ಒಟ್ಟು 368 ಕಡೆಗಳಲ್ಲಿ , 71 ದಾಸರು , 340 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾಗೀರಥಿ ಭಾಗೀರಥೀ ದೇವಿ ಭಯ ನಿವಾರಣ ಗಂಗೆ ಸಾಗರ ನಿಜರಾಣಿ ಸಕಲ ಕಲ್ಯಾಣಿ ಪ ಒಮ್ಮೆ ಶ್ರೀವಿಷ್ಣು ಪಾದದಲಿ ಉದ್ಭವಿಸಿದೇ ಕರ ಪಾತ್ರೆಯಲ್ಲಿ ಬಂದೆ ಪಾದ ತೀರ್ಥವಾದಿ ಬ್ರಹ್ಮಾಂಡವೆಲ್ಲ ಪಾದನ್ನವೆಂದಿನಿಸಿದೆ 1 ದೇವಿ ನೀ ವಿಷ್ಣು ಪಾದದಲಿ ಉದ್ಭವಿಸಿದೆ ದೇವತೆಗಳೆಲ್ಲ ನಿಮ್ಮಾಧೀನವೊ ಆವ ಮಹಾದೇವನು ತಲೆಬಾಗಿರಲಾಗಿ ಮಹ ದೇವ ಶಿರಸಿನಲಿ ಉದ್ಭವಿಸಿದೆ ಜಗವರಿಯೆ 2 ದೃಷ್ಟಿಸಿ ನೋಡಲು ನೂರು ಜನ್ಮದ ಕೃತ್ಪಾಪ ಮುಟ್ಟಿದರೆ ಮುನ್ನೂರು ಜನ್ಮದ ಪಾಪವು ಮುಟ್ಟಿಮಾಡಲಿ ಬಂದು ಸ್ನಾನ ಮಾತ್ರದಿಂದ ಸುಟ್ಟುಹೋಗುವುದು ಸಹಸ್ರ ಜನ್ಮದ ಪಾಪ 3 ಜಹ್ನು ಋಷಿಯಿಂದಲಿ ಬಿದ್ದ ಕಾರಣದಿಂದ ಜಾಹ್ನವಿಯಂತೆಂದು ನೀ ಕರೆಸಿಕೊಂಡೇ ವನ್ನು ನೀ ಪಿಂತೆ ಪಾವನ ಮಾಡಬಂದೆ 4 ವಿಸ್ತಾರದಲಿ ಪೊಳಿವ ಮುತ್ತಿನಾ ಸರಗಳು ಮತ್ತೆ ರಂಗಮ್ಮ ಪವಡಿಸಿದ ನೋಡೀ ಮತ್ತೆ ಮಹಾಲಕ್ಷ್ಮಿಯೆ ಉರಸ್ಥಳದಲಿರಲಾಗಿ ಇತ್ತ ಶ್ರೀದವಿಠಲ ನನರಸಿ ಬಂದೆ 5
--------------
ಶ್ರೀದವಿಠಲರು
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭೂತರಾಜರ ಸ್ತೋತ್ರ ಭೂತರಾಜರ ಸ್ತುತಿಸಿ ಖ್ಯಾತಿಗೊಳ್ಳೊ ಪ ಪ್ರೀತಿ ಇವರಲಿ ಅಧಿಕ ವಾದಿರಾಜರಿಗೆ ಅ.ಪ. ಆತನಾಜ್ಞೆಯಿಂದ ಧರಿಸಲುಕೋತಿಯಂತೆ ಹುಬ್ಬು ಏಕೆ ಹಾರಿಸುವೆಜ್ಯೋತಿ ಸ್ವರೂಪಕ್ಕೆ ಬೂದಿಯು ಮುಸುಕಲುಪಾತಕಿಯು ತಾ ಮುಟ್ಟಿ ಬೊಚ್ಬಿ ಬಾರಿಸನೆ 1 ಗುರುಸೇವೆ ಇವರಂತೆ ಮಾಡ್ದವರು ಯಾರುಂಟುಗುರುಕೃಪಾ ಇವರಂತೆ ಪಡೆದವರು ಯಾರೊಅರಿತು ನೋಡಲು ನಿರುತ ರತಿಗೆ ಕಾರಣವುಂಟುನರಕುರಿ ಇದರ ಮರ್ಮವ ತಿಳಿವದುಂಟೆ 2 ಇಂದಿಗೂ ಸೋದೇಲಿ ಇವರದೇ ಗುರುಪೂಜೆಸುದ್ದಿ ಸುಳ್ಳೆಂದವಗೆ ದೆಬ್ಬೆ ಪೂಜಾಸದ್ದಿಲ್ಲದಿವರಡಿ ಸ್ಮರಿಸುವುದೇ ಗುರುಪೂಜಾತಂದೆ ಶ್ರೀ ನರಹರಿ ಒಪ್ಪುವಾ ಪೂಜಾ 3
