ಒಟ್ಟು 2071 ಕಡೆಗಳಲ್ಲಿ , 111 ದಾಸರು , 1592 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎತ್ತಲಿಂದ ಬಂದೆ ಎನ್ನ ಒಗೆತನಕೆ ಎಲೆಖೋಡಿ ಸವತಿಎತ್ತಲಿಂದ ಬಂದೆ ಎನ್ನ ಒಗೆತನಕೆ ಪ ಕತ್ತಲು ಬೆಳುದಿಂಗಳಂತಾಯಿತುಮಿತ್ತು ಎತ್ತಲಿಂದ ಬಂದು ಸೇರಿತುಬಂದು ಎದುರಿಗೆ ಹಲ್ಲ ತೆರೆದಳುಒಂದು ಮಾತನು ಆಡದೆನ್ನೊಳುಒಂದನ್ನು ಸೇವೆಗೆ ಬರಗೊಡಳುಸಂದಿಯಲಿ ಲೊಟಕೆಯ ಹಾಕುತಲಿಹಳು1 ಹಾಲೊಳು ವಿಷವ ಹೊಯ್ದಂತೆ ಮಾಡಿದಳುಇಲ್ಲವನೆ ಹೇಳಿ ಕಾಲಕಾಲಲಿ ಎನ್ನ ಒದೆಸಿದಳುಬೇಳ ಮೇಳದಿ ತೊಡೆಯ ಮೇಲೆ ಹೊರಳಿಮೇಲೆಯೆ ಮೀಸೆಯ ಹುರಿ ಮಾಡುವಳು 2 ನೆರಳ ನೀರೊಳು ಬಗ್ಗಿ ನೋಡುವಳು ಎಬ್ಬಿ ತೆಗೆದುಮರಳಿ ಮರಳಿ ಒಡವೆಯ ನಿಡುವಳುಹೊರಯಿಕೆ ಒಳಯಿಕೆ ಮುರುಕಿಸಿ ನಡೆಯುತಲಿರೆ ಗಂಡಸು ಎಂದು ಅಣಕಿಸುತಿಹಳು3 ಮೋರೆಯನೀಗ ಎನಗೆ ತೋರಿಸಳುಸೀರೆ ಕುಪ್ಪುಸವ ಆರು ಕಾಣದಂತೆ ಉಡುವಳುದಾರಿಯ ಹಿಡಿ ನೀನಿರಬೇಡೆಂಬಳುನೂರು ಬಾರಿಯು ಸಾರಿದೆನೆಂಬಳು 4 ಒಗೆತನ ಕೊಂಡಳು 5 ಜನನ ಮರಣಗಳಳಿದು ಜಠರ ಬಾಧೆಗಳಳಿದುಘನ ಪುರುಷನಾಗಿ ಘನತಾನಾಗಿ ಇರುವನವನ6 ಪತಿ ಚಿದಾನಂದ ಮೂರುತಿ ತಾನಾದವನು7
--------------
ಚಿದಾನಂದ ಅವಧೂತರು
ಎಂಥ ಕರುಣನಿಧಿಯೊ ನಮ್ಮನಂತ ರೂಪನು ಎಂಥ ಕರುಣನಿಧಿಯೊ ನಮ್ಮನಂತ ರೂಪನು ಕಂತುಪಿತನು ಸಂತತ ಭಕ್ತರ ಹೃದಯದಿ ನಿಂತು ಕಾರ್ಯ ಮಾಡುತಿಹನು ಪ ಏಕದಶಿಯ ನಿಶಿಯೊಳಾನು ತೋಕರುದರಕೆ ಬೇಕಾದೀತು ನೀಡಿ ಹೊರಗೇಕ ಕಾಲಕೆ ಕಡದಿದೇಕ ಸರ್ಪಪಾವಕೆ ಶೋಕಹರಣ ಹರಿಯ ನೆನೆ ಶ್ರೀಕರನೆನಕೈಯ ಪಿಡಿದಾ 1 ಕಡಲಶಯನನನುದಿನದೊಳು ಬಿಡದೆ ಭಜಿಸುತಾ ಕಡಲ ಮಗಳ ಕರುಣವಿಲ್ಲದೆ ಬಡವನೆನಿಸುತಾ ಇಡಲು ಹೆಜ್ಜೆ ಮಡದಿಯೆನ್ನನೊಡಸಿ ನುತಿಸುತಾ ಸಡಗರ ದಿಗ್ವಿಜಯರಾಮ ನುಡಿಯವಿಡಿದ ಧ್ಯಾನತೀರ್ಥ ಮನದಿ ನಲಿವ ಹರಿಯು 2 ಕಾಲ ಕಳೆಯುತಾ ಇರಲು ಕಾಯಕೆ ವ್ಯಾಧಿ ತೊಡರಿ ಬಾಧೆಗೊಳಿಸುತಾ ಹರಿ ಪೂಜೆಗೆ ಹರಿವ ಮನವ ಕಟ್ಟುಮಾಡುತ ಹರಿಯ ಧ್ಯಾನದರಿವು ಹಾರಿ ಉರುಳುತಿರಲು ಧರೆಯ ಮೇಲೆ ಕರುಣದಿ ನರಸಿಂಹವಿಠಲ ದಣುವನಳಿದು ತನುವ ಪೊರೆದಾ 3
