ಒಟ್ಟು 773 ಕಡೆಗಳಲ್ಲಿ , 95 ದಾಸರು , 684 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯಜಗತ್ಪ್ರಾಣತ್ರಾಣ ಜನನ ಮರಣಕ್ಲೇಶಹರಣ ಜಯ ಪಾವನ ದಿವ್ಯಚರಣ ಪ. ಸರ್ವದೇವತಾಗ್ರಗಣ್ಯ ಸರ್ವಜೀವೋತ್ತಮ ಶರಣ್ಯ ಪೂರ್ವಾಮರಪುರದಹನ ಪೂರ್ಣಗುಣಗಣ 1 ವೈಷ್ಣವ ಜನ ಶಿರೋರತುನ ವಿಶ್ವಾಂತರ್ಗತಭಾವನ ತೀಕ್ಷ್ಣಮನೋದುಷ್ಟದಮನ ಶಿಷ್ಟಜೀವನ 2 ಭಕುತಿಜ್ಞಾನನಿಧಿ ಕಲ್ಯಾಣ ಭಜಕಜನಭವಾಬ್ಧಿತರಣ ಲಕುಮಿನಾರಾಯಣಶರಣ ಬಕವಿದಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಮಂಗಳಂ ಮಹಾ ಶುಭಮಂಗಳಂ ಕ್ಷಯ ರಹಿತ ಗುರುಪಾದಾಂಗುಷ್ಠ ತೀರ್ಥಕ್ಕೆ | ಜಯ ಮಂಗಳಂ ಪ ಚರಣ ನಾಲ್ಕುಗಳಿಂದ ತೋರುತಿಹ ಜಗದುದಯಚರಣಮಯ ಜಗವೆಂದು ತಿಳಿದು ನಿಜದಿಚರಣ ತೀರ್ಥವ ನಿರಂತರ ಸೇವಿಸುವ ಜನರಜನನ ಮರಣವ ಹಿಂಗಿಸುವ ತೀರ್ಥಕ್ಕೆ 1 ಅಜ್ಞಾನ ಮಲನಾಶನವಾದುದದರಿಂದ ಸುಜ್ಞಾನ ವೈರಾಗ್ಯ ಸಿದ್ಧಿಸುವದು ವಿಜ್ಞಾನ ಮನದಿ ಉಭಯ ಪದದಲಿ ಐಕ್ಯ ಜಿಜ್ಞಾಸೆ ಹರಿದು ಮುಕ್ತಿಯ ಕೊಡುವ ತೀರ್ಥಕ್ಕೆ 2 ಶುಭ ಮಂಗಳಂ 3
--------------
ಗುರುರಾಮಲಿಂಗ
ಜಯ ರಮಾದೇವಿ ಸಾಗರ ಕನ್ನಿಕೆ ಪ ಪದ್ಮ ಪದ್ಮಾಲಯೇ ಪದ್ಮದಳಲೋಚನೆ | ಪದ್ಮಪ್ರಿಯೆ ದಿವ್ಯ ಪದ್ಮವದನೆ | ಪದ್ಮವಕ್ಷೋಜಾತಿ ಪದ್ಮಕಲ ಶೋಭಿತೆ | ಪದ್ಮಾಸನಾದೆನುತ ಪದ್ಮಚರಣೆ 1 ಮಂಗಲಾತ್ಮಕ ನೀಲಭ್ರಂಗ ಕುಂತಲಶಶಿ ಪ- ತಂಗ ಸನ್ನಿಭ ಕೋಮಲಾಂಗಿ ವರದೆ || ಗಾಂಗೆಯ ವಸನ ಸರ್ವಾಂಗ ರತ್ನಾಭರಣೆ | ಅಂಗಜಾಜನನಿ ಶ್ರೀರಂಗಪ್ರಿಯೆ 2 ಸತತ ಜಗದುತ್ಪತೆ ಸ್ಥಿತಿಯಂತೆ ಕಾರಿಣೆ | ನುತಗುಣ ಮಹಿಮಾಯ ಶ್ರುತಿ ಪೂಜಿತೆ || ಪತಿತಪಾವನ ಮಹೀಪತಿನಂದನಿಷ್ಟ | ದೇ ವತಿ ಭಕ್ತ ಜನಸುಖದಿ ಮತಿದಾಯಿತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಜನನೀ ಶಾರದೆ ಜನನಮೃತಿಭಯಭಿದೆ ಪ. ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ. ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆ ಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1 ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆ ಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2 ಅನಘ ಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದ ಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯದೇವ ಜಯದೇವ ಜಯ ರಾಘವ ರಾಮಾ ದಯದಲಿಯಚ್ಚರನೀವದು ಸ್ಮರಿಸಲುತವನಾಮಾ ಪ ಹಭವ ಭವಮುಖರಮೊರೆಯನು ಕೇಳುತಲಿ ದಶರಥ ಕೌಲಸ್ಯರಾ ಬಸಿರಿಂದುದಿಸುತಲಿ ರುಷಿ ಮುಕರಕ್ಷಿಸಿ ತಾಟಕಿ ದೇಹದಿಬಿಡಿಸುತಲಿ ವಸುಧಿಲಿ ಶಿಲೆಯನು ಪಾದದದಿಮೆಟ್ಯುದ್ಧರಿಸುತಲಿ 1 ಹರುಷದಿ ಕೌಶಿಕನೊಡನೆ ಮಿಥಿಲೆಗೆ ಪೋಗುತಲಿ ಹರದು ಮುರಿದು ಜನಕಜೆ ಮಾಲೆಯ ಧರಿಸುತಲಿ ಬರಲಾನಂದದಿ ಭೃಗುಪತಿ ದಶರಥ ದರಶನ ಪಾಡುತಲಿ ಅರಸುತನಕ ಕೈಕೆಯು ಬ್ಯಾಡೆನೆ ನಡೆದೈತ್ವರಿಲಿ 2 ವನದಲಿ ಭಂಗಿಸಿಶೂರ್ಪನಖಿಖರ ದೂಶಣರಾ ಅನುವರ ಕಾಂಚನ ಮೃಗವಾ ಬೆಂಬೆತ್ತಲು ದೂರಾ ಜನಕಜೆಯಾಕೃತಿ ವೈಯ್ಯಲು ಕಪಟದಿದಶಶಿರಾ ಅನುಭಜಟಾಯುವಿನಿಂದಲಿ ಕೆಳಿ ನಡದೆ ಧೀರಾ 3 ಪಥದಲಿ ಮುರಿದುಕಬಂಧವ ಶಬರಿಗೆ ಗತಿನೀಡಿ ಪ್ರಥಮದಿ ಹನುಮನ ಕಂಡು ವಾಲಿಯ ಹತಮಾಡಿ ರತಿಯಲಿ ಸುಗ್ರೀವಜಾಂಭವ ಸೈನ್ಯದ ಲೋಡಗೂಡಿ ಕ್ಷಿತಿಜೆಯಾ ಸುದ್ದಿಯತರಿಸಿ ನಡೆದೈನಲಿದಾಡಿ 4 ಸೇತುವೆ ಗಟ್ಟಿಸಿ ಶರಣವ ಬರಲು ವಿಭೀಷಣನು ಭೀತಿಯ ಹಾರಿಸಿಸೈನ್ಯದಿ ದಾಟಿದೆ ಶರಧಿಯನು ನೀತಿಯ ತಪ್ಪಿದ ರಾವಣ ಕುಂಭಶ್ರವಣರನು ಖ್ಯಾತಿಲಿ ಮಡಹಿದೆ ಅವರಾಸಂತತಿ ಸಂಪದನು 5 ಶರಣಗಸ್ಥಿತಪರಪದವಿತ್ತು ದೇವರ ಶೆರೆಬಿಡಿಸಿ ಮರಳಿದಯೋಧ್ಯಕಪುಷ್ಪಕದಿಂ ಸೀತೆಯವರೆಸೀ ಮೆರೆವತ್ಸಜರಜನನಿಯರ ಸಕಲರಸುಖಬಡಿಸಿ ಸುರಮುನಿಜನರನುಸಲಹಿದೈ ಸಾಮ್ರಾಜ್ಯವನು 6 ನಾಮದಮಹಿಮೆ ಹೊಗಳಲು ಶೃತಿಗಳಿಗಳವಲ್ಲಾ ಪ್ರೇಮದಿಸವಿಸದುಂಬುವ ಶಿವ ಸೀತಾಬಲ್ಲಾ ನೇಮದಿಸುರನಂದಾನ್ನರ ಬವ ತರಿಸಿದರಲ್ಲಾ ಕಾಮಿತ ದಾಯಕ ಗುರುಮಹಿಪತಿ ಪ್ರಭುಶಿರಿನಲ್ಲಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯರಘುರಾಮಾ | ಸದ್ಗುಣ ಧಾಮಾ | ದಯದಾಗರ ಘನಶಾಮಾ ಪ ಜಯರಘರುರಾಮಾ | ಸದ್ಗುಣ ಧಾಮಾ ದಯದಾಗರ ಘನ ಶಾಮಾ | ಭಯಹರನೇಮಾ ರಣನಿಸ್ಸೀಮಾ | ತ್ರಯಂಬಕ ವಿಶ್ರಾಮಾ | ಪ್ರಿಯಕರ ನಾಮಾ ಪೂರಿತ ಕಾಮಾ | ಶ್ರಯಸುದಾಯಕ ಮಹಿಮಾ 1 ಸುರಸಹಕಾರ ಇನಕುಲೋದ್ದಾರಾ | ಧರಣೀಸುತೆ ಮನೋಹಾರಾ | ಶರಯುತೀರಾಯೋಧ್ಯ ವಿಹಾರಾ | ಚರಿತಪಾರಾ ವಾರಾ | ಪರಮೋದಾರಾ ಸರ್ವಾಧಾರಾ | ದುರತಾವಳಿವಿದಾರಾ 2 ವನರುಹಾಸನ ವಂದಿತಚರಣಾ | ಜನನಿ ಕೌಶಲ್ಯಾ ನಿಧಾನಾ | ಅಣುರೇಣು ಜೀವನಾ ವ್ಯಾಪಕಪೂರ್ಣ | ಕನಕಾಂಬರ ಭೂಷಣ | ಮುನಿಜನ ರಂಜನಾ ದೈತ್ಯವಿಭಂಜನಾ | ಮಹಿಪತಿ ನಂದನ ಪ್ರಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯವ ಪಾಲಿಸಿ ಸಲಹೆ ಜನನಿ ಜಯಲಕ್ಷ್ಮಿ ಜಯಂಕರಿ ಪ ಭಯವಿಮೋಚನೆ ಭಜಿಪೆ ನಿನ್ನ ಜಯವ ವೊಂದಿಸಿ ಭವದಿ ಎನ್ನ ದಯದಿ ಬೆಂಬಲಿರ್ದು ಬಿಡದೆ ಕೈಯ ಪಿಡಿದು ಕಾಯೌ ಸುದಯೆ 1 ಜ್ಞಾನಜ್ಯೋತಿ ಸುಪ್ರಕಾಶ ಮಾಣದಿತ್ತು ಮಮತೆಯಿಂದ ಹಾನಿತಾರದೆ ಪೊರೆಯೆ ಸತತ 2 ಕಾಮಿತಾರ್ಥ ಪೂರ್ಣೆ ಸುತಗೆ ಭೂಮಿಯಾತ್ರೆ ವಿಜಯನೀಡು ಶಾಮಸುಂದರ ಸ್ವಾಮಿ ಶ್ರೀ ರಾಮನ ಪಟ್ಟದರಾಣಿ ಕರುಣಿ 3
--------------
ರಾಮದಾಸರು
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ಜೀವಾ ತಿಳಿ ತಿಳಿ ನಿಜದರಿವಾ ಪ ಶಾಂತಮಯಾ ಆನಂದನಿಕಾಯ ಮನಸಿನ ಮೂಲದಾ ಘನಪದವಾ ಅ.ಪ. ಕಲ್ಪನಾಜಾಲದಾ ನಾಶದ ಸ್ಥಿತಿಯೇ ಪರಮಸೌಖ್ಯದಾ ನಿಧಿಯನು ನೀನೇ ಮನದಲಿ ಯೋಚಿಸಿ ತಿಳಿನಿನ್ನಾ 1 ಜನನಮರಣದಾ ಸಂಕಲೆ ಹರಿಯೋ ಘನವಿವೇಕದಾ ಬಲದಲಿ ತಿಳಿಯೋ ಸನ್ನುತ ಶಂಕರಗುರುಬೋಧಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಜೈ ಜೈ ವೆಂಕಟರಾಯ ಸಲಹು ಗಡ ಪ ಶುಭ ಕಾಯ ಐಹಿಕ ಮಹಮಾಯವ ಬಿಡಿಸಯ್ಯಅ.ಪ ಪಂಕಜಾಕ್ಷ ಹರಿ ಸಂಕರುಷಣ ಭವ ಸಂಕಟ ಪರಿಹಾರ ಶುಭಕರ ಶಂಖಶಕ್ರಧರ ಮಂಕುದನುಜಹರ ಕಿಂಕರಘದೂರ ಶಂಖಸುರನ ಬಲು ಬಿಂಕಮುರಿದ ಬಲದಂಕ ಅದಟವೀರ ಶೂರ ಅಂಕುರಿಸೆನ್ನೊಳಾತಂಕತಾರದೆ ಪೊರೆ ಲಂಕಾ ವಿಜಯಕಾರ 1 ದಾತ ಮೂರುಜಗನಾಥ ಪರಮ ಅ ದ್ಭೂತ ಮಹಿಮೆಗಾರ ಚದುರ ಪ್ರೀತ ಭಕುತ ಭವಭೀತರಹಿತ ಮಾಯಾ ಪೂತನಿ ಸಂಹಾರ ನೀತಿಕೋವಿದ ವಿಧಿತಾತ ಅಸಮ ವಿ ಖ್ಯಾತ ಕರುಣನಿಕರ ಸುಂದರ ಘಾತಿಸಿ ಕಂಸನ ಮಾತಪಿತರ ಕಾಯ್ದ ಪಾತಕ ನಿವಾರ 2 ಬಾಲನಂತರಿಯದೆ ಆಲಯಗಳ ಪೊಕ್ಕು ಪಾಲು ಮೊಸರು ಕದಿದ ಸವಿದ ಬಾಲೆರುಡುವ ದುಕೂಲ ಕದಿದು ತಾ ಮೇಲು ಮರವನೇರ್ದ ಕಾಲಿಂದಿ ಧುಮಕಿದ ಕಾಳಿಯಮೆಟ್ಟಿದ ಕಾಳರಕ್ಕಸರೊದೆದ ಸದೆದ ಲೀಲಾ ಜಾಲ ನಂದ ಬಾಲನಾಗಿ ಬಲು ಬಾಲಲೀಲೆಗೈದ 3 ಪರಮ ಪರಾತ್ಪರ ಪರಮಪುರುಷ ಸಿರಿ ಪರಮ ಪಂಚಪ್ರಾಣ ದುರಿತ ಹರಣಜನನಮರಣ್ಹರಸುರವಿನಮಿತ ಧರಣಿಗಧಿಕ ತ್ರಾಣ ಕರಿಧ್ರುವರಿರ್ವರನು ಭರದಿ ನೀಡಿ ನಿಂತು ಪೊರೆದ ಪಾಂಚಾಲೀಮಾನ ಜಾಣ ಶರಣಜನರ ಮೈನೆರಳು ನಿಗಮಾತೀತ ನಿರಂಜನ 4 ಸೋಮವದನ ಸತ್ಯಭಾಮಾರಮಣ ಸುಖ ಧಾಮ ಸುಜನಹೃದಯನಿಲಯ ಕಾಮಜನಕ ಪುಣ್ಯನಾಮ ರಕ್ಕಸಕುಲ ಭೀಮ ಪಾಲಿಸಭಯ ಶಾಮವರ್ಣ ಮಮಸ್ವಾಮಿ ಭಜಿಪೆ ಶ್ರೀ ರಾಮಪಿಡಿಯೋಕಯ್ಯ ಸದಯ ಕಾಮಿತ ವರ ಸುಪ್ರೇಮದಿ ಇತ್ತೆನ್ನ ಪ್ರೇಮದುದ್ಧರಿಸಯ್ಯ 5
--------------
ರಾಮದಾಸರು
ಜೋ ಜೋ ಜಾನಕಿ ಜೊ ಚಂದಿರ ಮುಖಿ ಮಾಂಗಲ್ಯದಾಯಕಿ ಮಾಡೇ ನಿದ್ರೆ ಜೋ ಜೋ 1 ಆದಿಮಾಯಳೆ ವೇದವೇದ್ಯಳೆ ಆದಿತೇಯನುತೆ ಭೂಮಿಜಾತೆ 2 ಮೃಗಮದಗಂಧಿನಿ ಮಾಧುರ್ಯಭಾಷಿಣಿ ಮಗಳೆ ಜಾನಕಿಯೆ ಕಂಬುಕಂಧರಿಯೇ 3 ಕಂಜಲೋಚನಿ ಕಂಜಭವಜನನಿ ಕುಂಜರಗಮನಿ ಸಂಜೀವನಿ 4 ವಾರಿಜನೇತ್ರೆ ವಾಸುವಸ್ತೋತ್ರೆ ಮಾರಜನನಿ ಲಕ್ಷ್ಮೀನಾರಾಯಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಜೋಜೋ ಜೋಜೋ ಲಾಲಿ ಗೋವಿಂದ ಜೋಜೋ ಜೋಜೋ ಲಾಲಿ ಮುಕುಂದ ಜೋಜೋ ಜೋಜೋ ಲಾಲಿ ಆನಂದ ಜೋಜೋ ಜೋಜೋ ಲಾಲಿ ಗೋಪಿಯ ಕಂದ ಪ ಚಿನ್ನದ ತೊಟ್ಳಿಗೆ ರನ್ನದ ಮಲುಕು ಕನ್ನಡಿ ಹೊಳೆವೊ ಮೇಲ್ಕಟ್ಟಿನ ಬೆಳಕು ಸ್ವರ್ಣ ಮಂಟಪದಿ ರಾಜಿಪದಿವ್ಯ ಹೊಳಪು ಕರ್ನೇರಲಂಕರಿಸಿ ನಲಿಯುವ ಕುಲುಕು ಜೋ ಜೋ1 ಅರಿಶಿನ ಕುಂಕುಮ ಗಂಧ ಪುಷ್ಪಗಳು