ಒಟ್ಟು 416 ಕಡೆಗಳಲ್ಲಿ , 70 ದಾಸರು , 342 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಧವ ನಮ್ಮ ಶ್ರೀಧವ ಬಾಧೆಪಡಿಸದೆ ತನ್ನ ಪಾದದಾಸರ ಕಾಯ್ವ ಪ ನಿರುತ ನೀರೊಳು ನಿಂದ ಈತ ಚಾರು ನಿಗಮಗಳ ತಂದ ಬಲು ಭಾರ ಪೊತ್ತನು ಬೆನ್ನಲಿಂದ ಆಹ ಕೋರೆದಾಡೆಯಲಿಂದ ಘೋರದೈತ್ಯನ ಸಂ ಹಾರವ ಮಾಡಿ ಭೂಭಾರವನಿಳುಹಿದ 1 ಅರಮನೆಕಂಬದಲಿಂದ ಕಡು ಘೋರ ರೂಪವ ತಾಳಿ ಬಂದ ಮಹ ದುರುಳನುದರ ಬಗಿದುಕೊಂದ ಆಹ ಧರೆಯನೀರಡಿ ಮಾಡಿವ ದನುಜನ ತುಳಿದು ಚರಣದಾಸರ ಮನದೊರವಿತ್ತು ಸಲಹಿದ 2 ವೀರತನದಿ ಕೊಡಲಿಪಿಡಿದ ಧರೆಯ ಸಾರಕ್ಷತ್ರಿಯಮೂಲವಳಿದ ದೇವ ಧಾರುಣಿಯೊಳು ನರನಾದ ಅಹ ತೋರಿ ವಿಪಿನವಾಸ ಮೀರಿದಸುರನ ಕೊಂದು ಮೂರುಲೋಕದ ಕಷ್ಟ ದೂರಮಾಡಿದ ಶೂರ 3 ಗೊಲ್ಲಕುಲದಿ ಜನಿಸಿದ ಪುಂಡ ಬಿಲ್ಲಿನಾಟವ ರಚಿಸಿದ ವೀರ ಖುಲ್ಲ ಕಂಸನ ಮದ ಮುರಿದ ಆಹ ನಲ್ಲೇರ್ಹದಿನಾರು ಸಹಸ್ರಬಲ್ಲಿದತನದಾಳಿ ಎಲ್ಲ ಭಕ್ತರ ಇಷ್ಟಸಲ್ಲಿಸಿ ಪೊರೆದನು 4 ಸಾರಿಬತ್ತಲೆ ಕದಲಿದ ಪರಮ ನಾರಿಯರ ವ್ರತ ಭಂಗಿಸಿ ಮೆರೆದ ಮೂರುಪುರದ ಗರ್ವಮುರಿದ ಆಹ ಪಾರುಮಾಡಿದ ಸುರರ ಘೋರಕಂಟಕದಿಂದ ಏರಿದ ಹಯ ನಮ್ಮ ಧೀರ ಶ್ರೀ ಗುರು ರಾಮ 5
--------------
ರಾಮದಾಸರು
ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾಭಿಮಾನವೆನಿಸುವ ಮೈಲಿಗೆಯನು ಹೇಯವಿದೆಂದು ಬಿಟ್ಟರಿಕೆಯ ಮಡಿಯುಟ್ಟೆಬಾಯ ಹೊೈುಸುವೆನಿನ್ನು ತಪ್ಪಿದೆಯಾದರೆ ಪಧೀರತನದಿ ಸದಸದ್ವಿವೇಕವ ತೊಟ್ಟು | ಸಾರಿ ಧನಾದಿ ಭೋಗಗಳ ಬಿಟ್ಟುಸಾರವಲ್ಲೆಂದು ಸ್ವರ್ಗಾದಿ ಸುಖಂಗಳ | ಮೀರಿದ ವಿರತನು ನಾನೆಂದೆನಲ್ಲದೆ ನಿನ್ನನಾರಿಯಬೇಕೆಂದೆನೆ ವಿಷಯವಿ | ಕಾರದೊಳ್ಬಳಿಸಂದೆನೆ ಧ್ಯಾನ ಸಾಧನಕಾರವೆ ಸಾಕೆಂದೆನೆ ಕಲ್ಪಿತವಾದ ಘೋರ ಸಂಸಾರವಸಾರವೆಂದೆನಲ್ಲದೆ 1ಶಮೆುಂದ ಚಿತ್ತ ವಿಕ್ಷೇಪವ ತೊಲಯ | ದಯೆುಂದಿಂದ್ರಿಯಗಳ ತಗ್ಗಿಸಿಕ್ರಮದಿಂ ತಿತಿಕ್ಷೆುಂ ಸಹನವ ಮಾಡಿ | ಯಮಿತೋಪರಮದಲಗ್ಗಳನೆಂದೆನಲ್ಲದೆಸಮತೆುಲ್ಲದೆ ಬಂದೆನೆ ತನು ಭೋಗ | ಮಮತೆಯೊಳಗೆ ನಿಂದೆನೆ ವಿಘ್ನವಿಕ್ರಮಕೊಳಗಾದೆನೆಂದೆನೆ ವೇದಾಂತೋಪಕ್ರಮವೆನ್ನೊಳಾುತೆಂದು ವಿವರಿಸಿದೆನಲ್ಲದೆ 2ದೀಪಿತ ಮೋಕ್ಷೇಚ್ಛೆುಂದ ತೋರುವ ಸಕಲ | ತಾಪತ್ರಯಗಳ ತೊಲಗಿಸಿಈಪರಿ ವೇದಾಂತ ಶ್ರವಣ ಮನನದ ಪ್ರ | ತಾಪದಿಂದರಿಗಳಿಲ್ಲೆನಗೆಂದೆನಲ್ಲದೆನೀ ಪುಸಿಯಲ್ಲೆಂದೆನೆ ಕಲ್ಪಿತ ನಾಮ | ರೂಪವ ನಿಜವೆಂದೆನೆ ತಾದೃಶ್ಯ ವಿಲೋಪಕನಲ್ಲೆಂದೆನೆ ಕೇಳು ಪ್ರತಿಜ್ಞೆಯ | ಗೋಪಾಲಾರ್ಯನೆ ನಾನೆಂದೆನಲ್ಲದೆ3
