ಒಟ್ಟು 3852 ಕಡೆಗಳಲ್ಲಿ , 124 ದಾಸರು , 2495 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ. ಕಾರ್ತಿಕೇಯ (ಸುಬ್ರಹ್ಮಣ್ಯ) ಸ್ತುತಿ ಏಳಯ್ಯ ಕಾರ್ತಿಕೇಯ | ಬೆಳಗಾಯಿತೇಳಯ್ಯ ಕಾರ್ತಿಕೇಯ ಪ ಗೂಡಬಿಟ್ಟೋಡುವವು 1 ಧುರವನೆಸಗಲಿಕೆ ಬೇಗೇಳಯ್ಯ ಕಾರ್ತಿಕೇಯ 2 ಕರ ಲೇಳಯ್ಯ ಕಾರ್ತಿಕೇಯ 3 ವರ ದೇವಲಾಮುನಿಯ ಶಾಪದಿ ಸುಧರ್ಮನೆಂ ಕೊಡುವುದಕ್ಕೇಳಯ್ಯ ಕಾರ್ತಿಕೇಯ 4 ಪರಮ ಋಷಿಗಳು ಇತ್ತ ಶಾಪದಿಂ ಕುಷ್ಠವಂ - ನೆರೆದು ನಿಂದಿರುತಿಹರು | ಕರುಣದಿಂದವರನೀ- ಕ್ಷಿಸುತಭಯವೀಯಲಿಕ್ಕೇಳಯ್ಯ ಕಾರ್ತಿಕೇಯಾ 5 ಏಳು ಸರ್ವೇಶ್ವರನೆ ಏಳ್ ತಾರಕಾಂತಕನೆ ಏಳಯ್ಯ ಕಾರ್ತಿಕೇಯಾ 6 ಭಾವಶುದ್ಧದಲಿ ನಂಬಿದ ಭಕ್ತಜನರ ಮನೋ ಕಾವೆನೆಂದಭಯ ಹಸ್ತವನೀಯಲ್ದಯದಿಂದ- ಲೇಳಯ್ಯ ಕಾರ್ತಿಕೇಯಾ 7
--------------
ಬೆಳ್ಳೆ ದಾಸಪ್ಪಯ್ಯ
ಆಂಜನೇಯನೆ ಅಮರವಂದಿತ ಕಂಜನಾಭನÀ ದೂತನೆ ಪ. ಮಂಜಿನೋಲಗದಂತೆ ಶರಧಿಯ ದಾಂಟಿದ ಮಹಾಧೀರನೆಅ.ಪ. ಆಂಜನೇಯನೆ ನಿನ್ನಗುಣಪರಾಕ್ರಮ ಪೊಗಳಲಳವೆ ಪ್ರಖ್ಯಾತನೆಸಂಜೀವನವ ತಂದು ಕಪಿಗಳ ನಂಜು ಕಳೆದ ಪ್ರಖ್ಯಾತನೆ 1 ಕಾಮನಿಗ್ರಹನೆನಿಸಿ ಸುರರಭಿಮಾನಿ ದೇವತೆಯೆನಿಸಿದೆರಾಮಪಾದಕ್ಕೆರಗಿ ನಡೆದು ನಿಸ್ಸೀಮ ನೀನೆಂದೆನಿಸಿದೆ 2 ಸಿಂಧು ಹಾರಿದೆ ಶೀಘ್ರದಿಂದಲಿ ಬಂದು ಸೀತೆಗೆ ನಮಿಸಿದೆತಂದು ಮುದ್ರೆಯನಿತ್ತು ಮಾತೆಯ ಮನವ ಸಂತೊಷಪಡಿಸಿದೆ 3 ಜನಕತನುಜೆಯ ಮನವ ಹರುಷಿಸಿ ವನವ ಕಿತ್ತೀಡಾಡಿದೆದನುಜರನ್ನು ಸದೆದು ಲಂಕೆಯ ಅನಲಗಾಹುತಿ ಮಾಡಿದೆ 4 ಶ್ರೀರಾಮಕಾರ್ಯವ ವಹಿಸಿ ಅಕ್ಷಕುಮಾರನನು ಸಂಹರಿಸಿದೆಘೋರ ರಕ್ಕಸರೆಂಬುವರನು ಮಾರಿವಶವನು ಗೈಸಿದೆ 5 ಭರದಿ ಬಂದು ಶ್ರೀರಾಮಪಾದಕ್ಕೆರಗಿ ಬಿನ್ನಹ ಮಾಡಿದೆಉರಗಗಿರಿ ಹಯವದನನ ಪರಮಭಕ್ತನೆಂದೆನಿಸಿದೆ6
--------------
ವಾದಿರಾಜ
ಆಡುವ ಬಾರೋ ಕೃಷ್ಣ ಓಡಿಬಾರೋ ಪ ನಾಡೆ ನಿನ್ನ ನೋಡಬಯಸಿ ಹಾಡುವೆನ್ನ ಕಣ್ಣಮುಂದೆ ಅ.ಪ ಓಡಿಬರುವೆ ನೀನು ಎಂದು ನೋಡಿ ಹಸುಗಳತ್ತ ಇತ್ತ ಬೇಡುತಿಹವು ನಿನ್ನ ಬರವ ಮೋಡಿಯೇಕೆ ಕೊಳಲನೂದಿ 1 ಕರವ ನೀಡಿ ಮಣ್ಣಮೆದ್ದನೆಂದು ತಾಯ ಕಣ್ಗೆ ತೋರ್ದೆ ಜಗವನೆಲ್ಲ 2 ಪೊಂಗಲೀವೆ ಬಾ ಮುಕುಂದ ಹೊಂಗೊಳಲಾನಂದದಿಂದ ತಂಗುವೆ ನಾ ನಿನ್ನ ಪಾದದಿ ಮಾಂಗಿರೀಶ ಮುದ್ದುರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆತನ ಪಾಡುವೆ ಅನವರತಪ್ರೀತಿಯಿಂದ ಭಾಗವತರ ಸಲಹುವ ದೇವನೆಂದು ಪ ಆವಾತನ ಕೀರ್ತಿಯ ಕಳೆ ಪೆರೆಯು..........ಯಿಂದ ಶುಕನಾರ ಪೊಗಳಿದನು ?ಆವಗೆ ಬಲೀಂದ್ರನು ಆರ......................................ವಿದನಯ್ಯಾ ? 1 ಕಲು ತರುಣಿಯ ಮಾಡಿದ ಪಾದವಾರದುಜಲಜ ಸಂಭವನ ಪೆತ್ತವನಾರು ?ಕಲಿಯುಗದ ಜನರಿಗೆ ಆರ ನಾಮವು ಗತಿಇಳೆಯ ಭಾರವನುಳುಹಿದನಾರಯ್ಯ2 ದ್ರುಪದನ ಮಗಳ ಅಭಿಮಾನ ರಕ್ಷಕನಾರುನೃಪ ಧರ್ಮನೆನೆಸಿಕೊಂಡವನಾರು ?ಕೃಪೆಯೊಳು ವಿದುರನ ಮನೆಯಲುಂಡವನಾರುಆಪತ್ಕಾಲದಿ ಗಜೇಂದ್ರನ ಸಲಹಿದರಾರು ? 3 ಅತಿ ಸ್ನೇಹದಿಂದ ಅರ್ಜುನಗೆ ಸಾರಥಿಯಾಗಿರಥವ ನಡೆಸಿದವನಾರು ?ಪೃಥಿವಿಯಲಿ....................................................................................................4
