ಒಟ್ಟು 3006 ಕಡೆಗಳಲ್ಲಿ , 118 ದಾಸರು , 2126 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆ ಮನೋಹರ ಭಕ್ತಲಲಾಮ ಸಿಂಧುಸದನ ತ್ರಿಜಗದೋದ್ದಾಮ ಪ ಮಂದರಮಂದಿರ ಮೇಘ ಶ್ಯಾಮ ಕುಸುಮ ಅ.ಪ ಅಮಿತ ಲೀಲ ಸಗುಣನಿರ್ಗುಣ ಮಹಿಮಜಾಲ ಸುಜನ ಪಾಲ ಕಾಲ 1 ಪರತರಪಾವನ ಕರುಣಾಂತರಂಗ ಮಾಧವ ಪರಿಭವ ಭಂಗ ಸಿರಿ ನರಸಿಂಗ ಮರಣರಹಿತ ಪ್ರಭುವರ ನೀಲಾಂಗ2 ಗೋಕುಲಪತಿ ಗೋಪಾಲಶೀಲ ವ್ಯಾಕುಲಪರಿಹರ ವೇಣುಲೋಲ ಕಾಕುದನುಜ ಸಂಹಾರ ವಿಶಾಲ ಲೋಕಪಾವನೆ ವರ ದೇವಕಿ ಬಾಲ 3 ಯೋಗಿ ವಂದಿತ ವನಜ ಸಂಭವಾದಿ ಸುರಮುನಿವಿನುತ ಚಿನುಮಯ ಚಿದ್ರೂಪ ಚಿತ್ಕಳಾಭರಿತ ಜನಕತನುಜೆಪತಿ ವಿಮಲಚರಿತ 4 ಗೋಕುಲನಾಯಕ ಶ್ರೀಕೃಷ್ಣನಮೋ ವೈಕುಂಠನಾಯಕ ಶ್ರೀ ವಿಷ್ಣು ನಮೋ ಲೋಕನಾಯಕ ಶ್ರೀನಿವಾಸ ನಮೋ ಭಕುತಿದಾಯಕ ಶ್ರೀರಾಮ ನಮೋ5
--------------
ರಾಮದಾಸರು
ಇಂದಿರೇಶ ನಿನ್ನ ಚರಣದ್ವಂಧ್ವವನ್ನು ಬಿಡೆನೊ ಕರುಣಾ ನೊಂದಿರುವೆನೊ ಮನದಿ ಬಹಳ ಹಿಂದುಮುಂದು ತೋರದಿಹುದು ಬಂಧು ಬಳಗವೆಲ್ಲ ನೀನೆ ಎಂದಿಹೆನೊ ಅರವಿಂದಲೋಚನ ಅ.ಪ ಊರು ಊರು ಸುತ್ತಿ ದಣಿದು ಸಾರರಹಿತ ಶಾಸ್ತ್ರಗಳ ವಿ ಕಾಲ ಕಳೆದೆನೋ ಉದಾರಚರಿತ ಭೂರಿ ಕರಣದಿಂದ ನಿನ್ನ ಚಾರುಚರಣ ಸೇವೆ ರುಚಿಯು ತೋರಿ ಮನಕೆ ಸಂತಸದಿ ಮುರಾರಿ ಎನಗೆ ಗತಿಯೆನುತಲಿ 1 ದುರಿತ ಸ್ತೋಮಗಳಲಿ ಮುಳುಗಿ ಬಳಲಿದೆನೊ ನಿಸ್ಸೀಮ ಮಹಿಮ ನಾಮಸ್ಮರಣ ಮಾತ್ರದಿಂದ ಪಾಮರ ಜನರುಗಳ ಯೋಗ ಕ್ಷೇಮ ವಹಿಸಿ ಪೊರೆಯುವಂಥ ಕಾಮಧೇನು ನೀನೆಂದರಿತು 2 ಮಾತಿನಲ್ಲಿ ಮಲ್ಲರೆಂದು ಖ್ಯಾತಿ ಪಡೆದ ಜನಗಳಿರಲು ಯಾತರವನು ಇವನು ಎನ್ನದಿರು ದೂತ ಪ್ರಸನ್ನನೇ ಸೋತು ವಿವಿಧ ಕಾರ್ಯಗಳಲಿ ಆತುರದಲಿ ನಿನ್ನ ಪರಮ ಪ್ರೀತಿಯ ಪಡೆಯುವುದೇ ದೊಡ್ಡ ನೀತಿಯೆಂದು ಅರಿತು ಸತತ 3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರೇಶ ಭವಬಂಧನ ಬಿಡಿಸೊ ನಿನ್ನಾನಂದದೊಳಿರಿಸೊ ಪ ಸಿಂಧುಶಯನ ಗೋವಿಂದ ಮುರಾರೆ ಅಚಿಂತ್ಯಾದ್ಭುತ ಶೌರೆ ಅ.