--------------
ತಂದೆ ಶ್ರೀನರಹರಿ
ಮಂಗಳಾರತಿ ಎತ್ತಿರೆಲ್ಲ ಮಹಾತ್ಮರೆಲ್ಲ ಮಂಗಳಾರತಿ ಎತ್ತಿರೆಲ್ಲಮಂಗಳರೂಪಗೆ ಮಂಗಳ ಮಹಿಮಗೆ ಮಂಗಳಕರಗೆ ಮಂಗಳಪ್ರದಗೆ ಪ ಘೃತ ನೀಡಿಮುದದಿಂ ಚಿಜ್ಯೋತಿಯನೆ ಮುಟ್ಟಿಸಿಸದಮಲ ಸರ್ವ ಬ್ರಹ್ಮವೆ ಎಂದು 1 ತುಂಬಿ ಉಳಿವು ಇನ್ನು ಎಂಬೆಬಲುಪ್ರಭೆ ತಿಳಿಯೆ ಥಳಥಳ ಹೊಳೆಯೆ ತೊಳಗಿ ತೊಳಗಿ ಬೆಳಗಿ ಬೆಳಗಿ 2 ನಾನಾ ವರ್ಣವೆ ಪೊಳೆಯಲು ಅತ್ತಲಿತ್ತಲುನಾನಾ ವರ್ಣವ ತಾಳುತ್ತ ಎತ್ತಾಲೆತ್ತಲುತಾನು ಚಿದಾನಂದ ಗುರು ಬೇರಾಗದೆತಾನೆ ತಾನೆಯಾಗಿ3
--------------
ಚಿದಾನಂದ ಅವಧೂತರು
ಮಡಿಮಡಿಯೆಂದು ಹಾರ್ಯಾಡಿ ಸುಳ್ಳೆ ಮಡಿಯಬೇಡಿರೋ ಭವದುರಳ್ಯಾಡಿ ಪ ಜಡಮತಿ ಕಡಿದು ಬಿಡಲಾಸೆ ತೊಡೆದು ನಡಿರೋ ಸನ್ಮಾರ್ಗದದು ನಿಜಮಡಿ ಅ.ಪ ಬದ್ಧಗುಣದೊಳಿರೆ ಅದು ಶುದ್ಧಮಡಿ ಕದ್ದು ತಿನ್ನುವ ಕ್ಷುದ್ರಬುದ್ಧಿ ನೀಗಿ ಪರಿ ಶುದ್ಧರಾಗಲದು ನಿರ್ಧಾರ ಮಾಡಿ1 ಕ್ಲೇಶಕಳೆವುದದು ಲೇಸುಮಾಡಿ ದು ರ್ವಾಸನಳಿಯೆ ಅದು ಮೀಸಲು ಮಡಿ ಮೋಸಮರವೆ ನೀಗಿ ಈಶನ ನಾಮವ ಧ್ಯಾಸದಿರಲು ಅನುಮೇಷ ಮಡಿ 2 ಬಿಟ್ಟದ್ದು ಉಟ್ಟರದು ಯಾವ ಮಡಿ ಉಟ್ಟು ಮುಟ್ಟೆಂಬುದಿದಾವಮಡಿ ಕೆಟ್ಟ ಪದ್ಧತಿಗಳ ಬಿಟ್ಟು ಸದಾಚಾರ ನಿಷ್ಠಪರರಾಗಲದು ಶಿಷ್ಟಮಡಿ 3 ಅರಿವುಗೂಡುವುದೆ ಸ್ಥಿರಮಡಿ ಬಹ ಜರ ಮರಣಳಿವುದೆ ಪರಮಮಡಿ ದುರಿತ ಗೆಲಿದು ಹರಿಶರಣರೊಳಾಡ್ವುದು ತಿರುಗಿ ಮುಟ್ಟಿಲ್ಲದ ಪರಮಮಡಿ 4 ಮಡಿಯಾದಮೇಲೆ ಮೈಲಿಗೆಲ್ಲಿ ಖೋಡಿ ಜ್ಞಾನ ವಿಡಿದುನೋಡು ನಿಜ ಹುಡುಕ್ಯಾಡಿ ಮಡಿಮುಟ್ಟಿಲ್ಲದ ನಮ್ಮೊಡೆಯ ಶ್ರೀರಾಮ ನಡಿ ದೃಢದಿ ನಂಬಲಿದೇ ಮೂಲಮಡಿ 5
--------------
ರಾಮದಾಸರು
ಮನಮುಟ್ಟಿ ಮಾಡುವದೆ ಭಕ್ತಿಗಳು ಶ್ರುತದೃಷ್ಟನು ಮನದಿಂದ ಮಾಡುವ ನೇಮನಿತ್ಯಗಳು ಮಹಾ ಧರ್ಮಶಾಸ್ತ್ರಗಳು ಯತಿ ಕುಲದೀಪಗಳು 1 ತ್ರಿವೇಣಿ ಸಂಗಮ ಸ್ನಾನಗಳು ಮಹಾದಿವ್ಯ ಮಡಿಯಗಳು ಇಟ್ಟಿಹ ದ್ವಾದಶ ನಾಮಗಳು ಮನಗಂಡಿಹದೇ ಶ್ರೀಮುದ್ರೆಗಳು 2 ಸ್ಮರಣೆಯೊಳಿಹುದೆ ಸಂಧ್ಯಾನಗಳು ಜಪಸರ ಮಾಲೆಗಳು ಜಪತಪ ಧ್ಯಾನವೆ ಮೌನಗಳು ನಿರ್ಧಾರದಿ ಗುರುಪಾದ ನಿಶ್ಚೈಸಿಹ ವ್ರತ ಆಚಾರವೇ ನಿಷ್ಠೆಗಳು 3 ಮಾಡುವುದೇ ದೇವಪೂಜೆಗಳು ಅಂತ:ಕರಣದಿ ಗುರುಚರಣದ ಅಭಿಷೇಕಜ್ಞಾನ ಭಾಗೀರಥಿ ತೀರ್ಥಗಳು ಚಿತ್ತಚಿಂತನದಿ ದಿವ್ಯ ವಸ್ತ್ರಗಳು ಪರಿಮಳಪುಷ್ಪಗಳು 4 ಅನಿಮಿಷ ನೇತ್ರದಿ ನೋಡುವ ಘನ ಚಿತ್ಪ್ರಕಾಶವೆ ಸದಾನಂದದ ಮೊದಲಾದ ಸತ್ವರಜತಮ ಏಕಾರ್ತಿಗಳು ಸದ್ಭಾವನಿ ತಾಂಬೂಲಗಳಿಂದಲಿ ರತಿಮನ ಘನ ಮಂಗಳಾರ್ಚನಿ ಪಂಚ ಪ್ರಕಾಶಗಳು 5 ಶ್ರೀಗುರು ಸೇವೆ ಸತ್ಕಾರಗಳು ಜಯ ಲಕ್ಷ್ಮಿಯ ಷೋಡಶ ಉಪಚಾರಗಳಿಂದಲಿ ಮಹಾದಿವ್ಯ ಪೂಜೆಗಳು ತಲ್ಲೀನವು ಅಗಿಹ ಗುರುಪಾದದಿ ಪ್ರದಕ್ಷಿಣೆವೆ ಗುರುನಾಮವೇ ಸದ್ಗತಿ ಮುಕ್ತಿಗಳು 6 ಆತ್ಮಾನುಭವ ಗುರುದಾಸರಿಗಲ್ಲದೆ ಬಲ್ಲವೇನು ಪಶುಪ್ರಾಣಿಗಳು ಸಾಕ್ಷಾತ್ಕಾರಗಳು ಭಾಸ್ಕರ ಸ್ವಾಮಿಗಳು ತ್ರಾಹಿ ಜೀವನಮುಕ್ತಿಗಳು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ಶ್ರೀಗುರು ಪಾದವ ನಂಬು ನಿನಗಲ್ಯಾಹುದು ಘನ ಸುಖದಿಂಬು 1 ಅನುದಿನ ನೋಡಾ ನಂಬದೆ ನಿಜವನು ನೀ ಕೆಡಬ್ಯಾಡ 2 ಬ್ಯಾಡೆಂಬುದು ಈ ಮಾತನೆ ಕೇಳು ಬೇಡದೆ ಬಯಸದೆ ನಿಜದಲಿ ಬಾಳು 3 ಬಾಳುವದೀಪರಿ ಜನದಲಿ ಲೇಸು ತಿಳಿಯದೆ ಬಯಸುವದ್ಯಾತಕೆ ಸೋಸು 4 ಸೋಸ್ಹಿಡಿದರ ಬೇಕಾಹುದು ಜನ್ಮ ಕರ್ಮ 5 ಭವ ಬಂಧ ಮರ್ಮವ ತಿಳಿಯದವನೆ ತಾ ಅಂಧ 6 ಅಂಧಗ ತಿಳಿಯದು ಆತ್ಮದ ಗೂಢ ಸಂಧಿಸಿ ಬೀಳಲು ವಿಷದಲಿ ಮೂಢ 7 ಮೂಢಗೆಲ್ಲಿಹ್ಯ ಆತ್ಮದ ವಿಚಾರ ನೋಡುವ ನೋಟವು ಇದು ಬಲುದೂರ 8 ದೂರಕೇ ನೀ ದೂರಾಗಿಬ್ಯಾಡ ಅರಿಯಲು ತನ್ನೊಳು ಸಾರವೆ ನೋಡಾ 9 ನೋಡುವುದಿದು ಗುರುಙÁ್ಞನದ ಗುಟ್ಟು ಆಡಿದ ಅನುಭವ ಮಾತಿಗೆ ಮುಟ್ಟು 10 ಮುಟ್ಟಿದ ಖೂನವು ಮಿಸುಕಲಿ ಬ್ಯಾಡ ಘಟ್ಯಾಗಿ ನಿಜಘನ ಬೆರೆ ಗಾಢಾ 11 ಗಾಢಾಗಿಹುದು ನಿಜಗುರು ಙÁ್ಞನ ಮಾಡುವ ಧ್ಯಾನಕೆ ಅನುಸಂಧಾನ 12 ಉನ್ಮನದಲಿ ತಿಳಿವುದು ಗುರುಮುಖ 13 ಗುರು ಮುಖದಲಿ ಬೆಳಗಾಹುದು ಪೂರ್ಣ ಬೀರುವ ಪ್ರಭೆ ಸದ್ಗುರು ಕರುಣ 14 ಕರುಣದ ಸಾಗರ ಗುರುವರ ಮೂರ್ತಿ ಇರುಳ್ಹಗಲೆ ಕೊಂಡಾಡುವೆ ಕೀರ್ತಿ 15 ಕೀರ್ತಿಯ ಕೊಂಡಾಡುವನೀ ಮಹಿಪತಿ ಸಾರ್ಥಕವಿದು ಅನುಭವ ಮನೆಮೂರ್ತಿ 16
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ಶ್ರೀನಾರಾಯಣನನು ಸ್ಮರಿಸದೆ ಮಾಯಾಪಾಶಕೆ ಸಿಲುಕುವರೇ ಪ. ವನಜನಾಭನ ಪದ ವನರುಹಯುಗ್ಮವ ಅನುದಿನ ನೆನೆಯದೆ ಒಣಗುವರೇ ವನಿತಾಲಂಪಟನಾಗುತ ಸಂತತ ಮನಸಿಜಯಂತ್ರಕೆ ಮನಮರಗುವರೇ ಅ.ಪ. ತುಂಡು ಸೂಳೆಯರ ದುಂಡುಕುಚವ ಪಿಡಿದು ಗಂಡಸುತನವನು ಕೆಡಿಸುವರೆ ದಂಡಧರನ ಬಾಧೆ ಹೆಂಡತಿಯನು ಪಡ ಕೊಂಡು ವೇದನೆಯನು ತಾಳುವರೆ ಕಂಡು ಕಂಡು ನೀ ಗುಂಡಿಗೆ ಬಾಳ್ವರೆ ಹೆಂಡಿರ ಸುಖರಸ ಉಂಡರು ಸಾಲದೆ 1 ಬಂದ ಸುಖಕೆ ನೀ ಮುಂದುವರೆಯುತಲಿ ಮಂದ ಅಸಮ ದುಃಖ ತಾಳುವರೇ ಬಂದುದೆನ್ನ ಕಣ್ಣ ಮುಂದೆಯನುಭವಿಪೆ ಎಂದಿಗೆನ್ನಾಜ್ಞೆಯು ಬಂದಪುದೋ ನಿಜ 2 ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹ ಪಟ್ಟ ಭಾಗ್ಯವನೆಲ್ಲ ತೋರೊ ನೀನು ಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ- ನಷ್ಟು ಸುಖವನ್ನು ಕಾಣೆನಿನ್ನು ಇಷ್ಟಾರ್ಥಗಳೆಲ್ಲ ದೊರೆಕುವುದೈ ಪರ ಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3 ವಿಷಯ ಪಳಂಚಿತನಾಗುವ ಸಂತತ ಪಂಚಡಕೀರನು ಆಗುವರೇ ಕರ್ಮ ಸಾಲದೆಂದೆನುತಲಿ ಸಂಚಿತ ಪಾಪವ ಸಂಗ್ರಹಿಸುವರೇ ಚಂಚಲಾಕ್ಷಿಯರ ಚಪಲದ ಮಾತನು ವಂಚನೆ ಎಂಬುದು ತಿಳಿಯದೆ ಇರುವರೆ 4 ಸಾರಿಸಾರಿ ಕೈ ಮುಗಿದು ಬೇಡುವೆನು ವಿ- ಕಾರ ದುರ್ಬುದ್ಧಿಯ ಬಿಡು ಎಂದು ಭಾರಿ ತಪ್ಪುಗಳ ಕ್ಷಮಿಸಿ ಕಾವ ಲಕ್ಷ್ಮೀ ನಾರಾಯಣ ನೀನೇ ಗತಿಯೆಂದು ಪಾರಮಾರ್ಥಿಕ ವಿಚಾರವ ಮಾಡುತ ಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆಯುವರೆ ಮರೆಯುವರೆ ರಾಮರಾಯಾ | ಗುರುಗಳಾರಾಧನೆಗೆ | ಶಿರಿವಾರದೊಡೆಯಾ || ಪರಿವಾರ ಸಹಿತಾಗಿ ತೆರಳುವದು ನಿಶ್ಚಯಿಸಿ ಬರೆವದಕೆ ಕಾಗದವು ಸಿಗದ್ಹೋಯಿತೆ | ಭರದಿ ಬರಬೇಕೆಂದು | ಕರೆಕಳುಹದಕೆನ್ನ | ಚರನೋರ್ವ ನಾದರು ದೊರೆಯದಾದನೆ ಅಕಟ 1 ಕ್ರೋಧ ವಿರಹಿತರಾದ ಸಾಧುವರ್ಯರ ಸಮಾರಾಧ | ನೆಗೆ ನಾ ಭಾರವಾದೆನೇನೈ | ಆದರವು ತಗ್ಗಿತೇ | ಯುಗ್ಮಪಾದಪಶುವಾದಿನೇ 2 ಗುರುಕರುಣವೆಗ್ಗಳದ ಗರುವಿಕೆಯೋ ಕಾರ್ಪರ ನರಸಿಂಹರರ್ಚಕರಮೋಕ್ಷ ಬಲವೋ ಪರಮ ಸತ್ಪುರುಷರುಪದೇಶ ಶ್ರವಣದ ಮದವೋ | ಹರಿಕಥಾ ಪಾನದ ಹಂಕಾರವೋ 3 ಇರಬೇಕು ಸರ್ವದಾ ಸಕಲರಲಿ ಸಮದೃಷ್ಟಿ ಹಿರಿಯರಾದವರಲ್ಲಿ ಏಕನಿಷ್ಟಿ | ನಿರುತದಲ್ಲಿ ಸದ್ಗೋಷ್ಟಿ ಪರನಾಗಿ ಮನಮುಟ್ಟಿ ಹರಿಪಾದಸ್ಮರಿಪರಿಗೆ ಕೈವಲ್ಯಷಟ್ಟಿ 4 ಶ್ರೀ ಶಾಮಸುಂದರನ ದಾಸಕೂಟಸ್ಥರೊಳು ನಾ ಸಲ್ಲದವನೆಂದು ಧೃಡವಾಯಿತೇ | ಭೂಸುರವೇಷದಲಿ ಎಂದು ಉದಾಸೀನ ಮಾಡಿನ್ನು 5