--------------
ಕನಕದಾಸ
ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆತ್ಮನಿವೇದನೆ ಆವಗತಿ ಎನಗೆ ವೈಕುಂಠಪತಿಯೆ | ಕಾವ ಕರುಣಿಯೆ ಸರ್ವದೇವರ ದೇವ ಪ ಉದಯದಲಿ ಎದ್ದು ನಿನ್ನ ನಾಮವೆನ್ನದೆ | ಉದರಕಿನ್ನೇನು ಮಾಡಲಿ ಎನ್ನುತಾ | ಕÀದಗಳಾ ಸರಸುತ್ತ ಕಂಡಲ್ಲಿ ತಿರುಗಿದೆ | ಮದ ಗರ್ವದಲಿ ಬಾಳ್ವ ಮನುಜ ಶಿರೋಮಣಿಗೆ 1 ಧನವ ಘಳಿಸವ ವಾತ್ಸಲ್ಯವಲ್ಲದೆ ಸಾ | ಧನಕೆ ಒಮ್ಮೆ ಮನಸ್ಸು ಎರಗಲಿಲ್ಲಾ | ಮನುಜರೊಳಗೆ ಖ್ಯಾತಿಯಾಗುವೆನೆಂಬೊ | ವೇ | ದನೆ ಮಿಗಿಲಲ್ಲದೆ ಭಕುತಿ ಮತ್ತಿಲ್ಲ 2 ಒಬ್ಬರಕಿಂತಲಧಿಕನಾಗುವೆನೆಂದು | ಉಬ್ಬಿ ಪರರಾ ಸೇವೆಯನು ಮಾಡುವೆ | ಹಬ್ಬಿದ ಪಾಪದ ಸರವಿಗೆ ಉರುಲು ಬಿದ್ದು | ಸುಬ್ಬ್ಬಿದ ಸುಕೃತವ ಕಳಕೊಂಡೆನಯ್ಯಾ 3 ಪೂರ್ವದಲಿ ಉಂಡ ದು:ಖಗಳೆಲ್ಲ ಮರೆದು | ಸರ್ವದಾ ಗರ್ವದಲಿ ಸಜ್ಜನರ ಕೆಡನುಡಿದು | ಉರ್ವಿಯೊಳು ಬಲು ಬಲವಂತನೆನಸೀ | ಸರ್ವದಾ ಸರ್ವ ನರಕಂಗಳಲಿ ಬಿದ್ದು ಹೊರಳಿದೆನು4 ಇನ್ನಾದರೂ ದುರ್ಬುದ್ಧಿಯನ್ನು ಬಿಡಿಸಿ | ಕರವ ಬಿಡದೆ | ಪತಿ ವಿಜಯವಿಠ್ಠಲರೇಯಾ | ಎನ್ನ ಭಾವವು ನಿನ್ನದಲ್ಲವೇನಯ್ಯಾ5
--------------
ವಿಜಯದಾಸ
