುವೆ ಎನ್ನ ಅಪರಾಧಗಳಿಗೆ ಕುಪಿತನಾಗದಿರೊ ದ್ವಿಪ್ರವರ ವರದ 2 ಧರ್ಮವ ಬಿಟ್ಟು ಸತ್ಕರ್ಮವ ತ್ಯಜಿಸುತ ದುರ್ಮಾರ್ಗದಲಿ ಬಲು ಹೆಮ್ಮೆ ಮಾಡಿದ ನನ್ನ ಹಮ್ಮು ಮುರಿದಿಹುದು ಬೊಮ್ಮ ಜನಕ ಸುಪ್ರಸನ್ನನಾಗೆಲೊ 3
--------------
ವಿದ್ಯಾಪ್ರಸನ್ನತೀರ್ಥರು
ದೀನ ಬಂಧು ಕರುಣಾಸಿಂಧು ನೀನೆ ಬಂದು ರಕ್ಷಿಸೆಂದು ಪ. ನಿತ್ಯ ಮಂಗಳಾತ್ಮ ನಿಜ ಭೃತ್ಯಪೋಷಣ ಪರಾತ್ಮ ನಿತ್ಯ ಕಾರುಣ್ಯ ಚಿತ್ತಜನಯ್ಯನೆ ಈ ಜಗತ್ತಿನೊಳು ನಿನ್ನ ಪೋಲ್ಪ ಉತ್ತಮ ವಸ್ತುವ ಕಾಣೆ ಸತ್ಯಭಾಮಾ ವರ ನಿನ್ನಾಣೆ 1 ಸರಸಿಜಾಸನ ತಾನು ಪರಮ ಭಕುತಿಯಿಂದ ಸಿರಿವರ ನಿನ್ನ ನಾನಾ ಪರಿಯಿಂದಲಿ ಶರದೃತುವಿಲಿ ಬಹುಧರವಾಗಿ ಪೂಜಿಸುವ- ದರಿತು ಪಾಡುವೆನೀಗ ಕರುಣಿಸೆನ್ನ ನೀ ಬೇಗ 2 ಮತ್ಸಕೇತುಪಿತ ಭಕ್ತವತ್ಸಲ ವೆಂಕಟನಾಥ ತತ್ಸದೆಂಬೋ ಮಂತ್ರಾಗಮ್ಯ ಕುತ್ಸಿತಾಗಮ್ಯ ಉತ್ಸವ ಕಾಲದಲಿ ಸಿರಿವತ್ಸ ಬೆನ್ಹಾನಿನ್ನನು ನಿ- ರ್ಮತ್ಸರದಿ ನಂಬಿದೆ ಗೋವತ್ಸವೈದುವಂತೆ ಬಾರೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ದೂರ ಮಾಡುವರೇ ಶ್ರೀಶ ಪ ದೂರ ಮಾಡುವರೇದೂರ ಮಾಡುವರೇನೋ ಶ್ರೀಶದಾರಿ ಕಾಣದೆ ಮೊರೆಯನಿಡುವೆಆರು ಕಾಯುವರಿಲ್ಲ ಶ್ರೀಶಸಾರಸಾಕ್ಷ ಸಲಹೆ ಬೇಡುವೇ ಅ.ಪ. ಸಕ್ತಿ ಇಲ್ಲವೋ | ನಿನ್ನೊಳಾಸಕ್ತಿ ಇಲ್ಲವೋ |ಸಕ್ತಿ ನಿನ್ನಲ್ಲಿಲ್ಲದೇಲೇಮುಕ್ತಿ ಇಲ್ಲವೆಂದು ಶೃತಿಯಉಕ್ತಿ ಕೇಳಿ ಕೇಳಿದಾಗ್ಯೂ ವಿ-ರಕ್ತಿ ಪುಟ್ಟಲಿಲ್ಲ ಎನಗೆ ಭಕ್ತಿಮಾರ್ಗ ದೂರವಾಯ್ತೊ 1 ದುಷ್ಟ ವಿಷಯದೀ | ಮನವುಅಟ್ಟಿ ಪೋಗೋದೋ |ಎಷ್ಟು