--------------
ಶಾಮಸುಂದರ ವಿಠಲ
ಮಾಡಿ ನೀವು ಸತ್ಸಂಗ ನೋಡಿ ಘನ ಅಂತರಂಗ ಧ್ರುವ ಸಾರಿದೂರಲಿಕ್ಕೆ ವೇದ ಅರರಿವದೆನಗಗಾಧ ದಾರಿದೋರಿಕುಡು ಬೋಧ ಗುರುಪ್ರಸಾದ 1 ಬದಿಲಿರಲಿಕ್ಕೆ ಖೂನ ಇದಕ್ಯಾಕುದ್ದರಿ ಜ್ಞಾನ ಛೇದಿಸಿ ಅನುಮಾನ ಭೇದಿಸಿರೊ ಪೂರ್ಣ 2 ಹಿಡಿಯಲಿಕ್ಕೆ ಸತ್ಸಂಗ ಓಡಿಬಾವ್ಹಾ ಶ್ರೀರಂಗ ಮಾಡಿ ಭವಭಯಭಂಗ ನೋಡುವ ಕೃಪಾಂಗ3 ಎಲ್ಲಕ್ಕೆ ಶಿಖಾಮಣಿ ಸುಲಭ ಈ ಸಾಧನಿ ಸೊಲ್ಲಿಗೆ ಮುಟ್ಟಿದ ಪ್ರಾಣಿ ಬಲ್ಲವ ಸುಜ್ಞಾನಿ 4 ಪಿಡಿದು ಸತ್ಸಂಗತಿ ಕಡಿದು ಹೋಯಿತು ಭ್ರಾಂತಿ ಪಡೆದ ಸುಖ ವಿಶ್ರಾಂತಿ ಮೂಢ ಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾತಿನೋಳ್ಮಾತಿಲ್ಲದ ಪಾತಕಜನಜತೆ ಜನ್ಮಕೆ ಮಾಡಬೇಡಿರಪ್ಪ ಪ ನೀತಿಗಡಕ ಮಹಕೋಟಿ ಕುಹಕರ ಸಂಗ ಕೊಂಡ ಕಾಣಿರಪ್ಪ ಅ.ಪ ಬಣಗು ಬಿನುಗರ ತಳ್ಳಿ ಫಣಿಪನ ಸಹವಾಸ ಕೇಳಿರಪ್ಪ ಅಣಕವಾಡುತ ಅನ್ಯಜನಸುದ್ದ್ಯೋಳ್ದಿನಗಳೆವ ಶುನಕ ಜನಮಿಗಳನೊದೆಯಿರಪ್ಪ1 ಚಲನಚಿತ್ತದ ಬಲುಹೊಲೆಮತಿಗಳ ಸಲಿಗೇಳೇಳು ಜನ್ಮಕೆ ಬೇಡಿರಪ್ಪ ವಿಲಸಿತ ನಡೆನುಡಿ ತಿಳಿಯದದುರುಳರ ಗೆಳೆತನ ಕಡೆತನಕ ಬಿಡಿರಪ್ಪ 2 ಧರ್ಮಗೆಟ್ಟು ದುಷ್ಕರ್ಮದುರುಳವ ದುರ್ಮದ ಬಿಟ್ಟು ದೂರಾಗಿರಪ್ಪ ನಿರ್ಮಲಸುಖ ನಿಜ ಮರ್ಮನವರಿಯದ ಧರ್ಮಿಗಳೆದೆಯನು ತುಳಿಯಿರಪ್ಪ 3 ಸತ್ಯಸನ್ಮಾರ್ಗವ ಮರ್ತ ಅಸತ್ಯರ ನೆತ್ತಿಮೇಲೆ ಹೆಜ್ಜಿಡಿರಪ್ಪ ನಿತ್ಯಮುಕ್ತಿ ಸುಖ ಗುರ್ತರಿಯದೆ ಯಮ ಮೃತ್ಯುವಶವ ಗೋಷ್ಠಿ ಬಿಡಿರೆಪ್ಪ 4 ಮರವೆ ಮಾಯಿಗಳ ಚರಣದಿ ಮುಟ್ಟಿದಿರಪ್ಪ ಪರಮ ಶ್ರೀರಾಮಪಾದ ಮರೆದ ದುರಾತ್ಮರ ದರುಶನ ಕನಸಿನೋಳ್ಬೇಡಿರಪ್ಪ 5
--------------