--------------
ಗೋಪಾಲಾರ್ಯರು
ಮಾರಜನಕನ ಮಾರಿ ನೋಡುತಸುಖವ ಸೂರೆಗೊಂಡರೆನೀರೆ ದ್ವಾರಕಾಪುರದವರು ಪ. ದಟ್ಟಾದ ಬೀದಿಯಲಿ ಪಟ್ಟಾವಳಿಯ ಜವಳಿ ಇಟ್ಟು ಮಾರುವರು ಕಡೆಯಿಲ್ಲಇಟ್ಟು ಮಾರುವರು ಕಡೆಯಿಲ್ಲದ್ವಾರಕಾಶೆಟ್ಟರ ಭಾಗ್ಯ ಸರಿಗಾಣಿ1 ಅಚ್ಚ ಜರತಾರಿ ಹೆಚ್ಚಿನ ಜವಳಿಯಚಿತ್ರದ ಮಲ್ಲಿಗೆ ನಡುವಿಟ್ಟಚಿತ್ರದ ಮಲ್ಲಿಗೆ ನಡುವಿಟ್ಟು ಅಲ್ಲಲ್ಲಿಹಚ್ಚಿ ಮಾರುವವರು ಕಡೆಯಿಲ್ಲ 2 ಜವಳಿ ಅಂಗಡಿ ಮುಂದೆ ಹವಳಗಾರರು ಅಲ್ಲಿ ಕೊಳ್ಳುವ ನಾರಿಯರು ಕಡೆಯಿಲ್ಲ ಕೊಳ್ಳುವ ನಾರಿಯರು ಕಡೆಯಿಲ್ಲ ದ್ವಾರಕಾಕಳೆಯ ವರ್ಣಿಸಲು ವಶವಲ್ಲ 3 ಕಂಚು ಹಿತ್ತಾಳೆ ಮಾರುವ ಕಂಚುಗಾರರಂಗಡಿಸಂಚಿತವಾದ ನವಧಾನ್ಯಸಂಚಿತವಾದ ನವಧಾನ್ಯ ಅಲ್ಲಲ್ಲಿಹಚ್ಚಿಮಾರುವವರು ಕಡೆಯಿಲ್ಲ4 ರಂಗ ರಾಮೇಶನ ನಗರೀಲೆ ಬಂಗಾರ ಬೆಳ್ಳಿ ಬೆಲೆ ಮಾಡಿಬಂಗಾರ ಬೆಳ್ಳಿ ಬೆಲೆ ಮಾಡಿ ಮಾರುವ ರಂಗದುಟಿಯವರುಕಡೆಯಿಲ್ಲ 5
--------------
ಗಲಗಲಿಅವ್ವನವರು
ಮಾರಿ ಬೇರೆಂದೇಕೆ ಹಲುಬುವರು ಜಗದಿ ನಾರಿಯೇ ಮಕ್ಕಮಾರ್ಯೆಂದೆನ್ನಬಾರದೆ ಪ ಹಿತದೋರಿ ಮನಸೆಳೆದು ಮತಿಗೆಡಿಸಿ ವಿಧವಿಧ ದು ಷ್ಕøತ ಪೇಳಿ ಬಂಧುಗಳ ಹಿತವನೆ ಮರೆಸಿ ಸತತ ಬೆನ್ನ್ಹತ್ತಿ ಬಿಡದೆ ಕ್ಷಿತಿಮೇಲೆ ಅತಿಯಾಗಿ ವ್ಯಥೆಬಡಿಪ ಮಾರಿ ನಿಜಸ್ಥಿತಿ ವಿಚಾರಿಸದೆ 1 ಮನೆ ಧನ ಗುಣ ಸುಲಿದು ಘನತೆಯನು ಕೆಡಿಸಿ ಮ ತ್ತನುಕೂಲವನು ಇತ್ತು ತನುಶಕ್ತಿ ಹೀರಿ ಕುಣಿಕುಣಿಸಿ ಜಗದೊಳಗೆ ಬಿನಗುರಲಿ ಬಿನುಗೆನಿಸಿ ಘನ ಬಾಧಿಸುವ ಮಾರಿದಿನಿಸು ಕಾಣದಲೆ 2 ಸ್ವಾಮಿ ಶ್ರೀರಾಮನ ಪ್ರೇಮಕ್ಕೆ ದೂರೆನಿಸಿ ಭುವಿಯೊಳು ಮುಕ್ತಿಕಾಮಿನಿಯ ತೊರೆಸಿ ನೇಮವಿಲ್ಲದ ಕಷ್ಟ ನೇಮಿಯೊಳಳಿಸಲಿಕೆ ಯಮನೊಶಕೆ ಕೊಡುವಂಥ ಈ ಮಾರಿನೊದೆಯದೆ 3
--------------
ರಾಮದಾಸರು
