ಒಟ್ಟು 3306 ಕಡೆಗಳಲ್ಲಿ , 120 ದಾಸರು , 2229 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವರೋಗವೆ ಯೆನಗೆ ದೇವ ಧನ್ವಂತ್ರೀ ಪ ಸಾವಧಾನದಿಯೆನ್ನ ಕೈಪಿಡಿದು ನೋಡೋ ಅ ಪ ಹರಿಮೂರ್ತಿ ಕಾಣಿಸದು ಎನ್ನ ಕಂಗಳಿಗೆ ಹರಿಕೀರ್ತನೆ ಕೇಳದೆನ್ನ ಕಿವಿಗಳಿಗೆ ಹರಿಯ ಶ್ರೀಗಂಧವಾಘ್ರಾಣಿಸದೆನ್ನ ನಾಸಿಕವು ಹರಿಯಪ್ರಸಾದ ಜಿಹ್ವೆಗೆ ಸವಿಯಾಗದು 1 ಹರಿಪಾದ ಪೂಜಿಸೆ ಹಸ್ತಗಳು ಚರಿಸದು ಹರಿಗುರುಗಳಂಘ್ರಿಗೆ ಶಿರ ಬಾಗದು ಹರಿಯ ಸೇವೆಗೆ ಯೆನ್ನ ಅಂಗಗಳು ಚಲಿಸದು ಹರಿಯಾತ್ರೆಗೆನ್ನ ಕಾಲುಗಳೇಳದೋ 2 ಅನಾಥಬಂಧು ಶ್ರೀವಿಜಯವಿಠ್ಠಲರೇಯ ಯೆನ್ನ ಭಾಗ್ಯದ ಸ್ವಾಮಿಯಾಗಿ ನೀನೊ ಅನಾದಿಕಾಲದ ಘನರೋಗವನೆ ಬಿಡಿಸು ನಿನ್ನ ಉಪಕಾರವ ನಾನೆಂದಿಗೂ ಮರೆಯೇ 3
--------------
ವಿಜಯದಾಸ
ಆವಾಹನಆವಾಹನೋಪಚಾರವು ನಿನಗೆ ವಿಭುವೆಆವರಣರಹಿತ ಪರಿಪೂರ್ಣ ಚಿತ್ಸುಖವೆ ಪಹೃದಯಕಮಲದಿ ನೆನೆದು ಪೂಜಿಸುವೆನೆಂದು ಮತ್ತೊದಗಿ ಬಿಂಬದೊಳಿಳುಹಿಯರ್ಚಿಸುವೆನೆಂದುಇದಿರಾಗಿ ನಿಲ್ಲು ಸ್ಥಾಪಿತನಾಗು ಹತ್ತಿರಿರುಹದುಳುನಾಗೆಂದೆನೀ ತಪ್ಪನೆಣಿಸದೆ ಸಲಹು 1ಅಣುಮಹತ್ಪರಿಪೂರ್ಣ ವಾಸುದೇವನೆ ನಿನ್ನಗಣಿಸಿ ನೆಲೆಗಾಣವೀ ಶ್ರುತಿಗಳೆಂಬುದನುಮನದೊಳೆಣಿಸುತಲಿಹೆನು ಸರ್ವರೊಳು ಸಮಬುದ್ಧಿಯನು ಪಾಲಿಸೆಂದು ಬೇಡುವೆನು ಜಗದೀಶಾ 2ಪರಿಪೂರ್ಣನೆಂಬ ಭಾವದಿ ಮನವು ನಿಲದಾಗಿ ಗುರಿಗೈದು ನಿನ್ನ ಮಂಗಳ ಮೂರುತಿಯನುಪರಿಪರಿಯಲುಪಚರಿಸಿ ಸ್ಥಿರಗೈವೆನೀ ಮನವತಿರುಪತಿಯೆ ಸ್ಥಿರವಾಸ ಶ್ರೀ ವೆಂಕಟೇಶಾ 3ಓಂ ಯಮುನಾವೇಗಸಂಹಾರಿಣೇ ನಮಃ
--------------
ತಿಮ್ಮಪ್ಪದಾಸರು
ಆವುದು ಖರೆಯೆಲೊ ಜೀವನೆ ಆವುದು ನಿಜವೆಲೊ ಪ ಆವುದು ಖರೆಯಲೋ ಜೀವ ಜಗದ ಸುಖ ಮಾಯದೆಲ್ಲನು ಭಾವಿಸಿ ನೋಡೋಅ.ಪ ಬಡತನ ನಿಜವೇನೋ ನಿನಗೀ ಕಡುಸಿರಿ ಸ್ಥಿರವೇನು ಮಡದಿ ಮಕ್ಕಳು ನಿನ್ನ ಸಂಗಡ ಕಡೆತನಕಿಹ್ಯರೇನೊ ಹೆಡತಲೆ ಮೃತ್ಯು ಬಂದು ಪಿಡಿದು ಎಳೆಯುವಾಗ ಅಡರಿಕೊಂಡು ನಿನ್ನ ಬಿಡಿಸಿಕೊಂಬುರೇನು 1 ರಾಜ್ಯ ಭಂಡಾರವೆಲ್ಲ ನಿನಗೆ ಸಹಜವಾದದ್ದಲ್ಲ ಗೋಜುಪ್ರಪಂಚ ನಿಖಿಲವಂ ದಿನಮಾಜಿಹೋಗುವುದೆಲೊ ಸೋಜಿಗವಾಗಿ ಮಿಂಚು ತೇಜದಡಗುವಂತೆ ಈ ಜಗ ಸಮಾಜ ನಿಜವಿನಿತಿಲ್ಲೆಲೊ 2 ಕತ್ತೆಯಂತೆ ಕೂಗಿ ಜನ್ಮವ್ಯರ್ಥ ಕಳೆಯಬೇಡೊ ಉತ್ತಮರಿಗೆ ಬಾಗಿ ಸತ್ಯಪಥಕೆ ಹೊಂದು ಪಾಡೊ ನಿತ್ಯ ನಿರ್ಮಲ ಸರ್ವೋತ್ತಮ ಶ್ರೀರಾಮಪಾದ ಭಕ್ತಿಯಿಂ ಪಾಡಿ ಮುಕ್ತಿಯ ಪಡೆಯೊ3
--------------
ರಾಮದಾಸರು
ಆಸೆ ತೋರಿಸಿ ಈಶ ನಿರಾಸೆಮಾಳ್ಪರೆ ಲೇಸೋ ನಿನಗೆ ಶೇಷಶಾಯಿ ಶ್ರೀಶ ಅಭಿಲಾಷಿಗಳಿಗೆ ಪ ಬಡಜನರ ಪರ್ವತ ಒಡಲ ಆಸೆಯ ಕೊಡುವೆನೆಂದು ನುಡಿಯಲವರು ಎಡೆಬಿಡದೆ ಬೇಡಿ ಬೇಡಿ ಕಾಡಿ ಕಾಡಿ ಕಡೆಗೆ ನೋಯ್ವರು 1 ಆಡಿದ್ಯಾತಕೊ ವಾಕ್ಯ ಸುಳ್ಳು ಮಾಡಿದ್ಯಾತಕೊ ಖೋಡಿದೈವಿನಾ ಬೇಡುವಂತೆ ನಿನ್ನ ಬೇಡಿಕೊಂಬೆ ಗಾಢಮಹಿಮ ನೋಡದಿರೊಳಿತಿತ್ತಾಡಿದ್ಯಾಕ 2 ರೂಢಿಗಧಿಕನೆ ದಯವ ಮಾಡು ಎನ್ನೊಳು ಮೂಢತನದಿ ನಾ ಮಾಡಿದಂಥ ಕೇಡುಗುಣಗಳೆಣೆಸದೆನ್ನೊ ಳಾಡಿದ್ವಾಕ್ಯ ನೀಡು ಶ್ರೀರಾಮ 3
--------------
ರಾಮದಾಸರು
