ಒಟ್ಟು 539 ಕಡೆಗಳಲ್ಲಿ , 86 ದಾಸರು , 495 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ತೋರೆಂದು ಪಗುರುಸರ್ವಭೌಮರ ಅಖಂಡ ಸೇವೆಯ ಮಾಡಿವರಸುಮಂತ್ರಾಲಯದಿ ವಾಸಮಾಡಿಸುರಪನಾಲಯವು ಮಂತ್ರಾಲಯವು ಎಂಬಂತೆಹರಿದಾಸರಾಶಯವ ನಿಜಮಾಡಿ ತೋರಿಸಿದ 1ಉಡುಪಿಯೊಳು ಗುರುಸಾರ್ವಭೌಮರ ವೃಂದಾವನವಚತುರತನದಿಂದ ಪ್ರತಿಷ್ಠಾಪನೆಯ ಮಾಡಿಭರತಖಂಡದ ತೀರ್ಥಕ್ಷೇತ್ರಗಳ ಸಂಚರಿಸಿಭಕುತರಿಗೆ ಶ್ರೀ ಮಠದ ಮ'ಮೆ ತೋರಿದ ಗುರು2ಶ್ರೀ ಸ'ುೀರ ಸಮಯ ಸಂವರ್ಧಿನಿ ಸಭೆಯಸಂಸ್ಥಾಪನೆಯ ಮಾಡಿ ಪಂಡಿತರಿಗೆಭೂರಿ ಸಂಭಾವನೆ ಮೃಷ್ಟಾನ್ನ ಭೋಜನದಿತ್ಟುಗೊಳಿಸುತ ದೇಶ ದಿಗ್ವಿಜಯ ಮಾಡಿದ 3ಶ್ರೀ ಮಠದ ಕೀರ್ತಿಯನು ಶಿಖರಕ್ಕೆ ಮುಟ್ಟಿಸಿಸ್ವರ್ಣಮಂಟಪರಚಿಸಿ ವೈಭವವ ಬೆಳೆಸಿಶ್ರೀಮೂಲರಾಮ ದಿಗ್ವಿಜಯ ಜಯರಾಮರನುಭಕ್ತಿುಂದ ಪೂಜಿಸಿದ ಭಾಗ್ಯಶಾಲಿ 4ಗುರುಸಾರ್ವಭೌಮರಿಗೆ ಪರಮ ಪ್ರೀತಿಯ ಕಂದವರಮಧ್ವಮತ ಸುಧಾಂಬುಧಿಗೆ ಚಂದ್ರಪರಮಾತ್ಮ ಭೂಪತಿ'ಠ್ಠಲನ ಪೂಜಿಸುವಪರಮ ಪ್ರಶಾಂತ ಧೀರೆಂದ್ರ ಸನ್ನಿಧಿವಾಸ 5
--------------
ಭೂಪತಿ ವಿಠಲರು
ಪಾದ ಭಜಿಸಿ ಬೇಡುವೆನಯ್ಯ ಭುಜಗಭೂಷಣಸುತನೆ ಸುಜನಜನವಿನುತ ತ್ರಿಜಗಾದಿ ಪೂಜ್ಯನೆ ನಿಜಪದದಾತನೆ ನಿಜಮತಿಯ ಕರುಣಿಸು ಸುಜನೇಶ ಶ್ರೀರಾಮಕೃಪಾಪಾತ್ರನೆ
--------------
ರಾಮದಾಸರು
ಪಾರಾಯಣ ಮಾಡಿರೋ ಭವ ಪಾರಾವಾರದೊಳುತ್ತಾರಕವಿದು ನೋಡಿರೋಪ ಶರೀರನೆಚ್ಚಿರಬೇಡಿರೋ ಸಾರುವ ಮೃತ್ಯುವ ದಾರಿಗೆ ಗೋಚರ ಧಾರಿಣಿಯಲಿ ಪೇಳಿರೋ1 ಸಾಹಸ ಪಡಬೆಡಿರೋ ದೇಹಗೇಹಂಗಳನೂಹಿಸಿ ಸಂಗಡ ಬಾಹವೆಂದಿರ ಬೇಡಿರೊ2 ದೇಹರಕ್ಷಣೆಗೆಂದು ಗೇಹವನಿರ್ಮಿಸಿ ನೇಹದಿ ನಾರಿಯೊಳು ಗೇಹಿನಿಯೆಂದತಿ ಮೋಹದಿ ಕೆಡುವನು ದೇಹಿಸಂಸಾರದೊಳು3 ಮಾರಿಯಲ್ಲವೆ ಕೇಳಿರೋ ನಾರಿಯಾರಿಗೆ ಮಕ್ಕಳಾರಿಗೆ ಜೀವಿತದಾರಿಯೆಲ್ಲಿಗೆ ಪೇಳಿರೋ4 ಬಾರಳು ಕಂಚುಕನ್ನಡಿಬಾರದೀ ಸಂಚಿತ ದ್ರವ್ಯದಿ ಕೊಂಚವು ಬಾರದು ವಿಸಂಚಿಗೆ ದೇಹವಿದು5 ಹಲವು ಸಾಹಸದಿಂದ ಘಳಿಸಿದರ್ಥಗಳೆಲ್ಲ ಬಳಸಿನ ಬಾಂಧವರು ಒಲಿದುಕೊಂಡಾಡುವರು6 ಅರ್ಥವಿದ್ದವನ ಸಮರ್ಥನೀತನ ಜನ್ಮಸಾರ್ಥಕವೆಂಬುವರು ಜನ್ಮವ್ಯರ್ಥವೆಂದುಸುರುವರು 7 ರೊಕ್ಕವಿದ್ದರೆ ಕೈಲಿ ಸಕ್ಕರೆ ಮಾತಿನೊಳಕ್ಕರೆ ಪಡಿಸುವರು ರೊಕ್ಕವಿಲ್ಲದವನ ಮಕ್ಕಳು ಮಡದಿಯರು ಲೆಕ್ಕಿಸದಿರುತಿಹರು 8 ಮರಣವ ಪೊಂದುವರು ಮರಳು ಜಗಳಕೆ ತರಳರು ಚಾಚುತೆ ಕೊರಳನು ಕೊಯ್ಯುವರೋ 9 ಬಂಧುಗಳನ್ನು ಕೊಲ್ವರು ಒಂದಿಗೆ ಜನಿಸಿದರೆಂದು ನೋಡರುನಿಜ ದಂದುಗಕ್ಕೊಳಗಹರು10 ನಂಟರು ನಮಗಿವರುಂಟೆಂದು ಮೋಹದ ಗಂಟುಕಟ್ಟಿರೆ ಮನದಿ ಕಂಟಕ ಯಮಬಂದು ಗಂಟಲಬಿಗಿವಾಗ ನಂಟರಿಲ್ಲವು ಜಗದಿ11 ಅಪತ್ತುಬಂದಾಗ ಪಾಪಿಯು ಮನದನು ತಾಪದಿ ನೆನೆಯುತಿರೆ ಕಾಪಾಡುವನಾಗ ಶ್ರೀಪತಿ ಪುಲಿಗಿರಿ ಭೂಪನು ನಮ್ಮದೊರೆ12 ನೊಂದ ಗಜೇಂದ್ರನ ಕಂದ ಪ್ರಹ್ಲಾದನ ಬಂದವಿಭೀಷಣನ ಚಂದಿರಮುಖಿ ನೃಪನಂದನ ಧ್ರುವರನು ಚಂದದಿ ಸಲಹಿದನ 13 ಅಜಮಿಳಗೊಲಿದನ ಕುಜನರ ತರಿದನ ಸುಜನರನಾಳಿದನ ಭಜಕರದಾತನ ತ್ರಿಜಗಕ್ಕೆ ನಾಥನ ವಿಜಯನ ರಥಸೂತನ14 ಅಂಗಜಜನಕನ ಮಂಗಳ ಮಹಿಮನ ಗಂಗೆಯ ಪಡೆದವನ ರಂಗನ ಸುಗುಣ ತರಂಗನ ಶಂಖರಥಾಂಗವ ಪಿಡಿದಿಹಿನ15 ಖ್ಯಾತ ಪಾದಾಂಬುಜನ ವಾತನ ಮಗನೊಳು ಪ್ರೀತಿಯ ಬೆಳಸಿದ ಸೇತು ವಿಧಾತನ16 ರಾಮನ ಜಗದಭಿ ರಾಮನ ದೈತ್ಯವಿರಾಮನ ಭಜಕಜನಾ ರಾಮನ ದಶರಥರಾಮನ ಸೀತಾರಾಮನ ಗುಣಧಾಮನ17 ಪಂಕಜನೇತ್ರನ ಪರಮ ಪವಿತ್ರನ ಶಂಕರನುತಿಪಾತ್ರನ ವೆಂಕಟರಮಣನ ಕಿಂಕರ ಶರಣನ ಸಂಕಟ ಹರನಾಮನ18 ವರದ ವಿಠಲ ದೇವನ ಪೊರೆಯುವದಾನರನ 19
--------------
ಸರಗೂರು ವೆಂಕಟವರದಾರ್ಯರು