ಮುದದಿ ನಕ್ರನ ಕೊಂದು ಸಲಹಿದ ಸದುಭಕುತರ ಬಂಧು 1 ನಾರಿಯು ತನ್ನ ಕರೆದಾ ಮಾತ್ರದಿ ಸೀರೆಯ ಮಳೆಗರೆದಾ ಕ್ರೂರ ಖಳರ ಮುರಿದಾ ಪಾಂಡವ- ರಾರಣ್ಯದಿ ಪೊರೆದಾ ನಾರಗೆ ಅಜಮಿಳ ನಾರಾಯಣನೆನೆ ಪಾರುಗಾಣಿಸಿದಪಾರಗುಣನಿಧಿಯಾ 2 ಒಂದು ಬಾರಿಗೆ ಶ್ರೀಶನ ನೆನೆದರೆ ದುರಿತ ನಾಶಾ ಬೆಂದದ್ದು ಬಹುಪಾಶಾ ಅವಗಿ- ನ್ನೆಂದಿಗಿಲ್ಲವೊ ಕ್ಲೇಶಾ ತಂದೆ ಕದರಂಡಲಗಿ ಹನುಮಯ್ಯನೊಡೆಯ ಗೋ- ವಿಂದನ ನೆನೆದವರೆಂದಿಗು ಧನ್ಯರು 3
--------------
ಕದರುಂಡಲಗಿ ಹನುಮಯ್ಯ
ಮುದ್ದು ಮುಖದ ಲಕುಮಿ ಎನಗೆ ಶುದ್ಧ ಜ್ಞಾನವÀ ನೀಡೆ ಪ. ಬಿದ್ದಿಹೆ ನಿನ್ನ ಪದದಲಿ ನಿರುತ ಮದ್ಬಿಂಬನ ತೋರೆ ಅ.ಪ. ಹರಿಸರ್ವೋತ್ತಮ ಸುರರಕ್ಷಕನೆಂಬ ಖರೆಯ ಜ್ಞಾನವ ನೀಡೆ ಕರಕರೆಗೊಳಿಸದೆ ದುರ್ವಿಷಯದಲೆನ್ನ ಹರಿಯ ಧ್ಯಾನವನೀಡೆ 1 ನಗೆಮೊಗ ಚಲುವೆ ಖಗವಾಹನ ಪ್ರಿಯೆ ಜಗದೊಡೆಯನ ತೋರೆ ನಿತ್ಯ ಬಗೆ ಬಗೆ ಲೀಲೆಯ ಸುಗುಣವಂತೆ ತಿಳಿಸೆ 2 ಸೃಷ್ಟಿಕರ್ತಗೆ ಪಟ್ಟದ ನಾರಿಯೆ ದೃಷ್ಟ ಇಂದ್ರಿಯವಳಿಯೆ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲ ಸತಿಯೆ 3
--------------
ಅಂಬಾಬಾಯಿ
ಮೂರನೆಯ ಸಂಧಿ ಪತ್ರವನೋದಿಕೊಂಡು ಪದ್ಮನಾಭನ ಕಿಂಕರಗೆ ವಿಷಯೆ ವಿಶಾಲದಿ ಸಖಿಯರು ಕೂಡಿ ಆಲಯದಿಂದಲಿ ಹೊರಟರು ವಸಂತಕಾಲ ಬಂದಿರೆ ನಂದನಕೆ 1 ವಚ್ಚೇರೆಗಂಗಳ ವಾರಿಜಮುಖಿಯರು ನಿಚ್ಚಳಾಂಗದ ನೀರೆಯರು ಹೆಚ್ಚ ಹಿರಿಯ ಹೆಂಗಳ ರನ್ನೇರು ಬೆಚ್ಚದೆ ಬೆರೆದು ನಡೆದರು 2 ಚೆಲ್ಲೆಗಂಗಳ ಚೆಲ್ವೆಯರು ಎಲ್ಲರೈದಿದರು ನಂದನಕೆ 3 ಕಳಸಕುಚದೋರು ಕಂಬುಕಂಧರೆಯರು ಕುಂತಳಕಾಗಿ ನಡೆದರು4 ಚೆಂದುಟಿ ಚೆಲುವಿನ ಬಾಲೆಯರು ನಟನೆಯಿಂದೆಲ್ಲ ನಡೆದರು 5 ತಬ್ಬುತ ತಾಗೊಲವುತಲಿ ಕಬ್ಬುವಿಲ್ಲನ ಕೋಲಾಹಲ ಉಲ್ಲಸದಿ ತಬ್ಬಿ ನಡೆದರು ನಂದನಕೆ 6 ಕಕ್ಕಸ ನಕ್ಕುನಲಿದು ನಾನಾ ಚೇಷ್ಟೆಗಳಿಂದ ಹೊಕ್ಕರು ನಂದನವನವ7 ಸರೋವರವಿಳಿದು ಮಾಡಿದರ್ ಕೈಚಳಕವ ಜಲಕ್ರೀಡೆಯನಾಡಿದರತಿ ಹರುಷದಲಿ 8 ಕೆಂದಾವರೆ ಮೊಗ್ಗು ಕಂಡು ಹರುಷದಿ9 ಕೋಮಲೆಯರ ನೀರಾಟದ ರಭಸಕ್ಕೆ ತಾವರೆಗಳು ಬೆರಗಾಗೆ ಹೇವದಿ ತಲೆಯ ತಗ್ಗಿದವು10 ಸಮನಾಗಿ ತೋರುತಲಿಹವು 11 ದಿವ್ಯಾಂಗ ತೋರುತಲಿ ಹೆರೆಯ ಕೂರಂಬಿನಂದದಲಿ12 ಸಡಿಲಿದಾಭರಣವನಿಟ್ಟು ಮುಡಿದರು ತುದಿವೆಣ್ಣೆಗಂಟು 13 ಕಣ್ಣಿಗೆ ಅಂಜನ ಹಚ್ಚಿ ಸಂಪಿಗೆ ಮಕರಂದ ಪತ್ರಿಕೆಯನಿಟ್ಟು ಲಲನೆಯರೆಲ್ಲ ಶೃಂಗಾರದಿ 14 ಮಾನಿನಿಯರು ತೆರಳಿದರು 