ರಾಮದಾಸರು
ಮುಟ್ಟಿಗಿಟ್ಟಿ ನೀ ನಮ್ಮ ಎಲೊ ಎಲೊ ಮುರಾರಿ ನೀ ನಮ್ಮ ಛೇಛುಮ್ಮ [?] ಎಲೊ ಎಲೊ ಪ ಮಡಿಯನುಟ್ಟು ಮೈತೊಳೆದು ಬಂದಿಹೆವೊ ಕೊಡಬ್ಯಾಡೆಂಜಲವ ನೀ ಬಹು ತುಂಟಾ 1 ನಿಜ ಪತಿವ್ರತೆಯರು ನಾವಲ್ಲವೇನೂ ಜಾರ ನೀ ಬಲು ಚೋರ 2 ಸೋದರತ್ತೆ ಮಗ ನೀ ನಮಗಲ್ಲ ಶ್ರೀದವಿಠಲ ಬಿಡು ಹಾದಿ ಸುಮ್ಮನೆ ಹೋದೀ 3
--------------
ಶ್ರೀದವಿಠಲರು
ಮುದ್ದು ಮುಖದ ಲಕುಮಿ ಎನಗೆ ಶುದ್ಧ ಜ್ಞಾನವÀ ನೀಡೆ ಪ. ಬಿದ್ದಿಹೆ ನಿನ್ನ ಪದದಲಿ ನಿರುತ ಮದ್ಬಿಂಬನ ತೋರೆ ಅ.ಪ. ಹರಿಸರ್ವೋತ್ತಮ ಸುರರಕ್ಷಕನೆಂಬ ಖರೆಯ ಜ್ಞಾನವ ನೀಡೆ ಕರಕರೆಗೊಳಿಸದೆ ದುರ್ವಿಷಯದಲೆನ್ನ ಹರಿಯ ಧ್ಯಾನವನೀಡೆ 1 ನಗೆಮೊಗ ಚಲುವೆ ಖಗವಾಹನ ಪ್ರಿಯೆ ಜಗದೊಡೆಯನ ತೋರೆ ನಿತ್ಯ ಬಗೆ ಬಗೆ ಲೀಲೆಯ ಸುಗುಣವಂತೆ ತಿಳಿಸೆ 2 ಸೃಷ್ಟಿಕರ್ತಗೆ ಪಟ್ಟದ ನಾರಿಯೆ ದೃಷ್ಟ ಇಂದ್ರಿಯವಳಿಯೆ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲ ಸತಿಯೆ 3
--------------
ಅಂಬಾಬಾಯಿ
ಮೂಳಾ ಹರಿದ್ಹಾಕೆಲೋ ಮಾಯದ ಜಾಲ ಹಾಳುಜಗದ ಮಾತಿಗ್ವ್ಯಾಕುಲವ್ಯಾಕೆಲೋ ಪ ಅನ್ಯಗುಣಗಳನು ಅನ್ನಗೇಡಾಗಿ ಬಲು ಭಿನ್ನ ಭೇದದಧೋಪಾತದುರುಳತಿರು ಕುನ್ನಿಮಾನವರ ಭಿನ್ನಭೇದಕಂಡು ನಿನ್ನ ಗುಣವ ಬಿಟ್ಟು ಬನ್ನಬಡಲಿಬೇಡ 1 ಕರ್ಮಿಲೋಭಿಗಳ ಮೋಹದಿಂದ ದು ಷ್ಕರ್ಮದಿ ಬಿದ್ದು ಕುಂಭೀಪಾಕಕ್ಕಿಳಿದರೇನು ಧರ್ಮಕರ್ಮಗಳ ಮರ್ಮ ತಿಳಿದು ಸ ದ್ಧರ್ಮದೊಳಾಡುತ ನಿರ್ಮಲನಾಗಿ ಬಾಳು 2 ಶಿಷ್ಟಪದ್ಧತಿಗಳ ಬಿಟ್ಟುಕೊಟ್ಟು ಮಂದಿ ಕೆಟ್ಟಪದ್ಧತಿ ಸುದ್ದಿಯಾಡುವುದ್ಯಾಕೆಲೋ ಸೃಷ್ಟಿಯೊಳಗೆ ನಮ್ಮ ಶಿಷ್ಟ ಶ್ರೀರಾಮನ ಮುಟ್ಟಿಪೂಜಿಸಿ ಮುಕ್ತಿಪಟ್ಟಕ್ಕೆ ಕೂಡ್ರೆಲೋ 3
--------------
ರಾಮದಾಸರು