ಆತ್ಮನಿವೇದನೆ ಏನು ಕಾರಣವೆನಗೆ ತಿಳಿಯಲಿಲ್ಲದೀನ ರಕ್ಷಕನಾದ ಹರಿಯೆ ತಾ ಬಲ್ಲ ಪ ಕಾನನದೊಳಗೆ ಕಡುತಪಿಸಿ ತೃಷಿಯಾದವಂಗೆತಾನಾಗೆ ಮೋಡೊಡ್ಡಿ ಮೇಘ ಕವಿದುನಾನು ಧನ್ಯನೆಂದು ನರ್ತಿಸುವ ಸಮಯದಲಿಕಾಣದೇ ಪೋಯಿತು ಬಿಂದು ಮಾತ್ರ 1 ಪಾದ ಭಜನೆಯನ್ನುಹರುಷದಲಿ ಪಾಡಿ ಹಗಲಿರುಳು ಪ್ರಾರ್ಥಿಸುವಂಗೆಪುರುಷಾರ್ಥ ಪೂರೈಸಿ ಬಾರದಿಪ್ಪ ಬಗಿಯು 2 ಅನ್ನಾದಿಯಿಂದ ಅನ್ನಂತ ಜನ್ಮದಿ ಬಂದುಉನ್ನಂತ ಮಾಡಿದ ಪಾಪರಾಶಿ-ಯನ್ನು ಉಣದನಕ ಭೂವನ್ನದೊಳು ಮತ್ತೆ ಪಾ-ವನ್ನರಾ ಪಾದಗಳು ಪಡೆಯಲರಿಯದೊಯೇನೊ 3 ಅನ್ನಾಥ ಬಂಧು ಹರೆಯೆನ್ನುವಾ ಬಿರುದಿಗೆನಿನ್ನಂಥ ಮಹಿಮನಾ ಕರೆದು ವೊಂದೂಎನ್ನಂಥ ಪರಮ ಪಾತಕಿಯನುದ್ಧರಿಸಿತಾ-ಸನ್ನಗೊಳಿಸಿ ಸತತ ಸಲಹದಿಹುದು ಏನು 4 ಅರಸಿನಾಲೋಚನಿಯು ಸತತ ಸನ್ನಿಧಿಯೊಳನು- ಸರಿಸಿದ ಆಳುಗಳು ಬಲ್ಲ ತೆರದಿಸರಸಿಜ ನಯನ ವೆಂಕಟ ವಿಠಲನ ಪಾದಸರಸಿಜದಿ ಸರಸರೊಳು ನಲಿದು ನೀ ಬಾರದಿಹುದು 5
--------------
ವೆಂಕಟೇಶವಿಟ್ಠಲ
ಆತ್ಮನಿವೇದನೆ ನೆಂತು ಪೂಜಿಸಿದೆನೈ ನೀರಜಾಕ್ಷ ಪ ಕಂತುಪಿತ ಎನ್ನ ನೀ ಕಾಯ್ವೆಯೆಂತೊ ಕಮಲಾಕ್ಷ ಅ.ಪ ಗಂಗೆಯುದಕದಿ ಮಿಂದು ಸಿಂಗರದ ಮಡಿಯುಟ್ಟು ಮಂಗಳದ ನಾಮ ಮುದ್ರೆಗಳ ಧರಿಸೀ ಅಂಗಕರಣಗಳ ಶೋಧಿಸಿ ನ್ಯಾಸ ಮಂತ್ರದಿಂ ದಂತ ರಂಗದಿ ಬಿಂಬಮೂರ್ತಿಯ ಚಿಂತಿಸಿದೆನೇ1 ನಿರ್ಮಲೋದಕದಿಂದ ಅಭಿಷೇಚನವ ಗೈದು ನಿರ್ಮಾಲ್ಯ ತೀರ್ಥವನು ಸೇವಿಸಿದೆನೇ ಮರ್ಮವರಿತಾದಿಮೂರ್ತಿಯೆ ನಿನ್ನ ಬಿಂಬವನು ನಿರ್ಮಲಾಂತಃಕರಣ ಪೀಠದಲಿ ನಿಲಿಸಿದೆನೇ 2 ಶುಭ್ರವಸ್ತ್ರಗಳ ಪರಿಮಳ ಗಂಧ ಪುಷ್ಪಗಳ ನಘ್ರ್ಯ ತುಳಸಿಗಳನರ್ಪಿಸಿ ನಲಿದೆನೇ ಅರ್ಭಕನು ನಾ ಕನಕರತ್ನಾಭರಣಗಳನು ಅಬ್ಧಿ ತನಯಳರಮಣ ನಿನಗೆ ಅರ್ಪಿಸಿದೆನೇ 3 ಧೂಪದೀಪಗಳಿಂದ ವಾದ್ಯ ವೈಭವದಿಂದ ರಾತ್ಮನೆಂದರಿತು ನೈವೇದ್ಯವರ್ಪಿಸಿದೆನೇ 4 ವಿವಿಧ ಖಾದ್ಯಗಳಲ್ಲಿ ವಿವಿಧ ರಸ ರೂಪದಲಿ ವಿವಿಧ ಸಾನ್ನಿಧ್ಯಗಳ ಧ್ಯಾನಿಸಿದೆನೇ ಭವರೋಗಪೀಡಿತನು ನಾ ನಿನ್ನ ಹವಣರಿತು ಸುವಿಹಿತ ವಿಧಿಯಂತೆ ಪೂಜಿಸುವ ಪರಿಯೆಂತೋ5 ಸರ್ವಶಕ್ತನು ನೀನು ಸರ್ವಜ್ಞಪತಿ ನೀನು ಸರ್ವದಾ ತೃಪ್ತನೋ ನಿಗಮವೇದ್ಯಾ ಸರ್ವಭೂತಾಂತರ್ಗತನು ನಿನಗೆ ಉಣಬಡಿಸೆ ಗರ್ವಿಶಠನಜ್ಞತಮನೆನಗೆ ವಶವೇ 6 ವೇದಶಾಸ್ತ್ರಗಳ ಗಂಧವನರಿಯೆ ಹರಿಯೆ ನಿನ ಸಾದರದಿ ನಮಿಪೆ ಪೊರೆ ರಘುರಾಮವಿಠಲ 7
--------------
ರಘುರಾಮವಿಠಲದಾಸರು
ಆತ್ಮನಿವೇದನೆಯ ಹಾಡುಗಳು ಡಂಭಕದ ಭಕುತಿಯನು ಬಿಡು ಕಂಡ್ಯ ಮನವೆ ಪ ಅಂಬುಜಾಕ್ಷನು ಒಲಿಯ ಅನಂತ ಕಾಲಕ್ಕು ಅ.ಪ. ಬಹಿರ ಅಂಗಡಿ ಹೂಡಿ ಜನರ ವಂಚಿಸಿದರೆಅಹಿಕ ಫಲವಲ್ಲದೆ ಮೋಕ್ಷವುಂಟೆ ?ವಿಹಿತಾ ವಿಹಿತವ ತಿಳಿದು ಸತ್ಕರ್ಮ ಕಿಂಚಿತು ಮಾಡೆದಹಿಸುವುದು ಅಘರಾಶಿ ಅಹಿಶಾಯಿ ಒಲಿವ 1 ವರ ವೈಷ್ಣವರು ಬಂದು ನಿಲಲು ವಂದಿಸದಲೆಹರಿ ಪೂಜೆ ಮಾಳ್ಪೆನೆಂದು ಕುಳಿತುಕೊಂಬೆಅರಿಯದ ಊರೊಳಗೆ ಅಗಸರ ಮಾಳಿಯೇಹಿರಿಯ ಮುತ್ತೈದೆಯು ಎಂದು ಕರೆಸುವಂತೆ 2 ಜಪವ ಮಾಡುವೆನೆಂದು ಮುಸುಕನಿಟ್ಟು ಕುಳಿತುತಪಿಸುವೆ ಒಳಗೆ ನೀ ಧನದಾಸೆಯಿಂದೆಕುಪಿತ ಬುದ್ಧಿಯ ಬಿಟ್ಟು ಮೋಹನ್ನ ವಿಠ್ಠಲನಗುಪಿತ ಮಾರ್ಗದಿ ಭಜಿಸಿ ಸುಪಥವನುಸರಿಸೆ 3
--------------
ಮೋಹನದಾಸರು