ಆಸೆಯೆನಗಿಲ್ಲ ಸರ್ವೇಶ ನಿನಬಿಟ್ಟು ವಾಸುಕೀಶಯನ ಜಗದೀಶ ನಿನ್ಹೊರತೆನಗೆ ಪ ನಿಗಮದಾಸೆಗೆ ಹೋಗಿ ನೀರೊಳಗೆ ಮುಳುಗಿ ನೀ ಸುಧೆಯ ಆಸೆಗೆ ಹೋಗಿ ಸುರರ ಕೈ ಸಿಕ್ಕು ನೆಲದ ಆಸೆಗೆ ಮಣ್ಣು ಬಗೆದÀು ಶ್ರಮವನೆ ಬಟ್ಟು ಕೊರಳ ಹಾರದ ಆಸೆ(ಗೆ) ಕರುಳ ಬಗೆವೊದೆ ಕಷ್ಟ1 ಭೂಮಿಯಲಿ ಭಾಳಾಸೆ ಭುವನ ವ್ಯಾಪಿಸಿಕೊಂಡು ಕಾಮಧೇನಿ (ನುವಿ?)ನ ಆಸೆ ಕಾರ್ತವೀರ್ಯಾರ್ಜುನನ ಕೊಂದು ಸಿರಿಯ ಸೌಂದರ್ಯದಾಸೆ ಶಿವನೆಬಲ್ಲನು ನೆಗಹಿ ಉದರದಾಸೆಗೆ ಅಸುರೆಜಗಿದು ವಿಷಮೊಲೆನುಂಡಿ 2 ತ್ರಿಪುರ ಸತಿಯರ ಆಸೆಗ್ವಸನವಿಲ್ಲದೆ ತಿರುಗಿ ಅಶ್ವದಲಿ ಆಸೆ ಅತಿ ಕಲಿಭಂಜನನೆನಿಸಿ ಈಸುಪರಿ ಆಸೆ ಭೀಮೇಶ ಕೃಷ್ಣಗೆ ಇರಲು ನಾಶರಹಿತನೆ ನಿನ್ನ ನಾಮವಿದ್ದರೆ ಸಾಕು 3
--------------
ಹರಪನಹಳ್ಳಿಭೀಮವ್ವ
ಆಳ್ವಾರಾಚಾರ್ಯ ಸ್ತುತಿಗಳು 1. ವಿಶ್ವಕ್ಸೇನ ಪ್ರಾರ್ಥನೆ ಶ್ರೀನಾಥಜ್ಞಾಪ್ರಕಾರ ನಡೆಯುವ ಸೂತ್ರವತೀರಮಣ ಮಾನಿತ ಪ್ರದಾನ ಮಂತ್ರೀ ಪೂಜಿಪೆ ವಿಘ್ನೇಶಾ ನಮಿಪೆ ಪ ಬಿಳಿಯುಡೆ ತುಂಬಿದ ತಿಂಗಳ ಬೆಳಗಾ ತೊಳಗುವ ನಾಲಕು ತೋಳುಗಳ ಒಲಿದಿಹ ನಗೆಮೋಗ ವಿಷ್ಣು ನೆನೆವೆ ಸುಲಭದಿ ಕಾರ್ಯವ ಗೈಸುವನೆ1 ದ್ವಿರದವಕ್ತ್ರತಾ ಮೊದಲಾಗಿರುವ ಪರಿಜನ ನೂರ್ವರಿಂದೊಪ್ಪಿರುವೇ ಪರಿಪರಿ ತಡೆಗಳ ತರಿದೋಡಿಸುತ ಪೊರೆ ವಿಶ್ವಕ್ಸೇನಾಶ್ರಿತ ನಾನು 2 ಬಿಡುಗಣ್ಣರ ಬೆಡಗಿನ ಒಡಲುಳ್ಳ ಕುಡಿನೋಟದ ತಾವರೆಗಣ್ಣ ಪಿಡಿದಹ ಶಂಖ ಚಕ್ರ ಗದಾಯುಧ ಒಡೆಯ ಮುಕುಂದ ದ್ವಾರನಿಲಯನೇ 3 ಬೊಮ್ಮ ಭವಸುರರು ನಯದಿಂ ಮೊದಲಾರಾಧಿಪರು ಶುಭ ಫಲದಾಯಕ
--------------
ಶಾಮಶರ್ಮರು
ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ ಭಜಿಸುವೆ ಪಸಾಕೊ ಸಂಸೃತಿಯಾಟವಿಷ್ಟರ ಮೇಲೆನೂಕೊ ರಾಗ ದ್ವೇಷಗಳ ಚನ್ನಾಗಿಕಾಕೋದರನಂತೆ ಕಾಡದೆ ಜನರನುಬೇಕೋ ಸಾಧನಗಳ ನೀ ಸಾಧಿಸಲು 1ಏಕೋ ಮೂಢನಂದದಿ ಸುಮ್ಮನಿರುವೆ ವಿವೇಕೋಪಚಯವ ಮಾಡು ಮನದಲಿಲೋಕೋಪಕಾರವ ನಡಸು ನಿಷ್ಕಪಟದಿಈ ಕೋಪವ ಬಿಟ್ಟರಿದಿರಾರು ನಿನಗೆ 2ಫಣ ಕೋಪಮನನಾಗಿ ಪಗಲ ಕಾಣದೆ ನಿನ್ನನಾ ಕೋಪಮೆಗೆ ಪೆಚ್ಚಿದ ನಿಜ ಸುಖವಾತಾಕೋ ಶ್ರೀ ಪಾದವನು ಗೋಪಾಲಾರ್ಯನಕೋ ಕೋ ಎಂದು ಕೊಡುವನು ಮುಕುತಿಯನು 3
--------------
ಗೋಪಾಲಾರ್ಯರು
ಇಕ್ಕೊ ಇಲ್ಲೆ ಸಿಕ್ಕಿದ ಶ್ರೀಗುರು ಪರಬ್ರಹ್ಮ ತೆಕ್ಕಿಸಿಕೊಂಬುವ ಬನ್ನಿ ಅಖರದಿ ನಮ್ಮ ಧ್ರುವ ಎಂದಿಗೆ ಬಿಡಬಾರದಿನ್ನು ತಂದೆ ನಮ್ಮಪ್ಪನ ಹೊಂದಿ ಸುಖಿಯಾಗಬೇಕು ಭಕ್ತಪಾಲಿಪನ ವಂದಿಸಬೇಕಿಂದು ಸಹಸ್ರಳದಲಿಪ್ಪನ ಸಂದೇಹವಿಲ್ಲದೆ ನೋಡಿ ಸ್ವರ್ಗಕೆ ಸೋಪಾನ 1 ಹರುಷವಾಯಿತು ಎನಗೆ ಧರೆಯೊಳಿಂದು ನೋಡಿ ಕರುಣಾಳು ಗುರುಮೂರ್ತಿಯ ಸ್ತುತಿಸ್ತವನ ಪಾಡಿ ಎರಡಿಲ್ಲದೆ ಶ್ರೀಚರಣ ವರಕೃಪೆಯ ಬೇಡಿ ಶಿರಸಾ ನಮಿಸಿದೆ ಗರ್ವಾಂಹಕಾರ ಈಡ್ಯಾಡಿ2 ಲೇಸುಲೇಸಾಯಿತು ನಮ್ಮ ವಾಸುದೇವನ ಕಂಡು ಭಾಸ್ಕರಕೋಟಿ ತೇಜನ ಸ್ಮರಣಿಯ ಸವಿಯುಂಡು ವಾಸನೆ ತೃಪ್ತ್ಯಾಯಿತು ಶ್ರೀಯೀಶನಾ ಮನಗಂಡು ದಾಸಮಹಿಪತಿಗಾನಂದವಾಯಿತು ಸದ್ಗತಿ ಸೂರೆಗೊಂಡು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ ಧ್ರುವ ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ
ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ ಪ ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನಬೇಸರಿಸಿ ಬೇಡ ಬಂದುದಿಲ್ಲವಾಸುದೇವನೆ ನಿನ್ನ ದಾಸರ ದಾಸರದಾಸರ ದಾಸ್ಯವ ಕೊಡು ಸಾಕೆಂದರೆ 1 ಸತಿಸುತರುಗಳ ಸಹಿತನಾಗಿ ನಾಹಿತದಿಂದ ಇರಬೇಕೆಂಬೊದಿಲ್ಲಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನಕಥಾಮೃತವನೆ ಕೊಡು ಸಾಕೆಂದರೆ 2 ಸಾಲವಾಯಿತೆಂದು ಸಂಬಳ ಎನಗೆಸಾಲದೆಂದು ಬೇಡ ಬಂದುದಿಲ್ಲನಾಲಗೆಯಲಿ ನಿನ್ನ ನಾಮದುಚ್ಚರಣೆಯಪಾಲಿಸಬೇಕೆಂದು ಬೇಡಿದೆನಲ್ಲದೆ3 ಒಡವೆಗಳಿಲ್ಲ ಒಡ್ಯಾಣಗಳಿಲ್ಲೆಂದುಬಡವನೆಂದು ಬೇಡ ಬಂದುದಿಲ್ಲಒಡೆಯ ನಿನ್ನಡಿಗಳಿಗೆರಗುವುದಕೆ ಮನಬಿಡದಿಹದೊಂದನು ಕೊಡು ಸಾಕೆಂದರೆ4 ಆಗಬೇಕು ರಾಜ್ಯಭೋಗಗಳೆನಗೆಂದುಈಗ ನಾನು ಬೇಡ ಬಂದುದಿಲ್ಲನಾಗಶಯನ ರಂಗವಿಠಲ ನಾ ನಿನ್ನ ಬಾಗಿಲ ಕಾಯುವ ಭಾಗ್ಯ ಸಾಕೆಂದರೆ5
--------------
ಶ್ರೀಪಾದರಾಜರು
ಇದನೆ ಪಾಲಿಸು ಪಾಲಿಸೆನಗೆ ದೇವಾ ಪ ಸನ್ನುತ ಮಹಿಮ ಪದೋಪದಗೆ ಬಿನ್ನೈಪೆ ಅ ಶ್ರೀವಿರಿಂಚಾದ್ಯಖಿಳ ಚೇತನಾಚೇತನವು ಶ್ರೀವರನೆ ನಿನಗಧಿಷ್ಠಾನವೆಂದೂ ಸ್ಥಾವರಗಳೊಳಗೆ ನೈಜನುಯೆನಿಸಿ ಪರಿಣಾಮ ನೀವೆ ವೃದ್ಧಿ ಹ್ರಾಸ ಸರ್ವಕಾಲದ ವೆಂಬೋ 1 ಪ್ರಕೃತಿ ಗುಣಗಳ ಪ್ರವೇಶಿಸಿ ಬಾಧ್ಯ ಬಾಧಕನು ಅಕೃತಜ್ಞ ನೀನೆನಿಸಿ ಭಕತಾ ಜನರಾ ಕರ್ಮ ಸಕೃತ ನಿನ್ನನು ಸ್ಮರಿಸಿ ಹಿಗ್ಗುವರ ಸಂಗ ಸುಖ 2 ಕರ್ತು ಕಾರ್ಯರ್ತು ಪ್ರೇರಕ ಪ್ರೇರ್ಯ ಸುಖ ಸಾಕ್ಷಿ ಕ್ಷೇತ್ರ ಧನಧಾನ್ಯಹಿಕ ಪಾರತ್ರಿಕಾ ಮಿತ್ರ ತಮ ಶ್ರೀ ಜನಗನ್ನಾಥ ವಿಠಲನೆ ಸ ರ್ವತ್ರ ವ್ಯಾಪಕ ಮಮಸ್ವಾಮಿಯೆಂಬೋ ಜ್ಞಾನ3
--------------
ಜಗನ್ನಾಥದಾಸರು