ಪಾರ್ವತಿ ಪಾಲಿಸೆ ಅಂಬೆ ಗುಣಗಣೆ ಗೌರಿ ಪ ಕಾಮಿತ ಫಲ ಪರಿಪೂರ್ಣಳೆ ಚಿಂತಾಮಣಿಗುಣಪೂರ್ಣಳೆ 1 ಮಂಗಳ ಮೂರ್ತಿಯ ಜನನಿ ಮಂಗಳಪ್ರದ ಸುರ ಕಾಮಿನಿ 2 ನರಸಿಂಹವಿಠ್ಠಲದಾಸಿ ಸರಸಿಜಮುಖಿ ಮೃದುಹಾಸಿ3
--------------
ನರಸಿಂಹವಿಠಲರು
ಪಾರ್ವತೀದೇವಿಯ ಸ್ತುತಿ (ಮಂಗಳೂರು ಮಂಗಳಾದೇವಿ) ಮಹಾಮಾಯೆ ದಯದೋರೆಲೆ ತಾಯೆ ಪ. ಸದರದೊಳೆಬ್ಬಿಸುತಿದಿರಾದ ಮದನಾಂಬಾ ಮುದ ದಾಯಿ ಶುಭಪದದಾಯಿ 1 ದೇವತೆಗಳ ಸೇರಿರುವಾ ಮನೋಹರ ತನುವಾಗಿ ನಿಕರ ಮಹಿಷಾಸುರನಾ ಮೃಗಪತಿಗಮನಾ 2 ಖಂಡ್ಯಧಾರೆಯೊಳ್ದಿಂಡರಿದೂ ಖಂಡಿಸುತಾ ರಣ ಮಂಡಲದಿ ಬ್ರಹ್ಮಾಂಡ ನಿದಾನಿ 3 ತ್ರಿಗುಣಜಮಲವು ದಾನವಾರಿಗಳ ಮಾನಿಸಿ ದಿತಿಜರ ಹಾನಿಗೊಳಿಸುವದು ಹರಿಪರವು ಮಹಭರವು ಮನದಿರವೂ 4 ರಕ್ಷಿಸು ಪುರುಕರುಣಿ ಕ್ಷಮೆಯಿಂದಂ ಭರಣಿ ಖೂಳ ವೈರಿಗಳನೇಳದಂತೆ ಪಾತಾಳಕೆ ಕೆಡಹಿಸು ಮಮ ಜನನಿನೀಲ ಮೇಘ ನಿಭ ವೆಂಕಟರಾಜನ ಲೋಲಕಟಾಕ್ಷಸದಾಕರುಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಸಾಗರ ಸಂಭೂತೆ ಕೈವಲ್ಯದಾತೆ ಪಾಲಿಸೆನ್ನನು ನಿಜಮಾತೆ ಪ ಆಲಿಸು ನಿನ್ನಯ ಬಾಲನ ನುಡಿ ಈ ಕಾಲದಿ ಮನ್ಮನ ಆಲಯದೊಳು ನಿಂದು ಅ.ಪ ನಿತ್ಯ ನಿರ್ಮಲೆ ಈ ಮಹಾಮಹಿಮ ವಿಶಾಲೆ ಕಾಮನ ಜನನಿ ಸುಲೀಲೆ ಜಲಜಸುಮಾಲೇ ತಾಮರಸಾಂಬಕೆ ಸಾಮಜಭವ ಸು - ತ್ರಾಮ ಪ್ರಮುಖ ಸುರಸ್ತೋಮ ನಮಿತಗುಣ - ಪಾದ ಯಾಮ ಯಾಮಕೆ ನಿತ್ಯ ನೇಮದಿ ಭಜಿಪೆ ಶ್ರೀರಾಮನ ತೋರೆ 1 ವೇದಾಭಿಮಾನಿ ಅಂಬ್ರಾಣಿ ಸುಗಣಸನ್ಮಣಿ ವೇದವತಿಯೆ ರುಕ್ಮಿಣಿ ವೇದವಂದ್ಯಳೆ ಗುಣಪೂರ್ಣೇ ನಿತ್ಯಕಲ್ಯಾಣಿ ಖೇದಗೊಳಿಸುವ ಭವೋದಧಿ ದಾಟಿಸಿ ಮೋದ ಕೊಡುವ ಪಂಚಭೇದಮತಿಯನಿತ್ತು ಯಾದವಗುಣವನುವಾದ ಮಾಡಿಸಿ ನಿತ್ಯ ಮೋದಬಡಿಸು ಶ್ರೀ ಮಾಧವರಾಣಿ 2 ಜಾತರೂಪಾಭಾಶುಭಗಾತ್ರಿ ಈ ಜಗಕೆ ಧಾತ್ರಿ ಸೀತೆ ನೀನೆ ಲೋಕಪವಿತ್ರೆ ಧಾತಾಪ್ರಮುಖಸುರಸ್ತೋತ್ರೇ ನೀರಜನೇತ್ರೆ ವೀತಭಯಳೆ ತ್ರಿನೇತ್ರೇ ಪಾತಕವನಕುಲವಿತಿಹೋತ್ರ ಸುರ - ವಿನುತ ಸುಖವ್ರಾತ ಕೊಡುವ ನಮ್ಮ ದಾತ ಗುರುಜಗನ್ನಾಥವಿಠಲಗೆ ನೀ ನೀತಸತಿಯೆ ಎನ್ನ ಮಾತೆ ವಿಖ್ಯಾತೆ3
--------------
ಗುರುಜಗನ್ನಾಥದಾಸರು
ಪಾಲಿಸಯ್ಯ ಪದುಮವದನ ಪಾಲಸಾಗರಶಾಯಿ ನಂಬಿದೆ ಪ ಪಾಲ ಸುಜನಶೀಲ ಸುಗುಣ ಕಾಲಕಾಲದಿ ತವ ಭಜನ ಅ.ಪ ನಾದಬ್ರಹ್ಮನಾದಿಕಾಲದ ಆದಿವಸ್ತು ಭಜಿಪೆ ಸದಾ ಮೋದದೀಯೋ ಎನಗೆ ಮುದ ಭೇದವಾದ ಗೆಲಿದ ವಿಮಲ ಸಾಧುಸುಜನರಮಿತವರ್ತನ ವೇದವೇದಾಂತದೊಳು ಗೌಪ್ಯ ವಾದ ನಿಜ ಬೀಜಮಂತ್ರ 1 ಮಾಲತುಲಸಿ ಕೌಸ್ತುಭಾಂಬರ ಮೇಲುನಿಲಯ ಕುಜನಕುಠಾರ ಶೀಲ ಸುಗುಣ ಕರುಣಾಮಂದಿರ ಕೀಳುತನದಿ ಮಾಡಿದ ಎನ್ನ ಹಾಳು ಪಾಪಗಳನು ಸುಟ್ಟು ಬಾಲನೆಂದು ಕರುಣವಿಟ್ಟು ಮೂಲತತ್ತ್ವಕಿಳಿಸು ದಯದಿ 2 ಭಾಸುರಕೋಟಿವರಪ್ರಕಾಶ ಸಾಸಿರನಾಮ ಜಗಜೀವೇಶ ದೋಷಹರಣ ಭವವಿನಾಶ ದಾಸಜನರ ಪ್ರಾಣಪ್ರಿಯ ಪೋಷಿಸೆನ್ನನುಮೇಷÀ ನಿಮ್ಮ ದಾಸರ ದಾಸನೆನಿಸಿ ಶೇಷಶಯನ ಶ್ರೀಶ ಶ್ರೀರಾಮ 3
--------------
ರಾಮದಾಸರು
ಪಾಲಿಸೆ ಎನ್ನ ನಾಮಗಿರಿಯಮ್ಮ ಹರಿಗುರುಗಳ ಕೃಪಾಬಲ ಎನ್ನಲ್ಲಿರುವಂತೆ ಪ ಕರುಣದಿ ನೋಡೆ ನಾಮಗಿರಿಯಮ್ಮ ಇಂದಿರೆ ಎನ್ನ ಸುಖಿಯನ್ನೆ ಮಾಡೆ ವಾರಿಜಮುಖಿ ನರಪಾಲಾಧಮರ ದುರ್ಮುಖವ ನೋಡಿಸದಂತೆ 1 ಸುಖಚಿದಾಕಾರೆ ಎನ್ನ ಮನೆಗೆ ದಯವಿಟ್ಟು ಬಾರೆ ನಾರೆಯರಲ್ಲಿ ಸರಿ ನಿನಗಾರೆ ಪಂಕಜನೇತ್ರೆ ಕಿಂಕರನೆಂದು ಆತಂಕ ಬಿಡಿಸೆ ತಾಯೆ 2 ಚರಣಾರವಿಂದ ಸೇವಕನಲಿ ಕೃಪೆಯಿಟ್ಟು ಮಂದಹಾಸದೆ ಬಂದು ಸುಖಬುದ್ಧಿಯಿಂದ ಇಂದಿರಾದೇವಿ ಚಂದ್ರವದನೆ ಎನ್ನ ಮಂದಿರದೊಳಗಿದ್ದು 3 ಶ್ರಿತ ಸುರಧೇನು ದೇವಿ ನೀನೆಂದು ಇಂದಿರೆ ಇಷ್ಟುಪೇಕ್ಷೆ ನಿಂಗೇನು ಕಷ್ಟಗಳೆಲ್ಲ ನಷ್ಟವಾಗುವ ಪರಿ ದೃಷ್ಟಿ ಎನ್ನೊಳಗಿಟ್ಟು 4 ನರಹರಿ ಜಾಯೆ ನಾಮಗಿರಿಯಮ್ಮ ಬಂದು ನೀ ಕಾಯೇ ಪೇಳುವುದೇನು ಸರ್ವಜ್ಞ ತಾಯೇ ವಾರಿಜಮುಖಿ ನಿಜ ವರ್ಣಾಶ್ರಮಧರ್ಮ ಚ್ಯುತಿ ಎಂದೂ ಬರದಂತೆ 5
--------------
ವಿದ್ಯಾರತ್ನಾಕರತೀರ್ಥರು
ಪಾಲಿಸೆನ್ನ ಪಾಲನಶೀಲೆ ಪಾಲಿತ ಸುರನರಜಾಲ ಸುಶೀಲೆ ಪ ಕ್ಷೀರಶರಧಿ ಸುಕುಮಾರಿಣಿ ಲಕ್ಷ್ಮೀ ವಾರಿಜಮುಖಿ ಸಿತವಾರಿರುಹಾಕ್ಷಿ 1 ಅಂಬೆ ಭುವನಕುಟುಂಬೆ ರಮಾಂಬೆ ನಂಬಿ ಭಜಿಸುವದು ಡಾಂಬಿಕಮೆಂಬೆ 2 ಯುಕ್ತಿಯು ಶಕ್ತಿ ವಿರಕ್ತಿಗಳಿಲ್ಲ ಉಕ್ತಿ ಮಾತ್ರದಿಂದ ಭಕ್ತಿಕೊಡೆಲ್ಲ 3 ಜಯಕರುಣಾಲಯೆ ಜಯಮಣಿವಲಯೆ ಜಯನಿಸ್ತುಲಯೆ ಜಡಮತಿಗೊಲಿಯೆ 4 ಧರೆಯೊಳುತ್ತಮ ಪುಲಿಗಿರಿಯೊಳಿರುವನೆ ಶರಣರ ಪೊರೆಯುವ ವರದವಿಠಲನ [ರಾಣಿಯೆ] 5
--------------
ವೆಂಕಟವರದಾರ್ಯರು
ಪಾಲಿಸೆನ್ನ ಪಾವ9ತೀಶನೆ | ಮಹಾನುಭಾವ | ನೀಲಕಂಠ ರುಂಡಮಾಲನೆ ಪ ಪಾಲಿಸೆನ್ನ ಭವದೊಳಿಂದು | ಬಾಲಚಂದ್ರಧರನೆ ಬಂದು | ಕಾಲಕಾಲ ದುರಿತಜಾಲ | ಮೂಲನಾಶಗೈದುವೊಲಿದು ಅ.ಪ. ಅಂತರಾತ್ಮನಖಿಲ ಪೋಷಣ | ಕಪಾಲಧರ ದು-| ರಂತ ಮಹಿಮ ತ್ರಿಗುಣ ಕಾರಣ || ಸಂತಸುಜನ ಚಿಂತಿತಾಥ9 | ಭವಾಬ್ಧಿ ಪೋತ | ಅಂತಕಾಂತನಖಿಲ ಭುವನ | ಕ್ರಾಂತಾನಂತ ಮಹಿಮ ದೇವ 1 ಭುಜಗಾಭರಣ ಅಜಸುರಾಚಿ9ತ | ತ್ರಿಶೂಲಧಾರ| ಸುಜನ ಬಂಧು ಮುಕ್ತಿದಾಯಕ || ತ್ರಿಜಗದೀಶ ತ್ರಿಪುರನಾಶ | ರಜತಶೈಲವಾಸ ಭಕ್ತ | ನಿಜಮನೋರಥಾಬ್ಧಿ ಚಂದ್ರ | ಭಜಿಸುವೆ ಚರಣಾರವಿಂದ 2 ಆದಿಮಧ್ಯಾಂತರಾತ್ಮನೆ | ಜಗನ್ನಿವಾಸ | ವೇದವೇದ್ಯ ಸುಜನಸೇವ್ಯನೆ || ಆದಿಮಾಯೆಯಾದಿಮೂಲ | ಆದಿಪುರುಷ ಶ್ರೀನಿವಾಸ | ಸಾದರದೊಳೆನ್ನ ಕಾಯ್ದು | ಮೋದದಿಂದ ಸಲಹೊ ದೇವ 3
--------------
ಸದಾನಂದರು