ಸರಸೀಜಾಕ್ಷಗೆ ಮುತ್ತಿನ್ಹಾರ ಪದಕಗಳು ಸುರರೊಡೆಯಗೆ ಪಟ್ಟೆ ಪೀತಾಂಬರಗಳು ಹರುಷದಿಂದಿರಿಸಿ ನಲಿವ ಸ್ತ್ರೀಯರುಗಳು ಜೋ ಜೋ2 ಮುತ್ತೈದೆಯರೆಲ್ಲ ಬಂದು ನೆರೆದರು ಉತ್ತಮ ಸ್ವರ್ಗ ಕಲಶವ ಪೂಜಿಸುವರು ಚಿತ್ತಜನಯ್ಯನ ಎತ್ತಿಕೊಂಡಿಹರು ಜೋ ಜೋ3 ಕೇಶವನನ್ನು ತನ್ನಿ ನಾರಾಯಣನ್ನ ಮಾಧವ ಗೋವಿಂದನನ್ನ ಸಾಸಿರ ನಾಮದ ವಿಷ್ಣು ಮಧುಸೂದನನ್ನ ಸೋಸಿಲಿ ತ್ರಿವಿಕ್ರಮ ವಾಮನನ್ನ ಜೋ ಜೋ 4 ಶ್ರದ್ಧೆಯಲಿ ಶ್ರೀಧರ ಹೃಷಿಕೇಶನನ್ನ ಪದ್ಮನಾಭನ ಕೊಳ್ಳಿ ದಾಮೋದರನ್ನ ಶುದ್ಧ ಮನದಿ ಸಂಕರ್ಷಣ ವಾಸುದೇವನನ್ನ ಪ್ರದ್ಯುಮ್ನನನು ತನ್ನಿ ಅನಿರುದ್ಧನನ್ನ ಜೋ ಜೋ5 ಪುರುಷೋತ್ತಮನ ಕೊಳ್ಳಿ ಅದೋಕ್ಷಜನನ್ನ ನಾರಸಿಂಹನ ತನ್ನಿ ಅಚ್ಚುತನನ್ನ ಸರಸದಿ ಜನಾರ್ದನ ಉಪೇಂದ್ರನನ್ನ ಹರುಷದಿಂದಲಿ ಕೊಳ್ಳಿ ಹರಿ ಶ್ರೀಕೃಷ್ಣನನ್ನ ಜೋ ಜೋ 6 ಹೀಗೆಂದು ತೂಗುತ ಜೋಗುಳ ಹಾಡಿ ನಾಗವೇಣಿಯರು ಸಂಭ್ರಮದಿಂದ ಕೂಡಿ ಆಗ ಕಮಲನಾಭ ವಿಠ್ಠಲನ್ನ ನೋಡೀ ಬೇಗ ರಕ್ಷೆಗಳನಿತ್ತರು ತ್ವರೆ ಮಾಡಿ ಜೋ ಜೋ 7
--------------
ನಿಡಗುರುಕಿ ಜೀವೂಬಾಯಿ
ಜ್ಜನನಿ ಪೊರೆಯೆ ರುದ್ರಾಣಿ ಪ. ಅಘಸಂಹಾರಿಣಿ | ಮೃಗಪತಿವಾಹಿನಿ || ಅಗಣಿತಗುಣಮಣಿ | ಭಗವತಿ ಶ್ರೀ ಜಗ ಅ.ಪ. ಸಿರಿ ಕಾತ್ಯಾಯಿನಿ | ಗೌರಿ ಭವಾನಿ || ಪರಮಪಾವನೆ | ಪರಮೇಶ್ವರಿ ಜಗ 1 ಶುಂಭಧ್ವಂಸಿ | ನಿಶುಂಭನಿಷೂದಿನಿ || ಅಂಬುಜಮುಖಿ ಮೂ | ಕಾಂಬಿಕೆ ಶ್ರೀ ಜಗ 2 ಗಾನವಿನೋದಿನಿ | ದಾನವ ಮಥಿನಿ || ದೀನಜನಾವಳಿ | ಪಾಲಿನಿ ಶ್ರೀ ಜಗ 3 ಜಟಾಮುಕುಟಸುರ|ತಟನೀಧರಸತಿ || ನಿಟಿಲಾಂಬಕಿ ಶ್ರೀ | ಕಟಿಲೇಶ್ವರಿ ಜಗ 4
--------------