ಇದನೆ ಪಾಲಿಸೆನಗೆ ದೇವ ಸುದಯದೇನುಕೊಟ್ಟರು ಒಲ್ಲೆ ಪ ಸದಾ ಎಡೆಬಿಡದೆ ನಿಮ್ಮ ಸದಮಲ ನಾಮೆನ್ನೊದನಕೆ ಅ.ಪ ಹಲವು ಚಿಂತನೆಯೊಳಗಿರಲಿ ನಲಿಯುತಿರಲು ಮಲಗಿರಲಿ ಚಲಿಸದೆ ತವ ಚೆಲುವಮೂರ್ತೆ ನ್ನೊಳನೇತ್ರದ್ಹೊಳೆಯುತಿರಲಿ 1 ಘನತರದ ದುಃಖದೊಳಗೆ ಅನುಪಮ ಆನಂದದೊಳಗೆ ಕನಸುಮನಸಿನೊಳಗೆ ನಿಮ್ಮ ನೆನವು ಕ್ಷಣ ಮರೆಯದಂತೆ 2 ಕ್ಷೇತ್ರದಿರಲಿ ಯಾತ್ರದಿರಲಿ ಧಾತ್ರಿ ತಿರುಗುತ್ತಿರಲಿ ಜಗ ತ್ಸೂತ್ರ ಶ್ರೀರಾಮ ನಿಮ್ಮ ಪಾದ ಮಾತ್ರೆನ್ನ ಮಂಡೆಮೇಲೆ ಇರಲಿ 3
--------------
ರಾಮದಾಸರು
ಇಂದಿಗೆ ಕಡೆಮಾಡು ಎನ್ನ ಮಂದಬುದ್ದಿ ತಂದೆ ಕೇಳಿ ಮರೆಬಿದ್ದೆ ನಿನ್ನವರ ಸುದ್ದಿ ಪ ಒಪ್ಪಿಡ್ಯವಲಕ್ಕಿಗೆ ಒಪ್ಪಿ ಘನ ಬಡತನವ ಕಪ್ಪುಕುಲದವನಿಂಗೆ ತುಪ್ಪ ಸಕ್ಕರೆಯನ್ನು ಗಪ್ಪತ್ತಿಲುಂಡು ಮುಕ್ತಿ ಸಂಪದ1 ವಿದುರನರ್ಧಾಂಗಿಯ ಸದಮಲದ ತವಪಾದ ಸದನಕೈಯಲು ಪದುಮವದನೆ ಮೈ ಮರೆದು ಕದಳಿಫಲ ಮೇಲ್ಭಾಗ ವದನದಿಕ್ಕಲು ಸವಿದು ಸದುಯಾಂಬುಧೊಲಿದಸಮಪದವಿ ದಯಮಾಡ್ದಿ2 ಅಧಮಾಧಮಾಗಿ ದುರ್ಮದದಿಂದ ಮತಿಗೆಟ್ಟು ಸದಮಲ ಕುಲಪದ್ಧತಿ ವಿಧಿಯನ್ನು ಮರೆತು ಅಧಮಕುಲಜಳಿಗೊಲಿದು ಮದುವ್ಯಾದ ಅಜಮಿಳಗೆ ಒದಗಿ ಬಂದಂತ್ಯಕೆ ನಿಜಪದವಿ ಕರುಣಿಸಿದಿ3 ವರಧರ್ಮ ಹಿತಭಕ್ತ ನರನಿವರ ಲೆಕ್ಕಿಸದೆ ಕರುಣದ್ವಿದುರನ ಮನೆಗೆ ಭರದಿ ಬಂದಿಳಿದಿ ಪರಮಪಾವನ ನಿಮ್ಮ ಚರಣಭಕ್ತ್ಯೊಂದೆನಗೆ ಕರುಣಿಸು ಮತ್ತಾವ ಸಿರಿಯ ನಾನೊಲ್ಲೆ 4 ನಿನ್ನ ಎಂಜಲು ಉಣಿಸಿ ನಿನ್ನವರೊಳಾಡಿಸಿ ನಿನ್ನ ಉನ್ನತ ಧ್ಯಾನವನ್ನೆ ದಯಮಾಡಿ ಮನ್ನಿಸಿ ಸಲಹಯ್ಯ ನಿನ್ನ ದಾಸನೆಂದೆನಿಸಿ ಎನ್ನಯ್ಯ ಶ್ರೀರಾಮ ನಿನ್ಹ್ನೊರತನ್ಯರಿಯೆ 5
--------------
ರಾಮದಾಸರು