15 ಕಂದರ್ಪನ ಮದದಾನೆಯಂತೆ ಕರ್ಪುರ ವೀಳ್ಯವ ಕರದಲ್ಲಿ ಪಿಡಿದು ಗುಪ್ಪವಡೆದರು ನಾರಿಯರು 16 ಘನರಾಗದಿಂದ ಪಾಡುತಲಿ ತಮ್ಮ ಮನಬಂದ ಫಲ ಪುಷ್ಪಂಗಳ 17 ಉದ್ದಂಡತನದಲಾಡುತಿಹರು 18 ಬೆರಸಿಕೊಂಡಾಡುತಲಿಹರು ಹರುಷದಿಂದಲಿ ಮಂತ್ರಿ ತನುಜೆ 19 ಚಿಕ್ಕ ಪ್ರಾಯದ ಕೋಮಲಾಂಗಿಯು ಹೆಮ್ಮಕ್ಕಳನಗಲಿ ತಾ ಚೂತ ಬೆಕ್ಕಸ ಬೆರಗಾಗಿ ನಿಂದಳ್ 20 ಮತಿಭ್ರಮೆಯಿಂದ ನೋಡಿದಳು 21 ಪಾರ್ವತಿಪತಿಯೆಂಬೆನೆ ಪಣೆಗಣ್ಣಿಲ್ಲ ವಾರಿಜೋದ್ಭವನಿವನಲ್ಲ ನಾರಾಯಣನೆಂಬೆನೆ ಶಂಖಚಕ್ರವು ತೋರುವುದಿಲ್ಲ ಕೈಯೊಳಗೆ 22 ಇಂದ್ರನೆಂಬೆನೆ ಬಿಳಿಯಾನೆ ಕೆಲದಲಿಲ್ಲ ಚಂದ್ರನೆಂಬೆನೆ ಮೃಗವಿಲ್ಲ ಬಂದಿಳಿದನೊ ಭೂತಳಕೆ 23 ಕುಸುಮ ಬಾಣವು ಕೈಯೊಳಿಲ್ಲ ವಿಷಯೆ 24 ಹತ್ತಿರೆ ಬಂದು ನಿಲ್ಲುವಳು ಹೊತ್ತಲ್ಲವೆಂದು ಸಾರುವಳು 25 ಮುಟ್ಟುವೆನೆಂದು ನಿಲ್ಲುವಳು ಥಟ್ಟನೆ ಕಡೆಗೆ ಸಾರುವಳು 26 ಲಜ್ಜೆಹೋದರು ಹೋಗಲಿ ಎನುತ ಭೇದಿಸಿ ನೋಡಿದಳವನ 27 ಚೊಗೆಯ ಕುಪ್ಪಸದ ಕೊನೆಯಲ್ಲಿ ಮಂತ್ರಿ ತನುಜೆ 28 ಹೊದ್ದಿದ್ದ ಲಜ್ಜೆ ಭಾವದಲಿ ಸಾರ್ದುಮುದ್ರೆಯೊಡೆದಳಂಬುಜಾಕ್ಷಿ 29 ಮೋಡಿಯ ಬರೆದ ಬರಹನು ಮಾಡಿದ ಸುಕೃತದ ಫಲದಿ 30 ನೇಮಿಸಿ ಕಳುಹಿದ ಕಾರ್ಯ ವಿಷವ ಕೊಡುವುದುತ್ತಮವು 31 ಭಾವಿಸಿ ನಿನ್ನ ಮನದಿ ಮುಂದಕ್ಕೆ ಲೇಸುಂಟು ನಮಗೆ 32 ಕೈತಪ್ಪೆಂದು ಮನದಲ್ಲಿ ತಿಳಿದು 33 ವಾಕಾರವನೆ ಚೆಳ್ಳುಗುರಿಂದಲಿ ತಿದ್ದಿ ಯೇಕಾರವನೆ ಮಾಡಿದಳು ಮರುಗಿದಳು 34 ಕಟ್ಟಿದ ಭರದಿಂದ ತಲೆಯನು ಎತ್ತಿ 35 ನಿಂದೊಮ್ಮೆ ನೋಡುವಳು ಕಂದಿ ಕಾತರಿಸುತಲಿಹಳು 36 ಬೆದರಿದ ಹುಲ್ಲೆಯಂದದಲಿ ಹೃದಯ ಸಂಚಲಿಸುತಲಿಹಳು 37 ಹುಸಿ ನುಡಿಗಳನು ಉಟ್ಟ ದೇವಾಂಗ 38 ಪರಿಮಳ ಮಾಜುವುದೆ
--------------
ಹೆಳವನಕಟ್ಟೆ ಗಿರಿಯಮ್ಮ
ಮೃಗಮೋಹಿನಿಯೊಡನೇಕೋ ಪಂಥ ಪ ಕಾಂತ ಸಿರಿಕಾಂತ ಸುರನಗರಾಧಿಪ ಅ- ನಂತ ಗುಣವಂತ ದೇವಾ ಎನ್ನ ಸಲಹೊ ಅ.ಪ ಸುಲಲಿತ ಲತಾಂಗಿ ನಿನ್ನೊಲುಮೆಯಲ್ಲಿ ನೆರೆಹೊಂಗಿ- ಸಲೆ ಮನವ ಮಾಡಿ| ನಿನ್ನಗಲಿ ಬಾಯಾರಿ ಬಲು ವಿರಹದಾಸರಿನ ಬೇಸರಿನಲ್ಲಿ ಯಿಂ_ ತಳಿದವಳ ಕಾಯೊ ಸಿರಿಧಾಮ ಗುಣಧಾಮ 1 ಕಳಕಳಿಪ ನೋಟ ಕಾತರಿಪ ವಿರಹದ ಹೂಟ ಅಳಲು ಮನ ಅಳಿನಿದ್ರೆ ನಿನಗಾಲಯ ಮುದ್ರೆ ಅಳಿದುಳಿಸು ಲಜ್ಜೆಗೇಡುಗಳ ಪಾಡುಗಳ ಇಂ- ತುಳಿದವಳ ಕಾಯೊ ಸಿರಿಧಾಮ ಗುಣಧಾಮ 2 ಮೂರಾರವಸ್ಥೆಗಳ ನೀರಿಕಡೆಯನವಸ್ಥೆ ಮಾತಿರುವಳೆ ಬಾಲೆ ನಿನಗೆದ್ದ ಮೇಲೆ ನಾರಿಯೆಡೆಗೈದರಲೆಗಲಿಪ್ಪಿ ಬಿಗಿದಪ್ಪಿ ಸೊಗಸೇ ತೋರಿಸಿದನಮರ ಪುರಿಪಾಲ ಸಿರಿಲೋಲ 3