ಆತ್ಮಲಿಂಗ ಭವನದಿಆತ್ಮಲಿಂಗ ಭವನದಲಿ ವಿಚಿತ್ರವನೆ ಕಂಡುಆತ್ಮನೆಂತಿಹನೆಂದು ಅರಸನಾ ಬಲಗೊಂಡುಆತ್ಮನಾನೆರಡೆಂಬ ಅವಿ ವಾಚ್ಯನಳಿಗೊಂಡುಆತ್ಮನಾಗಿರುತಿಪ್ಪನು ಪ ಪರಿ ಪರಿಯ ಸರಗಳನೆ ಕಂಡೆಮಾತಿಗುತ್ತರಿಸದಿಹ ಮಹಾ ಮಹಿಮೆಯ ಕಂಡೆ 1 ಈಕ್ಷಿಸಿಯೆ ವಸ್ತುವನ ಏಳು ಬಾಗಿಲು ಕಂಡೆದಕ್ಷಿಣೋತ್ತರ ಎಂಬುದರ ಬಾಗಿಲನು ಕಂಡೆಅಕ್ಷಯಾಗಿಹ ಲಕ್ಷವಹ ದಿಡ್ಡಿಯನೆ ಕಂಡೆರಕ್ಷಕನಾಗಿಹನ ರಾಗದಲಿ ಕಂಡೆ 2 ಪಂಚಇಂದ್ರಿಯಗಳೆಂಬ ಪರಿಚಾರಕರನು ಕಂಡೆಕಿಂಚ ಕೆಲಸಕ್ಕಿರುವ ಕರ್ಮೇಂದ್ರಿಯರ ಕಂಡೆಸಂಚರಿಪ ಮೂರೆರಡು ಸತ್ಪ್ರಾಣಿಗಳ ಕಂಡೆವಚನಾಂತಃಕರಣ ವರ್ತಕರ ಕಂಡೆ 3 ಸತ್ಯಗುರು ಪೂರಿತಹ ಸಾರಣೆಯ ಕಂಡೆತಥ್ಯವೆನಿಸುವ ಶಾಂತ ತೋರಣವ ಕಂಡೆಅತ್ಯಧಿಕ ಬುದ್ಧಿಯ ರಂಗವಲ್ಲಿಯ ಕಂಡೆಎತ್ತ ನೋಡಿದಡತ್ತ ಎಸೆದಿಹುದ ಕಂಡೆ 4 ಆರು ಅಂತಸ್ಥನು ಕಂಡೆ ಅಲ್ಲಿರುವವರ ಕಂಡೆಬೇರೆ ಮೂರಿಹ ಮಧ್ಯ ರಂಗಗಳ ಕಂಡೆಘೋರ ಘೋಷಣ ಪ್ರಣವ ಘಂಟನಾದವ ಕಂಡೆಸಾರವಮೃತ ಕಲಶ ಪಾನಕವ ಕಂಡೆ 5 ಜ್ಯೋತಿ ಎಂದೆನ್ನುತಿಹ ಜ್ಯೋತಿರ್ಮಯನ ಕಂಡೆಸಾತಿಶಯ ಗರ್ಭಗುಡಿ ಶೀಘ್ರದಲಿ ಕಂಡೆಆತುರದಲೊಳ ಪೊಕ್ಕು ಆತ್ಮಲಿಂಗವ ಕಂಡೆಪೂತು ರಕ್ಷಿಸು ಎಂದು ಪೂಜೆ ಕೈಗೊಂಡೆ 6 ನಿತ್ಯ ನಿಶ್ಚಲ ನಿಷ್ಕಲಂಕ ನಿಜನೆ ಎಂದುಪ್ರತ್ಯಗಾತ್ಮ ಪರಬ್ರಹ್ಮನೆ ಸ್ಥಿರವೆಂದುಸತ್ಯ ಸಂವಿದ್ರೂಪ ಸಕಲಕಧಿಪತಿ ಎಂದುಅತ್ಯಧಿಕ ಚಿದಾನಂದ ಆತ್ಮ ತಾನೆಂದು7
--------------
ಚಿದಾನಂದ ಅವಧೂತರು