ವೆಂಕಟ್‍ರಾವ್
ಜ್ಞಾನಾನಂದಮಯಂ ಭಜೇಹಂ ಪ ಶ್ರೀನಿವಾಸ ಕರುಣಾರಸಪೂರಂ ಅ.ಪ ಸಕಲ ಕಲಾಕೃತಿ ಪೂರ್ಣಮನಂತಂ ಸಕಲ ವರಪ್ರದಮನುಪಮ ಶಾಂತಂ ವಿಕಸಿತ ಕಮಲೋಪಮ ಶಂಭುಚಿತ್ತಂ ಶ್ರೀಕರಮಮಿತ ಕೃಪಾಗುಣ ಸಹಿತಂ1 ಮೂಲಮಂತ್ರ ಸಕಲಾರ್ಥಸಮೀರಂ ಮೂಲತತ್ವ ನಿರ್ಧಾರಕಮಮರಂ ಗಾಲವ ನಾರದ ಮುನಿಜನನಿಕರಂ ಸಾಲಂಕೃತ ಮಾಂಗಿರಿವರಮಿಹಿರಂ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುಮನದಲ್ಲಿ ಯೋಚನೆ ಮಾಡೀ ಎಣಿಸಿ ಗುಣಿಸಿ ಮನಸಿಜನ್ನ ಜನಕನ ಲೀಲೆ ಪ ನರನಾರಾಯಣನೀತ ಕೃಷ್ಣ ಹರಿ ಹೃದ್ಭಾನು ಕಪಿಲನೀತ ಹರಿನಾರಾಯಣೇನೀತ ಯೋಗೀ ಶ್ವರ ತಾಪಸ ವೈಕುಂಠನೀತ ಹರನಸಖ ಸ್ವಧಾಮನೀತ ಕರುಣಿ ಸಾರ್ವಭೌಮನನೀತಾ 1 ಅಜಿತಯಜ್ಞನಾಮನೀತ ಅಜಗೆ ಪೇಳಿದ ಹಂಸನೀತ ಸುಜನಪಾಲ ವ್ಯಾಸ ವೀ ರಜ ಮಹಿದಾಸ ದತ್ತನೀತ ನಿಜ ಮಹಿಮ ಧನ್ವಂತ್ರಿ ಈತ ತ್ರಿಜಗವಳೆದುಪೇಂದ್ರನೀತ ಭಜಕರೊಡಿಯ ವಿಷಕ್ಸೇನ ಭುಜಗಶಾಯಿವಿಭುವೆ ಈತ 2 ಚಲುವ ಧರ್ಮಶೇತು ಈತ ಬಲುವುಳ್ಳ ಶಿಂಶುಮಾರನೀತ ಮತ್ಸ್ಯ ಕೂರ್ಮವರಹ ಲಲಿತನರಸಿಂಹನೀತ ಬಲಿಗೊಲಿದ ವಾಮನ್ನನೀತ ಕುಲವೈರಿ ರಘರಾಮನೀತ ಕಲಕಿ ರೂಪನಾದನೀತಾ 3 ವಾಸುದೇವ ಜಯಪತಿ ಸುಂ ದರ ಪ್ರದ್ಯುಮ್ನ ಈತ ನಿರಂತರ ಅನಿರುದ್ಧನೀತ ಚ ತುರ ವಿಂಶತಿ ಮೂರುತಿಯೇ ಈತ ಮೆರೆವ ಅಜಾದಿ ನಾಮಕನೀತ ವರ ಪಂಚಮೂರುತಿಯೇ ಈತಾ ಎರಡೈದು ಮೇಲೊಂದನೀತ 4 ಪರಿಪರಿ ರೂಪ ಉಳ್ಳನೀತ ಹೊರಗೆ ಒಳಗೆ ವ್ಯಾಪ್ತನಾಗಿ ಸರಿಸರಿ ಬಂದ ತೆರದಿ ಜಗವ ಸರಸದಲಿ ಆಡಿಪನೀತ ಸ್ಮರಣೆ ಮಾಡಲು ಸಕಲ ಇಷ್ಟವ ಕರೆÀದು ಕೊಡವನೀತ ಮರಣ ಜನನರಹಿತ ನೀತ 5
--------------
ವಿಜಯದಾಸ