ಪಾಲಿಸೆನ್ನಪರಿ ಪಾಲನಶೀಲೆ ಪಾಲಿತಸುರನರ ಜಾಲಸುಶೀಲೆ ಪ ಶರಧಿ ವಾರಿಜಮುಖಿಸಿತವಾರಿರುಹಾಕ್ಷಿ 1 ನಂಬಿಭಜಿಸುವುದು ಡಾಂಬಿಕಮೆಂಬೆ2 ಯುಕ್ತಿಯು ಶಕ್ತಿವಿರಕ್ತಿಗಳಿಲ್ಲ ಉಕ್ತಿಮಾತ್ರದಿಂದ ಭಕ್ತಿಕೊಡೆಲ್ಲ3 ಜಯನಿಸ್ತುಲಯೆ ಜಡಮತಿ ಗೊಲಿಯೆ 4 ಶರಣರ ಪೊರೆಯುವ ವರದ ವಿಠಲನೆ 5
--------------
ಸರಗೂರು ವೆಂಕಟವರದಾರ್ಯರು
ಪಾಲಿಸೋ ಹರಿ ಪಾಲಿಸೋ ಫಾಲನಯನಸಖ ಭಕ್ತಾಂತರಾತ್ಮಕ ಪ ಪಾಲಿಸು ಫಲ ಸುಪ್ರದಾತ ಮೊರೆ ಪಾಲಿಸು ಸುಜನನ್ನುತ ಖರೆ ಪಾಲಿಸು ಸತತ ವಿಖ್ಯಾತ ದೊರೆ ಪಾಲಿಸು ನುತರ ಸಂಪ್ರೀತ ಆಹ ಪಾಲ ಪಾವನಗಾತ್ರ ಪಾಲತ್ರಿಜಗಸ್ತೋತ್ರ ಪಾಲಿಸು ಕೃಪಾನೇತ್ರ ಪಾಲಪಾವನಯಾತ್ರ 1 ಕೊರಳ ಕೌಸ್ತುಭಮಣಿಮಾಲ ಬಹು ಕಾಲ ಮಹ ಕರುಣದೊರದಿ ಸುರಜಾಲ ಬಹು ಪ್ರಳಯ ಗೆಲಿದಿ ತೋರಿ ಲೀಲಾ ಆಹ ಹರಣಜನರಮರಣ ಕರುಣ ಭರಣಪೂರ್ಣ ಶರಣಜನರ ಪ್ರಾಣ ಮರಣ ಗೆಲಿಸುವ ತ್ರಾಣ 2 ನಿತ್ಯ ನಿಮ್ಮಯ ನಿಜಭಕ್ತಿ ನೀಡು ನಿತ್ಯ ನಿಮ್ಮಯ ನಿಜಸ್ತುತಿ ನೀಡು ನಿತ್ಯ ನಿಮ್ಮಯ ನಿಜಮತಿ ನೀಡು ನಿತ್ಯ ನಿರ್ಮಲ ನಿಜಮುಕ್ತಿ ಆಹ ನಿತ್ಯನಿರ್ಮಲ ರಾಮ ನಿತ್ಯನಿರ್ಮಲ ನಿಮ್ಮ ನಿತ್ಯನಿರ್ಮಲ ಪ್ರೇಮ ನಿತ್ಯನಿರ್ಮಲ ನಾಮ 3
--------------
ರಾಮದಾಸರು
ಪಾಹಿ ಖಳಜನ ಬಾಧ ಪಾಹಿ ಗೋವಿಂದ ಪ. ಪಾಹಿ ಗೋಪಿಯನಾಥ ಪಾಹಿ ಮನ್ಮಥ ತಾತ ಪಾಹಿ ಲಕ್ಷ್ಮೀಕಾಂತ ಪಾಹಿ ಭೂಕಾಂತ ಅ.ಪ. ಮತ್ಸ್ಯರೂಪಿಲಿ ಬಂದು ಬಲಿದ ದೈತ್ಯನ ಕೊಂದೆ ಬೆಚ್ಚರದೆ ಬಹುಗಿರಿಯ ಬೆನ್ನಲ್ಲಿ ತಾಳ್ದೆ ಬಚ್ಚಿಟ್ಟ ಧರಣಿಯನ್ನು ಬಲುಮೆಯಿಂದಲಿ ತಂದೆ ಅರ್ಚಿಸಿದ ಪ್ರಹ್ಲಾದಗೆ ಒಲಿದೆ ನರಸಿಂಹ 1 ಕುಬ್ಜರೂಪಿಲಿ ನೆಲನ ಬೇಡಿ ಬಲಿಯನು ತುಳಿದೆ ಪಿತನಾಡಿದ ಶಬ್ದವನ್ನು ಕೇಳಿ ಮಾತೆಯ ಶಿರವನಳಿದೆ ಕೊಬ್ಬಿದ್ದ ರಾವಣನ್ನ ಕಂದರವ ಖಂಡಿಸಿದೆ ಅಬ್ಜಮುಖಿ ಜಾನಕಿಯನಾಳಿದೆ ಶ್ರೀರಾಮ 2 ತುರುಹಿಂಡ ಕಾಯ್ದು ತಪವಳಿದು ಪತಿವ್ರತೆಯರ ಭರದಿ ವಾಜಿಯನೇರಿ ಚರಿಸುತ್ತ ಬಂದೆ ಕರುಣಾಳು ಶ್ರೀ ಹೆಳವನಕಟ್ಟೆ ರಂಗಯ್ಯ ಪಿಳ್ಳಂ- ಗಿರಿ ವಾಸ ಶ್ರೀ ವೆಂಕಟೇಶ 3
--------------
ಹೆಳವನಕಟ್ಟೆ ಗಿರಿಯಮ್ಮ
ಪುರಂದರ ದಾಸರಾಯರ ಪೋಷಿಸುವ ಸಂತೋಷದಿಂದಲಿ ಪ ಪುರಂದರಗಡಾದ ಒಳಗೆ ಹಿರಿಯ ಸಾವುಕಾರನೆನಸಿ ಪರಿಪರಿಯ ಸೌಖ್ಯಗಳ ಸುರಿಸುತ್ತ ಇರುತಿರಲು ನರಹರಿ ತ್ವರಿತದಿಂ ಬ್ರಾಹ್ಮಣನಾಗುತ್ತ ಪೋಗುತ್ತ ಯಜಮಾನ ಕಂಡು ಜರಿದು ಬ್ರಾಹ್ಮಣನ್ಹೊರಗೆ ಹಾಕಲು ಮರುದಿವಸ ಮತ್ಹೋಗಿ ನಿಂತ 1 ಭಾರಿಭಾರಿಗೆ ಸಾವುಕಾರನ ಮೋರೆಗ್ಹೊತ್ತಿ ಮೇರೆಯಿಲ್ಲದೆ ಆರು ತಿಂಗಳು ಬೆನ್ನು ಬೀಳುತ್ತ ನಾಯಕರು ಈತನ ಆರು ಅಟ್ಯಾರೆಂದು ಬೈಯುತ್ತ ಬೇಸತ್ತು ಎರಡು ಹೇರು ರೊಕ್ಕಾ ಮುಂದೆ ಸುರಿಯುತ್ತ ಅದರೊಳಗೊಂದು ಡ್ಡಾರಿಸಿಕೋ ಎಂದು ಹೇಳಲು ನಾರಾಯಣ ಬಿಟ್ಹೋದ ನಗುತ2 ಹಿತ್ತಲಾ ಬಾಗಿಲಿಗೆ ಹೋಗಿ ಮತ್ತೆ ಆತನ ಮಡದಿಗಾಗಿ ವಿತ್ತ ತಾ ಯೆನುತ ತನ ಮಗನ ಮುಂಜ್ಯೆಂ ದೆತ್ತಿ ಕರದಿಂ ಬಾಯಿ ತೆರೆಯುತ್ತ ಆ ಪ್ರಾಣಿ ನುಡಿದಳು ಎತ್ತಣ ದ್ರವ್ಯವು ತನಗೆನುತ ನಿನ್ನ ಮೂಗಿನ ಮುತ್ತಿನ ಮೂಗುತಿಯ ಕೊಡು ಎನೆ ಉತ್ತುಮಳು ತೆಗೆದಿತ್ತಳಾಕ್ಷಣ 3 ಆಕಿ ಗಂಡನ ಕಣ್ಣೆದುರಿಗೆ ಹಾಕಿದನು ತಾ ಪಾಕಿ ಕೊಡೆಯೆನುತ ಅದು ಕಂಡು ಇದು ನ ಮ್ಮಾಕಿದೆಂದು ಈತ ನುಡಿಯುತ್ತ ಅನ್ಯರದು ಯಿಂಥಾ ದ್ಯಾಕೆ ಯಿರಬಾರದೆನ್ನುತ್ತಾ ಬೆಲೆ ಹೇಳು ಎನಲು ಎಂದಾಕೆ ಹೋದನು ತಿರೂಗಿ ಬಾರದೆ 4 ತಿರುಗಿ ಬ್ರಾಹ್ಮಣ ಬಾರದಿರಲು ಕರೆದು ತನ್ನ ಹೆಂಡತಿಯ ಬರಿಯ ನಾಶಿಕವನ್ನೆ ಕಂಡುನು ಮೂಗುತಿಯ ಎಲ್ಲೆನೆ ಮುರಿದಿಹುದು ಯೆಂದಾಕೆ ಹೇಳಲು ಒಳಗ್ಹೋಗಿ ನೀ ತಾರದಿರೆ ಅರೆವೆ ನಿನ್ನಯ ಜೀವವೆಂದನು ವಿಷಕೊಂಬೆನೆಂದು ಕರದಿ ಬಟ್ಟಲು ಧರಿಸಲಾಕ್ಷಣ ತ್ವರಿತದಲಿ ಹರಿ ಅದರೊಳಾಕಿದ 5 ಪುರುಷನಾ ಕೈಕೊಳಗೆಯಿಡಲು ತರಿಸಿ ತನ್ನಲ್ಲಿದ್ದ ಪೆಟ್ಟಿಗೆಯಾ ಅದು ಕಾಣದಿರಲು ಬೆರಗಾಗಿ ನೋಡಿದನು ಮಡದಿಯ ನಿಜ ಪೇಳುಯೆನಲು ಅರಸಿ ಪೇಳ್ದಳು ಕೊಟ್ಟ ಸುದ್ದಿಯಾ ಅಭಿಮಾನಕಂಜಿ ಅರದು ವಿಷವನು ಕುಡಿವೆನಲು ಸಿರಿರಮಣಾ ಕೊಟ್ಟ ಖರಿಯಾ 6 ಬಂದಿದ್ದ ಪರಿಪಕ್ವವೆನಗೆ ನ್ನಾವ ಕಾಲಕೆ ಆಗಬೇಕೆಂದ ವೈರಾಗ್ಯಭಾವದಿ ಜೀವಿಸಿಕೊಂಡಿರುವುದೇ ಛಂದ ಹೀಗೆನುತ ಮನೆ ಧನ ಕೋವಿದರ ಕರೆದಿತ್ತ ಹರುಷದಿ ಕಾವನಯ್ಯನ ದಾಸನಾದ 7 ಲಕ್ಷ್ಮಿಪತಿಯ ಪಾದದಲ್ಲಿ ಲಕ್ಷ್ಯವಿಟ್ಟು ವ್ಯಾಸರಾಯರ ಶಿಕ್ಷೆಯಿಂದಲಿ ಅಂಕಿತವ ಕೊಳುತ ತಿರಿಪಾದ ಐದು ಲಕ್ಷಪದ ಸುಳಾದಿ ಪೇಳುತ್ತ ಪ್ರತಿದಿವಸದಲ್ಲು ಅಪರೋಕ್ಷ ಪುಟ್ಟಲು ಮೋಕ್ಷಸ್ಥಾನಕ್ಕೆ ಕರೆದೊಯ್ದು ಅ ಧೋಕ್ಷಜನು ಸಂರಕ್ಷಿಸಿದ 8 ಘೊರ ನರಕದೊಳಗೆ ಬಿದ್ದಾ ಪಾರ ಜನರು ಚೀರುತಿರಲು ದ್ಧಾರ ಮಾಡಿದ ನಾರದಾರಿವರು ಅವ ತಾರ ಮಾಡಿ ಧಾರುಣಿಯಲಿ ಮತ್ತೆ ಬಂದರು ಸರುವೋತ್ತಮ ಹರಿ ನಾರಾಯಣನೆ ಎಂದು ಸಾರಿದರು ಹೀಗೆಂದು ತಿಳಿಯಲು ಮಾರ ಜನಕ ವಿಜಯವಿಠ್ಠಲ ಆರಿಗಾದರು ಒಲಿವ ಕಾಣಿರೊ 9
--------------
ವಿಜಯದಾಸ
ಪೂಜಿಪೆ ನಾ ಪರಮಪುರುಷನರಸಿ ಲಕ್ಷ್ಮಿಗೆ ಪ. ತೇಜಮಾದ ಭದ್ರಪೀಠದಿ ರಾಜೀವಾಕ್ಷಿ ಲಕುಮಿಯ ಅ.ಪ. ಧ್ಯಾನಮಾವಾಹನವ ಮಾಡಿ ಸ್ನಾನ ವಸವ ತೊಡಿಗೆ ತೊಡಿಸಿ ಪೂಜಿಸುವೆನು 1 ಕುಸುಮ ಮಾಲೆಯಿಂದ 2 ಕದಳೀ ಖರ್ಜೂರ ದ್ರಾಕ್ಷಿ ಮಧುರ ದಾಳಿಂಬ ನಾರಿಕೇಳ ಕರ ಚರಣ ತೊಳೆದು ಸದಮಲೆಗಾರುತಿ ಬೆಳಗುವೆನು 3 ಸ್ವಸ್ತಿ ಪೇಳುತ ವರಗಳ ಬೇಡಿ ಮುಕ್ತಿದಾತೆ ಮಾಂಗಲ್ಯ ಭಾಗ್ಯವನಿತ್ತು ಪಾಲಿಸೆಂದು ಕರವ ಮುಗಿದ 4 ಅಷ್ಟೈಶ್ವರ್ಯದಿಂದ ಮೆರೆವ ದಿಟ್ಟ ಮೂರುತಿ ಶ್ರೀ ಶ್ರೀನಿವಾಸನ ಕರುಣಿಸೆಂದು 5
--------------
ಸರಸ್ವತಿ ಬಾಯಿ