ಪ. ತಾಳಲಾರೆನೊ ಈ ತಾಪತ್ರಯ ಹರಿಸೊ ನಿನ್ನವನೆನಿಸೊ ಕಾಲಕರ್ಮ ಕೋಟಲೆ ತಪ್ಪದಲ್ಲ ನೀ ಕೇಳೆನ್ನ ಸೊಲ್ಲ ವಾಕು ಪಾಲಿಸಿ ಎನ್ನನು ಪಾರುಗಾಣಿಸೊ ಫಣಿರಾಜಶಯ್ಯ 1 ಪರಿಪರಿಯಿಂದಲಿ ಜನ್ಮ ಧರಿಸಿ ಕರೆದುತಂದೆ ಈ ಜನ್ಮದಿ ನಿಂದೆ ಅರಿಯದವರಂತಿರುವರೆ ಕಾಯುವ ಕರುಣಿ ನೀನು ದೀನಜನ ಸುರಧೇನು 2 ಅಂಬರ ಮಣಿಯಂತೆ ಬಿಂಬ ಮೊಳಗ್ಹೊಳೆದು ದುರಂತ ಕರ್ಮಂಗಳ ಕಳೆದು ಹಂಬಲಿಸುವ ಭಕುತರ ಬೆಂಬಲಿಗನೆನಿಸಿ ಸಂತತ ನಿನ್ನ ಸುಖಸಿರಿಯ ಸುರಿಸೊ 3 ಬಿಂಬವು ಒಲಿದರೆ ಪ್ರತಿಬಿಂಬ ಫಲಸುವದುಂಟು ಈ ಮಾತು ನಿಘಂಟು ಬಾಂಬೊಳೆ ಹರಿಸಿದ ಹರಿ ಮಾನಿಧಿವಿಠಲ ನೀನಲ್ಲದಿನ್ಯಾರೋ ದೇವರ ದೇವಾ 4
--------------
ಮಹಾನಿಥಿವಿಠಲ
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇಂದು ಕಂಡೇ ಪ ಪಾದ ಭಜನೆ ಮಾಡುವದೊಂದೆ ಅ.ಪ. ಪುಟ್ಟಿದಾರಾಭ್ಯ ಬಹುದಿಟ್ಟನಾಗಿಯೆ ಬಾಳು ಅಟ್ಟಿಮೆರೆಯುವ ಬಯಕೆ ವಿಟ್ಟು ಮನದಲಿ ಬಹಳ ಕಷ್ಟಪಟ್ಟೆನು ಘಳಿಸೆ ವಿತ್ತರಾಶಿಯ ವಿಪ್ರ ಶ್ರೇಷ್ಟಧರ್ಮವ ಬಿಟ್ಟು ವ್ಯರ್ಥ ವಿದ್ಯೆಯ ನೋದಿನೋದಿ ಅಷ್ಟಕರ್ತನು ಬಯಕೆ ಬಟ್ಟಬಯಲನು ಗೈದು ಕೊಟ್ಟು ಜ್ಞಾನದ ಕಣ್ಣು ನೆಟ್ಟನೆ ನೊಡೆನಲು ಬಟ್ಟು ಸುಖವನೆ ಮೆಲ್ವ ಜಟ್ಟಿ ಜಗದಲಿ ಕಾಣೆ ಭವ ಸುಖಕೆ 1 ಹೆಂಡತಿಯ ಸುಖವೆಂದೆ ಕೆಂಡಬಡತನ ಸೋಕೆ ಗಂಡು ಬಯಕೆಗಳೆಲ್ಲ ಉಂಡುದಣಿಯಲಿಲ್ಲ ಮಂಡೆ ಚಚ್ಚುತ ನಿತ್ಯ ತುಂಡು ಆದಳು ಅವಳು ಬೆಂಡು ಆದೆನುನಾನು ಹಿಂಡು ಬಳಗಗಳೆಲ್ಲ ಉಂಡು ದಣಿದರು ನಗೆಯ ಹಿಂಡಿ ಪರಜನ ಪ್ರಾಣ ಉಂಡು ಬದುಕಿಹೆ ಸ್ವಾಮಿ ಮುಂಡೆ ಗಿಂತಲು ಹೀನ ಷಂಡನಾಗಿಹೆ ಸ್ವಾಮಿ ಪಾಂಡುರಂಗನೆ ನಿನ್ನ ತೊಂಡನಾದರೆ ಧನ್ಯ 2 ವಿತ್ತ ಗಂಟು ಇಲ್ಲದಮೇಲೆ ಗಂಟುಮೋರೆಯ ನೇಮ ಒಂಟಿಗನೆ ಜೀವನಿಹ ನೆಂಟ ಬಿಂಬನೆ ಒಬ್ಬ ಭಂಟನೆಂದರೆ ಪಿಡಿವ ಶುಂಠ ಬಿಟ್ಟವ ಸತ್ಯ ಕಂಟಕವು ವಿಷಯತತಿ ಕಜ್ಜಿತಿನಸಿನ ತೆರದಿ ಎಷ್ಟು ಸೇವಿಸಲಷ್ಟು ತಂಟೆನೀಡುವವೇನೆ ಕುಂಠವಾದರು ಕರುಣ ಅಂಟಿಮನಸಿಗೆ ಭಾಧೆ ಉಂಟುಮಾಡುವವು ವೈಕುಂಠ ನಾಯಕಕಾಯೊ 3 ಬಾಡಿಗೆಯ ಮನೆಯಂತೆ ಗಾತ್ರವಿದು ಜೀವನಿಗೆ ಹೂಡಿಹನು ಭವಯಾತ್ರೆ ಓಡಿಹೊಹುದು ತಾನೆ ಆಗಿ ಮುಗಿಯಲು ಆಟ ಪ್ರೌಡ ಹರಿಪುರ ದಾರಿ ನೋಡಿಕೊಂಡವ ಜಾಣ ಕೇಡು ಮತ್ತಗೆ ಸಿದ್ಧ ಮಾಡುತಲಿ ವಿಧಿಗಳನು ದೂಡುತಲಿನಿಜೀವ ಕೂಡುತಲಿ ಸಜ್ಜನರ ಹಾಡುತಲಿ ಹರಿಗಾನ ಜೋಡಿಸುತ ಹರಿಭಕ್ತಿ ಬೇಡದಲೆ ಏನೊಂದು ಬಾಡದಿರೆ ದುಃಖ ಬರೆ ನೋಡುವನು ನಿಜ ಸುಖವ 4 ಹೆಂಡತಿಯು ಸುಗುಣಿ ಇರೆ ಗಂಡನಿಹ ದುರ್ಮಾರ್ಗ ಗಂಡ ಮೃದು ತರವೆನ್ನೆ ಹೆಂಡತಿಯು ಕರ್ಕಸಿಯು ಕುಂಡಲಿಯ ಸಿರಿಯೆನ್ನೆ ಮಂಡೆಯಲಿ ಮೆದುಳಿಲ್ಲ ಹೆಂಡ ಕುಡುಕರು ಸುತರು ಉಂಡುಸುಖಿಸೆ ರೋಗ ಮುಂಡೆಯರ ಚಲುವಿಕೆಯು ಶಂಡಸಹ ಸಂಸಾರ ಭಂಡ ಮಕ್ಕಳ ಬಾಳು ಪುಂಡಜನ ಸಹವಾಸ ಕಂಡು ಸಹಿಸದ ನೆಂಟ ಉಂಡು ದೂರುವ ಬಳಗ ದಂಡವಲ್ಲವೆ ಮತ್ತೆ ಕೊಂಡು ಮಾಡುವದೇನು 5 ಭವ ನಿಜಗುಣವೆ ಕ್ಲೇಶದಾಯಕ ವಿರಲು ಲೇಸು ದೊರಕುವದುಂಟೇ ಏಸು ಕಾಲವು ಕಳಿಯೆ ಏಸು ಕಡಿಯಲು ನೀರ ಸೂಸುವುದೆ ನವನೀತ ಹೇಸಿಗೆಯ ದುರ್ಗಂಧ ನಾಶವಾಗುವುದುಂಟೇ ಕ್ಲೇಶ ತೊಲಗದು ಎಂದು ದಾಶರಥಿಯ ಮನಮುಟ್ಟಿ ದಾಸ ನಾಗದ ತನಕ ಭಾಸವಾಗದು ಜ್ಞಾನ ಶ್ರೀಶ ಕಾಣಿಸ ತನ್ನ ದೋಷಿಯಾಗದೆ ಹರಿಗೆ ಮೀಸಲೆನ್ನಿರಿ ಎಲ್ಲ 6 ನಂಬಿ ಮತಿಮತ ತತ್ವ ವಿಷಯ ಹಂಬಲವಳಿದು ಡಿಂಬಗತ ಹರಿ ಬಿಂಬ ಧ್ಯಾನ ಮಾರ್ಗವ ಕಂಡು ಅಂಬುಜಾಕ್ಷ ನಮ್ಮ “ಶ್ರೀ ಕೃಷ್ಣವಿಠಲ”ನ್ನ ತುಂಬಿ ಹೃದಯದದಿ ಸತತ ಪರಮ ಸಂಭ್ರಮದಿಂದ ತಂಬೂರಿ ಮೀಟುತ್ತ ಗೆಜ್ಜೆ ಸಹ ಕುಣಿಕುಣಿದು ಅಂಬಕದಿ ಸುಖ ಬಾಷ್ಪ ಸುರಿಸುತ್ತಹರಿನೆನೆದು ಅಂಬುಜಾಸನ ಸುರಕದಂಬ ಕರುಣವ ಗಳಿಸಿ ಅಂಬೆ ಸಿರಿಪತಿ ಚರಣದಿಂಬು ಬೇಡುವದೊಂದೇ 7