ಆತ್ಮಶೋಧನೆ ಅನಂತಾನಂತ ಪಾಪ ಮಾಡುವೆ ನಾನು ಪ ಅನಂತದಯಾನಿಧೆ ನೀನೊ ಹಯವದನ ಅ.ಪ ದಾರು ಎನ್ನ ಪಾತಕಕ್ಕೆ ಸರಿಗಾಣಿಸೆನೆಂದರೆ ಪಾಪ ಕ್ಷೋಣಿ ಪರಿಮಾಣುಗಳಿಗೆ 1 ಪೇಳು ಪಾಪವೆಂದಲೆನಲು ಪೇಳಲಿಕ್ಕೆ ಬಲುಲಜ್ಜೆ ಗಳು ಅಂಡಲಿವುತಿದೆ ತಿಳಿದಾತ ನೀನಲ್ಲವೆ 2 ಎನಗೊಂದು ಉಪಾಯವ ಅನಾಯಾಸ ಮಾಡುವಂಥ ನಿನ್ನ ನಾಮಸುಧೆಯನ್ನು ಎನಗೀಯೊ ಮುದದಿಂದ3 ಕಾಲ ಸ್ವಾಮಿ ನೀನು ದಾಸನು ಆಸು ಕಾಲದವನು ವಾಸುದೇವವಿಠಲನೆ ನೀ ಸಡಲ ಬಿಡುವರೇನೊ4
--------------
ವ್ಯಾಸತತ್ವಜ್ಞದಾಸರು
ಆತ್ಮಶೋಧನೆ ಆದ ವಿಷಯಗಳು ಬಾಧಿಸದಂತೆನ್ನ ಮಾಧವ ನೀ ಪೊರೆಯೋ ದಯಾನಿಧೇ ಪ ಕ್ರೋಧವ ಬಹುತರ ಸಾಧಿಸಿ ಮನದಲಿ ಖೇದವ ಪೊಂದಿದೆನೊ ರಮಾಧವ ಅ.ಪ ಹೆಜ್ಜೆಯನರಿಯದೆ ಗೆಜ್ಜೆಕಟ್ಟಿಹೆನೆಂದು ಗರ್ಜಿಸುತಿರುವರು ದುರ್ಜನರೆಲ್ಲರು ಮರ್ಜಿಯನರಿಯುವ ಸಜ್ಜನರೆನ್ನನು ವರ್ಜಿಸ ಬಿಡದಿರೊ ಮೂರ್ಜಗದೊಡೆಯನೆ 1 ರೀತಿಯನರಿಯದೆ ಆತುರದಲಿ ಮನ ಸೋತೆನೆನ್ನುತಿಹರೋ ದುರಾತ್ಮರು ಖ್ಯಾತಿಗಾಗಿ ಧನ ಪ್ರೀತಿಗಾಗಿ ಸಭ್ಯ ನೀತಿಯ ಮಾರ್ಗದಿಂದ ಚಲಿಸದೆ ಪೊರೆಯೊ 2 ನಿನ್ನ ನಾನರಿತೆನೊ ಎನ್ನನರಿತು ನೀ ಪ್ರ ಸನ್ನನಾಗಿ ನಿನ್ನ ಸೇವೆಯ ನೀಡಲು ಅನ್ಯರಂತಿರಲಿ ನಿನ್ನ ಮನಕೆ ನಾ ಅನ್ಯನಾಗದಂತೆ ಸತತವು ಕರುಣಿಸೊ 3
--------------
ವಿದ್ಯಾಪ್ರಸನ್ನತೀರ್ಥರು
ಆದರೇನಾಯಿತು ಹರಿ ಎನ್ನ ಪೊರೆಯಾ ಈ ಧರೆಯೊಳಾರು ಮಾಡದ ದೋಷ ನಾ ಮಾಡಲಿಲ್ಲಾ ಪ ತಾರಾಪತಿಯಂತೆ ಗುರುದ್ರೋಹ ಮಾಡಿದವನಲ್ಲ ವಾರಿಜೋದ್ಬವನಂತೆ ತಪ್ಪಲಿಲ್ಲಾ ಮಾರ ಮಹಿಮನಂತೆ ನಾ ಮಹಿಮನೆಂದು ಹೇಳಲಿಲ್ಲ ಬಾರಿಬಾರಿಗು ನಿನ್ನ ಭಜಿಸುವದೊಂದೆ 1 ತಂದೆ ಮಾತನು ಕೇಳಿ ತಾಯಿ ದ್ರೋಹ ಮಾಡಲಿಲ್ಲ ಬಂಧು ಬಳಗ ದ್ವೇಷ ಮಾಡಿ ಬಾಧಿಸಲಿಲ್ಲ ಅಂಡಜಾಮಿಳನಂತೆ ಅತಿದ್ರೋಹ ಮಾಡಲಿಲ್ಲ ಚಂದದಿಂದಲಿ ನಿಮ್ಮ ಸ್ಮರಿಸುವದೊಂದೆ 2 ಅತಿ ಘಂಟಾಕರ್ಣನಂತೆ ಕರ್ಣಘಂಟೆ ಶಬ್ಧವಿಲ್ಲ ಹಿತದಿ --------ಬ್ರಹ್ಮತ್ಯನಿಲ್ಲ ಸತತ ನೀನೆ ಎನಗೆ ಗತಿಯೆಂದು ಇರುವುದೊಂದೆವಿತರಣಾ ಕೊಂಡರಿಯೆ ವೀರ 'ಹೊನ್ನವಿಠಲಾ’ 3
--------------
ಹೆನ್ನೆರಂಗದಾಸರು
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆಧ್ಯಾತ್ಮ ಹೆಚ್ಚೇನು ಅವಿದ್ಯೆ ಕಡಿಮೆಯೇನುಆಧ್ಯಾತ್ಮ ವಿದ್ಯೆಯದು ಅನುಭವಿಸಲರಿಯದವಗೆ ಪ ಪುಸ್ತಕಂಗಳ ಪಿಡಿದು ಪುಸ್ತಕದೊಳಿದ್ದುದನುವಿಸ್ತಿರಿಸಿ ಎಲ್ಲರಿಗೆ ಹೇಳುತಿಹನುಪುಸ್ತಕದ ಅರ್ಥವನು ಮನಕೆ ತಾರದಲೆಪುಸ್ತಕದ ಅಕ್ಷರವ ಪೇಳುವವಗೆ1 ಜ್ಞಾನವನು ಹೇಳುತಿಹ ಜ್ಞಾನವನು ತಾನರಿಯಜ್ಞಾನಿಗಳ ನಡೆಯನು ಮೊದಲೆ ತಿಳಿಯಜ್ಞಾನಿಗಳನೇ ಕಂಡು ಜ್ಞಾನವಿಲ್ಲೆಂದೆಂಬಜ್ಞಾನಿ ತಾನೆಂತೆಂದು ಬರಿ ಬಣ್ಣಿಸುವಗೆ 2 ಸುಳಿ ಸುಳಿದಾಡುತಸಾಧಿಸದೆ ಪುಣ್ಯ ಪುರುಷರ ನೆಲೆಯ ತಿಳಿಯದಲೆದೇವ ತಾನೆಂದು ಬರಿ ಬೋಧಿಸುವವಗೆ 3 ಯೋಗೀಶ್ವರರ ಕಂಡು ಯೋಗದಿಂದೇನೆಂಬಯೋಗವಳವಟ್ಟ ತೆರನಂತೆ ನುಡಿದಯೋಗಾಮೃತದ ಪೂರ್ಣರಸವ ಸವಿದುಣ್ಣದೆಲೆಯೋಗಿ ತಾನೆಂದು ಬರಿ ತೋರುತಿರುವವಗೆ 4 ಮಾಡಿದಡೆ ಬಹದಲ್ಲ ಕೇಳಿದಡೆ ಬಹದಲ್ಲಆದರಿಸಿ ಒಬ್ಬರಿಗೆ ಹೇಳಿದಡೆ ತಾ ಬರದುಸಾಧಿಸಿಯೆ ಮನನದಭ್ಯಾಸದಿಂ ದೃಢವಾಗಿವಾದಹರ ಚಿದಾನಂದ ತಾನಾದರಲ್ಲದೆ5
--------------
ಚಿದಾನಂದ ಅವಧೂತರು