ಪೇಳಿದಾರೂ ಮನವುನೆಟ್ಟಗಾಗೋ ಪರಿಯ ಕಾಣೆಸೃಷ್ಠಿಗೀಶ ಮನವ ಅಭಿಧಸೊಟ್ಟ ಮನವ ಸರಿಯ ಪಡಿಸಿ | ಶ್ರೇಷ್ಠ ನನ್ನ ಮಾಡದ್ಹಾಂಗೆ 2 ಕೈಯ್ಯ ಬಿಡುವರೇ | ದಯಾಳು ವಿಷಯಧುಯ್ಯಲು ಕಳೆಯದೇ |ಪ್ರೇರ್ಯ ಪ್ರೇರಕನಾಗಿ ನೀನುಮಯ್ಯ ಮರೆಸಿ ಧೈರ್ಯಗೆಡಿಸೆಆರ್ಯರಿದನ ಸಯ್ಯೆಂಬೊರೇನೋಅಯ್ಯ ಕೈಯ್ಯ ಬಿಡದೆ ಕಾಯೋ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ದೃಷ್ಟಿ ದೋಷವು ತಗಲಿತೆನ್ನ ಕಂದನಿಗೆ ಪ ದೃಷ್ಟಿಗೋಚರನಲ್ಲದಾ ದೇವ ರಕ್ಷಿಸಲು ಅ.ಪ ಸೇರು ಬೆಣ್ಣೆಯ ತಿಂದು ದೂರು ಕೇಳಿದೆನಿಂದು ಚಾರು ಮುಖಿಯರ ನೋಟ ಕ್ರೂರವೆಂದರಿ ಕಂದ ಈರೇಳು ಭುವನಗಳ ತಿಂದು ತೇಗುವ ದೇವ ಆರೋಗ್ಯಭಾಗ್ಯವನು ನಿನಗೆ ಕರುಣಿಸಲಿ 1 ಎಂದು ಕಾಣೆವು ಇಂಥಾ ಸುಂದರನ ನಾವೆಂದು ಮಂದಗಮನೆಯರ ನುಡಿ ಅಂದವಾಯಿತೆ ಕಂದ ಸಂದೇಹವಿಲ್ಲವರ ಶೃಂಗಾರಕೀ ಫಲವು ಜಲಧಿ ಮನುಮಥನ ಮನುಮಥನೆ ಗತಿ 2 ನೀರು ಮಂತ್ರಿಸಿದಾಯ್ತು ಬೂದಿ ಮಂತ್ರಿಸಿದಾಯ್ತು ನಾರಸಿಂಹಾದಿ ವರಮಂತ್ರಗಳ ಜಪವಾಯ್ತು ಭಾರಿ ಪುಸಿಯಾಯ್ತು ಜನನಿಯೊಲು ಹರಸಿದೀತನಲಿ ಮೀರಿಹನು ಯಂತ್ರ ಮಂತ್ರಾರ್ಥವೆಲ್ಲಾ ಪ್ರಸನ್ನ3
--------------
ವಿದ್ಯಾಪ್ರಸನ್ನತೀರ್ಥರು
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ದ್ರೋಹಿಯೋ ನಾನಿನಗೆ ದ್ರೋಹಿಯೋ ಪ ಪಾಹಿ ಬ್ರಹ್ಮಜವಂಶ ಪಾಪ ಬ್ರಾಹ್ಮಣ ಪ್ರಿಯ ಅ.