--------------
ಕೃಷ್ಣವಿಠಲದಾಸರು
ಇಂದು ನಿನ್ನಪಾದ ಸನ್ನಿಧಿಯ ಘನ್ನ ದರುಶನದಿಂದಲಿಪ ಮುನ್ನ ದುರಿತಗಳೆಲ್ಲವು ಛಿನ್ನಛಿನ್ನವುಮಾಡಿ ಬನ್ನಬಡಿಸದೆ ಎಮ್ಮ ಸಲಹುವಸ್ವಾಮಿ ಅ.ಪ ಸುಮನಸರೊಡೆಯ ಕಾಲನಾಮಕನಾಗಿಪ್ಪ ಮೋದ ನಾಮ ವತ್ಸರದಿ ವಿಮ¯ ಚೈತ್ರಕೃಷ್ಣಪಕ್ಷದಶಮಿ ಸೌಮ್ಯವಾಸರದಿ ದ್ಯುಮಣಿ ಉದಯಕಾಲದಲಿ ಮಮಕುಲಸ್ವಾಮಿಯೆ ಎನ್ನ ವಂಶಜಾಪ್ತರ ಅಮಿತಶ್ರಮ ಪರಿಹರಿಸಿ ಈಗ ಶ್ರೀಮನೋಹರ ನಿನ್ನ ವಿಶ್ವರೂಪವ ತೋರ್ದೆ ಪ್ರೇಮ ಇಂದಿಗೆ ಆಯಿತೆ ಅಮಿತಜನ ಬಂಧು 1 ನಿನ್ನ ದರುಶನವೆಂದಿಗಂದಿಗಾಗಲಿ ಎಂದು ನಿನ್ನ ಧ್ಯಾನವನೆ ಮಾಡಲು ಸನ್ನುತಾಂಗನೆ ನೀನೆ ಘನ್ನ ಕರುಣವು ಮಾಡಿ ಎನ್ನ ಯತ್ನವು ಇಲ್ಲದೆ ನಿನ್ನ ದರುಶನಕ್ಕಾಗಿ ಅನ್ಯರಿಂದ ಪ್ರೇರಿಸಿ ಎನ್ನಲ್ಲಿ ಮನವು ಪುಟ್ಟಿಸಿದೆ ಪನ್ನಗಾಚಲನಿಲಯ ನಿನ್ನ ಮಹಿಮೆ ಎಂತುಂಟೋ ಎನ್ನನಿಲ್ಲಿಗೆ ತಂದು ಘನ್ನ ದರುಶನವಿತ್ತೆ 2 ಪಂಕಜೋದ್ಭವನಯ್ಯ ಮಂಕುಕವಿಸಿದೆ ಪಯಣ ಶಂಕೆಯ ಪರಿಹರಿಸಿ ಸಂಕಟಹರಿಸಿ ನಿನ್ನ ಕಿಂಕರರೊಳು ಸೇರಿಸಿ ಬಿಂಕದಲಿ ಗಿರಿಯನೇರಿಸಿ ಪಂಕಜನಾಭ ಮುಕುಂದ ಗೋವಿಂದ ಶಂಕರನುತಪೂಜಿತ ಶಂಖತೂರ್ಯಾದಿ ವಾದ್ಯಗಳಿಂದಲಿ ಶ್ರೀ ವೇಂಕಟೇಶ ನಿನ್ನ ನೋಡಿದೆ ಬಿಡದೇ 3
--------------
ಉರಗಾದ್ರಿವಾಸವಿಠಲದಾಸರು
ಇಂದು ನಿನ್ನಯ ಪಾದಾ ವಂದಿಸುವೆ ನಾನು ಛಂದದಿಂದಾ ಪ. ಮಂದಾರೊದ್ಧರನ ಪಾದಾ ಸೇವಕರೆಂದೆನಿಸಿದಿ ದುರ್ಮಾಯವಾದಿಗಳನು ಜಯಸಿದಿ ಬ್ರಹ್ಮರಾಯನೆಂದೆನಿಸೀದಿ ಅ.