--------------
ಕವಿ ಲಕ್ಷ್ಮೀಶ
ಮೋಸಗೊಳ್ಳದಿರು ಮನವೆ ಹೇಸಿಕೆಯಲಿ ದೋಷವನ್ನು ತಿಳಿಯದೆ ಕೀಳಾಸೆ ಕೆಲಸ ಮಡುವಿನಲ್ಲಿ ಪ. ಫುಲ್ಲ ಪದ್ಮದಂತೆ ಪೊಳೆವ ಚೆಲ್ವ ಮುಖವೆಂಬೀ ಸುರಿವ ಜೊಲ್ವಿ ಶೀಗೆಬೀಜ ಪೋಲ್ವ ಹಲ್ಲ ಸಾಲನೆಲ್ಲಿ ಮರತಿ 1 ಗೆಜ್ಜೆ ಕಾಲುಂಗುರಗಳಿಟ್ಟು ಲಜ್ಜೆ ತೋರಿ ನಗುತ ಬರಲು ಹೆಜ್ಜೆಯನ್ನೆ ನೋಳ್ಪೆ ಹೊಲಸು ಖಜ್ಜಿಯ ಕಲೆಯ ಮರೆತಿ 2 ವಿಟರ ನೋಡುತ ಘಟ ಘಟನೆ ಬರುವಾಕೆಯ ಘಟನೆ ಬಯಸಿ ದುಸ್ಸಂ- ಕಟಗೊಂಬದ್ಯಾಕೆ ಮರೆತಿ 3 ಅಕ್ಷಿಯನ್ನು ತಿರುಹುತ್ತ ಸೂಕ್ಷ್ಮ ವಸ್ತ್ರ ಸುತ್ತಿ ವೇಶ್ಯಾ ಲಕ್ಷಣವ ಕಂಡು ಶುಂಭ ಮಕ್ಷಿಕಾ ವಿಹಾರ ಬಲದಿ 4 ವರನಾರಿಯೆಂಬುದೊಂದೆ ಮರುಳು ಭಾವನೆ ಮೋಹ ಕರವಲ್ಲದೆ ಬೇರೊಂದು ಸರಸತನವಿಲ್ಲಿಂದು 5 ಈಶನಿತ್ತದುಂಡು ನಿತ್ಯ ತೋಷಗೊಳ್ಳದಹೋರಾತ್ರಿ ಘಾಸಿ ಮಾಡದಿರು ಭಾರ- ತೀಶನ ಪದವ ಸೇರು 6 ಬೇಡ ಬೇಡವಿನ್ನು ಭ್ರಾಂತಿ ಮಾಡು ಮೋಹಾಗ್ನಿಗೆ ಶಾಂತಿ ಬೇಡು ಶೇಷಾದ್ರೀಶನಡಿಯ ಕೊಡುವಾಭೀಷ್ಟ ನಮ್ಮೊಡೆಯ7
--------------
ತುಪಾಕಿ ವೆಂಕಟರಮಣಾಚಾರ್ಯ
ಮೋಹನಾರ್ಯನೆ ಯೆನ್ನಾ | ಪೀಡಿಸುವ ಭವಮೋಹಕಳೆವುದು ಮುನ್ನಾ | ಹರಿಯಂಘ್ರಿ ಭಜನೆಯಈಹ ಕೊಡುವುದು ಇನ್ನಾ | ಭೂಸುರವರೇಣ್ಯಾ ಪ ದೇಹ ಮಮತೆಯ ದಾಶೆಯಲಿ ಸುಖ | ವಾಹಿನಿಗಳನುಭವಿಸೆ ಬಲುದುರ್‍ದೇಹ ಪೋಷಣೆಗೈದು ಹರಿಪದ | ಈಹಿಸದೆ ಬಲುನೊಂದೆ ಭವದಲಿ ಅ.ಪ. ಜಯದಲುದಿಸುತಲಂದೂ | ತಾರುಣ್ಯವನುನಿರ್‍ಭಯದಿ ಕಳೆದಿಹೆ ಬಂಧೂ | ವಿದ್ವೇಷದೊಳಗ್ಹರಿಹಯನನುಜ ವರ್ತಿಗಳಂದೂ | ಸಲಹಿದರು ಎನ್ನಯ ಭಯ ನಿವಾರಿಸುತಂದೂ | ಕಾರುಣ್ಯ ಸಿಂಧೂ ||ಹಯಮುಖನ ಪದ ಸತ್ಸರೋಜಗಳ್ | ದ್ವಯಭಜಿಪ ಮನವಿರದೆ ವಿಷಯದಹುಯಿಲಿನಲಿ ಬೆಂಡಾಗಿ ತಾಪದ | ತ್ರಯದಿ ಬಲು ಬಳಲಿರುವೆನಯ್ಯ |ಜಯದ ಸಂವತ್ಸರವು ಮರಳಿ | ಬಯಲು ಆಗದ ಮುನ್ನ ಹರಿಪದದ್ವಯಗಳನು ಕಾಂಬಂಥ ಹದನವ | ದಯದಿ ತೋರುತ ಸಲಹೊ ಬಂಧು 1 ಕಾಮಮದ ಮಾತ್ಸರ್ಯಾ | ಅರಿಗಳನಮನನೇಮನಿಷ್ಟಯ ಚರ್ಯಾ | ಕುಂದಿಸುತ ವಿಷಯಸ್ತೋಮ ಕಳೆಯುವರಯ್ಯ | ಈ ಪರಿಯ ಪರಿಭವಸೀಮೆ ಮೀರುವ ಚರ್ಯಾ | ಪರಿಹರಿಸೊ ಜೀಯ ||ಭ್ರಾಮಕತ್ರಯ ಮಾರಿಗೆನ್ನ ಸು | ಹೋಮಿಸುವ ದುರುಳನನು ಸದೆವತಾಮರಸಭವ ಪದಕೆ ಬರುತಿಹ | ಆ ಮಹಾ ಮಾರುತ ನೊಳಿರುವ |ರಾಮ ಚಂದ್ರ ಪದಾರವಿಂದವ |ಕಾಮಿಸುತ ತನ್ಮಹಿಮೆಗಳ ಸನ್‍ನಾಮ ಕೀರ್ತನೆಗೈದು ಮೋದಿಪ | ಪ್ರೇಮಮನವಿತ್ತೆನ್ನ ಸಲಹೋ 2 ನೀರೊಳಾಡುತ ಬಂದಾ | ಬೆನ್ನಿನಲಿ ಬಹುಭಾರ ಪೊತ್ತುದೆ ಛಂದಾ | ಅವನಿಯನು ತನಕೋರೆದಾಡೆಗಳಿಂದಾ | ತರಳನನು ಬಹುಘೋರರೂಪದಲಿಂದಾ | ಸಲಹಿದುದೆ ಛಂದಾ ||ಮೂರು ಪಾದವ ಬೇಡಿ ಬಲಿಯನು | ಭಾರಿ ಕೊಡಲಿಯ ಪೆತ್ತು ಪೆಗಲೋಳು |ಘೋರ ಅಟವಿಯ ತಿರುಗಿ ತಿರುಗಿ | ನಾರೆರೊಲುಮೆಗೆ ಸಿಲ್ಕಿ ತ್ರಿಪುರದನಾರಿಯರ ವ್ರತಗೆಡಿಸಿ ಹಯವನು | ಏರ್ದ ಗುರುಗೋವಿಂದ ವಿಠ್ಠಲಕಾರಣನು ಜಗಕೆಂಬ ಮತಿಯನು | ಧೀರಗುರು ಮೋಹನ್ನ ಕರುಣಿಸು 3
--------------
ಗುರುಗೋವಿಂದವಿಠಲರು
ಯಾಕೆ ಕಷ್ಟ ಪಡುವೆ ನೀನು ಮಾಯಾ ಸಲಹು ನಮ್ಮಪ ಹಿರಿಯ ಮಗನು ಸರ್ವ ಜನರೊಳಿರುತ ಕಾಮಿಸುವನು ಜಗವ 1 ಮೊಮ್ಮಗನು ನಿನ್ನದಾಸಿಯಾ-ಜಗವ ಮೋಹಿಸುತ್ತಲಿರುವಳು 2 ನೀರೊಳಿರುತ ಮೋರೆ ಮುಚ್ಚಿಕೊರೆ ಮಸೆದು ಕಂಬದಿಂದ ಹಾರಿಯೆಳೆದು ಧಾರಿಣಿಯ ಧೀರ ನೃಪರನೆಲ್ಲಕೊಂದು 3 ಊರುಬಿಟ್ಟು ಸಾರಿ ವನವ ಜಾರನಾಗಿ ಭಂಗಪಡಿಸಿ ನಾರಿಯರನು ದಾರತೇಜಯೇರಿಮೆರೆದು ಬಾರಿ ಬಾರಿ 4 ಪರಮಪದವನಗಲಿ ಚಂಡ ಕಿರಣರಥವ ನುಳಿದು ಕ್ಷೀರ ಶರಧಿಯನ್ನು ಬಿಟ್ಟು ವ್ಯಾಘ್ರಗಿರಿಯೊಳಿರುವ ವರದ ವಿಠಲ 5
--------------
ಸರಗೂರು ವೆಂಕಟವರದಾರ್ಯರು
ಯಾಕೆ ಕಷ್ಟ ಪಡುವೆ ಲೋಕನಾಯಕ ಮಾಯಾ ಜೋಕೆಯಿಂದ ಸಲಹು ನಮ್ಮ ಪ ಸಿರಿಯೆ ಪಟ್ಟದರಸಿ ನಿನಗೆ ಕಿರಿಯ ಮಡದಿ ಧರಣಿಯಾಗೆ ಹಿರಿಯ ಮಗನು ಸರ್ವಜನರೊಳಿರುತ ಕಾಮಿಸುವನು ಜಗವ 1 ಮಗನು ಜಗವ ನಿರ್ಮಿಸುವನು ಮಗುಳೆಲಯವಗೈವ ಮೊ- ಮ್ಮಗನು ನಿನ್ನ ದಾಸಿ ಈ ಜಗವ ಮೋಹಿಸುತ್ತಲಿರವಳು 2 ನೀರೊಳಿರುತ ಮೋರೆ ಮುಚ್ಚಿ ಕೋರೆ ಮಸೆದು ಕಂಬದಿಂದ ಹಾರಿಯೆಳೆದು ಧಾರಿಣಿಯ ಧೀರ ನೃಪರನ್ನೆಲ್ಲ ಕೊಂದು 3 ಊರುಬಿಟ್ಟು ಹಾರಿ ವನವ ಜಾರನಾಗಿ ಭಂಗಪಡಿಸಿ ನಾರಿಯರನು ದಾರ ತೇಜಿಯೇರಿ ಮೆರೆದು ಬಾರಿ ಬಾರಿ4 ಪರಮಪದವನಗಲಿ ಚಂಡ ಕರಣರಥವ ನುಳಿದು ಕ್ಷೀರ ಶರಧಿಯನ್ನು ಬಿಟ್ಟು ವ್ಯಾಘ್ರಗಿರಿಯೊಳಿರುವ ವರದವಿಠಲ5