ಪ ಸ್ವಪ್ನ ಜಾಗ್ರತೆ ನಿದ್ರೆ ಮೋಕ್ಷಾವಸ್ಥೆಯಲ್ಲಿ ತೈಜಸ ವಿಶ್ವ ಅಪ್ಪತುರೀಯನಾಗಿ ದಾತ ನಿನ್ನನ್ನು ಬಿಟ್ಟು ಬೆಪ್ಪನಂದದಿ ನರರ ಯೆಂಜಲ ಬಯಸುವೆ 1 ಬಿಂಬ ಮೂರ್ತಿಯು ನೀನು ಪ್ರತಿ ಬಿಂಬನಾನಿನಗೆ ತುಂಬಿ ಅಂತರ್ಬಹಿ ಮೆರೆವ ವಿಷ್ಣುವೆ ನಿನ್ನ ನಂಬಿದೆ ದೃಢದಿಂದ ಬರಿದೆ ಹಂಬಲಿಸುವೆ ಬೆಂಬಲನಾಗಿದ್ದು ತುಂಬೊ ನಿನ್ನಯ ಭಕ್ತಿ 2 ಸತಿ ಸುತ ಪಿತರಲ್ಲಿ ತಿಳಿಯದೆ ನಿನ್ನಿರವ ಹಿತರವರು ಬರಿದೆಂಬ ಭ್ರಾಂತಿಯ ನೀಗದೆ ಖತಿಯ ಪಡುವೆನು ಭವದಿ ಕುಮತಿಯನಗೆಮುಂದೆ ಗತಿಯೇನು ಜಗದೀಶ ಮರೆತು ನಿನ್ನನು ದೇವ 3 ಕಸವ ರಸವೆಂದು ಬಯಸುವೆ ವಿಷಯವ ರಸವ ವಿಷವೆಂದು ತೊರೆದು ಜೀವಿಸುತಿರ್ಪೆ ಅಸಮವಿಷಣವಿಷ್ಣು ಆತ್ಮಾಖ್ಯಾತನ ನಿನ್ನ ತುಸಸಹ ನೆನೆಯದೆ ಹುಸಿಯ ದಾಸನಾಗಿ 4 ನನ್ನದಲ್ಲದ ಒಡವೆ ನನ್ನದೆಂದು ತಿಳಿವೆ ನಿನ್ನ ಸ್ವಾಮಿತ್ವವ ಮರದು ಮೆರೆಯುತಿರ್ಪೆ ನನ್ನದೇ ಸ್ವಾತಂತ್ರವೆಂದು ತಿಳಿದು ಭವದಿ ಹುಣ್ಣು ತಿಂದೆನು ದೊರೆಯೆ ಕೊಡದೆ ನಿನ್ನದುನಿನಗೆ 5 ವೇದ ವೋದುವ ನಾನು ನಾನೆನೀನೆಂಬುವೆ ಭೇದವ ತಿಳಿಯದೆ ಭಜಿಸುವೆ ಕುವಿದ್ಯೆ ಬಾದರಾಯಣಗುದರ ಭೇದವ ನುಡಿಯುವೆ ಮಧ್ವಮಂದಿರ ಕೃಷ್ಣ ನೀನಿಲ್ಲ ವೆನ್ನುತ6 ಪೂರ್ಣ ಗುಣದವ ನಿನ್ನ ನಿರ್ಗುಣನೆಂಬುವೆನು ಪೂರ್ಣರಲ್ಲದ ಸುರರ ಸಾಟಿ ನಿನಗೆಂಬುವೆನು ಪೂರ್ಣಬೋಧರ ಕರುಣ ಕೊಡಿಸದ್ದಿದರೆಯಿನ್ನು ಜ್ಞಾನ ಮಾರ್ಗವ ಕಾಣೆ ಸ್ವಾಮಿ ಜಗಜ್ಜನಕ 7 ಜನನ ಮರಣ ರಹಿತ ಜನಿಸುವೆ ನಮ್ಮೊಡನೆ ಕ್ಷಣ ಬಿಟ್ಟಗಲದಲೆಮಗೆ ಉಂಡುಣಿಸುತಿಪ್ಪೆ ಅನಿಮಿತ್ತ ಬಂಧುವೆ ಮರೆತು ನಿಮ್ಮುಪಕಾರ ದನುಜರ ಸೇವಿಸುತ ಹಾಳು ಮಾಡಿದೆ ಬಾಳು 8 ನಿರಯ ಭಾಜನ ನಾದೆ ದೂರವಾಯಿತು ಮುಕುತಿ ದಾರಿಕಾಯುವರ್ಯಾರೊ ಧೀರ ಜಯತೀರ್ಥ ವಾಯು ಅಂತರದಿರ್ಪ ನೀರಜಾಕ್ಷನಮ್ಮ ಶ್ರೀ ಕೃಷ್ಣವಿಠಲನೆ 9
--------------
ಕೃಷ್ಣವಿಠಲದಾಸರು
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ
ಧನ್ಯನಾದೆನಯ್ಯ ನಾನು ಧನ್ಯನಾದೆನುಅನ್ಯಮಾರ್ಗವನುಳಿದು ನಿನ್ನ ಭಕ್ತ ಭಕ್ತನಾಗಿ ಪನಿನ್ನ ಮೂರುತಿಯ ನೋಡಿ ನಿನ್ನ ಗುಣವ ಕೊಂಡಾಡಿನಿನ್ನ ನಾಮಗಳ ಪಾಡಿ ನಿನ್ನ ಮುಂದೆ ಕುಣಿದಾಡಿ 1ಆವ ಜನ್ಮಾರ್ಜಿತ ಪುಣ್ಯ ತಾವೊದಗಿತೊ ನಾ ಕಾಣೆನೀವೊಲಿದರೆ ದುರ್ಲಭ ವಾವುದೀ ಮೂರು ಲೋಕದಿ 2ತಿರುಪತಿ ಕ್ಷೇತ್ರಾಧಿವಾಸ ಪರಮಪುರುಷ ವೆಂಕಟೇಶಗುರು ವಾಸುದೇವಾರ್ಯ ವೇಷ ಮರೆಯೊಕ್ಕೆ ನಾ ನಿನ್ನ ದಾಸ 3ಓಂ ಭೀಷ್ಮ ಮುಕ್ತಿಪ್ರದಾಯಕಾಯ ನಮಃ
--------------
ತಿಮ್ಮಪ್ಪದಾಸರು
ಧಾರಿಣೀ ಭವಘೋರ ದುಃಖ ನಿವಾರಿಣಿ ಪ. ಧಾರಿಣಿಯೊಳು ಕಾಣೆ ನಿನಗೆಣೆಯಾರ ನಾನೆಲೆ ಗೀರ್ವಾಣಿ ಪಾಲಿಸು ಗುಣಮಣಿ ಅ.ಪ ಕಾಳಿದಾಸನೆ ಮುಖ್ಯ ಕವಿತಾಲೋಲರೆಲ್ಲರು ಧರೆಯೊಳು ಜಯಶೀಲರೆನ್ನಿಸಿ ಮೆರೆಯಲು ಲೋಲಲೋಚನೆ ನಿನ್ನ ಕೃಪೆಯದಲ್ಲೇ ನುಡಿಭರದೊಳು ಬಂದು ತೋರುವುದೆನ್ನೊಳು 1 ಪುಸಿಯು ಬಾರದ ತೆರದೊಳೆಮ್ಮಯ ರಸನೆಯಲ್ಲಿರು ಸಂತತಂ ರಸವ ತೋರುತೆ ಸಂತತಂ ಎಸೆವ ಶೇಷಗಿರಿಶನಂಘ್ರಿಯ ಭಜಿಸಿ ಬದುಕೆಂದೆನ್ನುತೆ ವರವ ಪಾಲಿಸು ಸುಪ್ರಿತೆ 2
--------------
ನಂಜನಗೂಡು ತಿರುಮಲಾಂಬಾ
ಧೇನುಪಾಲ ದಾಸಾರ್ಯಾ | ನುತಿಸುವೆಮಾನವೀಶನ ಪೊರೆದಾರ್ಯಾ ಪ ಕಾಣೆ ನಿನಗೆ ಸಮ ಕರುಣಾಳುಗಳನುಶ್ರೀನಿವಾಸರ ಪೊರೆದಾರ್ಯಾ ಅ.ಪ. ಯತಿವರ ವರದೇಂದ್ರರ ವರಬೋಧ ಪಡೆದು ಸಚ್ಛಾಸ್ತ್ರಗತಿಯನೆ ತಾ ಗಳಿಸುತಹಂ ಮತಿ ವಿಶಿಷ್ಟ ತಚ್ಛಾತ್ರ |ಹಿತವ ನುಡಿಯೆ ವಿಜಯಾರ್ಯಾಗತ ತಿಳಿದು ಸುಪಾತ್ರಕೃತಕನಟಿಸಿ ತಾ ಕಳುಹಿದವರ ಉಪಚಾರದಿ ಮಾತ್ರ 1 ಉತ್ತಮ ನಿಂದೆಯ ಕೃತಿಗೆ ಪ್ರಾಪ್ತಿ ಇವಗೆ ಅತಿರೋಗಇತ್ತ ಮಾತೆಗರಿವಾಯ್ತು ಸುತನ ಕ್ಷೀಣಾರ್ಯುರ್ಯೋಗ |ಅತ್ತ ಅನಿಲಾಜ್ಞೆ ಪೊತ್ತು ವಿಜಯಾರ್ಯಪದ ಸುಯೋಗಪ್ರಾಪ್ತಿಗೈಸಿ ಕ್ಷಮೆಯಾಚಿಸಿ ಆಯ್ತಿವಗೆ ತವಪದ ಯೋಗ 2 ಪರಿ ಯೋಗದಿಂದ ಮೆರೆದೆ ಸುರ ಭೂಸುರ ವೃಂದವು ಪೊಗಳುತಿರಲು ಆಗ 3 ಮೂರ್ತಿ ಕಂಡದೇವ |ರಂಗನೊಲಿಮೆಯಿಂದಂಗ ಜನಸ್ತ್ರದ ಸಂಗರಹಿತ ಭೂದೇವಇಂಗಿತಜ್ಞ ಎನಗೀಯೊ ಗುರುವೆ ದ್ವಂದ್ವ ಸಮರ್ಪಣ ಭಾವ 4 ಹೊತ್ತಿಹೆ ಬಿರುದನು ಭಕ್ತಿರೂಪಿ ಎನೆ ಗುರು ಭಾಗಣ್ಣಹತ್ತು ಎಂಟು ಮತ್ತೊಂದು ಮೊಗದವನ ವಿಶ್ವಮೂರ್ತಿಯನ್ನ |ಪೊತ್ತು ನೀನು ಹೃತ್ಕಂಜದೊಳಗೆ ಬಹು ತುತ್ತಿಪೆಯೊ ಅವನಕೃತ್ತಿವಾಸ ಸಖ ಸರ್ವೋತ್ತಮನೆನುತೊತ್ತಿ ಪೇಳ್ದ ಅಣ್ಣ 5 ಪರಿ ಮೆರೆದೆ ನೀನು ಅಂದುಯೋಗ ಇದನ ಕಂಡಾಗ ಜನರು ಭಯ ಭ್ರಾಂತರಾದರಂದು6 ಮೂರ್ತಿ ಗುರು ಗೋವಿಂದ ವಿಠಲನ ಪಾದತೋರೊ ಭೂಪ 7
--------------
ಗುರುಗೋವಿಂದವಿಠಲರು
ನಕಯಾರಿಗುಸುರಿದರೆನ್ನ ದೂರ ಕೇಳ್ಪರ ಕಾಣೆ ಮಾರಮಣ ಮಾರಜ ಸಲಹೊ ಕೃಪಾ ವಾರಿನಿಧಿ ಕರುಣದಲಿ ಪ. ವಿದೂರ ಪಾಲಿತಾಖಿಳ ಸಜ್ಜನ ಜ್ವಾಲಾ ಕರಾಳನಖರಾಳಿ ವಿದಳಿತ ದೈತ್ಯ ಪಾಲದಾನವ ಮರ್ದನ ಖೂಳರನು ಸದೆದು ದಯ ಬಾಲಿಕಾ ಪಾಲಿತ 1 ವ್ರಜಸುಂದರೀವೃಂದ ವಂದ್ಯ ವೃಂದಾರಕಾದಿ ವಂದ್ಯ ಕುಂದ ನೀನೆಣಿಸಿದರೆ ಇಂದು ಪೊರೆವರ ಕಾಣೆ ಚಂದ್ರಶೇಖರ ಸಖನೆ 2 ದೋಷಗಣದೂರ ನಿಶ್ಯೇಷ ಸದ್ಗುಣಭರಿತ ವಾಸವಾರ್ಚಿತ ಪದಾಬ್ಜ ಶ್ರೀಶ, ವಾಗೀಶ ಗೌರೀಶ ಫಣಿವೀಶಮುಖದಾಸಜನ ಪರಿಪಾಲಕ ದೋಷರಾಶಿಯ ಕಳೆದು ಪೋಷಿಸುವ ದೊರೆಯೆ ನಿ- ನ್ನಾಶ್ರಯವೆ ನಂಬಿದೆನು ಶೇಷಭೂಧರ ರಮಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಗುವರಲ್ಲವೊ ರಂಗ ನಾಚಿಕೆ ಇಲ್ಲವೊನಿನಗೆ ಹಗೆಯ ಮಾಡಿದವಳ ಬಗೆಯ ಕಾಣೆರಂಗ ಪ. ಅನ್ಯಾಯ ನ್ಯಾಯವೆಂಬುದಿನ್ನು ನೀ ಅರಿಯೆಲೊಮನ್ನೆಯಳ ವೀಳ್ಯ ಹಿಡಿದೆಯಲ್ಲೊನೀ ಹಿಡಿದೆಯಲ್ಲೊ ರಂಗ1 ಭರದಿ ಕೋಪಿಸಿ ಭೀಷ್ಮ್ಮೆ ತಿಳುವಳಿಕೆ ನಿನಗಿಲ್ಲಹರದೆಯರಿಬ್ಬರು ಎನಗೆ ಸರಿಯರಲ್ಲಎನಗೆ ಸರಿಯರಲ್ಲ ಭೀಷ್ಮ್ಮೆ ದೂರುವರೇನೆ2 ಹೀಂಗೆ ಯಾರೂ ನಗರೇನ ಭೀಷ್ಮ್ಮೆಇರುವೆಗಿಂತ ಕಡಿ ಮಾಡಿದೆಲ್ಲಎನ್ನ ಕಡಿಮಾಡಿದೆಲ್ಲ 3 ಅತಿ ಕೋಪದಿಂದ ಭೀಷ್ಮೆ ಸ್ಮøತಿಯಿಲ್ಲ ನಿನಗಿನ್ನುಸತಿಯರಿಬ್ಬರು ಎನಗೆ ಸರಿಯರಲ್ಲಎನಗೆ ಸಮರಲ್ಲ4 ಅಕ್ಕ ತಂಗಿಯರೆಂಬೊ ದಿಕ್ಕಿನ ಮೂಲೆಗೆ ಬೆಕ್ಕಿನಕಿಂತ ಕಡಿ ಮಾಡಿದೆಲ್ಲೊಎನ್ನ ಮಾಡಿದೆಲ್ಲೊ ರಂಗಾ 5 ವಾರಿಜಾಮುಖಿ ಎನಗೆ ಯಾರು ಹಿರಿಯರು ಹೇಳೆನಾರಿಯರಿಬ್ಬರು ಎನಗೆ ಪೊರರಲ್ಲಎನಗೆ ಪೊರರಲ್ಲ್ಲ 6 ಹುಡುಗಿಯರೆಂಬುವನುಡಿಯ ಕೇಳುತ ಭೀಷ್ಮಿಕಡುಹರುಷ ಬಡುತಲೆ ಮನದೊಳಗೆತನ್ನ ಮನದೊಳಗೆ7 ಕೃಷ್ಣನ ಮಡದಿಯರು ಎಷ್ಟು ಗುಣವಂತರೆಂದುಅಷ್ಟ್ಟೂರಕ್ಕಿಂತ ಮೊದಲೆ ಮದಿವ್ಯಾದೆನಿಮ್ಮನ್ನು ಮದುವ್ಯಾದೆ8 ಸಿಟ್ಟು ಬಿಟ್ಟಿಬ್ಬರು ಕೃಷ್ಣ ನಮ್ಮವನೆನ್ನಿಧಿಟ್ಟಿ ರಾಮೇಶ ಸಕಲೇಷ್ಟವೆನ್ನಿಸರ್ವೇಷ್ಟವೆನ್ನಿ9
--------------
ಗಲಗಲಿಅವ್ವನವರು