ಪ. ಅಂಜನಿಸುತನೆಂದೆನಿಸಿದೆ ಸಂಜೀವನವ ತಂದಿ ಕಂಜಾಕ್ಷಿಮುಖಿಗೆ ಉಂಗುರವನ್ನಿತ್ತಿ ವನವ ಕಿತ್ತಿ ಸಂಜೀವರಾಯನೆ ದುರುಳ ರಾವಣನ ಸಂಹರಿಸಿದಿ ವಿಭೀಷಣನಿಗೆ ರಾಜ್ಯಭಾರದಲ್ಲಿ ನಿಲ್ಲಿಸಿದಿ ಅಯೋಧ್ಯನಗರಿಗೆ ತೆರಳಿದಿ 1 ಕುಂತಿಯಾ ಕಂದಾ ಕೌರವಾದಿಗಳ ಕೊಂದ ಯುದ್ಧದಲ್ಲಿ ಪ್ರಚಂಡಾ ಭಾರತಿಗೆ ಗಂಡಾ ಲಂಡದುಷ್ಯಾಸನನ ತುಂಡು ತುಂಡುಮಾಡಿ ಸೀಳಿದ ವಿರಾಟ ನಗರದಿ ಸಂಚರಿಸಿದಾ ಕೀಚಕಾದಿಗಳ ಸಂಹರಿಸಿದಾ ಪಾಂಚಾಲಿಗೆ ಸೌಗಂಧೀಕುಸುಮವನೆ ತಂದಾ ಆನಂದಾ 2 ಮಧ್ಯಗೇಹನಲ್ಲಿ ಉದ್ಭವಿಸಿದೆಯೋ ನೀ ಇಲ್ಲಿ ಅದ್ವೈತ ಮತವೆಲ್ಲಾ ಕಾಲಿಲೆ ವದ್ಯೋ ಗೆದ್ಯೋ ಮಧ್ವಮತವೆಲ್ಲ ಉದ್ಧಾರ ಮಾಡಿದಾ ಬದರಿಕಾಶ್ರಮಕೆ ಪುನರಪಿ ಪೋದಾ ವ್ಯಾಸಮುನಿ ಪಾದಕೆ ಅಭಿವಂದಿಸಿದಾ ಉಡುಪಿಯೊಳು ಕಾಳಿಮರ್ಧನಕೃಷ್ಣನು ನಿಲ್ಲಿಸಿದಾ 3
--------------
ಕಳಸದ ಸುಂದರಮ್ಮ
ಇಂದು ಶ್ರೀರೂಪವ ಛಂದಾದಿಂದಲಿ ನೋಡುವೆನು ಆನಂದ ಪಡುವೆನು ಪ. ಬಿಳಿಯ ಕುಪ್ಪುಸವಾ ತೊಟ್ಟಳು ನೋಟವ ನೋಡುವಳು 1 ಪಾದಾಕೊಪ್ಪುವ ಋಳಿ ಪೈಜಣಿ ಕಾಲುಂಗರದಂದಾ ಸಾಲಿನೊಳಗೆ ಅಘಾದ ಪರಿಪೂರ್ಣ 2 ಗಳದಿ ಕಠಾಣೆಯಕಟ್ಟಿ ಅದರ ಮೇಲ್ ಗೆಜ್ಜೆಯ ಟೀಕಿ ಪುಥಲಿಸರ ಚಂದ್ರಹಾರಗಳು ವೈಯಾರದಿ ಬರುವೋಳೂ 3 ಮುದ್ದು ಮುಖಕ್ಕೆ ತಕ್ಕ ಮುಖುರೆ ಬುಲಾಕು ದ್ರಾಕ್ಷಝೂಲರ ಬುಗುಡಿಯ ಬೆಳಕು ಆನಂದ ಸುರಿಯೋಳು ಇವಳು ಮನಕ 4 ಚವರಿ ಚಂದ್ರಾ ಜಡಿ ಭಂಗಾರದ ರಾಗುಟಿ ಬೈತಲ ಮುತ್ತನಿಟ್ಟ ಹೇಳ ಭಂಗಾರ ಗೊಂಡೆವ ಕಟ್ಟಿ ಇವಳ್ಯಾರು ಧಿಟ್ಟಿ 5 ಮಂದರ ಮಲ್ಲಗಿ ಸುಗಂಧಿಯು ತ್ಯಾದಿಗಿ ನೂತನದ ಪಾರಿಜಾತವನ್ನು ಇಂದು ತಾಂಬೂಲ ಮೆಲುವುತ ಮುಗುಳು ನೆಗಿಯು ನಗುತ 6 ತರುಣಿಯೆನ್ನದಿರು ಹರಿಯಾ ರೂಪಾವ ವ್ಹಾ ನೋಡು ಛಂದಾಮನ ಕಾನಂದಾ 7 ನೀನು ಶ್ರೀರಂಗನಾಯಕನೆ ಕಾಳಿಂಗಶಯನನೆ ನರಶಿಂಗನೋ 8 ಯೇಷ್ಟುನೋಡಿದರು ಈ ಧಿಟ್ಟ ಮೂರುತಿಯ ದೃಷ್ಟಿ ತಾಕುವ ದಯ್ಯ ಕಾಳಿಯ ಮರ್ಧನ ಕೃಷ್ಣರಾಯಾ 9
--------------
ಕಳಸದ ಸುಂದರಮ್ಮ
ಇಂದು ಆರುತಿ ತಂದು ಬೆಳಗಿರೆ ಸಿಂಧುರಾಜನ ಕುವರಿಗೆ ನಾಭನ ಮಡದಿಗೆ ಪ ಸಿಂಧು ನೋಡುತ ಕೃಷ್ಣಗೆ ನಂದಗೋಪಕುಮಾರಗೆ 1 ಎಲ್ಲದೇಶ ದೊಳೆಲ್ಲ ಕಾಲದೊಳೆಲ್ಲ ಸುರರೊಳು ಕೃಷ್ಣಗೆ ಇಲ್ಲ ಸಮರೆಂತೆಂಬುದನು ಜಗಕೆಲ್ಲ ತೋರಿದ ದೇವಿಗೆ 2 ವಾರವಾರದಿ ಚಾರುಪದಯುಗ ಸಾರಿಭಜಿಸುವ ಜನರಿಗೆ ಆ- ಪಾರ ಸೌಖ್ಯಗಳೀವ ಕಾರ್ಪರ ನಾರಸಿಂಹನ ರಾಣಿಗೆ3
--------------
ಕಾರ್ಪರ ನರಹರಿದಾಸರು
ಇದು ಈಗ ಸಮಯ ಸೀತಾರಾಮ ಪ ಇದು ಈಗ ಸಮಯವು ಪದುಮದಳಾಕ್ಷನೆ ಸದಯದಿ ನಿಂದೆನ್ನ ಒದಗಿ ಕಾಯ್ವ ಶ್ರೀರಾಮ ಅ.ಪ. ಖಾಸವು ತುಂಬೆ ಕಂಠದಿ ಶ್ವಾಸವು ನಿಲ್ಲೆ ಘಾಸಿಯಾಗಲು ಘುರುಘುರುಕೆಂದು ಬÉೂೀರಿಡೆ ಸಾಸಿರ ಚೇಳು ಕಡಿದಂತಾಗುವಾಗ 1 ಕಾಲವು ಸಲ್ಲೆ ಪಂಚೇಂದ್ರಿಯಂಗಳು ಸಡಿಲೆ ಈ ದೇಹದಿ ಲಾಲಾ ಮೂತ್ರವು ಮಲ ಜೋಲಿ ಬೀಳುತಲಿರೆ ಕಾಲನ ದೂತರು ಬಂದು ಬಿಡದೆಳೆಯುತಿರುವಾಗ 2 ನಂದನಾದಿಗಳು ನಿಂದು ಗೋಳಿಡುತಿರೆ ಬಂಧು ಬಳಗಗಳು ಒಂದನು ನೋಡಿದೆ ಕುಂದುತ್ತ ಚಿತ್ತದಿ ನಿಂದಿರಲು ತಂದೆ ಧೇನುಪುರಿನಾಥ ಬಂದೆನ್ನ ಕಾಯೊ ಹೋಗುವಾಗ 3
--------------
ಬೇಟೆರಾಯ ದೀಕ್ಷಿತರು
ಇದು ಏನೆ ಯಶೋದೆ ಇದು ಏನೆ ಯಶೋದೆ ದಧಿಯ ದಾಮೋದರ ಹೆದರಿಕಿಲ್ಲದೆ ಕುಡಿದೋಡಿ ತಾ ಪೋದ ಪ ಕೊಳಲನೂದುತಲೆ ಆಕಳನೆ ಕಾಯುತಲ್ಹೋಗಿ ಕಳಲ ಗಡಿಗೆಸುತ್ತ ಕುಣಿದಾಡುವುದು 1 ವತ್ಸಕಾಯುತ ವನದೊಳಗೆ ಆಡೆಂದರೆ ಕಿಚ್ಚುನುಂಗಿ ಸರ್ಪವ ತುಳಿಯುವುದು 2 ಚೆಂಡನಾಡುತ ತುರುವ್ಹಿಂಡು ಕಾಯೆಂದರೆ ಗಂಡನುಳ್ಳವರ್ಹಿಂದ್ಹಿಂದೆ ತಿರುಗುವುದು 3 ವಛ(ತ್ಸ?) ನಂದದಲಿ ಬಾಯ್ ಹಚ್ಚ ಗೋವಿನ ಕ್ಷೀರ ಅಷ್ಟು ಕುಡಿದನಾಶ್ಚರ್ಯ ನೋಡಮ್ಮ 4 ಇಂದೆನ್ನ ಮನೆಯಲ್ಲೊಂದಿಷ್ಟು ಕ್ಷೀರಗಳಿಲ್ಲ ಗಂಡ(ಅ?) ತಿ ದುಷ್ಟೆನ್ನ ಕೊಲ್ಲುವನಮ್ಮ 5 ಮೌನಗೌರಿಯ ನೋತು ನೀರೊಳಗಿದ್ದೆವೆ ಮಾನಹೀನರ ಮಾಡಿ ಮರವನೇರುವುದು 6 ಬಟ್ಟೆ ನೀಡೆಂದಾಲ್ಪರಿಯಲು ಜೋಡಿಸಿ ನಿಮ್ಹಸ್ತ ಮುಗಿ(ಯಿ) ರೆಂದಾಡುವುದು7 ಬುದ್ಧಿಹೇಳೆಂದರೆ ಮುದ್ದು ಮಾಡುವರೇನೊ ಕದ್ದು ಬಂದರೆ ಕಾಲು ಕಟ್ಟಿ ಹಾಕಮ್ಮ 8 ದಧಿ ಬೆಣ್ಣೆ ಚಂದ್ರನಂತ್ಹೊಕ್ಕು ತಾ ತಿಂದ ನೋಡಮ್ಮ 9 ಕೇರಿ ಮಕ್ಕಳ ನೋಡೊ ಮಹರಾಯ ಬಲರಾಮ ದೊಡ್ಡಮಗನು ಎಲ್ಲೆ ದೊರಕಿದನಮ್ಮ 10 ಮೀಸಲ್ಹಾಕಿದ ಬೆಣ್ಣೆ ನೀ ಸವಿದೀಯೆಂದು ಲೇಸಾಗಿ ಹೇಳೆ ಭೀಮೇಶಕೃಷ್ಣನಿಗೆ11
--------------
ಹರಪನಹಳ್ಳಿಭೀಮವ್ವ
ಇಂದು ಕಂಡೆನು ಹರಿಯ | ಭವಹಾರಿಯ ಇಂದು ಕಂಡೆನು ಕಂಬದಿಂದಲಿ ಪ ಬಂದು ದೈತ್ಯನ ಕೊಂದು ಕಂದನಿ- ಗಂದು ಒಲಿದಾನಂದ ಸಾಂದ್ರನ ಇಂದಿರಾ ಮಂದಿರನ ವಂದ್ಯನ ಅ.ಪ. ಎಂದಿನಂದದಿ ಬರುತ | ಮನದಲಿ ಶ್ರೀ ಮು- ಕುಂದ ನಾಮವ ನೆನೆಯುತ ಮುಂದು ಮುಂದಕೆ ನಡೆಯುತ | ಆ- ನಂದದಿ ಹೋಗುತಲಿರೆ ಸುಂದರಿ ಶ್ರೀ ತುಲಸಿಗೊಲಿದು ಬೃಂದೆಯನು ಕರವಿಡಿದು ಪೊಳೆದು ಬಂದು ಗಂಡಕಿಯಿಂದ ಭಕ್ತರ ವೃಂದ ಪೊರೆಯಲು ಪಥದಿ ನಿಂದನ1 ಸುಕೃತ | ಬಂದೊದಗಿತೊ ಶ್ರೀಶನೆನಗೆ ದೊರೆತ | ಪ್ರಭಾವದೆ ದುರಿತ | ರಾಶಿಯು ಇನ್ನು ದಾಸರಾಯರ ಕುಲದಿ ಜನಿಸಿದ ಕೂಸೆನುತ ದೇಸಿಗರ ಸೇವೆಗೆ ಮೀಸಲಾಗಿಸಲೋಸುಗೆನ್ನ ಮ- ಹಾಶಯವ ಲೇಸೆನಿಸಿ ಬಂದವ 2 ವಿಕಳ ತತಿಗೆ ಬಾಧಕ | ಈತನ ನಾಮ ಪ್ರಕಟಿಸಲಿನ್ನು ಸುಖ | ಪಾಲಿಸುವನು ಯುಕುತಿಗೆಂದಿಗು ನಿಲುಕ | ಸುಕೃತರಿಂದ ಭಕುತಿ ಸೇವೆಯನೊಂದೆ ಕೊಳ್ಳುವ ಭಕುತಿ ಮುಕುತಿಗಳನ್ನು ಕೊಡುವ ಸಕಲ ಕಾಲದಿ ನಿಂತು ಸಲಹುವ ಲಕುಮಿಕಾಂತನ ಸರ್ವ ಶಕ್ತನ 3
--------------
ಲಕ್ಷ್ಮೀನಾರಯಣರಾಯರು