--------------
ನರಸಿಂಹವಿಠಲರು
ಎಂಥ ಕೌತುಕವೆ ನಿಮ್ಮಿಬ್ಬರದೆಂಥ ಕೌತುಕವೆಎಂಥ ಕೌತುಕ ಚಿಂತಾಮಣಿಯ ನೋಡಿಸಂತೋಷ ವಾಗದೆ ಕಾಂತೆಯರುಕಾದುವ ಎಂಥ ಕೌತುಕವೆ ಪ. ನಾರಿಯರಿಬ್ಬರ ಬಿಟ್ಟು ನೀರೊಳಡಗಿದಮಾರಿ ತೋರದಲೆ ನೆಲವನೆ ಮಾರಿ ತೋರದಲೆ ನೆಲವನೆ ಬಗಿದುಅತಿ ಕ್ರೂರನಾದರೂ ಬಿಡರೆಲೆ ಸಖಿಯೆ1 ತಿರಕ ತಾಯಿಯಸುದ್ದಿ ಅರಿತವನಲ್ಲದೆದೊರೆತನ ಬಿಟ್ಟು ದನವನೆ ಕಾಯ್ದುದೊರೆತನ ಬಿಟ್ಟು ದನವ ಕಾಯ್ದರುನಿಮ್ಮ ಕರಕರೆ ಒಂದು ಬಿಡರೆಲೆ ಸಖಿಯೆ2 ಬತ್ತಲಾಗಿ ಎನ್ನ ಹತ್ತಿಲೆ ನಿಲ್ಲೆಂದುಎತ್ತ ಓಡಲೆನುತÀ ಕುದುರೆಯಎತ್ತ ಓಡಲೆನುತ ಕುದುರೆ ಜಳಕಿಸಿಬೆನ್ಹತ್ತಿ ಕೊಂಡವನ ಬಿಡರೆಲೆ ಸಖಿಯೆ3 ಕಾಲ ನಳಿನಾಕ್ಷಿ ಆಗ ನೆರವಾದಿನಳಿನಾಕ್ಷಿ ಆಗ ನೆರವಾದಿ ಉಪಕಾರ ಒಲಿದುಶ್ರೀಕೃಷ್ಣ ಮದುವ್ಯಾದ ಸಖಿಯೆ 4 ಕುಂದುಗುಣಗಳೆಲ್ಲ ಮುಂದಕ್ಕೆ ತಾರದೆ ಹಿಂದಿನ ಉಪಕಾರ ಸ್ಮರಿಸುತ ಹಿಂದಿನ ಉಪಕಾರ ಸ್ಮರಿಸುತ ಅವಳು ಮುಂದೆ ಬೇಕೆಂದು ಮನಸೋತ ಸಖಿಯೆ5 ಭಾವೆ ರುಕ್ಮಿಣಿ ನಿಮ್ಮ ಹೀನಗುಣನೋಡದೆಕಾಮನ ಪಿತನು ಕೈ ಹಿಡಿದ ಕಾಮನ ಪಿತನು ಕೈ ಹಿಡಿದ ಕಾರಣಭೂಮಂಡಲವೆಲ್ಲ ನಮಿಸಿತು ಸಖಿಯೆ 6 ಅಷ್ಟು ಜನರೊಳು ಧಿಟ್ಟತನವ ಮಾಡಿಗಟ್ಯಾಗಿ ನೀನು ರಥವೇರಿಗಟ್ಯಾಗಿ ನೀನು ರಥವೇರಿ ಧೈರ್ಯದಿಕೃಷ್ಣನ ಬೆರೆದು ತೆರಳಿದಿ ಸಖಿಯೆ 7 ಮುದ್ದು ರಾಮೇಶಗೆÀ ಕದ್ದು ಓಲೆಯ ಬರಿಯೆಹದ್ದು ವಾಹನನು ಎರಗಿದಹದ್ದು ವಾಹನನು ಎರಗಿದ ಕಾರಣವಿದ್ವಜ್ಜನರೆಲ್ಲ ನಮಿಸಿತು ಸಖಿಯೆ8
--------------
ಗಲಗಲಿಅವ್ವನವರು