--------------
ವೆಂಕಟವರದಾರ್ಯರು
ಯಾಕೊ ಪಾರ್ಥನ ಹೆಸರು ಹೋಕೆ ಮಾತಿನ ಕೃಷ್ಣ ಸಾಕು ನೀ ನಮ್ಮ ಸರಿಯೇನೊ ಕೋಲಸಾಕು ನೀನಮ್ಮ ಸರಿಯೇನೊ ಬಲಿಯ ಮನೆಯ ಬಾಗಿಲ ಕಾಯ್ದು ಬದುಕಿದಿ ಕೋಲ ಪ. ಚಿಕ್ಕಂದಿನಾರಭ್ಯ ವತ್ಸಗಳನೆ ಕಾಯ್ದು ತುಚ್ಛನಾಗಿದ್ಯೊ ಜನರೊಳು ತುಚ್ಛನಾಗಿದ್ಯೊ ಜನರೊಳು ರುಕ್ಮಿಣಿಯಕೂಡಿ ಹೆಚ್ಚಿನವನೆಂದು ಹೆಸರಾದ್ಯೊ ಕೋಲ1 ಜನಿಸಿದಾಕ್ಷಣದಲ್ಲಿ ಜನನಿ ಜನಕರನಗಲಿದಿದನಗಳ ಕಾಯ್ದ್ಯೊ ವನವನ ದನಗಳ ಕಾಯ್ದ್ಯೊ ವನವನ ತಿರುಗಿದ್ದುಮನಕೆ ತಾರಯ್ಯ ಮರೆಯದೆ ಕೋಲ 2 ಬಡಿವಾರ ಬಂದ ಬಗಿ ಹೇಳೊ ಕೋಲ3 ಸತ್ಯಭಾಮೆ ನಿನ್ನ ಹೊಸ್ತಿಲ ಹೊಗಲಿಕ್ಕೆಅತ್ಯಂತ ಪದವಿ ಒದಗಿತುಅತ್ಯಂತ ಪದವಿ ಒದಗಿತು ಕೃಷ್ಣ ನಿನ್ನ ಹೆತ್ತವರ ಭಾಗ್ಯ ಅರಿವೆಯೆ ಕೋಲ4 ಹೆಂಡಿರ ಪುಣ್ಯದಿಂದ ಕಂಡೆಯಾ ಈ ಭಾಗ್ಯವ ಪಾಂಡಿತ್ಯವೆಲ್ಲೊ ಬಲವೆಲ್ಲೊಪಾಂಡಿತ್ಯವೆಲ್ಲೊ ಬಲವೆಲ್ಲೊ ಕೃಷ್ಣ ನಿನ್ನ ಪಂಡಿತರು ಕೇಳೋ ಹುಸಿಯಲ್ಲ ಕೋಲ5 ನಾರಿಯರ ಪುಣ್ಯದಿ ಏರಿದ್ಯೋ ರಥವಾಜಿ ಧೀರತನದಿಂದ ಗಳಿಸಿದ್ಯೊಧೀರತನದಿಂದ ಗಳಿಸಿದ ಗಳಿಕೆಯ ತೋರೊ ರಾಮೇಶ ನಮಗಿನ್ನು ಕೋಲ 6
--------------
ಗಲಗಲಿಅವ್ವನವರು
ರಂಗ ಕೊಳಲನೂದುತ ಬಂದಯಶೋದೆಯ ಕಂದ ಪ ಕೊಳಲ ಧ್ವನಿಗೆ ವಿರಹವು ನಾರಿಯರಿಗೆಕಳಕಳÀವಾಗಲು ಕಳಕಳಿಸುತ ಅ.ಪ. ಶೃಂಗಾರ ಕೊಳಲ ಗಾಯನ ಮಾಡೆಸ್ತ್ರೀಯರು ನೋಡೆ ರಂಗನ ಪಾದದಲಿ ಮನ ಹೂಡೆಭೃಂಗಾಮೃತ ತೈಲದಿಅಂಗನೆಯರು ಝಳಕವ ಮಾಡೆದೇವರ್ಕಳು ನೋಡೆತುಂಗವಿಹಂಗ ಭುಜಂಗ ನವಿಲು ಸಾ -ರಂಗ ಗಿಣಿಯು ಮಾತಂಗ ಮರಿಯು ಕು-ರಂಗ ಮಧ್ಯೆ ಚರಣಂಗಳೆಡೆಗೆ ವೇ-ದಂಗಳೆರಗೆ ಕಾಮಂಗಳಲುಗೆ ನೇ-ತ್ರಂಗಳಿಗತಿ ಚಿತ್ರಂಗಳಾಗೆ ಆರಂಗನೂದ್ವ ಸಾರಂಗ ಕೇಳಿ ಋಷಿಪುಂಗಸಹಿತ ತಾವುಗಳು ಬರೆ ನರ-ಸಿಂಗನೂದಿದ ಜಗಂಗಳ ಮೋಹಿಸಿ1 ಬಂಗಾರ ಬಟ್ಟಲೊಳಗೆ ಅಂದುಕ್ಷೀರವ ತಂದು ರಂಗಗರ್ಪಿಸುವೆವು ನಾವೆಂದುಹರುಷದೊಳಂದು ಅಂಗನೆಯರು ಮೈಮರೆತು ನಿಂದುಒಲಿಯಬೇಕೆಂದು ಮಂಗಳ ಮಹಿಮನು ನೀನೆಂದುಅತಿಭಕುತಿಯೊಳಂದುತುಂಗ ವಿಕ್ರಮನ ಪದಂಗಳಿಗೆರಗಲುರಂಗ ನೆಗಹಿ ಕರಂಗಳ್ಹಿಡಿಯ ಮೋ-ಹಂಗಳಿಂದ ವಿರಹಗಳ್ಹೆಚ್ಚಿ ರವಿಕೆಂಗಳುಡೆಯ ಕುಚಂಗಳು ಬಿಟ್ಟಾ-ಲಿಂಗಿಸುತಿರೆ ಶ್ರೀ ಮಂಗಳಾಂಗಗೆ ಪು-ಷ್ಪಂಗಳಿಂದ ವರುಷಂಗಳು ಮೇಲ್ ಸುರ-ರಂಗಳು ಸುರಿಯೆ ಉತ್ತುಂಗ ಮಹಿಮ ಹರುಷಂಗಳ ಬೀರುತ ಅಂಗನೆಯರಿಗೆ 2 ಮಂದಿರ ಮಾನಿನಿಯರು ಬಿಟ್ಟುಮನದಲಿ ಕಂಗೆಟ್ಟುಮಂದರೋದ್ಧರನಲ್ಲೆ ಮನವಿಟ್ಟುಕರೆಕರೆಯ ಬಿಟ್ಟುಚಂದದಿ ಕರ್ಪೂರ ವೀಳ್ಯವನಿಟ್ಟುಸಡಗರವ ತೊಟ್ಟುಒಂದಾಗಿ ಚೆದರುತ ತೋಷವ ತೊಟ್ಟುತ್ವರೆ ಬರುವರು ಅಷ್ಟುಅಂದದಿಂದಲಾನಂದವೇರಿ ಮು -ಕುಂದನಂಘ್ರಿ ಮುದದಿಂದ ಸ್ಮರಿಸಿ ಬರು-ವಂದ ನೋಡಿ ಗೋವಿಂದ ಕೊಳಲ ಬಹುಅಂದದೊಳಿಡೆ ಈ ಇಂದುವದನೆಯರುಚಂದ್ರನುದಯವಾದಂತೆ ಆಯ್ತು ಮನಗಂಧ ಕಸ್ತೂರಿ ತಂದು ಆಗ ಹರಿಕಂದರದೊಳಗಿಡೆ ರಂಗವಿಠಲ ದಯದಿಂದ ನೋಡ್ದ ಪುರಂಧ್ರಿಯರನ್ನು3
--------------
ಶ್ರೀಪಾದರಾಜರು
ರಾಜಕುಲ ವನರಾಶಿ ರಾಜರಾಜೇಶ್ವರಾ | ರಾಜೀವ ನಯನ ಯದುರಾಜ ಎಲೊ ಭಾಪುರೆ ಪ ಗರಳ ಪೇರ್ಮೊಲೆಯಿತ್ತ ಅಸುರಿಯಳ ಸಂಹರಿಸಿ | ಮರಳಿ ಅವಳಿಗೆ ಉತ್ತಮ ಗತಿಯನಿತ್ತೆ | ದುರಳ ಶಕಟಾಸುರನ ಚರಣ ದುಂಗುಟದಲ್ಲಿ | ತರಳಾಟದಿಂದ ಮರ್ದಿಸಿದೆ ಎಲೆ ಭಾಪುರೆ 1 ವ್ರಜ | ಪುರವ ಪಾಲಿಸಿದೆ ಕಾಳಿಂಗನೈದು | ಸಿರದಲ್ಲಿ ತುಳಿದು ರಮಣ ದ್ವೀಪಕೆ ಕಳುಹಿ | ಪರಿಪರಿಯ ಖಳರ ಮರ್ದಿಸಿದೆ ಎಲೊ ಭಾಪುರೆ 2 ಕರೆಯ ಬಂದಾ ಕ್ರೂರ ಭಕ್ತನಿಗೆ ಯಮುನೆಯಲಿ | ಕರುಣದಿಂದಲಿ ನಿಜರೂಪ ತೋರಿ | ಮುರಿದು ಧರಿಗೆ ವರಿಸಿದೆ ಕಂಸನ ಎಲೆ ಭಾಪುರೆ 3 ವನಧಿಯೊಳು ಪುರ ಬಿಗಿದು ಕಾಲಯವನನ ಸದೆದು | ಅನಿಲ ಸುತನಿಂದ ಮಾಗಧನ ಕೊಲ್ಲಿಸಿ | ವನಿತೆಯರ ಸೆರೆ ಬಿಡಿಸಿ ಸೂತತನವನೆ ವೊಹಿಸಿ | ಫಲ್ಗುಣಗೆ ವಿಶ್ವರೂಪವ ತೋರಿದೆ ಎಲೊ ಭಾಪುರೆ 4 ಗುರು ಭೀಷ್ಮ ಶಲ್ಯ ಶಕುನಿ ಸುಬಲ ಭಗದತ್ತ | ತರಣಿಸುತ ದುಶ್ಶಾಸ ಕೌರವೇಶಾ | ಎರಡು ಬಲ ವ್ಯಾಜ್ಯದಲಿ ಭೂಭಾರನಿಳುಹಿ ಸಾ | ವಿರ ತೋಳ ಖಳನ ಭಂಗಿಸಿದೆ ಎಲೊ ಭಾಪುರೆ5 ದ್ವಾರಕಾಪುರದಲ್ಲಿ ನಾರದಗೆ ಸೋಜಿಗವ | ತೋರಿದೆ ಒಬ್ಬೊಬ್ಬ ನಾರಿಯಲಿ | ನಾರಿಯರ ಕೂಡ ಬಲು ಕ್ರೀಡೆಗಳನಾಡಿ ಅ | ವರ ಸಂತಾನವನು ಪಡದೆ ಎಲೊ ಭಾಪುರೆ 6 ವರ ಚಂದ್ರಹಾಸ ಮಿಗಿಲಾದ ಭೂಪಾಲಕರ | ಕರೆಸಿ ಪಾಂಡುವರ ಯಾಗವನೆ ಮುಗಿಸಿ | ಹರುಷದಲಿ ಯದುಕುಲವಾಸ ಮಾಡಿದೆ | ಪರಮ ಪುರುಷ ವಿಜಯವಿಠ್ಠಲನೆ ಎಲೆ ಭಾಪುರೆ 7
--------------
ವಿಜಯದಾಸ