ಇಂದು ನಮ್ಮನಿಯಲಿ ಆನಂದ ಬಂದ ನೋಡಿ ಮುಕುಂದ ಗುರುಕೃಪೆಯಿಂದ ಧ್ರುವ ಸದಮಲ ಸುಖಕಲ್ಲೋಳ ಬೆಳಗುದೋರುತಲ್ಯದೆ ಬಹಳ ಹೇಳಲಳವಲ್ಲದು ಬಲುಸೂಕ್ಷ್ಮ ತಿಳಿದವ ತಾ ವಿರಳ ಇಳೆಯೊಳು ನಿಜ ಆನಂದವು ದೋರಿತು ಸ್ವಾನುಭವಕ ಸುಕಾಲ 1 ಮಾಯವಗಂಡು ಧನ್ಯಧನ್ಯಗೈಯಿತು ಜೀವನ ತಾ ಸನ್ಮತ ಸುಖಸವಿಗೊಂಡು ಪುಣ್ಯರಥ ಪರಿಣಾಮದಲನುದಿನ ಮನಬೆರೆಯಿತು ನೆಲೆಗೊಂಡು ಸ್ಮರಣಿಯ ಸವಿದುಂಡು 2 ಸದ್ಗುರು ಎನ್ನೊಡೆಯ ಚಂದವಾಯಿತು ಆನಂದದ ಸುಖವಿದು ಮಹಿಪತಿಗೆಡೆಯಡಿಯ ಸಂದಹರೆವ ಜನ್ಮ ಮರಣದ ಹೇಳಿದ ತಾ ನಿಜನುಡಿಯ ಹೊಂದಿ ಹರುಷಬಡುವಾನಂದವುದೋರುತಿದೆ ಸಿಲುಕಡಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ಕೃಪೆಯಿಂದ ಧ್ರುವ ವಸ್ತುದಯ ಬೀರುವಾನಂದ ಪ್ರಸ್ತ ಹಸ್ತ ಬಂದವರಿಗೆ ಸಾಧ್ಯಸ್ತ ಪ್ರಸ್ತ ಉಂಟಾಗಿದೆ ನೋಡಿ ಸಮಸ್ತ ಸ್ವಸ್ತ ಚಿತ್ತಲುಣಬೇಕು ಪ್ರಶಸ್ತ 1 ಉಂಬುದಕನುಮಾನ ಮಾಡಬ್ಯಾಡಿ ಕೊಂಬುದೆಲ್ಲ ಬಾಯಿದೆರೆದು ಬೇಡಿ ತುಂಬಿತುಳುಕುತಲ್ಯಾನಂದ ನೋಡಿ ಅಂಬುಜಾಕ್ಷನ ಸುಖಾಶ್ರಯ ಮಾಡಿ 2 ಸ್ವಾನುಭವದ ಪ್ರಸ್ತ ಸರ್ವಕಾಲ ತಾನೆ ತಾನಾಗಿ ದೋರುತದಚಲ ದೀನಮಹಿಪತಿಗಾನಂದ ಸುಕಾಲ ಭಾನುಕೋಟಿತೇಜ ದಾಸಾನುಕೂಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನೀ ಕರೆದು ತಾರೆ ಬೇಗನೆ ಪೋಗಿ ಚನ್ನವೆಂಕಟರಾಯನ ಮೊನ್ನೆ ಆಡಿದ ಮಾತು ಒಂದೂ ನಿಜವಲ್ಲಾ ರನ್ನೆ ಈಗಲೆಪೋಗಿ ssssssಸನ್ನೆ ಮಾಡಿಬಾರೆ ಪ. ಅಂಗಜನಯ್ಯನ ಕಾಣದೆ ನಾನು ಹಿಂಗಿರಲಾರೆ ನಮ್ಮಾ ಕಂಬುಕುಚದ ಬಾಲೆ ರಂಗನಾ ಕರತಾರೆ ರಂಗು ಮಾಣಿಕದಹರಳುಂಗುರ ಕೊಡುವೆನು 1 ಕಾಲಿಗೆ ಎರಗುವೆನೆ ಕೋಮಲಮುಖಿ ಆಲಸ್ಯ ಮಾಡದೆಲೆ ನೀಲಕುಂತಳನೀರೆ | ಲೋಲನ ಕರತಾರೆ ವಾಲೆಮೂಗುತಿ ಕಂಠಮಾಲೆಯ ಕೊಡುವೆನು 2 ಮರದಿರಲಾರೆನಮ್ಮಾ ಬೇಗನೆಪೋಗಿ ನೆರವಂತೆ ಮಾಡು ನೀನು ಯರವುತನವುಬ್ಯಾಡಾಮರೆಯಲಾರೆನೆ ನಿಮ್ಮಕರವಪಿಡಿವೆ ಹೆಳವನ ಕಟ್ಟೆರಂಗೈಯ್ಯನ3
--------------
ಹೆಳವನಕಟ್ಟೆ ಗಿರಿಯಮ್ಮ