ಎಂಥ ದಯವಂತನೋ | ಮಂತ್ರ ಮುನಿನಾಥನೊ ಸಂತಸದಿ ತನ್ನನು | ಚಿಂತಿಪರಿಗೆ ಸುರಧೇನು ಪ ವರ ಪ್ರಹ್ಲಾದನು | ಮರಳಿ ಬಾಹ್ಲೀಕನು | ಶ್ರೀ ಗುರುವ್ಯಾಸರಾಯನೊ | ಪರಿಮಳಾಚಾರ್ಯನೊ 1 ಇರುವ ತುಂಗಾತಟದಲ್ಲಿ | ಬರುವ ತಾನು ಕರೆದಲ್ಲಿ ಕರಪಿಡಿದು ಪೊರೆವಲ್ಲಿ ಸರಿಗಾಣೆ ಧರೆಯಲ್ಲಿ 2 ದುರಿತ ಕಳೆವ ಶಕ್ತನು ತರಣಿ ನಿಭಗಾತ್ರನು | ಪರಮಸುಚರಿತ್ರನು 3 ಶಿಶುವಿಗವುಗರೆದನು | ವಸುಧಿ ಸುರರ ಪೊರೆವನು ಅಸಮ ಮಹಿಮನೊ | ಸುಶೀಲೇಂದ್ರ ವರದನೊ 4 ಭೂಮಿಯೊಳು ಖ್ಯಾತನು | ಶಾಮಸುಂದರ ಪ್ರೀತನು ಕಾಮಿತಾರ್ಥದಾತನು | ಸ್ವಾಮಿ ನಮಗೆ ಈತನು 5
--------------
ಶಾಮಸುಂದರ ವಿಠಲ
ಎಂಥಾ ಬಲವಂತನೋ ಭಾರತೀಕಾಂತಾ ಎಂಥಾ ದಯವಂತನೋ ಪ ಎಂಥ ಮಹಬಲವಂತ ಬಹುಗುಣ - ವಂತ ಸರ್ವದಾನಂತಚೇತನ ರಂತರಾದೋಳ್ನಿಂತು ಪ್ರೇರಿಪ ನಂತು ಮಹಿಮೆಯ ಅಂತು ತಿಳಿಯದೊ ಅ.ಪ ವೀರರಾಘವನಂಘ್ರಿಯ ಭಜಿಸಿ ಕಪಿ - ವೀರನಾದನು ಮಹರಾಯಾ ವಾರಿಧಿಯಾಗಾಧತೋಯ ಲಂಘಿಸಿ ಲಂಕಾ ಸಾರಿ ಪೇಳಿದ ವಾರ್ತೆಯ ವೀರ ವನವನಂಗಾರಮುಖಕೆ ಇತ್ತು ವೀರಾಕ್ಷನೆನಿಪ ಕುಮಾರನ ದಂಡಿಸಿ ಸಾರಿ ಉಂಗುರವಿತ್ತು ಮತ್ತೆ ವಾರಿಧಿ ವಾನÀರೇಶನು ತೋರಿ ರಾಮನ ಪದಕೆ ನಮಿಸಿ ಚಾರು ರಾಗಟೆ ಇತ್ತ ತ್ವರದಿ 1 ತರುಳೆ ದ್ರೌಪದಿಯನ್ನು ಶರಗು ಪಿಡಿದು ಶಳದಾನು ಕರಿಯಲು ಬ್ಯಾಗ ಹರಿ ತಾನಂಬರವಿತ್ತನು ಧುರದಿ ಭೀಮನು ನಿನ್ನ ತರಿದರಕ್ತದಿ ತಾನು ಬೆರೆಸಿ ಕೇಶವ ಕಟ್ಟಿ ಕರುಳ ದಂಡೆಯನಿಟ್ಟು ಮೇರೆವೆ ಕೇಳೆಲೋ ದುರುಳನೆಂದಾ - ತರುಣಿವಚನವ ಸ್ಥಿರವ ಮಾಡಿದ ಧರಿಯತಳದಲಿ ಸರಿಯುಗಾಣೆನೊ ವgವÀೃಕೋದರ ಪರಮ ಕರುಣಿಯೆ 2 ಭೂತೇಶ ಸರ್ವೋತ್ತುಮಾನೆಂಬುವೊ ಮಹಾ - ಪಾತಕಿ ಜನಮಾತನೇಮ ಈತ ಮಾಡಿದ ನಿರ್ಧೂಮ ಹರಿಗೆ ಶಿವ ದೂತಜನರಿಗುತ್ತುಮ ಖ್ಯಾತಿ ಮಾಡಿದ ಜೀವಜಾತಿ ಪ್ರೇರಕನಾಗಿ ಶ್ವೇತವಾಹನ ದೂತನಾಗಿಹ ನಾಥ ಗುರು ಜಗನ್ನಾಥವಿಠಲ ಧಾತನಾಂಡಕೆನಾಥ, ನಿರ್ಜರÀ ನಾಥರೆಲ್ಲರೂ ದೂತರೆಂದರು 3
--------------
ಗುರುಜಗನ್ನಾಥದಾಸರು
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾದ್ದೊ ಹರಿಯ ಕರುಣ ಪ ಎಂಥಾದ್ದೊ ಹರಿಯ ಮಹಿಮೆಎಂಥಾದ್ದೆನ್ನ ಬಾರದು ಗಡ ಅ.ಪ ಅಂತ್ಯವಿಲ್ಲದ ನಿಜಾನಂದ ತೃಪ್ತನು ಗಡಸಂತರೊಕ್ಕುಡಿತೆಯ ಜಲಕೆ ಹಿಗ್ಗುವ ಗಡ 1 ಸನಕಾದಿ ಮುನಿಮನಕೆ ಸಿಲುಕದಗಮ್ಯನು ಗಡನೆನೆವರ ಮನದಣಿಯೆ ತನ್ನ ತೋರುವ ಗಡ2 ಶ್ರ್ರುತಿತತಿಗೆ ಮೈದೋರದತಿ ಮಹಿಮನು ಗಡಮತಿಯುಳ್ಳವನ ಭಕ್ತಿ ಸ್ತುತಿಗೆ ಹಿಗ್ಗುವ ಗಡ3 ಲೋಕ ಪತಿಗಳಿಗೆಲ್ಲ ಒಡೆಯ ತಾನೆ ಗಡಬಾಕುಳಿಕನಾಗಿ ಭಕುತರ ವಶದಲ್ಲಿಪ್ಪ ಗಡ 4 ಆರರೊಳು ಸಡ್ಡೆಯಿಲ್ಲದ ನಿಸ್ಸಂಗನು ಗಡಸಾರಿದವರಿಗೆ ತಂದೆತಾಯಿ ಸಿರಿಕೃಷ್ಣ ಗಡ 5
--------------
ವ್ಯಾಸರಾಯರು
ಎಂದಿಗೆ ದೊರಕುವನೋ ಪ. ಎಂದಿಗೆ ದೊರಕುವ ಸುಂದರ ಪುರುಷನು ಒಂದು ಗಳಿಗೆ ಯುಗ ಒಂದಾಗಿ ಕಳೆದೆನು ಅ.ಪ. ಸರಿರಾತ್ರಿ ವೇಳ್ಯದಲಿ ಮೆಲ್ಲನೆ ಒಂದು ಸರಸವಾಡುತಲಿ ಪರಿಪರಿ ವಿಧದಲಿ ಸ್ಮರನ ಕಲೆಯ ತೋರಿ ವಿರಹಗೊಳಿಸಿ ನಾಳೆ ಬರುವೆನೆನ್ನುತ ಪೋದ 1 ಕೌಸ್ತುಭ ರತ್ನಾ- ಲಂಕೃತ ಶುಭಗ್ರೀವನ ಶಂಕರಾರ್ಚಿತನು ಮೀನಾಂಕಜನಕ ನಿಷ್ಕ- ಲಂಕ ಮಹಿಮನು ಶ್ರೀವೆಂಕಟರಮಣನು 2 ಅಂಗಜಕೋಟಿರೂಪ ಪರಮ ಸದಯಾ- ಪಾಂಗನಿರತ ನಿರ್ಲೇಪ ಮಂಗಲ ಚರಿತ ಭುಜಂಗಶಯನ ನರ- ಸಿಂಗ ವರದ ಮಾತಂಗ ಶ್ರೀರಂಗನು3 ಚಂದಿರಶತವದನ ಶೋಭಿಪ ನವ ಕುಂದ ಕುಟ್ಮಲರದನ ಸಿಂಧುಶಯನ ಮುಚುಕುಂದಾಪ್ತ ಸಚ್ಚಿದಾ- ನಂದ ಗೋವಿಂದ ಮುಕುಂದ ನಂದನಕಂದ4 ಅಕ್ಷರಾರ್ಚಿತ ದೇವನು ಶರಣ ಜನ ಪಕ್ಷ ಪರಾತ್ಪರನು ಪಕ್ಷೀಂದ್ರ ತುರಗ ಪದ್ಮಾಕ್ಷ ತ್ರಿಲೋಕ ವಿ- ಲಕ್ಷಣಮೂರ್ತಿ ಶ್ರೀಲಕ್ಷ್ಮೀನಾರಾಯಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂದಿಗೆ ದೊರಕುವನೋಪ. ಎಂದಿಗೆ ದೊರಕುವ ಸುಂದರ ಪುರುಷನು ಒಂದು ಗಳಿಗೆ ಯುಗ ಒಂದಾಗಿ ಕಳೆದೆನುಅ.ಪ. ಸರಿರಾತ್ರಿ ವೇಳ್ಯದಲಿ ಮೆಲ್ಲನೆ ಒಂದು ಸರಸವಾಡುತಲಿ ಪರಿಪರಿ ವಿಧದಲಿ ಸ್ಮರನ ಕಲೆಯ ತೋರಿ ವಿರಹಗೊಳಿಸಿ ನಾಳೆ ಬರುವೆನೆನ್ನುತ ಪೋದ 1 ಕೌಸ್ತುಭ ರತ್ನಾ- ಲಂಕೃತ ಶುಭಗ್ರೀವನ ಶಂಕರಾರ್ಚಿತನು ಮೀನಾಂಕಜನಕ ನಿಷ್ಕ- ಲಂಕ ಮಹಿಮನು ಶ್ರೀವೆಂಕಟರಮಣನು2 ಅಂಗಜಕೋಟಿರೂಪ ಪರಮ ಸದಯಾ- ಪಾಂಗನಿರತ ನಿರ್ಲೇಪ ಮಂಗಲ ಚರಿತ ಭುಜಂಗಶಯನ ನರ- ಸಿಂಗ ವರದ ಮಾತಂಗ ಶ್ರೀರಂಗನು3 ಚಂದಿರಶತವದನ ಶೋಭಿಪ ನವ ಕುಂದ ಕುಟ್ಮಲರದನ ಸಿಂಧುಶಯನ ಮುಚುಕುಂದಾಪ್ತ ಸಚ್ಚಿದಾ- ನಂದ ಗೋವಿಂದ ಮುಕುಂದ ನಂದನಕಂದ4 ಅಕ್ಷರಾರ್ಚಿತ ದೇವನು ಶರಣ ಜನ ಪಕ್ಷ ಪರಾತ್ಪರನು ಪಕ್ಷೀಂದ್ರ ತುರಗ ಪದ್ಮಾಕ್ಷ ತ್ರಿಲೋಕ ವಿ-ಲಕ್ಷಣಮೂರ್ತಿ ಶ್ರೀಲಕ್ಷ್ಮೀನಾರಾಯಣ5
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದಿಗೆ ಶ್ರೀಹರಿಯಾ ಮಾತಿಲಿ ಕಾಲವು ಕಳೆದಲ್ಲಿ ಘನವೇನಿಲ್ಲಯ್ಯ ಪ ಸ್ಥಳಕುಲ ಮೋದಿಸಿ ತಾಂಡವಮೂರ್ತಿಯ ಕುಲನೆನಿಸಿ ಮಾರ್ಗದಲಿ ಕುಲನೆಲೆ ತಿಳಿದು ಕಾಣುತಹೋಗುವ ನೆನೆಗಳ್ಳರ ಕೂಡೆ ಚಲೊ ಚಲೊ ಬೋಧಿಗೆ ಒಳಗಾಗಿ ಮಧುರಸ ಚಂಚಲ ನತಿ------ದು ಭಲ ಭಲ ಎನಿಸಿಕೊ ಬೇಗನೆ ಪರಮ ಭಕ್ತರ ಒಳಗೆಂದೂ 1 ಸರಸರ ಮಾರ್ಗದ ಸರಳಿಯ ತಿಳಿದಾ ಶರಣರ ನೆಲೆಗಾಣೊ ನೆರೆಹೊರೆಲಿರುವರ ಕರಕರಿಗಳುಯೆಂಬ ಕಲ್ಮಿಷ-----ಕಾಣೊ ಹರಿಗುರು ಕರುಣಾದಿ ಅಂತರಂಗದಿ ಅರಿತಿರುವರ ಕೂಡೋ ಪರಿ ಪರಿಯಲಿ ಆ ಭಂಡಾರದ ಗುರುಭಾರವು ನೀನೋಡೊ 2 ಮನಘನ ಕಾಂತಿಯ ಮಹಿಮೆಯ ತಿಳಿದಾ ಮರ್ಮಜ್ಞರ ಬೆರಿಯೊ ದಿನ ದಿನ ಸಂಭ್ರಮವನು ಅಘಸರಿಸಿ ದೃಢಭವವು ಪಿಡಿಯೊ ತನುವನು------ದ್ರಿಸಿ ತಾರಕ ಜಪಿಸಿ ಧನ್ಯನಾಗೊ ಇನ್ನೂ ದೀನಜನ ರಕ್ಷಕ ಧೀರ 'ಹೆನ್ನೆ ವಿಠ್ಠಲನ’ ಧಿಟ್ಟದಿ ಸ್ಮರಿಸಿನ್ನು 3
--------------
ಹೆನ್ನೆರಂಗದಾಸರು
ಎಂದು ಕಾಂಬೆನು ನಾನುಗೋ- ವಿಂದ ನಿನ್ನಯ ಪಾವನ್ನ ಪಾದವನ್ನು ನಾ ಪೊಂದಿಸೇವಿಸಿ ಆನಂದಪಡುವುದಕಿನ್ನು ಕರುಣಿಸೈ ಮುನ್ನ ಪ ಪೊಂದಿ ಮಹದಾನಂದ ಪಡೆಯಲು ಕಂದಿಕುಂದಿತು ತನುಮನೇಂದ್ರಿಯ ಇಂದೆ ತೋರಿಸೊ ಪಾದಕಮಲವ ಅ.ಪ ಬಾಲತನದಲಿ ನಾನು ಶ್ರೀಲೋಲ ನಿನ್ನಿಂದ ಪಾಲಿತನಾದೆನೊ ಬೆಲೆಯುಳ್ಳ ಆಯುವನೆಲ್ಲ ಕಳೆದು ಬಿಟ್ಟೆನು ನಾನು ಕೆಲಕಾಲದಲಿ ನಾ ಕಲುಶಕ್ರಿಯೆಗಳನ್ನು ಫಲವಿಲ್ಲದೆಸಗಿದೆನು ಎಲ್ಲರೊಳು ನೀ ನೆಲಸಿ ಜೀವರ ಎಲ್ಲಕರ್ಮವ ಮಾಡಿಸಿ ಫಲವೆಲ್ಲ ಅವರಿಗೆ ಇತ್ತು ನೀ ನಿರ್ಲಿಪ್ತನೆಂದು ತಿಳಿಯದಲೆ ಖುಲ್ಲಮಾನವರೊಡನೆ ಬೆರೆತು ಪುಲ್ಲಲೋಚನ ನಿನ್ನ ಮರೆದು ಇಲ್ಲ ಎನಗೆ ಎಣೆಯೆನುತ ನಾ ಬಲುಹೆಮ್ಮೆಯಿಂದಲಿ ದಿನಗಳ ಕಳೆದೇ ಇಲ್ಲನಿನಗೆಸರಿಯಿಲ್ಲ ನೀ ನಿಲ್ಲದಾಸ್ಥಳವಿಲ್ಲ ಜಗದಾ ಎಲ್ಲ ಕಾಲಗಳಲ್ಲಿ ಇಹ ಶ್ರೀನಲ್ಲ ನೀನೆಲ್ಲ ಬಲ್ಲೆಯೊ 1 ಬರಿದೇ ಕಾಲವ ಕಳೆದೇ ಶ್ರೀಹರಿಯೆ ನಿನ್ನಯ ಸ್ಮರಣೆಯನ್ನು ಮಾಡದೇ ಪರಿಪರಿಯ ತನುಮನ ಕ್ಲೇಶಗಳಿಗೊಳಗಾದೆ ನಾಮಸ್ಮರಣೆಯೊಂದಲ್ಲದೇ ಇನ್ನೆಲ್ಲಾ ಬರಿದೇ ಪರಮಕರುಣಾಶರಧಿ ಎಂಬುವ ಕರಿಧ್ರುವಬಲಿಮುಖ್ಯರೆಲ್ಲರ ಪೊರೆದ ಕೀರುತಿ ಕೇಳಿ ನಂಬಿದೆ ಶರಣಜನಮಂದಾರನೆಂದು ಅರಿಯೆ ನಾನವರಂತೆ ಸಾಧನ ಅರಿತು ಮಾಡುವ ಪರಿಯು ತಿಳಿಯದು ಬಿರುದು ಭಕ್ತಾಧೀನನೆಂದು ಹರಿಯೆ ನಿನ್ನಯ ಮರೆಯಹೊಕ್ಕೆನು ದುರಿತಶರಧಿಯೊಳಾಡುತಿರುವನ ಉ- ತ್ತರಿಸಲೊಂದೇ ನಾವೆಯಂತಿಹ ಚರಣಸ್ಮರಣೆಯಕೊಟ್ಟು ರಕ್ಷಿಸು ಪುರುಷಸೂಕ್ತಸುಮೆಯ ಜೀಯಾ2 ಶೇಷಗಿರಿಯವಾಸ ಶ್ರೀ ಶ್ರೀನಿವಾಸ ದೋಷರಹಿತ ಸರ್ವೇಶ ಮನೋ- ಕಾಶದಲಿ ಅನವರತ ನಿಲ್ಲೊ ಶ್ರೀಶಾ ಬಿಡಿಸೆನ್ನ ಭವಬಂಧ ಗ್ರಂಥಿಯ ಪಾಶಾ ಹರಿಸುವುದು ಕ್ಲೇಶಾ ಶ್ರೀಶ ನಿಗಗತಿಶಯವೆ ಎನ್ನಯ ವಿಷಯದಭಿಲಾಷೆಗಳ ಬಿಡಿಸೀ ದೋಷರಹಿತನ ಮಾಡಿಸೀ ಎನ್ನ ಪೋಷಿಸೋ ನಿನ್ನಸ್ಮರಣೆಯಿತ್ತು ದ್ವಾಸುಪ- ರ್ಣ ಶ್ರುತಿಗಳಿಂದಲಿ ಈಶ ದಾಸರ ಭಾವ ತಿಳಿಯದೆ ಮೋಸಹೋದೆನೊ ಬೋಧೆ ಇಲ್ಲದೆ ವಾಸುದೇವನೆ ರಕ್ಷಿಸೆನ್ನನು ಏಸುಕಾಲಕು ನೀನೆ ಗತಿ ಎಂದು ಆಸೆ ಮಾಡುವೆ ನಿನ್ನ ಕರುಣಕೆ ಬೇಸರದಲೆ ಮೊರೆಯ ಲಾಲಿಸಿ ಶ್ರೀಶ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು
ಎಂದು ಕಾಂಬೆನೊ ನಿನ್ನ ಹೇ ಶ್ರೀನಿವಾಸಾ ಪ ನಗೆಮೊಗದ ನತಜನ ಬಂಧು ಬಾಬಾರೆನ್ನ ಬಿ - ಟ್ಟಗಲದಲೆ ಮನ ಮಂದಿರದೊಳಿರು ಮುನ್ನಾದರು ಸುಪ್ರಸನ್ನ ಮುಂದೆ ಗತಿ ಏನಯ್ಯ ಮುಕುತರ ಹಿಂದುಳಿದವನಲ್ಲದಲೆ ತನು ಸಂ - ಬಂಧಿಗಳ ವಶನಾಗಿ ದುರ್ವಿಷ - ಯಾಂಧಕಾರದಿ ಮುಳುಗಿದೆನೊ ನಾ ಅ.ಪ. ಹಲವು ಜನ್ಮದ ನೋವಾ ನಾ ಹೇಳಿಕೊಳಲೇನೆಲವೊ ದೇವರ ದೇವಾ ನೀ - ನಲ್ಲದಲೆ ಭೂವಲಯದೊಳಿಗಿನ್ನಾವಾ ನಂಬಿದರ ಕಾವ ಸುಲಭರೊಳಗತಿ ಸುಲಭನೆಂಬುವ ಅಲವಬೋಧಮತಾನುಗರು ಎನ - ಗೊಲಿದು ಪೇಳಲು ಕೇಳಿ ನಿಶ್ಚಂ - ಚಲದಿ ನಿನ್ನನೆ ಧೇನಿಸುವೆ ನಾ ಕಲುಷ ಸಂಸ್ಕಾರಗಳ ವಶದಿಂ ಹೊಲಬುಗಾಣದೆ ಹರುಷಗುಂದುವೆ ಹೊಲೆ ಮನದ ಹರಿದಾಟ ತಪ್ಪಿಸಿ ನೆಲೆಗೆ ನಿಲ್ಲಿಸದಿರ್ದ ಬಳಿಕಿನ್ನೆಂದು 1 ಭಾರತೀಪತಿಪ್ರೀಯಾ ಎಂದೆಂದು ಭಕುತರ ಭಾರ ನಿನ್ನದೊ ಜೀಯಾ ಜಗವರಿಯೆ ಕರುಣಾ - ವಾರಿಧಿಯೆ ಪಿಡಿ ಕೈಯ್ಯಾ ಫಣಿರಾಜಶಯ್ಯಾ ತಾರಕನು ನೀನೆಂದು ತಿಳಿಯದ ಕಾರಣದಿ ಸುಖ ದುಃಖಮಯ ಸಂ - ಸಾರ ದುಸ್ತರ ಶರಧಿಯೊಳು ನಾ ಪಾರಗಾಣದೆ ಪರಿದು ಪೋಪೆನೊ ದೂರನೋಳ್ಪದು ಧರ್ಮವಲ್ಲವೊ ದ್ವಾರಕಾಪುರನಿಲಯ ಪರಮೋ - ದಾರ ತನುವೆಂದೆನ್ನ ಪಾಲಿಗೆ ಬಾರದಲ್ಲದೆ ಭವವಿಮೋಚನ 2 ವಿಕಸನಾರ್ಚಿತಪಾದ ವಿಶ್ವೇಶ ಜನ್ಮಾ - ದ್ಯಖಿಲ ಕಾರಣನಾದ ನಿರ್ದೋಷ ಸತ್ಯಾ - ಸುಖಗುಣಾರ್ಣವ ಶ್ರೀದವಿಠಲಪ್ರಸೀದ ಸಕಲ ಕ್ರಿಯ ಯೋಗಗಳು ತನು ಬಂ- ಧಕವು ನಿನಗೊಪ್ಪಿಸದಿರಲು ಎನೆ ನಿಖಿಳ ಜೀವರ ಭಿನ್ನ ನಿನ್ನಯ ಯುಕುತಿಗೆ ನಮೊ ಎಂಬೆನಲ್ಲದೆ ಯುಕುತ ಯುಕ್ತಿಗಳೊಂದರಿಯದ - ರ್ಭಕನ ಬಿನ್ನಪ ಸಲಿಸಿ ನವವಿಧ ಭಕುತಿ ಭಾಗ್ಯವ ಕೊಟ್ಟು ತವ ಸೇ - ವಕರ ಸೇವಕನೆನಿಸದಿರ್ದೊಡೆ 3
--------------
ಶ್ರೀದವಿಠಲರು
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎದ್ದುನಿಂತ ಬಂದು ನಿಂತ ಮುಂದೆ ನಿಂದಂಥಮಾರಾಂತರ್ಗೆ ಕೃತಾಂತ ನಿಶ್ಚಿಂತ ಹನುಮಂತಬಲವಂತ ಯೆದೆಗೊಂತ ತನಪಂಥ ಸಲಲೆನುತಸÀಂತರಿಗೆ ಸಂತತ ಶಾಂತ ನಿಂತ ಮಾರಾಂತ ಕೃತಾಂತ ಪ. ದುರುಳ ರಾವಣನ ವನದ ತರುವಿನ ಕೊನೆಯೇರಿದಕರಚರಣಗಳ ಘಾಯದಿ ಮರಂಗಳ ಮುರಿದಅರಿಗಜ ಗಂಡಭೇರುಂಡನೆಂಬ ತನ್ನ ಬಲುಬಿರುದಮೆರೆದು ಮಾರುತಿ ಪ್ರತಿಭಟರ ಶಿರಂಗಳ ತರಿದ 1 ಸೀತೆಗೆ ಉಂಗುರವನ್ನಿತ್ತು ಮತ್ತೆ ಕೈಗಳ ಮುಗಿದಪ್ರೀತಿಯಿಂ ಪೊನ್ನಕಚ್ಚುಟಕ್ಕಿಟ್ಟ ಗಂಟನು ಬಿಗಿದಖ್ಯಾತ ಮಂಡೋದರಿಕುವರನ ಬಸುರನು ಬಗಿದವಾತಸುತನು ವೈರಿಪುರವ ಸುಡಲು ತೊಡಗಿದ 2 ನಲಿದು ಲಂಘಿಸಿ ನಳನಳಿಸುವ ಬಾಲವನೆತ್ತಿಖಳರೆದೆ ಶೂಲ ಹುಬ್ಬುಗಳ ಗಂಟಿಕ್ಕಿ ನೋಡುವ ಅರ್ಥಿಆಳುತಲಿಹ ಅಬಲೆಯರ ಭಯಂಕರಮೂರ್ತಿಸುಳಿದನು ಕೇರಿಕೇರಿಯಲಸುರರ ನುಗ್ಗೊತ್ತಿ 3 ಲಂಕಾನಗರಿಯ ಪುಚ್ಚದ ಕಿಚ್ಚಿಂದ ಸುಟ್ಟಹುಂಕರಿಸುತ ಅಹಿತರ ಬೇಗ ತೆಗೆದೊಗದಿಟ್ಟಕಂಕಣ ಮಕುಟ ಹಾರಂಗಳಿಂದೊಪ್ಪುವ ಬಲುದಿಟ್ಟಶಂಕೆಯಿಲ್ಲದನಿಲಜ ಶತ್ರುಗಳಿಗಿಂತರ್ಥಿಯ ಕೊಟ್ಟ 4 ಹೋಗೆಲೊ ಕಪಿಯೆನೆ ಹೊಕ್ಕು ರಕ್ಕಸರನು ಬಿಗಿದಕಾಗೆಯ ಬಳಗಕೆ ಕಲ್ಲನಿಟ್ಟಂದದಿ ಮಾಡಿದಆಗಲೆ ಕಂಡ ದಶಮುಖನೆಂಬ ಕಳ್ಳನ ನೋಡಿದಬೇಗ ಜಾನಕಿಯನ್ನು ಬಿಡು ಬಿಡುಯೆನಲು ತೊಡಗಿದ 5 ಮೂರರದೊಂದು ಪಾಲು ಖಳರ ಜನಂಗಳ ಕೊಂದಮೀರಿದ ಸೇನೆ ನಮ್ಮ ರಘುಪತಿಗಿರಲೆಂದು ನಿಂದನೂರುಯೋಜನದ ವಾರಾಶಿಯ ತೀರಕೆ ಬಂದಹಾರಿದನು ಗಗನಕೆ ಹನುಮನು ಭರವಸದಿಂದ ನಿಂದ 6 ಕುಂಭಿನೀ ಸುತೆಯ ಕುರುಹಿನ ಸನ್ಮಣಿಯ ತಕ್ಕೊಂಡಅಂಬುಧಿಯನು ಬೇಗ ದಾಟಿ ಶ್ರೀರಾಮರ ಕಂಡತ್ರ್ಯಂಬಕ ಮೊದಲಾದ ಸುರರ ತಂಡದಲಿ ಪ್ರಚಂಡಕಂಬುಕಂಧರ ಹಯವದನನ ಭಕ್ತಿರಸಾಯನ ಉಂಡ 7
--------------
ವಾದಿರಾಜ
ಎನಗೆಲ್ಲಿಯ ಕೊರತೆ ನಿನ ನಂಬಿದ ಮೇಲೆ ಮನಸಿಜನೈಯ್ಯಾ ಶ್ರೀ ರಂಗೇಶವಿಠಲ ಪ ಕೊಡುವ ಕರ್ತನು ನೀನು ಎಡಬಿಡದಿರುವಾಗ ಬಡತನವೆನಗ್ಯಾಕೆ ರಂಗೇಶವಿಠಲ 1 ಸತಿಯು ಸುತರು ಎನಗೆ ಹಿತವ ಬಯಸಲಿಲ್ಲ ಗತಿಯು ಎನಗೆ ನೀನೆ ರಂಗೇಶವಿಠಲ 2 ಮಂದಮತಿಯು ನಾನು ಸಿಂಧುಶಯನ ನಿನ್ನ ಕಂದನೆಂದು ತಿಳಿಯೊ ರಂಗೇಶವಿಠಲ 3
--------------
ರಂಗೇಶವಿಠಲದಾಸರು